Prerane | ಕಾರ್ಪೊರೇಟ್ ಜಗತ್ತಿನಲ್ಲಿ ಸತ್ಯದ ಬೆಲೆ! - Vistara News

ಧಾರ್ಮಿಕ

Prerane | ಕಾರ್ಪೊರೇಟ್ ಜಗತ್ತಿನಲ್ಲಿ ಸತ್ಯದ ಬೆಲೆ!

“ಪ್ರೇರಣೆʼʼ (Prerane) ಇದು ಧಾರ್ಮಿಕ ಮತ್ತು ಆಧ್ಯಾತ್ಮಿಕ ಚಿಂತನೆಗಳನ್ನು ಬಿತ್ತುವ ಬೆಳಗಿನ ಹೊಳಹು. ಪ್ರತಿ ನಿತ್ಯ ಧಾರ್ಮಿಕ ಚಿಂತಕರು, ಪ್ರವಚನಕಾರರು, ಆಧ್ಯಾತ್ಮಚಿಂತಕರು ಇಲ್ಲಿ ಬರೆಯುತ್ತಿದ್ದಾರೆ. ಇಂದಿನ ಕಾರ್ಪೊರೇಟ್ ಜಗತ್ತಿನಲ್ಲಿ ಸತ್ಯದ ಮಹತ್ವದ ಕುರಿತ ಚಿಂತನೆ ಇಲ್ಲಿದೆ.

VISTARANEWS.COM


on

Prerane
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಜಿ ನಾಗರಾಜ
ಸತ್ಯವು ಅಷ್ಟಾಂಗ ಯೋಗದ ಮೊದಲ ಮೆಟ್ಟಿಲಾದ ಯಮದಲ್ಲಿ ಒಂದು. ಆದರೆ ಇಂದಿನ ಕಾಲದಲ್ಲಿ ಸತ್ಯಕ್ಕೆ ಬೆಲೆಯಿಲ್ಲ, ಸತ್ಯದ ಪರವಾಗಿ ಮಾತನಾಡುವವನು ಓಬೀರಾಯನ ಕಾಲದವರು, ಗೊಡ್ಡು, ಈ ಕಾಲಕ್ಕೆ ತಕ್ಕವನಲ್ಲವೆನ್ನುವ ಭಾವನೆಯೂ ಜನಮನದಲ್ಲಿ ಪ್ರಚಲಿತವಿದೆ. ಸತ್ಯಮೇವ ಜಯತೇ ಎನ್ನುವ ಘೋಷವಾಕ್ಯ ಜನಮನದಲ್ಲಿ ಕ್ಷೀಣ ದೆಶೆಯಲ್ಲಿ ಉಳಿದುಕೊಂಡಿದೆ ಎಂದು ಹೇಳಿದರೆ ತಪ್ಪಾಗದು.

ಆದರೆ, ವಾಸ್ತವವನ್ನು ಪರಿಶೀಲಿಸಿದರೆ ವ್ಯಾವಹಾರಿಕ ಪ್ರಪಂಚದ ಎಷ್ಟೋ ಎಡೆಗಳಲ್ಲಿ ಸತ್ಯವು ಶಕ್ತಿಯುತವಾಗಿ ಉಳಿದುಕೊಂಡಿದೆ ಎಂದು ಕಂಡು ಬರುತ್ತದೆ. ಈ ಬಗ್ಗೆ ಶ್ರೀರಂಗಮಹಾಗುರುಗಳು ಕೊಟ್ಟಿರುವ ಸರಳ ಹಾಗೂ ಮಾರ್ಮಿಕವಾದ ನೋಟ ಗಮನಾರ್ಹ.

ಶ್ರೀರಂಗಮಹಾಗುರುಗಳು; ಸುಳ್ಳನ್ನು ಜನ ಸತ್ಯವೆಂದು ಭಾವಿಸಿದಾಗ ಮಾತ್ರ ಅದಕ್ಕೆ ಬೆಲೆಯೇ ಹೊರತು ಸುಳ್ಳನ್ನು ಸುಳ್ಳೆಂದು ತಿಳಿದರೆ ಯಾರೂ ಬೆಲೆ ಕೊಡುವುದಿಲ್ಲ ಎನ್ನುವ ಮಾರ್ಮಿಕವಾದ ನೋಟವನ್ನು ಕೊಟ್ಟಿದ್ದಾರೆ. ಒಬ್ಬ ಪ್ರವಚನಕಾರರು ಸಭೆಯೊಂದರಲ್ಲಿ ಈ ನೋಟವನ್ನು ನಿರೂಪಿಸಲು, ಮಾತಿನ ಮಧ್ಯದಲ್ಲಿ ಇದ್ದಕ್ಕಿದ್ದಂತೆ “ಕಟ್ಟಡದ ಹಿಂದೆ ಏನೋ ಕಾಣುತ್ತಿದೆಯಲ್ಲಾ ಅದು ಬೆಂಕಿಯೇ?” ಎಂದು ಕೇಳಿದರು. ತಕ್ಷಣವೇ ಸಭೆಯಲ್ಲಿದ್ದ ಅನೇಕರು ಹಿಂದಕ್ಕೆ ತಿರುಗಿ ನೋಡಿದರು. ನಂತರ, ಪ್ರವಚನಕಾರರು ನಾನು ಸುಮ್ಮನೆ ಹಾಗೆ ಕೇಳಿದೆ, ಆದರೆ ಇನ್ನೊಮ್ಮೆ ಅದೇ ಪ್ರಶ್ನೆಯನ್ನು ಕೇಳುತ್ತೇನೆ ಎಂದು ಪ್ರಶ್ನೆಯನ್ನು ಪುನರುಚ್ಛರಿಸಿದರು. ಈ ಬಾರಿ ಒಬ್ಬರೇ ವ್ಯಕ್ತಿಯೂ ಹಿಂದಿರುಗಿ ನೋಡಲಿಲ್ಲ.

ಈ ಘಟನೆಯನ್ನಿಟ್ಟುಕೊಂಡು ಪ್ರವಚನಕಾರರು; “ನೋಡಿ, ಸಭಾಭವನದ ಹಿಂಭಾಗದಲ್ಲಿ ಬೆಂಕಿಯಿದೆಯೆಂಬುದು ಸುಳ್ಳು. ಆದರೂ ಮೊದಲನೇ ಸಾರಿ ಅದನ್ನು ಹೇಳಿದಾಗ ಅದನ್ನು ಸತ್ಯವೆಂದು ಭಾವಿಸಿದ್ದರಿಂದ ನೀವೆಲ್ಲರೂ ಹಿಂದಿರುಗಿ ನೋಡಿದಿರಿ. ಆದರೆ ಅದು ಸುಳ್ಳೆಂದು ತಿಳಿದ ಮೇಲೆ, ಒಬ್ಬರೂ ಮಿಸುಕಾಡಲಿಲ್ಲ. ಅಂದರೆ ಸತ್ಯಕ್ಕೆ ಮಾತ್ರವೇ ಜನರನ್ನು ಪ್ರಭಾವಗೊಳಿಸುವ, ಚಲಿಸುವ, ಹಿಡಿದಿಡುವ ಶಕ್ತಿಯಿರುವುದು. ಸುಳ್ಳಿಗೆ ಸತ್ಯದ ವೇಷ ತೊಡಿಸಿದಾಗ ಮಾತ್ರವೇ ಅದಕ್ಕೆ ಬೆಲೆ ಹೊರತು ಸುಳ್ಳಿಗೆ ತನ್ನ ಸ್ವರೂಪತಃ ಬೆಲೆಯಿಲ್ಲ. ಹೀಗಾಗಿ ಸತ್ಯಕ್ಕೇ ಎಂದಿಗೂ ಜಯ ಎನ್ನುವ ವಾಕ್ಯವು ಸರ್ವಕಾಲಕ್ಕೂ ಅನ್ವಯಿಸುತ್ತದೆ” ಎಂದು ಆ ಸಭೆಯಲ್ಲಿ ನಿರೂಪಿಸಿದರು.

ಸತ್ಯಕ್ಕೆ ಜಯವೆಂದ ಮಾತ್ರಕ್ಕೆ ಗೊಡ್ಡುಗೊಡ್ಡಾಗಿಯಾದರೂ ಸರಿಯೇ ಸತ್ಯವನ್ನು ಎತ್ತಿಹಿಡಿಯಲು ಹೊರಟರೆ ಸುಲಭವಾಗಿ ಯಶಸ್ಸು ದೊರೆಯುತ್ತದೆ ಎಂದು ಹೇಳಲಾಗುವುದಿಲ್ಲ. ಸುಳ್ಳನ್ನು ಸತ್ಯವೆಂದು ಬಿಂಬಿಸಿ ತಾತ್ಕಾಲಿಕ ಜಯವನ್ನು ಪಡೆಯುವುದಕ್ಕೆ ಹೇಗೆ ಜಾಣತನ ಬೇಕೋ ಹಾಗೆಯೇ ಸತ್ಯವನ್ನೇ ಹಿಡಿದು ಯಶಸ್ವಿಯಾಗಲೂ ಯುಕ್ತಿ, ಜಾಣತನ ಬೇಕಾಗುತ್ತದೆ. ಈ ಜಾಣತನದ ಬಗ್ಗೆ ಒಂದು ಸುಭಾಷಿತವಿದೆ:
ಸತ್ಯಂ ಬ್ರೂಯಾತ್ ಪ್ರಿಯಂ ಭ್ರೂಯಾತ್ ।
ನ ಭ್ರೂಯಾತ್ ಸತ್ಯಮಪ್ರಿಯಂ ।
ಪ್ರಿಯಂಚ ನಾನೃತಂ ಭ್ರೂಯಾತ್ ।
ಏಷಃ ಧರ್ಮಸ್ಸನಾತನಃ ॥

ಎಂದು. ಅಂದರೆ, ಯಥಾರ್ಥವಾದುದನ್ನೇ ಮಾತನಾಡಬೇಕು, ಪ್ರಿಯವಾದುದನ್ನೇ ಮಾತನಾಡಬೇಕು, ಯಥಾರ್ಥವಾದರೂ ಅಪ್ರಿಯವನ್ನು ಹೇಳಬಾರದು ಮತ್ತು ಪ್ರಿಯವಾದರೂ ಸಹ ಸುಳ್ಳನ್ನು ಹೇಳಬಾರದು ಎನ್ನುವುದು ಈ ಸುಭಾಷಿತದ ಅಭಿಪ್ರಾಯ.

ಈ ಸುಭಾಷಿತದ ಅಭಿಪ್ರಾಯದಂತೆ ಸತ್ಯವನ್ನು ನಯನ ಮಾಡಿ ಯಶಸ್ಸುಗಳಿಸಿದ ಅನೇಕ ನಿದರ್ಶನಗಳು ಇಂದಿನ ಕಾರ್ಪೊರೇಟ್ ಕ್ಷೇತ್ರದಲ್ಲಿದೆ.

ಕಾರ್ಪೊರೇಟ್ ಕ್ಷೇತ್ರದಲ್ಲಿ ನಿಗಧಿತ ಕಾಲದಲ್ಲಿ ಕಾರ್ಯಯೋಜನೆಗಳನ್ನು ಮಾಡಿಕೊಟ್ಟು (commercial project contracts) ಅರ್ಥಗಳಿಸುವ ವಿಧಾನವುಂಟು. ಇಂತಹಾ ಪ್ರಾಜೆಕ್ಟ್‌ಗಳು ವಿಳಂಬವಾಗುವುದೂ ಉಂಟು. ಇಂತಹ ವಿಳಂಬಗಳು ಎದುರಾದಾಗ ಕಾರ್ಯ ನಿರ್ವಹಣ ತಂಡಕ್ಕೆ ಅಸಮಾಧಾನಗೊಂಡ ಗ್ರಾಹಕರನ್ನು ಎದುರಿಸುವುದು ಬಹಳ ಮುಜುಗರ ಹಾಗೂ ಕಷ್ಟಕರವಾದ ಕೆಲಸ. ಹೀಗಾಗಿ ಹಲವರು ಯಥಾಸ್ಥಿತಿಯನ್ನು ಮರೆಮಾಚಿ ಎಲ್ಲವೂ ಸರಿಯಿದೆಯೆಂದು ತೋರಿಸಿ ಜಾರಿಕೊಂಡು, ಜಾಣತನವನ್ನು ಮೆರೆದೆವೆಂದುಕೊಳ್ಳುತ್ತಾರೆ ಆದರೆ ಕೊನೆಯ ಹಂತದಲ್ಲಿ ಸಿಕ್ಕಿಹಾಕಿಕೊಂಡು ವಿಫಲರಾಗುತ್ತಾರೆ. ಇಂತಹವರು ಸುಭಾಷಿತದ ಭಾಗವಾದ ಪ್ರಿಯವಾದರೂ ಸುಳ್ಳನ್ನು ಹೇಳಬೇಡ ಎನ್ನುವ ವಾಕ್ಯವನ್ನು ಪಾಲಿಸುವುದಿಲ್ಲ.

ಅಮೆರಿಕೆಯ ಗ್ರಾಹಕರು ಎಂತಹ ಪ್ರತಿಕೂಲ ಪರಿಸ್ಥಿತಿಯಿದ್ದರೂ ಸತ್ಯವನ್ನೇ ಅಪೇಕ್ಷಿಸುತ್ತಾರೆ; ಆದರೆ ಪ್ರತಿಕೂಲ ಪರಿಸ್ಥಿತಿಯಿದ್ದಾಗ ಸಮಸ್ಯೆಯ ಮೂಲ ಮತ್ತು ಪರಿಹಾರದೊಡನೆ ಯಥಾಸ್ಥಿತಿಯನ್ನು ಬಿಂಬಿಸಬೇಕು ಎಂದು ಅಪೇಕ್ಷಿಸುತ್ತಾರೆ. ಹೀಗಾಗಿ ಎಷ್ಟೋ ಮಂದಿ ದಿಟ್ಟ ಅಧಿಕಾರಿಗಳು ಪ್ರತಿಕೂಲ ಪರಿಸ್ಥಿತಿಯಿದ್ದಾಗ ಸಮಸ್ಯೆಯನ್ನು ವಿವರಿಸುವುದಲ್ಲದೇ ಪರಿಹಾರಕ್ಕೆ ಸೂಕ್ತ ಸಲಹೆಗಳನ್ನೂ ಮುಂದಿಟ್ಟುಕೊಂಡು ಯಥಾಸ್ಥಿತಿಯನ್ನು ಬಿಂಬಿಸುತ್ತಾರೆ. ಇಂತಹ ಸಂದರ್ಭಗಳಲ್ಲಿ ಗ್ರಾಹಕರು ಅಧಿಕಾರಿಗಳ ಸತ್ಯಶೀಲತೆಯನ್ನು ಮೆಚ್ಚುತ್ತಾರೆ ಮತ್ತು ಈ ಅಧಿಕಾರಿಗಳು ಅವರ ವೃತ್ತಿಜೀವನದಲ್ಲಿ ಎತ್ತರಕ್ಕೆ ಬೆಳೆಯುತ್ತಾರೆ. ಇಂತಹ ಅಧಿಕಾರಿಗಳು ಸುಭಾಷಿತದ – ಅಪ್ರಿಯವಾದ ಸತ್ಯವನ್ನು ಹೇಳಬೇಡ ಎನ್ನುವ ಭಾಗವನ್ನು ಅಪ್ರಿಯವಾದ ಸತ್ಯವನ್ನು ಪ್ರಿಯವಾಗುವಂತೆ ಮಾಡಿ ಹೇಳುವುದರ ಮೂಲಕ ಪಾಲಿಸಿ ಯಶಸ್ವಿಯಾಗುತ್ತಾರೆ.

ಇಂತಹ ಉದಾಹರಣೆಗಳು ಅನೇಕ. ಅವುಗಳಲ್ಲಿ 90ರ ದಶಕದಲ್ಲಿ ನಡೆದ ಒಂದು ಘಟನೆ ಇಲ್ಲಿ ಸ್ಮರಣೀಯ. ಭಾರತೀಯ ಸಂಸ್ಥೆಯೊಂದು ಅಮೆರಿಕೆಯ ಗ್ರಾಹಕ ಸಂಸ್ಥೆಗಳಿಂದ ಗುತ್ತಿಗೆ ಪಡೆಯುತ್ತಿತ್ತು. ಈ ಗುತ್ತಿಗೆಯನ್ನು ನಿರ್ವಹಿಸಿಕೊಡುವುದಕ್ಕೆ ಒಂದು ದೊಡ್ಡ ಗಣಕಯಂತ್ರ(mainframe computer)ವನ್ನು ಆಮದು ಮಾಡಿಕೊಳ್ಳಬೇಕಾಗಿತ್ತು. ಆಮದಾದ ಆ ಯಂತ್ರವು ವಿಮಾನ ನಿಲ್ದಾಣದ ಆಮದು ತೆರಿಗೆ ಇಲಾಖೆಯಲ್ಲಿ ಬಂದು ಕುಳಿತುಕೊಂಡಿತು. ಸಂಸ್ಥೆಯ ಅಧಿಕಾರಿಗಳು ಗಣಕ ಯಂತ್ರವನ್ನು ತಮ್ಮ ವಶಕ್ಕೆ ತೆಗೆದುಕೊಳ್ಳಲು ಹೋದಾಗ ತೆರಿಗೆ ಅಧಿಕಾರಿಗಳು ಲಂಚಕ್ಕಾಗಿ ಒತ್ತಾಯ ಮಾಡಿ ಸಂಸ್ಥೆ ಅಧಿಕಾರಿಗಳು ಒಪ್ಪದಿದ್ದಾಗ ಯಂತ್ರವನ್ನು ಬಿಡುಗಡೆ ಮಾಡಲು ನಿರಾಕರಿಸಿಬಿಟ್ಟರು. ಈ ಯಂತ್ರವಿಲ್ಲದಿದ್ದರೆ ಗುತ್ತಿಗೆ ಕಾರ್ಯವನ್ನು ನಿರ್ವಹಿಸಲು ಸಾಧ್ಯವಾಗುತ್ತಿರಲಿಲ್ಲ ಮತ್ತು ಯೋಜನೆ ವಿಳಂಬವಾಗುತ್ತಿತ್ತು. ನಿರ್ವಾಹಕ ತಂಡಕ್ಕೆ ಗ್ರಾಹಕರಿಗೆ ಏನು ಹೇಳುವುದು ಎಂದು ಬಹಳ ಆತಂಕವಾಗುತ್ತಿತ್ತು.

ಆದರೆ ಸಂಸ್ಥೆಯ ಹಿರಿಯ ಅಧಿಕಾರಿಗಳು ಗ್ರಾಹಕರ ಒಲುಮೆಗಾಗಿಯಾದರೂ ಸರಿಯೇ, ತಮ್ಮ ಉದ್ದಿಮೆಯ ಒಳಿತಿನ ಸಲುವಾಗಿಯಾದರೂ ಸರಿಯೇ ಲಂಚವನ್ನು ಕೊಡಲೇಬಾರದು ಎಂಬ ತಮ್ಮ ನೀತಿಯನ್ನು ಸ್ಪಷ್ಟ ಪಡಿಸಿಬಿಟ್ಟರು. ಲಂಚ ಕೊಡದೆಯೇ ಯಂತ್ರವನ್ನು ಪಡೆದುಕೊಳ್ಳುವ ಪ್ರಯತ್ನ ಆರು ತಿಂಗಳು ಕಾಲ ಸತತವಾಗಿ ನಡೆಯಿತು. ಕೊನೆಗೆ ಕಾರ್ಯತಂಡದ ಇಬ್ಬರು ಸದಸ್ಯರು ತೆರಿಗೆ ಅಧಿಕಾರಿಗಳ ಬಳಿ ಹೋಗಿ, ನೋಡಿ – ನೀವು ಇನ್ನೆಷ್ಟು ವರ್ಷಗಳು ಯಂತ್ರವನ್ನು ಇಟ್ಟುಕೊಂಡಿದ್ದರೂ ನಾವು ಲಂಚ ಕೊಡುವುದಿಲ್ಲ. ನಿಮಗೆ ಸುಮ್ಮನೆ ಜಾಗ ವ್ಯಯವಾಗುತ್ತದೆ ಮತ್ತು ಯಂತ್ರ ಧೂಳುಸೇರಿಸಿಕೊಂಡು ಬಿದ್ದಿರುತ್ತದೆ. ನೀವು ಅದನ್ನು ಕಳುಹಿಸಿಕೊಡುವಿರಾ ಇಲ್ಲ ಅದರ ಧೂಳನ್ನು ಹೊಡೆದುಕೊಂಡು ಜಾಗವನ್ನೂ ಹಾಳು ಮಾಡೀಕೊಳ್ಳುತ್ತೀರೋ ಎಂದು ಕೇಳಿಬಿಟ್ಟರು. ಆಗ ಬೇರೆ ವಿಧಿಯಿಲ್ಲದೇ ತೆರಿಗೆ ಅಧಿಕಾರಿಗಳು ಯಂತ್ರವನ್ನು ಬಿಡುಗಡೆ ಮಾಡಿದರು.

ಈ ಮಧ್ಯದಲ್ಲಿ ತಂಡದವರಿಗೆ ಈ ವಿಳಂಬದಿಂದಾಗಿ ಗ್ರಾಹಕರು ಕುಪಿತರಾಗಿ ಎಲ್ಲಿ ಗುತ್ತಿಗೆಯನ್ನು ರದ್ದು ಮಾಡಿಬಿಡುತ್ತಾರೋ ಎನ್ನುವ ಆತಂಕ ಇತ್ತು. ಆದರೂ ವಿಳಂಬದ ಸತ್ಯಾಂಶವನ್ನೇ ಗ್ರಾಹಕರಿಗೆ ತಿಳಿಸಿದರು. ಈ ವಿಳಂಬದಿಂದ ಗ್ರಾಹಕರಿಗೆ ಕೋಪ ಬರುವುದರ ಬದಲು, ಗುತ್ತಿಗೆ ರದ್ದಾಗುವ ಸಾಧ್ಯತೆಯಿದ್ದಾಗಲೂ
ಲಂಚ ಕೊಡದೇ ತಮ್ಮ ನೈತಿಕ ಸಮಗ್ರತೆಯನ್ನು ಕಾಪಾಡಿಕೊಂಡರು ಎಂದು ಸಂತೋಷವೇ ಉಂಟಾಗಿ ಇನ್ನೂ ಹೆಚ್ಚಿನ ಮೊತ್ತದ ಗುತ್ತಿಗೆಗಳನ್ನು ಮುಂದೆ ಕೊಟ್ಟರು. ಹೀಗೆ ಸತ್ಯವು ಅಪ್ರಿಯವಾಗಿರುವಾಗ ಅದನ್ನು ಪ್ರಿಯವಾಗುವಂತೆ ಮಾಡಿ ಹೇಳುವುದಕ್ಕೆ ಜಾಣತನ ಬೇಕು. ಹೀಗೆ ಜಾಣತನದಿಂದ ಸತ್ಯವನ್ನು ನಯನ ಮಾಡಿದಾಗ ಸತ್ಯದಿಂದ ಕ್ಷಿಪ್ರವಾಗಿಯೇ ಯಶಸ್ಸು ದೊರೆಯುತ್ತದೆ. ಸತ್ಯಮೇವ ಜಯತೇ ಎನ್ನುವುದು ಸಾರ್ವಕಾಲಿಕ ಸತ್ಯ.

– ಲೇಖಕರು ಆಧ್ಯಾತ್ಮ ಚಿಂತಕರು ಮತ್ತು ಪ್ರವಚನಕಾರರು
ಅಷ್ಟಾಂಗಯೋಗ ವಿಜ್ಞಾನಮಂದಿರಂ

ಇದನ್ನು ಓದಿ| Prerane | ಆಧುನಿಕ ಕ್ಷೇತ್ರಗಳಲ್ಲಿ ಯೋಗಸೂತ್ರದ ಪಾಲನೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಬೆಳಗಾವಿಯಲ್ಲಿ ನಿರ್ಮಾಣವಾಗಲಿದೆ ಭವ್ಯ ತಿರುಪತಿ ತಿಮ್ಮಪ್ಪನ ದೇಗುಲ: 100 ಕೋಟಿ ವೆಚ್ಚ, 7 ಎಕರೆ ಜಾಗ ಮಂಜೂರು

VISTARANEWS.COM


on

ಬೆಳಗಾವಿ: ಉತ್ತರ ಕರ್ನಾಟಕದ ಭಕ್ತರ ಪಾಲಿಗೆ ತಿರುಮಲ ತಿರುಪತಿ ದೇವಸ್ಥಾನ (TTD) ಮಂಡಳಿಯು ಸಿಹಿ ಸುದ್ದಿಯೊಂದನ್ನು ನೀಡಿದೆ. ತಿರುಪತಿಯ ಭವ್ಯ ವೆಂಕಟೇಶ್ವರ ದೇವಾಲಯದ ಮಾದರಿಯಲ್ಲೇ ಬೆಳಗಾವಿಯಲ್ಲಿಯೂ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಶ್ರೀನಿವಾಸನ ಸನ್ನಿಧಿ ತಲೆಯೆತ್ತಲಿದೆ. ಬೆಳಗಾವಿ ತಾಲೂಕಿನ ಕೋಳಿಕೊಪ್ಪ ಹೊರವಲಯದ ಸುಮಾರು 7 ಎಕರೆ ಪ್ರದೇಶದಲ್ಲಿ ಈ ಯೋಜನೆ ಸಾಕಾರಗೊಳ್ಳಲಿದ್ದು, ಇದಕ್ಕಾಗಿ ಬೆಳಗಾವಿ ರೆಡ್ಡಿ ಸಂಘವು ಭೂಮಿಯನ್ನು ಖರೀದಿಸಿ ಈಗಾಗಲೇ ಟಿಟಿಡಿ ಮಂಡಳಿಗೆ ಅಧಿಕೃತವಾಗಿ ಹಸ್ತಾಂತರಿಸಿದೆ. ಈ ಮೂಲಕ ಕುಂದಾನಗರಿಯಲ್ಲಿ ತಿಮ್ಮಪ್ಪನ ದರ್ಶನಕ್ಕೆ ಮೊದಲ ಭದ್ರ ಬುನಾದಿ ಬಿದ್ದಿದೆ.

ಈ ದೇವಾಲಯವು ಕೇವಲ ಧಾರ್ಮಿಕ ಕೇಂದ್ರವಾಗಿರದೆ, ವಾಸ್ತುಶಿಲ್ಪ, ಲಡ್ಡು ವಿತರಣೆ ಮತ್ತು ಭಕ್ತರ ವಾಸ್ತವ್ಯದ ಸೌಲಭ್ಯ ಸೇರಿದಂತೆ ಪ್ರತಿಯೊಂದೂ ಅಂಶದಲ್ಲೂ ಮೂಲ ತಿರುಪತಿ ಕ್ಷೇತ್ರವನ್ನೇ ಹೋಲುವಂತೆ ನಿರ್ಮಾಣವಾಗಲಿದೆ. ನೂರು ಕೋಟಿ ರೂಪಾಯಿ ವೆಚ್ಚದ ಈ ಯೋಜನೆಯಲ್ಲಿ ಶೇ. 10ರಷ್ಟು ಹಣವನ್ನು ಮಾತ್ರ ದಾನಿಗಳಿಂದ ಸಂಗ್ರಹಿಸಿ, ಉಳಿದ ವೆಚ್ಚವನ್ನು ಟಿಟಿಡಿ ಭರಿಸಲಿದೆ. ಮುಂದಿನ ಎರಡು ವರ್ಷಗಳಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸುವ ಗುರಿ ಹೊಂದಲಾಗಿದ್ದು, ಇದಕ್ಕಾಗಿ ಟಿಟಿಡಿ ಪ್ರತ್ಯೇಕ ಟ್ರಸ್ಟ್ ರಚಿಸಿ ಸ್ಥಳೀಯರನ್ನು ಒಳಗೊಳ್ಳಲಿದೆ. ಈ ದೇವಾಲಯದ ನಿರ್ಮಾಣದಿಂದ ಬೆಳಗಾವಿ ಜಿಲ್ಲೆಯಷ್ಟೇ ಅಲ್ಲದೆ, ನೆರೆಯ ಗೋವಾ ಮತ್ತು ಮಹಾರಾಷ್ಟ್ರದ ಭಕ್ತರಿಗೂ ತಿಮ್ಮಪ್ಪನ ದರ್ಶನ ಪಡೆಯಲು ಸುಲಭವಾಗಲಿದೆ.

ನೂತನ ದೇವಾಲಯಗಳ ನಿರ್ಮಾಣಕ್ಕಾಗಿ ಟಿಟಿಡಿ ಮೀಸಲಿಟ್ಟಿರುವ ಒಂಬತ್ತು ಸಾವಿರ ಕೋಟಿ ರೂಪಾಯಿ ನಿಧಿಯಲ್ಲಿ ಬೆಳಗಾವಿ ಯೋಜನೆಯೂ ಸೇರಿದೆ. ದೇಶದ ಆರು ಪ್ರಮುಖ ಸ್ಥಳಗಳಲ್ಲಿ ವೆಂಕಟೇಶ್ವರ ದೇವಾಲಯ ನಿರ್ಮಿಸಲು ಉದ್ದೇಶಿಸಿರುವ ಟಿಟಿಡಿ, ಬೆಳಗಾವಿಯಲ್ಲಿ ಶೀಘ್ರವೇ ಭೂಮಿಪೂಜೆ ನೆರವೇರಿಸುವುದಾಗಿ ತಿಳಿಸಿದೆ. ರೆಡ್ಡಿ ಸಂಘದ ಈ ಉದಾರ ಕಾರ್ಯಕ್ಕೆ ಟಿಟಿಡಿ ಮಂಡಳಿ ಪ್ರಶಂಸೆ ವ್ಯಕ್ತಪಡಿಸಿದ್ದು, ಈ ಯೋಜನೆಯಿಂದ ಬೆಳಗಾವಿ ನಗರವು ಧಾರ್ಮಿಕ ಭೂಪಟದಲ್ಲಿಯೂ ಹೊಸ ಗುರುತು ಪಡೆಯಲಿದೆ. ಶೈಕ್ಷಣಿಕ ಮತ್ತು ಸಾಮಾಜಿಕವಾಗಿ ಬೆಳೆಯುತ್ತಿರುವ ಬೆಳಗಾವಿಗೆ ಈ ವೆಂಕಟರಮಣನ ಸನ್ನಿಧಿ ಮತ್ತಷ್ಟು ಮೆರುಗು ನೀಡಲಿದೆ.

Continue Reading

ಕೊಡಗು

Deepawalli 2024 : ಮಡಿಕೇರಿಯಲ್ಲಿ ಅದ್ಧೂರಿಯಾಗಿ ನಡೆದ ದೀಪಾವಳಿ ಉತ್ಸವ

Deepawalli 2024 : ಮಡಿಕೇರಿಯಲ್ಲಿ ದೀಪಾವಳಿ ಉತ್ಸವ ಅದ್ಧೂರಿಯಾಗಿ ನಡೆಯಿತು. ಕಾರ್ಯಕ್ರಮದಲ್ಲಿ ವಿಸ್ತಾರ ನ್ಯೂಸ್‌ನ ವರದಿಗಾರ ಹಾಗೂ ಕ್ಯಾಮೆರಾಮನ್‌ಗೆ ಸನ್ಮಾನಿಸಲಾಯಿತು.

VISTARANEWS.COM


on

Deepavali festival held in Madikeri

ಕೊಡಗು: ದೀಪಾವಳಿ ಹಬ್ಬದ (Deepawalli 2024) ಪ್ರಯುಕ್ತ ಮಡಿಕೇರಿಯ ಕಾಲನಗರ ಸಾಂಸ್ಕೃತಿಕ ವೇದಿಕೆ ವತಿಯಿಂದ ಆಯೋಜಿಸಿದ್ದ 11ನೇ ವರ್ಷದ ದೀಪಾವಳಿ ಉತ್ಸವವು ಬಹಳ ಸಂಭ್ರಮ ಸಡಗರದಿಂದ ನಡೆಯಿತು. ಕಾರ್ಯಕ್ರಮವನ್ನು ಸಮಾಜ ಸೇವಕ ಹಾಗೂ ಮುಳುಗು ತಜ್ಞ ಈಶ್ವರ್ ಮಲ್ಪೆ ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಈಶ್ವರ್ ಮಲ್ಪೆ, ಮಡಿಕೇರಿಯ ಕಲಾ ನಗರಕ್ಕೆ ಕರೆಸಿರೋದು ಬಹಳ‌ ಸಂತೋಷವಾಗಿದೆ‌. ನಾನೂ ರಾಜ್ಯದ ಬೇರೆ ಬೇರೆ ಭಾಗಗಳಿಗೆ ತೆರಳಿ ನೀರಿನಲ್ಲಿ ಮುಳುಗಿದ್ದ ಶವ ಹೊರ ತೆಗೆದಿದ್ದೇನೆ. ಕಳೆದ ವರ್ಷ ಕೂಡ ಇಲ್ಲಿಗೆ ಬಂದು ಒಂದು ಶವವನ್ನು ಹೊರ ತೆಗೆದಿದ್ದೇನೆ‌. ಈ ಒಂದು ಸಣ್ಣ ಸಮಾಜಮುಖಿ ಕಾರ್ಯವನ್ನು ಗುರುತಿಸಿ ನನ್ನ ಈ ಕಾರ್ಯಕ್ರಮಕ್ಕೆ ಕರೆಸಿರೋದು ಬಹಳ ಸಂತಸ ತಂದಿದೆ. ಕಲಾನಗರದಲ್ಲಿ ಕಲಾ ರಸಿಕರೆ ಇದ್ದು ತಮ್ಮಲ್ಲಿರುವ ಕಲೆಯನ್ನು ಪ್ರದರ್ಶನ ಮಾಡುವ ಮೂಲಕ ಮತ್ತಷ್ಟು ಸಾಧನೆ ಮಾಡಲೆಂದು ಹಾರೈಸಿದರು.

Deepavali festival held in Madikeri

ಇನ್ನೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಮಾಜ ಸೇವಕರನ್ನು ಗುರುತಿಸಿ ಸನ್ಮಾನಿಸಿ ಗೌರವಿಸಲಾಯಿತು. ಸಮಾಜ ಸೇವಕ ಮುಳುಗು ತಜ್ಞ ಈಶ್ವರ್ ಮಲ್ಪೆ ಹಾಗೂ ವಯನಾಡು ದುರಂತದ ಕುರಿತು ಪ್ರತ್ಯಕ್ಷ ವರದಿಗಾರಿಕೆ‌ ಮಾಡಿದ್ದ ಕೊಡಗಿನ ಪತ್ರಕರ್ತರಾದ ವಿಸ್ತಾರ ನ್ಯೂಸ್‌ನ ಜಿಲ್ಲಾ ವರದಿಗಾರ ಲೋಹಿತ್ ಎಂ.ಆರ್, ಕ್ಯಾಮೆರಾಮನ್ ಮನೋಜ್, ನ್ಯೂಸ್ ಫಸ್ಟ್ ಜಿಲ್ಲಾ ವರದಿಗಾರ ಪ್ರಜ್ವಲ್ ಎನ್‌.ಸಿ, ನಗರದ ಸ್ವಚ್ಚತಾ ಕಾರ್ಯದಲ್ಲಿ ಶ್ರಮಿಸುತ್ತಿರುವ ನಗರಸಭೆಯ ರಂಗಪ್ಪ , ಆರೋಗ್ಯ ಇಲಾಖೆಯ ಪ್ರತಿಮಾ ರೈ, ಅಣ್ಣಯ್ಯ, ಸೇರಿದಂತೆ ಹಲವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಬಳಿಕ ವಿವಿಧ ಆಟೋಟ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು‌‌. ಮಕ್ಕಳ ಮಂಟಪ, ಸಾಂಸ್ಕೃತಿಕ ಕಾರ್ಯಕ್ರಮಗಳು ಎಲ್ಲರನ್ನು ರಂಜಿಸಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾದ ಡಿವೈಎಸ್ಪಿ ಮಹೇಶ್ ಕುಮಾರ್, ಆಕಾಶವಾಣಿಯ ಸುಬ್ರಾಯ ಸಂಪಾಜೆ ಅಧ್ಯಕ್ಷರಾದ ಮಹೇಶ್, ಆಶಾ ನಟರಾಜ್, ಸ್ಥಾಪದ ಸದಸ್ಯರು ಚಂದ್ರು, ಕೆ.ಎಸ್ ರಮೇಶ್,ಕೋಡಿ ಭರತ್, ತಿಲಖ್ ಸಿಂಗ್ ಕುಮಾರ್ ಉಪಸ್ಥಿತರಿದ್ದರು.

Continue Reading

ಕರ್ನಾಟಕ

Mysore Dasara : ವಿಜಯ ದಶಮಿ ಜಂಬೂ ಸವಾರಿಗೆ ಕ್ಷಣಗಣನೆ; ಅರಮನೆ ಆವರಣದಲ್ಲಿ ವಜ್ರಮುಷ್ಠಿ ಕಾಳಗ

Mysore Dasara : ವಿಜಯ ದಶಮಿ ಜಂಬೂ ಸವಾರಿಗೆ ಕ್ಷಣಗಣನೆ ಶುರವಾಗಿದ್ದು, ಚಾಮುಂಡಿ ಬೆಟ್ಟದಿಂದ ಚಾಮುಂಡೇಶ್ವರಿ ಉತ್ಸವ ಮೂರ್ತಿಯನ್ನು ಅರಮನೆಗೆ ತರಲಾಗುತ್ತಿದೆ. ಜತೆಗೆ ಮೈಸೂರು ಆವರಣದಲ್ಲಿ ವಜ್ರಮುಷ್ಠಿ ಕಾಳಗ ನಡೆಯುತ್ತಿದೆ.

VISTARANEWS.COM


on

mysore dasara

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ (Mysore Dasara ) ಜಂಬೂ ಸವಾರಿಗೆ ಕ್ಷಣಗಣನೆ ಪ್ರಾರಂಭವಾಗಿದೆ. ಶನಿವಾರ ಮುಂಜಾನೆಯಿಂದಲೇ ಬಿರುಸಿನ ರೀತಿಯಲ್ಲಿ ಪೂಜಾ ಕೈಂಕರ್ಯಗಳನ್ನು ನೆರವೇರಿಸಿಕೊಂಡು ಬರಲಾಗುತ್ತಿದೆ. ಚಾಮುಂಡಿ ಬೆಟ್ಟದಲ್ಲಿ ನೆಲೆಸಿರುವ ತಾಯಿ ಚಾಮುಂಡೇಶ್ವರಿಯನ್ನು 750 ಕೆ.ಜಿ. ತೂಕದ ಚಿನ್ನದ ಅಂಬಾರಿಯಲ್ಲಿ ಕೂರಿಸಿ ಮೆರವಣಿಗೆ ಮಾಡುವ ಸಮಯ ಸನ್ನಿಹಿತವಾಗುತ್ತಿದೆ. ಇದಕ್ಕಿಂತ ಮೊದಲು ಚಾಮುಂಡಿ ಸನ್ನಿಧಿಯಲ್ಲಿ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸಿ ಬೆಳ್ಳಿ ರಥದ ಮೂಲಕ ಅರಮನೆಗೆ ಮೆರವಣಿಗೆ ಮೂಲಕ ಕಳಿಸಿಕೊಡಲಾಯಿತು.

ವಿಜಯ ದಶಮಿಯ ಜಂಬೂ ಸವಾರಿಗೆ ಅಂಬಾವಿಲಾಸ ಅರಮನೆ ಸಜ್ಜಾಗಿದೆ. ಅರಮನೆ ಅಂಗಳದಲ್ಲಿ 35 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆ 8 ಗಂಟೆಗೆ ಚಾಮುಂಡಿಬೆಟ್ಟದಿಂದ ಉತ್ಸವ ಮೂರ್ತಿ ಮೆರವಣಿಗೆ ಶುರುವಾಗಿದ್ದು, ಅಂಬಾವಿಲಾಸ ಅರಮನೆ ತಲುಪಲಿದೆ. ನೇರಳೆ ಬಣ್ಣದ ಸೀರೆಯಿಂದ ತಾಯಿ ಚಾಮುಂಡೇಶ್ವರಿ ಉತ್ಸವ ಮೂರ್ತಿಯನ್ನು ಅಲಂಕಾರ ಮಾಡಲಾಗಿತ್ತು. ಅಲ್ಲದೆ, ಅಶ್ವಾರೋಹಣ ಅಲಂಕಾರದಿಂದ ಕಂಗೊಳಿಸುತ್ತಿರುವ ಚಾಮುಂಡಿ ದೇವಿಯ ಉತ್ಸವ ಮೂರ್ತಿಯನ್ನು ಬೆಳ್ಳಿ ರಥದಲ್ಲಿ ಕುಳ್ಳಿರಿಸಿ ಅಲ್ಲಿಂದ ಅರಮನೆಗೆ ಮೆರವಣಿಗೆ ಮೂಲಕ ಕೊಂಡೊಯ್ಯಲಾಯಿತು.

Mysore dasara 2024

ಅರಮನೆ ಬಲರಾಮ ದ್ವಾರದ ಕೋಟೆ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ಶನಿವಾರ ಮಧ್ಯಾಹ್ನ 1:41 ರಿಂದ 2:10ರ ಶುಭ ಮಕರ ಲಗ್ನದಲ್ಲಿ ನಂದಿಧ್ವಜ ಪೂಜೆ ನೆರವೇರಲಿದೆ. ನಂದಿ ಧ್ವಜ ಪೂಜೆಯನ್ನು ಉದ್ಘಾಟಕ ಹಂಪನಾ, ಮುಖ್ಯಮಂತ್ರಿ ಸಿದ್ದರಾಮಯ್ಯ ನೆರವೇರಿಸಲಿದ್ದಾರೆ. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್ ಸಿ ಮಹದೇವಪ್ಪ ಸೇರಿದಂತೆ ಇತರೆ ಜನಪ್ರತಿನಿಧಿಗಳು ಭಾಗಿಯಾಗಲಿದ್ದಾರೆ.

ನಂದಿಧ್ವಜ ಪೂಜೆ ಬಳಿಕ ವಿಜಯದಶಮಿ ಮೆರವಣಿಗೆ ಆರಂಭವಾಗಲಿದ್ದು, ಅರಮನೆ ಒಳಂಗಣದಿಂದ ಪ್ರಾರಂಭಗೊಂಡು ಬನ್ನಿ ಮಂಟಪದ ವರಗೆ ಮೆರವಣಿಗೆ ನಡೆಯಲಿದೆ. ಜಂಬೂಸವಾರಿಯಲ್ಲಿ ವಿವಿಧ ಜಿಲ್ಲೆ ಹಾಗೂ ವಿವಿಧ ಇಲಾಖೆಗಳಿಂದ 49 ಸ್ಥಬ್ದ ಚಿತ್ರಗಳು ಸಂಚಾರ ಇರಲಿದೆ. ಸಂಜೆ 4ಗಂಟೆಯಿಂದ 4:30 ರವರೆಗೆ ಸಲ್ಲುವ ಶುಭ ಕುಂಭ ಲಗ್ನದಲ್ಲಿ ಜಂಬೂ ಸವಾರಿಗೆ ಪುಷ್ಪಾರ್ಚನೆ ನಡೆಯಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್ ಸಿ ಮಹದೇವಪ್ಪ, ಸಂಸದ ಹಾಗೂ ರಾಜ ವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ಜಿಲ್ಲಾಧಿಕಾರಿ ಜಿ ಲಕ್ಷ್ಮಿಕಾಂತ ರೆಡ್ಡಿ, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ರವರಿಂದ ಪುಷ್ಪರ್ಚನೆ ಮಾಡಲಿದ್ದಾರೆ. ಸಂಜೆ 7 ಗಂಟೆಗೆ ಬನ್ನಿಮಂಟಪ ಮೈದಾನದಲ್ಲಿ ಪಂಜಿನ ಕವಾಯತು, ರಾಜ್ಯಪಾಲ ಥಾವರ ಚಂದ್ ಗೆಹಲೊಟ್ ರಿಂದ ಕವಯತು ವೀಕ್ಷಣೆಯೊಂದಿಗೆ ಗೌರವ ವಂದನೆ ಸ್ವೀಕಾರ ಆಗಲಿದೆ.

Continue Reading

ಬೆಂಗಳೂರು

Ayudha Puja: ನಾಡಿನೆಲ್ಲೆಡೆ ಆಯುಧ ಪೂಜೆ ಸಂಭ್ರಮ; ಭಕ್ತಾಧಿಗಳಿಂದ ದೇವಸ್ಥಾನಗಳು ಹೌಸ್‌ಫುಲ್‌

Ayudha Puja: ನಾಡಿನೆಲ್ಲೆಡೆ ಆಯುಧ ಪೂಜೆ ಸಂಭ್ರಮ ಮನೆ ಮಾಡಿದ್ದು, ಭಕ್ತಾಧಿಗಳಿಂದ ದೇವಸ್ಥಾನಗಳು ಹೌಸ್‌ಫುಲ್‌ ಆಗಿವೆ. ಸವಾರರು ತಮ್ಮ ವಾಹನಗಳಿಗೆ ಪೂಜೆ ಸಲ್ಲಿಸಲು ದೇವಸ್ಥಾನಕ್ಕೆ ಲಗ್ಗೆ ಇಟ್ಟಿದ್ದರು.

VISTARANEWS.COM


on

Ayudha Puja celebrations across the karnataka state Temples housefull by devotees

ಬೆಂಗಳೂರು: ನಾಡಿನೆಲ್ಲೆಡೆ ಆಯುಧ ಪೂಜಾ (Ayudha Puja) ಸಂಭ್ರಮ ಜೋರಾಗಿದೆ. ಆಯುಧ ಪೂಜೆಯ ಸಲುವಾಗಿ ನಗರದ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನಡೆಯುತ್ತಿದೆ.

ಬನಶಂಕರಿ, ಆ್ಯಕ್ಸಿಡೆಂಡ್ ಗಣೇಶ, ಸರ್ಕಲ್ ಮಾರಮ್ಮ, ಕಾಡುಮಲ್ಲೆಶ್ವರಂ ದೇವಸ್ಥಾನಕ್ಕೆ ಭಕ್ತರು ದೌಡಾಯಿಸಿದ್ದಾರೆ. ಬೆಳಗಿನಿಂದಲೇ ಪಂಚಾಭಿಷೇಕ ನೇರಿವೇರಿದ್ದು, ವಿಶೇಷ ಅಲಂಕಾರ ಮಾಡಿ ನಂತರ ಭಕ್ತಾಧಿಗಳಿಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

Ayudha Puja celebrations across the karnataka state  Temples housefull by devotees

ಅಲ್ಲದೇ ಮನೆಗಳಲ್ಲಿ ಆಯುಧಗಳಿಗೆ ಪೂಜೆ ಮಾಡಿ ಸಲ್ಲಿಸಿದ್ದು, ವಾಹನಗಳಿಗೆ ಪೂಜೆ ಮಾಡುವ ಸಲುವಾಗಿ ಸಾಕಷ್ಟು ಸಂಖ್ಯೆಯಲ್ಲಿ ದೇವಸ್ಥಾನಕ್ಕೆ ವಾಹನ ಸವಾರರು ಆಗಮಿಸುತ್ತಿದ್ದಾರೆ. ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಸರ್ಕಲ್ ಮಾರಮ್ಮ ದೇವಸ್ಥಾನದಲ್ಲಿ ಆಯುಧ ಪೂಜೆಯ ಸಂಭ್ರಮ ಜೋರಾಗಿತ್ತು. ದೇವಿಗೆ ಮುತ್ತಿನ ಅಲಂಕಾರ ಮಾಡಲಾಗಿದ್ದು, ಬೆಳಗ್ಗೆಯಿಂದ ದೇವಿಗೆ ವಿಶೇಷ ಪೂಜೆ ಪುರಸ್ಕಾರ ನಡೆದಿದೆ.

Ayudha Puja celebrations across the karnataka state  Temples housefull by devotees

ಭಕ್ತರು ತಮ್ಮ ವಾಹನಗಳಿಗೆ ಪೂಜೆ ಮಾಡಿಸಲು ಮುಗಿಬಿದ್ದಿದ್ದರು. ಹೀಗಾಗಿ ಸರ್ಕಲ್ ಮಾರಮ್ಮ ದೇವಸ್ಥಾನದ ಸುತ್ತ ಟ್ರಾಫಿಕ್ ಜಾಮ್‌ ಉಂಟಾಗಿತ್ತು. ಟ್ರಾಫಿಕ್‌ ಕ್ಲಿಯರ್‌ ಮಾಡಲು ಪೊಲೀಸರು ಹರಸಾಹಸ ಪಡಬೇಕಾಯಿತು. ಇಂದು ಶುಕ್ರವಾರ ಬೆಳಗ್ಗೆಯಿಂದ ಸಂಜೆಯವೆಗೂ ದೇವಸ್ಥಾನದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ನಡೆಯಲಿದೆ.

ವಿಸ್ತಾರ ನ್ಯೂಸ್‌ ಕಚೇರಿಯಲ್ಲೂ ಆಯುಧ ಪೂಜೆ ಸಂಭ್ರಮ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Latest4 hours ago

ಮರು ಮತ ಎಣಿಕೆಯಲ್ಲೂ ಜಯ ಸಾಧಿಸಿದ ಶಾಸಕ ಟಿ.ಡಿ ರಾಜೇಗೌಡ

Latest9 hours ago

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ಬಾಂಗ್ಲಾದೇಶಕ್ಕೆ ಏಕೆ ಟೆನ್ಶನ್‌?

Latest11 hours ago

ಜೂನಿಯರ್‌ ಡಾಲಿ ಎಂಟ್ರಿ.. ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ

Latest1 day ago

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆ: ಒಂದೇ ದಿನ 993 ರೂ ಹೆಚ್ಚಳ

Latest2 days ago

ಜನಪ್ರಿಯತೆಯಲ್ಲಿ ಪ್ರಧಾನಿ ಮೋದಿ ಈಗಲೂ ನಂ.1

Latest2 days ago

ಕುರ್ಚಿ ಕದನಕ್ಕೆ ಹೊಸ ಟ್ವಿಸ್ಟ್ : ದಲಿತ ಸಿಎಂ ಕೂಗು ಜೋರು

Latest2 days ago

ಟಿವಿಕೆ-ಎನ್‌ಡಿಎ ಮೈತ್ರಿ?, ತಮಿಳುನಾಡಿನಲ್ಲಿ ಸಂಚಲನ, ಸ್ಟಾಲಿನ್‌ ಸಭೆ

Latest2 days ago

ಎಕ್ಸಿಟ್‌ ಪೋಲ್‌: ಅಸ್ಸಾಂ, ಪುದುಚೇರಿ ಪ.ಬಂಗಾಳದಲ್ಲಿ ಬಿಜೆಪಿ, ತ.ನಾಡಲ್ಲಿ ಡಿಎಂಕೆ, ಕೇರಳಂನಲ್ಲಿ ಯುಡಿಎಫ್‌

Latest2 days ago

ತಮಿಳುನಾಡಿನಲ್ಲಿ ದಳಪತಿಯೇ ಅಧಿಪತಿ? ಎಂಜಿಆರ್‌ ಆಗ್ತಾರಾ ವಿಜಯ್‌?

Latest2 days ago

ಪಂಚರಾಜ್ಯ ಚುನಾವಣಾ ಫಲಿತಾಂಶ: “ಎಕ್ಸಿಟ್ ಪೋಲ್‌ಗಿಂತ ಉತ್ತಮ ಪ್ರದರ್ಶನ ನಿರೀಕ್ಷೆ” – ಖರ್ಗೆ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌