Actor Yash | ಮಗ ಸರ್ಕಾರಿ ಅಧಿಕಾರಿ ಆಗಬೇಕೆಂಬ ಆಸೆ ಅಪ್ಪನದಾಗಿತ್ತು: ಯಶ್‌ ಬಗ್ಗೆ ಕೆಲವು ಗೊತ್ತಿರದ ಸಂಗತಿಗಳು ಇಲ್ಲಿವೆ! - Vistara News

ಸಿನಿಮಾ

Actor Yash | ಮಗ ಸರ್ಕಾರಿ ಅಧಿಕಾರಿ ಆಗಬೇಕೆಂಬ ಆಸೆ ಅಪ್ಪನದಾಗಿತ್ತು: ಯಶ್‌ ಬಗ್ಗೆ ಕೆಲವು ಗೊತ್ತಿರದ ಸಂಗತಿಗಳು ಇಲ್ಲಿವೆ!

ಅಭಿಮಾನಿಗಳು ಯಶ್‌ (Actor Yash) ಅವರ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಯಶ್‌ ಬಗ್ಗೆ ಕೆಲವು ಗೊತ್ತಿರದ ಸಂಗತಿಗಳು ಇಲ್ಲಿವೆ!

VISTARANEWS.COM


on

Actor Yash
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕನ್ನಡ ಚಿತ್ರರಂಗವನ್ನು ಇಡೀ ದೇಶವೇ ತಿರುಗಿ ನೋಡುವಂತೆ ಮಾಡಿದ ಕೆಜಿಎಫ್​ ಸಿನಿಮಾದ ನಾಯಕ ರಾಕಿಂಗ್‌ ಸ್ಟಾರ್‌ ಯಶ್‌ಗೆ ಜನವರಿ 8ರಂದು (Actor Yash ) 37ನೇ ಜನುಮ ದಿನದ ಸಂಭ್ರಮ.​ ಅಭಿಮಾನಿಗಳಿಗೆ ಪತ್ರ ಬರೆದು ಪತ್ನಿ, ಮಕ್ಕಳೊಂದಿಗೆ ಬರ್ತ್ ಡೇ ಸೆಲೆಬ್ರೇಷನ್‌ಗೆ ದುಬೈಗೆ ಹಾರಿದ್ದಾರೆ ಯಶ್. ಅಭಿಮಾನಿಗಳು ಯಶ್‌ ಅವರ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಯಶ್‌ ಬಗ್ಗೆ ಕೆಲವು ಗೊತ್ತಿರದ ಸಂಗತಿಗಳು ಇಲ್ಲಿವೆ!

ಮಗ ಸರ್ಕಾರಿ ಅಧಿಕಾರಿ ಆಗಬೇಕೆಂಬ ಆಸೆ ಅಪ್ಪನದಾಗಿತ್ತು!
ರಾಕಿಂಗ್‌ ಸ್ಟಾರ್‌ ಯಶ್‌ ಅವರ ನಿಜವಾದ ಹೆಸರು ನವೀನ್ ಕುಮಾರ್ ಗೌಡ. ಮೂಲತಃ ಕರ್ನಾಟಕದ ಹಾಸನದಲ್ಲಿರುವ ಬೂವನಹಳ್ಳಿ ಎಂಬ ಹಳ್ಳಿಯಲ್ಲಿ ಜನಿಸಿದರು. ತಾಯಿಯ ಕಡೆಯವರು ಅವನಿಗೆ ಯಶವಂತ್ ಎಂದು ಹೆಸರಿಸಿದ್ದಾರೆ. ಇದೀಗ ಅವರನ್ನು ರಾಕಿಂಗ್‌ ಸ್ಟಾರ್‌ ಯಶ್‌ ಎಂದು ಕರೆಯುತ್ತಾರೆ. ಯಶ್ ಅವರ ನಟನೆಯಿಂದ ಸಾಕಷ್ಟು ಅಭಿಮಾನಿಗಳನ್ನು ಹೊಂದಿದ್ದಾರೆ. ಆದರೆ, ಯಶಸ್ಸಿನ ಹಾದಿ ಅವರಿಗೆ ಸುಲಭವಾಗಿರಲಿಲ್ಲ. ಅವರ ತಂದೆ ಅರುಣ್ ಕುಮಾರ್ ಗೌಡ ಅವರು ಕೆಎಸ್ಸಾರ್ಟಿಸಿ ಮತ್ತು ಬಿಎಂಟಿಸಿ ಬಸ್ ಚಾಲಕರಾಗಿದ್ದರಿಂದ ಬಡ ಕುಟುಂಬದಿಂದ ಬಂದವರು ಯಶ್‌.

ಯಶ್‌ ಅವರ ತಾಯಿ ಗೃಹಿಣಿ. ಅವರ ತಂದೆ-ತಾಯಿ ಆರಂಭದಲ್ಲಿ ಯಶ್‌ ಅವರ ನಟನೆಯ ಮಹತ್ವಾಕಾಂಕ್ಷೆಯನ್ನು ಬೆಂಬಲಿಸಲಿಲ್ಲ ಮತ್ತು ಅವರ ತಂದೆ ಕೂಡ ಅವರು ಸರ್ಕಾರಿ ಅಧಿಕಾರಿಯಾಗಬೇಕೆಂದು ಬಯಸಿದ್ದರು. ಶಾಲೆ ಬಿಟ್ಟು ನಟನೆಯತ್ತ ಮುಂದುವರಿಯಬೇಕೆಂದಿದ್ದ ಯಶ್‌ ಆಸೆ ಮನೆಯವರಿಗೆ ಇಷ್ಟ ಇರಲಿಲ್ಲ.

ಇದನ್ನೂ ಓದಿ | Actor Yash | ಜಗದಗಲದ ನಿರೀಕ್ಷೆಯಲ್ಲಿರುವ ನಿಮ್ಮ ಮುಂದೆ ನಿಲ್ಲಲು ಸ್ವಲ್ಪ ಸಮಯ ಕೊಡಿ: ಅಭಿಮಾನಿಗಳಿಗೆ ಯಶ್‌ ಪತ್ರ!

ರಾಧಿಕಾ ಪಂಡಿತ್‌ ಜತೆ ನಂದಗೋಕುಲ ಧಾರಾವಾಹಿಯಲ್ಲಿ ಕಾಣಿಸಿಕೊಂಡ ಯಶ್‌
ಯಶ್‌ ಬೆಂಗಳೂರಿನ KLE ಆರ್ಟ್ಸ್‌ ಕಾಲೇಜಿನಲ್ಲಿ BA ಪದವಿ ಪಡೆದುಕೊಂಡರು. ನಂತರ ರಾಧಿಕಾ ಪಂಡಿತ್‌ ಜತೆ ನಂದಗೋಕುಲ ಧಾರಾವಾಹಿಯಲ್ಲಿ ಕಾಣಿಸಿಕೊಂಡರು. ʻಮಳೆಬಿಲ್ಲುʼ, ʻಪ್ರೀತಿ ಇಲ್ಲದ ಮೇಲೆʼ ಸೇರಿ ಹಲವು ಧಾರಾವಾಹಿಯಲ್ಲಿ ನಟಿಸಿದರು.ʻ ಉತ್ತರಾಯಣʼ, ʻಸಿಲ್ಲಿ ಲಲ್ಲಿʼ, ʻನಂದ ಗೋಕುಲʼ, ಮತ್ತು ಹೆಚ್ಚಿನವುಗಳನ್ನು ಒಳಗೊಂಡಂತೆ ಅನೇಕ ಕನ್ನಡ ಟಿವಿ ಧಾರಾವಾಹಿಗಳಲ್ಲಿ ಕಾಣಿಸಿಕೊಳ್ಳುವ ಮೂಲಕ ಯಶ್ ಸಣ್ಣ ಪರದೆಯ ಮೇಲೆ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು.

ಬೆಳ್ಳಿತೆರೆಗೆ ಎಂಟ್ರಿ
ಯಶ್‌ 2007ರಲ್ಲಿ ಬಿಡುಗಡೆಯಾದ ʻಜಂಬದ ಹುಡುಗಿʼ ಚಿತ್ರದ ಮೂಲಕ ಬೆಳ್ಳಿತೆರೆಗೆ ಎಂಟ್ರಿ ಕೊಟ್ಟರು. ಒಂದು ವರ್ಷದ ನಂತರ ರೊಮ್ಯಾಂಟಿಕ್‌ ಸಿನಿಮಾ ʻರಾಕಿʼಯಲ್ಲಿ ನಾಯಕನಾಗಿ ಮಿಂಚಿದರು. 2008ರಲ್ಲಿ ʻಮೊಗ್ಗಿನ ಮನಸ್ಸುʼ ಸಿನಿಮಾದಲ್ಲಿ ನಟಿಸಿ ಹೆಸರು ಮಾಡಿದರು. ಅದಾದ ಬಳಿಕ ಸಾಲು ಸಾಲು ಸಿನಿಮಾಗಳಲ್ಲಿ ಅವಕಾಶ ಪಡೆದರು.

ರಾಧಿಕಾ ಜತೆ ಹಸೆಮಣೆ ಏರಿದ ಯಶ್‌
ಧಾರಾವಾಹಿ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ರಾಧಿಕಾ ಮತ್ತು ಯಶ್ 2004ರಲ್ಲಿ ʻನಂದಗೋಕುಲʼ ಎಂಬ ಧಾರಾವಾಹಿಯಲ್ಲಿ ಜತೆಯಾಗಿ ನಟಿಸಿದ್ದರು. ಶೂಟಿಂಗ್ ಸಮಯದಲ್ಲಿ ಮೊಟ್ಟಮೊದಲ ಬಾರಿಗೆ ಯಶ್ ಮತ್ತು ರಾಧಿಕಾ ಭೇಟಿಯಾಗಿದ್ದರು. 2016ರ ಡಿಸೆಂಬರ್ 9ರಂದು ರಾಧಿಕಾ ಅವರ ಇಷ್ಟದಂತೆ ಗೋವಾದಲ್ಲಿ ಇಬ್ಬರ ಮದುವೆ ನಡೆಯಿತು. 2018ರ ಡಿಸೆಂಬರ್ 2ರಂದು ರಾಧಿಕಾ ಪಂಡಿತ್ ಮುದ್ದು ಮಗಳು ಐರಾಗೆ ಜನ್ಮ ನೀಡಿದರು. ಒಂದು ವರ್ಷದ ನಂತರ 2019ರಲ್ಲಿ ಮಗ ಯಥರ್ವ್ ಜನಿಸಿದ.

ಇತಿಹಾಸ ನಿರ್ಮಿಸಿದ ಕೆಜಿಎಫ್‌
2018 ಡಿಸೆಂಬರ್‌ನಲ್ಲಿ ತೆರೆಕಂಡ ಯಶ್​ ಚಿತ್ರ ಕೆಜಿಎಫ್​ ಬಾಲಿವುಡ್, ಟಾಲಿವುಡ್​ನಲ್ಲೂ ಕಮಾಲ್​ ಮಾಡಿತು. ರಿಲೀಸ್ ಆದ ಐದೇ ದಿನದಲ್ಲಿ ಕೆಜಿಎಫ್​ 100 ಕೋಟಿ ರೂ ಕಲೆಕ್ಷನ್ ಮಾಡಿ ದಾಖಲೆ ನಿರ್ಮಿಸಿತು. ಸ್ಯಾಂಡಲ್​ವುಡ್​ ಮಾತ್ರವಲ್ಲ ಬಾಲಿವುಡ್​ ಬಾಕ್ಸ್​ ಆಫೀಸ್ ಕೊಳ್ಳೆ ಹೊಡೆಯಿತು. 2022ರ ಏಪ್ರಿಲ್ 14ರಂದು ತೆರೆಕಂಡ ಕೆಜಿಎಫ್​ 2 ಸಿನಿಮಾ ಕೂಡ ಭರ್ಜರಿ ಕಲೆಕ್ಷನ್ ಮಾಡಿದ್ದು, ಅನೇಕ ಸಿನಿಮಾಗಳ ದಾಖಲೆಯನ್ನು ಮೀರಿಸಿದೆ. 1400 ಕೋಟಿ ರೂ.ಕಲೆಕ್ಷನ್ ಮಾಡಿ ಕೆಜಿಎಫ್ ಸಿನಿಮಾ ಇತಿಹಾಸ ನಿರ್ಮಿಸಿದೆ.

ಇದನ್ನೂ ಓದಿ | Actor Yash | ಯಶ್ ಹೊಸ ಸಿನಿಮಾಗೆ 400 ಕೋಟಿ ರೂ. ಬಜೆಟ್‌: ಕೆವಿಎನ್ ‍ಪ್ರೊಡಕ್ಷನ್ ಬಂಡವಾಳ ಹೂಡಲಿದೆಯಂತೆ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಸಿನಿಮಾ

Gauri Khan: ಇಸ್ಲಾಂಗೆ ಮತಾಂತರ ಆಗದೇ ಇರಲು ಕಾರಣ ತಿಳಿಸಿದ ಶಾರುಖ್ ಖಾನ್ ಪತ್ನಿ ಗೌರಿ!

ಬಾಲಿವುಡ್ ನ ಆದರ್ಶ ಜೋಡಿಯಲ್ಲಿ ಶಾರುಖ್ ಮತ್ತು ಗೌರಿ ಅವರೂ ಸೇರಿದ್ದಾರೆ. ಈ ಜೋಡಿ ಮದುವೆಯಾಗಿ 33 ವರ್ಷಗಳಾಗಿದ್ದು ಮೂವರು ಮಕ್ಕಳ ಪೋಷಕರಾಗಿದ್ದರೆ. ಧರ್ಮದ ವಿಚಾರದಲ್ಲಿ ಗೌರಿ (Gauri Khan) ಈಗಲೂ ಹಿಂದುವಾಗಿಯೇ ಉಳಿದಿದ್ದಾರೆ. ಇದಕ್ಕೆ ಕಾರಣ ಏನೆಂಬುದನ್ನು ಅವರೇ ಹೇಳಿದ್ದಾರೆ.

VISTARANEWS.COM


on

By

Gauri Khan
Koo

ಬಾಲಿವುಡ್ ನ (bollywood) ಆದರ್ಶ ದಂಪತಿಗಳ ಸಾಲಿನಲ್ಲಿ ಬಾಲಿವುಡ್ ಬಾದ್ ಷಾ ಶಾರುಖ್ ಖಾನ್ (Shah Rukh Khan), ಗೌರಿ ಖಾನ್ (Gauri Khan) ದಂಪತಿಯೂ ಇದ್ದಾರೆ. ಇದಕ್ಕೆ ಮುಖ್ಯ ಕಾರಣ ಅವರಿಬ್ಬರ ನಡುವಿನ ಪ್ರೀತಿ ಮತ್ತು ಹೊಂದಾಣಿಕೆ. ಇದು ಅವರ ಅಭಿಮಾನಿಗಳ ಮನಸ್ಸನ್ನು ಗೆಲ್ಲುವಂತೆ ಮಾಡಿದೆ.

ಅಭಿಮಾನಿಗಳನ್ನು ಪ್ರೀತಿ, ವಾತ್ಸಲ್ಯದಿಂದ ಕಾಣುವ ಈ ದಂಪತಿ ಇತ್ತೀಚೆಗೆ ಸಂದರ್ಶನವೊಂದರಲ್ಲಿ ನಾನು ನಿಮ್ಮೊಂದಿಗೆ ಬೆಳೆಯಲು ಬಯಸುತ್ತೇನೆ ಎಂದು ಹೇಳಿ ಮತ್ತೆ ಎಲ್ಲರ ಮನ ಗೆದ್ದಿದ್ದಾರೆ.

ಗೌರಿ ಮತ್ತು ಶಾರುಖ್ ಖಾನ್ ಅವರ ಧರ್ಮ ಬೇರೆಬೇರೆಯಾದರೂ ಇದು ಅವರಿಬ್ಬರ ನಡುವಿನ ಪ್ರೀತಿಗೆ ಅಡ್ಡಿಯಾಗಲಿಲ್ಲ. ಮದುವೆಯ ಮೊದಲು ಕೆಲವು ತೊಂದರೆಗಳು ಎದುರಾದರೂ ಮದುವೆಯ ಬಳಿಕ ದಂಪತಿ ಎಂದರೆ ಹೀಗಿರಬೇಕು ಎನ್ನುವಷ್ಟು ಇವರಿಬ್ಬರೂ ಮಾದರಿಯಾಗಿದ್ದಾರೆ.

ಕಿಂಗ್ ಖಾನ್ ಮೊದಲಿನಿಂದಲೂ ತನ್ನ ರಾಣಿಗೆ ಆದರ್ಶ ಪತಿ. ಶಾರುಖ್ ಖಾನ್ ಮುಸ್ಲಿಂ ಆಗಿರುವುದರಿಂದ ಮದುವೆಯಾದ ಬಳಿಕ ಗೌರಿ ಮುಸ್ಲಿಂ ಆಗಿ ಮತಾಂತರವಾಗುತ್ತಾರೆ ಎನ್ನುವ ಹೇಳಿಕೆಗಳು ಜೋರಾಗಿ ಕೇಳಿ ಬಂದಿತ್ತು. ಹೀಗಾಗಿ ಅವರಿಗೂ ಪದೇಪದೇ ತಾವು ಮುಸ್ಲಿಂ ಆಗಿ ಮತಾಂತರಗೊಳ್ಳುವುದಿಲ್ಲ ಎಂದು ಹೇಳಬೇಕಾದ ಸಂದರ್ಭಗಳು ಎದುರಾಗಿತ್ತು.

ಇತ್ತೀಚೆಗೆ ಕರಣ್ ಜೋಹರ್ ಅವರ ಕಾರ್ಯಕ್ರಮ ಕಾಫಿ ವಿತ್ ಕರಣ್‌ನಲ್ಲಿಹೃತಿಕ್ ರೋಷನ್ ಅವರ ಪತ್ನಿ ಸುಸ್ಸಾನ್ನೆ ಖಾನ್ ಅವರೊಂದಿಗೆ ಗೌರಿ ಆಗಮಿಸಿದ್ದರು. ಅಲ್ಲಿ ಗೌರಿ ಮುಸ್ಲಿಂ ಆಗಿ ಮತಾಂತರಗೊಳ್ಳದಿರುವ ಕುರಿತು ಚರ್ಚೆ
ನಡೆದಿತ್ತು.

ಯಾಕೆ ಮತಾಂತರವಾಗಲಿಲ್ಲ?

ಶಾರುಖ್ ಖಾನ್ ಅವರ ಧರ್ಮಕ್ಕೆ ನಾನು ಮತಾಂತರವಾಗುವುದಿಲ್ಲ ಎಂದು ಗೌರಿ ಖಾನ್ ಹೇಳಿರುವ ಹಳೆಯ ವಿಡಿಯೋ ಈಗ ಮತ್ತೆ ಸದ್ದು ಮಾಡಿದೆ. ಇದರಲ್ಲಿ ಅವರು ತಾವು ಇಸ್ಲಾಂ ಧರ್ಮಕ್ಕೆ ಮತಾಂತರವಾಗದೇ ಉಳಿಯಲು ಕಾರಣವನ್ನೂ ಕೊಟ್ಟಿದ್ದಾರೆ.

ನಮ್ಮಿಬ್ಬರ ಮಧ್ಯೆ ಸಮತೋಲನವಿದೆ. ನಾನು ಶಾರುಖ್ ಅವರ ಧರ್ಮವನ್ನು ಗೌರವಿಸುತ್ತೇನೆ. ಮತ್ತು ಅವರೂ ನನ್ನ ಧರ್ಮವನ್ನು ಗೌರವಿಸುತ್ತಾರೆ. ಹೀಗಾಗಿ ನಾನು ಮತಾಂತರಗೊಂಡು ಮುಸ್ಲಿಂ ಆಗಬೇಕು ಈ ಎನ್ನುವುದರಲ್ಲಿ ಅರ್ಥವಿಲ್ಲ. ಪರಸ್ಪರ ಜೊತೆಯಾಗಿ ಬಾಳಲು ಅದು ಅನಿವಾರ್ಯ ಎಂಬುದನ್ನು ನಾನು ನಂಬುವುದಿಲ್ಲ. ಪ್ರತಿಯೊಬ್ಬರೂ ವೈಯಕ್ತಿಕ ಮತ್ತು ಅವರ ಧರ್ಮವನ್ನು ಅನುಸರಿಸುತ್ತಾರೆ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Rashmika Mandanna: ವಿಜಯ್‌ ದೇವರಕೊಂಡ ಹೆಸರು ಕೇಳುತ್ತಲೇ ನಾಚಿ ನೀರಾದ ರಶ್ಮಿಕಾ; ಸದ್ಯದಲ್ಲೇ ಗುಡ್‌ನ್ಯೂಸ್‌?


ಶಾರುಖ್‌ನಂತೆ ನನ್ನ ಧರ್ಮವನ್ನು ಯಾವತ್ತೂ ಅಗೌರವಗೊಳಿಸುವುದಿಲ್ಲ. ಮಗ ಆರ್ಯನ್ ತನ್ನ ತಂದೆಯ ಧರ್ಮವನ್ನು ಅನುಸರಿಸುತ್ತಾನೆ. ಆರ್ಯನ್ ಗೆ ಶಾರುಖ್‌ ಎಂದರೆ ತುಂಬಾ ಇಷ್ಟ.ಹೀಗಾಗಿ ಆತ ಅವರ ಧರ್ಮವನ್ನು ಅನುಸರಿಸುತ್ತಾನೆ ಎಂದು ನಾನು ಭಾವಿಸುತ್ತೇನೆ. ನಾನು ಮುಸ್ಲಿಂ ಎಂದು ಅವರಿಬ್ಬರು ಯಾವಾಗಲೂ ಹೇಳುತ್ತಿರುತ್ತಾರೆ. ಅದನ್ನು ನಾನು ಸಕಾರಾತ್ಮಕವಾಗಿ ಸ್ವೀಕರಿಸಿದ್ದೇನೆ ಎಂದು ಹೇಳಿದ್ದಾರೆ ಗೌರಿ ಖಾನ್.

ಶಾರುಖ್ ಖಾನ್ ಹಾಗೂ ಗೌರಿ ಖಾನ್ ದಾಂಪತ್ಯ ಜೀವನಕ್ಕೆ ಕಾಲಿಟ್ಟು 33 ವರ್ಷಗಳಾಗಿವೆ. ಬಾಲಿವುಡ್‌ನ ಈ ಸುವರ್ಣ ದಂಪತಿಗೆ ಆರ್ಯನ್ ಖಾನ್, ಸುಹಾನಾ ಖಾನ್ ಮತ್ತು ಅಬ್ರಾಮ್ ಖಾನ್ ಎಂಬ ಮೂರು ಮಕ್ಕಳಿದ್ದಾರೆ.

Continue Reading

ಪ್ರಮುಖ ಸುದ್ದಿ

Sandalwood News : ಚಿತ್ರರಂಗದ ಸಮಸ್ಯೆ ಬಗೆಹರಿಸಲು ಗೋವಾಕ್ಕೆ ಹೋದ ನಿಯೋಗದೊಳಗೆ ಜಟಾಪಟಿ!

Kannada Producers: ಸಂಘದ ಪದಾಧಿಕಾರಿಗಳೆಲ್ಲರೂ ಬಸ್​​ ಮೂಲಕ ಗೋವಾಕ್ಕೆ ಪ್ರಯಾಣ ಮಾಡಿದ್ದರು. ಹಿಬೀಸ್ ರೆಸಾರ್ಟ್​​ನಲ್ಲಿ ಸೋಮವಾರ ರಾತ್ರಿ (ಮೇ 27ರಂದು) ಸಭೆ ಆಯೋಜಿಸಲಾಗಿತ್ತು. ಅಲ್ಲಿ ವಿಚಾರವೊಂದರ ಬಗ್ಗೆ ಆಕ್ಷೇಪ ವ್ಯಕ್ತವಾಗಿ ಮಾತಿಗೆ ಮಾತು ಬೆಳೆದು ಗಲಾಟೆ ಆರಂಭವಾಗಿದೆ.

VISTARANEWS.COM


on

Kannada producers
Koo

ಬೆಂಗಳೂರು: ಕನ್ನಡ ಚಲನಚಿತ್ರ ಕ್ಷೇತ್ರ (Sandalwood News) ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸಲೆಂದು ಗೋವಾಗೆ ಹೋಗಿದ್ದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (Film Chamber), ನಿರ್ಮಾಪಕರ ಸಂಘ (Kannada Producers) ಹಾಗೂ ನಿರ್ದೇಶಕರ ಸಂಘದ ಪದಾಧಿಕಾರಿಗಳಲ್ಲಿ ಕೆಲವು ಪರಸ್ಪರ ಗಲಾಟೆ ಮಾಡಿಕೊಂಡ ಪ್ರಸಂಗ ವರದಿಯಾಗಿದೆ. ಸಣ್ಣದಾಗಿ ಆರಂಭಗೊಂಡ ವಾಗ್ವಾದ ದೊಡ್ಡ ಗಲಾಟೆಯಾಗಿ ಮಾರ್ಪಟ್ಟಿದ್ದು ಪರಸ್ಪರ ಹೊಡೆದಾಡಿಕೊಂಡ ಬಳಿಕ ಪ್ರತ್ಯೇಕವಾಗಿ ಬೆಂಗಳೂರಿಗೆ ತಿರುಗಿ ಬಂದಿದ್ದಾರೆ. ಈ ಮೂಲಕ ಸಮಸ್ಯೆಯನ್ನು ಬಗೆಹರಿಸಲೆಂದು ಹೋದವರು ಹೊಸ ಸಮಸ್ಯೆ ಸೃಷ್ಟಿಸಿಕೊಂಡು ಬಂದಿದ್ದಾರೆ.

ಸಂಘದ ಪದಾಧಿಕಾರಿಗಳೆಲ್ಲರೂ ಬಸ್​​ ಮೂಲಕ ಗೋವಾಕ್ಕೆ ಪ್ರಯಾಣ ಮಾಡಿದ್ದರು. ಹಿಬೀಸ್ ರೆಸಾರ್ಟ್​​ನಲ್ಲಿ ಸೋಮವಾರ ರಾತ್ರಿ (ಮೇ 27ರಂದು) ಸಭೆ ಆಯೋಜಿಸಲಾಗಿತ್ತು. ಅಲ್ಲಿ ವಿಚಾರವೊಂದರ ಬಗ್ಗೆ ಆಕ್ಷೇಪ ವ್ಯಕ್ತವಾಗಿ ಮಾತಿಗೆ ಮಾತು ಬೆಳೆದು ಗಲಾಟೆ ಆರಂಭವಾಗಿದೆ. ಕೊನೆಗದು ಕೈ ಕೈ ಮಿಲಾಯಿಸಿಕೊಂಡಿದ್ದಾರೆ. ನಿರ್ಮಾಪಕರಾದ ರಥಾವರ ಮಂಜುನಾಥ್, ಎ.ಗಣೇಶ್ ಹಾಗೂ ಸತೀಶ್ ಆರ್ಯ ನಡುವೆ ವಾಗ್ವಾದ ನಡೆದಿದೆ ಎಂದು ವರದಿಯಾಗಿದೆ.

ಗಲಾಟೆ ಮಾಡಿದ ಬಳಿಕ ಮೂವರನ್ನು ವಿಮಾನದ ಮೂಲಕ ಬೆಂಗಳೂರಿಗೆ ವಾಪಸ್ ಕಳುಹಿಸಲಾಗಿದೆ. ಗೋವಾ ಟ್ರಿಪ್‌ಗೆ ಹೋದ ನಿಯೋಗದ ಸದಸ್ಯರು, ಪದಾಧಿಕಾರಿಗಳು ಬುಧವಾರ ಬೆಂಗಳೂರಿಗೆ ವಾಪಸಾಗಲಿದ್ದಾರೆ. ವಾಣಿಜ್ಯ ಮಂಡಳಿಯ ಅಧ್ಯಕ್ಷರಾದ ಎನ್.ಎಂ.ಸುರೇಶ್, ಉಮೇಶ್ ಬಣಕಾರ್, ಆಸ್ಕರ್ ಕೃಷ್ಣ, ಭಾಮಾ ಹರೀಶ್, ಭಾಮಾ ಗಿರೀಶ್, ಟೇಸಿ ವೆಂಕಟೇಶ್ ಈ ಪ್ರವಾಸದಲ್ಲಿದ್ದರು.

ಇದನ್ನೂ ಓದಿ: Kannada New Movie: ʼಕೋಟಿʼ ಚಿತ್ರಕ್ಕೆ ಕಿಚ್ಚನ ಬಲ; ಹೊಸ ಪೋಸ್ಟರ್‌ ರಿಲೀಸ್‌

ಗಲಾಟೆ ಯಾವ ಕಾರಣಕ್ಕೆ ನಡೆಯಿತು ಎಂಬುದರ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ಆದರೆ, ಪಾರ್ಟಿ ಮಾಡುವ ವೇಳೆ ಮಾತಿಗೆ ಬೆಳೆದು ಗಲಾಟೆಯಾಗಿರಬಹುದು ಎಂದು ಹೇಳಲಾಗುತ್ತಿದೆ. ಈ ವಿಚಾರ ಟೀಕೆಗೆ ಒಳಗಾಗಿದ್ದು ಅಲ್ಲಿಗೆ ಹೋಗಿ ಗಲಾಟೆ ಮಾಡಿ ಬರುವ ಅನಿವಾರ್ಯತೆ ಏನಿತ್ತು ಎಂದು ಪ್ರಶ್ನಿಸಿದ್ದಾರೆ.

Continue Reading

ಸ್ಯಾಂಡಲ್ ವುಡ್

Kannada New Movie: ʼಕೋಟಿʼ ಚಿತ್ರಕ್ಕೆ ಕಿಚ್ಚನ ಬಲ; ಹೊಸ ಪೋಸ್ಟರ್‌ ರಿಲೀಸ್‌

Kannada New Movie: ಸ್ಯಾಂಡಲ್‌ವುಡ್‌ನ ಬಹು ನಿರೀಕ್ಷಿತ ಚಿತ್ರ ಕೋಟಿಯ ಇನ್ನೊಂದು ಪೋಸ್ಟರ್‌ ರಿಲೀಸ್‌ ಆಗಿದೆ. ಅದ್ದೂರಿ ಕಾರ್ಯಕ್ರಮದಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಪೋಸ್ಟರ್‌ ರಿಲೀಸ್‌ ಮಾಡಿ ಶುಭ ಹಾರೈಸಿದರು. ಪರಮ್‌ ಆ್ಯಕ್ಷನ್‌ ಕಟ್‌ ಹೇಳಿರುವ ಈ ಚಿತ್ರದಲ್ಲಿ ಡಾಲಿ ಧನಂಜಯ, ಮೋಕ್ಷಾ‌ ಕುಶಾಲ್, ತಾರಾ ಅನುರಾಧ, ರಂಗಾಯಣ ರಘು, ರಮೇಶ್ ಇಂದಿರಾ, ಸರ್ದಾರ್ ಸತ್ಯ ಮತ್ತಿತರರು ನಟಿಸಿದ್ದಾರೆ. ‘ಕೋಟಿ’ ಸಿನಿಮಾ ಜೂನ್ 14ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

VISTARANEWS.COM


on

Kannada New Movie
Koo

ಬೆಂಗಳೂರು: ʼಕೋಟಿʼ ಸಿನಿಮಾದ ಪ್ರೀ ರಿಲೀಸ್ ವಿಶೇಷ ಟೀವಿ ಕಾರ್ಯಕ್ರಮ ಇತ್ತೀಚೆಗೆ ಅದ್ದೂರಿಯಾಗಿ ನಡೆಯಿತು. ಈ ಕಾರ್ಯಕ್ರಮವನ್ನು ‘ಕೋಟಿ ಮನರಂಜನೆ’ ಎಂದು ಕರೆಯಲಾಗಿದ್ದು, ಕಾರ್ಯಕ್ರಮದಲ್ಲಿ ಸಿನಿಮಾದ ತಾರಾಬಳಗವೇ ತುಂಬಿತ್ತು. ʼಕೋಟಿʼಯ ನಾಯಕ ಡಾಲಿ ಧನಂಜಯ ಸೇರಿದಂತೆ ನಾಯಕಿ ಮೋಕ್ಷಾ‌ ಕುಶಾಲ್ ಮತ್ತು ಹಿರಿಯ ತಾರೆಗಳಾದ ತಾರಾ ಅನುರಾಧ, ರಂಗಾಯಣ ರಘು, ರಮೇಶ್ ಇಂದಿರಾ, ಸರ್ದಾರ್ ಸತ್ಯ ಕಾರ್ಯಕ್ರಮದಲ್ಲಿ ಪಾಲ್ಗೊಂಡರು (Kannada New Movie).

ಈ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ತಂದದ್ದು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್. ಅದ್ಭುತ ಲೈಟಿಂಗ್ ಮತ್ತು ಕೋರಿಯಾಗ್ರಫಿಯ‌ ಮೂಲಕ ಆದ ಕಿಚ್ಚನ ಎಂಟ್ರಿಯ ನೋಡಿ ಅಭಿಮಾನಿಗಳ ಕೇಕೆ ಮತ್ತು ಶಿಳ್ಳೆಗಳ‌ ಸದ್ದು ಮುಗಿಲ‌‌ ಮುಟ್ಟಿತ್ತು. ಸುದೀಪ್ ಅವರು ಸುಮಾರು ಒಂದು ತಾಸಿಗೂ ಹೆಚ್ಚಿನ ಕಾಲ ವೇದಿಕೆಯ ಮೇಲಿದ್ದು ನೆರೆದಿದ್ದವರನ್ನು ರಂಜಿಸಿದರು. ನಿರೂಪಕ ಅಕುಲ್ ಬಾಲಾಜಿ ಮತ್ತು ಸುದೀಪ್ ಮಾತುಕತೆ ಪ್ರೇಕ್ಷಕರಿಗೆ ನಗುವಿನ ಕಚಗುಳಿ ಇಡುವಂತಿತ್ತು. ಸುದೀಪ್ ʼಕೋಟಿʼ ಚಿತ್ರದ ಹೊಸ ಪೋಸ್ಟರನ್ನು ಅನಾವರಣಗೊಳಿಸಿ ತಂಡಕ್ಕೆ ಶುಭ ಕೋರಿದರು.

ʼಕೋಟಿʼಯ ನಾಯಕಿ ‘ಮೋಕ್ಷಾ’ ಅವರ ಡಾನ್ಸ್‌ಗೆ ಪ್ರೇಕ್ಷಕರಿಂದ ಭರ್ಜರಿ ಪ್ರತಿಕ್ರಿಯೆ ದೊರೆಯಿತು. ʼಕೋಟಿʼಯ ಇತರ ನಟ ನಟಿಯರಿಂದ ವಿಶೇಷ ಕಾರ್ಯಕ್ರ‌ಮಗಳು ಮತ್ತು ಗಿಚ್ಚಿ ಗಿಲಿಗಿಲಿ ತಂಡದಿಂದ ಹೊಟ್ಟೆ ಹುಣ್ಣಾಗಿಸುವ ಹಾಸ್ಯ ಕಾರ್ಯಕ್ರಮ ನಡೆದವು.

ಧನಂಜಯ ಅವರಿಗಾಗಿ ಮಕ್ಕಳು ಮಾಡಿದ ವಿಶೇಷ ಡಾನ್ಸ್ ‘ಕೋಟಿ ಮನರಂಜನೆ’ಯ ಪ್ರಮುಖ ಆಕರ್ಷಣೆಗಳಲ್ಲೊಂದಾಗಿತ್ತು. ಧನಂಜಯ ಅವರು ಮಕ್ಕಳ ನೃತ್ಯವನ್ನು ಮೆಚ್ಚಿ ವೇದಿಕೆಯ ಮೇಲೆ ಬಂದು ಮಕ್ಕಳ ಜತೆ ಸೆಲ್ಫಿ ತೆಗೆದುಕೊಂಡರು. ಈ ಚಿತ್ರದ ಸಂಗೀತ ಸಂಯೋಜಕರಾದ ವಾಸುಕಿ ವೈಭವ್ ‘ಕೋಟಿ’ ಸಿನಿಮಾದ ಹಾಡುಗಳನ್ನು ಹಾಡಿದರು. ʼಕೋಟಿʼಯ ಹಾಡುಗಳಿಗೆ ಸಾಹಿತ್ಯ ರಚಿಸಿರುವ ಯೋಗರಾಜ್ ಭಟ್ “ಕನ್ನಡದ ಜನತೆಗಾಗಿ ಯಾರೇ ಕಷ್ಟಪಟ್ಟರೂ ನಾಡಿನ ಜನತೆ ಅವರ ಕೆಲಸವನ್ನು ಗೆಲ್ಲಿಸುತ್ತಾರೆ” ಎಂದು ಹೇಳಿದರು.‌

ದಶಕಗಳ ಕಾಲ ಕಲರ್ಸ್ ಕನ್ನಡ ಚಾನೆಲ್‌ ಮುನ್ನಡೆಸಿದ್ದ ಪರಮ್ ಅವರು ಈ ಚಿತ್ರವನ್ನು ನಿರ್ದೇಶಿಸಿದ್ದು, ಚಾನೆಲ್‌ನ ಸಿಬ್ಬಂದಿ ವಿಶೇಷ ವಿಡಿಯೊ ಮೂಲಕ ಅವರಿಗೆ ಶುಭ ಕೋರಿದರು. ವಿಡಿಯೊದಲ್ಲಿ ತಮ್ಮ ಹಳ್ಳಿಮನೆಯ ಚಿತ್ರ ನೋಡಿದ ಪರಮ್ ಭಾವುಕರಾದರು. ಕಲರ್ಸ್ ಕನ್ನಡ ಮೂಲಕ ಯಶಸ್ಸು ಪಡೆದ ಚಂದನ್ ಶೆಟ್ಟಿ, ನಿವೇದಿತಾ ಗೌಡ, ವಿಜಯ್ ಸೂರ್ಯ, ರಕ್ಷಿತ್, ಶೈನ್ ಶೆಟ್ಟಿ, ಮಯೂರಿ, ಅಂಕಿತಾ ಅಮರ್, ನೇಹಾ ಗೌಡ ಹಾಗೂ ಅಕುಲ್ ಬಾಲಾಜಿ ತಮ್ಮ ಮೆಂಟರ್ ‘ಪರಮ್‌’ ಅವರ ಹೊಸ ಪಯಣಕ್ಕೆ ಶುಭ ಹಾರೈಸಿದರು.

ಇದನ್ನೂ ಓದಿ: Dolly Dhananjay: ಡಾಲಿ ಧನಂಜಯ್‌ ಹೊಸ ಸಿನಿಮಾ ಹೆಸರು ಅನೌನ್ಸ್‌! ಪರಮ್‌ ಆ್ಯಕ್ಷನ್‌ ಕಟ್‌!

ಈಗಾಗಲೇ ಪೋಸ್ಟರ್, ಟೀಸರ್, ಹಾಡುಗಳ ಮೂಲಕ ಸದ್ದು ಮಾಡುತ್ತಿರುವ ‘ಕೋಟಿ’ ಕನ್ನಡ ಇಂಡಸ್ಟ್ರಿಯ ದ್ವಿತೀಯಾರ್ಧದ ಯಶಸ್ಸಿಗೆ ಮೊದಲ ಗೆಲುವಾಗುವ ಎಲ್ಲ ಲಕ್ಷಣ ಕಾಣುತ್ತಿದೆ ಎನ್ನುವುದು ಅಭಿಮಾನಿಗಳ ಮನದಾಳ. ‘ಕೋಟಿ ಮನರಂಜನೆ’ ಕಾರ್ಯಕ್ರಮವು ಇದೇ ಜೂನ್ 2ರಂದು ಸಂಜೆ 7.30ಕ್ಕೆ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿದೆ. ಜಿಯೋ ಸ್ಟುಡಿಯೋಸ್ ನಿರ್ಮಾಣದ ‘ಕೋಟಿ’ ಸಿನಿಮಾ ಜೂನ್ 14ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

Continue Reading

ಸಿನಿಮಾ

Pushpa 2: ʼಪುಷ್ಪ 2ʼ ಸಿನಿಮಾ ತಂಡದಿಂದ ಅಲ್ಲು ಅರ್ಜುನ್‌ ಫ್ಯಾನ್ಸ್‌ಗೆ ಗುಡ್‌ನ್ಯೂಸ್‌; ಎರಡನೇ ಹಾಡು ರಿಲೀಸ್‌ಗೆ ಮುಹೂರ್ತ ಫಿಕ್ಸ್‌

Pushpa 2: ಸದ್ಯ ದೇಶದ ಗಮನ ಸೆಳೆದಿರುವ ಚಿತ್ರಗಳ ಪೈಕಿ ಟಾಲಿವುಡ್‌ ಸ್ಟೈಲಿಶ್‌ ಸ್ಟಾರ್‌ ಅಲ್ಲು ಅರ್ಜುನ್‌-ರಶ್ಮಿಕಾ ಮಂದಣ್ಣ ಅಭಿನಯದ ʼಪುಷ್ಪ 2ʼ ಚಿತ್ರದ ಎರಡನೇ ಹಾಡು ರಿಲೀಸ್‌ಗೆ ಮುಹೂರ್ತ ಫಿಕ್‌ ಆಗಿದೆ. ಈಗಾಗಲೇ ರಿಲೀಸ್‌ ಆಗಿರುವ ಮೊದಲ ಹಾಡು ಸೂಪರ್‌ ಹಿಟ್‌ ಆಗಿದ್ದು, ಎರಡನೇ ಹಾಡಿನ ಬಗ್ಗೆ ಕುತೂಹಲ ಮೂಡಿದೆ. ಹಾಗಾದರೆ ಎರಡನೇ ಹಾಡು ಯಾವಾಗ ರಿಲೀಸ್‌ ಆಗಲಿದೆ? ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ.

VISTARANEWS.COM


on

Pushpa 2
Koo

ಹೈದರಾಬಾದ್‌: ಸದ್ಯ ದೇಶದ ಗಮನ ಸೆಳೆದಿರುವ ಚಿತ್ರಗಳ ಪೈಕಿ ಟಾಲಿವುಡ್‌ ಸ್ಟೈಲಿಶ್‌ ಸ್ಟಾರ್‌ ಅಲ್ಲು ಅರ್ಜುನ್‌-ರಶ್ಮಿಕಾ ಮಂದಣ್ಣ ಅಭಿನಯದ ʼಪುಷ್ಪ 2ʼ (Pushpa 2) ಕೂಡ ಒಂದು. 2021ರಲ್ಲಿ ತೆರೆಕಂಡು ಬಾಕ್ಸ್‌ ಆಫೀಸ್‌ನಲ್ಲಿ ಮ್ಯಾಜಿಕ್‌ ಮಾಡುದ್ದ ಪ್ಯಾನ್‌ ಇಂಡಿಯಾ ಸಿನಿಮಾ ʼಪುಷ್ಪʼದ ಮುಂದುವರಿದ ಭಾಗ ಇದು. ಸುಕುಮಾರ್ ನಿರ್ದೇಶನದ ‘ಪುಷ್ಪ 2’ ಚಿತ್ರದ ಮೊದಲ ಹಾಡು ಈಗಾಗಲೇ ರಿಲೀಸ್‌ ಆಗಿ ಧೂಳೆಬ್ಬಿಸುತ್ತಿದೆ. ಅದರಲ್ಲಿಯೂ ಯೂಟ್ಯೂಬ್‌ನಲ್ಲಿ ದಾಖಲೆಯ ವೀಕ್ಷಣೆ ಕಂಡಿದೆ. ʻಪುಷ್ಪ ಪುಷ್ಪʼ ಎಂದು ಶುರುವಾಗುವ ಹಾಡಿಗೆ ರಾಕ್ ಸ್ಟಾರ್ ದೇವಿಶ್ರೀ ಪ್ರಸಾದ್ ಸಂಗೀತ ನೀಡಿದ್ದು, ಇದರಲ್ಲಿನ ಹುಕ್ ಸ್ಟೆಪ್ ವೈರಲ್‌ ಆಗಿದೆ. ಇದೀಗ ಎರಡನೇ ಹಾಡಿನ ರಿಲೀಸ್‌ಗೆ ಮುಹೂರ್ತ ಫಿಕ್ಸ್‌ ಆಗಿದೆ.

ʻಪುಷ್ಪ ಪುಷ್ಪʼ ಅಲ್ಲು ಅರ್ಜುನ್‌ ಪಾತ್ರವನ್ನು ಪರಿಚಯಿಸುವ ಹಾಡಾದರೆ ಇದೀಗ ರಿಲೀಸ್‌ ಆಗಲಿರುವ ಎರಡನೇ ಹಾಡಿನಲ್ಲಿ ನಾಯಕಿ ರಶ್ಮಿಕಾ ಮಂದಣ್ಣ ಕೂಡ ಇರಲಿದ್ದಾರೆ ಎನ್ನುವ ಸೂಚನೆ ಈಗಾಗಲೇ ಸಿಕ್ಕಿದೆ. ಈ ಬಗ್ಗೆ ರಶ್ಮಿಕಾ ತಮ್ಮ ಸೋಷಿಯಲ್‌ ಮೀಡಿಯಾದಲ್ಲಿ ಈ ಬಗ್ಗೆ ಬರೆದುಕೊಂಡಿದ್ದಾರೆ.

ಹಾಡು ರಿಲೀಸ್‌ ಯಾವಾಗ?

ʼಪುಷ್ಪ 2ʼ ಚಿತ್ರದ ಎರಡನೇ ಹಾಡು ನಾಳೆ (ಮೇ 29) ಬೆಳಿಗ್ಗೆ 11.07ಕ್ಕೆ ರಿಲೀಸ್‌ ಆಗಲಿದೆ ಎಂದು ರಶ್ಮಿಕಾ ತಿಳಿಸಿದ್ದಾರೆ. ರಶ್ಮಿಕಾ ಮತ್ತು ಅಲ್ಲು ಅರ್ಜುನ್‌ ಫೋಸ್‌ ಕೊಡುತ್ತಿರುವ ಪೋಸ್ಟರ್‌ ಈಗಾಗಲೇ ಗಮನ ಸೆಳೆದಿದೆ. ಗುಲಾಬಿ ಬಣ್ಣ, ಹಲವು ಡ್ಯಾನ್ಸರ್‌ಗಳ ಹಿನ್ನೆಲೆಯಲ್ಲಿ ಅಲ್ಲು ಅರ್ಜುನ್‌ ಮತ್ತು ರಶ್ಮಿಕಾ ನಗುತ್ತಾ ಪೋಸ್‌ ನೀಡಿದ್ದಾರೆ. ದೇವಿಶ್ರೀ ಪ್ರಸಾದ್‌ ಸಂಗೀತ ನಿರ್ದೇಶನದಲ್ಲಿ ಶ್ರೇಯಾ ಘೋಷಾಲ್‌ ಈ ಹಾಡಿಗೆ ಧ್ವನಿಯಾಗಿದ್ದಾರೆ.

6 ಭಾಷೆಗಳಲ್ಲಿಯೂ ಶ್ರೇಯಾ ಮೋಡಿ

ಈ ಹಾಡು 6 ಭಾಷೆಗಳಲ್ಲಿ ಮೂಡಿ ಬರಲಿದೆ. ಎಲ್ಲ ಭಾಷೆಗಳಲ್ಲಿಯೂ ಶ್ರೇಯಾ ಘೋಷಾಲ್‌ ಹಾಡಿಗೆ ಧ್ವನಿ ನೀಡುತ್ತಿರುವುದು ವಿಶೇಷ. ಸೂಸೆಕಿ (ತೆಲುಗು), ನೋಡೋಕ (ಕನ್ನಡ), ಅಂಗಾರೊನ್‌ (ಹಿಂದಿ), ಸೂಡಾನ (ತಮಿಳು), ಕಂಡಾಲೋ (ಮಲಯಾಳಂ) ಮತ್ತು ಆಗುನೆರ್‌ (ಬಂಗಾಳಿ) ಎಂದು ಆರಂಭವಾಗುವ ಹಾಡನ್ನು ಶ್ರೇಯಾ ಘೋಷಾಲ್‌ ಹಾಡಿದ್ದಾರೆ.

ಚಿತ್ರ ಬಿಡುಗಡೆ ಯಾವಾಗ?

ʼಪುಷ್ಪ 2ʼ ಸಿನಿಮಾ ಆಗಸ್ಟ್‌ 15ರಂದು ಬಿಡುಗಡೆಯಾಗಲಿದೆ. ಮೈತ್ರಿ ಮೂವೀ‌ ಮೇಕರ್ಸ್ ದುಬಾರಿ ಬಜೆಟ್‌ನಲ್ಲಿ ಚಿತ್ರ ನಿರ್ಮಿಸುತ್ತಿದೆ. ಈ ಸಿನಿಮಾದಲ್ಲಿ ಅಲ್ಲು ಅರ್ಜುನ್‌ ಜತೆಯಾಗಿ ಶ್ರೀವಲ್ಲಿಯಾಗಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಫಹದ್ ಫಾಸಿಲ್, ಡಾಲಿ ಧನಂಜಯ್, ಅನಸೂಯಾ ಭಾರದ್ವಾಜ್ ಸೇರಿದಂತೆ ಹಲವು ಕಲಾವಿದರು ಅಭಿನಯಿಸಿದ್ದಾರೆ. ಈ ವರ್ಷದ ಆರಂಭದಲ್ಲಿ ಅಲ್ಲು ಅರ್ಜುನ್ ಅವರ ಹುಟ್ಟುಹಬ್ಬದಂದು ʼಪುಷ್ಪ 2ʼ ತಯಾರಕರು ಚಿತ್ರದ ಟೀಸರ್ ಅನ್ನು ಬಿಡುಗಡೆ ಮಾಡಿದ್ದರು. ಟೀಸರ್​ನಲ್ಲಿ ಅಲ್ಲು ಅರ್ಜುನ್ ಸೀರೆ ಉಟ್ಟು, ಮುಖವನ್ನು ನೀಲಿ ಮತ್ತು ಕೆಂಪು ಬಣ್ಣಗಳನ್ನು ಮೆತ್ತಿಕೊಂಡಿರುವುದು ಕಂಡು ಬಂದಿತ್ತು. ಭಾರವಾದ ಸಾಂಪ್ರದಾಯಿಕ ಚಿನ್ನ ಮತ್ತು ಹೂವಿನ ಆಭರಣಗಳೊಂದಿಗೆ ಮೇಕಪ್ ಧರಿಸಿ ಗೂಂಡಾಗಳನ್ನು ಹೊಡೆಯುತ್ತಿರುವುದು ಟೀಸರ್‌ ಕಂಡು ಬಂದು ವೀಕ್ಷಕರ ಕುತೂಹಲ ಕೆರಳಿಸಿತ್ತು. ಸದ್ಯ ಅಭಿಮಾನಿಗಳು ಚಿತ್ರ ಬಿಡುಗಡೆ ದಿನಾಂಕವನ್ನು ಎದುರು ನೋಡುತ್ತಿದ್ದಾರೆ.

ಇದನ್ನೂ ಓದಿ: Pushpa 2: ʻಪುಷ್ಪ 2ʼ ಅನಸೂಯಾ ಭಾರದ್ವಾಜ್ ಪಾತ್ರದ ಫಸ್ಟ್ ಲುಕ್ ಔಟ್!

Continue Reading
Advertisement
AC Side Effects
ಆರೋಗ್ಯ15 mins ago

AC Side Effects: ಅತಿಯಾದ ಎಸಿ ಬಳಕೆಯಿಂದ ಏನಾಗುತ್ತದೆ ಎಂಬ ಅರಿವಿರಲಿ

karnataka weather forecast
ಮಳೆ45 mins ago

Karnataka weather : ಗುಡುಗು ಸಹಿತ ಮಳೆಯೊಂದಿಗೆ 40 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

Rishab Pant
ಪ್ರಮುಖ ಸುದ್ದಿ1 hour ago

Rishabh Pant : ವಿಶ್ವಕಪ್​​ಗೆ ಮುನ್ನ ಟೀಮ್ ಇಂಡಿಯಾ ಜೆರ್ಸಿ ಧರಿಸಿದ ರಿಷಭ್ ಪಂತ್ ವಿಡಿಯೋ ಹಂಚಿಕೊಂಡ ಬಿಸಿಸಿಐ

Wildlife Sanctuaries
ಪರಿಸರ1 hour ago

Wildlife Sanctuaries: ಮಳೆ ಬರುವ ಮುನ್ನ ಈ ವನ್ಯಜೀವಿಧಾಮಗಳನ್ನು ನೋಡಲು ಪ್ರಯತ್ನಿಸಿ

T20 World Cup
ಕ್ರೀಡೆ2 hours ago

T20 World Cup : ಭಾರತ- ಪಾಕ್ ಪಂದ್ಯ ಐಸಿಸ್​ ಉಗ್ರರಿಂದ ಬಾಂಬ್ ಬೆದರಿಕೆ

namaz on road
ಪ್ರಮುಖ ಸುದ್ದಿ2 hours ago

ವಿಸ್ತಾರ ಸಂಪಾದಕೀಯ: ನಡುರಸ್ತೆಯಲ್ಲೇಕೆ ನಮಾಜ್‌ ಮಾಡಬೇಕು?

Dina Bhavishya
ಭವಿಷ್ಯ2 hours ago

Dina Bhavishya : ಈ ರಾಶಿಯವರು ಜಂಟಿ ಹೂಡಿಕೆ ವ್ಯವಹಾರದಿಂದ ದೂರವಿರಿ

Prajwal Revanna Case
ಪ್ರಮುಖ ಸುದ್ದಿ8 hours ago

Prajwal Revanna Case : ಜರ್ಮನಿಯಿಂದ ಭಾರತಕ್ಕೆ ಬರಲು ವಿಮಾನ ಟಿಕೆಟ್ ಬುಕ್ ಮಾಡಿದ ಪ್ರಜ್ವಲ್ ರೇವಣ್ಣ

chakravarthy sulibele
ಕರ್ನಾಟಕ9 hours ago

Chakravarthy Sulibele : ಮಂಡಿಯೂರಿ ಭೈರಪ್ಪ ಅವರಿಂದ ಸಾವರ್ಕರ್ ಪ್ರಶಸ್ತಿ ಸ್ವೀಕರಿಸಿದ ಚಕ್ರವರ್ತಿ ಸೂಲಿಬೆಲೆ

Cyber Crime
ಪ್ರಮುಖ ಸುದ್ದಿ9 hours ago

Cyber Crime : ಹೆಣ್ಣು ಮಕ್ಕಳ ಫೋಟೋ ಅಶ್ಲೀಲಗೊಳಿಸಿ ಪೋಸ್ಟ್​ ಮಾಡುತ್ತಿದ್ದವನ ಬಂಧನ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ12 hours ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು20 hours ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ2 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ3 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು3 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ6 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌