Manoj Bajpayee | ಹಣದ ಅನಿವಾರ್ಯತೆ ತುಂಬ ಇತ್ತು, ಸಾಲ ಮಾಡಿ ಸಹೋದರ ಊಟ ಬಡಿಸಿದ್ದ: ನಟ ಮನೋಜ್ ಬಾಜಪೇಯಿ - Vistara News

ಬಾಲಿವುಡ್

Manoj Bajpayee | ಹಣದ ಅನಿವಾರ್ಯತೆ ತುಂಬ ಇತ್ತು, ಸಾಲ ಮಾಡಿ ಸಹೋದರ ಊಟ ಬಡಿಸಿದ್ದ: ನಟ ಮನೋಜ್ ಬಾಜಪೇಯಿ

ನಟ ಮನೋಜ್ ಬಾಜಪೇಯಿ (Manoj Bajpayee) ಸಂದರ್ಶನವೊಂದರಲ್ಲಿ ಹಲವಾರು ವಿಚಾರಗಳನ್ನು ಹೇಳಿಕೊಂಡಿದ್ದಾರೆ.

VISTARANEWS.COM


on

Manoj Bajpayee
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ನಟ ಮನೋಜ್ ಬಾಜಪೇಯಿ (Manoj Bajpayee) ಸಂದರ್ಶನವೊಂದರಲ್ಲಿ ಚಲನಚಿತ್ರ ನಿರ್ಮಾಪಕರೊಂದಿಗಿನ ತಮ್ಮ ಮೊದಲ ಭೇಟಿಯನ್ನು ನೆನಸಿಕೊಂಡು ಹಲವಾರು ವಿಚಾರಗಳನ್ನು ಹೇಳಿಕೊಂಡಿದ್ದಾರೆ. ನಟನಾ ವೃತ್ತಿಗೆ ಕಾಲಿಡುವ ಸಂದರ್ಭದಲ್ಲಿ ಎದುರಿಸಿದ ಕಷ್ಟದ ಸಂಗತಿಗಳನ್ನು ಹೇಳಿದ್ದಾರೆ.

ಸಂದರ್ಶನವೊಂದರಲ್ಲಿ ನಟ ಮಾತನಾಡಿ ʻದೌಡ್ʼ ಚಿತ್ರದ ಒಂದು ಪಾತ್ರಕ್ಕಾಗಿ ಮನೋಜ್‌ ಅವರನ್ನು ಚಲನಚಿತ್ರ ನಿರ್ಮಾಪಕರ ಕಚೇರಿಗೆ ಕರೆಸಲಾಯಿತು. ಆ ಸಮಯದಲ್ಲಿ ನನಗೆ ಹಣದ ಅವಶ್ಯಕತೆ ಇತ್ತು. ಚಿಕ್ಕ ಪಾತ್ರವಾದರೂ ಸರಿ ನಿಭಾಯಿಸುವ ಅನಿವಾರ್ಯತೆ ಇತ್ತು. ಮೊದಲಿಗೆ ನಿರ್ದೇಶಕ ರಾಮ್‌ಗೋಪಲ ವರ್ಮಾ ಅವರು ಪಾತ್ರ ನೀಡುವಾಗ ಈ ಮೊದಲು ಯಾವ ಪಾತ್ರ ನಿಭಾಯಿಸಿದ್ದೀರಿ ಎಂದು ಕೇಳಿದರು. ನಾನು ಬ್ಯಾಂಡಿಟ್ ಕ್ವೀನ್ ಮಾಡಿದೆ. ಆದರೆ ನೀವು ನನ್ನನ್ನು ಗುರುತಿಸುವುದಿಲ್ಲ. ನಾನು ಮಾತನಾಡದ ಪಾತ್ರದಲ್ಲಿ ನಟಿಸಿದ್ದೇನೆ. ನಾನು ಮಾನ್ ಸಿಂಗ್ ಪಾತ್ರದಲ್ಲಿ ನಟಿಸಿದ್ದೇನೆ ಎಂದು ನಾನು ಅವರಿಗೆ ಹೇಳಿದೆ. ಹೇಳುತ್ತಿದ್ದಂತೆ ಅವರು ಎದ್ದುನಿಂತು, ನನ್ನನ್ನು ಹಲವು ವರ್ಷಗಳಿಂದ ಹುಡುಕುತ್ತಿರುವುದಾಗಿ ಅವರು ಹೇಳಿದರು. ನಂತರ ʻದೌಡ್ʼ ಅನ್ನು ಮರೆತುಬಿಡಿ, ನಾನು ನಿಮಗಾಗಿ ಇನ್ನೊಂದು ಚಲನಚಿತ್ರವನ್ನು ಮಾಡುತ್ತೇನೆ, ನೀವು ನಾಯಕನಾಗಿ ನಟಿಸುವಿರಿʼʼ ಎಂದು ಹೇಳಿದರು.

Manoj Bajpayee

ಇದನ್ನೂ ಓದಿ | Actor Prabhas | ಬಾಲಿವುಡ್‌ಗೆ ಎಂಟ್ರಿ ಕೊಟ್ಟ ಪ್ರಭಾಸ್‌: ಆ್ಯಕ್ಷನ್‌ ಕಟ್‌ ಹೇಳಲಿದ್ದಾರೆ ಪಠಾಣ್‌ ನಿರ್ದೇಶಕ ಸಿದ್ಧಾರ್ಥ್‌ ಆನಂದ್‌

ಮನೋಜ್ ಮಾತು ಮುಂದುವರಿಸಿ “ನನಗೆ ಆ ಕ್ಷಣಕ್ಕೆ ಸಂತೋಷವಾಗಿದ್ದರೂ ಈ ಚಿತ್ರ ನನಗೆ ಅನಿವಾರ್ಯವಾಗಿತ್ತು. ನಾನು ಬಾಡಿಗೆಯನ್ನು ಪಾವತಿಸಬೇಕಾಗಿತ್ತು. ಅನೇಕ ಜನರು ಈ ರೀತಿಯ ಭರವಸೆಗಳನ್ನು ನೀಡುತ್ತಾರೆ. ಹಾಗಾಗಿ ನಾನು ಅವರಿಗೆ ʻʻಸರ್‌ ನನಗೆ ಹಣದ ಅವಶ್ಯಕತೆ ಇದೆ. ಹೊಸ ಪ್ರಾಜೆಕ್ಟ್‌ ಮರೆತು ಬಿಡಿ. ನನ್ನನ್ನು ನಂಬಿರಿ, ನಾನು ದೌಡ್‌ನಲ್ಲಿ ನಟಿಸುತ್ತೇನೆ ಎಂದೆʼʼ ಎಂದರು. ʻದೌಡ್‌ʼ ಚಿತ್ರದಲ್ಲಿ ಪಾತ್ರ ಸಿಕ್ಕಿತು ಮತ್ತು ಅದಕ್ಕಾಗಿ ಅವರು 30,000 ರೂ ನನಗೆ ಸಂಭಾವನೆ ನೀಡಿದರು. ಆ ಸಮಯದಲ್ಲಿ ನನಗೆ ದೊಡ್ಡ ಮೊತ್ತವಾಗಿತ್ತು. ಬಂದ ಕೂಡಲೇ ಒಂದು ವರ್ಷದ ಬಾಡಿಗೆಯನ್ನು ಪಾವತಿಸಿದೆʼʼಎಂದರು. ಅಂತಿಮವಾಗಿ ‘ಸತ್ಯ’ದಲ್ಲಿಯೂ ನಾನು ನಟಿಸಿದೆ. ಅದರಲ್ಲಿ ʻಭಿಕು ಮ್ಹಾತ್ರೆʼ ಪಾತ್ರ ನಿಭಾಯಿಸಿದೆ. ಅದೃಷ್ಟವಶಾತ್‌ ಅಭಿಮಾನಿಗಳ ಮೆಚ್ಚಿನ ಪಾತ್ರವಾಯಿತುʼʼಎಂದರು.

ತಮ್ಮ ಸಿನಿಮಾಗಳನ್ನೂ ನೋಡುವುದು ಕೂಡ ಕಷ್ಟಕರ ಪರಿಸ್ಥಿತಿ ಇತ್ತು ಎಂದು ಹೇಳಿಕೊಂಡಿದ್ದಾರೆ. ದೆಹಲಿಯಲ್ಲಿ ಅವರ ನಾಟಕವೊಂದನ್ನು ವೀಕ್ಷಿಸಲು ತಮ್ಮ ಹಳ್ಳಿಯಿಂದ ತಮ್ಮ ಸಹೋದರನನ್ನು ಕರೆಸಿಕೊಂಡಿದ್ದನ್ನು ಅವರು ನೆನಪಿಸಿಕೊಂಡರು. ʻʻನನ್ನ ಸಹೋದರ ಯಾವಾಗಲೂ ಸಿನಿಮಾದಲ್ಲಿ ಕೆಲಸ ಮಾಡಲು ಹೇಳುತ್ತಿದ್ದರು, ಮತ್ತು ನಾಟಕಗಳನ್ನು ಮಾಡುತ್ತಾ ಸಮಯವನ್ನು ವ್ಯರ್ಥ ಮಾಡಬೇಡಿ ಎಂದು ಹೇಳುತ್ತಿದ್ದರು. ಆದರೆ ಒಂದು ದಿನ ಒಂದು ಪ್ರದರ್ಶನದ ನಂತರ, ನನ್ನ ನಾಟಕ ನೋಡಿ ಸಹೋದರ ತುಂಬಾ ಪ್ರಭಾವಿತರಾದರು. ನನಗೆ ಮಟನ್‌ ಸಾರು ಮಾಡಿ ಬಡಿಸಿದ್ದರು. ಮಟನ್ ಖರೀದಿಸಲು ಹಣ ಎಲ್ಲಿಂದ ಬಂತು ಎಂದು ನಾನು ಅವರನ್ನು ಕೇಳಿದೆ. ನನ್ನ ಸಹೋದರ ಅವರು ಹಣವನ್ನು ಸಾಲ ಪಡೆದಿದ್ದಾರೆಂದು ಹೇಳಿದರು. ಕಾರಣವನ್ನು ತಿಳಿಸಿದ ಅವರು ನನ್ನ ನಾಟಕದಿಂದ ತುಂಬಾ ಪ್ರಭಾವಿತರಾಗಿ ಈ ಮೂಲಕ ನನ್ನನ್ನು ಅಭಿನಂದಿಸಲು ಬಯಸಿದ್ದರುʼʼಎಂದರು.

ಮನೋಜ್ ಬಾಜಪೇಯಿ ದೇಶದ ಅತ್ಯಂತ ಮೆಚ್ಚುಗೆ ಪಡೆದ ನಟರಲ್ಲಿ ಒಬ್ಬರು. ಇತ್ತೀಚೆಗೆʻ ದಿ ಫ್ಯಾಮಿಲಿ ಮ್ಯಾನ್ʼ ಪಾರ್ಟ್‌ 1 ಹಾಗೂ 2 ವೆಬ್‌ ಸಿರೀಸ್‌ ಮೂಲಕ ಅವರು ದೇಶಾದ್ಯಂತ ಮನೆಮಾತಾಗಿದ್ದಾರೆ.

ಇದನ್ನೂ ಓದಿ | RRR Movie | ಆರ್‌ಆರ್‌ಆರ್‌ ಬಾಲಿವುಡ್‌ ಸಿನಿಮಾವಲ್ಲ: ನಿರ್ದೇಶಕ ರಾಜಮೌಳಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಾಲಿವುಡ್

Lok Sabha Election 2024: ಕುಟುಂಬದ ಜತೆ ಬಂದು ಮತ ಚಲಾಯಿಸಿದ ಶಾರುಖ್‌ ಖಾನ್‌

Lok Sabha Election 2024: ಬಾಲಿವುಡ್ ನಟ ಆಮೀರ್ ಖಾನ್ ಅವರು ಮುಂಬೈನಲ್ಲಿ ಮಾಜಿ ಪತ್ನಿ ಕಿರಣ್ ರಾವ್ ಅವರೊಂದಿಗೆ ವೋಟ್‌ ಮಾಡಿದರು. ಆಮೀರ್‌ ಕಪ್ಪು ಟಿ-ಶರ್ಟ್ ಮತ್ತು ಜೀನ್ಸ್ ಧರಿಸಿದ್ದರು. ಬಾಂದ್ರಾದ ಮತಗಟ್ಟೆಯಲ್ಲಿ ಆಮೀರ್ ಪುತ್ರಿ ಇರಾ ಖಾನ್ ಮತ್ತು ಜುನೈದ್ ಕೂಡ ಕಾಣಿಸಿಕೊಂಡಿದ್ದಾರೆ. ಮತ ಚಲಾಯಿಸಿದ ಬಳಿಕ ಪಾಪರಾಜಿಗಳಿಗೂ ಪೋಸ್ ನೀಡಿದರು. ಆಮೀರ್ ತಾಯಿ ಜೀನತ್ ಖಾನ್ ಕೂಡ ಮತದಾನ ಮಾಡಿದರು.

VISTARANEWS.COM


on

Lok Sabha Election 2024 Shah Rukh Khan booth in Mumbai
Koo

ಬೆಂಗಳೂರು: ಲೋಕಸಭೆ 2024ರ (Lok Sabha Election 2024) ಚುನಾವಣೆಯಲ್ಲಿ ಮತ ಚಲಾಯಿಸಲು ನಟ ಶಾರುಖ್ ಖಾನ್ ಮುಂಬೈನ ಮತಗಟ್ಟೆಯಲ್ಲಿ ಕಾಣಿಸಿಕೊಂಡರು. ಪತ್ನಿ ಗೌರಿ ಖಾನ್, ಮಗಳು ಸುಹಾನಾ ಖಾನ್ ಮತ್ತು ಮಗ ಅಬ್ರಾಮ್ ಕೂಡ ಅವರೊಂದಿಗೆ ಇದ್ದರು. ಶಾರುಖ್ (sharukh khan) ಕಪ್ಪು ಟಿ-ಶರ್ಟ್ ಧರಿಸಿ ಮತದಾನ ಕೇಂದ್ರಕ್ಕೆ ಆಗಮಿಸಿದರು. ಸುಹಾನಾ ನೀಲಿ ಸೂಟ್ ಮತ್ತು ಗೌರಿ ಬಿಳಿ ಟಾಪ್ ಮತ್ತು ನೀಲಿ ಜೀನ್ಸ್ ಧರಿಸಿದ್ದರು.

ಮೇ 18ರಂದು ಶಾರುಖ್ ತಮ್ಮ ಅಭಿಮಾನಿಗಳಿಗೆ ಈ ವರ್ಷ ತಪ್ಪದೇ ಮತ ಚಲಾಯಿಸುವಂತೆ ಮನವಿ ಮಾಡಿದರು. ಎಕ್ಸ್ ಪೋಸ್ಟ್‌ನಲ್ಲಿ, ಶಾರುಖ್‌ ʻʻಜವಾಬ್ದಾರಿಯುತ ಭಾರತೀಯ ಪ್ರಜೆಗಳಾದ ನಾವು ಈ ಸೋಮವಾರ ಮಹಾರಾಷ್ಟ್ರದಲ್ಲಿ ಮತದಾನದ ಹಕ್ಕನ್ನು ಚಲಾಯಿಸಬೇಕು. ಭಾರತೀಯರಾಗಿ ನಮ್ಮ ಕರ್ತವ್ಯವನ್ನು ನಿರ್ವಹಿಸೋಣ ಮತ್ತು ನಮ್ಮ ದೇಶದ ಹಿತಾಸಕ್ತಿಗಳನ್ನು ಗಮನದಲ್ಲಿಟ್ಟುಕೊಂಡು ಮತ ಚಲಾಯಿಸೋಣʼʼ ಎಂದು ಮನವಿ ಮಾಡಿದ್ದರು.

ಮುಂಜಾನೆ ಅಕ್ಷಯ್ ಕುಮಾರ್, ರಣಬೀರ್ ಕಪೂರ್, ಕಿಯಾರಾ ಆಡ್ವಾಣಿ, ದೀಪಿಕಾ ಪಡುಕೋಣೆ, ರಣವೀರ್ ಸಿಂಗ್ ಸೇರಿದಂತೆ ಹಲವು ಬಾಲಿವುಡ್ ಸೆಲೆಬ್ರಿಟಿಗಳು ಮುಂಬೈನಾದ್ಯಂತ ಮತದಾನ ಮಾಡಿದರು.

ಬಾಲಿವುಡ್ ನಟ ಆಮೀರ್ ಖಾನ್ ಅವರು ಮುಂಬೈನಲ್ಲಿ ಮಾಜಿ ಪತ್ನಿ ಕಿರಣ್ ರಾವ್ ಅವರೊಂದಿಗೆ ವೋಟ್‌ ಮಾಡಿದರು. ಆಮೀರ್‌ ಕಪ್ಪು ಟಿ-ಶರ್ಟ್ ಮತ್ತು ಜೀನ್ಸ್ ಧರಿಸಿದ್ದರು. ಬಾಂದ್ರಾದ ಮತಗಟ್ಟೆಯಲ್ಲಿ ಆಮೀರ್ ಪುತ್ರಿ ಇರಾ ಖಾನ್ ಮತ್ತು ಜುನೈದ್ ಕೂಡ ಕಾಣಿಸಿಕೊಂಡಿದ್ದಾರೆ. ಮತ ಚಲಾಯಿಸಿದ ಬಳಿಕ ಪಾಪರಾಜಿಗಳಿಗೂ ಪೋಸ್ ನೀಡಿದರು. ಆಮೀರ್ ತಾಯಿ ಜೀನತ್ ಖಾನ್ ಕೂಡ ಮತದಾನ ಮಾಡಿದರು.

ಇದನ್ನೂ ಓದಿ: Lok Sabha Election 2024: ರ್‍ಯಾಲಿಯಲ್ಲಿ ಕಾಲ್ತುಳಿತದ ಸ್ಥಿತಿ ನಿರ್ಮಾಣ; ಭಾಷಣ ಮಾಡದೇ ವೇದಿಕೆಯಿಂದ ತೆರಳಿದ ರಾಹುಲ್‌, ಅಖಿಲೇಶ್‌

ಇನ್ನು ಮುಂಬೈನಲ್ಲಿ ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌, ಉದ್ಯಮಿ ಅನಿಲ್ ಅಂಬಾನಿ ಸೇರಿದಂತೆ ಅನೇಕ ಗಣ್ಯರು ಬೆಳಗ್ಗೆಯೇ ಮತಗಟ್ಟೆಗೆ ಬಂದು ಮತ ಚಲಾಯಿಸಿದರು. ವೋಟ್‌ ಮಾಡಿದ ಬಳಿಕ ಅಕ್ಷಯ್‌ ಕುಮಾರ್‌ ಮಾತನಾಡಿ ʻʻನನ್ನ ಭಾರತ ಅಭಿವೃದ್ಧಿ ಮತ್ತು ಬಲಿಷ್ಠವಾಗಬೇಕೆಂದು ನಾನು ಬಯಸುತ್ತೇನೆ. ಅದನ್ನು ಗಮನದಲ್ಲಿಟ್ಟುಕೊಂಡು ಮತ ಹಾಕಿದ್ದೇನೆ. ಭಾರತವು ನನಗೆಸರಿ ಎನಿಸುವದಕ್ಕೆ ಮತ ಚಲಾಯಿಸಬೇಕುʼʼಎಂದರು.

ದೇಶದಲ್ಲಿ ಈಗಾಗಲೇ ನಾಲ್ಕು ಹಂತಗಳಲ್ಲಿ 379 ಕ್ಷೇತ್ರಗಳಲ್ಲಿ ಮತದಾನ ನಡೆದಿದೆ. ಬಹುತೇಕ ಕಡೆಗಳಲ್ಲಿ ಶಾಂತಿಯುತವಾಗಿ ಮತದಾನ ನಡೆದಿದ್ದು, ಈಗ ಐದನೇ ಹಂತದ ಮತದಾನಕ್ಕೆ ಚುನಾವಣೆ ಆಯೋಗವು ಸಿದ್ಧಗೊಂಡಿದೆ. ಇನ್ನು ಸೋಮವಾರವೇ ಅಯೋಧ್ಯೆಯ ಜಿಲ್ಲೆಯನ್ನು ಒಳಗೊಂಡಿರುವ ಫೈಜಾಬಾದ್‌ ಲೋಕಸಭೆ ಕ್ಷೇತ್ರದಲ್ಲಿ ಮತದಾನ ನಡೆಯಲಿದ್ದು, ಬಿಜೆಪಿಯ ಹಾಲಿ ಸಂಸದ ಲಲ್ಲು ಸಿಂಗ್‌ ಅವರೇ ಮತ್ತೆ ಕಣಕ್ಕಿಳಿದಿದ್ದಾರೆ. ರಾಮಮಂದಿರ ಉದ್ಘಾಟನೆಯ ಹಿನ್ನೆಲೆಯಲ್ಲಿ ಇಲ್ಲಿಯು ಬಿಜೆಪಿ ಅಭ್ಯರ್ಥಿಯ ಗೆಲುವು ನಿಶ್ಚಿತ ಎಂದು ಹೇಳಲಾಗುತ್ತಿದೆ. 4.69 ಕೋಟಿ ಪುರುಷ, 4.26 ಕೋಟಿ ಮತ್ತು 5,409 ತೃತೀಯ ಲಿಂಗಿ ಮತದಾರರು ಸೇರಿದಂತೆ 8.95 ಕೋಟಿಗೂ ಅಧಿಕ ಮತದಾರರು ಇಂದು 695 ಅಭ್ಯರ್ಥಿಗಳ ಅದೃಷ್ಟ ನಿರ್ಧರಿಸಲಿದ್ದಾರೆ.

Continue Reading

ಬಾಲಿವುಡ್

Deepika Padukone: ವೋಟ್‌ ಮಾಡಿದ ದೀಪಿಕಾ ಪಡುಕೋಣೆ; ಅವರ ಹೊಟ್ಟೆ ನೋಡಿ ಗಂಡು ಮಗು ಎಂದ ನೆಟ್ಟಿಗರು!

Deepika Padukone: ಮಗುವಿನ ನಿರೀಕ್ಷೆಯಲ್ಲಿರುವ ದೀಪಿಕಾ ʻಸಿಂಗಮ್ ಅಗೇನ್ʼ ಚಿತ್ರದಲ್ಲಿ ಲೇಡಿ ಸಿಂಗಮ್ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗೆ, ದೀಪಿಕಾ ಅವರೊಂದಿಗೆ ಕೆಲಸ ಮಾಡಿದ ಜ್ಯೂನಿಯರ್‌ ಕಲಾವಿದರು ನಟಿಯೊಂದಿಗಿನ ಸೆಲ್ಫಿಯನ್ನು ಇನ್‌ಸ್ಟಾದಲ್ಲಿ ಹಂಚಿಕೊಂಡಿದ್ದರು. ʻಸಿಂಗಂ ಅಗೇನ್ʼ ಚಿತ್ರದಲ್ಲಿ ದೀಪಿಕಾ ಪಡುಕೋಣೆ (Deepika Padukone) ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ರೋಹಿತ್ ಶೆಟ್ಟಿ ನಿರ್ದೇಶನದ ಈ ಸಿನಿಮಾದಲ್ಲಿ ಹಲವು ಪ್ರಮುಖ ನಟರು ಇದ್ದಾರೆ. ಲೇಡಿ ಸಿಂಗಮ್ ಚಿತ್ರದಲ್ಲಿ ಅಜಯ್ ದೇವಗನ್ ಅವರ ಸಹೋದರಿ ಪಾತ್ರವನ್ನು ನಿರ್ವಹಿಸಲಿದ್ದಾರೆʼʼಎನ್ನಲಾಗಿತ್ತು.

VISTARANEWS.COM


on

Deepika Padukone Enjoy Lunch Date After Casting Their Vote
Koo

ಬೆಂಗಳೂರು: ಲೋಕಸಭೆ ಚುನಾವಣೆಯ (Lok Sabha Election 2024) ಐದನೇ ಹಂತದ ಮತದಾನ ಆಗುತ್ತಿದೆ. ರಣವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ (Deepika Padukone) ಮತ ಚಲಾಯಿಸಿದ್ದಾರೆ. ಇದೀಗ ದೀಪಿಕಾ ಅವರ ಬೇಬಿ ಬಂಪ್‌ ಫೋಟೊ ಹಾಗೂ ವಿಡಿಯೊಗಳು ವೈರಲ್‌ ಆಗುತ್ತಿವೆ. ಈ ಮೂಲಕ ಜೋಡಿ ಬಾಡಿಗೆ ತಾಯ್ತನ ಆಶ್ರಯಿಸಿದ್ದಾರೆ ಎಂಬ ವದಂತಿಗೂ ತೆರೆ ಬಿದ್ದಿದೆ. ಲೂಸ್ ಶರ್ಟ್ ಧರಿಸಿದ್ದರೂ ಐದು ತಿಂಗಳ ಗರ್ಭಿಣಿಯಾಗಿರುವ ದೀಪಿಕಾಳ ಬೇಬಿ ಬಂಪ್ ಎದ್ದು ಕಾಣಿಸುತ್ತಿತ್ತು. ನೆಟ್ಟಿಗರು ದೀಪಿಕಾ ಹೊಟ್ಟೆಯಲ್ಲಿ ಗಂಡು ಮಗುವೇ ಇದೆ, ಈ ಜೋಡಿಗೆ ಗಂಡು ಮಗುವೇ ಆಗುವುದು ಎಂದು ಭವಿಷ್ಯ ನುಡಿಯುತ್ತಿದ್ದಾರೆ.

ವೈರಲ್‌ ಆದ ವಿಡಿಯೊದಲ್ಲಿ ದೀಪಿಕಾ ʻʻಬಿಳಿ ಶರ್ಟ್ ಮತ್ತು ಡೆನಿಮ್‌ನಲ್ಲಿ ಕಾಣಿಸಿಕೊಂಡರು. ರಣವೀರ್ ಹೆಂಡತಿಗೆ ಕಾರಿನಲ್ಲಿ ಕುಳಿತುಕೊಳ್ಳಲು ಸಹಾಯ ಮಾಡುತ್ತಿರುವುದು ಕಂಡುಬಂದಿದೆ. ದೀಪಿಕಾ ಮತ್ತು ರಣವೀರ್ ಮತಗಟ್ಟೆಗೆ ತೆರಳುತ್ತಿದ್ದಂತೆ ಅಭಿಮಾನಿಗಳು ಮುಗಿಬಿದ್ದರು. ರಣವೀರ್ ಅವರು ದೀಪಿಕಾ ಅವರನ್ನು ಬೂತ್‌ಗೆ ಕರೆದೊಯ್ಯುವಾಗ ಕೈ ಹಿಡಿದು ಕರೆದುಕೊಂಡು ಹೋದರು. ದೀಪಿಕಾ ಇದೇ ಮೊದಲ ಬಾರಿಗೆ ತನ್ನ ಬೇಬಿ ಬಂಪ್ ತೋರಿಸಿದ್ದಾರೆ.

ಮಗುವಿನ ನಿರೀಕ್ಷೆಯಲ್ಲಿರುವ ದೀಪಿಕಾ ʻಸಿಂಗಮ್ ಅಗೇನ್ʼ ಚಿತ್ರದಲ್ಲಿ ಲೇಡಿ ಸಿಂಗಮ್ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗೆ, ದೀಪಿಕಾ ಅವರೊಂದಿಗೆ ಕೆಲಸ ಮಾಡಿದ ಜ್ಯೂನಿಯರ್‌ ಕಲಾವಿದರು ನಟಿಯೊಂದಿಗಿನ ಸೆಲ್ಫಿಯನ್ನು ಇನ್‌ಸ್ಟಾದಲ್ಲಿ ಹಂಚಿಕೊಂಡಿದ್ದರು. ʻಸಿಂಗಂ ಅಗೇನ್ʼ ಚಿತ್ರದಲ್ಲಿ ದೀಪಿಕಾ ಪಡುಕೋಣೆ (Deepika Padukone) ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ರೋಹಿತ್ ಶೆಟ್ಟಿ ನಿರ್ದೇಶನದ ಈ ಸಿನಿಮಾದಲ್ಲಿ ಹಲವು ಪ್ರಮುಖ ನಟರು ಇದ್ದಾರೆ. ಲೇಡಿ ಸಿಂಗಮ್ ಚಿತ್ರದಲ್ಲಿ ಅಜಯ್ ದೇವಗನ್ ಅವರ ಸಹೋದರಿ ಪಾತ್ರವನ್ನು ನಿರ್ವಹಿಸಲಿದ್ದಾರೆʼʼ ಎನ್ನಲಾಗಿತ್ತು.

ದೀಪಿಕಾ ಪಡುಕೋಣೆ ಮತ್ತು ರಣವೀರ್​ ಸಿಂಗ್ ಅವರು ಪರಸ್ಪರ ಪ್ರೀತಿಸಿ ಮದುವೆ ಆಗಿದ್ದು 2018ರಲ್ಲಿ. ಆರು ವರ್ಷಗಳ ಬಳಿಕ ಅವರು ಮಗು ಹೊಂದುವ ನಿರ್ಧಾರಕ್ಕೆ ಬಂದಿದ್ದಾರೆ. ಫೈಟರ್‌ನಲ್ಲಿ ಹೃತಿಕ್ ರೋಷನ್ ಜತೆಗೆ ಕೊನೆಯದಾಗಿ ಕಾಣಿಸಿಕೊಂಡ ದೀಪಿಕಾ, ಸದ್ಯ ಸಿನಿಮಾದಿಂದ ಬ್ರೇಕ್‌ ಪಡೆದುಕೊಂಡಿದ್ದಾರೆ. ಈ ವರ್ಷ ಸೆಪ್ಟೆಂಬರ್​ ತಿಂಗಳಲ್ಲಿ ಅವರು ಮಗುವಿಗೆ ಜನ್ಮ ನೀಡಲಿದ್ದಾರೆ.

ಇದನ್ನೂ ಓದಿ: Deepika Padukone: ಕ್ಯಾಮೆರಾ ತಳ್ಳಿ ಮುಂದೆ ನಡೆದ ದೀಪಿಕಾ! ನಾಚಿಕೆಗೇಡಿನ ವರ್ತನೆ ಅಂದ್ರು ನೆಟ್ಟಿಗರು!

ಮಗುವಿನ ನಿರೀಕ್ಷೆ ಹೊಸ್ತಿಲಲ್ಲೇ ಮದುವೆ ಫೋಟೊಗಳು ಡಿಲಿಟ್‌!

ರಣವೀರ್ ಸಿಂಗ್ (Ranveer Singh) ಮತ್ತು ದೀಪಿಕಾ ಪಡುಕೋಣೆ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ಖುಷಿಯ ಸಂದರ್ಭದಲ್ಲೇ ತಮ್ಮ ಮದುವೆ ಫೋಟೊಗಳನ್ನು ಸೋಷಿಯಲ್‌ ಮೀಡಿಯಾದಲ್ಲಿ ಡಿಲಿಟ್‌ ಮಾಡಿದ್ದರು. ಎಲ್ಲವೂ ಸರಿಯಿರುವಾಗಲೇ ರಣ್‌ವೀರ್ ಸಿಂಗ್ ಯಾಕೆ ಈ ನಿರ್ಧಾರ ತೆಗೆದುಕೊಂಡರು? ದಿಢೀರನೇ ಫೋಟೊಗಳನ್ನು ತೆಗೆದು ಹಾಕಿದ್ದು ಯಾಕೆ? ಈ ಎಲ್ಲಾ ಪ್ರಶ್ನೆ ಈಗ ಅಭಿಮಾನಿಗಳಲ್ಲಿ ಹುಟ್ಟಿಕೊಂಡಿತ್ತು. ಕಳೆದ ವರ್ಷ ಕರಣ್ ಜೋಹರ್ ಶೋನಲ್ಲಿ ಮದುವೆ ವಿಡಿಯೋ ರಿಲೀಸ್ ಮಾಡಿದ್ದರು. ಇದರಿಂದ ರಣವೀರ್ ಸಿಂಗ್ ಹಾಗೂ ದೀಪಿಕಾ ಮಧ್ಯೆ ಏನಾದರೂ ಗಂಭೀರ ಜಗಳ ಆಯಿತೇ ಎನ್ನುವ ಅನುಮಾನ ಮೂಡಿತ್ತು.

Continue Reading

ಬಾಲಿವುಡ್

Yami Gautam: ನಟಿ ಯಾಮಿ ಗೌತಮ್‌ಗೆ ಗಂಡು ಮಗು; ಕಂದಮ್ಮನ ಹೆಸರೇನು?

Yami Gautam: ಉರಿ: ದಿ ಸರ್ಜಿಕಲ್ ಸ್ಟ್ರೈಕ್’ ಚಿತ್ರಕ್ಕೆ ಆದಿತ್ಯಾ ಧಾರ್ ಆಕ್ಷನ್ ಕಟ್ ಹೇಳಿದ್ದರು. ಚಿತ್ರದ ಮುಖ್ಯ ಪಾತ್ರದಲ್ಲಿ ಕೂಡ ಯಾಮಿ ಮಿಂಚಿದ್ದರು. ಕನ್ನಡದ ‘ಉಲ್ಲಾಸ ಉತ್ಸಾಹ’ ಆಕೆ ನಟಿಸಿದ ಮೊದಲ ಸಿನಿಮಾ. ಬಾಲಿವುಡ್‌ನಲ್ಲಿ ‘ವಿಕ್ಕಿ ಡೋನರ್’ ಚಿತ್ರದಲ್ಲಿ ಮೊದಲಿಗೆ ನಟಿಸಿದ್ದರು.

VISTARANEWS.COM


on

Yami Gautam welcome baby boy
Koo
ನಟಿ ಯಾಮಿ ಗೌತಮ್‌ (Yami Gautam) ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಮಗುವಿಗೆ ನಾಮಕರಣ ಮಾಡಿ ಈ ವಿಚಾರವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಅಕ್ಷಯ ತೃತೀಯ ದಿನವೇ(ಮೇ 10) ಮಗುವಿಗೆ ಜನ್ಮ ನೀಡಿದ್ದು ಇದೀಗ ಆ ವಿಚಾರ ಬಹಿರಂಗಪಡಿಸಿದ್ದಾರೆ.

ʻʻಪೋಷಕರಾಗಿ ಈ ಸುಂದರ ಪ್ರಯಾಣವನ್ನು ನಾವು ಪ್ರಾರಂಭಿಸಿದಾಗ, ನಮ್ಮ ಮಗನಿಗಾಗಿ ಕಾಯುತ್ತಿರುವ ಉಜ್ವಲ ಭವಿಷ್ಯವನ್ನು ನಾವು ಕುತೂಹಲದಿಂದ ನಿರೀಕ್ಷಿಸುತ್ತೇವೆ. ಅವನು ಸಾಧಿಸುವ ಪ್ರತಿ ಮೈಲುಗಲ್ಲು, ಅವರು ನಮ್ಮ ಇಡೀ ಕುಟುಂಬಕ್ಕೆ ಮತ್ತು ನಮ್ಮ ಪ್ರೀತಿಯ ರಾಷ್ಟ್ರಕ್ಕೆ ಹೆಮ್ಮೆಯ ದಾರಿದೀಪವಾಗಿ ಬೆಳೆಯುತ್ತಾನೆ ಎಂಬ ಭರವಸೆ ಮತ್ತು ನಂಬಿಕೆಯಿಂದ ನಾವಿದ್ದೇವೆʼʼ‌ ಎಂದು ಯಾಮಿ ಪೋಸ್ಟ್‌ ಹಂಚಿಕೊಂಡಿದ್ದಾರೆ. ಹಾಗೇ ಮಗನ ಹೆಸರನ್ನು ರಿವೀಲ್‌ ಮಾಡಿದ್ದಾರೆ.

ಇದನ್ನೂ ಓದಿ: Kamal Haasan: ಕಮಲ್‌ ಹಾಸನ್‌ ಅಭಿನಯದ ‘ಇಂಡಿಯನ್ 2′  ಸಿನಿಮಾ ರಿಲೀಸ್‌ ಡೇಟ್‌ ಅನೌನ್ಸ್‌!

‘ವೇದವಿದ್’ ಅಕ್ಷಯ ತೃತೀಯ ದಿನ ಹುಟ್ಟಿದ. ಅವನಿಗೆ ನಿಮ್ಮೆಲ್ಲರ ಪ್ರೀತಿ ಆಶೀರ್ವಾದ ಬೇಕು ಎಂದು ನಟಿ ಶೇರ್‌ ಮಾಡಿಕೊಂಡಿದ್ದಾರೆ.

Continue Reading

ಬಾಲಿವುಡ್

Salman Khan: ʻಅಲ್ಟಿಮೇಟ್ ಸೆಕ್ಸ್ ಸಿಂಬಲ್ʼ ನನ್ನ ಗಂಡ ಅಲ್ಲ, ಅದು ಸಲ್ಮಾನ್‌ ಖಾನ್‌ ಎಂದಳು ಖ್ಯಾತ ನಟಿ!

Salman Khan: ಅರ್ಹಾನ್ ಖಾನ್ ಮಲೈಕಾ ಅರೋರಾ ಮತ್ತು ಅರ್ಬಾಜ್ ಖಾನ್ ಅವರ ಏಕೈಕ ಪುತ್ರ, ಈತ 2002ರಲ್ಲಿ ಜನಿಸಿದನು. ಅರ್ಹಾನ್ ಖಾನ್ ಮಲೈಕಾ ಅರೋರಾ ಅವರು ವಿವಾಹವಾಗಿ 19 ವರ್ಷಗಳ ಕಾಲ ಜೊತೆಗಿದ್ದರು. ನಂತರ 2016ರಲ್ಲಿ ಬೇರ್ಪಟ್ಟು 2017ರಲ್ಲಿ ಅಧಿಕೃತವಾಗಿ ವಿಚ್ಛೇದನ ಪಡೆದುಕೊಂಡರು. ನಂತರ ಅರ್ಬಾಜ್ ಖಾನ್ ಮೇಕಪ್ ಆರ್ಟಿಸ್ಟ್ ಶುರಾ ಕಾನ್ ಅವರನ್ನು ಮದುವೆಯಾದರು. ಮಲೈಕಾ ಅರೋರಾ ಅವರು ಮಾತ್ರ ವರ್ಷಗಳಿಂದ ನಟ ಅರ್ಜುನ್ ಕಪೂರ್ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ.

VISTARANEWS.COM


on

Salman Khan Ultimate Sex Symbol Says Malaika Arora
Koo

ಬೆಂಗಳೂರು: ಸಲ್ಮಾನ್ ಖಾನ್ (Salman Khan) ಅವರ ಮಾಜಿ ಅತ್ತಿಗೆ ಮಲೈಕಾ ಅರೋರಾ (Malaika Arora) ಅವರು ಬಾಲಿವುಡ್‌ನ ಹಾಟೆಸ್ಟ್ ಸ್ಟಾರ್‌ಗಳಲ್ಲಿ ಒಬ್ಬರೆಂದು ಪರಿಗಣಿಸಲಾಗಿದೆ. ಸಂದರ್ಶನವೊಂದರಲ್ಲಿ ʻʻಅರ್ಬಾಜ್ ಖಾನ್ ನನ್ನ ಪಾಲಿಗೆ ಪರ್ಮನೆಂಟ್ ಗಂಡ. ಆದರೆ ಸಲ್ಮಾನ್ ಖಾನ್ ಬಾಲಿವುಡ್‌ನಲ್ಲಿ ಅಲ್ಟಿಮೇಟ್ ಸೆಕ್ಸ್ ಸಿಂಬಲ್ʼʼಎಂದು ಹೇಳಿಕೊಂಡಿದ್ದಾರೆ.

ಇದೀಗ ಮಲೈಕಾ ಅವರ ಹಳೆಯ ಸಂದರ್ಶನದ ವಿಡಿಯೊ ವೈರಲ್‌ ಆಗುತ್ತಿದೆ. ʻʻಭಾರತದ ಪ್ರಮುಖ ಸೆಕ್ಸ್‌ ಸಿಂಬಾಲ್‌ ಪುರುಷ ಯಾರು?ʼʼ ಎಂಬ ಪ್ರಶ್ನೆಗೆ ಉತ್ತರಿಸಿದ ಮಲೈಕಾ, “ನಾನು ನಿಸ್ಸಂದೇಹವಾಗಿ ಸಲ್ಮಾನ್ ಖಾನ್ ಎಂದು ಭಾವಿಸುತ್ತೇನೆʼʼ ಎಂದು ಹೇಳಿದ್ದಾರೆ.

“ನನಗೆ, ಅರ್ಬಾಜ್ ನನ್ನ ಪಾಲಿಗೆ ಶಾಶ್ವತ ಗಂಡಸು (Arbaaz is my eternal man). ಇಲ್ಲಿಯವರೆಗೆ, ನಾವು ನಿಶ್ಚಿತಾರ್ಥ ಅಷ್ಟೇ ಮಾಡಿಕೊಂಡಿದ್ದೇವೆ ಎಂದು ಅನ್ನಿಸುತ್ತದೆ. ನಾವು ಮದುವೆಯಾಗಿದ್ದೇವೆ. ಮಗುವನ್ನು ಹೊಂದಿದ್ದೇವೆ ಎಂದು ನನಗೆ ಈಗಲೂ ಅನಿಸುವುದಿಲ್ಲ. ಆದರೆ ಸಲ್ಮಾನ್ ಖಾನ್ ಭಾರತದ ಅಲ್ಟಿಮೇಟ್ ಸೆಕ್ಸ್ ಸಿಂಬಲ್ ವ್ಯಕ್ತಿ ಎಂದು ನಾನು ಭಾವಿಸುತ್ತೇನೆʼʼ ಎಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: Salman Khan: ಸಲ್ಮಾನ್‌ ಖಾನ್‌ ಮನೆ ಎದುರು ಫೈರಿಂಗ್‌ ಕೇಸ್‌; 6ನೇ ಆರೋಪಿಯ ಬಂಧನ

Malaika arora reveal male sex symbol in the country in old zoom tv interview
byu/Sea-Fix691 inBollyBlindsNGossip

ಅರ್ಹಾನ್ ಖಾನ್ ಮಲೈಕಾ ಅರೋರಾ ಮತ್ತು ಅರ್ಬಾಜ್ ಖಾನ್ ಅವರ ಏಕೈಕ ಪುತ್ರ, ಈತ 2002ರಲ್ಲಿ ಜನಿಸಿದ್ದ. ಅರ್ಬಾಜ್ ಖಾನ್ – ಮಲೈಕಾ ಅರೋರಾ ಅವರು ವಿವಾಹವಾಗಿ 19 ವರ್ಷಗಳ ಕಾಲ ಜೊತೆಗಿದ್ದರು. ನಂತರ 2016ರಲ್ಲಿ ಬೇರ್ಪಟ್ಟು 2017ರಲ್ಲಿ ಅಧಿಕೃತವಾಗಿ ವಿಚ್ಛೇದನ ಪಡೆದುಕೊಂಡರು. ನಂತರ ಅರ್ಬಾಜ್ ಖಾನ್ ಮೇಕಪ್ ಆರ್ಟಿಸ್ಟ್ ಶುರಾ ಖಾನ್ ಅವರನ್ನು ಮದುವೆಯಾದರು. ಮಲೈಕಾ ಅರೋರಾ ಅವರು ಮಾತ್ರ ವರ್ಷಗಳಿಂದ ತನಗಿಂತ ಕಿರಿಯ ನಟ ಅರ್ಜುನ್ ಕಪೂರ್ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ.

ನಟಿ ಮಲೈಕಾ ಅರೋರಾ (Malaika Arora) ಮತ್ತು ಅವರ ಮಾಜಿ ಪತಿ ಅರ್ಬಾಜ್ ಖಾನ್ ( Arbaaz Khan) ಅವರ ಮಗ ಅರ್ಹಾನ್ ಖಾನ್ ಅವರ ʻಪಾಡ್‌ಕಾಸ್ಟ್ ದಮ್ ಬಿರಿಯಾನಿʼಯ (‘Dumb Biryani’) ಎರಡನೇ ಸಂಚಿಕೆಯಲ್ಲಿ ನಟಿ ಈ ಹಿಂದೆ ಮಾಜಿ ಪತಿ ಅರ್ಬಾಜ್ ಖಾನ್‌ರಿಂದ ತನ್ನ ಮಗ ಯಾವ ಗುಣಗಳನ್ನು ಅನುವಂಶಿಕವಾಗಿ ಪಡೆದಿದ್ದಾನೆ ಎಂಬುದನ್ನು ಮಲೈಕಾ ಅರೋರಾ ಹೇಳಿದ್ದರು. ಮೊದಲಿಗೆ ಅರ್ಹಾನ್ ಮಲೈಕಾಗೆ ತಂದೆ ಅರ್ಬಾಜ್‌ ಅವರ ಕೆಲವು ಗುಣಗಳ ಬಗ್ಗೆ ಕೇಳಿದರು. ಅದಕ್ಕೆ ಮಲೈಕಾ ಉತ್ತರಿಸಿ ʻʻನಿನ್ನ ಮ್ಯಾನರಿಸಂ ನಿನ್ನ ತಂದೆಯಂತೆಯೇ ಇದೆ. ಇಬ್ಬರೂ ನಡುವೆ ಹಲವು ವಿಚಾರಗಳಿಗೆ ಹೋಲಿಕೆ ಇದೆ. ಅರ್ಬಾಜ್ ಅವರ ಮ್ಯಾನರಿಸಂ ಅಷ್ಟಾಗಿ ಅಟ್ರ್ಯಾಕ್ಟಿವ್‌ ಆಗಿಲ್ಲʼʼ ಎಂದಿದ್ದರು.

ಮಲೈಕಾ ಮಾತು ಮುಂದುವರಿಸಿ ʻʻಅರ್ಬಾಜ್ ನ್ಯಾಯಯುತ ವ್ಯಕ್ತಿ. ಅವರು ಎಂದಿಗೂ ವಿಷಯಗಳ ಬಗ್ಗೆ ಅತಿಯಾಗಿ ಯೋಚಿಸಲು ಹೋಗುವುದಿಲ್ಲ, ಕೆಲವು ವಿಷಯಗಳ ಬಗ್ಗೆ ತುಂಬಾ ಸ್ಪಷ್ಟವಾಗಿರುತ್ತಾರೆ. ಆ ಗುಣ ನಿನ್ನಲ್ಲಿ ಕೂಡ ಇದೆʼʼ ಎಂದಿದ್ದರು.

Continue Reading
Advertisement
Prajwal Revanna Case
ಕರ್ನಾಟಕ5 hours ago

Prajwal Revanna Case: ಪ್ರಜ್ವಲ್ ರೇವಣ್ಣ ಪಾಸ್‌ ಪೋರ್ಟ್ ರದ್ದು ಮಾಡಲು ವಿದೇಶಾಂಗ ಇಲಾಖೆಗೆ ಎಸ್‌ಐಟಿ ಪತ್ರ

Mobile
ದೇಶ5 hours ago

ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೊ ನೋಡಿ 15 ವರ್ಷದ ಅಕ್ಕನನ್ನೇ ಗರ್ಭಿಣಿ ಮಾಡಿದ 13 ವರ್ಷದ ಬಾಲಕ!

Army Officer
Lok Sabha Election 20245 hours ago

101ನೇ ವಯಸ್ಸಿನಲ್ಲೂ ‘ಕರ್ತವ್ಯ’ ಮರೆಯದೆ ವೋಟ್‌ ಮಾಡಿದ ನಿವೃತ್ತ ಯೋಧ; ಸೆಲ್ಯೂಟ್‌ ಎಂದರು ಜನ

Congress Guarantee
ಪ್ರಮುಖ ಸುದ್ದಿ5 hours ago

Congress Guarantee: ಗ್ಯಾರಂಟಿ ಯೋಜನೆಗಳಿಗೆ ಒಂದು ವರ್ಷಕ್ಕೆ ಸರ್ಕಾರ ಮಾಡಿದ ಖರ್ಚು ಎಷ್ಟು ಸಾವಿರ ಕೋಟಿ?

Malaysia Masters
ಕ್ರೀಡೆ6 hours ago

Malaysia Masters: ವಿಶ್ರಾಂತಿ ಬಳಿಕ ಮಲೇಷ್ಯಾ ಮಾಸ್ಟರ್ಸ್​ನಲ್ಲಿ ಕಣಕ್ಕಿಳಿಯಲು ಸಜ್ಜಾದ ಸಿಂಧು

Rahul Gandhi
ದೇಶ6 hours ago

Rahul Gandhi: ರಾಯ್‌ಬರೇಲಿಯಲ್ಲಿ ಜನ ಜೈ ಶ್ರೀರಾಮ್‌ ಎನ್ನುತ್ತಲೇ ಕಾಲ್ಕಿತ್ತ ರಾಹುಲ್‌ ಗಾಂಧಿ! Video ಇದೆ

MS Dhoni Bike Riding
ಕ್ರೀಡೆ7 hours ago

MS Dhoni Bike Riding: ಐಪಿಎಲ್​ ಮುಗಿಸಿ ತವರಿಗೆ ಮರಳಿದ್ದೇ ತಡ, ಬೈಕ್ ರೈಡಿಂಗ್​ ಮಾಡಿದ ಧೋನಿ​

Self Harming
ಕರ್ನಾಟಕ7 hours ago

Self Harming: ಟಿಸಿ ಕೊಟ್ಟಿಲ್ಲವೆಂದು ಬೇಸರಗೊಂಡು ವಿದ್ಯಾರ್ಥಿ ಆತ್ಮಹತ್ಯೆ

AAP Funds
ದೇಶ7 hours ago

AAP Funds: ನಿಯಮ ಉಲ್ಲಂಘಿಸಿ ಬೇರೆ ದೇಶಗಳಿಂದ ಆಪ್‌ 7 ಕೋಟಿ ರೂ. ದೇಣಿಗೆ ಸ್ವೀಕಾರ; ಇ.ಡಿ ಸ್ಫೋಟಕ ಮಾಹಿತಿ!

Karnataka weather Forecast
ಕರ್ನಾಟಕ7 hours ago

Coastal Weather: ದಕ್ಷಿಣ ಕನ್ನಡ, ಉಡುಪಿಯಲ್ಲಿ ಎರಡು ದಿನ ಭಾರೀ ಮಳೆ ಸಾಧ್ಯತೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ15 hours ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ2 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ3 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ5 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು5 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌