Budget 2023 | ಕೇಂದ್ರ ಬಜೆಟ್‌ನಲ್ಲಿ ಗೃಹ ಸಾಲಗಾರರ ಟಾಪ್‌ 5 ನಿರೀಕ್ಷೆಗಳೇನು? - Vistara News

ದೇಶ

Budget 2023 | ಕೇಂದ್ರ ಬಜೆಟ್‌ನಲ್ಲಿ ಗೃಹ ಸಾಲಗಾರರ ಟಾಪ್‌ 5 ನಿರೀಕ್ಷೆಗಳೇನು?

ಗೃಹ ಸಾಲಗಳ ಬಡ್ಡಿ ದರ ಏರಿಕೆಯ ಹಿನ್ನೆಲೆಯಲ್ಲಿ ಬಜೆಟ್‌ ನೆರವನ್ನು ಸಾಲಗಾರರು ನಿರೀಕ್ಷಿಸಿದ್ದಾರೆ. ಡೆವಲಪರ್‌ಗಳ ಬೇಡಿಕೆಯೂ ಇದೆ. ವಿವರ ( Budget 2023) ಇಲ್ಲಿದೆ.

VISTARANEWS.COM


on

home loan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಫೆಬ್ರವರಿ 1ರಂದು ಮಂಡನೆಯಾಗಲಿರುವ‌ 2022-23 ರ ಸಾಲಿನ ಕೇಂದ್ರ ಬಜೆಟ್‌ನಲ್ಲಿ ಗೃಹ ಸಾಲಗಾರರು ಹಲವು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ಅವುಗಳ ಬಗ್ಗೆ ನೋಡೋಣ.

2022ರಲ್ಲಿ ಗೃಹ ವಲಯ ಚೆನ್ನಾಗಿ ಬೆಳವಣಿಗೆ ಹೊಂದಿತ್ತು. ಅನಾರೋಕ್‌ ಸಂಸ್ಥೆಯ ಅಧ್ಯಯನದ ಪ್ರಕಾರ, 2021ಕ್ಕೆ ಹೋಲಿಸಿದರೆ 2022ರಲ್ಲಿ ಪ್ರಾಪರ್ಟಿಗಳ ಮಾರಾಟದಲ್ಲಿ 50% ಹೆಚ್ಚಳವಾಗಿತ್ತು. ಹೀಗಿದ್ದರೂ 2023ರಲ್ಲಿ ಹಾದಿ ಅಷ್ಟೊಂದು ಸುಗಮವಾಗಿಲ್ಲ ಎಂಬ ನಿರೀಕ್ಷೆ ಇದೆ. ಹೀಗಾಗಿ ಕೇಂದ್ರ ಬಜೆಟ್‌ ಮೇಲೆ ನಿರೀಕ್ಷೆಯ ಒತ್ತಡವೂ ಹೆಚ್ಚಿದೆ.

ಭಾರತದ ಆರ್ಥಿಕತೆಯಲ್ಲಿ ರಿಯಲ್‌ ಎಸ್ಟೇಟ್‌ ನಿರ್ಣಾಯಕವಾಗಿದೆ. ಆದರೆ ಇತ್ತೀಚಿನ ಬಡ್ಡಿ ದರ ಏರಿಕೆಗಳಿಂದ ಸವಾಲಿನ ಸಂದರ್ಭ ಸೃಷ್ಟಿಯಾಗಿದೆ. ಬ್ಯಾಂಕ್‌ಗಳು ಸ್ಪರ್ಧಾತ್ಮಕ ದರದಲ್ಲಿ ಸಾಲ ನೀಡುವುದು ರಿಯಾಲ್ಟಿ ವಲಯಕ್ಕೆ ಅನಿವಾರ್ಯವಾಗಿದೆ ಎನ್ನುತ್ತಾರೆ ಬೇಸಿಕ್‌ ಹೋಮ್‌ಲೋನ್ ಸಂಸ್ಥೆಯ ಸಿಇಒ ಅತುಲ್‌ ಮೋಂಗಾ.

ಗೃಹ ಸಾಲ ನಿಯಮಾವಳಿಗಳಲ್ಲಿ ಸುಧಾರಣೆ

home loan

ಗೃಹ ಸಾಲದ ಬಡ್ಡಿ ದರ ಇಳಿಕೆ ಅನಿವಾರ್ಯ. ಇದು ಆರ್‌ಬಿಐನ ನೀತಿಯನ್ನು ಆಧರಿಸಿದೆ. ಹೀಗಾಗಿ ಬಜೆಟ್‌ ಮೂಲಕ ಗೃಹ ಖರೀದಾರಿಗೆ ರಿಲೀಫ್‌ ನೀಡಬೇಕು. ಗೃಹ ಸಾಲ ಕುರಿತ ನಿಯಮಗಳನ್ನು ಸಡಿಲಗೊಳಿಸಿ ಸಹಕರಿಸಬೇಕು ಎನ್ನುತ್ತಾರೆ ಐಎಂಜಿಸಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಂಜು ಶರ್ಮಾ.

ಗೃಹ ಸಾಲ ಖರೀದಿಯಲ್ಲಿ ಅಗತ್ಯವಿರುವ ಡೌನ್‌ಪೇಮೆಂಟ್‌ ಮೊತ್ತವನ್ನು ಇಳಿಸುವುದರಿಂದ ಗೃಹಸಾಲಗಾರರಿಗೆ ಸಹಕರಿಸಬಹುದು ಎನ್ನುತ್ತಾರೆ ಶರ್ಮಾ.

ಹೆಚ್ಚುತ್ತಿರುವ ಬಡ್ಡಿ ದರದ ನಡುವೆ ತೆರಿಗೆ ರಿಬೇಟ್:‌

ಗೃಹ ಸಾಲಗಳ ಬಡ್ಡಿ ದರಗಳು ಹೆಚ್ಚುತ್ತಿರುವುದರಿಂದ ಗೃಹ ಸಾಲದ ಬಡ್ಡಿಯ ಮೇಲೆ ಆದಾಯ ತೆರಿಗೆ ಕಾಯಿದೆಯ ಸೆಕ್ಷನ್‌ 24(b) ಅಡಿಯಲ್ಲಿ ತೆರಿಗೆ ರಿಬೇಟ್‌ ಅನ್ನು 5 ಲಕ್ಷ ರೂ. ತನಕದ ಬಡ್ಡಿಗೆ ವಿಸ್ತರಿಸಬೇಕು. ಮೊದಲ ಸಲ ಮನೆ ಖರೀದಿಸುವವರಿಗೆ ತೆರಿಗೆ ವಿನಾಯಿತಿ ನೀಡಬೇಕು ಎನ್ನುತ್ತಾರೆ ತಜ್ಞರು.

ಅಫರ್ಡಬಲ್‌ ಹೌಸಿಂಗ್‌ ಮಿತಿಯನ್ನು ಬದಲಿಸಬೇಕು:

ಪ್ರಸ್ತುತ 45 ಲಕ್ಷ ರೂ. ತನಕ ಮೌಲ್ಯದ ಮನೆಗೆ ಅಥವಾ ಫ್ಲ್ಯಾಟ್‌ಗೆ ಅಫರ್ಡಬಲ್ ಹೌಸಿಂಗ್‌ ಎನ್ನುತ್ತಾರೆ. ಈ ಮಿತಿಯನ್ನು 75 ಲಕ್ಷ ರೂ.ಗೆ ವಿಸ್ತರಿಸಬೇಕು.

ಜಿಎಸ್‌ಟಿ ರಿಲೀಫ್

gst

ಪ್ರಸ್ತುತ ನಿರ್ಮಾಣ ಹಂತದಲ್ಲಿರುವ ಮನೆಗಳಿಗೆ ಜಿಎಸ್‌ಟಿ ಇರುವುದರಿಂದ ಡೆವಲಪರ್‌ಗಳಿಗೆ ಹೆಚ್ಚುವರಿ ತೆರಿಗೆ ಹೊರೆಯಾಗಿ ಪರಿಣಮಿಸಿದೆ. ಇದರ ಪರಿಣಾಮ ಖರೀದಿದಾರರಿಗೆ ತಗಲುವ ವೆಚ್ಚ ಹೆಚ್ಚುತ್ತದೆ. ಉಕ್ಕು ಮತ್ತು ಸಿಮೆಂಟ್‌ ಮೇಲೆ ಅನುಕ್ರಮವಾಗಿ 18% ಮತ್ತು 28% ಜಿಎಸ್‌ಟಿ ಇದೆ. ಆದ್ದರಿಂದ ಈ ಕಚ್ಚಾ ವಸ್ತುಗಳಿಗೆ ಸಂಬಂಧಿಸಿ ಡೆವಲಪರ್‌ಗಳಿಗೆ ಇನ್‌ಪುಟ್‌ ಟ್ಯಾಕ್ಸ್‌ ಕ್ರೆಡಿಟ್‌ ಸಿಗದ ಕಾರಣ (ITC) ಬಜೆಟ್‌ನಲ್ಲಿ ಒದಗಿಸಿಕೊಡಬೇಕು ಎಂಬ ಬೇಡಿಕೆ ಇದೆ.

ನಿರ್ಮಾಣ ಹಂತದಲ್ಲಿರುವ ಪ್ರಾಜೆಕ್ಟ್‌ಗಳಿಗೆ ಜಿಎಸ್‌ಟಿಗೆ 1%ರ ಮಿತಿ ಹಾಕಬೇಕು ಎಂದೂ ಡೆವಲಪರ್‌ಗಳು ಒತ್ತಾಯಿಸಿದ್ದಾರೆ.

ಬಾಡಿಗೆ ವಸತಿ:

ಭಾರತದಲ್ಲಿ ಬಾಡಿಗೆ ವಸತಿ ವಲಯ ಮಾರುಕಟ್ಟೆ ಅಷ್ಟಾಗಿ ಅಭಿವೃದ್ಧಿಯಾಗಿಲ್ಲ. ರೆಂಟಲ್‌ ಹೌಸಿಂಗ್‌ ಪ್ರಾಜೆಕ್ಟ್‌ಗಳಿಗೆ ತೆರಿಗೆ ಅನುಕೂಲ ಕಲ್ಪಿಸುವ ಮೂಲಕ ಉತ್ತೇಜನ ನೀಡಬೇಕು ಎನ್ನುತ್ತಾರೆ ತಜ್ಞರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Yuvraj Singh : ಅಪಾರ್ಟ್​ಮೆಂಟ್ ವಿತರಣೆಯಲ್ಲಿ ಮೋಸ, ರಿಯಲ್ ಎಸ್ಟೇಟ್ ಸಂಸ್ಥೆಗಳಿಗೆ ನೋಟಿಸ್​ ಕೊಟ್ಟ ಯುವರಾಜ್ ಸಿಂಗ್

Yuvraj Singh : ಈ ಸಂಸ್ಥೆಗಳು ಭರವಸೆ ನೀಡಿದಂತೆ ಸ್ವಾಧೀನದ ದೃಷ್ಟಿಯಿಂದ ಯೋಜನೆಗಳ ವಿತರಣೆಯನ್ನು ಸಹ ಸರಿಯಾದ ಸಮಯದಲ್ಲಿ ಪೂರೈಸಲಾಗಿಲ್ಲ ಎಂದು ಸಿಂಗ್ ಹೇಳಿದ್ದಾರೆ. ವಿಶೇಷವೆಂದರೆ, ಮಾಜಿ ಕ್ರಿಕೆಟ್ ತಾರೆ 2020 ರಲ್ಲಿ ದೆಹಲಿಯ ಹೌಜ್ ಖಾಸ್ ಪ್ರದೇಶದಲ್ಲಿ ವಸತಿ ಘಟಕವನ್ನು ಕಾಯ್ದಿರಿಸಿದ್ದರು.

VISTARANEWS.COM


on

Yuvraj Singh
Koo

ನವದೆಹಲಿ: ಟೀಮ್ ಇಂಡಿಯಾದ ಮಾಜಿ ಆಲ್​ರೌಂಡರ್ ಯುವರಾಜ್ ಸಿಂಗ್ (Yuvraj Singh)​ ಅವರು ದೆಹಲಿ ಮೂಲದ ರಿಯಲ್ ಎಸ್ಟೇಟ್ ಸಂಸ್ಥೆಗಳಿಗೆ ಎರಡು ಕಾನೂನು ನೋಟಿಸ್ ನೀಡಿದ್ದಾರೆ. ಈ ಸಂಸ್ಥೆಗಳು ನಡೆಸುವ ಯೋಜನೆಗಳಿಗೆ ಮೋಸದ ಪ್ರಚಾರ ಚಟುವಟಿಕೆಗಳ ಮೂಲಕ ಗೌಪ್ಯತೆ ಹಕ್ಕುಗಳ ಉಲ್ಲಂಘನೆ ಮಾಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಈ ಸಂಸ್ಥೆಗಳು ಭರವಸೆ ನೀಡಿದಂತೆ ಸ್ವಾಧೀನದ ದೃಷ್ಟಿಯಿಂದ ಯೋಜನೆಗಳ ವಿತರಣೆಯನ್ನು ಸಹ ಸರಿಯಾದ ಸಮಯದಲ್ಲಿ ಪೂರೈಸಲಾಗಿಲ್ಲ ಎಂದು ಸಿಂಗ್ ಹೇಳಿದ್ದಾರೆ. ವಿಶೇಷವೆಂದರೆ, ಮಾಜಿ ಕ್ರಿಕೆಟ್ ತಾರೆ 2020 ರಲ್ಲಿ ದೆಹಲಿಯ ಹೌಜ್ ಖಾಸ್ ಪ್ರದೇಶದಲ್ಲಿ ವಸತಿ ಘಟಕವನ್ನು ಕಾಯ್ದಿರಿಸಿದ್ದರು. ಯುವರಾಜ್ ಸಿಂಗ್ ಅವರನ್ನು ಪ್ರತಿನಿಧಿಸುವ ರಿಜ್ವಾನ್ ಲಾ ಅಸೋಸಿಯೇಟ್ಸ್ ಎಂಬ ಕಾನೂನು ಸಂಸ್ಥೆಯು ಯೋಜನೆಯ ವಿಳಂಬದಿಂದಾಗಿ ಉಂಟಾದ ಹಾನಿಯ ಕ್ಲೇಮ್​ನೊಂದಿಗೆ ನೋಟಿಸ್ ನೀಡಿದೆ.

ಇದನ್ನೂ ಓದಿ: Kavya Maran : ಸೋತಾಗ ಕಣ್ಣೀರು ಹಾಕಿದ ಕಾವ್ಯಾ ಮಾರನ್​, ​ ಡ್ರೆಸಿಂಗ್​ ರೂಮ್​ಗೆ ತೆರಳಿ ಆಟಗಾರರನ್ನೇ ನಗಿಸಿದರು; ಇಲ್ಲಿದೆ ವಿಡಿಯೊ

ಸಿಂಗ್ ಅವರಿಗೆ ಪ್ರೀಮಿಯಂ ಗುಣಮಟ್ಟದ ಅಪಾರ್ಟ್​ಮೆಂಟ್​ ಕೊಡುವೆ ಭರವಸೆ ನೀಡಲಾಗಿತ್ತು. ಆದರೆ ರಿಯಲ್ ಎಸ್ಟೇಟ್ ಕಡಿಮೆ ಗುಣಮಟ್ಟದ ಅಪಾರ್ಟ್​​ಮೆಂಟ್​ ಮಂಜೂರು ಮಾಡುವ ಮೂಲಕ ಮೋಸ ಮಾಡಿದೆ ಎಂದು ಆರೋಪಿಸಲಾಗಿದೆ. ವಿಶೇಷವೆಂದರೆ, ಈ ಯೋಜನೆ ಮೆಸರ್ಸ್ ಉಪ್ಪಲ್ ಹೌಸಿಂಗ್ ಪ್ರೈವೇಟ್ ಲಿಮಿಟೆಡ್​ ಸೇರಿದೆ. ಬೌದ್ಧಿಕ ಆಸ್ತಿ ಹಕ್ಕುಗಳನ್ನು ಉಲ್ಲಂಘಿಸಿದ್ದಕ್ಕಾಗಿ ಮತ್ತು ಗೌಪ್ಯತೆ ಹಕ್ಕುಗಳ ಉಲ್ಲಂಘನೆಗಾಗಿ ಮೆಸರ್ಸ್ ಬ್ರಿಲಿಯಂಟ್ ಎಟೋಯಿಲ್ ಪ್ರೈವೇಟ್ ಲಿಮಿಟೆಡ್ ಎಂಬ ಮತ್ತೊಂದು ಸಂಸ್ಥೆಗೆ ಎರಡನೇ ನೋಟಿಸ್ ನೀಡಲಾಗಿದೆ.

ಈ ವಿವಾದವು ಮುಖ್ಯವಾಗಿ ವ್ಯಕ್ತಿತ್ವ ಹಕ್ಕುಗಳಿಗೆ ಸಂಬಂಧಿಸಿದಂತೆ ಬೌದ್ಧಿಕ ಆಸ್ತಿ ಹಕ್ಕುಗಳ ಉಲ್ಲಂಘನೆ ಮತ್ತು ಸೆಲೆಬ್ರಿಟಿಯ ಬ್ರಾಂಡ್ ಮೌಲ್ಯದ ದುರುಪಯೋಗಕ್ಕೆ ಸಂಬಂಧಿಸಿದೆ.

ಒಪ್ಪಂದವು ಕಳೆದ ವರ್ಷ ನವೆಂಬರ ನಲ್ಲಿ ಮುಕ್ತಾಯಗೊಂಡಿತ್ತು

ರಿಯಲ್ ಎಸ್ಟೇಟ್ ಸಂಸ್ಥೆ ಕೈಗೊಂಡ ಯೋಜನೆಗಳ ಪ್ರಚಾರ ಮತ್ತು ಅನುಮೋದನೆಗೆ ಸಂಬಂಧಿಸಿದಂತೆ ಸಂಬಂಧಿತ ಪಕ್ಷಗಳು ತಿಳಿವಳಿಕೆ ಒಪ್ಪಂದಕ್ಕೆ (ತಿಳಿವಳಿಕೆ ಒಪ್ಪಂದ) ಸಹಿ ಹಾಕಿರುವುದು ಅತ್ಯಗತ್ಯ. ಆದಾಗ್ಯೂ, ಈ ತಿಳಿವಳಿಕೆ ಒಪ್ಪಂದವು ಕಳೆದ ವರ್ಷ ನವೆಂಬರ್ 23 ರಂದು ಕೊನೆಗೊಂಡಿತು. ಅದರ ಹೊರತಾಗಿಯೂ, ಸಂಸ್ಥೆಯು ಯುವರಾಜ್ ಸಿಂಗ್ ಅವರ ಹೆಸರನ್ನು ಬಿಲ್ಬೋರ್ಡ್ ಜಾಹೀರಾತುಗಳ ಮೂಲಕ ಮತ್ತು ಯೋಜನಾ ಸ್ಥಳದಲ್ಲಿ ಬಳಸುವುದನ್ನು ಮುಂದುವರಿಸಿತ್ತು.

ಸಂಸ್ಥೆಯು ಸುದ್ದಿ ಲೇಖನಗಳ ಜೊತೆಗೆ ಅವರ ವ್ಯಕ್ತಿತ್ವವನ್ನು ತಮ್ಮ ಸಾಮಾಜಿಕ ಮಾಧ್ಯಮ ಅಭಿಯಾನಗಳಲ್ಲಿ ಬಳಸುವ ಮೂಲಕ ಉಲ್ಲಂಘನೆ ಮುಂದುವರಿಸಿತ್ತು. ಇದರಿಂದಾಗಿ ಕೃತಿಸ್ವಾಮ್ಯ, ಪ್ರಚಾರದ ಹಕ್ಕು ಮತ್ತು ವ್ಯಕ್ತಿತ್ವದ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಯುವರಾಜ್ ಸಿಂಗ್ ಆರೋಪಿಸಿದ್ದಾರೆ.

Continue Reading

ದೇಶ

Viral Video: ಬೆಂಗಳೂರಿನಲ್ಲಷ್ಟೇ ಅಲ್ಲ, ಮೌಂಟ್ ಎವರೆಸ್ಟ್ ನಲ್ಲೂ ಈಗ ಟ್ರಾಫಿಕ್ ಜಾಮ್!!

ಮೌಂಟ್ ಎವರೆಸ್ಟ್ ನಲ್ಲಿ ಪರ್ವತಾರೋಹಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದು,ಈ ಬಗ್ಗೆ ಭಾರತದ ಪರ್ವತಾರೋಹಿ ರಾಜನ್ ದ್ವಿವೇದಿ ಹಂಚಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video)ಆಗಿದೆ. ಅಲ್ಲೇಕೆ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ? ಈ ಕುರಿತ ಕುತೂಹಲಕರ ವರದಿ ಇಲ್ಲಿದೆ.

VISTARANEWS.COM


on

By

Viral Video
Koo

ಮೌಂಟ್ ಎವರೆಸ್ಟ್ ನಲ್ಲಿ (Mount Everest) ಪರ್ವತಾರೋಹಿಗಳು (climber) ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದು, ಆರೋಹಿಗಳ ಉದ್ದನೆಯ ಸರತಿಯ ಬಗ್ಗೆ ಇನ್ ಸ್ಟಾಗ್ರಾಮ್ ನಲ್ಲಿ (Instagram) ಭಾರತದ (indian) ಪರ್ವತಾರೋಹಿ ರಾಜನ್ ದ್ವಿವೇದಿ (Rajan Dwivedi) ಹಂಚಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ (social media) ವೈರಲ್ (Viral Video) ಆಗಿದೆ.

ಮೌಂಟ್ ಎವರೆಸ್ಟ್ ನಲ್ಲಿ ಮಂಗಳವಾರ ಪರ್ವತಾರೋಹಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು. ಬ್ರಿಟಿಷ್ ಪರ್ವತಾರೋಹಿ ಮಾರ್ ಪ್ಯಾಟರ್ಸನ್ (39) ಮತ್ತು ನೇಪಾಳಿ ಶೆರ್ಪಾ ಪಾಸ್ತೆಂಜಿ (23) ಅವರು ಹಿಲರಿ ಹಂತವನ್ನು ಹತ್ತುವಾಗ ಕುಸಿದು ಬಿದ್ದಿದ್ದಾರೆ ಎಂದು ನ್ಯೂಯಾರ್ಕ್ ಪೋಸ್ಟ್ ವರದಿ ಮಾಡಿದೆ.

ಮೇ 20ರಂದು ರಾಜನ್ ದ್ವಿವೇದಿ ಅವರು ಇನ್ ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡ ವಿಡಿಯೋ ಅವರ ಹಿಂದೆ ಇರುವ ಆರೋಹಿಗಳ ಗುಂಪಿನ ಚಿತ್ರಣವನ್ನು ತೋರಿಸಿದೆ.

ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ದ್ವಿವೇದಿ ಅವರು ಮೌಂಟ್ ಎವರೆಸ್ಟ್ ಅನ್ನು ಏರುವಾಗ ಎದುರಾಗುವ ಸವಾಲುಗಳ ಬಗ್ಗೆ ಹೇಳಿದ್ದಾರೆ. ಒಂದೇ ಹಗ್ಗವನ್ನು ಹಿಡಿದುಕೊಂಡು ನಾವೆಲ್ಲ ಜೊತೆಯಾಗಿ ಸಾಗುತ್ತಿದ್ದೇವೆ. ಪರ್ವತ ಏರಲು, ಇಳಿಯಲು ಟ್ರಾಫಿಕ್ ತೊಂದರೆ ಎದುರಾಗಿದೆ. ಇದಕ್ಕೆ ಮುಖ್ಯ ಕಾರಣ ಇಲ್ಲಿನ ಹವಾಮಾನ. ಆರೋಹಿಗಳ ದೊಡ್ಡ ಸಾಲು ಬರುತ್ತಿರುವುದನ್ನು ನೋಡುವಾಗ ನನಗೆ ಕೆಳಗೆ ಬರುವುದು ಒಂದು ದುಃಸ್ವಪ್ನದಂತೆ ಕಂಡಿತ್ತು ಮತ್ತು ತೀವ್ರವಾಗಿ ದಣಿದಿದ್ದೆ ಎಂದು ಹೇಳಿದ್ದಾರೆ.


ದ್ವಿವೇದಿ ಆರೋಹಣದ ಮೂರು ನಿರ್ದಿಷ್ಟ ಪ್ರಯಾಸಕರ ವಿಭಾಗಗಳನ್ನು ಏರಿದ್ದಾರೆ. ಖುಂಬು ಐಸ್‌ಫಾಲ್ಸ್, ಕ್ಯಾಂಪ್ 3 ರಿಂದ ಕ್ಯಾಂಪ್ 4 ಕ್ಕೆ ಆರೋಹಣ. ಕ್ಯಾಂಪ್ 4 ರಿಂದ ಶಿಖರದ ಅಂತಿಮ ವಲಯ ಸಾವಿನ ವಲಯ ವೆಂದು ಪರಿಗಣಿಸಲ್ಪಟ್ಟಿದೆ. ಇಲ್ಲಿ ರಾತ್ರಿಯ ಸಮಯದಲ್ಲಿ ಹೆಪ್ಪುಗಟ್ಟಿದ ತಾಪಮಾನದ ನಡುವೆ ಪ್ರವಾಸ ಕೈಗೊಳ್ಳಲಾಗುತ್ತದೆ.

ಮೌಂಟ್ ಎವರೆಸ್ಟ್ ಏರುವುದು ಒಂದು ತಮಾಷೆಯ ಸಂಗತಿ ಅಲ್ಲ ಮತ್ತು ವಾಸ್ತವವಾಗಿ ಅದು ಗಂಭೀರ ಆರೋಹಣ ಎಂದು ದ್ವಿವೇದಿ ಪೋಸ್ಟ್‌ನಲ್ಲಿ ಬರೆದಿದ್ದಾರೆ. ಶಿಖರದಿಂದ ಇಳಿಯುವುದು ಸವಾಲಿನ ಕಾರ್ಯವಾಗುತ್ತಿದೆ. ವಿಶೇಷವಾಗಿ ಹವಾಮಾನ ವೈಪರೀತ್ಯದ ನಡುವೆಯೂ ಹೆಚ್ಚಿನ ಸಂಖ್ಯೆಯ ಆರೋಹಿಗಳು ಮೇಲೆ ಏರುತ್ತಿದ್ದಾರೆ ಎಂದು ದ್ವಿವೇದಿ ತಿಳಿಸಿದ್ದಾರೆ.

ಪ್ರಪಂಚದಾದ್ಯಂತ ಸುಮಾರು 500 ಆರೋಹಿಗಳು, ಹವ್ಯಾಸಿಗಳು ಮತ್ತು ಅನನುಭವಿಗಳು ಇದನ್ನು ಏರಲು ಪ್ರಯತ್ನಿಸುತ್ತಾರೆ. ಬಹುಶಃ 250- 300 ಮಂದಿ ಮಾತ್ರ ಯಶಸ್ವಿಯಾಗುತ್ತಾರೆ. ಅನೇಕರು ಗಾಯಗೊಂಡು ಪ್ರವಾಸವನ್ನು ಕೊನೆಗೊಳಿಸುತ್ತಾರೆ ಎಂದು ಅವರು ಹೇಳಿದ್ದಾರೆ.

ದ್ವಿವೇದಿ ಹಂಚಿಕೊಂಡಿರುವ ವಿಡಿಯೋವು ಒಂದು ಹಗ್ಗದ ಸಾಲಿನಲ್ಲಿ ದೀರ್ಘ ಕಾಯುವಿಕೆ ಮತ್ತು ಟ್ರಾಫಿಕ್ ಅಪ್‌ಸ್ಟ್ರೀಮ್ ಮತ್ತು ಡೌನ್‌ಸ್ಟ್ರೀಮ್‌ನಲ್ಲಿ ಇಂಟರ್‌ಚೇಂಜ್‌ಗಳ ಮಾತುಕತೆಗಳನ್ನು ತೋರಿಸುತ್ತದೆ.

ಇದನ್ನೂ ಓದಿ: Snake Bite : ಮುಳ್ಳು ಚುಚ್ಚಿದೆ ಎಂದು ನಿದ್ರೆಗೆ ಜಾರಿದವನ ಮೈ ಸೇರಿತು ಹಾವಿನ ವಿಷ! ಬೆಳಗಾಗುವಷ್ಟರಲ್ಲಿ ಮೃತ್ಯು


ಉದ್ದನೆಯ ಸರದಿಯ ಮತ್ತೊಂದು ವಿಡಿಯೋ ವನ್ನು ಹಂಚಿಕೊಂಡ ಮಾಸ್ಸಿಮೊ ಎಕ್ಸ್ ನಲ್ಲಿ ಟ್ರಾಫಿಕ್ ಜಾಮ್‌ಗಳ ಕಾರಣಗಳು, ತಾಪಮಾನದಲ್ಲಿ ತೀವ್ರ ಕುಸಿತ, ಹಗ್ಗಗಳನ್ನು ಸರಿಪಡಿಸಿದ ದಿನಾಂಕ ಮತ್ತು ನಿಧಾನ ಪ್ರಯಾಣ, ಅನನುಭವಿ ಆರೋಹಿಗಳ ಕುರಿತು ಹೇಳಿಕೊಂಡಿದ್ದಾರೆ.

ಅನೇಕ ಪರಿಸರವಾದಿಗಳು ಮತ್ತು ಆರೋಹಿಗಳು ಎವರೆಸ್ಟ್‌ನಲ್ಲಿ ಜನಸಂದಣಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಪರ್ವತದ ಮೇಲೆ ಅನೇಕ ಅಪಘಾತಗಳು ಮತ್ತು ಸಾವುಗಳ ಹೊರತಾಗಿಯೂ ನೂರಾರು ಜನರು ವಿಶ್ವದ ಅತಿ ಎತ್ತರದ ಶಿಖರವನ್ನು ಏರಲು ತಯಾರಾಗುತ್ತಾರೆ.

Continue Reading

ದೇಶ

Samsung Galaxy: ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಎಫ್ 55 5ಜಿ ಸ್ಮಾರ್ಟ್‌ಫೋನ್ ರಿಲೀಸ್‌; ಏನಿದರ ವಿಶೇಷತೆ?

Samsung Galaxy: ಭಾರತದ ಅತಿದೊಡ್ಡ ಗ್ರಾಹಕ ಎಲೆಕ್ಟ್ರಾನಿಕ್ಸ್ ಬ್ರ್ಯಾಂಡ್ ಆಗಿರುವ ಸ್ಯಾಮ್‌ಸಂಗ್, ಗ್ಯಾಲಕ್ಸಿ ಎಫ್ ಸರಣಿಯ ಅತ್ಯಂತ ಪ್ರೀಮಿಯಂ ಸ್ಮಾರ್ಟ್‌ಫೋನ್ ಗ್ಯಾಲಕ್ಸಿ ಎಫ್ 55 5ಜಿ ಅನ್ನು ಇಂದು ಬಿಡುಗಡೆ ಮಾಡಿದ್ದು, ನಯವಾಗಿ ಮತ್ತು ಸೊಗಸಾಗಿರುವ ಗ್ಯಾಲಕ್ಸಿ ಎಫ್55 5ಜಿ ಪ್ರೀಮಿಯಂ ಬ್ಯಾಕ್ ವೀಗನ್ ಲೆದರ್ ಫಿನಿಶ್ ಬ್ಯಾಕ್ ಪ್ಯಾನೆಲ್ ಅನ್ನು ಹೊಂದಿದ್ದು, ಅತ್ಯಾಕರ್ಷಕವಾಗಿ ಕಾಣಿಸುತ್ತದೆ. ಗ್ಯಾಲಕ್ಸಿ ಎಫ್55 5ಜಿ ಮೂಲಕ ಸ್ಯಾಮ್ ಸಂಗ್ ಎಫ್ ಸೀರೀಸ್ ಉತ್ಪನ್ನಗಳಲ್ಲಿಯೇ ಮೊದಲ ಬಾರಿಗೆ ಕ್ಲಾಸಿ ವೀಗನ್ ಲೆದರ್ ವಿನ್ಯಾಸದ ಸ್ಮಾರ್ಟ್‌ಫೋನ್ ಅನ್ನು ರಿಲೀಸ್‌ ಮಾಡಿದೆ.

VISTARANEWS.COM


on

Samsung Galaxy F55 5G Smartphone Released With Exciting Classy Veegan Leather Design
Koo

ಬೆಂಗಳೂರು: ಭಾರತದ ಅತಿದೊಡ್ಡ ಗ್ರಾಹಕ ಎಲೆಕ್ಟ್ರಾನಿಕ್ಸ್ ಬ್ರ್ಯಾಂಡ್ ಆಗಿರುವ ಸ್ಯಾಮ್‌ಸಂಗ್, ಗ್ಯಾಲಕ್ಸಿ ಎಫ್ ಸರಣಿಯ ಅತ್ಯಂತ ಪ್ರೀಮಿಯಂ ಸ್ಮಾರ್ಟ್‌ಫೋನ್ ಗ್ಯಾಲಕ್ಸಿ (Samsung Galaxy) ಎಫ್ 55 5ಜಿ ಅನ್ನು ಇಂದು ಬಿಡುಗಡೆ ಮಾಡಿದೆ.

ನಯವಾಗಿ ಮತ್ತು ಸೊಗಸಾಗಿರುವ ಗ್ಯಾಲಕ್ಸಿ ಎಫ್55 5ಜಿ ಪ್ರೀಮಿಯಂ ಬ್ಯಾಕ್ ವೀಗನ್ ಲೆದರ್ ಫಿನಿಶ್ ಬ್ಯಾಕ್ ಪ್ಯಾನೆಲ್ ಅನ್ನು ಹೊಂದಿದ್ದು, ಅತ್ಯಾಕರ್ಷಕವಾಗಿ ಕಾಣಿಸುತ್ತದೆ. ಗ್ಯಾಲಕ್ಸಿ ಎಫ್55 5ಜಿ ಮೂಲಕ ಸ್ಯಾಮ್ ಸಂಗ್ ಎಫ್ ಸೀರೀಸ್ ಉತ್ಪನ್ನಗಳಲ್ಲಿಯೇ ಮೊದಲ ಬಾರಿಗೆ ಕ್ಲಾಸಿ ವೀಗನ್ ಲೆದರ್ ವಿನ್ಯಾಸದ ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ.

ಗ್ಯಾಲಕ್ಸಿ ಎಫ್55 5ಜಿ ಸೂಪರ್ ಅಮೋಲ್ಡ್+ ಡಿಸ್ಪ್ಲೇ, ಶಕ್ತಿಶಾಲಿ ಸ್ನ್ಯಾಪ್ ಡ್ರಾಗನ್ 7 ಜೆನ್ 1 ಪ್ರೊಸೆಸರ್, 45ಡಬ್ಲ್ಯೂ ಸೂಪರ್-ಫಾಸ್ಟ್ ಚಾರ್ಜಿಂಗ್, 4 ಜನರೇಷನ್ ಆಂಡ್ರಾಯ್ಡ್ ಅಪ್ ಡೇಟ್‌ಗಳು ಮತ್ತು 5 ವರ್ಷಗಳ ಸೆಕ್ಯೂರಿಟಿ ಅಪ್‌ಡೇಟ್‌ಗಳಂತಹ ವಿಭಾಗ-ಶ್ರೇಷ್ಠ ಫೀಚರ್‌ಗಳನ್ನು ಹೊಂದಿದ್ದು, ಬಳಕೆದಾರರು ಮುಂದಿನ ಹಲವು ವರ್ಷಗಳ ಕಾಲ ಹೊಸ ಫೀಚರ್ ಮತ್ತು ಹೆಚ್ಚಿನ ಭದ್ರತೆಯನ್ನು ಹೊಂದಬಹುದಾಗಿದೆ.

ಇದನ್ನೂ ಓದಿ: Fortis Hospital: ವಿಶ್ವದಲ್ಲೇ ಮೊದಲ ಬಾರಿಗೆ 3 ವಿಭಿನ್ನ ಕಾಯಿಲೆಗೆ ಏಕಕಾಲದಲ್ಲೇ ಯಶಸ್ವಿ ಶಸ್ತ್ರಚಿಕಿತ್ಸೆ

ಸ್ಯಾಮ್‌ಸಂಗ್ ಇಂಡಿಯಾದ ಎಂಎಕ್ಸ್ ವಿಭಾಗದ ಹಿರಿಯ ಉಪಾಧ್ಯಕ್ಷ ರಾಜು ಪುಲ್ಲನ್ ಈ ಕುರಿತು ಮಾತನಾಡಿ, “ಗ್ಯಾಲಕ್ಸಿ ಎಫ್55 5ಜಿ ಮೂಲಕ ಸ್ಯಾಮ್ ಸಂಗ್ ಎಫ್ ಸರಣಿಯಲ್ಲಿಯೇ ಮೊದಲ ಬಾರಿಗೆ ಸ್ಯಾಡಲ್ ಸ್ಟಿಚ್ ಮಾದರಿಯ ಕ್ಲಾಸಿ ವೀಗನ್ ಲೆದರ್ ವಿನ್ಯಾಸವನ್ನು ನೀಡಲಾಗುತ್ತಿದೆ. ಗ್ಯಾಲಕ್ಸಿ ಎಫ್55 5ಜಿ ಏಪ್ರಿಕಾಟ್ ಕ್ರಶ್ ಮತ್ತು ರೈಸಿನ್ ಬ್ಲ್ಯಾಕ್ ಎಂಬ ಎರಡು ಆಕರ್ಷಕ ಬಣ್ಣಗಳಲ್ಲಿ ಬರಲಿದೆ. ಇದರ ಜತೆಗೆ, ಸೂಪರ್ ಅಮೋಲ್ಡ್+ 120ಹರ್ಟ್ಜ್ ಡಿಸ್ಪ್ಲೇ, ಶಕ್ತಿಯುತ ಸ್ನಾಪ್‌ಡ್ರಾಗನ್ ಪ್ರೊಸೆಸರ್ ಹಾಗೂ 4 ಜನರೇಷನ್‌ಗಳ ಓಎಸ್ ಅಪ್‌ಡೇಟ್‌ಗಳು, ಐದು ವರ್ಷಗಳ ಸೆಕ್ಯೂರಿಟಿ ಅಪ್‌ಡೇಟ್ ಮತ್ತು ನಾಕ್ಸ್ ಸೆಕ್ಯೂರಿಟಿ ಫೀಚರ್‌ಗಳನ್ನು ಹೊಂದಿದೆ. ಈ ಮೂಲಕ ಸ್ಯಾಮ್‌ಸಂಗ್ ತನ್ನ ಗ್ರಾಹಕರಿಗೆ ಉನ್ನತ-ಶ್ರೇಣಿಯ ಅನುಭವಗಳನ್ನು ಒದಗಿಸಲಿದೆ ಎಂದು ತಿಳಿಸಿದ್ದಾರೆ.

ಕ್ಲಾಸಿ ವೀಗನ್ ಲೆದರ್ ಡಿಸೈನ್

ಮಂತ್ರಮುಗ್ಧಗೊಳಿಸುವಂತೆ ವಿನ್ಯಾಸಗೊಳಿಸಲಾಗಿರುವ ಗ್ಯಾಲಕ್ಸಿ ಎಫ್55 5ಜಿ ವಿಶಿಷ್ಟವಾದ ಸ್ಯಾಡಲ್ ಸ್ಟಿಚ್ ಮಾದರಿ ಜತೆಗೆ ಕ್ಲಾಸಿ ವೀಗನ್ ಲೆದರ್ ಫಿನಿಶ್ ಬ್ಯಾಕ್ ಪ್ಯಾನೆಲ್ ಹೊಂದಿದೆ. ಕ್ಯಾಮೆರಾ ಡೆಕೊ ಗೋಲ್ಡನ್ ಬಣ್ಣದಲ್ಲಿ ಬರುತ್ತದೆ ಮತ್ತು ಪ್ರೀಮಿಯಂ ಲುಕ್ ಅನ್ನು ನೀಡುತ್ತದೆ. ಏಪ್ರಿಕಾಟ್ ಕ್ರಶ್ ಮತ್ತು ರೈಸಿನ್ ಬ್ಲ್ಯಾಂಕ್ ಎಂಬ ಎರಡು ಮನಮೋಹಕ ಬಣ್ಣಗಳ ಆಯ್ಕೆಗಳು ಲಭ್ಯವಿದೆ. ಸ್ಮಾರ್ಟ್‌ಫೋನ್ ಕೇವಲ 180 ಗ್ರಾಂ ತೂಗುತ್ತದೆ ಮತ್ತು 7.8 ಎಂಎಂ ಅಗಲ ಹೊಂದಿದ್ದು, ನಯವಾಗಿದೆ ಹಾಗೂ ಬಳಸುವಾಗ ಅದ್ಭುತ ಅನುಭವ ಉಂಟು ಮಾಡಲಿದೆ.

ಇದನ್ನೂ ಓದಿ: Snake Rescue: ಶಿರಾದಲ್ಲಿ ಹೆಬ್ಬಾವು ರಕ್ಷಿಸಿದ ಮಾಜಿ ಸೈನಿಕ

6.7″ ಫುಲ್ ಎಚ್ಡಿ+ ಸೂಪರ್ ಅಮೋಲ್ಡ್+ ಡಿಸ್‌ಪ್ಲೇ ಹೊಂದಿರುವ ಗ್ಯಾಲಕ್ಸಿ ಎಫ್55 5ಜಿ ಗ್ರಾಹಕರಿಗೆ ಅತ್ಯದ್ಭುತ ದೃಶ್ಯ ವೈಭವ ಮತ್ತು ಸೊಗಸಾದ ವೀಕ್ಷಣೆಯ ಅನುಭವವನ್ನು ನೀಡುತ್ತದೆ. ದೊಡ್ಡ ಡಿಸ್‌ಪ್ಲೇಯು 1000 ನಿಟ್‌ಗಳ ಸಾಮರ್ಥ್ಯದ ಹೆಚ್ಚಿನ ಬ್ರೈಟ್‌ನೆಸ್‌ ಹೊಂದಿದೆ ಮತ್ತು ವಿಷನ್ ಬೂಸ್ಟರ್ ತಂತ್ರಜ್ಞಾನದಿಂದಾಗಿ ಪ್ರಕಾಶಮಾನವಾದ ಸೂರ್ಯನ ಬೆಳಕಿನಲ್ಲಿಯೂ ಬಳಕೆದಾರರು ತಮ್ಮ ಮೊಬೈಲ್ ಅನ್ನು ಅಡೆತಡೆಯಿಲ್ಲದೆ ವೀಕ್ಷಣೆ ಮಾಡಬಹುದಾಗಿದೆ.

ಶಕ್ತಿಯುತ ಪ್ರೊಸೆಸರ್

ಗ್ಯಾಲಕ್ಸಿ ಎಫ್55 5ಜಿ 4ಎನ್ಎಂ ಕ್ವಾಲ್ಕಮ್ ಸ್ನ್ಯಾಪ್ ಡ್ರಾಗನ್ 7 ಜೆನ್ 1 ಪ್ರೊಸೆಸರ್‌ ಹೊಂದಿದ್ದು, ಬಳಕೆದಾರರಿಗೆ ನಿರರ್ಗಳವಾಗಿ ಮಲ್ಟಿ ಟಾಸ್ಕಿಂಗ್ ಮಾಡುವ ಅವಕಾಶ ಒದಗಿಸುತ್ತದೆ. 5ಜಿಯ ಅಪ್ರತಿಮ ವೇಗ ಮತ್ತು ಸಂಪರ್ಕ ಇರುವ ಕಾರಣ ಬಳಕೆದಾರರು ಎಲ್ಲಿಗೆ ಹೋದರೂ ಕನೆಕ್ಟೆಡ್ ಆಗಿರಬಹುದು ಮತ್ತು ಸಂಪರ್ಕದಲ್ಲಿರಬಹುದು. ವೇಗವಾಗಿ ಡೌನ್‌ಲೋಡ್‌, ಸುಗಮ ಸ್ಟ್ರೀಮಿಂಗ್ ಮತ್ತು ನಿರರ್ಗಳವಾಗಿ ಬ್ರೌಸಿಂಗ್ ಮಾಡಬಹುದು. ಪ್ರೊಸೆಸರ್ ಉತ್ತಮ ಗುಣಮಟ್ಟದ ಆಡಿಯೋ ಮತ್ತು ದೃಶ್ಯಗಳನ್ನು ನೀಡುವುದರ ಜತೆಗೆ ಹೈಸ್ಪೀಡ್ ಕನೆಕ್ಟಿವಿಟಿ ಹೊಂದಿದ್ದು, ಸೊಗಸಾದ ಮೊಬೈಲ್ ಗೇಮಿಂಗ್ ಅನುಭವವನ್ನು ನೀಡುತ್ತದೆ.

ನೈಟೋಗ್ರಫಿ ಕ್ಯಾಮೆರಾ

ಗ್ಯಾಲಕ್ಸಿ ಎಫ್55 5ಜಿ ಹೆಚ್ಚಿನ ರೆಸೆಲ್ಯೂಶನ್ ಹೊಂದಿರುವ ಮತ್ತು ಶೇಕ್-ಫ್ರೀ ಅಂದರೆ ಕೈ ಅಲುಗಾಡಿದರೂ ಸ್ಪಷ್ಟವಾದ ವೀಡಿಯೋ ಮತ್ತು ಫೋಟೋಗಳನ್ನು ಶೂಟ್ ಮಾಡಬಹುದಾದ 50 ಎಂಪಿ (ಓಐಎಸ್) ನೋ ಶೇಕ್ ಕ್ಯಾಮೆರಾವನ್ನು ಹೊಂದಿದೆ. ಈ ಕ್ಯಾಮೆರಾ ಕೈ ನಡುಕ ಅಥವಾ ಆಕಸ್ಮಿಕ ಅಲುಗಾಟಗಳಿಂದ ಉಂಟಾಗುವ ಮಸುಕುತನವನ್ನು ತಡೆಯುತ್ತದೆ. ಕ್ಯಾಮೆರಾ ಸೆಟಪ್ 8ಎಂಪಿ ಅಲ್ಟ್ರಾ-ವೈಡ್ ಸೆನ್ಸರ್ ಅನ್ನು ಸಹ ಒಳಗೊಂಡಿದೆ. ವಿಶೇಷವಾಗಿ ಗ್ಯಾಲಕ್ಸಿ ಎಫ್55 5ಜಿ ನೈಟೋಗ್ರಫಿ ಫೀಚರ್ ಜತೆಗೆ ಬರುತ್ತದೆ, ಈ ಫೀಚರ್ ಕಡಿಮೆ-ಬೆಳಕಿನ ಫೋಟೋಗಳು ಮತ್ತು ವೀಡಿಯೊಗಳನ್ನು ಸೆರೆಹಿಡಿಯಲು ಬಳಕೆದಾರರಿಗೆ ಅನುವು ಮಾಡಿಕೊಡುತ್ತದೆ. ಗ್ಯಾಲಕ್ಸಿ ಎಫ್55 5ಜಿ ವಿವರವಾದ, ತೀಕ್ಷ್ಣವಾದ ಸೆಲ್ಫಿ ತೆಗೆಯಲು 50ಎಂಪಿ ಸಾಮರ್ಥ್ಯದ ಹೈ ರೆಸಲ್ಯೂಶನ್ ಫ್ರಂಟ್ ಕ್ಯಾಮೆರಾವನ್ನು ಹೊಂದಿದೆ.

ಸೂಪರ್-ಫಾಸ್ಟ್ ಚಾರ್ಜಿಂಗ್

ಗ್ಯಾಲಕ್ಸಿ ಎಫ್55 5ಜಿ ಪ್ಯಾಕ್‌ಗಳು 5000 ಎಂಎಎಚ್ ಬ್ಯಾಟರಿ ಹೊಂದಿದೆ. ಅದರಿಂದ ದೀರ್ಘ ಕಾಲ ಬ್ರೌಸಿಂಗ್, ಗೇಮಿಂಗ್ ಮತ್ತು ಬಿಂಜ್ ವೀಕ್ಷಣೆ ಮಾಡಬಹುದಾಗಿದೆ. ಗ್ಯಾಲಕ್ಸಿ ಎಫ್55 5ಜಿ ಬಳಕೆದಾರರಿಗೆ ಯಾವುದೇ ಅಡೆತಡೆ ಇಲ್ಲದೆ ಆರಾಮಾಗಿ ಮೊಬೈಲ್ ಬಳಸಲು, ಸಂಪರ್ಕದಲ್ಲಿರಲು, ಮನರಂಜನೆ ನೀಡಲು ಮತ್ತು ಉತ್ಪಾದಕತೆ ಹೆಚ್ಚಿಸಲು ಅನುವು ಮಾಡಿಕೊಡುತ್ತದೆ. ಗ್ಯಾಲಕ್ಸಿ ಎಫ್55 5ಜಿ ಕಡಿಮೆ ಸಮಯದಲ್ಲಿ ಹೆಚ್ಚಿನ ಚಾರ್ಜ್ ಮಾಡಬಹುದಾದ 45ಡಬ್ಲ್ಯೂ ಸೂಪರ್-ಫಾಸ್ಟ್ ಚಾರ್ಜಿಂಗ್ ವ್ಯವಸ್ಥೆ ಹೊಂದಿದೆ.

ಇದನ್ನೂ ಓದಿ: New Financial Rules: ಜೂನ್ 1ರಿಂದ ಏನೆಲ್ಲಾ ಬದಲಾವಣೆಗಳಾಗಲಿವೆ ಗೊತ್ತಿದೆಯೆ?

ಗ್ಯಾಲಕ್ಸಿ ಎಫ್55 5ಜಿ, ಹಲವಾರು ಹೊಸ ಆವಿಷ್ಕಾರಗಳನ್ನು ಹೊಂದಿದೆ. ಇದರ ವಾಯ್ಸ್ ಫೋಕಸ್‌ ಫೀಚರ್ ವಾತಾವರಣದಲ್ಲಿನ ಶಬ್ದವನ್ನು ಕಡಿತಗೊಳಿಸಿ ಅದ್ಭುತ ಕರೆ ಅನುಭವ ನೀಡುತ್ತದೆ ಮತ್ತು ಆ ಮೂಲಕ ಗ್ರಾಹಕರ ಅನುಭವವನ್ನು ಹೆಚ್ಚಿಸಲಿದೆ. ಕ್ವಿಕ್ ಶೇರ್ ವೈಶಿಷ್ಟ್ಯವು ಬಳಕೆದಾರರಿಗೆ ಫೈಲ್‌ಗಳು, ಫೋಟೋಗಳು ಮತ್ತು ಡಾಕ್ಯುಮೆಂಟ್‌ಗಳನ್ನು ನಿಮ್ಮ ಲ್ಯಾಪ್‌ಟಾಪ್ ಮತ್ತು ಟ್ಯಾಬ್ ಸೇರಿದಂತೆ ಯಾವುದೇ ಸಾಧನ ಅದು ದೂರದಲ್ಲಿದ್ದರೂ ಕೂಡ ತ್ವರಿತವಾಗಿ ಹಂಚಿಕೊಳ್ಳಲು ಅನುವು ಮಾಡಿಕೊಡುತ್ತದೆ. ಹೆಚ್ಚುವರಿಯಾಗಿ, ಸ್ಯಾಮ್ ಸಂಗ್ ಗ್ಯಾಲಕ್ಸಿ ಎಫ್55 5ಜಿ ನೊಂದಿಗೆ ನಾಲ್ಕು ಜನರೇಷನ್‌ಗಳ ಓಎಸ್ ಅಪ್‌ಡೇಟ್‌ಗಳು ಮತ್ತು ಐದು ವರ್ಷಗಳ ಸೆಕ್ಯೂರಿಟಿ ಅಪ್ ಡೇಟ್‌ಗಳನ್ನು ಒದಗಿಸುತ್ತಿದ್ದು, ಬಳಕೆದಾರರು ಮುಂಬರುವ ವರ್ಷಗಳಲ್ಲಿ ಹೊಸ ವೈಶಿಷ್ಟ್ಯಗಳನ್ನು ಮತ್ತು ಹೆಚ್ಚಿನ ಭದ್ರತೆಯನ್ನು ಆನಂದಿಸಬಹುದು ಎಂಬುದನ್ನು ಖಚಿತಪಡಿಸುತ್ತದೆ.

Continue Reading

ದೇಶ

Narendra Modi: ರಾಹುಲ್‌ ಗಾಂಧಿ, ಕೇಜ್ರಿವಾಲ್‌ಗೆ ಪಾಕ್‌ ಬೆಂಬಲ; ತನಿಖೆಯಾಗಲಿ ಎಂದ ಮೋದಿ

Narendra Modi: ಅರವಿಂದ ಕೇಜ್ರಿವಾಲ್‌ ಹಾಗೂ ರಾಹುಲ್‌ ಗಾಂಧಿ ಅವರಿಗೆ ಪಾಕಿಸ್ತಾನದ ನಾಯಕರು ಬಾಹ್ಯ ಬೆಂಬಲ ನೀಡುತ್ತಿರುವ ಕುರಿತು ತನಿಖೆಯಾಗಬೇಕಿದೆ ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ ಸಂದರ್ಶನವೊಂದರಲ್ಲಿ ಹೇಳಿದ್ದಾರೆ. ಇತ್ತೀಚೆಗೆ, ಪಾಕಿಸ್ತಾನದ ಕೆಲ ನಾಯಕರು ಇಬ್ಬರ ಪರವಾಗಿ ಪೋಸ್ಟ್‌ ಮಾಡಿದ್ದರು. ಹಾಗಾಗಿ, ಮೋದಿ ಅವರು ವಾಗ್ದಾಳಿ ನಡೆಸಿದ್ದಾರೆ.

VISTARANEWS.COM


on

Narendra Modi
Koo

ನವದೆಹಲಿ: ಲೋಕಸಭೆ ಚುನಾವಣೆ (Lok Sabha Election 2024) ಕೊನೆಯ ಹಂತಕ್ಕೆ ಬಂದರೂ ರಾಜಕೀಯ ನಾಯಕರ ಅಬ್ಬರದ ಹೇಳಿಕೆ, ಟೀಕೆ, ವ್ಯಂಗ್ಯ, ವಾಗ್ವಾದಗಳು ನಿಲ್ಲುತ್ತಿಲ್ಲ. ಇದಕ್ಕೆ ನಿದರ್ಶನ ಎಂಬಂತೆ, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಹಾಗೂ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್‌ (Arvind Kejriwal) ಅವರ ವಿರುದ್ಧ ಪ್ರಧಾನಿ ನರೇಂದ್ರ ಮೋದಿ (Narendra Modi) ವಾಗ್ದಾಳಿ ನಡೆಸಿದ್ದಾರೆ. “ಅರವಿಂದ ಕೇಜ್ರಿವಾಲ್‌ ಹಾಗೂ ರಾಹುಲ್‌ ಗಾಂಧಿ ಅವರಿಗೆ ಪಾಕಿಸ್ತಾನದ ನಾಯಕರು ಬೆಂಬಲ ನೀಡುತ್ತಿರುವ ಕುರಿತು ತನಿಖೆಯಾಗಬೇಕಿದೆ” ಎಂಬುದಾಗಿ ಪ್ರಧಾನಿ ಹೇಳಿದ್ದಾರೆ.

ಐಎಎನ್‌ಎಸ್‌ ಸುದ್ದಿಸಂಸ್ಥೆಗೆ ಸಂದರ್ಶನ ನೀಡುವ ವೇಳೆ ಮೋದಿ ಅವರು ಈ ವಿಷಯ ಪ್ರಸ್ತಾಪಿಸಿದ್ದಾರೆ. ಪಾಕಿಸ್ತಾನದ ನಾಯಕರ ಬೆಂಬಲದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮೋದಿ, “ನಾನು ಪ್ರಧಾನಿ ಸ್ಥಾನ ಹೊಂದಿದ್ದು, ಅಂತಹ ವಿಷಯಗಳ ಬಗ್ಗೆ ಮಾತನಾಡಬಾರದು. ಆದರೆ, ನಿಮ್ಮ ಕಾಳಜಿ ನನಗೆ ಅರ್ಥವಾಗುತ್ತದೆ. ಕೆಲವರು ನಮ್ಮ ವಿರುದ್ಧ ದ್ವೇಷ ಕಾರುತ್ತಾರೆ. ಆ ದ್ವೇಷ ಕಾರುವವರೇ ನಮ್ಮ ನಾಯಕರಿಗೆ ಬೆಂಬಲ ಸೂಚಿಸುತ್ತಾರೆ. ಆಯ್ಕೆಯ ಆಧಾರದ ಮೇಲೆಯೇ ದ್ವೇಷ ಕಾರುವವರು ಬೆಂಬಲ ನೀಡುತ್ತಾರೆ. ಈ ಕುರಿತು ತನಿಖೆಯಾಗಬೇಕಿದೆ” ಎಂಬುದಾಗಿ ನರೇಂದ್ರ ಮೋದಿ ಹೇಳಿದರು.

ಏನಿದು ಪ್ರಕರಣ?

ಮೇ ತಿಂಗಳ ಆರಂಭದಲ್ಲಿ ಪಾಕಿಸ್ತಾನದ ಮಾಜಿ ಸಚಿವ ಚೌಧರಿ ಫವಾದ್‌ ಅವರು ರಾಹುಲ್‌ ಗಾಂಧಿ ಅವರ ಪೋಸ್ಟ್‌ಅನ್ನು ಹಂಚಿಕೊಂಡು, ಅವರ ಕುರಿತು ಮೆಚ್ಚುಗೆಯ ಮಾತುಗಳನ್ನಾಡಿದ್ದರು. ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಜಾಮೀನು ಸಿಕ್ಕಾಗಲೂ ಚೌಧರಿ ಫವಾದ್‌ ಪ್ರತಿಕ್ರಿಯಿಸಿದ್ದರು. ಆಗ ಅವರು, “ಅರವಿಂದ್‌ ಕೇಜ್ರಿವಾಲ್‌ ಬಿಡುಗಡೆಯಾಗಿದ್ದಾರೆ. ಇದರಿಂದ ಮೋದಿ ಮತ್ತೊಂದು ಯುದ್ಧ ಸೋತಂತಾಗಿದೆ. ಇದು ಭಾರತಕ್ಕೆ ಶುಭ ಸುದ್ದಿ” ಎಂದಿದ್ದರು. ಚುನಾವಣೆ ವೇಳೆಯೂ, “ದ್ವೇಷ ಹಾಗೂ ತೀವ್ರವಾದದ ವಿರುದ್ಧ ಶಾಂತಿ ಹಾಗೂ ಸಾಮರಸ್ಯ ಗೆಲ್ಲುತ್ತದೆ ಎಂಬ ವಿಶ್ವಾಸವಿದೆ” ಎಂದು ಚೌಧರಿಯು ಕೇಜ್ರಿವಾಲ್‌ ಅವರ ಪೋಸ್ಟ್‌ಗೆ ಪ್ರತಿಕ್ರಿಯಿಸಿದ್ದರು.

ಮಣಿಶಂಕರ್‌ ಅಯ್ಯರ್‌ಗೆ ಟಾಂಗ್‌ ಕೊಟ್ಟಿದ್ದ ಮೋದಿ

ಕೆಲ ದಿನಗಳ ಹಿಂದೆ ಇಂಡಿಯಾ ಟಿವಿ ಚಾನೆಲ್‌ ಜತೆ ಸಂವಾದ ನಡೆಸುವ ವೇಳೆ, ಮಣಿಶಂಕರ್‌ ಅಯ್ಯರ್‌ ಹೇಳಿಕೆ ಕುರಿತು ಸಂದರ್ಶಕ ಕೇಳಿದ ಪ್ರಶ್ನೆಗೆ ನರೇಂದ್ರ ಮೋದಿ ಅವರು ಮಾರ್ಮಿಕವಾಗಿ ಉತ್ತರ ನೀಡಿದರು. “ನಾನೇ ಲಾಹೋರ್‌ಗೆ ತೆರಳಿ ಆ ಪಾಕಿಸ್ತಾನದ ಶಕ್ತಿ ಎಷ್ಟಿದೆ ಎಂಬುದನ್ನು ನೋಡಿಕೊಂಡು ಬಂದಿದ್ದೇನೆ. ನನ್ನನ್ನು ನೋಡಿ, ಪಾಕಿಸ್ತಾನದ ಒಬ್ಬ ಪತ್ರಕರ್ತ ಆಶ್ಚರ್ಯದಿಂದ ಕೇಳಿದ. ‘ವೀಸಾ ಇಲ್ಲದೆ ನೀವೇಗೆ ಇಲ್ಲಿಗೆ ಬಂದಿದ್ದೀರಿ’ ಎಂದ. ಅದಕ್ಕೆ ನಾನು, ‘ಪಾಕಿಸ್ತಾನ ಒಂದು ಕಾಲಕ್ಕೆ ನಮ್ಮದೇ ದೇಶದ ಭಾಗವಾಗಿತ್ತು’ ಎಂಬುದಾಗಿ ಉತ್ತರಿಸಿದೆ” ಎಂಬುದಾಗಿ ನರೇಂದ್ರ ಮೋದಿ ಹೇಳಿದ್ದಾರೆ. ಆ ಮೂಲಕ ಮಣಿಶಂಕರ್‌ ಅಯ್ಯರ್‌ ಹೇಳಿಕೆಗೆ ವ್ಯಂಗ್ಯವಾಗಿಯೇ ಉತ್ತರ ಕೊಟ್ಟಿದ್ದರು.

ಇದನ್ನೂ ಓದಿ: Varanasi: ಮೋದಿ ಕುರಿತು ವಾರಾಣಸಿಯಲ್ಲಿರುವ ಕನ್ನಡಿಗರು ಏನಂತಾರೆ? ಇಲ್ಲಿದೆ ‘ವಿಸ್ತಾರ ನ್ಯೂಸ್’ ಗ್ರೌಂಡ್‌ ರಿಪೋರ್ಟ್!

Continue Reading
Advertisement
Vijayapura news
ಪ್ರಮುಖ ಸುದ್ದಿ3 hours ago

Vijayapura News : ಪ್ರೀತಿಸಿದವಳನ್ನೇ ಮದುವೆಯಾಗಲು ಯುವಕನ ಹಠ; ಪರಸ್ಪರ ಪೆಟ್ರೋಲ್ ಎರಚಿ ಬೆಂಕಿ ಹಚ್ಚಿಕೊಂಡು ಆಸ್ಪತ್ರೆ ಸೇರಿದರು!

Prajwal Revanna Case
ಪ್ರಮುಖ ಸುದ್ದಿ3 hours ago

Prajwal Revanna Case : ಮಾಜಿ ಶಾಸಕ ಪ್ರೀತಂ ಗೌಡ ಆಪ್ತ ಚೇತನ್​ಗೆ ಎಸ್ಐಟಿ ನೋಟಿಸ್

Yuvraj Singh
ಕ್ರೀಡೆ4 hours ago

Yuvraj Singh : ಅಪಾರ್ಟ್​ಮೆಂಟ್ ವಿತರಣೆಯಲ್ಲಿ ಮೋಸ, ರಿಯಲ್ ಎಸ್ಟೇಟ್ ಸಂಸ್ಥೆಗಳಿಗೆ ನೋಟಿಸ್​ ಕೊಟ್ಟ ಯುವರಾಜ್ ಸಿಂಗ್

Kavya Maran
ಪ್ರಮುಖ ಸುದ್ದಿ4 hours ago

Kavya Maran : ಸೋತಾಗ ಕಣ್ಣೀರು ಹಾಕಿದ ಕಾವ್ಯಾ ಮಾರನ್​, ​ ಡ್ರೆಸಿಂಗ್​ ರೂಮ್​ಗೆ ತೆರಳಿ ಆಟಗಾರರನ್ನೇ ನಗಿಸಿದರು; ಇಲ್ಲಿದೆ ವಿಡಿಯೊ

Viral Video
ದೇಶ4 hours ago

Viral Video: ಬೆಂಗಳೂರಿನಲ್ಲಷ್ಟೇ ಅಲ್ಲ, ಮೌಂಟ್ ಎವರೆಸ್ಟ್ ನಲ್ಲೂ ಈಗ ಟ್ರಾಫಿಕ್ ಜಾಮ್!!

Samsung Galaxy F55 5G Smartphone Released With Exciting Classy Veegan Leather Design
ದೇಶ4 hours ago

Samsung Galaxy: ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಎಫ್ 55 5ಜಿ ಸ್ಮಾರ್ಟ್‌ಫೋನ್ ರಿಲೀಸ್‌; ಏನಿದರ ವಿಶೇಷತೆ?

Kannada New Movie
ಕರ್ನಾಟಕ5 hours ago

Kannada New Movie: ʼಬ್ಯಾಂಕ್ ಆಫ್‌ ಭಾಗ್ಯಲಕ್ಷ್ಮಿʼ ಚಿತ್ರದ ಅನಿಮೇಷನ್‌ ಟೀಸರ್‌ ರಿಲೀಸ್‌

Golden Star Ganesh Krishnam Pranaya Sakhi movie first song release in Mysore
ಕರ್ನಾಟಕ5 hours ago

Golden Star Ganesh: ಮೊದಲ ಹಾಡಿನಲ್ಲೇ ಮೋಡಿ ಮಾಡಿದ ʼಕೃಷ್ಣಂ ಪ್ರಣಯ ಸಖಿʼ

Mandya News
ಪ್ರಮುಖ ಸುದ್ದಿ5 hours ago

Mandya News : ಬೆಳ್ಳೂರಿನಲ್ಲಿ ಮುಸ್ಲಿಮ್ ಯುವಕರ ಗುಂಪಿನಿಂದ ಅಭಿಲಾಷ್​ ಎಂಬುವರ ಮೇಲೆ ಮಾರಕ ಹಲ್ಲೆ

11th Annual Mahotsav of Sri Annapurneswari Temple in Belagavi from 29th May
ಬೆಳಗಾವಿ5 hours ago

Belagavi News: ಬೆಳಗಾವಿಯಲ್ಲಿ ಮೇ 29ರಿಂದ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದ 11ನೇ ವಾರ್ಷಿಕ ಮಹೋತ್ಸವ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ9 hours ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 day ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 day ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ5 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ6 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು7 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು7 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ1 week ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಟ್ರೆಂಡಿಂಗ್‌