ವೈದ್ಯ ದರ್ಪಣ ಅಂಕಣ | ನಮ್ಮ ಶರೀರವನ್ನು ನಿಯಂತ್ರಿಸುವವರು ಯಾರು? - Vistara News

ಅಂಕಣ

ವೈದ್ಯ ದರ್ಪಣ ಅಂಕಣ | ನಮ್ಮ ಶರೀರವನ್ನು ನಿಯಂತ್ರಿಸುವವರು ಯಾರು?

“ಎಲ್ಲವನ್ನೂ ಮಿದುಳು ನಿಯಂತ್ರಿಸಿದರೆ, ಮಿದುಳನ್ನು ನಿಯಂತ್ರಿಸುವವರು ಯಾರು?” ಎನ್ನುವ ಪ್ರಶ್ನೆ ಬಹಳ ಕಾಲದಿಂದ ಚಿಂತಕರನ್ನು, ವಿಜ್ಞಾನಿಗಳನ್ನು, ತತ್ತ್ವಶಾಸ್ತ್ರಿಗಳನ್ನು ಬೇರೆ ಬೇರೆ ಬಗೆಯಲ್ಲಿ ಕಾಡಿದೆ. ಯಾರೇ ಹುಡುಕಲಿ ಬಿಡಲಿ, ವೈದ್ಯಲೋಕವಂತೂ ಇದಕ್ಕೆ ಉತ್ತರ ಹುಡುಕಲೇಬೇಕಿದೆ!

VISTARANEWS.COM


on

human brain
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
kiran column

“ಜೀವನದಲ್ಲಿ ದಾರಿ ತೋರದಾದಾಗ ಹೃದಯದ ಮಾತು ಕೇಳು. ಅದು ಎಂದಿಗೂ ತಪ್ಪು ದಾರಿ ತೋರುವುದಿಲ್ಲ” ಎನ್ನುವ ಸಿನೀಮಯ ಮಾತುಗಳನ್ನು ಕೇಳಿ “ಆಹಾ; ಓಹೋ” ಎಂದು ಮೆಚ್ಚಿಕೊಂಡಿರುತ್ತೇವೆ. ಅಸಲಿಗೆ ಹೃದಯಕ್ಕೆ ಮಾತುಗಳೂ ಇಲ್ಲ; ಆಲೋಚನೆಗಳೂ ಇಲ್ಲ. ಹುಟ್ಟಿನ ಮೊದಲಿನಿಂದ ಆರಂಭಿಸಿ ಜೀವನದ ಕೊನೆಯ ಕ್ಷಣದವರೆಗೆ ಬಡಿಯುತ್ತಾ, ರಕ್ತವನ್ನು ದೇಹದ ಮೂಲೆಮೂಲೆಗಳಿಗೆ ತಲುಪಿಸುವ ಕೆಲಸ ಹೃದಯದ್ದು. ಇದನ್ನು ಹೊರತುಪಡಿಸಿ ಯೋಚಿಸುವಂತಹ ಸಂಕೀರ್ಣ ಕೆಲಸವನ್ನು ಮಾಡುವ ವ್ಯವಧಾನವಾಗಲೀ, ಸಾಮರ್ಥ್ಯವಾಗಲೀ ಹೃದಯಕ್ಕೆ ಇಲ್ಲ. ಭಾವನೆಗಳು ತೀವ್ರಗೊಂಡಾಗ ಜೋರಾಗಿ ಮಿಡಿಯುವ ಹೃದಯ ನಮಗೆ ಆಯಾ ಸಂದರ್ಭದ ಅರಿವು ಮೂಡಿಸುತ್ತದೆ. ಹೀಗಾಗಿ, “ಭಾವನೆಗಳ ಉಗಮ ಹೃದಯವೇ” ಎಂದು ಪ್ರಾಚೀನರು ಭಾವಿಸಿದ್ದು ಸಹಜ. ಆದರೆ ವಿಜ್ಞಾನ ಮುಂದುವರೆದಂತೆಲ್ಲಾ ಹೃದಯಕ್ಕೂ ಭಾವನೆಗಳಿಗೂ ಸಂಬಂಧವಿಲ್ಲವೆಂದು ಋಜುವಾತಾದರೂ, ಕವಿಗಳು, ಸಿನೆಮಾದವರು ಈ ಸಂಬಂಧವನ್ನು ಜನರ ಮನದಲ್ಲಿ ಬಿತ್ತುತ್ತಲೇ ಇದ್ದಾರೆ!

ನಮ್ಮ ದೇಹ ಸುಮಾರು 78 ವಿವಿಧ ಅಂಗಗಳ ಸಮ್ಮೇಳನ. ಇವುಗಳ ಪೈಕಿ ಮಿದುಳು, ಹೃದಯ, ಮೂತ್ರಪಿಂಡಗಳು, ಯಕೃತ್, ಮತ್ತು ಶ್ವಾಸಕೋಶಗಳು ಪ್ರಮುಖವಾದುವು. ಈ ಐದು ಅಂಗಗಳ ಪೈಕಿ ಯಾವುದಾದರೂ ಒಂದು ಅಂಗ ಕೆಲಕಾಲ ಕೆಲಸ ಮಾಡುವುದನ್ನು ನಿಲ್ಲಿಸಿದರೆ ಜೀವನ ಮುಗಿದಂತೆ. ಸಾಮಾನ್ಯ ಸ್ಥಿತಿಯಲ್ಲಿ ಈ ಅಂಗಗಳು ಸ್ವತಂತ್ರವಾಗಿ ಕೆಲಸ ಮಾಡಬಲ್ಲವಾದರೂ, ಇದರ ಮುಖ್ಯ ನಿಯಂತ್ರಣ ಮಿದುಳಿನಲ್ಲಿರುತ್ತದೆ. ಹೀಗಾಗಿ, ಮೆದುಳನ್ನು ಶರೀರದ ಮುಖ್ಯ ನಿಯಂತ್ರಣಾಧಿಕಾರಿ ಎನ್ನಬಹುದು. ಶರೀರದ ಪ್ರತಿಯೊಂದು ಕ್ರಿಯೆಯ ಹಿಂದೆ ಮಿದುಳು ಮತ್ತು ನರಮಂಡಲದ ಕೈವಾಡವಿದೆ. ಕೆಲವರಂತೂ ಶರೀರ ಇರುವುದೇ ಮಿದುಳನ್ನು ಕಾಪಾಡಲು ಎಂದು ಪ್ರತಿಪಾದಿಸುತ್ತಾರೆ.

“ಎಲ್ಲವನ್ನೂ ಮಿದುಳು ನಿಯಂತ್ರಿಸಿದರೆ, ಮಿದುಳನ್ನು ನಿಯಂತ್ರಿಸುವವರು ಯಾರು?” ಎನ್ನುವ ಪ್ರಶ್ನೆ ಬಹಳ ಕಾಲದಿಂದ ಚಿಂತಕರನ್ನು, ವಿಜ್ಞಾನಿಗಳನ್ನು, ತತ್ತ್ವಶಾಸ್ತ್ರಿಗಳನ್ನು ಬೇರೆ ಬೇರೆ ಬಗೆಯಲ್ಲಿ ಕಾಡಿದೆ. ಇದಕ್ಕೆ ಕೆಲವರು ಶರೀರದ ಹೊರಗಿನ ಪ್ರಭಾವಗಳನ್ನು ಹುಡುಕಿದರೆ, ಕೆಲವರು ಶರೀರದೊಳಗೇ ಇರುವ ನಿಯಂತ್ರಕಗಳನ್ನು ಅರಸುತ್ತಾರೆ. ಮತ್ತೂ ಕೆಲವರು “ಮಿದುಳಿಗೆ ಮಿದುಳೇ ನಿಯಂತ್ರಕ” ಎಂದು ಸಂವಾದವನ್ನು ಕೊನೆಗೊಳಿಸುತ್ತಾರೆ. ಇಲ್ಲಿನ ಪ್ರಶ್ನೆ ಉತ್ತರದ್ದಲ್ಲ; ಉತ್ತರದ ಹಿಂದಿನ ಸಾಕ್ಷ್ಯಗಳದ್ದು. ಯಾವುದೇ ಉತ್ತರ ನೀಡಿದರೂ, ಅದಕ್ಕೆ ಸಮಂಜಸವಾದ ಪುರಾವೆಗಳನ್ನು ನೀಡಬೇಕು; ಹಾರಿಕೆಯ ಉತ್ತರಗಳು, ಚಮತ್ಕಾರದ ಮಾತುಗಳು, ಅರಿವಿನ ಹೊರಗಿನ ನುಡಿಗಟ್ಟುಗಳು ಕೆಲಸಕ್ಕೆ ಬಾರವು.

“ಜೀವನದ ಉದ್ದೇಶವೇನು?” ಎನ್ನುವ ಪ್ರಶ್ನೆಗೆ ನಾಗರಿಕತೆಯ ನಡುವೆ ಇರುವ ಮನುಷ್ಯರ ಉತ್ತರ ಬಹಳಷ್ಟು ಆಯಾಮಗಳನ್ನು ಹೊಂದಿರುತ್ತದೆ. ಆದರೆ ಸೃಷ್ಟಿಯೆಂದರೆ ಕೇವಲ ಮನುಷ್ಯ ಮಾತ್ರವಲ್ಲ. ಮಾನವನನ್ನು ಹೊರತುಪಡಿಸಿ ಈ ಪ್ರಶ್ನೆಯನ್ನು ಇತರ ಜೀವ ಪ್ರಭೇದಗಳ ದೃಷ್ಟಿಯಿಂದ ನೋಡಿದರೆ, ಅವುಗಳ ಅಸ್ತಿತ್ವದ ಮೂಲೋದ್ದೇಶ ಸಂತಾನ ಪ್ರಕ್ರಿಯೆ. ಆ ಉದ್ದೇಶ ಪೂರ್ಣವಾಗುವವರೆಗೆ ಬದುಕಿರಲು ನಡೆಸುವ ಹೋರಾಟ ಅವುಗಳ ಜೀವನದ ಕತೆ. ಸಂತಾನ ಕ್ರಿಯೆ ಪೂರ್ಣವಾದ ಕೂಡಲೇ ತಮ್ಮ ಬದುಕನ್ನು ಕೊನೆಗೊಳಿಸುವ ಕೆಲವು ಗೋಸುಂಬೆಗಳು, ಇಲಿಗಳು, ಕೀಟಗಳು, ಜೇಡಗಳು ಮೊದಲಾದ ಜೀವ ಪ್ರಭೇದಗಳು ಜಗತ್ತಿನಲ್ಲಿವೆ. ಹೀಗೆ ಮರಣಿಸುವಾಗ ಇವುಗಳ ಮಿದುಳು ಸುಸ್ಥಿತಿಯಲ್ಲೇ ಇರುತ್ತದೆ. ಒಂದು ವೇಳೆ ದೇಹವೆಂಬುದು ಮಿದುಳನ್ನು ಸಂರಕ್ಷಿಸಲು ಇರುವ ಸಾಧನ ಎಂಬ ಮಾತಿನಲ್ಲಿ ಹುರುಳಿದ್ದರೆ ಈ ರೀತಿಯ ಮರಣ ಸಂಭವಿಸಬಾರದು. ಹಾಗಾದರೆ, ಇಂತಹ ಸಾವುಗಳು ಏಕಾಗುತ್ತವೆ?

ಮಿದುಳನ್ನು ದೇಹ ಸಂರಕ್ಷಿಸುತ್ತದೆ ಎಂದ ಮೇಲೆ ದೇಹವನ್ನು ಮಿದುಳು ಕಾಪಾಡಬೇಕು. ಆಗಲೇ ಈ ಪರಸ್ಪರ ಅವಲಂಬನೆ ಅರ್ಥಪೂರ್ಣ. ಈ ಮಾತಿಗೆ ಪುಷ್ಠಿ ನೀಡುವಂತೆ ಮಿದುಳು ಇಡೀ ದೇಹದ ಜವಾಬ್ದಾರಿಗಳನ್ನು ನಿಭಾಯಿಸುತ್ತದೆ; ಯಾವುದೇ ಅಂಗದ ಕಷ್ಟಕಾಲಕ್ಕೆ ಸ್ಪಂದಿಸಿ, ದೇಹದ ಇತರೆ ಅಂಗಗಳನ್ನು ಸಜ್ಜುಗೊಳಿಸಿ, ಸಹಾಯಕ್ಕೆ ಧಾವಿಸುವಂತೆ ಪ್ರಚೋದಿಸುತ್ತದೆ. ಈ ಸಹಬಾಳ್ವೆ ಯಾವುದೇ ಕಾರಣಕ್ಕೂ ವಿಚಲಿತವಾಗಬಾರದು. ಒಂದು ವೇಳೆ ದೇಹದ ರಕ್ಷಣೆಯಲ್ಲಿ ಮಿದುಳು ವಿಫಲವಾದರೆ? ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ, ಮಿದುಳೇ ದೇಹದ ನಾಶಕ್ಕೆ ಕಾರಣವಾದರೆ? “ಕಾವ ದೇವ ಸಾವು ತರಲು ಎಲ್ಲಿ ರಕ್ಷಣೆ?” ಎಂದು ಪ್ರಶ್ನಿಸಿದ ಓಹಿಲೇಶ್ವರನ ಆಕ್ರಂದನವಾಯಿತಲ್ಲವೇ? ಹೀಗೆ ಆಗುವುದು ಶಕ್ಯವೇ?

ಇಲಿ ಮತ್ತು ಬೆಕ್ಕುಗಳ ಆಜನ್ಮ ವೈರ ಎಲ್ಲರಿಗೂ ವಿದಿತ. ಈ ವೈರವನ್ನು ಬಗೆಬಗೆಯಾಗಿ ತೋರುವ “ಟಾಮ್ ಅಂಡ್ ಜೆರ್ರಿ”ಯಂತಹ ಕಾರ್ಟೂನ್ ಚಿತ್ರಗಳು ಅದೆಷ್ಟು ಕೋಟಿಗಳ ವ್ಯವಹಾರ ಮಾಡಿವೆಯೋ, ಅದೆಷ್ಟು ಜನರನ್ನು ರಂಜಿಸಿದೆಯೋ ಲೆಕ್ಕವೇ ಇಲ್ಲ. ಟಾಮ್ ಬೆಕ್ಕಿನ ಆಕ್ರಮಣಕ್ಕಿಂತಲೂ ಜೆರ್ರಿ ಇಲಿಯ ಬಚಾವಾಗುವ ಉಪಾಯಗಳು ಗಮನ ಸೆಳೆಯುತ್ತವೆ. ಒಟ್ಟಿನಲ್ಲಿ, ಬೆಕ್ಕಿಗೆ ಸಿಗದಂತೆ ತನ್ನ ಜೀವ ಉಳಿಸಿಕೊಳ್ಳುವುದು ಇಲಿಗಳಿಗೆ ಮುಖ್ಯ. ಬೆಕ್ಕಿನ ವಾಸನೆಯನ್ನು ಗ್ರಹಿಸುವ ವಿಶೇಷ ಭಾಗ ಇಲಿಗಳ ಮಿದುಳಿನಲ್ಲಿದೆ. ಇದರಿಂದ ಬೆಕ್ಕಿನ ನಡಿಗೆಯ ಸಪ್ಪಳ ಕೇಳದಿದ್ದರೂ ಅದರ ಅಸ್ತಿತ್ವವನ್ನು ಗುರುತಿಸಿ ಇಲಿಗಳು ತಪ್ಪಿಸಿಕೊಳ್ಳಬಲ್ಲವು. ಇದನ್ನು “ಅನುಮಾನಕ್ಕೆ ಆಸ್ಪದವಿಲ್ಲದ ಸತ್ಯ” ಎಂದೇ ಭಾವಿಸಿದ್ದ ವಿಜ್ಞಾನಿಗಳನ್ನು ಸೋಜಿಗಕ್ಕೆ ಕೆಡವಿದ್ದು ಒಂದು ಪ್ರಸಂಗ. ನೋಡನೋಡುತ್ತಿದ್ದಂತೆ ಖುದ್ದು ಇಲಿ ತಾನೇತಾನಾಗಿ ಬೆಕ್ಕಿನ ಬಳಿ ಹೋಗಿ ಆಹಾರವಾಗುವ ಅಚ್ಚರಿ ವಿಜ್ಞಾನಿಗಳನ್ನು ಅನುಮಾನಕ್ಕೆ ದೂಡಿತು. ಈ ಅನೂಹ್ಯ ಅಚ್ಚರಿಯ ಹಿಂದೆ ಬಿದ್ದು ಕಾರಣಗಳನ್ನು ಹುಡುಕಿದ ಸಂಶೋಧಕರನ್ನು ನಿಬ್ಬೆರಗಾಗಿಸಿದ್ದು ಒಂದು ಆದಿಮ ಏಕಾಣು ಪರೋಪಜೀವಿ (Protozoan).

Brain eating amoeba

ಟೊಕ್ಸೊಪ್ಲಾಸ್ಮ ಗೊಂಡಿ ಎನ್ನುವ ಹೆಸರಿನ ಪರೋಪಜೀವಿ ಮೂಲತಃ ಬೆಕ್ಕಿನ ಹೊಟ್ಟೆಯಲ್ಲಿ ಸಂತಾನೋತ್ಪತ್ತಿ ಮಾಡುತ್ತದೆ. ಆದರೆ ಅದರ ಜೀವನ ಚಕ್ರದ ಮತ್ತೊಂದು ಭಾಗ ಇಲಿಯಂತಹ ಜೀವಿಗಳಲ್ಲಿ ಆಗುತ್ತದೆ. ಅಂದರೆ, ಈ ಪರೋಪಜೀವಿಯ ಇಡೀ ಜೀವನಚಕ್ರ ಪೂರ್ಣವಾಗಲು ಬೆಕ್ಕು ಇಲಿಯನ್ನು ತಿನ್ನಬೇಕು. ಆಗ ಇಲಿಯ ದೇಹದಲ್ಲಿರುವ ಟೊಕ್ಸೊಪ್ಲಾಸ್ಮ ಗೊಂಡಿ ಬೆಕ್ಕಿನ ದೇಹವನ್ನು ಸೇರಿ ತನ್ನ ಸಂತಾನವನ್ನು ಬೆಳಸುತ್ತದೆ. ಇಲಿ ಮತ್ತು ಬೆಕ್ಕುಗಳು ಸಹಜ ಶತ್ರುಗಳಾದ್ದರಿಂದ ಈ ವ್ಯವಸ್ಥೆ ತರ್ಕಬದ್ಧವಾಗಿಯೇ ಇದೆ ಅನಿಸುತ್ತದೆ. ಆದರೆ, ಟೊಕ್ಸೊಪ್ಲಾಸ್ಮ ಗೊಂಡಿ ಪರೋಪಜೀವಿಗೆ ಈ ಸಹಜ ವ್ಯವಸ್ಥೆ ಸಾಲದು. ಇಲಿಯನ್ನು ಹಿಡಿಯಲು ಬೆಕ್ಕು ವಿಫಲವಾದರೆ, ಅಥವಾ ಇಲಿ ತಪ್ಪಿಸಿಕೊಂಡರೆ ಟೊಕ್ಸೊಪ್ಲಾಸ್ಮ ಗೊಂಡಿ ಸಂತಾನ ಕ್ಷೀಣಿಸುತ್ತದೆ. ಹೀಗಾಗಿ ಕೇವಲ ಒಂದು ಕೋಶದ ಈ ಪರೋಪಜೀವಿ ಸೀದಾ ಇಲಿಯ ಮಿದುಳಿಗೇ ಕೈ ಹಾಕುತ್ತದೆ! ಇದು ನುಡಿಗಟ್ಟಿನ ಮಾತಲ್ಲ; ಸತ್ಯ.

ಟೊಕ್ಸೊಪ್ಲಾಸ್ಮ ಗೊಂಡಿ ಸೀದಾ ಇಲಿಗಳ ಮಿದುಳನ್ನು ಸೇರಿ, ಬೆಕ್ಕಿನ ವಾಸನೆಯನ್ನು ಗ್ರಹಿಸುವ ಇಲಿಯ ಮಿದುಳಿನ ಭಾಗವನ್ನು ಕೆಡಿಸುತ್ತವೆ. ಇಂತಹ ರೋಗಿಷ್ಠ ಇಲಿಗಳನ್ನು ಬೆಕ್ಕು ಸುಲಭವಾಗಿ ಹಿಡಿಯಬಲ್ಲವು. ಟೊಕ್ಸೊಪ್ಲಾಸ್ಮ ಗೊಂಡಿ ಇಷ್ಟಕ್ಕೇ ತೃಪ್ತಿಗೊಳ್ಳುವುದಿಲ್ಲ. ಮುಂದಿನ ಹೆಜ್ಜೆಯಾಗಿ ಅದು ಇಲಿಗಳ ಮಿದುಳನ್ನು ಮತ್ತಷ್ಟು ಮಾರ್ಪಡಿಸಿ, ಬೆಕ್ಕಿನ ವಾಸನೆಗೆ ಇಲಿ ಖುದ್ದು ಆಕರ್ಷಿತವಾಗುವಂತೆ ಪರಿವರ್ತಿಸುತ್ತದೆ. ಅಂತೆಯೇ, ಇಲಿಗಳ ಮಿದುಳಿನಲ್ಲಿ ಬೆಕ್ಕಿನ ಭಯವನ್ನು ಇಲ್ಲದಂತಾಗಿಸುತ್ತವೆ. ಇದರಿಂದ ಇಲಿಗೆ “ಬೆಕ್ಕು ತನ್ನ ಶತ್ರು” ಎನ್ನುವ ಭಾವ ನಾಶವಾಗಿ, ಅದು ಸೀದಾ ಬೆಕ್ಕಿನೆಡೆಗೆ ಧಾವಿಸಿ, ಆಹಾರವಾಗುತ್ತದೆ. ಹೀಗೆ ಯಃಕಶ್ಚಿತ್ ಏಕಾಣು ಪರೋಪಜೀವಿಯೊಂದು ತನಗಿಂತಲೂ ಕೋಟಿ ಪಟ್ಟು ದೊಡ್ಡದಾದ ಜೀವಿಯೊಂದರ ಮಿದುಳನ್ನು ತನ್ನ ನಿಯಂತ್ರಣಕ್ಕೆ ಪಡೆದು, ಅದನ್ನು ಬಲಿಪೀಠಕ್ಕೆ ಹತ್ತಿಸಿ, ತನ್ನ ಸಂತಾನವನ್ನು ಹೆಚ್ಚಿಸಿಕೊಳ್ಳುತ್ತದೆ!

ಈ ಇಡೀ ಪ್ರಕ್ರಿಯೆಯಲ್ಲಿ ವಿಜ್ಞಾನಿಗಳನ್ನು ಸೋಜಿಗಕ್ಕೆ ಕೆಡವಿದ್ದು “ಮಿದುಳು ಉತ್ತಮಾಂಗ” ಎನ್ನುವ ಅವರ ತರ್ಕ ನಾಶವಾದದ್ದು. ಸಮಗ್ರ ದೇಹವನ್ನು ತನ್ನ ರಕ್ಷಣೆಗೆ ಬಳಸಿಕೊಳ್ಳುತ್ತದೆ ಎಂದು ನಂಬಲಾಗಿದ್ದ ಮಿದುಳು, ಕಡೆಗೆ ಯಾವುದೋ ಇತರ ಪ್ರಭಾವದಿಂದ ದೇಹದೊಡನೆ ತನ್ನನ್ನೂ ಬಲಿಯಾಗಿಸಿದ್ದು. ವಿಕಾಸದ ಹಾದಿಯಲ್ಲಿ ತನಗಿಂತ ಲಕ್ಷಾಂತರ ವರ್ಷಗಳ ನಂತರ ಬಂದ, ತನಗಿಂತ ಕೋಟಿ ಪಟ್ಟು ದೊಡ್ಡದಾದ ಇಲಿಯನ್ನು ಸ್ವಂತ ಅಸ್ತಿತ್ವವಿಲ್ಲದ, ಬೇರಾವುದೋ ಪ್ರಾಣಿಯನ್ನು ಅವಲಂಬಿಸಿ ಬದುಕುವ ಟೊಕ್ಸೊಪ್ಲಾಸ್ಮ ಗೊಂಡಿ ಎಂಬ ಏಕಾಣು ಪರೋಪಜೀವಿ ತನಗೆ ಬೇಕಾದಂತೆ ಬಳಸಿಕೊಂಡು ಅದನ್ನು ಹತ್ಯೆ ಮಾಡಿದ್ದು. ಹೀಗೆ ಇಲಿಯ ಮಿದುಳನ್ನು ಬಳಸಿಕೊಂಡದ್ದು ಟೊಕ್ಸೊಪ್ಲಾಸ್ಮ ಗೊಂಡಿಯ ಸಂತಾನಕ್ರಿಯೆ ನಡೆಯುವಂತಾಗಿ, ಅದರ ಸಂಖ್ಯೆ ಬೆಳೆಯಲು. ಹಾಗಾದರೆ, ಸಂಖ್ಯೆ ಬೆಳೆಯುವುದು ಮಿದುಳಿನ ಪ್ರಭಾವಕ್ಕಿಂತಲೂ ಮಹತ್ವದ್ದು ಎಂದಾಯಿತು. ಮಿದುಳಿಗಾಗಿಯೇ ದೇಹವಿದೆ ಎನ್ನುವ ತತ್ತ್ವ ಪ್ರಶ್ನಾರ್ಹವಾಯಿತು. ಜೀವಿಯ ಸಂಖ್ಯೆ ಬೆಳೆಸಲು ಮಿದುಳು ನೆರವಾಗುತ್ತದೆ ಎನ್ನುವ ಮಾತು ಹೆಚ್ಚು ಸಮಂಜಸ. ಆದರೆ ಜೀವಿಯ ಸಂಖ್ಯೆ ಬೆಳೆಯುವುದು ಎಂದರೇನು? ಸಂಖ್ಯೆ ಬೆಳೆಯುವುದರ ಮೂಲಕ ಮುಖ್ಯವಾಗಿ ಏನು ಬೆಳೆಯುತ್ತಿದೆ?

ಇದನ್ನೂ ಓದಿ | ವೈದ್ಯ ದರ್ಪಣ ಅಂಕಣ | ಮನುಷ್ಯನ ಆಯಸ್ಸು ಎಷ್ಟು?

ಈ ಪ್ರಶ್ನೆಯನ್ನು ಉತ್ತರಿಸುವ ಮುನ್ನ ಒಂದು ದೃಷ್ಟಿ ಜೀವವಿಕಾಸದೆಡೆಗೆ ಹರಿಸೋಣ. ಜೀವ ಸೃಷ್ಟಿಯಾದದ್ದು ಏಕಕೋಶ ಜೀವಿಗಳಿಂದ. ಇದು ಬಹುಕೋಶ ಜೀವಿಯಾಗಿ ವಿಕಾಸವಾಗಲು ಲಕ್ಷಾಂತರ ವರ್ಷಗಳು ಹಿಡಿದವು. ಮಿದುಳು ಅಂತಿರಲಿ; ನರಕೋಶಗಳು ಕೂಡ ಇಲ್ಲದಿದ್ದ ಏಕಕೋಶ ಜೀವಿಗಳು ಒಂದಾನೊಂದು ಕಾಲದಲ್ಲಿ ಭೂಮಿಯನ್ನು ವ್ಯಾಪಿಸಿದ್ದವು. ಇಂದಿಗೂ ಅವುಗಳ ಅಸ್ತಿತ್ವ ನಿರ್ಬಾಧಿತವಾಗಿ ಉಳಿದಿದೆ. ಅವುಗಳ ಒಂದು ಕೋಶ ವಿದಳನವಾಗಿ ಎರಡಾಗುತ್ತದೆ. ಅಲ್ಲಿಗೆ ಒಂದು ಹಳೆಯ ಏಕಕೋಶ ಜೀವಿಯ ಸ್ಥಾನದಲ್ಲಿ ಎರಡು ಹೊಸ ಏಕಕೋಶ ಜೀವಿಗಳ ಉಗಮವಾಯಿತು. ಸಾವಿನ ಜೊತೆಗೆ ಹೊಸ ಹುಟ್ಟನ್ನು ಕಂಡುಕೊಳ್ಳುತ್ತಾ ಸಂಖ್ಯೆಯಲ್ಲಿ ವೃದ್ಧಿಸುವ ಪ್ರಕ್ರಿಯೆ ಇದು. ಈ ಪ್ರಕ್ರಿಯೆಯ ಸೂತ್ರಧಾರಿ ʼಜೀನ್’ಗಳು. ಜೀನ್ ರಚನೆ ಆಗಿರುವುದು ಆರ್‌.ಎನ್.ಎ. ಮತ್ತು ಡಿ.ಎನ್.ಎ. ಎನ್ನುವ ರಾಸಾಯನಿಕಗಳಿಂದ. ಹೊಸದಾಗಿ ಹುಟ್ಟಿದ ಕೋಶ ಏನು ಮಾಡಬೇಕು, ಹೇಗೆ ಬೆಳೆಯಬೇಕು, ಯಾವ ಹಂತದಲ್ಲಿ ವಿದಳನವಾಗಬೇಕು ಎನ್ನುವ ಸಮಗ್ರ ಮಾಹಿತಿ ಇರುವುದು ಜೀನ್‌ಗಳಲ್ಲಿ. ಸಂತಾನ ಪ್ರಕ್ರಿಯೆಯ ಮೂಲಕ ವೃದ್ಧಿಸುವುದು ಈ ʼಜೀನ್’ಗಳು. ಒಟ್ಟಾರೆ, ತನ್ನ ಸಂತಾನವನ್ನು ಬೆಳೆಸಬಲ್ಲ ಯಾವುದೇ ಜೀವಕೋಶದ ಆದಿ-ಅಂತ್ಯವನ್ನು ನಿರ್ಧರಿಸುವುದು ಅದರೊಳಗೆ ಅಡಕವಾಗಿರುವ ಜೀನ್‌ಗಳು. ಜೀನ್ ಇಲ್ಲದ ಕೋಶಗಳೂ ಅಸ್ತಿತ್ವದಲ್ಲಿವೆ. ನಮ್ಮ ರಕ್ತದಲ್ಲಿನ ಕೆಂಪು ರಕ್ತಕಣಗಳಲ್ಲಿ ಯಾವುದೇ ಜೀನ್ ಇಲ್ಲ. ಹಾಗಾಗಿ, ಅವುಗಳು ವಿದಳನವಾಗುವುದಿಲ್ಲ. ಆದರೆ, ಕೆಂಪು ರಕ್ತಕಣಗಳ ಹುಟ್ಟಿಗೆ ಕಾರಣವಾಗುವ ಕೋಶಗಳಲ್ಲಿ ಜೀನ್‌ಗಳಿವೆ. ಒಮ್ಮೆ ಜೀನ್‌ಗಳನ್ನು ಕಳೆದುಕೊಂಡ ನಂತರ ಕೆಂಪು ರಕ್ತಕಣಗಳ ಚಲನೆಯನ್ನು, ಅಂತ್ಯವನ್ನು ಬೇರೆ ಅಂಗಗಳು ನಿರ್ಧರಿಸುತ್ತವೆ. ಹೀಗಾಗಿ, ಜೀನ್ ಇಲ್ಲದ ಕೋಶಗಳದ್ದು ಪರೋಕ್ಷ ಅಸ್ತಿತ್ವ ಮಾತ್ರ; ಸಾಯುವ ಸ್ವಾತಂತ್ರ್ಯವೂ ಅವಕ್ಕಿಲ್ಲ! ಅಂದರೆ ಕೋಶವೊಂದರ ಜೀವನ್ಮರಣವನ್ನು ನಿರ್ಧರಿಸುವುದು ಜೀನ್‌ಗಳು ಮತ್ತು ಅವುಗಳು ರಚನೆಯಾಗಿರುವ ಆರ್.ಎನ್.ಎ. ಮತ್ತು ಡಿ.ಎನ್.ಎ. ಎನ್ನುವ ರಾಸಾಯನಿಕಗಳು.

ಏಕಕೋಶ ಜೀವಿಗಳು ಬಹುಕೋಶ ಜೀವಿಗಳಾಗಿ ವಿಕಾಸ ಹೊಂದಿದಾಗ ಕೆಲವು ಬದಲಾವಣೆಗಳಾದವು. ಹಲವಾರು ಜೀವಕೋಶಗಳು ಒಗ್ಗೂಡಿದರೂ ಅವುಗಳು ಏಕಸೂತ್ರದಲ್ಲಿ ಕೆಲಸ ಮಾಡಬೇಕಷ್ಟೇ? ಹೀಗಾಗಿ, ಇವುಗಳ ಪೈಕಿ ಕೆಲವು ಜೀವಕೋಶಗಳ ಸಣ್ಣ ಗುಂಪು ಒಂದು ನಿಯಮಿತ ಕಾರ್ಯಕ್ಕೆ ಸೀಮಿತವಾಯಿತು. ಇಂತಹ ಹಲವಾರು ಗುಂಪುಗಳು ತಂತಮ್ಮ ಕೆಲಸಗಳನ್ನು ಮಾಡುತ್ತಾ ಬಹುಕೋಶ ಜೀವಿಯ ಸರಾಗ ಕಾರ್ಯ ನಿರ್ವಹಣೆಗೆ ನೆರವಾದವು. ಇದೊಂದು ರೀತಿ ಓರ್ವ ವ್ಯಕ್ತಿ ಆರಂಭಿಸಿ, ನಿರ್ವಹಿಸುತ್ತಿದ್ದ ಸಣ್ಣ ಅಂಗಡಿಯೊಂದು ಬೆಳೆದು ವಹಿವಾಟು ಅಧಿಕವಾದಾಗ ಕೆಲಸವನ್ನು ಹಂಚಿಕೊಳ್ಳಲು ಹೆಚ್ಚಿನ ಜನರ ಅಗತ್ಯ ಬಿದ್ದಂತೆ. ಬಹುಕೋಶ ಜೀವಿಗಳ ವಿಕಾಸ ಪ್ರಕ್ರಿಯೆ ಮುಂದುವರೆದು ಪ್ರತಿಯೊಂದು ಕೋಶಗಳ ಗುಂಪೂ ಒಂದೊಂದು ಅಂಗವಾಗಿ ಬದಲಾಯಿತು. ಒಂದು ರೀತಿಯಲ್ಲಿ ಅಂಗಡಿಯ ವಹಿವಾಟು ಹೆಚ್ಚಾಗಿ ಅದರ ನಾಲ್ಕೈದು ಶಾಖೆಗಳು ವಿವಿಧೆಡೆ ಆರಂಭವಾದಂತೆ. ಬಹುಕೋಶ ಜೀವಿಗಳಲ್ಲಿನ ಅಂಗಗಳ ಸಂಕೀರ್ಣತೆ ಹೆಚ್ಚುತ್ತಾ ಬಂದಂತೆ ಅವುಗಳ ಪರಸ್ಪರ ಸಹಕಾರವನ್ನು ಮೇಲ್ವಿಚಾರಣೆ ಮಾಡಬಲ್ಲ ನಿಯಂತ್ರಕ ಅಂಗವೊಂದರ ಅಗತ್ಯ ಕಂಡು ಬಂದಿತು. ಈ ಅಂಗವೇ ಮಿದುಳು. ಹೋಲಿಕೆಯಲ್ಲಿ ಹೇಳುವುದಾದರೆ, ಅಂಗಡಿಯ ಶಾಖೆಗಳು ಸೂಪರ್ ಮಾರ್ಕೆಟ್ಟುಗಳಾಗಿ ಬದಲಾಗಿ, ಹಲವಾರು ನಗರಗಳಲ್ಲಿ ವ್ಯಾಪಿಸಿದಾಗ ಅವುಗಳ ಸಮಗ್ರ ನಿರ್ವಹಣೆಗೆ ಒಂದೆಡೆ ಕೇಂದ್ರ ಕಛೇರಿ ತೆರೆಯುವಂತೆ. ಅಂದರೆ, ಮಿದುಳು ಎನ್ನುವುದು ವ್ಯವಸ್ಥೆಯ ಮೇಲ್ವಿಚಾರಕನೇ ಹೊರತು ಮಾಲೀಕನಲ್ಲ. ಹೊರನೋಟಕ್ಕೆ ನೋಡುವವರಿಗೆ ಈ ಮೇಲ್ವಿಚಾರಕ ಇಡೀ ವ್ಯವಸ್ಥೆಯ ಹತೋಟಿಯನ್ನು ತನ್ನ ಹಿಡಿತದಲ್ಲಿ ಇಟ್ಟಿದ್ದಾನೆ ಎನ್ನಿಸುತ್ತದೆ. ಆತ ದಿನನಿತ್ಯದ ವ್ಯವಹಾರಗಳ ಮೇಲೆ ತನ್ನ ತೀರ್ಮಾನ ನೀಡುವಾಗ ಆತನೇ ಮಾಲೀಕ ಎನಿಸಿದರೂ ಅಚ್ಚರಿಯಲ್ಲ. ಆದರೆ, ಅದು ನೋಡುಗರ ತಪ್ಪು ಗ್ರಹಿಕೆ ಮಾತ್ರ. ಕಣ್ಣಿಗೆ ಕಾಣದ ಮಾಲೀಕ ವ್ಯವಸ್ಥೆಯ ಪ್ರತಿಯೊಂದು ಅಂಶದಲ್ಲೂ ಅಂತರ್ಗತನಾಗಿರುತ್ತಾನೆ. ಹೀಗೆಯೇ, ಮೇಲ್ನೋಟಕ್ಕೆ ಮಿದುಳಿನ ಸಾರ್ವಭೌಮತ್ವ ಗಣನೀಯವೆನಿಸಿದರೂ, ಇಡೀ ಶರೀರವನ್ನು ನಿಯಂತ್ರಿಸುವುದು ಜೀನ್‌ಗಳು ಮತ್ತು ಅವುಗಳು ರಚನೆಯಾಗಿರುವ ಆರ್.ಎನ್.ಎ. ಮತ್ತು ಡಿ.ಎನ್.ಎ. ಎನ್ನುವ ರಾಸಾಯನಿಕಗಳು.

ಇದನ್ನೂ ಓದಿ | ವೈದ್ಯ ದರ್ಪಣ ಅಂಕಣ | ರೊಬೊಟ್ ಇಲಿಗಳು, ಕೃತಕ ಕಣ್ಣು, ಸಿಂಗ್ಯುಲಾರಿಟಿ ಇತ್ಯಾದಿ…

ಯಾರು ನಿಯಂತ್ರಿಸಿದರೆ ಏನು? ಒಟ್ಟಿನಲ್ಲಿ ಇಡೀ ವ್ಯವಸ್ಥೆ ನಿರಾತಂಕವಾಗಿ ಕೆಲಸ ಮಾಡಬೇಕು ತಾನೆ? ಅದು ಜೀನ್ ಆದರೇನು ಅಥವಾ ಮಿದುಳಾದರೇನು? ಈ ಗ್ರಹಿಕೆ ಕೆಲಸ ಸರಿಯಾಗಿ ನಡೆಯುತ್ತಾ ಇರುವವರೆಗೆ ಸರಿ. ಆದರೆ, ವ್ಯವಸ್ಥೆ ಕೆಟ್ಟಾಗ, ವ್ಯವಸ್ಥೆಯಲ್ಲಿ ಉನ್ನತಿ ಆಗಬೇಕಾದಾಗ, ಆಮೂಲಾಗ್ರ ಬದಲಾವಣೆಗಳ ಅಗತ್ಯ ಕಂಡುಬಂದಾಗ ಅಂತಿಮ ನಿರ್ಧಾರ ಯಾರದ್ದು ಎನ್ನುವ ಬಗ್ಗೆ ಜಿಜ್ಞಾಸೆ ಮೂಡುತ್ತದೆ. ಹೀಗಾಗಿ, ಯಾವುದೇ ವ್ಯವಸ್ಥೆಯ ಮಾಲೀಕತ್ವದ ಪರಿಕಲ್ಪನೆ ಸ್ಪಷ್ಟವಾಗಿರಬೇಕು. ಭವಿಷ್ಯದ ಔಷಧಗಳ ತಯಾರಿಕೆಯಲ್ಲಾಗಲೀ, ಸದ್ಯಕ್ಕೆ ಚಿಕಿತ್ಸೆ ತಿಳಿದಿಲ್ಲದ ಕಾಯಿಲೆಗಳನ್ನು ಗುಣಪಡಿಸುವ ನಿಟ್ಟಿನಲ್ಲಾಗಲೀ, ಅಂಗಗಳ ಕಸಿ ಮಾಡುವ ಪ್ರಕ್ರಿಯೆಯಲ್ಲಾಗಲೀ, ನಿರ್ವಹಣೆಯ ಮಟ್ಟದಲ್ಲಿ ಸೂಕ್ಷ್ಮ ಬದಲಾವಣೆಗಳನ್ನು ನಿರ್ಧರಿಸುವುದರಲ್ಲಾಗಲೀ, ಅಥವಾ ಬೇರ್ಯಾವುದೇ ಕ್ರಾಂತಿಕಾರಕ ಎನ್ನಬಹುದಾದ ಮಾರ್ಪಾಡುಗಳಲ್ಲಾಗಲೀ ವಿಜ್ಞಾನಿಗಳು ಕೇವಲ ಮಿದುಳಿನ ಮೊರೆ ಹೋಗಲಾಗದು. ಅದನ್ನು ಜೀನ್ ಮಟ್ಟದಲ್ಲಿ ನಿರ್ವಹಿಸಬೇಕು.

ಒಟ್ಟಿನಲ್ಲಿ, ನಮ್ಮ ಶರೀರವನ್ನು ನಿಯಂತ್ರಿಸುವುದು ಯಾರು ಎಂಬ ಪ್ರಶ್ನೆಗೆ ಉತ್ತರ ದೊರೆತಂತಾಯಿತು!

(ಲೇಖಕರು ವೈದ್ಯರು, ವಿಜ್ಞಾನ ಬರಹಗಾರರು)

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಅಂಕಣ

ರಾಜಮಾರ್ಗ ಅಂಕಣ: ಕಣ್ಣಿಲ್ಲದೆ ಉದ್ಯಮ ಸಾಮ್ರಾಜ್ಯವನ್ನು ಕಟ್ಟಿದ ಶ್ರೀಕಾಂತ್ ಬೊಳ್ಳಾ

ರಾಜಮಾರ್ಗ ಅಂಕಣ: ಕುರುಡರಾಗಿ ಹುಟ್ಟಿದ ಕಾರಣಕ್ಕೆ ನೋವು, ತಿರಸ್ಕಾರ ಅನುಭವಿಸುತ್ತಿದ್ದ ಶ್ರೀಕಾಂತ್‌ ಬೊಳ್ಳಾ ಹಿಡಿದ ಛಲದ ಹಾದಿ ಇಂದು ಅವರನ್ನು ದೊಡ್ಡ ಕಂಪನಿಗಳ ಮಾಲಿಕರಾಗುವತ್ತ, ನೂರಾರು ದಿವ್ಯಾಂಗರಿಗೆ ಕೆಲಸ ನೀಡುವವರೆಗೆ ಮುನ್ನಡೆಸಿದೆ. ನಾವೆಲ್ಲರೂ ಓದಿ ರೋಮಾಂಚಿತರಾಗಬಹುದಾದ ಸ್ಫೂರ್ತಿ ಕಥೆಯಿದು.

VISTARANEWS.COM


on

rajamarga column srikant bolla
Koo

ಕಣ್ಣಿಲ್ಲ ಎಂಬ ಕಾರಣಕ್ಕೆ ಐಐಟಿ ರಿಜೆಕ್ಟ್ ಆಗಿದ್ದ ಯುವಕನು ಕೋಟಿ ಕೋಟಿ ಸಂಪಾದನೆ ಮಾಡಿದ್ದು ಹೇಗೆ?

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಮೂರು ವರ್ಷಗಳ ಹಿಂದೆ ಇವರನ್ನು ಬೆಂಗಳೂರಿನ ಒಂದು ಬಿಸಿನೆಸ್ ಸಮ್ಮೇಳನದ ವೇದಿಕೆಯಲ್ಲಿ ಭೇಟಿಯಾಗಿದ್ದೆ. ಅವರ ಹೋರಾಟದ ಕಥೆಯನ್ನು ಅವರ ಮಾತಲ್ಲೇ ಕೇಳಿ ರೋಮಾಂಚನವಾಗಿತ್ತು.

ಶ್ರೀಕಾಂತ್ ಬೊಳ್ಳ ಅವರ ಹೋರಾಟದ ಅದ್ಭುತವಾದ ಕಥೆಯನ್ನು ಅವರದ್ದೇ ಮಾತುಗಳಲ್ಲಿ ಕೇಳೋಣ.

ನಾನು ಹುಟ್ಟಿದ್ದು ಆಂಧ್ರಪ್ರದೇಶದ ಮಚಲಿ ಪಟ್ಟಣದ ಒಂದು ಪುಟ್ಟ ಗ್ರಾಮದಲ್ಲಿ (1992). ನನ್ನ ಹುಟ್ಟು ಕುರುಡುತನ ನನ್ನ ಕೃಷಿಕ ಕುಟುಂಬಕ್ಕೆ ದೊಡ್ಡ ಸವಾಲು ಆಗಿತ್ತು. ನಮ್ಮ ಕುಟುಂಬದ ವಾರ್ಷಿಕ ಆದಾಯ 20,000 ರೂಪಾಯಿಗಿಂತ ಕಡಮೆ ಇದ್ದ ಕಾಲ ಅದು!

ಅಪಮಾನ, ತಿರಸ್ಕಾರ ಮತ್ತು ತಾರತಮ್ಯ

ನಾನು ಕುರುಡ ಎಂಬ ಕಾರಣಕ್ಕೆ ತಿರಸ್ಕಾರ, ಅಪಮಾನ ತುಂಬಾ ನೋವು ಕೊಡುತ್ತಿತ್ತು. ತರಗತಿಯಲ್ಲಿ ಕೊನೆಯ ಬೆಂಚು ಖಾಯಂ. ಆಟಕ್ಕೆ ಅವಕಾಶವನ್ನೇ ಕೊಡುತ್ತಿರಲಿಲ್ಲ. ಇದರಿಂದ ಅಪ್ಪ ನೊಂದುಕೊಂಡು ನನ್ನನ್ನು ಹೈದರಾಬಾದ್ ನಗರದ ವಿಶೇಷ ಮಕ್ಕಳ ಶಾಲೆಗೆ ಸೇರಿಸಿದರು. ಅಲ್ಲಿ ನನ್ನ ಜೀವನದ ಹಲವು ಟರ್ನಿಂಗ್ ಪಾಯಿಂಟಗಳು ಆರಂಭ! ಕಲಿಕೆಯಲ್ಲಿ ನಾನು ನನ್ನ ತರಗತಿಗೆ ಪ್ರಥಮ ಬರಲು ಆರಂಭಿಸಿದೆ. ಕುರುಡು ಮಕ್ಕಳ ಕ್ರಿಕೆಟ್ ತಂಡದಲ್ಲಿ ನಾನು ರಾಷ್ಟ್ರೀಯ ತಂಡದಲ್ಲಿ ಆಡಿದೆ.

ಅಬ್ದುಲ್ ಕಲಾಂ ಭೇಟಿ ಮಿಂಚು ಹರಿಸಿತು

ನಾನು ಪ್ರೌಢಶಾಲೆಯಲ್ಲಿ ಓದುವಾಗ ನಮ್ಮ ಶಾಲೆಗೊಮ್ಮೆ ಅಬ್ದುಲ್ ಕಲಾಂ ಭೇಟಿ ನೀಡಿದರು. ಅವರ ಮಾತುಗಳಿಂದ ನಾನು ಪ್ರಭಾವಿತನಾದೆ. ಅವರ ‘ಲೀಡ್ ಇಂಡಿಯಾ 2020’ ಎಂಬ ವಿದ್ಯಾರ್ಥಿ ಅಭಿಯಾನಕ್ಕೆ ನಾನು ಸದಸ್ಯತನ ಪಡೆದೆ. ನನಗೆ ಎಸೆಸೆಲ್ಸಿ ಪರೀಕ್ಷೆಯಲ್ಲಿ 90% ಅಂಕಗಳು ಬಂದವು. ವಿಜ್ಞಾನದಲ್ಲಿ ಪಿಯುಸಿ ಮಾಡಬೇಕೆಂದು ನನ್ನ ಆಸೆ. ಆದರೆ ನಾನು ಕುರುಡ ಎಂಬ ಕಾರಣಕ್ಕೆ ನನಗೆ ಯಾವುದೇ ಕಾಲೇಜಿನಲ್ಲಿ ವಿಜ್ಞಾನದ ಸೀಟ್ ಸಿಗಲಿಲ್ಲ.

ನನಗೆ ಅಬ್ದುಲ್ ಕಲಾಂ ಅವರ ಮಾತುಗಳು ನೆನಪಾದವು – ಹಕ್ಕಿ ಹಾರುವುದು ರೆಕ್ಕೆಗಳ ಬಲದಿಂದಲ್ಲ. ಅದು ಹಾರುವುದು ಭರವಸೆಗಳ ಬಲದಿಂದ!

ಸರಕಾರದ ವಿರುದ್ಧ ಬೀದಿಗೆ ಇಳಿದು ಹೋರಾಟ.

ನಾನು ಹೈದರಾಬಾದ್ ಸರಕಾರದ ವಿರುದ್ಧ ರಸ್ತೆಗಿಳಿದು ಪ್ರತಿಭಟನೆಯನ್ನು ಮಾಡಿದೆ. ಆರು ತಿಂಗಳ ನಂತರ ನನಗೆ ವಿಜ್ಞಾನದ ಸೀಟ್ ದೊರೆಯಿತು. ಸತತವಾಗಿ ಕಷ್ಟ ಪಟ್ಟೆ. ಬ್ರೈಲ್ ಲಿಪಿಯಲ್ಲಿ ಪರೀಕ್ಷೆಯನ್ನು ಬರೆದು ದ್ವಿತೀಯ ಪಿಯುಸಿಯಲ್ಲಿ ನನಗೆ 98% ಅಂಕಗಳು ಬಂದವು!

ಐಐಟಿ ಸಂಸ್ಥೆಗಳು ಬಾಗಿಲು ತೆರೆಯಲಿಲ್ಲ

ನನಗೆ ಐಐಟಿಯಲ್ಲಿ BE ಮಾಡುವ ಆಸೆ. ಆದರೆ ಭಾರತದ ಯಾವುದೇ ಐಐಟಿ ಕಾಲೇಜುಗಳು ನನಗೆ ಕುರುಡ ಎಂಬ ಕಾರಣಕ್ಕೆ ಎಂಟ್ರೆನ್ಸ್ ಪರೀಕ್ಷೆಗೂ ಅವಕಾಶ ನೀಡಲಿಲ್ಲ. ನಾನು ಕೈಚೆಲ್ಲಲಿಲ್ಲ. ಅಮೆರಿಕಾದ ನಾಲ್ಕು ಪ್ರಸಿದ್ಧವಾದ ಯೂನಿವರ್ಸಿಟಿಗಳ ಬಾಗಿಲು ಬಡಿದೆ. ಎಲ್ಲವೂ ಆಹ್ವಾನ ನೀಡಿದವು.

ನಾನು ಮಸ್ಸಾಚುಸೆಟ್ಸ್ ವಿವಿ ಆರಿಸಿಕೊಂಡೆ. ಅಮೆರಿಕಾದ ವಿವಿಯಲ್ಲಿ BE ಪ್ರವೇಶ ಪಡೆದ ಜಗತ್ತಿನ ಮೊದಲ ಕುರುಡ ವಿದ್ಯಾರ್ಥಿ ನಾನಾಗಿದ್ದೆ! ನನಗೆ ಇಷ್ಟವಾದ BE ಕೋರ್ಸನ್ನು ಮುಗಿಸಿದೆ. ಅಲ್ಲಿ ಈಜು ಮತ್ತು ಡೈವಿಂಗಲ್ಲಿ ವಿವಿ ದಾಖಲೆ ಕೂಡ ಮಾಡಿದ್ದೆ. ಅಮೆರಿಕಾದ ಕೆಲವು ಕಾರ್ಪೊರೇಟ್ ಕಂಪೆನಿಗಳು ನನಗೆ ಉದ್ಯೋಗ ನೀಡಲು ಮುಂದೆ ಬಂದವು.

ಆದರೆ ನನ್ನ ಕನಸುಗಳು ಭಾರತದಲ್ಲಿ ಇದ್ದವು!

2011ರಲ್ಲಿ ಭಾರತಕ್ಕೆ ಬಂದು ಮತ್ತೆ ಅಬ್ದುಲ್ ಕಲಾಂ ಅವರನ್ನು ಭೇಟಿ ಮಾಡಿದೆ. ಅವರ ಸಲಹೆಯಂತೆ ಬಹು ವಿಕಲತೆಯ ಮಕ್ಕಳಿಗಾಗಿ “ಸಮನ್ವೈ ಸೆಂಟರ್” ಎಂಬ ಸೇವಾ ಸಂಸ್ಥೆ ಆರಂಭಿಸಿದೆ. ಬ್ರೈಲ್ ಪ್ರಿಂಟಿಂಗ್ ಪ್ರೆಸ್ ತೆರೆದೆ. 3000 ಅಶಕ್ತ ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ನೆರವಿಗೆ ನಿಂತೆ. ಅಷ್ಟಕ್ಕೇ ಸುಮ್ಮನಾಗಲಿಲ್ಲ.

ಆರಂಭ ಆಯಿತು ಅವರದ್ದೇ ಕಂಪೆನಿ

2011ರಲ್ಲಿ ‘ BOLLANT INDUSTRY’ ಎಂಬ ಸಣ್ಣ ಉದ್ಯಮವನ್ನು ಆರಂಭಿಸಿದೆ. ನಗರಪಾಲಿಕೆಯ ತ್ಯಾಜ್ಯ ವಸ್ತುಗಳಿಂದ ಮತ್ತು ಆಡಕೆಯಿಂದ ಕ್ರಾಫ್ಟ್ ಪೇಪರ್ ತಯಾರಿಸುವ ಕಂಪೆನಿ ಅದು. ಹಣ ಮಾಡುವುದು ನನ್ನ ಉದ್ದೇಶ ಆಗಿರಲಿಲ್ಲ. ನನ್ನ ಕಂಪೆನಿಯಲ್ಲಿ ಕುರುಡರಿಗೆ ಮತ್ತು ವಿಕಲಚೇತನರಿಗೆ ಉದ್ಯೋಗ ನೀಡಿದೆ. ರತನ್ ಟಾಟಾ ಅವರು ನನ್ನ ಕಂಪೆನಿಯಲ್ಲಿ ಹೂಡಿಕೆ ಮಾಡಲು ಮುಂದೆ ಬಂದರು. ನನ್ನ ಐಕಾನ್ ಎಪಿಜೆ ಅಬ್ದುಲ್ ಕಲಾಂ ಅವರು ಬಂದು ದೀಪ ಹಚ್ಚಿದರು. ಮುಂದೆ ಆ ಕಂಪೆನಿಯು ಪ್ರತೀ ತಿಂಗಳು 20% ಪ್ರಗತಿ ದಾಖಲಿಸುತ್ತಾ ಬಂದಿತು.

ದಿವ್ಯಾಂಗರಿಗೆ ಉದ್ಯೋಗ ನೀಡಿದರು

ಇಂದು ನನ್ನ ಕಂಪೆನಿಗೆ ನಾಲ್ಕು ರಾಜ್ಯಗಳಲ್ಲಿ 20 ಶಾಖೆಗಳು ಇವೆ. 100 ಕೋಟಿ ರೂಪಾಯಿ ವಾರ್ಷಿಕ ಟರ್ನ್ ಓವರ್ ಇದೆ! ನೂರಕ್ಕೆ ನೂರು ಸೌರಶಕ್ತಿ ಆಧಾರಿತವಾಗಿದೆ ಮತ್ತು ಪರಿಸರಸ್ನೇಹಿ ಆಗಿದೆ. ಅಶಕ್ತ ದಿವ್ಯಾಂಗರಿಗೆ ಸ್ವಾವಲಂಬಿ ಬದುಕಿನ ಅವಕಾಶವನ್ನು ನೀಡಿದ ಖುಷಿ ಇದೆ. ಭಾರತದ ಸಮಸ್ಯೆಗಳಾದ ಬಡತನ, ನಿರಕ್ಷರತೆ, ನಿರುದ್ಯೋಗಗಳ ನಿವಾರಣೆಗೆ ನಮ್ಮಿಂದಾದಷ್ಟು ಪ್ರಯತ್ನ ಪ್ರತಿಯೊಬ್ಬರೂ ಮಾಡಬೇಕು. ‘ಪಂಚೀ ಉಡತೀ ಹೈ ಪಂಖೋ ಕೀ ತಾಕತ್ ಸೆ ನಹೀಂ. ಹೌಸಲೆ ಸೇ!’ ಎಂಬ ಅಬ್ದುಲ್ ಕಲಾಂ ಅವರ ಮಾತಿನೊಂದಿಗೆ ಅವರು ತನ್ನ ಮಾತು ನಿಲ್ಲಿಸಿದರು. ಅವರ ಆಳವಾದ ಕಣ್ಣುಗಳಲ್ಲಿ ಗೆದ್ದ ಖುಷಿ ಇತ್ತು.

ಭರತ ವಾಕ್ಯ

ಅಂದ ಹಾಗೆ ಶ್ರೀಕಾಂತ್ ಅವರಿಗೆ ಫೋರ್ಬ್ಸ್ ಮಾಗಜ್ಹಿನ್ 2017ರಲ್ಲಿ ನಡೆಸಿದ ಏಷಿಯಾದ 30 ಅತ್ಯಂತ ಪ್ರಭಾವಿ ವ್ಯಕ್ತಿಗಳ ಪಟ್ಟಿಯಲ್ಲಿ ಸ್ಥಾನವನ್ನು ದೊರೆತಿದೆ. ‘NDTV ಇಂಡಿಯನ್ ಆಫ್ ದಿ ಇಯರ್’ ಪ್ರಶಸ್ತಿ, ‘ಪ್ರೈಡ್ ಆಫ್ ತೆಲಂಗಾಣ’ ಪ್ರಶಸ್ತಿ, ‘ಟಿವಿ 9 ನವನಕ್ಷತ್ರ’ ಪ್ರಶಸ್ತಿ……. ಮೊದಲಾದ ನೂರಾರು ಪ್ರಶಸ್ತಿಗಳು ಅವರಿಗೆ ದೊರೆತಿವೆ. ಶ್ರೀಕಾಂತ್ ಬೊಳ್ಳ ಅವರ ಬದುಕು ಸಾವಿರಾರು ಯುವಕ ಯುವತಿಯರಿಗೆ ಸ್ಫೂರ್ತಿ ನೀಡಿದೆ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ರಿಶಭ್ ಪಂತ್ – ಕಮ್ ಬ್ಯಾಕ್ ಅಂದರೆ ಹೀಗಿರಬೇಕು!

Continue Reading

ಅಂಕಣ

ರಾಜಮಾರ್ಗ ಅಂಕಣ: ರಿಶಭ್ ಪಂತ್ – ಕಮ್ ಬ್ಯಾಕ್ ಅಂದರೆ ಹೀಗಿರಬೇಕು!

ರಾಜಮಾರ್ಗ ಅಂಕಣ: ಆಕ್ರಮಣಕಾರಿ ರಿಶಭ್ ಪಂತ್ ಡೆಹ್ರಾಡೂನ್ ಆಸ್ಪತ್ರೆಯಲ್ಲಿ ಅರ್ಧ ಹೆಣವಾಗಿ ಮಲಗಿದ್ದ! ಯಾರಿಗೂ ಆತ ಮರಳಿ ಕ್ರಿಕೆಟ್ ಆಡುವ ಭರವಸೆ ಇರಲಿಲ್ಲ. ಆದರೆ ಈಗ, ಈ ಐಪಿಎಲ್ ಸೀಸನ್‌ನಲ್ಲಿ ವಿಕೆಟ್ ಮುಂದೆ ಮತ್ತು ಹಿಂದೆ ಆತ ಆಕ್ರಮಣಕಾರಿ ಆಗಿ ಆಡುತ್ತಿರುವುದನ್ನು ನೀವು ನೋಡಿಯೇ ನೋಡಿರುತ್ತೀರಿ!

VISTARANEWS.COM


on

Rishabh Pant
Koo

ಹೋರಾಟಗಾರ ಕ್ರಿಕೆಟರ್ ಕ್ರಿಟಿಕಲ್ ಇಂಜುರಿ ಗೆದ್ದು ಬಂದ ಕಥೆ

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: 2022 ಡಿಸೆಂಬರ್ 30ರ ಮಧ್ಯರಾತ್ರಿ ರೂರ್ಕಿ ಎಂಬಲ್ಲಿ ಆ ಕ್ರಿಕೆಟರ್ ಕಾರು ಅಪಘಾತಕ್ಕೆ ಒಳಗಾಗಿತ್ತು. ಆ ಅಪಘಾತದ ತೀವ್ರತೆಯನ್ನು ನೋಡಿದವರು ಆತ ಬದುಕಿದ್ದೇ ಗ್ರೇಟ್ ಅಂದಿದ್ದರು. ಬಲಗಾಲಿನ ಮಂಡಿ ಚಿಪ್ಪು ಸಮೇತ 90 ಡಿಗ್ರೀಯಷ್ಟು ತಿರುಗಿ ನಿಂತಿತ್ತು! ಮೈಯೆಲ್ಲಾ ಗಾಯಗಳು ಮತ್ತು ಎಲುಬು ಮುರಿತಗಳು! ಡೆಹ್ರಾಡೂನ್ ಆಸ್ಪತ್ರೆಯ ವೈದ್ಯರು ಆತನ ದೇಹದಲ್ಲಾದ ಗಾಯ ಮತ್ತು ಮೂಳೆ ಮುರಿತಗಳನ್ನು ನೋಡಿದಾಗ ‘ನೀನಿನ್ನು ಕ್ರಿಕೆಟ್ ಆಡೋದು ಕಷ್ಟ’ ಅಂದಿದ್ದರು. ಒಬ್ಬರಂತೂ ‘ನೀನು ನಿನ್ನ ಕಾಲುಗಳ ಮೇಲೆ ನಿಂತರೆ ಅದೇ ದೊಡ್ಡ ಸಾಧನೆ’ ಅಂದಿದ್ದರು!

ಅಮ್ಮಾ ನನಗೆ ಸಹಾಯ ಮಾಡು, ನಾನು ವಿಶ್ವಕಪ್ ಆಡಬೇಕು!

ಆ ಕ್ರಿಕೆಟಿಗ ಆಸ್ಪತ್ರೆಯ ಬೆಡ್ ಮೇಲೆ ಮಲಗಿ ಚೀರಿ ಚೀರಿ ಹಾಗೆ ಹೇಳುತ್ತಿದ್ದರೆ ನರ್ಸ್ ಮತ್ತು ವೈದ್ಯರು ಕಣ್ಣೀರು ಸುರಿಸುತ್ತಿದ್ದರು! ಕ್ರಿಕೆಟ್ ವಿಶ್ವಕಪ್ ಆರಂಭವಾಗಲು ಕೇವಲ ಒಂದೂವರೆ ವರ್ಷ ಬಾಕಿ ಇತ್ತು. ವೈದ್ಯರು ‘ಅನಿವಾರ್ಯ ಆದರೆ ಆತನ ಒಂದು ಕಾಲು ತುಂಡು ಮಾಡಬೇಕಾಗಬಹುದು!’ ಎಂದು ಅವನ ಅಮ್ಮನ ಕಿವಿಯಲ್ಲಿ ಪಿಸುಗುಟ್ಟಿದ್ದು, ಆತನ ಅಮ್ಮ ಬಾತ್ ರೂಮ್ ಒಳಗೆ ಹೋಗಿ ಕಣ್ಣೀರು ಸುರಿಸಿದ್ದು ಎಲ್ಲವೂ ನಡೆದು ಹೋಗಿತ್ತು!

ಆತ ರಿಶಭ್ ಪಂತ್ – ಆಕ್ರಮಣಕ್ಕೆ ಇನ್ನೊಂದು ಹೆಸರು!

ಅಪಘಾತ ಆಗುವ ಮೊದಲು ಆತ ಭಾರತೀಯ ಕ್ರಿಕೆಟ್ ತಂಡದ ಮೂರೂ ಫಾರ್ಮಾಟಗಳಲ್ಲಿ ಶಾಶ್ವತ ಸ್ಥಾನ ಪಡೆದಿದ್ದ! ಆಕ್ರಮಣಕ್ಕೆ ಹೆಸರಾಗಿದ್ದ. ಸಲೀಸಾಗಿ ಒಂದೇ ಅವಧಿಯಲ್ಲಿ ಡಬಲ್ ಸೆಂಚುರಿ ಹೊಡೆಯುತ್ತಿದ್ದ. ವಿಕೆಟ್ ಹಿಂದೆ ಪಾದರಸದ ಚುರುಕು ಇತ್ತು. ಆತನ ಆಟವನ್ನು ನೋಡಿದವರು ʻಈತ ಧೋನಿಯ ಉತ್ತರಾಧಿಕಾರಿ ಆಗುವುದು ಖಂಡಿತ’ ಅನ್ನುತ್ತಿದ್ದರು!

ಅಂತಹ ರಿಶಭ್ ಪಂತ್ ಡೆಹ್ರಾಡೂನ್ ಆಸ್ಪತ್ರೆಯಲ್ಲಿ ಅರ್ಧ ಹೆಣವಾಗಿ ಮಲಗಿದ್ದ! ಯಾರಿಗೂ ಆತ ಮರಳಿ ಕ್ರಿಕೆಟ್ ಆಡುವ ಭರವಸೆ ಇರಲಿಲ್ಲ.

ಆತನ ನೆರವಿಗೆ ನಿಂತವರು ಕೇವಲ ನಾಲ್ಕೇ ಜನ

ಮರಳಿ ಕ್ರಿಕೆಟ್ ಮೈದಾನಕ್ಕೆ ಇಳಿಯಬೇಕು ಎಂದು ನಿದ್ದೆಯಲ್ಲಿಯೂ ಕನವರಿಸುತ್ತಿದ್ದ ಆತನ ನೆರವಿಗೆ ನಿಂತವರು ಕೇವಲ ನಾಲ್ಕೇ ಜನ. ಅವರೆಲ್ಲರೂ ಆತನ ಕ್ರಿಕೆಟ್ ದೈತ್ಯ ಪ್ರತಿಭೆಯನ್ನು ಕಂಡವರು. ಒಬ್ಬರು ಆತನಿಗೆ ಶಸ್ತ್ರಚಿಕಿತ್ಸೆ ಮಾಡಿದ ಮುಂಬಯಿಯ ಅಂಬಾನಿ ಆಸ್ಪತ್ರೆಯ ಖ್ಯಾತ ಸರ್ಜನ್ ದಿನ್ ಶಾ ಪಾದ್ರಿವಾಲ. ಇನ್ನೊಬ್ಬರು ಉತ್ತರಾಖಂಡದ ಶಾಸಕ ಉಮೇಶ್ ಕುಮಾರ್. ಇನ್ನೊಬ್ಬರು ನ್ಯಾಶನಲ್ ಕ್ರಿಕೆಟ್ ಅಕಾಡೆಮಿಯ ಕೋಚ್ ಆದ ಧನಂಜಯ್ ಕೌಶಿಕ್. ನಾಲ್ಕನೆಯರು ರಿಷಭನ ತಾಯಿ! ಆಕೆ ನಿಜಕ್ಕೂ ಗಾಡ್ಸ್ ಗ್ರೇಸ್ ಅನ್ನಬಹುದು. ಅವರೆಲ್ಲರಿಗೂ ಆತ ಭಾರತಕ್ಕೆ ಎಷ್ಟು ಅಮೂಲ್ಯ ಆಟಗಾರ ಎಂದು ಗೊತ್ತಿತ್ತು! ಆಸ್ಪತ್ರೆಯ ಹಾಸಿಗೆಗೆ ಒರಗಿ ಆತ ಪಟ್ಟ ಮಾನಸಿಕ ಮತ್ತು ದೈಹಿಕ ನೋವು, ಹೊರಹಾಕಿದ ನಿಟ್ಟುಸಿರು ಎಲ್ಲವೂ ಆ ನಾಲ್ಕು ಮಂದಿಗೆ ಗೊತ್ತಿತ್ತು.

ಆ ಹದಿನೈದು ತಿಂಗಳು…!

Rishabh Panth

ಆ ಅವಧಿಯಲ್ಲಿ ಏಷಿಯಾ ಕಪ್, ವಿಶ್ವ ಟೆಸ್ಟ್ ಚಾಂಪಿಯನಶಿಪ್, ವಿಶ್ವ ಕಪ್ ಎಲ್ಲವೂ ನಡೆದುಹೋಯಿತು! ಭಾರತ ಹಲವು ವಿಕೆಟ್ ಕೀಪರಗಳ ಪ್ರಯೋಗ ಮಾಡಿತು. ಭಾರತ ಒಂದೂ ಕಪ್ ಗೆಲ್ಲಲಿಲ್ಲ. ಭಾರತಕ್ಕೆ ಶಾಶ್ವತವಾದ ವಿಕೆಟ್ ಕೀಪರ್ ಸಿಗಲಿಲ್ಲ! ರಿಷಭ್ ಈ ಎಲ್ಲ ಪಂದ್ಯಗಳನ್ನು ನೋಡುತ್ತಿದ್ದ. ವಿಕೆಟ್ ಹಿಂದೆ ಅವನಿಗೆ ಅವನೇ ಕಾಣುತ್ತಿದ್ದ!

ಹಾಸಿಗೆಯಿಂದ ಎದ್ದು ಕ್ರಚಸ್ ಹಿಡಿದು ನಡೆದದ್ದು, ನಂತರ ಕ್ರಚಸ್ ಬದಿಗೆ ಇಟ್ಟು ಗೋಡೆ ಹಿಡಿದು ನಡೆದದ್ದು, ನಂತರ ಎಲ್ಲವನ್ನೂ ಬಿಟ್ಟು ನಿಧಾನವಾಗಿ ತನ್ನ ಕಾಲ ಮೇಲೆ ಗಟ್ಟಿಯಾಗಿ ನಿಂತದ್ದು, ಜಾಗಿಂಗ್ ಮಾಡಿದ್ದು, ಓಡಿದ್ದು, ಕಾಲುಗಳಿಗೆ ಫಿಸಿಯೋ ಥೆರಪಿ ಆದದ್ದು, ಆತ್ಮವಿಶ್ವಾಸ ಬೆಳೆಸಿಕೊಳ್ಳಲು ಕೌನ್ಸೆಲಿಂಗ್ ನೆರವು ಪಡೆದದ್ದು….ಇವೆಲ್ಲವೂ ಕನಸಿನಂತೆ ಗೋಚರ ಆಗುತ್ತಿದೆ. ಮುಂದೆ ನಿರಂತರ ಕ್ರಿಕೆಟ್ ಕೋಚಿಂಗ್, ಮೈದಾನದಲ್ಲಿ ಬೆವರು ಹರಿಸಿದ್ದು, ಅಪಘಾತವಾದ ಕಾಲು ಬಗ್ಗಿಸಲು ತುಂಬ ಕಷ್ಟಪಟ್ಟದ್ದು ಒಂದು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾದಂತೆ ಅನ್ನಿಸುತ್ತಿದೆ.

2024 ಮಾರ್ಚ್ 12….

ಒಬ್ಬ ಕ್ರಿಕೆಟರ್ ಮತ್ತೆ ಸ್ಪರ್ಧಾತ್ಮಕ ಕ್ರಿಕೆಟ್ ಮೈದಾನಕ್ಕೆ ಇಳಿಯಲು ಬಿಸಿಸಿಐ ಫಿಟ್ನೆಸ್ ಸರ್ಟಿಫಿಕೇಟ್ ಕೊಡಬೇಕು. ಅದು ಸುಲಭದ ಕೆಲಸ ಅಲ್ಲ. ಅಲ್ಲಿ ಕೂಡ ರಿಶಭ್ ಇಚ್ಛಾಶಕ್ತಿ ಗೆದ್ದಿತ್ತು. ಮಾರ್ಚ್ 12ರಂದು ಆತನು ಕ್ರಿಕೆಟ್ ಆಡಲು ಸಂಪೂರ್ಣ ಫಿಟ್ ಎಂದು ಬಿಸಿಸಿಐ ಘೋಷಣೆ ಮಾಡಿದಾಗ ಆತ ಮೈದಾನದ ಮಧ್ಯೆ ಕೂತು ಜೋರಾಗಿ ಕಣ್ಣೀರು ಹಾಕಿದ್ದನು! ಎರಡೇ ದಿನದಲ್ಲಿ ಡೆಲ್ಲಿ ಐಪಿಎಲ್ ತಂಡವು ಆತನನ್ನು ತೆರೆದ ತೋಳುಗಳಿಂದ ಸ್ವಾಗತ ಮಾಡಿ ನಾಯಕತ್ವವನ್ನು ಕೂಡ ಆತನಿಗೆ ನೀಡಿತ್ತು! ಈ ಐಪಿಎಲ್ ಸೀಸನ್‌ನಲ್ಲಿ ವಿಕೆಟ್ ಮುಂದೆ ಮತ್ತು ಹಿಂದೆ ಆತ ಆಕ್ರಮಣಕಾರಿ ಆಗಿ ಆಡುತ್ತಿರುವುದನ್ನು ನೀವು ನೋಡಿಯೇ ನೋಡಿರುತ್ತೀರಿ!

ಮುಂದಿನ T20 ವಿಶ್ವಕಪ್ ಟೂರ್ನಿಯಲ್ಲಿ ಭಾರತಕ್ಕೆ ಒಬ್ಬ ಅದ್ಭುತ ಬ್ಯಾಟರ್ ಮತ್ತು ವಿಕೆಟ್ ಕೀಪರ್ ದೊರಕಿದ್ದನ್ನು ನಾವು ಸಂಭ್ರಮಿಸಲು ಯಾವ ಅಡ್ಡಿ ಕೂಡ ಇಲ್ಲ ಎನ್ನಬಹುದು. ಆತನಿಗೆ ಶುಭವಾಗಲಿ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ವಾಲ್ಮೀಕಿ ರಾಮಾಯಣ vs ಹನುಮಾನ್ ರಾಮಾಯಣ

Continue Reading

ಅಂಕಣ

ರಾಜಮಾರ್ಗ ಅಂಕಣ: ವಾಲ್ಮೀಕಿ ರಾಮಾಯಣ vs ಹನುಮಾನ್ ರಾಮಾಯಣ

ರಾಜಮಾರ್ಗ ಅಂಕಣ: ನಾವು ಮಾಡುವ ಎಲ್ಲಾ ಕೆಲಸಗಳ ಹಿಂದೆ ಒಂದಲ್ಲಾ ಒಂದು ಸ್ವಾರ್ಥ ಇರುತ್ತದೆ. ಕೆಲವರಿಗೆ ದುಡ್ಡಿನ ದಾಹ. ಕೆಲವರಿಗೆ ಕೀರ್ತಿಯ ಮೋಹ. ಇನ್ನೂ ಕೆಲವರಿಗೆ ಅಧಿಕಾರದ ಆಸೆ. ಇನ್ನೂ ಕೆಲವರಿಗೆ ಜನಪ್ರಿಯತೆಯ ಲೋಲುಪತೆ. ಅವುಗಳನ್ನು ಬಿಟ್ಟರೆ ನಾವೂ ಹನುಮಂತನ ಎತ್ತರಕ್ಕೆ ಏರಬಹುದು.

VISTARANEWS.COM


on

Koo

ಈ ಕಥೆಯಲ್ಲಿ ಅದ್ಭುತ ಸಂದೇಶ ಇದೆ

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಈ ಕಥೆಗೆ ಮೂಲ ಯಾವುದು ಎಂದು ಕೇಳಬೇಡಿ. ಆದರೆ ಅದರಲ್ಲಿ ಅದ್ಭುತ ಸಂದೇಶ ಇರುವ ಕಾರಣ ಅದನ್ನು ಇಲ್ಲಿ ಬರೆಯುತ್ತಿದ್ದೇನೆ. ಇದು ಯಾವುದೋ ಒಂದು ವ್ಯಾಟ್ಸಪ್ ಗುಂಪಿನಲ್ಲಿ ಬಂದ ಲೇಖನ ಆಗಿದೆ.

ಹನುಮಂತನೂ ಒಂದು ರಾಮಾಯಣ ಬರೆದಿದ್ದ!

ವಾಲ್ಮೀಕಿ ರಾಮಾಯಣ ಬರೆದು ಮುಗಿಸಿದಾಗ ಅದನ್ನು ಓದಿದ ನಾರದನಿಗೆ ಅದು ಖುಷಿ ಕೊಡಲಿಲ್ಲ. ಆತ ಹೇಳಿದ್ದೇನೆಂದರೆ – ಇದು ಚೆನ್ನಾಗಿದೆ. ಆದರೆ ಹನುಮಂತ ಒಂದು ರಾಮಾಯಣ ಬರೆದಿದ್ದಾನೆ. ಅದಿನ್ನೂ ಚೆನ್ನಾಗಿದೆ!

ಈ ಮಾತು ಕೇಳದೆ ವಾಲ್ಮೀಕಿಗೆ ಸಮಾಧಾನ ಆಗಲಿಲ್ಲ. ಆತನು ತಕ್ಷಣ ನಾರದನನ್ನು ಕರೆದುಕೊಂಡು ಹನುಮಂತನನ್ನು ಹುಡುಕಿಕೊಂಡು ಹೊರಟನು. ಅಲ್ಲಿ ಹನುಮಂತನು ಧ್ಯಾನಮಗ್ನನಾಗಿ ಕುಳಿತು ಏಳು ಅಗಲವಾದ ಬಾಳೆಲೆಯ ಮೇಲೆ ಇಡೀ ರಾಮಾಯಣದ ಕಥೆಯನ್ನು ಚಂದವಾಗಿ ಬರೆದಿದ್ದನು. ಅದನ್ನು ಓದಿ ವಾಲ್ಮೀಕಿ ಜೋರಾಗಿ ಅಳಲು ಆರಂಭ ಮಾಡಿದನು. ಹನುಮಂತ “ಮಹರ್ಷಿ, ಯಾಕೆ ಅಳುತ್ತಿದ್ದೀರಿ? ನನ್ನ ರಾಮಾಯಣ ಚೆನ್ನಾಗಿಲ್ಲವೇ?” ಎಂದನು.

ಅದಕ್ಕೆ ವಾಲ್ಮೀಕಿ “ಹನುಮಾನ್, ನಿನ್ನ ರಾಮಾಯಣ ರಮ್ಯಾದ್ಭುತ ಆಗಿದೆ. ನಿನ್ನ ರಾಮಾಯಣ ಓದಿದ ನಂತರ ನನ್ನ ರಾಮಾಯಣ ಯಾರೂ ಓದುವುದಿಲ್ಲ!’ ಎಂದು ಮತ್ತೆ ಅಳಲು ಆರಂಭ ಮಾಡಿದನು. ಈ ಮಾತನ್ನು ಕೇಳಿದ ಹನುಮಾನ್ ತಾನು ರಾಮಾಯಣ ಬರೆದಿದ್ದ ಬಾಳೆಲೆಗಳನ್ನು ಅರ್ಧ ಕ್ಷಣದಲ್ಲಿ ಹರಿದು ಹಾಕಿದನು! ಅವನು ವಾಲ್ಮೀಕಿಗೆ ಹೇಳಿದ ಮಾತು ‘ಮಹರ್ಷಿ, ನೀವಿನ್ನು ಆತಂಕ ಮಾಡಬೇಡಿ. ಇನ್ನು ನನ್ನ ರಾಮಾಯಣ ಯಾರೂ ಓದುವುದಿಲ್ಲ!’

hanuman

ಹನುಮಾನ್ ಹೇಳಿದ ಜೀವನ ಸಂದೇಶ

‘ವಾಲ್ಮೀಕಿ ಮಹರ್ಷಿ. ನೀವು ರಾಮಾಯಣ ಬರೆದ ಉದ್ದೇಶ ನಿಮ್ಮನ್ನು ಜಗತ್ತು ನೆನಪಿಟ್ಟುಕೊಳ್ಳಬೇಕು ಎಂದು. ನನಗೆ ಆ ರೀತಿಯ ಆಸೆಗಳು ಇಲ್ಲ. ನಾನು ರಾಮಾಯಣ ಬರೆದ ಉದ್ದೇಶ ನನಗೆ ರಾಮ ನೆನಪಿದ್ದರೆ ಸಾಕು ಎಂದು! ರಾಮನ ಹೆಸರು ರಾಮನಿಗಿಂತ ದೊಡ್ಡದು. ರಾಮ ದೇವರು ನನ್ನ ಹೃದಯದಲ್ಲಿ ಸ್ಥಿರವಾಗಿದ್ದಾನೆ. ನನಗೆ ಇನ್ನು ಈ ರಾಮಾಯಣದ ಅಗತ್ಯ ಇಲ್ಲ!’

ಈಗ ವಾಲ್ಮೀಕಿ ಇನ್ನೂ ಜೋರಾಗಿ ಅಳಲು ತೊಡಗಿದನು. ಅವನ ಅಹಂಕಾರದ ಪೊರೆಯು ಕಳಚಿ ಹೋಗಿತ್ತು. ಆತನು ಒಂದಕ್ಷರವೂ ಮಾತಾಡದೆ ಹನುಮಂತನ ಪಾದಸ್ಪರ್ಶ ಮಾಡಿ ಹಿಂದೆ ಹೋದನು.

ಭರತ ವಾಕ್ಯ

ನಾವು ಮಾಡುವ ಎಲ್ಲಾ ಕೆಲಸಗಳ ಹಿಂದೆ ಒಂದಲ್ಲಾ ಒಂದು ಸ್ವಾರ್ಥ ಇರುತ್ತದೆ. ಕೆಲವರಿಗೆ ದುಡ್ಡಿನ ದಾಹ. ಕೆಲವರಿಗೆ ಕೀರ್ತಿಯ ಮೋಹ. ಇನ್ನೂ ಕೆಲವರಿಗೆ ಅಧಿಕಾರದ ಆಸೆ. ಇನ್ನೂ ಕೆಲವರಿಗೆ ಜನಪ್ರಿಯತೆಯ ಲೋಲುಪತೆ. ಅವುಗಳನ್ನು ಬಿಟ್ಟರೆ ನಾವೂ ಹನುಮಂತನ ಎತ್ತರಕ್ಕೆ ಏರಬಹುದು. ಏನಂತೀರಿ?

ಇದನ್ನೂ ಓದಿ: ರಾಜಮಾರ್ಗ ಅಂಕಣ: ದೇಶದ ಯುವಜನತೆಯ ಹೃದಯದ ಬಡಿತ ಅರ್ಜಿತ್ ಸಿಂಗ್, ನಿಮಗೆ ಹ್ಯಾಪಿ ಬರ್ತ್‌ಡೇ!

Continue Reading

ಅಂಕಣ

JEE Main 2024 Result: ದೇಶಕ್ಕೇ ಮೊದಲ ರ‍್ಯಾಂಕ್ ಪಡೆದ ರೈತನ ಮಗ! ಈತನ ಯಶಸ್ಸು ಸ್ಫೂರ್ತಿದಾಯಕ

JEE Main 2024 Result: ರೈತನ ಮಗನಾದ ಗಜರೆ ತಮ್ಮ ಗ್ರಾಮವನ್ನು ಬಿಟ್ಟು ನಾಗಪುರದಲ್ಲಿ ಜೆಇಇಗಾಗಿ ಕೋಚಿಂಗ್‌ ಪಡೆದಿದ್ದರು. ಅವರು ತಮ್ಮ 10ನೇ ತರಗತಿ ಪರೀಕ್ಷೆಗಳಲ್ಲಿ 97% ಅಂಕಗಳನ್ನು ಗಳಿಸಿದರು.

VISTARANEWS.COM


on

Nilkrishna Gajare JEE main 2024 result AIR 1
Koo

ಹೊಸದಿಲ್ಲಿ: ಮಹಾರಾಷ್ಟ್ರದ ವಾಶಿಮ್‌ನ ರೈತರ ಮಗ (farmer’s son) ನೀಲಕೃಷ್ಣ ಗಜರೆ (Nilkrishna Gajare) ಅವರು ಜೆಇಇ ಮೇನ್ 2024 ಪರೀಕ್ಷೆಯಲ್ಲಿ (JEE Main 2024 Result) ದೇಶಕ್ಕೇ ಅಗ್ರಸ್ಥಾನ (AIR 1, First Rank) ಪಡೆದಿದ್ದಾರೆ. ಪರೀಕ್ಷೆಯಲ್ಲಿ ಪರಿಪೂರ್ಣ ಅಂಕಗಳನ್ನು (100) ಗಳಿಸಿದ್ದಾರೆ. ದಕ್ಷೇಶ್ ಸಂಜಯ್ ಮಿಶ್ರಾ ಮತ್ತು ಆರವ್ ಭಟ್ ಕ್ರಮವಾಗಿ AIR 2 ಮತ್ತು 3 ಪಡೆದಿದ್ದಾರೆ. ದೇಶದ ವಿವಿಧ ರಾಜ್ಯಗಳ ಒಟ್ಟು 56 ವಿದ್ಯಾರ್ಥಿಗಳು ಪೂರ್ಣ ಅಂಕ ಗಳಿಸಿದ್ದಾರೆ.

ರೈತನ ಮಗನಾದ ಗಜರೆ ತಮ್ಮ ಗ್ರಾಮವನ್ನು ಬಿಟ್ಟು ನಾಗಪುರದಲ್ಲಿ ಜೆಇಇಗಾಗಿ ಕೋಚಿಂಗ್‌ ಪಡೆದಿದ್ದರು. ಅವರು ತಮ್ಮ 10ನೇ ತರಗತಿ ಪರೀಕ್ಷೆಗಳಲ್ಲಿ 97% ಅಂಕಗಳನ್ನು ಗಳಿಸಿದರು. “ಪರೀಕ್ಷೆಯನ್ನು ತೆಗೆದುಕೊಂಡ ನಂತರ, ನಾನು ಪ್ರಶ್ನೆ ಪತ್ರಿಕೆಯನ್ನು ವಿಶ್ಲೇಷಿಸಿದೆ. ನಾನು ದುರ್ಬಲ ವಿಷಯಗಳ ಮೇಲೆ ವಿಶೇಷ ಗಮನವನ್ನು ನೀಡುತ್ತಿದ್ದೇನೆ. JEEಯಂತಹ ಪರೀಕ್ಷೆಯನ್ನು ಉತ್ತರಿಸಲು ಸ್ಪಷ್ಟ ಪರಿಕಲ್ಪನೆಗಳನ್ನು ಹೊಂದಿರುವುದು ಬಹಳ ಮುಖ್ಯ. ಇದಲ್ಲದೆ ನಾನು ಒಂದಕ್ಕಿಂತ ಹೆಚ್ಚು ಬಾರಿ ಪ್ರಶ್ನೆಗಳನ್ನು ಅಭ್ಯಾಸ ಮಾಡುತ್ತೇನೆ” ಎಂದು ಗಜರೆ ಹೇಳಿದ್ದಾರೆ.

IIT- JEEಗೆ ತಯಾರಾಗಲು ಗಜರೆ 11ನೇ ತರಗತಿಯಲ್ಲಿ ALLEN ವೃತ್ತಿ ಸಂಸ್ಥೆಗೆ ಸೇರಿದರು. ಅವರು ತಮ್ಮ ಪ್ರಯಾಣದ ಅಡೆತಡೆಗಳನ್ನು ಹೇಗೆ ನಿವಾರಿಸಿಕೊಂಡರು ಎಂಬುದನ್ನು ಹಂಚಿಕೊಂಡಿದ್ದಾರೆ.

“ನನ್ನ ಜೆಇಇ ಪ್ರಯಾಣ 11ನೇ ತರಗತಿಯಲ್ಲಿ ಪ್ರಾರಂಭವಾದ ಮೊದಲ ಒಂದು ಅಥವಾ ಎರಡು ತಿಂಗಳುಗಳಲ್ಲಿ ನಾನು ಸ್ವಲ್ಪ ತೊಂದರೆಗಳನ್ನು ಎದುರಿಸಿದೆ. ಅಂದರೆ, 10ನೇ ತರಗತಿಗೆ ಹೋಲಿಸಿದರೆ 11 ಮತ್ತು 12ನೇ ತರಗತಿಗಳ ಪಠ್ಯಕ್ರಮವು ಸಾಕಷ್ಟು ವಿಸ್ತಾರವಾಗಿದೆ. ಆದ್ದರಿಂದ ನಾನು ಆರಂಭದಲ್ಲಿ ಕೆಲವು ತೊಂದರೆಗಳನ್ನು ಎದುರಿಸಿದೆ. ಆದರೆ ನಾನು ಕೈಬಿಡಲಿಲ್ಲ. ನನ್ನ ಅಧ್ಯಯನವನ್ನು ನಿರಂತರವಾಗಿ ಮುಂದುವರಿಸಿದೆ. ನಾನು ವಿದ್ಯಾರ್ಥಿಗಳಿಗೆ ನೀಡಲು ಬಯಸುವ ಸಂದೇಶ ಏನೆಂದರೆ, ನೀವು ಅಂತಹ ತೊಂದರೆಗಳನ್ನು ಎದುರಿಸಿದರೆ ಅಥವಾ ನನ್ನಿಂದ ಸಾಧ್ಯವೇ ಇಲ್ಲ ಎಂದು ಭಾವಿಸಿದರೆ, ಕೈಬಿಡಬೇಡಿ. ನಿಮ್ಮ ಸಿದ್ಧತೆಯನ್ನು ನಿರಂತರವಾಗಿ ಮುಂದುವರಿಸಿ. ಒಳ್ಳೆಯ ಫಲಿತಾಂಶ ದಕ್ಕುತ್ತದೆ” ಎಂದು ಅವರು ಇನ್‌ಸ್ಟಿಟ್ಯೂಟ್‌ನ ಯೂಟ್ಯೂಬ್ ಚಾನೆಲ್‌ನಲ್ಲಿ ಲೈವ್ ವೇಳೆ ಹೇಳಿದರು.

“ಜೆಇಇ ಅಡ್ವಾನ್ಸ್ಡ್‌ನಲ್ಲಿ ಐಐಟಿ ಬಾಂಬೆಯಲ್ಲಿ ಕಂಪ್ಯೂಟರ್ ಸೈನ್ಸ್‌ ಸೀಟು ಪಡೆಯುವುದು ನನ್ನ ಗುರಿ. ಪ್ರಸ್ತುತ ಅದಕ್ಕಾಗಿ ತಯಾರಿ ನಡೆಸುತ್ತಿದ್ದೇನೆ” ಎಂದು ಗಜರೆ ಹೇಳಿದ್ದಾರೆ. ಐಐಟಿ-ಜೆಇಇ ಆಕಾಂಕ್ಷಿಗಳಿಗೆ ಗಜರೆ ಸಲಹೆಯನ್ನೂ ಹಂಚಿಕೊಂಡಿದ್ದಾರೆ. “ನಿಮ್ಮ ಗುರಿಯನ್ನು ಖಚಿತಪಡಿಸಿ. ಅದರ ಪ್ರಕಾರ ನಿಮ್ಮ ಸಿದ್ಧತೆಯನ್ನು ನಿರಂತರವಾಗಿ ಮಾಡಿ. ವಿಷಯಗಳನ್ನು ನಿಜವಾದ ಆಸಕ್ತಿಯಿಂದ ಅಧ್ಯಯನ ಮಾಡಿ. ಇದರಿಂದ ಅವು ಹೊರೆಯಾಗುವುದಿಲ್ಲ. ನಿಮ್ಮ ಸಿದ್ಧತೆಯನ್ನು ಸ್ಥಿರವಾಗಿ ಮತ್ತು ನಿರಂತರವಾಗಿ ಮಾಡಿ.”

56 ಅಭ್ಯರ್ಥಿಗಳಿಗೆ ಶೇ.100 ಅಂಕ

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನಡೆಸಿದ ಜೆಇಇ ಮುಖ್ಯ 2024 ಸೆಷನ್ 2 ಪರೀಕ್ಷಾ ಫಲಿತಾಂಶ (JEE Main 2024 Result session 2) ಪ್ರಕಟವಾಗಿದೆ. ಒಟ್ಟು 56 ಅಭ್ಯರ್ಥಿಗಳು (Students) ಶೇ.100 ಅಂಕಗಳನ್ನು ಗಳಿಸಿದ್ದು, ಕಳೆದ ಬಾರಿಗಿಂತ 13 ಹೆಚ್ಚು ವಿದ್ಯಾರ್ಥಿಗಳು ಇದನ್ನು ಪಡೆದಿದ್ದಾರೆ. ಕರ್ನಾಟಕದ ಇಬ್ಬರು ವಿದ್ಯಾರ್ಥಿಗಳು ಶೇ.100 ಅಂಕ ಪಡೆದಿದ್ದಾರೆ. ಕಟ್‌ಆಫ್‌ (Cut off marks) ಅಂಕಗಳನ್ನು ಕೂಡ 2.45%ರಷ್ಟು ಹೆಚ್ಚಿಸಲಾಗಿದೆ.

ಸಂಸ್ಥೆಯು ಇಂದು ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಮುಖ್ಯ 2024 ಫಲಿತಾಂಶವನ್ನು ಬಿಡುಗಡೆ ಮಾಡಿದೆ. 2024ರ ಪರೀಕ್ಷೆಗಳಲ್ಲಿ ಒಟ್ಟು 9.24 ಲಕ್ಷ ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದರು. ಅದರಲ್ಲಿ 8.2 ಲಕ್ಷ ಜನರು ಜನವರಿ ಮತ್ತು ಏಪ್ರಿಲ್‌ನಲ್ಲಿ ನಡೆದ JEE ಮುಖ್ಯ 2023 ಪರೀಕ್ಷೆಗಳಿಗೆ ಹಾಜರಾಗಿದ್ದರು. ಜೆಇಇ ಮುಖ್ಯ ಏಪ್ರಿಲ್ ಸೆಷನ್‌ಗೆ ಹಾಜರಾದವರು ತಮ್ಮ ಅಂಕಗಳನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪರಿಶೀಲಿಸಬಹುದು: jeemain.nta.ac.in.

ಇದನ್ನೂ ಓದಿ: JEE Main 2024 Result: ಜೆಇಇ ಮೇನ್‌ ಫಲಿತಾಂಶ ಪ್ರಕಟ, 56 ಅಭ್ಯರ್ಥಿಗಳಿಗೆ ಶೇ.100 ಅಂಕ, ಕಟ್‌ಆಫ್‌ 2.45% ಹೆಚ್ಚಳ

Continue Reading
Advertisement
Hassan Pen Drive Case will tell Rakesh Siddaramaiah died history says HD Kumaraswamy
ಕ್ರೈಂ50 seconds ago

Hassan Pen Drive Case: ರಾಕೇಶ್‌ ಸಿದ್ದರಾಮಯ್ಯ ಸಾವಿನ ವೇಳೆ ಏನಾಗಿತ್ತು ಎಂದೂ ಹೇಳುತ್ತೇನೆ: ಎಚ್‌.ಡಿ. ಕುಮಾರಸ್ವಾಮಿ

IPL 2024
ಕ್ರೀಡೆ12 mins ago

IPL 2024: ಐಪಿಎಲ್​ನಲ್ಲಿ ವಿಶೇಷ ದಾಖಲೆ ಬರೆದ ಕುಲ್​ದೀಪ್, ನರೈನ್

ಸಿನಿಮಾ15 mins ago

Rakhi Sawant: ವೈಮನಸ್ಸು ಬಿಟ್ಟು ಮಾಜಿ ಪತಿ ಜೊತೆ ಒಂದಾದ್ರಾ ರಾಖಿ ಸಾವಂತ್‌?

Hassan Pen Drive Case Sexual assault case Prajwal Revanna suspended from JDS
ಕ್ರೈಂ17 mins ago

Hassan Pen Drive Case: ಲೈಂಗಿಕ ದೌರ್ಜನ್ಯ ಕೇಸ್;‌ ಪ್ರಜ್ವಲ್‌ ರೇವಣ್ಣ ಜೆಡಿಎಸ್‌ನಿಂದ ಅಮಾನತು

Khalistani Separatist Gurpatwant Singh Pannun
ಪ್ರಮುಖ ಸುದ್ದಿ25 mins ago

Gurpatwant Singh Pannun: ಪನ್ನುನ್‌ ಹತ್ಯೆ ಸಂಚಿನಲ್ಲಿ ʼರಾʼ ಕೈವಾಡ: ವಾಷಿಂಗ್ಟನ್‌ ವರದಿಗೆ ಭಾರತ ಕಟು ಟೀಕೆ

Ayushman Bharat Diwas 2024
ಆರೋಗ್ಯ35 mins ago

Ayushman Bharat Diwas 2024: 50 ಕೋಟಿಗೂ ಹೆಚ್ಚು ಜನರಿಗೆ ಉಚಿತ ಆರೋಗ್ಯ ಸೇವೆ ನೀಡುತ್ತಿರುವ ಅಯುಷ್ಮಾನ್ ಭಾರತ್

Hassan Pen Drive Case Revanna and Siddaramaiah pact in Prajwal case Says Pralhad Joshi
ಕ್ರೈಂ58 mins ago

Hassan Pen Drive Case: ಪ್ರಜ್ವಲ್ ಪ್ರಕರಣದಲ್ಲಿ ರೇವಣ್ಣ-ಸಿದ್ದರಾಮಯ್ಯ ಒಪ್ಪಂದ; ಪ್ರಲ್ಹಾದ್ ಜೋಶಿ ಹೇಳಿದ್ದೇನು?

amith shah
ಪ್ರಮುಖ ಸುದ್ದಿ1 hour ago

Hassan pen drive case: “ಇದನ್ನು ಸಹಿಸಲು ಸಾಧ್ಯವಿಲ್ಲ…” ಪ್ರಜ್ವಲ್‌ ರೇವಣ್ಣ ಪ್ರಕರಣದ ಬಗ್ಗೆ ಗೃಹ ಸಚಿವ ಅಮಿತ್‌ ಶಾ ಖಡಕ್‌ ಎಚ್ಚರಿಕೆ

JNU Campus
ದೇಶ1 hour ago

Physical abuse: JNU ಉಪನ್ಯಾಸಕನಿಂದ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ಭುಗಿಲೆದ್ದ ಆಕ್ರೋಶ

LSG vs MI
ಕ್ರೀಡೆ2 hours ago

LSG vs MI: ಫಿಟ್​ ಆದ ಶರವೇಗದ ಎಸೆತಗಾರ ಮಾಯಾಂಕ್‌ ಯಾದವ್‌; ಮುಂಬೈ ವಿರುದ್ಧ ಕಣಕ್ಕೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ8 hours ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 202424 hours ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20241 day ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20242 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20242 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20242 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20242 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest2 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌