ಒಂಬತ್ತು ಚಿನ್ನದ ಪದಕಕ್ಕೆ ಮುತ್ತಿಟ್ಟ ಡಿ ದರ್ಜೆ ನೌಕರನ ಪುತ್ರಿ - Vistara News

ಧಾರವಾಡ

ಒಂಬತ್ತು ಚಿನ್ನದ ಪದಕಕ್ಕೆ ಮುತ್ತಿಟ್ಟ ಡಿ ದರ್ಜೆ ನೌಕರನ ಪುತ್ರಿ

ಬಡತನ ಎಂದಿಗೂ ಸಾಧನೆಗೆ ಅಡ್ಡವಾಗುವುದಿಲ್ಲ ಎನ್ನುವುದನ್ನು ಈ ಯುವತಿ ಸಾಬೀತುಪಡಿಸಿದ್ದಾರೆ. ಪತ್ರಿಕೋದ್ಯಮ ವಿಭಾಗದಲ್ಲಿ ಅತಿ ಹೆಚ್ಚು ಅಂಕಗಳನ್ನ ಪಡೆಯುವ ಮೂಲಕ ಚಿನ್ನದ ಹುಡುಗಿಯಾಗಿದ್ದಾರೆ.

VISTARANEWS.COM


on

ಒಂಬತ್ತು ಚಿನ್ನದ ಪದಕಕ್ಕೆ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಧಾರವಾಡ: ಒಂದಲ್ಲ ಎರಡಲ್ಲ ಒಟ್ಟು ಒಂಬತ್ತು ಚಿನ್ನದ ಪದಕಕ್ಕೆ ಮುತ್ತಿಡುತ್ತಿರೋ ಈ ಯುವತಿ ಸಾಧನೆ ನಿಜಕ್ಕೂ ಎಲ್ಲರನ್ನೂ ಅಚ್ಚರಿಗೊಳಿಸುತ್ತೆ. ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಸೂಳಿಕಟ್ಟಿ ಗ್ರಾಮದವಳಾದ ಸುಜಾತಾ ಜೋಡಳ್ಳಿ ಸದ್ಯ, ಕರ್ನಾಟಕ ವಿಶ್ವ ವಿದ್ಯಾಲಯದ ಘಟಿಕೋತ್ಸವದಲ್ಲಿ ಸಾಧನೆಗೆ ರಾಜ್ಯಪಾಲರಿಂದ ಪ್ರಶಂಸೆ ಪಡೆದಿದ್ದಾರೆ.

ಒಂಬತ್ತು ಚಿನ್ನದ ಪದಕಕ್ಕೆ

ಈಕೆಯ ತಂದೆ ನಾಗೇಶ ಜೋಡಳ್ಳಿ ಮತ್ತು ತಾಯಿ ಮಹಾದೇವಿ. ಸುಜಾತಾ ಜೋಡಳ್ಳಿ ತಂದೆ ಗ್ರಾಮ ಪಂಚಾಯತ್‌ನಲ್ಲಿ ಡಿ ದರ್ಜೆ ನೌಕರಿಯನ್ನು ಮಾಡುತ್ತಿದ್ದಾರೆ.

ಪತ್ರಿಕೋದ್ಯಮ ವಿಭಾಗದಲ್ಲಿ ಅತಿ ಹೆಚ್ಚು ಚಿನ್ನದ ಪದಕವನ್ನು ಗಿಟ್ಟಿಸಿಕೊಳ್ಳುವುದರ ಮೂಲಕ 2022ರ ವಿಶ್ವವಿದ್ಯಾಲಯದ ಅತಿ ಹೆಚ್ಚು ಚಿನ್ನದ ಪದಕ ಪಡೆದ ವಿದ್ಯಾರ್ಥಿನಿ. 9 ಚಿನ್ನದ ಪದಕಕ್ಕೆ ಮುತ್ತಿಟ್ಟು ತನ್ನ ಬಡತನವನ್ನ ಮೆಟ್ಟಿ ನಿಂತು ಸಾಧನೆಗೈದಿದ್ದಾರೆ. ಮಗಳ ಈ ಸಾಧನೆಗೆ ತಂದೆ ತಾಯಿ ಸಂತಸ ವ್ಯಕ್ತಪಡಿಸಿದ್ದು ಸಾಧನೆಯನ್ನು ಕೊಂಡಾಡಿದ್ದಾರೆ.

ಬಡತನದಲ್ಲೇ ಕಲಿತು ಹೊಸ ದಾಖಲೆ ಮಾಡಿದ ವಿದ್ಯಾರ್ಥಿನಿಗೆ ಸ್ನೇಹಿತರು, ಗುರುಗಳು ಶುಭಾಶಯ ಹೇಳಿ ಖುಷಿ ಹಂಚಿಕೊಂಡರು. ಮನೆಯಲ್ಲಿ ಬಡತನ ಇದ್ದರೂ ಅದ್ಯಾವುದೂ ಸಾಧನೆಗೆ ಅಡ್ಡಿಯಾಗದು ಎಂದು ಈಕೆ ತೋರಿಸಿದ್ದಾರೆ. ಮುಂದಿನ ದಿನಗಳಲ್ಲಿ ಪತ್ರಿಕೋದ್ಯಮದಲ್ಲೇ ಹಲವು ಸಾಧನೆ ಮಾಡುವ ಉತ್ಸಾಹ ಹೊಂದಿರುವುದಾಗಿ ಸುಜಾತಾ ತಿಳಿಸಿದ್ದಾರೆ.

ಇದನ್ನೂ ಓದಿ: ಮ್ಯಾರಥಾನ್‌ಗಾಗಿ ನೇಪಾಳಕ್ಕೆ ಹಾರಿದ ಹಾವೇರಿ ಪೋರ: ಮುಮ್ಮದ್‌ ಜೈದ್‌ ಸಾಧನೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಬೆಂಗಳೂರಲ್ಲಿ ಮರೆಯಾಗುವ ಸೂರ್ಯ; ಕರಾವಳಿ, ಮಲೆನಾಡಿನಲ್ಲಿ ವರುಣಾರ್ಭಟ

Karnataka Weather Forecast: ಬೆಂಗಳೂರಲ್ಲಿ ಸೂರ್ಯ ಮರೆಯಾಗಲಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮಳೆಯು (Rain news) ಅಬ್ಬರಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ

VISTARANEWS.COM


on

By

karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಬುಧವಾರ ಕರ್ನಾಟಕದ ಕರಾವಳಿಯಲ್ಲಿ ಮಳೆಯು (Heavy rain) ಅಬ್ಬರಿಸಲಿದ್ದು, ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಹಾಗೂ ಉತ್ತರ ಒಳನಾಡಿನ ಪ್ರತ್ಯೇಕ ಕಡೆಗಳಲ್ಲಿ ಮಧ್ಯಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (karnataka weather Forecast) ಮುನ್ಸೂಚನೆಯನ್ನು ನೀಡಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು ಸೇರಿದಂತೆ ರಾಮನಗರ, ತುಮಕೂರು, ವಿಜಯನಗರದಲ್ಲಿ ಪ್ರತ್ಯೇಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದ್ದು, ಬೀದರ್, ಕಲಬುರಗಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ. ವಿಜಯಪುರ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ಬಾಗಲಕೋಟೆಗೆ ಯಾವುದೇ ಮಳೆ ಸೂಚನೆ ಇಲ್ಲ.

ಮಲೆನಾಡಿನ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಯಲ್ಲಿ ಚದುರಿದಂತೆ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ವ್ಯಾಪಕ ಲಘುದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರಿನಲ್ಲೂ ಸಾಧಾರಣ ಮಳೆ

ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಪ್ರತ್ಯೇಕ ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27 ಹಾಗೂ 21 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

40 ಕಿ.ಮೀ ವೇಗದಲ್ಲಿ ಬೀಸಲಿದೆ ಗಾಳಿ

ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಾಳಿ ವೇಗವು 40-50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 35 ಕಿ.ಮೀ ನಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರಿಗೂ ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ: Wild Animals Attack : ಕರೆಯದೆ ಬಂದ ಅತಿಥಿ; ವರನ ಪಕ್ಕ ಕುಳಿತು ಮದುವೆಗೆ ಅಡ್ಡಿಪಡಿಸಿದ ಕೋತಿ!ಮುಂದೇನಾಯ್ತು?

ಮಳೆಗಾಲದಲ್ಲಿ ಭೇಟಿ ನೀಡಬಹುದಾದ ಕರ್ನಾಟಕದ 15 ರಮಣೀಯ ತಾಣಗಳು

ಕರ್ನಾಟದಲ್ಲಿ ಮಳೆಗಾಲ ಆರಂಭವಾಗಿದೆ. ಕೆಲವು ಪ್ರವಾಸಿ (Karnataka Tour) ತಾಣಗಳಂತೂ ನಯನ ಮನೋಹರವಾಗಿ ಕಂಗೊಳಿಸುತ್ತಿವೆ. ಮಾಂತ್ರಿಕವಾಗಿ ಸಿಂಗಾರಗೊಂಡಂತಿವೆ. ದೂರದೂರದ ಪ್ರವಾಸಿಗರನ್ನು (tourists) ತನ್ನತ್ತ ಆಕರ್ಷಿಸುತ್ತಿವೆ. ಒಂದೆಡೆ ಪಶ್ಚಿಮ ಘಟ್ಟಗಳು (Western Ghats), ಇನ್ನೊಂದೆಡೆ ಅರಬ್ಬಿ ಸಮುದ್ರದ (arabian sea) ಸಮೀಪವಿರುವ ಕರಾವಳಿ ಪ್ರದೇಶಗಳು ಮಳೆಯ ಧಾರೆಯಲ್ಲಿ ತೋಯ್ದು ತನ್ನನ್ನು ತಾನು ಸ್ವಚ್ಛ, ಸುಂದರ ಮತ್ತಷ್ಟು ಸಿಂಗಾರಗೊಳಿಸಿದಂತೆ ಭಾಸವಾಗುತ್ತಿದೆ.

ಭಾರೀ ಮಳೆಯ ಆರಂಭದ ದಿನಗಳಲ್ಲಿ ಕರ್ನಾಟಕದ ಹವಾಮಾನವು ಆರ್ದ್ರವಾಗಿರುತ್ತದೆ ಮತ್ತು ಆಹ್ಲಾದಕರವಾಗಿರುತ್ತದೆ. ಕರ್ನಾಟಕದ ಕರಾವಳಿ ಪ್ರದೇಶಗಳು ಮತ್ತು ದಕ್ಷಿಣ ಪ್ರದೇಶಗಳಲ್ಲಿ ಹಸಿರಿನಿಂದ ಚಿತ್ರಿಸಲ್ಪಟ್ಟಂತೆ ಭಾಸವಾಗುತ್ತದೆ. ಪಶ್ಚಿಮ ಘಟ್ಟಗಳಂತೂ ಆಕರ್ಷಣೆಯ ಕೇಂದ್ರವಾಗುತ್ತದೆ.

ಹಗಲಿನಲ್ಲಿ ತಾಪಮಾನವು 28 ಡಿಗ್ರಿ ಸೆಲ್ಸಿಯಸ್‌ಗೆ ಇಳಿದರೆ ರಾತ್ರಿಯಲ್ಲಿ ತಾಪಮಾನವು 20 ಡಿಗ್ರಿ ಸೆಲ್ಸಿಯಸ್‌ನಷ್ಟು ಕಡಿಮೆಯಾಗುವುದು. ಹಗಲು ಸುರಿಯುವ ಮಳೆಯಲ್ಲೂ ಹೊರಗೆ ಸುತ್ತಾಡಲು ಮನ ಬಯಸಿದರೆ, ರಾತ್ರಿ ತಂಪನೆಯ ವಾತಾವರಣ ಬೆಚ್ಚನೆ ಹೊದಿಕೆ ಹೊದ್ದು ಮಲಗಲು ಪ್ರೇರೇಪಿಸುತ್ತದೆ.

ಜಲಪಾತ, ಗಿರಿಧಾಮ, ಕಡಲ ತೀರಗಳು ಮಳೆಗಾಲದಲ್ಲಿ ಅನ್ವೇಷಿಸಬಹುದಾದ ಸಾಕಷ್ಟು ಆಕರ್ಷಣೆಗಳು ಕರ್ನಾಟಕದಲ್ಲಿವೆ. ಮಾನ್ಸೂನ್ ನಲ್ಲಿ ಈ ಸ್ಥಳಗಳ ಮಾಂತ್ರಿಕ ಮೋಡಿಯನ್ನು ಮಾಡುವುದು. ಮಳೆಗಾಲದಲ್ಲಿ ಕರ್ನಾಟಕದಲ್ಲಿ ನೋಡಲೇ ಬೇಕಾದ 15 ಪ್ರಮುಖ ಸ್ಥಳಗಳಿವೆ. ಇದರ ಸೌಂದರ್ಯವನ್ನು ಈ ಮಳೆಗಾಲದಲ್ಲಿ ಅನುಭವಿಸದೇ ಇದ್ದರೆ ಮುಂದಿನ ಮಳೆಗಾಲದವರೆಗೂ ಕಾಯಬೇಕಾಗುವುದು.


1. ಹಂಪಿ

ಹಂಪಿ ಕರ್ನಾಟಕದ ಅತ್ಯುತ್ತಮ ಮಾನ್ಸೂನ್ ಸ್ಥಳಗಳಲ್ಲಿ ಒಂದಾಗಿದೆ. ಇದ್ದಕ್ಕಿದ್ದಂತೆ, ಹಂಪಿಯ ಶುಷ್ಕ ಪ್ರದೇಶಗಳು ಹಸಿರು ವಿಸ್ತಾರವಾದ ಹುಲ್ಲುಗಾವಲುಗಳಾಗಿ ಬದಲಾಗುತ್ತವೆ. ಹಂಪಿಯ ರಮಣೀಯ ಭೂದೃಶ್ಯವನ್ನು ಹೊಂದಿರುವ ಹೇರಳವಾದ ದೇವಾಲಯಗಳು ಮಳೆಯಲ್ಲಿ ರುದ್ರರಮಣೀಯವಾಗಿ ಕಾಣುತ್ತವೆ. ಇಲ್ಲಿನ ಆಹ್ಲಾದಕರ ವಾತಾವರಣವು ಅದ್ಭುತವಾದ ಫೋಟೋಗಳನ್ನು ಒದಗಿಸುವುದು. ಮೋಡ ಕವಿದ ಆಕಾಶವು ದೇವಾಲಯಗಳ ಫೋಟೋಗಳಿಗೆ ಅದ್ಭುತವಾದ ಹಿನ್ನೆಲೆಯನ್ನು ಉಂಟು ಮಾಡುತ್ತದೆ. ಪ್ರಬಲವಾದ ಹಂಪಿ ನದಿಯಲ್ಲಿ ಕೊರಾಕಲ್ ದೋಣಿ ಸವಾರಿ ಮತ್ತು ರಾಕ್ ಕ್ಲೈಂಬಿಂಗ್ ಹೆಚ್ಚು ರೋಮಾಂಚನಕಾರಿಯಾಗಿರುತ್ತದೆ.


2. ಮರವಂತೆ

ಕರ್ನಾಟಕದ ಎನ್ ಹೆಚ್ 66ರಲ್ಲಿರುವ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಒಂದು ಸಣ್ಣ ಹಳ್ಳಿ ಮರವಂತೆಯಲ್ಲಿ ಸಮುದ್ರ ಮತ್ತು ನದಿ ಒಟ್ಟಿಗೆ ಸೇರುವ ದೃಶ್ಯ ನಯನಮನೋಹರವಾಗಿರುತ್ತದೆ. ಒಂದು ಕಡೆ ಗ್ರಾಮವು ಅರಬ್ಬೀ ಸಮುದ್ರದಿಂದ ಆವೃತವಾಗಿದ್ದರೆ ಇನ್ನೊಂದು ಬದಿಯಲ್ಲಿ ಸೌಪರ್ಣಿಕಾ ನದಿಯು ಶಾಂತವಾಗಿ ಹರಿಯುತ್ತಿರುತ್ತದೆ. ಮಾನ್ಸೂನ್ ಸಮಯದಲ್ಲಿ ಮರವಂತೆಯ ಬೀಚ್ ರಸ್ತೆಯಲ್ಲಿ ನಡೆಯುವುದು ಅತ್ಯುತ್ತಮ ಅನುಭವವನ್ನು ಕೊಡುವುದು.


3. ಆಗುಂಬೆ

ಆಗುಂಬೆಯು ಹಲವಾರು ಜಲಪಾತಗಳು, ನೈಸರ್ಗಿಕ ವೈಭವ ಮತ್ತು ಶ್ರೀಮಂತ ಜೀವವೈವಿಧ್ಯಕ್ಕೆ ಹೆಸರುವಾಸಿಯಾಗಿದೆ. ಶಿವಮೊಗ್ಗ ಜಿಲ್ಲೆಯ ಎತ್ತರದ ಗ್ರಾಮವನ್ನು ‘ದಕ್ಷಿಣದ ಚಿರಾಪುಂಜಿ’ ಎಂದೂ ಕರೆಯುತ್ತಾರೆ. ಯಾಕೆಂದರೆ ಇದು ಕರ್ನಾಟಕದಲ್ಲಿ ಅತಿ ಹೆಚ್ಚು ಮಳೆ ಬೀಳುವ ಸ್ಥಳವಾಗಿದೆ. ಅನೇಕ ಜಲಪಾತಗಳಾದ ಒನಕೆ ಅಬ್ಬಿ, ಜೋಗಿ ಗುಂಡಿ ಜಲಪಾತ ಮತ್ತು ಬರ್ಕಾನ ಜಲಪಾತಗಳು ಕರ್ನಾಟಕದಲ್ಲಿ ಮಾನ್ಸೂನ್ ಸಮಯದಲ್ಲಿ ಅದ್ಭುತಗಳಾಗಿ ರೂಪಾಂತರಗೊಳ್ಳುತ್ತವೆ. ಹಚ್ಚ ಹಸಿರಿನ ಮಳೆಕಾಡುಗಳಲ್ಲಿನ ಹಲವಾರು ಟ್ರೆಕ್ಕಿಂಗ್ ಟ್ರೇಲ್‌ಗಳು ಈ ಸ್ಥಳವನ್ನು ಒದಗಿಸುವ ಇತರ ಆಹ್ಲಾದಕರ ಸಂಗತಿಯಾಗಿದೆ.


4. ಬೀದರ್ ಕೋಟೆ

ಒಂದು ಕಾಲದಲ್ಲಿ ದಕ್ಷಿಣದ ರಾಜಧಾನಿಯಾಗಿದ್ದು 98 ಸ್ಮಾರಕಗಳನ್ನು ಹೊಂದಿರುವ ಜನಪ್ರಿಯ ತಾಣವಾಗಿದೆ. ಬೆಟ್ಟದ ತುದಿಯಲ್ಲಿ ನೆಲೆಸಿರುವ ‘ಸಿಟಿ ಆಫ್ ವಿಸ್ಪರಿಂಗ್ ಸ್ಮಾರಕಗಳು’ ಕರ್ನಾಟಕದಲ್ಲಿ ಮಾನ್ಸೂನ್ ಸಮಯದಲ್ಲಿ ಭೇಟಿ ನೀಡಲು ಅತ್ಯುತ್ತಮ ಸ್ಥಳಗಳಲ್ಲಿ ಒಂದಾಗಿದೆ. 500 ವರ್ಷಗಳಷ್ಟು ಹಳೆಯದಾದ ಬೀದರ್ ಕೋಟೆಯು ಭಾರತದ ಪುರಾತತ್ತ್ವ ಭೂಪಟದಲ್ಲಿ ಪ್ರಮುಖ ಸ್ಥಾನವನ್ನು ಗಳಿಸಿದೆ.


5. ಕೊಡಗು

ಮಳೆಗಾಲದಲ್ಲಿ ಭೇಟಿ ನೀಡಲು ಅತ್ಯುತ್ತಮ ತಾಣ ಕೊಡಗು. ದಟ್ಟವಾದ ಮಂಜಿನ ವಾತಾವರಣದಲ್ಲಿ ಹಸಿರು ಕಾಫಿ ತೋಟಗಳು ತುಂಬಾ ಆಕರ್ಷಣೀಯವಾಗಿ ಕಾಣುತ್ತದೆ. ಮಡಿಕೇರಿ ಪಟ್ಟಣದ ಅತ್ಯುನ್ನತ ಸ್ಥಳವಾದ ರಾಜಾ ಸೀಟ್‌ನಿಂದ ಮಳೆಯಲ್ಲಿ ಮುಳುಗಿರುವ ನಗರ ಸೌಂದರ್ಯವನ್ನು ವೀಕ್ಷಿಸುವುದು ರೋಮಾಂಚಕ ಅನುಭವವನ್ನು ಕೊಡುತ್ತದೆ.

ಕೂರ್ಗ್‌ನ ಮತ್ತೊಂದು ಪ್ರಸಿದ್ಧ ಪ್ರವಾಸಿ ಆಕರ್ಷಣೆಯಾಗಿರುವ ಅಬ್ಬೆ ಜಲಪಾತ. ಜಲಪಾತದ ಸೌಂದರ್ಯ ಸವಿಯುತ್ತಾ ಬಿಸಿಬಿಸಿ ಕಪ್ ಕಾಫಿ ಸೇವನೆ ಮಾಡುತ್ತ ಕೂರ್ಗ್‌ ನಲ್ಲಿ ಬೈಕ್ ಸವಾರಿ ಮಾಡುವುದು ಅತ್ಯಂತ ಅದ್ಭುತವಾದ ಅನುಭವವನ್ನು ಕೊಡುತ್ತದೆ.


6. ದಾಂಡೇಲಿ

ಕರ್ನಾಟಕದಲ್ಲಿ ಮಾನ್ಸೂನ್ ಸಮಯದಲ್ಲಿ ಸಸ್ಯ ಮತ್ತು ಪ್ರಾಣಿಗಳ ಸೌಂದರ್ಯ ಸವಿಯಲು ದಾಂಡೇಲಿಯ ಕಾಡುಗಳು ಅತ್ಯುತ್ತಮ ಸ್ಥಳಗಳಲ್ಲಿ ಒಂದಾಗಿದೆ. ದಾಂಡೇಲಿ ವನ್ಯಜೀವಿ ಅಭಯಾರಣ್ಯವು ಕರ್ನಾಟಕದ ಎರಡನೇ ಅತಿ ದೊಡ್ಡ ವನ್ಯಜೀವಿ ಅಭಯಾರಣ್ಯವಾಗಿದೆ. ಮಳೆಗಾಲದಲ್ಲಿ ಅನೇಕ ಸರೀಸೃಪಗಳು, ಪಕ್ಷಿಗಳು ಮತ್ತು ಕಾಡು ಪ್ರಾಣಿಗಳ ಆವಾಸಸ್ಥಾನವಾಗಿದೆ. ಕಪ್ಪು ಪ್ಯಾಂಥರ್, ಚಿರತೆ ಅಥವಾ ಆನೆಯನ್ನು ಇಲ್ಲಿ ಕಾಣಬಹುದು.


7. ಮೈಸೂರು

ಮಳೆಗಾಲದಲ್ಲಿ ಪ್ರವಾಸ ಹೊರಡುವ ಯೋಚನೆ ಇದ್ದರೆ ಮೈಸೂರನ್ನು ಆಯ್ಕೆ ಮಾಡಬಹುದು. ವಾರಾಂತ್ಯವನ್ನು ಮೈಸೂರಿನ ಐಷಾರಾಮಿ ರೆಸಾರ್ಟ್‌ನಲ್ಲಿ ಕಳೆಯುವುದು ಅದ್ಭುತ ಆಯ್ಕೆಯಾಗಿದೆ. ಹೊರಗೆ ಮಳೆ ಸುರಿಯುವಾಗ ಬಲಿನೀಸ್, ಸ್ವೀಡಿಷ್ ಮತ್ತು ಆಯುರ್ವೇದಿಕ್ ಸ್ಪಾ ಚಿಕಿತ್ಸೆಗಳ ಆನಂದ ಸವಿಯಬಹುದು.


8. ನಂದಿ ಹಿಲ್‌

ಮಾನ್ಸೂನ್ ಸಮಯದಲ್ಲಿ ನಂದಿ ಬೆಟ್ಟದಲ್ಲಿ ಮಂತ್ರಮುಗ್ಧಗೊಳಿಸುವ ದೃಶ್ಯಗಳನ್ನು ಕಣ್ತುಂಬಿಕೊಳ್ಳಬಹುದು. ನಯನಮನೋಹರ ಸೂರ್ಯಾಸ್ತ, ಸೂರ್ಯೋದಯದ ದೃಶ್ಯಾವಳಿಗಳು ಮನದಲ್ಲಿ ವರ್ಣಚಿತ್ರದಂತೆ ಅಚ್ಚಳಿಯದೆ ಉಳಿಯುವುದು. ಮಳೆಗಾಲದಲ್ಲಿ ಬೈಕ್ ಸವಾರರು ಬೆಟ್ಟಗಳ ಮೇಲೆ ಹೋಗಿ ಪ್ರಕೃತಿಯ ಸೌಂದರ್ಯ ಸವಿಯಬಹುದು.


9. ಸ್ಕಂದಗಿರಿ ಬೆಟ್ಟ

ಸ್ಕಂದಗಿರಿ ಬೆಟ್ಟಗಳ ಶಿಖರದಲ್ಲಿ ನಿಂತಿರುವಾಗ ಮೋಡಗಳ ಮೇಲೆ ಏರಿದಂತ ಅನುಭವ ಕೊಡುತ್ತದೆ. ಆಗಸ್ಟ್‌ನಲ್ಲಿ ಇಲ್ಲಿ ಚಾರಣಕ್ಕೆ ಹೋಗಲು ಸೂಕ್ತ ಸಮಯ. ಹತ್ತಿಯಂತೆ ಕಾಣುವ ಮೋಡಗಳು ಅಲೌಕಿಕವಾಗಿ ಕಾಣುತ್ತವೆ. ಸ್ಕಂದಗಿರಿಯಿಂದ ಸೂರ್ಯೋದಯದ ಸುಂದರ ದೃಶ್ಯವನ್ನು ಕಣ್ತುಂಬಿಕೊಳ್ಳಬಹುದು. ರಾತ್ರಿ ಆಕಾಶದ ಅದ್ಭುತಗಳ ಅಡಿಯಲ್ಲಿ ಕ್ಯಾಂಪಿಂಗ್ ಮಾಡುವುದು ಉತ್ತಮ ಅನುಭವವನ್ನು ನೀಡುತ್ತದೆ.


10. ಗೋಕರ್ಣ

ಹಿಪ್ಪಿಗಳ ಸ್ವರ್ಗ ಗೋಕರ್ಣದ ಕಡಲತೀರಗಳು ರಮಣೀಯ ದೃಶ್ಯಗಳಿಗೆ ಹೆಸರುವಾಸಿಯಾಗಿದೆ. ಒಂದು ಕಡೆ ಕಲ್ಲಿನ ಪರ್ವತ ಮತ್ತು ಇನ್ನೊಂದು ಕಡೆ ಅರೇಬಿಯನ್ ಸಮುದ್ರದೊಂದಿಗೆ ಇರುವ ಧಾರ್ಮಿಕ ಪಟ್ಟಣವು ಅತ್ಯಂತ ಸುಂದರವಾದ ಭೂದೃಶ್ಯಗಳನ್ನು ನೀಡುತ್ತದೆ.

11. ಜೋಗ ಜಲಪಾತ

ಮಳೆಗಾಲದಲ್ಲಿ ತುಂಬಿ ಹರಿಯುವ ಜೋಗ ಜಲಪಾತವು ಕನಸಿನ ಪ್ರಪಂಚವನ್ನು ಮಳೆಗಾಲದಲ್ಲಿ ತೋರಿಸುತ್ತದೆ. ಮಾನ್ಸೂನ್ ಸಮಯದಲ್ಲಿ ಆಗೊಮ್ಮೆ ಈಗೊಮ್ಮೆ ಮಳೆಬಿಲ್ಲುಗಳೊಂದಿಗೆ ಭವ್ಯವಾದ ಪ್ರಕೃತಿಯನ್ನು ಇಲ್ಲಿ ಆನಂದಿಸಬಹುದು. ಶರಾವತಿ ನದಿಯಿಂದ ರೂಪುಗೊಂಡಿರುವ ಜಲಪಾತವು ಕರ್ನಾಟಕದ ಅತ್ಯಂತ ಪ್ರಸಿದ್ಧವಾದ ಜಲಪಾತಗಳಲ್ಲಿ ಒಂದಾಗಿದೆ ಮತ್ತು ಭಾರತದ ಅತಿ ಎತ್ತರದ ಜಲಪಾತಗಳಲ್ಲಿ ಒಂದಾಗಿದೆ.

ಇದನ್ನೂ ಓದಿ: Assam Tour: ಅಸ್ಸಾಂನ ಪೆಲ್ಲಿಂಗ್‌ನಲ್ಲಿ ಮೋಡಿ ಮಾಡುವ 8 ಆಕರ್ಷಕ ಸಂಗತಿಗಳಿವು


12. ಕೆಮ್ಮಣ್ಣುಗುಂಡಿ

ಕರ್ನಾಟಕದ ಪ್ರಸಿದ್ಧ ಗಿರಿಧಾಮಗಳಲ್ಲಿ ಒಂದಾಗಿರುವ ಕೆಮ್ಮಣ್ಣುಗುಂಡಿ ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಸುಂದರವಾದ ಗಿರಿಧಾಮವಾಗಿದೆ. ಇಲ್ಲಿ ನೋಡುವಂತ ಹಲವಾರು ಭೂದೃಶ್ಯಗಳು ಮತ್ತು ಸೊಂಪಾದ ಪ್ರದೇಶಗಳಿವೆ. ಕೆಮ್ಮನಗುಂಡಿಯಲ್ಲಿರುವ ಇತರ ಕೆಲವು ಪ್ರಮುಖ ಆಕರ್ಷಣೆಗಳೆಂದರೆ ಹೆಬ್ಬೆ ಜಲಪಾತ, ಶಾಂತಿ ಜಲಪಾತ, ಝೆಡ್ ಪಾಯಿಂಟ್ ಮತ್ತು ಅತ್ಯಂತ ಪ್ರಸಿದ್ಧವಾದ ಬಾಬಾ ಬುಡನ್ ಗಿರಿ ಮತ್ತು ಮುಳ್ಳಯ್ಯನಗಿರಿ ಬೆಟ್ಟಗಳು.


13. ಕುದುರೆಮುಖ

ಕುದುರೆಮುಖ ಗಿರಿಧಾಮ ಮಾನ್ಸೂನ್ ಸಮಯದಲ್ಲಿ ಉತ್ತಮ ಅನುಭವವನ್ನು ನೀಡುತ್ತದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿರುವ ಶೋಲಾ ಹುಲ್ಲುಗಾವಲು ಮತ್ತು ಕಾಡುಗಳು ಮಾನ್ಸೂನ್ ಸಮಯದಲ್ಲಿ ಭೇಟಿ ನೀಡಲು ಅತ್ಯಂತ ಆಸಕ್ತಿದಾಯಕ ತಾಣಗಳಾಗಿವೆ. ಹನುಮಾನ್ ಗುಂಡಿ ಮತ್ತು ಕದಂಬಿ ಜಲಪಾತ ಇಲ್ಲಿನ ಎರಡು ಪ್ರಮುಖ ತಾಣಗಳಾಗಿವೆ. ಮಾನ್ಸೂನ್ ಸಮಯದಲ್ಲಿ ಕರ್ನಾಟಕದಲ್ಲಿ ಭೇಟಿ ನೀಡಲು ಇದು ಅತ್ಯಂತ ಸುಂದರವಾದ ಸ್ಥಳಗಳಲ್ಲಿ ಒಂದಾಗಿದೆ.


14. ಬಾಲೂರು

ಚಿಕ್ಕಮಗಳೂರು ಜಿಲ್ಲೆಯ ಒಂದು ಗ್ರಾಮವಾದ ಬಾಲೂರು ಮಾನ್ಸೂನ್ ಋತುವಿನಲ್ಲಿ ಭೇಟಿ ನೀಡಲು ಅತ್ಯುತ್ತಮ ತಾಣವಾಗಿದೆ. ವಿಶಾಲವಾದ ಕಾಫಿ ಎಸ್ಟೇಟ್ ಗಳು ಭೂಮಿಯ ಮೇಲಿನ ಅತ್ಯಂತ ಪರಿಶುದ್ಧ ಸ್ಥಳ ಎಂಬಂತೆ ಭಾಸವಾಗುತ್ತದೆ. ಚಾರ್ಮಾಡಿ ಘಾಟ್, ಚಾರ್ಮಾಡಿ ಜಲಪಾತ ಮತ್ತು ಕೊಡೆ ಕಲ್ಲು ಇಲ್ಲಿನ ಅದ್ಭುತ ಸ್ಥಳಗಳಾಗಿವೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

Karnataka Weather Forecast :ರಾಜ್ಯಾದ್ಯಂತ ಮಳೆ ಅಬ್ಬರಕ್ಕೆ (Rain News) ಗುಡ್ಡ ಕುಸಿತದಂತಹ ಪ್ರಕರಣಗಳು ಹೆಚ್ಚಾಗುತ್ತಿದೆ. ಕೊಡಗಿನಲ್ಲಿ ಗುಡ್ಡ ಕುಸಿದರೆ, ಮಂಗಳೂರಲ್ಲಿ ರಸ್ತೆ ಕುಸಿದಿದೆ. ಚಿಕ್ಕಮಗಳೂರಲ್ಲಿ ಗಾಳಿ- ಮಳೆಗೆ ಶಾಲೆಗೆ ಹಾನಿಯಾಗಿದೆ. ಇನ್ನೊಂದು ವಾರವು ಮಳೆಯಾಗುವ ಸಾಧ್ಯತೆ ಇದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ನೈರುತ್ಯ ಮುಂಗಾರು (Rain News) ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಧಾರಣವಾಗಿದ್ದು, ಉತ್ತರ ಒಳನಾಡಿನಲ್ಲಿ (Karnataka Weather Forecast) ದುರ್ಬಲಗೊಂಡಿದೆ. ಕರಾವಳಿ, ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗಿದ್ದು, ಗುಡ್ಡ ಕುಸಿತದಂತಹ ಪ್ರಕರಣಗಳು ಹೆಚ್ಚಾಗಿವೆ. ಕೊಲ್ಲೂರು, ಸಿದ್ದಾಪುರ, ಕೊಟ್ಟಿಗೆಹಾರದಲ್ಲಿ 9 ಸೆಂ.ಮೀ ಮಳೆಯಾಗಿದೆ. ಕೋಟ, ಆಗುಂಬೆಯಲ್ಲಿ ತಲಾ 8 ಸೆಂ.ಮೀ ಹಾಗೂ ಉಡುಪಿ, ಧರ್ಮಸ್ಥಳ, ಲಿಂಗನಮಕ್ಕಿಯಲ್ಲಿ 7 ಸೆಂ.ಮೀ ಮಳೆಯಾಗಿದೆ.

ಆರಿದ್ರಾ ಮಳೆ ಎಫೆಕ್ಟ್‌ ಕೊಡಗಿನಲ್ಲಿ ಗುಡ್ಡ ಕುಸಿತ

ಕೊಡಗಿನಲ್ಲಿ ಸುರಿದ ಆರಿದ್ರಾ ಮಳೆಯ ಎಫೆಕ್ಟ್‌ನಿಂದಾಗಿ ಅಲ್ಲಲ್ಲಿ ಸಣ್ಣ ಪ್ರಮಾಣದ ಗುಡ್ಡ ಕುಸಿತ ಉಂಟಾಗುತ್ತಿದೆ. ನಿನ್ನೆ ಸೋಮವಾರ ಸುರಿದ ಮಳೆಗೆ ಬೆಟ್ಟದ ಮಣ್ಣು ಕುಸಿದು ಮನೆ ಮತ್ತು ದೇವಸ್ಥಾನಕ್ಕೆ ಅಲ್ಪಪ್ರಮಾಣದಲ್ಲಿ ಹಾನಿಯಾಗಿದೆ. ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಪಾಲೆಮಾಡುವಿನಲ್ಲಿ ಘಟನೆ ನಡೆದಿದೆ. ಪಾಲೆಮಾಡುವಿನ ಎಂಆರ್ ಕಾಳಪ್ಪ ಅವರ ಮನೆಯ ಸಮೀಪದ ಮಣ್ಣು ಕುಸಿದಿದೆ. ದೇವಸ್ಥಾನದ ಗೋಡೆ ಪಕ್ಕದಲ್ಲಿ ಮತ್ತು ವಾಸದ ಮನೆಯ ಪಕ್ಕದಲ್ಲಿ ರಾಶಿ ಮಣ್ಣು ತುಂಬಿದೆ.

ಇದನ್ನೂ ಓದಿ: Student Death : ಅಮ್ಮನ ಸೀರೆಯಲ್ಲಿ ನೇಣು ಬಿಗಿದುಕೊಂಡಳು ಅಪ್ರಾಪ್ತೆ

ಮಂಗಳೂರಿನ ಬಂಗ್ರ ಕೂಳೂರಿನಲ್ಲೂ ರಸ್ತೆ ಕುಸಿತ

ಭಾರೀ ಮಳೆಯಿಂದಾಗಿ ಮಂಗಳೂರಿನಲ್ಲಿ ಅವಾಂತರವೇ ಸೃಷ್ಟಿಯಾಗಿದೆ. ಮಂಗಳೂರಿನ ಬಂಗ್ರ ಕೂಳೂರಿನಲ್ಲಿ ರಸ್ತೆ ಕುಸಿದಿದೆ. ಎ ಜೆ ಇಂಜಿನಿಯರಿಂಗ್ ಕಾಲೇಜಿಗೆ ಸಂಪರ್ಕಿಸುವ ರಸ್ತೆ ಇದಾಗಿದ್ದು, ಮಣ್ಣಿನ ಸವೆತಕ್ಕೆ ಕ್ಷಣ ಕ್ಷಣಕ್ಕೂ ರಸ್ತೆಯು ಕುಸಿಯುತ್ತಿದೆ.

350 ಮೀಟರ್ ಉದ್ದದ ಈ ರಸ್ತೆಯಲ್ಲಿ ರಾಜಕಾಲುವೆಯು ಹೊಂದಿಕೊಂಡಿದೆ. ಹೀಗಾಗಿ ಈ ರಸ್ತೆಯಲ್ಲಿ ವಾಹನ ಸಂಚಾರ ಹಾಗೂ ಜನರ ಓಡಾಟವನ್ನು ನಿಷೇಧಿಸಲಾಗಿದೆ. ರಸ್ತೆ ಪಕ್ಕದ 10ಕ್ಕೂ ಹೆಚ್ಚು ಮನೆಗಳು ಕೂಡ ಅಪಾಯದಲ್ಲಿದ್ದು, ರಸ್ತೆ ಸಂಪರ್ಕ ಕಡಿತಗೊಂಡಿದೆ.

ಚಿಕ್ಕಮಗಳೂರಲ್ಲಿ ಗಾಳಿ- ಮಳೆಗೆ ಶಾಲೆಗೆ ಹಾನಿ

ಚಿಕ್ಕಮಗಳೂರಿನಲ್ಲಿ ಗಾಳಿ-ಮಳೆ ಮುಂದುವರಿದಿದೆ. ಭಾರಿ ಮಳೆಗೆ ಶಾಲಾ ಕಟ್ಟಡವೊಂದು ಶಿಥಿಲಾವಸ್ಥೆಗೊಂಡಿದೆ. ಸರ್ಕಾರಿ ಶಾಲೆಯ ಚಾವಣಿಗೆ ಹಾನಿಯಾಗಿದ್ದು, ಗೋಡೆಯ ಮಣ್ಣು ಉದುರುತ್ತಿದೆ. ಮೂಡಿಗೆರೆ ತಾಲೂಕಿನ ಹಾಲೂರು ಸರ್ಕಾರಿ ಶಾಲೆಯಲ್ಲಿ ಘಟನೆ ನಡೆದಿದೆ. ವಿಷಯ ತಿಳಿಯುತ್ತಿದ್ದಂತೆ ಶಾಲೆಗೆ ಭೇಟಿ ನೀಡಿದ ಸ್ಥಳೀಯ ಶಾಸಕಿ ನಯನ ಮೋಟಮ್ಮ, ಶಿಥಿಲಾವಸ್ಥೆ ಗೊಂಡಿರುವ ಚಾವಣಿ ಸರಿಪಡಿಸಲು ಕ್ರಮವಹಿಸಲು ಸೂಚಿಸಿದರು.

ಧಾರಾಕಾರ ಮಳೆಗೆ ಧುಮ್ಮಿಕ್ಕಿದ ಜೋಗ್‌ ಫಾಲ್ಸ್‌

ಶಿವಮೊಗ್ಗದ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮಳೆಯಿಂದ ವಿಶ್ವವಿಖ್ಯಾತ ಜೋಗ ಜಲಪಾತ ಜೀವಕಳೆ ಪಡೆದುಕೊಂಡಿದೆ. ಜೋಗ ಜಲಪಾತದ ಸೌಂದರ್ಯಕ್ಕೆ ಪ್ರವಾಸಿಗರು ಮನ ಸೋತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Theft case : ಅನ್ನ ಹಾಕಿದ ಮನೆಗೆ ಕನ್ನ ಹಾಕಿದ ಕೆಲಸಗಾರ; ರಾಯಚೂರಲ್ಲಿ ಬೀಡುಬಿಟ್ಟ ಮಂಕಿ ಕ್ಯಾಪ್‌ ಗ್ಯಾಂಗ್‌!

Theft case : ಪ್ರತ್ಯೇಕ ಕಡೆಗಳಲ್ಲಿ ಕಳ್ಳತನ ಪ್ರಕರಣಗಳು ವರದಿ ಆಗಿವೆ. ಆನೇಕಲ್‌ನಲ್ಲಿ ಕೆಲಸಗಾರನೊಬ್ಬ ಅನ್ನ ಹಾಕಿದ ಮನೆಗೆ ಕನ್ನ ಹಾಕಿದ್ದಾನೆ. ಬೆಂಗಳೂರಲ್ಲಿ ಬೈಕ್‌ನಲ್ಲಿ ಬಂದ ಕಳ್ಳರು ಆಟೋ ಚಾಲಕನ ಚಿನ್ನದ ಸರವನ್ನು ಎಗರಿಸಿದ್ದಾರೆ. ರಾಯಚೂರಲ್ಲಿ ಮಂಕಿ ಕ್ಯಾಪ್‌ ಕಳ್ಳರ ಕಾಟ ಹೆಚ್ಚಾಗಿದೆ.

VISTARANEWS.COM


on

By

theft Case
Koo

ಆನೇಕಲ್: ಅನ್ನ ಹಾಕಿದ ಮನೆಗೆ ಕೆಲಸಗಾರನೊಬ್ಬ ಕನ್ನ (Theft case) ಹಾಕಿದ್ದಾನೆ. ಬೆಂಗಳೂರಿನ ಜಿಗಣಿ ಸಂತೆ ಬೀದಿ ಬಳಿ ಇರುವ ಮನಿ ಟ್ರಾನ್ಸ್‌ಫರ್‌ ಅಂಗಡಿಯಲ್ಲಿ ಸಂಗ್ರಹವಾಗಿದ್ದ 9 ಲಕ್ಷಕ್ಕೂ ಹೆಚ್ಚು ಹಣವನ್ನು ಕೆಲಸಗಾರನೇ ಕಳವು ಮಾಡಿದ್ದಾನೆ. ರಾಜು ಎಂಬುವವರಿಗೆ ಸೇರಿದ ಮನಿ ಟ್ರಾನ್ಸ್‌ಫರ್‌ ಅಂಗಡಿಯಲ್ಲಿ ಬಿಹಾರ ಮೂಲದ ದಿಲೀಪ್ ಎಂಬಾತ ಕೆಲಸ ಮಾಡುತ್ತಿದ್ದ.

ಐದಾರು ತಿಂಗಳ ಹಿಂದೆ ಕೆಲಸ ಬಿಟ್ಟು ವಾಪಸ್ ಬಿಹಾರಕ್ಕೆ ತೆರಳಿದ್ದ. ಆದರೆ ತಿಂಗಳ ಹಿಂದೆ ವಾಪಸ್ ಕೆಲಸಕ್ಕೆ ಬಂದಿದ್ದ. ಹೀಗೆ ಬಂದವನು ನಿನ್ನೆ ಸೋಮವಾರ ಸಂಜೆ ಸಿಸಿ ಕ್ಯಾಮೆರಾ ಆಫ್‌ ಮಾಡಿ ಮನಿ ಟ್ರಾನ್ಸ್‌ಫರ್‌ನಿಂದ ಸಂಗ್ರಹವಾಗಿದ್ದ ಹಣ ಕದ್ದು ಎಸ್ಕೇಪ್ ಆಗಿದ್ದಾನೆ. ಪ್ರಕರಣ ಸಂಬಂಧ ಬೆಂಗಳೂರಿನ ಜಿಗಣಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.

ಆಟೋ ಚಾಲಕನ ಸರ ಕಿತ್ತು ಪರಾರಿಯಾದ ಕಳ್ಳರು

ಬೆಂಗಳೂರಿನ ಗಿರಿನಗರದ ವಿವೆರಕಾನಂದ ಪಾರ್ಕ್ ಬಳಿ ಆಟೋ ರಿಕ್ಷಾ ಬಾಡಿಗೆ ಕೇಳುವ ನೆಪದಲ್ಲಿ ಸರಗಳ್ಳತನ ನಡೆದಿದೆ. ಬೈಕ್‌ನಲ್ಲಿ ಬಂದಿದ್ದ ಕಳ್ಳರಿಬ್ಬರು, ಬನಶಂಕರಿ ಕಡೆಗೆ ಬರುತ್ತೀರಾ ಎಂದು ಕೇಳಿದ್ದಾರೆ. ಈ ವೇಳೆ ಆಟೋ ಚಾಲಕ ಆ ಕಡೆಗೆ ಬರುವುದಿಲ್ಲ ಎಂದಾಗ ಬೈಕ್‌ನ ಹಿಂಬದಿ ಕುಳಿತ್ತಿದ್ದ ಕಿರಾತಕ ಚಾಕು ತೋರಿಸಿ ಸುಲಿಗೆ ಮಾಡಿದ್ದಾನೆ. ಸುಮಾರು 12 ಲಕ್ಷ ಮೌಲ್ಯದ 25 ಗ್ರಾಂ ತೂಕದ ಚಿನ್ನದ ಸರವನ್ನು ಕದ್ದೊಯ್ದಿದ್ದಾರೆ. ಕೂಡಲೇ ಆಟೋ ಚಾಲಕ ಈ ಸಂಬಂಧ ದೂರು ನೀಡಿದ್ದರು. ದೂರು ದಾಖಲಾದ ಕೂಡಲೆ ಸಿಸಿಟಿವಿ ಆಧರಿಸಿ ಪರಿಶೀಲನೆ ನಡೆಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: Physical Abuse : ಶಿಕ್ಷಕನಿಂದ ಇದೆಂಥ ಅನಾಚಾರ! ಬಾಲಕಿಗೆ ಲೈಂಗಿಕ ಕಿರುಕುಳ

ರಾಯಚೂರಿನಲ್ಲಿ ಮಂಕಿ ಕ್ಯಾಪ್‌ ಗ್ಯಾಂಗ್‌ ಹಾವಳಿ

ರಾಯಚೂರು ನಗರದ ಮಂತ್ರಾಲಯ ರೋಡ್‌ನಲ್ಲಿರೋ ಟ್ರೆಂಡ್ಸ್ ಮಾಲ್‌ನಲ್ಲಿ ಕಳ್ಳತನ ನಡೆದಿದೆ. ಗುರುತು ಸಿಗಬಾರೆಂದು ಮಂಕಿ ಕ್ಯಾಪ್ ಹಾಗೂ ಹ್ಯಾಂಡ್‌ ಗ್ಲೌಸ್‌ ಧರಿಸಿ ಬಂದಿದ್ದ ಕಳ್ಳರು ಮಾಲ್‌ನ ಬೀಗ ಮುರಿದು ಕಳ್ಳತನ ಮಾಡಿದ್ದಾರೆ. ಕಳ್ಳರ ಕೃತ್ಯ ಮಾಲ್‌ನಲ್ಲಿದ್ದ ಸಿಸಿಟಿವಿಯಲ್ಲಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಮೊದಲು ಕಬ್ಬಿಣದ ರಾಡ್‌ನಿಂದ ಬೀಗ ಮುರಿದು ಮಾಲ್ ಒಳಗೆ ಎಂಟ್ರಿ ಕೊಟ್ಟ ಕಳ್ಳರು ಕ್ಯಾಶ್ ಕೌಂಟರ್‌ನಲ್ಲಿದ್ದ 65 ಸಾವಿರ ರೂಪಾಯಿಗೂ ಅಧಿಕ ಹಣವನ್ನು ಕದ್ದು ಪರಾರಿ ಆಗಿದ್ದಾರೆ. ನೇತಾಜಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಧಾರವಾಡದಲ್ಲಿ ಟಾಟಾ ಹಿಟಾಚಿ ಕಂಪನಿಯಲ್ಲಿ ಕಳ್ಳತನ

ಧಾರವಾಡ ತಾಲೂಕಿನ ಗರಗ್ ಗ್ರಾಮದ ಬಳಿ ಇರುವ ಟಾಟಾ ಹಿಟಾಚಿ ಕಂಪನಿಯಲ್ಲಿ ಕಳ್ಳತನ ನಡೆದಿತ್ತು. ಕಳ್ಳತನವಾಗಿದ್ದ ರೂ. 10 ಲಕ್ಷ ಮೌಲ್ಯದ ಟೈರ್ ಮತ್ತು ಬ್ಯಾಟರಿ, 5.5 ಲಕ್ಷ ನಗದು ವಶಕ್ಕೆ ಪಡೆಯಲಾಗಿದೆ. ಕಳ್ಳತನ ಮಾಡಿದ್ದ ಮೂವರನ್ನು ಬಂಧನ ಮಾಡಲಾಗಿದೆ. ಕಂಪನಿ ನೌಕರನಿಂದಲೇ ಕಳ್ಳತನ ನಡೆದಿರುವುದು ತಿಳಿದು ಬಂದಿದೆ. ಬಸವರಾಜ ಶಿಪ್ರಿ ಎಂಬಾತ ಅಭಿಷೇಕ ಕಂಬಾರ, ಉಮೇಶ ಜೈನರ್ ಜತೆ ಸೇರಿ ಕಳ್ಳತನ ನಡೆಸಿ ಪೊಲೀಸರಿಗೆ ಲಾಕ್‌ ಆಗಿದ್ದಾರೆ. ಗರಗ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಬೆಂಗಳೂರಲ್ಲಿ ಡ್ರಗ್‌ ಪೆಡ್ಲರ್‌ ಬಂಧನ

ಸ್ಟೂಡೆಂಟ್ ವೀಸಾದಲ್ಲಿ ಬಂದು ಡ್ರಗ್ ಪೆಡ್ಲರ್ ಆದ ವಿದೇಶಿ ಪ್ರಜೆಗಳನ್ನು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಆರೋಪಿಗಳು ಮೋಜು-‌ಮಸ್ತಿಗಾಗಿ ಡ್ರಗ್ಸ್ ಮಾರಾಟ ಮಾಡುತ್ತಿದ್ದರು. ಗೋವಾ, ‌ಮುಂಬೈ ಹಾಗು ದೆಹಲಿಯಲ್ಲಿ ವಾಸವಾಗಿರುವ ತಮ್ಮದೇ ದೇಶದ ಪ್ರಜೆಗಳಿಂದ ಕಡಿಮೆ ಬೆಲೆಗೆ ಡ್ರಗ್ಸ್ ಖರೀದಿಸಿ ಬೆಂಗಳೂರಲ್ಲಿ ಮಾರಾಟ ಮಾಡುತ್ತಿದ್ದರು. ಆರೋಪಿಗಳಿಂದ ಸುಮಾರು 12 ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ರಾಜ್ಯದ ಇಲ್ಲೆಲ್ಲ ವಿಪರೀತ ಮಳೆ; ಯೆಲ್ಲೋ ಅಲರ್ಟ್‌ ಘೋಷಣೆ

Karnataka Weather Forecast : ಕರಾವಳಿ ಹಾಗೂ ಮಲೆನಾಡು ಸುತ್ತಮುತ್ತ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಸಂಜೆ ವೇಳೆ ಹಗುರದಿಂದ ಕೂಡಿದ ಮಳೆ ಸುರಿಯಲಿದೆ.

VISTARANEWS.COM


on

By

karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಕರ್ನಾಟಕದ ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ (rain News) ಸಾಧ್ಯತೆ ಇದೆ. ಮಲೆನಾಡು ಭಾಗಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (karnataka Weather Forecast) ನಿರೀಕ್ಷೆಯಿದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಪ್ರತ್ಯೇಕ ಸ್ಥಳದಲ್ಲಿ ಹಗುರದಿಂದ ಮಧ್ಯಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚಿನ ಜತೆಗೆ ಗಂಟೆಗೆ 30-40 ಕಿ.ಮೀ ಗಾಳಿ ಬೀಸುವ ನಿರೀಕ್ಷೆಯಿದೆ.

ದಕ್ಷಿಣ ಒಳನಾಡಿನಲ್ಲಿ ಪ್ರತ್ಯೇಕವಾಗಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಭಾಗಗಳಲ್ಲಿ ಪ್ರತ್ಯೇಕವಾಗಿ ಹಗುರವಾದ ಮಳೆಯಾಗುವ ನಿರೀಕ್ಷೆಯಿದೆ.

ಮಲೆನಾಡು ಜಿಲ್ಲೆಯಾದ್ಯಂತ ಚದುರಿದಂತೆ ಸಾಧಾರಣ ಮಳೆಯಾದರೆ, ಕರಾವಳಿಯಲ್ಲಿ ವ್ಯಾಪಕ ಲಘುದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಮುಂಜಾನೆ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಯೆಲ್ಲೋ ಅಲರ್ಟ್‌

ಕರಾವಳಿ ಮತ್ತು ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆಯು ಮುಂದುವರಿದಿದೆ. ಗುಡುಗು ಸಹಿತ ಗಾಳಿಗೆ ವೇಗವು 40-50 ಕಿ.ಮೀ ಇರಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 35 ಕಿ.ಮೀ ನಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ನಿರ್ಬಂಧ ಹೇರಲಾಗಿದೆ.

ಇದನ್ನೂ ಓದಿ: Tumkur News : ತುಮಕೂರಿನಲ್ಲಿ ಗ್ರಾಪಂ ಸದಸ್ಯನ ಮೇಲೆ ಚಪ್ಪಲಿ ಎಸೆದು ಮನಬಂದಂತೆ ಥಳಿಸಿದ ಉಪಾಧ್ಯಕ್ಷ!

ಮಳೆಗಾಲಕ್ಕೆ ತಕ್ಕಂತೆ ಬದಲಾಗುವ ಫುಟ್‌ವೇರ್‌ ಸ್ಟೈಲಿಂಗ್‌


ಮಳೆಗಾಲಕ್ಕೆ ತಕ್ಕಂತೆ (Monsoon Footwear Fashion) ಪ್ರತಿಯೊಬ್ಬರ ಫುಟ್‌ವೇರ್‌ ಸ್ಟೈಲಿಂಗ್‌ ಕೂಡ ಬದಲಾಗುತ್ತದೆ. ಇದಕ್ಕೆ ಪೂರಕ ಎಂಬಂತೆ, ಮಾರುಕಟ್ಟೆಯಲ್ಲಿ ನಾನಾ ಬ್ರಾಂಡ್‌ಗಳು ವಿನೂತನ ಮಾದರಿಯ ಬಗೆಬಗೆಯ ವಿನ್ಯಾಸದ ವಾಟರ್‌ಪ್ರೂಫ್‌ ಹಾಗೂ ಸ್ಕಿಡ್‌ ಆಗದ ಫುಟ್‌ವೇರ್​​ಗಳು ಲಗ್ಗೆ ಇಟ್ಟಿವೆ.

Monsoon Footwear Fashion

ವೈವಿಧ್ಯಮಯ ಫುಟ್‌ವೇರ್ಸ್

ಅವುಗಳಲ್ಲಿ ಫಂಕಿ ಕ್ರೂಕ್ಸ್‌, ಫ್ಲಿಪ್‌ಫ್ಲಾಪ್‌, ಜೆಲ್ಲಿ ಫ್ಲಾಟ್ಸ್, ವೆಡ್ಜಸ್‌ ಬೆಲ್ಲಿ ಶೂಸ್‌, ಸ್ಕಿಪ್ಪರ್‌ ಕ್ಲಾಗ್ಸ್‌, ಕ್ಯಾನ್ವಾಸ್‌, ಬ್ಯಾಲೇರಿನಾ ಫ್ಲಾಟ್‌ ಸ್ಯಾಂಡಲ್ಸ್, ಮಾನ್ಸೂನ್‌ ಸ್ನೀಕರ್‌, ರೈನ್‌ ಶೂ, ಅಕ್ವಾ ಶೂಸ್‌, ಗಮ್‌ ಬೂಟ್ಸ್, ಫೋಮ್‌ ಕ್ಲಾಗ್ಸ್ ಸೇರಿದಂತೆ ಮೆನ್ಸ್‌ ಹಾಗೂ ವುಮೆನ್ಸ್‌ ಕೆಟಗರಿಯಲ್ಲಿ ನಾನಾ ಬಗೆಯವು ಬಿಡುಗಡೆಗೊಂಡಿದ್ದು, ಮಾರಾಟ ಹೆಚ್ಚಾಗಿಯೇ ಸಾಗಿದೆ ಎನ್ನುತ್ತಾರೆ ಫುಟ್‌ವೇರ್‌ ಶೋರೂಂವೊಂದರ ಮಾರಾಟಗಾರರು.

ಸೀಸನ್‌ಗೆ ಬದಲಾಗುವ ಫುಟ್‌ವೇರ್ಸ್

ಸಮ್ಮರ್‌ ಸೀಸನ್‌ನಿಂದ ಮಾನ್ಸೂನ್‌ ಸೀಸನ್‌ಗೆ ಕಾಲಿಡುವಾಗ ಫುಟ್‌ವೇರ್‌ ಫ್ಯಾಷನ್‌ ಕೂಡ ಸಾಕಷ್ಟು ಬದಲಾಗುತ್ತದೆ. ಗ್ರ್ಯಾಂಡ್‌ ಲುಕ್‌ ನೀಡುವ ಸ್ಯಾಂಡಲ್ಸ್‌ ಆಗಲಿ, ವೆಲ್ವೆಟ್‌ ಹಾಗೂ ಡಿಸೈನರ್‌ ಶೂಗಳನ್ನಾಗಲಿ ಈ ಮಳೆಗಾಲದಲ್ಲಿ ಧರಿಸಿ ಹೊರಾಂಗಣದಲ್ಲಿ ಓಡಾಡಲು ಸಾಧ್ಯವಿಲ್ಲ! ಹಾಗಾಗಿ ಮಳೆಗಾಲಕ್ಕೆ ನೀರಿನಲ್ಲಿ ನೆನೆದರೂ, ತೊಪ್ಪೆಯಾದರೂ, ವಾಶ್‌ ಮಾಡಿದರೂ ಹಾಳಾಗದ ಮೆಟೀರಿಯಲ್‌ನ ಫುಟ್‌ವೇರ್‌ಗಳನ್ನು ಧರಿಸುವುದು, ವಾಕ್‌ ಮಾಡುವಾಗ ಸ್ಕಿಡ್‌ ಆಗದ, ಜಾರದ ಫುಟ್‌ವೇರ್‌ಗಳನ್ನು ಧರಿಸುವುದು ಅವಶ್ಯವಾಗುತ್ತದೆ ಎನ್ನುತ್ತಾರೆ ಸ್ಟೈಲಿಸ್ಟ್‌ಗಳು. ಅದರಲ್ಲೂ ಪ್ರತಿನಿತ್ಯ ಹೆಚ್ಚು ಓಡಾಡುವ ವ್ಯಾಪಾರಸ್ಥರು, ಉದ್ಯೋಗಸ್ಥರು ಹೆಚ್ಚಾಗಿ ಕಂಫರ್ಟಬಲ್‌ ಜೊತೆಗೆ ಸೀಸನ್‌ ಮುಗಿಯುವವರೆಗೂ ಬಾಳಿಕೆ ಬರುವಂತಹ ಫುಟ್‌ವೇರ್‌ಗಳನ್ನೇ ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ ಎನ್ನುತ್ತಾರೆ ಅವರು.

ಬೂಟ್ಸ್-ಶೂ-ಸ್ಯಾಂಡಲ್ಸ್-ಫ್ಲಿಪ್‌-ಫ್ಲಾಪ್‌

ಮಳೆಗಾಲದಲ್ಲಿ ಫ್ಯಾಷನ್‌ ಲುಕ್‌ಗಾಗಿ ಮಾತ್ರವಲ್ಲ, ನಿಮ್ಮ ಕಂಫರ್ಟಬಲಿಟಿಗೆ ತಕ್ಕಂತೆ ಆಯ್ಕೆ ಮಾಡಿಕೊಳ್ಳುವುದು ಜಾಣತನ. ಔಟ್‌ಡೋರ್‌ನಲ್ಲಿ ಹೆಚ್ಚು ಓಡಾಡುವವರು ಹಾಗೂ ಕೆಲಸ ಮಾಡುವವರು ಬೂಟ್ಸ್​​​ಗಎ ಮೊರೆ ಹೋದರೆ, ಮಹಿಳೆಯರು ಸ್ಯಾಂಡಲ್ಸ್‌ ಹಾಗೂ ಫ್ಲಿಪ್‌-ಫ್ಲಾಪ್‌ಗಳನ್ನು ಚೂಸ್‌ ಮಾಡುತ್ತಾರೆ. ಇನ್ನು ಹುಡುಗಿಯರು ಕ್ರೂಕ್ಸ್‌ ಹಾಗೂ ಬ್ಯಾಲೇರಿನಾ ಶೂಗಳಂತವನ್ನು ಸೆಲೆಕ್ಟ್‌ ಮಾಡುತ್ತಾರೆ ಎನ್ನುತ್ತಾರೆ ಫುಟ್‌ವೇರ್‌ ಮಾರಾಟಗಾರರು.

ಫುಟ್‌ವೇರ್‌ ಸೆಲೆಕ್ಷನ್‌ ಹೀಗಿರಲಿ

  • – ಫ್ಯಾಷನ್‌ಗಿಂತ ಹೆಚ್ಚಾಗಿ ಆರಾಮದಾಯಕವಾಗಿರಲಿ.
  • – ಫುಟ್‌ವೇರ್‌ ಒದ್ದೆಯಾಗಿದ್ದಲ್ಲಿ, ಒಣಗಿಸಿ, ಧರಿಸಿ.
  • – ಗುಣಮಟ್ಟದ ಫುಟ್‌ವೇರ್ ಕೊಳ್ಳಿ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Kangana Ranaut
ದೇಶ1 min ago

Kangana Ranaut: ಕಂಗನಾಗೆ ಕಪಾಳಮೋಕ್ಷ ಮಾಡಿದ್ದ ಕಾನ್‌ಸ್ಟೇಬಲ್‌ ಬೆಂಗಳೂರಿಗೆ ವರ್ಗಾವಣೆ

Samrat Choudhary
ಪ್ರಮುಖ ಸುದ್ದಿ4 mins ago

Samrat Choudhary: ಅಯೋಧ್ಯೆಯಲ್ಲಿ ತಲೆ ಬೋಳಿಸಿಕೊಂಡು ರಾಮನಿಗೆ ಪೇಟ ಅರ್ಪಿಸಿದ ಬಿಹಾರ ಡಿಸಿಎಂ! ಇದಕ್ಕಿದೆ ವಿಶೇಷ ಕಾರಣ!

Viral Video
Latest13 mins ago

Viral Video: ರಜೆಯಲ್ಲೂ ಮಗುವಿನ ಹೋಮ್‌ ವರ್ಕ್ ನೋಡಿ ಸಿಟ್ಟಾದ ತಾಯಿ ಮಾಡಿದ್ದೇನು? ವಿಡಿಯೊ ನೋಡಿ!

Ram charan the Indian House on set
ಟಾಲಿವುಡ್20 mins ago

Ram Charan: ಹಂಪಿ ವಿರೂಪಾಕ್ಷ ಸನ್ನಿಧಿಯಲ್ಲಿ ಸೆಟ್ಟೇರಿತು ರಾಮ್ ಚರಣ್ ನಿರ್ಮಾಣದ ಸಿನಿಮಾ!

Family drama Kannada movie song
ಕರ್ನಾಟಕ22 mins ago

Kannada New Movie: ಸಿನಿಪ್ರಿಯರ ಗಮನ ಸೆಳೆಯುತ್ತಿದೆ ‘ಫ್ಯಾಮಿಲಿ ಡ್ರಾಮ’ ಸಿನಿಮಾದ ಸಾಂಗ್!

Suraj Revanna Case
ಕರ್ನಾಟಕ24 mins ago

Suraj Revanna Case: ಸೂರಜ್ ರೇವಣ್ಣಗೆ ಜುಲೈ 18ರವರೆಗೆ ನ್ಯಾಯಾಂಗ ಬಂಧನ

Sexual Harassment
Latest25 mins ago

Sexual Harassment: ಎಲ್ಲಾ ತಂದೆಯರೂ ಹೀಗೇ ಮಾಡುತ್ತಾರೆ ಎನ್ನುತ್ತ ಮಗಳನ್ನೇ ಗರ್ಭಿಣಿ ಮಾಡಿದ್ದ ನೀಚ ತಂದೆಗೆ 101 ವರ್ಷ ಶಿಕ್ಷೆ!

Koo Shut Down
ಕರ್ನಾಟಕ35 mins ago

Koo Shut Down: ‘ಕೂ’ಗು ನಿಲ್ಲಿಸಿದ ಕನ್ನಡಿಗನೇ ಕಟ್ಟಿದ ಆ್ಯಪ್‌; ದೇಶೀಯ ಟ್ವಿಟರ್‌ ಇನ್ನು ನೆನಪು ಮಾತ್ರ!

Ananth Ambani
Latest44 mins ago

Ananth Ambani: ಸಾಮೂಹಿಕ ವಿವಾಹದಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಿದ ಅಂಬಾನಿ ಕುಟುಂಬ

kanaganahalli mid day meal
ಕಲಬುರಗಿ46 mins ago

Mid Day Meal: ಕಲಬುರಗಿಯಲ್ಲಿ ಬಿಸಿಯೂಟ ಉಂಡ 33 ವಿದ್ಯಾರ್ಥಿಗಳು ಅಸ್ವಸ್ಥ; 3 ದಿನಗಳಲ್ಲಿ ಎರಡನೇ ಘಟನೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ21 hours ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ2 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ3 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು3 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ4 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ4 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ5 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ6 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

ಟ್ರೆಂಡಿಂಗ್‌