Karnataka Tableau | ಮೊದಲಿಗೆ ತಿರಸ್ಕರಿಸಿ, ಕೊನೆ ಗಳಿಗೆಯಲ್ಲಿ ಕರ್ನಾಟಕ ಟ್ಯಾಬ್ಲೋಗೆ ಓಕೆ ಎಂದಿದ್ದೇಕೆ? - Vistara News

ಕರ್ನಾಟಕ

Karnataka Tableau | ಮೊದಲಿಗೆ ತಿರಸ್ಕರಿಸಿ, ಕೊನೆ ಗಳಿಗೆಯಲ್ಲಿ ಕರ್ನಾಟಕ ಟ್ಯಾಬ್ಲೋಗೆ ಓಕೆ ಎಂದಿದ್ದೇಕೆ?

ಆರಂಭದಲ್ಲಿ ಕರ್ನಾಟಕದ ಟ್ಯಾಬ್ಲೋ (Karnataka Tableau) ತಿರಸ್ಕರಿಸಿದ್ದ ಕೇಂದ್ರ ಆಯ್ಕೆ ಸಮಿತಿಯು ಕೊನೆ ಗಳಿಗೆಯಲ್ಲಿ ಒಪ್ಪಿಕೊಂಡಿದ್ದೇಕೆ? ಈ ನಿರ್ಧಾರದ ಹಿಂದಿರುವ ಕಾರಣಗಳೇನು?

VISTARANEWS.COM


on

Karnataka Tableau @ republic Day
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

| ವಿಕ್ರಮ್, ವಿಸ್ತಾರ ನ್ಯೂಸ್, ಹೊಸದಿಲ್ಲಿ
ಬೇರೆ ರಾಜ್ಯಗಳಿಗೂ ಪ್ರಾತಿನಿಧ್ಯ ಕಲ್ಪಿಸುವುದಕ್ಕಾಗಿ ಈ ಬಾರಿಯ ಗಣರಾಜ್ಯೋತ್ಸವಕ್ಕೆ ಕರ್ನಾಟಕದ ಟ್ಯಾಬ್ಲೋವನ್ನು (Karnataka Tableau) ಕೇಂದ್ರ ಸರ್ಕಾರ ಪರಿಗಣಿಸಿರಲಿಲ್ಲ. ಆದರೆ, ಈ ನಡೆಯು ವ್ಯಾಪಾಕ ರಾಜಕೀಯ ಆರೋಪ, ಪ್ರತ್ಯಾರೋಪಕ್ಕೆ ಕಾರಣವಾದ ಹಿನ್ನೆಲೆ ಮತ್ತು ಸದ್ಯದಲ್ಲೇ ವಿಧಾನಸಭೆ ಚುನಾವಣೆ ನಡೆಯಲಿರುವುದರಿಂದ, ಕೊನೆಗಳಿಗೆಯಲ್ಲಿ ಮತ್ತೆ ಕರ್ನಾಟಕದ ಟ್ಯಾಬ್ಲೋಗೆ ಅವಕಾಶ ಕಲ್ಪಿಸಲಾಗಿದೆ.

ಕಳೆದ 13 ವರ್ಷಗಳಿಂದ ವಿಭಿನ್ನ ಪರಿಕಲ್ಪನೆಯಡಿ ಟ್ಯಾಬ್ಲೋಗಳೊಂದಿಗೆ ಕರ್ನಾಟಕವು ರಾಷ್ಟ್ರದ ಗಮನ ಸೆಳೆದಿತ್ತು. ಆದರೆ, ಈ ಬಾರಿ ಕರ್ನಾಟಕದ ಟ್ಯಾಬ್ಲೋ ತಿರಸ್ಕಾರಗೊಂಡಿತ್ತು. ರಾಜ್ಯದ ಒತ್ತಾಯದ ಮೇರೆಗೆ ಕೊನೆಯಲ್ಲಿ ಅನುಮತಿ ದೊರೆತಿದೆ. ಕರ್ನಾಟಕವು ಈ ಬಾರಿ ರಾಮನಗರದ ರೇಷ್ಮೆ ಉದ್ಯಮ, ಸಿರಿಧಾನ್ಯ, ಬೆಂಗಳೂರಿನ ಪುಷ್ಪೋದ್ಯಮ ಮತ್ತು ನಾರಿಶಕ್ತಿ ವೈಭವ ಸೇರಿ ನಾಲ್ಕು ಸ್ತಬ್ದಚಿತ್ರ ಪ್ರಸ್ತಾವಗಳನ್ನು ಕೇಂದ್ರ ಆಯ್ಕೆ ಸಮಿತಿಗೆ ಕಳುಹಿಸಿಕೊಟ್ಟಿತ್ತು. ನಾರಿಶಕ್ತಿ ವಿಷಯದಲ್ಲಿ ಸಾಲುಮರದ ತಿಮ್ಮಕ್ಕ, ಸೂಲಗಿತ್ತಿ ನರಸವ್ವ ಮತ್ತು ಹಾಲಕ್ಕಿ ತುಳಸಿಗೌಡರ ಸಾಧನೆ ಬಿಂಬಿಸುವ ಒಳಗೊಂಡ ಮಾದರಿಗಳಿದ್ದವು. ಈ ಪ್ರಸ್ತಾಪಗಳಿಗೆ ಆಯ್ಕೆ ಸಮಿತಿ ಕೂಡ ಮೆಚ್ಚುಗೆ ವ್ಯಕ್ತಡಿಸಿತ್ತು. ಆದರೆ, ಅಂತಿಮ ಪಟ್ಟಿಯಲ್ಲಿ ಕರ್ನಾಟಕದ ಪ್ರಸ್ತಾವವನ್ನು ಕೈಬಿಡಲಾಯಿತು.

ಕೈ ತಪ್ಪಲು ಕಾರಣವೇನು?
ಅವಕಾಶ ವಂಚಿತ ರಾಜ್ಯಗಳಿಗೆ ಅವಕಾಶ ಕಲ್ಪಿಸುವ ದೃಷ್ಟಿಯಿಂದ ಹಾಗೂ ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಿಗೆ ಟ್ಯಾಬ್ಲೋ ಅವಕಾಶ ಸಿಗಲಿದೆ ಎಂಬ ಆಪಾದನೆ ದೂರ ಮಾಡಲು ಈ ಕ್ರಮ ಕೈಗೊಂಡಿತ್ತು. ಅವಕಾಶ ವಂಚಿತ ರಾಜ್ಯಗಳಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಕೇಂದ್ರ ರಕ್ಷಣಾ ಇಲಾಖೆ ವ್ಯಾಪ್ತಿಯಲ್ಲಿ ಬರುವ ಟ್ಯಾಬ್ಲೋ ಆಯ್ಕೆ ಸಮಿತಿ ಕರ್ನಾಟಕದ ಟ್ಯಾಬ್ಲೋ ಪ್ರಸ್ತಾವವನ್ನು ಕೈಬಿಟ್ಟಿತ್ತು

ಸ್ತಬ್ಧ ಚಿತ್ರ ಆಯ್ಕೆ ಸಂಬಂಧ ನವೆಂಬರ್‌ 30ರಂದು ಹೊರಡಿಸಿದ್ದ ಮಾರ್ಗಸೂಚಿ ಪ್ರಕಾರ, ಕಳೆದ ಎಂಟು ವರ್ಷಗಳಲ್ಲಿ ಕಡಿಮೆ ಸಲ ಪಾಲ್ಗೊಂಡ ರಾಜ್ಯಗಳಿಗೆ ಅವಕಾಶ ಕಲ್ಪಿಸಿಕೊಡಲಾಗುವುದು ಎಂದು ದಾಖಲಿಸಲಾಗಿತ್ತು. ಕಳೆದ ಬಾರಿ ಅವಕಾಶ ವಂಚಿತ ರಾಜ್ಯಗಳಾದ ಕೇರಳ, ತಮಿಳುನಾಡು ಮತ್ತು ಆಂಧ್ರಪ್ರದೇಶಕ್ಕೆ ಈ ಬಾರಿ ಟ್ಯಾಬ್ಲೋ ಪ್ರದರ್ಶಿಸಲು ಅನುಮತಿ ನೀಡಲಾಗಿತ್ತು.

ಕಳೆದ ವರ್ಷ ಕೊನೆಕ್ಷಣದಲ್ಲಿ ಅವಕಾಶ ಕಳೆದುಕೊಂಡಿದ್ದ ಕೇರಳ, ತಮಿಳುನಾಡು, ಆಂಧ್ರಪ್ರದೇಶ, ಪಶ್ಚಿಮ ಬಂಗಾಳ ಸೇರಿ ಹಲವು ರಾಜ್ಯಗಳು ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದವು. ಕೇರಳದ ನಾರಾಯಣ ಗುರು ಸ್ತಬ್ದಚಿತ್ರ ಕೈಬಿಟ್ಟದ್ದಕ್ಕೆ ಕರ್ನಾಟಕದಲ್ಲೂ ಪ್ರತಿಭಟನೆ ನಡೆದಿತ್ತು. ಆ ರಾಜ್ಯಗಳನ್ನೂ ಸಮಾಧಾನಪಡಿಸುವ ಸಲುವಾಗಿ ಕೇಂದ್ರ ಸರ್ಕಾರ ಬಿಜೆಪಿಯೇತರ ಆಡಳಿತವಿರುವ ರಾಜ್ಯಗಳತ್ತ ಗಮನಹರಿಸಿ, ಈ ನಿರ್ಧಾರವನ್ನು ಕೈಗೊಂಡಿತ್ತು.

ಕಳೆದ ವರ್ಷ ಪ್ರಶಸ್ತಿ ಬಂದಿತ್ತು
2022ರಲ್ಲಿ ರಾಜ್ಯ ಪ್ರಸ್ತುತಪಡಿಸಿದ್ದ ಸಾಂಪ್ರದಾಯಿಕ ಕಸೂತಿಯ ತೊಟ್ಟಿಲು ಟ್ಯಾಬ್ಲೋಗೆ ಎರಡನೇ ಅತ್ಯುತ್ತಮ ಪ್ರಶಸ್ತಿ ಬಂದಿತ್ತು. ಉತ್ತರ ಪ್ರದೇಶಕ್ಕೆ ಪ್ರಥಮ ಮತ್ತು ಮೇಘಾಲಯಕ್ಕೆ ಮೂರನೇ ಪ್ರಶಸ್ತಿಗಳು ಬಂದಿದ್ದವು. ಕಳೆದ ವರ್ಷ ಪ್ರಶಸ್ತಿ ಪಡೆದಿದ್ದ ಮೂರೂ ರಾಜ್ಯಗಳು ಈ ಬಾರಿ ಪೆರೇಡ್‌ಗೆ ಆಯ್ಕೆಯಾಗಿರಲಿಲ್ಲ. ಇತರ ರಾಜ್ಯಗಳಿಗೂ ಅವಕಾಶ ಕಲ್ಪಿಸಬೇಕು ಎಂಬ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂಬುದು ಕೇಂದ್ರದ ನಿಲುವಾಗಿತ್ತು.

ಮತ್ತೆ ಒಪ್ಪಿದ್ದೇಕೆ?
ಆರಂಭದಲ್ಲಿ ಟ್ಯಾಬ್ಲೋ ಪ್ರದರ್ಶನಕ್ಕೆ ಅವಕಾಶ ನಿರಾಕರಿಸಿ, ಮತ್ತೆ ರಾಜ್ಯಕ್ಕೆ ಕೇಂದ್ರ ಅವಕಾಶ ನೀಡಿದ್ದು ಏಕೆ ಎಂಬ ಪ್ರಶ್ನೆ ಸಹಜ. ಬಿಜೆಪಿಯೇತರ ರಾಜ್ಯಗಳಿಗೆ ಈ ಬಾರಿ ಅವಕಾಶ ನೀಡಬೇಕು ಎಂಬ ಚಿಂತನೆ ಕೇಂದ್ರ ಸರ್ಕಾರದ್ದಾಗಿತ್ತು. ಆದರೆ, ಈ ಬಾರಿಯೂ ಗುಜರಾತ್ ಟ್ಯಾಬ್ಲೋಗೆ ಅವಕಾಶ ನೀಡಲಾಗಿತ್ತು.

ಕರ್ನಾಟಕಕ್ಕೆ ಟ್ಯಾಬ್ಲೋ ಕೈ ತಪ್ಪುತ್ತಿದ್ದಂತೆ, ರಾಜ್ಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಕನ್ನಡಪರ ಸಂಘಟನೆಗಳು ಸೇರಿದಂತೆ ರಾಜ್ಯದ ಜನರು, ಕೇಂದ್ರದ ವಿರುದ್ದ ಕಿಡಿಕಾರಿದ್ದರು. ಅಷ್ಟೇ ಅಲ್ಲದೆ ರಾಜ್ಯದ ನಾಯಕರೂ ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿಕೊಡುವ ಕೆಲಸ ಮಾಡಿದ್ದರು. ರಾಜ್ಯದಲ್ಲಿ ಮುಂಬರುವ ಚುನಾವಣೆ ಮೇಲೆ ಇದರ ಪರಿಣಾಮ ಬೀರಲಿದೆ. ಕೇಂದ್ರ ಸರ್ಕಾರ ರಾಜ್ಯವನ್ನ ನಿರ್ಲಕ್ಷ್ಯ ಮಾಡಿದೆ ಎಂಬ ಸಂದೇಶ ಹೋಗಲಿದೆ. ಎಲೆಕ್ಷನ್ ಸಂದರ್ಭದಲ್ಲಿ ಪ್ರತಿಪಕ್ಷಗಳಿಗೆ ಈ ವಿಷಯ ಹೆಚ್ಚು ಲಾಭವಾಗಲಿದೆ ಎಂಬ ಅಂಶಗಳನ್ನ ರಾಜ್ಯ ನಾಯಕರು ಕೇಂದ್ರಕ್ಕೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಮತ್ತೆ ಕರ್ನಾಟಕಕ್ಕೆ ಗಣರಾಜ್ಯೋತ್ಸವದ ಟ್ಯಾಬ್ಲೋ ಪ್ರದರ್ಶನಕ್ಕೆ ಅವಕಾಶ ನೀಡಲಾಗಿದೆ

ಯಾವೆಲ್ಲ ರಾಜ್ಯಗಳು ಆಯ್ಕೆ?
ಕರ್ನಾಟಕ, ಮಧ್ಯಪ್ರದೇಶ, ತಮಿಳುನಾಡು, ತ್ರಿಪುರ, ಗುಜರಾತ್‌, ಜಮ್ಮುಕಾಶ್ಮೀರ, ಜಾರ್ಖಂಡ್‌, ಕೇರಳ, ಪಶ್ಚಿಮ ಬಂಗಾಳ, ಆಂಧ್ರಪ್ರದೇಶ, ಅರುಣಾಚಲ ಪ್ರದೇಶ, ಅಸ್ಸಾಂ, ಚಂಡೀಗಢ, ಡಿಯು-ದಮನ್‌.

ಇದನ್ನೂ ಓದಿ | Republic Day Tableau 2023 | ಗಣರಾಜ್ಯೋತ್ಸವಕ್ಕೆ ಟ್ಯಾಬ್ಲೋ ಆಯ್ಕೆ ಪ್ರಕ್ರಿಯೆ ಹೇಗೆ, ಮಾನದಂಡಗಳೇನು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

HD Revanna Case: ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ ಕೇಸ್‌; ರೇವಣ್ಣ ವಿರುದ್ಧ ಸಂತ್ರಸ್ತೆ ಹೇಳಿಕೆಯಲ್ಲಿ ಭಾರಿ ಗೊಂದಲ!

HD Revanna Case: ಹೊಳೆನರಸೀಪುರದಲ್ಲಿ ಎಚ್.ಡಿ. ರೇವಣ್ಣ ನಡೆಸಿದ್ದಾರೆನ್ನಲಾದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ರೇವಣ್ಣ ಅವರಿಗೆ ಜಾಮೀನು ನೀಡುವ ಬಗ್ಗೆ ವಾದ ಮಂಡಿಸಿದ ವಕೀಲ ಸಿ.ವಿ. ನಾಗೇಶ್‌, ದೂರುದಾರೆಯ ಹೇಳಿಕೆ ಬಗ್ಗೆ ಕೋರ್ಟ್‌ ಗಮನಕ್ಕೆ ತಂದರು. ಈ ಹೇಳಿಕೆಯು ಸಂಪೂರ್ಣ ಗೊಂದಲಮಯವಾಗಿದೆ. ಬೇಕೆಂದೇ ನಮ್ಮ ಕಕ್ಷಿದಾರರನ್ನು ಇಲ್ಲಿ ಫಿಟ್‌ ಮಾಡಲಾಗಿದೆ. ಇದೊಂದು ಸುಳ್ಳು ಕೇಸ್‌ ಎಂದು ವಾದಿಸಿದರು. ಹೊಳೆನರಸೀಪುರ ಪೊಲೀಸ್ ಠಾಣೆ ಸಬ್ ಇನ್ಸ್‌ಪೆಕ್ಟರ್ ಒಬ್ಬರು ಬೆಂಗಳೂರಿಗೆ ಬಂದು ದೂರುದಾರರಿಂದ ತಮಗೆ ನೀಡಿದಂತೆ ದೂರು ಬರೆಸಿಕೊಂಡು ಹೋಗಿ ಕೇಸ್ ದಾಖಲಿಸಿದ್ದಾರೆ ಎಂಬುದನ್ನು ಗಮನಕ್ಕೆ ತಂದರು. ಅಲ್ಲದೆ, ಪೊಲೀಸರು ದಾಖಲು ಮಾಡಿಕೊಂಡಿರುವ ಹೇಳಿಕೆಯನ್ನು ಕೋರ್ಟ್‌ ಮುಂದೆ ಓದಿದರು.

VISTARANEWS.COM


on

Holenarasipura sexual assault case lot of confusion in the victim statement against HD Revanna Case
Koo

ಬೆಂಗಳೂರು: ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ (Physical Abuse) ಪ್ರಕರಣದಲ್ಲಿ ಮಾಜಿ ಸಚಿವ ಎಚ್‌.ಡಿ ರೇವಣ್ಣ (HD Revanna Case) ಅವರಿಗೆ ಜಾಮೀನು (Bail) ನೀಡಲಾಗಿದೆ. ಗುರುವಾರ ಮಧ್ಯಂತರ ಜಾಮೀನು ನೀಡಿ ಶುಕ್ರವಾರಕ್ಕೆ (ಮೇ 17) ವಿಚಾರಣೆಯನ್ನು ಮುಂದೂಡಲಾಗಿತ್ತು. ಶುಕ್ರವಾರ ವಾದ – ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶರು ಸೋಮವಾರಕ್ಕೆ (ಮೇ 20) ವಿಚಾರಣೆಯನ್ನು ಮುಂದೂಡಿದ್ದಾರೆ. ಈ ಹಿನ್ನೆಲೆಯಲ್ಲಿ ಎಚ್.ಡಿ. ರೇವಣ್ಣ ಅವರಿಗೆ ಮಧ್ಯಂತರ ರಿಲೀಫ್‌ ಸಿಕ್ಕಿದೆಯಾದರೂ ಜೈಲಾ? ಬೇಲಾ? ಎಂಬುದು ಸೋಮವಾರ ಪ್ರಕಟವಾಗುವ ತೀರ್ಪಿನ ಮೇಲೆ ನಿಂತಿದೆ. ಇದೇ ವೇಳೆ ರೇವಣ್ಣ ಪರ ವಕೀಲರು ಪ್ರಕರಣದ ದೋಷಗಳನ್ನು ಕೋರ್ಟ್‌ ಮುಂದೆ ಎತ್ತಿ ತೋರಿಸಿದರು. ಪೊಲೀಸರು ದಾಖಲಿಸಿಕೊಂಡಿರುವ ದೂರಿನಲ್ಲಿ ಉಲ್ಲೇಖವಾಗಿರುವ ಮಹಿಳೆಯ ಹೇಳಿಕೆಯಲ್ಲಿನ ಗೊಂದಲದ ಬಗ್ಗೆ ಗಮನ ಸೆಳೆದಿದ್ದಾರೆ.

ಹೊಳೆನರಸೀಪುರದಲ್ಲಿ ಎಚ್.ಡಿ. ರೇವಣ್ಣ ನಡೆಸಿದ್ದಾರೆನ್ನಲಾದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ರೇವಣ್ಣ ಅವರಿಗೆ ಜಾಮೀನು ನೀಡುವ ಬಗ್ಗೆ ವಾದ ಮಂಡಿಸಿದ ವಕೀಲ ಸಿ.ವಿ. ನಾಗೇಶ್‌, ದೂರುದಾರೆಯ ಹೇಳಿಕೆ ಬಗ್ಗೆ ಕೋರ್ಟ್‌ ಗಮನಕ್ಕೆ ತಂದರು. ಈ ಹೇಳಿಕೆಯು ಸಂಪೂರ್ಣ ಗೊಂದಲಮಯವಾಗಿದೆ. ಬೇಕೆಂದೇ ನಮ್ಮ ಕಕ್ಷಿದಾರರನ್ನು ಇಲ್ಲಿ ಫಿಟ್‌ ಮಾಡಲಾಗಿದೆ. ಇದೊಂದು ಸುಳ್ಳು ಕೇಸ್‌ ಎಂದು ವಾದಿಸಿದರು.

ಕೋರ್ಟ್‌ನಲ್ಲಿ ವಾದ ಮಂಡಿಸಿದ ಸಿ.ವಿ. ನಾಗೇಶ್‌, ದೂರುದಾರರು ಹೊಳೆನರಸೀಪುರ ಪೊಲೀಸ್ ಠಾಣೆಗೆ ದೂರು ನೀಡಿಲ್ಲ. ಹೊಳೆನರಸೀಪುರ ಪೊಲೀಸ್ ಠಾಣೆ ಸಬ್ ಇನ್ಸ್‌ಪೆಕ್ಟರ್ ಒಬ್ಬರು ಬೆಂಗಳೂರಿಗೆ ಬಂದು ದೂರುದಾರರಿಂದ ತಮಗೆ ನೀಡಿದಂತೆ ದೂರು ಬರೆಸಿಕೊಂಡು ಹೋಗಿ ಕೇಸ್ ದಾಖಲಿಸಿದ್ದಾರೆ ಎಂಬುದನ್ನು ಗಮನಕ್ಕೆ ತಂದರು. ಅಲ್ಲದೆ, ಪೊಲೀಸರು ದಾಖಲು ಮಾಡಿಕೊಂಡಿರುವ ಹೇಳಿಕೆಯನ್ನು ಕೋರ್ಟ್‌ ಮುಂದೆ ಓದಿದರು.

ಇದು ಸಂತ್ರಸ್ತೆ ನೀಡಿದ ದೂರೇ ಅಲ್ಲ

ಪ್ರಜ್ವಲ್ ರೇವಣ್ಣ ಮೇಲೆ‌ ಲೈಂಗಿಕ ದೌರ್ಜನ್ಯವೆಸಗಿರುವ ಬಗ್ಗೆ ಏಪ್ರಿಲ್ 24ರ ರಾತ್ರಿ‌ 11 ಗಂಟೆಗೆ ಬೆಂಗಳೂರಿನಲ್ಲಿರುವ ಸಂತ್ರಸ್ತೆಯೊಬ್ಬರು ದೂರು ನೀಡಲು‌ ಬಂದಿದ್ದರು. ಅವರು ಮಾನಸಿಕವಾಗಿ ಕುಗ್ಗಿ ಹೋಗಿದ್ದರು. ಆ ಬಗ್ಗೆ ಹಿರಿಯ ಅಧಿಕಾರಿಗಳಿಗೆ ವಿಷಯ ತಿಳಿಸಿ, ಮಹಿಳಾ ಸಿಬ್ಬಂದಿಯೊಂದಿಗೆ ಸಂತ್ರಸ್ತೆ ಇರುವ ಸ್ಥಳಕ್ಕೆ ಹೋಗಿ ದೂರು ಪಡೆದು‌ ಕೇಸ್ ದಾಖಲಿಸಿದ್ದಾಗಿ ಸ್ಟೇಷನ್ ಬುಕ್‌ನಲ್ಲಿ‌ ಉಲ್ಲೇಖಿಸಿದ್ದಾರೆ. ಇಲ್ಲಿ ಸ್ಪಷ್ಟವಾಗಿ ಗೊತ್ತಾಗುವುದೇನೆಂದರೆ ಈ ದೂರು ರಿಜಿಸ್ಟರ್ ಆಗಿರುವುದಲ್ಲ‌. ದೂರನ್ನು ತಿದ್ದುಪಡಿ ಮಾಡಿ ತಮಗೆ ಬೇಕಾದ ಹಾಗೆ ಮಾಡಿಕೊಂಡಿದ್ದಾರೆ. ರೇವಣ್ಣ ವಿರುದ್ಧ ದೂರುದಾರೆ ನೀಡಿದ ದೂರನ್ನು ಮಹಿಳಾ ಅಧಿಕಾರಿ ದಾಖಲಿಸಿಕೊಳ್ಳಲ್ಲಿಲ್ಲ. ಆಕೆಯ ಹೇಳಿಕೆಯನ್ನು ಲಿಖಿತ ರೂಪದಲ್ಲಿ ದಾಖಲಿಸಿಕೊಂಡಿಲ್ಲ. ಇದು ಸಂತ್ರಸ್ತೆ ನೀಡಿದ ದೂರೇ ಅಲ್ಲ. ಬೇಕಂತಲೇ ಸೃಷ್ಟಿಯಾಗಿರುವ ಕೇಸ್ ಆಗಿದೆ. ಆಕೆಗೆ ಲೈಂಗಿಕ ದೌರ್ಜನ್ಯ ಅಂದರೇನು ಅಂತ ಗೊತ್ತೇ ಇರುವುದಿಲ್ಲ ಎಂದು ಸಿ.ವಿ. ನಾಗೇಶ್ ವಾದಿಸಿದರು.

ಸಂತ್ರಸ್ತೆ ಹೇಳಿಕೆಯಲ್ಲಿ ಭಾರಿ ಗೊಂದಲ!

ಲೈಂಗಿಕ ದೌರ್ಜನ್ಯವೇ ಬೇರೆ, ಅತ್ಯಾಚಾರವೇ ಬೇರೆ. ಸಂತ್ರಸ್ತೆ ನೀಡಿದ ದೂರಿನ ಅಂಶಗಳನ್ನು ಓದಿ ಹೇಳಿದ ಸಿ.ವಿ. ನಾಗೇಶ್‌, ಸಂತ್ರಸ್ತೆಯ ಪತಿ ಆಕೆಯ ಮೇಲೆ ಪಟ್ಟ ಅನುಮಾನವನ್ನು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಆಕೆ ನನ್ನ ಮೇಲೆ ಆ ರೀತಿ ಕೃತ್ಯ ನಡೆದಿಲ್ಲ ಎಂದು ಹೇಳಿದ್ದಾಳೆ. ನಾಲ್ಕೈದು ವರ್ಷಗಳ ಹಿಂದೆ ನಡೆದಿರುವ ಕೃತ್ಯದ ಬಗ್ಗೆ ಆರೋಪಿಸಿದ್ದಾರೆ. ಒಂದು ಕಡೆ ರೇವಣ್ಣ ಹಾಗೂ ಪ್ರಜ್ವಲ್‌ ರೇವಣ್ಣ ನೀಡಿದ್ದ ಲೈಂಗಿಕ ದೌರ್ಜನ್ಯದ ಬಗ್ಗೆ ಹೇಳುತ್ತಾರೆ. ಮತ್ತೊಂದೆಡೆ ಸಂತ್ರಸ್ತೆ ಗಂಡ ಬೇರೆ ಹೆಣ್ಣು‌ ಮಕ್ಕಳ ವಿಡಿಯೊ ಬಗ್ಗೆ ಕೇಳಿದಾಗ ನನ್ನ ಮೇಲೆ ಆ ರೀತಿ ಆಗಿಲ್ಲ‌ ಅಂತ ಹೇಳಿದ್ದಾಳೆ. ಮತ್ತೊಂದೆಡೆ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಕಿರುಕುಳ ತಾಳಲಾರದೆ ಮನೆ ಕೆಲಸ ಬಿಟ್ಟು ಬಂದೆ ಎಂದು ಹೇಳುತ್ತಾಳೆ. ತನಿಖಾಧಿಕಾರಿಗಳು ಸಂತ್ರಸ್ತೆ ಹೇಳಿಕೆ ಆಧಾರದ ಮೇಲೆ 376 ದಾಖಲಿಸಲು ಅನುಮತಿ ಕೇಳಿದ್ದಾರೆ. ಯಾರ ಮೇಲೆ ಸೆಕ್ಷನ್‌ 376 ದಾಖಲಿಸುತ್ತಾರೆ ಎಂದು ಸಿ.ವಿ. ನಾಗೇಶ್ ಪ್ರಶ್ನೆ ಮಾಡಿದರು.

ದೂರುದಾರರು ಲೈಂಗಿಕ ದೌರ್ಜನ್ಯ ತಾಳಲಾರದೆ 4 ವರ್ಷದ ಹಿಂದೆ ಮನೆ ಕೆಲಸ ಬಿಟ್ಟೆ ಎಂದು ಹೇಳುತ್ತಾರೆ. ಮನೆ ಬಿಟ್ಟು ಬಂದಿದ್ದಕ್ಕೆ ಪೊಲೀಸರನ್ನು ಕಳುಹಿಸಿ ಆಶ್ರಯ ಮನೆ ಖಾಲಿ ಮಾಡಿಸಿದರು ಎಂದು ಆರೋಪಿಸುತ್ತಾರೆ. ತಮ್ಮ ಒಡವೆ, ಬಟ್ಟೆ ಎಲ್ಲವನ್ನೂ ಕಿತ್ತುಕೊಂಡರು ಎಂದು ಹೇಳುತ್ತಾರೆ. ಹಾಗಾದರೆ ನಾಲ್ಕೂವರೆ ವರ್ಷದ ಹಿಂದೆ ಅವರ ಮನೆಯಲ್ಲಿದ್ದಾಗ ನಡೆದ ಅತ್ಯಾಚಾರ, ಲೈಂಗಿಕ ದೌರ್ಜನ್ಯವು ಅವರಿಗೆ ಗೊತ್ತಾಗಲಿಲ್ಲವೇ? ಮನೆ ಖಾಲಿ ಮಾಡಿಸಿದ ಮೇಲೆ ಯಾಕೆ ಲೈಂಗಿಕ ದೌರ್ಜನ್ಯ, ಅತ್ಯಾಚಾರ ನಡೆದಿದೆ ಅಂತ ಗೊತ್ತಾಯ್ತಾ ಎಂದು ಸಿ.ವಿ. ನಾಗೇಶ್ ಪ್ರಶ್ನೆ ಮಾಡಿದರು.

ವಾದ ಆರಂಭಿಸಿ ಜಯ್ನಾ ಕೊಠಾರಿ

ಇದಕ್ಕೂ ಮೊದಲು 42ನೇ ಎಸಿಎಂಎಂ ಕೋರ್ಟ್‌ನಲ್ಲಿ ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ವಿಚಾರಣೆ ಆರಂಭವಾಯಿತು. ಈ ವೇಳೆ ಮಾಜಿ‌ ಸಚಿವ ಎಚ್.ಡಿ. ರೇವಣ್ಣ ಅವರು ಬರಿಗಾಲಿನಲ್ಲಿಯೇ ಕೋರ್ಟ್‌ಗೆ ಹಾಜರಾದರು. ಎಸ್‌ಪಿಪಿ ಜಯ್ನಾ ಕೊಠಾರಿ ವಾದ ಮಂಡನೆಗೆ ಮುಂಚೆ ಇನ್ ಕ್ಯಾಮೆರಾ ವಿಚಾರಣೆ ನಡೆಸುವಂತೆ ಮನವಿ ಮಾಡಿದರು. ಅದಕ್ಕೆ ನ್ಯಾಯಾಧೀಶರು, ಮೊದಲು ಅರ್ಜಿ ವಿಚಾರಣೆಯ ಅರ್ಹತೆ ಬಗ್ಗೆ ವಾದ ಮಂಡಿಸಿ. ನಂತರ ಇನ್ ಕ್ಯಾಮೆರಾ ವಿಚಾರಣೆ ನಡೆಸೋಣ ಎಂದು ಹೇಳಿದರು.

ವಾದ ಶುರು ಮಾಡಿದ ಎಸ್ಐಟಿ ಪರ ಎಸ್‌ಪಿಪಿ ಜಯ್ನಾ ಕೊಠಾರಿ, ಹೊಳೆನರಸೀಪುರ ಪ್ರಕರಣದಲ್ಲಿ ಐಪಿಸಿ 376 ಸೆಕ್ಷನ್ ಹಾಕಲಾಗಿದ್ದು, ಇದು ಅತ್ಯಾಚಾರ ಆರೋಪವಾಗಿದೆ. ಸಂತ್ರಸ್ತೆಯ ವಿಚಾರಣೆ ಬಳಿಕ ಅತ್ಯಾಚಾರ ಆರೋಪ ದಾಖಲಾಗಿದೆ. ಸಂತ್ರಸ್ತೆ ಹೇಳಿಕೆಯನ್ನು ಅವರು ಕೋರ್ಟ್‌ನಲ್ಲಿ ಓದಿ ಹೇಳಿದರು. ಮೊದಲಿಗೆ ಈ ಕೇಸಿನಲ್ಲಿ ಸೆಕ್ಷನ್ 354 ಮಾತ್ರ ಇತ್ತು. ವಿಚಾರಣೆ ಬಳಿಕ 376 ಸೇರ್ಪಡೆಯಾಗಿದೆ ಎಂದು ಸಂತ್ರಸ್ತೆ ದೂರಿನಲ್ಲಿ ಆರೋಪಿಸಿರುವ ಅಂಶಗಳನ್ನು ಉಲ್ಲೇಖಿಸಿ ಕೋರ್ಟ್‌ ಗಮನಕ್ಕೆ ತಂದರು.

ಆಶ್ರಯ ಮನೆಯೂ ವಾಪಸ್‌

ಎಚ್.ಡಿ. ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ನಡೆಸಿದ್ದಾರೆನ್ನಲಾದ ಲೈಂಗಿಕ ದೌರ್ಜನ್ಯದ ಬಗ್ಗೆ ಅಂಶಗಳ ಕೋರ್ಟ್‌ ಮುಂದೆ ಓದಿದ ಎಸ್‌ಪಿಪಿ ಜಯ್ನಾ ಕೊಠಾರಿ, ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ಅವರ ಕಿರುಕುಳ ತಾಳಲಾರದೆ ಮನೆ ಬಿಟ್ಟು ಬಂದಿರುವುದಾಗಿ ಸಂತ್ರಸ್ತೆ ಹೇಳಿಕೆ ನೀಡಿದ್ದಾರೆ. ಕೆಲಸ ಬಿಟ್ಟು ಬಂದಿದಕ್ಕೆ ಮೊದಲು‌ ನೀಡಿದ್ದ ಆಶ್ರಯ ಮನೆಯನ್ನು ಬಲವಂತವಾಗಿ ವಾಪಸ್‌ ಪಡೆದಿದ್ದಾರೆ. ಆ ಬಗ್ಗೆ ಜಿಲ್ಲಾಧಿಕಾರಿಗೆ ದೂರು ನೀಡಿದರೂ ನ್ಯಾಯ ಸಿಕ್ಕಿಲ್ಲ. ಸಂತ್ರಸ್ತೆಯ ಆರೋಪಗಳನ್ನು ಕೋರ್ಟ್‌ ಮುಂದೆ ಹೇಳಿದರು.

ಹೀಗಾಗಿ ಸಂತ್ರಸ್ತೆ ಹೇಳಿಕೆ ಮೇಲೆ ಸೆಕ್ಷನ್ 376 ಅನ್ನು ಸೇರಿಸಲಾಗಿದೆ ಎಂದು ವಾದಿಸಿದ ಜಯ್ನಾ ಕೊಠಾರಿ, ನಾನ್ ಬೇಲಬಲ್ ಸೆಕ್ಷನ್ ಸೇರಿಸಿರುವುದರಿಂದ ಸೆಷನ್ಸ್ ಕೋರ್ಟ್‌ನಲ್ಲಿ ವಿಚಾರಣೆ ನಡೆಯಬೇಕು. ಇದರಿಂದ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು. ತನಿಖಾಧಿಕಾರಿಯ ಮನವಿ ನಂತರ ಸೆಕ್ಷನ್‌ 376 ಸೇರ್ಪಡೆಗೊಂಡಿದೆ. ಈ ಮೊದಲಿಗೆ ಈ ಕೇಸಿನಲ್ಲಿ ಸೆಕ್ಷನ್‌ 354 A, D ಮಾತ್ರವಿತ್ತು. ಪ್ರಜ್ಬಲ್ ರೇವಣ್ಣ ಹಾಗೂ ರೇವಣ್ಣ ವಿರುದ್ಧ ಇರುವ ಪ್ರಕರಣವನ್ನು ವಿಭಜಿಸಬಾರದು. ಇಬ್ಬರಿಂದಲೂ ಲೈಂಗಿಕ ದೌರ್ಜನ್ಯ ನಡೆದಿದೆ. ಇದರಿಂದ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು ಎಂದು ಇಂತಹ ಪ್ರಕರಣಗಳಲ್ಲಿ ಜಾಮೀನು ನಿರಾಕರಿಸಿರುವ ಸುಪ್ರೀಂ ಕೋರ್ಟ್‌ನ ತೀರ್ಪುಗಳನ್ನು ಉಲ್ಲೇಖಿಸಿ ವಾದಿಸಿದರು.

ದೂರುದಾರೆಗೆ ಇಬ್ಬರಿಂದಲೂ ಕಿರುಕುಳ

ಎಸ್ಐಟಿ ತಂಡದಿಂದ ತನಿಖೆ ಪ್ರಗತಿಯಲ್ಲಿದೆ. ಈ‌ ಸಂದರ್ಭದಲ್ಲಿ ಆರೋಪಿಗೆ ಜಾಮೀನು ನೀಡುವುದರಿಂದ ಸಾಕ್ಷಿಗಳ ಮೇಲೆ ಪ್ರಭಾವ ಬೀರುತ್ತದೆ. ಬೇಲಬಲ್ ಸೆಕ್ಷನ್ ಇದ್ದಾಗ ಮಾತ್ರ ಸೆಕ್ಷನ್‌ 436 ಪ್ರಕಾರ ಜಾಮೀನು ನೀಡಬಹುದು. ಆದರೆ, ಈ ಪ್ರಕರಣದಲ್ಲಿ ನಾನ್ ಬೇಲಬಲ್ ಸೆಕ್ಷನ್ 436 ಅಡಿಯಲ್ಲಿ ಜಾಮೀನು ನೀಡುವಂತಿಲ್ಲ. ಅಲ್ಲದೆ, ನಾನ್ ಬೇಲಬಲ್ ಸೆಕ್ಷನ್ ಇರುವುದಿರಿಂದ ಇದರ ವಿಚಾರಣೆಯು ಸೆಷನ್ಸ್‌ ಕೋರ್ಟ್‌ನಲ್ಲಿರುವುದರಿಂದ ಅಲ್ಲಿ ವಿಚಾರಣೆ ನಡೆಯಬೇಕು. ದೂರುದಾರರಿಗೆ ಮನೆಯಲ್ಲಿ ಇಬ್ಬರಿಂದಲೂ (ರೇವಣ್ಣ, ಪ್ರಜ್ವಲ್) ಕಿರುಕುಳ ನಡೆದಿದೆ. ಇದನ್ನೆಲ್ಲ ಮುಕ್ತ ನ್ಯಾಯಾಲಯದಲ್ಲಿ ವಿವರಿಸಲು ಆಗದು. ಇದು ಇನ್ ಕ್ಯಾಮೆರಾ ವಿಚಾರಣೆ ನಡೆಯಬೇಕು ಎಂದು ಜಯ್ನಾ ಕೊಠಾರಿ ವಾದ ಮಂಡಿಸಿದರು.

ಜಾಮೀನು ಅರ್ಜಿ ವಿಚಾರಣೆ ವ್ಯಾಪ್ತಿ ಈ ಕೋರ್ಟ್‌ಗಿಲ್ಲ: ಜಯ್ನಾ ಕೊಠಾರಿ

ಇಲ್ಲಿ ತಂದೆ – ಮಗ ಇಬ್ಬರಿಂದಲೂ ಲೈಂಗಿಕ ದೌರ್ಜನ್ಯ ನಡೆದಿದೆ. ರೇವಣ್ಣ ಅವರಿಂದ ಇಷ್ಟೇ ಪ್ರಮಾಣದಲ್ಲಿ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಹೇಳಲು ಸಾಧ್ಯವಿಲ್ಲ. ಅದೆಲ್ಲವೂ ತನಿಖೆಯ ನಂತರವಷ್ಟೇ ಗೊತ್ತಾಗಬೇಕಿದೆ. ಈಗಲೇ ಶಾಸಕ ರೇವಣ್ಣ ಮೇಲೆ ಅತ್ಯಾಚಾರ ಆರೋಪ ಇಲ್ಲವೆಂದು ಹೇಳಲು ಸಾಧ್ಯವಾಗುವುದಿಲ್ಲ. ಒಮ್ಮೆ ಅತ್ಯಾಚಾರ ಆರೋಪ ದಾಖಲಾದರೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ವ್ಯಾಪ್ತಿಗೆ ಬರುವುದಿಲ್ಲ. ಹೀಗಾಗಿ ಜಾಮೀನು ಅರ್ಜಿ ವಿಚಾರಣೆ ನಡೆಸಲು ಈ ಕೋರ್ಟ್‌ಗೆ ವ್ಯಾಪ್ತಿ ಇಲ್ಲ. ಸೆಕ್ಷನ್‌ 376 ಅಪರಾಧಕ್ಕೆ ಜೀವಾವಧಿ ಶಿಕ್ಷೆ ಇದೆ. ಇದು ಜಾಮೀನುರಹಿತ ಅಪರಾಧವಾಗಿದೆ. ಹೀಗಿದ್ದಾಗ ಜಾಮೀನು ಅರ್ಜಿ ಊರ್ಜಿತವಲ್ಲ. ಇಬ್ಬರ ವಿರುದ್ಧ ತನಿಖೆ ಇನ್ನೂ ನಡೆಯುತ್ತಿದೆ. ಆರೋಪ ಪಟ್ಟಿ ದಾಖಲಾದ ನಂತರವಷ್ಟೇ ಯಾರ ಮೇಲೆ ಏನು ಆರೋಪ‌ ಎಂದು ತಿಳಿಯಲಿದೆ. ಸೆಕ್ಷನ್‌ 41ಎ ಅಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದರೂ ಬಂದಿಲ್ಲ. ಇದನ್ನು ಜಾಮೀನು ಅರ್ಜಿಯ ವಿಚಾರಣೆ ವೇಳೆ ಹೇಳುತ್ತೇನೆ. ಈಗ ಜಾಮೀನು ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಬಾರದೆಂಬ ವಿಚಾರಕ್ಕಷ್ಟೇ ವಾದಿಸುತ್ತಿದ್ದೇನೆ ಎಂದು ಎಸ್‌ಪಿಪಿ ಜಯ್ನಾ ಕೊಠಾರಿ ವಾದ ಮಂಡಿಸಿದರು.

ಬಳಿಕ ಮತ್ತೊಬ್ಬ ಎಸ್‌ಪಿಪಿ ಅಶೋಕ್ ನಾಯಕ್ ವಾದ ಮಂಡಿಸಿ, ಜನಪ್ರತಿನಿಧಿಗಳಿಗೆ ಸಂಬಂಧಿಸಿದಂತೆ ಪ್ರಕರಣಗಳು ಇಲ್ಲಿಗೆ ಬರುತ್ತವೆ. ಜಾಮೀನು ಅಂದರೆ ಸೆಷನ್ ನ್ಯಾಯಾಲಯದ ಕೋರ್ಟ್ 82ಕ್ಕೆ ಬರುತ್ತದೆ ಎಂದು ಹೇಳುತ್ತಿದ್ದಂತೆ ಮಧ್ಯಪ್ರವೇಶಿಸಿದ ನ್ಯಾಯಾಧೀಶರು, ಇದು ಪೋಕ್ಸೋ ಕೇಸ್‌ ಆಗಿದ್ದರೆ ನೀವು ಸೆಷನ್ ಕೋರ್ಟ್‌ಗೆ ಹೋಗಿ. ಇದು ಇಲ್ಲಿ ನಿರ್ವಹಿಸಲಾಗದಿದ್ದರೆ ಅಲ್ಲಿಗೆ ಕಳಿಸಲಾಗುತ್ತದೆ ಎಂದು ಹೇಳಿದರು.

ಮತ್ತೆ ವಾದ ಮುಂದುವರಿಸಿದ ಅಶೋಕ್‌ ನಾಯಕ್‌, ಸಂತ್ರಸ್ತೆ ಮೇಲೆ ತಂದೆ ಮತ್ತು ಪುತ್ರ ಇಬ್ಬರೂ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಒಬ್ಬಳ ಮೇಲೆ ಪದೇ ಪದೆ ದೌರ್ಜನ್ಯವೆಸಗಿದ್ದಾರೆ. ಕೊಲೆ ಪ್ರಕರಣದಲ್ಲಿ 302 ಸೆಕ್ಷನ್ ಜತೆಗೆ ಇತರೆ ಬೇಲಬಲ್ ಸೆಕ್ಷನ್‌ಗಳನ್ನ ಹಾಕಿರುತ್ತಾರೆ. ಹಾಗಂತ ಆರೋಪಿಗಳನ್ನು ಹಾಗೂ ಕೇಸ್‌ ಅನ್ನು ವಿಭಜನೆ ಮಾಡಲು ಆಗುತ್ತದೆಯೇ? ಅದೇ ರೀತಿ ಈ ಪ್ರಕರಣದಲ್ಲಿ ತಂದೆ, ಮಗ ಇಬ್ಬರೂ ಒಂದೇ ಅಪರಾಧ ಎಸಗಿದ್ದಾರೆ. ಒಂದೇ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಎರಡನೇ ಆರೋಪಿಯನ್ನು ಮೊದಲನೇ ಆರೋಪಿಯೇ ರಕ್ಷಣೆ ಮಾಡುತ್ತಿದ್ದಾರೆ. ದೇಶ ಬಿಟ್ಟು ಹೋಗಲು ಮೊದಲ ಆರೋಪಿಯೇ ಸಹಾಯ ಮಾಡಿದ್ದಾರೆ ಎಂದು ಹೇಳಿದರು.

ಪ್ರತಿ ವಾದ ಮಂಡಿಸಿದ ಸಿ.ವಿ. ನಾಗೇಶ್‌

ಈ ವೇಳೆ ರೇವಣ್ಣ ಪರ ವಕೀಲ‌ ಸಿ.ವಿ. ನಾಗೇಶ್ ಪ್ರತಿವಾದ ಆರಂಭಿಸಿ, ನಮ್ಮ ಕಕ್ಷಿದಾರರ ವಿರುದ್ಧ ದಾಖಲಾಗಿರುವ ಪ್ರಕರಣವು ಬೇಲಬಲ್ ಸೆಕ್ಷನ್‌ಗಳಾಗಿವೆ. ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಕೇಸ್‌ನಲ್ಲಿ ಜಾಮೀನು ನೀಡಬೇಕಾದ ಸೆಕ್ಷನ್‌ಗಳನ್ನು ಹಾಕಲಾಗಿದೆ. ಎಫ್ಐಆರ್ ದಾಖಲಾದ ದಿನಾಂಕ, ಅದರಲ್ಲಿರುವ ಸೆಕ್ಷನ್‌ಗಳು ಏನು ಎಂಬುದನ್ನು ಇದೇ ವೇಳೆ ಕೋರ್ಟ್‌ ಗಮನಕ್ಕೆ ತಂದರು. ಯಾವುದೇ ವ್ಯಕ್ತಿಯ ವಿರುದ್ಧ ದೂರು ದಾಖಲಾದರೆ, ಆತ ಬಂಧನಕ್ಕೊಳಗಾಗುವ ಮುನ್ನ ಶರಣಾದರೆ ಜಾಮೀನು ನೀಡಬಹುದು. ಇದರ ಗ್ರಾವಿಟಿಯೇ 436 ಸಿಆರ್‌ಪಿಸಿ ಆಗಿದೆ. ಇಲ್ಲಿ ಸಿಆರ್‌ಪಿಸಿ 439 ಅಲ್ಲ. ರೇವಣ್ಣ ವಿರುದ್ಧ ಈಗ ಆರೋಪ ಕೇಳಿಬಂದಿದೆ. ಆದರೆ, ಈ ಆರೋಪವು ದೂರು ದಾಖಲಾದ ದಿನ ಅಥವಾ ವಾರದ ಹಿಂದೆ ಇಲ್ಲವೇ ವರ್ಷದ ಹಿಂದೆ ನಡೆದಿಲ್ಲ. ಕೃತ್ಯ ನಡೆದು ಹಲವು ವರ್ಷಗಳೇ ಕಳೆದು ಹೋಗಿವೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ ಎಂದು ಮಾಹಿತಿ ನೀಡಿದರು.

ಗರ್ಭಗುಡಿಯಲ್ಲಿ ದೇವರು ಕುಳಿತಂತೆ ಕುಳಿತಿದ್ದೆ!

ಈ ವೇಳೆ ಮಧ್ಯ ಪ್ರವೇಶ ಮಾಡಿದ ಎಸ್‌ಪಿಪಿ ಜಯ್ನಾ ಕೊಠಾರಿ ಆಕ್ಷೇಪ ವ್ಯಕ್ತಪಡಿಸಲು ಮುಂದಾದರು. ಅದಕ್ಕೆ ಸಿಟ್ಟಾದ ಸಿ.ವಿ. ನಾಗೇಶ್, “ನೀವು ವಾದ ಮಾಡಬೇಕಾದರೆ ನಾನು ಗರ್ಭಗುಡಿಯಲ್ಲಿ‌ ದೇವರು ಕುಳಿತ ಹಾಗೆ ಕುಳಿತುಕೊಂಡಿದ್ದೆ. ಏನಾದರೂ ತೊಂದರೆ ಮಾಡಿದ್ದೇನಾ? ಎಂದು ಪ್ರಶ್ನಿಸಿ ತಮ್ಮ ವಾದವನ್ನು ಮುಂದುವರಿಸಿದರು.

ಇದು ಅತ್ಯಾಚಾರ ಪ್ರಕರಣ ಅಲ್ಲ

ಸೆಷನ್ಸ್ ಕೋರ್ಟ್‌ನಲ್ಲಿ ನಡೆದ ವಿಚಾರಣೆಯಲ್ಲಿ 376 ಸೆಕ್ಷನ್ ಇರಲಿಲ್ಲ. ಮ್ಯಾಜಿಸ್ಟ್ರೇಟ್ ಕೋರ್ಟ್‌ಗೆ ಬಂದಾಗ ಈ ಸೆಕ್ಷನ್‌ ಸೇರ್ಪಡೆಯಾಗಿದೆ. ಅವತ್ತು ನಿರೀಕ್ಷಣಾ ಜಾಮೀನಿಗೆ ಆಕ್ಷೇಪಣೆ ಸಲ್ಲಿಸಿದ್ದರು. ಇವರು ಮೊದಲೇ 376 ಇದೆ ಎಂದು ಹೇಳಿದ್ದರೆ, ನಾವು ನಿರೀಕ್ಷಣಾ ಜಾಮೀನು ಅರ್ಜಿಯನ್ನೇ ವಾಪಸ್‌ ಪಡೆಯುತ್ತಿರಲಿಲ್ಲ. ರೇವಣ್ಣ ವಿರುದ್ಧ 376 ಇದೆ ಅಂತ ಹೇಳಲಿ. ಆಗ ನಾವು ಕಾನೂನು ಹೋರಾಟಕ್ಕೆ ಸಿದ್ಧರಿದ್ದೇವೆ. ನಮ್ಮ ಕಕ್ಷಿದಾರರ ವಿರುದ್ಧ ದಾಖಲಾಗಿರೋದು ಕೇವಲ ಲೈಂಗಿಕ ದೌರ್ಜನ್ಯ ಪ್ರಕರಣವಾಗಿದೆ. ಅತ್ಯಾಚಾರ ಪ್ರಕರಣ ಅಲ್ಲ. ಇದೊಂದು‌ ಸುಳ್ಳು ಕೇಸ್ ಆಗಿದೆ ಎಂದು ಸಿ.ವಿ. ನಾಗೇಶ್ ವಾದಿಸಿದರು.

ಇದುವರೆಗೂ ರೇವಣ್ಣ ಅವರಿಗೆ ನೀಡಿದ ಯಾವ ನೋಟಿಸ್‌ನಲ್ಲೂ ಸೆಕ್ಷನ್‌ 376 ಇದೆ ಅಂತ ಉಲ್ಲೇಖಿಸಿಲ್ಲ. ಈಗ 376 ಇದೆ ಎಂದು ಹೇಳುತ್ತಿದ್ದಾರೆ. ಇದರಿಂದ ನಮ್ಮ ಕಕ್ಷಿದಾರರಿಗೆ ಜಾಮೀನು ನೀಡಬಹುದು. ರೇವಣ್ಣ ವಿರುದ್ಧ ದಾಖಲಾಗಿರುವ ಕೇಸ್‌ನಲ್ಲಿ ಎಲ್ಲವೂ ಬೇಲಬಲ್ ಸೆಕ್ಷನ್‌ಗಳಿವೆ. ಹೀಗಾಗಿ ಜಾಮೀನು‌ ನೀಡಬೇಕೆಂದು ಮನವಿ ಮಾಡಿದ ಸಿ.ವಿ. ನಾಗೇಶ್ ತಮ್ಮ ವಾದವನ್ನು ಮುಕ್ತಾಯ ಮಾಡಿದರು.

ಇದನ್ನೂ ಓದಿ: Prajwal Revanna Case: ವಕೀಲ ದೇವರಾಜೇಗೌಡರಿಗೆ ನ್ಯಾಯಾಂಗ ಬಂಧನ; ಪೊಲೀಸ್‌ ಕಸ್ಟಡಿ ಅಂತ್ಯ

ಎಫ್‌ಐಆರ್‌ ಬಳಿಕವೂ ಸೆಕ್ಷನ್‌ ಸೇರಿಸಬಹುದು

ಬಳಿಕ ಎಸ್‌ಪಿಪಿ ಜಯ್ನಾ ಕೊಠಾರಿ ವಾದ ಮಂಡಿಸಿ, ರೇವಣ್ಣ ಪರ ವಕೀಲರು ಕೇವಲ ಬೇಲಬಲ್ ಸೆಕ್ಷನ್‌ಗಳ ಬಗ್ಗೆ ಮಾತ್ರ ಹೇಳಿದ್ದಾರೆ. ಪ್ರಾರಂಭದಲ್ಲೇ ಜಾಮೀನು ರಹಿತ ಸೆಕ್ಷನ್‌ಗಳನ್ನು ದಾಖಲಿಸದೆ ಇರಬಹುದು. ತನಿಖೆ ನಡೆದಾಗ ಯಾವಾಗ ಬೇಕಿದ್ದರೂ ಅಪರಾಧ ನಡೆದಿರುವ ಸೆಕ್ಷನ್‌ಗಳನ್ನು ಎಫ್‌ಐಆರ್‌ನಲ್ಲಿ ಸೇರಿಸಬಹುದು. ಈ ಬಗ್ಗೆ ಅವಕಾಶವೂ ಇದೆ. ನಂತರವು ಜಾಮೀನು ರಹಿತದ ಸೆಕ್ಷನ್‌ಗಳನ್ನು ಕೂಡಾ ಸೇರಿಸುವ ಅವಕಾಶ ಇದೆ. ಅದಕ್ಕೆ‌ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ಹೇಳಿದೆ ಎಂದು ಹೇಳಿದರು.

ಭಯದಿಂದ ಗಂಡನ ಬಳಿ ಸತ್ಯ ಮುಚ್ಚಿಟ್ಟಿರುವ ಸಂತ್ರಸ್ತೆ

ರೇವಣ್ಣ ಪರ ವಕೀಲರು‌ ಹೇಳುವಂತೆ ಮಹಿಳಾ ಪೊಲೀಸ್ ಇಲ್ಲದೆ ನಮ್ಮ ಪೊಲೀಸರು ಹೋಗಿಲ್ಲ. ಮಹಿಳಾ ಸಿಬ್ಬಂದಿಯ ಜತೆಯಲ್ಲೆ ಹೋಗಿ ದೂರು ದಾಖಲಿಸಿಕೊಂಡಿದ್ದಾರೆ. ಅದರಲ್ಲಿ ಯಾವುದೇ ಅನುಮಾನ ಬೇಡ. ಸಂತ್ರಸ್ತೆ ತನ್ನ ಗಂಡನ ಬಳಿ ಕೆಲವೊಂದನ್ನು ಮುಚ್ಚಿಟ್ಟಿದ್ದಾಳೆ. ಸತ್ಯ ಹೇಳಿದರೆ ಮನೆಯಿಂದ ಹೊರ ಹಾಕುತ್ತಾರೆ ಎಂಬ ಭಯದಲ್ಲಿ ಆಕೆ ಗಂಡನಿಗೆ ಆ ರೀತಿಯಾಗಿ ಹೇಳಿದ್ದಾಳೆ. ಆಕೆಯ ಸುರಕ್ಷತೆಗೆ ಸಂಬಂಧಿಸಿದ ವಿಚಾರವಾಗಿದ್ದರಿಂದ ರಹಸ್ಯ ಸ್ಥಳದಲ್ಲಿ ದೂರು ಪಡೆಯಲಾಗಿದೆ. ಇದು ಸಂಪೂರ್ಣವಾಗಿ ಮಹಿಳೆಯ ರಕ್ಷಣೆಗೆ ಸಂಬಂಧಿಸಿದ ವಿಚಾರವಾಗಿದೆ. ನಾವು ಮೆಮೋ ಹಾಕಿದ್ದೆವು, ರಿಮಾಂಡ್ ಅಪ್ಲಿಕೇಶನ್‌ನಲ್ಲೂ ಲೈಂಗಿಕ ದೌರ್ಜನ್ಯ ಅಂತ ಹೇಳಿದ್ದೆವು. ಆದರೆ, ಈಗ ಸೆಕ್ಷನ್‌ 376 ಹಾಕಿರುವುದಕ್ಕೆ ದಾಖಲೆ ಇದೆ ಎಂದು ಎಸ್‌ಪಿಪಿ ಜಯ್ನಾ ಕೊಠಾರಿ ತಮ್ಮ ವಾದವನ್ನು ಮುಕ್ತಾಯಗೊಳಿಸಿದರು.

Continue Reading

ಕರ್ನಾಟಕ

Bhatkal News: ಭಟ್ಕಳದ ಕಡವಿನಕಟ್ಟೆ ಹೊಳೆಯಲ್ಲಿ ಮುಳುಗಿ ಇಬ್ಬರ ಸಾವು

Bhatkal News: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಕಡವಿನಕಟ್ಟೆ ಹೊಳೆಯಲ್ಲಿ ಮುಳುಗಿ ಇಬ್ಬರು ಮೃತಪಟ್ಟಿದ್ದಾರೆ. 15ಕ್ಕೂ ಹೆಚ್ಚು ಜನ ಹೊಳೆಯಲ್ಲಿ ಸ್ನಾನ ಮಾಡಲು ತೆರಳಿದ್ದಾಗ ಘಟನೆ ನಡೆದಿದೆ.

VISTARANEWS.COM


on

Bhatkal News
Koo

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ (Bhatkal News) ಕಡವಿನಕಟ್ಟೆ ಹೊಳೆಯಲ್ಲಿ ಮುಳುಗಿ ಇಬ್ಬರು ಮೃತಪಟ್ಟಿರುವುದು ಶುಕ್ರವಾರ ನಡೆದಿದೆ. ಹೊಳೆಯಲ್ಲಿ ಸ್ನಾನ ಮಾಡಲು ಹೋಗಿದ್ದಾಗ ದುರ್ಘಟನೆ ನಡೆದಿದೆ. ಸೂರಜ್ ನಾಯ್ಕ (17), ಪಾರ್ವತಿ ಶಂಕರ ನಾಯ್ಕ (35) ಮೃತರು.

ಮೃತರು ಭಟ್ಕಳದ ಕಂಡೆಕೋಡ್ಲು ನಿವಾಸಿಗಳಾಗಿದ್ದಾರೆ. ಮೃತ ಸೂರಜ್ ಡಿಪ್ಲೊಮಾ ವಿದ್ಯಾರ್ಥಿಯಾಗಿದ್ದಾನೆ. 15ಕ್ಕೂ ಹೆಚ್ಚು ಜನ ಹೊಳೆಯಲ್ಲಿ ಸ್ನಾನ ಮಾಡಲು ತೆರಳಿದ್ದಾಗ ಘಟನೆ ನಡೆದಿದೆ.

ಇದನ್ನೂ ಓದಿ | Bomb Blast: ಚೆಂಡೆಂದು ಭಾವಿಸಿ ಬಾಂಬ್‌ ಎತ್ತಿಕೊಂಡ ಮದರಸಾ ವಿದ್ಯಾರ್ಥಿ; ಸ್ಫೋಟಕ್ಕೆ ಮೌಲಾನಾ ಸಾವು

ನಮಾಜ್‌ ಮುಗಿಸಿ ಈಜಲು ಹೋದ ಮೂವರು ನೀರುಪಾಲು; ಐವರು ಪ್ರಾಣಾಪಾಯದಿಂದ

ಪಾರು

Drowned in water

ರಾಮನಗರ: ಈಜಲು ಹೋಗಿ‌ದ್ದ ಮೂವರು (Drowned In water) ನೀರುಪಾಲಾಗಿದ್ದಾರೆ. ರಾಮನಗರ ತಾಲೂಕಿನ ಅಚ್ಚಲು ಗ್ರಾಮದ ಬಳಿ ಘಟನೆ ನಡೆದಿದೆ. ಬಂಡೆಯ ಮೇಲಿನ ನೀರಿನ ಹೊಂಡದಲ್ಲಿ ಈಜಲು ಹೋದ ಶಾಬಾಜ್ (14), ಸುಲ್ತಾನ್ (13), ರಿಹಾನ್ ಖಾನ್ (16) ಮೃತಪಟ್ಟಿದ್ದಾರೆ.

ಶಾಬಾಜ್ ಹಾಗೂ ರಿಯಾನ್ ಖಾನ್ ಸಹೋದರರಾಗಿದ್ದು, ಮೃತರೆಲ್ಲರೂ ರಾಮನಗರ ಟೌನ್‌ನ ಸುಲ್ತಾನ್ ನಗರದವರು. ಒಟ್ಟು 8 ಯುವಕರ ತಂಡ ನಮಾಜ್ ಮುಗಿಸಿದ ಈಜಲು ಹೊಂಡಕ್ಕೆ ಇಳಿದಿದ್ದರು. ಈ ವೇಳೆ ಮೂವರು ನೀರುಪಾಲಾದರೆ, ಐವರು ಸಾವಿನ ದವಡೆಯಿಂದ ಬಚಾವ್‌ ಆಗಿದ್ದಾರೆ.

ಸ್ಥಳಕ್ಕೆ ರಾಮನಗರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾರ್ಯಾಚರಣೆ ನಡೆಸಿದ ಅಗ್ನಿಶಾಮಕ ಸಿಬ್ಬಂದಿ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: KSRTC Bus : ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ

ಹಾಸನದಲ್ಲಿ ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು

ಹಾಸನ: ಕೆರೆಯಲ್ಲಿ ಈಜಲು ಹೋಗಿದ್ದ ನಾಲ್ವರು ಬಾಲಕರು (Drowned in water) ನೀರುಪಾಲಾಗಿದ್ದರು. ಮತ್ತೋರ್ವ ಪ್ರಾಣಾಪಾಯದಿಂದ ಪಾರಾಗಿದ್ದ. ಹಾಸನ ಜಿಲ್ಲೆಯ ಆಲೂರು ತಾಲೂಕಿನ ತಿಮ್ಮನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿತ್ತು.

ಜೀವನ್ (13), ಸಾತ್ವಿಕ್ (11), ವಿಶ್ವ (12), ಪೃಥ್ವಿ (12) ಮೃತ ದುರ್ದೈವಿಗಳು. ಮೃತ ಮಕ್ಕಳು ಮುತ್ತಿಗೆ ಗ್ರಾಮದವರು. ಶಾಲೆಗೆ ರಜೆ ಇರುವುದರಿಂದ ಐವರು ಗೆಳೆಯರಲು ಈಜಲು ಹೊಳೆಗೆ ಹೋಗಿದ್ದರು. ಹೊಳೆಗೆ ಇಳಿದಾಗ ನೀರಿನಿಂದ ಹೊರಬರಲು ಆಗದೆ ನಾಲ್ವರು ನೀರುಪಾಲಾಗಿದ್ದರು. ಮತ್ತೊರ್ವ ಬದುಕುಳಿದಿದ್ದಾನೆ.

Drowned in water 4 boys death

ಇದನ್ನೂ ಓದಿ: Murder Case : ಚಾಕುವಿನಿಂದ ಇರಿದು ಯುವಕನ ಕೊಲೆ; ಹಂತಕರಿಗಾಗಿ ಪೊಲೀಸರ ಹುಡುಕಾಟ

ಈಜಲು ತೆರಳಿದ್ದ ಐವರು ಬಾಲಕರಲ್ಲಿ, ನಾಲ್ವರು‌ ಮುಳುಗಡೆ ಆಗುತ್ತಿದ್ದರು. ಇತ್ತ ಬದುಕುಳಿದ ಓರ್ವ ಬಾಲಕ ಓಡಿ ಹೋಗಿ ಸಮೀಪದಲ್ಲಿದ್ದವರಿಗೆ ಸುದ್ದಿ ತಿಳಿಸಿದ್ದ. ಆದರೆ ಕೆರೆ ಬಳಿ ಬಂದು ನೋಡುವಷ್ಟರಲ್ಲಿ ನಾಲ್ವರು ಬಾಲಕರು ಮುಳುಗಿದ್ದರು.

ಆಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದರು. ನೀರಲ್ಲಿ ಕೊಚ್ಚಿ ಹೋಗಿದ್ದ ಮೃತದೇಹಗಳನ್ನು ಅಗ್ನಿಶಾಮಕದಳದ ಸಿಬ್ಬಂದಿ ಶೋಧಕಾರ್ಯ ನಡೆಸಿ ಮೇಲೆತ್ತಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Prajwal Revanna Case: ಅಶ್ಲೀಲ ವಿಡಿಯೊ ವೈರಲ್ ಕೇಸ್‌; ವಕೀಲ ದೇವರಾಜೇಗೌಡ ಎಸ್‌ಐಟಿ ಕಸ್ಟಡಿಗೆ

Prajwal Revanna Case: ಜ್ವಲ್ ರೇವಣ್ಣ ಅಶ್ಲೀಲ ವಿಡಿಯೊ ವೈರಲ್ ಪ್ರಕರಣದಲ್ಲಿ ವಿಚಾರಣೆಗಾಗಿ ವಕೀಲ ದೇವರಾಜೇಗೌಡರನ್ನು ಎಸ್‌ಐಟಿ ವಶಕ್ಕೆ ನೀಡಲಾಗಿದೆ. ಪ್ರಕರಣದಲ್ಲಿ ಅವರನ್ನು 8ನೇ ಆರೋಪಿಯಾಗಿ ಹೆಸರು ಸೇರಿಸಲಾಗಿದೆ.

VISTARANEWS.COM


on

Prajwal Revanna Case
Koo

ಹಾಸನ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೊ ವೈರಲ್ ಪ್ರಕರಣದಲ್ಲಿ (Prajwal Revanna Case) ವಕೀಲ ದೇವರಾಜೇಗೌಡ, ಇದೀಗ ಎಂಟನೇ ಆರೋಪಿಯಾಗಿದ್ದಾರೆ. ಏಪ್ರಿಲ್ 23 ರಂದು ಹಾಸನ ನಗರದ ಸೈಬರ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್‌ಐಆರ್‌ನಲ್ಲಿ 8ನೇ ಆರೋಪಿಯಾಗಿ ದೇವರಾಜೇಗೌಡ ಅವರ ಹೆಸರು ಸೇರ್ಪಡೆ ಮಾಡಲಾಗಿದೆ. ಹೀಗಾಗಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ದೇವರಾಜೇಗೌಡ ಅವರನ್ನು ವಿಚಾರಣೆಗಾಗಿ ಒಂದು ದಿನದ ಮಟ್ಟಿಗೆ ಎಸ್‌ಐಟಿ ವಶಕ್ಕೆ ನೀಡಲಾಗಿದೆ.

ವಕೀಲ‌ ದೇವರಾಜೇಗೌಡ ಅವರನ್ನು ಶನಿವಾರ ಸಂಜೆ 5 ಗಂಟೆಯವರೆಗೆ ಎಸ್‌ಐಟಿ ವಶಕ್ಕೆ ನೀಡಿ 5ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ಆದೇಶ ಹೊರಡಿಸಿದೆ. ಅಶ್ಲೀಲ ವಿಡಿಯೊ ಪ್ರಕರಣ ಸಂಬಂಧ ದೇವರಾಜೇಗೌಡರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದ ಎಸ್‌ಐಟಿ ಪೊಲೀಸರು, ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ನೀಡುವಂತೆ ಮನವಿ ಮಾಡಿದ್ದರು. ಹೀಗಾಗಿ ದೇವರಾಜೇಗೌಡರನ್ನು ಎಸ್ಐಟಿ ಕಸ್ಟಡಿಗೆ ನೀಡಲಾಗಿದೆ.

ದೇವರಾಜೇಗೌಡ ವಿರುದ್ಧ ಪೆನ್‌ಡ್ರೈವ್ ಹಂಚಿಕೆ ಮಾಡಿರುವ ಆರೋಪವಿದ್ದು, ಹೆಚ್ಚಿನ ವಿಚಾರಣೆ ಅಗತ್ಯವಿದೆ. ಆದರೆ ಸಾಕ್ಷಿದಾರರನ್ನು ಇಲ್ಲಿ ಆರೋಪಿ ಮಾಡಲಾಗಿದೆ. ಉದ್ದೇಶ ಪೂರ್ವಕವಾಗಿಯೇ ತರಾತುರಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ದೇವರಾಜೇಗೌಡ ಪರ ವಕೀಲ ಸುನಿಲ್ ವಾದ ಮಂಡನೆ ಮಾಡಿದರು. ಅಂತಿಮವಾಗಿ ವಕೀಲರನ್ನು ಕಸ್ಟಡಿಗೆ ನೀಡಲು ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ | HD Revanna Case: ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ ಕೇಸ್‌ ವಿಚಾರಣೆ ಸೋಮವಾರಕ್ಕೆ ಮುಂದೂಡಿಕೆ; ರೇವಣ್ಣಗೆ ಜೈಲಾ? ಬೇಲಾ?

ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ (physical Abuse) ಕೇಸ್‌ ಆರೋಪಿ ವಕೀಲ ದೇವರಾಜೇಗೌಡ (Devarajegowda) ಅವರ ಪೊಲೀಸ್ ಕಸ್ಟಡಿ ಅಂತ್ಯವಾಗಿದ್ದರಿಂದ ಅವರನ್ನು ಶುಕ್ರವಾರ ನ್ಯಾಯಾಂಗ ಬಂಧನಕ್ಕೆ ನೀಡಲಾಗಿತ್ತು. ಮೇ 14 ರಂದು ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದ ಹೊಳೆನರಸೀಪುರ ನಗರ ಪೊಲೀಸರು, ಗುರುವಾರವೂ ಒಂದು ದಿನ ಕಸ್ಟಡಿಗೆ ಪಡೆದುಕೊಂಡಿದ್ದರು. ಶುಕ್ರವಾರ ಕೋರ್ಟ್‌ ಮುಂದೆ ಹಾಜರುಪಡಿಸಿದ ಹಿನ್ನೆಲೆಯಲ್ಲಿ ಅವರಿಗೆ ನ್ಯಾಯಾಂಗ ಬಂಧನವಿರಿಸಿ ಆದೇಶಿಸಲಾಗಿತ್ತು. ಸದ್ಯ ನ್ಯಾಯಾಂಗ ಬಂಧನದಲ್ಲಿದ್ದ ವಕೀಲರನ್ನು ಒಂದು ದಿನದ ಮಟ್ಟಿಗೆ ಎಸ್‌ಐಟಿ ಕಸ್ಟಡಿಗೆ ನೀಡಲಾಗಿದೆ.

ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ (Prajwal Revanna Case) ಸಾಕ್ಷ್ಯ ಬಿಡುಗಡೆಗೆ ಮುಂದಾಗಿದ್ದ ದೇವರಾಜೇಗೌಡ ಅವರು ಬೇರೆ ಕೇಸ್‌ನಲ್ಲಿ ಬಂಧನವಾಗಿದ್ದಾರೆ. ಒಟ್ಟು ನಾಲ್ಕು ದಿನ ಪೊಲೀಸ್ ಕಸ್ಟಡಿಯಲ್ಲಿದ್ದ ದೇವರಾಜೇಗೌಡ ಅವರನ್ನು ಮತ್ತೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿತ್ತು.

ದೇವರಾಜೇಗೌಡ ಮೇ 11ರಂದು ಬಂಧನಕ್ಕೆ ಒಳಗಾಗಿದ್ದರು. ಇವರ ಮೇಲೆ ಲೈಂಗಿಕ ದೌರ್ಜನ್ಯ, ಕಿರುಕುಳ ಆರೋಪಗಳನ್ನು ಹೊರಿಸಲಾಗಿದೆ. ಹೀಗಾಗಿ ಹೆಚ್ಚಿನ ವಿಚಾರಣೆಗಾಗಿ ಹೊಳೆನರಸೀಪುರ ನಗರ ಠಾಣೆ ಪೊಲೀಸರು ಅವರನ್ನು ಕಸ್ಟಡಿಗೆ ಪಡೆದುಕೊಂಡಿದ್ದರು. ಹೊಳೆನರಸೀಪುರ, ಹಾಸನ ಸೇರಿ ಇತರ ಅಗತ್ಯ ಸ್ಥಳಗಳಿಗೆ ಕರೆದೊಯ್ದು ವಿಚಾರಣೆಯನ್ನು ಕೈಗೊಂಡಿದ್ದರು.

ಸರ್ಕಾರದ ವಿರುದ್ಧ ತೊಡೆ ತಟ್ಟಿದ್ದ ದೇವರಾಜೇಗೌಡ

ವಕೀಲ ದೇವರಾಜೇಗೌಡ ಬಂಧನವಾಗಿರುವುದು ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಾದರೂ ಹಾಸನ ಪೆನ್ ಡ್ರೈವ್ ಪ್ರಕರಣಕ್ಕೇ ತಳುಕು ಹಾಕಿಕೊಂಡಿದೆ. ಈಗಾಗಲೇ ಮಾಜಿ ಸಂಸದ ಶಿವರಾಮೇಗೌಡ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ವಿರುದ್ಧ ಗಂಭೀರ ಆರೋಪ ಮಾಡಿದ್ದಲ್ಲದೆ, ಅವರ ಜತೆಗಿನ ಮಾತುಕತೆ ಎನ್ನಲಾದ ಆಡಿಯೊವನ್ನು ಬಿಡುಗಡೆ ಮಾಡಿದ್ದರು. ಇದಲ್ಲದೆ, ಸಾಕಷ್ಟು ವಿಡಿಯೊಗಳು, ಸಾಕ್ಷಿಗಳು ಸಹ ತಮ್ಮ ಬಳಿ ಇದೆ ಎಂದು ಹೇಳಿಕೊಂಡಿದ್ದರು. ಸಾಕ್ಷ್ಯಗಳನ್ನು ಮುಂದಿನ ದಿನಗಳಲ್ಲಿ ಸಿಬಿಐ ಮುಂದೆ ಇಡುತ್ತೇನೆ ಎಂದು ಸಹ ಸುದ್ದಿಗೋಷ್ಠಿ ನಡೆಸಿ ನೇರವಾಗಿ ರಾಜ್ಯ ಸರ್ಕಾರದ ವಿರುದ್ಧ ಸವಾಲು ಹಾಕಿದ್ದರು. ಆದರೆ, ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಅವರನ್ನು ಬಂಧಿಸಲಾಗಿದೆ.

ಇದನ್ನೂ ಓದಿ | CM Ibrahim : ಯಾರನ್ನು ಕೇಳಿ ಮೈತ್ರಿ ಮಾಡಿದ್ರಿ ಎಂದ ಸಿಎಂ ಇಬ್ರಾಹಿಂ; ಅ. 16ರಂದು ಜೆಡಿಎಸ್‌ಗೆ ರಾಜೀನಾಮೆ?

ಪತಿಯು ಮಾಲೀಕತ್ವದ ಸೈಟ್ ವಿಚಾರವಾಗಿ ದೇವರಾಜೇಗೌಡ ಅವರನ್ನು ಮಹಿಳೆಯೊಬ್ಬರು ಭೇಟಿಯಾಗಿದ್ದರು. ಆ ಪರಿಚಯವನ್ನು ದುರ್ಬಳಕೆ ಮಾಡಿಕೊಂಡು ಲೈಂಗಿಕವಾಗಿ ಬಳಸಿಕೊಂಡಿರುವ ಆರೋಪ ದೇವರಾಜೇಗೌಡ ವಿರುದ್ಧ ಕೇಳಿ ಬಂದಿದೆ.

Continue Reading

ಕ್ರೈಂ

Theft Case : ಪೊಲೀಸ್‌ ಬಸ್ಸನ್ನೇ ಕದಿಯಲು ಬಂದ ಕುಡುಕ; ಪೇಡ ಕೇಳಿದವ 15 ಕೆಜಿ ತುಪ್ಪ ಎಗರಿಸಿದ

theft Case : ಪ್ರತ್ಯೇಕ ಕಡೆಗಳಲ್ಲಿ ಕಳ್ಳರು ಕೈಚಳಕ ತೋರಿಸಿ ಪರಾರಿ ಆಗಿದ್ದಾರೆ. ಬೆಂಗಳೂರಲ್ಲಿ ಕಳ್ಳನೊಬ್ಬ ತುಪ್ಪ ಕದ್ದರೆ, ಕಲಬುರಗಿಯಲ್ಲಿ ಪೊಲೀಸರ ಬಸ್‌ನ್ನೇ ಎಗರಿಸಲು ಹೋಗಿ ಲಾಕ್‌ ಆಗಿದ್ದಾನೆ. ಹಾವೇರಿಯಲ್ಲಿ ಮನೆಗಳ್ಳತನ, ಬೆಂಗಳೂರಲ್ಲಿ ಸರಣಿ ಮೊಬೈಲ್‌ ಕಳ್ಳನ ಬಂಧನವಾಗಿದೆ. ವಿಜಯನಗರದಲ್ಲಿ ಮನೆ ಮಾಲೀಕರು ಟೆರೇಸ್‌ ಮೇಲೆ ಮಲಗಿದ್ದಾಗ ಕಳ್ಳತನವಾಗಿದೆ.

VISTARANEWS.COM


on

By

theft Case
Koo

ಬೆಂಗಳೂರು/ಕಲಬುರಗಿ: ಚಾಲಾಕಿ ಕಳ್ಳರು (Theft Case) ಹೇಗೆಲ್ಲ ಯಮಾರಿಸುತ್ತಾರೆ ಎಂಬುದಕ್ಕೆ ಈ ಪ್ರಕರಣಗಳೇ ಸಾಕ್ಷಿ.. ಬೆಂಗಳೂರಿನ ಕೆಂಗೇರಿ ಕೊಮ್ಮಘಟ್ಟ ನಂದಿನಿ ಪಾರ್ಲರ್‌ನಲ್ಲಿ ಚಾಲಾಕಿ ಕಳ್ಳನೊಬ್ಬ ಕೈಚಳಕ ತೋರಿದ್ದಾನೆ. ಪೇಡ ಖರೀದಿ ನೆಪದಲ್ಲಿ ಬಂದು 15 ಕೆ.ಜಿ ತುಪ್ಪವನ್ನು ಕದ್ದೊಯ್ದಿದ್ದಾನೆ.

ನಂದಿನಿ ಪಾರ್ಲರ್‌ಗೆ ಬಂದ ಕಳ್ಳನೊಬ್ಬ ಮನೆಯಲ್ಲಿ ಫಂಕ್ಷನ್ ಇದೆ. ಹದಿನೈದು ಕೆ.ಜಿ ತುಪ್ಪ ಕೊಡಿ ಎಂದಿದ್ದ. ಖರೀದಿಸಿದ 15 ಕೆಜಿ ತುಪ್ಪವನ್ನು ಬ್ಯಾಗ್‌ಗೆ ಹಾಕಿಕೊಂಡು. ನಂತರ ಅಂಗಡಿ ಮಾಲೀಕನಿಗೆ ಪೇಡ ಕೊಡಿ ಎಂದಿದ್ದ. ಅಷ್ಟೇ ಅಂಗಡಿ ಮಾಲೀಕ ಪೇಡ ಕೊಡಲು ತಿರುಗಿದಾಗ 15 ಕೆಜಿ ತುಪ್ಪದ ಬ್ಯಾಗ್‌ ಜತೆ ಎಸ್ಕೇಪ್ ಆಗಿದ್ದಾನೆ. ಪೇಡದೊಂದಿಗೆ ಬಂದ ಮಾಲೀಕ ಗ್ರಾಹಕ ಇಲ್ಲದೆ ಇರುವುದನ್ನು ಗಮನಿಸಿ ಓಡಿದ್ದಾನೆ. ಆದರೆ ಕಳ್ಳನ ಪತ್ತೆಯಾಗಿಲ್ಲ. ಚಾಲಾಕಿ ಕಳ್ಳನ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸದ್ಯ ಅಂಗಡಿ ಮಾಲೀಕ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಕಲಬುರಗಿಯಲ್ಲಿ ಸಿಎಆರ್ ಪೊಲೀಸರ ಬಸ್ ಕಳ್ಳತನಕ್ಕೆ ಯತ್ನ

ಪೊಲೀಸ್ ಕಮಿಷನರ್ ಕಛೇರಿಯಲ್ಲಿ ನಿಲ್ಲಿಸಿದ್ದ ಸಿಎಆರ್‌ ಪೊಲೀಸರ ಬಸ್ ಕಳ್ಳತನಕ್ಕೆ ಯತ್ನಿಸಿರುವ ಘಟನೆ ಕಲಬುರಗಿ ನಗರದಲ್ಲಿರುವ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ನಡೆದಿದೆ. ಸೋಮವಾರ ಮಧ್ಯರಾತ್ರಿ ಕಳ್ಳತನಕ್ಕೆ ಯತ್ನಿಸಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಛತ್ತಿಸ್‌ಘಡ ಮೂಲದ ಸೋನು ಭಗಿರಥ ಎಂಬಾತ ಕಲಬುರಗಿಯಲ್ಲಿ ಸೆಂಟ್ರಿಂಗ್ ಕೆಲಸ ಮಾಡಿಕೊಂಡಿದ್ದ. ಸೋಮವಾರ ಮಧ್ಯರಾತ್ರಿ ಕುಡಿದ ನಶೆಯಲ್ಲಿ ಕಮಿಷನರ್ ಕಚೇರಿಗೆ ಬಂದಿದ್ದಾನೆ. ಬಸ್‌ನ ಕಿಟಕಿಯಲ್ಲಿ ನೇತು ಹಾಕಿದ್ದ ಪೊಲೀಸ್ ಕಾನ್ಸಟೇಬಲ್ ಜೇಬಿಗೆ ಕೈ ಹಾಕಿ ಬಸ್‌ ಕೀ ತೆಗೆದುಕೊಂಡಿದ್ದ.

ಬಳಿಕ ಡ್ರೈವರ್‌ ಸೀಟ್‌ ಏರಿದ ಕುಡುಕ ಸೋನು ಬಸ್ ಸ್ಟಾರ್ಟ್ ಮಾಡಲು ಮುಂದಾಗಿದ್ದ. ಮಧ್ಯರಾತ್ರಿ ಬಸ್‌ ಸೌಂಡ್‌ ಕೇಳಿ ಎಚ್ಚೆತ್ತುಕೊಂಡ ಪೊಲೀಸ್ ಕಾನ್ಸಟೇಬಲ್ ತಕ್ಷಣ ಆರೋಪಿ ಸೋನು ಭಗಿರಥನನ್ನು ಬಂಧಿಸಿದ್ದಾರೆ. ಸದ್ಯ ಈ ಸಂಬಂಧ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:Karnataka Weather : ತುಮಕೂರಲ್ಲಿ ಸಿಡಿಲಿಗೆ ಜಾನುವಾರು ಬಲಿ; ಚಿಕ್ಕಮಗಳೂರಲ್ಲಿ ಮಳೆ ಅವಾಂತರಕ್ಕೆ ಜನ ತತ್ತರ

ಹಾವೇರಿಯಲ್ಲಿ ಕಳ್ಳರ ಕೈಚಳಕ

ಹಾವೇರಿ ಜಿಲ್ಲೆಯ ಹಾನಗಲ್ ಪಟ್ಟಣದಲ್ಲಿ ಕಳ್ಳರು ಕೈಚಳಕ ತೋರಿಸಿದ್ದಾರೆ. ಹಾನಗಲ್ ಪಟ್ಟಣದ ಕೆಎಚ್‌ಬಿ ಕಾಲೋನಿಯ ವಿರೇಶ ಬಾಳಗೊಂಡರ ಹಾಗೂ ಕುಮಾರೇಶ್ವರ ನಗರದ ರವೀಂದ್ರ ಶಿರಗೋಡ ಎನ್ನುವರ ಮನೆಯಲ್ಲಿ ಕಳ್ಳತನವಾಗಿದೆ. ಸ್ಥಳಕ್ಕೆ ಹಾನಗಲ್ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರವೀಂದ್ರ ಮನೆಯಲ್ಲಿ 8 ತೊಲೆ ಬಂಗಾರ, ನಗದು ಹಾಗೂ ವಿರೇಶ ಮನೆಯಲ್ಲಿ 12 ತೊಲೆ ಬಂಗಾರ 50 ಸಾವಿರ ರೂ. ಕಳ್ಳತನ ಮಾಡಿದ್ದಾರೆ.

ಬೆಂಗಳೂರಲ್ಲಿ ಸರಣಿ ಮೊಬೈಲ್‌ ಕಳ್ಳನ ಬಂಧನ

ಬೆಂಗಳೂರಿನ ವಿವಿಧೆಡೆ ಸರಣಿ ಮೊಬೈಲ್‌ ಕಳ್ಳತನ‌ ನಡೆಸುತ್ತಿದ್ದ ಕಳ್ಳನ‌ ಬಂಧನವಾಗಿದೆ. ಸೈಯದ್ ಪರ್ವೀಜ್@ಪರ್ವೀಜ್(25) ಬಂಧಿತ ಆರೋಪಿಯಾಗಿದ್ದಾನ. ರಸ್ತೆ ಬದಿಯಲ್ಲಿ ಮೊಬೈಲ್‌ನಲ್ಲಿ ಮಾತಾನಾಡಿಕೊಂಡು ಹೋಗುವವರನ್ನೇ ಟಾರ್ಗೆಟ್ ಮಾಡುತ್ತಿದ್ದ ಸೈಯದ್‌ ಬೈಕ್‌ನಲ್ಲಿ ಬಂದು ಮೊಬೈಲ್ ಎಗರಿಸುತ್ತಿದ್ದ.

theft Case

ಆರೋಪಿಯಿಂದ ಒಟ್ಟು 5ಲಕ್ಷ ರೂ. ಬೆಲೆಬಾಳುವ 9 ಮೊಬೈಲ್ ಫೋನ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಕೃತ್ಯಕ್ಕೆ ಬಳಸುತ್ತಿದ್ದ ಸುಜುಕಿ ಆಕ್ಸೆಸ್ ಮತ್ತು ಟಿವಿಎಸ್ ಎನ್ಟಾರ್ಕ್ ವಾಹನವನ್ನು ವಶಕ್ಕೆ ಮಾಡಲಾಗಿದೆ. ಅನ್ನಪೂರ್ಣೇಶ್ವರಿ ನಗರ, ಜೆಪಿ ನಗರ, ಚಾಮರಾಜಪೇಟೆ ವ್ಯಾಪ್ತಿಯಲ್ಲಿ ಕಳ್ಳತನ ನಡೆಸುತ್ತಿದ್ದ. ಈ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ 10ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಆರೋಪಿಯಾಗಿದ್ದ. ಸದ್ಯ ಅನ್ನಪೂರ್ಣೇಶ್ವರಿ ನಗರ ಪೊಲೀಸರಿಂದ ಆರೋಪಿಯನ್ನು ಬಂಧಿಸಿದ್ದಾರೆ.

ವಿಜಯನಗರದಲ್ಲಿ ಮನೆ ಮೇಲೆ ಮಲಗಿದ್ದಾಗ ಕಳ್ಳತನ

ವಿಪರೀತ ಸೆಕೆ ಎಂದು ಮನೆ ಮಾಲೀಕರು ರಾತ್ರಿ ಮನೆಯ ಟೆರೇಸ್‌ ಮೇಲೆ ಮಲಗಿದ್ದಾಗ ಕಳ್ಳನೊಬ್ಬ ಮನೆಗೆ ಕಳ್ಳತನ ಮಾಡಿದ್ದಾನೆ. ವಿಜಯನಗರದ ಹೊಸಪೇಟೆ ತಾಲೂಕಿನ ವಡ್ಡರಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಪ್ರದೀಪ್ ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿದೆ. ಒಂದೂವರೇ ತೊಲೆ ಬಂಗಾರ, 1 ಲಕ್ಷ ರೂ. ಹಣ, 750 ಗ್ರಾಂ ಬೆಳ್ಳಿ ಕಳ್ಳತನವಾಗಿದೆ. ಹೊಸಪೇಟೆಯ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ವಾನದಳದಿಂದಲೂ ಪರಿಶೀಲನೆ ನಡೆಸಿ ಪೊಲೀಸರು ಸಿಸಿಟಿವಿ ಫುಟೇಜ್ ಪರಿಶೀಲನೆ ಮಾಡುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Holenarasipura sexual assault case lot of confusion in the victim statement against HD Revanna Case
ಕ್ರೈಂ7 mins ago

HD Revanna Case: ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ ಕೇಸ್‌; ರೇವಣ್ಣ ವಿರುದ್ಧ ಸಂತ್ರಸ್ತೆ ಹೇಳಿಕೆಯಲ್ಲಿ ಭಾರಿ ಗೊಂದಲ!

Bhatkal News
ಕರ್ನಾಟಕ11 mins ago

Bhatkal News: ಭಟ್ಕಳದ ಕಡವಿನಕಟ್ಟೆ ಹೊಳೆಯಲ್ಲಿ ಮುಳುಗಿ ಇಬ್ಬರ ಸಾವು

Dubbing Premier League
ಕ್ರಿಕೆಟ್18 mins ago

Dubbing Premier League : ಶನಿವಾರದಿಂದ 3ನೇ ಆವೃತ್ತಿಯ ಡಬ್ಬಿಂಗ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿ

Uttar Pradesh
ದೇಶ21 mins ago

Uttar Pradesh: ಉತ್ತರ ಪ್ರದೇಶದಲ್ಲಿ ಲೋಕಸಭೆ ಸಮರ; ನೀವು ತಿಳಿಯಲೇಬೇಕಾದ 5 ಕುತೂಹಲಕರ ಅಂಶಗಳು ಇಲ್ಲಿವೆ

Prajwal Revanna Case
ಕರ್ನಾಟಕ37 mins ago

Prajwal Revanna Case: ಅಶ್ಲೀಲ ವಿಡಿಯೊ ವೈರಲ್ ಕೇಸ್‌; ವಕೀಲ ದೇವರಾಜೇಗೌಡ ಎಸ್‌ಐಟಿ ಕಸ್ಟಡಿಗೆ

theft Case
ಕ್ರೈಂ59 mins ago

Theft Case : ಪೊಲೀಸ್‌ ಬಸ್ಸನ್ನೇ ಕದಿಯಲು ಬಂದ ಕುಡುಕ; ಪೇಡ ಕೇಳಿದವ 15 ಕೆಜಿ ತುಪ್ಪ ಎಗರಿಸಿದ

7 books release programme on May 19 in Bengaluru
ಬೆಂಗಳೂರು1 hour ago

Bengaluru News: ಬೆಂಗಳೂರಿನಲ್ಲಿ ಮೇ 19ರಂದು ವೀರಲೋಕ ಪ್ರಕಾಶನದ 7 ಕೃತಿಗಳ ಲೋಕಾರ್ಪಣೆ

Pension and NAREGA money credited to farmers loans CM Siddaramaiah slams bank
ರಾಜಕೀಯ1 hour ago

CM Siddaramaiah: ಪಿಂಚಣಿ, ನರೇಗಾ ಹಣ ರೈತರ ಸಾಲಕ್ಕೆ ಜಮೆ; ಬ್ಯಾಂಕ್‌ ವಿರುದ್ಧ ಸಿಎಂ ಗರಂ! ಕೂಡಲೇ ನಿಲ್ಲಿಸಲು ಸೂಚನೆ

Canne Film Festival 2024
ಪ್ರಮುಖ ಸುದ್ದಿ1 hour ago

Canne Film Festival 2024: ಕಾನ್‌ ಫಿಲ್ಮ್ ಫೆಸ್ಟಿವಲ್‌ನ ರೆಡ್‌ ಕಾರ್ಪೆಟ್‌ನಲ್ಲಿ ತಾರೆಯರ ಫ್ಯಾಷನ್ ಕಲರವ!

Konkani Book Release
ಕಲೆ/ಸಾಹಿತ್ಯ1 hour ago

Konkani Book Release: ಇಟಾಲಿಯನ್-ಬ್ರಿಟಿಷ್ ಲೇಖಕ ರಚಿಸಿರುವ ಜಿಎಸ್‌ಬಿ ಕೊಂಕಣಿ ಮಾರ್ಗದರ್ಶಿ ಕೃತಿ ಬಿಡುಗಡೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ13 hours ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ14 hours ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ1 day ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು1 day ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ2 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ3 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ3 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20243 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20243 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌