ವಿಸ್ತಾರ ಸಂಪಾದಕೀಯ | ಜಾಗತಿಕ ಚಿತ್ರಲೋಕದಲ್ಲಿ ದಕ್ಷಿಣದ ಖ್ಯಾತಿ ಹೆಮ್ಮೆಯ ಸಂಗತಿ - Vistara News

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ | ಜಾಗತಿಕ ಚಿತ್ರಲೋಕದಲ್ಲಿ ದಕ್ಷಿಣದ ಖ್ಯಾತಿ ಹೆಮ್ಮೆಯ ಸಂಗತಿ

ದಕ್ಷಿಣ ಭಾರತದ ಚಿತ್ರಗಳನ್ನು ಹಿಂದಿ ವಲಯದಲ್ಲಿ ತುಚ್ಛವಾಗಿ ಕಾಣಲಾಗುತ್ತಿತ್ತು. ಆದರೆ ಈಗ ಕನ್ನಡ, ತೆಲುಗು, ತಮಿಳು, ಮಲಯಾಳ ಚಿತ್ರಗಳ ಪ್ರತಿಭಾವಂತ ನಿರ್ದೇಶಕರು, ತಂತ್ರಜ್ಞರು, ಕಲಾವಿದರು ದೇಶ ಮಟ್ಟದಲ್ಲಿ ಮಾತ್ರವಲ್ಲ, ಜಾಗತಿಕ ಮಟ್ಟದಲ್ಲೂ ದಕ್ಷಿಣ ಭಾರತದ ಪ್ರಾದೇಶಿಕ ಭಾಷಾ ಚಿತ್ರಗಳ ಕೀರ್ತಿ ಪತಾಕೆ ಹಾರಿಸುತ್ತಿದ್ದಾರೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕನ್ನಡವೂ ಸೇರಿದಂತೆ ದಕ್ಷಿಣ ಭಾರತದ ಸಿನಿಮಾಗಳು ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡುತ್ತಿರುವುದು ಇತ್ತೀಚಿನ ಕೆಲವು ವರ್ಷಗಳಲ್ಲಿ ನಡೆಯುತ್ತಿರುವ ಸಂಗತಿ. ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿ ಸೇರಿದಂತೆ ಹಲವು ಪ್ರತಿಷ್ಠಿತ ಜಾಗತಿಕ ಪ್ರಶಸ್ತಿಗಳ ಸ್ಪರ್ಧೆಯಲ್ಲಿ ಕನ್ನಡದ ಕಾಂತಾರ, ತೆಲುಗಿನ ಆರ್‌ಆರ್‌ಆರ್‌ ಸೇರಿದಂತೆ ಹಲವು ಚಿತ್ರಗಳು ಸದ್ದು ಮಾಡುತ್ತಿವೆ.

ಆಸ್ಕರ್‌ನ ʼಅತ್ಯುತ್ತಮ ವಿದೇಶಿ ಚಿತ್ರʼ ವಿಭಾಗ ಮತ್ತು ʼಅತ್ಯುತ್ತಮ ನಟʼ ವಿಭಾಗಗಳ ಸ್ಪರ್ಧೆಗೆ ಕನ್ನಡಿಗ ರಿಷಭ್‌ ಶೆಟ್ಟಿ ನಟನೆ ಹಾಗೂ ನಿರ್ದೇಶನದ ಕಾಂತಾರ ಆಯ್ಕೆಯಾಗಿ ಜಾಗತಿಕ ಮನ್ನಣೆಗೆ ಪಾತ್ರವಾಗಿದೆ. ದೇಶವಿದೇಶಗಳ ಸಿನಿಮಾ ವಿಮರ್ಶಕರ ಮೆಚ್ಚುಗೆಗೆ ಅದು ಪಾತ್ರವಾಗಿದೆ. ಇನ್ನು ಎಸ್‌.ಎಸ್‌ ರಾಜಮೌಳಿ ನಿರ್ದೇಶನದ RRR ಕೂಡ ಜಾಗತಿಕ ಮಟ್ಟದ ಹಲವು ಪ್ರಶಸ್ತಿಗಳಿಗೆ ಪಾತ್ರವಾಗಿದೆ. ಅಮೆರಿಕದ ಪ್ರತಿಷ್ಠಿತ ಗೋಲ್ಡನ್‌ ಗ್ಲೋಬ್‌ ಪ್ರಶಸ್ತಿಯಲ್ಲಿ ʼಅತ್ಯುತ್ತಮ ಮೂಲ ಗೀತೆʼ ಗೌರವಕ್ಕೆ RRRನ ʼನಾಟು ನಾಟುʼ ಪ್ರಾಪ್ತವಾಗಿದೆ. ಕ್ರಿಟಿಕ್ಸ್‌ ಚಾಯ್ಸ್‌ ಅವಾರ್ಡ್‌ನಲ್ಲಿ ʼಅತ್ಯುತ್ತಮ ವಿದೇಶಿ ಚಿತ್ರʼ ಹಾಗೂ ʼಅತ್ಯುತ್ತಮ ಮೂಲ ಗೀತೆʼ ಪುರಸ್ಕಾರಗಳು ದೊರೆತಿವೆ. ಇದಲ್ಲದೇ ಇನ್ನೂ ಹಲವು ಗೌರವಗಳು ದೊರೆತಿದ್ದು, ಇದು ಕೂಡ ಆಸ್ಕರ್‌ಗೆ ಸ್ಪರ್ಧಿಸುತ್ತಿದೆ. ಇದರ ನಿರ್ದೇಶಕ ರಾಜಮೌಳಿ ಮೂಲತಃ ಕನ್ನಡಿಗರು ಎಂಬುದು ಅಭಿಮಾನದ ಸಂಗತಿ. ಟೈಟಾನಿಕ್, ಅವತಾರ್ ಖ್ಯಾತಿಯ ಜೇಮ್ಸ್ ಕ್ಯಾಮರೂನ್‌ರಂಥ ದೈತ್ಯ ನಿರ್ಮಾಪಕ, ನಿರ್ದೇಶಕ ದಕ್ಷಿಣ ಭಾರತದ ಚಿತ್ರರಂಗವನ್ನು ಹೊಗಳುತ್ತಿರುವುದು ಗಮನಾರ್ಹ.

ಒಂದು ಕಾಲದಲ್ಲಿ ಜಾಗತಿಕ ಮಟ್ಟದ ಪ್ರಶಸ್ತಿಗೆ ಸ್ಪರ್ಧಿಸುವುದು ತನ್ನ ಹಕ್ಕು ಮಾತ್ರವೇ ಎಂದು ಬಾಲಿವುಡ್ ಭಾವಿಸಿತ್ತು. ಇಂಗ್ಲಿಷ್‌ ಸಿನಿಮಾಗಳನ್ನು ಹೊರತುಪಡಿಸಿದರೆ, ವಿದೇಶಿ ಭಾಷೆಗಳ ಚಿತ್ರಗಳು ಬಹುಕಾಲ ಆಸ್ಕರ್‌ ಪ್ರಶಸ್ತಿಯ ಪರಿಗಣನೆಗೂ ಬರುತ್ತಿರಲಿಲ್ಲ. ಈಗಲೂ ಆಸ್ಕರ್‌ ಪ್ರಶಸ್ತಿಯು ಹಾಲಿವುಡ್‌ ಫಿಲಂಗಳಿಗೆ ಮಾತ್ರವೇ ಇದ್ದು, ವಿದೇಶಿ ಭಾಷೆಯ ಫಿಲಂಗಳಿಗೆ ಪ್ರತ್ಯೇಕ ವಿಭಾಗವೇ ಇದೆ. ಇದುವರೆಗೂ ಮೂರು ಚಿತ್ರಗಳು ಮಾತ್ರವೇ ಭಾರತದಿಂದ ಆಸ್ಕರ್‌ನ ಅಂತಿಮ ಹಂತಕ್ಕೆ ನಾಮಿನೇಟ್‌ ಆಗಿವೆಯಾದರೂ (ಮದರ್‌ ಇಂಡಿಯಾ, ಸಲಾಂ ಬಾಂಬೆ, ಲಗಾನ್)‌ ಯಾವುದೂ ಪ್ರಶಸ್ತಿಯನ್ನು ಗೆದ್ದಿಲ್ಲ. ಇಬ್ಬರು ದಕ್ಷಿಣ ಭಾರತೀಯರು ವೈಯಕ್ತಿಕ ಪ್ರಶಸ್ತಿಗಳನ್ನು ಗೆದ್ದಿದ್ದಾರಾದರೂ (ಎ.ಆರ್.‌ ರೆಹಮಾನ್‌, ರೆಸೂಲ್‌ ಪೂಕುಟ್ಟಿ) ಅದು ಭಾರತೀಯ ಸಿನಿಮಾಕ್ಕಲ್ಲ. ಇನ್ನು ಆಸ್ಕರ್‌ಗೆ ನಾಮಿನೇಟ್‌ ಆಗುತ್ತಿದ್ದ ಸಿನಿಮಾಗಳು ಕೂಡ ಹಿಂದಿಯ ಸಿನಿಮಾಗಳು. ದಕ್ಷಿಣ ಭಾರತದ ಚಿತ್ರಗಳನ್ನು ಜಾಗತಿಕವಾಗಿ ಮಾತ್ರವಲ್ಲ, ಹಿಂದಿ ವಲಯದಲ್ಲೂ ತುಚ್ಛವಾಗಿ ಕಾಣಲಾಗುತ್ತಿತ್ತು. ಆದರೆ ಈಗ ಕನ್ನಡ, ತೆಲುಗು, ತಮಿಳು, ಮಲಯಾಳ ಚಿತ್ರಗಳ ಪ್ರತಿಭಾವಂತ ನಿರ್ದೇಶಕರು, ತಂತ್ರಜ್ಞರು, ಕಲಾವಿದರು ದೇಶ ಮಟ್ಟದಲ್ಲಿ ಮಾತ್ರವಲ್ಲ, ಜಾಗತಿಕ ಮಟ್ಟದಲ್ಲೂ ದಕ್ಷಿಣ ಭಾರತದ ಪ್ರಾದೇಶಿಕ ಭಾಷೆಗಳ ಚಿತ್ರಗಳ ಕೀರ್ತಿ ಪತಾಕೆ ಹಾರಿಸುತ್ತಿದ್ದಾರೆ. ಹಿಂದೆಂದೂ ಇಲ್ಲದ ಯಶಸ್ಸನ್ನು ಕಂಡ ಕೆಜಿಎಫ್‌, ಕಾಂತಾರ, 777 ಚಾರ್ಲಿ ಮುಂತಾದವುಗಳನ್ನು ಇಲ್ಲಿ ಉದಾಹರಿಸಬಹುದು.

ಇದರಿಂದ ಆಗಿರುವುದೇನು? ಕನ್ನಡ ಚಿತ್ರರಂಗದ ಮಾರುಕಟ್ಟೆ ಸೀಮಿತ ಎಂಬ ರೂಢಿಯ ಹೇಳಿಕೆಗಳು ಈಗ ಸುಳ್ಳಾಗಿವೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಕನ್ನಡ ಚಿತ್ರಗಳು ದೇಶವಾಸಿಗಳ ಮನ ಗೆಲ್ಲುತ್ತಿವೆ. ಎಪ್ಪತ್ತು ಹಾಗೂ ಎಂಬತ್ತರ ದಶಕದಲ್ಲಿ ಇನ್ನೊಂದು ರೀತಿಯಲ್ಲಿ ಕನ್ನಡದ ಚಿತ್ರಗಳು ದೇಶದ ಚಿತ್ರರಸಿಕರ ಮನಸೂರೆಗೊಂಡಿದ್ದವು. ಸಂಸ್ಕಾರ, ಘಟಶ್ರಾದ್ಧ, ವಂಶವೃಕ್ಷ, ಚೋಮನ ದುಡಿ, ಕಾಡು, ಭೂತಯ್ಯನ ಮಗ ಅಯ್ಯು ಮುಂತಾದ ಚಿತ್ರಗಳು ಸದಾಕಾಲ ಸ್ವರ್ಣಕಮಲ ಮುಂತಾದ ಪ್ರಶಸ್ತಿಗಳನ್ನು ಗೆದ್ದುಕೊಂಡು ಬರುತ್ತಿದ್ದವು. ಇದರಿಂದಲೇ ಮುಂದೆ ಗಿರೀಶ್‌ ಕಾರ್ನಾಡ್‌ ಮುಂತಾದವರು ರಾಷ್ಟ್ರಮಟ್ಟದ ನಟರಾಗಿ ಬೆಳೆದುದೂ ನಮಗೆ ಗೊತ್ತಿದೆ. ಇವೆರಡು ದಶಕಗಳ ಕನ್ನಡದ ಸಿನಿಮಾಗಳು ಸದ್ದು ಮಾಡುವುದು ಕಡಿಮೆಯಾಗಿತ್ತು. ಡಾ.ರಾಜ್‌ಕುಮಾರ್‌ ಅವರ ʼಬಂಗಾರದ ಮನುಷ್ಯʼ ಮುಂತಾದ ಸಿನೆಮಾಗಳು ಗುಣಮಟ್ಟದಲ್ಲಿ ಶ್ರೇಷ್ಠವಾಗಿದ್ದರೂ ಅದನ್ನು ರಾಷ್ಟ್ರ ಮಟ್ಟದಲ್ಲಿ ಗುರುತಿಸಿರಲಿಲ್ಲ. ಇದೀಗ ಕನ್ನಡಕ್ಕೆ ಮತ್ತೆ ಅಂಥ ಸುವರ್ಣಯುಗ ಮರಳಿ ಬಂದಂತಿದೆ.

ಅನುಕರಣೆ, ಹಿಂಸೆ, ಸ್ವಂತಿಕೆರಹಿತ ಕತೆ, ಅಶ್ಲೀಲತೆ, ದೇಶವಿರೋಧಿ ಕತೆಗಳು, ಸಂಸ್ಕೃತಿ ವಿರೋಧಿ ಕಥಾವಸ್ತುವಿನಲ್ಲಿ ಮುಳುಗಿ ಹೋಗಿರುವ ಬಾಲಿವುಡ್‌ಗೆ ಇಲ್ಲೊಂದು ಪಾಠವೂ ಇದೆ. ದಕ್ಷಿಣ ಭಾರತದ ಸಿನಿಮಾಗಳ ಮುಂದೆ ಹಿಂದಿ ಚಿತ್ರಗಳು ಯಾಕೆ ದಯನೀಯವಾಗಿ ಸೋಲುತ್ತಿವೆ ಎಂಬುದರ ಆತ್ಮವಿಮರ್ಶೆಯನ್ನು ಅವರು ಮಾಡಿಕೊಳ್ಳಬೇಕು. ನಮ್ಮ ಸಂಸ್ಕೃತಿಯಲ್ಲಿ ಬೇರುಬಿಟ್ಟ, ನಮ್ಮ ರೀತಿರಿವಾಜುಗಳನ್ನು ಅಪಮಾನಿಸದ, ನಮ್ಮ ಸಹಜ ಬದುಕಿನ ರೀತಿಯನ್ನು ಅರ್ಥ ಮಾಡಿಕೊಂಡ ಸೃಜನಶೀಲವಾದ ಸಿನಿಮಾಗಳನ್ನು ಖಂಡಿತಾ ಚಿತ್ರರಸಿಕ ಗೆಲ್ಲಿಸುತ್ತಾನೆ ಎಂಬುದಕ್ಕೆ ದೃಷ್ಟಾಂತಗಳು ಇಲ್ಲಿವೆ.

ಇದೆಲ್ಲದರ ನಡುವೆ ಕನ್ನಡ ಚಿತ್ರರಂಗದ ಬೆಳವಣಿಗೆಗೆ ಸರ್ಕಾರ ಮತ್ತಷ್ಟು ಮೂಲಸೌಕರ್ಯ ಕಲ್ಪಿಸಬೇಕಿದೆ. ಎಲ್ಲ ಸೌಕರ್ಯಗಳಿಂದ ಸುಸಜ್ಜಿತವಾದ ಸ್ಟುಡಿಯೋ ನಮ್ಮ ರಾಜ್ಯದಲ್ಲಿ ಇನ್ನೂ ಲಭ್ಯವಿಲ್ಲ. ಅತ್ಯಾಧುನಿಕ ತಂತ್ರಜ್ಞತೆ ಬೇಕಿದ್ದರೆ ಚೆನ್ನೈ ಅಥವಾ ಹೈದರಾಬಾದನ್ನು ಅವಲಂಬಿಸಬೇಕಾಗಿದೆ. ಈ ಪರಿಸ್ಥಿತಿ ಹೋಗಲಾಡಿಸಬೇಕು. ಸರ್ಕಾರ ಭರವಸೆ ನೀಡಿರುವ ಚಿತ್ರನಗರಿಯ ನಿರ್ಮಾಣ ಇನ್ನೂ ಕನಸಾಗಿಯೇ ಉಳಿದಿದೆ. ಇದು ಅಸ್ತಿತ್ವಕ್ಕೆ ಬರಲು ಅಗತ್ಯವಾದ ನೆರವನ್ನು ಸರ್ಕಾರ ಒದಗಿಸಬೇಕು. ಈ ಮೂಲಕ ಕನ್ನಡ ಚಿತ್ರರಂಗ ಮತ್ತಷ್ಟು ಬೆಳೆಯುವಂತಾಬೇಕು.

ಇದನ್ನೂ ಓದಿ | ವಿಸ್ತಾರ ಸಂಪಾದಕೀಯ | ಕೈದಿಗಳ ಅಟಾಟೋಪದ ತಾಣಗಳಾಗುತ್ತಿರುವ ಕಾರಾಗೃಹಗಳು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Pot Holes: ರಸ್ತೆಗುಂಡಿಗಳನ್ನು ಮುಚ್ಚಲು ಬಿಬಿಎಂಪಿ ಕಮಿಷನರ್‌ಗೆ ಡಿಕೆಶಿ ಖಡಕ್‌ ಸೂಚನೆ; 15 ದಿನಗಳ ಗಡುವು

Pot Holes: ರಸ್ತೆಗುಂಡಿಗಳನ್ನು ಮುಚ್ಚಲು ಬಿಬಿಎಂಪಿ ಕಮಿಷನರ್‌ಗೆ ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಕಟ್ಟುನಿಟ್ಟಿನ ಸೂಚನೆಯೊಂದಿಗೆ 15 ದಿನಗಳ ಗಡುವು ನೀಡಿದ್ದಾರೆ.

VISTARANEWS.COM


on

By

Pot holes
Koo

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ರಸ್ತೆಗುಂಡಿಗಳನ್ನು ಇನ್ನೂ 15 ದಿನಗಳ ಒಳಗಾಗಿ ಮುಚ್ಚಿ ದುರಸ್ತಿ ಮಾಡಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ರಸ್ತೆಗುಂಡಿಗಳ ಬಗ್ಗೆ ಸಾಕಷ್ಟು ದೂರುಗಳು ಬರುತ್ತಿವೆ. ಈ ಬಗ್ಗೆ ತುರ್ತು ಗಮನ ಹರಿಸಬೇಕು ಈಗಾಗಲೇ “ರಸ್ತೆ ಗುಂಡಿ ಗಮನ” ಎನ್ನುವ ಆ್ಯಪ್ ಮೂಲಕ ಸಾರ್ವಜನಿಕರು ರಸ್ತೆ ಗುಂಡಿಗಳ ಫೋಟೋ ತೆಗೆದು ಅಪ್ ಲೋಡ್ ಮಾಡುವ ವ್ಯವಸ್ಥೆ ಮಾಡಲಾಗಿದೆ. ನಗರದ ಅನೇಕ ಕಡೆ ರಸ್ತೆ ಹಾಳಾಗಿರುವುದರ ಬಗ್ಗೆ ಇಲ್ಲಿಯೂ ಸಹ ದೂರುಗಳು ಬರುತ್ತಿವೆ. ಮಳೆಗಾಲದ ಕಾರಣಕ್ಕೂ ರಸ್ತೆ ಗುಂಡಿಗಳು ಬೀಳುತ್ತಿರಬಹುದು. ಇದರ ಬಗ್ಗೆಯೂ ಬಿಬಿಎಂಪಿ ಆಯುಕ್ತರು ಗಮನ ಹರಿಸಬೇಕು ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಕೆ ಶಿವಕುಮಾರ್‌ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: RV Deshpande : ಸಿದ್ದರಾಮಯ್ಯ ಅನುಮತಿ ಕೊಟ್ಟರೆ ನಾನೇ ಸಿಎಂ ಆಗುವೆ- ಆರ್‌ವಿ ದೇಶಪಾಂಡೆ ಅಚ್ಚರಿ ಹೇಳಿಕೆ

ಸಿಟಿ ರೌಂಡ್ಸ್‌

ರಸ್ತೆ ಗುಂಡಿಗಳನ್ನು ಮುಚ್ಚಲು ಗಡುವು ನೀಡಿರುವ 15 ದಿನಗಳ ನಂತರ ಇಡೀ ಬೆಂಗಳೂರು ನಗರವನ್ನು ತಾವೇ ಸ್ವತಃ ಪ್ರದಕ್ಷಿಣೆ ಹಾಕಲಿದ್ದು, ಪ್ರತಿ ರಸ್ತೆಗಳನ್ನು ಪರಿಶೀಲನೆ ಮಾಡುತ್ತೇನೆ. ಅಷ್ಟರಲ್ಲಿ ಕೆಲಸ ಮುಗಿಸಿರಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಸೂಚನೆ ನೀಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮೈಸೂರು

RV Deshpande : ಸಿದ್ದರಾಮಯ್ಯ ಅನುಮತಿ ಕೊಟ್ಟರೆ ನಾನೇ ಸಿಎಂ ಆಗುವೆ- ಆರ್‌ವಿ ದೇಶಪಾಂಡೆ ಅಚ್ಚರಿ ಹೇಳಿಕೆ

Muda Case : ಮುಡಾ ವಿಚಾರದಲ್ಲಿ ಸಿಎಂ ಏನು ತಪ್ಪು ಮಾಡಿದ್ದಾರೆ. ಸಾವಿರಾರು ಕೋಟಿ ರೂ. ಹಗರಣ ಅಂಥ ಹೇಳುತ್ತಿದ್ದಾರೆ. ಆರೋಪದ ಬಗ್ಗೆ ದಾಖಲೆ ಕೊಡಿ ನಾನೇ ಸರ್ಕಾರಕ್ಕೆ ಪತ್ರ ಬರೆಯುತ್ತೇನೆ ಎಂದಿರುವ ಆರ್‌ ವಿ ದೇಶಪಾಂಡೆ, ಸಿದ್ದರಾಮಯ್ಯ ಅನುಮತಿ ಕೊಟ್ಟರೆ ನಾನೇ ಸಿಎಂ ಆಗುತ್ತೇನೆ ಎಂದು ಮೈಸೂರಿನಲ್ಲಿ ಅಚ್ಚರಿ ಹೇಳಿಕೆ ಕೊಟ್ಟು ಪರೋಕ್ಷವಾಗಿ ಸಿಎಂ ಆಗುವ ಆಸೆ (RV Deshpande) ಬಿಚ್ಚಿಟ್ಟರು.

VISTARANEWS.COM


on

By

I will become CM if Siddaramaiah gives permission RV Deshpande
Koo

ಮೈಸೂರು: ಸಿಎಂ ಸಿದ್ದರಾಮಯ್ಯ (CM Siddaramaiah) ಮುಡಾ (MUDA Case) ವಿಚಾರವಾಗಿ ತಪ್ಪೇ ಮಾಡಿಲ್ಲ ಅಂತ ಹೇಳುತ್ತಲೇ ಕಾಂಗ್ರೆಸ್ ಹಿರಿಯ ನಾಯಕ ಆರ್.ವಿ ದೇಶಪಾಂಡೆ (RV Deshpande) ಪರೋಕ್ಷವಾಗಿ ಸಿಎಂಗೆ ಟಾಂಗ್ ನೀಡಿದ್ರಾ ಎಂಬ ಗುಮಾನಿ ಎದ್ದಿದೆ. ಸಿದ್ದರಾಮಯ್ಯ ಅನುಮತಿ ಕೊಟ್ಟರೆ ನಾನೇ ಸಿಎಂ ಆಗುವೆ ಎಂದಿದ್ದಾರೆ. ಫೋನ್ ಟ್ಯಾಪಿಂಗ್‌ ಆರೋಪ ಬಂದಾತಕ್ಷಣ ರಾಮಕೃಷ್ಣ ಹೆಗೆಡೆ ರಾಜೀನಾಮೆ ನೀಡಿದ್ದರು. ಈಗ ದಿನ ಫೋನ್ ಟ್ಯಾಪ್ ನಡೀತಾ ಇದೆ, ಆದರೆ ಮೌಲ್ಯಾಧಾರಿತ ರಾಜಕಾರಣ ಈಗ ನಡೆಯುತ್ತಿಲ್ಲ ಎಂದು ಮೈಸೂರಿನಲ್ಲಿ ಪ್ರಸ್ತುತ ರಾಜಕಾರಣದ ಬಗ್ಗೆ ಬೇಸರ ವ್ಯಕ್ತ ಪಡಿಸಿದರು.

ಹಿಂದೆ ಮೌಲ್ಯಾಧಾರಿತ ರಾಜಕಾರಣ ಮಾಡುತ್ತಿದ್ದರು, ಅದೇ ರೀತಿ ನಡೆದುಕೊಳ್ಳುತ್ತಿದ್ದರು. ರಾಮಕೃಷ್ಣ ಹೆಗೆಡೆ ಮತ್ತು ವಿವೇಕಾನಂದರ ಬಗ್ಗೆ ಹೊಗಳುತ್ತಾಲೇ ಸಿಎಂ ಸಿದ್ದರಾಮಯ್ಯಗೆ ಮಾಜಿ ಸಚಿವ ಆರ್.ವಿ. ದೇಶಪಾಂಡೆ ವ್ಯಂಗ್ಯ ಮಾಡಿದ್ದಂತೆ ಇತ್ತು. ಮುಡಾ ವಿಚಾರದಲ್ಲಿ ಸಿಎಂ ಏನು ತಪ್ಪು ಮಾಡಿದ್ದಾರೆ. ಸಾವಿರಾರು ಕೋಟಿ ರೂ. ಹಗರಣ ಅಂಥ ಹೇಳುತ್ತಿದ್ದಾರೆ. ಆರೋಪದ ಬಗ್ಗೆ ದಾಖಲೆ ಕೊಡಿ ನಾನೇ ಸರ್ಕಾರಕ್ಕೆ ಪತ್ರ ಬರೆಯುತ್ತೇನೆ ಎಂದರು. ಸಿದ್ದರಾಮಯ್ಯ ಅನುಮತಿ ಕೊಟ್ಟರೆ ನಾನೇ ಸಿಎಂ ಆಗುತ್ತೇನೆ ಎಂದು ಮೈಸೂರಿನಲ್ಲಿ ಅಚ್ಚರಿ ಹೇಳಿಕೆ ಕೊಟ್ಟು ಪರೋಕ್ಷವಾಗಿ ಸಿಎಂ ಆಗುವ ಆಸೆ ಬಿಚ್ಚಿಟ್ಟರು.

ಇದನ್ನೂ ಓದಿ: Theft Case : ಬೆಳಗಾವಿಯಲ್ಲಿ ಇರಾನಿ ಗ್ಯಾಂಗ್ ಆ್ಯಕ್ಟಿವ್! ಒಂಟಿ ಮಹಿಳೆಯರೇ ಟಾರ್ಗೆಟ್‌

ಸಿಎಂ ಆಗುವ ಆಸೆ ಬಗ್ಗೆ ದೇಶಪಾಂಡೆ ಹೇಳಿದ್ದೇನು?

ನಾನು ಸಚಿವ ಆಗಿ ದಣಿದಿದ್ದೇನೆ. ಇನ್ನೇನಿದ್ದರು ಮುಖ್ಯಮಂತ್ರಿ ಆಗಬೇಕು ಅಷ್ಟೆ. ಆದರೆ ಈಗ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದರು. ಹಾಗಾದರೆ ಸಿಎಂ ಆಗುವ ಆಸೆ ಇದ್ಯಾ ಎಂಬ ಮಾಧ್ಯಮಗಳ ಪ್ರಶ್ನೆಗೆ ನಗುತ್ತಲೇ ಉತ್ತರಿಸಿದ ದೇಶಪಾಂಡೆ, ನನಗೆ ಆಸೆ ಇದೆ, ನಿಮ್ಮಂತ ಜನರಿಗೂ ಆಸೆ ಇದೆ. ಜೀವನದಲ್ಲಿ ಮಹತ್ವಕಾಂಕ್ಷೆ ಇರಬೇಕು. ನಾನು ಸಿದ್ದರಾಮಯ್ಯಗಿಂತ ಎರಡು ವರ್ಷ ವಯಸ್ಸಿನಲ್ಲಿ ದೊಡ್ಡವನು. ಹೈಕಮಾಂಡ್ ಅವಕಾಶ ಕೊಟ್ಟರು, ಸಿದ್ದರಾಮಯ್ಯ ಅನುಮತಿ ಕೊಡಬೇಕು. ನಾನು ಸಿದ್ದರಾಮಯ್ಯಗೆ ಒಳ್ಳೆಯ ಸ್ನೇಹಿತ, 5 ವರ್ಷ ಸಿಎಂ ಆಗಿ ಸಿದ್ದರಾಮಯ್ಯ ಅವರೇ ಇರುತ್ತಾರೆ. ಸದ್ಯ ಸಿಎಂ ಬದಲಾವಣೆ ಕುರಿತು ನ‌ನಗೆ ಗೊತ್ತಿಲ್ಲದೆ ಯಾವ ಚರ್ಚೆ ನಡೆಯಲು ಸಾಧ್ಯ ಇಲ್ಲ. ಪರಮೇಶ್ವರ್‌ ಹಾಗೂ ಜಾರಕಿಹೊಳಿ ಮನೆಯಲ್ಲಿ ನಡೆದಿರುವುದು ಇಲಾಖೆಗೆ ಸಂಬಂಧಪಟ್ಟ ಸಭೆ ಅಷ್ಟೆ ಎಂದು ಮೈಸೂರಿನಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಆರ್.ವಿ ದೇಶಪಾಂಡೆ ಪ್ರತಿಕ್ರಿಯಿಸಿದ್ದಾರೆ.

ಗ್ಯಾರಂಟಿ ಯೋಜನೆಯಿಂದ ಆರ್ಥಿಕ ಹೊರೆ

ಇದೇ ವೇಳೆ ಗ್ಯಾರಂಟಿ ಯೋಜನೆಯಿಂದ ಅಭಿವೃದ್ಧಿಗೆ ತೊಂದರೆ ವಿಚಾರವಾಗಿಯೂ ಪ್ರತಿಕ್ರಿಯಿಸಿದ ಅವರು, ಗ್ಯಾರಂಟಿ ಯೋಜನೆಯಿಂದ ಸರ್ಕಾರಕ್ಕೆ ಆರ್ಥಿಕ ಹೊರೆ ಬಂದಿರುವುದು ನಿಜ. ಗ್ಯಾರಂಟಿ ಯೋಜನೆಗೆ 50 ರಿಂದ 60ಸಾವಿರ ಕೋಟಿ ರೂ. ಬೇಕಾಗಿದೆ. ತೊಂದರೆಯಾಗಿರುವುದನ್ನು ಸರಿದೂಗಿಸುತ್ತಿದ್ದಾರೆ. ಆದರೆ ಬೆಲೆ ಏರಿಕೆಗೆ ಕಾರಣ ಇದಲ್ಲ. ದೇಶದಲ್ಲೇ ಬೆಲೆ ಏರಿಕೆ ಆಗಿದೆ. ಇದರಿಂದ ಜನ ಸಾಮಾನ್ಯರಿಗೆ ತೊಂದರೆಯಾಗುತ್ತಿದೆ ಎಂದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Yettinahole Project: ಗೌರಿ ಹಬ್ಬದಂದು ಎತ್ತಿನಹೊಳೆ ಯೋಜನೆ ಏತ ಕಾಮಗಾರಿ ಉದ್ಘಾಟನೆ; ಪಕ್ಷಬೇಧ ಮರೆತು ಎಲ್ಲರಿಗೂ ಆಹ್ವಾನ- ಡಿಸಿಎಂ

Yettinahole Project: ಸೆ.6 ಗೌರಿ ಹಬ್ಬದಂದು ಎತ್ತಿನಹೊಳೆ ಯೋಜನೆ ಏತ ಕಾಮಗಾರಿ ಉದ್ಘಾಟನೆ ಮಾಡಲಾಗುವುದು. ಪಕ್ಷಬೇಧ ಮರೆತು ಎಲ್ಲರಿಗೂ ಆಹ್ವಾನ ಮಾಡಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್‌ ತಿಳಿಸಿದ್ದಾರೆ.

VISTARANEWS.COM


on

By

Yettinahole project lift work to be inaugurated on September 6 Gowri festival
Koo

ಬೆಂಗಳೂರು: ರಾಜ್ಯದ 7 ಜಿಲ್ಲೆಗಳಿಗೆ ಕುಡಿಯುವ ನೀರು ಹಾಗೂ ಕೆರೆ ತುಂಬಿಸುವ ಮಹತ್ವಾಕಾಂಕ್ಷಿ ಎತ್ತಿನಹೊಳೆ ಯೋಜನೆಯ (Yettinahole Project) ಏತ ಕಾಮಗಾರಿಗಳನ್ನು ಮುಖ್ಯಮಂತ್ರಿಗಳು ಸೆ.6 ಗೌರಿ ಹಬ್ಬದಂದು ಉದ್ಘಾಟನೆ ಮಾಡಲಿದ್ದಾರೆ. ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದ್ದಾರೆ. ಈ ಯೋಜನೆಯಿಂದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ ಜಿಲ್ಲೆಗಳು ಈ ಯೋಜನೆಯನ್ನು ಎದುರುನೋಡುತ್ತಿವೆ. ಅನೇಕ ನಾಯಕರು ಈ ಯೋಜನೆಗೆ ಹೋರಾಟ ಮಾಡಿದ್ದು, ಅನೇಕ ಪಕ್ಷಗಳು ಇದಕ್ಕೆ ಸಹಕಾರ ನೀಡಿವೆ. ಕಳೆದ ಒಂದು ವರ್ಷದಿಂದ ಈ ಯೋಜನೆಯನ್ನು ಸವಾಲಾಗಿ ಸ್ವೀಕರಿಸಿದ್ದೆ. ಮೊನ್ನೆಯಷ್ಟೇ ಯೋಜನೆಯ ಕಾಮಗಾರಿಗಳ ಪರೀಕ್ಷಾರ್ಥ ಕಾರ್ಯಾಚರಣೆ ಮಾಡಿದ್ದೆ ಎಂದು ತಿಳಿಸಿದರು.

ಈ ಯೋಜನೆಗಳ ವಿಚಾರವಾಗಿ ಅನೇಕ ಟೀಕೆಗಳು ಬರುತ್ತಿದ್ದವು. ಟೀಕೆಗಳು ಬರಲಿ. ಈ ಯೋಜನೆಯಲ್ಲಿ ನೀರನ್ನು ಪಂಪ್ ಮಾಡುವ ಮೂಲಕ ಕಾಲುವೆಗಳಿಗೆ ಹರಿಸುತ್ತಿದ್ದೇವೆ. ಈ ಯೋಜನೆ ಮಾರ್ಗದ ಮಧ್ಯೆ ಅರಣ್ಯ ಇಲಾಖೆಗೆ ಸಂಬಂಧಿಸಿದ ಜಾಗಗಳಲ್ಲಿ ಸ್ವಲ್ಪ ಸಮಸ್ಯೆ ಇದ್ದು, ಅವುಗಳನ್ನು ಬಗೆಹರಿಸಿದ್ದೇವೆ. ಈ ಜಾಗ ಹಸ್ತಾಂತರವಾದ ಬಳಿಕ ಪ್ರಮುಖ ಕಾಲುವೆಗಳಿಗೆ ನೀರು ಹರಿಯಲಿವೆ. ಈಗ ತಾತ್ಕಾಲಿಕವಾಗಿ ವಾಣಿ ವಿಲಾಸ ಅಣೆಕಟ್ಟಿಗೆ ನೀರು ಹರಿಸಲಾಗುತ್ತಿದೆ. ಯೋಜನೆಯ 7 ವಿಯರ್‌ಗಳು ನೀರನ್ನು ಎತ್ತುತ್ತಿವೆ. ಈ ತಿಂಗಳ 6 ರಂದು ಉದ್ಘಾಟನೆಗೆ ಮುಖ್ಯಮಂತ್ರಿಗಳು ಒಪ್ಪಿದ್ದಾರೆ ಎಂದು ತಿಳಿಸಿದರು.

ಪಕ್ಷಬೇಧ ಮರೆತು ಎಲ್ಲರಿಗೂ ಆಹ್ವಾನ

ಈ ಯೋಜನೆಯ ಫಲಾನುಭವಿ ಜಿಲ್ಲೆಯ ಜನರು ನೀರನ್ನು ಎತ್ತುವ ದೃಶ್ಯ ಕಣ್ತುಂಬಿಕೊಳ್ಳಬಹುದು. ಅಲ್ಲಿ ಜಾಗ ಕಿರಿದಾಗಿದ್ದರು, ಪೊಲೀಸರಿಗೆ ಹೇಳಿ ವ್ಯವಸ್ಥೆ ಮಾಡಲಾಗಿದೆ. ಇನ್ನು ಉದ್ಘಾಟನಾ ಕಾರ್ಯಕ್ರಮಕ್ಕೆ ಪಕ್ಷಬೇಧ ಮರೆತು ಎಲ್ಲ ನಾಯಕರು, ರೈತರಿಗೆ ಆಹ್ವಾನಿಸಲಾಗುವುದು. ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರಿಗೆ ಆಹ್ವಾನ ನೀಡುವಂತೆ ನನ್ನ ಕಚೇರಿ ಅಧಿಕಾರಿಗಳಿಗೆ ತಿಳಿಸಿದ್ದೇನೆ. ಈ ಪವಿತ್ರವಾದ ಕಾರ್ಯಕ್ಕೆ ಬಂದು ಶುಭ ಗಳಿಗೆಗೆ ಸಾಕ್ಷಿಯಾಗಬೇಕು ಎಂದು ಮನವಿ ಮಾಡುತ್ತೇನೆ ಎಂದು ತಿಳಿಸಿದರು.

ಇದನ್ನೂ ಓದಿ: Mandya News : ನಾಲ್ವರು ಬಾಲಕರ ಪ್ರೀತಿ-ಪ್ರೇಮದ ಅಪಪ್ರಚಾರ; ಗಾಳಿ ಸುದ್ದಿಗೆ ಬಾಲಕಿ ಆತ್ಮಹತ್ಯೆ

ಸಿಎಂ ನಿವಾಸದಲ್ಲಿ ಭೋಜನ ಕೂಟ

ಸಿಎಂ ನಿವಾಸದಲ್ಲಿ ನಡೆದ ಭೋಜನ ಕೂಟದಲ್ಲಿ ಯಾವ ವಿಚಾರ ಚರ್ಚೆಯಾಯಿತು ಎಂದು ಕೇಳಿದಾಗ, “ಮಹಾತ್ಮಾ ಗಾಂಧೀಜಿ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು ಬೆಳಗಾವಿಯಲ್ಲಿ ನಡೆದ ಎಐಸಿಸಿ ಅಧಿವೇಶನಕ್ಕೆ ನೂರು ವರ್ಷಗಳು ಪೂರ್ಣಗೊಂಡಿವೆ. ಈಗ ಆ ಸ್ಥಾನದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಕೂತಿದ್ದಾರೆ. ಗಾಂಧೀಜಿ ಅವರು ಹಾಕಿಕೊಟ್ಟಿರುವ ಮಾರ್ಗದರ್ಶನ ವಿಶ್ವವೇ ಗಮನಿಸಿದೆ. ಇದನ್ನು ಮುಂದಿನ ಪೀಳಿಗೆಗೆ ತಿಳಿಸಬೇಕಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ವತಿಯಿಂದ ಯಾವ ರೀತಿ ಕಾರ್ಯಕ್ರಮ ರೂಪಿಸಬೇಕು ಎಂಬುದರ ಬಗ್ಗೆ ಚರ್ಚೆ ಮಾಡಲಾಯಿತು. ಮುಂದಿನ ಒಂದುವಾರದಲ್ಲಿ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ವರದಿ ನೀಡುವಂತೆ ಸಚಿವರಿಗೆ ತಿಳಿಸಲಾಗಿದೆ. ಪಕ್ಷದ ವತಿಯಿಂದಲೂ ಕಾರ್ಯಕ್ರಮ ಮಾಡಲಾಗುತ್ತಿದ್ದು, ಆ ಬಗ್ಗೆ ಪಕ್ಷದ ಕಚೇರಿಯಲ್ಲಿ ಚರ್ಚೆ ಮಾಡಿದ್ದೆವು ಎಂದು ತಿಳಿಸಿದರು.

ಕೋವಿಡ್‌ ಸಮಯದಲ್ಲ ಅಕ್ರಮ

ಕೋವಿಡ್ ಸಮಯದಲ್ಲಿನ ಅಕ್ರಮದ ಬಗ್ಗೆ ನ್ಯಾ.ಕುನ್ಹಾ ಅವರ ಸಮಿತಿ ವರದಿ ಸಲ್ಲಿಕೆ ಹಾಗೂ ಮಾಜಿ ಸಚಿವ ಸುಧಾಕರ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಕುನ್ಹಾ ಅವರ ವರದಿಯಲ್ಲಿ ಏನಿದೆ ಎಂದು ಗೊತ್ತಿಲ್ಲ. ಸುಧಾಕರ್ ಅವರ ಹೇಳಿಕೆಯ ಬಗ್ಗೆಯೂ ಮಾಹಿತಿ ಇಲ್ಲ. ಈ ವಿಚಾರವಾಗಿ ಸಂಪೂರ್ಣ ಮಾಹಿತಿ ಪಡೆದು ಮಾತನಾಡುತ್ತೇನೆ. ಈ ವಿಚಾರವಾಗಿ ಸರ್ಕಾರದ ವಕ್ತಾರರು ಪ್ರತಿಕ್ರಿಯೆ ನೀಡುತ್ತಾರೆ ಎಂದು ತಿಳಿಸಿದರು.

ರಾಜಭವನದಲ್ಲಿ ವಿರೋಧ ಪಕ್ಷಗಳ ನಾಯಕರ ವಿರುದ್ಧ ಯಾವುದೇ ಅರ್ಜಿ ಇಲ್ಲ ಎಂದು ರಾಜ್ಯಪಾಲರು ಹೇಳಿದ್ದು, ಹಾಗಾದರೆ ಫೈಲ್‌ಗಳು ಏನಾದವು ಎಂದು ಕೇಳಿದಾಗ, “ನಮಗೂ ಅದೇ ಯಕ್ಷಪ್ರಶ್ನೆಯಾಗಿದೆ. ನಾಳೆ ಈ ವಿಚಾರವಾಗಿ ಮಾಹಿತಿ ಪಡೆಯುತ್ತೇವೆ. ನಾವು ನಮಗೆ ಬಂದಿರುವ ಮಾಹಿತಿಗಳ ಮೇರೆಗೆ ನಮ್ಮ ಮನವಿ ಸಲ್ಲಿಸಿದ್ದೇವೆ ಎಂದರು. ಕಾಂಗ್ರೆಸ್ ನಾಯಕರ ವಿರುದ್ಧದ ಎರಡು ಅರ್ಜಿಗಳು ಮಾತ್ರ ರಾಜ್ಯಪಾಲರ ಬಳಿ ಉಳಿದುಕೊಂಡಿವೆಯಂತೆ ಎಂದು ಕೇಳಿದಾಗ, ಆ ಬಗ್ಗೆ ನಮಗೆ ಮಾಹಿತಿ ಇಲ್ಲ. ನಮ್ಮ ವಿರುದ್ಧ ಕೆಲವರು ಅರ್ಜಿ ಕೊಡುತ್ತಿರುತ್ತಾರೆ. ಮತ್ತೆ ಕೆಲವರು ನನ್ನ ವಿರುದ್ಧ ದೂರು ನೀಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಅವರು ದೂರು ನೀಡಲಿ ಎಂದು ತಿಳಿಸಿದರು.

ಕಾಲೇಜು ದಿನಗಳಲ್ಲಿ ಬಳಸಿದ್ದ ಬೈಕ್‌ ಮರುವಿನ್ಯಾಸ:

ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕಾಲೇಜು ದಿನಗಳಲ್ಲಿ ಬಳಸಿದ್ದ ಯಜ್ದಿ ಬೈಕ್ ಅನ್ನು ಮರುವಿನ್ಯಾಸಗೊಳಿಸಿ ಅವರಿಗೆ ನೀಡಿದರು. ಈ ಬಗ್ಗೆ ಮಾತನಾಡಿದ ಶಿವಕುಮಾರ್ ಅವರು, “ನಾನು ಕಾಲೇಜು ದಿನಗಳಲ್ಲಿ ಈ ಬೈಕ್ ಓಡಿಸುತ್ತಿದ್ದೆ. ಕನಕಪುರದ ನಿವಾಸದಲ್ಲಿತ್ತು. ನಮ್ಮ ಸ್ನೇಹಿತರು ಈಗ ಅದಕ್ಕೆ ಹೊಸ ರೂಪ ಕೊಟ್ಟು ತಂದಿದ್ದಾರೆ” ಎಂದು ತಿಳಿಸಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Rain News : ವಿಜಯವಾಡದಲ್ಲಿ ಭಾರಿ ಮಳೆಗೆ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನ ರಕ್ಷಣೆ; ಕಲಬುರಗಿಯಲ್ಲೂ ಅಬ್ಬರ

Rain News : ಪಕ್ಕದ ವಿಜಯವಾಡದಲ್ಲಿ ಮಳೆಯು ಅಬ್ಬರಿಸುತ್ತಿದೆ. ಕಲಬುರಗಿ, ಯಾದಗಿರಿಯಲ್ಲೂ ಮಳೆಯಾಗುತ್ತಿದ್ದು ಅವಾಂತರವೇ ಸೃಷ್ಟಿಯಾಗಿದೆ. ರಸ್ತೆ ಸಂಪರ್ಕ ಕಡಿತಗೊಂಡು, ಮನೆಯೊಳಗೆ ನೀರು ನುಗ್ಗಿದ್ದರಿಂದ ಜನರು ಪರದಾಡಿದರು.

VISTARANEWS.COM


on

By

Rain News
Koo

ಕೋಲಾರ: ಆಂಧ್ರಪ್ರದೇಶದ ವಿಜಯವಾಡದಲ್ಲಿ (Rain News) ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಗೆ ರಸ್ತೆಗಳೆಲ್ಲ ಜಲಾವೃತಗೊಂಡಿದೆ. ವ್ಯಾಪಕ ಮಳೆಯಿಂದ ರಸ್ತೆಗಳಲ್ಲಿ ರಭಸವಾಗಿ ನೀರು ತುಂಬಿ ಹರಿಯುತ್ತಿದ್ದು, ಯುವಕನೊಬ್ಬ ಕೊಚ್ಚಿ ಹೋಗಿದ್ದಾನೆ. ಕೂಡಲೇ ಸ್ಥಳದಲ್ಲಿದ್ದವರು ಹಗ್ಗ ಕೊಟ್ಟು ಯುವಕನನ್ನು ಬಚವ್‌ ಮಾಡಿದ್ದಾರೆ.

ಕೆಲ ಗಂಟೆಗಳ ಕಾಲ ದ್ವಿಚಕ್ರ ವಾಹನಗಳು ರಸ್ತೆಗೆ ಬರದಂತೆ, ಜನರು ರಸ್ತೆಗಿಳಿಯದಂತೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ನಗರದ ಎಲ್ಲಾ ಪ್ರಮುಖ ರಸ್ತೆಗಳು ಜಲಾವೃತವಾಗಿವೆ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ದ್ವಿಚಕ್ರ ವಾಹನಗಳನ್ನು ಓಡಿಸದಂತೆ ಪೊಲೀಸರು ಆದೇಶಿಸಿದ್ದು, ರಾಷ್ಟ್ರೀಯ ಹೆದ್ದಾರಿಗಳಿಂದ ಸರ್ವಿಸ್ ರಸ್ತೆಗಳಲ್ಲಿ ವಾಹನಗಳು ಓಡಾಡುತ್ತಿವೆ. ನಗರದ ಪ್ರಮುಖ ರಸ್ತೆಗಳಲ್ಲಿ ಮೊಣಕಾಲಿನಷ್ಟು ನೀರು ನಿಂತು ಅವಾಂತರವೇ ಸೃಷ್ಟಿಯಾಗಿದೆ.

ನಗರ ಪ್ರವೇಶಿಸುವ ಎಲ್ಲ ವಾಹನಗಳ ಮಾರ್ಗ ಬದಲಾವಣೆ ಮಾಡಲಾಗಿದೆ. ಪೂರ್ವಾನುಮತಿ ಇಲ್ಲದೆ ನಗರದೊಳಗೆ ಬೆಂಗಾವಲು ವಾಹನಗಳನ್ನು ಬಿಡದಂತೆ ಸೂಚನೆ ನೀಡಲಾಗಿದೆ. ಮೊಘಲ್ ರಾಜ್ ಪುರಂನಲ್ಲಿ ಬಂಡೆಗಳು ಮುರಿದು ಬಿದ್ದಿವೆ. ಪ್ರಮುಖ ಬೀದಿಗಳಲ್ಲಿ ಅಗ್ನಿಶಾಮಕ ವಾಹನಗಳ ಮೂಲಕ ನೀರು ತೆಗೆಯುವ ಪ್ರಯತ್ನ ಮಾಡುತ್ತಿದೆ. ಹಳೇ ಪೇಟೆಯಲ್ಲಿನ ಹೊರಹರಿವಿನ ಚರಂಡಿ ತುಂಬಿ ಹರಿಯುತ್ತಿರುವುದರಿಂದ ಮನೆಗಳಿಗೆ ನೀರು ನುಗ್ಗಿದೆ. ನಿಡಮನೂರಿನಿಂದ ಟ್ಯಾಂಕ್ಸಾಳದವರೆಗಿನ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಮುಳುಗಡೆಯಾಗಿದೆ.

ಇದನ್ನೂ ಓದಿ: Road Accident : ಡೆಡ್ಲಿ ಆ್ಯಕ್ಸಿಡೆಂಟ್‌ಗೆ ಬೈಕ್‌ ಸವಾರ ಸ್ಪಾಟ್‌ ಡೆತ್‌; ಕರೆಂಟ್‌ ಶಾಕ್‌ನಿಂದ ಒದ್ದಾಡಿ ಪ್ರಾಣಬಿಟ್ಟ ವೃದ್ಧೆ

ಕಲಬುರಗಿಯಲ್ಲಿ ಮಳೆ ಅಬ್ಬರಕ್ಕೆ ಜನರು ಕಂಗಾಲು

ಇತ್ತ ಕಲಬುರಗಿಯಲ್ಲಿ ರಾತ್ರಿಯಿಡಿ ಸುರಿದ ಧಾರಾಕರ ಮಳೆಗೆ ಸೇಡಂ ತಾಲೂಕಿನ ಹೊಸಳ್ಳಿ ಗ್ರಾಮ ಸಂಪರ್ಕ ಕಡಿತಗೊಂಡಿದೆ. ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಮೇಲೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬಂದಿದೆ. ಹಲವು ಭಾಗದಲ್ಲಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಪಿಡಿಎ ಕಾಲೇಜು ಬಳಿ ಇರುವ 10ಕ್ಕೂ ಹೆಚ್ಚು ಅಂಗಡಿಗಳಿಗೆ ನೀರು ನುಗ್ಗಿತ್ತು.

ಚಿಂಚೊಳ್ಳಿ ತಾಲೂಕಿನಾದ್ಯಂತವು ವರ್ಷಧಾರೆಯಿಂದಾಗಿ ಚಂದ್ರಂಪಳ್ಳಿ ಜಲಾಶಯ ತುಂಬಿ ಹರಿಯುತ್ತಿದೆ. ಚಂದ್ರಂಪಳ್ಳಿ ಜಲಾಶಯದಿಂದ ನೀರು ಬಿಡುಗಡೆಯಿಂದಾಗಿ ಮಿರಿಯಾಣ ಹಾಗೂ ತೆಲಂಗಾಣದ ತಾಂಡೂರು ರಸ್ತೆ ಜಲಾವೃತಗೊಂಡು, ಸಂಪರ್ಕ ಕಡಿತಗೊಂಡಿದೆ. ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ದಿಗ್ಗಾವ್ ಗ್ರಾಮಕ್ಕೆ ಜಲದಿಗ್ಬಂಧನ ಹಾಕಲಾಗಿದೆ.

ಮಳೆಯ ಆರ್ಭಟಕ್ಕೆ ಹಲವು ಹಳ್ಳಕೊಳ್ಳಗಳು ಭರ್ತಿಯಾಗಿದೆ. ಕಲಬುರಗಿ ಜಿಲ್ಲೆಯ ಚಿಂಚೊಳ್ಳಿ‌ ತಾಲೂಕಿನ ಅರಣ್ಯ ಪ್ರದೇಶದಲ್ಲಿ ಇರುವ ಚಿಕ್ಕನಿಂಗದಳ್ಳಿ ಗ್ರಾಮದ ಕೆರೆಭರ್ತಿಯಾಗಿದೆ. ಕುಂಚಾವರಂ ವನ್ಯಜೀವಿ ಧಾಮದ ಕೆರೆ ತುಂಬಿ ಹರಿಯುತ್ತಿದೆ. ಇನ್ನು ತುಂಬಿ ಹರಿಯುತ್ತಿರುವ ಕಾಗಿಣ ನದಿಯಲ್ಲಿ ಕ್ಷಣ ಕ್ಷಣಕ್ಕೂ ನೀರಿ ಪ್ರಮಾಣ ಹೆಚ್ಚುತ್ತಿದೆ. ತುಂಬಿ ಹರಿಯುತ್ತಿರುವ ನದಿ ದಡದಲ್ಲೆ ಚಾಲಕರು ಲಾರಿ ತೊಳೆಯುತ್ತಿರುವ ದೃಶ್ಯ ಕಂಡು ಬಂತು. ಮುಂಜಾಗ್ರತಾ ಕ್ರಮವಾಗಿ ಸೇತುವೆ ಬಳಿ ಪೋಲಿಸ್ ಭದ್ರತೆ ವಹಿಸಲಾಗಿದೆ.

ಕಲಬುರಗಿ ಸುರಿಯುತ್ತಿರುವ ಭಾರಿ ಮಳೆಗೆ ಬೋಗಾವತಿ ನದಿ ತುಂಬಿ ಹರಿದಿದೆ. ಪರಿಣಾಮ ಚಿಂಚೋಳಿ ತಾಲ್ಲೂಕಿನ ಪೋಲಕಪಳ್ಳಿ, ಗಂಗನಪಳ್ಳಿ ಗ್ರಾಮದ ಸೇತುವೆ ಜಲಾವೃತವಾಗಿದೆ. ಸೇತುವೆ ಜಲಾವೃತ ಪರಿಣಾಮ ಪೋಲಕಪಳ್ಳಿ, ಗಂಗನಪಳ್ಳಿ ಗ್ರಾಮಗಳ ರಸ್ತೆ ಸಂಪರ್ಕ ಕಡಿತಗೊಂಡಿದೆ ಬೋಗಾವತಿ ನದಿ ನೀರಿನ ಅರ್ಭಟಕ್ಕೆ ಗಂಗನಪಳ್ಳಿ ಗ್ರಾಮದ ಗಂಗಾ ಮಾತೆ ದೇವಿಯ ದೇವಸ್ಥಾನ ಸಂಪೂರ್ಣ ಜಲಾವೃತಗೊಂಡಿದೆ. ಚಿಂಚೋಳಿ ತಾಲ್ಲೂಕಿನ ತಾಜಲಾಪೂರ, ಗಾರಂಪಳ್ಳಿ, ಗರಗಪಳ್ಳಿ, ಇರಕಪಳ್ಳಿ ಸೇತುವೆಗಳು ಜಲಾವೃತ. ವಿವಿಧ ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ.

ಇದನ್ನೂ ಓದಿ: Mandya News : ನಾಲ್ವರು ಬಾಲಕರ ಪ್ರೀತಿ-ಪ್ರೇಮದ ಅಪಪ್ರಚಾರ; ಗಾಳಿ ಸುದ್ದಿಗೆ ಬಾಲಕಿ ಆತ್ಮಹತ್ಯೆ

ಯಾದಗಿರಿಯಲ್ಲಿ ಮನೆಯೊಳಗೆ ನುಗ್ಗಿದ ನೀರು

ಯಾದಗಿರಿ ಜಿಲ್ಲೆಯಲ್ಲಿ ನಿನ್ನೆ ಶನಿವಾರ ರಾತ್ರಿಯಿಂದ ಸುರಿದ ವರುಣನ ಅಬ್ಬರಕ್ಕೆ ಮನೆಯೊಳಗೆ ನೀರು ನುಗ್ಗಿದೆ. ನೀರು ಹೊರಹಾಕಲು ದೋರನಹಳ್ಳಿ ಗ್ರಾಮದ ಜನರು ಸಂಕಷ್ಟ ಎದುರಿಸಿದರು. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದರಿಂದ ಮಾಪಮ್ಮಳ ಮನೆಯಲ್ಲಿ ನವಜಾತ ಶಿಶುವೊಂದಿಗೆ ಬಾಣಂತಿ ಪರದಾಡಿದರು. ಅದೆ ರೀತಿ ಪಗಲಾಪುರನ ತಾತ್ಕಾಲಿಕ ಸೇತುವೆ ಜಲಾವೃತವಾಗಿದೆ. ಸೇತುವೆ ಹಾಳಾದ ಹಿನ್ನಲೆ ತಾತ್ಕಾಲಿಕ ಸೇತುವೆ ನಿರ್ಮಾಣ ಮಾಡಲಾಗಿತ್ತು. ಮಳೆ ಅಬ್ಬರದಿಂದ ತಾತ್ಕಾಲಿಕ ಪಗಲಾಪುರ ಸೇತುವೆಯೂ ಜಲಾವೃತ ಸಂಪರ್ಕ ಕಡಿತಗೊಂಡಿದೆ. ಯಾದಗಿರಿ ಜಿಲ್ಲಾ ಕೇಂದ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಇದಾಗಿದೆ.

ಯಾದಗಿರಿ ಜಿಲ್ಲೆಯಲ್ಲಿ ಭಾರಿ ಮಳೆ ಅಬ್ಬರಕ್ಕೆ ವಂಕಸಂಬ್ರದ ರಸ್ತೆ ಜಲಾವೃತಗೊಂಡಿದೆ. ವಂಕಸಂಬ್ರದಿಂದ ತೋರಣತಿಪ್ಪಗೆ ಸಂಪರ್ಕದ ರಸ್ತೆಯಲ್ಲಿ ಉಕ್ಕಿ ಹರಿಯುವ ನೀರಿನಲ್ಲೇ ಜನರು ಓಡಾಡುವಂತಾಗಿದೆ. ಮತ್ತೊಂದೆಡೆ ಮನೆ ಗೋಡೆಗಳು ಕುಸಿದ ಬಿದ್ದಿದೆ. ನಿರಂತರ ಮಳೆಯಿಂದ ಬೊರಬಂಡಾ ಗ್ರಾಮದ ಎರಡು ಮನೆಗೋಡೆಗಳು ಕುಸಿದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Pot holes
ಬೆಂಗಳೂರು29 mins ago

Pot Holes: ರಸ್ತೆಗುಂಡಿಗಳನ್ನು ಮುಚ್ಚಲು ಬಿಬಿಎಂಪಿ ಕಮಿಷನರ್‌ಗೆ ಡಿಕೆಶಿ ಖಡಕ್‌ ಸೂಚನೆ; 15 ದಿನಗಳ ಗಡುವು

I will become CM if Siddaramaiah gives permission RV Deshpande
ಮೈಸೂರು2 hours ago

RV Deshpande : ಸಿದ್ದರಾಮಯ್ಯ ಅನುಮತಿ ಕೊಟ್ಟರೆ ನಾನೇ ಸಿಎಂ ಆಗುವೆ- ಆರ್‌ವಿ ದೇಶಪಾಂಡೆ ಅಚ್ಚರಿ ಹೇಳಿಕೆ

Irani gang active in Belagavi Single women are the target
ಬೆಳಗಾವಿ2 hours ago

Theft Case : ಬೆಳಗಾವಿಯಲ್ಲಿ ಇರಾನಿ ಗ್ಯಾಂಗ್ ಆ್ಯಕ್ಟಿವ್! ಒಂಟಿ ಮಹಿಳೆಯರೇ ಟಾರ್ಗೆಟ್‌

Yettinahole project lift work to be inaugurated on September 6 Gowri festival
ಬೆಂಗಳೂರು4 hours ago

Yettinahole Project: ಗೌರಿ ಹಬ್ಬದಂದು ಎತ್ತಿನಹೊಳೆ ಯೋಜನೆ ಏತ ಕಾಮಗಾರಿ ಉದ್ಘಾಟನೆ; ಪಕ್ಷಬೇಧ ಮರೆತು ಎಲ್ಲರಿಗೂ ಆಹ್ವಾನ- ಡಿಸಿಎಂ

Rain News
ಮಳೆ4 hours ago

Rain News : ವಿಜಯವಾಡದಲ್ಲಿ ಭಾರಿ ಮಳೆಗೆ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನ ರಕ್ಷಣೆ; ಕಲಬುರಗಿಯಲ್ಲೂ ಅಬ್ಬರ

Bike rider in deadly accident Elderly woman dies of electric shock
ಬೆಂಗಳೂರು5 hours ago

Road Accident : ಡೆಡ್ಲಿ ಆ್ಯಕ್ಸಿಡೆಂಟ್‌ಗೆ ಬೈಕ್‌ ಸವಾರ ಸ್ಪಾಟ್‌ ಡೆತ್‌; ಕರೆಂಟ್‌ ಶಾಕ್‌ನಿಂದ ಒದ್ದಾಡಿ ಪ್ರಾಣಬಿಟ್ಟ ವೃದ್ಧೆ

Girl commits suicide after being fed up with rumours of love
ಮಂಡ್ಯ5 hours ago

Mandya News : ನಾಲ್ವರು ಬಾಲಕರ ಪ್ರೀತಿ-ಪ್ರೇಮದ ಅಪಪ್ರಚಾರ; ಗಾಳಿ ಸುದ್ದಿಗೆ ಬಾಲಕಿ ಆತ್ಮಹತ್ಯೆ

Do you know when Darshan got royalty in Central Jail
ಸಿನಿಮಾ6 hours ago

Actor Darshan : ಸೆಂಟ್ರಲ್‌ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯ ಸಿಕ್ಕಿದ್ದು ಯಾವಾಗಿನಿಂದ ಗೊತ್ತಾ? ಬಿಸ್ಕತ್‌ ಹಾಕಿಲ್ವಾ ಸುಮ್ಮಿನಿರು ಅಂದ್ರಾ ಕರಿಯಾ!

Actor Darshan shifted back to Bengaluru from Ballari
ಬಳ್ಳಾರಿ6 hours ago

Actor Darshan : ಬಳ್ಳಾರಿಯಿಂದ ನಟ ದರ್ಶನ್‌ ಮತ್ತೆ ಬೆಂಗಳೂರಿಗೆ ಶಿಫ್ಟ್‌! ಪತ್ನಿ ಬಂದು ಹೋದ್ಮೆಲೆ ಫುಲ್ ಆಕ್ಟೀವ್

police Firing
ಕಲಬುರಗಿ7 hours ago

Police Firing: ಪೊಲೀಸರ ಮೇಲೆ ಚಾಕುಯಿಂದ ದಾಳಿ ಮಾಡಿದ ದರೋಡೆಕೋರ; ಆರೋಪಿ ಕಾಲಿಗೆ ಫೈರಿಂಗ್‌ ಮಾಡಿದ ಖಾಕಿ

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ11 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ9 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್1 day ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್3 days ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 week ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ3 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು4 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ4 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ4 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ4 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌