Rahul And Athiya | ದೀಪಗಳಿಂದ ಅಲಂಕರಿಸಿದ ಕೆ.ಎಲ್‌ ರಾಹುಲ್ ನಿವಾಸ: ಮದುವೆ ತಯಾರಿ ಬಲು ಜೋರು? - Vistara News

ಬಾಲಿವುಡ್

Rahul And Athiya | ದೀಪಗಳಿಂದ ಅಲಂಕರಿಸಿದ ಕೆ.ಎಲ್‌ ರಾಹುಲ್ ನಿವಾಸ: ಮದುವೆ ತಯಾರಿ ಬಲು ಜೋರು?

ಜನವರಿ 21 ರಿಂದ ಜನವರಿ 23 ರವರೆಗೆ ಖಂಡಾಲಾದ ಸುನೀಲ್ ಶೆಟ್ಟಿ ಅವರ ಮನೆ ಜಹಾನ್‌ನಲ್ಲಿ ಮದುವೆ ಸಂಭ್ರಮ (Rahul And Athiya )ನೆರವೇರಲಿದ್ದು, ಸಿದ್ಧತೆಗಳು ಭರದಿಂದ ಸಾಗಿವೆ ಎನ್ನಲಾಗುತ್ತಿದೆ.

VISTARANEWS.COM


on

Rahul And Athiya
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ಟೀಮ್​​ ಇಂಡಿಯಾದ ಸ್ಟಾರ್ ಕ್ರಿಕೆಟಿಗ ಕೆ.ಎಲ್. ರಾಹುಲ್(Rahul And Athiya) ಮತ್ತು ಬಾಲಿವುಡ್ ನಟಿ ಅಥಿಯಾ ಶೆಟ್ಟಿ ಇದೇ ತಿಂಗಳು (ಜನವರಿ) 23ರಂದು ವಿವಾಹವಾಗಲಿದ್ದಾರೆ ಎಂದು ವರದಿಯಾಗಿದೆ. ಜನವರಿ 21 ರಿಂದ ಜನವರಿ 23 ರವರೆಗೆ ಮುಂಬೈನ ಖಂಡಾಲಾದ ಸುನೀಲ್ ಶೆಟ್ಟಿ ಅವರ ಮನೆ ಜಹಾನ್‌ನಲ್ಲಿ ಮದುವೆ ಸಂಭ್ರಮ ನೆರವೇರಲಿದ್ದು, ಸಿದ್ಧತೆಗಳು ಭರದಿಂದ ಸಾಗಿವೆ ಎನ್ನಲಾಗುತ್ತಿದೆ. ಸಾಕ್ಷಿ ಎಂಬಂತೆ ಕೆ ಎಲ್ ರಾಹುಲ್ (K L Rahul) ಮನೆ ದೀಪಗಳಿಂದ ಅಲಂಕರಿಸಲಾಗಿದ್ದು, ಪೋಟೊ ಮತ್ತು ವಿಡಿಯೊಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿವೆ.

ಶ್ರಿಲಂಕಾ ವಿರುದ್ಧದ ಏಕದಿನ ಸರಣಿಯ ಬಳಿಕ ಈ ಜೋಡಿಯ ವಿವಾಹ ನಡೆಯುವುದು ಖಚಿತ ಎಂದು ಕುಟುಂಬ ಮೂಲಗಳು ತಿಳಿಸಿರುವುದಾಗಿ ವರದಿಯಾಗಿತ್ತು. ಇದರ ಬೆನ್ನಲೇ ಕ್ರಿಕೆಟಿಗ ಕೆ.ಎಲ್. ರಾಹುಲ್‌ ಅವರ ಮನೆಯ ಪ್ರವೇಶ ದ್ವಾರದಲ್ಲಿ ಕಾಗದದ ಲ್ಯಾಂಟರ್ನ್‌ಗಳಿಂದ ಅಲಂಕರಿಸಲಾಗಿದೆ. ಅಥಿಯಾ ಮತ್ತು ಕೆ ಎಲ್ ರಾಹುಲ್ ಈ ವಾರ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿರುವುದರಿಂದ ಖಂಡಾಲಾದಲ್ಲಿರುವ ಸುನೀಲ್ ಶೆಟ್ಟಿ ಅವರ ಫಾರ್ಮ್‌ಹೌಸ್ ಬೆಳಗುತ್ತಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ | Rahul And Athiya | ಜನವರಿ 23ಕ್ಕೆ ವಿವಾಹವಾಗಲಿದ್ದಾರೆ ಕೆ.ಎಲ್​ ರಾಹುಲ್, ಅಥಿಯಾ ಶೆಟ್ಟಿ; ವರದಿ

ಅಥಿಯಾ ಮತ್ತು ರಾಹುಲ್ ಅವರ ವಿವಾಹ ಕಾರ್ಯಕ್ರಮಗಳು ಮೂರು ದಿನಗಳ ಕಾಲ ನಡೆಯಲಿದ್ದು, ವಿವಾಹ ಕಾರ್ಯಕ್ರಮದಲ್ಲಿ ಕುಟುಂಬಸ್ಥರು ಮತ್ತು ಆಪ್ತರು ಭಾಗಿಯಾಗಲಿದ್ದಾರೆ ಎಂದು ಹೇಳಲಾಗಿದೆ. ಆದರೆ ಈ ಬಗ್ಗೆ ರಾಹುಲ್​ ಆಗಲಿ ಅಥಿಯಾ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ಆದರೂ ಸಾಮಾಜಿಕ ಜಾಲತಾಣದಲ್ಲಿ ಇವರ ಮದುವೆಯ ದಿನಾಂಕದ ಬಗ್ಗೆ ಸುದ್ದಿಗಳು ಹರಿದಾಡುತ್ತಿವೆ.

ಇದನ್ನೂ ಓದಿ | Athiya Shetty | ಶೂಟಿಂಗ್‌ ವೇಳೆ ಒಟ್ಟಿಗೆ ಕಾಣಿಸಿಕೊಂಡ ನಟಿ ಅಥಿಯಾ ಶೆಟ್ಟಿ- ಕ್ರಿಕೆಟಿಗ ಕೆ ಎಲ್‌ ರಾಹುಲ್

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Sha Rukh Khan: ಸಾಲದ ಇಎಂಐ ಕಟ್ಟಲಾಗದೆ ಕಾರನ್ನು ಕಳೆದುಕೊಂಡಿದ್ದ ಶಾರುಖ್ ಖಾನ್!

Sha Rukh Khan: ಕೋಟಿ ಕೋಟಿ ಸಂಭಾವನೆ ಪಡೆಯುವ ಬಾಲಿವುಡ್ ಬಾದ್ ಶಾ ಶಾರುಕ್ ಖಾನ್ ಕೂಡ ಒಂದು ಕಾಲದಲ್ಲಿ ಆರ್ಥಿಕ ಸಮಸ್ಯೆಯಿಂದ ಬಳಲಿದ್ದರಂತೆ. ಕಾರಿನ ಇಎಂಐ ಪಾವತಿಸಲು ಸಾಧ್ಯವಾಗದ ಕಾರಣ ಶಾರುಖ್ ಖಾನ್ ಅವರ ಕಾರನ್ನು ಬ್ಯಾಂಕ್‌ನವರು ತೆಗೆದುಕೊಂಡು ಹೋಗಿದ್ದರು ಎಂದು ಶಾರುಖ್ ಖಾನ್ ಬಗ್ಗೆ ಅವರ ಸ್ನೇಹಿತೆ ನಟಿ ಜೂಹಿ ಚಾವ್ಲಾ ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಆಗ ಶಾರುಕ್ ಖಾನ್ ನಟಿ ಜೂಹಿ ಚಾವ್ಲಾ ಹಾಗೂ ನಟ ಜಾಕಿಶ್ರಾಫ್ ಅವರ ಕಾರಿನಲ್ಲಿ ಓಡಾಡುತ್ತಿದ್ದರಂತೆ.

VISTARANEWS.COM


on

Sha Rukh Khan
Koo

ಮುಂಬೈ : ಹಣದ ಸಮಸ್ಯೆ ಎನ್ನುವುದು ಬಡವರಿಗೆ, ಮಧ್ಯಮವರ್ಗದವರಿಗೆ ಮಾತ್ರವಲ್ಲ, ಕೆಲವೊಮ್ಮೆ ಶ್ರೀಮಂತರು, ಸ್ಟಾರ್ ನಟರೂ ಕೂಡ ಆರ್ಥಿಕ ಸಮಸ್ಯೆಯಿಂದ ಬಳಲುತ್ತಾರೆ. ಶಾರುಖ್ ಖಾನ್ (Sha Rukh Khan) ಅವರು ಬಾಲಿವುಡ್ ಸ್ಟಾರ್ ನಟರಲ್ಲಿ ಒಬ್ಬರು. ಕೋಟಿ ಕೋಟಿ ಸಂಭಾವನೆ ಪಡೆಯುವ ಈ ಸ್ಟಾರ್ ನಟ ಕೂಡ ಆರ್ಥಿಕ ಸಮಸ್ಯೆಯಿಂದ ಒಂದು ಕಾಲದಲ್ಲಿ ಬಳಲಿದ್ದರು ಎಂದು ಅವರ ಸ್ನೇಹಿತೆ ನಟಿ ಜೂಹಿ ಚಾವ್ಲಾ ಹೇಳಿಕೆ ನೀಡಿದ್ದಾರೆ. ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

Sha Rukh Khan

ಶಾರುಖ್ ಖಾನ್ ಮತ್ತು ಜೂಹಿ ಚಾವ್ಲಾ 90ರ ದಶಕದಲ್ಲಿ ಬಾಲಿವುಡ್‌ನ ಹಲವಾರು ಚಿತ್ರಗಳಲ್ಲಿ ಜೊತೆಯಾಗಿ ನಟಿಸಿದ್ದರು. ಆವಾಗಿನಿಂದ ಇವರಿಬ್ಬರು ಆಪ್ತ ಸ್ನೇಹಿತರಾಗಿದ್ದರು. ಇಬ್ಬರೂ ಸೇರಿ ಡ್ರೀಮ್ಸ್‌ ಅನ್‌ಲಿಮಿಟೆಡ್‌ ಎಂಬ ಚಿತ್ರ ನಿರ್ಮಾಣ ಸಂಸ್ಥೆಯನ್ನೂ ಸ್ಥಾಪಿಸಿದ್ದರು.

Sha Rukh Khan

ಅಲ್ಲದೇ ಇವರಿಬ್ಬರು ಐಪಿಎಲ್ ತಂಡದ ಮಾಲೀಕರಾಗಿ ಸಹ ಜೊತೆಯಾಗಿದ್ದರು. ಇತ್ತೀಚೆಗೆ, ಕಾರ್ಯಕ್ರಮವೊಂದರಲ್ಲಿ, ನಟಿ ಜೂಹಿ ಚಾವ್ಲಾ ಅವರು ಮಾತನಾಡಿ ಇಎಂಐ ಪಾವತಿಸಲು ಸಾಧ್ಯವಾಗದ ಕಾರಣ ಶಾರುಖ್ ಖಾನ್ ಅವರ ಕಾರನ್ನು ಬ್ಯಾಂಕ್‌ನವರು ತೆಗೆದುಕೊಂಡು ಹೋಗಿದ್ದರು ಎಂಬ ಸಂಗತಿಯನ್ನು ಶಾರುಖ್ ಖಾನ್ ವೃತ್ತಿ ಜೀವನದ ಆರಂಭದ ದಿನಗಳನ್ನು ಸ್ಮರಿಸಿಕೊಂಡು ಹೇಳಿದ್ದಾರೆ.

Sha Rukh Khan

ಶಾರುಖ್ ಖಾನ್ ಅವರ ಬಳಿ ಕಪ್ಪು ಜಿಪ್ಸಿ ಕಾರ್ ಇತ್ತು. ಶಾರುಖ್ ಖಾನ್ ಅವರು ಹಗಲಿರುಳು ತಮ್ಮ ಸಿನಿಮಾ ಶೂಟಿಂಗ್‌ಗಾಗಿ ಆ ಕಾರಿನಲ್ಲೇ ಹೋಗುತ್ತಿದ್ದರು. ಆದರೆ ಕೆಲವು ಕಾರಣಗಳಿಂದಾಗಿ, ಅವರು ತಮ್ಮ ಕಾರಿಗೆ ಇಎಂಐ ಪಾವತಿಸಲು ಸಾಧ್ಯವಾಗಲಿಲ್ಲ. ಹಾಗಾಗಿ ಅವರ ಕಾರನ್ನು ತೆಗೆದುಕೊಂಡು ಹೋದರು ಎಂದು ಹೇಳಿದ್ದಾರೆ. ಅಲ್ಲದೇ ಅವರಿಗೆ ಮುಂಬೈನಲ್ಲಿ ಮನೆ ಇರಲಿಲ್ಲ. ಹಾಗೇ ಅವರಿಗೆ ಅಡುಗೆ ಮಾಡಲು ಯಾರೂ ಇರಲಿಲ್ಲ. ಅವರ ಬಗ್ಗೆ ಚಿಂತಿಸುತ್ತಿದ್ದೆ ಎಂದು ನಟಿ ಹಿಂದೆ ನಡೆದ ಘಟನೆಗಳ ಬಗ್ಗೆ ಮೆಲುಕು ಹಾಕಿದ್ದಾರೆ. ಆದರೆ ಈಗ ಅವರು ದೊಡ್ಡ ನಟ ಆಗಿದ್ದಾರೆ ಎಂದು ಅವರು ಖುಷಿ ಪಟ್ಟಿದ್ದಾರೆ.

2015ರಲ್ಲಿ ಇದೇ ವಿಚಾರದ ಬಗ್ಗೆ ನಟ ಶಾರುಖ್ ಖಾನ್‌ವರು ಕೂಡ ಟಿವಿ ಚಾನೆಲ್‌ವೊಂದರಲ್ಲಿ ಹೇಳಿದ್ದರು. ತಾನು ಖರೀದಿಸಿದ ಮೊದಲ ಕಾರಿಗೆ ಇಎಂಐ ಕಟ್ಟಲು ಆಗದ ಕಾರಣ ಬ್ಯಾಂಕಿನವರು ತೆಗೆದುಕೊಂಡು ಹೋಗಿದ್ದರು. ಆಗ ನಟಿ ಜೂಹಿ ಚಾವ್ಲಾ ತಮ್ಮ ಕಾರನ್ನು ನೀಡಿರುವುದಾಗಿ ಹೇಳಿದ್ದರು. ಮತ್ತು ಕೆಲವೊಮ್ಮೆ ನಟ ಜಾಕಿಶ್ರಾಫ್ ಅವರ ಕಾರಿನಲ್ಲಿ ಓಡಾಡುತ್ತಿದ್ದೆ ಎಂದು ತಿಳಿಸಿದ್ದರು.

Sha Rukh Khan

ಇದನ್ನೂ ಓದಿ: ದಳಪತಿ ವಿಜಯ್‌ಗೆ ಭುಜದ ಮೇಲಿನ ಕೈ ತೆಗೆಯಲು ಹೇಳಿದ ಹುಡುಗಿ; ವಿಡಿಯೊ ವೈರಲ್

ಇತ್ತೀಚಿಗೆ ನಡೆದ ಸಂದರ್ಶನವೊಂದರಲ್ಲಿ ಹಿರಿಯ ನಟ ಗೋವಿಂದ್ ನಾಮದೇವ್ ಅವರು 2000ರಲ್ಲಿ ಬಿಡುಗಡೆಯಾದ “ಫಿರ್ ಭಿ ದಿಲ್ ಹೈ ಹಿಂದೂಸ್ತಾನಿ” ಚಿತ್ರದ ಚಿತ್ರೀಕರಣ ಸಮಯದಲ್ಲಿ ಶಾರುಖ್ ಖಾನ್ ಅವರ ಜೊತೆ ಕಳೆದ ದಿನಗಳನ್ನು ಅವರು ಮೆಲುಕು ಹಾಕಿದ್ದಾರೆ. ಆ ವೇಳೆ ಅವರು ಕೆಲಸದ ಒತ್ತಡದಿಂದ ಅವರು ಧೂಮಪಾನ ಮಾಡುತ್ತಿದ್ದರು ಎಂದು ಶಾಕಿಂಗ್ ಹೇಳಿಕೆ ನೀಡಿದ್ದರು.

Continue Reading

ಬಾಲಿವುಡ್

Munawar Faruqui: ಮೊದಲ ಬಾರಿಗೆ ಪತ್ನಿ ಜತೆ ಇರುವ ಫೋಟೊ ಹಂಚಿಕೊಂಡ  ʻಬಿಗ್ ಬಾಸ್ 17ʼರ ವಿಜೇತ  ಮುನಾವರ್ ಫಾರೂಕಿ!

Munawar Faruqui: ಕೊನೆಯ ಚಿತ್ರವು ಮುನಾವರ್ ಮತ್ತು ಮೆಹಜಬೀನ್ ಕೋಟ್ವಾಲಾ ಸಂಜೆ ಪರಸ್ಪರ ಕೈ ಹಿಡಿದುಕೊಂಡು ನಿಂತಿರುವುದು ಇದೆ. ಫೋಟೋದಲ್ಲಿ, ಮುನಾವರ್ ಕಪ್ಪು ಟೀ ಶರ್ಟ್, ಆಲಿವ್ ಹಸಿರು ಪ್ಯಾಂಟ್, ಶೂ ಮತ್ತು ಕ್ಯಾಪ್ ಧರಿಸಿದ್ದರು. ಮುದ್ರಿತ ಟಿ-ಶರ್ಟ್, ಡೆನಿಮ್ಸ್ ಮತ್ತು ಸ್ನೀಕರ್ಸ್‌ನಲ್ಲಿ ಮೆಹಜಬೀನ್ ಕಾಣಿಸಿಕೊಂಡಿದ್ದಾರೆ. ಮುನಾವರ್ ಅವರ ಪತ್ನಿಗೂ ಪೋಟೊವನ್ನು ಟ್ಯಾಗ್ ಮಾಡಿದ್ದಾರೆ.

VISTARANEWS.COM


on

Munawar Faruqui shares first pic with new wife
Koo

ಬೆಂಗಳೂರು:  ಬಿಗ್ ಬಾಸ್ 17 ವಿನ್ನರ್ ಮತ್ತು ಸ್ಟ್ಯಾಂಡ್-ಅಪ್ ಕಮಿಡಿಯನ್ಮು ಮುನಾವರ್ ಫಾರೂಕಿ (Munawar Faruqui) ಎರಡನೇ ಬಾರಿಗೆ ವಿವಾಹವಾದರು ಎಂದು ವರದಿಯಾಗಿತ್ತು. ಮೇಕಪ್ ಕಲಾವಿದೆ ಮೆಹಜಬೀನ್ ಕೋಟ್ವಾಲಾ ಅವರೊಂದಿಗೆ ಮದುವೆಯಾಗಿದ್ದರು. ಇದೀಗ ಇದೇ ಮೊದಲ ಬಾರಿಗೆ ಪತ್ನಿ ಜತೆ ಇರುವ ಫೋಟೊವನ್ನು ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿಕೊಂಡಿದ್ದಾರೆ. ಒಂದು ತಿಂಗಳ ವಿವಾಹ ವಾರ್ಷಿಕೋತ್ಸವವನ್ನು ದುಬೈನಲ್ಲಿ ಸೆಲೆಬ್ರೆಟ್‌ ಮಾಡಿರುವ ಫೋಟೊವನ್ನು ಶೇರ್‌ ಮಾಡಿಕೊಂಡಿದ್ದಾರೆ.

ಮೊದಲ ಫೋಟೊದಲ್ಲಿ , ಮುನಾವರ್ ಅವರು ವಿಶ್ರಾಂತಿ ತೆಗೆದುಕೊಳ್ಳುವ, ಶಾಪಿಂಗ್ ಮುಗಿಸಿ ದುಬೈನ ಸ್ಟ್ರೀಟ್‌ನಲ್ಲಿ ಸುತ್ತಾಡುವ. ಸಂಜೆಯ ವಿಹಾರಕ್ಕೆ ಹೋವ, ಉಪಹಾರದ ಫೋಟೋ ಹಾಗೇ ತಮ್ಮ ಶೋ ಒಂದರ ಫೋಟೋವನ್ನು ಸಹ ಹಂಚಿಕೊಂಡಿದ್ದಾರೆ.

ಕೊನೆಯ ಚಿತ್ರವು ಮುನಾವರ್ ಮತ್ತು ಮೆಹಜಬೀನ್ ಕೋಟ್ವಾಲಾ ಸಂಜೆ ಪರಸ್ಪರ ಕೈ ಹಿಡಿದುಕೊಂಡು ನಿಂತಿರುವುದು ಇದೆ. ಫೋಟೋದಲ್ಲಿ, ಮುನಾವರ್ ಕಪ್ಪು ಟೀ ಶರ್ಟ್, ಆಲಿವ್ ಹಸಿರು ಪ್ಯಾಂಟ್, ಶೂ ಮತ್ತು ಕ್ಯಾಪ್ ಧರಿಸಿದ್ದರು. ಮುದ್ರಿತ ಟಿ-ಶರ್ಟ್, ಡೆನಿಮ್ಸ್ ಮತ್ತು ಸ್ನೀಕರ್ಸ್‌ನಲ್ಲಿ ಮೆಹಜಬೀನ್ ಕಾಣಿಸಿಕೊಂಡಿದ್ದಾರೆ. ಮುನಾವರ್ ಅವರ ಪತ್ನಿಗೂ ಪೋಟೊವನ್ನು ಟ್ಯಾಗ್ ಮಾಡಿದ್ದಾರೆ.

ಇದನ್ನೂ ಓದಿ: Samarjit Lankesh: ಇಂದ್ರಜಿತ್ ಲಂಕೇಶ್ ಪುತ್ರ ಸಮರ್ಜಿತ್ ಅಭಿನಯದ `ಗೌರಿ’ ಸಿನಿಮಾ ರಿಲೀಸ್‌ ಡೇಟ್‌ ಅನೌನ್ಸ್‌!

ಇದೀಗ ಈ ಫೋಟೊಗೆ ಮುನಾವರ್‌ ಫ್ಯಾನ್ಸ್‌ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ʻಕೊನೆಯ ಫೋಟೋ ನಮ್ಮ ಹೃದಯ ಕದ್ದಿದೆʼʼಎಂದು ಒಬ್ಬರು ಕಮೆಂಟ್‌ ಮಾಡಿದ್ದಾರೆ. ಇನ್ನೊಬ್ಬರು ʻʻನಿಮ್ಮಿಬ್ಬರ ಮುಂದಿನ ಜೀವನಕ್ಕಾಗಿ ದೇವರು ಆಶೀರ್ವದಿಸಲಿʼʼಎಂದು ಕಮೆಂಟ್‌ ಮಾಡಿದ್ದಾರೆ.

ಮೇಕಪ್ ಕಲಾವಿದೆ ಮೆಹಜಬೀನ್ ಕೋಟ್ವಾಲಾ

ಮೆಹಜಬೀನ್ ಮೇಕಪ್ ಕಲಾವಿದೆ. ಆರ್ ಮಾಧವನ್, ವರುಣ್ ಧವನ್, ಯುಜ್ವೇಂದ್ರ ಚಾಹಲ್ ನಂತಹ ನಟರುಗಳ ಪತ್ನಿಯರಿಗೆ, ನೃತ್ಯಗಾರ್ತಿ ಧನಶ್ರೀ ವರ್ಮಾ ಅವರಂತಹ ಅನೇಕ ಗಣ್ಯ ವ್ಯಕ್ಯಿಗಳಿಗೆ ಮೇಕಪ್‌ ಮಾಡಿದ್ದಾರೆ. ಸಾಕಷು ಫ್ಯಾನ್ಸ್‌ ಫಾಲೋವರ್ಸ್‌ ಕೂಡ ಹೊಂದಿದ್ದಾರೆ. ವರದಿಯ ಪ್ರಕಾರ, ಮುನಾವರ್‌ನಂತೆ, ಮೆಹಜಬೀನ್ ಅವರಿಗೆ ಕೂಡ ಇದು ಎರಡನೇ ಮದುವೆ. ಮುನಾವರ್ ಅವರಿಗೆ ಈಗಾಗಲೇ ಒಬ್ಬ ಮಗನೂ ಇದ್ದಾನೆ. ಮೊದಲ ಹೆಂಡತಿ ಜತೆ ವಿಚ್ಛೇದನ ಕೂಡ ಪಡೆದುಕೊಂಡಿದ್ದಾರೆ ಮುನಾವರ್‌.

ಇನ್ನು ಮೇಕಪ್ ಕಲಾವಿದೆ ಮೆಹಜಬೀನ್ ಕೋಟ್ವಾಲಾ ಕೂಡ ಸಿಂಗಲ್‌ ಪೇರೆಂಟ್‌ ಎಂದು ವರದಿಯಾಗಿದೆ. ಮೆಹಜಬೀನ್‌ಗೆ ಈಗಾಗಲೇ 10 ವರ್ಷದ ಮಗಳಿದ್ದಾಳೆ ಎಂದು ವರದಿಯಾಗಿದೆ. ಮೆಹಜಬೀನ್ ಕೋಟ್ವಾಲಾ ಆಗಗಾಗ ಮಗಳ ಜತೆ ಇರುವ ಫೋಟೊವನ್ನು ಸೋಷಿಯಲ್‌ ಮೀಡಿಯಾದಲ್ಲಿ ಶೇರ್‌ ಮಾಡಿಕೊಳ್ಳುತ್ತಿರುತ್ತಾರೆ. ಮೆಹಜಬೀನ್ ಕೋಟ್ವಾಲಾ ಕೂಡ ಮೊದಲ ಗಂಡನಿಂದ ಡಿವೋರ್ಸ್‌ ಪಡೆದುಕೊಂಡಿದ್ದಾರೆ.

ಮುನಾವರ್‌ 2017ರಲ್ಲಿ ಜಾಸ್ಮಿನ್‌ ಎಂಬುವರನ್ನು ಮುನಾವರ್‌ ವಿವಾಹವಾಗಿದ್ದರು. ವಿಚ್ಛೇದನ ಬಳಿಕ ಮಗನನ್ನು ಇವರೇ ನೋಡಿಕೊಳ್ಳುತ್ತಿದ್ದಾರೆ. ಇದಾದ ಬಳಿಕ ಮುನಾವರ್‌ ನಾಜಿಲ್‌ ಸಿತೈಶಿ ಎಂಬುವರ ಜತೆ ಡೇಟಿಂಗ್‌ ನಡೆಸುತ್ತಿದ್ದರು. ಮುನಾವರ್‌ ಅವರು ಸಾಕಷ್ಟು ವಿವಾದಾತ್ಮಕ ಸುದ್ದಿಗಳಿಗೆ ಹೆಸರುವಾಸಿ. ಮುಂಬೈ ಬಂದರು ಪ್ರದೇಶದ ಹುಕ್ಕಾ ಬಾರ್‌ನಲ್ಲಿ ಪೊಲೀಸರು ಮಾ.26ರ ಮಂಗಳವಾರ ದಾಳಿ ನಡೆಸಿದ್ದರು. ಬಿಗ್ ಬಾಸ್ 17ರ ವಿಜೇತ ಮುನಾವರ್ ಫಾರೂಕಿ (Munawar Faruqui) ಸೇರಿದಂತೆ ಕೆಲವರನ್ನು ಬಂಧಿಸಲಾಗಿತ್ತು. ಈ ಪ್ರಕರಣದಲ್ಲಿ ಜಾಮೀನು ಮೂಲಕ ಹೊರಗೆ ಬಂದಿದ್ದರು ಮುನಾವರ್.

Continue Reading

ಬಾಲಿವುಡ್

Virat Kohli: ವಿಶ್ವಕಪ್ ಗೆದ್ದ ನಂತರ ಅನುಷ್ಕಾ ಶರ್ಮಾಗೆ ವಿಡಿಯೊ ಕಾಲ್‌ ಮಾಡಿ ಫ್ಲೈಯಿಂಗ್ ಕಿಸ್‌ ಕೊಟ್ಟ ವಿರಾಟ್ ಕೊಹ್ಲಿ!

Virat Kohli: ವಿರಾಟ್​ ಕೊಹ್ಲಿ ಅವರು ಈ ಸ್ಮರಣೀಯ ಗೆಲುವಿನ ಬಳಿಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ಗೆ ವಿದಾಯ ಹೇಳಿದರು. ಪಂದ್ಯಶ್ರೇಷ್ಠ ಪ್ರಶಸ್ತಿ ಸ್ವೀಕರಿಸಿದ ವೇಳೆ ಕೊಹ್ಲಿ ತಮ್ಮ ನಿವೃತ್ತಿ ಘೋಷಿಸಿದರು. ‘ದೇವರು ದೊಡ್ಡವನು. ಭಾರತಕ್ಕಾಗಿ ಇದು ನನ್ನ ಕೊನೆಯ ಟಿ20 ಪಂದ್ಯವಾಗಿತ್ತು. ನಾವು ಆ ಕಪ್ ಎತ್ತಲು ಬಯಸಿದ್ದೆ. ಇದು ಸಾಕಾರಗೊಂಡಿದೆ. ಮುಂದಿನ ಪೀಳಿಗೆಗೆ ಟಿ20 ಆಟವನ್ನು ಮುಂದಕ್ಕೆ ಕೊಂಡೊಯ್ಯುವ ಸಮಯ ಇದು. ಅದ್ಭುತ ದಿನದಂದು ವಿದಾಯ ಹೇಳುವ ಸೌಭಾಗ್ಯ ನನಗೆ ಒದಗಿದ್ದು ನಿಜ್ಜಕ್ಕೂ ಸಂತಸ ತಂದಿದೆ” ಎಂದು ಹೇಳಿದರು.

VISTARANEWS.COM


on

Virat Kohli video calls Anushka Sharma after winning
Koo

ಬೆಂಗಳೂರು: ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್​ನಲ್ಲಿ ಜೂನ್ 29ರಂದು ನಡೆದ ಟಿ20 ವಿಶ್ವಕಪ್​ 2024 (T20 World Cup 2024) ಫೈನಲ್​ನಲ್ಲಿ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾವನ್ನು ಏಳು ರನ್​ಗಳ ಅಂತರದಿಂದ ಸೋಲಿಸುವ ಮೂಲಕ ಚಾಂಪಿಯನ್ ಆಗಿ (Virat Kohli) ಹೊರ ಹೊಮ್ಮಿದೆ. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ.  ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ಭಾರತೀಯ ಆಟಗಾರರು ಸಂಭ್ರಮಿಸುತ್ತಿರುವ ವಿಡಿಯೊಗಳು ಮತ್ತು ಫೋಟೋಗಳು ಸದ್ದು ಮಾಡುತ್ತಿವೆ. ವಿಶ್ವಕಪ್ ಗೆದ್ದ ನಂತರ ವಿರಾಟ್ ಕೊಹ್ಲಿ ತಮ್ಮ ಪತ್ನಿ ಅನುಷ್ಕಾ ಶರ್ಮಾಗೆ ವಿಡಿಯೊ ಕಾಲ್‌ ಮಾಡಿರುವ ಫೋಟೊಗಳು ಸಖತ್‌ ವೈರಲ್‌ ಆಗುತ್ತಿವೆ.

ವೈರಲ್‌ ಆದ ಫೋಟೊಗಳಲ್ಲಿ ವಿರಾಟ್‌ ಸಂತಸದಿಂದ ಪತ್ನಿ ಜತೆ ಮಾತನಾಡುತ್ತಿರುವುದು ಕಂಡು ಬಂದಿದೆ. ಮಾತ್ರವಲ್ಲ ಕಾಲ್‌ ಮೂಲಕವೇ ಫ್ಲೈ ಕಿಸ್‌ ಕೂಡ ಕೊಟ್ಟಿದ್ದಾರೆ. ಈ ಭಾವುಕ ಕ್ಷಣಗಳನ್ನು ಅಭಿಮಾನಿಗಳು ಕೂಡ ಹಾಡಿ ಹೊಗಳುತ್ತಿದ್ದಾರೆ.

ನಟಿ ಅನುಷ್ಕಾ ಶರ್ಮಾ ಅವರು ತಮ್ಮ ಪತಿ-ಕ್ರಿಕೆಟಿಗ ವಿರಾಟ್ ಕೊಹ್ಲಿಯನ್ನು ಹೊಗಳಿ ಇನ್‌ಸ್ಟಾದಲ್ಲಿ ಪೋಸ್ಟ್‌ ಮಾಡಿದ್ದಾರೆ. ಮಗಳು ವಾಮಿಕಾ ಬಗ್ಗೆ ಘಟನೆವೊಂದನ್ನು ಹಂಚಿಕೊಂಡಿದ್ದಾರೆ. ಅನುಷ್ಕಾ ಶರ್ಮಾ ಪೋಸ್ಟ್‌ನಲ್ಲಿ ʻʻನಮ್ಮ ಮಗಳ ದೊಡ್ಡ ಕಾಳಜಿ ಏನೆಂದರೆ, ಎಲ್ಲಾ ಆಟಗಾರರು ಟಿವಿಯಲ್ಲಿ ಅಳುತ್ತಿರುವುದನ್ನು ನೋಡಿದ ನಂತರ ಅವರನ್ನು ತಬ್ಬಿಕೊಳ್ಳಲು ಯಾರಾದರೂ ಇದ್ದರೆ ಎಂದು. ಆಗ ನಾನು ಅಂದೆ ..ಹೌದು, ಅವರನ್ನು 1.5 ಬಿಲಿಯನ್ ಜನರು ತಬ್ಬಿಕೊಂಡರು ಎಂದೆ. ಎಂತಹ ಅದ್ಭುತ ಗೆಲುವು ಮತ್ತು ಎಂತಹ ಪೌರಾಣಿಕ ಸಾಧನೆ!! ಚಾಂಪಿಯನ್ಸ್ – ಅಭಿನಂದನೆಗಳು!! ಎಂದು ಬರೆದುಕೊಂಡಿದ್ದಾರೆ. ಮತ್ತೊಂದು ಪೋಸ್ಟ್‌ನಲ್ಲಿ, ಅನುಷ್ಕಾ ಅವರು ವಿರಾಟ್ ಮುಗುಳ್ನಕ್ಕು ಟ್ರೋಫಿಯನ್ನು ಎತ್ತುತ್ತಿರುವ ಚಿತ್ರವನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Virat Kohli: ಗೆಲುವಿನ ಬಳಿಕ ಪಂಜಾಬಿ ಹಾಡಿಗೆ ಮಸ್ತ್​ ಸ್ಟೆಪ್ಸ್​ ಹಾಕಿದ ವಿರಾಟ್​ ಕೊಹ್ಲಿ

ವಿದಾಯ ಹೇಳಿದ ರೋಹಿತ್​


ನಾಯಕನಾಗಿ ಮತ್ತು ಆಟಗಾರನಾಗಿ 2 ಟಿ20 ವಿಶ್ವಕಪ್​ ಗೆದ್ದ ರೋಹಿತ್​ ಗೆಲುವಿನ ಬಳಿಕ ಟಿ20 ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದರು. ಈ ಮೂಲಕ ಸ್ಮರಣೀಯ ವಿದಾಯ ಪಡೆದರು. ಪಂದ್ಯದ ಬಳಿಕ ಮಾತನಾಡಿದ ರೋಹಿತ್​, “ಇದು ನನ್ನ ಕೊನೆಯ ಅಂತಾರಾಷ್ಟ್ರೀಯ ಟಿ20 ಪಂದ್ಯ. ಚುಟುಕು ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಲು ಇದಕ್ಕಿಂತ ಸಕಾಲ ಇನ್ನೊಂದಿಲ್ಲ. ನಾನು ಮೊದಲು ಭಾರತ ತಂಡಕ್ಕೆ ಪದಾರ್ಪಣೆ ಮಾಡಿದ್ದೇ ಟಿ20 ಆಡುವ ಮೂಲಕ. ನಾಕಯನಾಗಿ ನಾನು ಕಪ್ ಗೆಲ್ಲಬೇಕೆಂದು ಬಯಸಿದ್ದೆ. ಇದು ಸಾಕಾರಗೊಂಡಿದೆ” ಎಂದು ಹೇಳುವ ಮೂಲಕ ವಿದಾಯ ಹೇಳಿದರು. ಟಿ20ಯಲ್ಲಿ 159 ಪಂದ್ಯಗಳನ್ನು ಆಡಿರುವ ರೋಹಿತ್‌, 4231 ರನ್‌ ಗಳಿಸಿದ್ದು, 5 ಶತಕ ಹಾಗೂ 37 ಅರ್ಧಶತಕಗಳನ್ನು ಬಾರಿಸಿದ್ದಾರೆ.

ವಿದಾಯ ಹೇಳಿದ ಕೊಹ್ಲಿ


ವಿರಾಟ್​ ಕೊಹ್ಲಿ ಅವರು ಈ ಸ್ಮರಣೀಯ ಗೆಲುವಿನ ಬಳಿಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ಗೆ ವಿದಾಯ ಹೇಳಿದರು. ಪಂದ್ಯಶ್ರೇಷ್ಠ ಪ್ರಶಸ್ತಿ ಸ್ವೀಕರಿಸಿದ ವೇಳೆ ಕೊಹ್ಲಿ ತಮ್ಮ ನಿವೃತ್ತಿ ಘೋಷಿಸಿದರು. ‘ದೇವರು ದೊಡ್ಡವನು. ಭಾರತಕ್ಕಾಗಿ ಇದು ನನ್ನ ಕೊನೆಯ ಟಿ20 ಪಂದ್ಯವಾಗಿತ್ತು. ನಾವು ಆ ಕಪ್ ಎತ್ತಲು ಬಯಸಿದ್ದೆ. ಇದು ಸಾಕಾರಗೊಂಡಿದೆ. ಮುಂದಿನ ಪೀಳಿಗೆಗೆ ಟಿ20 ಆಟವನ್ನು ಮುಂದಕ್ಕೆ ಕೊಂಡೊಯ್ಯುವ ಸಮಯ ಇದು. ಅದ್ಭುತ ದಿನದಂದು ವಿದಾಯ ಹೇಳುವ ಸೌಭಾಗ್ಯ ನನಗೆ ಒದಗಿದ್ದು ನಿಜ್ಜಕ್ಕೂ ಸಂತಸ ತಂದಿದೆ” ಎಂದು ಹೇಳಿದರು.

Continue Reading

ಕ್ರಿಕೆಟ್

T20 World Cup 2024: ಸುದೀಪ್‌ ಸೇರಿದಂತೆ ಸೌತ್‌ ,ಬಾಲಿವುಡ್‌ ತಾರೆಯರು ವಿಶ್ವಕಪ್​ ಗೆಲುವನ್ನು  ಸಂಭ್ರಮಿಸಿದ್ದು ಹೀಗೆ!

T20 World Cup 2024: ನಾಯಕನಾಗಿ ಮತ್ತು ಆಟಗಾರನಾಗಿ 2 ಟಿ20 ವಿಶ್ವಕಪ್​ ಗೆದ್ದ ರೋಹಿತ್​ ಗೆಲುವಿನ ಬಳಿಕ ಟಿ20 ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದರು. ಈ ಮೂಲಕ ಸ್ಮರಣೀಯ ವಿದಾಯ ಪಡೆದರು. ಪಂದ್ಯದ ಬಳಿಕ ಮಾತನಾಡಿದ ರೋಹಿತ್​, “ಇದು ನನ್ನ ಕೊನೆಯ ಅಂತಾರಾಷ್ಟ್ರೀಯ ಟಿ20 ಪಂದ್ಯ. ಚುಟುಕು ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಲು ಇದಕ್ಕಿಂತ ಸಕಾಲ ಇನ್ನೊಂದಿಲ್ಲ.

VISTARANEWS.COM


on

T20 World Cup 2024 Celebrities Celebrates India ICC Cricket
Koo

ಬೆಂಗಳೂರು: ಅತ್ಯಂತ ರೋಚಕವಾಗಿ ನಡೆದ ಟಿ20 ವಿಶ್ವಕಪ್​ ಫೈನಲ್(T20 World Cup 2024) ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ(South Africa vs India) ತಂಡವನ್ನು 7 ರನ್​ಗಳಿಂದ ಮಣಿಸಿದ ಭಾರತ 2ನೇ ಬಾರಿ ಚಾಂಪಿಯನ್​ ಪಟ್ಟ ಅಲಂಕರಿಸಿತು. ಜತೆಗೆ 13 ವರ್ಷಗಳ ಕಪ್​ ಬರಗಾಲ ಕೂಡ ನೀಗಿತು.  ಭಾರತ ಕ್ರಿಕೆಟ್ ತಂಡದ ಗೆಲುವನ್ನು ಸಿನಿಮಾ ಸೆಲೆಬ್ರಿಟಿಗಳು ಕೂಡ ಸಂಭ್ರಮಿಸಿದ್ದಾರೆ.

ಸ್ಯಾಂಡಲ್‌ವುಡ್‌ ನಟ ಕಿಚ್ಚ ಸುದೀಪ್‌ ಎಕ್ಸ್‌ ಖಾತೆಯಲ್ಲಿ ʻʻರಾಹುಲ್ ದ್ರಾವಿಡ್ ಸರ್ ನೀವು ನಮ್ಮ ಹೆಮ್ಮೆ. , ಘನತೆಯ ಶಿಖರ ಇದು. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ ಅವರುಗಳು ನಮ್ಮ ಹೀರೋಗಳಾಗಿ ಹೊರಹೊಮ್ಮಿದ್ದಕ್ಕೆ ಧನ್ಯಾವದ. ಅದ್ಭುತ ಕ್ಯಾಚ್ ಪಡೆದ ಸೂರ್ಯಕುಮಾರ್ ಯಾದವ್​ಗೆ ವಿಶೇಷ ಧನ್ಯವಾದ’ ಎಂದಿದ್ದಾರೆ ಸುದೀಪ್.

ಇದನ್ನೂ ಓದಿ: T20 World Cup 2024: ದರ್ಶನ್‌ ಜೈಲಿಗೆ ಹೋದಾಗೆಲ್ಲ ವಿಶ್ವಕಪ್‌ ಗೆದ್ದ ಭಾರತ; ಹೀಗ್ಯಾಕೆ ಅಂದ್ರು ನೆಟ್ಟಿಗರು?

ಅಮಿತಾಭ್‌ ಬಚ್ಚನ್‌ ಕೂಡ ʻʻಕಣ್ಣೀರು ಹರಿಯುತ್ತಿದೆ. ವಿಶ್ವ ಚಾಂಪಿಯನ್ಸ್ ಭಾರತ. ಭಾರತ ಮಾತಾ ಕಿ ಜಯ್‌. ಜಯ ಹಿಂದ್ ಜಯ ಹಿಂದ್ʼʼಎಂದು ಬರೆದುಕೊಂಡಿದ್ದಾರೆ.

ಇನ್ನು ನಟ, ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಸಹ ಟ್ವೀಟ್ ಮಾಡಿದ್ದು, ಸರಳವಾಗಿ, ‘ಭಾರತ ತಂಡಕ್ಕೆ ಅಭಿನಂದನೆಗಳು’ ಎಂದಿದ್ದಾರೆ. ಭಾರತ ಕ್ರಿಕೆಟ್ ತಂಡದ ಚಿತ್ರವನ್ನು ಹಂಚಿಕೊಂಡಿದ್ದಾರೆ. ಮೆಗಾಸ್ಟಾರ್ ಚಿರಂಜೀವಿ ಸಹ ಟ್ವೀಟ್ ಮಾಡಿದ್ದು, ʻʻಈ ಕಪ್‌ ನಮ್ಮದು! ಹೀರೋಸ್-ಇನ್-ಬ್ಲೂ ಹೊಸ ‘ವಿಶ್ವ ಚಾಂಪಿಯನ್’! ಸೂರ್ಯ ಕುಮಾರ್‌ ಕ್ಯಾಚ್‌ ಅದ್ಭುತ. ಈ ಐತಿಹಾಸಿಕ ಗೆಲುವಿನ ಬಗ್ಗೆ ತುಂಬಾ ಹೆಮ್ಮೆ ಇದೆ. ಜೈ ಹಿಂದ್! ಎಂದು ಬರೆದುಕೊಂಡಿದ್ದಾರೆ.

ರಣದೀಪ್ ಹೂಡಾ “ಬುಮ್ರಾ ಸ್ವಿಂಗ್ ದೇವರು ಮತ್ತು ಅರ್ಶ್‌ದೀಪ್ ಮತ್ತು ಅಕ್ಸರ್ .. ಕೊಹ್ಲಿ ಬ್ಯಾಟ್ ಮತ್ತು ರೋಹಿತ್ ಗ್ರೇಟ್‌. ಧನ್ಯವಾದಗಳು ರಾಹುಲ್ ದ್ರಾವಿಡ್.”ಎಂದು ಬರೆದುಕೊಂಡಿದ್ದಾರೆ.

ಅನಿಲ್ ಕಪೂರ್, ಮತ್ತು ರಶ್ಮಿಕಾ ಮಂದಣ್ಣ, ಅನನ್ಯ ಪಾಂಡೆ, ರವೀನಾ ಟಂಡನ್ ರಣದೀಪ್ ಹೂಡಾ ರಣ್ವೀರ್ ಸಿಂಗ್ ಸೇರಿದಂತೆ ಇನ್ನೂ ಹಲವು ಸಿನಿಮಾ ಸೆಲೆಬ್ರಿಟಿಗಳು ಭಾರತ ಕ್ರಿಕೆಟ್ ತಂಡದ ಅತ್ಯದ್ಭುತವಾದ ವಿಜಯಕ್ಕೆ ಟ್ವೀಟ್ ಮಾಡಿ ಸಂಭ್ರಮ ವ್ಯಕ್ತಪಡಿಸಿದ್ದಾರೆ.

ವಿದಾಯ ಹೇಳಿದ ರೋಹಿತ್​


ನಾಯಕನಾಗಿ ಮತ್ತು ಆಟಗಾರನಾಗಿ 2 ಟಿ20 ವಿಶ್ವಕಪ್​ ಗೆದ್ದ ರೋಹಿತ್​ ಗೆಲುವಿನ ಬಳಿಕ ಟಿ20 ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದರು. ಈ ಮೂಲಕ ಸ್ಮರಣೀಯ ವಿದಾಯ ಪಡೆದರು. ಪಂದ್ಯದ ಬಳಿಕ ಮಾತನಾಡಿದ ರೋಹಿತ್​, “ಇದು ನನ್ನ ಕೊನೆಯ ಅಂತಾರಾಷ್ಟ್ರೀಯ ಟಿ20 ಪಂದ್ಯ. ಚುಟುಕು ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಲು ಇದಕ್ಕಿಂತ ಸಕಾಲ ಇನ್ನೊಂದಿಲ್ಲ. ನಾನು ಮೊದಲು ಭಾರತ ತಂಡಕ್ಕೆ ಪದಾರ್ಪಣೆ ಮಾಡಿದ್ದೇ ಟಿ20 ಆಡುವ ಮೂಲಕ. ನಾಕಯನಾಗಿ ನಾನು ಕಪ್ ಗೆಲ್ಲಬೇಕೆಂದು ಬಯಸಿದ್ದೆ. ಇದು ಸಾಕಾರಗೊಂಡಿದೆ” ಎಂದು ಹೇಳುವ ಮೂಲಕ ವಿದಾಯ ಹೇಳಿದರು. ಟಿ20ಯಲ್ಲಿ 159 ಪಂದ್ಯಗಳನ್ನು ಆಡಿರುವ ರೋಹಿತ್‌, 4231 ರನ್‌ ಗಳಿಸಿದ್ದು, 5 ಶತಕ ಹಾಗೂ 37 ಅರ್ಧಶತಕಗಳನ್ನು ಬಾರಿಸಿದ್ದಾರೆ.

Continue Reading
Advertisement
lovers fight hubli
ವೈರಲ್ ನ್ಯೂಸ್5 mins ago

Lovers Fight: ಫೋನ್‌ಗಾಗಿ ಕಿತ್ತಾಡಿದ ಪ್ರೇಮಿಗಳು, ಲವರ್‌ ಬಾಯ್‌ಗೆ ಸಾರ್ವಜನಿಕರ ಗೂಸಾ

Team India stuck in Barbados
ಕ್ರೀಡೆ8 mins ago

Team India stuck in Barbados: ಟೀಮ್​ ಇಂಡಿಯಾ ತವರಿಗೆ ವಾಪಸಾಗುವುದು ಮತ್ತಷ್ಟು ವಿಳಂಬ

Latest20 mins ago

Viral Video: ರಸ್ತೆ ಮೇಲೆಯೇ ಮಹಿಳೆಯ ವಶೀಕರಣ! 4.5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಲೂಟಿ

Kalki 2898 AD
ಸಿನಿಮಾ21 mins ago

Kalki 2898 AD: ಬಾಕ್ಸ್‌ ಆಫೀಸ್‌ನಲ್ಲಿ ದಾಖಲೆ ಬರೆದ ʼಕಲ್ಕಿʼ; ಬಿಡುಗಡೆಯಾದ 5ನೇ ದಿನ ಗಳಿಸಿದ್ದು ಬರೋಬ್ಬರಿ 84 ಕೋಟಿ ರೂ.

Anant Ambani
ಫ್ಯಾಷನ್27 mins ago

Anant Ambani: ಅನಂತ್ ಅಂಬಾನಿ ಬಳಿ ಇವೆ 300 ಕೋಟಿಯ ವಾಚ್‌ಗಳು! ಎಂಥೆಂಥ ಗಡಿಯಾರಗಳಿವೆ ನೋಡಿ!

Team India Coach
ಕ್ರೀಡೆ33 mins ago

Team India Coach: ಟೀಮ್​ ಇಂಡಿಯಾ ಕೋಚ್​ ಆಯ್ಕೆ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಜಯ್‌ ಶಾ

kannada marathi row
ಪ್ರಮುಖ ಸುದ್ದಿ49 mins ago

Kannada- Marathi Row: ಮಹಾರಾಷ್ಟ್ರ ಸದನದಲ್ಲಿ ಕನ್ನಡ ಪರ ದನಿ, ಗಡಿಯಲ್ಲಿ ಮರಾಠಿ ದಬ್ಬಾಳಿಕೆಗೆ ಪ್ರತಿಭಟನೆ

Food for Concentration
ಆರೋಗ್ಯ1 hour ago

Food for Concentration: ಈ ಆಹಾರಗಳ ಸೇವನೆಯಿಂದ ನಿಮ್ಮ ಏಕಾಗ್ರತೆ ಶಕ್ತಿಯೇ ಕುಂಠಿತವಾಗಬಹುದು!

Grand Marriage
Latest1 hour ago

Grand Marriage: ಭಾರತದ ಶ್ರೀಮಂತ ಕುಟುಂಬಗಳ ಅತ್ಯಂತ ಅದ್ಧೂರಿ ಮದುವೆ ಯಾರದು? ಪಟ್ಟಿ ಇಲ್ಲಿದೆ

ರಾಜಮಾರ್ಗ ಅಂಕಣ virat kohli rohit sharma
ಅಂಕಣ1 hour ago

ರಾಜಮಾರ್ಗ ಅಂಕಣ: ಟಿ20 ವಿಶ್ವಕಪ್ ಫೈನಲ್; ಒಂದು ಪಂದ್ಯ – ಹಲವು ಪಾಠ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ15 hours ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ2 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು2 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ3 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ3 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ4 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು5 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

ಟ್ರೆಂಡಿಂಗ್‌