Rajyasabha Election | ಕಾಂಗ್ರೆಸ್‌ಗೆ HDK ಓಪನ್‌ ಆಫರ್‌ - Vistara News

ಮೈಸೂರು

Rajyasabha Election | ಕಾಂಗ್ರೆಸ್‌ಗೆ HDK ಓಪನ್‌ ಆಫರ್‌

ವಿಧಾನಪರಿಷತ್‌ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅವರು ಮೈಸೂರು ಜಿಲ್ಲೆಗೆ ಭೇಟಿ ನೀಡಿದ್ದಾರೆ.

VISTARANEWS.COM


on

ಎಚ್‌.ಡಿ.ಕುಮಾರಸ್ವಾಮಿ ಪೂಜೆ ಸಲ್ಲಿಸಿದರು
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೈಸೂರು: ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಉಳಿಕೆ ಮತಗಳಿಂದ ಎರಡನೇ ಅಭ್ಯರ್ಥಿ ಗೆಲುವು ಸಾಧ್ಯ ಇಲ್ಲ. ಹೀಗಾಗಿ ಜೆಡಿಎಸ್ ಎರಡನೇ ಪ್ರಾಶಸ್ತ್ಯ ಕೊಟ್ಟರೂ ಪ್ರಯೋಜನ ಆಗುವುದಿಲ್ಲ ಎಂದಿರುವ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ, ಕಾಂಗ್ರೆಸ್‌ ಪಕ್ಷಕ್ಕೆ ಓಪನ್‌ ಆಫರ್‌ ನೀಡಿದ್ದಾರೆ. ಕಾಂಗ್ರೆಸ್‌ನ ಎರಡನೇ ಪ್ರಾಶಸ್ತ್ಯದ ಮತಗಳನ್ನು ಜೆಡಿಎಸ್‌ಗೆ ನೀಡಿ ಎಂದು ಕಾಂಗ್ರೆಸ್‌ ಪಕ್ಷವನ್ನು ಆಗ್ರಹಿಸಿದ್ದಾರೆ.

ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆ ಪ್ರಚಾರದ ಹಿನ್ನೆಲೆಯಲ್ಲಿ ಜಿಲ್ಲೆಗೆ ಚಾಮುಂಡಿ ಬೆಟ್ಟಕ್ಕೆ ಮಂಗಳವಾರ ಭೇಟಿ ನೀಡಿ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಮೈತ್ರಿ ಬೇಕಿದ್ದರೆ ಕಾಂಗ್ರೆಸ್‌ನವರು ಮೊದಲೇ ಮಾತನಾಡಬೇಕಿತ್ತು. ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

ರಣದೀಪ್‌ಸಿಂಗ್‌ ಸುರ್ಜೇವಾಲಾ ಅವರು ಕರೆ ಮಾಡಿ, ನಮ್ಮ ಪಕ್ಷದ ಎರಡನೇ ಪ್ರಾಶಸ್ತ್ಯದ ಮತಗಳನ್ನು ತಮಗೆ ನೀಡುವಂತೆ ಕೇಳಿದ್ದಾರೆ. ನಮ್ಮ ಬಳಿ 32 ಮತಗಳಿವೆ, ಕಾಂಗ್ರೆಸ್ ಬಳಿ ನಮಗಿಂತ ಕಡಿಮೆ ಮತಗಳಿವೆ. ಕಾಂಗ್ರೆಸ್‌ಗಿಂತ ಜೆಡಿಎಸ್ ಅಭ್ಯರ್ಥಿಗೆ ಗೆಲ್ಲುವ ಸಾಧ್ಯತೆ ಹೆಚ್ಚಾಗಿದೆ. ಬೇಕಿದ್ದರೆ ನಮ್ಮ ಪಕ್ಷದ 2ನೇ ಪ್ರಾಶಸ್ತ್ಯದ ಮತಗಳನ್ನು ಕಾಂಗ್ರೆಸ್ ಅಭ್ಯರ್ಥಿಗೆ ನೀಡುತ್ತೇವೆ. ಕಾಂಗ್ರೆಸ್ ಪಕ್ಷದ ಎರಡನೇ ಪ್ರಾಶಸ್ತ್ಯದ ಮತಗಳನ್ನು ಜೆಡಿಎಸ್ ಅಭ್ಯರ್ಥಿಗೆ ನೀಡಲಿ ಎಂದು ಹೊಸ ಆಫರ್ ಮುಂದಿಟ್ಟರು.

ಜೆಡಿಎಸ್ ಅಭ್ಯರ್ಥಿ ನಿವೃತ್ತಿ ಪಡೆಯಲಿ ಎಂಬ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಕುಮಾರಸ್ವಾಮಿ, ಬಿಜೆಪಿ ಸೋಲಬೇಕು ಎನ್ನುವ ಉದ್ದೇಶ ಇದ್ದರೆ ಅವರು ಜೆಡಿಎಸ್ ಜತೆ ಚರ್ಚೆ ಮಾಡುತ್ತಿದ್ದರು. ನನ್ನ ಜತೆಗೆ ಅಲ್ಲದಿದ್ದರೂ ಅವರೊಂದಿಗೆ ಚೆನ್ನಾಗಿರುವವರೊಂದಿಗೆ ಚರ್ಚೆ ಮಾಡಬಹುದಿತ್ತು. ಬಿಜೆಪಿ ಅಭ್ಯರ್ಥಿ ಸೋಲಿಸಲು ಜೆಡಿಎಸ್ ಅಭ್ಯರ್ಥಿ ಹಾಕಬೇಡಿ ಅಂತ ಯಾರೂ ಕೇಳಲಿಲ್ಲ. ಕಾಂಗ್ರೆಸ್‌ನ 23 ಮತ ಉಳಿಯುತ್ತವೆ, ಆದ್ದರಿಂದ ದೇವೇಗೌಡರು ಸೋನಿಯಾ ಗಾಂಧಿ ಅವರೊಂದಿಗೆ ಮಾತನಾಡಿದ್ದಾರೆ. ಕುಪೇಂದ್ರ ರೆಡ್ಡಿ ಕಾಂಗ್ರೆಸ್‌ ಜತೆ ನಿಕಟವಾಗಿ ಕೆಲಸ ಮಾಡಿದ್ದಾರೆ ಎಂದರು.

ಜೆಡಿಎಸ್‌ನಿಂದ 8-10 ಮತ ಒಡೆಯುತ್ತೇವೆ ಎಂದು ಮನವೊಲಿಸಿ ಕಾಂಗ್ರೆಸ್‌ನವರು ಎರಡನೇ ಅಭ್ಯರ್ಥಿ ಹಾಕಿದ್ದಾರೆ. ಒಂದು ವೇಳೆ ಕಾಂಗ್ರೆಸ್ ಎರಡನೇ ಅಭ್ಯರ್ಥಿ ಹಾಕದೆ ಇದ್ದರೆ ಬಿಜೆಪಿ ಮೂರನೇ ಅಭ್ಯರ್ಥಿ ಹಾಕುತ್ತಿರಲಿಲ್ಲ ಎಂದರು. ಸುದ್ದಿಗೋಷ್ಠಿಯಲ್ಲಿ ಶಾಸಕರಾದ ಸಾ.ರಾ.ಮಹೇಶ್, ಬಂಡೆಪ್ಪ ಕಾಶಂಪೂರ್, ಅಶ್ವಿನ್ ಕುಮಾರ್, ಕೆ.ಟಿ.ಶ್ರೀಕಂಠೇಗೌಡ, ಸಿ.ಎನ್. ಮಂಜೇಗೌಡ ಮುಂತಾದವರು ಇದ್ದರು.

ಇದನ್ನೂ ಓದಿ | ರಾಜ್ಯಸಭೆ ಚುನಾವಣೆ | ಕೇಂದ್ರ ಸಚಿವ ಕಿಶನ್‌ ರೆಡ್ಡಿ ಉಸ್ತುವಾರಿ: ಎಲ್ಲರ ಅರ್ಜಿ ಊರ್ಜಿತ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka weather : ಗುಡುಗು ಸಹಿತ ಮಳೆಯೊಂದಿಗೆ 40 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

Karnataka weather Forecast : ರಾಜ್ಯಾದ್ಯಂತ ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆಯೊಂದಿಗೆ (Rain News) ಗುಡುಗು, ಮಿಂಚು ಇರಲಿದ್ದು, 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

karnataka weather forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಮೇ 29 ರಂದು ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ (Karnataka weather Forecast) ಸಾಧ್ಯತೆಯಿದೆ. ಮಲೆನಾಡು ಭಾಗದಲ್ಲಿ ಮಧ್ಯಮ ಮಳೆಯಾದರೆ, ಕರಾವಳಿಯಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ (Heavy Rain alert) ಸಾಧ್ಯತೆ ಇದೆ. ಕೆಲವೆಡೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ (Rain News) ಸಾಧ್ಯತೆಯಿದೆ.

ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಮತ್ತು 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಕೋಲಾರ, ರಾಮನಗರ, ಮಂಡ್ಯ, ಮೈಸೂರು ಮತ್ತು ತುಮಕೂರಿನಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಉಳಿದೆಡೆ ಒಣಹವೆ ಇರಲಿದೆ.

ಉತ್ತರ ಒಳನಾಡಿನ ರಾಯಚೂರು, ಗದಗ, ಕೊಪ್ಪಳ, ಬಳ್ಳಾರಿ ಮತ್ತು ವಿಜಯನಗರದಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಉಳಿದ ಭಾಗಗಳಲ್ಲಿ ಒಣ ಹವೆ ಮೇಲುಗೈ ಸಾಧಿಸಲಿದೆ.

ಮಲೆನಾಡಿನ ಹಾಸನ ಮತ್ತು ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ, ಉತ್ತರ ಕನ್ನಡ ಚದುರಿದಂತೆ ಸಾಧಾರಣ ಮಳೆಯಾಗಲಿದೆ.

ಬೆಂಗಳೂರಲ್ಲಿ ಗುಡುಗು ಸಹಿತ ಮಳೆ

ರಾಜಧಾನಿ ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 31 ಡಿಗ್ರಿ ಸೆಲ್ಸಿಯಸ್ ಮತ್ತು 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Love Case : ಪ್ರೀತಿಸಿದವಳೇ ಬೇಕೆಂದ ಪ್ರೇಮಿಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ್ರಾ ಯುವತಿ ಕುಟುಂಬಸ್ಥರು!

ಸೀಸನ್‌ ಎಂಡ್‌ ಫ್ಯಾಷನ್‌ಗೆ ಕಾಲಿಟ್ಟ ಸಮುದ್ರದ ಅಲೆ ಬಿಂಬಿಸುವ ವೆವಿ ಡ್ರೆಸ್‌!

ಇನ್ನೇನೂ ಸಮ್ಮರ್‌ ಸೀಸನ್‌ (Summer dress fashion) ಮುಗಿಯುವ ಹಂತದಲ್ಲಿದೆ. ಆಗಲೇ ವೆವಿ ಡ್ರೆಸ್‌ಗಳು ಎಂಟ್ರಿ ನೀಡಿವೆ. ಹೌದು. ನೋಡಿದಾಕ್ಷಣ ಮನೋಲ್ಲಾಸ ತುಂಬುವಂತಹ ಉತ್ಸಾಹ ಮೂಡಿಸುವ ಡಿಫರೆಂಟ್‌ ಲುಕ್‌ ನೀಡುವ ನಾನಾ ಶೇಡ್‌ನ ವೆವಿ ಡ್ರೆಸ್‌ಗಳು ಫ್ಯಾಷನ್‌ ಲೋಕಕ್ಕೆ ಕಾಲಿಟ್ಟಿವೆ.

Summer Dress Fashion

ಏನಿದು ವೆವಿ ಡ್ರೆಸ್‌?

ಅರರೆ, ಏನಿದು ವೆವಿ ಡ್ರೆಸ್‌ ಎಂದು ಯೋಚಿಸುತ್ತಿದ್ದೀರಾ! ಹೆಸರೇ ಹೇಳುವಂತೆ, ಇವು ಬೀಚ್‌ನಲ್ಲಿ ಸಮುದ್ರದ ಅಲೆಗಳನ್ನು ಬಿಂಬಿಸುವಂತಹ ಪ್ರಿಂಟ್ಸ್ ಇರುವಂತಹ ಸಮ್ಮರ್‌ ಡ್ರೆಸ್‌ಗಳಿವು. ನೋಡಲು ಬೀಚ್‌ ಲುಕ್‌ ಪ್ಲಸ್‌ ಹಾಲಿ ಡೇ ಪಾರ್ಟಿ ಲುಕ್‌ ನೀಡುವಂತಹ ಉಡುಗೆಗಳಿವು. ಅಷ್ಟೇಕೆ! ಲಂಚ್‌-ಬ್ರಂಚ್‌ ಪಾರ್ಟಿಗಳಲ್ಲೂ ಕಾಣಬಹುದಾದ ಹೈ ಫ್ಯಾಷನ್‌ ಉಡುಪುಗಳಿವು. ಇವುಗಳ ಪ್ರಿಂಟ್ಸ್ ಅಲೆಗಳಂತೆ ಇರುವುದರಿಂದ ಇವನ್ನು ವೆವಿ ಡ್ರೆಸ್‌ಗಳೆಂದು ಕರೆಯಲಾಗುತ್ತದೆ. ನಾನಾ ಹೈ ಫ್ಯಾಷನ್‌ ಬ್ರಾಂಡ್‌ಗಳಲ್ಲಿ ಇವು ಬಿಡುಗಡೆಗೊಂಡಿವೆ. ಸೆಲೆಬ್ರೆಟಿಗಳು ಮಾತ್ರವಲ್ಲ, ಸ್ಟೈಲಿಶ್‌ ಹುಡುಗಿಯರನ್ನು ಸವಾರಿ ಮಾಡತೊಡಗಿವೆ ಎಂದು ವಿವರಿಸುತ್ತಾರೆ ಸ್ಟೈಲಿಸ್ಟ್‌ಗಳು.

Summer Dress Fashion

ಶಾರ್ವರಿ ವೆವಿ ಡ್ರೆಸ್‌

ಬಾಲಿವುಡ್‌ನಲ್ಲಿ ಇನ್ನೂ ಅತಿ ಹೆಚ್ಚಾಗಿ ಕಂಡು ಬರದ ಉಡುಪುಗಳಲ್ಲಿ ಈ ವೆವಿ ಡ್ರೆಸ್‌ ಕೂಡ ಸೇರಿದೆ. ಯಾಕೆಂದರೇ, ಈ ಉಡುಪು ಈ ಜನರೇಷನ್‌ ನಟಿಯರ ಲಿಸ್ಟ್ನಲ್ಲಿದೆ. ಇದಕ್ಕೆ ಪೂರಕ ಎಂಬಂತೆ, ಬಾಲಿವುಡ್‌ ನಟಿ ಶಾರ್ವರಿ ಸಮುದ್ರದ ಅಲೆಗಳನ್ನು ನೆನಪಿಸುವ ಪಿಸ್ತಾ ಮಿಂಟ್‌ ಗ್ರೀನ್‌ ಶೇಡ್ ಮಿಕ್ಸ್ ಇರುವಂತಹ ವೆವಿ ಡ್ರೆಸ್‌ನಲ್ಲಿ ಕಾಣಿಸಿಕೊಂಡು ಫ್ಯಾಷನ್‌ ಲೋಕದಲ್ಲಿ ಟ್ರೆಂಡ್‌ ಸೆಟ್‌ ಮಾಡಿದ್ದಾರೆ. ಸದ್ಯ, ಇತರೇ ಯಾವುದೇ ನಟಿಯರು ಪ್ರಯೋಗಿಸದ ಡಿಸೈನರ್‌ವೇರ್‌ನಲ್ಲಿ ಕಾಣಿಸಿಕೊಂಡಿರುವ ಹೆಗ್ಗಳಿಕೆ ಇವರದು. ವೆವಿ ಡ್ರೆಸ್‌ನಂತಹ ಸಮ್ಮರ್‌ ಡ್ರೆಸ್‌ ಇದೆಯಾ! ಒಮ್ಮೆ ನಾವು ಕೂಡ ಧರಿಸೋಣಾ! ಎಂಬ ಟೀನೇಜ್‌ ಹುಡುಗಿಯರ ಫ್ಯಾಷನ್‌ ಚಾಯ್ಸ್‌ಗೆ ಹೊಸ ಶೇಡ್‌ಗಳು ಆಕರ್ಷಿಸುತ್ತಿವೆ ಎನ್ನುತ್ತಾರೆ ಫ್ಯಾಷನ್‌ ವಿಮರ್ಶಕಿ ಜಿಯಾ. ಅವರ ಪ್ರಕಾರ, ವೆವಿ ಡ್ರೆಸ್‌ಗಳು ಯಂಗ್‌ ಲುಕ್‌ ನೀಡುತ್ತವಂತೆ. ಹಾಗಾಗಿ ಆನ್‌ಲೈನ್‌ನಲ್ಲಿ ಇದೀಗ ಇವುಗಳ ಖರೀದಿ ಹೆಚ್ಚಾಗಿದೆ ಎನ್ನುತ್ತಾರೆ.

Summer Dress Fashion

ವೆವಿ ಡ್ರೆಸ್‌ಗಳ ಟ್ರೆಂಡ್‌

ಸಾಗರ ಹಾಗೂ ಸಮುದ್ರ ಅಲೆಗಳ ನ್ಯಾಚುರಲ್‌ ಶೇಡ್ಸ್, ಪೀಚ್‌ ಹಾಗೂ ಕೇಸರಿ ಶೇಡ್‌ಗಳ ನೈಜವೆನಿಸದ ಪ್ರಿಂಟ್ಸ್‌ನ ವೆವಿ ಡ್ರೆಸ್‌ಗಳು, ಅಸ್ಸೆಮ್ಮಿಟ್ರಿಕಲ್‌ ವೆವಿ ಡ್ರೆಸ್‌ಗಳು ಅದರಲ್ಲೂ, ವೈಟ್‌ & ಸೀ ಬ್ಲ್ಯೂ , ರಾಯಲ್‌ ಬ್ಲ್ಯೂ ವೆವಿ ಡ್ರೆಸ್‌ಗಳು ಅತಿ ಹೆಚ್ಚಾಗಿ ಬೇಡಿಕೆ ಪಡೆದುಕೊಂಡಿವೆ.

  • ಸಮ್ಮರ್‌ ಪಾರ್ಟಿಗೆ ಹಾಗೂ ಔಟಿಂಗ್‌ಗೆ ಮ್ಯಾಚ್‌ ಆಗುತ್ತವೆ.
  • ಹೆಚ್ಚು ಆಕ್ಸೆಸರೀಸ್‌ ಧರಿಸುವ ಅಗತ್ಯವಿಲ್ಲ.
  • ಮಿನಿಮಲ್‌ ಮೇಕಪ್‌ ಆಕರ್ಷಕವಾಗಿ ಕಾಣಿಸುತ್ತದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Chakravarthy Sulibele : ಮಂಡಿಯೂರಿ ಭೈರಪ್ಪ ಅವರಿಂದ ಸಾವರ್ಕರ್ ಪ್ರಶಸ್ತಿ ಸ್ವೀಕರಿಸಿದ ಚಕ್ರವರ್ತಿ ಸೂಲಿಬೆಲೆ

Chakravarthy Sulibele: ಭಾರತ ಬಡತನದ ರಾಷ್ಟ್ರ, ಇಲ್ಲಿ ಧಾರ್ಮಿಕ ಸ್ವಾತಂತ್ರ್ಯವಿಲ್ಲ, ಮೋದಿ ನೇತೃತ್ವದ ಬಿಜೆಪಿ ಈ ಬಾರಿ ಸೋಲುತ್ತದೆ ಎಂದು ಸುಳ್ಳನ್ನು ಸತ್ಯವೆಂದು ಎಲ್ಲ ಕಡೆಗಳಲ್ಲೂ ಹಬ್ಬಿಸುವ ಕೆಲಸ ನಡೆಯುತ್ತಿದೆ ಎಂದು ಚಕ್ರವರ್ತಿ ಸೂಲಿಬೆಲೆ ಆರೋಪಿಸಿದರು. ಪ್ರಶಸ್ತಿಯು 1 ಲಕ್ಷ ರೂ. ನಗದನ್ನು ಒಳಗೊಂಡಿದೆ. ಆದರೆ ಪ್ರಶಸ್ತಿ ರೂಪದಲ್ಲಿ ನೀಡಲಾದ 1 ಲಕ್ಷ ರೂ. ಹಣವನ್ನು ಗೋಶಾಲೆ ಅಭಿವೃದ್ಧಿಗೆ ನೀಡುವುದಾಗಿ ಚಕ್ರವರ್ತಿ ಸೂಲಿಬೆಲೆ ಘೋಷಿಸಿದರು.

VISTARANEWS.COM


on

chakravarthy sulibele
Koo

ಮೈಸೂರು: ಮೈಸೂರಿನ ವೀರ ಸಾವರ್ಕರ್ ಪ್ರತಿಷ್ಠಾನವು ಮಂಗಳವಾರ ಸಂಜೆ ವಾಗ್ಮಿ, ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ (Chakravarthy Sulibele) ಅವರಿಗೆ ‘ವೀರ ಸಾವರ್ಕರ್ ಸಮ್ಮಾನ್-2024’ ಪ್ರಶಸ್ತಿ ಪ್ರದಾನ ಮಾಡಿತು. ಕಲಾಮಂದಿರದಲ್ಲಿ ಆಯೋಜಿಸಿದ್ದ ಬೃಹತ್ ಕಾರ್ಯಕ್ರಮದಲ್ಲಿ ಸರಸ್ವತಿ ಸಮ್ಮಾನ್ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ಪ್ರಶಸ್ತಿ ಪ್ರದಾನ ಮಾಡಿದರು. ಪ್ರಶಸ್ತಿ ಕೊಡವವರು ನಿಲ್ಲುವುದು, ಸ್ವೀಕರಿಸುವುದು ಕೂರುವುದು ವಾಡಿಕೆ. ಆದರೆ ಚಕ್ರವರ್ತಿ ಸೂಲಿಬೆಲೆ ಅವರು ಭೈರಪ್ಪ ಅವರನ್ನು ಕೂರಿಸಿ ತಾವು ಮಂಡಿಯೂರಿ ಪ್ರಶಸ್ತಿ ಸ್ವೀಕರಿಸಿದರು.

ಸಮಾರಂಭದಲ್ಲಿ ಮಾತನಾಡಿದ ಎಸ್​ ಎಲ್ ಭೈರಪ್ಪ ಅವರು, ತ್ರಿವಿಧ ದಾಸೋಹಿಯಾಗಿ ತುಮಕೂರಿನ ಸಿದ್ಧಗಂಗಾ ಶ್ರೀಗಳು ಸಮಾಜಕ್ಕೆ ಅಪಾರವಾದ ಕೊಡುಗೆ ನೀಡಿದ್ದರೂ, ಅವರಿಗೆ ಮರಣೋತ್ತರ ಭಾರತ ರತ್ನ ನೀಡದಿರುವುದು ಇಂದಿಗೂ ನನ್ನನ್ನು ಕಾಡುತ್ತಿದೆ ಎಂದು ಹೇಳಿದರು.

ಕೆಲವು ಸ್ವಾಮೀಜಿಗಳು ತಮಗೆ ಡಾಕ್ಟರೇಟ್‌ ಕೊಡಲಿ ಎಂದು ಹಪಹಪಿಸುತ್ತಾರೆ. ಆದರೆ ತುಮಕೂರಿನ  ಸಿದ್ದಗಂಗಾ ಶ್ರೀಗಳು ಯಾವುದೇ ಅಪೇಕ್ಷೆ ಇಲ್ಲದೆ, ಸಮಾಜಕ್ಕೆ ನಿಸ್ವಾರ್ಥ ಸೇವೆ ಸಲ್ಲಿಸಿದ್ದಾರೆ. ಮಕ್ಕಳ ಜಾತಿ ಯಾವುದೆಂದು ಕೇಳದ ಸಿದ್ಧಗಂಗಾ ಸ್ವಾಮೀಜಿ ಅವರು, ಶಿಕ್ಷಣ ದಾಸೋಹ, ಅನ್ನ ದಾಸೋಹ ಮಾಡಿದ್ದಾರೆ. ಆ ಮೂಲಕ ಸಿದ್ದಗಂಗಾ ಸ್ವಾಮೀಜಿ ಅವರು ಸಮಾಜದ ಸೇವೆಗೆ ತಮ್ಮನ್ನು ಮುಡಿಪಾಗಿ ಇಟ್ಟಿದ್ದರು. ನಾನು ಸಹ ಅವರ ಕಾಲು ಮುಟ್ಟಿ ನಮಸ್ಕರಿಸಿದ್ದೆ. ಆದರೆ ದುರಂತದ ಸಂಗತಿಯೆಂದರೆ ಸಾವರ್ಕರ್‌ ಅವರನ್ನು ಮೈಲಿಗೆಯಲ್ಲಿ ಇಟ್ಟಂತೆ ಸಿದ್ದಗಂಗಾ ಶ್ರೀಗಳನ್ನು ಇಡಲಾಗಿದೆ ಅನಿಸುತ್ತದೆ ಎಂದು ಬೇಸರ ವ್ಯಕ್ತಪಡಿಸಿದರು.

ದೇಶದಲ್ಲಿ ಪ್ರಾಪಗಾಂಡ ವಾರ್​

ಸಮಾರಂಭದಲ್ಲಿ ವೀರ ಸಾವರ್ಕರ್ ಸಮ್ಮಾನ್ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ವಾಗ್ಮಿ ಚಕ್ರವರ್ತಿ ಸೂಲಿಬೆಲೆ, ಇಂದು ಯಾವ ದೇಶವು ಭಾರತದ ಮೇಲೆ ಪ್ರತ್ಯಕ್ಷ ಯುದ್ಧ ಮಾಡಲು ಸಾಧ್ಯವಾಗದ ಪರಿಣಾಮ ಸುಳ್ಳನ್ನು ಪದೇ ಪದೇ ಹೇಳಿ ಸತ್ಯ ಎಂದು ಪ್ರಚುರಪಡಿಸುವ ಪ್ರಾಪಗಾಂಡ ವಾರ್‌ ನಡೆಸಲಾಗುತ್ತಿದೆ. ಭಾರತದ ಬಡತನದ ರಾಷ್ಟ್ರ, ಇಲ್ಲಿ ಧಾರ್ಮಿಕ ಸ್ವಾತಂತ್ರ್ಯವಿಲ್ಲ. ಮೋದಿ ಮತ್ತು ಬಿಜೆಪಿ ಈ ಬಾರಿ ಸೋಲುತ್ತಾರೆ ಎಂದು ಸುಳ್ಳನ್ನು ಸತ್ಯವೆಂದು ಎಲ್ಲ ಕಡೆಗಳಲ್ಲೂ ಹಬ್ಬಿಸುವ ಕೆಲಸ ನಡೆಯುತ್ತಿದೆ ಎಂದು ಹೇಳಿದರು.

ಇದನ್ನೂ ಓದಿ: Veer Savarkar flyover: ಸಾವರ್ಕರ್ ಸೇತುವೆಯ ನಾಮಫಲಕಕ್ಕೆ ಮಸಿ ಬಳಿದಿರೋದು ಅತ್ಯಂತ ಖಂಡನೀಯ: ವಿಜಯೇಂದ್ರ

ಪ್ರಶಸ್ತಿಯು 1 ಲಕ್ಷ ರೂ. ನಗದನ್ನು ಒಳಗೊಂಡಿದೆ. ಆದರೆ ಪ್ರಶಸ್ತಿ ರೂಪದಲ್ಲಿ ನೀಡಲಾದ 1 ಲಕ್ಷ ರೂ. ಹಣವನ್ನು ಗೋಶಾಲೆ ಅಭಿವೃದ್ಧಿಗೆ ನೀಡುವುದಾಗಿ ಚಕ್ರವರ್ತಿ ಸೂಲಿಬೆಲೆ ಘೋಷಿಸಿದರು.

ಸಮಾರಂಭದಲ್ಲಿ ಶಾಸಕ ಟಿ.ಎಸ್‌. ಶ್ರೀವತ್ಸ, ಮಾಜಿ ಮೇಯರ್‌ ಶಿವಕುಮಾರ್‌, ವೀರ ಸಾವರ್ಕರ್‌ ಪ್ರತಿಷ್ಠಾನದ ಅಧ್ಯಕ್ಷೆ ಯಶಸ್ವಿನಿ ಎಸ್‌., ಆದಿತ್ಯ ಅಧಿಕಾರಿ ಆಸ್ಪತ್ರೆ ಮುಖ್ಯಸ್ಥ ಡಾ. ಚಂದ್ರಶೇಖರ್‌ ಮತ್ತಿತರರು ಇದ್ದರು.

Continue Reading

ಮೈಸೂರು

Mysore News: ಮೈಸೂರಿನಲ್ಲಿ ಗಾಯಕ ಎಚ್ ಎಸ್ ನಾಗರಾಜ್ ಗೆ ಶ್ರೀ ವಾಸುದೇವಾಚಾರ್ಯ ಸಂಸ್ಮರಣಾ ಪ್ರಶಸ್ತಿ ಪ್ರದಾನ

Mysore News: ಕರ್ನಾಟಕ ಶಾಸ್ತ್ರೀಯ ಸಂಗೀತ ಒಕ್ಕೂಟ ಟ್ರಸ್ಟ್ ವತಿಯಿಂದ ಮೈಸೂರಿನ ಶ್ರೀವಾಸುದೇವಾಚಾರ್ಯ ಭವನದಲ್ಲಿ ಮೈಸೂರು ವಾಸುದೇವಾಚಾರ್ಯ ಸಂಸ್ಮರಣಾ ಸಂಗೀತ ಉತ್ಸವದ ವಿದ್ವತ್ ಸಭೆ ಜರುಗಿತು. ಈ ವೇಳೆ ವಿದ್ವಾನ್ ಶೃಂಗೇರಿ ನಾಗರಾಜ್ ರಿಗೆ ‘ಶ್ರೀವಾಸುದೇವಾಚಾರ್ಯ ಸಂಸ್ಮರಣಾ ಪ್ರಶಸ್ತಿ’, ವಿದ್ವಾನ್ ಎಚ್.ಕೆ.ನರಸಿಂಹಮೂರ್ತಿ ರಿಗೆ ‘ಶ್ರೇಷ್ಠ ಜೀವಮಾನ ಸಾಧನೆ ಪ್ರಶಸ್ತಿ’, ವಿದುಷಿ ಪುಷ್ಪಾ ಶ್ರೀನಿವಾಸ್ ರಿಗೆ ‘ಕರ್ನಾಟಕ ಸಂಗೀತಾಚಾರ್ಯ ಪ್ರಶಸ್ತಿ’ ಯನ್ನು ನೀಡಿ, ಗೌರವಿಸಲಾಯಿತು.

VISTARANEWS.COM


on

Mysore Vasudevacharya Memorial Music utsav Vidwat Sabha and award ceremony
Koo

ಮೈಸೂರು: ಕರ್ನಾಟಕ ಶಾಸ್ತ್ರೀಯ ಸಂಗೀತಕ್ಕೆ ಮಹಾಮಹಿಮರಾದ ಮೈಸೂರು ವಾಸುದೇವಾಚಾರ್ಯರ ಕೊಡುಗೆ ಅನನ್ಯವಾಗಿದೆ ಎಂದು ಶಿವಮೊಗ್ಗದ ಖ್ಯಾತ ಗಾಯಕ ವಿದ್ವಾನ್ ಶೃಂಗೇರಿ ಎಚ್.ಎಸ್. ನಾಗರಾಜ್ (Mysore News) ಹೇಳಿದರು.

ಕರ್ನಾಟಕ ಶಾಸ್ತ್ರೀಯ ಸಂಗೀತ ಒಕ್ಕೂಟ ಟ್ರಸ್ಟ್ ವತಿಯಿಂದ ಮೈಸೂರಿನ ಶ್ರೀವಾಸುದೇವಾಚಾರ್ಯ ಭವನದಲ್ಲಿ ಹಮ್ಮಿಕೊಂಡಿದ್ದ ಮೈಸೂರು ವಾಸುದೇವಾಚಾರ್ಯ ಸಂಸ್ಮರಣಾ ಸಂಗೀತ ಉತ್ಸವದ ವಿದ್ವತ್ ಸಭೆಯಲ್ಲಿ ಅವರು ಪ್ರತಿಷ್ಠಿತ ‘ಶ್ರೀವಾಸುದೇವಾಚಾರ್ಯ ಸಂಸ್ಮರಣಾ ಪ್ರಶಸ್ತಿ’ ಸ್ವೀಕರಿಸಿ ಮಾತನಾಡಿದರು.

ಇದನ್ನೂ ಓದಿ: Traffic Violation : ಪೆಟ್ರೋಲ್ ಖಾಲಿಯಾಗಿ ರಸ್ತೆಯಲ್ಲಿ ವಾಹನ ನಿಂತುಬಿಟ್ಟರೆ ಚಾಲಕನ ಮೇಲೆ ಕೇಸ್!

ಮೈಸೂರು ವಾಸುದೇವಾಚಾರ್ಯ ಮನೆ ಮೈಸೂರಿನಲ್ಲಿ ಸಂಗೀತಕ್ಕೆ ಮಹೋನ್ನತ ವೇದಿಕೆಯಾಗಿ ರೂಪುಗೊಂಡಿದೆ. ಅಲ್ಲಿ ಹಾಡಿದವರ ಧನ್ಯತೆಯೇ ವಿಶೇಷವಾಗಿದ್ದು ಎಂದು ಅವರು ಸ್ಮರಿಸಿದರು.

ಪ್ರಶಸ್ತಿ ಪ್ರದಾನ

ವಿದ್ವಾನ್ ಶೃಂಗೇರಿ ನಾಗರಾಜ್ ಅವರಿಗೆ ‘ಶ್ರೀವಾಸುದೇವಾಚಾರ್ಯ ಸಂಸ್ಮರಣಾ ಪ್ರಶಸ್ತಿ’, ವಿದ್ವಾನ್ ಎಚ್.ಕೆ. ನರಸಿಂಹಮೂರ್ತಿ ಅವರಿಗೆ ‘ಶ್ರೇಷ್ಠ ಜೀವಮಾನ ಸಾಧನೆ ಪ್ರಶಸ್ತಿ’, ವಿದುಷಿ ಪುಷ್ಪಾ ಶ್ರೀನಿವಾಸ್ ಅವರಿಗೆ ‘ಕರ್ನಾಟಕ ಸಂಗೀತಾಚಾರ್ಯ ಪ್ರಶಸ್ತಿ’ ಯನ್ನು ನೀಡಿ, ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಡಾ. ರಮಾ ಬೆಣ್ಣೂರು ಮಾತನಾಡಿ, ವಯೋಲಿನ್ ವಿದ್ವಾಂಸ ಎಚ್.ಕೆ. ನರಸಿಂಹ ಮೂರ್ತಿ ಅವರು ಕಲಾ ಲೋಕಕ್ಕೆ ಅಹರ್ನಿಷಿ ಸೇವೆ ಸಲ್ಲಿಸಿದ್ದಾರೆ. ಮೈಸೂರಿನಲ್ಲಿ ಯುವಕರು ವಯಲಿನ್ ಹಿಡಿದು ಸಾಗುತ್ತಿದ್ದರೆ ಅವರು ಎಚ್.ಕೆ. ಎನ್. ಸ್ಟೂಡೆಂಟ್ ಎಂದು ಧೈರ್ಯವಾಗಿ ಹೇಳಬಹುದು. ಜೀವಮಾನದಲ್ಲಿ ಅವರು ಬಹುತೇಕ ಸಮಯವನ್ನು ಈ ವಾದ್ಯದ ನುಡಿಸಾಣಿಕೆ ಮತ್ತು ಪಾಠಕ್ಕಾಗಿ ಮೀಸಲಿಟ್ಟಿದ್ದಾರೆ. ಅವರಿಗೆ ಜೀವಮಾನದ ಪ್ರಶಸ್ತಿ ನೀಡಿ ಗೌರವಿಸಿರುವುದು ಮಹತ್ತರ ಕಾರ್ಯ ಎಂದು ಶ್ಲಾಘಿಸಿದರು.

ಇದನ್ನೂ ಓದಿ: Success Story: ಎರಡೇ ತಿಂಗಳಲ್ಲಿ ಆನ್ ಲೈನ್ ಮೂಲಕ 1,800 ಕೆ.ಜಿ. ಮಾವು ಮಾರಿದ ರಾಯಚೂರಿನ ರೈತ!

ಖ್ಯಾತ ಸಂಗೀತ ವಿದ್ವಾಂಸ ಮತ್ತು ಟ್ರಸ್ಟಿ ಡಾ. ರಾ. ನಂದಕುಮಾರ್ ಮಾತನಾಡಿ, ಕನ್ನಡ ನಾಡಿನ ಖ್ಯಾತ, ವಿಖ್ಯಾತ ಸಂಗೀತ ವಿದ್ವಾಂಸರನ್ನು ಒಳಗೊಂಡ ಕರ್ನಾಟಕ ಶಾಸ್ತ್ರೀಯ ಸಂಗೀತ ಒಕ್ಕೂಟ ಟ್ರಸ್ಟ್ (ಕೆಸಿಎಂಸಿ) ಕಳೆದ ಮೂರು ವರ್ಷಗಳಿಂದ ಕಲಾಕ್ಷೇತ್ರದ ಅಭ್ಯುದಯಕ್ಕೆ ಸೇವೆ ಸಲ್ಲಿಸುತ್ತಿದೆ. ಮುಂದೆ ನೂರಾರು ಕಾರ್ಯಾಗಾರ, ಪ್ರಾತ್ಯಕ್ಷಿಕೆ ಹಮ್ಮಿಕೊಂಡು ಯುವ ಸಂಗೀತಗಾರರ ಏಳಿಗೆಗೆ ಶ್ರಮಿಸಲು ಸಂಕಲ್ಪ ಮಾಡಿದೆ. ಸಂಗೀತ ಲೋಕದ ದಿಗ್ಗಜರನ್ನು ಗುರುತಿಸಿ, ಗೌರವಿಸುವ ಸೇವೆಯನ್ನೂ ಟ್ರಸ್ಟ್ ಮಾಡುತ್ತಿದೆ. ಒಟ್ಟಾರೆ ಕರ್ನಾಟಕ ಶಾಸ್ತ್ರೀಯ ಸಂಗೀತದ ಮಹತ್ವ ಕಾಪಾಡಲು ನಮ್ಮ ಕೆಸಿಎಂಸಿ ಟ್ರಸ್ಟ್ ದಿಟ್ಟ ಹೆಜ್ಜೆ ಇಟ್ಟಿದೆ ಎಂದರು.

ಹಿರಿಯ ವೀಣಾ ವಿದ್ವಾಂಸ ವಿದ್ವಾನ್ ಡಾ. ರಾ. ವಿಶ್ವೇಶ್ವರನ್ ಮಾತನಾಡಿ, ಸಂಗೀತ ಕ್ಷೇತ್ರದಲ್ಲಿ ಸಿದ್ಧಿ ಪಡೆದ ಅನೇಕರು ಪ್ರಸಿದ್ಧಿಗೆ ಬರಲೇ ಇಲ್ಲ. ಅವರ ಸಾಲಿನಲ್ಲಿ ಮೈಸೂರು ವಾಸುದೇವಾಚಾರ್ಯರೂ ಒಬ್ಬರು. ಮೈಸೂರಿನಲ್ಲಿ ಅವರಿಗೆ ರಾಜಾಶ್ರಯ ಮಾತ್ರ ಇತ್ತು. ಆದರೆ ರಾಷ್ಟ್ರಮಟ್ಟದ ಪ್ರಶಸ್ತಿ, ಪುರಸ್ಕಾರಗಳು ಇನ್ನಷ್ಟು ಮಾನ್ಯವಾಗಬೇಕಿತ್ತು. ಇಂದಿನ ಪೀಳಿಗೆ ಇಂಥ ಮಹಾನ್ ಕಲಾವಿದರ ರಚನೆಗಳನ್ನು ಶ್ರದ್ಧೆಯಿಂದ ಕಲಿತು ಹಾಡಬೇಕು. ಕೆಸಿಎಂಸಿ ಟ್ರಸ್ಟ್ ಈ ನಿಟ್ಟಿನಲ್ಲಿ ಸಾವಿರಾರು ಕೆಲಸಗಳನ್ನು ಮಾಡಲಿ ಎಂದು ಹಾರೈಸುವೆ ಎಂದು ತಿಳಿಸಿದರು.

ರೇವತಿ ಕಾಮತ್ ಚಾರಿಟಬಲ್ ಟ್ರಸ್ಟ್ ಉದ್ಘಾಟನೆ

ಇದೇ ವೇಳೆ ಖ್ಯಾತ ವೀಣಾ ವಿದುಷಿ ರೇವತಿ ಕಾಮತ್ ಅವರ ‘ರೇವತಿ ಕಾಮತ್ ಚಾರಿಟಬಲ್ ಟ್ರಸ್ಟ್’ ಅನ್ನು ವಿದ್ವಾನ್ ಆರ್. ವಿಶ್ವೇಶ್ವರನ್ ಅವರು ಉದ್ಘಾಟಿಸಿದರು. ಪರಿಸರ ಸಂರಕ್ಷಣೆ, ಗ್ರಾಮೀಣ ಮಕ್ಕಳ ಶಿಕ್ಷಣ ಅಭಿವೃದ್ಧಿ, ಕರ್ನಾಟಕ ಶಾಸ್ತ್ರೀಯ ಸಂಗೀತ ಪೋಷಣೆ ಮತ್ತು ಸಂವರ್ಧನೆಗೆ ಟ್ರಸ್ಟ್ ಸಂಕಲ್ಪ ಮಾಡಿದೆ ಎಂದು ರೇವತಿ ಕಾಮತ್ ತಿಳಿಸಿದರು.

ಈ ಸಂದರ್ಭದಲ್ಲಿ ಕಲಾಕ್ಷೇತ್ರದ ಹಿರಿಯ ಚೇತನ ವಿದ್ವಾನ್ ಡಾ.ರಾ. ವಿಶ್ವೇಶ್ವರನ್, ಲೇಖಕ ಮತ್ತು ಪತ್ರಕರ್ತ ಎ.ಆರ್. ರಘುರಾಮ, ಡಾ.ರಮಾ ಬೆಣ್ಣೂರು, ಭ್ರಮರಾ ಟ್ರಸ್ಟ್‌ನ ಸಂಸ್ಥಾಪಕಿ ಮಾಧುರಿ ತಾತಾಚಾರಿ, ವಿದ್ವಾನ್ ಡಾ.ರಾ.ಸ.ನಂದಕುಮಾರ್ ಮತ್ತು ವೀಣಾ ವಿದ್ವಾಂಸ ಪ್ರಶಾಂತ ಅಯ್ಯಂಗಾರ್, ವಿದ್ವಾನ್ ಆನೂರು ಅನಂತ ಕೃಷ್ಣ ಶರ್ಮ (ಶಿವು) ಮತ್ತು ಪುಸ್ತಕಂ ರಮಾ ಉಪಸ್ಥಿತರಿದ್ದರು.

ಇದನ್ನೂ ಓದಿ: Gold Rate Today: ಚಿನ್ನದ ಬೆಲೆಯಲ್ಲಿ ಕೊಂಚ ಏರಿಕೆ; ಬಂಗಾರದ ಮಾರುಕಟ್ಟೆಯಲ್ಲಿ ಇಂದಿನ ಧಾರಣೆ ಹೀಗಿದೆ

ಇದಕ್ಕೂ ಮುನ್ನ ವಾಸುದೇವಾಚಾರ್ಯರ ಕೃತಿಗಳ ಗೋಷ್ಠಿ ಗಾಯನ, ವಿದುಷಿ ಮೈಸೂರು ರಾಜಲಕ್ಷ್ಮೀ ಅವರ ವೀಣಾವಾದನ ನೂರಾರು ಪ್ರೇಕ್ಷಕರನ್ನು ರಂಜಿಸಿತು.

Continue Reading

ಮಳೆ

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

Rain News : ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರಿದಿದೆ. ಯಾದಗಿರಿಯಲ್ಲಿ ಗಾಳಿ ಸಹಿತ ಮಳೆಗೆ ವಿದ್ಯುತ್‌ ಕಂಬ ಮುರಿದು ಬಿದ್ದ ಪರಿಣಾಮ ಮೂರು ದಿನದಿಂದ ಕರೆಂಟ್‌ ಕಟ್‌ ಆಗಿದೆ. ಇತ್ತ ಗ್ರಾಮಸ್ಥರು ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌ (Karnataka Weather Forecast) ಮಾಡಿಕೊಳ್ಳುತ್ತಿದ್ದಾರೆ.

VISTARANEWS.COM


on

By

Karnataka weather Forecast
Koo

ಚಿಕ್ಕಮಗಳೂರು/ಯಾದಗಿರಿ: ರಾಜ್ಯದ ಹಲವೆಡೆ ಮಳೆ ಪ್ರಮಾಣ ತಗ್ಗಿದ್ದರೂ ಮಳೆ ಅವಾಂತರ (Rain News) ಮಾತ್ರ ಕಡಿಮೆ ಆಗುತ್ತಿಲ್ಲ. ಯಾದಗಿರಿಯಲ್ಲಿ ಮಳೆಗೆ ವಿದ್ಯುತ್‌ ಕಂಬಗಳು ಧರೆಗುರುಳಿವೆ. ಪರಿಣಾಮ ಮೂರು ದಿನಗಳಿಂದ ಕರೆಂಟ್‌ ಇಲ್ಲದಂತಾಗಿದೆ.ಇತ್ತ ಮಂಗಳವಾರ ಚಿಕ್ಕಮಗಳೂರಿನಲ್ಲಿ ಭಾರಿ (Karnataka weather Forecast) ಮಳೆಯಾಗುತ್ತಿದೆ.

ಒಂದು ಗಂಟೆಯಿಂದ ಧಾರಾಕಾರ ಮಳೆ ಸುರಿದಿದೆ. ಕೊಟ್ಟಿಗೆಹಾರ, ಬಾಳೂರು, ಚಾರ್ಮಾಡಿ ಸುತ್ತಮುತ್ತ ನಿರಂತರ ಮಳೆಯಿಂದಾಗಿ ವಾಹನ ಸವಾರರು ಪರದಾಡಬೇಕಾಯಿತು. ಕಳೆದ ಎರಡು ದಿನಗಳಿಂದ ಬಿಡುವು ನೀಡಿದ್ದ ಮಳೆ ಮತ್ತೆ ಆರ್ಭಟಿಸುತ್ತಿದೆ. ಭಾರಿ ಗಾಳಿಯೊಂದಿಗೆ ಮಳೆ ಸುರಿಯುತ್ತಿದ್ದು, ಸವಾರರು ರಸ್ತೆ ಬದಿ ವಾಹನ ನಿಲ್ಲಿಸಿ ಬಸ್‌ ನಿಲ್ದಾಣದಲ್ಲಿ ಆಶ್ರಯ ಪಡೆದರು.

ಯಾದಗಿರಿಯಲ್ಲಿ ಮಳೆಗೆ ಪವರ್‌ ಕಟ್‌; ಜನರೇಟರ್ ಮೂಲಕ ಮೊಬೈಲ್‌ಗಳಿಗೆ ಚಾರ್ಜಿಂಗ್‌

ಬಿರುಗಾಳಿ ಸಹಿತ ಸುರಿದ ಭಾರಿ ಮಳೆಗೆ ವಿದ್ಯುತ್ ಕಂಬ ಬಿದ್ದಿದ್ದು, ಮೂರು ದಿನಗಳಿಂದ ವಿದ್ಯುತ್ ಕಡಿತಗೊಂಡಿದೆ. ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಬಲಕಲ್, ಮರಮಕಲ್, ನಾಲ್ವಡಗಿ ಗ್ರಾಮಸ್ಥರು ವಿದ್ಯುತ್‌ ಇಲ್ಲದೆ ಪರದಾಡುತ್ತಿದ್ದಾರೆ. ತುರ್ತು ಎಂದಾಗ ಫೋನ್‌ ಮಾಡಲು ಮೊಬೈಲ್‌ನಲ್ಲಿ ಚಾರ್ಜಿಂಗ್‌ ಇಲ್ಲ.

ಹೀಗಾಗಿ ಮೊಬೈಲ್‌ ಚಾರ್ಜಿಂಗ್‌ಗಾಗಿ ಗ್ರಾಮಸ್ಥರು ಸೂಪರ್‌ ಪ್ಲ್ಯಾನ್‌ವೊಂದನ್ನು ಮಾಡಿಕೊಂಡಿದ್ದಾರೆ. ಜನರೇಟರ್ ಮೂಲಕ ಹತ್ತಾರು ಪವರ್ ಬಾಕ್ಸ್ ಇಟ್ಟು ವಿದ್ಯುತ್ ಕನೆಕ್ಷನ್ ಮಾಡಿಕೊಂಡಿದ್ದಾರೆ. ಜನರೇಟರ್ ಮೂಲಕ‌ ಮೊಬೈಲ್ ಜಾರ್ಜ್ ಮಾಡಲು ಪಾಳಿ ವ್ಯವಸ್ಥೆ ಮಾಡಲಾಗಿದೆ. ಮರಮಕಲ್ ಗ್ರಾಮದ ಬಸವೇಶ್ವರ ಮಂದಿರದಲ್ಲಿ ಮೊಬೈಲ್ ಚಾರ್ಜಿಂಗ್‌ ಮಾಡಿಕೊಳ್ಳಲು ವ್ಯವಸ್ಥೆ ಮಾಡಿಕೊಂಡಿದ್ದಾರೆ.

ಮೂರು ದಿನಗಳಿಂದ ವಿದ್ಯುತ್ ಸಮಸ್ಯೆ ತಲೆದೊರಿದ್ದು, ಜನರೇಟರ್ ಮೂಲಕವೇ ಕುಡಿಯುವ ನೀರಿನ ಪೂರೈಕೆ ಮಾಡಲಾಗುತ್ತಿದೆ. ಎತ್ತಿನ ಬಂಡಿ, ಬೈಕ್ ಮೇಲೆ ದೂರದಿಂದ ಬಂದು ನೀರು ತೆಗೆದುಕೊಂಡು ಹೋಗುತ್ತಿದ್ದಾರೆ. ಬೇಗ ವಿದ್ಯುತ್ ದುರಸ್ತಿ ಮಾಡುವಂತೆ ಒತ್ತಾಯ ಬಂದಿದೆ.

ಇದನ್ನೂ ಓದಿ: Fraud Case: ಹಣ ಡಬ್ಲಿಂಗ್‌ ಕೇಸ್‌; ಬಹುಕೋಟಿ ವಂಚನೆ ಮಾಡಿದ್ದ ಆರೋಪಿಗಳು ನ್ಯಾಯಾಲಯಕ್ಕೆ ಶರಣು

ಎಲ್ಲೆಲ್ಲಿ ಮಳೆ ಅಬ್ಬರ?

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕೊಡಗು, ಕೋಲಾರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (30-40 ಕಿ.ಮೀ.) ಹಗುರದಿಂದ ಸಾಧಾರಣ ಮಳೆಯಾಗಲಿದೆ.

ಉತ್ತರ ಕನ್ನಡ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಹಗುರಮಳೆ/ಗುಡುಗು ಸಹಿತ ಮಳೆಯಾದರೆ, ಬೆಳಗಾವಿ, ಧಾರವಾಡ, ಹಾವೇರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು, ತುಮಕೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (30-40 kmph) ಹಗುರ ಮಳೆಯ ನಿರೀಕ್ಷೆ ಇದೆ. ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ರಾಮನಗರ, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆ ಹೆಚ್ಚಾಗುವ ಸಾಧ್ಯತೆಯಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
karnataka weather forecast
ಮಳೆ9 mins ago

Karnataka weather : ಗುಡುಗು ಸಹಿತ ಮಳೆಯೊಂದಿಗೆ 40 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

Rishab Pant
ಪ್ರಮುಖ ಸುದ್ದಿ39 mins ago

Rishabh Pant : ವಿಶ್ವಕಪ್​​ಗೆ ಮುನ್ನ ಟೀಮ್ ಇಂಡಿಯಾ ಜೆರ್ಸಿ ಧರಿಸಿದ ರಿಷಭ್ ಪಂತ್ ವಿಡಿಯೋ ಹಂಚಿಕೊಂಡ ಬಿಸಿಸಿಐ

Wildlife Sanctuaries
ಪರಿಸರ39 mins ago

Wildlife Sanctuaries: ಮಳೆ ಬರುವ ಮುನ್ನ ಈ ವನ್ಯಜೀವಿಧಾಮಗಳನ್ನು ನೋಡಲು ಪ್ರಯತ್ನಿಸಿ

T20 World Cup
ಕ್ರೀಡೆ1 hour ago

T20 World Cup : ಭಾರತ- ಪಾಕ್ ಪಂದ್ಯ ಐಸಿಸ್​ ಉಗ್ರರಿಂದ ಬಾಂಬ್ ಬೆದರಿಕೆ

namaz on road
ಪ್ರಮುಖ ಸುದ್ದಿ2 hours ago

ವಿಸ್ತಾರ ಸಂಪಾದಕೀಯ: ನಡುರಸ್ತೆಯಲ್ಲೇಕೆ ನಮಾಜ್‌ ಮಾಡಬೇಕು?

Dina Bhavishya
ಭವಿಷ್ಯ2 hours ago

Dina Bhavishya : ಈ ರಾಶಿಯವರು ಜಂಟಿ ಹೂಡಿಕೆ ವ್ಯವಹಾರದಿಂದ ದೂರವಿರಿ

Prajwal Revanna Case
ಪ್ರಮುಖ ಸುದ್ದಿ7 hours ago

Prajwal Revanna Case : ಜರ್ಮನಿಯಿಂದ ಭಾರತಕ್ಕೆ ಬರಲು ವಿಮಾನ ಟಿಕೆಟ್ ಬುಕ್ ಮಾಡಿದ ಪ್ರಜ್ವಲ್ ರೇವಣ್ಣ

chakravarthy sulibele
ಕರ್ನಾಟಕ8 hours ago

Chakravarthy Sulibele : ಮಂಡಿಯೂರಿ ಭೈರಪ್ಪ ಅವರಿಂದ ಸಾವರ್ಕರ್ ಪ್ರಶಸ್ತಿ ಸ್ವೀಕರಿಸಿದ ಚಕ್ರವರ್ತಿ ಸೂಲಿಬೆಲೆ

Cyber Crime
ಪ್ರಮುಖ ಸುದ್ದಿ8 hours ago

Cyber Crime : ಹೆಣ್ಣು ಮಕ್ಕಳ ಫೋಟೋ ಅಶ್ಲೀಲಗೊಳಿಸಿ ಪೋಸ್ಟ್​ ಮಾಡುತ್ತಿದ್ದವನ ಬಂಧನ

Bomb Threat
ಪ್ರಮುಖ ಸುದ್ದಿ9 hours ago

Bomb Threat : ತೆಲಂಗಾಣ ಡಿಸಿಎಂ ಮನೆಗೆ ಬಾಂಬ್​ ಬೆದರಿಕೆ; ಆತಂಕ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ11 hours ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು20 hours ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ2 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ3 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು3 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ6 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌