BJP Meeting | ಬಿಜೆಪಿ ಕಾರ್ಯಕಾರಿಣಿ; 2024ರ ಲೋಕಸಭೆ, 9 ವಿಧಾನಸಭೆ ಚುನಾವಣೆಗೆ ಪಕ್ಷ ರಣತಂತ್ರ, ರವಿಶಂಕರ್‌ ಪ್ರಸಾದ್ ಮಾಹಿತಿ - Vistara News

ದೇಶ

BJP Meeting | ಬಿಜೆಪಿ ಕಾರ್ಯಕಾರಿಣಿ; 2024ರ ಲೋಕಸಭೆ, 9 ವಿಧಾನಸಭೆ ಚುನಾವಣೆಗೆ ಪಕ್ಷ ರಣತಂತ್ರ, ರವಿಶಂಕರ್‌ ಪ್ರಸಾದ್ ಮಾಹಿತಿ

ಲೋಕಸಭೆ ಹಾಗೂ ಸಾಲು ಸಾಲು ವಿಧಾನಸಭೆ ಚುನಾವಣೆಗಳ ಕುರಿತು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ (BJP Meeting) ಚರ್ಚಿಸಲಾಗಿದೆ ಎಂದು ಪಕ್ಷದ ನಾಯಕ ರವಿಶಂಕರ್‌ ಪ್ರಸಾದ್‌ ಮಾಹಿತಿ ನೀಡಿದರು.

VISTARANEWS.COM


on

BJP National Executive Meeting
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆ ಹಾಗೂ ಪ್ರಸಕ್ತ ವರ್ಷದಲ್ಲಿ ನಡೆಯುವ 9 ವಿಧಾನಸಭೆ ಚುನಾವಣೆಗಳಿಗೆ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ (BJP Meeting) ಕಮಲ ಪಾಳಯವು ರಣತಂತ್ರ ರೂಪಿಸಿದೆ. ಪ್ರಧಾನಿ ನರೇಂದ್ರ ಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿ ಹಲವರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಚುನಾವಣೆಗಳಿಗೆ ಸಂಪೂರ್ಣ ಸಿದ್ಧತೆ ಕೈಗೊಳ್ಳುವ ಚರ್ಚೆ ನಡೆದಿದೆ.

ಕಾರ್ಯಕಾರಿಣಿ ಕುರಿತು ಸುದ್ದಿಗೋಷ್ಠಿ ನಡೆಸಿದ ಪಕ್ಷದ ನಾಯಕ ನಾಯಕ ರವಿಶಂಕರ್‌ ಪ್ರಸಾದ್‌, “ಲೋಕಸಭೆ ಚುನಾವಣೆ ದೃಷ್ಟಿಯಿಂದ 2023ನೇ ಇಸವಿಯು ನಮಗೆ ಪ್ರಮುಖವಾಗಿದೆ. ಲೋಕಸಭೆ ಚುನಾವಣೆ ಹಾಗೂ 9 ರಾಜ್ಯಗಳ ವಿಧಾನಸಭೆ ಚುನಾವಣೆಗಳ ಕುರಿತು ಕಾರ್ಯಕಾರಿಣಿಯಲ್ಲಿ ಚರ್ಚಿಸಲಾಗಿದೆ. ಒಂದೇ ಒಂದು ಚುನಾವಣೆಯಲ್ಲಿ ಸೋಲು ಕಾಣಬಾರದು. ಈ ದಿಸೆಯಲ್ಲಿ ಕಾರ್ಯನಿರ್ವಹಿಸಲು ಸೂಚಿಸಲಾಗಿದೆ” ಎಂದರು.

1.3 ಲಕ್ಷ ಬೂತ್‌ ಗುರುತು
ಪಕ್ಷವನ್ನು ಸ್ಥಳೀಯ ಮಟ್ಟದಿಂದಲೇ ಬಲಿಷ್ಠಗೊಳಿಸುವ ದಿಸೆಯಲ್ಲಿ ಚರ್ಚಿಸಲಾಗಿದೆ. “ದೇಶಾದ್ಯಂತ 1.3 ಲಕ್ಷ ಬೂತ್‌ಗಳಲ್ಲಿ ಪಕ್ಷದ ಸಂಘಟನೆ ದುರ್ಬಲವಾಗಿದೆ. ಹಾಗಾಗಿ, ಗುರುತಿಸಿದ ಇಷ್ಟೂ ಬೂತ್‌ಗಳಲ್ಲಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವ ಕುರಿತು ಚರ್ಚಿಸಲಾಗಿದೆ” ಎಂದು ಮಾಹಿತಿ ನೀಡಿದರು.

ಚುನಾವಣೆಗಳ ಅವಲೋಕನ
“ಇತ್ತೀಚೆಗೆ ಮುಕ್ತಾಯಗೊಂಡ ವಿಧಾನಸಭೆ ಚುನಾವಣೆಗಳ ಕುರಿತು ಸಹ ಕಾರ್ಯಕಾರಿಣಿಯಲ್ಲಿ ಅವಲೋಕನ ಮಾಡಿಕೊಳ್ಳಲಾಯಿತು. ಗುಜರಾತ್‌ನಲ್ಲಿ ಬಿಜೆಪಿಯ ಅಭೂತಪೂರ್ವ ಗೆಲುವು ಹಾಗೂ ಹಿಮಾಚಲ ಪ್ರದೇಶದಲ್ಲಿ ಉಂಟಾದ ಹಿನ್ನಡೆ, ಮುಂದಿನ ದಿನಗಳಲ್ಲಿ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲಾಯಿತು” ಎಂದರು.

ಇದನ್ನೂ ಓದಿ | BJP Meeting | ಕಾರ್ಯಕಾರಿಣಿಯಲ್ಲಿ ಭಾಗವಹಿಸುವವರಿಗೆ ಮೋದಿ ಇಷ್ಟದ ತಿನಿಸು, ಮೈಸೂರು ಪಾಕ್‌, ಜೋಳದ ರೊಟ್ಟಿ ಭೋಜನ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Swati Maliwal assault case : ಕೇಜ್ರಿವಾಲ್ ಆಪ್ತ ಬಿಭವ್​ ಕುಮಾರ್ ಮೂರು ದಿನ ಪೊಲೀಸ್​ ಕಸ್ಟಡಿಗೆ

swati Maliwal assault case: ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಗೌರವ್ ಗೋಯಲ್ ಅವರು ಕುಮಾರ್ ಅವರನ್ನು ಮೇ 31 ರವರೆಗೆ ಪೊಲೀಸ್ ಕಸ್ಟಡಿಗೆ ಕಳುಹಿಸಿದ್ದಾರೆ. ದೆಹಲಿ ಪೊಲೀಸರು ಕುಮಾರ್ ಅವರನ್ನು ಐದು ದಿನಗಳ ಕಸ್ಟಡಿಗೆ ಕೋರಿದ್ದರು. ಆದಾಗ್ಯೂ, ಕುಮಾರ್ ಅವರ ಕಸ್ಟಡಿ ವಿಚಾರಣೆಯನ್ನು ವಕೀಲರು ವಿರೋಧಿಸಿದ್ದರು. ಇದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಹೇಳಿದರು.

VISTARANEWS.COM


on

swati Maliwal assault case:
Koo

ನವದೆಹಲಿ: ಎಎಪಿ ಸಂಸದೆ ಸ್ವಾತಿ ಮಲಿವಾಲ್ ಅವರ ಮೇಲೆ ಹಲ್ಲೆ ನಡೆಸಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಬಿಭವ್ ಕುಮಾರ್ ಅವರನ್ನು ದೆಹಲಿ ನ್ಯಾಯಾಲಯ ಮಂಗಳವಾರ ಮೂರು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಬಿಭವ್ ಸಿಎಂ ಅರವಿಂದ್​ ಕೇಜ್ರಿವಾಲ್ ಅವರ ಆಪ್ತ ಸಹಾಯಕ ಎಂದು ಹೇಳಲಾಗುತ್ತಿದೆ. ಮೇ 13 ರಂದು ಕೇಜ್ರಿವಾಲ್ ಅವರನ್ನು ಭೇಟಿಯಾಗಲು ಸ್ವಾತಿ ಮಲಿವಾಲ್ ಬಂದಿದ್ದಾಗ ಅವರ ಮೇಲೆ ಹಲ್ಲೆ ನಡೆಸಿದ್ದರು.

ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಗೌರವ್ ಗೋಯಲ್ ಅವರು ಕುಮಾರ್ ಅವರನ್ನು ಮೇ 31 ರವರೆಗೆ ಪೊಲೀಸ್ ಕಸ್ಟಡಿಗೆ ಕಳುಹಿಸಿದ್ದಾರೆ. ದೆಹಲಿ ಪೊಲೀಸರು ಕುಮಾರ್ ಅವರನ್ನು ಐದು ದಿನಗಳ ಕಸ್ಟಡಿಗೆ ಕೋರಿದ್ದರು. ಆದಾಗ್ಯೂ, ಕುಮಾರ್ ಅವರ ಕಸ್ಟಡಿ ವಿಚಾರಣೆಯನ್ನು ವಕೀಲರು ವಿರೋಧಿಸಿದ್ದರು. ಇದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಹೇಳಿದರು.

ಸೋಮವಾರ, ಕುಮಾರ್ ಅವರ ಜಾಮೀನು ಅರ್ಜಿಯನ್ನು ಸೆಷನ್ಸ್ ನ್ಯಾಯಾಲಯವು ವಜಾಗೊಳಿಸಿತ್ತು. ಜಾಮೀನು ಅರ್ಜಿ ತಿರಸ್ಕೃತಗೊಂಡ ನಂತರ, ನಗರ ನ್ಯಾಯಾಲಯದ ತೀರ್ಪಿನ ವಿರುದ್ಧ ಬಿಭವ್ ಕುಮಾರ್ ದೆಹಲಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಲಿದ್ದಾರೆ ಎಂದು ಆಮ್ ಆದ್ಮಿ ಪಕ್ಷ (ಎಎಪಿ) ತಿಳಿಸಿದೆ.

ವಿಚಾರಣೆಯ ಸಮಯದಲ್ಲಿ ಹಾಜರಾದ ಸ್ವಾತಿ ಮಲಿವಾಲ್ ಅವರು ತನಗೆ ಬೆದರಿಕೆಗಳು ಬರುತ್ತಿವೆ ಎಂದು ಜಾಮೀನು ಅರ್ಜಿಯನ್ನು ವಿರೋಧಿಸಿದರು. ವಿಚಾರಣೆ ವೇಳೆ ಅವರು ಕಣ್ಣೀರಿಟ್ಟಿದ್ದರು.

ಇದನ್ನೂ ಓದಿ: Child Trafficking Racket: ಅಂತಾರಾಜ್ಯ ಮಕ್ಕಳ ಕಳ್ಳಸಾಗಣೆ ದಂಧೆ ಪತ್ತೆ; 11 ಮಕ್ಕಳ ರಕ್ಷಣೆ

ಆರೋಪಿಗಳ ಪರವಾಗಿ ಹಾಜರಾದ ವಕೀಲರು “ಇದು ಸಿಎಂ ಅವರ ಅಧಿಕೃತ ನಿವಾಸ. ಅತಿಕ್ರಮಣ ನಡೆದಿದೆ ಮತ್ತು ವರದಿಯನ್ನು ಸಲ್ಲಿಸಲಾಗಿದೆ. ಮಾಲಿವಾಲ್​ಗೆ ಆ ಸಭೆಗೆ ಬರಲು ಆಹ್ವಾನ ಹಾಗೂ ನಿಗದಿತ ಸಮಯ ಇರಲಿಲ್ಲ ಎಂದು ವಾದಿಸಿದ್ದಾರೆ.

ಕುಮಾರ್ ಅವರನ್ನು ಮೇ 18ರಂದು ಬಂಧಿಸಲಾಗಿತ್ತು. ಬಂಧನದಿಂದಾಗಿ ಅವರ ನಿರೀಕ್ಷಣಾ ಜಾಮೀನು ಅರ್ಜಿ ನಿಷ್ಪ್ರಯೋಜಕ ನಿರ್ಧರಿಸಿದ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಅದೇ ದಿನ ಅವರನ್ನು ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಕಳುಹಿಸಿತ್ತು. ಕಳೆದ ಶುಕ್ರವಾರ ಅವರನ್ನು ನಾಲ್ಕು ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿತ್ತು.

ಕುಮಾರ್ ವಿರುದ್ಧ ಮೇ 16 ರಂದು ವಿವಿಧ ಭಾರತೀಯ ದಂಡ ಸಂಹಿತೆಯ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಕ್ರಿಮಿನಲ್ ಬೆದರಿಕೆ, ಹಲ್ಲೆ ಅಥವಾ ಮಹಿಳೆಯ ಮೇಲೆ ಬಲಪ್ರಯೋಗ ಕೇಸುಗಳು ದಾಖಲಾಗಿವೆ.

Continue Reading

ಪ್ರಮುಖ ಸುದ್ದಿ

Child Trafficking Racket: ಅಂತಾರಾಜ್ಯ ಮಕ್ಕಳ ಕಳ್ಳಸಾಗಣೆ ದಂಧೆ ಪತ್ತೆ; 11 ಮಕ್ಕಳ ರಕ್ಷಣೆ

Child Trafficking Racket:

VISTARANEWS.COM


on

Child Trafficking Racket
Koo

ಹೈದರಾಬಾದ್: ಅಂತಾರಾಜ್ಯ ಮಕ್ಕಳ ಕಳ್ಳಸಾಗಣೆ (Child Trafficking Racket) ಜಾಲವೊಂದನ್ನು ಭೇದಿಸಿದ ಹೈದರಾಬಾದ್ ಪೊಲೀಸರು 11ಮಕ್ಕಳನ್ನು ರಕ್ಷಿಸಿದ್ದಾರೆ. ಗ್ರೇಟರ್ ಹೈದರಾಬಾದ್​ನ ಪೊಲೀಸರು ಕಾರ್ಯಾಚರಣೆ ನಡೆಸಿದ ನಮ್ಮ ಮಕ್ಕಳು ಎಂದು ಹೇಳಿಕೊಂಡು ಸಾಗಣೆ ಮಾಡಲು ಯತ್ನಿಸುತ್ತಿದ್ದ ಹಲವರನ್ನು ಬಂಧಿಸಿದ್ದಾರೆ. ಆರೋಪಿಗಳು ಮಗುವನ್ನು 4.50 ಲಕ್ಷಕ್ಕೆ ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಮೇ 22 ರಂದು ಆರ್​ಎಂಪಿ ವೈದ್ಯೆಯೊಬ್ಬರನ್ನು ಮಕ್ಕಳ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿಸಲಾಗಿತ್ತು. ಈ ವೇಳೆ ಉಳಿದ ಆರೋಪಿಗಳ ಹೆಸರು ಬಹಿರಂಗಗೊಂಡಿದ್ದು ಅವರೆಲ್ಲರನ್ನೂ ಬಂಧಿಸಿ ಮಕ್ಕಳನ್ನು ರಕ್ಷಿಸಲಾಗಿದೆ.

ದೆಹಲಿ ಮತ್ತು ಪುಣೆಯ ಮೂವರು ಆರೋಪಿಗಳಿಂದ ಮಕ್ಕಳನ್ನು ಖರೀದಿಸಿದ ಎಂಟು ಮಹಿಳೆಯರು ಸೇರಿದಂತೆ 11 ಜನರನ್ನು ರಾಚಕೊಂಡ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಮೆಡಿಪಲ್ಲಿ ಪೊಲೀಸರು ಬಂಧಿಸಲಾಗಿದೆ. ಅವರು (ಮಕ್ಕಳನ್ನು) ಬಡ ಕುಟುಂಬಗಳಿಂದ 1.8 ಲಕ್ಷ ರೂಪಾಯಿಗೆ ಖರೀದಿ ಮಾಡುತ್ತಿದ್ದರು. ಬಳಿಕ 5.5 ಲಕ್ಷ ರೂ.ಗಳಿಗೆ ಮಾರಾಟ ಮಾಡುತ್ತಿದ್ದರು ಎಂದು ವರದಿಯಾಗಿದೆ. ಎರಡು ತಿಂಗಳಿನಿಂದ ಎರಡು ವರ್ಷದ 13 ಶಿಶುಗಳನ್ನು ರಕ್ಷಿಸಲಾಗಿದ್ದು, ವೈದ್ಯರು ಸೇರಿದಂತೆ 11 ಜನರನ್ನು ಬಂಧಿಸಲಾಗಿದೆ ಎಂದು ರಾಚಕೊಂಡ ಪೊಲೀಸ್ ಆಯುಕ್ತ ತರುಣ್ ಜೋಶಿ ತಿಳಿಸಿದ್ದಾರೆ.

ಬಂಧಿತರೆಲ್ಲರೂ ತೆಲಂಗಾಣ ಮತ್ತು ನೆರೆಯ ಆಂಧ್ರಪ್ರದೇಶದ ನಿವಾಸಿಗಳು ಎಂದು ತಿಳಿದುಬಂದಿದೆ. ದೆಹಲಿ ಮತ್ತು ಪುಣೆಯ ಮೂವರು ವ್ಯಕ್ತಿಗಳು ಶಿಶುಗಳನ್ನು ಅವರಿಗೆ ಸರಬರಾಜು ಮಾಡುತ್ತಿದ್ದರು ಎಂದು ಅವರ ವಿಚಾರಣೆಯಿಂದ ತಿಳಿದುಬಂದಿದೆ.

ಇದನ್ನೂ ಓದಿ: Harish Poonja: ಪೊಲೀಸರಿಗೆ ಧಮ್ಕಿ ಪ್ರಕರಣ; ಶಾಸಕ ಹರೀಶ್‌ ಪೂಂಜಾ, 40 ಮಂದಿ ವಿರುದ್ಧ ಚಾರ್ಜ್‌ಶೀಟ್‌

ದೆಹಲಿ ಮತ್ತು ಪುಣೆಯಿಂದ ಕರೆತಂದ ಮಕ್ಕಳನ್ನು ಕೆಲವರು ಅಕ್ರಮವಾಗಿ ಸಾಗಿಸಿ ವಿಜಯವಾಡ ಮತ್ತು ಹೈದರಾಬಾದ್​ನಲ್ಲಿ ಮಾರಾಟ ಮಾಡುತ್ತಿದ್ದರು. ದತ್ತು ಸ್ವೀಕಾರಕ್ಕಾಗಿ ಕಾಯಲು ಬಯಸದ ದಂಪತಿಗಳು ಅವರಿಂದ ಮಕ್ಕಳನ್ನು ಖರೀದಿಸುತ್ತಿದ್ದರು. ಅವರಿಗೆ 5-4 ಲಕ್ಷ ರೂ.ಗಳನ್ನು ಪಾವತಿಸುತ್ತಿದ್ದರು ” ಎಂದು ಹಿರಿಯ ಪೊಲೀಸ್ ಅಧಿಕಾರಿ ಹೇಳಿದರು.

ರಕ್ಷಿಸಲಾದ ಮಕ್ಕಳು ಒಂದು ತಿಂಗಳಿನಿಂದ ಎರಡೂವರೆ ತಿಂಗಳ ವಯಸ್ಸಿನವರಾಗಿದ್ದಾರೆ. ಅವರಲ್ಲಿ ಒಂಬತ್ತು ಹೆಣ್ಣು ಮಕ್ಕಳು ಮತ್ತು ಉಳಿದ ಇಬ್ಬರು ಗಂಡು ಮಕ್ಕಳು. ಅವರ ಮೂಲ ಪೋಷಕರು ಪತ್ತೆಯಾಗುವವರೆಗೂ ಅವರನ್ನು ಮಕ್ಕಳ ಕಲ್ಯಾಣ ಇಲಾಖೆಗೆ ಹಸ್ತಾಂತರಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

“ನಾವು ಆರ್​ಎಂಪಿ ವೈದ್ಯರಿಂದ ಮಗುವನ್ನು ಖರೀದಿಸಿದ್ದೇವೆ. ಆಕೆಯ ಹೆಸರು ಶೋಭಾರಾಣಿ. ಮಗುವಿಗೆ ₹ 4 ಲಕ್ಷ ನೀಡುವಂತೆ ಒತ್ತಾಯಿಸಿದ್ದರು. ನಾವು ನಾಲ್ಕು ಲಕ್ಷ ಕೊಟ್ಟು ಮಗುವನ್ನು ತೆಗೆದುಕೊಂಡೆವು. ಪೋಷಕರು ತುಂಬಾ ಬಡವರು ಎಂದು ಅವಳು ನಮಗೆ ಹೇಳಿದ್ದರು. ಆದ್ದರಿಂದ ನಾವು ಕಳೆದ 1 ವರ್ಷದಿಂದ ಮಗುವನ್ನು ನೋಡಿಕೊಂಡಿದ್ದೇವೆ. ನಿಜವಾದ ಪೋಷಕರು ಕಂಡುಬಂದರೆ, ನಾವು ಮಗುವನ್ನು ಬಿಟ್ಟುಕೊಡಲು ಸಿದ್ಧರಿದ್ದೇವೆ” ಎಂದು ಪೋಷಕರೊಬ್ಬರು ಹೇಳಿದ್ದಾರೆ.

Continue Reading

ಪ್ರಮುಖ ಸುದ್ದಿ

Lok Sabha Election : ಲವ್​ ಜಿಹಾದ್ ಶುರುವಾಗಿದ್ದೇ ಜಾರ್ಖಂಡ್​ನಿಂದ; ಜೆಎಮ್​ಎಮ್​ ವಿರುದ್ಧ ಮೋದಿ ಗಂಭೀರ ಆರೋಪ

lok sabha Election : ಜಾರ್ಖಂಡ್ ರಾಜ್ಯದಲ್ಲಿ ಹಣದ ಶಿಖರಗಳು ನಿರ್ಮಾಣಗೊಂಡಿವೆ. ಜೆಎಂಎಂ-ಕಾಂಗ್ರೆಸ್ ವ್ಯಾಪಕ ಲೂಟಿಯಲ್ಲಿ ತೊಡಗಿದೆ ಎಂದು ಹೇಳಿದರು. ಜೂನ್ 4 ರ ನಂತರ ತಮ್ಮ ನೇತೃತ್ವದ ನೂತನ ಕೇಂದ್ರ ಸರ್ಕಾರ ಭ್ರಷ್ಟಾಚಾರದ ವಿರುದ್ಧ ತನ್ನ ಕ್ರಮ ತೀವ್ರಗೊಳಿಸುತ್ತದೆ ಎಂದು ನರೇಂದ್ರ ಮೋದಿ ಪ್ರತಿಜ್ಞೆ ಮಾಡಿದರು.

VISTARANEWS.COM


on

Lok Sabha Election
Koo

ರಾಂಚಿ: ಲೋಕ ಸಭಾ ಚುನಾವಣೆ (Lok Sabha Election) ಕೊನೇ ಹಂತದ ಮತದಾದನ ಹಿನ್ನೆಲೆಯಲ್ಲಿ ಜಾರ್ಖಂಡ್​ನಲ್ಲಿ ಪ್ರಚಾರ ಸಭೆಗಳನ್ನು ಆಯೋಜಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಅಲ್ಲಿನ ಆಡಳಿತಾರೂಢ ಜಾರ್ಖಂಡ್​ ಮುಕ್ತಿ ಮೋರ್ಚಾದ (ಜೆಎಮ್​ಎಮ್​) ವಿರುದ್ಧ ಹಲವಾರು ಆರೋಪಗಳನ್ನು ಮಾಡಿದರು. ಜಾರ್ಖಂಡ್​ನ ದುಮ್ಕಾದಲ್ಲಿ ಮಂಗಳವಾರ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಹಿಂದೂ ಧರ್ಮಕ್ಕೆ ಅಪಾಯಕಾರಿಯಾಗಿ ಪರಿಣಮಿಸಿರುವ ‘ಲವ್ ಜಿಹಾದ್’ ಆರಂಭಗೊಂಡಿರುವುದೇ ಜಾರ್ಖಂಡ್​ನಿಂದ ಎಂದು ಹೇಳಿಕೆ ನೀಡಿದ್ದಾರೆ.

ಜೆಎಂಎಂ ನಿರಂತರವಾಗಿ ಕೋಮುವಾದಿ ರಾಜಕೀಯದಲ್ಲಿ ತೊಡಗಿದೆ ಎಂದು ಆರೋಪಿಸಿದ ಮೋದಿ, ಜಾರ್ಖಂಡ್​ ನ ಒಂದು ಜಿಲ್ಲೆಯಲ್ಲಿ ಭಾನುವಾರದ ಸಾಂಪ್ರದಾಯಿಕ ರಜಾದಿನವನ್ನು ಶುಕ್ರವಾರಕ್ಕೆ ಬದಲಾಯಿಸಲಾಗಿದೆ ಎಂದು ಹೇಳಿದರು. ವಾಸ್ತವದಲ್ಲಿ ಭಾನುವಾರ ಹಿಂದೂಗಳಿಗೆ ಸಂಬಂಧಿಸಿದ್ದಲ್ಲ ಕ್ರಿಶ್ಚಿಯನ್ ಸಮುದಾಯಕ್ಕೆ ಸಂಬಂಧಿಸಿದೆ. 200-300 ವರ್ಷಗಳಿಂದ ರಜಾದಿನವಾಗಿ ಪರಿಗಣಿಸಲಾಗಿದೆ. ಈಗ ಅದನ್ನು ಶುಕ್ರವಾರಕ್ಕೆ ಬದಲಾಯಿಸಲಾಗಿದೆ ಎಂದು ಮೋದಿ ಆರೋಪಿಸಿದ್ದಾರೆ.

ಲೂಟಿ ಆರೋಪಗಳು

ರ್ಯಾಲಿಯಲ್ಲಿ ಮಾತನಾಡಿದ ಮೋದಿ, ಜೆಎಂಎಂ ಮತ್ತು ಕಾಂಗ್ರೆಸ್ ಮಿತಿಮೀರಿದ ಲೂಟಿಯಲ್ಲಿ ತೊಡಗಿವೆ ಎಂದು ಆರೋಪಿಸಿದರು, ಜಾರ್ಖಂಡ್ ರಾಜ್ಯದಲ್ಲಿ ಹಣದ ಶಿಖರಗಳು ನಿರ್ಮಾಣಗೊಂಡಿವೆ. ಜೆಎಂಎಂ-ಕಾಂಗ್ರೆಸ್ ವ್ಯಾಪಕ ಲೂಟಿಯಲ್ಲಿ ತೊಡಗಿದೆ ಎಂದು ಹೇಳಿದರು. ಜೂನ್ 4 ರ ನಂತರ ತಮ್ಮ ನೇತೃತ್ವದ ನೂತನ ಕೇಂದ್ರ ಸರ್ಕಾರ ಭ್ರಷ್ಟಾಚಾರದ ವಿರುದ್ಧ ತನ್ನ ಕ್ರಮ ತೀವ್ರಗೊಳಿಸುತ್ತದೆ ಎಂದು ಅವರು ಪ್ರತಿಜ್ಞೆ ಮಾಡಿದರು.

ಇದನ್ನೂ ಓದಿ: Lok Sabha Election : ಕನ್ಯಾಕುಮಾರಿಯಲ್ಲಿ 48 ಗಂಟೆಗಳ ಕಾಲ ಧ್ಯಾನ ಮಾಡಲಿದ್ದಾರೆ ಮೋದಿ

2014ಕ್ಕೂ ಮೊದಲು ಕಾಂಗ್ರೆಸ್ ದಿನದ 24 ಗಂಟೆಯೂ ಲೂಟಿಯಲ್ಲಿ ತೊಡಗಿದ್ದರಿಂದ ಹಗರಣಗಳು ಸಾಮಾನ್ಯವಾಗಿದ್ದವು, ಆದರೆ ತಾವು ಅಧಿಕಾರಕ್ಕೆ ಬಂದ ನಂತರ ಅದನ್ನು ನಿಲ್ಲಿಸಿಸಲಾಯಿತು ಎಂದು ಹೇಳಿದರು

ನುಸುಳುಕೋರರ ಸಮಸ್ಯೆ

ಒಳನುಸುಳುವಿಕೆಯಿಂದಾಗಿ ಸಂತಾಲ್ ಪರಗಣಗಳಲ್ಲಿ ಬುಡಕಟ್ಟು ಜನಸಂಖ್ಯೆ ಕಡಿಮೆಯಾಗುತ್ತಿದೆ ಎಂದು ಮೋದಿ ಆರೋಪಿಸಿದರು. ಜಾರ್ಖಂಡ್​ನಲ್ಲಿ ಆಡಳಿತಾರೂಢ ಜೆಎಂಎಂ ನೇತೃತ್ವದ ಮೈತ್ರಿಕೂಟವು “ನುಸುಳುಕೋರರನ್ನು ಪೋಷಿಸುತ್ತಿದೆ” ಎಂದು ಅವರು ಆರೋಪಿಸಿದರು. ಬುಡಕಟ್ಟು ಜನರ ಭೂಮಿಯನ್ನು ನುಸುಳುಕೋರರು ವಶಪಡಿಸಿಕೊಳ್ಳುತ್ತಿದ್ದಾರೆ. ಅವರು ಮಹಿಳೆಯರಿಗೆ ಅಪಾಯವನ್ನುಂಟು ಮಾಡುತ್ತಿದ್ದಾರೆ” ಎಂದು ಆರೋಪಿಸಿದರು.

“ಜಾರ್ಖಂಡ್​ನಲ್ಲಿ ದೊಡ್ಡ ಬಿಕ್ಕಟ್ಟು ತಲೆದೋರಿದೆ. ಅದುವೇ ಒಳನುಸುಳುವಿಕೆ. ಸಂತಾಲ್ ಪರಗಣಗಳು ಒಳನುಸುಳುವಿಕೆಯ ಸವಾಲನ್ನು ಎದುರಿಸುತ್ತಿವೆ. ಅನೇಕ ಪ್ರದೇಶಗಳಲ್ಲಿ, ಬುಡಕಟ್ಟು ಜನರ ಜನಸಂಖ್ಯೆ ವೇಗವಾಗಿ ಕುಸಿಯುತ್ತಿದೆ ಮತ್ತು ಒಳನುಸುಳುವವರ ಸಂಖ್ಯೆ ಹೆಚ್ಚುತ್ತಿದೆ. ನುಸುಳುಕೋರರು ಬುಡಕಟ್ಟು ಜನರ ಭೂಮಿಯನ್ನು ಕಸಿದುಕೊಳ್ಳುತ್ತಿದ್ದಾರೆ. ಬುಡಕಟ್ಟು ಹೆಣ್ಣುಮಕ್ಕಳು ನುಸುಳುಕೋರರ ದಾಳಿಗೆ ಗುರಿಯಾಗಿದ್ದಾರೆ. ಅವರ ಭದ್ರತೆ ಮತ್ತು ಸುರಕ್ಷತೆ ಅಪಾಯದಲ್ಲಿದೆ. ಅವರ ಜೀವವೂ ಅಪಾಯದಲ್ಲಿದೆ” ಎಂದು ಅವರು ಹೇಳಿದರು.

2022 ರ ಘಟನೆಗಳನ್ನು ಉಲ್ಲೇಖಿಸಿದ ಮೋದಿ, “ಬುಡಕಟ್ಟು ಹೆಣ್ಣುಮಕ್ಕಳನ್ನು 50 ತುಂಡುಗಳಾಗಿ ಕತ್ತರಿಸಲಾಗುತ್ತಿದೆ. ಜೀವಂತವಾಗಿ ಸುಡಲಾಗುತ್ತಿದೆ ನಾಲಿಗೆಯನ್ನು ಹೊರತೆಗೆಯಲಾಗಿದೆ. ಬುಡಕಟ್ಟು ಹೆಣ್ಣುಮಕ್ಕಳನ್ನು ಗುರಿಯಾಗಿಸುತ್ತಿರುವ ಈ ಜನರು ಯಾರು? ಜೆಎಂಎಂ ಸರ್ಕಾರ ಅವರನ್ನು ಏಕೆ ಪೋಷಿಸುತ್ತಿದೆ ಎಂದು ಮೋದಿ ಪ್ರಶ್ನಿಸಿದರು. ಮುಂದಿನ ಐದು ವರ್ಷಗಳಲ್ಲಿ ದೇಶವು ಹಿಂದಿನ ದಶಕಕ್ಕಿಂತ ಹೆಚ್ಚಿನ ಅಭಿವೃದ್ಧಿಗೆ ಸಾಕ್ಷಿಯಾಗಲಿದೆ ಎಂದು ಅವರು ಭರವಸೆ ನೀಡಿದರು.

Continue Reading

ಉದ್ಯೋಗ

Job Alert: ಗುಡ್‌ನ್ಯೂಸ್‌; ರೈಲ್ವೆ ಇಲಾಖೆಯಲ್ಲಿದೆ 1,202 ಹುದ್ದೆ: ಐಟಿಐ ಪಾಸಾದವರೂ ಅಪ್ಲೈ ಮಾಡಿ

Job Alert: ರೈಲ್ವೆ ಇಲಾಖೆ ಖಾಲಿ ಇರುವ ವಿವಿಧ 1,202 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಗ್ನೇಯ ರೈಲ್ವೆಯ ನೇಮಕಾತಿ ಕೋಶ ಖಾಲಿ ಇರುವ ಲೋಕೋ ಪೈಲಟ್‌ ಮತ್ತು ಟ್ರೈನ್ಸ್‌ ಮ್ಯಾನೇಜರ್‌ ಹುದ್ದೆಗಳಿಗೆ ಎಸ್ಸೆಸ್ಸೆಲ್ಸಿ, ಪದವಿ ತೇರ್ಗಡೆಯಾದವರನ್ನು ನೇಮಿಸಿಕೊಳ್ಳುತ್ತಿದೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಜೂನ್‌ 12.

VISTARANEWS.COM


on

Job Alert
Koo

ನವದೆಹಲಿ: ಒಂದೊಳ್ಳೆ ಉದ್ಯೋಗ ಹೊಂದಬೇಕು ಎನ್ನುವುದು ಬಹುತೇಕರ ಕನಸು. ಅದರಲ್ಲಿಯೂ ಹೆಚ್ಚಿನ ಯುವ ಜನತೆ ಸರ್ಕಾರಿ ಕೆಲಸ ಪಡೆಯಬೇಕು ಎನ್ನುವ ಆಕಾಂಕ್ಷೆ ಹೊತ್ತಿರುತ್ತಾರೆ. ಅಂತಹವರಿಗೆ ಇಲ್ಲಿದೆ ಗೋಲ್ಡನ್‌ ಚಾನ್ಸ್‌. ರೈಲ್ವೆ ಇಲಾಖೆ ಖಾಲಿ ಇರುವ ವಿವಿಧ 1,202 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಗ್ನೇಯ ರೈಲ್ವೆಯ ನೇಮಕಾತಿ ಕೋಶ (South Eastern Railway Recruitment Cell) ಖಾಲಿ ಇರುವ ಲೋಕೋ ಪೈಲಟ್‌ ಮತ್ತು ಟ್ರೈನ್ಸ್‌ ಮ್ಯಾನೇಜರ್‌ ಹುದ್ದೆಗಳಿಗೆ ಎಸ್ಸೆಸ್ಸೆಲ್ಸಿ, ಐಟಿಐ, ಪದವಿ ತೇರ್ಗಡೆಯಾದವರನ್ನು ನೇಮಿಸಿಕೊಳ್ಳುತ್ತಿದೆ (RRC SER Recruitment 2024). ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಜೂನ್‌ 12 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಅಸಿಸ್ಟಂಟ್‌ ಲೋಕೋ ಪೈಲಟ್‌ – 827 ಮತ್ತು ಟ್ರೈನ್ಸ್‌ ಮ್ಯಾನೇಜರ್‌ (ಗೂಡ್ಸ್‌ ಗಾರ್ಡ್‌) – 375 ಹುದ್ದೆಗಳಿವೆ. ಅಸಿಸ್ಟಂಟ್‌ ಲೋಕೋ ಪೈಲಟ್‌ ಹುದ್ದೆಗೆ ಅರ್ಜಿ ಸಲ್ಲಿಸುವವರು ಎಸ್ಸೆಸ್ಸೆಲ್ಸಿ ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆ ಹೊಂದಿರಬೇಕು. ಜತೆಗೆ ಐಟಿಐ ಪಾಸ್‌ ಮಾಡಿರಬೇಕು ಅಥವಾ ಅಂಗೀಕೃತ ಸಂಸ್ಥೆಯಿಂದ ಎಂಜಿನಿಯರಿಂಗ್‌ನಲ್ಲಿ 3 ವರ್ಷದ ಡಿಪ್ಲೋಮಾ ವಿದ್ಯಾರ್ಹತೆ ಹೊಂದಿರಬೇಕು. ಇನ್ನು ಟ್ರೈನ್ಸ್‌ ಮ್ಯಾನೇಜರ್‌ (ಗೂಡ್ಸ್‌ ಗಾರ್ಡ್‌) ಹುದ್ದೆಗೆ ಅರ್ಜಿ ಸಲ್ಲಿಸುವವರು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು ಎಂದು ಪ್ರಕಟಣೆ ತಿಳಿಸಿದೆ.

ವಯೋಮಿತಿ ಮತ್ತು ಅರ್ಜಿ ಶುಲ್ಕ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 42 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ನಡಿಲಿಕೆ ಲಭ್ಯ. ಒಬಿಸಿ ವಿಭಾಗದ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಇದೆ. ಯಾರಿಗೂ ಅರ್ಜಿ ಶುಲ್ಕವಿಲ್ಲ.

ಆಯ್ಕೆ ವಿಧಾನ

ಲಿಖಿತ ಪರೀಕ್ಷೆ, ದಾಖಲಾತಿ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 5,200 ರೂ. – 20,200 ರೂ. ಮಾಸಿಕ ವೇತನ ದೊರೆಯಲಿದೆ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ನೀವು ಅರ್ಜಿ ಸಲ್ಲಿಸಬೇಕಾದ ಹುದ್ದೆಯನ್ನು ಆಯ್ಕೆ ಮಾಡಿ ಅದರ ಮೇಲೆ ಕ್ಲಿಕ್‌ ಮಾಡಿ (South Eastern Railway Trains Manager (Goods Guard) ಅಥವಾ South Eastern Railway Assistant Loco Pilot (ALP))
  • ಪುಟದ ಕೆಳಗಡೆ ಕಾಣಿಸುವ Apply Now ಬಟನ್‌ ಆಯ್ಕೆ ಮಾಡಿ.
  • ನಿಮ್ಮ ಇಮೇಲ್‌ ಐಡಿ, ಫೋನ್‌ ನಂಬರ್‌ ಬಳಸಿ ಹೆಸರು ನೋಂದಾಯಿಸಿ.
  • ರಿಜಿಸ್ಟರ್‌ ನಂಬರ್‌, ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
  • ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಿ. ಅಗತ್ಯ ದಾಖಲೆಗಳನ್ನು ಅಪ್‌ಲೋಡ್‌ ಮಾಡಿ.
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Sumbit ಬಟನ್‌ ಕ್ಲಿಕ್‌ ಮಾಡಿ.

ಇದನ್ನೂ ಓದಿ: UPSC: ಐಇಎಸ್‌ / ಐಎಸ್‌ಎಸ್‌ಇ 2024 ಪರೀಕ್ಷೆಯ ದಿನಾಂಕ ಪ್ರಕಟ: ಇಲ್ಲಿದೆ ವೇಳಾಪಟ್ಟಿ

Continue Reading
Advertisement
Mysore Vasudevacharya Memorial Music utsav Vidwat Sabha and award ceremony
ಮೈಸೂರು22 mins ago

Mysore News: ಮೈಸೂರಿನಲ್ಲಿ ಗಾಯಕ ಎಚ್ ಎಸ್ ನಾಗರಾಜ್ ಗೆ ಶ್ರೀ ವಾಸುದೇವಾಚಾರ್ಯ ಸಂಸ್ಮರಣಾ ಪ್ರಶಸ್ತಿ ಪ್ರದಾನ

swati Maliwal assault case:
ದೇಶ22 mins ago

Swati Maliwal assault case : ಕೇಜ್ರಿವಾಲ್ ಆಪ್ತ ಬಿಭವ್​ ಕುಮಾರ್ ಮೂರು ದಿನ ಪೊಲೀಸ್​ ಕಸ್ಟಡಿಗೆ

Gautam Gambhir
ಪ್ರಮುಖ ಸುದ್ದಿ37 mins ago

Gautam Gambhir : ಗೌತಮ್ ಗಂಭೀರ್ ಭಾರತ ತಂಡದ ಮುಂದಿನ ಕೋಚ್​; ಐಪಿಎಲ್​ ಫ್ರಾಂಚೈಸಿ ಮಾಲೀಕರಿಂದ ಬಹಿರಂಗ?

Namaz on Road
ದಕ್ಷಿಣ ಕನ್ನಡ41 mins ago

Namaz On Road: ಮಂಗಳೂರಿನ ರಸ್ತೆಯಲ್ಲಿ ನಮಾಜ್ ಮಾಡಿದವರ ವಿರುದ್ಧ ಎಫ್‌ಐಆರ್‌

Credit Card Safety Tips
ಮನಿ ಗೈಡ್49 mins ago

Credit Card Safety Tips: ಕ್ರೆಡಿಟ್‌ ಕಾರ್ಡ್ ವಂಚನೆಯಿಂದ ಪಾರಾಗಲು ಇಲ್ಲಿದೆ 9 ಸಲಹೆ

Karnataka weather Forecast
ಮಳೆ53 mins ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

Child Trafficking Racket
ಪ್ರಮುಖ ಸುದ್ದಿ1 hour ago

Child Trafficking Racket: ಅಂತಾರಾಜ್ಯ ಮಕ್ಕಳ ಕಳ್ಳಸಾಗಣೆ ದಂಧೆ ಪತ್ತೆ; 11 ಮಕ್ಕಳ ರಕ್ಷಣೆ

Prajwal Revanna Case
ಕರ್ನಾಟಕ1 hour ago

Prajwal Revanna Case: ಎರಡು ಎಫ್ಐಆರ್ ರದ್ದು ಕೋರಿ ಹೈಕೋರ್ಟ್‌ಗೆ ಎಚ್.ಡಿ.ರೇವಣ್ಣ ಅರ್ಜಿ

Summer Dress Fashion
ಫ್ಯಾಷನ್2 hours ago

Summer Dress Fashion: ಸೀಸನ್‌ ಎಂಡ್‌ ಫ್ಯಾಷನ್‌ಗೆ ಕಾಲಿಟ್ಟ ಸಮುದ್ರದ ಅಲೆ ಬಿಂಬಿಸುವ ವೆವಿ ಡ್ರೆಸ್‌!

Lok Sabha Election
ಪ್ರಮುಖ ಸುದ್ದಿ2 hours ago

Lok Sabha Election : ಲವ್​ ಜಿಹಾದ್ ಶುರುವಾಗಿದ್ದೇ ಜಾರ್ಖಂಡ್​ನಿಂದ; ಜೆಎಮ್​ಎಮ್​ ವಿರುದ್ಧ ಮೋದಿ ಗಂಭೀರ ಆರೋಪ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ53 mins ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು9 hours ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 day ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ2 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು2 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ6 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ7 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌