Shraddha Murder Case | ಶ್ರದ್ಧಾಳ ದೇಹ ಕತ್ತರಿಸಲು ಅಫ್ತಾಬ್​ ಬಳಸಿದ್ದು ಯಾವ ಆಯುಧ?-ಕೊನೆಗೂ ಬಯಲಾಯ್ತು ಸತ್ಯ! - Vistara News

ಕ್ರೈಂ

Shraddha Murder Case | ಶ್ರದ್ಧಾಳ ದೇಹ ಕತ್ತರಿಸಲು ಅಫ್ತಾಬ್​ ಬಳಸಿದ್ದು ಯಾವ ಆಯುಧ?-ಕೊನೆಗೂ ಬಯಲಾಯ್ತು ಸತ್ಯ!

ಪೊಲೀಸರು ಈಗಾಗಲೇ ಅರಣ್ಯ ಪ್ರದೇಶಗಳಲ್ಲಿ ಹುಡುಕಾಟ ನಡೆಸಿ, ಕೆಲವು ಎಲುಬುಗಳನ್ನು ವಶಪಡಿಸಿಕೊಂಡಿದ್ದರು. ಅದು ಶ್ರದ್ಧಾದೇ ಎಂಬುದು ಡಿಎನ್​​ಎ ಟೆಸ್ಟ್​​ನಲ್ಲಿ ಸಾಬೀತಾಗಿತ್ತು.

VISTARANEWS.COM


on

Shraddha Murder Case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಲಿವ್​ ಇನ್​ ಸಂಗಾತಿಯಿಂದ ಬರ್ಬರವಾಗಿ ಹತ್ಯೆಗೀಡಾದ ಶ್ರದ್ಧಾ ವಾಳ್ಕರ್​​ ಕೇಸ್​ ತನಿಖೆ ಮುಂದುವರಿದೆ. ಆರೋಪಿ ಅಫ್ತಾಬ್​ ಪೂನಾವಾಲಾ ಸದ್ಯ ದೆಹಲಿಯ ತಿಹಾರ್​ ಜೈಲಿನಲ್ಲಿದ್ದು, ಮತ್ತೊಂದೆಡೆ ಅವನ ವಿಚಾರಣೆಯೂ ನಡೆಯುತ್ತಿದೆ. ಅಫ್ತಾಬ್ ಮತ್ತು ಶ್ರದ್ಧಾ ಬೇರೆ ಧರ್ಮದವರು. ಮನೆಯವರ ವಿರೋಧದ ನಡುವೆಯೂ ಶ್ರದ್ಧಾ ಅಫ್ತಾಬ್​ ಜತೆ ಬದುಕುತ್ತಿದ್ದಳು. ಕಳೆದ ಮೇ ತಿಂಗಳಲ್ಲಿ ಅಫ್ತಾಬ್​ ಆಕೆಯನ್ನು ಕೊಂದು, 35 ತುಂಡುಗಳಾಗಿ ಕತ್ತರಿಸಿ, ಅವುಗಳನ್ನೆಲ್ಲ ಫ್ರಿಜ್​​ನಲ್ಲಿಟ್ಟುಕೊಂಡಿದ್ದ. ಬಳಿಕ ತಮ್ಮ ಅಪಾರ್ಟ್​​ಮೆಂಟ್​​ಗೆ ಸಮೀಪದಲ್ಲೇ ಇರುವ ಮೆಹ್ರೌಲಿ ಅರಣ್ಯದಲ್ಲಿ ಎಸೆದಿದ್ದ. ಗುರುಗ್ರಾಮದ ಬಳಿಯ ಅರಣ್ಯದಲ್ಲೂ ಕೆಲವು ತುಂಡುಗಳನ್ನು ಎಸೆದಿದ್ದ.

ಪೊಲೀಸರು ಈಗಾಗಲೇ ಅರಣ್ಯ ಪ್ರದೇಶಗಳಲ್ಲಿ ಹುಡುಕಾಟ ನಡೆಸಿ, ಕೆಲವು ಎಲುಬುಗಳನ್ನು ವಶಪಡಿಸಿಕೊಂಡಿದ್ದರು. ಅದು ಶ್ರದ್ಧಾದೇ ಎಂಬುದು ಡಿಎನ್​​ಎ ಟೆಸ್ಟ್​​ನಲ್ಲಿ ಸಾಬೀತಾಗಿತ್ತು. ಅಫ್ತಾಬ್​ ಶ್ರದ್ಧಾಳ ದೇಹವನ್ನು ಯಾವ ಆಯುಧದಿಂದ ಕತ್ತರಿಸಿದ್ದಾನೆ ಎಂಬುದನ್ನು ಪತ್ತೆ ಹಚ್ಚುವ ಸಲುವಾಗಿ ಆ ಮೂಳೆಗಳನ್ನು ಇನ್ನಷ್ಟು ಹೆಚ್ಚಿನ ಪರೀಕ್ಷೆಗೆ ಒಳಪಡಿಸಲಾಗಿತ್ತು. ಅದರ ವರದಿ ಈಗ ಹೊರಬಿದ್ದಿದೆ. ಅಫ್ತಾಬ್​ ಪೂನಾವಾಲಾ ತನ್ನ ಲಿವ್​ ಇನ್​ ಸಂಗಾತಿ ಶ್ರದ್ಧಾಳನ್ನು ಕೊಂದು, ಬಳಿಕ ಗರಗಸದಲ್ಲಿ ಆಕೆಯ ದೇಹವನ್ನು ತುಂಡರಿಸಿದ್ದಾನೆ ಎಂಬುದು ಗೊತ್ತಾಗಿದೆ.

ಅಫ್ತಾಬ್​ ಪೂನಾವಾಲಾ ಅಪಾರ್ಟ್​ಮೆಂಟ್​​ನಿಂದ ಪೊಲೀಸರು ಹಲವು ಬಗೆಯ ಮಾರಕಾಸ್ತ್ರಗಳನ್ನು ಈಗಾಗಲೇ ವಶಪಡಿಸಿಕೊಂಡಿದ್ದಾರೆ. ಆದರೆ ಅದರಲ್ಲಿ ಶ್ರದ್ಧಾಳನ್ನು ತುಂಡರಿಸಲು ಆತ ಯಾವ ಆಯುಧ ಬಳಸಿದ್ದ ಗೊತ್ತಾಗಿರಲಿಲ್ಲ. ಅಫ್ತಾಬ್​ ಮಂಪರು ಪರೀಕ್ಷೆ ವೇಳೆ, ತಾನು ಚೀನಿ ಕ್ಲೀವರ್ (ಮಾಂಸವನ್ನು ಕತ್ತರಿಸಲು ಬಳಸುವ ದೊಡ್ಡ ಚಾಕು) ಬಳಸಿದ್ದಾಗಿ ಹೇಳಿಕೊಂಡಿದ್ದಾನೆ ಎಂಬ ವರದಿ ಬಂದಿದ್ದರೂ, ಅದು ಸ್ಪಷ್ಟವಾಗಿರಲಿಲ್ಲ.

ಇದನ್ನೂ ಓದಿ: Shraddha Murder Case| ಹೌದು ನಾನೇ ಶ್ರದ್ಧಾಳ ಕೊಲೆ ಮಾಡಿದೆ; ಮಂಪರು ಪರೀಕ್ಷೆಯಲ್ಲೂ ಅದೇ ಉತ್ತರ ಕೊಟ್ಟ ಅಫ್ತಾಬ್​

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Udupi Gang War: ಉಡುಪಿ ಗ್ಯಾಂಗ್ ವಾರ್ ಪ್ರಕರಣ; ಮತ್ತೆ ಮೂವರು ಆರೋಪಿಗಳ ಬಂಧನ

Udupi Gang War: ಉಡುಪಿ ಗ್ಯಾಂಗ್ ವಾರ್ ಪ್ರಕರಣ ಸಂಬಂಧ ಈ ಮೊದಲು ಮೂವರು ಆರೋಪಿಗಳನ್ನು ಬಂಧಿಸಲಾಗಿತ್ತು. ಇದೀಗ ಮತ್ತೆ ಮೂವರನ್ನು ಸೆರೆ ಹಿಡಿಯಲಾಗಿದೆ.

VISTARANEWS.COM


on

Udupi Gang War
Koo

ಉಡುಪಿ: ನಗರದಲ್ಲಿ ನಡೆದ ಗ್ಯಾಂಗ್ ವಾರ್ ಪ್ರಕರಣದಲ್ಲಿ (Udupi Gang War) ಮತ್ತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕಾಪು ಮೂಲದ ಗರುಡ ಗ್ಯಾಂಗ್‌ನ ಎರಡು ಗುಂಪುಗಳ ನಡುವೆ ಹೊಡೆದಾಟ ನಡೆದಿತ್ತು. ಇದಕ್ಕೆ ಸಂಬಂಧಪಟ್ಟಂತೆ ಈ ಮೊದಲು ಮೂವರು ಆರೋಪಿಗಳನ್ನು ಬಂಧಿಸಲಾಗಿತ್ತು. ಇದೀಗ ಮತ್ತೆ ಮೂವರನ್ನು ಸೆರೆ ಹಿಡಿಯಲಾಗಿದೆ.

ಗರುಡ ಗ್ಯಾಂಗ್‌ನ ಮಜೀದ್, ಅಲ್ಫಾಜ್, ಶರೀಫ್ ಬಂಧಿತರು. ಈ ಮೊದಲು ಆಶಿಕ್, ರಾಕೀಬ್, ಸಕ್ಲೈನ್ ಎಂಬುವವರನ್ನು ಬಂಧಿಸಲಾಗಿತ್ತು. ಘಟನೆಯ ಗಂಭೀರತೆ ಮತ್ತು ಸಾರ್ವಜನಿಕರ ಆಗ್ರಹದ ನಡುವೆ ಪೊಲೀಸರು ಕಾರ್ಯಾಚರಣೆ ನಡೆಸಿ, ಮತ್ತೆ ಮೂವರನ್ನು ಬಂಧಿಸಿದ್ದಾರೆ. ಇದುವರೆಗೆ ಪ್ರಕರಣದಲ್ಲಿ ಒಟ್ಟು ಆರು ಜನರನ್ನು ಬಂಧಿಸಿದಂತಾಗಿದೆ.

ಇದನ್ನೂ ಓದಿ | Road Accident : ಕಾರು ಡ್ರೈವಿಂಗ್‌ ಕಲಿಯುವಾಗ ಬ್ರೇಕ್‌ ಬದಲು ಎಕ್ಸಿಲೇಟರ್‌ ತುಳಿದಳು; ಡೆಡ್ಲಿ ಆಕ್ಸಿಡೆಂಟ್‌ಗೆ ಬಾಲಕಿ ಬಲಿ

ಏನಿದು ಪ್ರಕರಣ?

ಮೇ 18 ರಂದು ತಡರಾತ್ರಿ ಉಡುಪಿಯ ಶಾರದಾ ಕಲ್ಯಾಣ ಮಂಟಪಕ್ಕೆ ತೆರಳುವ ರಸ್ತೆಯ ಬಳಿ ನಡೆದಿದ್ದ ಗ್ಯಾಂಗ್ ವಾರ್ (Udupi Gang War) ನಗರವನ್ನು ಬೆಚ್ಚಿಬೀಳಿಸಿತ್ತು. ಎರಡು ಕಾರುಗಳಲ್ಲಿ ಬಂದ ಯುವಕರ ನಡುವೆ ನಡುರಸ್ತೆಯಲ್ಲಿ ಮಾರಾಮಾರಿ ನಡೆದಿತ್ತು. ಎರಡು ತಂಡಗಳ 6 ಯುವಕರು ಪರಸ್ಪರ ಕಾರುಗಳಿಂದ ಡಿಕ್ಕಿ ಹೊಡೆದುಕೊಂಡು, ಕೈಗೆ ಸಿಕ್ಕ ವಸ್ತುಗಳಿಂದ ಹಲ್ಲೆ ಮಾಡಿಕೊಂಡ ದೃಶ್ಯ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿಯತ್ತು.

ಎರಡು ಕಾರುಗಳಲ್ಲಿ ಬಂದ ಯುವಕರ ನಡುವೆ ನಡುರಸ್ತೆಯಲ್ಲಿ ಮಾರಾಮಾರಿ ನಡೆದಿತ್ತು. ಒಂದು ಕಾರಿಗೆ ಇನ್ನೊಂದು ಕಾರು ಡಿಕ್ಕಿ ಹೊಡೆದು, ಅಡ್ಡ ಬಂದ ತಂಡದ ಒಬ್ಬ ಸದಸ್ಯನಿಗೂ ಕಾರು ಗುದ್ದಿತ್ತು. ಕಾಪು ಮೂಲದ ಎರಡು ತಂಡಗಳ ನಡುವೆ ಹೊಡೆದಾಟ ನಡೆದಿತ್ತು. ಯುವಕರ ಮಾರಾಮಾರಿಯನ್ನು ಹತ್ತಿರದ ಕಟ್ಟಡ ಮೇಲಿಂದ ಸ್ಥಳೀಯರು ವಿಡಿಯೊ ಚಿತ್ರೀಕರಣ ಮಾಡಿದ್ದರು.

ಲಾಕಪ್‌ ಡೆತ್‌ ಕೇಸ್; ಸಹಜ‌ ಸ್ಥಿತಿಯತ್ತ ಚನ್ನಗಿರಿ ಪಟ್ಟಣ

ದಾವಣಗೆರೆ: ಯುವಕನ ಲಾಕಪ್‌ ಡೆತ್‌ ಪ್ರಕರಣದಿಂದ ಉದ್ವಿಗ್ನಗೊಂಡಿದ್ದ ಜಿಲ್ಲೆಯ ಚನ್ನಗಿರಿ ಪಟ್ಟಣ ಸಹಜ‌ ಸ್ಥಿತಿಯತ್ತ ಮರಳುತ್ತಿದೆ. ಪೊಲೀಸ್‌ ಠಾಣೆ ಮೇಲೆ ಕಲ್ಲು ತೂರಾಟ ನಡೆದಿದ್ದರಿಂದ ಆಯ ಕಟ್ಟಿನ ಸ್ಥಳಗಳಲ್ಲಿ ಪೊಲೀಸ್ ಬಂದೋಬಸ್ತ್ ಮುಂದುವರಿದಿದೆ. ಕಲ್ಲು ತೂರಾಟ ಮಾಡಿದ ಹಿನ್ನೆಲೆಯಲ್ಲಿ ನೆನ್ನೆ ರಾತ್ರಿಯೇ ಹತ್ತು ಜನರನ್ನ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದಾರೆ.

ಪೊಲೀಸ್ ವಶದಲ್ಲಿದ್ದ ಆದಿಲ್ (32) ಎಂಬ ವ್ಯಕ್ತಿ ಸಾವಿಗೀಡಾದ ಹಿನ್ನೆಲೆಯಲ್ಲಿ ಲಾಕಪ್ ಡೆತ್ ಆರೋಪ ಕೇಳಿಬಂದಿತ್ತು. ಇದರಿಂದ ರೊಚ್ಚಿಗೆದ್ದ ಕೆಲ ಕಿಡಿಗೇಡಿಗಳು ಚನ್ನಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಮಾಡಿದ್ದರು. ಈ ವೇಳೆ ಐದು ಪೊಲೀಸ್ ವಾಹನ‌‌ ಜಖಂಗೊಂಡು, ಹನ್ನೊಂದು ಪೊಲೀಸರಿಗೆ ಗಾಯಗಳಾಗಿದ್ದವು. 200ಕ್ಕೂ ಹೆಚ್ಚು ಜನರಿಂದ ಏಕಕಾಲಕ್ಕೆ ದಾಳಿಯಾದ ಹಿನ್ನೆಲೆ ಚನ್ನಗಿರಿ ಪಟ್ಟಣದಲ್ಲಿ ಉದ್ವಿಗ್ನ ಪರಿಸ್ಥಿತಿ ಏರ್ಪಟ್ಟಿತ್ತು.

ಈಗ ಶವ ಪರೀಕ್ಷೆ ವರದಿ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಆದಿಲ್‌ ಪೊಲೀಸ್ ಠಾಣೆಯಲ್ಲಿದ್ದದ್ದು ಕೇವಲ‌ ಏಳು ನಿಮಿಷ. ಈ ವೇಳೆ ಕಡಿಮೆ ರಕ್ತದೊತ್ತಡದಿಂದ ಹೃದಯಾಘಾತವಾಗಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಇಂದು ವೈದ್ಯರು ಪ್ರಾಥಮಿಕ ವರದಿ ನೀಡುವ ಸಾಧ್ಯತೆ ಇದೆ.

Continue Reading

ಕ್ರೈಂ

Road Accident : ಕಾರು ಡ್ರೈವಿಂಗ್‌ ಕಲಿಯುವಾಗ ಬ್ರೇಕ್‌ ಬದಲು ಎಕ್ಸಿಲೇಟರ್‌ ತುಳಿದಳು; ಡೆಡ್ಲಿ ಆಕ್ಸಿಡೆಂಟ್‌ಗೆ ಬಾಲಕಿ ಬಲಿ

Road Accident : ಮನೆ ಮುಂದೆ ಆಟವಾಡುತ್ತಿದ್ದ ಬಾಲಕಿಗೆ ಕಾರೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಗಂಭೀರ ಗಾಯಗೊಂಡ ಬಾಲಕಿ ಸ್ಥಳದಲ್ಲೇ ಅಸುನೀಗಿದ್ದಾಳೆ. ಮಹಿಳೆಯೊಬ್ಬರು ಕಾರು ಕಲಿಯಲು ಹೋಗಿ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

VISTARANEWS.COM


on

By

Road Accident in Bengaluru
Koo

ಬೆಂಗಳೂರು: ಮಹಿಳೆಯೊಬ್ಬರು ಕಾರು ಕಲಿಯುವಾಗ (Car Driving) ನಿಯಂತ್ರಣ ತಪ್ಪಿದ್ದು, ಮನೆ ಮುಂದೆ ಆಟವಾಡುತ್ತಿದ್ದ ಬಾಲಕಿಗೆ ಗುದ್ದಿದೆ. ಪರಿಣಾಮ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಬಾಲಕಿಗೆ (Road Accident) ಗಂಭೀರ ಗಾಯವಾಗಿದ್ದು, ಸ್ಥಳದಲ್ಲೇ ಮೃತಪಟ್ಟಿದೆ. ಬೆಂಗಳೂರು ದಕ್ಷಿಣ ತಾಲೂಕಿನ ಕಗ್ಗಲೀಪುರ ಗ್ರಾಮದಲ್ಲಿ ಅಪಘಾತ ನಡೆದಿದೆ.

ಕಗ್ಗಲೀಪುರದ ನಿವಾಸಿಗಳಾದ ವೆಂಕಟೇಶ್‌ ಮತ್ತು ಲಕ್ಷ್ಮೀ ದಂಪತಿಯ ಮಗಳು ನಾಗಲಕ್ಷ್ಮೀ (7) ಮೃತ ದುರ್ದೈವಿ. ಪಕ್ಕದ ಮನೆಯ ಮಹಿಳೆಯೊಬ್ಬರು ಕಾರು ಕಲಿಯಲು ಮುಂದಾಗಿದ್ದರು. ಇದೇ ವೇಳೆ ನಾಗಲಕ್ಷ್ಮೀ ಮನೆ ಮುಂದೆ ಆಟವಾಡುತ್ತಿದ್ದಳು. ಕಾರು ಓಡಿಸುವಾಗ ನಿಯಂತ್ರಣ ತಪ್ಪಿದ್ದು ಏಕಾಏಕಿ ವೇಗವಾಗಿ ಬಂದು ನಾಗಲಕ್ಷ್ಮಿಗೆ ಗುದ್ದಿ, ಮನೆಯೊಂದರ ತಡೆಗೋಡೆ ಡಿಕ್ಕಿ ಹೊಡೆದು ನಿಂತಿದೆ. ನಾಗಲಕ್ಷ್ಮೀ ತಲೆಗೆ ಪೆಟ್ಟು ಬಿದ್ದಿದ್ದು, ರಕ್ತಸ್ರಾವವಾಗಿ ಮೃತಪಟ್ಟಿದ್ದಾಳೆ. ಬ್ರೇಕ್‌ ಬದಲು ಎಕ್ಸಿಲೇಟರ್‌ ತುಳಿದಿದ್ದೆ ಈ ಅವಘಡಕ್ಕೆ ಕಾರಣ ಎನ್ನಲಾಗಿದೆ.

Road Accident

ಮೃತಳ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಕಗ್ಗಲೀಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಪೋಷಕರಿಗೆ ಹಸ್ತಾಂತರ ಮಾಡಲಾಗಿದೆ. ಅಪಘಾತ ಮಾಡಿದ ಮಹಿಳೆಯನ್ನು ವಶಕ್ಕೆ ಪಡೆದು ಕಾರನ್ನು ಸೀಜ್‌ ಮಾಡಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

ಚಿಕ್ಕೋಡಿಯಲ್ಲಿ ಸರಣಿ ಅಪಘಾತ; ಮೂವರ ಸ್ಥಿತಿ ಗಂಭೀರ

ಬೆಳಗಾವಿ ಜಿಲ್ಲೆ ಚಿಕ್ಕೋಡಿ ಪಟ್ಟಣದ ಹೊರವಲಯದ ಮಾಹಲಿಂಗಪುರ-ನಿಪ್ಪಾಣಿ ರಾಜ್ಯ ಹೆದ್ದಾರಿಯಲ್ಲಿ ಸರಣಿ ಅಪಘಾತ ಸಂಭವಿಸಿದೆ. ಬೃಹತ್ ಲಾರಿ- ಕಾರು ಹಾಗೂ ಎರಡು ಬೈಕುಗಳ ನಡುವೆ ಅಪಘಾತ ನಡೆದಿದೆ. ಅಪಘಾತ ತೀವ್ರತೆಗೆ ಮೂವರ ಸ್ಥಿತಿ ಗಂಭೀರವಾಗಿದೆ. ಸ್ಥಳಕ್ಕೆ ಚಿಕ್ಕೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳನ್ನು ಚಿಕ್ಕೋಡಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ನಡೆದಿದೆ.

ಇದನ್ನೂ ಓದಿ: Hassan Accident: ಹಾಸನದಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ಐವರ ದುರ್ಮರಣ

ಬಸ್‌ಗೆ ಸ್ಕೂಟರ್‌ ಡಿಕ್ಕಿ; ಸವಾರನ ಪ್ರಾಣವನ್ನೇ ಕಸಿದ ಅತಿ ವೇಗ ಚಾಲನೆ

ಕಾರವಾರ: ಬಸ್‌ಗೆ ಸ್ಕೂಟರ್‌ ಡಿಕ್ಕಿಯಾಗಿದ್ದು, ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉತ್ತರ ಕನ್ನಡದ ಹೊನ್ನಾವರದ ರಾಷ್ಟ್ರೀಯ ಹೆದ್ದಾರಿ 66ರ ಹಳದೀಪುರ ಗ್ರಾಮದ ಬಳಿ ಘಟನೆ (Road Accident) ನಡದಿದೆ. ಸವಾರ ಶಂಕರ ಹೆಗಡೆ (50) ಮೃತ ದುರ್ದೈವಿ.

ಕೆಎಸ್‌ಆರ್‌ಟಿಸಿ ಬಸ್‌ ಭಟ್ಕಳ ಭಾಗದಿಂದ ಕುಮಟಾದತ್ತ ತೆರಳುತ್ತಿತ್ತು. ಈ ವೇಳೆ ಎದುರಿನಿಂದ ವೇಗವಾಗಿ ಬಂದ ಸ್ಕೂಟರ್‌ ಬಸ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಸ್ಕೂಟರ್‌ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಗಂಭೀರ ಗಾಯಗೊಂಡ ಶಂಕರ ಅವರು ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹೊನ್ನಾವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನೆ ಸಂಬಂಧ ಹೊನ್ನಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತದಲ್ಲಿ ಬಸ್‌ ಮುಂಭಾಗ ಹಾನಿಯಾಗಿದ್ದು, ಅದೃಷ್ಟವಶಾತ್‌ ಬಸ್ಸಿನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Teenage Boy Arrested: ತನ್ನನ್ನು ಅತ್ಯಾಚಾರ ಮಾಡಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದವನನ್ನು ಕೊಂದ ಬಾಲಕ!

ಮುಜಾಫರ್‌ನಗರದ ಹಳ್ಳಿಯೊಂದರಲ್ಲಿ ತನ್ನ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ 50 ವರ್ಷದ ವ್ಯಕ್ತಿಯನ್ನು ಕೊಂದ ಆರೋಪದ ಮೇಲೆ 15 ವರ್ಷದ ಬಾಲಕನನ್ನು (Teenage Boy Arrested) ಬಂಧಿಸಲಾಗಿದೆ.

VISTARANEWS.COM


on

By

Teenage boy arrested
Koo

ಉತ್ತರಪ್ರದೇಶ: ಅತ್ಯಾಚಾರಿಯನ್ನು (rapist) ಕೊಂದ ಹದಿಹರೆಯದ ಬಾಲಕನನ್ನು (Teenage Boy Arrested) ಉತ್ತರಪ್ರದೇಶದ (Uttar Pradesh) ಮುಜಾಫರ್‌ನಗರದಲ್ಲಿ (Muzaffarnagar) ಪೊಲೀಸರು ಬಂಧಿಸಿದ್ದು, ಐಪಿಸಿ ಸೆಕ್ಷನ್ 302 (Murder) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಬಾಲಕನನ್ನು ಬಾಲಾಪರಾಧಿ ಕೇಂದ್ರಕ್ಕೆ ಕಳುಹಿಸಲಾಗಿದೆ.

ಮುಜಾಫರ್‌ನಗರದ ಹಳ್ಳಿಯೊಂದರಲ್ಲಿ ತನ್ನ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ 50 ವರ್ಷದ ವ್ಯಕ್ತಿಯನ್ನು ಕೊಂದ ಆರೋಪದ ಮೇಲೆ 15 ವರ್ಷದ ಬಾಲಕನನ್ನು ಬಂಧಿಸಲಾಗಿದೆ. ಮೇ 20ರಂದು ಬಾಲಕನ ಮನೆಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದ್ದು, ಪೊಲೀಸ್ ತನಿಖೆಯ ಅನಂತರ ಹದಿಹರೆಯದವರನ್ನು ಶನಿವಾರ ಬಂಧಿಸಲಾಯಿತು.

ವ್ಯಕ್ತಿಯ ಕುಟುಂಬದವರು ಪೊಲೀಸರಿಗೆ ದೂರು ನೀಡಿದ ಅನಂತರ ಬಾಲಕನ ವಿರುದ್ಧ ಐಪಿಸಿ ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬಾಲಕನನ್ನು ಬಾಲಾಪರಾಧಿ ಕೇಂದ್ರಕ್ಕೆ ಕಳುಹಿಸಲಾಗಿದೆ.

ಎಸ್ಪಿ (ಗ್ರಾಮೀಣ) ಆದಿತ್ಯ ಬನ್ಸಾಲ್ ಅವರು, ವಾರಗಳ ಹಿಂದೆ ಮೃತರು ಅಪ್ರಾಪ್ತ ವಯಸ್ಕನನ್ನು ಅಶ್ಲೀಲ ವಿಡಿಯೋ ಕ್ಲಿಪ್ ಅನ್ನು ರೆಕಾರ್ಡ್ ಮಾಡಿದ್ದರು. ಬಾಲಕನಿಗೆ ಬ್ಲ್ಯಾಕ್‌ಮೇಲ್ ಮಾಡಲಾಗುತ್ತಿದೆ ಮತ್ತು ಪದೇ ಪದೇ ಲೈಂಗಿಕ ಕಿರುಕುಳ ನೀಡಲಾಗುತ್ತಿತ್ತು.

ಸೋಮವಾರ ವಿಡಿಯೋವನ್ನು ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ ಅನಂತರ, ವ್ಯಕ್ತಿ ತನ್ನ ಮನೆಗೆ ಬರುವಂತೆ ಬಾಲಕನಿಗೆ ಒತ್ತಾಯಿಸಿದ್ದನು. ಆತ ಕಿರುಕುಳ ನೀಡುತ್ತಿದ್ದುದರಿಂದ ಹುಡುಗ ತನ್ನ ಪಕ್ಕದಲ್ಲಿದ್ದ ಹರಿತವಾದ ವಸ್ತುವನ್ನು ಎತ್ತಿಕೊಂಡು ಹೋಗಿ ವ್ಯಕ್ತಿಯ ತಲೆ ಮತ್ತು ಗಂಟಲಿನ ಮೇಲೆ ಹಲ್ಲೆ ನಡೆಸಿದ್ದ. ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ಆತನ ಕುಟುಂಬಸ್ಥರು ದೂರಿನಲ್ಲಿ ತಿಳಿಸಿದ್ದಾರೆ.

ಪ್ರೀತಿಗೆ ವಿರೋಧ; ಯುವಕ ಆತ್ಮಹತ್ಯೆ

ಪ್ರೀತಿಸಿದ ಯುವತಿಯ ಕುಟುಂಬಸ್ಥರು ಮದುವೆಗೆ ವಿರೋಧ ವ್ಯಕ್ತಪಡಿಸಿದ ಕಾರಣ ಮನನೊಂದ ಪ್ರಿಯಕರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಲಸೂರ ಪಟ್ಟಣದಲ್ಲಿ ಈ ಘಟನೆ ನಡೆದಿದೆ.

ಅಜಯ್ ಮನೋಹರ ಸೂರ್ಯವಂಶಿ (22) ಮೃತ ವ್ಯಕ್ತಿ. ಕೆಲವು ವರ್ಷಗಳಿಂದ ಈತ ಯುವತಿಯೊಬ್ಬಳನ್ನು ಪ್ರೀತಿಸುತಿದ್ದ, ಆದರೆ ತನ್ನ ತಂಗಿಯನ್ನು ಮರೆತು ಬಿಡುವಂತೆ ಆಕೆಯ ಅಣ್ಣ ಯುವಕನಿಗೆ ಧಮ್ಕಿ ಹಾಕಿದ್ದ. ಹೀಗಾಗಿ ಆತನ ಭಯಕ್ಕೆ ಹೆದರಿ ತನ್ನ ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮೃತನ ತಾಯಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಈ ಕುರಿತು ಹೊಲಸೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಇದನ್ನೂ ಓದಿ: Physical Abuse: ವಾಯಿಸ್‌ ಚೇಂಜಿಂಗ್‌ ಆಪ್‌ ಸಹಾಯದಿಂದ ಯುವತಿಯರಿಗೆ ಬಲೆ; ಮಹಿಳೆಯಂತೆ ಮಾತನಾಡಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ

ಹಿಟ್‌ ಆ್ಯಂಡ್‌ ರನ್‌: ಪಾದಚಾರಿ ಸಾವು

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಅರೇಪುರ ಗೇಟ್ ಬಳಿ ಹಿಟ್‌ ಆ್ಯಂಡ್‌ ರನ್‌ಗೆ ಪಾದಚಾರಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ.

ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗೆ ಹಿಂಬದಿಯಿಂದ ಬಂದ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರಸ್ತೆಯ ಮಧ್ಯೆ ಹಾರಿ ಬಿದ್ದ ವ್ಯಕ್ತಿ ಮೇಲೆ ಮತ್ತೊಂದು ವಾಹನ ಹರಿದಿದೆ ಎನ್ನಲಾಗಿದೆ.

ಅಪಘಾತದಿಂದ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯನ್ನು ಸ್ಥಳೀಯರು ಕೂಡಲೇ ಆಂಬ್ಯುಲೆನ್ಸ್‌ನಲ್ಲಿ ಕರೆದೊಯ್ಯುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಮೃತಪಟ್ಟ ವ್ಯಕ್ತಿಯ ಗುರುತು ಪತ್ತೆಯಾಗದ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳೀಯ ಠಾಣೆಗಳಿಗೆ ಮಾಹಿತಿ ರವಾನಿಸಿದ್ದಾರೆ. ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಉತ್ತರ ಕನ್ನಡ

Road Accident : ಬಸ್‌ಗೆ ಸ್ಕೂಟರ್‌ ಡಿಕ್ಕಿ; ಸವಾರನ ಪ್ರಾಣವನ್ನೇ ಕಸಿದ ಅತಿ ವೇಗ ಚಾಲನೆ

Road Accident : ವೇಗವಾಗಿ ಬಂದ ಸ್ಕೂಟರ್‌ವೊಂದು ಎದುರಿಗೆ ಬಂದ ಕೆಎಸ್‌ಆರ್‌ಟಿಸಿ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ.

VISTARANEWS.COM


on

By

Road Accident
Koo

ಕಾರವಾರ: ಬಸ್‌ಗೆ ಸ್ಕೂಟರ್‌ ಡಿಕ್ಕಿಯಾಗಿದ್ದು, ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉತ್ತರ ಕನ್ನಡದ ಹೊನ್ನಾವರದ ರಾಷ್ಟ್ರೀಯ ಹೆದ್ದಾರಿ 66ರ ಹಳದೀಪುರ ಗ್ರಾಮದ ಬಳಿ ಘಟನೆ (Road Accident) ನಡದಿದೆ. ಸವಾರ ಶಂಕರ ಹೆಗಡೆ (50) ಮೃತ ದುರ್ದೈವಿ.

ಕೆಎಸ್‌ಆರ್‌ಟಿಸಿ ಬಸ್‌ ಭಟ್ಕಳ ಭಾಗದಿಂದ ಕುಮಟಾದತ್ತ ತೆರಳುತ್ತಿತ್ತು. ಈ ವೇಳೆ ಎದುರಿನಿಂದ ವೇಗವಾಗಿ ಬಂದ ಸ್ಕೂಟರ್‌ ಬಸ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಸ್ಕೂಟರ್‌ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಗಂಭೀರ ಗಾಯಗೊಂಡ ಶಂಕರ ಅವರು ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹೊನ್ನಾವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನೆ ಸಂಬಂಧ ಹೊನ್ನಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತದಲ್ಲಿ ಬಸ್‌ ಮುಂಭಾಗ ಹಾನಿಯಾಗಿದ್ದು, ಅದೃಷ್ಟವಶಾತ್‌ ಬಸ್ಸಿನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ: Physical Abuse: ವಾಯಿಸ್‌ ಚೇಂಜಿಂಗ್‌ ಆಪ್‌ ಸಹಾಯದಿಂದ ಯುವತಿಯರಿಗೆ ಬಲೆ; ಮಹಿಳೆಯಂತೆ ಮಾತನಾಡಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ

ಹಾಸನದಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ಐವರ ದುರ್ಮರಣ

ಹಾಸನ: ಹಾಸನ ಹೊರವಲಯದ ಈಚನಹಳ್ಳಿ (Ichanahalli Village) ಬಳಿ ಕಾರು ಹಾಗೂ ಟ್ರಕ್ ನಡುವೆ ಭೀಕರ ಅಪಘಾತ (ಮೇ.26) ಸಂಭವಿಸಿದ್ದು, ಸ್ಥಳದಲ್ಲೇ ಐವರು ಮೃತಪಟ್ಟಿದ್ದಾರೆ. ಡಿಕ್ಕಿ ರಭಸಕ್ಕೆ ಕಾರು ನಜ್ಜುಗುಜ್ಜು (Five died on the spot) ಆಗಿದೆ. ಮೃತದೇಹಗಳನ್ನು ಹೊರಗೆ ತೆಗೆಯಲು ಪೊಲೀಸರು (Hassan Accident Terrible accident) ಹರಸಾಹಸ ಪಟ್ಟಿದ್ದಾರೆ.

ಕಾರಿನಲ್ಲಿದ್ದ ಮೂವರು ಮಹಿಳೆಯರು ಹಾಗೂ ಇಬ್ಬರು ಪುರುಷರು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಸ್ಥಳಕ್ಕೆ ಎಸ್ಪಿ ಮಹಮದ್ ಸುಜೇತಾ ಭೇಟಿ ನೀಡಿದ್ದಾರೆ. ಹಾಸನ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.

Hassan Accident:

ಇಬ್ಬರು ಮಹಿಳೆ, ಮೂವರು ಪುರುಷರು, ಒಂದು ಮಗು ಕೂಡ ಮೃತಪಟ್ಟಿದೆ. ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂಬಂಧಿಕರನ್ನು ನೋಡಲು ಕುಟುಂಬ ತೆರಳಿತ್ತು. ವಾಪಸ್ ಊರಿಗೆ ಮರಳುವಾಗ ನಿದ್ರೆ ಮಂಪರಿನಲ್ಲಿ ಭೀಕರ ಅಪಘಾತ ಸಂಭವಿಸಿದೆ. ಮೃತರು ಹೊಸಕೋಟೆ ತಾಲ್ಲೂಕಿನ, ಅಂದರಹಳ್ಳಿ ಹಾಗೂ ದೇವನಹಳ್ಳಿ ಬಳಿಯ ಕಾರಹಳ್ಳಿ ಮೂಲದವರು. ನಾರಾಯಣಪ್ಪ, ಸುನಂದಾ, ರವಿಕುಮಾರ್, ನೇತ್ರ, ಬಾಲಕ ಚೇತನ್ , ಡ್ರೈವರ್‌ ರಾಕೇಶ್ ಮೃತರು ಎಂದು ತಿಳಿದು ಬಂದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Udupi Gang War
ಕರ್ನಾಟಕ4 mins ago

Udupi Gang War: ಉಡುಪಿ ಗ್ಯಾಂಗ್ ವಾರ್ ಪ್ರಕರಣ; ಮತ್ತೆ ಮೂವರು ಆರೋಪಿಗಳ ಬಂಧನ

T20 World Cup 2024
ಕ್ರೀಡೆ15 mins ago

T20 World Cup 2024: ನ್ಯೂಯಾರ್ಕ್​ಗೆ ಪ್ರಯಾಣಿಸಿದ ಮೊದಲ ಬ್ಯಾಚ್​; ವಿರಾಟ್​ ಕೊಹ್ಲಿ ಗೈರು, ಅಭ್ಯಾಸ ಪಂದ್ಯಕ್ಕೂ ಅನುಮಾನ

Road Accident in Bengaluru
ಕ್ರೈಂ17 mins ago

Road Accident : ಕಾರು ಡ್ರೈವಿಂಗ್‌ ಕಲಿಯುವಾಗ ಬ್ರೇಕ್‌ ಬದಲು ಎಕ್ಸಿಲೇಟರ್‌ ತುಳಿದಳು; ಡೆಡ್ಲಿ ಆಕ್ಸಿಡೆಂಟ್‌ಗೆ ಬಾಲಕಿ ಬಲಿ

Teenage boy arrested
ಕ್ರೈಂ31 mins ago

Teenage Boy Arrested: ತನ್ನನ್ನು ಅತ್ಯಾಚಾರ ಮಾಡಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದವನನ್ನು ಕೊಂದ ಬಾಲಕ!

Janhvi Kapoor on paparazzi culture
ಬಾಲಿವುಡ್38 mins ago

Janhvi Kapoor: ಪಾಪರಾಜಿಗಳ ಅಸಲಿ ಮುಖ ರಿವೀಲ್‌ ಮಾಡಿದ ಜಾನ್ವಿ ಕಪೂರ್!

Gold Rate Today
ಕರ್ನಾಟಕ43 mins ago

Gold Rate Today: ಇಂದೂ ಯಥಾಸ್ಥಿತಿ ಕಾಯ್ದುಕೊಂಡ ಚಿನ್ನ, ಬೆಳ್ಳಿ ದರ

Tiger attack
ಮೈಸೂರು1 hour ago

Tiger Attack : ಮೈಸೂರಲ್ಲಿ ಹುಲಿ ದಾಳಿ; ಮಹಿಳೆಯನ್ನು ಹೊತ್ತೊಯ್ದು ಕೊಂದ ವ್ಯಾಘ್ರ

IPL 2024 Final
ಕ್ರೀಡೆ1 hour ago

IPL 2024 Final: ಐಪಿಎಲ್​ ವಿನ್ನರ್​ & ರನ್ನರ್​ಗೆ ಸಿಗುವ ಮೊತ್ತವೆಷ್ಟು? ಈ ಬಾರಿ ಆರೆಂಜ್​ ಕ್ಯಾಪ್​, ಪರ್ಪಲ್​ ಕ್ಯಾಪ್​ ಯಾರಿಗೆ ಸಿಗಲಿದೆ?

Cyclone Remal
ದೇಶ1 hour ago

Cyclone Remal: ರೆಮಲ್‌ ಚಂಡ ಮಾರುತದ ಅಬ್ಬರ ಶುರು; ಬಾಂಗ್ಲಾದೇಶ, ಪ.ಬಂಗಾಳ ಸೇರಿದಂತೆ ಹಲವಡೆ ಭಾರೀ ಮಳೆ, ಭೂಕುಸಿತ ಸಾಧ್ಯತೆ

Dhruva Sarja KD Movie Release date announce
South Cinema1 hour ago

Dhruva Sarja: ಮತ್ತೆ ಗುಡ್‌ ನ್ಯೂಸ್‌ ಕೊಟ್ಟ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ21 hours ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ3 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ4 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು5 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು5 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ6 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ7 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ7 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ7 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

ಟ್ರೆಂಡಿಂಗ್‌