Death of two boys | ರಾಯಚೂರಿನ ಮಾನ್ವಿಯಲ್ಲಿ ಗುಂಡಿಗೆ ಬಿದ್ದು ಇಬ್ಬರು ಬಾಲಕರ ದುರ್ಮರಣ - Vistara News

ಕ್ರೈಂ

Death of two boys | ರಾಯಚೂರಿನ ಮಾನ್ವಿಯಲ್ಲಿ ಗುಂಡಿಗೆ ಬಿದ್ದು ಇಬ್ಬರು ಬಾಲಕರ ದುರ್ಮರಣ

ರಾಯಚೂರಿನ ಮಾನ್ವಿ ತಾಲ್ಲೂಕಿನ ಬ್ಯಾಗವಾಟ ಗ್ರಾಮದಲ್ಲಿ ಗುಂಡಿಗೆ ಬಿದ್ದು ಇಬ್ಬರು ಬಾಲಕರು ಸಾವಿಗೀಡಾಗಿದ್ದಾರೆ. (Death of two boys) ಸರ್ಕಾರಿ ಶಾಲೆಯ ಹಿಂಭಾಗ ಘಟನೆ ನಡೆದಿದೆ.

VISTARANEWS.COM


on

honda
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಯಚೂರು: ರಾಯಚೂರಿನ ಮಾನ್ವಿ ತಾಲ್ಲೂಕಿನ ಬ್ಯಾಗವಾಟ ಗ್ರಾಮದಲ್ಲಿ ಗುಂಡಿಗೆ ಬಿದ್ದು ಇಬ್ಬರು ಬಾಲಕರು ದುರ್ಮರಣಕ್ಕೀಡಾಗಿದ್ದಾರೆ.

ಅಜಯ್(8) ಹಾಗೂ ಸುರೇಶ್(6) ಮೃತ ಬಾಲಕರಾಗಿದ್ದಾರೆ. ಬ್ಯಾಗವಾಟ ಗ್ರಾಮದ ಸರ್ಕಾರಿ ಶಾಲೆಯ ಹಿಂಭಾಗ ಘಟನೆ ನಡೆದಿದೆ. ಬೆಟ್ಟದ ನೀರು ಶಾಲಾ ಮೈದಾನಕ್ಕೆ ಬಾರದಂತೆ ತಡೆಯಲು ಗುಂಡಿ ತೋಡಲಾಗಿತ್ತು. 32 ಅಡಿ ಉದ್ದ, 6 ಅಡಿ ಅಗಲ ಹಾಗೂ 8 ಅಡಿ ಆಳದ ಗುಂಡಿಯನ್ನು ನಿರ್ಮಿಸಲಾಗಿತ್ತು.

ಪಕ್ಕದಲ್ಲೇ ಕುಡಿಯುವ ನೀರಿನ ಪೈಪ್ ಲೈನ್ ಒಡೆದು ಹೋಗಿತ್ತು. ಹೀಗಾಗಿ ಗುಂಡಿಯಲ್ಲಿ ನೀರು ಸಂಗ್ರಹವಾಗಿತ್ತು. ರಸ್ತೆ ದಾಟುವಾಗ ಮಣ್ಣು ಜಾರಿ ಬಾಲಕರು ಗುಂಡಿಗೆ ಬಿದ್ದಿದ್ದರು. ಬಾಲಕರು ಮೇಲೆ ಬರಲಾಗದೆ ಅಲ್ಲೇ ಮುಳಗಿ‌ ಸಾವನ್ನಪ್ಪಿದ್ದರು. ಮಕ್ಕಳು ಮನೆಗೆ ಬಾರದ ಕಾರಣ ಪಾಲಕರು ಅಲ್ಲಲ್ಲಿ ಹುಡುಕಾಟ ನಡೆಸಿದ್ದರು.

ರಾತ್ರಿ ವೇಳೆ ನೀರಿನಲ್ಲಿ ಬಿದ್ದಿರಬಹುದೆಂದು ಬೊಂಬು ಹಾಕಿ ಹುಡುಕಾಟ ನಡೆಸಲಾಯಿತು. ಬಳಿಕ ಗುಂಡಿಯಲ್ಲಿ ಬಾಲಕರ ಶವಗಳು ಪತ್ತೆಯಾಯಿತು. ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿ ಪ್ರಕರಣ ದಾಖಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Murder Attempt: ದಟ್ಟ ಅರಣ್ಯದಲ್ಲಿ ಮಹಿಳೆಯನ್ನು ಸರಪಳಿಯಿಂದ ಕಟ್ಟಿ ಪರಾರಿಯಾದ ಮಾಜಿ ಪತಿ!

ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ಸೋನುರ್ಲಿ ಗ್ರಾಮದ ಕಾಡಿನಲ್ಲಿ 50 ವರ್ಷದ ಅಮೆರಿಕನ್ ಮಹಿಳೆಯೊಬ್ಬರನ್ನು ಆಕೆಯ ಮಾಜಿ ಪತಿ ಮರಕ್ಕೆ ಕಬ್ಬಿಣದ ಸರಪಳಿಯಿಂದ ಕಟ್ಟಿಹಾಕಿ (Murder Attempt) ಹೋಗಿದ್ದಾಗಿ ತಿಳಿದು ಬಂದಿದೆ. ಈ ಕುರಿತು ಪ್ರಕರಣ ದಾಖಲಿಸಿರುವ ಪೊಲೀಸರು ಆರೋಪಿಗಾಗಿ ತಮಿಳುನಾಡು, ಗೋವಾದಲ್ಲಿ ಕಾರ್ಯಾಚರಣೆ ಪ್ರಾರಂಭಿಸಿದ್ದಾರೆ.

VISTARANEWS.COM


on

By

Murder Attempt
Koo

ಮುಂಬಯಿ: ದಟ್ಟವಾದ ಅರಣ್ಯದಲ್ಲಿ (forest area) ಅಮೆರಿಕನ್ ಮಹಿಳೆಯೊಬ್ಬರನ್ನು (American woman) ಕಬ್ಬಿಣದ ಸರಪಳಿಯಿಂದ ಮರಕ್ಕೆ ಕಟ್ಟಿ (Murder Attempt) ಹಾಕಿರುವ ಘಟನೆ ಬೆಳಕಿಗೆ ಬಂದಿದ್ದು, ಮಹಾರಾಷ್ಟ್ರ ಪೊಲೀಸರು (Maharashtra Police) ಆಕೆಯನ್ನು ರಕ್ಷಿಸಿದ್ದಾರೆ. ಆಕೆಯ ಮಾಜಿ ಪತಿ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಿಸಿರುವುದಾಗಿ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ಸೋನುರ್ಲಿ ಗ್ರಾಮದ ಕಾಡಿನಲ್ಲಿ 50 ವರ್ಷದ ಲಲಿತಾ ಕಯಿ ಕುಮಾರ್ ಎಂಬಾಕೆಯನ್ನು ಮರಕ್ಕೆ ಕಬ್ಬಿಣದ ಸರಪಳಿಯಿಂದ ಕಟ್ಟಿಹಾಕಲಾಗಿತ್ತು. ತನ್ನ ಮಾಜಿ ಪತಿ ತನ್ನನ್ನು ಕಬ್ಬಿಣದ ಸರಪಳಿಯಿಂದ ಕಟ್ಟಿ ಹಾಕಿ ಹೋಗಿರುವುದಾಗಿ ಮಹಿಳೆ ಪೊಲೀಸರಿಗೆ ತಿಳಿಸಿದ್ದಾಳೆ ಎನ್ನಲಾಗಿದೆ.

ಮಹಿಳೆಯ ಕೂಗು ಕೇಳಿದ ಕುರುಬನೊಬ್ಬ ಸರಪಳಿಯಲ್ಲಿ ಸಿಲುಕಿ ಸಂಕಷ್ಟದಲ್ಲಿರುವ ಆಕೆಯನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಪೊಲೀಸರಿಗೆ ಆಕೆಯ ಬಳಿ ಆಧಾರ್ ಕಾರ್ಡ್‌ ಸಿಕ್ಕಿದ್ದು, ಇದರಿಂದ ಆಕೆಯ ತಮಿಳುನಾಡು ವಿಳಾಸ ಸಿಕ್ಕಿದೆ. ಜೊತೆಗೆ ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕದ ಪಾಸ್‌ಪೋರ್ಟ್‌ನ ಫೋಟೋಕಾಪಿಯೂ ದೊರೆತಿದೆ ಎಂದು ಪೊಲೀಸರು ಹೇಳಿದ್ದಾರೆ.

ಆಕೆಯ ವೀಸಾ ಅವಧಿ ಮುಗಿದಿದೆ ಮತ್ತು ಆಕೆಯ ರಾಷ್ಟ್ರೀಯತೆಯನ್ನು ಖಚಿತಪಡಿಸಿಕೊಳ್ಳಲು ಆಕೆಯ ಎಲ್ಲಾ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ. ಪೊಲೀಸರಿಗೆ ದೊರೆತ ಪ್ರಾಥಮಿಕ ಮಾಹಿತಿಯಂತೆ ಮಹಿಳೆ ಕಳೆದ 10 ವರ್ಷಗಳಿಂದ ಭಾರತದಲ್ಲಿದ್ದಾರೆ. ಮಹಿಳೆ ಹೇಳಿಕೆ ನೀಡುವ ಸ್ಥಿತಿಯಲ್ಲಿ ಇರಲಿಲ್ಲ. ಒಂದೆರಡು ದಿನಗಳಿಂದ ಏನನ್ನೂ ಸೇವಿಸದ ಕಾರಣ ಮತ್ತು ಈ ಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ದುರ್ಬಲವಾಗಿದ್ದಳು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆಕೆಯನ್ನು ಮೊದಲು ಕೊಂಕಣ ಪ್ರದೇಶದ ಸಾವಂತವಾಡಿಯ ಆಸ್ಪತ್ರೆಗೆ ಸೇರಿಸಿ ಬಳಿಕ ಸಿಂಧುದುರ್ಗದ ಓರೋಸ್‌ಗೆ ಕರೆದೊಯ್ಯಲಾಯಿತು. ಆಕೆಯ ಮಾನಸಿಕ ಮತ್ತು ಆರೋಗ್ಯ ಸ್ಥಿತಿಯನ್ನು ಪರಿಗಣಿಸಿ ಹೆಚ್ಚಿನ ಚಿಕಿತ್ಸೆಗಾಗಿ ಗೋವಾ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲಾಯಿತು. ಆಕೆ ಅಪಾಯದಿಂದ ಪಾರಾಗಿದ್ದಾಳೆ. ಚಿಕಿತ್ಸೆ ನೀಡುತ್ತಿರುವ ವೈದ್ಯರು ಆಕೆ ಮಾನಸಿಕ ಸಮಸ್ಯೆಗಳಿಂದ ಬಳಲುತ್ತಿದ್ದಾರೆ ಎಂದು ಹೇಳಿದ್ದಾರೆ. ಆಕೆಯ ಬಳಿ ವೈದ್ಯಕೀಯ ಪ್ರಿಸ್ಕ್ರಿಪ್ಷನ್‌ಗಳನ್ನು ನಾವು ಕಂಡುಕೊಂಡಿದ್ದೇವೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಆಸ್ಪತ್ರೆಯಲ್ಲಿ ಮಹಿಳೆ ಬರೆದಿರುವ ಟಿಪ್ಪಣಿಯನ್ನು ಆಧರಿಸಿ ಆಕೆಯ ಮಾಜಿ ಪತಿ ವಿರುದ್ಧ ಕೊಲೆ ಯತ್ನ, ಇತರರ ಜೀವ ಅಥವಾ ವೈಯಕ್ತಿಕ ಸುರಕ್ಷತೆಗೆ ಅಪಾಯವನ್ನುಂಟು ಮಾಡುವ ಕೃತ್ಯ ಮತ್ತು ಭಾರತೀಯ ನ್ಯಾಯ ಸಂಹಿತಾ (BNS) ಅಡಿಯಲ್ಲಿ ಅಕ್ರಮ ಬಂಧನದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಸಿಂಧುದುರ್ಗ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಸೌರಭ್ ಅಗರವಾಲ್ ಹೇಳಿದ್ದಾರೆ.

ಮಹಿಳೆಯ ಹೇಳಿಕೆಯನ್ನು ಇನ್ನೂ ಅಧಿಕೃತವಾಗಿ ದಾಖಲಿಸಿಕೊಳ್ಳಬೇಕಾಗಿದೆ. ಆದರೆ ಪ್ರಕರಣದ ದಾಖಲಾದ ಅನಂತರ, ಪೊಲೀಸ್ ತಂಡಗಳು ತನಿಖೆಯನ್ನು ಪ್ರಾರಂಭಿಸಿವೆ ಎಂದು ಅವರು ಹೇಳಿದರು.

ಇದನ್ನೂ ಓದಿ: Murder Case : ಇನ್‌ಸ್ಟಾಗ್ರಾಮ್‌ ಗೆಳೆಯನಿಗಾಗಿ ಗಂಡನನ್ನೇ ಕೊಲೆ ಮಾಡಿಸಿದ ಐನಾತಿ ಹೆಂಡತಿ

ಪೊಲೀಸರು ಆಕೆಯಿಂದ ವಶಪಡಿಸಿಕೊಂಡಿರುವ ಪ್ರಿಸ್ಕ್ರಿಪ್ಷನ್‌ಗಳು ಆಕೆ ಮಾನಸಿಕ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದಳು ಎಂದು ಸೂಚಿಸುತ್ತದೆ. ಆಕೆಯ ಪತಿ ಮತ್ತು ಇತರ ಸಂಬಂಧಿಕರನ್ನು ಪತ್ತೆಹಚ್ಚಲು ಪೊಲೀಸ್ ತಂಡಗಳು ಪ್ರಸ್ತುತ ತಮಿಳುನಾಡು ಮತ್ತು ಗೋವಾದಲ್ಲಿವೆ ಎಂದು ಅವರು ಹೇಳಿದರು. ತನಿಖೆಯ ಭಾಗವಾಗಿ ಆಕೆಯ ಸಂಬಂಧಿಕರನ್ನು ಪತ್ತೆಹಚ್ಚಲು ಪೊಲೀಸ್ ತಂಡಗಳು ತಮಿಳುನಾಡು, ಗೋವಾ ಮತ್ತು ಇತರ ಕೆಲವು ಸ್ಥಳಗಳಿಗೆ ತೆರಳಿವೆ ಎಂದು ಅಧಿಕಾರಿ ತಿಳಿಸಿದ್ದಾರೆ.

Continue Reading

Latest

Viral Video: ಸಿಬ್ಬಂದಿಗೆ ಗನ್ ತೋರಿಸಿ ಆಭರಣ ಅಂಗಡಿ ದರೋಡೆ ಮಾಡಿದ ಹೆಲ್ಮೆಟ್‌ಧಾರಿಗಳು; ವಿಡಿಯೊ ನೋಡಿ

Viral Video: ಹೆಲ್ಮೆಟ್ ಧರಿಸಿದ ಮೂವರು ವ್ಯಕ್ತಿಗಳು ಆಭರಣದ ಅಂಗಡಿಗೆ ಪ್ರವೇಶಿಸಿ ಸಿಬ್ಬಂದಿಗೆ ಬಂದೂಕು ತೋರಿಸಿ ಬೆದರಿಕೆ ಹಾಕಿದ್ದಾರೆ, ನಂತರ ದರೋಡೆಕೋರರು ಆಭರಣಗಳನ್ನು ದೋಚಿದ್ದಲ್ಲದೆ, ಆಭರಣ ಅಂಗಡಿಯ ಸಿಬ್ಬಂದಿಯೊಬ್ಬರು ಅಲಾರಂ ಆನ್ ಮಾಡಲು ಪ್ರಯತ್ನಿಸಿದಾಗ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಅಂಗಡಿಯನ್ನು ಲೂಟಿ ಮಾಡಿದ ನಂತರ, ಸಿಬ್ಬಂದಿ ಅಲಾರಂ ಆನ್ ಮಾಡುವ ಮೂಲಕ ಪೊಲೀಸರಿಗೆ ಎಚ್ಚರಿಕೆ ನೀಡುತ್ತಿದ್ದಂತೆ ಮೂವರು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

VISTARANEWS.COM


on

Viral Video
Koo


ಚಿನ್ನದ ಬೆಲೆ ಏರುತ್ತಿರುವ ಹಿನ್ನೆಲೆಯಲ್ಲಿ ಚಿನ್ನದ ಲೂಟಿ ಪ್ರಕರಣ ಕೂಡ ಹೆಚ್ಚಾಗುತ್ತಿದೆ. ಮನೆಗಳಲ್ಲಿ, ಆಭರಣ ಅಂಗಡಿಗಳಲ್ಲಿ ಹೀಗೆ ಎಲ್ಲೆಂದರಲ್ಲಿ ಚಿನ್ನವನ್ನು ಲೂಟಿ ಮಾಡುತ್ತಿದ್ದಾರೆ. ಅದಕ್ಕಾಗಿ ಜನರ ಪ್ರಾಣವನ್ನು ಕೂಡ ತೆಗೆಯುತ್ತಿದ್ದಾರೆ. ಇದೀಗ ಅಂತಹದೊಂದು ದರೋಡೆ ಪ್ರಕರಣ ಮಹಾರಾಷ್ಟ್ರದಲ್ಲಿ ನಡೆದಿದೆ. ಮಹಾರಾಷ್ಟ್ರದ ನವೀ ಮುಂಬೈನಲ್ಲಿ ಮೂವರು ವ್ಯಕ್ತಿಗಳು ಬಂದೂಕು ತೋರಿಸಿ ಆಭರಣ ಮಳಿಗೆಯನ್ನು ಲೂಟಿ ಮಾಡಿದ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video) ಆಗಿದೆ.

ಜುಲೈ 28ರ ಭಾನುವಾರ ರಾತ್ರಿ ಈ ಘಟನೆ ನಡೆದಿದೆ. ಆದರೆ ಅದರ ವಿಡಿಯೊ ಜುಲೈ 29 ರಂದು ಆನ್‍ಲೈನ್‍ನಲ್ಲಿ ಕಾಣಿಸಿಕೊಂಡಿದೆ. 2 ನಿಮಿಷ 20 ಸೆಕೆಂಡುಗಳ ಈ ವಿಡಿಯೊ ಕ್ಲಿಪ್‍ನಲ್ಲಿ ಹೆಲ್ಮೆಟ್ ಧರಿಸಿದ ಮೂವರು ವ್ಯಕ್ತಿಗಳು ಆಭರಣದ ಅಂಗಡಿಗೆ ಪ್ರವೇಶಿಸಿ ಸಿಬ್ಬಂದಿಗೆ ಬಂದೂಕು ತೋರಿಸಿ ಬೆದರಿಕೆ ಹಾಕಿದ್ದಾರೆ, ನಂತರ ದರೋಡೆಕೋರರು ಆಭರಣಗಳನ್ನು ದೋಚಿದ್ದಲ್ಲದೆ, ಆಭರಣ ಅಂಗಡಿಯ ಸಿಬ್ಬಂದಿಯೊಬ್ಬರು ಅಲಾರಂ ಆನ್ ಮಾಡಲು ಪ್ರಯತ್ನಿಸಿದಾಗ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಅಂಗಡಿಯನ್ನು ಲೂಟಿ ಮಾಡಿದ ನಂತರ, ಸಿಬ್ಬಂದಿ ಅಲಾರಂ ಆನ್ ಮಾಡುವ ಮೂಲಕ ಪೊಲೀಸರಿಗೆ ಎಚ್ಚರಿಕೆ ನೀಡುತ್ತಿದ್ದಂತೆ ಮೂವರು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

ಆರೋಪಿಗಳು ಆಭರಣ ಅಂಗಡಿಯಿಂದ 11 ಲಕ್ಷ ರೂ.ಗೂ ಹೆಚ್ಚು ಮೌಲ್ಯದ ಆಭರಣಗಳನ್ನು ಲೂಟಿ ಮಾಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ, ನವೀ ಮುಂಬೈ ಪೊಲೀಸರ ತಂಡವು ಸ್ಥಳಕ್ಕೆ ತಲುಪಿ ತನಿಖೆಯನ್ನು ಪ್ರಾರಂಭಿಸಿದೆ. ಪೊಲೀಸರ ಮಾಹಿತಿ ಪ್ರಕಾರ, ದರೋಡೆಕೋರರು ರಾತ್ರಿ 10.30 ರ ಸುಮಾರಿಗೆ ಬಿಎಂ ಜ್ಯುವೆಲ್ಲರ್ ಗೆ ನುಗ್ಗಿದ್ದಾರೆ. ಮತ್ತು ಅಲ್ಲಿ ಅನೇಕ ಬಾರಿ ಗುಂಡು ಹಾರಿಸಿದ್ದಾರೆ. ಕೆಲವು ಕ್ಷಣಗಳ ನಂತರ, ಅವರು ಬೈಕ್‍ನಲ್ಲಿ ಸ್ಥಳದಿಂದ ಪರಾರಿಯಾಗಿದ್ದಾರೆ, ಮತ್ತು ಸ್ಥಳೀಯರು ಅವರನ್ನು ಬೆನ್ನಟ್ಟಲು ಪ್ರಯತ್ನಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: 20ಕ್ಕೂ ಹೆಚ್ಚು ಮಹಿಳೆಯರನ್ನು ಮದುವೆಯಾಗಿ ಚಿನ್ನಾಭರಣ ಎಗರಿಸಿದ್ದ ವಂಚಕ ಪೊಲೀಸ್‌ ಬಲೆಗೆ ಬಿದ್ದಿದ್ದು ಹೇಗೆ?

ಘಟನೆಯ ಬಗ್ಗೆ ಮಾತನಾಡಿದ ನವೀ ಮುಂಬೈ ಪೊಲೀಸ್ ಅಧಿಕಾರಿಯೊಬ್ಬರು, “ಕಪ್ಪು ಬಟ್ಟೆ ಮತ್ತು ರಿವಾಲ್ವರ್‌ಗಳನ್ನು ಹೊಂದಿದ್ದ ಮೂವರು ಅಂಗಡಿಗೆ ಪ್ರವೇಶಿಸಿ, ಸಿಬ್ಬಂದಿಗೆ ಬೆದರಿಕೆ ಹಾಕಿ, ಹಲ್ಲೆ ನಡೆಸಿ 11.80 ಲಕ್ಷ ರೂ.ಮೌಲ್ಯದ ಆಭರಣಗಳನ್ನು ಲೂಟಿ ಮಾಡಿದ್ದಾರೆ. ಮೂರು ನಿಮಿಷಗಳಲ್ಲಿ, ಅವರು ನಾಲ್ಕರಿಂದ ಐದು ಸುತ್ತು ಗುಂಡು ಹಾರಿಸಿದರು, ಆದರೆ ಯಾರೂ ಗಾಯಗೊಂಡಿಲ್ಲ. ಡಕಾಯಿತಿ ಮತ್ತು ಇತರ ಅಪರಾಧಗಳಿಗಾಗಿ ಭಾರತೀಯ ನ್ಯಾಯ ಸಂಹಿತಾ (ಬಿಎನ್ಎಸ್) ಮತ್ತು ಶಸ್ತ್ರಾಸ್ತ್ರ ಕಾಯ್ದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮೂವರು ಆರೋಪಿಗಳನ್ನು ಬಂಧಿಸಲು ಪ್ರಯತ್ನ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ.

Continue Reading

ಕ್ರೈಂ

Hindu Girl Murder: ಯುವತಿ ಬರ್ಬರ ಕೊಲೆ ಪ್ರಕರಣ; ಹಂತಕ ದಾವೂದ್‌ ಶೇಖ್‌ ಹಿಂಬಾಲಿಸುತ್ತಿದ್ದ ಸಿಸಿಟಿವಿ ದೃಶ್ಯ ಪತ್ತೆ

Hindu Girl Murder: ಮುಂಬಯಿಯ ಉರಾನ್‌ನ ಯಶಶ್ರೀ ಶಿಂಧೆ ಕೊಲೆ ಪ್ರಕರಣದ (Murder Case) ತನಿಖೆ ನಡೆಸುತ್ತಿದ್ದ ವೇಳೆ ಸಿಸಿಟಿವಿ ದೃಶ್ಯಾವಳಿಗಳು ಪತ್ತೆಯಾಗಿದ್ದು, ಇದರಲ್ಲಿ ಯುವತಿಯನ್ನು ಆರೋಪಿ ಹಿಂಬಾಲಿಸುತ್ತಿರುವ ದೃಶ್ಯವಿದೆ. ಪ್ರಕರಣದ ಆರೋಪಿ ದಾವುದ್ ಶೇಖ್‌ನನ್ನು ಬಂಧಿಸಿದ ಕೆಲವೇ ಗಂಟೆಗಳ ಅನಂತರ ಈ ವಿಡಿಯೋ ಸಿಕ್ಕಿದೆ.

VISTARANEWS.COM


on

By

Hindu Girl Murder
Koo

ನವಿ ಮುಂಬಯಿ: ಯಶಶ್ರೀ ಶಿಂಧೆ ಕೊಲೆ ಪ್ರಕರಣಕ್ಕೆ (Hindu Girl Murder) ಮಹತ್ವದ ಸಾಕ್ಷಿಯೊಂದು ಲಭ್ಯವಾಗಿದೆ. ಆರೋಪಿ ದಾವೂದ್‌ ಶೇಖ್ (Accused Daud Shaikh) ಯುವತಿಯನ್ನು ಹಿಂಬಾಲಿಸುತ್ತಿರುವ ಸಿಸಿಟಿವಿ ದೃಶ್ಯಗಳು (CCTV footage) ಪತ್ತೆಯಾಗಿದೆ. ದಾವುದ್‌ ಶೇಖ್‌ನನ್ನು ಈಗಾಗಲೇ ಕರ್ನಾಟಕದ ಗುಲ್ಬರ್ಗದಲ್ಲಿ ನವಿ ಮುಂಬೈ ಕ್ರೈಂ ಬ್ರಾಂಚ್ (Navi Mumbai Crime Branch) ಘಟಕದ ಪೊಲೀಸರು ಬಂಧಿಸಿದ್ದಾರೆ.

ಉರಾನ್‌ನ 20 ವರ್ಷದ ಯಶಶ್ರೀ ಶಿಂಧೆ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವಾಗ ಹೊಸ ಸಿಸಿಟಿವಿ ದೃಶ್ಯಾವಳಿಗಳು ಕಂಡು ಬಂದಿವೆ. ಇದರಲ್ಲಿ ಯಶಶ್ರೀಯನ್ನು ಆರೋಪಿ ಹಿಂಬಾಲಿಸುತ್ತಿರುವ ದೃಶ್ಯವಿದೆ. ಪ್ರಕರಣದ ಆರೋಪಿ ದಾವೂದ್‌ ಶೇಖ್‌ನನ್ನು ಬಂಧಿಸಿದ ಕೆಲವೇ ಗಂಟೆಗಳ ಅನಂತರ ಈ ವಿಡಿಯೋ ಸಿಕ್ಕಿದೆ.

Murder Case
Murder Case


ಜುಲೈ 25ರ ಸಿಸಿಟಿವಿ ದೃಶ್ಯಾವಳಿಯಲ್ಲಿ ಯಶಶ್ರೀ ಶಿಂಧೆ ಮುಂಬಯಿಯ ಉರಾನ್ ಮಾರುಕಟ್ಟೆಯ ಹಿಂದಿನ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವುದನ್ನು ಕಾಣಬಹುದು. ಕೆಲವೇ ನಿಮಿಷಗಳಲ್ಲಿ ಆರೋಪಿ ದಾವುದ್‌ ಶೇಖ್ ಆಕೆಯನ್ನು ಹಿಂಬಾಲಿಸಿಕೊಂಡು ಅದೇ ಸ್ಥಳದಿಂದ ಹಾದುಹೋಗುವುದನ್ನು ಕಾಣಬಹುದು. ಜುಲೈ 25ರಿಂದ ನಾಪತ್ತೆಯಾಗಿದ್ದ ಯಶಶ್ರೀ ಮೃತ ದೇಹ ಜುಲೈ 27ರ ಮುಂಜಾನೆ ಉರಾನ್ ರೈಲು ನಿಲ್ದಾಣದ ಬಳಿಯ ಪೊದೆಗಳಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿತ್ತು.

ಕರ್ನಾಟಕದಲ್ಲಿ ಆರೋಪಿಯ ಬಂಧನ

ಪ್ರಕರಣದ ತನಿಖೆ ನಡೆಸಿಕೊಂಡು ಕರ್ನಾಟಕಕ್ಕೆ ಬಂದ ನವಿ ಮುಂಬಯಿ ಅಪರಾಧ ವಿಭಾಗದ ಕೇಂದ್ರ ಘಟಕವು 24 ವರ್ಷದ ದಾವುದ್ ಶೇಖ್‌ನನ್ನು ಗುಲ್ಬರ್ಗ ಜಿಲ್ಲೆಯ ಶಾಹಪುರ್ ಬೆಟ್ಟದ ಪ್ರದೇಶದಿಂದ ಬಂಧಿಸಿದೆ.

2019ರಲ್ಲಿ ಯಶಶ್ರೀಯ ಬಗ್ಗೆ ತಿಳಿದಿದ್ದ ಶೇಖ್ ಆಕೆಯೊಂದಿಗೆ ಸ್ನೇಹ ನಡೆಸಲು ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಆತನ ವಿರುದ್ಧ ಸಂತ್ರಸ್ತೆಯ ತಂದೆ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆಯಡಿ ಪ್ರಕರಣ ದಾಖಲಿಸಿದ ಅನಂತರ ಬಂಧಿಸಲಾಗಿತ್ತು. ಸುಮಾರು ಆರು ತಿಂಗಳು ಜೈಲಿನಲ್ಲಿದ್ದ ಶೇಖ್ ಬಿಡುಗಡೆಯಾದ ಬಳಿಕ ತನ್ನ ತವರೂರು ಕರ್ನಾಟಕಕ್ಕೆ ಬಂದು ಡ್ರೈವರ್ ಕೆಲಸ ಮಾಡಿಕೊಂಡಿದ್ದ.

ತ್ರಿಕೋನ ಪ್ರೇಮ

ಪೊಲೀಸರ ಪ್ರಕಾರ ತ್ರಿಕೋನ ಪ್ರೇಮದಿಂದಾಗಿ ಶೇಖ್ ಮತ್ತು ಶಿಂಧೆ ನಡುವಿನ ಸಂಬಂಧವು ಹದಗೆಡಲು ಪ್ರಾರಂಭಿಸಿತು. ಸಂತ್ರಸ್ತೆ ಬೇರೊಬ್ಬ ಹುಡುಗನನ್ನು ಪ್ರೀತಿಸುತ್ತಿದ್ದಳು ಎಂದು ಹೇಳಲಾಗಿದ್ದು, ಇದು ಶೇಖ್‌ನನ್ನು ಕೆರಳಿಸಿತು ಎನ್ನಲಾಗಿದೆ. ಜುಲೈ 22ರಂದು ಕರೆ ದಾಖಲೆಗಳ ಪ್ರಕಾರ ಶೇಖ್ ಉರಾನ್‌ಗೆ ಬಂದು ಜುಲೈ 25ರಿಂದ ಫೋನ್ ಸ್ವಿಚ್ ಆಫ್ ಮಾಡಿದ್ದ ಎಂದು ಅಪರಾಧ ವಿಭಾಗದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.


ಶೇಖ್ ಹತಾಶೆಗೊಂಡಿರುವುದು ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಂದ ಸ್ಪಷ್ಟವಾಗಿದೆ. ಜುಲೈ 25ರಂದು ಶಿಂಧೆಯನ್ನು ಇರಿದು ಕೊಲೆ ಮಾಡಲು ಕಾರಣವಾದ ನಿಖರವಾದ ಘಟನೆಗಳು ಇನ್ನೂ ತಿಳಿದು ಬರಬೇಕಿದೆ. ಹೆಚ್ಚಿನ ವಿಚಾರಣೆಗಾಗಿ ಆರೋಪಿಯನ್ನು ನವಿ ಮುಂಬೈಗೆ ಕರೆದುಕೊಂಡು ಹೋಗಲಾಗಿದೆ.

ಇದನ್ನೂ ಓದಿ: Brutal Murder: ಮುಂಬಯಿ ಯುವತಿಯನ್ನು ಬರ್ಬರವಾಗಿ ಕೊಂದ ಪಾತಕಿ ದಾವೂದ್ ಯಾದಗಿರಿಯಲ್ಲಿ ಆರೆಸ್ಟ್‌

ಶಿಂಧೆಯ ಹತ್ಯೆಯನ್ನು ‘ಕ್ರೂರ’ ಎಂದು ವಿವರಿಸುವ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳು ಸುಳ್ಳು ಎಂದು ವಲಯ I ರ ಉಪ ಪೊಲೀಸ್ ಆಯುಕ್ತ ವಿವೇಕ್ ಪನ್ಸಾರೆ ಸ್ಪಷ್ಟಪಡಿಸಿದ್ದಾರೆ. ಶಿಂಧೆಯವರನ್ನು ಇರಿದು ಸಾಯಿಸಲಾಗಿದೆ. ಆದರೆ ಆಕೆಯ ಖಾಸಗಿ ಅಂಗಗಳಿಗೆ ಗಾಯವಾಗಿದೆ. ಆಕೆಯ ತಲೆಯನ್ನು ಒಡೆದು ಹಾಕಲಾಗಿದೆ, ಆಕೆಯ ಸ್ತನಗಳು, ಕೈಗಳನ್ನು ಕತ್ತರಿಸಲಾಗಿದೆ ಎಂಬ ಹೇಳಿಕೆಗಳು ತಪ್ಪುದಾರಿಗೆಳೆಯುವ ಮತ್ತು ಸುಳ್ಳು ಮಾಹಿತಿ. ಕೊಲೆಯ ಹಿಂದಿನ ಉದ್ದೇಶ ತ್ರಿಕೋನ ಪ್ರೇಮವೇ ಹೊರತು ಲವ್ ಜಿಹಾದ್ ಅಲ್ಲ ಎನ್ನುವುದು ಪೊಲೀಸರ ಹೇಳಿಕೆಯಾಗಿದೆ.

Continue Reading

ದೇಶ

Nawab Malik:‌ ದಾವೂದ್‌ ಇಬ್ರಾಹಿಂ ಜೊತೆ ನಂಟು ಆರೋಪ ಹೊಂದಿರುವ NCP ನಾಯಕ ನವಾಬ್‌ ಮಲಿಕ್‌ಗೆ ಜಾಮೀನು

Nawab Malik: ನವಾಬ್‌ ಮಲಿಕ್‌ ಅವರು ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರಿಗೆ ಚಿಕಿತ್ಸೆಯ ಅಗತ್ಯವಿದೆ. ಜಾಮೀನು ಸಿಕ್ಕರೆ ಅವರನ್ನು ಆಸ್ಪತ್ರೆಗೆ ದಾಖಲಿಸಲು ಸಾಧ್ಯವಾಗುತ್ತದೆ ಎಂದು ಮಲಿಕ್ ಪರ ವಕೀಲರು ವಾದ ಮಂಡಿಸಿದರು. ಬಾಂಬೆ ಹೈಕೋರ್ಟ್‌ನಲ್ಲಿ ಸಾಮಾನ್ಯ ಜಾಮೀನು ಅರ್ಜಿಯನ್ನು ವಿಲೇವಾರಿ ಮಾಡುವವರೆಗೆ ಮಲ್ಲಿಕ್‌ಗೆ ವೈದ್ಯಕೀಯ ಜಾಮೀನು ಮಾನ್ಯವಾಗಿರುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

VISTARANEWS.COM


on

Nawab Malik
Koo

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಹಾರಾಷ್ಟ್ರದ ಮಾಜಿ ಸಚಿವ ನವಾಬ್ ಮಲಿಕ್(Nawab Malik) ಅವರಿಗೆ ವೈದ್ಯಕೀಯ ಕಾರಣಗಳಿಗಾಗಿ ಸುಪ್ರೀಂ ಕೋರ್ಟ್(Supreme Court) ಮಂಗಳವಾರ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ಇದ್ದ ನ್ಯಾಯಪೀಠ ಮಲಿಕ್‌ ಅವರಿಗೆ ಜಾಮೀನು ಮಂಜೂರು ಮಾಡಿದೆ.

ನವಾಬ್‌ ಮಲಿಕ್‌ ಅವರು ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರಿಗೆ ಚಿಕಿತ್ಸೆಯ ಅಗತ್ಯವಿದೆ. ಜಾಮೀನು ಸಿಕ್ಕರೆ ಅವರನ್ನು ಆಸ್ಪತ್ರೆಗೆ ದಾಖಲಿಸಲು ಸಾಧ್ಯವಾಗುತ್ತದೆ ಎಂದು ಮಲಿಕ್ ಪರ ವಕೀಲರು ವಾದ ಮಂಡಿಸಿದರು. ಬಾಂಬೆ ಹೈಕೋರ್ಟ್‌ನಲ್ಲಿ ಸಾಮಾನ್ಯ ಜಾಮೀನು ಅರ್ಜಿಯನ್ನು ವಿಲೇವಾರಿ ಮಾಡುವವರೆಗೆ ಮಲ್ಲಿಕ್‌ಗೆ ವೈದ್ಯಕೀಯ ಜಾಮೀನು ಮಾನ್ಯವಾಗಿರುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಇಡಿ ಪರ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್ ವಿ ರಾಜು, ಜಾಮೀನು ಮಂಜೂರಾತಿಗೆ ವಿರೋಧ ವ್ಯಕ್ತಪಡಿಸಿಲ್ಲ ಮತ್ತು ಮಧ್ಯಂತರ ವೈದ್ಯಕೀಯ ಜಾಮೀನನ್ನು ಕಾಯಂಗೊಳಿಸಬಹುದು ಎಂದರು.

ದಾವೂದ್‌ ಇಬ್ರಾಹಿಂ ಜೊತೆ ಲಿಂಕ್

ಪರಾರಿಯಾದ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಮತ್ತು ಆತನ ಸಹಚರರ ಚಟುವಟಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಫೆಬ್ರವರಿ 2022 ರಲ್ಲಿ ಇಡಿ ಮಲಿಕ್ ಅವರನ್ನು ಬಂಧಿಸಿತ್ತು.‌ ಮಲಿಕ್ ಅವರು ವಿವಿಧ ಕಾಯಿಲೆಗಳಲ್ಲದೆ ದೀರ್ಘಕಾಲದ ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿದ್ದಾರೆ ಎಂದು ಆರೋಪಿಸಿ ಹೈಕೋರ್ಟ್‌ನಲ್ಲಿ ಪರಿಹಾರ ಕೋರಿದ್ದರು. ಅರ್ಹತೆಯ ಮೇರೆಗೆ ಜಾಮೀನು ಸಹ ಕೋರಿದ್ದರು.

1993ರ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ಆರೋಪಿ ಮತ್ತು ಭೂಗತ ದೊರೆ ಭಯೋತ್ಪಾದಕ ಇಬ್ರಾಹಿಂ ಮತ್ತು ಅವನ ಸಹಚರರ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ದಾಖಲಿಸಿದ ಎಫ್‌ಐಆರ್ ಆಧರಿಸಿ ಮಲಿಕ್ ವಿರುದ್ಧ ಇಡಿ ಪ್ರಕರಣವನ್ನು ದಾಖಲಿಸಲಾಗಿದೆ.

ಇದನ್ನೂ ಓದಿ: Actor Darshan: 80 ವರ್ಷಗಳ ಹಿಂದೆ ನಡೆದಿತ್ತು ದರ್ಶನ್‌ ಮಾದರಿ ಕ್ರೈಂ! ಜೈಲು ಪಾಲಾಗಿದ್ದರು ತಮಿಳು ಸೂಪರ್ ಸ್ಟಾರ್!

Continue Reading
Advertisement
Viral Video
Latest1 min ago

Viral Video: ಹಾವನ್ನೇ ಮಣಿಸಿ ʼಸ್ನೇಹಿತʼನ ಜೀವ ಉಳಿಸಿದ ಹಲ್ಲಿ! ಅದ್ಭುತ ವಿಡಿಯೊ; ತಪ್ಪದೇ ನೋಡಿ!

Double Ismart
ಸಿನಿಮಾ5 mins ago

Double Ismart: ‘ಡಬಲ್ ಇಸ್ಮಾರ್ಟ್’ ಚಿತ್ರದ ಮೂರನೇ ಹಾಡು ರಿಲೀಸ್; ರೋಮ್ಯಾಂಟಿಕ್ ಆಗಿ ಹೆಜ್ಜೆ ಹಾಕಿದ ರಾಮ್ ಪೋತಿನೇನಿ-ಕಾವ್ಯಾ ಥಾಪರ್

Olympics 2024
ಕ್ರೀಡೆ15 mins ago

Olympics 2024: ಕಂಚು ಗೆದ್ದ ಮನು-ಸರಬ್ಜೋತ್​ ಜೋಡಿಗೆ ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ, ಐಒಸಿ ಸದಸ್ಯೆ ನೀತಾ ಅಂಬಾನಿ ಅಭಿನಂದನೆ

Viral News
Latest17 mins ago

Street Girlfriends: 115 ರೂ.ಗೆ ಚುಂಬನ, 11 ರೂ.ಗೆ ಬಿಸಿ ಅಪ್ಪುಗೆಯ ಸುಖ; ಸ್ಟ್ರೀಟ್‌ ಗರ್ಲ್‌ಫ್ರೆಂಡ್ ಟ್ರೆಂಡ್‌!

Pavel Durov
ವಿದೇಶ22 mins ago

Pavel Durov: ಮದುವೆಯಾಗದೆ 100 ಮಕ್ಕಳಿಗೆ ತಂದೆಯಾದ ಟೆಲಿಗ್ರಾಂ ಸಿಇಒ ಪಾವೆಲ್‌ ದುರೋವ್! ಈತ ರಿಯಲ್‌ ಲೈಫ್‌ ‘ವಿಕ್ಕಿ ಡೋನರ್’

UGCET 2024
ಬೆಂಗಳೂರು24 mins ago

UGCET 2024 : ಯುಜಿಸಿಇಟಿ ಆಪ್ಶನ್ ದಾಖಲಿಸಲು ಮತ್ತಷ್ಟು ದಿನ ಅವಕಾಶ

Viral Video
Latest25 mins ago

Viral Video: ಪ್ರೇಮಿಯೊಂದಿಗೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದ ಮಹಿಳೆ; ಗ್ರಾಮಸ್ಥರು ನೀಡಿದರು ಅಮಾನುಷ ಶಿಕ್ಷೆ

Murder Attempt
ಕ್ರೈಂ35 mins ago

Murder Attempt: ದಟ್ಟ ಅರಣ್ಯದಲ್ಲಿ ಮಹಿಳೆಯನ್ನು ಸರಪಳಿಯಿಂದ ಕಟ್ಟಿ ಪರಾರಿಯಾದ ಮಾಜಿ ಪತಿ!

Viral Video
ವೈರಲ್ ನ್ಯೂಸ್41 mins ago

Viral Video: ಯೋಗಿ ಆದಿತ್ಯನಾಥ್‌ ಕಾಲಿಗೆ ಎರಗಿದ ರಾಜಾ ಭಯ್ಯಾ; ಉತ್ತರ ಪ್ರದೇಶ ರಾಜಕೀಯದಲ್ಲಿ ಹೊಸ ಅಧ್ಯಾಯ ಎಂದ ನೆಟ್ಟಿಗರು

Viral Video
Latest45 mins ago

Viral Video: ಸಿಬ್ಬಂದಿಗೆ ಗನ್ ತೋರಿಸಿ ಆಭರಣ ಅಂಗಡಿ ದರೋಡೆ ಮಾಡಿದ ಹೆಲ್ಮೆಟ್‌ಧಾರಿಗಳು; ವಿಡಿಯೊ ನೋಡಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ2 hours ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ3 hours ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ22 hours ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ23 hours ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ1 day ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ2 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ2 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ2 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ2 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

Karnataka weather Forecast
ಮಳೆ3 days ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ಟ್ರೆಂಡಿಂಗ್‌