Collagen foods | ಚರ್ಮದ ಆರೋಗ್ಯದ ಕೀಲಿಕೈ ಕೊಲಾಜೆನ್‌: ಈ ಐದು ಆಹಾರಗಳಲ್ಲಿದೆ ನೋಡಿ - Vistara News

ಆರೋಗ್ಯ

Collagen foods | ಚರ್ಮದ ಆರೋಗ್ಯದ ಕೀಲಿಕೈ ಕೊಲಾಜೆನ್‌: ಈ ಐದು ಆಹಾರಗಳಲ್ಲಿದೆ ನೋಡಿ

ಕೊಲಾಜೆನ್‌ ಚರ್ಮದ ರಕ್ಷಣೆಯ ಅತೀ ಅಗತ್ಯವಾದ ಪೋಷಕಾಂಶಗಳಲ್ಲೊಂದು. ಹಾಗಾದರೆ, ಕೊಲಾಜೆನ್‌ ಉತ್ಪಾದನೆಗೆ ಸಹಾಯ ಮಾಡುವ ಯಾವ ಆಹಾರಗಳನ್ನು ಸೇವಿಸುವ ಮೂಲಕ ಚರ್ಮದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂಬುದನ್ನು ನೋಡೋಣ.

VISTARANEWS.COM


on

Collagen foods
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚರ್ಮದ ವಿಚಾರಕ್ಕೆ ಬಂದರೆ ಬಹುತೇಕ ಎಲ್ಲರೂ ಹೆಚ್ಚು ಆಸ್ಥೆ, ಕಾಳಜಿ ವಹಿಸುತ್ತಾರೆ. ಅದರಲ್ಲೂ ಮುಖದ ಚರ್ಮಕ್ಕೆ ಎಲ್ಲಕ್ಕಿಂತ ಹೆಚ್ಚು ಆದ್ಯತೆ. ಮುಖದ ಚರ್ಮಕ್ಕೆ ಏನೂ ಆಗದಿರಲಿ ಎಂದು ಅದರ ಕಾಳಜಿ ಎಲ್ಲರೂ ಮಾಡುವುದುದ ಸಹಜ. ನೀರು ಕುಡಿಯುವುದರಿಂದ ಹಿಡಿಡದು, ಮುಖಕ್ಕೆ ಹಚ್ಚುವ ಕ್ರೀಮು ಸೀರಮ್ಮುಗಳವರೆಗೆ ಎಲ್ಲವೂ ಮುಖದ ಒಳಿತಿಗಾಗಿಯೇ ಎಂಬುದು ಎಲ್ಲರಿಗೂ ಗೊತ್ತಿರುವ ಸೀಕ್ರೆಟ್ಟು. ಹೀಗೆ ಮುಖದ ಚರ್ಮದ ಬಗ್ಗೆ ಕಾಳಜಿ ವಹಿಸುವ ಪ್ರತಿಯೊಬ್ಬರಗೂ ತಿಳಿದಿರುವಂತೆ, ಕೊಲಾಜೆನ್‌ ಚರ್ಮದ ರಕ್ಷಣೆಯ ಅತೀ ಅಗತ್ಯವಾದ ಪೋಷಕಾಂಶಗಳಲ್ಲೊಂದು. ಎಲುಬು, ಕೀಲು, ಮಾಂಸಖಂಡಗಳು, ಕಾರ್ಟಿಲೇಜ್‌ಗಳಲ್ಲಿ ಕೊಲಾಜೆನ್‌ ಎಂಬ ಪ್ರೊಟೀನು ಇದ್ದೇ ಇರುತ್ತದೆ. ಷರ್ಮದ ಹೊಳಪು ಹಾಗೂ ಆರೋಗ್ಯದ ಹಿಂದಿರುವ ಗುಟ್ಟೂ ಕೂಡಾ ಇದೇ ಕೊಲಾಜೆನ್.‌ ಇಂಥ ಕೊಲಾಜೆನ್‌ ವಯಸ್ಸಾದಂತೆ ಉತ್ಪತ್ತಿಯಾಗುವುದು ಕಡಿಮೆಯಾಗುವುದರಿಂದ ಚರ್ಮಕ್ಕೆ ಇದರ ಅಗತ್ಯತೆಯನ್ನು ಪೂರೈಸುವುದೂ ಕೂಡಾ ಅತ್ಯಂತ ಅಗತ್ಯದ ಸಂಗತಿಗಳಲ್ಲೊಂದು.

ದೇಹದಲ್ಲಿ ಕೊಲಾಜೆನ್‌ ಉತ್ಪತ್ತಿಯಾಗಲು ಇತರ ಪೋಷಕಾಂಶಗಳ ಅಗತ್ಯವೂ ಇದೆ. ಅಮಿನೋ ಆಸಿಡ್‌, ಝಿಂಕ್‌, ವಿಟಮಿನ್‌ ಸಿ, ಮ್ಯಾಂಗನೀಸ್‌ ಹಾಗೂ ಕಾಪರ್‌ ಇರುವ ಆಹಾರಗಳು ಕೊಲಾಜೆನ್‌ ಉತ್ಪಾದನೆಗೆ ಹೆಚ್ಚು ಸೂಕ್ತ. ಹೀಗಾಗಿ ಇವುಗಳಿರುವ ಆಹಾರಗಳನ್ನು ನಾವು ಆಯ್ಕೆ ಮಾಡುತ್ತಾ ಬಂದಲ್ಲಿ, ನಮ್ಮ ಚರ್ಮ ಕೊಲಾಜೆನ್‌ ಅಂಶವನ್ನು ತನ್ನಲ್ಲಿ ಹೆಚ್ಚಿಸಿಕೊಂಡು ಆರೋಗ್ಯಕರವೂ, ಸುಂದರವಾಗಿಯೂ ನಳನಳಿಸುತ್ತದೆ.

ಹಾಗಾದರೆ, ಕೊಲಾಜೆನ್‌ ಉತ್ಪಾದನೆಗೆ ಸಹಾಯ ಮಾಡುವ ಯಾವ ಆಹಾರಗಳನ್ನು ಸೇವಿಸುವ ಮೂಲಕ ಚರ್ಮದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂಬುದನ್ನು ನೋಡೋಣ.

೧. ಚಿಕನ್:‌ ಅತ್ಯಂತ ಹೆಚ್ಚು ಕೊಲಾಜೆನ್‌ ಇರುವ ಆಹಾರಗಳಲ್ಲಿ ಚಿಕನ್‌ ಕೂಡಾ ಒಂದು. ಇಡಿಯ ಚಿಕನ್‌ನಲ್ಲಿ ಅತ್ಯಂತ ಉತ್ತಮ ಪ್ರಮಾಣದಲ್ಲಿ ಕನೆಕ್ಟಿವ್‌ ಟಿಶ್ಯೂ ಇರುವುದರಿಂದ ಇದರ ಮೂಲಕ ಕೊಲಾಜೆನ್‌ ನಮ್ಮ ದೇಹಕ್ಕೆ ಸಿಗುತ್ತದೆ. ಹಾಗಾಗಿ, ಚರ್ಮ ನಳನಳಿಸಿ ಪಳಪಳ ಹೊಳೆಯಬೇಕೆಂದಿದ್ದರೆ ಚಿಕನ್‌ ತಿನ್ನಬಹುದು.

೨. ನೆಲ್ಲಿಕಾಯಿ: ನೆಲ್ಲಿಕಾಯಿ ಕೇವಲ ಚರ್ಮದ ಆರೋಗ್ಯ ಮಾತ್ರವಲ್ಲ. ದೇಹದ ಆರೋಗ್ಯಕ್ಕೆ ಅತ್ಯಂತ ಅಗತ್ಯವಾದ ಸೂಪರ್‌ ಫುಡ್‌. ಇದರಲ್ಲಿರುವ ವಿಟಮಿನ್‌ ಸಿಯಿಂದ ಸಾಕಷ್ಟು ಪ್ರಯೋಜನಗಳಿದ್ದು ಚರ್ಮದ ಅರೋಗ್ಯಕ್ಕೂ ಅಗತ್ಯ ಆಹಾರ. ಇದು ಪಚನಕ್ರಿಯೆಯನ್ನೂ ವೇಗವಾಗಿಸುವ ಜೊತೆಗೆ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

ಇದನ್ನೂ ಓದಿ | Eye health foods | ಕಣ್ಣು ಆರೋಗ್ಯವಾಗಿ ಇರಬೇಕಿದ್ದರೆ ಇವನ್ನೆಲ್ಲ ತಿನ್ನುತ್ತಿರಿ!

೩. ಮೀನು: ಕೊಲಾಜೆನ್‌ನ ಅತ್ಯಂತ ಶ್ರೀಮಂತ ಮೂಲ ಎಂದರೆ ಅದು ಮೀನು. ಮೀನಿನಲ್ಲಿರುವಷ್ಟು ಕೊಲಾಜೆನ್‌ ಬೇರೆ ಯಾವ ಆಹಾರದ ಮೂಲಕವೂ ನಮ್ಮ ದೇಹಕ್ಕೆ ಸಿಗುವುದಿಲ್ಲ. ಇದರಲ್ಲಿರುವ ಅಮೈನೋ ಆಸಿಡ್‌ ಕೊಲಾಜೆನ್‌ ಉತ್ಪತ್ತಿಗೆ ಪ್ರೇರಣೆಯನ್ನೂ ನೀಡುವ ಮೂಲಕ ಚರ್ಮದ ಆರೋಗ್ಯದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.

೪. ಹಾಲು ಹಾಗೂ ಹಾಲಿನ ಉತ್ಪನ್ನಗಳು: ಭಾರತದಲ್ಲಿ ಹಾಲು ಹಾಗೂ ಹಾಲಿನ ಉತ್ಪನ್ನಗಳಾದ ಮೊಸರು, ಮಜ್ಜಿಗೆ, ಚೀಸ್‌, ಪನೀರ್‌, ಖೋವಾ,ಬೆಣ್ಣೆ ಸೇರಿದಂತೆ ಹಲವುಗಳ ಉಪಯೋಗ ಹೆಚ್ಚಿರುವುದರಿಂದ ಇದು ಎಲ್ಲರಿಗೂ ಸುಲಭವಾಗಿ ಸಿಗಬಹುದಾದ ಕೊಲಾಜೆನ್‌ ಮೂಲ. ಇದರಲ್ಲಿರುವ ಝಿಂಕ್‌ ಹಾಗೂ ಖನಿಜಾಂಶಗಳು ಕೊಲಾಜೆನ್‌ ಉತ್ಪತ್ತಿಗೆ ಸಹಾಯ ಮಾಡುತ್ತವೆ.

೫. ಬೇಳೆಕಾಳುಗಳು: ಬಾರತೀಯ ಅಡುಗೆಯಲ್ಲಿ ಅತ್ಯಂತ ಸಾಮಾನ್ಯವಿರುವ ಆಹಾರವೆಂದರೆ ಬೇಳೆ ಕಾಳುಗಳು. ಸಾಮಾನ್ಯರಿಗೆ ಸುಲಭವಾಗಿ ಕೈಗೆಟಕುವ ಈ ಬೇಳೆಕಾಳುಗಳ ನಿತ್ಯ ಬಳಕೆ ಇಲ್ಲಿದೆ. ಹಾಗಾಗಿ, ಕೇವಲ ಕೊಲಾಜೆನ್‌ ಮಾತ್ರವಲ್ಲದೆ, ದೇಹಕ್ಕೆ ಬೇಕಾದ ಅಗತ್ಯ ಪೋಷಕಾಂಶಗಳಿಗೆ ಬೇಳೆಕಾಳುಗಳೇ ಮೂಲ. ಪ್ರೊಟೀನ್‌ ಹಾಗೂ ಇತರ ಬಹುತೇಕ ಎಲ್ಲ ಪೋಷಕಾಂಶಗಳೂ ಬೇಳೆಕಾಳುಗಳಿಂದ ಪಡೆಯಬಹುದು.

ಇದನ್ನೂ ಓದಿ | Food Habit | ಹಸಿದ ಹೊಟ್ಟೆಗೆ ಈ ಆಹಾರಗಳು ಬೇಡವೇ ಬೇಡ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

International Yoga Day 2024: ಕುತ್ತಿಗೆ ನೋವಿನ ನಿವಾರಣೆಗೆ ಯಾವ ಆಸನಗಳು ಸೂಕ್ತ?

International Yoga Day 2024: ನಿಯಮಿತವಾದ ಯೋಗಾಭ್ಯಾಸದಿಂದ ಶರೀರವನ್ನು ಕಾಡುವ ಹಲವು ಬಗೆಯ ನೋವುಗಳನ್ನು ಕಡಿಮೆ ಮಾಡಿಕೊಳ್ಳಬಹುದು. ಈ ನಿಟ್ಟಿನಲ್ಲಿ, ಬಾಧಿಸುವ ಕುತ್ತಿಗೆ ನೋವನ್ನು ಕಡಿಮೆ ಮಾಡಲು ಉಪಯುಕ್ತವಾದ ಆಸನಗಳನ್ನು ಇಲ್ಲಿ ತಿಳಿಸಲಾಗಿದೆ. ಆದರೆ ಇದಕ್ಕೆಲ್ಲ ಸ್ವಯಂ ವೈದ್ಯ ಮಾಡದೆಯೆ, ಸರಿಯಾದ ಮಾರ್ಗದರ್ಶನದ ಜೊತೆಗೆ ಇದನ್ನು ಅಭ್ಯಾಸ ಮಾಡುವುದು ಅಗತ್ಯ.

VISTARANEWS.COM


on

International Yoga Day 2024
Koo

ದೇಹ ಮತ್ತು ಮನಸ್ಸುಗಳ ಮೇಲಿನ ಮನಸ್ಸಿನ ಒತ್ತಡ ನಿವಾರಣೆಗೆ ಯೋಗ (International Yoga Day 2024) ಬಹು ಉಪಯುಕ್ತ. ಸರಿಯಾದ ಉಸಿರಾಟ ಕ್ರಮದೊಂದಿಗೆ ಸೂಕ್ತ ಮಾರ್ಗದರ್ಶನದ ಜೊತೆಗೆ ಇದನ್ನು ನಿಯಮಿತವಾಗಿ ಅಭ್ಯಾಸ ಮಾಡಿದರೆ ಮೈ-ಮನಗಳ ಸಮನ್ವಯವನ್ನು ಸಾಧಿಸಬಹುದು. ಜೊತೆಗೆ, ಹಲವಾರು ನೋವುಗಳಿಗೆ, ಶರೀರದ ತೊಂದರೆಗಳಿಗೆ ಉಪಶಮನವನ್ನೂ ಪಡೆಯಬಹುದು. ಈ ನಿಟ್ಟಿನಲ್ಲಿ, ಕುತ್ತಿಗೆ ನೋವಿನ ಶಮನಕ್ಕೆ ಉಪಯುಕ್ತವಾದ ಆಸನಗಳನ್ನು ಇಲ್ಲಿ ನೀಡಲಾಗಿದೆ. ಆದರೆ ಇವುಗಳನ್ನೆಲ್ಲ ಅಭ್ಯಾಸ ಮಾಡುವ ಮುನ್ನ ವೈದ್ಯರ ಸಲಹೆಯನ್ನು ಪಡೆಯುವುದು ಅಗತ್ಯ. ಜೊತೆಗೆ ಅನುಭವಿಯಾದ ಯೋಗ ತರಬೇತುದಾರರ ಮಾರ್ಗದರ್ಶನವೂ ಅಗತ್ಯ.

ಕುತ್ತಿಗೆ ನೋವು:

ಬೆನ್ನು ಹುರಿಯ ಸರ್ವೈಕಲ್‌ ಭಾಗದಲ್ಲಿ ನೋವು ಕಾಣಿಸಿಕೊಳ್ಳುವುದು ಇತ್ತೀಚಿನ ವರ್ಷಗಳ ಬಹಳಷ್ಟು ಜನರು ಅನುಭವಿಸುವ ತೊಂದರೆ. ಜೀವನಶೈಲಿಯ ದೋಷಗಳು, ಸ್ಕ್ರೀನ್‌ ಸಮಯ ಅತಿಯಾಗುವುದು, ಜೀರ್ಣಾಂಗದ ತೊಂದರೆಗಳು, ಗಾಯ, ವಯಸ್ಸು ಮುಂತಾದ ಹಲವು ಕಾರಣಗಳು ಇದಕ್ಕಿರಬಹುದು. ತಲೆಯ ಹಿಂಭಾಗದಲ್ಲಿ ನೋವು, ಕುತ್ತಿಗೆ, ಭುಜ, ಮೊಣಕೈಗಳಲ್ಲಿ ನೋವು, ತಲೆಸುತ್ತು ಮುಂತಾದ ಹಲವು ಲಕ್ಷಣಗಳು. ಈ ನೋವು ಕಡಿಮೆ ಮಾಡುವುದಕ್ಕೆ ಉಪಯುಕ್ತ ಎನ್ನಬಹುದಾದ ಆಸನಗಳಿವು.

International Yoga Day 2024

ಮಕರಾಸನ:

ಕುತ್ತಿಗೆಯಿಂದ ಹಿಡಿದು ಬೆನ್ನಿನ ಕೆಳಭಾಗದವರೆಗಿನ ನೋವು ಶಮನಕ್ಕೆ ಇದು ಪರಿಣಾಮಕಾರಿ. ಮೊದಲಿಗೆ, ಹೊಟ್ಟೆ ಅಡಿ ಮಾಡಿ, ಕಾಲುಚಾಚಿ ನೇರ ಮಲಗಿ. ಕೈಗಳೆರಡನ್ನೂ ಮುಖದ ಅಡಿಭಾಗಕ್ಕೆ ಬರುವಂತೆ ಮಡಿಸಿಟ್ಟುಕೊಳ್ಳಿ. ಕೈಗಳ ಮೇಲೆ ಗಲ್ಲ ಇರಿಸಿ, ಅದಾಗದಿದ್ದರೆ ಹಣೆಯನ್ನಾದರೂ ಇರಿಸಬಹುದು. ಹಲವು ನಿಮಿಷಗಳವರೆಗೆ ಹೀಗೆ ಮಲಗಿ, ದೇಹವನ್ನೆಲ್ಲ ಸಡಿಲ ಬಿಡಿ.

International Yoga Day 2024

ಸೇತುಬಂಧಾಸನ:

ದೇಹಕ್ಕೆ ಬಲ ನೀಡುವುದು ಮಾತ್ರವಲ್ಲದೆ, ಶರೀರದ ಸಮನ್ವಯವನ್ನೂ ಈ ಆಸನ ಹೆಚ್ಚಿಸುತ್ತದೆ. ಸಾಮಾನ್ಯವಾಗಿ ಯಾವುದೇ ‌ʻಬ್ರಿಜ್ ಪೋಸ್ʼ ಎಂದು ಕರೆಸಿಕೊಳ್ಳುವಂಥ ಆಸನಗಳು ಕಾಲಿನಿಂದ ಹಿಡಿದು ಕುತ್ತಿಗೆಯವರೆಗಿನ ನಾನಾ ಭಾಗಗಳ ಬಲವನ್ನು ಹೆಚ್ಚಿಸುತ್ತವೆ. ಎರಡೂ ಪಾದಗಳನ್ನು ಊರಿ ನೆಲಕ್ಕೆ ಒತ್ತಿ, ಮುಂಡದ ಭಾಗವನ್ನು ಮೇಲಕ್ಕೆತ್ತುವ ಈ ಆಸನ ರಕ್ತಪರಿಚಲನೆಯನ್ನೂ ಸುಧಾರಿಸುತ್ತದೆ.

International Yoga Day 2024

ಭುಜಂಗಾಸನ:

ಬೆನ್ನುಹುರಿಯ ಬಲವರ್ಧನೆಗೆ ಅಗತ್ಯವಾದ ಆಸನವಿದು. ಬೆನ್ನುಹುರಿಯ ಅಕ್ಕಪಕ್ಕದ ಸ್ನಾಯುಗಳು ಸಹ ಇದರಿಂದ ಬಲಗೊಳ್ಳುತ್ತವೆ. ಜೊತೆಗೆ, ಸೊಂಟ, ಕಿಬ್ಬೊಟ್ಟೆ, ಎದೆ, ಭುಜ ಮತ್ತು ತೋಳುಗಳ ಸ್ನಾಯುಗಳ ಮೇಲೂ ಇದು ಕೆಲಸ ಮಾಡುತ್ತದೆ. ಹೆಡೆ ಎತ್ತಿದ ಹಾವಿನಂತೆ ಕಾಣುವ ಭಂಗಿಯಿದು. ಮೊದಲಿಗೆ ಮುಖ ಅಡಿ ಮಾಡಿ ಮಲಗಿ. ಹಸ್ತಗಳನ್ನು ಎದೆಯ ಪಕ್ಕದಲ್ಲಿ ಊರಿ, ಕಟಿಯಿಂದ ಮೇಲೆ ಭಾಗವನ್ನು ನಿಧಾನಕ್ಕೆ ಮೇಲೆತ್ತಿ ನಿಲ್ಲಿಸಿ.

International Yoga Day 2024

ಧನುರಾಸನ:

ಈ ಆಸನ ಮಾಡುವ ಲಾಭಗಳು ಬಹಳಷ್ಟಿವೆ. ಬೆನ್ನು ಮತ್ತು ಸೊಂಟದ ಬಲವರ್ಧನೆಗೆ ಇದು ಸಹಾಯಕ. ಇದಲ್ಲದೆ, ದೇಹದ ಚಯಾಪಚಯವನ್ನು ಹೆಚ್ಚಿಸಿ, ಹೊಟ್ಟೆ ಮತ್ತು ತೊಡೆಗಳು ಬೊಜ್ಜು ನಿವಾರಿಸಿ, ಜೀರ್ಣಾಂಗಗಳ ಆರೋಗ್ಯ ಸುಧಾರಿಸುತ್ತದೆ ಮತ್ತು ಮಲಬದ್ಧತೆಯನ್ನು ಶಮನ ಮಾಡುತ್ತದೆ. ಮುಟ್ಟಿನ ಹೊಟ್ಟೆ ನೋವಿನ ಉಪಶಮನಕ್ಕೂ ಇದು ಉಪಯುಕ್ತವಾಗಿದೆ. ಮೊದಲಿಗೆ, ಮುಖ ಅಡಿಯಾಗುವಂತೆ ಮಲಗಿ, ಕೈಕಾಲುಗಳನ್ನು ನೇರವಾಗಿ ಚಾಚಬೇಕು. ಕಾಲು ಮಡಿಸಿ, ಗಜ್ಜೆ ಹಾಕುವ ಭಾಗವನ್ನು ಕೈಗಳಿಂದ ಹಿಡಿಯಬೇಕು. ಕಾಲುಗಳನ್ನು ದೇಹದ ಅಗಲಕ್ಕಿಂತ ಹೆಚ್ಚು ಅಗಲ ಇರಿಸುವಂತಿಲ್ಲ. ಈಗ ಕೈಗಳಿಂದ ಕಾಲೆಳೆಯುತ್ತಾ, ಕಾಲುಗಳಿಂದ ಕೈ ಎಳೆಯುತ್ತಾ ಎರಡೂ ಕಾಲುಗಳನ್ನು ಮತ್ತು ಮುಖವನ್ನು ಮೇಲಕ್ಕೆತ್ತಬೇಕು. ನೋಡುವುದಕ್ಕೆ ಬಿಲ್ಲಿನಂತೆ ಬಾಗಿರುವಂತೆ ಕಾಣುತ್ತದೆ ದೇಹ.

ಇದನ್ನೂ ಓದಿ:Video Viral: ಮಹಿಳೆಯನ್ನು ತಿವಿದು ರಸ್ತೆಯುದ್ದಕ್ಕೂ ಎಳೆದೊಯ್ದ ಎಮ್ಮೆ! ವಿಡಿಯೊ ಇದೆ

International Yoga Day 2024

ಗೋಮುಖಾಸನ:

ಎದೆ, ತೋಳು, ಭುಜ, ಕುತ್ತಿಗೆ, ಕಾಲುಗಳನ್ನು ಬಲಗೊಳಿಸುವ ಆಸನವಿದು. ಹೆಚ್ಚಿನ ವ್ಯಾಯಾಮವಿಲ್ಲದೆ ಜಡ ಬದುಕನ್ನು ನಡೆಸುತ್ತಿರುವವರಿಗೆ ಇದು ಹೆಚ್ಚು ಉಪಯುಕ್ತ. ಈ ಆಸನದಲ್ಲಿ ಬೆನ್ನು ಹುರಿ ಸರಿಯಾಗಿ ಹಿಗ್ಗಿ, ಅದರ ಮೇಲಿನ ಒತ್ತಡ ಕಡಿಮೆ ಆಗುತ್ತದೆ. ಬೆನ್ನು ನೇರವಾಗಿರಿಸಿಕೊಂಡು, ಕಾಲುಗಳೆರನ್ನು ಮುಂದೆ ಚಾಚಿ ಕುಳಿತುಕೊಳ್ಳಿ. ಮೊದಲಿಗೆ, ಬಲಗಾಲನ್ನು ಮಡಿಸಿ, ಬಲಪಾದ ಎಡಪೃಷ್ಠದ ಪಕ್ಕ ಬರುವಂತೆ ಇರಿಸಿ, ನಂತರ ಎಡಮಂಡಿಯನ್ನು ಬಲಮಂಡಿಯ ಮೇಲೆ ಬರುವಂತೆ ಮಡಿಸಿಡಿ. ಬಲಗೈ ಮೇಲೆತ್ತಿ, ಬೆನ್ನಿನ ಹಿಂದೆ ಮಡಿಸಿ, ಎಡಗೈಯನ್ನು ಕೆಳಗಿನಿಂದಲೇ ಮಡಿಸಿ, ಬಲಗೈ ಬೆರಳುಗಳನ್ನು ಹಿಡಿದುಕೊಳ್ಳಿ.

Continue Reading

ಬೆಂಗಳೂರು

MAHE Manipal: ಕೆಎಂಸಿಯಲ್ಲಿ 1 ದಿನದ ಚಿಕಿತ್ಸಾ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ

MAHE Manipal: ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ (ಮಾಹೆ) ನ ಸಾಂಸ್ಥಿಕ ಸಂಪರ್ಕ ಕಚೇರಿಯಿಂದ ಬೆಂಗಳೂರು ನಗರದ ಕೆಎಂಸಿಯಲ್ಲಿ ಫಿಲಿಪ್ಸ್‌ ಎಂಜಿನಿಯರ್‌ಗಳಿಗಾಗಿ ಒಂದು ದಿನದ ಚಿಕಿತ್ಸಾ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಕ್ರಮ ನಡೆಯಿತು.

VISTARANEWS.COM


on

MAHE Manipal 1 Day Treatment Capacity Development Training Program at KMC
Koo

ಬೆಂಗಳೂರು: ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ (ಮಾಹೆ) ನ ಸಾಂಸ್ಥಿಕ ಸಂಪರ್ಕ ಕಚೇರಿಯಿಂದ ನಗರದ ಕೆಎಂಸಿಯಲ್ಲಿ ಫಿಲಿಪ್ಸ್‌ ಎಂಜಿನಿಯರ್‌ಗಳಿಗಾಗಿ ಒಂದು ದಿನದ ಚಿಕಿತ್ಸಾ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು (MAHE Manipal) ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ (ಮಾಹೆ) ನ ತಂತ್ರಜ್ಞಾನ ಮತ್ತು ವಿಜ್ಞಾನ ವಿಭಾಗದ ಸಹ-ಉಪಕುಲಪತಿ ಡಾ. ನಾರಾಯಣ ಸಭಾಹಿತ್‌ ಮಾತನಾಡಿ, ಸಾಮಾಜಿಕ ಸ್ವಾಸ್ಥ್ಯದ ಅವಶ್ಯಕತೆಯನ್ನು ಪೂರೈಸುವ ನಿಟ್ಟಿನಲ್ಲಿ ಆರೋಗ್ಯ ಆರೈಕೆ ಕ್ಷೇತ್ರದಲ್ಲಿ ಸುಧಾರಣೆಗಳನ್ನು ತರುವಲ್ಲಿ ಪ್ರಸ್ತುತ ಕಾರ್ಯಕ್ರಮವು ಪ್ರಮುಖ ಹೆಜ್ಜೆಯಾಗಿದೆ ಎಂದು ತಿಳಿಸಿದರು.

ಎಂಜಿನಿಯರ್‌ಗಳನ್ನು ವೈದ್ಯಕೀಯ ಜ್ಞಾನದೊಂದಿಗೆ ಸಿದ್ಧಗೊಳಿಸುವುದರ ಅಗತ್ಯದ ಕುರಿತು ಮಾತನಾಡಿದರು.

ಇದನ್ನೂ ಓದಿ: Kisan Samman Nidhi: ರೈತರಿಗೆ ಗುಡ್‌ನ್ಯೂಸ್‌; ಕಿಸಾನ್‌ ಸಮ್ಮಾನ್‌ ನಿಧಿಯ 17ನೇ ಕಂತು ನಾಳೆ ನಿಮ್ಮ ಅಕೌಂಟ್‌ಗೆ; ಹೀಗೆ ಪರಿಶೀಲಿಸಿ

ಮಾಹೆಯ ತಾಂತ್ರಿಕ ಮತ್ತು ಯೋಜನಾ ವಿಭಾಗದ ಸಹ-ಉಪಕುಲಪತಿ ಡಾ. ಎನ್‌.ಎನ್‌. ಶರ್ಮಾ ಮಾತನಾಡಿ, ‘ಎರಡೂ ಜ್ಞಾನಶಿಸ್ತುಗಳ ಸಹಭಾಗಿತ್ವದಿಂದಾಗಿ ಕೇವಲ ತಾಂತ್ರಿಕ ಸುಧಾರಣೆಯಷ್ಟೇ ಅಲ್ಲ, ವೈದ್ಯಕೀಯ ಶುಶ್ರೂಷಾ ವಿಭಾಗದ ನವೀನ ಸಂಶೋಧನೆಗಳ ಪರಿಣಾಮವನ್ನು ಅರ್ಥಮಾಡಿಕೊಳ್ಳುವಲ್ಲಿಯೂ ಪರಿಣಾಮ ಬೀರಲಿದೆ. ಅಂತಿಮವಾಗಿ ರೋಗಿಗಳ ಶುಶ್ರೂಷೆಯಲ್ಲಿ ಸುಧಾರಣೆ ತರುವ ಜೀವಪರ ಧೋರಣೆಯೇ ಈ ಕಾರ್ಯಕ್ರಮದ ಮುಖ್ಯ ಆಶಯವಾಗಿದೆ ಎಂದು ಹೇಳಿದರು.

ಇದನ್ನೂ ಓದಿ: GPF Interest: ಸರ್ಕಾರಿ ನೌಕರರೇ ಗಮನಿಸಿ; 5 ಲಕ್ಷ ಮೀರಿದ ಜಿಪಿಎಫ್‌ಗೆ ಬಡ್ಡಿ ಪಾವತಿಸಲು ಸರ್ಕಾರ ಆದೇಶ

ಬಳಿಕ ಮಾಹೆಯ ನಿಯೋಜಿತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಯೋಜನೆ ಮತ್ತು ಆರ್ಥಿಕ ವಿಭಾಗದ ನಿರ್ದೇಶಕ ಡಾ. ರವಿರಾಜ ಎನ್‌. ಎಸ್‌. ಮಾತನಾಡಿ, ಕೃತಕ ಬುದ್ದಿಮತ್ತೆ (ಆರ್ಟಿಫಿಶಲ್‌ ಇಂಟಲಿಜೆನ್ಸ್‌) ನಿಯಂತ್ರಿತ ಶುಶ್ರೂಷಾ ವಿಧಾನ, ವೈಯಕ್ತಿಕ ಶುಶ್ರೂಷೆ, ದೂರನಿಯಂತ್ರಿತವಾಗಿ ರೋಗಿಯ ಚಿಕಿತ್ಸೆ ಮುಂತಾದ ಅತ್ಯಾಧುನಿಕ ಸೌಲಭ್ಯಗಳ ನಿರ್ವಹಣೆಯಲ್ಲಿ ತಂತ್ರಜ್ಞಾನ ಮತ್ತು ವೈದ್ಯಕೀಯ ವ್ಯವಸ್ಥೆ ಜತೆಯಾಗಿ ಕಾರ್ಯನಿರ್ವಹಿಸಬೇಕಾಗಿರುವುದರ ಅಗತ್ಯವನ್ನು ಒತ್ತಿಹೇಳಿದರು.

ತರಬೇತಿಯ ವಿಶೇಷತೆ

ತರಬೇತಿ ಕಾರ್ಯಕ್ರಮದಲ್ಲಿ ವಿಶೇಷವಾಗಿ ಹೃದಯದಲ್ಲಿ ವಿದ್ಯುತ್‌ಕ್ರಿಯೆಯನ್ನು ಪರಿಶೀಲಿಸುವ ಮತ್ತು ಕಾಯಿಲೆಯನ್ನು ನಿರ್ಧರಿಸುವ ವಿಚಾರದ ಬಗ್ಗೆ ಕೇಂದ್ರೀಕೃತವಾಗಿದ್ದು, ಇದು ತಂತ್ರಜ್ಞಾನ ಮತ್ತು ಆರೋಗ್ಯ ಆರೈಕೆಯ ವಿಭಾಗಗಳ ನಡುವಿನ ಅಂತರವನ್ನು ಕಡಿಮೆಗೊಳಿಸುವ ಮತ್ತು ಭಾಗಿಗಳಾದವರಿಗೆ ಸಮಗ್ರ ಪ್ರಾಯೋಗಿಕ ಅನುಭವವನ್ನು ನೀಡುವ ಕಾರ್ಯಕ್ರಮವಾಗಿತ್ತು.

ಕೆಎಂಸಿಯ ನುರಿತ ಬೋಧಕರು ತರಗತಿಗಳನ್ನು ನಡೆಸಿಕೊಟ್ಟರಲ್ಲದೆ, ಹೃದಯ ಚಿಕಿತ್ಸೆಗೆ ಸಂಬಂಧಿಸಿದ ಉಪಕರಣಗಳ ಕಾರ್ಯ ವೈಖರಿ, ಅವುಗಳ ಅನ್ವಯಗಳು, ಮತ್ತು ರೋಗಿಗಳ ಚಿಕಿತ್ಸೆಯ ಸವಾಲುಗಳ ಬಗ್ಗೆ ತಿಳಿಸಿಕೊಡಲಾಯಿತು. ಕಾರ್ಯಕ್ರಮದಲ್ಲಿ ವಿಷಯಗಳ ಅರಿವಿನ ಜತೆಗೆ ಪ್ರಾಯೋಗಿಕ ಅನುಭವಗಳನ್ನು ನೀಡುವ ಕುರಿತು ಒತ್ತು ನೀಡಲಾಯಿತು.

ಇದನ್ನೂ ಓದಿ: Gold Rate Today: ಆಭರಣ ಖರೀದಿಸುವವರಿಗೆ ರಿಲೀಫ್‌; ಇಳಿದ ಚಿನ್ನದ ದರ

ತರಬೇತಿಯಲ್ಲಿ ಬೆಂಗಳೂರಿನ ಫಿಲಿಪ್ಸ್‌ ಇನ್ನೋವೇಶನ್‌ ಸೆಂಟರ್‌ನ ಆ್ಯಂಬುಲೇಟರಿ ಮಾನಿಟರಿಂಗ್‌ ಮತ್ತು ಡಯಾಗ್ನಿಸ್ಟಿಕ್ಸ್‌ ವಿಭಾಗದ 14 ಜನ ಎಂಜಿನಿಯರ್‌ಗಳು ಪಾಲ್ಗೊಂಡಿದ್ದರು.

Continue Reading

ಆರೋಗ್ಯ

Flesh-Eating Bacteria: ಆತಂಕ ಮೂಡಿಸಿದ ಮಾಂಸ ಭಕ್ಷಕ ಬ್ಯಾಕ್ಟೀರಿಯಾ; ಸೋಂಕು ತಗುಲಿದ 48 ಗಂಟೆಯಲ್ಲೇ ಸಾವು!

Flesh-Eating Bacteria: ಅಪಾಯಕಾರಿ ಕಾಯಿಲೆಯೊಂದು ಜಪಾನ್‌ನಲ್ಲಿ ಪತ್ತೆಯಾಗಿದ್ದು, ಸೋಂಕು ತಗುಲಿದ 48 ಗಂಟೆಯಲ್ಲೇ ಮಾನವನ ಸಾವಿಗೆ ಕಾರಣವಾಗುತ್ತದೆ. ಈ ಸೋಂಕಿಗೆ ಮಾಂಸ-ಭಕ್ಷಕ ಬ್ಯಾಕ್ಟೀರಿಯಾ ಕಾರಣವಾಗಿದ್ದು, ಜಪಾನ್‌ನಲ್ಲಿ ವ್ಯಾಪಕವಾಗಿ ಪ್ರಸಾರವಾಗುತ್ತಿದೆ. ಈ ಅಪರೂಪದ ಕಾಯಿಲೆಯನ್ನು ಸ್ಟ್ರೆಪ್ಟೋಕೊಕ್ಕಾಲ್ ಟಾಕ್ಸಿಕ್ ಶಾಕ್ ಸಿಂಡ್ರೋಮ್ ಎಂದು ಕರೆಯಲಾಗುತ್ತದೆ.

VISTARANEWS.COM


on

Flesh-Eating Bacteria
Koo

ಟೋಕಿಯೊ: ವಿಶ್ವವನ್ನೇ ನಡುಗಿಸಿದ ಕೋವಿಡ್‌ ಹೊಡೆತದಿಂದ ಜಗತ್ತು ನಿಧಾನವಾಗಿ ಚೇತರಿಸಿಕೊಳ್ಳುತ್ತಿದೆ. ಈ ಮಧ್ಯೆ ಮತ್ತೊಂದು ಅಪಾಯಕಾರಿ ಕಾಯಿಲೆ ಜಪಾನ್‌ನಲ್ಲಿ ಪತ್ತೆಯಾಗಿದ್ದು, ಸೋಂಕು ತಗುಲಿದ 48 ಗಂಟೆಯಲ್ಲೇ ಮಾನವನ ಸಾವಿಗೆ ಕಾರಣವಾಗುತ್ತದೆ. ಈ ಸೋಂಕಿಗೆ ಮಾಂಸ ಭಕ್ಷಕ ಬ್ಯಾಕ್ಟೀರಿಯಾ (Flesh-Eating Bacteria)ಕಾರಣವಾಗಿದ್ದು, ಜಪಾನ್‌ನಲ್ಲಿ ವ್ಯಾಪಕವಾಗಿ ಪ್ರಸಾರವಾಗುತ್ತಿದೆ. ಈ ಅಪರೂಪದ ಕಾಯಿಲೆಯನ್ನು ಸ್ಟ್ರೆಪ್ಟೋಕೊಕ್ಕಾಲ್ ಟಾಕ್ಸಿಕ್ ಶಾಕ್ ಸಿಂಡ್ರೋಮ್ (Streptococcal Toxic Shock Syndrome-STSS) ಎಂದು ಕರೆಯಲಾಗುತ್ತದೆ.

ಜಪಾನ್‌ನಲ್ಲಿ ಈಗಾಗಲೇ ಈ ಮಾಂಸ ಭಕ್ಷಕ ಬ್ಯಾಕ್ಟೀರಿಯಾದಿಂದ ಕಾಣಿಸಿಕೊಳ್ಳುವ ಸ್ಟ್ರೆಪ್ಟೋಕೊಕ್ಕಾಲ್ ಟಾಕ್ಸಿಕ್ ಶಾಕ್ ಸಿಂಡ್ರೋಮ್ ಪ್ರಕರಣ 977ಕ್ಕೆ ಏರಿಕೆಯಾಗಿದೆ. ಕಳೆದ ವರ್ಷ ಒಟ್ಟು 941 ಪ್ರಕರಣಗಳು ವರದಿಯಾಗಿದ್ದವು. ಈ ವರ್ಷದ ಅರ್ಧ ಭಾಗದಲ್ಲಿಯೇ ಅದನ್ನೂ ಮೀರಿದ ಪ್ರಕರಣಗಳು ದಾಖಲಾಗಿದ್ದು ಆತಂಕ ಸೃಷ್ಟಿಸಿದೆ ಎಂದು ಮೂಲಗಳು ತಿಳಿಸಿವೆ.

“ಹೆಚ್ಚಿನ ಸಾವು ಸೋಂಕು ತಗುಲಿದ 48 ಗಂಟೆಗಳ ಒಳಗೆ ಸಂಭವಿಸುತ್ತವೆ. ಸೋಂಕು ಬಾಧಿತರ ಪಾದ ಬೆಳಿಗ್ಗೆ ಊದಿಕೊಂಡರೆ ಮಧ್ಯಾಹ್ನದ ವೇಳೆಗೆ ಊತ ಮೊಣಕಾಲಿನವರೆಗೆ ಹರಡುತ್ತದೆ ಮತ್ತು ಅವರು 48 ಗಂಟೆಗಳಲ್ಲಿ ಸಾಯುವ ಸಾಧ್ಯತೆ ಇದೆ” ಎಂದು ಟೋಕಿಯೊ ಮಹಿಳಾ ವೈದ್ಯಕೀಯ ವಿಶ್ವವಿದ್ಯಾಲಯದ ಸಾಂಕ್ರಾಮಿಕ ರೋಗಗಳ ಪ್ರಾಧ್ಯಾಪಕ ಕೆನ್ ಕಿಕುಚಿ ಆಘಾತಕಾರಿ ಮಾಹಿತಿ ಹಂಚಿಕೊಂಡಿದ್ದಾರೆ.

ಯಾವ ಬ್ಯಾಕ್ಟೀರಿಯಾ?

ಗ್ರೂಪ್ ಎ ಸ್ಟ್ರೆಪ್ಟೋಕಾಕಸ್ (ಜಿಎಎಸ್) ಬ್ಯಾಕ್ಟೀರಿಯಾ ಸಾಮಾನ್ಯವಾಗಿ ಸ್ಟ್ರೆಪ್ಟೋಕಾಕಸ್ ಪಿಯೋಜೆನೆಸ್ (Streptococcus Pyogenes) ಎಂದು ಕರೆಯಲ್ಪಡುತ್ತದೆ. ಇದು ವಿವಿಧ ರೀತಿಯ ಸೋಂಕುಗಳಿಗೆ ಕಾರಣವಾಗುತ್ತದೆ. ಗ್ರೂಪ್ ಎ ಸ್ಟ್ರೆಪ್ಟೋಕಾಕಸ್‌ನ ಕೆಲವು ತಳಿಗಳು ಗಂಟಲು ಅಥವಾ ಚರ್ಮದ ಸೋಂಕುಗಳಂತಹ ಸೌಮ್ಯ ಕಾಯಿಲೆಗಳಿಗೆ ಕಾರಣವಾಗಬಹುದು. ಜತೆಗೆ ನೆಕ್ರೋಟೈಸಿಂಗ್ ಫಾಸಿಟಿಸ್ ಅಥವಾ ಪ್ಟೋಕೊಕ್ಕಾಲ್ ಟಾಕ್ಸಿಕ್ ಶಾಕ್ ಸಿಂಡ್ರೋಮ್‌ನಂತಹ ಅಪಾಯಕಾರಿ ಕಾಯಿಲೆಗಳಂತಹ ಗಂಭೀರ ಸೋಂಕುಗಳೂ ಸಂಭವಿಸಬಹುದು. ಈ ಸಂದರ್ಭದಲ್ಲಿ ಸೂಕ್ತ ಚಿಕಿತ್ಸೆ ಅಗತ್ಯ.

ಸ್ಟ್ರೆಪ್ಟೋಕೊಕ್ಕಾಲ್ ಟಾಕ್ಸಿಕ್ ಶಾಕ್ ಸಿಂಡ್ರೋಮ್‌ನ ಲಕ್ಷಣ

ದೇಹದ ಭಾಗಗಳಲ್ಲಿ ನೋವು, ಊತ, ಜ್ವರ ಹಾಗೂ ಕಡಿಮೆ ರಕ್ತದೊತ್ತಡ ಮುಂತಾದವು ಸ್ಟ್ರೆಪ್ಟೋಕೊಕ್ಕಾಲ್ ಟಾಕ್ಸಿಕ್ ಶಾಕ್ ಸಿಂಡ್ರೋಮ್‌ನ ಲಕ್ಷಣಗಳು. ಇದು ಜೀವಕೋಶಗಳ ಸಾವು, ತೀವ್ರ ಜ್ವರ, ಉಸಿರಾಟದ ತೊಂದರೆ, ಅಂಗಾಂಗ ವೈಫಲ್ಯ ಹಾಗೂ ಸಾವಿಗೆ ಕೂಡ ಕಾರಣವಾಗಬಹುದು. ವಯಸ್ಕರು, ಮುಖ್ಯವಾಗಿ 50 ವರ್ಷ ದಾಟಿದವರಿಗೆ ಈ ಕಾಯಿಲೆ ಹೆಚ್ಚು ಅಪಾಯಕಾರಿ. ಇದರ ತಡೆಗೆ ಕೈಗಳನ್ನು ಸ್ವಚ್ಛವಾಗಿ ಇರಿಸಿಕೊಳ್ಳುವುದು ಬಹಳ ಮುಖ್ಯ. ಜತೆಗೆ ಯಾವುದೇ ತೆರೆದ ಗಾಯಗಳನ್ನು ನಿರ್ಲಕ್ಷಿಸಬಾರದು. ಮಾತ್ರವಲ್ಲ ಸೋಂಕಿತ ವ್ಯಕ್ತಿಗಳೊಂದಿಗೆ ನಿಕಟ ಸಂಪರ್ಕವನ್ನು ತಪ್ಪಿಸಬೇಕು ಎಂದು ತಜ್ಞರು ಸಲಹೆ ನೀಡುತ್ತಾರೆ.

ಜಪಾನ್ ಜತೆಗೆ ಯುರೋಪ್‌ನ ಐದು ದೇಶಗಳು ಸ್ಟ್ರೆಪ್ಟೋಕೊಕ್ಕಾಲ್ ಟಾಕ್ಸಿಕ್ ಶಾಕ್ ಸಿಂಡ್ರೋಮ್‌ ಪ್ರಕರಣಗಳ ಹೆಚ್ಚು ವರದಿಯಾಗುತ್ತಿವೆ ಎಂದು ವಿಶ್ವ ಆರೋಗ್ಯ ಸಂಸ್ಥೆಗೆ (WHO) ವರದಿ ಮಾಡಿದೆ. ಕೋವಿಡ್ -19 ನಿರ್ಬಂಧಗಳನ್ನು ತೆಗೆದುಹಾಕಿದ ನಂತರ ಸೋಂಕಿನ ಪ್ರಮಾಣ ಹೆಚ್ಚಿದೆ ಎಂದು ತಿಳಿಸಿದೆ. ಪ್ರಸ್ತುತ ಸೋಂಕಿನ ದರ ಗಮನಿಸಿದರೆ ಜಪಾನ್​ನಲ್ಲಿ ಈ ವರ್ಷ 2,500 ಪ್ರಕರಣಗಳ ದಾಖಲಾಗಬಹುದು ಎನ್ನುವ ಆತಂಕ ಮೂಡಿದೆ.

ಇದನ್ನೂ ಓದಿ: Health Tips: ಮಳೆಗಾಲದಲ್ಲಿ ಆರೋಗ್ಯವಾಗಿರಲು ಈ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ

Continue Reading

ಆರೋಗ್ಯ

Irregular Periods: ಏರುಪೇರಾದ ಋತುಚಕ್ರದ ಸಮಸ್ಯೆಯೇ? ಇಲ್ಲಿವೆ ಸರಳ ಮನೆಮದ್ದುಗಳು!

ಋತುಚಕ್ರವು ಪ್ರಕೃತಿ ಸಹಜ ಕ್ರಿಯೆ. ಇದು ಹೆಣ್ಣಿಗೆ ಸಿಕ್ಕ ಉಡುಗೊರೆಯೇ ಆದರೂ, ಬಹುತೇಕರಿಗೆ ಮಾನಸಿಕವಾಗಿ, ದೈಹಿಕವಾಗಿ ಬಹಳ ಕಿರಿಕಿರಿಯನ್ನೂ ನೀಡುವ ಕ್ರಿಯೆಯೂ ಹೌದು. ಸಮಾಜದಲ್ಲಿ, ಈ ಬಗ್ಗೆ ಹಲವು ಮೂಢನಂಬಿಕೆಗಳು, ಪಿಡುಗುಗಳೂ ಕೂಡಾ ಇದನ್ನು ಇನ್ನಷ್ಟು ಮತ್ತಷ್ಟು ಕಿರಿಕಿರಿಯಾಗಿಸಿದೆ ಎಂಬುದೂ ನಿಜ. ಬಹುತೇಕ ಹೆಣ್ಣು ಮಕ್ಕಳಿಗೆ ಋತುಚಕ್ರದ ಸಂದರ್ಭ ಆಗುವ ನೋವು, ಅಸಾಧ್ಯವಾದ ಮಾನಸಿಕ ತುಮುಲಗಳೂ ಕೂಡ ಈ ಸಮಸ್ಯೆಯ ಭಾಗವೇ ಹೌದು. ಈ ಕುರಿತ ಉಪಯುಕ್ತ ಸಲಹೆಗಳು ಇಲ್ಲಿವೆ.

VISTARANEWS.COM


on

Irregular Periods problem Here are some simple home remedies
Koo

ಬೆಂಗಳೂರು: ಯಾವ ಮಹಿಳೆಯೂ ತನ್ನ ಋತುಚಕ್ರದದ (Irregular Periods) ತಪ್ಪಿಸಿಕೊಳ್ಳಲಾರಳು. ಪ್ರಕೃತಿ ಸಹಜ ಕ್ರಿಯೆಯಾಗಿರುವ ಇದು ಹೆಣ್ಣಿಗೆ ಸಿಕ್ಕ ಉಡುಗೊರೆಯೇ ಆದರೂ, ಬಹುತೇಕರಿಗೆ ಮಾನಸಿಕವಾಗಿ, ದೈಹಿಕವಾಗಿ ಬಹಳ ಕಿರಿಕಿರಿಯನ್ನೂ ನೀಡುವ ಕ್ರಿಯೆಯೂ ಹೌದು. ಸಮಾಜದಲ್ಲಿ, ಈ ಬಗ್ಗೆ ಹಲವು ಮೂಢನಂಬಿಕೆಗಳು, ಪಿಡುಗುಗಳೂ ಕೂಡಾ ಇದನ್ನು ಇನ್ನಷ್ಟು ಮತ್ತಷ್ಟು ಕಿರಿಕಿರಿಯಾಗಿಸಿದೆ ಎಂಬುದೂ ನಿಜ. ಬಹುತೇಕ ಹೆನ್ಣುಮಕ್ಕಳಿಗೆ ಋತುಚಕ್ರದ ಸಂದರ್ಭ ಆಗುವ ನೋವು, ಅಸಾಧ್ಯವಾದ ಮಾನಸಿಕ ತುಮುಲಗಳೂ ಕೂಡಾ ಈ ಸಮಸ್ಯೆಯ ಭಾಗವೇ ಹೌದು. ಅಷ್ಟೇ ಅಲ್ಲ, ಇನ್ನೂ ಅನೇಕರಿಗೆ ಹಾರ್ಮೋನಿನ ಸಮಸ್ಯೆ ಇತ್ಯಾದಿಗಳಿಂದ ಋತುಚಕ್ರದಲ್ಲಿ ಏರುಪೇರು ಇತ್ಯಾದಿ ಸಮಸ್ಯೆಗಳೂ ಆಗುತ್ತವೆ. ಇತ್ತೀಚೆಗಿನ ಜೀವನಕ್ರಮದ ಬದಲಾವಣೇ, ಆಹಾರಶೈಲಿ, ಒತ್ತಡ ಇತ್ಯಾದಿಗಳಿಂದಾಗಿ ಹೆಚ್ಚು ಹೆಚ್ಚು ಮಂದಿ ಪಿಸಿಒಎಸ್‌ ಮತ್ತಿತರ ಸಮಸ್ಯೆಗಳಿಂದಲೂ ಋತುಚಕ್ರದ ಸಮಸ್ಯೆಗಳು ಎದುರಾಗುತ್ತವೆ. ಸರಿಯಾಗಿ ಮಾಸಿಕವಾಗಿ ಋತುಚಕ್ರ ಬರದೇ ಇರುವುದು, ಯಾವಾಗಲೋ ಇದ್ದಕ್ಕಿದ್ದಂತೆ ರಕ್ತಸ್ರಾವ ಶುರುವಾಗಿಬಿಡುವುದು, ಬಹಳ ದಿನಗಳ ಕಾಲ ರಕ್ತಸ್ರಾವ ನಿಲ್ಲದೇ ಇರುವುದು ಇತ್ಯಾದಿ ಇತ್ಯಾದಿಗಳು ಸಮಸ್ಯೆಯ ಭಾಗ. ವೈದ್ಯರ ಬಳಿ ಹೋಗುವುದು, ಸಲಹೆ, ವೈದ್ಯಕೀಯ ನೆರವು ಪಡೆಯುವುದು ಇಂಥ ಸಂದರ್ಭ ಅತ್ಯಗತ್ಯ. ಇವುಗಳ ಜೊತೆಜೊತೆಗೂ ಕೆಲವು ಜೀವನಕ್ರಮ ಬದಲಾವಣೆ, ಆಹಾರಶೈಲಿ ಬದಲಾವಣೆ ಇತ್ಯಾದಿ ಮಾಡುವುದರಿಂದ ಹಾಗೂ ಕೆಲವು ಮನೆಮದ್ದುಗಳ ಪಾಲನೆಯಿಂದಲೂ ಈ ಸಮಸ್ಯೆಯಿಂದ ಪರಿಹಾರ ಪಡೆಯಬಹುದು. ಬನ್ನಿ, ಯಾವೆಲ್ಲ ಆಹಾರಗಳ ಸೇವನೆಯಿಂದ ಈ ಸಮಸ್ಯೆಗೆ ಕೊಂಚ ಮಟ್ಟಿನ ಪರಿಹಾರ ಪಡೆಯಬಹುದು ಎಂಬುದನ್ನು ನೋಡೋಣ.

ಹಣ್ಣಾಗದ ಪಪ್ಪಾಯಿ

ಹಸಿರು ಬಣ್ಣದಲ್ಲಿರುವ ಪಪ್ಪಾಯಿ ತಲೆತಲೆತಲಾಂತರಗಳಿಂದ ಹೀಗೆ ಋತುಚಕ್ರದ ಏರುಪೇರಿಗೆ ಒಳ್ಳೆಯ ಮನೆಮದ್ದು ಎಂದೇ ಹೆಸರುವಾಸಿ. ಇದು ಗರ್ಭಕೋಶದ ಮಾಂಸಖಂಡಗಳನ್ನು ಆ ಸಮಯಕ್ಕೆ ತಕ್ಕ ಹಾಗೆ ಇರಬೇಕಾಂದಂತೆ ಮಾಡುವ ಗುಣವಿರುವುದರಿಂದ ರಕ್ತಸ್ರಾವಕ್ಕೆ ಸುಲಭವಾಗುತ್ತದೆ. ಹಣ್ಣಾಗದ ಪಪ್ಪಾಯಿಯನ್ನು ಮೂರ್ನಾಲ್ಕು ತಿಂಗಳುಗಳ ಕಾಲ ನಿಯಮಿತವಾಗಿ ಸೇವಿಸುತ್ತಾ ಬಂದಲ್ಲಿ, ಈ ಸಮಸ್ಯೆ ಹತೋಟಿಗೆ ಬರುತ್ತದೆ. ಮೂರ್ನಾಲ್ಕು ತಿಂಗಳುಗಳಾದರೂ ಹೀಗೆ ಮಾಡಬೇಕು. ಹಾಗೂ ಋತುಚಕ್ರದ ದಿನಗಳಲ್ಲಿ ಇವನ್ನು ಸೇವಿಸಬಾರದು.

ಇದನ್ನೂ ಓದಿ: Health Tips: ಮಳೆಗಾಲದಲ್ಲಿ ಆರೋಗ್ಯವಾಗಿರಲು ಈ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ

ಅರಿಶಿಣ

ಅರಿಶಿಣವು ಬಹಳ ಸಮಸ್ಯೆಗಳಿಗೆ ನಮ್ಮ ದೇಹಕ್ಕೆ ಅಗತ್ಯವಾಗಿ ಬೇಕಾದ ಮೂಲಿಕೆ. ಇದನ್ನು ನಿತ್ಯಜೀವನದಲ್ಲಿ ಹಲವು ಆಹಾರ ತಯಾರಿಕೆಗೆ ಬಳಸಿದರೂ ಇದನ್ನು ಔಷಧಿಯಾಗಿ ನಾವು ಸೇವಿಸುವ ಮೂಲಕವೂ ಹೆಚ್ಚಿನ ಲಾಭ ಪಡೆಯಬಹುದು. ಋತುಚಕ್ರದ ಸಮತೋಲನಕ್ಕೆ, ಹಾರ್ಮೋನಿ ಸಮಸ್ಯೆಯ ಸಮತೋಲನಕ್ಕೆ ಇತ್ಯಾದಿಗಳಿಗೆ ಅರಿಶಿನ ಒಳ್ಳೆಯ ಮದ್ದು. ಇದರಲ್ಲಿ ಉಷ್ಣಕಾರಕ ಗುಣವಿದೆ. ಆಂಟಿ ಇನ್‌ಫ್ಲಮೇಟರಿ ಗುಣಗಳೂ ಇವೆ. ನಿತ್ಯವೂ ಅರಿಶಿನ ಹಾಕಿದ ಹಾಲನ್ನು ಕುಡಿಯುವ ಅಭ್ಯಾಸ ಮಾಡಿಕೊಳ್ಳಿ. ಕೆಲವು ವಾರಗಳಲ್ಲಿ ನೀವು ಬದಲಾವಣೆಯ ಪ್ರತಿಫಲ ಕಾಣುವಿರಿ. ಕೇವಲ ಒದೊಂದೇ ಅಲ್ಲ, ಹಲವು ಆರೋಗ್ಯ ಸಮಸ್ಯೆಗಳು ನಿಧಾನವಾಗಿ ಮಾಯವಾಗಿ ರೋಗ ನಿರೋಧಕತೆಯೂ ನಿಮ್ಮಲ್ಲಿ ಹೆಚ್ಚುತ್ತದೆ.

ಅಲೊವೆರಾ

ಅಲೊವೆರಾ ಋತುಚಕ್ರದ ಸಮಸ್ಯೆಗಳಿಗೆ ಒಳ್ಳೆಯ ಮನೆಮದ್ದು. ಹಾರ್ಮೋನಿನ ಏರುಪೇರನ್ನು ಇದು ಸಮತೋಲನಗೊಳಿಸಿ ಋತುಚಕ್ರದ ಸಮಸ್ಯೆಗಳಿಗೆ ಉತ್ತಮ ಫಲ ನೀಡುತ್ತದೆ. ಆದರೆ, ಋತುಚಕ್ರದ ಸಮಯದಲ್ಲಿ ಇದನ್ನು ಸೇವಿಸಬೇಡಿ. ಉಳಿದ ಸಮಯದಲ್ಲಿ, ಅಲೊವೆರಾ ಗಿಡದಿಂದ ಎಲೆಯನ್ನು ಕತ್ತರಿಸಿ ತೆಗೆದು ಅದರೊಳಗಿನ ಬಿಳಿ ಲೋಳೆಯನ್ನು ಮಾತ್ರ ತೆಗೆದು ಅದನ್ನು ನಿತ್ಯವೂ ಸೇವಿಸುತ್ತಾ ಬರಬಹುದು. ಬೇಕಿದ್ದರೆ ಇದನ್ನು ಜ್ಯೂಸ್‌ ಮಾಡಿ ನಿತ್ಯವೂ ಸೇವಿಸಬಹುದು

ಯೋಗ, ಧ್ಯಾನ

ನಿತ್ಯವೂ ಯೋಗಾಭ್ಯಾಸ ಮಾಡುವುದು ಮಾನಸಿಕ ಹಾಗೂ ದೈಹಿಕ ಆರೋಗ್ಯಕ್ಕೆ ಒಳ್ಳೆಯದು. ಹಾರ್ಮೋನಿನ ಏರುಪೇರಿಗೆ ಬಹಳ ಸಾರಿ ಒತ್ತಡವೂ ಕಾರಣವಾಗಿರುತ್ತದೆ. ಧ್ಯಾನ ಹಾಗೂ ಯೋಗದಿಂದ ಒತ್ತಡವು ನಿವಾರಣೆಯಾಗಿ ಹಾರ್ಮೋನಿನ ಸಮಸ್ಯೆಯೂ ಹತೋಟಿಗೆ ಬರುತ್ತದೆ. ಅಷ್ಟೇ ಅಲ್ಲ, ಋತುಚಕ್ರದ ಸಮಸ್ಯೆಗಳಿಗಾಗಿಯೇ ಕೆಲವು ಆಸನಗಳನ್ನು ಮಾಡುವ ಮೂಲಕ ಈ ಸಮಸ್ಯೆಯನ್ನು ನಿಧಾನವಾಗಿ ಗೆದ್ದು ಆರೋಗ್ಯಕರ ಜೀವನದತ್ತ ಮುಖ ಮಾಡಬಹುದು.

ಶುಂಠಿ

ಹಸಿಯಾದ ಸಣ್ಣ ತುಂಡು ಶುಂಠಿಯನ್ನು ಜಜ್ಜಿ ಅಥವಾ ತುರಿದು ನೀರಲ್ಲಿ ಹಾಕಿ ಕುದಿಸಿ. ಸುಮಾರು ಐದು ನಿಮಿಷ ಕುದಿದ ನಂತರ ಅದನ್ನು ಸೋಸಿಕೊಂಡು ದಿನಕ್ಕೆ ಮೂರು ಬಾರಿ ಊಟದ ನಂತರ ಸೇವಿಸಿ. ಹೀಗೆ ಮಾಡುವುದರಿಂದ ಋತುಚಕ್ರದ ಸಮಸ್ಯೆಗಳು ಸಾಕಷ್ಟು ಹತೋಟಿಗೆ ಬರುತ್ತದೆ.

ಜೀರಿಗೆ

ಎರಡು ಚಮಚ ಜೀರಿಗೆಯನ್ನು ರಾತ್ರಿ ನೀರಿನಲ್ಲಿ ನೆನೆಹಾಕಿ ಬೆಳಗ್ಗೆ ಸೋಸಿಕೊಂಡು ಆ ನೀರನ್ನು ಕುಡಿಯುವುದರಿಂದಲೂ ಹಾರ್ಮೋನಿನ ಅಸಮತೋಲನ ನಿಯಂತ್ರಣಕ್ಕೆ ಬರುತ್ತದೆ.

ಚೆಕ್ಕೆ

ಬಿಸಿ ಹಾಲಿಗೆ ಚೆಕ್ಕೆ ಪುಡಿಯನ್ನು ಚಿಟಿಕೆಯಷ್ಟು ಸೇರಿಸಿ ಸೇವಿಸುವುದರಿಂದ ಹಾರ್ಮೋನಿನ ಸಮಸ್ಯೆಗಳು ನಿವಾರಣೆಯಾಗುತ್ತದೆ. ಅಷ್ಟೇ ಅಲ್ಲ, ಋತುಚಕ್ರದ ಸಂದರ್ಭದ ಮೈಕೈ ಸೆಲೆತ, ಹೊಟ್ಟೆನೋವಿನಂಥ ಸಮಸ್ಯೆಗಳೂ ಕಡಿಮೆಯಾಗುತ್ತದೆ.

Continue Reading
Advertisement
International Yoga Day 2024
Latest3 mins ago

International Yoga Day 2024: ಕುತ್ತಿಗೆ ನೋವಿನ ನಿವಾರಣೆಗೆ ಯಾವ ಆಸನಗಳು ಸೂಕ್ತ?

Job Recruitment
ಉದ್ಯೋಗ6 mins ago

Job Recruitment: ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಲ್ಲಿ 586 ಹುದ್ದೆಗಳಿಗೆ ಅರ್ಜಿ ಆಹ್ವಾನ

Rahul Gandhi
ದೇಶ19 mins ago

Rahul Gandhi: ರಾಯ್‌ಬರೇಲಿಯನ್ನೇ ಆಯ್ಕೆ ಮಾಡಿಕೊಂಡ ರಾಹುಲ್‌ ಗಾಂಧಿ; ವಯನಾಡಿನಲ್ಲಿ ಪ್ರಿಯಾಂಕಾ ಸ್ಪರ್ಧೆ!

Rahul Gandhi
ಕರ್ನಾಟಕ1 hour ago

Rahul Gandhi: ರಾಹುಲ್ ಗಾಂಧಿ ಬಗ್ಗೆ ವಿವಾದಾದ್ಮಕ ವಿಡಿಯೊ; ಯುಟ್ಯೂಬರ್‌ ವಿರುದ್ಧ ಎಫ್‌ಐಆರ್‌

Actor Chikkanna
ಕರ್ನಾಟಕ1 hour ago

Actor Chikkanna: ‌ದರ್ಶನ್‌ ಜತೆ ಪಾರ್ಟಿ ಮಾಡಿದ್ದು ನಿಜ; ಪೊಲೀಸರಿಗೆ ಸ್ಫೋಟಕ ಮಾಹಿತಿ ನೀಡಿದ ಚಿಕ್ಕಣ್ಣ!

Karnataka weather Forecast
ಮಳೆ1 hour ago

Karnataka Weather : ಬೆಂಗಳೂರು, ಚಿಕ್ಕಮಗಳೂರಲ್ಲಿ ಸುರಿದ ಧಾರಾಕಾರ ಮಳೆ

Viral Video
Latest1 hour ago

Video Viral: ಮಹಿಳೆಯನ್ನು ತಿವಿದು ರಸ್ತೆಯುದ್ದಕ್ಕೂ ಎಳೆದೊಯ್ದ ಎಮ್ಮೆ! ವಿಡಿಯೊ ಇದೆ

Viral Video
Latest2 hours ago

Viral Video: ಗಂಭೀರ ಸ್ಥಿತಿಯಲ್ಲಿರುವ ಅಪ್ಪನ ಆಸೆ ಈಡೇರಿಕೆ; ಆಸ್ಪತ್ರೆಯ ಐಸಿಯುನಲ್ಲೇ ಮಗಳ ಮದುವೆ!

Sex Worker
ಪ್ರಮುಖ ಸುದ್ದಿ2 hours ago

ಸೆಕ್ಸ್‌ ವರ್ಕರ್‌ಗೆ ಮಾಡಿದ ಮೆಸೇಜ್‌ ಗೊತ್ತಾಗಿ ಪತ್ನಿ ವಿಚ್ಛೇದನ; ಆ್ಯಪಲ್‌ ಕಂಪನಿ ವಿರುದ್ಧ ಕೇಸ್‌ ಜಡಿದ ಪತಿ!

NEETPG 2024
ಶಿಕ್ಷಣ2 hours ago

NEETPG 2024 : ಜೂ.23ಕ್ಕೆ ನೀಟ್‌ ಪಿಜಿ ಪರೀಕ್ಷೆ; ನಾಳೆಯಿಂದಲೇ ಪ್ರವೇಶ ಪತ್ರ ಬಿಡುಗಡೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು7 hours ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು8 hours ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 day ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 day ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 day ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ3 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ3 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌