Starbucks-Samsung Opera House | ಸ್ಯಾಮ್‌ಸಂಗ್‌ ಒಪೆರಾ ಹೌಸ್‌ನಲ್ಲಿ ನೂತನ ಶಾಖೆ ತೆರೆದ ಸ್ಟಾರ್‌ಬಕ್ಸ್‌ - Vistara News

ಕರ್ನಾಟಕ

Starbucks-Samsung Opera House | ಸ್ಯಾಮ್‌ಸಂಗ್‌ ಒಪೆರಾ ಹೌಸ್‌ನಲ್ಲಿ ನೂತನ ಶಾಖೆ ತೆರೆದ ಸ್ಟಾರ್‌ಬಕ್ಸ್‌

Starbucks-Samsung Opera House | ಬೆಂಗಳೂರಿನ ಬ್ರಿಗೇಡ್‌ ರಸ್ತೆಯ ಸ್ಯಾಮ್‌ಸಂಗ್‌ ಒಪೆರಾ ಹೌಸ್‌ನಲ್ಲಿ 70 ಆಸನ ಸಾಮರ್ಥ್ಯದ ಸ್ಟಾರ್‌ಬಕ್ಸ್‌ ಔಟ್‌ಲೆಟ್ ಅನ್ನು ಉದ್ಘಾಟಿಸಲಾಗಿದೆ.

VISTARANEWS.COM


on

Starbucks-Samsung Opera House
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮೊಬೈಲ್‌ ಖರೀದಿಸಲು ಬ್ರಿಗೇಡ್‌ ರಸ್ತೆಯಲ್ಲಿರುವ ಸ್ಯಾಮ್‌ಸಂಗ್‌ ಒಪೆರಾ ಹೌಸ್‌ಗೆ ತೆರಳುತ್ತಿದ್ದ ಗ್ರಾಹಕರಿಗೆ, ಇದೀಗ ಅಲ್ಲಿಯೇ ಕುಳಿತು ಕಾಫಿ ಸವಿಯಲು ಅವಕಾಶ ಸಿಕ್ಕಿದೆ. ಏಕೆಂದರೆ, ಓಪೆರಾ ಹೌಸ್‌ನಲ್ಲಿ “ಸ್ಟಾರ್‌ಬಕ್ಸ್‌” ಶಾಖೆಯನ್ನು (Starbucks-Samsung Opera House) ಹೊಸದಾಗಿ ತೆರೆಯಲಾಗಿದೆ.

70 ಸೀಟರ್ ಸ್ಟಾರ್‌ಬಕ್ಸ್‌ ಔಟ್‌ಲೆಟ್ ಅನ್ನು ಸ್ಯಾಮ್‌ಸಂಗ್‌ ಸೌತ್‌ವೆಸ್ಟ್‌ ಏಷ್ಯಾ ವಿಭಾಗದ ಅಧ್ಯಕ್ಷ ಮತ್ತು ಸಿಇಒ ಜೊಂಗ್‌ಬಮ್‌ ಪಾರ್ಕ್‌ ಹಾಗೂ ಟಾಟಾ ಸ್ಟಾರ್‌ಬಕ್ಸ್‌ ಸಿಇಒ ಸುಶಾಂತ್‌ ದಾಶ್‌ ಸ್ಯಾಮ್‌ಸಂಗ್‌ ಒಪೆರಾ ಹೌಸ್‌ನಲ್ಲಿ ಉದ್ಘಾಟಿಸಿದರು.

ಈ ವೇಳೆ ಮಾತನಾಡಿದ ಸ್ಯಾಮ್‌ಸಂಗ್‌ ಸಿಇಒ ಜೊಂಗ್‌ಬಮ್‌ ಪಾರ್ಕ್‌, ಸಾಮಾನ್ಯವಾಗಿ ಮೊಬೈಲ್‌ ಅಥವಾ ಇತರೆ ಗ್ಯಾಜೆಟ್ಸ್‌ ಖರೀದಿಸುವವರು ಅದರ ಫೀಚರ್‌ಗಳನ್ನು ನೋಡುತ್ತಾ ಸಾಕಷ್ಟು ಸಮಯವನ್ನು ತೆಗೆದುಕೊಳ್ಳುತ್ತಾರೆ. ಒಂದೇ ಕಡೆ ಇದ್ದು ಆಯಾಸಗೊಂಡು ಹೊರಗಡೆ ತೆರಳಿ ಕಾಫಿ ಅಥವಾ ಇತರೆ ಸ್ನ್ಯಾಕ್ಸ್‌ ತಿನ್ನಲು ಹುಡುಕಾಟ ನಡೆಸುತ್ತಾರೆ. ಹೀಗಾಗಿ ಗ್ರಾಹಕರಿಗೆ ಈ ಶ್ರಮ ನೀಡಬಾರದು ಎಂಬ ಕಾರಣಕ್ಕೆ ಸ್ಯಾಮ್‌ಸಂಗ್‌ ಕಚೇರಿಯಲ್ಲಿಯೇ ಸ್ಟಾರ್‌ಬಕ್ಸ್‌ ಶಾಖೆ ತೆರೆಯಲಾಗಿದೆ. ಇಲ್ಲಿ ಎಲ್ಲ ಬಗೆಯ ಸ್ನ್ಯಾಕ್ಸ್‌ ದೊರೆಯಲಿದೆ. ಇದರಲ್ಲಿ ಪ್ರೀಮಿಯಂ ಗುಣಮಟ್ಟದ ಕಾಫಿ, ಪಾನೀಯಗಳು, ವಿಶಿಷ್ಟ ತಿನಿಸುಗಳು ಸಹ ಸೇರಿವೆ ಎಂದು ತಿಳಿಸಿದರು.

ಹೊಸ ತಲೆಮಾರಿನ ಗ್ರಾಹಕರು ಕಳೆದ ನಾಲ್ಕು ವರ್ಷಗಳಿಂದಲೂ ಸ್ಯಾಮ್‌ಸಂಗ್‌ ಒಪೆರಾ ಹೌಸ್‌ಗೆ ಪ್ರೀತಿಯಿಂದ ಆಗಮಿಸಿದ್ದಾರೆ. ಈಗ, ಈ ಅನುಭವವನ್ನು ಇನ್ನೂ ಎತ್ತರಕ್ಕೆ ಕೊಂಡೊಯ್ಯಲಿದ್ದೇವೆ. ಇದರಲ್ಲಿ ಕನೆಕ್ಟೆಡ್‌ ಲಿವಿಂಗ್ ಝೋನ್‌, ಗೇಮಿಂಗ್ ಅರೆನಾ, ಹೋಮ್ ಥಿಯೇಟರ್‌ ಝೋನ್‌ ಹಾಗೂ ಇತರೆ ಸೌಲಭ್ಯಗಳನ್ನೂ ಕಲ್ಪಿಸಿದ್ದೇವೆ. ಈ ಅನುಭವಕ್ಕೆ ಸ್ಟಾರ್‌ಬಕ್ಸ್‌ ಸ್ಟೋರ್ ಅನ್ನೂ ಸೇರಿಸಲು ನಮಗೆ ಖುಷಿಯಾಗುತ್ತಿದೆ. ಈ ಕಾಲದ ಯುವಕರಿಗೆ ಇರುವ ಎರಡು ಅತ್ಯಂತ ಉತ್ಸಾಹಕರ ಸಂಗತಿಗಳಾದ ತಂತ್ರಜ್ಞಾನ ಮತ್ತು ಕಾಫಿಯನ್ನು ನಾವು ಈ ಮೂಲಕ ಒಟ್ಟಿಗೆ ತರುತ್ತಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ | ವಿಸ್ತಾರ Explainer | ಉಚಿತ ಕೊಡುಗೆಗಳು ಜನರಿಗೆ ಹಿತವೇ? ಅಭಿವೃದ್ಧಿಗೆ ಶಾಪವೇ? ಚುನಾವಣಾ ವರ್ಷದಲ್ಲಿ ಕಾವೇರಿದ ಚರ್ಚೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Prajwal Revanna Case: ರೇವಣ್ಣ ಮೇಲಿನ ಮತ್ತೊಂದು ಕೇಸ್‌ ಎಸ್‌ಐಟಿಗೆ ವರ್ಗ; ಭವಾನಿಗೂ ನೋಟಿಸ್‌!

Prajwal Revanna Case: ಮಾಜಿ ಸಚಿವ ಎಚ್.ಡಿ. ರೇವಣ್ಣ ವಿರುದ್ಧ ಕೆ.ಆರ್. ನಗರದಲ್ಲಿ ದಾಖಲಾಗಿದ್ದ ಮತ್ತೊಂದು ಪ್ರಕರಣವು ಈಗ ಎಸ್ಐಟಿಗೆ ವರ್ಗಾವಣೆ ಮಾಡಲು ಸಿದ್ಧತೆ ನಡೆದಿದೆ. ಈ ಸಂಬಂಧ ಪ್ರಕ್ರಿಯೆಗಳು ಸಾಗಿದೆ. ಇದೂ ದಾಖಲಾದರೆ ರೇವಣ್ಣ ವಿರುದ್ಧ ಒಟ್ಟು ಮೂರು ಪ್ರಕರಣಗಳಲ್ಲಿ ಎಸ್‌ಐಟಿ ತನಿಖೆಯನ್ನು ನಡೆಸಲಿದೆ. ಹೀಗಾಗಿ ರೇವಣ್ಣ ಅವರಿಗೆ ಮತ್ತೊಂದು ಟೆನ್ಶನ್‌ ಶುರುವಾದಂತೆ ಆಗಿದೆ. ಇತ್ತ ಭವಾನಿ ರೇವಣ್ಣ ಅವರಿಗೂ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಲಾಗಿದೆ ಎಂದು ಹೇಳಲಾಗುತ್ತಿದೆ.

VISTARANEWS.COM


on

Prajwal Revanna Case Another case against Revanna transferred to SIT Notice to Bhavani
Koo

ಬೆಂಗಳೂರು/ಹಾಸನ: ಹಾಸನ ಸಂಸದ (Hassan MP), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna Case) ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಅವರ ಮೇಲಿನ ಕಿಡ್ನ್ಯಾಪ್‌ ಕೇಸ್‌ ಈಗ ಎಸ್‌ಐಟಿಗೆ ವರ್ಗಾವಣೆ ಆಗಿದೆ. ಇನ್ನು ಅವರ ಪತ್ನಿ ಭವಾನಿ ರೇವಣ್ಣ ಅವರಿಗೂ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ನೋಟಿಸ್‌ ನೀಡಿದೆ ಎನ್ನಲಾಗಿದೆ.

ಮಾಜಿ ಸಚಿವ ಎಚ್.ಡಿ. ರೇವಣ್ಣ ವಿರುದ್ಧ ಕೆ.ಆರ್. ನಗರದಲ್ಲಿ ದಾಖಲಾಗಿದ್ದ ಮತ್ತೊಂದು ಪ್ರಕರಣವು ಈಗ ಎಸ್ಐಟಿಗೆ ವರ್ಗಾವಣೆ ಮಾಡಲು ಸಿದ್ಧತೆ ನಡೆದಿದೆ. ಈ ಸಂಬಂಧ ಪ್ರಕ್ರಿಯೆಗಳು ಸಾಗಿದೆ. ಇದೂ ದಾಖಲಾದರೆ ರೇವಣ್ಣ ವಿರುದ್ಧ ಒಟ್ಟು ಮೂರು ಪ್ರಕರಣಗಳಲ್ಲಿ ಎಸ್‌ಐಟಿ ತನಿಖೆಯನ್ನು ನಡೆಸಲಿದೆ. ಹೀಗಾಗಿ ರೇವಣ್ಣ ಅವರಿಗೆ ಮತ್ತೊಂದು ಟೆನ್ಶನ್‌ ಶುರುವಾದಂತೆ ಆಗಿದೆ.

ಭವಾನಿ ರೇವಣ್ಣಗೂ ನೋಟಿಸ್‌?

ಇನ್ನು ಹಾಸನದಲ್ಲಿರುವ ರೇವಣ್ಣ ನಿವಾಸಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ, ಎಸ್‌ಐಟಿಯ ನೋಟಿಸ್‌ ಅನ್ನು ನೀಡಿದ್ದಾರೆ. ಸ್ಥಳೀಯ ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ ಅಜಯ್ ಕುಮಾರ್ ಜತೆ ಮಹಿಳಾ ಸಿಬ್ಬಂದಿ, ಪೇದೆ ಹಾಜರಾಗಿದ್ದಾರೆ. ಈ ವೇಳೆ ರೇವಣ್ಣ ಪತ್ನಿ‌ ಭವಾನಿ ಇದ್ದರು. ಅವರಿಗೆ ನೋಟಿಸ್‌ ಅನ್ನು ನೀಡಲಾಗಿದೆ. ಆದರೆ, ಇದು ಭವಾನಿ ರೇವಣ್ಣ ಅವರಿಗೇ ನೀಡಿರುವ ನೋಟಿಸ್‌ ಎನ್ನಲಾಗುತ್ತಿದೆ. ಹೀಗಾಗಿ ಇಂದು ಅಥವಾ ನಾಳೆ ವಿಚಾರಣೆಗೆ ಹಾಜರಾಗಲು ಸೂಚನೆ ನೀಡಲಾಗಿದೆ ಎನ್ನಲಾಗಿದೆ.

ನಿರೀಕ್ಷಣಾ ಜಾಮೀನು ಅರ್ಜಿ ಹಿಂಪಡೆದ ರೇವಣ್ಣ; ವಾಪಸ್‌ ಪಡೆಯಲು ಕೋರ್ಟ್‌ ಹೇಳಿದ್ದೇಕೆ?

ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಪ್ರಮುಖ ಆರೋಪಿಯಾಗಿರುವ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರು ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್‌ ಸೂಚನೆ ಮೇರೆಗೆ ವಾಪಸ್‌ ಪಡೆದುಕೊಂಡಿದ್ದಾರೆ. ಅವರಿಗೆ ಸದ್ಯಕ್ಕೆ ಯಾವುದೇ ರೀತಿಯಾದಂತಹ ಬಂಧನ ಭೀತಿ ಇಲ್ಲ ಎಂದು ಹೇಳಲಾಗಿದೆ.

ತಮಗೆ ನಿರೀಕ್ಷಣಾ ಜಾಮೀನು ನೀಡಬೇಕು ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಎಚ್.ಡಿ. ರೇವಣ್ಣ ಅವರು ಗುರುವಾರ ಅರ್ಜಿ ಸಲ್ಲಿಸಿದ್ದರು. ಎಸ್‌ಐಟಿಗೆ ಆಕ್ಷೇಪಣೆ ಸಲ್ಲಿಸಲು ಸೂಚಿಸಿ ಶುಕ್ರವಾರಕ್ಕೆ ವಿಚಾರಣೆಯನ್ನು ಮುಂದೂಡಲಾಗಿತ್ತು. ಶುಕ್ರವಾರ ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡ ಕೋರ್ಟ್‌, ವಾದ – ಪ್ರತಿವಾದವನ್ನು ಆಲಿಸಿ, ಅರ್ಜಿಯನ್ನು ಹಿಂಪಡೆಯುವಂತೆ ರೇವಣ್ಣ ಪರ ವಕೀಲರಿಗೆ ಸೂಚಿಸಿತು. ಈ ಹಿನ್ನೆಲೆಯಲ್ಲಿ ರೇವಣ್ಣ ಪರ ವಕೀಲರು ಅರ್ಜಿಯನ್ನು ಹಿಂಪಡೆದಿದ್ದಾರೆ.

ನಿರೀಕ್ಷಣಾ ಜಾಮೀನು ಅರ್ಜಿ ಹಿಂಪಡೆದ ರೇವಣ್ಣ ಪರ ವಕೀಲ

ಜಾಮೀನು ನೀಡಬಹುದಾದ ಸೆಕ್ಷನ್‌ಗಳು ಇದ್ದಲ್ಲಿ ಮಾತ್ರ ನಿರೀಕ್ಷಣಾ ಜಾಮೀನು ನೀಡುವ ಅವಶ್ಯಕತೆ ಇದೆ. ಆದರೆ, ಇಲ್ಲಿ ಅಂಥದ್ದೇನನ್ನೂ ಹಾಕಲಾಗಿಲ್ಲ ಎಂದು ಹೇಳಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ರೇವಣ್ಣ ಪರ ವಕೀಲರು, ಮುಂದೆ ಸೆಕ್ಷನ್‌ 376 ಹಾಕಲಿದ್ದಾರೆ ಎಂದು ಹೇಳಿದರು. ಅದಕ್ಕೆ ಎಸ್‌ಐಟಿ ಪರ ವಕೀಲರು, ನಾವು ಇಲ್ಲಿಯವರೆಗೂ ಹಾಕಿಲ್ಲ ಎಂದು ಕೋರ್ಟ್‌ಗೆ ಮಾಹಿತಿ ನೀಡಿದರು. ಸೆಕ್ಷನ್‌ 376 ಮಾತ್ರ ಅಲ್ಲ, ಬೇರೆ ನಾನ್ ಬೇಲಬಲ್ ಹಾಕಿದ್ದಾರಾ ಎಂಬುದನ್ನೂ ತಿಳಿಸಬೇಕು ಎಂದು ಕೋರಿದರು. ಇದಕ್ಕೆ ಎಸ್‌ಐಟಿ ಪರ ವಕೀಲರಾದ ಜಗದೀಶ್‌, ನಾವು ಇಲ್ಲಿತನಕ ಯಾವುದೇ ನಾನ್ ಬೇಲಬಲ್ ಸೆಕ್ಷನ್ ಹಾಕಿಲ್ಲ ಎಂದು ಕೋರ್ಟ್‌ಗೆ ಮಾಹಿತಿ ನೀಡಿದರು.

ಹೀಗಾಗಿ ಬೇಲ್‌ ಕೊಡುವಂತಹ ಯಾವುದೇ ಸೆಕ್ಷನ್‌ಗಳನ್ನೂ ಈ ಪ್ರಕರಣದಲ್ಲಿ ಎಚ್.ಡಿ. ರೇವಣ್ಣ ಅವರ ಮೇಲೆ ಹಾಕಲಾಗಿಲ್ಲ. ಹೀಗಿದ್ದ ಮೇಲೆ ಅವರಿಗೆ ನಿರೀಕ್ಷಣಾ ಜಾಮೀನು ಏಕೆ ಬೇಕು? ಕೂಡಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜಿಯನ್ನು ಹಿಂಪಡೆಯಿರಿ ಎಂದು ರೇವಣ್ಣ ಪರ ವಕೀಲರಿಗೆ ಕೋರ್ಟ್‌ ಸೂಚನೆ ನೀಡಿದೆ. ಹೀಗಾಗಿ ರೇವಣ್ಣ ಪರ ವಕೀಲರು ಅರ್ಜಿಯನ್ನು ವಾಪಸ್‌ ಪಡೆದರು. ಸದ್ಯಕ್ಕೆ ರೇವಣ್ಣ ಅವರಿಗೆ ಬಂಧನದ ಭೀತಿ ಇಲ್ಲ ಎಂದು ಹೇಳಲಾಗುತ್ತಿದೆ.

ಪ್ರಜ್ವಲ್ ರೇವಣ್ಣ ಮೇಲೆ ಮತ್ತೊಂದು ಟೈಟ್‌ ಎಫ್‌ಐಆರ್‌, ಇದರಲ್ಲಿ ಬಂಧನ ಖಚಿತ!

ಪ್ರಜ್ವಲ್‌ ರೇವಣ್ಣ (Prajwal Revanna Case) ಅವರ ಲೈಂಗಿಕ ದೌರ್ಜನ್ಯ (Physical abuse) ಹಗರಣದಲ್ಲಿ ಮತ್ತೊಂದು ದೂರು ದಾಖಲಾಗಿದೆ. ಈ ದೂರಿನಲ್ಲಿ ಬಿಗಿಯಾದ ದಂಡ ಸಂಹಿತೆ ಸೆಕ್ಷನ್‌ಗಳನ್ನು (IPC) ದಾಖಲಿಸಲಾಗಿದ್ದು, ಇದರಡಿ ಪ್ರಜ್ವಲ್‌ ಅವರ ಬಂಧನ ಖಚಿತವಾಗಿದೆ. ಮೈಸೂರಿನಲ್ಲೂ (Mysore news) ಇನ್ನೊಂದು ಲೈಂಗಿಕ ಕಿರುಕುಳ ಹಾಗೂ ಅಪಹರಣ (kidnap) ಪ್ರಕರಣ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿದೆ. ಇಲ್ಲಿಗೆ ಒಟ್ಟು ಮೂರು ದೂರುಗಳಾಗಿವೆ.

ಪ್ರಜ್ವಲ್ ರೇವಣ್ಣ ಮೇಲೆ ದಾಖಲಾಗಿರುವ ಎರಡನೇ ಎಫ್ಐಆರ್ ಸಿಐಡಿ ಸೈಬರ್ ಠಾಣೆಯಲ್ಲಿ (CID cyber station) ದಾಖಲಾಗಿದೆ. ಎರಡನೇ ಎಫ್ಐಆರ್‌ನಲ್ಲಿ ದಾಖಲಿಸಿರುವ ಸೆಕ್ಷನ್‌ಗಳು ಹೆಚ್ಚು ಬಿಗಿಯಾಗಿದ್ದು, ತನಿಖೆಗೆ ಹಾಸನ ಸಂಸದರ ಬಂಧನವನ್ನು ಅನಿವಾರ್ಯವಾಗಿಸಿವೆ.

IPC 376(2)N, 506 ,354a1, 354b, 354c ಸೆಕ್ಷನ್‌ಗಳು ಹಾಗೂ ಐಟಿ ಕಾಯ್ದೆ ಅಡಿ ಎಫ್ಐಆರ್ ದಾಖಲಿಸಲಾಗಿವೆ. 376(2)n ಸೆಕ್ಷನ್‌ ಮಹಿಳೆ ಮೇಲೆ‌ ಬೆದರಿಸಿ ನಿರಂತರ ಅತ್ಯಾಚಾರ ನಡೆಸುವುದನ್ನು ದಾಖಲಿಸುತ್ತಿದ್ದು, ಇದು ಸಾಬೀತಾದರೆ ಕನಿಷ್ಠ ಹತ್ತು ವರ್ಷ ಜೈಲು ಅಥವಾ ಗರಿಷ್ಠ ಜೀವಾವಧಿ ಶಿಕ್ಷೆಯಾಗಲಿದೆ.

ಸೆಕ್ಷನ್‌ 506 ಅಪರಾಧಿಕ ಉದ್ದೇಶದಿಂದ ಬೆದರಿಸುವುದು, 354a1 ಲೈಂಗಿಕ ಬೇಡಿಕೆಗೆ ಒತ್ತಾಯಿಸುವುದು- ಇದಕ್ಕೆ ಗರಿಷ್ಠ ಮೂರು ವರ್ಷಗಳ ಶಿಕ್ಷೆ, 354b ಅಪರಾಧಿಕ ಉದ್ದೇಶಕ್ಕೆ ಮಹಿಳೆ ಮೇಲೆ ಹಲ್ಲೆ ಮಾಡುವುದು- ಗರಿಷ್ಠ ಮೂರು ವರ್ಷ ಶಿಕ್ಷೆ, 354c ಮಹಿಳೆಯ ಇಚ್ಛೆಗೆ ವಿರುದ್ಧವಾಗಿ ಆಕೆಯ ಖಾಸಗಿ ವಿಷಯವನ್ನು ರೆಕಾರ್ಡ್ ಮಾಡುವುದು ಮತ್ತು ನೋಡುವುದು- ಗರಿಷ್ಠ ಏಳು ವರ್ಷ ಶಿಕ್ಷೆ ಇವುಗಳಿವೆ.

ಎರಡನೇ ಎಫ್ಐಆರ್‌ನಲ್ಲಿ ಪ್ರಜ್ವಲ್ ರೇವಣ್ಣ ಮಾತ್ರ ಆರೋಪಿಯಾಗಿದ್ದಾರೆ. ಮೊದಲ ದೂರಿನಲ್ಲಿ ಎಚ್‌ಡಿ ರೇವಣ್ಣ ಕೂಡ ಆರೋಪಿಯಾಗಿದ್ದರು. ಎಚ್‌ಡಿ ರೇವಣ್ಣ ಜಾಮೀನಿಗಾಗಿ ಪ್ರಯತ್ನಿಸುತ್ತಿದ್ದಾರೆ. ಪ್ರಜ್ವಲ್ ರೇವಣ್ಣ ಭಾರತಕ್ಕೆ ಬಂದ ಕೂಡಲೇ ಬಂಧನ ಮಾಡಲು ಎಸ್‌ಐಟಿ ಸಜ್ಜಾಗಿದೆ. ಈಗಾಗಲೇ ಆರೋಪಿಗೆ ಲುಕ್‌ಔಟ್ ನೊಟೀಸ್ ಹೊರಡಿಸಲಾಗಿದೆ. ಹೀಗಾಗಿ ಪ್ರಜ್ವಲ್ ರೇವಣ್ಣ ಬಂಧನ ಬಹುತೇಕ ಖಚಿತವಾಗಿದೆ.

ಮೈಸೂರಿನಲ್ಲೂ ದೂರು

ಪ್ರಜ್ವಲ್‌ ರೇವಣ್ಣ (Prajwal Revanna Case) ಮೇಲೆ ಮೈಸೂರಿನಲ್ಲೂ ಒಂದು ಲೈಂಗಿಕ ಕಿರುಕುಳ ಹಾಗೂ ಅಪಹರಣ (kidnap) ಪ್ರಕರಣ ದಾಖಲಾಗಿದೆ. ತಾಯಿಯನ್ನು ಅಪಹರಣ ಮಾಡಲಾಗಿದೆ ಎಂದು ಆರೋಪಿಸಿ ಪುತ್ರ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ. ಕೆ.ಆರ್.ನಗರ ತಾಲೂಕಿನಲ್ಲಿ ಘಟನೆ ನಡೆದಿದೆ. “ಪ್ರಜ್ವಲ್ ರೇವಣ್ಣ ಅವರಿಂದ ನನ್ನ ತಾಯಿಯೂ ಲೈಂಗಿಕ ದೌರ್ಜನ್ಯಕ್ಕೆ ಒಳಪಟ್ಟಿದ್ದರು.‌ ಈ ಸಂಬಂಧ ಫೋಟೋಗಳು ಬಹಿರಂಗ ಆಗಿದ್ದವು. ಬಳಿಕ ನನ್ನ ತಾಯಿ ನಾಪತ್ತೆ ಆಗಿದ್ದಾರೆ. ಶಾಸಕ ಎಚ್.ಡಿ.ರೇವಣ್ಣ, ಪತ್ನಿ ಭವಾನಿ ರೇವಣ್ಣ (Bhavani Revanna) ಅಪಹರಣ ಮಾಡಿಸಿದ್ದಾರೆ” ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌, ರೇವಣ್ಣಗೆ ಮತ್ತೊಂದು ನೋಟಿಸ್‌; ವಿಚಾರಣೆಗೆ ಬಾರದಿದ್ದರೆ ಅರೆಸ್ಟ್‌: ಡಾ. ಜಿ. ಪರಮೇಶ್ವರ್

ದೂರಿನ ಬಗ್ಗೆ ಪೊಲೀಸರು ಪ್ರಾಥಮಿಕ ಮಾಹಿತಿ ಕಲೆಹಾಕುತ್ತಿದ್ದಾರೆ. ಹಾಸನದಲ್ಲಿ ಪ್ರಜ್ವಲ್‌ ರೇವಣ್ಣ ಹಾಗೂ ಎಚ್‌.ಡಿ ರೇವಣ್ಣ (HD Revanna) ವಿರುದ್ಧ ದಾಖಲಾಗಿರುವ ದೂರಿನ ತನಿಖೆಗೆ ಎಸ್‌ಐಟಿ ರಚನೆ ಮಾಡಿರುವಂತೆ ಈ ದೂರು ಕೂಡ ಹೊರಬಂದಿದೆ.

Continue Reading

ಕ್ರೈಂ

Murder case : ಹುಬ್ಬಳ್ಳಿ, ಬೆಂಗಳೂರಲ್ಲಿ ಅಪರಿಚಿತ ಶವ ಪತ್ತೆ; ಹಂತಕರ ಬೆನ್ನಿಗೆ ಬಿದ್ದ ಖಾಕಿ ಪಡೆ

Murder case : ಪ್ರತ್ಯೇಕ ಕಡೆಗಳಲ್ಲಿ ಅನುಮಾನಾಸ್ಪದ ರೀತಿಯಲ್ಲಿ ವ್ಯಕ್ತಿಗಳಿಬ್ಬರ ಶವ (Dead body Found) ಪತ್ತೆಯಾಗಿದೆ. ಮೇಲ್ನೋಟಕ್ಕೆ ಕೊಲೆ ಮಾಡಿ ಬಳಿಕ ಶವ ಬಿಸಾಡಿ ಹೋಗಿರುವುದು ತಿಳಿದು ಬಂದಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು ತನಿಖೆಯನ್ನು ಮುಂದುವರಿಸಿದ್ದಾರೆ

VISTARANEWS.COM


on

By

Murder case
Koo

ಹುಬ್ಬಳ್ಳಿ/ಬೆಂಗಳೂರು: ಹುಬ್ಬಳ್ಳಿಯ ಹೊರವಲಯದ ಕಾರವಾರ ರಸ್ತೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ವ್ಯಕ್ತಿಯೊಬ್ಬರ ಶವ‌ (Dead Body Found) ಪತ್ತೆಯಾಗಿದೆ. ಕೊಲೆ ಮಾಡಿ (Murder Case) ನಂತರ ಸುಟ್ಟು ಹಾಕಿರುವ ಶಂಕೆ ವ್ಯಕ್ತವಾಗಿದೆ. ಸುಮಾರು 40 ವಯಸ್ಸಿನ ವ್ಯಕ್ತಿಯ ಶವವು ಸುಟ್ಟಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಮೃತನ ಗುರುತು ಇನ್ನೂ ಪತ್ತೆಯಾಗಿಲ್ಲ. ಸದ್ಯ ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಪಾದ ಕಟ್‌ ಮಾಡಿ, ರೈಲ್ವೆ ಬ್ರಿಡ್ಜ್‌ಗೆ ಶವ ಬಿಸಾಡಿದ ಹಂತಕರು

ಬೆಂಗಳೂರಿನ ಶ್ರೀರಾಂಪುರದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಕೊಲೆ ಮಾಡಿ ಶ್ರೀರಾಂಪುರ ರೈಲ್ವೆ ಬ್ರಿಡ್ಜ್ ಬಳಿ ಶವ ಎಸೆದು ಹೋಗಿದ್ದಾರೆ. ಕ್ರಾಸ್ ಪೆಂಡೆಂಟ್ ಧರಿಸಿರುವ ಸುಮಾರು 35 ವರ್ಷದ ವ್ಯಕ್ತಿ ಪಾದ ಕಟ್ ಮಾಡಿ, ಕುತ್ತಿಗೆಗೆ ಬಲವಾಗಿ ಚುಚ್ಚಿ ಕೊಲೆ ಮಾಡಲಾಗಿದೆ. ಶ್ರೀರಾಂಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಶ್ರೀರಾಂಪುರ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆಯನ್ನು ಕೈಗೊಂಡಿದ್ದಾರೆ.

ಇದನ್ನೂ ಓದಿ: Karnataka Weather Forecast : ರಾಯಚೂರಲ್ಲಿ ಬಿಸಿಲಾಜ್ಞೆ; ಮಧ್ಯಾಹ್ನ 12-4ರ ವರೆಗೆ ಹೊರಬರದಂತೆ ಡಿಸಿ ಕಟ್ಟಾಜ್ಞೆ!

ಎಣ್ಣೆ ಪಾರ್ಟಿ ನಂತರ ರಿಕ್ಷಾ ಚಾಲಕನ ಇರಿದು ಕೊಂದ ರೌಡಿ ಶೀಟರ್‌

ಬೆಂಗಳೂರು: ಕುಡಿದ ಅಮಲಿನಲ್ಲಿ ಹುಟ್ಟಿಕೊಂಡ ಗಲಾಟೆ ಕೊಲೆಯಲ್ಲಿ (Murder Case) ಅಂತ್ಯವಾಗಿದ್ದು, ರೌಡಿ ಶೀಟರ್‌ (Rowdy Sheeter) ಒಬ್ಬಾತ ಸ್ನೇಹಿತ ರಿಕ್ಷಾ ಚಾಲಕನನ್ನು ಇರಿದು (Stabbing) ಕೊಂದು ಹಾಕಿದ್ದಾನೆ. ಬೆಂಗಳೂರಿನ ನಾಗಶೆಟ್ಟಿಹಳ್ಳಿಯಲ್ಲಿ ನಿನ್ನೆ ತಡರಾತ್ರಿ (Crime news) ಈ ಕೃತ್ಯ ನಡೆದಿದೆ.

ಮೂರ್ತಿ (45) ವರ್ಷ ಕೊಲೆಯಾದ ಆಟೋ ಡ್ರೈವರ್. ಶರಣಪ್ಪ ಕೊಲೆ ಮಾಡಿದ ರೌಡಿ. ಮೂರ್ತಿಗೆ ರೌಡಿಶೀಟರ್ ಶರಣಪ್ಪ ಕೆಲ ವರ್ಷಗಳಿಂದ ಪರಿಚಯ. ನಿನ್ನೆ ಇಬ್ಬರೂ ಸ್ನೇಹಿತರು ನಾಗಶೆಟ್ಟಹಳ್ಳಿಯಲ್ಲಿ ಎಣ್ಣೆ ಪಾರ್ಟಿ ಮಾಡಿದ್ದಾರೆ. ನಂತರ ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಜಗಳ ಶುರುವಾಗಿದೆ. ಜಗಳ ತಾರಕಕ್ಕೇರಿದ್ದು ರೌಡಿಶೀಟರ್ ಶರಣಪ್ಪ ಡ್ಯಾಗರ್‌ನಿಂದ ಹಲವು ಬಾರಿ ಮೂರ್ತಿಗೆ ಇರಿದಿದ್ದಾನೆ. ಮೂರ್ತಿ ಸ್ಥಳದಲ್ಲೇ ಮೃತಪಟ್ಟಿದ್ದು. ಸದ್ಯ ಆರೋಪಿಗಾಗಿ ಸಂಜಯ್ ನಗರ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಇನ್ನೊಂದು ವಂಟಮೂರಿ ಮಾದರಿ ಕೇಸ್‌, ಕಂಬಕ್ಕೆ ಕಟ್ಟಿ ಮಹಿಳೆಗೆ ಥಳಿತ

ಹಾವೇರಿ: ಬೆಳಗಾವಿ ಜಿಲ್ಲೆಯ ವಂಟಮೂರಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಥಳಿಸಿ ಮೆರವಣಿಗೆ ಮಾಡಿದ ಅಮಾನುಷ ಪ್ರಕರಣದ ನೆನಪು ಮಾಸುವ ಮುನ್ನವೇ ಮತ್ತೊಂದು ಅಂಥದೇ ಪ್ರಕರಣ ನಡೆದಿದೆ. ಇದರಲ್ಲಿ ಮಹಿಳೆಯನ್ನು ಆಕೆಯ ಯಾವುದೇ ತಪ್ಪಿಲ್ಲದೆ ಕಂಬಕ್ಕೆ ಕಟ್ಟಿ ಥಳಿಸಲಾಗಿದೆ.

ಹಾವೇರಿ ಜಿಲ್ಲೆಯ ಹಾವೇರಿ ಜಿಲ್ಲೆ ರಾಣೆಬೆನ್ನೂರ ತಾಲೂಕಿನ ಅರಮಲ್ಲಾಪುರ ಗ್ರಾಮದಲ್ಲಿ ಈ ಬರ್ಬರ ಘಟನೆ ನಡೆದಿದೆ. ಹನಮವ್ವ ದುರಗಪ್ಪ ಮೆಡ್ಲೆರಿ (50) ಹಲ್ಲೆಗೊಳಗಾದ ಮಹಿಳೆ. ಈಕೆಯ ಮಗ ಅದೇ ಗ್ರಾಮದ ಯುವತಿಯೊಬ್ಬಳ ಜೊತೆಗೆ ಪರಾರಿಯಾದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಕೆಲ ಗ್ರಾಮಸ್ಥರು ಮಹಿಳೆಯ ಮೇಲೆ ಹಲ್ಲೆ ನಡೆಸಿ ಕಂಬಕ್ಕೆ ಕಟ್ಟಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಯುವಕನ ಮಗ ಯುವತಿಯೊಬ್ಬಳನ್ನು ಅಪಹರಿಸಿದ್ದಾನೆ ಎಂಬ ಆರೋಪದ ಹಿನ್ನೆಲೆಯಲ್ಲಿ ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಯುವತಿ ಕಡೆಯವರು ಥಳಿಸಿದ್ದಾರೆ. ಅದೇ ಗ್ರಾಮದ ಚಂದ್ರಪ್ಪ, ಗಂಗಪ್ಪ, ಗುತ್ತೆವ್ವ ಹಲ್ಲೆ ಮಾಡಿದ ಆರೋಪಿಗಳು. ಈಕೆಯ ಮಗ ಮಂಜುನಾಥ ಯುವತಿಯನ್ನು ಕರೆದುಕೊಂಡು ಹೋಗಿರುವ ಆರೋಪವಿದೆ. ಆತ ಯುವತಿಯನ್ನು ಬಲವಂತವಾಗಿ ಅಪಹರಿಸಿದ್ದಲ್ಲದೆ ಆಭರಣಗಳನ್ನೂ ದೋಚಿದ್ದಾನೆ ಎಂದು ಇವರು ದೂರಿದ್ದಾರೆ.

ಆರೋಪಿಗಳು ಮಹಿಳೆಯ ಮನೆಗೆ ನುಗ್ಗಿ “ನಿನ್ನ ಮಗ ಎಲ್ಲಿದ್ದಾನೆ ಹೇಳು” ಎಂದು ಪೀಡಿಸಿ ವಿದ್ಯುತ್ ಕಂಬಕ್ಕೆ ಕಟ್ಟಿ ಮನಸೋ ಇಚ್ಛೆ ಹಲ್ಲೆ ನಡೆಸಿದರು. ಗಾಯಗೊಂಡ ಹನಮವ್ವಳಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ರಾಣೇಬೆನ್ನೂರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Prajwal Revanna Case: ನಿರೀಕ್ಷಣಾ ಜಾಮೀನು ಅರ್ಜಿ ಹಿಂಪಡೆದ ರೇವಣ್ಣ; ವಾಪಸ್‌ ಪಡೆಯಲು ಕೋರ್ಟ್‌ ಹೇಳಿದ್ದೇಕೆ?

Prajwal Revanna Case: ತಮಗೆ ನಿರೀಕ್ಷಣಾ ಜಾಮೀನು ನೀಡಬೇಕು ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಎಚ್.ಡಿ. ರೇವಣ್ಣ ಅವರು ಗುರುವಾರ ಅರ್ಜಿ ಸಲ್ಲಿಸಿದ್ದರು. ಎಸ್‌ಐಟಿಗೆ ಆಕ್ಷೇಪಣೆ ಸಲ್ಲಿಸಲು ಸೂಚಿಸಿ ಶುಕ್ರವಾರಕ್ಕೆ ವಿಚಾರಣೆಯನ್ನು ಮುಂದೂಡಲಾಗಿತ್ತು. ಶುಕ್ರವಾರ ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡ ಕೋರ್ಟ್‌, ವಾದ – ಪ್ರತಿವಾದವನ್ನು ಆಲಿಸಿ, ಅರ್ಜಿಯನ್ನು ಹಿಂಪಡೆಯುವಂತೆ ರೇವಣ್ಣ ಪರ ವಕೀಲರಿಗೆ ಸೂಚಿಸಿತು. ಈ ಹಿನ್ನೆಲೆಯಲ್ಲಿ ರೇವಣ್ಣ ಪರ ವಕೀಲರು ಅರ್ಜಿಯನ್ನು ಹಿಂಪಡೆದಿದ್ದಾರೆ.

VISTARANEWS.COM


on

Prajwal Revanna Case Revanna withdraws anticipatory bail plea
Koo

ಬೆಂಗಳೂರು: ಹಾಸನ ಸಂಸದ (Hassan MP), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna Case) ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಪ್ರಮುಖ ಆರೋಪಿಯಾಗಿರುವ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರು ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್‌ ಸೂಚನೆ ಮೇರೆಗೆ ವಾಪಸ್‌ ಪಡೆದುಕೊಂಡಿದ್ದಾರೆ. ಅವರಿಗೆ ಸದ್ಯಕ್ಕೆ ಯಾವುದೇ ರೀತಿಯಾದಂತಹ ಬಂಧನ ಭೀತಿ ಇಲ್ಲ ಎಂದು ಹೇಳಲಾಗಿದೆ.

ತಮಗೆ ನಿರೀಕ್ಷಣಾ ಜಾಮೀನು ನೀಡಬೇಕು ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಎಚ್.ಡಿ. ರೇವಣ್ಣ ಅವರು ಗುರುವಾರ ಅರ್ಜಿ ಸಲ್ಲಿಸಿದ್ದರು. ಎಸ್‌ಐಟಿಗೆ ಆಕ್ಷೇಪಣೆ ಸಲ್ಲಿಸಲು ಸೂಚಿಸಿ ಶುಕ್ರವಾರಕ್ಕೆ ವಿಚಾರಣೆಯನ್ನು ಮುಂದೂಡಲಾಗಿತ್ತು. ಶುಕ್ರವಾರ ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡ ಕೋರ್ಟ್‌, ವಾದ – ಪ್ರತಿವಾದವನ್ನು ಆಲಿಸಿ, ಅರ್ಜಿಯನ್ನು ಹಿಂಪಡೆಯುವಂತೆ ರೇವಣ್ಣ ಪರ ವಕೀಲರಿಗೆ ಸೂಚಿಸಿತು. ಈ ಹಿನ್ನೆಲೆಯಲ್ಲಿ ರೇವಣ್ಣ ಪರ ವಕೀಲರು ಅರ್ಜಿಯನ್ನು ಹಿಂಪಡೆದಿದ್ದಾರೆ.

ನಿರೀಕ್ಷಣಾ ಜಾಮೀನು ಅರ್ಜಿ ಹಿಂಪಡೆದ ರೇವಣ್ಣ ಪರ ವಕೀಲ

ಜಾಮೀನು ನೀಡಬಹುದಾದ ಸೆಕ್ಷನ್‌ಗಳು ಇದ್ದಲ್ಲಿ ಮಾತ್ರ ನಿರೀಕ್ಷಣಾ ಜಾಮೀನು ನೀಡುವ ಅವಶ್ಯಕತೆ ಇದೆ. ಆದರೆ, ಇಲ್ಲಿ ಅಂಥದ್ದೇನನ್ನೂ ಹಾಕಲಾಗಿಲ್ಲ ಎಂದು ಹೇಳಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ರೇವಣ್ಣ ಪರ ವಕೀಲರು, ಮುಂದೆ ಸೆಕ್ಷನ್‌ 376 ಹಾಕಲಿದ್ದಾರೆ ಎಂದು ಹೇಳಿದರು. ಅದಕ್ಕೆ ಎಸ್‌ಐಟಿ ಪರ ವಕೀಲರು, ನಾವು ಇಲ್ಲಿಯವರೆಗೂ ಹಾಕಿಲ್ಲ ಎಂದು ಕೋರ್ಟ್‌ಗೆ ಮಾಹಿತಿ ನೀಡಿದರು. ಸೆಕ್ಷನ್‌ 376 ಮಾತ್ರ ಅಲ್ಲ, ಬೇರೆ ನಾನ್ ಬೇಲಬಲ್ ಹಾಕಿದ್ದಾರಾ ಎಂಬುದನ್ನೂ ತಿಳಿಸಬೇಕು ಎಂದು ಕೋರಿದರು. ಇದಕ್ಕೆ ಎಸ್‌ಐಟಿ ಪರ ವಕೀಲರಾದ ಜಗದೀಶ್‌, ನಾವು ಇಲ್ಲಿತನಕ ಯಾವುದೇ ನಾನ್ ಬೇಲಬಲ್ ಸೆಕ್ಷನ್ ಹಾಕಿಲ್ಲ ಎಂದು ಕೋರ್ಟ್‌ಗೆ ಮಾಹಿತಿ ನೀಡಿದರು.

ಹೀಗಾಗಿ ಬೇಲ್‌ ಕೊಡುವಂತಹ ಯಾವುದೇ ಸೆಕ್ಷನ್‌ಗಳನ್ನೂ ಈ ಪ್ರಕರಣದಲ್ಲಿ ಎಚ್.ಡಿ. ರೇವಣ್ಣ ಅವರ ಮೇಲೆ ಹಾಕಲಾಗಿಲ್ಲ. ಹೀಗಿದ್ದ ಮೇಲೆ ಅವರಿಗೆ ನಿರೀಕ್ಷಣಾ ಜಾಮೀನು ಏಕೆ ಬೇಕು? ಕೂಡಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜಿಯನ್ನು ಹಿಂಪಡೆಯಿರಿ ಎಂದು ರೇವಣ್ಣ ಪರ ವಕೀಲರಿಗೆ ಕೋರ್ಟ್‌ ಸೂಚನೆ ನೀಡಿದೆ. ಹೀಗಾಗಿ ರೇವಣ್ಣ ಪರ ವಕೀಲರು ಅರ್ಜಿಯನ್ನು ವಾಪಸ್‌ ಪಡೆದರು. ಸದ್ಯಕ್ಕೆ ರೇವಣ್ಣ ಅವರಿಗೆ ಬಂಧನದ ಭೀತಿ ಇಲ್ಲ ಎಂದು ಹೇಳಲಾಗುತ್ತಿದೆ.

ಪ್ರಜ್ವಲ್ ರೇವಣ್ಣ ಮೇಲೆ ಮತ್ತೊಂದು ಟೈಟ್‌ ಎಫ್‌ಐಆರ್‌, ಇದರಲ್ಲಿ ಬಂಧನ ಖಚಿತ!

ಪ್ರಜ್ವಲ್‌ ರೇವಣ್ಣ (Prajwal Revanna Case) ಅವರ ಲೈಂಗಿಕ ದೌರ್ಜನ್ಯ (Physical abuse) ಹಗರಣದಲ್ಲಿ ಮತ್ತೊಂದು ದೂರು ದಾಖಲಾಗಿದೆ. ಈ ದೂರಿನಲ್ಲಿ ಬಿಗಿಯಾದ ದಂಡ ಸಂಹಿತೆ ಸೆಕ್ಷನ್‌ಗಳನ್ನು (IPC) ದಾಖಲಿಸಲಾಗಿದ್ದು, ಇದರಡಿ ಪ್ರಜ್ವಲ್‌ ಅವರ ಬಂಧನ ಖಚಿತವಾಗಿದೆ. ಮೈಸೂರಿನಲ್ಲೂ (Mysore news) ಇನ್ನೊಂದು ಲೈಂಗಿಕ ಕಿರುಕುಳ ಹಾಗೂ ಅಪಹರಣ (kidnap) ಪ್ರಕರಣ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿದೆ. ಇಲ್ಲಿಗೆ ಒಟ್ಟು ಮೂರು ದೂರುಗಳಾಗಿವೆ.

ಪ್ರಜ್ವಲ್ ರೇವಣ್ಣ ಮೇಲೆ ದಾಖಲಾಗಿರುವ ಎರಡನೇ ಎಫ್ಐಆರ್ ಸಿಐಡಿ ಸೈಬರ್ ಠಾಣೆಯಲ್ಲಿ (CID cyber station) ದಾಖಲಾಗಿದೆ. ಎರಡನೇ ಎಫ್ಐಆರ್‌ನಲ್ಲಿ ದಾಖಲಿಸಿರುವ ಸೆಕ್ಷನ್‌ಗಳು ಹೆಚ್ಚು ಬಿಗಿಯಾಗಿದ್ದು, ತನಿಖೆಗೆ ಹಾಸನ ಸಂಸದರ ಬಂಧನವನ್ನು ಅನಿವಾರ್ಯವಾಗಿಸಿವೆ.

IPC 376(2)N, 506 ,354a1, 354b, 354c ಸೆಕ್ಷನ್‌ಗಳು ಹಾಗೂ ಐಟಿ ಕಾಯ್ದೆ ಅಡಿ ಎಫ್ಐಆರ್ ದಾಖಲಿಸಲಾಗಿವೆ. 376(2)n ಸೆಕ್ಷನ್‌ ಮಹಿಳೆ ಮೇಲೆ‌ ಬೆದರಿಸಿ ನಿರಂತರ ಅತ್ಯಾಚಾರ ನಡೆಸುವುದನ್ನು ದಾಖಲಿಸುತ್ತಿದ್ದು, ಇದು ಸಾಬೀತಾದರೆ ಕನಿಷ್ಠ ಹತ್ತು ವರ್ಷ ಜೈಲು ಅಥವಾ ಗರಿಷ್ಠ ಜೀವಾವಧಿ ಶಿಕ್ಷೆಯಾಗಲಿದೆ.

ಸೆಕ್ಷನ್‌ 506 ಅಪರಾಧಿಕ ಉದ್ದೇಶದಿಂದ ಬೆದರಿಸುವುದು, 354a1 ಲೈಂಗಿಕ ಬೇಡಿಕೆಗೆ ಒತ್ತಾಯಿಸುವುದು- ಇದಕ್ಕೆ ಗರಿಷ್ಠ ಮೂರು ವರ್ಷಗಳ ಶಿಕ್ಷೆ, 354b ಅಪರಾಧಿಕ ಉದ್ದೇಶಕ್ಕೆ ಮಹಿಳೆ ಮೇಲೆ ಹಲ್ಲೆ ಮಾಡುವುದು- ಗರಿಷ್ಠ ಮೂರು ವರ್ಷ ಶಿಕ್ಷೆ, 354c ಮಹಿಳೆಯ ಇಚ್ಛೆಗೆ ವಿರುದ್ಧವಾಗಿ ಆಕೆಯ ಖಾಸಗಿ ವಿಷಯವನ್ನು ರೆಕಾರ್ಡ್ ಮಾಡುವುದು ಮತ್ತು ನೋಡುವುದು- ಗರಿಷ್ಠ ಏಳು ವರ್ಷ ಶಿಕ್ಷೆ ಇವುಗಳಿವೆ.

ಎರಡನೇ ಎಫ್ಐಆರ್‌ನಲ್ಲಿ ಪ್ರಜ್ವಲ್ ರೇವಣ್ಣ ಮಾತ್ರ ಆರೋಪಿಯಾಗಿದ್ದಾರೆ. ಮೊದಲ ದೂರಿನಲ್ಲಿ ಎಚ್‌ಡಿ ರೇವಣ್ಣ ಕೂಡ ಆರೋಪಿಯಾಗಿದ್ದರು. ಎಚ್‌ಡಿ ರೇವಣ್ಣ ಜಾಮೀನಿಗಾಗಿ ಪ್ರಯತ್ನಿಸುತ್ತಿದ್ದಾರೆ. ಪ್ರಜ್ವಲ್ ರೇವಣ್ಣ ಭಾರತಕ್ಕೆ ಬಂದ ಕೂಡಲೇ ಬಂಧನ ಮಾಡಲು ಎಸ್‌ಐಟಿ ಸಜ್ಜಾಗಿದೆ. ಈಗಾಗಲೇ ಆರೋಪಿಗೆ ಲುಕ್‌ಔಟ್ ನೊಟೀಸ್ ಹೊರಡಿಸಲಾಗಿದೆ. ಹೀಗಾಗಿ ಪ್ರಜ್ವಲ್ ರೇವಣ್ಣ ಬಂಧನ ಬಹುತೇಕ ಖಚಿತವಾಗಿದೆ.

ಮೈಸೂರಿನಲ್ಲೂ ದೂರು

ಪ್ರಜ್ವಲ್‌ ರೇವಣ್ಣ (Prajwal Revanna Case) ಮೇಲೆ ಮೈಸೂರಿನಲ್ಲೂ ಒಂದು ಲೈಂಗಿಕ ಕಿರುಕುಳ ಹಾಗೂ ಅಪಹರಣ (kidnap) ಪ್ರಕರಣ ದಾಖಲಾಗಿದೆ. ತಾಯಿಯನ್ನು ಅಪಹರಣ ಮಾಡಲಾಗಿದೆ ಎಂದು ಆರೋಪಿಸಿ ಪುತ್ರ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ. ಕೆ.ಆರ್.ನಗರ ತಾಲೂಕಿನಲ್ಲಿ ಘಟನೆ ನಡೆದಿದೆ. “ಪ್ರಜ್ವಲ್ ರೇವಣ್ಣ ಅವರಿಂದ ನನ್ನ ತಾಯಿಯೂ ಲೈಂಗಿಕ ದೌರ್ಜನ್ಯಕ್ಕೆ ಒಳಪಟ್ಟಿದ್ದರು.‌ ಈ ಸಂಬಂಧ ಫೋಟೋಗಳು ಬಹಿರಂಗ ಆಗಿದ್ದವು. ಬಳಿಕ ನನ್ನ ತಾಯಿ ನಾಪತ್ತೆ ಆಗಿದ್ದಾರೆ. ಶಾಸಕ ಎಚ್.ಡಿ.ರೇವಣ್ಣ, ಪತ್ನಿ ಭವಾನಿ ರೇವಣ್ಣ (Bhavani Revanna) ಅಪಹರಣ ಮಾಡಿಸಿದ್ದಾರೆ” ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌, ರೇವಣ್ಣಗೆ ಮತ್ತೊಂದು ನೋಟಿಸ್‌; ವಿಚಾರಣೆಗೆ ಬಾರದಿದ್ದರೆ ಅರೆಸ್ಟ್‌: ಡಾ. ಜಿ. ಪರಮೇಶ್ವರ್

ದೂರಿನ ಬಗ್ಗೆ ಪೊಲೀಸರು ಪ್ರಾಥಮಿಕ ಮಾಹಿತಿ ಕಲೆಹಾಕುತ್ತಿದ್ದಾರೆ. ಹಾಸನದಲ್ಲಿ ಪ್ರಜ್ವಲ್‌ ರೇವಣ್ಣ ಹಾಗೂ ಎಚ್‌.ಡಿ ರೇವಣ್ಣ (HD Revanna) ವಿರುದ್ಧ ದಾಖಲಾಗಿರುವ ದೂರಿನ ತನಿಖೆಗೆ ಎಸ್‌ಐಟಿ ರಚನೆ ಮಾಡಿರುವಂತೆ ಈ ದೂರು ಕೂಡ ಹೊರಬಂದಿದೆ.

Continue Reading

ತಂತ್ರಜ್ಞಾನ

Bomber Drone: ಭಾರತದ ಮೊದಲ ಬಾಂಬರ್ ಡ್ರೋನ್ ಅನಾವರಣ; ಇದರ ವಿಶೇಷತೆ ಹೀಗಿದೆ ನೋಡಿ

Bomber Drone: ಭಾರತದ ಮೊದಲ ಮಿಲಿಟರಿ ದರ್ಜೆಯ (Indian military) ಬಾಂಬರ್ ಡ್ರೋನ್ ಇದಾಗಿದೆ. ಡ್ರೋನ್‌ಗಿಂತ ಗಾತ್ರದಲ್ಲಿ ಸ್ವಲ್ಪ ದೊಡ್ಡದಾಗಿರುವ, ಹೆಲಿಕಾಪ್ಟರ್‌ಗಿಂತ ಚಿಕ್ಕದಾಗಿರುವ ಈ ವಾಹಕ, ಪೈಲಟ್‌ರಹಿತವಾಗಿ ಕಾರ್ಯಾಚರಿಸಿ ಬಾಂಬ್‌ಗಳನ್ನು ಹೊತ್ತೊಯ್ದು ವೈರಿನೆಲೆಗಳ ಮೇಲೆ ಉದುರಿಸಬಲ್ಲುದು ಎಂದು ಫ್ಲೈಯಿಂಗ್ ವೆಡ್ಜ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಸಂಸ್ಥಾಪಕ, ಸಿಇಒ ಸುಹಾಸ್ ತೇಜ ಸ್ಕಂದ ವಿವರಿಸಿದ್ದಾರೆ.

VISTARANEWS.COM


on

bomber drone
Koo

ಬೆಂಗಳೂರು: ಭಾರತದ ಮೊತ್ತ ಮೊದಲ ಸ್ವದೇಶಿ ತಂತ್ರಜ್ಞಾನದ ಬಾಂಬರ್‌ ಡ್ರೋನ್‌ (Indigenous Bomber Drone) ಬೆಂಗಳೂರಿನಲ್ಲಿ ಅನಾವರಣಗೊಂಡಿದೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ (Electronic City) ಅನಾವರಣಗೊಂಡಿರುವ ಈ ಬಾಂಬರ್‌ ಡ್ರೋನ್‌ ಅನ್ನು ʼಫ್ಲೈಯಿಂಗ್ ವೆಡ್ಜ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಟೆಕ್ನಾಲಜೀಸ್ʼ ಸಂಸ್ಥೆ ನಿರ್ಮಾಣ ಮಾಡಿದೆ. ಇದಕ್ಕೆ FWD-200B UAV ಎಂದು ಹೆಸರಿಡಲಾಗಿದೆ.

ಭಾರತದ ಮೊದಲ ಮಿಲಿಟರಿ ದರ್ಜೆಯ (Indian military) ಬಾಂಬರ್ ಡ್ರೋನ್ ಇದಾಗಿದೆ. ಡ್ರೋನ್‌ಗಿಂತ ಗಾತ್ರದಲ್ಲಿ ಸ್ವಲ್ಪ ದೊಡ್ಡದಾಗಿರುವ, ಹೆಲಿಕಾಪ್ಟರ್‌ಗಿಂತ ಚಿಕ್ಕದಾಗಿರುವ ಈ ವಾಹಕ, ಪೈಲಟ್‌ರಹಿತವಾಗಿ ಕಾರ್ಯಾಚರಿಸಿ ಬಾಂಬ್‌ಗಳನ್ನು ಹೊತ್ತೊಯ್ದು ವೈರಿನೆಲೆಗಳ ಮೇಲೆ ಉದುರಿಸಬಲ್ಲುದು ಎಂದು ಫ್ಲೈಯಿಂಗ್ ವೆಡ್ಜ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಸಂಸ್ಥಾಪಕ, ಸಿಇಒ ಸುಹಾಸ್ ತೇಜ ಸ್ಕಂದ ವಿವರಿಸಿದ್ದಾರೆ.

FWD-200B UAV ಎಂದು ತಾಮತ್ರಿಕವಾಗಿ ಕರೆಯಲಾಗುವ ಈ ಡ್ರೋನ್ ವಿಮಾನವನ್ನು ಇಂದು ಎಲೆಕ್ಟ್ರಾನಿಕ ಸಿಟಿಯಲ್ಲಿ ಫ್ಲೈಯಿಂಗ್ ವೆಡ್ಜ್ ಡಿಫೆನ್ಸ್ ಸಂಸ್ಥೆ ಅನಾವರಣ ಮಾಡಿದೆ. ರಕ್ಷಣಾ ಕ್ಷೇತ್ರದಲ್ಲಿ ವಿದೇಶಗಳ ಮೇಲಿನ ಅವಲಂಬನೆಗೆ ಬ್ರೇಕ್ ಹಾಕಲು ಸ್ವದೇಶಿ ಡ್ರೋನ್ ವಿಮಾನ‌ ತಯಾರಿಸಲಾಗಿದೆ. ಇದರೊಂದಿಗೆ ಸುಧಾರಿತ ಮಾನವರಹಿತ ಯುದ್ಧ ಡ್ರೋನ್ ಹೊಂದಿದ ರಾಷ್ಟ್ರಗಳ ಪಟ್ಟಿಗೆ ಭಾರತ ಸೇರಲಿದೆ. ಇದರ ಆರಂಬಿಕ ಟೆಸ್ಟ್‌ಗಳು ಆಗಿದ್ದು, ಅಡ್ವಾನ್ಸ್‌ಡ್‌ ಪರೀಕ್ಷೆಗಳು ಇನ್ನೆರಡು ತಿಂಗಳಲ್ಲಿ ನೆರವೇರಲಿದೆ. ಪ್ರಧಾನಿ ನರೇಂದ್ರ ಮೋದಿ ಅವರಿಂದ ಇದರ ಉದ್ಘಾಟನೆ ಮಾಡಿಸುವ ಚಿಂತನೆಯನ್ನು ಸುಹಾಸ್ ಹಂಚಿಕೊಂಡಿದ್ದಾರೆ.

bomber drone flying vedge ceo suhas

ಭಾರತದಲ್ಲಿ ಸದ್ಯ ದಾಳಿ ಡ್ರೋನ್‌ಗಳು ಲಭ್ಯವಿಲ್ಲ. ಇರಾನ್‌ ಹಾಗೂ ರಷ್ಯಾಗಳು ಇದನ್ನು ಈಗಾಗಲೇ ಬಳಸುತ್ತಿವೆ. ಇಸ್ರೇಲ್‌ ಮೇಲೆ ದಾಳಿ ಮಾಡಲು ಕೂಡ ಪ್ಯಾಲೆಸ್ತೀನಿನ ಬಂಡುಕೋರರು ಸಣ್ಣ ಗಾತ್ರದ ಇಂಥದೇ ಡ್ರೋನ್‌ಗಳನ್ನು ಬಳಸಿದ್ದರು. ಈ ಬಗೆಯ ಡ್ರೋನ್‌ಗಳು ಆಧುನಿಕ ಯುದ್ಧದ ವೈಖರಿಯನ್ನೇ ಬದಲಿಸಲಿವೆ. ಕ್ಷಿಪಣಿಗಳು ದುಬಾರಿಯಾಗಿದ್ದು, ಅದಕ್ಕಿಂತ ಡ್ರೋನ್‌ಗಳು ಅಗ್ಗವಾಗಿವೆ. FWD-200B UAV ಸುಮಾರು 200 ಕಿಲೋದಷ್ಟು ಪೇಲೋಡ್‌ ಅನ್ನು ಹೊತ್ತೊಯ್ಯುವ ಸಾಮರ್ಥ್ಯ ಹೊಂದಿದೆ.

ಭಾರತ ಈಗ ಅಮೆರಿಕದ ಪ್ರಿಡೇಟರ್ ಡ್ರೋನ್‌ಗಳನ್ನು (Predator Drone) ತರಿಸುತ್ತಿದೆ. ಆದರೆ ಇದು 250 ಕೋಟಿಗಳಷ್ಟು ದುಬಾರಿಯಾಗಿದೆ. ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ದೇಶೀಯವಾಗಿ ತಯಾರಾದ FWD-200B ಭಾರತದಲ್ಲಿ ಸ್ವದೇಶಿ ತಂತ್ರಜ್ಞಾನದೊಂದಿಗೆ ಕೇವಲ 25ಯಿಂದ 50 ಕೋಟಿ ವೆಚ್ಚದಲ್ಲಿ ತಯಾರಾಗಲಿದೆ. ಭಾರತವನ್ನು ಜಾಗತಿಕ ಡ್ರೋನ್ ಉತ್ಪಾದನೆ ಮತ್ತು ತಂತ್ರಜ್ಞಾನದ ಕೇಂದ್ರವಾಗಿಸುವ ಗುರಿ ತಮ್ಮದು. ಇನ್ನು ಎರಡು ತಿಂಗಳಲ್ಲಿ ಇದು ಭಾರತದ ಮಿಲಿಟರಿಯನ್ನು ಸೇರುವ ಆಶಯ ಇದೆ. ಈ ಮೂಲಕ ನಮ್ಮ ರಾಷ್ಟ್ರದ ವಾಯು ರಕ್ಷಣಾ ವ್ಯವಸ್ಥೆಯನ್ನು ಸಶಕ್ತಗೊಳಿಸಲು ಸಂಸ್ಥೆ ಮುಂದಾಗಿದೆ ಎಂದು ಸುಹಾಸ್‌ ತಿಳಿಸಿದ್ದಾರೆ.

ಇದನ್ನೂ ಓದಿ: Tejas Aircraft: ಸ್ವದೇಶಿ ʼತೇಜಸ್ʼ ವಿಮಾನದಲ್ಲಿ ಮೋದಿ ಹಾರಾಟ: ಪಾಕಿಸ್ತಾನ, ಚೀನಾಗೆ ನಡುಕ!

Continue Reading
Advertisement
Prajwal Revanna Case Another case against Revanna transferred to SIT Notice to Bhavani
ಕ್ರೈಂ37 mins ago

Prajwal Revanna Case: ರೇವಣ್ಣ ಮೇಲಿನ ಮತ್ತೊಂದು ಕೇಸ್‌ ಎಸ್‌ಐಟಿಗೆ ವರ್ಗ; ಭವಾನಿಗೂ ನೋಟಿಸ್‌!

Narendra Modi
Lok Sabha Election 202444 mins ago

Narendra Modi: ಅಮೇಥಿ ಬದಲು ರಾಯ್‌ ಬರೇಲಿಯಿಂದ ರಾಹುಲ್‌ ಗಾಂಧಿ ಸ್ಪರ್ಧೆ; ಓಡಬೇಡಿ ಎಂದು ವ್ಯಂಗ್ಯವಾಡಿದ ಮೋದಿ

Helicopter Crash
ದೇಶ52 mins ago

Helicopter Crash: ಶಿವಸೇನೆ ನಾಯಕಿ ಪ್ರಯಾಣಿಸಬೇಕಿದ್ದ ಹೆಲಿಕಾಪ್ಟರ್‌ ಪತನ;ವಿಡಿಯೋ ವೈರಲ್‌

Murder case
ಕ್ರೈಂ1 hour ago

Murder case : ಹುಬ್ಬಳ್ಳಿ, ಬೆಂಗಳೂರಲ್ಲಿ ಅಪರಿಚಿತ ಶವ ಪತ್ತೆ; ಹಂತಕರ ಬೆನ್ನಿಗೆ ಬಿದ್ದ ಖಾಕಿ ಪಡೆ

Hockey India
ಕ್ರೀಡೆ1 hour ago

Hockey India: ಭಾರತ ಮಹಿಳಾ ಹಾಕಿ ತಂಡಕ್ಕೆ 22 ವರ್ಷದ ಸಲೀಮಾ ನೂತನ ನಾಯಕಿ

Prajwal Revanna Case Revanna withdraws anticipatory bail plea
ಕ್ರೈಂ1 hour ago

Prajwal Revanna Case: ನಿರೀಕ್ಷಣಾ ಜಾಮೀನು ಅರ್ಜಿ ಹಿಂಪಡೆದ ರೇವಣ್ಣ; ವಾಪಸ್‌ ಪಡೆಯಲು ಕೋರ್ಟ್‌ ಹೇಳಿದ್ದೇಕೆ?

Kannada Serials TRP puttakkana makkalu top the list
ಕಿರುತೆರೆ1 hour ago

Kannada Serials TRP: ಈ ವಾರ ಟಿಆರ್‌ಪಿಯಲ್ಲಿʻ ಪುಟ್ಟಕ್ಕನ ಮಕ್ಕಳುʼ ಟಾಪ್‌ 1: ಕಲರ್ಸ್‌ನಲ್ಲಿ ‘ರಾಮಾಚಾರಿ’ಗೆ ಮೊದಲ ಸ್ಥಾನ!

bomber drone
ತಂತ್ರಜ್ಞಾನ1 hour ago

Bomber Drone: ಭಾರತದ ಮೊದಲ ಬಾಂಬರ್ ಡ್ರೋನ್ ಅನಾವರಣ; ಇದರ ವಿಶೇಷತೆ ಹೀಗಿದೆ ನೋಡಿ

Viral Video
ವೈರಲ್ ನ್ಯೂಸ್2 hours ago

Viral Video: ಎಲ್ಲ ಖುಷಿಯನ್ನು ಯಾಕೆ ಮನುಷ್ಯ ಮಾತ್ರ ಅನುಭವಿಸಬೇಕು? ಸ್ಮಿಮ್ಮಿಂಗ್‌ ಪೂಲ್‌ಗೆ ಲಗ್ಗೆ ಇಟ್ಟ ಮಂಗಗಳು

United Nations
ವಿದೇಶ2 hours ago

United Nations: ಪಾಕಿಸ್ತಾನ ದುಷ್ಕೃತ್ಯಗಳ ಟ್ರ್ಯಾಕ್‌ ರೆಕಾರ್ಡ್‌ ಹೊಂದಿದೆ; ವಿಶ್ವಸಂಸ್ಥೆಯಲ್ಲಿ ಗುಡುಗಿದ ಭಾರತ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ10 hours ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ20 hours ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ1 day ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ3 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20244 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20244 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20245 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20245 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20245 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

ಟ್ರೆಂಡಿಂಗ್‌