Tiger Safari : ಸಫಾರಿಯಲ್ಲಿ ಕಂಡವು ನಾಲ್ಕು ಹುಲಿ; ಪ್ರವಾಸಿಗರಿಗೆ ರೋಮಾಂಚನ ತಂದ ಹುಲಿಗಳ ದರ್ಶನ - Vistara News

ಕರ್ನಾಟಕ

Tiger Safari : ಸಫಾರಿಯಲ್ಲಿ ಕಂಡವು ನಾಲ್ಕು ಹುಲಿ; ಪ್ರವಾಸಿಗರಿಗೆ ರೋಮಾಂಚನ ತಂದ ಹುಲಿಗಳ ದರ್ಶನ

Tiger Safari : ಕಬಿನಿ ಹಿನ್ನೀರಿ ಪ್ರದೇಶದಲ್ಲಿ ಹುಲಿಗಳು ಕಾಣಿಸಿಕೊಂಡಿದ್ದು, ಪ್ರವಾಸಿಗರು ಫುಲ್‌ ಖುಷ್‌ ಆಗಿದ್ದಾರೆ. ಒಟ್ಟಾರೆ ನಾಲ್ಕು ಹುಲಿಗಳು ಕಂಡಿದ್ದು ಕ್ಯಾಮರಾಗಳಲ್ಲಿ ಸೆರೆಯಾಗಿವೆ.

VISTARANEWS.COM


on

Man killed in tiger attack in Mysuru after boy dies in leopard attack
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೈಸೂರು: ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಅಂತರಸಂತೆಯ ದಮ್ಮನಕಟ್ಟೆ ಬಳಿಯಲ್ಲಿನ ನಾಗರಹೊಳೆ ಅಭಯಾರಣ್ಯದಲ್ಲಿ ಸಫಾರಿ (Tiger Safari) ವೇಳೆ ನಾಲ್ಕು ಹುಲಿಗಳು ಕಾಣಿಸಿಕೊಂಡು ಪ್ರವಾಸಿಗರಿಗೆ, ವನ್ಯಜೀವಿ ಪ್ರಿಯರಿಗೆ ರೋಮಾಂಚನಗೊಳಿಸಿವೆ.

Tiger Safari

ತಾಯಿಯೊಂದಿಗೆ ನಾಲ್ಕು ಹುಲಿ ಮರಿಗಳನ್ನು ಪ್ರವಾಸಿಗರು ಕಣ್ಣುಂಬಿಕೊಂಡಿದ್ದು, ತಮ್ಮ ಕ್ಯಾಮೆರಾಗಳಲ್ಲಿ, ಮೊಬೈಲ್‌ಗಳಲ್ಲಿ ಸೆರೆಹಿಡಿದು ಖುಷಿಪಟ್ಟರು. ಸಂಜೆ ಸಮಯದಲ್ಲಿ ಮರಿಗಳೊಂದಿಗೆ ಹುಲಿಗಳು ದರ್ಶನ ನೀಡಿವೆ. ಈ ವೇಳೆ ಅಲ್ಲಿಯೇ ಇದ್ದ ಛಾಯಾಗ್ರಾಹಕ ಮನೋಜ್ ಗನ್ನ ಅವರು ಹುಲಿಗಳ ಚಿತ್ರಗಳನ್ನು ಸೆರೆ ಹಿಡಿದಿದ್ದಾರೆ. ಅಲ್ಲದೆ, ವಿಡಿಯೊವನ್ನೂ ಮಾಡಿಕೊಂಡಿದ್ದಾರೆ. ಇದರಲ್ಲಿ ಹುಲಿಗಳು ಘನ ಗಂಭೀರವಾಗಿ ನಡೆಯುತ್ತಿರುವುದು, ಕ್ಯಾಮರಾಗೆ ಆಗಾಗ ಪೋಸ್‌ ಕೊಡುತ್ತಿರುವ ದೃಶ್ಯಗಳೆಲ್ಲವೂ ಸೆರೆಯಾಗಿವೆ. ಕಬಿನಿ ಹಿನ್ನೀರಿನ ಭಾಗ ಇದಾಗಿದ್ದು, ಆಗಾಗ ಹುಲಿಗಳು ದರ್ಶನ ನೀಡುತ್ತಿವೆ.

ಜಿಂಕೆ ಬೇಟೆ
ಜಿಂಕೆಯೊಂದನ್ನು ಬೇಟೆಯಾಡಿ ಮರಿ ಹುಲಿಗಳಿಗೆ ಆಹಾರ ಪೂರೈಕೆ ಮಾಡುತ್ತಿದ್ದ ಹುಲಿಗಳು ಕಣ್ಣಿಗೆ ಕಂಡಿವೆ. ಅರಣ್ಯದ ಮರಗಳ ಮರೆಯಿಂದ ಹೊರ ಬರಲು ಮರಿ ಹುಲಿಗಳು ಪ್ರಯಾಸ ಪಡುತ್ತಿರುವುದೂ ಕಂಡು ಬಂತು. ಈ ಹುಲಿಗಳು ಪ್ರವಾಸಿಗರಿಗೆ ಕಳೆದ 15 ದಿನಗಳಿಂದ ಪ್ರತಿದಿನ ದರ್ಶನ ನೀಡುತ್ತಿವೆ.

ಇದನ್ನೂ ಓದಿ | Economy growth | ಭಾರತ ಇನ್ನು 7 ವರ್ಷಗಳಲ್ಲಿ 7 ಟ್ರಿಲಿಯನ್‌ ಡಾಲರ್‌ ಆರ್ಥಿಕತೆ ಆಗಲಿದೆ: ಸಿಇಒ ಅನಂತ ನಾಗೇಶ್ವರನ್

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Rain News: ವಿಜಯನಗರ, ಕೊಪ್ಪಳ ಜಿಲ್ಲೆಯಲ್ಲಿ ಮಳೆ ಆರ್ಭಟ; ಕೆರೆಯಂತಾದ ರಸ್ತೆಗಳು!

Rain News: ವಿಜಯನಗರ ಜಿಲ್ಲೆಯಲ್ಲಿ ಮಳೆರಾಯನ ಅಬ್ಬರ ಮುಂದುವರಿದಿದ್ದು, ಕೂಡ್ಲಿಗಿ ತಾಲೂಕಿನ ಕೆಲವು ಗ್ರಾಮಗಳ ರಸ್ತೆಗಳು ಕಡೆ ಹಳ್ಳದಂತಾಗಿ ಬದಲಾಗಿದ್ದವು. ಅದೇ ರೀತಿ ಕಳೆದ ಎರಡು ದಿನಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ಬಿಟ್ಟುಬಿಡದೆ ಮಳೆ ಸುರಿಯುತ್ತಿರುವುದರಿಂದ ಹಲವೆಡೆ ಜನಜೀವನ ಅಸ್ತವ್ಯಸ್ತವಾಗಿದೆ.

VISTARANEWS.COM


on

Rain News
ಕೊಪ್ಪಳ ಜಿಲ್ಲೆಯ ಕಿನ್ನಾಳ ರಸ್ತೆ ಜಲಾವೃತವಾಗಿರುವುದು.
Koo

ವಿಜಯನಗರ/ಕೊಪ್ಪಳ: ರಾಜ್ಯದ ವಿಜಯನಗರ, ಕೊಪ್ಪಳ ಜಿಲ್ಲೆಯ ಹಲವೆಡೆ ಬುಧವಾರ ಮಳೆ (Rain News) ಆರ್ಭಟಿಸಿದ್ದು, ಭಾರಿ ಪ್ರಮಾಣದ ನೀರು ನಿಂತಿದ್ದರಿಂದ ರಸ್ತೆಗಳು ಕೆರೆಗಳಂತೆ ಬದಲಾಗಿದ್ದವು. ವಿಜಯನಗರದ ಜಿಲ್ಲಾ ಕೇಂದ್ರ ಹೊಸಪೇಟೆ ಸೇರಿ ಸುತ್ತಮುತ್ತಲಿನ ಹಂಪಿ, ಕಮಲಾಪುರ, ಚಿತ್ತವಾಡಗಿ, ಶಾನಭಾಗ ಸರ್ಕಲ್ ಸೇರಿ ಹಲವು ಕಡೆ ನಿರಂತರ ಮಳೆ ಸುರಿದಿದ್ದರಿಂದ ಬೈಕ್ ಸವಾರರು ಹೈರಾಣಾದರು. ಇನ್ನು ಕೊಪ್ಪಳ ಜಿಲ್ಲೆಯಲ್ಲಿ ಎರಡು ದಿನಗಳಿಂದ ನಿರಂತರ ಮಳೆ ಸುರಿಯುತ್ತಿದೆ. ಇದರಿಂದ ರೈತರ ಮುಖದಲ್ಲಿ ಮಂದಹಾಸ ಮೂಡಿದೆ.

ಕೂಡ್ಲಿಗಿ ತಾಲೂಕಿನಲ್ಲಿ ಹಳ್ಳದಂತಾದ ರಸ್ತೆಗಳು

ವಿಜಯನಗರ ಜಿಲ್ಲೆಯಲ್ಲಿ ಮಳೆರಾಯನ ಅಬ್ಬರ ಮುಂದುವರಿದಿದ್ದು, ಕೂಡ್ಲಿಗಿ ತಾಲೂಕಿನ ಕೆಲವು ಗ್ರಾಮಗಳ ರಸ್ತೆಗಳು ಕಡೆ ಹಳ್ಳದಂತಾಗಿ ಬದಲಾಗಿದ್ದವು. ಕೂಡ್ಲಿಗಿ ತಾಲೂಕಿನ ಮಹಾದೇವಪುರ ಗ್ರಾಮದಲ್ಲಿ ಹಳ್ಳದಂತೆ ಮಳೆ ನೀರು ಹರಿಯಿತು. ಇದರಿಂದ ದೊಡ್ಡ ಪ್ರಮಾಣದಲ್ಲಿ ಗ್ರಾಮದೊಳಕ್ಕೆ ನೀರು ನುಗಿದ್ದರಿಂದ ಜನ ಪರದಾಡುವಂತಾಗಿದೆ. ಇನ್ನು ಹೊಸಪೇಟೆಯ ರಾಣಿಪೇಟೆಯಲ್ಲಿ ಕೆಲವು ಮನೆಗಳಿಗೆ ಮಳೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ.

ಹೊಸಪೇಟೆಯಲ್ಲಿ ಭಾರಿ ಮಳೆ: ಮಳೆಯಿಂದಾಗಿ ಹೊಸಪೇಟೆಯ ಕೆಲವು ರಸ್ತೆಗಳು ಕೆರೆಯಂತಾಗಿದ್ದವು. ಕಾಲೇಜು ರಸ್ತೆ, ನೂರು ಹಾಸಿಗೆ ಆಸ್ಪತ್ರೆ ರಸ್ತೆ ಸೇರಿದಂತೆ ಕೆಲವು ಕಡೆ ಹಳ್ಳದಂತೆ ಮಳೆ ನೀರು ಹರಿಯಿತು. ಮಳೆ ನೀರು ಹರಿದು ಹೋಗಲು ಸೂಕ್ತ ವ್ಯವಸ್ಥೆ ಇಲ್ಲದ ಕಾರಣ ಬೈಕ್‌ಗಳು ಅರ್ಧಕ್ಕರ್ಧ ಮುಳುಗಿದವು. ಮಳೆ ನೀರು ರಸ್ತೆ ಮೇಲೆಯೇ ನಿಂತಿದ್ದರಿಂದ ವಾಹನ ಸವಾರರು ಹೈರಾಣಾದರು.

ಕೊಪ್ಪಳ ಜಿಲ್ಲೆಯಲ್ಲಿ ಮುಂದುವರಿದ ಮಳೆ

ಕಳೆದ ಎರಡು ದಿನಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ಬಿಟ್ಟುಬಿಡದೆ ಮಳೆ ಸುರಿಯುತ್ತಿದ್ದು, ಭರ್ಜರಿ ಮಳೆಗೆ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಕೊಪ್ಪಳ ನಗರದಲ್ಲಿ ನಿರಂತರ ಮಳೆಗೆ ಜನಜೀವನ ಅಸ್ತವ್ಯಸ್ಥವಾಗಿದೆ. ಜಿಲ್ಲೆಯಾದ್ಯಂತ ನಿರಂತರ ಮಳೆಗೆ ರಸ್ತೆಗಳು ಹಳ್ಳಗಳಾಗಿ ಪರಿವರ್ತನೆಯಾಗಿವೆ. ತಗ್ಗು ಪ್ರದೇಶದ ಮನೆಗಳಿಗೆ ಮಳೆ ಹಾಗೂ ಚರಂಡಿ ನೀರು ನುಗ್ಗುತ್ತಿರುವುದರಿಂದ ಜನರಿಗೆ ತೊಂದರೆಯಾಗಿದೆ.

ಇದನ್ನೂ ಓದಿ | Karnataka Weather : ಕರಾವಳಿ ಸೇರಿ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌; ಮಳೆ ಜತೆಗೆ ರಭಸವಾಗಿ ಬೀಸಲಿದೆ ಗಾಳಿ

ಜಿಲ್ಲೆಯ ಕಿನ್ನಾಳದಲ್ಲಿ ರಾಜಕಾಲುವೆ ತುಂಬಿ ಹರಿದಿದ್ದರಿಂದ ರಸ್ತೆ ತುಂಬೆಲ್ಲಾ ನೀರು ಆವರಿಸಿತ್ತು. ಇದರಿಂದ ಮಂಗಳೂರು, ಕಿನ್ನಾಳ ಗ್ರಾಮಗಳಿಗೆ ತೆರಳಲು ಜನರ ಪರದಾಡಿದರು. ಪ್ರಗತಿ ನಗರ, ಕಲ್ಯಾಣ ನಗರಗಳಿಗೆ ತೆರಳಲೂ ಸಹ ಜನರ ಪರದಾಡುವಂತಾಯಿತು.

Continue Reading

ಧಾರ್ಮಿಕ

Ballari News: ಭಕ್ತಿ ಭಾವದಿಂದ ನಡೆದ ಚೇಳ್ಳಗುರ್ಕಿ ಶ್ರೀ ಎರ‍್ರಿತಾತ ಮಹಾರಥೋತ್ಸವ

Ballari News: ಬಳ್ಳಾರಿ ಜಿಲ್ಲೆಯ‌ ಸುಕ್ಷೇತ್ರ ಚೇಳ್ಳಗುರ್ಕಿ ಶ್ರೀ ಎರ್ರಿತಾತನವರ ಮಹಾರಥೋತ್ಸವವು ಸಾವಿರಾರು ಭಕ್ತ ಸಮೂಹ ಮಧ್ಯೆ ಭಕ್ತಿ ಭಾವದಿಂದ ಬುಧವಾರ ಸಂಜೆ ನೆರವೇರಿತು. ರಥಕ್ಕೆ ಭಕ್ತರು ಹೂವು-ಹಣ್ಣು ಸಮರ್ಪಿಸುವ ಮೂಲಕ ಭಕ್ತಿ ಭಾವ ಮೆರೆದರು. ಮಳೆಯ ಮಧ್ಯೆ ರಥೋತ್ಸವವು ಸಂಭ್ರಮದಿಂದ ನಡೆಯಿತು.

VISTARANEWS.COM


on

Chellagurki Shri Yerrithathanavara Maharathotsava in Ballari
Koo

ಬಳ್ಳಾರಿ: ಜಿಲ್ಲೆಯ‌ ಸುಕ್ಷೇತ್ರ ಚೇಳ್ಳಗುರ್ಕಿ ಶ್ರೀ ಎರ‍್ರಿತಾತನವರ ಮಹಾರಥೋತ್ಸವವು ಸಾವಿರಾರು ಭಕ್ತ ಸಮೂಹದ ಮಧ್ಯೆ ಭಕ್ತಿ ಭಾವದಿಂದ ಬುಧವಾರ ಸಂಜೆ ನೆರವೇರಿತು. ರಥಕ್ಕೆ ಭಕ್ತರು ಹೂವು-ಹಣ್ಣು ಸಮರ್ಪಿಸುವ ಮೂಲಕ ಭಕ್ತಿ ಭಾವ ಮೆರೆದರು. ಮಳೆಯ ಮಧ್ಯೆ ರಥೋತ್ಸವವು ಸಂಭ್ರಮದಿಂದ (Ballari News) ಜರುಗಿತು.

ಮಹಾರಥೋತ್ಸವದ ನಂತರ ಹರಕೆ ಹೊತ್ತ ಭಕ್ತರು ಕರ್ಪೂರ ಆರತಿಯೊಂದಿಗೆ ಪ್ರದಕ್ಷಿಣೆ ಮಾಡಿ, ತಮ್ಮ ಹರಕೆ‌ ತೀರಿಸಿದರು. ಮಹಾರಥೋತ್ಸವದ ಅಂಗವಾಗಿ ಶ್ರೀ ಎರ‍್ರಿತಾತನವರ ಮೂರ್ತಿಗೆ ವಿಶೇಷ ಅಲಂಕಾರ ಮತ್ತು ವಿವಿಧ ಅಭಿಷೇಕ, ವಿಶೇಷ ಪೂಜೆ ನೆರವೇರಿಸಲಾಯಿತು.

ಬುಧವಾರ ಬೆಳಿಗ್ಗೆ ಮಹಾರಥೋತ್ಸವದ ಅಂಗವಾಗಿ ಸತತ ಏಳು ದಿನಗಳಿಂದ ಹಗಲಿರುಳು ನಡೆದ ಸಪ್ತಭಜನೆ ಮುಕ್ತಾಯ ಕಾರ್ಯಕ್ರಮ ನಡೆಯಿತು. ಬೆಳಿಗ್ಗೆ ಶ್ರೀ ಎರ‍್ರಿತಾತನವರ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆಯನ್ನು ಉರವಕೊಂಡದ ಗವಿಮಠ ಸಂಸ್ಥಾನದ ಡಾ. ಕರಿಬಸವರಾಜೇಂದ್ರ ಮಹಾಸ್ವಾಮೀಜಿ ಉದ್ಘಾಟಿಸಿದರು.

ನಂತರ ಶ್ರೀ ಎರ‍್ರಿಸ್ವಾಮಿ ಜೀವ ಸಮಾಧಿ ಟ್ರಸ್ಟ್‌ನ ಸಹಯೋಗದಲ್ಲಿ ಇಲ್ಲಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಏರ್ಪಡಿಸಿದ್ದ ರಕ್ತದಾನ ಶಿಬಿರವನ್ನು ಡಾ. ಕರಿಬಸವರಾಜೇಂದ್ರ ಮಹಾಸ್ವಾಮೀಜಿ ಉದ್ಘಾಟಿಸಿ, ರಕ್ತದಾನದ ಮಹತ್ವ ಕುರಿತು ತಿಳಿಸಿಕೊಟ್ಟರು.

ಇದನ್ನೂ ಓದಿ: Munnar Tour: ಮುನ್ನಾರ್‌ನ ಈ 5 ರಮಣೀಯ ಸ್ಥಳಗಳನ್ನು ನೋಡಲೇಬೇಕು!

ಜೂ.13ರಂದು ಗುರುವಾರ ಸಂಜೆ 7 ಗಂಟೆಗೆ ಹೂವಿನ ರಥೋತ್ಸವ, ನಂತರ ಬಾಣೋತ್ಸವ ನಡೆಯಲಿದೆ.

Continue Reading

ಉತ್ತರ ಕನ್ನಡ

Uttara Kannada News: ಉ.ಕ ಜಿಲ್ಲೆ ಬಿಜೆಪಿ ಕಾರ್ಯಕರ್ತರ ಕ್ಷೇತ್ರ ಎಂಬುದು ಮತ್ತೊಮ್ಮೆ ಸಾಬೀತು: ಕಾಗೇರಿ

Uttara Kannada News: ಜಿಲ್ಲೆಯ ಜನತೆಗೆ ವ್ಯಕ್ತಿ ಮುಖ್ಯವಲ್ಲ. ದೇಶದ ಅಭಿವೃದ್ಧಿ ಮುಖ್ಯ. ಉತ್ತರ ಕನ್ನಡ ಲೋಕಸಭಾ ಕ್ಷೇತ್ರ ಬಿಜೆಪಿ ಹಾಗೂ ಕಾರ್ಯಕರ್ತರ ಕ್ಷೇತ್ರ ಎಂಬುದನ್ನು ಮತ್ತೊಮ್ಮೆ ಸಾಬೀತು ಮಾಡಿದೆ ಎಂದು ಉತ್ತರ ಕನ್ನಡ ಕ್ಷೇತ್ರದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.

VISTARANEWS.COM


on

Uttara Kannada MP Vishweshwara hegde kageri spoke in Thanksgiving ceremony for bjp party workers in banavasi
Koo

ಬನವಾಸಿ: ಜಿಲ್ಲೆಯ ಜನತೆಗೆ ವ್ಯಕ್ತಿ ಮುಖ್ಯವಲ್ಲ. ದೇಶದ ಅಭಿವೃದ್ಧಿ ಮುಖ್ಯ. ಉತ್ತರ ಕನ್ನಡ ಲೋಕಸಭಾ ಕ್ಷೇತ್ರ ಬಿಜೆಪಿ ಹಾಗೂ ಕಾರ್ಯಕರ್ತರ ಕ್ಷೇತ್ರ ಎಂಬುದನ್ನು ಮತ್ತೊಮ್ಮೆ ಸಾಬೀತು ಮಾಡಿದೆ ಎಂದು ಉತ್ತರ ಕನ್ನಡ ಕ್ಷೇತ್ರದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ (Uttara Kannada News) ಹೇಳಿದರು.

ಇಲ್ಲಿಯ ನಾಮದೇವ ಕಲ್ಯಾಣ ಮಂಟಪದಲ್ಲಿ ಬುಧವಾರ ಪಕ್ಷದ ಕಾರ್ಯಕರ್ತರಿಗಾಗಿ ಏರ್ಪಡಿಸಿದ್ದ “ಕೃತಜ್ಞತಾ ಸಮಾರಂಭ” ದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಇದನ್ನೂ ಓದಿ: Karnataka Weather : ಕರಾವಳಿ ಸೇರಿ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌; ಮಳೆ ಜತೆಗೆ ರಭಸವಾಗಿ ಬೀಸಲಿದೆ ಗಾಳಿ

ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಮೂರು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಚುನಾಯಿತನಾಗಲು ಪಕ್ಷದ ಎಲ್ಲಾ ಕಾರ್ಯಕರ್ತರ ಪರಿಶ್ರಮ ಊಹೆಗೂ ನಿಲುಕದ್ದು ಎಂದು ಭಾವಿಸಿದ್ದೇನೆ. ಚುನಾವಣೆಗೂ ಮುನ್ನ ಐತಿಹಾಸಿಕ ಶ್ರೀ ಮಧುಕೇಶ್ವರ ದೇವರ ಆಶೀರ್ವಾದ ಪಡೆದು ಚುನಾವಣೆಯ ಪ್ರಕ್ರಿಯೆ ಆರಂಭಿಸಿದ್ದೇವೆ. ಇಂದು ಶ್ರೀ ಮಧುಕೇಶ್ವರ ದೇವರ ಆಶೀರ್ವಾದ, ನಿಮ್ಮೆಲ್ಲರ ಸಹಕಾರದಿಂದ ಅಭೂತಪೂರ್ವ ಗೆಲುವು ಸಾಧಿಸಿದ್ದೇನೆ. ನನ್ನ ಮೇಲೆ ನೀವು ಇಟ್ಟಿರುವ ಪ್ರೀತಿ ಮತ್ತು ವಿಶ್ವಾಸಕ್ಕೆ ನಾನು ಸದಾ ಆಭಾರಿಯಾಗಿದ್ದೇನೆ ಎಂದರು.

ಬನವಾಸಿಯ ಅಭಿವೃದ್ಧಿ ಕಾರ್ಯ ಬಹಳಷ್ಟು ಬಾಕಿ ಉಳಿದಿದ್ದು, ಪುರಾತತ್ವ ಇಲಾಖೆಯು ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವುದರಿಂದ ಮುಂದಿನ ದಿನಗಳಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಹಕಾರದೊಂದಿಗೆ ಬನವಾಸಿ ಹಾಗೂ ಗುಡ್ನಾಪೂರದ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ತಿಳಿಸಿದರು.

ಮುಖ್ಯವಾಗಿ ಈ ಕ್ಷೇತ್ರದ ಶಾಸಕರು ನಮ್ಮವರಾಗಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷದಲ್ಲಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಮೋಸ ಮಾಡುವವರಿಗೆ ಕಾಲವೇ ತಕ್ಕ ಪಾಠ ಕಲಿಸುತ್ತದೆ. ಯಲ್ಲಾಪುರ ಕ್ಷೇತ್ರದ ಪ್ರಬುದ್ಧ ಜನತೆ ಎಲ್ಲ ಮಂಡಲಗಳಲ್ಲಿ ಬಿಜೆಪಿಗೆ ಹೆಚ್ಚು ಮತಗಳನ್ನು ನೀಡುವ ಮೂಲಕ ಮೋಸಗಾರರಿಗೆ ತಕ್ಕ ಪಾಠ ಕಲಿಸಿದ್ದಾರೆ. ಶಾಸಕರು ಬಿಜೆಪಿ ತತ್ವ ಸಿದ್ದಾಂತಕ್ಕೆ ಒಪ್ಪಿಕೊಳ್ಳದೇ ಇದ್ದರೆ. ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಚುನಾವಣೆ ಎದುರಿಸಲು ಮುಂದಾಗಲಿ ಎಂದು ನಮ್ಮ ಕಾರ್ಯಕರ್ತರು ಸವಾಲು ಹಾಕುತ್ತಿರುವುದನ್ನು ಕಂಡರೆ ಮುಂದಿನ ದಿನಗಳಲ್ಲಿ ಸರಿಯಾದ ಪಾಠ ಕಲಿಸಲಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: Benefits Of Eating Guava: ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಬೇಕೆ? ಸೀಬೆಕಾಯಿ ತಿನ್ನಿ!

ಈ ಸಂದರ್ಭದಲ್ಲಿ ಬಿಜೆಪಿಯ ಗ್ರಾಮೀಣ ಮಂಡಲದ ಪ್ರಮುಖರು, ಮುಖಂಡರು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

Continue Reading

ಬೆಂಗಳೂರು

TA Sharavana: ಆಂಧ್ರಪ್ರದೇಶ ಸಿಎಂ ಆಗಿ ಚಂದ್ರಬಾಬು ನಾಯ್ಡು ಪದಗ್ರಹಣ; ಶರವಣ ಅಭಿನಂದನೆ

TA Sharavana: ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದ ಟಿಡಿಪಿ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಅವರಿಗೆ ವಿಧಾನ ಪರಿಷತ್‌ ಸದಸ್ಯ, ಜೆಡಿಎಸ್‌ ರಾಜ್ಯ ಉಪಾಧ್ಯಕ್ಷ ಟಿ.ಎ. ಶರವಣ ಅಭಿನಂದಿಸಿದ್ದಾರೆ.

VISTARANEWS.COM


on

chandrababu naidu takes oath as andhra chief minister mlc TA Sharavana Congratulated
Koo

ಬೆಂಗಳೂರು: ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದ ಟಿಡಿಪಿ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು (Chandrababu Naidu) ಅವರಿಗೆ ವಿಧಾನ ಪರಿಷತ್‌ ಸದಸ್ಯ, ಜೆಡಿಎಸ್‌ ರಾಜ್ಯ ಉಪಾಧ್ಯಕ್ಷ ಟಿ.ಎ. ಶರವಣ (TA Sharavana) ಅಭಿನಂದಿಸಿದ್ದಾರೆ.

ಇದನ್ನೂ ಓದಿ: Tata Motors: ಟಾಟಾ ಮೋಟಾರ್ಸ್‌ನಿಂದ ʼಆಲ್ಟ್ರೋಜ್ ರೇಸರ್ʼ ಬಿಡುಗಡೆ; ದರ ಎಷ್ಟು?

ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಟಿಡಿಪಿ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಅವರ ನೇತೃತ್ವದಲ್ಲಿ ಆಂಧ್ರ ಪ್ರದೇಶವು ಆಮೂಲಾಗ್ರವಾಗಿ ಅಭಿವೃದ್ಧಿ ಕಾಣಲಿ ಹಾಗೂ ಜನತೆಗೆ ತಮ್ಮಿಂದ ಒಳ್ಳೆಯದಾಗಲಿ ಎಂದು ವಿಧಾನ ಪರಿಷತ್‌ ಸದಸ್ಯ, ಜೆಡಿಎಸ್‌ ರಾಜ್ಯ ಉಪಾಧ್ಯಕ್ಷ ಟಿ.ಎ. ಶರವಣ ಹಾರೈಸಿದ್ದಾರೆ.

ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಪದಗ್ರಹಣ

ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿ ಟಿಡಿಪಿ ಮುಖ್ಯಸ್ಥ ಎನ್.​ ಚಂದ್ರಬಾಬು ನಾಯ್ಡು (Chandrababu Naidu) ನಾಲ್ಕನೇ ಬಾರಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಬುಧವಾರ (ಜೂನ್‌ 12) ರಾಜ್ಯಪಾಲ ಅಬ್ದುಲ್ ನಜೀರ್ ಅವರು ಪ್ರಮಾಣ ವಚನ ಬೋಧಿಸಿದರು. ಜನಸೇನಾ ಪಾರ್ಟಿಯ ಪವನ್‌ ಕಲ್ಯಾಣ್‌ ಕೂಡ ಈ ವೇಳೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ವಿಜಯವಾಡದ ಗನ್ನವರಂ ವಿಮಾನ ನಿಲ್ದಾಣದ ಬಳಿಯ ಕೇಸರಪಲ್ಲಿ ಐಟಿ ಪಾರ್ಕ್‌ನಲ್ಲಿ ಪ್ರಮಾಣ ವಚನ ಸಮಾರಂಭ ನಡೆದಿದ್ದು, ಎನ್‌ಡಿಎ ಒಕ್ಕೂಟದ ಲಕ್ಷಾಂತರ ಮಂದಿ ಭಾಗವಹಿಸಿದ್ದರು. ಚಂದ್ರಬಾಬು ನಾಯ್ಡು ಅವರ ಪುತ್ರ ಮತ್ತು ಟಿಡಿಪಿ ಪ್ರಧಾನ ಕಾರ್ಯದರ್ಶಿ ನಾರಾ ಲೋಕೇಶ್, ಟಿಡಿಪಿಯ ಆಂಧ್ರಪ್ರದೇಶ ಘಟಕದ ಅಧ್ಯಕ್ಷ ಕೆ.ಅಚ್ಚಣ್ಣ ನಾಯ್ಡು ಮತ್ತು ಜನಸೇನಾ ಪಾರ್ಟಿಯ ರಾಜಕೀಯ ವ್ಯವಹಾರಗಳ ಸಮಿತಿ ಅಧ್ಯಕ್ಷ ನಾದೆಂಡ್ಲಾ ಮನೋಹರ್ ಮತ್ತಿತರರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರಮುಖರು.‌

ಇದನ್ನೂ ಒದಿ: IND vs USA: ಪಂದ್ಯಕ್ಕೆ ಮಳೆ ಭೀತಿ; ಪಂದ್ಯ ರದ್ದಾದರೆ ಉಭಯ ತಂಡಗಳು ಸೂಪರ್​-8 ಪ್ರವೇಶ

ಈ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ಅಮಿತ್‌ ಶಾ, ಜೆ.ಪಿ.ನಡ್ಡಾ, ನಿತಿನ್‌ ಗಡ್ಕರಿ, ರಾಮ್‌ದಾಸ್‌ ಅಥವಾಳೆ, ಅನುಪ್ರಿಯಾ ಪಟೇಲ್‌, ಚಿರಾಗ್‌ ಪಾಸ್ವಾನ್‌, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್‌ ಶಿಂದೆ, ಎನ್‌ಚಿಪಿ ನಾಯಕರಾದ ಪ್ರಫುಲ್‌ ಪಟೇಲ್‌, ಮಾಜಿ ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಮತ್ತಿತರರು ಪಾಲ್ಗೊಂಡಿದ್ದರು.

ಆಂಧ್ರ ಪ್ರದೇಶ ವಿಧಾನ ಸಭೆಯ 175 ಸೀಟುಗಳ ಪೈಕಿ ಎನ್‌ಡಿಎ 164 ಕ್ಷೇತ್ರಗಳಲ್ಲಿ ಜಯ ಗಳಿಸಿದೆ. ಈ ಪೈಕಿ ಟಿಡಿಪಿ 135, ಜನಸೇನಾ ಪಾರ್ಟಿ 21 ಮತ್ತು ಬಿಜೆಪಿ 8 ಕಡೆ ಗೆದ್ದಿದೆ. ಮಂಗಳವಾರ ತಡರಾತ್ರಿ ಅಮರಾವತಿಯ ತಮ್ಮ ನಿವಾಸದಲ್ಲಿ ಅಮಿತ್ ಶಾ ಮತ್ತು ಜೆ.ಪಿ.ನಡ್ಡಾ ಅವರೊಂದಿಗೆ ಸಭೆ ನಡೆಸಿದ ನಂತರ ಚಂದ್ರಬಾಬು ನಾಯ್ಡು ತಮ್ಮ ಸಚಿವರ ತಂಡವನ್ನು ಅಂತಿಮಗೊಳಿಸಿದ್ದರು. ಸತ್ಯ ಕುಮಾರ್ ಯಾದವ್ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಿಜೆಪಿಯ ಏಕೈಕ ಶಾಸಕ. ಜನಸೇನಾ ಪಾರ್ಟಿಯಿಂದ ಪವನ್ ಕಲ್ಯಾಣ್, ನಾದೆಂಡ್ಲಾ ಮನೋಹರ್ ಮತ್ತು ಕಂದುಲಾ ದುರ್ಗೇಶ್ ಮೂವರು ಸಚಿವರಾಗಿ ಆಯ್ಕೆಯಾಗಿದ್ದಾರೆ. ಈ ಸಚಿವ ಸಂಪುಟದಲ್ಲಿ 17 ಹೊಸ ಮುಖಗಳಿವೆ. ಸಂಪುಟದಲ್ಲಿ ಮೂವರು ಮಹಿಳೆಯರಿದ್ದಾರೆ.

ಇದನ್ನೂ ಓದಿ: Kalaburagi News: ಜೂ.14ರಂದು ಸಿಎಂ ನೇತೃತ್ವದಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಪ್ರಗತಿ ಪರಿಶೀಲನಾ ಸಭೆ

ಚಂದ್ರಬಾಬು ನಾಯ್ಡು 2014ರಲ್ಲಿ ವಿಭಜಿತ ಆಂಧ್ರಪ್ರದೇಶದ ಮೊದಲ ಮುಖ್ಯಮಂತ್ರಿಯಾಗಿ ಹೊರಹೊಮ್ಮಿದ್ದರು. ಅವರು 2019ರ ಚುನಾವಣೆಯಲ್ಲಿ ಸೋತು 2024ರವರೆಗೆ ವಿರೋಧ ಪಕ್ಷದ ನಾಯಕರಾಗಿದ್ದರು. ಇದೀಗ ಮತ್ತೆ ಮುಖ್ಯಮಂತ್ರಿಯಾಗಿ ಅಧಿಕಾರಕ್ಕೆ ಮರಳಿದ್ದಾರೆ. ಮಂಗಳವಾರ ವಿಜಯವಾಡದ ಎ-ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ ಎನ್‌ಡಿಎ ಸಭೆಯಲ್ಲಿ ಟಿಡಿಪಿ, ಬಿಜೆಪಿ ಮತ್ತು ಪವನ್‌ ಕಲ್ಯಾಣ ನೇತೃತ್ವದ ಜನಸೇನಾ ಪಾರ್ಟಿ(JSP)ಯ ಶಾಸಕರು ಪಾಲ್ಗೊಂಡಿದ್ದರು. ಈ ವೇಳೆ ಮುಖ್ಯಮಂತ್ರಿ ಹುದ್ದೆಗೆ ಚಂದ್ರಬಾಬು ನಾಯ್ಡು ಅವರ ಹೆಸರನ್ನು ಪವನ್‌ ಕಲ್ಯಾಣ ಪ್ರಸ್ತಾಪಿಸಿದ್ದರು. ಇದಕ್ಕೆ ಬಿಜೆಪಿಯ ಡಿ.ಪುರಂದರೇಶ್ವರಿ ಬೆಂಬಲ ಸೂಚಿಸಿದರು. ಬಳಿಕ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

Continue Reading
Advertisement
Virat Kohli
ಕ್ರೀಡೆ18 mins ago

Virat Kohli: ಟಿ20 ವಿಶ್ವಕಪ್​ನಲ್ಲಿ ಮೊದಲ ಗೋಲ್ಡನ್​ ಡಕ್ ಸಂಕಟಕ್ಕೆ ಸಿಲುಕಿದ ವಿರಾಟ್​ ಕೊಹ್ಲಿ

Mumbai
ಪ್ರಮುಖ ಸುದ್ದಿ38 mins ago

300 ಕೋಟಿ ರೂ. ಆಸ್ತಿಗಾಗಿ 1 ಕೋಟಿ ರೂ. ಸುಪಾರಿ ಕೊಟ್ಟು ಮಾವನನ್ನೇ ಕೊಲ್ಲಿಸಿದ ದುಷ್ಟ ಸೊಸೆ!

ICC T20 Rankings
ಕ್ರೀಡೆ1 hour ago

ICC T20 Rankings: ಅಗ್ರಸ್ಥಾನದಲ್ಲೇ ಮುಂದುವರಿದ ಟೀಮ್​ ಇಂಡಿಯಾ; ಕುಸಿತ ಕಂಡ ಪಾಕ್

Rain News
ಪ್ರಮುಖ ಸುದ್ದಿ1 hour ago

Rain News: ವಿಜಯನಗರ, ಕೊಪ್ಪಳ ಜಿಲ್ಲೆಯಲ್ಲಿ ಮಳೆ ಆರ್ಭಟ; ಕೆರೆಯಂತಾದ ರಸ್ತೆಗಳು!

Chellagurki Shri Yerrithathanavara Maharathotsava in Ballari
ಧಾರ್ಮಿಕ2 hours ago

Ballari News: ಭಕ್ತಿ ಭಾವದಿಂದ ನಡೆದ ಚೇಳ್ಳಗುರ್ಕಿ ಶ್ರೀ ಎರ‍್ರಿತಾತ ಮಹಾರಥೋತ್ಸವ

Narendra Modi
ದೇಶ2 hours ago

Narendra Modi: ಆಂಧ್ರದಲ್ಲಿ ಮೆಗಾ ಸ್ಟಾರ್‌, ಪವರ್‌ ಸ್ಟಾರ್‌ ಜತೆ ‘ಪೊಲಿಟಿಕಲ್‌ ಸ್ಟಾರ್’‌ ಮೋದಿ; Video ನೋಡಿ

Terror attack
ದೇಶ2 hours ago

Terror attack : ಉಗ್ರರ ದಾಳಿ; ತನ್ನ ಪ್ರಾಣ ತ್ಯಾಗ ಮಾಡಿ ಪ್ರಯಾಣಿಕರ ಜೀವ ಉಳಿಸಿದ ಬಸ್‌ ಚಾಲಕ

Uttara Kannada MP Vishweshwara hegde kageri spoke in Thanksgiving ceremony for bjp party workers in banavasi
ಉತ್ತರ ಕನ್ನಡ2 hours ago

Uttara Kannada News: ಉ.ಕ ಜಿಲ್ಲೆ ಬಿಜೆಪಿ ಕಾರ್ಯಕರ್ತರ ಕ್ಷೇತ್ರ ಎಂಬುದು ಮತ್ತೊಮ್ಮೆ ಸಾಬೀತು: ಕಾಗೇರಿ

chandrababu naidu takes oath as andhra chief minister mlc TA Sharavana Congratulated
ಬೆಂಗಳೂರು2 hours ago

TA Sharavana: ಆಂಧ್ರಪ್ರದೇಶ ಸಿಎಂ ಆಗಿ ಚಂದ್ರಬಾಬು ನಾಯ್ಡು ಪದಗ್ರಹಣ; ಶರವಣ ಅಭಿನಂದನೆ

Hindu Jana Jagruti Samiti demands immediate ban on Maharaj movie
ದೇಶ2 hours ago

Maharaj Movie: `ಮಹಾರಾಜ್’ ಚಲನಚಿತ್ರ ನಿಷೇಧಕ್ಕೆ ಹಿಂದೂ ಜನಜಾಗೃತಿ ಸಮಿತಿ ಆಗ್ರಹ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ1 day ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ1 day ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ1 day ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ1 day ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ5 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ5 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌