Nandamuri Balakrishna | ‘ವೀರ ಸಿಂಹ ರೆಡ್ಡಿ’ ಸಿನಿಮಾದ ದೃಶ್ಯಕ್ಕೆ ಟ್ರೋಲ್‌ಗೆ ಗುರಿಯಾದ ಬಾಲಯ್ಯ! - Vistara News

ಟಾಲಿವುಡ್

Nandamuri Balakrishna | ‘ವೀರ ಸಿಂಹ ರೆಡ್ಡಿ’ ಸಿನಿಮಾದ ದೃಶ್ಯಕ್ಕೆ ಟ್ರೋಲ್‌ಗೆ ಗುರಿಯಾದ ಬಾಲಯ್ಯ!

ಸೋಷಿಯಲ್ ಮೀಡಿಯಾದಲ್ಲೂ ಸಿನಿಮಾ ದೊಡ್ಡ ಟ್ರೆಂಡ್ ಆಗಿದೆ. ಇದೀಗ ಬಾಲಯ್ಯ (Nandamuri Balakrishna) ಟ್ರೋಲ್‌ಗೆ ಗುರಿಯಾಗಿದ್ದಾರೆ.

VISTARANEWS.COM


on

Nandamuri Balakrishna
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ನಂದಮೂರಿ ಬಾಲಕೃಷ್ಣ (Nandamuri Balakrishna ) ಅಭಿನಯದ ‘ವೀರಸಿಂಹ ರೆಡ್ಡಿ’ ಸಿನಿಮಾ ತೆಲುಗು ರಾಜ್ಯಗಳಲ್ಲಿ ಟಾಕ್ ಆಫ್ ದಿ ಟೌನ್ ಆಗಿದೆ. ಸೋಷಿಯಲ್ ಮೀಡಿಯಾದಲ್ಲೂ ಸಿನಿಮಾ ದೊಡ್ಡ ಟ್ರೆಂಡ್ ಆಗಿದೆ. ಶ್ರುತಿ ಹಾಸನ್ ಅಭಿನಯದ ಈ ಚಿತ್ರ ಬಿಡುಗಡೆಗೂ ಮುನ್ನವೇ ಹಾಡುಗಳು, ಟ್ರೈಲರ್‌, ಡೈಲಾಗ್‌ಗಳಿಂದ ಜನರಿಂದ ಮೆಚ್ಚುಗೆ ಗಳಿಸಿತ್ತು. ಇದೀಗ ಬಾಲಯ್ಯ ಟ್ರೋಲ್‌ಗೆ ಗುರಿಯಾಗಿದ್ದಾರೆ.

ಜನವರಿ 12ರಂದು ʻವೀರಸಿಂಹ ರೆಡ್ಡಿ’ ಸಿನಿಮಾ ಬಿಡುಗಡೆಗೊಂಡಿದ್ದು, ಚಿತ್ರದ ಕೆಲವು ಫೈಟಿಂಗ್‌ ಸೀನ್‌ಗಳಲ್ಲಿ ಲಾಜಿಕ್‌ ಇಲ್ಲ ಎಂದು ನೆಟ್ಟಿಗರು ಟ್ರೋಲ್‌ ಮಾಡುತ್ತಿದ್ದಾರೆ. ‘ವೀರಸಿಂಹ ರೆಡ್ಡಿ’ ಚಿತ್ರದ ಕೆಲವು ವಿಡಿಯೊ ತುಣುಕುಗಳು ಲೀಕ್ ಆಗಿದ್ದು, ಒಂದು ದೃಶ್ಯದಲ್ಲಿ ಬಾಲಯ್ಯ ಅವರು ಕಾರನ್ನು ಒದೆಯುತ್ತಾರೆ. ಕಾರು ಅದೇ ವೇಗದಲ್ಲಿ ಹಿಂದಕ್ಕೆ ಸರಿಯುತ್ತದೆ. ಈ ದೃಶ್ಯದ ವಿಡಿಯೊವನ್ನು ವ್ಯಾಪಕವಾಗಿ ಶೇರ್ ಮಾಡುವ ಮೂಲಕ ನೆಟ್ಟಿಗರು ಟ್ರೋಲ್ ಮಾಡಲು ಆರಂಭಿಸಿದ್ದಾರೆ.

ಇದನ್ನೂ ಓದಿ | Nandamuri Balakrishna | ನಂದಮೂರಿ ಬಾಲಕೃಷ್ಣ ಅಭಿನಯದ ‘ವೀರ ಸಿಂಹ ರೆಡ್ಡಿ’ ಬಿಡುಗಡೆ, ಅಭಿಮಾನಿಗಳಿಗೆ ಹಬ್ಬ

ಸಾಯಿ ಮಾಧವ್ ಬುರ್ರಾ ಅವರ ಸಂಭಾಷಣೆ ಈ ಚಿತ್ರದ ವಿಶೇಷ ಆಕರ್ಷಣೆ. ತಮನ್ ಅವರ ಸಂಗೀತ ಮತ್ತು ಹಿನ್ನೆಲೆ ಸಂಗೀತ ಚಿತ್ರಕ್ಕೆ ಪ್ಲಸ್ ಪಾಯಿಂಟ್. ಮತ್ತೊಂದೆಡೆ, ಬಾಲಕೃಷ್ಣ ಅವರ ಅಭಿನಯವು ಪ್ರೇಕ್ಷಕರಿಗೆ ಹೆಚ್ಚು ಹಿಡಿಸಿದೆ.

ಗೋಪಿಚಂದ್ ಮಲಿನೇನಿ ನಿರ್ದೇಶನದ ವೀರಸಿಂಹ ರೆಡ್ಡಿ ಮಾಸ್-ಆ್ಯಕ್ಷನ್ ಡ್ರಾಮಾ ಚಿತ್ರ. ಇದೇ ಮೊದಲ ಬಾರಿಗೆ ಶ್ರುತಿ ಹಾಸನ್ ಮತ್ತು ಬಾಲಕೃಷ್ಣ ತೆರೆ ಮೇಲೆ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಕನ್ನಡದ ನಟ ದುನಿಯಾ ವಿಜಯ್ ಕೂಡ ಈ ಚಿತ್ರದಲ್ಲಿ ನಟಿಸಿದ್ದಾರೆ.ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನವಿನ್ ನೂಲಿ ಸಂಕಲನ, ರಿಶಿ ಪುಂಜಾಬಿ ಕ್ಯಾಮೆರಾ ವರ್ಕ್, ರಾಮ್- ಲಕ್ಷ್ಮಣ್ ಹಾಗೂ ವೆಂಕಟ್ ಸಾಹಸ ನಿರ್ದೇಶನ ಚಿತ್ರಕ್ಕಿದೆ.

ಇದನ್ನೂ ಓದಿ | Nandamuri Balakrishna | ಬಾಲಯ್ಯ ಜತೆ ದುನಿಯಾ ವಿಜಯ್ ನಟಿಸಿದ ‘ವೀರ ಸಿಂಹ ರೆಡ್ಡಿ’ ಟ್ರೈಲರ್‌ ಔಟ್‌!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Rishab Shetty And NTR: ತಾಯಿ ಜತೆಗೆ ಉಡುಪಿ ಶ್ರೀಕೃಷ್ಣನಿಗೆ ನಮಿಸಿದ ತೆಲುಗು ನಟ ಜ್ಯೂ.ಎನ್‌ಟಿಆರ್‌; ಜತೆಯಾದ ಡಿವೈನ್‌ ಸ್ಟಾರ್‌ ರಿಷಬ್‌

Rishab Shetty And NTR: ಮಂಗಳೂರು ಏರ್‌ಪೋರ್ಟ್‌ನಲ್ಲಿ ಕುಂದಾಪುರ ಬಾಯ್ಸ್ ದರ್ಶನ ಕೊಟ್ಟಿದ್ದಾರೆ. ಮಂಗಳೂರು ಏರ್‌ಪೋರ್ಟ್‌ನಲ್ಲಿ ರಿಷಬ್ ಶೆಟ್ಟಿ ಮತ್ತು ಜೂ. ಎನ್.ಟಿ.ಆರ್ ಭೇಟಿಯಾದರು. ಇದರ ಕಂಪ್ಲೀಟ್‌ ಮಾಹಿತಿ ಇಲ್ಲಿದೆ.

VISTARANEWS.COM


on

Rishab Shetty And NTR
Koo

Rishab Shetty And NTR: ಇಂದು (ಆಗಸ್ಟ್‌ 31) ಕುಟುಂಬ ಸಮೇತರಾಗಿ ಉಡುಪಿಯ ಶ್ರೀಕೃಷ್ಣ ಮಠಕ್ಕೆ ರಿಷಬ್ ಶೆಟ್ಟಿ ಮತ್ತು ಜ್ಯೂ. ಎನ್‌ಟಿಆರ್ (Rishab Shetty And NTR) ಭೇಟಿ ನೀಡಿ ದೇವರ ದರ್ಶನ ಪಡೆದುಕೊಂಡರು.

Rishab Shetty And NTR with family

ಶ್ರಾವಣ ಮಾಸದ ಶನಿವಾರದಂದು ದೇವಾಲಯಕ್ಕೆ ಭೇಟಿ ನೀಡಿ ದರ್ಶನ ಪಡೆದ ಸ್ಟಾರ್ ನಟರು ದೇವರ ದರ್ಶನ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ್ದರು.

NTR and Rishab Shetty

ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡುವ ಮೊದಲು ರಿಷಬ್ ಶೆಟ್ಟಿ ಮತ್ತು ಜೂ. ಎನ್.ಟಿ.ಆರ್ ಮಂಗಳೂರು ಏರ್‌ಪೋರ್ಟ್‌ನಲ್ಲಿ ಭೇಟಿಯಾಗಿದ್ದರು ಮತ್ತು ಡಿವೈನ್ ಸ್ಟಾರ್, ಟೈಗರ್‌ನನ್ನು ಸ್ವಾಗತಿಸಿದ್ದರು.

ಸೆ.2ರಂದು ನನ್ನ ತಾಯಿ ಹುಟ್ಟುಹಬ್ಬ ಇದೆ. ಅವರ ತವರು ಕುಂದಾಪುರಕ್ಕೆ ಬರಬೇಕೆಂಬ ಮಹಾದಾಸೆ ಇತ್ತು. ಮಗನಾಗಿ ಅವರ ಸಣ್ಣ ಆಸೆಯನ್ನು ಈಡೇರಿಸುವುದೇ ನನ್ನ ಭಾಗ್ಯ. ಅವರ ಹುಟ್ಟುಹಬ್ಬಕ್ಕೆ ಇದೇ ದೊಡ್ಡ ಗಿಫ್ಟ್‌. ಅಮ್ಮನನ್ನು ಕರೆದುಕೊಂಡು ಬಂದಿದ್ದು ಖುಷಿ ಆಯಿತು. ಜತೆಗೆ ಆಸೆ ಈಡೇರಿಸಿ ಎಂಬ ನೆಮ್ಮದಿ ಇದೆ ಎಂದು ಟಾಲಿವುಡ್‌ ನಟ ಜ್ಯೂ.ಎನ್‌ಟಿಆರ್‌ ತಿಳಿಸಿದರು.

Rishab Shetty And NTR photo

ಇವರಿಬ್ಬರ ದಿಢೀರ್ ಭೇಟಿ ನೋಡಿ “ತಾರಕ್ ಕಾಂತಾರದಲ್ಲಿ ನಟಿಸುತ್ತಾರಾ?” “ರಿಷಬ್ ಸಿಂಹಾದ್ರಿ ಭೇಟಿ ಏನು ಸೀಕ್ರೆಟ್ ಏನು?” ಹೀಗೆ ಹಲವಾರು ಪ್ರಶ್ನೆಗಳು ಅಭಿಮಾನಿಗಳಲ್ಲಿ ಕುತುಹಲ ಮೂಡಿಸಿದ್ದವು.

ಇದನ್ನೂ ಓದಿ: Sonal Monteiro: ಚರ್ಚ್ ವೆಡ್ಡಿಂಗ್‌ಗೂ ಮುನ್ನ ಸೋನಲ್ ಮನೆಯಲ್ಲಿ Roce Celebration

Continue Reading

ಟಾಲಿವುಡ್

Kannappa Movie: ಕಣ್ಣಪ್ಪ ಚಿತ್ರದ ಮೂಲಕ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ಮೋಹನ್‌ ಬಾಬು ಮೊಮ್ಮಗ ಅವ್ರಾಮ್ ಮಂಚು

ಕಣ್ಣಪ್ಪ ಚಿತ್ರದ ನಾಯಕ ವಿಷ್ಣು ಮಂಚು ಅವರ ಮಗ ಮತ್ತು ಮೋಹನ್ ಬಾಬು ಅವರ ಮೊಮ್ಮಗ ಅವ್ರಾಮ್ ಮಂಚು ಇದೀಗ ಬಣ್ಣದ ಲೋಕಕ್ಕೆ ಪಾದಾರ್ಪಣೆ ಮಾಡುತ್ತಿದ್ದಾನೆ. ಈ ಮೂಲಕ ಮೋಹನ್‌ ಬಾಬು ಕುಟುಂಬದ ಮೂರನೇ ತಲೆಮಾರು ಟಾಲಿವುಡ್‌ ಅಂಗಳಕ್ಕೆ ಕಾಲಿಡುತ್ತಿದೆ. ಅದೂ ಅಪ್ಪನ ಸಿನಿಮಾದಲ್ಲಿ ಎಂಬುದು ವಿಶೇಷ. ಕಣ್ಣಪ್ಪ ಚಿತ್ರದಲ್ಲಿ (Kannappa movie) ನಾಯಕನ ಬಾಲ ಪಾತ್ರಧಾರಿಯಾಗಿ ಅವ್ರಾಮ್‌ ಕಾಣಿಸಿಕೊಳ್ಳಲಿದ್ದಾನೆ. ಈ ಕುರಿತ ವಿವರ ಇಲ್ಲಿದೆ.

VISTARANEWS.COM


on

Kannappa movie
Koo

ಬೆಂಗಳೂರು: ಕಣ್ಣಪ್ಪ ಸಿನಿಮಾದಿಂದ ಹೊಸ ಅಪ್‌ಡೇಟ್‌ ಬಂದಿದೆ. ಕಣ್ಣಪ್ಪ ಚಿತ್ರದ ನಾಯಕ ವಿಷ್ಣು ಮಂಚು ಅವರ ಮಗ ಮತ್ತು ಮೋಹನ್ ಬಾಬು ಅವರ ಮೊಮ್ಮಗ ಅವ್ರಾಮ್ ಮಂಚು ಇದೀಗ ಬಣ್ಣದ ಲೋಕಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಈ ಮೂಲಕ ಮೋಹನ್‌ ಬಾಬು ಕುಟುಂಬದ ಮೂರನೇ ತಲೆಮಾರು ಟಾಲಿವುಡ್‌ ಅಂಗಳಕ್ಕೆ ಕಾಲಿಡುತ್ತಿದೆ. ಅದೂ ಅಪ್ಪನ ಸಿನಿಮಾದಲ್ಲಿ ಎಂಬುದು ವಿಶೇಷ. ಕಣ್ಣಪ್ಪ ಚಿತ್ರದಲ್ಲಿ (Kannappa Movie) ನಾಯಕನ ಬಾಲ ಪಾತ್ರಧಾರಿಯಾಗಿ ಅವ್ರಾಮ್‌ ಕಾಣಿಸಿಕೊಳ್ಳಲಿದ್ದಾನೆ.

ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಚಿತ್ರತಂಡ ಕಣ್ಣಪ್ಪ ಚಿತ್ರದಿಂದ ಅವ್ರಾಮ್‌ ಮಂಚುವಿನ ಫಸ್ಟ್‌ ಲುಕ್‌ ಬಿಡುಗಡೆ ಮಾಡಿದೆ . ಅಪ್ಪ ವಿಷ್ಣು ಮಂಚು ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಂಚಿಕೊಂಡು, ಹ್ಯಾಪಿ ಜನ್ಮಾಷ್ಟಮಿ, ಕಣ್ಣಪ್ಪ ಚಿತ್ರದ ಮೂಲಕ ನನ್ನ ಮಗನನ್ನು ಲಾಂಚ್‌ ಮಾಡುತ್ತಿರುವುದಕ್ಕೆ ಹೆಮ್ಮೆ ಎನಿಸುತ್ತಿದೆ ಎಂದು ಫಸ್ಟ್‌ ಲುಕ್‌ ಸಮೇತ ಪೋಸ್ಟ್‌ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Bengaluru Power Cut: ಆ.28 ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

ಮುಖೇಶ್‌ ಕುಮಾರ್‌ ಸಿಂಗ್‌ ನಿರ್ದೇಶನದ ಈ ಚಿತ್ರದಲ್ಲಿ ಮೋಹನ್‌ಲಾಲ್, ಪ್ರಭಾಸ್, ಅಕ್ಷಯ್ ಕುಮಾರ್, ಮೋಹನ್ ಬಾಬು, ಶರತ್‌ಕುಮಾರ್, ಬ್ರಹ್ಮಾನಂದಂ ಮತ್ತು ಕಾಜಲ್ ಅಗರ್ವಾಲ್ ಸೇರಿದಂತೆ ದೊಡ್ಡ ತಾರಾಗಣವಿದೆ. 24 ಫ್ರೇಮ್ಸ್ ಫ್ಯಾಕ್ಟರಿ ಮತ್ತು ಎವಿಎ ಎಂಟರ್‌ಟೈನ್‌ಮೆಂಟ್ ಬ್ಯಾನರ್‌ನಲ್ಲಿ ಕಣ್ಣಪ್ಪ ಸಿನಿಮಾವನ್ನು ನಿರ್ಮಾಣ ಮಾಡಲಾಗುತ್ತಿದೆ. ಬಿಗ್‌ಬಜೆಟ್‌ನ ಈ ಸಿನಿಮಾದ ಬಹುಪಾಲು ಚಿತ್ರೀಕರಣವನ್ನು ನ್ಯೂಜಿಲೆಂಡ್‌ನಲ್ಲಿ ಶೂಟ್‌ ಮಾಡಲಾಗಿದೆ.

ಇದನ್ನೂ ಓದಿ: Uttarkashi Tour: ಪ್ರವಾಸ ಪ್ರಿಯರಿಗೆ ಸ್ವರ್ಗ ಉತ್ತರಕಾಶಿಗೆ ಹೋಗಲು ಉತ್ತಮ ಸಮಯ ಯಾವುದು?

ಈ ಕುರಿತು ಮಾತನಾಡಿದ ವಿಷ್ಣು, “ಬಾಲ ಕಣ್ಣಪ್ಪನಾಗಿ ಅವ್ರಾಮ್ ಹೆಜ್ಜೆ ಹಾಕುವುದನ್ನು ನೋಡುವುದು ನನಗೆ ಭಾವನಾತ್ಮಕ ಅನುಭವವಾಗಿದೆ. ಈ ಚಿತ್ರವು ನಮ್ಮ ಕುಟುಂಬದಲ್ಲಿ ತಲೆಮಾರುಗಳ ಕನಸಾಗಿದೆ. ಅದರಲ್ಲೂ ಈ ಚಿತ್ರದ ಮೂಲಕ ಅವ್ರಾಮ್ ಅವರನ್ನು ಜಗತ್ತಿಗೆ ಪರಿಚಯಿಸಲು ನನಗೆ ಹೆಮ್ಮೆ ಇದೆ. ಅಪ್ರತಿಮ ಪಾತ್ರ. ಪರದೆಯ ಮೇಲೆ ಅವನ ಮ್ಯಾಜಿಕ್ ಅನ್ನು ನೋಡಲು ಎಲ್ಲರಂತೆ ನಾನೂ ಕಾತರದಲ್ಲಿದ್ದೇನೆ” ಎಂದಿದ್ದಾರೆ.

Continue Reading

ಸಿನಿಮಾ

Samantha Ruth Prabhu: ನೀವು ಪರಿಪೂರ್ಣ ತಂದೆಯಾಗುತ್ತೀರಿ; ನಾಗಚೈತನ್ಯ ಬಗ್ಗೆ ಸಮಂತಾ ಹೇಳಿದ ವಿಡಿಯೊ ವೈರಲ್

ಶ್ರೇಷ್ಠ ವ್ಯಕ್ತಿಯಾಗಿರುವ ನೀವು ಒಂದು ದಿನ “ಪರಿಪೂರ್ಣ” ತಂದೆಯಾಗುತ್ತೀರಿ ಎಂದು ನಾಗಚೈತನ್ಯ ಅವರನ್ನು ಉದ್ದೇಶಿಸಿ ಸಮಂತಾ ರುತ್ ಪ್ರಭು (Samantha Ruth Prabhu) ಹೇಳಿರುವ ವಿಡಿಯೋ ಒಂದು ಮತ್ತೆ ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಂಡಿದೆ. ನಾಗ ಚೈತನ್ಯ ಮತ್ತು ಸಮಂತಾ ಅವರ ವಿವಾಹದ ಹಳೆಯ ವಿಡಿಯೋದ ತುಣುಕು ಇದಾಗಿದೆ.

VISTARANEWS.COM


on

By

Samantha Ruth Prabhu
Koo

ಸಮಂತಾ ರುತ್ ಪ್ರಭು (Samantha Ruth Prabhu) ಮತ್ತು ನಾಗ ಚೈತನ್ಯ (Naga Chaitanya) ಅವರ ವಿವಾಹದ ಹಳೆಯ ವಿಡಿಯೋವೊಂದು (Viral Video) ಸಾಮಾಜಿಕ ಜಾಲತಾಣದಲ್ಲಿ (social media) ಮತ್ತೆ ಕಾಣಿಸಿಕೊಂಡಿದೆ. ಇಬ್ಬರೂ ಕ್ರಿಶ್ಚಿಯನ್ ಸಂಪ್ರದಾಯದ ಪ್ರಕಾರ ವಿವಾಹ ಪ್ರತಿಜ್ಞೆ ( taking vows) ಮಾಡುವುದನ್ನು ಇದರಲ್ಲಿ ಕಾಣಬಹುದು. ಸಮಂತಾ ಸುಂದರವಾದ ಬಿಳಿ ಗೌನ್ ಧರಿಸಿ ನಾಗ ​​ಚೈತನ್ಯನ ಬಗ್ಗೆ ಮಾತನಾಡಿದ್ದಾರೆ.

ಶ್ರೇಷ್ಠ ವ್ಯಕ್ತಿಯಾಗಿರುವ ನೀವು ಒಂದು ದಿನ “ಪರಿಪೂರ್ಣ” ತಂದೆಯಾಗುತ್ತೀರಿ ಎಂದು ನಾಗಚೈತನ್ಯ ಅವರನ್ನು ಉದ್ದೇಶಿಸಿ ಸಮಂತಾ ಹೇಳಿದ್ದಾರೆ.

ಹೇಗೆ ಸ್ವರವನ್ನು ಬದಲಾಯಿಸದೆಯೇ ಎಲ್ಲಾ ವಾದಗಳನ್ನು ಪರಿಹರಿಸಲಾಗುತ್ತದೆಯೋ ಮತ್ತು ಅಳುವುದನ್ನು ಬಿಟ್ಟು ಬೇರೆ ಯಾವುದನ್ನೂ ಪಡೆಯುವುದನ್ನು ತಪ್ಪಿಸಲು ನನಗೆ ಎಂದಿಗೂ ಅನುಮತಿಸುವುದಿಲ್ಲ. ನಿಮ್ಮಿಂದಾಗಿ ನಾನು ನಿಧಾನವಾಗಿ ಮತ್ತು ಖಚಿತವಾಗಿ ನಾನು ಆಗಬೇಕೆಂದು ಕನಸು ಕಂಡಿದ್ದೇನೆ ಎಂದು ಭಾವಿಸುತ್ತೇನೆ ಎಂದು ತಿಳಿಸಿದ್ದಾರೆ.


ಅವರು ತಮ್ಮ ಮಾತನ್ನು ಮುಂದುವರಿಸುತ್ತಾ, ನೀವು ನನಗೆ ತಿಳಿದಿರುವ ಅತ್ಯಂತ ಶ್ರೇಷ್ಠ ವ್ಯಕ್ತಿ ಮತ್ತು ಒಂದು ದಿನ ನೀವು ನಮ್ಮ ಸುಂದರ ಮಗುವಿಗೆ ಪರಿಪೂರ್ಣ ತಂದೆಯಾಗುತ್ತೀರಿ ಎಂದು ನನಗೆ ತಿಳಿದಿದೆ. ನಾನು ನಿಮ್ಮನ್ನು ನೂರು ಜೀವನ, ನೂರು ಪ್ರಪಂಚ ಮತ್ತು ಯಾವುದೇ ಪರಿಸ್ಥಿತಿಯಲ್ಲೂ ಆಯ್ಕೆ ಮಾಡುತ್ತೇನೆ. ನಾನು ನಿಮ್ಮನ್ನೇ ಆರಿಸುತ್ತೇನೆ ಎಂದು ಹೇಳಿದ್ದಾರೆ.


ಸಮಂತಾ ರುತ್ ಪ್ರಭು ಮತ್ತು ನಾಗ ಚೈತನ್ಯ ಅವರು 2017ರ ಅಕ್ಟೋಬರ್‌ನಲ್ಲಿ ವಿವಾಹವಾದರು. 2021ರಲ್ಲಿ ಇಬ್ಬರೂ ತಮ್ಮ ವಿಚ್ಛೇದನದ ಬಗ್ಗೆ ಘೋಷಿಸಿ ಅಭಿಮಾನಿಗಳಿಗೆ ಆಘಾತ ನೀಡಿದರು.

ಇತ್ತೀಚೆಗೆಷ್ಟೇ ನಾಗಚೈತನ್ಯ ಶೋಭಿತಾ ಧೂಳಿಪಾಲ ಅವರೊಂದಿಗೆ ವಿವಾಹ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಈ ಬಳಿಕ ಸಮಂತಾ ಮತ್ತು ನಾಗಚೈತನ್ಯ ಅವರ ವಿವಾಹದ ವಿಡಿಯೋ ವೈರಲ್ ಆಗಿದೆ.

ಇದನ್ನೂ ಓದಿ: Actor Darshan: ನಟಿ ರಚಿತಾ ರಾಮ್‌ ಜೈಲಿಗೆ ಎಂಟ್ರಿ ಕೊಟ್ಟ ದಿನವೇ ನಡೀತಾ ದರ್ಶನ್ ಸಿಗರೇಟ್ ಪಾರ್ಟಿ?

ನಾಗ ಚೈತನ್ಯ ಅವರ ತಂದೆ ಸೂಪರ್‌ಸ್ಟಾರ್ ನಾಗಾರ್ಜುನ ಅವರು ಮಗ ನಾಗ ಚೈತನ್ಯ ಮತ್ತು ಶೋಭಿತಾ ಅವರ ನಿಶ್ಚಿತಾರ್ಥವನ್ನು ಕುರಿತು ಮಾಹಿತಿ ಹಂಚಿಕೊಂಡು, ಶೋಭಿತಾ ಧೂಳಿಪಾಲ ಅವಳನ್ನು ನಮ್ಮ ಕುಟುಂಬಕ್ಕೆ ಸ್ವಾಗತಿಸಲು ನಾವು ತುಂಬಾ ಸಂತೋಷಪಡುತ್ತೇವೆ. ದಂಪತಿಗೆ ಅಭಿನಂದನೆಗಳು, ಅವರಿಗೆ ಜೀವನಪೂರ್ತಿ ಪ್ರೀತಿ ಮತ್ತು ಸಂತೋಷವನ್ನು ಹಾರೈಸುತ್ತೇನೆ ಎಂದು ಹೇಳಿದ್ದರು. ವರದಿಗಳ ಪ್ರಕಾರ ನಾಗಚೈತನ್ಯ ಮತ್ತು ಶೋಭಿತಾ ಮುಂದಿನ ವರ್ಷ ಡೆಸ್ಟಿನೇಶನ್ ವೆಡ್ಡಿಂಗ್‌ಗೆ ಯೋಜನೆ ಮಾಡುತ್ತಿದ್ದಾರೆ ಎನ್ನಲಾಗಿದೆ.

Continue Reading

ಸಿನಿಮಾ

Samantha Ruth Prabhu: ಪ್ರೀತಿ ಒಂದು ತ್ಯಾಗ! ಮಾರ್ಮಿಕ ಸಂದೇಶ ಪೋಸ್ಟ್‌ ಮಾಡಿದ ಸಮಂತಾ ರುತ್ ಪ್ರಭು ಪೋಸ್ಟ್

ಗೆಳೆಯ ಅಥವಾ ಸಂಗಾತಿಯಲ್ಲಿ ಒಬ್ಬ ಹೆಚ್ಚು ನೀಡುವ ಸ್ಥಾನದಲ್ಲಿ ಇಲ್ಲದಿದ್ದಾಗ ಇನ್ನೊಬ್ಬ ಹೇಗೆ ಹೆಚ್ಚಿನ ಪ್ರಯತ್ನವನ್ನು ಮಾಡಬೇಕಾಗುತ್ತದೆ ಎಂಬುದರ ಕುರಿತು ನಟಿ ಸಮಂತಾ ರುತ್ ಪ್ರಭು (Samantha Ruth Prabhu) ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ. ಈ ಮೂಲಕ, ತಮ್ಮಲ್ಲಿ ಇಲ್ಲದೇ ಇರುವುದನ್ನು ನೀಡಿ ಸಮಾನವಾಗಿರಲು ಪ್ರಯತ್ನಿಸುವಂತೆ ಮಾಡಿರುವವರಿಗೆ ‘ಕೃತಜ್ಞತೆ’ಯನ್ನು ಅವರು ಹೇಳಿದ್ದಾರೆ.

VISTARANEWS.COM


on

By

Samantha Ruth Prabhu
Koo

ನಟಿ ಸಮಂತಾ ರುತ್ ಪ್ರಭು (Samantha Ruth Prabhu ) ಅವರು ಇನ್‌ಸ್ಟಾಗ್ರಾಮ್‌ನಲ್ಲಿ (Instagram) ಹಂಚಿಕೊಂಡಿರುವ ಪೋಸ್ಟ್ ಒಂದು ಈಗ ಸಾಮಾಜಿಕ ಜಾಲತಾಣದಲ್ಲಿ (social mideia) ಚರ್ಚೆಗೆ ಕಾರಣವಾಗಿದೆ. ಇದರಲ್ಲಿ ಅವರು ಹಂಚಿಕೊಂಡಿರುವ ಪೋಸ್ಟ್ ನೋಡಿ ‘ಪ್ರೀತಿ ಒಂದು ತ್ಯಾಗ’ (Love Is A Sacrifice) ಅದು ಹೇಗೆ ಎಂಬುದರ ಕುರಿತು ಹೆಚ್ಚಿನ ನೆಟ್ಟಿಗರು ಚರ್ಚೆ ಮಾಡಲು ಪ್ರಾರಂಭಿಸಿದ್ದಾರೆ.

ಗೆಳೆಯರು, ಸಂಗಾತಿಯಲ್ಲಿ ಒಬ್ಬ ಹೆಚ್ಚು ನೀಡುವ ಸ್ಥಾನದಲ್ಲಿ ಇಲ್ಲದಿದ್ದಾಗ ಇನ್ನೊಬ್ಬ ಹೇಗೆ ಹೆಚ್ಚಿನ ಪ್ರಯತ್ನವನ್ನು ಮಾಡಬೇಕಾಗುತ್ತದೆ ಎಂಬುದರ ಕುರಿತು ಪೋಸ್ಟ್‌ನಲ್ಲಿ ಉಲ್ಲೇಖಿಸಲಾಗಿದೆ. ಈ ಮೂಲಕ ತಮ್ಮಲ್ಲಿ ಇಲ್ಲದೇ ಇರುವುದನ್ನು ನೀಡಿ ಸಮಾನವಾಗಿರಲು ಪ್ರಯತ್ನಿಸುವಂತೆ ಮಾಡಿರುವವರಿಗೆ ‘ಕೃತಜ್ಞತೆ’ಯನ್ನು ಅವರು ಹೇಳಿದ್ದಾರೆ.

ಬಹಳಷ್ಟು ಜನರು ಸ್ನೇಹ ಮತ್ತು ಸಂಬಂಧಗಳನ್ನು ಪರಸ್ಪರವಾಗಿ ನೋಡುತ್ತಾರೆ ಮತ್ತು ನಾನು ಒಪ್ಪುತ್ತೇನೆ. ನೀನು ಕೊಡು, ನಾನು ಕೊಡುತ್ತೇನೆ. ಆದರೆ ಕೆಲವೊಮ್ಮೆ ಪ್ರೀತಿಯು ಇತರ ವ್ಯಕ್ತಿಯು ಹಿಂತಿರುಗಿಸುವ ಸ್ಥಿತಿಯಲ್ಲಿಲ್ಲದಿದ್ದರೂ ಸಹ ನೀವು ನೀಡಲು ಕಾರಣವಾಗುತ್ತದೆ ಎಂದು ನಾನು ವರ್ಷಗಳಲ್ಲಿ ಕಲಿತಿದ್ದೇನೆ. ನೀವು ಕೊಡುವುದರಿಂದ ಅದು ಹೋಗುತ್ತದೆ, ನಾನು ಕೊಡುತ್ತೇನೆ.. ನೀವು ಹಿಂತಿರುಗಿಸಲು ಸಾಧ್ಯವಾಗುವವರೆಗೆ ಪ್ರತಿಯಾಗಿ ನಾನು ಕೊಡುತ್ತೇನೆ ಎಂಬುದಾಗಿ ಸಮಂತಾ ಮಾರ್ಮಿಕವಾಗಿ ಪೋಸ್ಟ್‌ನಲ್ಲಿ ಹೇಳಿದ್ದಾರೆ.


“ಪ್ರೀತಿ ಒಂದು ತ್ಯಾಗ. ಒಂದು ಋತುವಿಗಾಗಿ ಸಮತೋಲಿತ ಸಲಹೆ ಕೂಡ. ಅಭಿಮಾನಿಗಳು ಕೂಡ ಅಷ್ಟೆ. ನಾನು ಪ್ರತಿಯಾಗಿ ಕೃತಜ್ಞತೆ ಸ್ಪುರಿಸಲು ಸಾಧ್ಯವಾಗುತ್ತಿಲ್ಲ ಎಂದಾಗಲೂ ಜನ ಅಭಿಮಾನ ಸುರಿಸುತ್ತಲೇ ಇರುತ್ತಾರೆʼʼ ಎಂದು ಸಮಂತಾ ಹೇಳಿಕೊಂಡಿದ್ದಾರೆ. ಬಿಳಿ ಬಣ್ಣದ ಹೃದಯದ ಇಮೊಜಿಯೊಂದಿಗೆ ಸಮಂತಾ ಇದನ್ನು ಪೋಸ್ಟ್ ಮಾಡಿದ್ದಾರೆ.

ಈ ನಡುವೆ ಸಮಂತಾ ರುತ್ ಪ್ರಭು ಗುರುವಾರ ರಾತ್ರಿ ಮುಂಬಯಿನಲ್ಲಿ ಸಾರ್ವಜನಿಕವಾಗಿ ಕಾಣಿಸಿಕೊಂಡರು. ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ಈ ವಿಡಿಯೋದಲ್ಲಿ ಅವರು ಕಾರ್ಯಕ್ರಮವೊಂದಕ್ಕೆ ಆಗಮಿಸುತ್ತಿದ್ದಂತೆ ಪಾಪರಾಜಿಗಳಿಗೆ ಪೋಸ್ ನೀಡುತ್ತಿರುವುದು ಕಂಡುಬಂದಿದೆ.

ಇದನ್ನೂ ಓದಿ: Shraddha Kapoor- Shreyas Iyer: ಕ್ರಿಕೆಟಿಗ ಅಯ್ಯರ್​ ಜತೆ ಡೇಟಿಂಗ್ ಆರಂಭಿಸಿದ ನಟಿ ಶ್ರದ್ಧಾ ಕಪೂರ್‌; ಫೋಟೊ ವೈರಲ್​

ಕಪ್ಪು ಉಡುಪನ್ನು ಧರಿಸಿದ್ದ ಅವರ ವಿಡಿಯೋವನ್ನು ನೋಡಿ ಅಭಿಮಾನಿಗಳು, ನಟಿ ಸಾಕಷ್ಟು ತೂಕವನ್ನು ಕಳೆದುಕೊಂಡಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.


ಸಮಂತಾ ರುತ್ ಪ್ರಭು ಶೀಘ್ರದಲ್ಲೇ ʼಸಿಟಾಡೆಲ್: ಹನಿ ಬನ್ನಿʼ ವೆಬ್‌ ಸಿರೀಸ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದು ಭಾರತೀಯ ಸರಣಿಯಾಗಿದ್ದು, ಈ ತಿಂಗಳ ಆರಂಭದಲ್ಲಿ ʼಸಿಟಾಡೆಲ್: ಹನ್ನಿ ಬನ್ನಿʼ ಚಿತ್ರದ ಟೀಸರ್ ಬಿಡುಗಡೆಯಾಯಿತು.

Continue Reading
Advertisement
Pot holes
ಬೆಂಗಳೂರು43 mins ago

Pot Holes: ರಸ್ತೆಗುಂಡಿಗಳನ್ನು ಮುಚ್ಚಲು ಬಿಬಿಎಂಪಿ ಕಮಿಷನರ್‌ಗೆ ಡಿಕೆಶಿ ಖಡಕ್‌ ಸೂಚನೆ; 15 ದಿನಗಳ ಗಡುವು

I will become CM if Siddaramaiah gives permission RV Deshpande
ಮೈಸೂರು2 hours ago

RV Deshpande : ಸಿದ್ದರಾಮಯ್ಯ ಅನುಮತಿ ಕೊಟ್ಟರೆ ನಾನೇ ಸಿಎಂ ಆಗುವೆ- ಆರ್‌ವಿ ದೇಶಪಾಂಡೆ ಅಚ್ಚರಿ ಹೇಳಿಕೆ

Irani gang active in Belagavi Single women are the target
ಬೆಳಗಾವಿ3 hours ago

Theft Case : ಬೆಳಗಾವಿಯಲ್ಲಿ ಇರಾನಿ ಗ್ಯಾಂಗ್ ಆ್ಯಕ್ಟಿವ್! ಒಂಟಿ ಮಹಿಳೆಯರೇ ಟಾರ್ಗೆಟ್‌

Yettinahole project lift work to be inaugurated on September 6 Gowri festival
ಬೆಂಗಳೂರು4 hours ago

Yettinahole Project: ಗೌರಿ ಹಬ್ಬದಂದು ಎತ್ತಿನಹೊಳೆ ಯೋಜನೆ ಏತ ಕಾಮಗಾರಿ ಉದ್ಘಾಟನೆ; ಪಕ್ಷಬೇಧ ಮರೆತು ಎಲ್ಲರಿಗೂ ಆಹ್ವಾನ- ಡಿಸಿಎಂ

Rain News
ಮಳೆ4 hours ago

Rain News : ವಿಜಯವಾಡದಲ್ಲಿ ಭಾರಿ ಮಳೆಗೆ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನ ರಕ್ಷಣೆ; ಕಲಬುರಗಿಯಲ್ಲೂ ಅಬ್ಬರ

Bike rider in deadly accident Elderly woman dies of electric shock
ಬೆಂಗಳೂರು5 hours ago

Road Accident : ಡೆಡ್ಲಿ ಆ್ಯಕ್ಸಿಡೆಂಟ್‌ಗೆ ಬೈಕ್‌ ಸವಾರ ಸ್ಪಾಟ್‌ ಡೆತ್‌; ಕರೆಂಟ್‌ ಶಾಕ್‌ನಿಂದ ಒದ್ದಾಡಿ ಪ್ರಾಣಬಿಟ್ಟ ವೃದ್ಧೆ

Girl commits suicide after being fed up with rumours of love
ಮಂಡ್ಯ5 hours ago

Mandya News : ನಾಲ್ವರು ಬಾಲಕರ ಪ್ರೀತಿ-ಪ್ರೇಮದ ಅಪಪ್ರಚಾರ; ಗಾಳಿ ಸುದ್ದಿಗೆ ಬಾಲಕಿ ಆತ್ಮಹತ್ಯೆ

Do you know when Darshan got royalty in Central Jail
ಸಿನಿಮಾ6 hours ago

Actor Darshan : ಸೆಂಟ್ರಲ್‌ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯ ಸಿಕ್ಕಿದ್ದು ಯಾವಾಗಿನಿಂದ ಗೊತ್ತಾ? ಬಿಸ್ಕತ್‌ ಹಾಕಿಲ್ವಾ ಸುಮ್ಮಿನಿರು ಅಂದ್ರಾ ಕರಿಯಾ!

Actor Darshan shifted back to Bengaluru from Ballari
ಬಳ್ಳಾರಿ6 hours ago

Actor Darshan : ಬಳ್ಳಾರಿಯಿಂದ ನಟ ದರ್ಶನ್‌ ಮತ್ತೆ ಬೆಂಗಳೂರಿಗೆ ಶಿಫ್ಟ್‌! ಪತ್ನಿ ಬಂದು ಹೋದ್ಮೆಲೆ ಫುಲ್ ಆಕ್ಟೀವ್

police Firing
ಕಲಬುರಗಿ7 hours ago

Police Firing: ಪೊಲೀಸರ ಮೇಲೆ ಚಾಕುಯಿಂದ ದಾಳಿ ಮಾಡಿದ ದರೋಡೆಕೋರ; ಆರೋಪಿ ಕಾಲಿಗೆ ಫೈರಿಂಗ್‌ ಮಾಡಿದ ಖಾಕಿ

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ11 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ9 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್1 day ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್3 days ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 week ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ3 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು4 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ4 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ4 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ4 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌