Sanjay Singh | 21 ವರ್ಷ ಹಿಂದಿನ ಪ್ರಕರಣದಲ್ಲಿ ಆಪ್ ಸಂಸದನಿಗೆ 3 ತಿಂಗಳು ಜೈಲು ಶಿಕ್ಷೆ! ಏನಿದು ಕೇಸ್? - Vistara News

ದೇಶ

Sanjay Singh | 21 ವರ್ಷ ಹಿಂದಿನ ಪ್ರಕರಣದಲ್ಲಿ ಆಪ್ ಸಂಸದನಿಗೆ 3 ತಿಂಗಳು ಜೈಲು ಶಿಕ್ಷೆ! ಏನಿದು ಕೇಸ್?

ಆಮ್‌ ಆದ್ಮಿ ಪಕ್ಷದ ರಾಜ್ಯ ಸಭಾ ಸದಸ್ಯ ಸಂಜಯ್‌ ಸಿಂಗ್‌ (Sanjay Singh) ಅವರಿಗೆ ನ್ಯಾಯಾಲಯ ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ. 2001ರಲ್ಲಿ ಅವರು ನಡೆಸಿದ ಪ್ರತಿಭಟನೆ ಪ್ರಕರಣ ಸಂಬಂಧ ಈ ಶಿಕ್ಷೆ ನೀಡಲಾಗಿದೆ.

VISTARANEWS.COM


on

Sanjay Singh
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಕ್ನೋ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರ ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸದಸ್ಯ ಸಂಜಯ್‌ ಸಿಂಗ್‌ (Sanjay Singh) ಅವರಿಗೆ ನ್ಯಾಯಾಲಯ ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ಉತ್ತರಪ್ರದೇಶದ ಸುಲ್ತಾನ್‌ಪುರದವರಾಗಿರುವ ಅವರು 2001ರಲ್ಲಿ ನಡೆಸಿದ್ದ ಪ್ರತಿಭಟನೆಯ ಸಂಬಂಧ ಇದೀಗ ಸಂಸದರು ಮತ್ತು ಶಾಸಕರ ನ್ಯಾಯಾಲಯವು ಈ ಶಿಕ್ಷೆ ನೀಡಿದೆ. ಅವರೊಂದಿಗೆ ಸಮಾಜವಾದಿ ಪಕ್ಷದ ಮಾಜಿ ಶಾಸಕ ಅನೂಪ್‌ ಸಂದ ಸೇರಿ ಒಟ್ಟು ಐವರಿಗೆ ಶಿಕ್ಷೆ ನೀಡಲಾಗಿದೆ. ಈ ಆರು ಮಂದಿ ತಲಾ 1,500 ರೂ. ದಂಡ ಪಾವತಿಸಬೇಕೆಂದು ನ್ಯಾಯಾಲಯ ಆದೇಶಿಸಿದೆ.

ಇದನ್ನೂ ಓದಿ: AAP MLAs | ಗುಜರಾತ್‌ ಆಪ್ ಶಾಸಕರ ಜತೆಗೆ ಮೂವರು ಪಕ್ಷೇತರ ಎಂಎಲ್‌ಎಗಳು ಬಿಜೆಪಿಗೆ?


2001ರಲ್ಲಿ ಉತ್ತರಪ್ರದೇಶದಲ್ಲಿ ರಾಜನಾಥ ಸಿಂಗ್‌ ಅವರ ಬಿಜೆಪಿ ಸರ್ಕಾರವಿತ್ತು. ಆ ವೇಳೆ ಸುಲ್ತಾನ್‌ಪುರದಲ್ಲಿ ವಿದ್ಯುತ್‌ ಕಡಿತ ಹಾಗೂ ನೀರಿನ ಸಂಪರ್ಕ ಸರಿಯಿಲ್ಲವೆಂದು ದೂರಿ ಸಂಜಯ್‌ ಸಿಂಗ್‌ ಪ್ರತಿಭಟನೆ ನಡೆಸಿದ್ದರು. ಅವರಿಗೆ ಅನೇಕ ನಾಯಕರು ಹಾಗೂ ಕಾರ್ಯಕರ್ತರು ಸಾಥ್‌ ಕೊಟ್ಟಿದ್ದರು. ಪ್ರತಿಭಟನೆಯ ಉಗ್ರ ರೂಪ ಪಡೆದುಕೊಂಡಿದ್ದು, ಸಾರ್ವಜನಿಕರಿಗೆ ತೊಂದರೆಯುಂಟಾಗಿತ್ತು. 2001ರ ಜೂನ್‌ 19ರಂದು ಈ ಪ್ರತಿಭಟನೆ ನಡೆದಿದ್ದು, ಪೊಲೀಸರು ಐಪಿಸಿ ಸೆಕ್ಷನ್‌ 143 ಮತ್ತು 341 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು.

ಇದನ್ನೂ ಓದಿ: BJP Poaching AAP | ದೆಹಲಿಯ ಒಬ್ಬ ಕೌನ್ಸಿಲರ್‌ಗೆ ಬಿಜೆಪಿ 10 ಕೋಟಿ ರೂ. ಆಫರ್‌, ಆಪ್‌ ಗಂಭೀರ ಆರೋಪ

ಆ ಪ್ರಕರಣದ ತೀರ್ಪನ್ನು ನ್ಯಾಯಾಲಯ ಈಗ ನೀಡಿದೆ. ತೀರ್ಪಿನ ವೇಳೆ ನ್ಯಾಯಾಲಯದಲ್ಲಿದ್ದ ಸಂಜಯ್‌ ಸಿಂಗ್‌ ಅವರು ಬಿಜೆಪಿಯಿಂದಾಗಿ ಪ್ರಕರಣ ಉಗ್ರ ರೂಪ ತಾಳಿತು. ಇಲ್ಲವಾದಲ್ಲಿ ಶಾಂತಿಯುತ ಹೋರಾಟವಾಗಿರುತ್ತಿತ್ತು ಎಂದು ದೂರಿದ್ದಾರೆ. ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರುವುದಾಗಿ ಅವರು ಹೇಳಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Amit Shah: ಹೊಸ ಕ್ರಿಮಿನಲ್ ಕಾನೂನಿನಲ್ಲಿ ಶಿಕ್ಷೆಯ ಬದಲು ನ್ಯಾಯಕ್ಕೆ ಪ್ರಾಧಾನ್ಯತೆ; ಅಮಿತ್ ಶಾ

Amit Shah: ಇಂದು ಜಾರಿಗೆ ಬಂದ ಮೂರು ಹೊಸ ಕ್ರಿಮಿನಲ್ ಕಾನೂನುಗಳು ಶಿಕ್ಷೆಯ ಬದಲಿಗೆ ನ್ಯಾಯವನ್ನು ಖಚಿತಪಡಿಸಲಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ವಸಾಹತುಶಾಹಿ ಯುಗದ ಅಪರಾಧ ಸಂಹಿತೆಯ ಕೂಲಂಕಷ ಪರಿಶೀಲನೆ ನಡೆಸಿ ನ್ಯಾಯ ವ್ಯವಸ್ಥೆಗೆ ʼಭಾರತೀಯ ಆತ್ಮʼವನ್ನು ಸೇರಿಸಲಾಗಿದೆ ಎಂದು ಹೇಳಿದ್ದಾರೆ.

VISTARANEWS.COM


on

Amith Shah
Koo

ನವದೆಹಲಿ: ಇಂದು (ಜುಲೈ 1) ಜಾರಿಗೆ ಬಂದ ಮೂರು ಹೊಸ ಕ್ರಿಮಿನಲ್ ಕಾನೂನು (New Criminal Laws)ಗಳು ಶಿಕ್ಷೆಯ ಬದಲಿಗೆ ನ್ಯಾಯವನ್ನು ಖಚಿತಪಡಿಸಲಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಹೇಳಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಸ್ವಾತಂತ್ರ್ಯ ಪಡೆದು 77 ವರ್ಷಗಳ ಬಳಿಕ ದೇಶವು ಸಂಪೂರ್ಣವಾಗಿ ‘ಸ್ವದೇಶಿ’ ಕಾನೂನು ವ್ಯವಸ್ಥೆಯನ್ನು ಹೊಂದಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ವಸಾಹತುಶಾಹಿ ಯುಗದ ಅಪರಾಧ ಸಂಹಿತೆಯ ಕೂಲಂಕಷ ಪರಿಶೀಲನೆ ನಡೆಸಿ ನ್ಯಾಯ ವ್ಯವಸ್ಥೆಗೆ ʼಭಾರತೀಯ ಆತ್ಮʼವನ್ನು ಸೇರಿಸಲಾಗಿದೆ ಎಂದು ಹೇಳಿದ್ದಾರೆ. ಭಾರತೀಯ ದಂಡ ಸಂಹಿತೆ (IPC-1860), ಭಾರತೀಯ ಅಪರಾಧ ಪ್ರಕ್ರಿಯಾ ಸಂಹಿತೆ (CrPC-1973) ಹಾಗೂ ಭಾರತೀಯ ಸಾಕ್ಷ್ಯ ಕಾಯ್ದೆಗಳನ್ನು (Indian Evidence Act-1872) ತಿದ್ದುಪಡಿಗೆ ಒಳಪಡಿಸಲಾಗಿದೆ. ಇವುಗಳ ಬದಲಾಗಿ ಮೂರು ಹೊಸ ಕಾನೂನುಗಳು (New Laws) ಇಂದಿನಿಂದಲೇ (ಜುಲೈ 1) ದೇಶಾದ್ಯಂತ ಜಾರಿಗೆ ಬಂದಿವೆ.

ಅಮಿತ್‌ ಶಾ ಹೇಳಿದ್ದೇನು?

ಮಹಿಳೆಯರ ವಿರುದ್ಧದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ʼʼಹೊಸ ಕಾನೂನು ಸಂತ್ರಸ್ತೆಯ ಹೇಳಿಕೆಯನ್ನು ಅವರ ಮನೆಯಲ್ಲಿ ದಾಖಲಿಸಲು ಅವಕಾಶ ನೀಡುತ್ತದೆ ಮತ್ತು ಸಾಮಾಜಿಕ ಕಳಂಕದಿಂದ ಆಕೆಯನ್ನು ರಕ್ಷಿಸುವ ಉದ್ದೇಶದಿಂದ ಆನ್‌ಲೈನ್‌ ಎಫ್ಐಆರ್ ಸೌಲಭ್ಯವನ್ನೂ ಜಾರಿಗೆ ತರಲಾಗಿದೆ” ಎಂದು ತಿಳಿಸಿದ್ದಾರೆ.

“ಸಾಮಾಹಿಕ ಹತ್ಯೆ ಪ್ರಕರಣದ ಬಗ್ಗೆ ಈ ಹಿಂದೆ ಯಾವುದೇ ಪ್ರತ್ಯೇಕ ಕಾನೂನಿನ ಪ್ರಸ್ತಾವ ಇರಲಿಲ್ಲ. ಈಗ ಅದಕ್ಕೂ ಅವಕಾಶ ಕಲ್ಪಿಸಲಾಗಿದೆ. ಇದು ಬಹುದಿನಗಳ ಬೇಡಿಕೆಯಾಗಿತ್ತು. ಅಲ್ಲದೆ ನಾವು ದೇಶದ್ರೋಹದ ವಿಭಾಗವನ್ನು ಸಂಪೂರ್ಣವಾಗಿ ತೆಗೆದು ಹಾಕಿದ್ದೇವೆ ಮತ್ತು ರಾಷ್ಟ್ರ ವಿರೋಧಿ ಚಟುವಟಿಕೆಗಳಿಗಾಗಿ ಹೊಸ ವಿಭಾಗವನ್ನು ತಂದಿದ್ದೇವೆ. ಈ ಹಿಂದೆ ಸರ್ಕಾರದ ವಿರುದ್ಧ ಹೇಳಿಕೆ ನೀಡುವುದು ಅಪರಾಧವಾಗಿತ್ತು. ಈಗ ಭಾರತದ ಏಕತೆ ಮತ್ತು ಸಾರ್ವಭೌಮತ್ವಕ್ಕೆ ಹಾನಿ ಮಾಡುವ ಪ್ರಯತ್ನಗಳ ವಿರುದ್ಧ ಕ್ರಮ ಕೈಗೊಳ್ಳಲು ಕಾನೂನು ಅವಕಾಶ ನೀಡುತ್ತದೆ” ಎಂದು ಅಮಿತ್‌ ಶಾ ವಿವರಿಸಿದ್ದಾರೆ.

ಹೊಸ ಕ್ರಿಮಿನಲ್ ಕಾನೂನುಗಳು ಆಧುನಿಕ ಕಾನೂನು ವ್ಯವಸ್ಥೆಯನ್ನು ವ್ಯಾಖ್ಯಾನಿಸುತ್ತವೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ. “ನಾವು ಕೇವಲ ತಂತ್ರಜ್ಞಾನವನ್ನು ಅಳವಡಿಸಿಕೊಂಡಿಲ್ಲ, ಮುಂದಿನ 50 ವರ್ಷಗಳಲ್ಲಿ ಸಂಭವಿಸಬಹುದಾದ ತಾಂತ್ರಿಕ ಬದಲಾವಣೆಗಳನ್ನು ಊಹಿಸಿ ಅದಕ್ಕೆ ತಕ್ಕಂತೆ ಬದಲಾವಣೆ ತಂದಿದ್ದೇವೆ. ಇದು ವಿಶ್ವದ ಅತ್ಯಂತ ಆಧುನಿಕ ಕ್ರಿಮಿನಲ್ ನ್ಯಾಯ ವ್ಯವಸ್ಥೆಯಾಗಲಿದೆ ಎನ್ನುವ ವಿಶ್ವಾಸವಿದೆʼʼ ಎಂದಿದ್ದಾರೆ.

ʼʼದಾಳಿ ಮತ್ತು ಶೋಧದ ವೇಳೆ ವಿಡಿಯೊಗ್ರಫಿ ಈಗ ಕಡ್ಡಾಯವಾಗಿದೆ. ಇದರಿಂದ ಯಾರನ್ನೂ ಮೋಸ ಮಾಡಲು ಸಾಧ್ಯವಿಲ್ಲ. ಅತ್ಯಾಚಾರ ಅಥವಾ ಲೈಂಗಿಕ ಕಿರುಕುಳದಿಂದ ಬದುಕುಳಿದವರ ಇ-ಸ್ಟೇಟ್‌ಮೆಂಟ್‌ಗೆ ಇನ್ನು ಕಾನೂನು ಮಾನ್ಯತೆ ಇರಲಿದೆʼʼ ಎಂದು ಅವರು ತಿಳಿಸಿದ್ದಾರೆ.

ಪ್ರತಿಪಕ್ಷಗಳ ನಡೆಗೆ ಟೀಕೆ

ಹೊಸ ಕಾನೂನುಗಳ ಬಗ್ಗೆ ಸರಿಯಾಗಿ ಚರ್ಚಿಸಲಾಗಿಲ್ಲ ಮತ್ತು 146 ವಿರೋಧ ಪಕ್ಷದ ಸಂಸದರನ್ನು ಅಮಾನತುಗೊಳಿಸಿದ ನಂತರ ಸಂಸತ್ತಿನಲ್ಲಿ ಇದನ್ನು ಅಂಗೀಕರಿಸಲಾಗಿದೆ ಎಂದು ವಿರೋಧ ಪಕ್ಷ ಆರೋಪಕ್ಕೂ ಅಮಿತ್‌ ಶಾ ಉತ್ತರಿಸಿದ್ದಾರೆ. ʼʼಸಂಸದರನ್ನು ಸಾಮೂಹಿಕವಾಗಿ ಅಮಾನತುಗೊಳಿಸಿದ ನಂತರ ಮಸೂದೆಗಳನ್ನು ತರಲಾಗಿದೆ ಎಂಬುದು ಮತ್ತೊಂದು ಸುಳ್ಳು. ಹೊಸ ಕಾನೂನು ಜಾರಿಗೊಳಿಸುವ ಮುನ್ನ ನಮ್ಮ ಸಚಿವಾಲಯವು ಎಲ್ಲ ಸಂಸದರು, ಮುಖ್ಯಮಂತ್ರಿಗಳು, ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ ನ್ಯಾಯಾಧೀಶರು ಮತ್ತು ಅಧಿಕಾರಿಗಳಿಂದ ಸಲಹೆ ಪಡೆದುಕೊಂಡಿದೆ. ಈ ಎಲ್ಲ ಸಲಹೆಗಳನ್ನು ಅಧ್ಯಯನ ಮಾಡಲಾಗಿದೆ. ಈ ವಿಷಯದ ಬಗ್ಗೆ ಚರ್ಚಿಸಲು ನಾನು 158 ಸಭೆಗಳ ಅಧ್ಯಕ್ಷತೆ ವಹಿಸಿದ್ದೇನೆ. ಮಸೂದೆಯ ಚರ್ಚೆ ವೇಳೆ ಎಲ್ಲ ಪಕ್ಷಗಳ ಸದಸ್ಯರು ಭಾಗವಹಿಸಿದ್ದರು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: New Criminal Laws : ಹೊಸ ಕ್ರಿಮಿನಲ್ ಕಾನೂನು ಇಂದಿನಿಂದ ಜಾರಿ; ಏನು ಬದಲಾವಣೆ? ಕಂಪ್ಲೀಟ್ ಡೀಟೆಲ್ಸ್​ ಇಲ್ಲಿದೆ!

ʼʼನಾಲ್ಕೈದು ರಾಜಕೀಯ ಶೈಲಿಯ ಸಲಹೆಗಳನ್ನು ಹೊರತುಪಡಿಸಿ, ಪ್ರತಿಯೊಂದು ಸಲಹೆಯನ್ನು ಅಳವಡಿಸಿಕೊಳ್ಳಲಾಗಿದೆ. ಜತೆಗೆ 93 ತಿದ್ದುಪಡಿಗಳನ್ನು ಮಾಡಲಾಗಿದೆ. ಮಸೂದೆಯನ್ನು ಮತ್ತೆ ಕ್ಯಾಬಿನೆಟ್ ಅನುಮೋದಿಸಿದ ಬಳಿಕ ಅದನ್ನು ಸಂಸತ್ತಿನಲ್ಲಿ ಮಂಡಿಸಲಾಯಿತು. ಶತಮಾನಗಳ ನಂತರ ನಡೆಯುತ್ತಿರುವ ಇಂತಹ ಬದಲಾವಣೆಗೆ ರಾಜಕೀಯ ಬಣ್ಣ ನೀಡುವುದು ಸರಿಯಲ್ಲ. ಏನಾದರೂ ಸಂದೇಹಗಳಿದ್ದರೆ ನೇರ ನನ್ನ ಬಳಿಗೆ ಬಂದರೆ ಚರ್ಚೆ ನಡೆಸಲು ಸಿದ್ಧʼʼ ಎಂದು ತಿಳಿಸಿದ್ದಾರೆ.

Continue Reading

ದೇಶ

Parliament Sessions: ಹಿಂದೂ ಹಿಂಸಾವಾದಿ ಹೇಳಿಕೆ; ಸಂಸತ್‌ನಲ್ಲಿ ರಾಹುಲ್‌-ಮೋದಿ ಜಟಾಪಟಿ

Parliament Sessions: ಬಿಜೆಪಿ ಹಾಗೂ ಅದರ ಮಿತ್ರ ಪಕ್ಷಗಳ ವಿರುದ್ಧ ವಾಗ್ದಾಳಿ ಆರಂಭಿಸಿದ ರಾಹುಲ್‌, ಹಿಂದೂ ಧರ್ಮ ಹಾಗೂ ನಮ್ಮ ಅನೇಕ ಹಿಂದೂ ಮಹಾಪುರುಷರು ಅಹಿಂಸೆಯನ್ನು ಪ್ರತಿಪಾದಿಸುತ್ತಾರೆ. ಜೀಸಸ್‌ ಕ್ರೈಸ್ಟ್‌ ಕೂಡ ಅಹಿಂಸೆಯನ್ನೇ ಪ್ರತಿಪಾದಿಸುತ್ತಾನೆ. ಸ್ವತಃ ಕೈಯಲ್ಲಿ ತ್ರಿಶೂಲ ಹಿಡಿದಿರುವ ಮಹಾಶಿವನೂ ಅಹಿಂಸೆಯನ್ನೇ ಹೇಳುತ್ತಾನೆ. ಆದರೆ ದಿನದ 24 ಹಿಂದೂಗಳೆಂದು ಹೇಳುತ್ತಾ ತಿರುಗಾಡುವವರು ಹಿಂಸೆ, ಶತ್ರುತ್ವ, ಅಸತ್ಯವನ್ನೇ ಹೇಳುತ್ತಿದ್ದಾರೆ. ನೀವು ಹಿಂದೂಗಳೇ ಅಲ್ಲ ಎಂದು ಕಿಡಿ ಕಾರಿದರು

VISTARANEWS.COM


on

Parliament Sessions
Koo

ಹೊಸದಿಲ್ಲಿ: ದಿನದ 24 ಗಂಟೆ ಹಿಂದೂಗಳೆಂದು ಹೇಳಿಕೊಂಡು ತಿರುಗುವವರು ಹಿಂಸಾಚಾರದಲ್ಲಿ ತೊಡಗಿದ್ದಾರೆ ಎಂದು ಸಂಸತ್‌ ಅಧಿವೇಶನ(Parliament Sessions)ದಲ್ಲಿ ವಿಪಕ್ಷ ನಾಯಕ ರಾಹುಲ್‌ ಗಾಂಧಿ(Rahul Gandhi) ಹೇಳಿಕೆ ನೀಡಿದ್ದು, ಈ ವಿಚಾರ ಭಾರೀ ಕೋಲಾಹಲವನ್ನೇ ಸೃಷ್ಟಿಸಿತ್ತು. ರಾಹುಲ್‌ ಹೇಳಿಕೆಗೆ ಪ್ರಧಾನಿ ನರೇಂದ್ರ ಮೋದಿ(PM Narendra Modi) ಸೇರಿದಂತೆ ಆಡಳಿತ ಪಕ್ಷ ನಾಯಕರು ಭಾರೀ ವಿರೋಧ ವ್ಯಕ್ತಪಡಿಸಿದ್ದು, ಮಾತ್ರವಲ್ಲದೇ ತಕ್ಷಣ ರಾಹುಲ್‌ ಕ್ಷಮೆಯಾಚಿಸಬೇಕೆಂದು ಪಟ್ಟು ಹಿಡಿದ ಘಟನೆಗೆ ಇಂದು ಲೋಕಸಭೆ ಸಾಕ್ಷಿಯಾಯ್ತು.

ರಾಹುಲ್‌ ಹೇಳಿದ್ದೇನು?

ಬಿಜೆಪಿ ಹಾಗೂ ಅದರ ಮಿತ್ರ ಪಕ್ಷಗಳ ವಿರುದ್ಧ ವಾಗ್ದಾಳಿ ಆರಂಭಿಸಿದ ರಾಹುಲ್‌, ಹಿಂದೂ ಧರ್ಮ ಹಾಗೂ ನಮ್ಮ ಅನೇಕ ಹಿಂದೂ ಮಹಾಪುರುಷರು ಅಹಿಂಸೆಯನ್ನು ಪ್ರತಿಪಾದಿಸುತ್ತಾರೆ. ಜೀಸಸ್‌ ಕ್ರೈಸ್ಟ್‌ ಕೂಡ ಅಹಿಂಸೆಯನ್ನೇ ಪ್ರತಿಪಾದಿಸುತ್ತಾನೆ. ಸ್ವತಃ ಕೈಯಲ್ಲಿ ತ್ರಿಶೂಲ ಹಿಡಿದಿರುವ ಮಹಾಶಿವನೂ ಅಹಿಂಸೆಯನ್ನೇ ಹೇಳುತ್ತಾನೆ. ಆದರೆ ದಿನದ 24 ಗಂಟೆ ಹಿಂದೂಗಳೆಂದು ಹೇಳುತ್ತಾ ತಿರುಗಾಡುವವರು ಹಿಂಸೆ, ಶತ್ರುತ್ವ, ಅಸತ್ಯವನ್ನೇ ಹೇಳುತ್ತಿದ್ದಾರೆ. ನೀವು ಹಿಂದೂಗಳೇ ಅಲ್ಲ ಎಂದು ಕಿಡಿ ಕಾರಿದರು.

ಪ್ರಧಾನಿ ಮೋದಿ ಆಕ್ಷೇಪ

ಇನ್ನು ರಾಹುಲ್‌ ಮಾತು ಪುರ್ಣಗೊಳ್ಳುವ ಮುನ್ನವೇ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಆಡಳಿತ ಪಕ್ಷ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಎಲ್ಲಾ ಹಿಂದೂಗಳನ್ನು ಹಿಂಸಾವಾದಿಗಳು ಹೇಳುತ್ತಿರುವುದು ತಪ್ಪು. ಹಿಂದೂಗ ಸಮುದಾಯವನ್ನು ಹಿಂಸಾವಾದಿಗಳೆಂದು ಕರೆಯುತ್ತಿರುವುದು ಗಂಭೀರವಾದ ಸಂಗತಿ ಎಂದಿದ್ದಾರೆ. ಇದಕ್ಕೆ ವಿರೋದ ವ್ಯಕ್ತಪಡಿಸಿದ ರಾಹುಲ್‌ ಕೇವಲ ಬಿಜೆಪಿ, ಆರ್‌ಎಸ್‌ಎಸ್‌ ನವರನ್ನು “ನಾನು ಉಲ್ಲೇಖಿಸಿ ಹೇಳಿರುವುದೇ ಹೊರತು ಪೂರ್ತಿ ಹಿಂದೂ ಸಮಾಜವನ್ನಲ್ಲ. ಪ್ರಧಾನಿ ಹೇಳಿಕೆಯನ್ನು ತಪ್ಪಾಗಿ ಅರ್ಥೈಸುತ್ತಿದ್ದಾರೆʼʼ ಎಂದು ಹೇಳಿದರು.

ಇನ್ನು ರಾಹುಲ್‌ ಹೇಳಿಕೆಗೆ ಬಿಜೆಪಿ ನಾಯಕರು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ತಕ್ಷಣ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: Indian Armed Forces: ಸಹಪಾಠಿಗಳು ಈ ಭಾರತೀಯ ಸೇನೆ ಮತ್ತು ನೌಕಾಪಡೆ ಮುಖ್ಯಸ್ಥರು; ಇದು ದೇಶದ ಇತಿಹಾಸದಲ್ಲೇ ಮೊದಲು!

Continue Reading

ದೇಶ

Sheikh Abdul Rashid: ಸೆರೆಮನೆಯಿಂದ ನೇರ ಸಂಸತ್‌ಗೆ! ಜೈಲಿನಿಂದಲೇ ಸ್ಪರ್ಧಿಸಿ ಗೆದ್ದ ʼಉಗ್ರರ ಬೆಂಬಲಿಗʼನ ಪ್ರಮಾಣವಚನಕ್ಕೆ NIA ಅಸ್ತು

Sheikh Abdul Rashid: ಜೈಲಿನಲ್ಲಿರುವ ಕಾರಣ ಜೂ.24ರಂದು ನಡೆದ ಪ್ರಮಾಣವಚನ ಸ್ವೀಕಾರ ಸಭಾರಂಭದಲ್ಲಿ ರಶೀದ್‌ಗೆ ಪ್ರಮಾಣ ವಚನ ಸ್ವೀಕರಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಪ್ರಮಾಣವಚನಕ್ಕೆ ಅವಕಾಶ ಕಲ್ಪಿಸುವಂತೆ ಆತ ಕೋರ್ಟ್‌ ಮೊರೆ ಹೋಗಿದ್ದು, ಇದಕ್ಕೆ ಪ್ರತಿಕ್ರಿಯಿಸುವಂತೆ ಕೋರ್ಟ್‌ ಹೇಳಿತ್ತು. 2017 ರ ಜಮ್ಮು ಮತ್ತು ಕಾಶ್ಮೀರ ಭಯೋತ್ಪಾದನೆ ನಿಧಿ ಪ್ರಕರಣದಲ್ಲಿ ಬಂಧಿತರಾಗಿರುವ ಬಾರಾಮುಲ್ಲಾ ಸಂಸದ ರಶೀದ್ ಅವರು ಪ್ರಮಾಣ ವಚನ ಸ್ವೀಕರಿಸಲು ಮತ್ತು ಸಂಸತ್ತಿನ ಕಾರ್ಯಗಳನ್ನು ನಿರ್ವಹಿಸಲು ಮಧ್ಯಂತರ ಜಾಮೀನು ಅಥವಾ ಪರ್ಯಾಯವಾಗಿ ಕಸ್ಟಡಿ ಪೆರೋಲ್ ಕೋರಿ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದ.

VISTARANEWS.COM


on

Sheikh Abdul Rashid
Koo

ಹೊಸದಿಲ್ಲಿ: ಲೋಕಸಭೆ ಚುನಾವಣೆಯಲ್ಲಿ ಜೈಲಿನಿಂದಲೇ ಸ್ಪರ್ಧಿಸಿ ಸಂಸದರಾಗಿ ಆಯ್ಕೆಯಾಗಿರುವ ಕಾಶ್ಮೀರಿ ನಾಯಕ ಶೇಖ್ ಅಬ್ದುಲ್ ರಶೀದ್ (Sheikh Abdul Rashid) ಸಂಸದನಾಗಿ ಪ್ರಮಾಣವಚನ ಸ್ವೀಕರಿಸಲು ಎನ್‌ಐಎ ಅನುಮತಿ ನೀಡಿದೆ. ಭಯೋತ್ಪಾದಕರಿಗೆ ಹಣಕಾಸಿನ ನೆರವು ಒದಗಿಸಿದ ಆರೋಪ ಎದುರಿಸುತ್ತಿರುವ ಎಂಜಿನಿಯರ್ ರಶೀದ್ ಎಂದೇ ಜನಪ್ರಿಯವಾಗಿರುವ ಶೇಖ್ ಅಬ್ದುಲ್ ರಶೀದ್ ಜು. 25ರಂದು ಪ್ರಮಾಣವಚನ ಸ್ವೀಕರಿಸಲಿದ್ದು, ಈ ಬಗ್ಗೆ ದಿಲ್ಲಿ ಕೋರ್ಟ್‌ನ ಹೆಚ್ಚುವರಿ ನ್ಯಾಯಾಧೀಶ ಚಂದರ್‌ ಜಿತ್‌ ಸಿಂಗ್‌(Chander Jit Singh) ಆದೇಶ ಹೊರಡಿಸಲಿದ್ದಾರೆ.

ಜೈಲಿನಲ್ಲಿರುವ ಕಾರಣ ಜೂ.24ರಂದು ನಡೆದ ಪ್ರಮಾಣವಚನ ಸ್ವೀಕಾರ ಸಭಾರಂಭದಲ್ಲಿ ರಶೀದ್‌ಗೆ ಪ್ರಮಾಣ ವಚನ ಸ್ವೀಕರಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಪ್ರಮಾಣವಚನಕ್ಕೆ ಅವಕಾಶ ಕಲ್ಪಿಸುವಂತೆ ಆತ ಕೋರ್ಟ್‌ ಮೊರೆ ಹೋಗಿದ್ದು, ಇದಕ್ಕೆ ಪ್ರತಿಕ್ರಿಯಿಸುವಂತೆ ಕೋರ್ಟ್‌ ಹೇಳಿತ್ತು. 2017 ರ ಜಮ್ಮು ಮತ್ತು ಕಾಶ್ಮೀರ ಭಯೋತ್ಪಾದನೆ ನಿಧಿ ಪ್ರಕರಣದಲ್ಲಿ ಬಂಧಿತರಾಗಿರುವ ಬಾರಾಮುಲ್ಲಾ ಸಂಸದ ರಶೀದ್ ಅವರು ಪ್ರಮಾಣ ವಚನ ಸ್ವೀಕರಿಸಲು ಮತ್ತು ಸಂಸತ್ತಿನ ಕಾರ್ಯಗಳನ್ನು ನಿರ್ವಹಿಸಲು ಮಧ್ಯಂತರ ಜಾಮೀನು ಅಥವಾ ಪರ್ಯಾಯವಾಗಿ ಕಸ್ಟಡಿ ಪೆರೋಲ್ ಕೋರಿ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದ.

ಇದೀಗ ಎನ್‌ಐಎ ಅನುಮತಿ ನೀಡಿದ್ದು, ಸೋಮವಾರ, ಎನ್‌ಐಎ ಪರ ವಕೀಲರು ರಶೀದ್ ಪ್ರಮಾಣ ವಚನ ಸ್ವೀಕಾರವು ಮಾಧ್ಯಮಗಳೊಂದಿಗೆ ಮಾತನಾಡದಂತಹ ಕೆಲವು ಷರತ್ತುಗಳಿಗೆ ಒಳಪಟ್ಟಿರುತ್ತದೆ ಎಂದು ಹೇಳಿದರು. ಒಂದು ದಿನದೊಳಗೆ ರಶೀದ್ ಎಲ್ಲವನ್ನೂ ಪೂರ್ಣಗೊಳಿಸಬೇಕು ಎಂದು ಅವರು ತಿಳಿಸಿದ್ದಾರೆ.

ಯಾರು ಈ ಶೇಖ್ ಅಬ್ದುಲ್ ರಶೀದ್?

ಇಂಜಿನಿಯರ್ ರಶೀದ್ ಪ್ರಸ್ತುತ ಭಯೋತ್ಪಾದನೆ ನಿಧಿ ಪ್ರಕರಣದಲ್ಲಿ ದೆಹಲಿಯ ತಿಹಾರ್ ಜೈಲಿನಲ್ಲಿದ್ದಾನೆ. ಅವಾಮಿ ಇತ್ತೆಹಾದ್ ಪಕ್ಷದ ಮುಖ್ಯಸ್ಥ, ಎರಡು ಬಾರಿ ಶಾಸಕನಾಗಿದ್ದ ರಶೀದ್‌ನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) 2019 ರಲ್ಲಿ ಭಯೋತ್ಪಾದನೆ-ಧನಸಹಾಯ ಚಟುವಟಿಕೆಗಳ ಆರೋಪದ ಮೇಲೆ ಬಂಧಿಸಿತ್ತು. ಈ ಬಾರಿಯ ಚುನಾವಣೆಯಲ್ಲಿ ಆತ ನ್ಯಾಷನಲ್‌ ಕಾನ್ಫರೆನ್ಸ್‌ನ ಓಮರ್‌ ಅಬ್ದುಲ್ಲಾ ವಿರುದ್ಧ ಸ್ಪರ್ಧಿಸಿ 4,7,2481 ಮತಗಳನ್ನು ಗಳಿಸಿದ್ದಾನೆ. ಒಮ್ಮೆಯೂ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಮಾಡದ ರಶೀದ್ 2,04,142 ಮತಗಳ ಭಾರೀ ಅಂತರದಿಂದ ಗೆದ್ದಿದ್ದಾನೆ.

ಅಮೃತ್‌ ಸಿಂಗ್‌ ಪ್ರಮಾಣವಚನ ಸ್ವೀಕರಿಸಿಲ್ಲ

ಇನ್ನು ಜೈಲಿನಿಂದಲೇ ಸ್ಪರ್ಧಿಸಿ ಅಭೂತಪೂರ್ವ ಗೆಲುವು ಸಾಧಿಸಿರುವ ಖಲಿಸ್ತಾನಿ ಪ್ರತ್ಯೇಕತಾವಾದಿ ಅಮೃತಪಾಲ್‌ ಸಿಂಗ್‌ ಕೂಡ ಪ್ರಮಾಣವಚನ ಸ್ವೀಕರಿಸಿಲ್ಲ. ಅಮೃತಸರದ ಜಲ್ಲುಪುರ್‌ ಖೇರಾ ಎಂಬ ಗ್ರಾಮದಲ್ಲಿ 1993ರಲ್ಲಿ ಜನಿಸಿದ ಅಮೃತ್‌ಪಾಲ್‌, 12ನೇ ತರಗತಿವರೆಗೆ ಓದಿದ್ದಾನೆ. 2012ರಲ್ಲಿ ಭಾರತ ತೊರೆದು, ದುಬೈಯಲ್ಲಿ ತನ್ನ ಚಿಕ್ಕಪ್ಪನ ಟ್ರಾನ್ಸ್‌ಪೋರ್ಟ್‌ ಕಂಪನಿಯಲ್ಲಿ ದುಡಿದ. ಈತ ಪಂಜಾಬ್‌ನ ಪೊಲೀಸರ ಹಾಗೂ ರಾಜಕಾರಣಿಗಳ ಗಮನಕ್ಕೆ ಬಂದುದೇ ಕೆಲವು ದಿನಗಳ ಹಿಂದೆ- ʼವಾರಿಸ್‌ ಪಂಜಾಬ್‌ ದೇʼ ಸಂಘಟನೆಯ ಮುಖ್ಯಸ್ಥನಾಗಿ ನಿಯುಕ್ತನಾದ ಸಂದರ್ಭದಲ್ಲಿ. ಈ ಸಂಘಟನೆಯನ್ನು ಸ್ಥಾಪಿಸಿದವನು ನಟ, ಚಳವಳಿಗಾರ ದೀಪ್‌ ಸಿಧು. ಇವನು 2022ರ ಫೆಬ್ರವರಿಯಲ್ಲಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದ. ಇವನನ್ನು ಸರ್ಕಾರ ಸಾಯಿಸಿದೆ ಎಂದು ಅಮೃತ್‌ಪಾಲ್‌ ಮತ್ತು ಬೆಂಬಲಿಗರು ಆರೋಪಿಸುತ್ತ ಬಂದಿದ್ದಾರೆ. ಅಮೃತ್‌ಪಾಲ್‌ ಯಾವತ್ತೂ ಸಿಧುವನ್ನು ಭೇಟಿ ಮಾಡಿದವನೇ ಅಲ್ಲ. ಆದರೆ ಆನ್‌ಲೈನ್‌ನಲ್ಲಿ ತನ್ನನ್ನು ಅತ್ಯಂತ ಪ್ರಭಾವಿಸಿದ್ದ ಎಂದು ಹೇಳಿಕೊಳ್ಳುತ್ತಾನೆ. ಸಿಧುವಿನ ಸಾವಿನ ವಾರ್ಷಿಕೋತ್ಸವದ ಸಂದರ್ಭದಲ್ಲಿ, ಸಿಧುವಿನ ಸಲಹೆಯಂತೆ ತಾನು ಗಡ್ಡ ಟ್ರಿಮ್‌ ಮಾಡಿಕೊಳ್ಳುವುದು ಬಿಟ್ಟಿರುವುದಾಗಿ ಹೇಳಿದ್ದ.

ಹಲವು ಸಮಯದಿಂದ ಆತ ಫೇಸ್‌ಬುಕ್‌ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಖಲಿಸ್ತಾನ್ ಪರ ಪೋಸ್ಟ್‌ಗಳನ್ನು ಹಾಕುತ್ತಿದ್ದ. 2021ರಲ್ಲಿ ಕೆಂಪು ಕೋಟೆಯ ಮೇಲೆ ನಡೆದ ಗುಂಪು ದಾಳಿಯ ವೇಳೆ ಅದರ ನೇತೃತ್ವ ವಹಿಸಿದ್ದ ದೀಪ್‌ ಸಿಧುವಿನ ಕೃತ್ಯವನ್ನು ಈತ ಸಮರ್ಥಿಸಿಕೊಂಡಿದ್ದ. 2022ರಲ್ಲಿ ಪಂಜಾಬ್‌ನಲ್ಲಿ ಅಮೃತ್‌ಪಾಲ್‌ನನ್ನು ಅರೆಸ್ಟ್‌ ಮಾಡಲಾಗಿತ್ತು.

ಇದನ್ನೂ ಓದಿ: Indian Armed Forces: ಸಹಪಾಠಿಗಳು ಈ ಭಾರತೀಯ ಸೇನೆ ಮತ್ತು ನೌಕಾಪಡೆ ಮುಖ್ಯಸ್ಥರು; ಇದು ದೇಶದ ಇತಿಹಾಸದಲ್ಲೇ ಮೊದಲು!

Continue Reading

ದೇಶ

Parliament Sessions: ಲೋಕಸಭೆಯಲ್ಲಿ ನೀಟ್‌ ವಿವಾದ ಚರ್ಚೆಗೆ ಆಗ್ರಹಿಸಿ ಸಭಾತ್ಯಾಗ ಮಾಡಿದ ಪ್ರತಿಪಕ್ಷ

Parliament Sessions: 18ನೇ ಲೋಕಸಭೆಯ ಮೊದಲ ಅಧಿವೇಶನ ದ ಎರಡನೇ ವಾರದ ಮೊದಲ ದಿನವಾದ ಸೋಮವಾರ ನೀಟ್‌ ವಿಚಾರವಾಗಿ ಕೋಲಾಹಲ ಎದ್ದು, ಕಾಂಗ್ರೆಸ್‌ ನೇತೃತ್ವದ ಪ್ರತಿಪಕ್ಷದ ನಾಯಕರು ಸಭಾತ್ಯಾಗ ಮಾಡಿದರು. ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ನೀಟ್‌ ವಿವಾದದ ಬಗ್ಗೆ ಚರ್ಚೆ ನಡೆಸಲು ಪ್ರತ್ಯೇಕ ಒಂದು ದಿನ ಮೀಸಲಿಡಬೇಕು ಎಂದು ಕಲಾಪ ಆರಂಭವಾಗುತ್ತಿದ್ದಂತೆ ಪ್ರತಿಪಕ್ಷದ ನಾಯಕರು ಬೇಡಿಕೆ ಮುಂಡಿಟ್ಟರು. ಆದರೆ ಸರ್ಕಾರ ಇದಕ್ಕೆ ಒಪ್ಪದೆ ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಯನ್ನು ಮುಂದುವರಿಸಲು ಮುಂದಾಯಿತು.

VISTARANEWS.COM


on

Parliament Sessions
Koo

ನವದೆಹಲಿ: 18ನೇ ಲೋಕಸಭೆಯ ಮೊದಲ ಅಧಿವೇಶನ (Parliament Sessions)ದ ಎರಡನೇ ವಾರದ ಮೊದಲ ದಿನವಾದ ಸೋಮವಾರ (ಜುಲೈ 1) ನೀಟ್‌ (NEET) ವಿಚಾರವಾಗಿ ಕೋಲಾಹಲ ಎದ್ದು, ಕಾಂಗ್ರೆಸ್‌ ನೇತೃತ್ವದ ಪ್ರತಿಪಕ್ಷದ ನಾಯಕರು ಸಭಾತ್ಯಾಗ ಮಾಡಿದರು (Opposition walks out).

ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ನೀಟ್‌ ವಿವಾದದ ಬಗ್ಗೆ ಚರ್ಚೆ ನಡೆಸಲು ಪ್ರತ್ಯೇಕ ಒಂದು ದಿನ ಮೀಸಲಿಡಬೇಕು ಎಂದು ಕಲಾಪ ಆರಂಭವಾಗುತ್ತಿದ್ದಂತೆ ಪ್ರತಿಪಕ್ಷದ ನಾಯಕರು ಬೇಡಿಕೆ ಮುಂಡಿಟ್ಟರು. ಆದರೆ ಸರ್ಕಾರ ಇದಕ್ಕೆ ಒಪ್ಪದೆ ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಯನ್ನು ಮುಂದುವರಿಸಲು ಮುಂದಾಯಿತು. ಇದರಿಂದ ಲೋಕಸಭೆಯಲ್ಲಿ ಕೋಲಾಹಲವೇ ಸೃಷ್ಟಿಯಾಯಿತು.

ರಾಹುಲ್‌ ಗಾಂಧಿ ಹೇಳಿದ್ದೇನು?

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿ ದೇಶಾದ್ಯಂತ ಸುಮಾರು 2 ಕೋಟಿ ವಿದ್ಯಾರ್ಥಿಗಳು ತೊಂದರೆಗೆ ಸಿಲುಕಿದ್ದಾರೆ. ಹೀಗಾಗಿ ನೀಟ್‌ ವಿವಾದದ ಬಗ್ಗೆ ಚರ್ಚೆ ನಡೆಸಲು ಅವಕಾಶ ಒದಗಿಸಬೇಕು ಎಂದು ಪ್ರತಿಪಕ್ಷಗಳ ನಾಯಕ ರಾಹುಲ್‌ ಗಾಂಧಿ ಅವರು ಲೋಕಸಭಾ ಸ್ಪೀಕರ್‌ ಓಂ ಬಿರ್ಲಾ ಅವರ ಬಳಿ ಮನವಿ ಮಾಡಿದರು. “ನಾವು ನೀಟ್ ಬಗ್ಗೆ ಒಂದು ದಿನದ ಚರ್ಚೆ ನಡೆಸಲು ಆಗ್ರಹಿಸುತ್ತಿದ್ದೇವೆ. ಇದು ಒಂದು ಪ್ರಮುಖ ವಿಷಯವಾಗಿದ್ದು, ಎರಡು ಕೋಟಿಗೂ ಹೆಚ್ಚು ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರಿದೆ. 70 ಬಾರಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ಈ ವಿಷಯದ ಬಗ್ಗೆ ಪ್ರತ್ಯೇಕ ಚರ್ಚೆಗೆ ನೀವು ಅವಕಾಶ ನೀಡಬೇಕು” ಎಂದು ರಾಹುಲ್ ಗಾಂಧಿ ಹೇಳಿದರು.

ರಾಹುಲ್ ಗಾಂಧಿ ಅವರ ಬೇಡಿಕೆಗೆ ಪ್ರತಿಕ್ರಿಯಿಸಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು, ಸದನವು ವಂದನಾ ನಿರ್ಣಯವನ್ನು ಪೂರ್ಣಗೊಳಿಸುವವರೆಗೆ ಚರ್ಚೆಗೆ ಅವಕಾಶ ನೀಡುವುದಿಲ್ಲ ಎಂದು ತಿಳಿಸಿದರು. “ಸಂಸದನಾಗಿ ನನ್ನ ದಶಕಗಳ ಅನುಭವದಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಸಮಯದಲ್ಲಿ ಬೇರೆ ಯಾವುದೇ ವಿಷಯವನ್ನು ಕೈಗೆತ್ತಿಕೊಂಡಿರುವುದನ್ನು ನೋಡಿಲ್ಲ. ವಂದನಾ ನಿರ್ಣಯವನ್ನು ಅಂಗೀಕರಿಸಿದ ನಂತರ ಇತರ ಸಮಸ್ಯೆಗಳನ್ನು ಎತ್ತಬಹುದು” ಎಂದು ಅವರು ತಿಳಿಸಿದರು.

ಇಷ್ಟಕ್ಕೆ ತೃಪ್ತರಾಗದ ರಾಹುಲ್ ಗಾಂಧಿ ಮತ್ತು ಇತರ ಪ್ರತಿಪಕ್ಷದ ನಾಯಕರು ವಂದನಾ ನಿರ್ಣಯದ ಮೇಲಿನ ಚರ್ಚೆಯ ನಂತರ ನೀಟ್ ವಿಷಯವನ್ನು ಚರ್ಚಿಸಲಾಗುವುದು ಎಂದು ಸರ್ಕಾರ ಭರವಸೆ ನೀಡುವಂತೆ ಆಗ್ರಹಿಸಿದರು.

ʼʼವಂದನಾ ನಿರ್ಣಯದ ಮೇಲಿನ ಚರ್ಚೆಯ ಸಮಯದಲ್ಲಿ ಬೇರೆ ಯಾವುದೇ ವಿಷಯವನ್ನು ತೆಗೆದುಕೊಳ್ಳುವ ಸಂಪ್ರದಾಯವಿಲ್ಲ ಮತ್ತು ಸದಸ್ಯರು ನೀಟ್ ಮೇಲಿನ ಚರ್ಚೆಗೆ ಪ್ರತ್ಯೇಕ ನೋಟಿಸ್ ನೀಡಬಹುದುʼʼ ಎಂದು ಸ್ಪೀಕರ್ ಓಂ ಬಿರ್ಲಾ ಹೇಳಿದರು. ಬಳಿಕ ಅವರು ವಂದನಾ ನಿರ್ಣಯದ ಮೇಲಿನ ಚರ್ಚೆಯನ್ನು ಪ್ರಾರಂಭಿಸುವಂತೆ ಬಿಜೆಪಿ ಸಂಸದ ಅನುರಾಗ್ ಠಾಕೂರ್ ಅವರಿಗೆ ಸೂಚಿಸಿದರು. ಈ ವೇಳೆ ಪ್ರತಿಪಕ್ಷಗಳು ಸರ್ಕಾರ ಸ್ಪಷ್ಟ ಭರವಸೆ ನೀಡುವಂತೆ ಒತ್ತಾಯಿಸಿ ಸಭಾತ್ಯಾಗ ಮಾಡಿದವು.

ಇದನ್ನೂ ಓದಿ: Karnataka Politics: ಸ್ಥಾನ ಭದ್ರಪಡಿಸಲು ದೆಹಲಿಯಲ್ಲಿ ಸಿಎಂ, ಡಿಸಿಎಂ ಪ್ರಯತ್ನ: ಎನ್.ರವಿಕುಮಾರ್ ಟೀಕೆ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಪರೀಕ್ಷೆಯ ನಿರ್ವಹಣೆಯಲ್ಲಿನ ಇತರ ಅಕ್ರಮಗಳ ಬಗ್ಗೆ ಸಿಬಿಐ ತನಿಖೆ ನಡೆಸುತ್ತಿದೆ.

Continue Reading
Advertisement
tumkur News Assault Case
ತುಮಕೂರು11 mins ago

Tumkur News : ತುಮಕೂರಿನಲ್ಲಿ ಗ್ರಾಪಂ ಸದಸ್ಯನ ಮೇಲೆ ಚಪ್ಪಲಿ ಎಸೆದು ಮನಬಂದಂತೆ ಥಳಿಸಿದ ಉಪಾಧ್ಯಕ್ಷ!

Amith Shah
ದೇಶ12 mins ago

Amit Shah: ಹೊಸ ಕ್ರಿಮಿನಲ್ ಕಾನೂನಿನಲ್ಲಿ ಶಿಕ್ಷೆಯ ಬದಲು ನ್ಯಾಯಕ್ಕೆ ಪ್ರಾಧಾನ್ಯತೆ; ಅಮಿತ್ ಶಾ

Parliament Sessions
ದೇಶ13 mins ago

Parliament Sessions: ಹಿಂದೂ ಹಿಂಸಾವಾದಿ ಹೇಳಿಕೆ; ಸಂಸತ್‌ನಲ್ಲಿ ರಾಹುಲ್‌-ಮೋದಿ ಜಟಾಪಟಿ

Meghana Raj didn't want to enter the film Father Sundarraj
ಸ್ಯಾಂಡಲ್ ವುಡ್19 mins ago

Meghana Raj: ಮೇಘನಾ ರಾಜ್‌  ಫಿಲ್ಮ್​ಗೆ ಎಂಟ್ರಿ ಕೊಟ್ಟಿದ್ದು ಇಷ್ಟವಿರಲಿಲ್ಲ; ಬೇಸರ ಹೊರಹಾಕಿದ್ದ ಅಪ್ಪ ಸುಂದರರಾಜ್​ 

Assault Case in Hubballi
ಹುಬ್ಬಳ್ಳಿ29 mins ago

Assault case: ಹುಬ್ಬಳ್ಳಿಯಲ್ಲಿ ಪುಡಿ ರೌಡಿಗಳ ಗ್ಯಾಂಗ್ ವಾರ್! ನಡುರಸ್ತೆಯಲ್ಲೆ ಹೊಡಿಬಡಿ

DK ShivaKumar
ಪ್ರಮುಖ ಸುದ್ದಿ34 mins ago

DK Shivakumar: ಸಿಎಂ- ಡಿಸಿಎಂ ದಂಗಲ್‌ ವಿಷಯ ಎತ್ತುವ ಶಾಸಕರಿಗೆ ನೊಟೀಸ್: ಡಿಕೆ ಶಿವಕುಮಾರ್

M.R.Jayaram
ಪ್ರಮುಖ ಸುದ್ದಿ36 mins ago

M.R.Jayaram: ಶಿಕ್ಷಣ ತಜ್ಞ ಡಾ ಎಂ ಆರ್ ಜಯರಾಮ್‌ಗೆ ಬೆಂಗಳೂರು ವಿವಿಯಿಂದ ಗೌರವ ಡಾಕ್ಟರೇಟ್

Actor Darshan
ಕರ್ನಾಟಕ40 mins ago

Actor Darshan: ದರ್ಶನ್ ಅಪ್ಪಿಕೊಂಡು ಕಣ್ಣೀರಿಟ್ಟ ತಾಯಿ ಮೀನಾ; ಕುಟುಂಬಸ್ಥರನ್ನು ಕಂಡು ನಟ ಭಾವುಕ

DCM Post
ಕರ್ನಾಟಕ1 hour ago

DCM Post: ಒನ್ ಮ್ಯಾನ್ ಒನ್ ಪೋಸ್ಟ್ ಕೂಗಿಗೆ ಡಿಕೆಶಿ ಡೋಂಟ್ ಕೇರ್‌; ಕೇಡರ್ ಬೇಸ್ ಪಾರ್ಟಿ ಕಟ್ಟಲು ಪಣ!

Sheikh Abdul Rashid
ದೇಶ1 hour ago

Sheikh Abdul Rashid: ಸೆರೆಮನೆಯಿಂದ ನೇರ ಸಂಸತ್‌ಗೆ! ಜೈಲಿನಿಂದಲೇ ಸ್ಪರ್ಧಿಸಿ ಗೆದ್ದ ʼಉಗ್ರರ ಬೆಂಬಲಿಗʼನ ಪ್ರಮಾಣವಚನಕ್ಕೆ NIA ಅಸ್ತು

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ22 hours ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು1 day ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ2 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ2 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ3 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು4 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ4 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

ಟ್ರೆಂಡಿಂಗ್‌