Viral Video | ಕಾಮ್‌ ಡೌನ್‌ ಹಾಡಿಗೆ ಹೆಜ್ಜೆ ಹಾಕಿದ ಆಫ್ರಿಕಾದ ಮಕ್ಕಳು; ವೈರಲ್‌ ಆಯ್ತು ವಿಡಿಯೊ - Vistara News

ವೈರಲ್ ನ್ಯೂಸ್

Viral Video | ಕಾಮ್‌ ಡೌನ್‌ ಹಾಡಿಗೆ ಹೆಜ್ಜೆ ಹಾಕಿದ ಆಫ್ರಿಕಾದ ಮಕ್ಕಳು; ವೈರಲ್‌ ಆಯ್ತು ವಿಡಿಯೊ

ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡಿಂಗ್‌ನಲ್ಲಿರುವ ʼಕಾಮ್‌ ಡೌನ್‌ʼ ಹಾಡಿಗೆ ಆಫ್ರಿಕಾದ ಮಕ್ಕಳು ಹೆಜ್ಜೆ ಹಾಕಿದ್ದಾರೆ. ಆ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ವೈರಲ್‌ (Viral Video) ಆಗಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ʼಕಾಮ್‌ ಡೌನ್‌ʼ ಹೆಸರಿನ ಇಂಗ್ಲಿಷ್‌ ಹಾಡೊಂದು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದೆ. ಇನ್‌ಸ್ಟಾಗ್ರಾಂ ರೀಲ್ಸ್‌ಗಳಲ್ಲಂತೂ ಎಲ್ಲರೂ ಈ ಹಾಡಿಗೆ ನೃತ್ಯ ಮಾಡುವವರೇ ಆಗಿದ್ದಾರೆ. ನೈಜೀರಿಯಾ ಮೂಲದ ಗಾಯಕ ರೆಮಾ ಮತ್ತು ಅಮೆರಿಕದ ಗಾಯಕಿ ಸಲೆನಾ ಗೊಮೆಜ್‌ ಹಾಡಿರುವ ಈ ಹಾಡಿಗೆ ಇದೀಗ ಆಫ್ರಿಕಾದ ಮಕ್ಕಳೂ ಹೆಜ್ಜೆ ಹಾಕಿದ್ದು, ಅದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ (Viral Video) ಆಗಿದೆ.

ಇದನ್ನೂ ಓದಿ: Viral Pic | ಸ್ವಿಗ್ಗಿ ಬ್ಯಾಗ್‌ ಹೆಗಲಿಗೇರಿಸಿ ಬುರ್ಖಾ ಧರಿಸಿದ ಮಹಿಳೆಯೀಗ ಇಂಟರ್ನೆಟ್‌ ಸೆನ್ಸೇಶನ್!

ಮೂರು ಮಕ್ಕಳು ರಸ್ತೆಯ ಮೇಲೆ ನಿಂತು ಅದ್ಭುತವಾಗಿ ʼಕಾಮ್‌ ಡೌನ್‌ʼ ಹಾಡಿಗೆ ನೃತ್ಯ ಮಾಡಿದ್ದಾರೆ. ಅವರಿಗಿಂತ ಸ್ವಲ್ಪ ಹಿಂದೆ ಎತ್ತರದ ಸ್ಥಳದಲ್ಲಿ ನಿಂತ ಹಲವು ಪುಟಾಣಿಗಳೂ ಕೂಡ ಈ ಹಾಡಿಗೆ ಹೆಜ್ಜೆ ಹಾಕುತ್ತಿರುವುದನ್ನು ವಿಡಿಯೊದಲ್ಲಿ ಕಾಣಬಹುದು. ಮುಂದೆ ನಿಂತಿರುವ ಮಕ್ಕಳ ಮುಖಭಾವನೆಯು ನೆಟ್ಟಿಗರ ಮನಸ್ಸನ್ನು ಗೆದ್ದಿದೆ.


ಈ ವಿಡಿಯೊವನ್ನು ಮಸಾಕಾ ಕಿಡ್ಸ್‌ ಆಫ್ರಿಕಾನಾ ಹೆಸರಿನ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ವಿಡಿಯೋ ಹಂಚಿಕೊಂಡ ಕೆಲವೇ ದಿನಗಳಲ್ಲಿ ಲಕ್ಷಾಂತರ ಜನರು ವಿಡಿಯೊ ವೀಕ್ಷಿಸಿದ್ದಾರೆ. ವಿಡಿಯೊಗೆ ಲೈಕ್‌ ಒತ್ತಲಾರಂಭಿಸಿದ್ದಾರೆ. “ಈ ವಿಡಿಯೊದಲ್ಲಿರುವ ಒಂದೇ ಒಂದು ಸಮಸ್ಯೆ ಎಂದರೆ ಅದು ಈ ವಿಡಿಯೊ ಕೊನೆಯಾಗಿಬಿಡುವುದು”, “ಮುಂದಿರುವ ಪುಟಾಣಿಗಳ ಜತೆ ಹಿಂದಿರುವ ಪುಟಾಣಿಗಳೂ ಅದ್ಭುತವಾಗಿ ನೃತ್ಯ ಮಾಡಿದ್ದಾರೆ” ಎನ್ನುವ ಹಲವಾರು ಕಾಮೆಂಟ್‌ಗಳು ಈ ವಿಡಿಯೊಗೆ ಬಂದಿವೆ.

ಇದನ್ನೂ ಓದಿ: Viral tweet | ʼಭೂಮಿ ಮೇಲಿನ ಸ್ವರ್ಗʼ ಎಂದು ಫೋಟೋ ಶೇರ್ ಮಾಡಿದ ರೈಲ್ವೇ ಸಚಿವ, ಎಲ್ಲಿಯದು?

ಮಸಾಕಾ ಕಿಡ್ಸ್‌ ಆಫ್ರಿಕಾನಾ ಹೆಸರಿನ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಈ ಮಕ್ಕಳ ಇನ್ನಷ್ಟು ನೃತ್ಯಗಳನ್ನು ನೀವು ನೋಡಬಹುದಾಗಿದೆ. ಈ ಖಾತೆಗೆ 60 ಲಕ್ಷಕ್ಕೂ ಅಧಿಕ ಹಿಂಬಾಲಕರೂ ಇದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Viral Video: ಮಕ್ಕಳನ್ನು ಬೆಲ್ಟ್‌ನಿಂದ ಕ್ರೂರವಾಗಿ ಥಳಿಸಿದ ತಾಯಿ; ವಿಡಿಯೊ ನೋಡಿ ಜನಾಕ್ರೋಶ

Viral Video: ಮಕ್ಕಳು ತಪ್ಪು ಮಾಡಿದಾಗ ಮುಂದೆ ಆ ತಪ್ಪು ಮರುಕಳಿಸಬಾರದು ಎಂದು ಪೋಷಕರು ಒಂದೇಟು ಹೊಡೆಯುವುದು ಸಾಮಾನ್ಯ. ನಾವು ಹಡೆದಿದ್ದೇವೆ, ಸಾಕಿದ್ದೇವೆ ಎಂದು ಮಕ್ಕಳನ್ನು ಹೀನಾಯಮಾನವಾಗಿ ದಂಡಿಸುವುದು ಕೂಡ ಅಪರಾಧ. ಶಿಕ್ಷಿಸುವ ಹಕ್ಕಿದೆ ಎಂದು ಮಗುವಿನ ಮೇಲೆ ದರ್ಪ ತೋರಿಸಿದರೆ ಅವರ ಎಳೆ ಮನಸ್ಸಿನ ಮೇಲೆ ಬರೆ ಎಳೆದ ಹಾಗೇ ಆಗುತ್ತೆ. ಇಲ್ಲೊಬ್ಬ ಮಹಿಳೆ ಮಕ್ಕಳು ಬೇಡಿಕೊಳ್ಳುತ್ತಿದ್ದರೂ, ಮನುಷ್ಯತ್ವವೇ ಇಲ್ಲದ ಹಾಗೇ ಬೆಲ್ಟ್‌ನಿಂದ ಥಳಿಸಿದ್ದಾಳೆ.ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಜನಾಕ್ರೋಶಕ್ಕೆ ಕಾರಣವಾಗಿದೆ.

VISTARANEWS.COM


on

Viral Video
Koo

ಮುಂಬೈ: ಪೋಷಕರಿಗೆ ತಮ್ಮ ಮಕ್ಕಳನ್ನು ಸರಿದಾರಿಗೆ ನಡೆಸುವ ಜವಾಬ್ದಾರಿ ಇರುತ್ತದೆ. ಯಾಕೆಂದರೆ ಮಕ್ಕಳು ಮುಂದೆ ಏನೇ ತಪ್ಪು ಮಾಡಿದರೂ ಅದಕ್ಕೆ ತಂದೆ ತಾಯಿಯೇ ಹೊಣೆಗಾರರಾಗುತ್ತಾರೆ. ಹಾಗಾಗಿ ಅವರು ಮಕ್ಕಳನ್ನು ಪ್ರೀತಿಸುವ ಜೊತೆಗೆ ಅವರಿಗೆ ಶಿಕ್ಷೆ ನೀಡುವ ಹಕ್ಕನ್ನು ಹೊಂದಿರುತ್ತಾರೆ. ಅಂದ ಮಾತ್ರಕ್ಕೆ ಪೋಷಕರು ಮಕ್ಕಳಿಗೆ ಸಾಯುವ ರೀತಿ ಶಿಕ್ಷೆ ವಿಧಿಸಬಾರದು. ಇದನ್ನು ಕಾನೂನಿನಲ್ಲಿ ಸರಿ ಎಂದು ಹೇಳುವುದಿಲ್ಲ. ಆದರೆ ಇಲ್ಲೊಬ್ಬ ಮಹಿಳೆ ತನ್ನ ಮಕ್ಕಳಿಗೆ ಬೆಲ್ಟ್‌ನಿಂದ ಕ್ರೂರವಾಗಿ ಹೊಡೆದು ಶಿಕ್ಷಿಸುತ್ತಿರುವುದು ಕಂಡುಬಂದಿದೆ. ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್(Viral Video) ಆಗಿದೆ.

ಗೋರೆಗಾಂವ್ (ಪೂರ್ವ) ನ ನಿರ್ಲಾನ್ ಪಾರ್ಸಿ ಪಂಚಾಯತ್ ಕಾಂಪ್ಲೆಕ್ಸ್‌ನ ಕಾಲೋನಿಯಲ್ಲಿ ಮಹಿಳೆಯೊಬ್ಬಳು ಮಕ್ಕಳನ್ನು ಬೆಲ್ಟ್‌ನಿಂದ ಹೊಡೆಯುತ್ತಿರುವ  ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದನ್ನು ನೋಡಿದ ಬಾಂಬೆ ಹೈಕೋರ್ಟ್‌ ಮಾಜಿ ನ್ಯಾಯಾಧೀಶ ಶಾರುಖ್ ಕಥಾವಾಲಾ ತಾಯಿಯ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಮುಂಬೈ ಪೊಲೀಸರು, ರಾಜ್ಯ ಮಾನವ ಹಕ್ಕುಗಳ ಆಯೋಗ ಮತ್ತು ರಾಜ್ಯ ಮಕ್ಕಳ ಹಕ್ಕುಗಳ ಆಯೋಗವನ್ನು ಒತ್ತಾಯಿಸಿದ್ದಾರೆ.

ವಿಡಿಯೊದಲ್ಲಿ ಮಹಿಳೆ ಮಕ್ಕಳನ್ನು ಬೆಲ್ಟ್‌ನಿಂದ ಹೊಡೆಯುವುದು ಮತ್ತು ಹೆದರಿಸುವುದು ಕಂಡುಬರುತ್ತದೆ. ಮಕ್ಕಳು ಭಯಭೀತರಾಗಿದ್ದು, ತಮ್ಮನ್ನು ಬಿಡುವಂತೆ ಬೇಡಿಕೊಳ್ಳುವುದನ್ನು ಕಾಣಬಹುದು. ಆದರೂ, ತಾಯಿ ಅಸಹಾಯಕ ಮಕ್ಕಳನ್ನು ಬೆಲ್ಟ್‌ನಿಂದ ಹೊಡೆಯುತ್ತಿರುವುದು ಕಾಣಿಸುತ್ತದೆ. ಆದರೆ ಈ ವಿಡಿಯೊ ಆಕೆಯ ಪತಿ ಮಾಡಿರುವುದಾಗಿ ತಿಳಿದುಬಂದಿದೆ. ಆದರೆ ಪತಿ ತನ್ನ ಮಕ್ಕಳನ್ನು ರಕ್ಷಿಸಲು ಯಾಕೆ ಮುಂದೆ ಬಂದಿಲ್ಲ ಎಂಬ ಪ್ರಶ್ನೆ ಹಲವರಲ್ಲಿ ಮೂಡಿದೆ.

ಇದನ್ನೂ ಓದಿ:  ಬಸ್‌ ಬ್ರೇಕ್ ಫೇಲ್; ಜೀವ ಉಳಿಸಿಕೊಳ್ಳಲು ಬಸ್‌ನಿಂದ ಜಿಗಿದ ಅಮರನಾಥ ಯಾತ್ರಿಕರು! ವಿಡಿಯೊ ಇದೆ

ಈ ವೀಡಿಯೊ ವೈರಲ್ ಆದ ನಂತರ ಆಕ್ರೋಶಕ್ಕೆ ಕಾರಣವಾಗಿದೆ. ಮಕ್ಕಳನ್ನು ಬೆಲ್ಟ್‌ನಿಂದ ಹೊಡೆಯುತ್ತಿರುವ ಮಹಿಳೆಯ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ನೆಟ್ಟಿಗರು ಒತ್ತಾಯಿಸಿದ್ದಾರೆ. ಅಲ್ಲದೇ ಮಾಜಿ ನ್ಯಾಯಾಧೀಶರು ವಿಡಿಯೊಗಳ ಬಗ್ಗೆ ತಮ್ಮ ಕಳವಳವನ್ನು ವ್ಯಕ್ತಪಡಿಸಿದ್ದಾರೆ ಮತ್ತು ಮಕ್ಕಳನ್ನು ರಕ್ಷಿಸುವ ಅಗತ್ಯವಿದೆ ಹಾಗಾಗಿ ಪೊಲೀಸರು ಮತ್ತು ಮಕ್ಕಳ ಹಕ್ಕು ಆಯೋಗ ಮಧ್ಯಪ್ರವೇಶ ಮಾಡುವಂತೆ ಕೋರಿದ್ದಾರೆ. ಈ ಹಿನ್ನಲೆಯಲ್ಲಿ ಪೊಲೀಸ್ ಆಯುಕ್ತ ವಿವೇಕ್ ಫನ್ಸಾಲ್ಕರ್ ಅವರು ಸಂಬಂಧಪಟ್ಟ ಡಿಸಿಪಿಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಪೊಲೀಸರು ಕುಟುಂಬಕ್ಕೂ ಭೇಟಿ ನೀಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

Continue Reading

ವೈರಲ್ ನ್ಯೂಸ್

Viral News: ʼತುರ್ತಾಗಿ ಒಂದು ಅಪಘಾತ ಮಾಡಿʼ ಅನ್ನುತ್ತಿದೆ ಈ ಸೈನ್‌ಬೋರ್ಡ್‌!

Viral News: ʼಕೊಡಗು ಕನೆಕ್ಟ್’ ಎಂಬ ಹೆಸರಿನ ಬಳಕೆದಾರರು ಸಾಮಾಜಿಕ ಮಾಧ್ಯಮದಲ್ಲಿ ಸೈನ್‌ಬೋರ್ಡ್‌ನ ಚಿತ್ರವನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ “ಅವಸರವೇ ಅಪಘಾತಕ್ಕೆ ಕಾರಣ” ಹಾಗೂ “Urgent Make An Accident” ಎಂದು ಬರೆಯಲಾಗಿದೆ. ಈ ಇಂಗ್ಲಿಷ್‌ ವಾಕ್ಯದ ಕನ್ನಡ ಅರ್ಥ ʼತುರ್ತಾಗಿ ಒಂದು ಅಪಘಾತ ಮಾಡಿʼ ಎಂದಾಗುತ್ತದೆ!

VISTARANEWS.COM


on

viral news signboard
Koo

ಬೆಂಗಳೂರು: ಕರ್ನಾಟಕದ ಕೊಡಗಿನ (Coorg) ಬಳಿಯ ಹೆದ್ದಾರಿಯಲ್ಲಿ ಅಳವಡಿಸಲಾಗಿರುವ ತುರ್ತು ಸೂಚನಾ ಫಲಕವೊಂದು (Sign Board) ಇದೀಗ ಅಂತರ್ಜಾಲವನ್ನು (Internet) ನಗೆಗಡಲಿನಲ್ಲಿ (Viral News) ತೇಲಿಸುತ್ತಿದೆ. ಕನ್ನಡದಿಂದ ಇಂಗ್ಲಿಷ್‌ಗೆ ತಪ್ಪಾಗಿ ಅನುವಾದ (Translation) ಮಾಡಿರುವುದರಿಂದ ಉಂಟಾದ ಅವಾಂತರವಿದು. ಮಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿ (Mangalore Mysore National Highway) ಹಾದುಹೋಗುವ ಸಂಪಾಜೆಯಲ್ಲಿ (Sampaje) ಈ ಫಲಕವಿದೆ.

ʼಕೊಡಗು ಕನೆಕ್ಟ್’ ಎಂಬ ಹೆಸರಿನ ಬಳಕೆದಾರರು ಸಾಮಾಜಿಕ ಮಾಧ್ಯಮದಲ್ಲಿ ಸೈನ್‌ಬೋರ್ಡ್‌ನ ಚಿತ್ರವನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ “ಅವಸರವೇ ಅಪಘಾತಕ್ಕೆ ಕಾರಣ” ಹಾಗೂ “Urgent Make An Accident” ಎಂದು ಬರೆಯಲಾಗಿದೆ. ಈ ಇಂಗ್ಲಿಷ್‌ ವಾಕ್ಯದ ಕನ್ನಡ ಅರ್ಥ ʼತುರ್ತಾಗಿ ಒಂದು ಅಪಘಾತ ಮಾಡಿʼ ಎಂದಾಗುತ್ತದೆ! ಈ ಸೂಚನಾ ಫಲಕವನ್ನು ವಾಹನ ಚಾಲಕರು ಅಕ್ಷರಶಃ ಪಾಲಿಸಲು ಹೋದರೆ ಅನರ್ಥವೇ ಆಗುತ್ತದೆ!

ಕಳಪೆ ಇಂಗ್ಲಿಷ್‌ನಲ್ಲಿ ಅನುವಾದ ಮಾಡಲಾಗಿರುವ ಈ ಫಲಕದಲ್ಲಿ ಇಂಗ್ಲಿಷ್‌ ವಾಕ್ಯ ʼOverspeeding Causes accidents’ ಎಂದು ಇರಬೇಕಾಗಿತ್ತು. ಇಂಟರ್ನೆಟ್ ಬಳಕೆದಾರರು ಇದರ ಬಗ್ಗೆ ಹಾಸ್ಯಮಯ ಕಾಮೆಂಟ್‌ಗಳನ್ನು ಹಂಚಿಕೊಂಡಿದ್ದಾರೆ. ಸೈನ್‌ಬೋರ್ಡ್‌ಗಳನ್ನು ಇಂಗ್ಲಿಷ್‌ಗೆ ಭಾಷಾಂತರಿಸುವ ಸರ್ಕಾರದ ಪ್ರಯತ್ನವನ್ನು ಕೆಲವರು ಪ್ರಶ್ನಿಸಿದ್ದಾರೆ. ಇತರರು ಈ ದೋಷವನ್ನು ತಮಾಷೆಯಾಗಿ, ಸ್ವಾರಸ್ಯಕರವಾಗಿ ತೆಗೆದುಕೊಂಡಿದ್ದಾರೆ.

“ಇದಕ್ಕೂ ಸಹ ಅನುವಾದಕರು ಚಾಟ್‌ಜಿಪಿಟಿ ಬಳಸಿದ್ದಾರೆ” ಎಂದು ಒಬ್ಬ ಬಳಕೆದಾರರು ತಮಾಷೆ ಮಾಡಿದ್ದಾರೆ. “ಕನ್ನಡವು ಇಂಗ್ಲಿಷ್ ಅಲ್ಲ” ಎಂದು ಮತ್ತೊಬ್ಬರು ಟೀಕಿಸಿದ್ದಾರೆ. “urgent ನಂತರ ಒಂದು ಅಲ್ಪವಿರಾಮ ಹಾಕಿದರೆ ಅರ್ಥ ಸಂಪೂರ್ಣವಾಗಿ ಬದಲಾಗುತ್ತದೆ” ಎಂದು ಬೇರೊಬ್ಬರು ಬಳಕೆದಾರರು ಬರೆದಿದ್ದಾರೆ. ಮತ್ತೊಬ್ಬ ಬಳಕೆದಾರರು, “ಇನ್ಶುರೆನ್ಸ್ ಏಜೆಂಟ್ಸ್ ಅನ್ನು ಟ್ಯಾಗ್ ಮಾಡಿ. ಅವರು ಇದನ್ನು ವೇಗವಾಗಿ ಸರಿಪಡಿಸುತ್ತಾರೆ” ಎಂದು ತಮಾಷೆ ಮಾಡಿದ್ದಾರೆ.

ಮಾರ್ಚ್‌ನಲ್ಲಿ, ಕೊಡಗು ಜಿಲ್ಲೆಯ ಒಂದು ಕಡೆಯ ಸ್ಥಳೀಯರು ಗೂಗಲ್‌ನ ನ್ಯಾವಿಗೇಷನ್ ತಪ್ಪಿನ ಬಗ್ಗೆ ಪ್ರಯಾಣಿಕರಿಗೆ ಎಚ್ಚರಿಕೆ ನೀಡುವ ತಾತ್ಕಾಲಿಕ ಸೈನ್‌ಬೋರ್ಡ್ ಅನ್ನು ಹಾಕಿದ್ದರು. ʼಗೂಗಲ್ ತಪ್ಪು ಮಾಡಿದೆ. ಈ ರಸ್ತೆ ಕ್ಲಬ್ ಮಹೀಂದ್ರಾ ರೆಸಾರ್ಟ್‌ಗೆ ಹೋಗುವುದಿಲ್ಲ’ ಎಂದು ಫಲಕದಲ್ಲಿತ್ತು. ಗೂಗಲ್‌ ಮ್ಯಾಪ್‌ನಿಂದಾಗಿ ದಾರಿ ತಪ್ಪಿದ ಪ್ರಯಾಣಿಕರು ಸದಾ ದಾರಿ ಕೇಳುವುದರಿಂದ ಬೇಸತ್ತ ಸ್ಥಳೀಯ ಗ್ರಾಮಸ್ಥರು ಆ ಸೈನ್‌ಬೋರ್ಡ್ ಅನ್ನು ಹಾಕಿದ್ದರು.

ಇದನ್ನೂ ಓದಿ: Viral News: ನೀವೂ ಕೂಡ ನಿಮ್ಮ ಹೆಂಡತಿಯನ್ನು ಇವರಂತೆ ಪ್ರೀತಿಸಬಲ್ಲಿರಾ? ಈ ಫೋಟೊ, ವಿಡಿಯೊ ನೋಡಿ ಹೇಳಿ!

Continue Reading

Latest

Amarnath Tragedy: ಬಸ್‌ ಬ್ರೇಕ್ ಫೇಲ್; ಜೀವ ಉಳಿಸಿಕೊಳ್ಳಲು ಬಸ್‌ನಿಂದ ಜಿಗಿದ ಅಮರನಾಥ ಯಾತ್ರಿಕರು! ವಿಡಿಯೊ ಇದೆ

Amarnath Tragedy: ಅಮರನಾಥ ಯಾತ್ರೆಗೆ ತೆರಳಿದವರಿಗೆ ದುರಂತವೊಂದು ಎದುರಾಗಿದೆ. ಅಮರನಾಥ ಯಾತ್ರೆಯಿಂದ ಹಿಂದಿರುಗುತ್ತಿದ್ದ ಕೆಲವು ಯಾತ್ರಾರ್ಥಿಗಳು ಜಮ್ಮು ಮತ್ತು ಕಾಶ್ಮೀರದ ರಂಬನ್ ಜಿಲ್ಲೆಯಲ್ಲಿ ಚಲಿಸುತ್ತಿರುವ ಬಸ್ಸಿನಿಂದ ಜಿಗಿದು ಗಾಯಗೊಂಡಿದ್ದಾರೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಬಸ್‌ ಬ್ರೇಕ್ ಫೇಲ್ ಆದ ಕಾರಣ ಬನಿಹಾಲ್ ಬಳಿಯ ನಾಚ್ಲಾನಾ ಬಳಿ ಚಾಲಕನಿಗೆ ಬಸ್ ಅನ್ನು ನಿಯಂತ್ರಿಸಲು ಆಗಲಿಲ್ಲ. ಇದರಿಂದ ಬಸ್‌ನಲ್ಲಿದ್ದ ಪ್ರಯಾಣಿಕರು ಭಯಗೊಂಡು ತಮ್ಮ ಜೀವ ಉಳಿಸಿಕೊಳ್ಳಲು ಬಸ್ಸಿನಿಂದ ಜಿಗಿದು ಗಾಯಗೊಂಡಿದ್ದಾರೆ.

VISTARANEWS.COM


on

Amarnath Tragedy
Koo

ಶ್ರೀನಗರ : ಪ್ರತಿವರ್ಷ ಅಮರನಾಥ ಯಾತ್ರೆಗೆ (Amarnath Tragedy) ಹಲವಾರು ಮಂದಿ ಯಾತ್ರಾರ್ಥಿಗಳು ಪ್ರಯಾಣ ಮಾಡುತ್ತಿರುತ್ತಾರೆ. ಆದರೆ ಇತ್ತೀಚೆಗೆ ಅಮರನಾಥ ಯಾತ್ರೆಗೆ ತೆರಳಿದವರಿಗೆ ದುರಂತವೊಂದು ಎದುರಾಗಿದೆ. ಅಮರನಾಥ ಯಾತ್ರೆಯಿಂದ ಹಿಂದಿರುಗುತ್ತಿದ್ದ ಕೆಲವು ಯಾತ್ರಾರ್ಥಿಗಳು ಜಮ್ಮು ಮತ್ತು ಕಾಶ್ಮೀರದ ರಂಬನ್ ಜಿಲ್ಲೆಯಲ್ಲಿ ಚಲಿಸುತ್ತಿರುವ ಬಸ್ಸಿನಿಂದ ಜಿಗಿದು ಗಾಯಗೊಂಡಿದ್ದಾರೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅನೇಕರು ವಿಡಿಯೊ ನೋಡಿ ಶಾಕ್ ಆಗಿದ್ದಾರೆ.

ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು, ಪಂಜಾಬ್‌ನ ಹೋಶಿಯಾರ್ಪುರಕ್ಕೆ ತೆರಳುತ್ತಿದ್ದ ಬಸ್‌ನಲ್ಲಿ ಹದಿನೇಳು ಮಂದಿ ಮಹಿಳೆಯರು ಮತ್ತು ಒಂದು ಮಗು ಸೇರಿದಂತೆ ಒಟ್ಟು 45 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಆದರೆ ರಸ್ತೆ ಮಧ್ಯದಲ್ಲಿ ಬಸ್‌ನ ಬ್ರೇಕ್ ಫೇಲ್ ಆಗಿದೆ. ಇದರ ಪರಿಣಾಮ ಬನಿಹಾಲ್ ಬಳಿಯ ನಾಚ್ಲಾನಾ ಬಳಿ ಚಾಲಕನಿಗೆ ಬಸ್ ಅನ್ನು ನಿಯಂತ್ರಿಸಲು ಆಗಲಿಲ್ಲ. ಇದರಿಂದ ಬಸ್‌ನಲ್ಲಿದ್ದ ಪ್ರಯಾಣಿಕರು ಭಯಗೊಂಡು ತಮ್ಮ ಜೀವ ಉಳಿಸಿಕೊಳ್ಳಲು ಮೂವರು ಮಹಿಳೆಯರು ಮತ್ತು ಒಂದು ಮಗು ಸೇರಿದಂತೆ ಹಲವಾರು ಪ್ರಯಾಣಿಕರು ಬಸ್ಸಿನಿಂದ ಜಿಗಿದ ಗಾಯಗೊಂಡಿದ್ದಾರೆ.

ವಿಡಿಯೊದಲ್ಲೊ ರಸ್ತೆಯಲ್ಲಿ ಚಲಿಸುತ್ತಿದ್ದ ಬಸ್‌ನಿಂದ ಪ್ರಯಾಣಿಕರು ಒಬ್ಬರಾಗಿಯೇ ಜಿಗಿದು ಕೆಳಗೆ ಬೀಳುತ್ತಿದ್ದಾರೆ. ಹಾಗೇ ಬಿದ್ದ ಪ್ರಯಾಣಿಕರಲ್ಲಿ ಕೆಲವರು ತಮ್ಮವರನ್ನು ಕಾಪಾಡಲು ಬಸ್ಸಿನ ಹಿಂದೆ ಓಡುತ್ತಿರುವುದು ಕಂಡುಬಂದಿದೆ. ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನಲೆಯಲ್ಲಿ ಪೊಲೀಸರು ಸೇನೆಯ ಜೊತೆಗೆ ಬಸ್ ಇದ್ದ ಕಡೆ ಬಂದು ತ್ವರಿತ ಕ್ರಮ ತೆಗೆದುಕೊಂಡಿದ್ದಾರೆ. ಸೈನಿಕರು ಬಸ್ ಅನ್ನು ನಿಲ್ಲಿಸಲು ಮತ್ತು ಹತ್ತಿರದ ಹೊಳೆಗೆ ಹೋಗದಂತೆ ತಡೆಯಲು ಕಲ್ಲುಗಳನ್ನು ಬಸ್‌ ನ ಚಕ್ರದ ಕೆಳಗೆ ಇಟ್ಟಿದ್ದಾರೆ. ಇದರಿಂದ ಆಗಬಹುದಾದ ದೊಡ್ಡ ಅನಾಹುತವನ್ನು ತಪ್ಪಿಸಿದ್ದಾರೆ. ಸೇನೆಯ ತಂಡಗಳು, ಆಂಬ್ಯುಲೆನ್ಸ್ ನೊಂದಿಗೆ ಘಟನಾ ಸ್ಥಳಕ್ಕೆ ಆಗಮಿಸಿ ಗಾಯಾಳುಗಳಿಗೆ ವೈದ್ಯಕೀಯ ನೆರವು ಮತ್ತು ಪ್ರಥಮ ಚಿಕಿತ್ಸೆಯನ್ನು ನೀಡಿದ್ದಾರೆ.

Amarnath Tragedy

ಇದನ್ನೂ ಓದಿ: ನೀವೂ ಕೂಡ ನಿಮ್ಮ ಹೆಂಡತಿಯನ್ನು ಇವರಂತೆ ಪ್ರೀತಿಸಬಲ್ಲಿರಾ? ಈ ಫೋಟೊ, ವಿಡಿಯೊ ನೋಡಿ ಹೇಳಿ!

ಈ ಹಿಂದೆ ಈ ವರ್ಷದ ಜೂನ್ ತಿಂಗಳಿನಲ್ಲಿ ಭಯೋತ್ಪಾದಕರು ಶಿವಖೋರಿ ದೇವಸ್ಥಾನದಿಂದ ಮಾತಾ ವೈಷ್ಣೋದೇವಿ ದೇಗುಲಕ್ಕೆ ಹಿಂದಿರುಗುತ್ತಿದ್ದ ಪ್ರಯಾಣಿಕರಿದ್ದ ಬಸ್‌ನ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಭಯೋತ್ಪಾದಕರ ಗುಂಡಿನ ದಾಳಿಯಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಅಪಘಾತಕ್ಕೀಡಾಗಿ ಕಂದಕಕ್ಕೆ ಬಿದ್ದಿದೆ. ಈ ಅಪಘಾತದಲ್ಲಿ 10 ಜನರು ಸಾವನ್ನಪ್ಪಿದ್ದರು.

Continue Reading

ಕ್ರೀಡೆ

Hardik Pandya: ಬಹುಮಾನ ಮೊತ್ತವನ್ನು ತಾಯಿಯ ಖಾತೆಗೆ ಹಾಕುವಂತೆ ಬಿಸಿಸಿಐಗೆ ಮನವಿ ಮಾಡಿದ ಹಾರ್ದಿಕ್​ ಪಾಂಡ್ಯ; ಕಾರಣವೇನು?

Hardik Pandya: ಭಾರತ ತಂಡ ಟಿ20 ವಿಶ್ವಕಪ್ ಟ್ರೋಫಿ ಗೆಲುವಿನಲ್ಲಿ ಹಾರ್ದಿಕ್ ಪಾಂಡ್ಯ ಕೊಡುಗೆ ಅತ್ಯಂತ ಮಹತ್ವದ್ದಾಗಿತ್ತು. ಟೂರ್ನಿಯುದ್ದಕ್ಕೂ ಬ್ಯಾಟಿಂಗ್​ ಮತ್ತು ಬೌಲಿಂಗ್​ ಮೂಲಕ ತಂಡಕ್ಕೆ ಉತ್ತಮ ಕೊಡುಗೆ ನೀಡಿದ್ದರು.

VISTARANEWS.COM


on

Hardik Pandya
Koo

ಮುಂಬಯಿ: ಹಾರ್ದಿಕ್ ಪಾಂಡ್ಯ(Hardik Pandya) ಹಾಗೂ ಪತ್ನಿ, ಸರ್ಬಿಯಾದ ನಟಿ ನತಾಶಾ ಸ್ಟಾನ್‌ಕೋವಿಕ್‌(Natasa Stankovic) ಡಿವೋರ್ಸ್ ಸುದ್ದಿಗಳ ಬೆನ್ನಲ್ಲೇ ಇದೀಗ ಮತ್ತೆ ಹಾರ್ದಿಕ್ ಪಾಂಡ್ಯ ಮೀಮ್ಸ್ ಹರಿದಾಡುತ್ತಿದೆ. ಬಿಸಿಸಿಐ ಘೋಷಿಸಿರುವ ಬಹುಮಾನ ಮೊತ್ತವನ್ನೂ ತಾಯಿ ಖಾತೆಗೆ ಹಾಕಿಬಿಡಿ ಅನ್ನೋ ಮೀಮ್ಸ್ ಭಾರಿ ವೈರಲ್ ಆಗುತ್ತಿದೆ.

ಹೌದು, ಹಾರ್ದಿಕ್​ ಪಾಂಡ್ಯ ಬಗ್ಗೆ ಮೀಮ್ಸ್​ಗಳು ವೈರಲ್​ ಆಗಲು ಕೂಡ ಒಂದು ಕಾರಣವಿದೆ. ಆಲ್​ರೌಂಡರ್​ ಹಾರ್ದಿಕ್ ಪಾಂಡ್ಯ ಅವರು ಪತ್ನಿ ನತಾಶಾಗೆ ವಿಚ್ಛೇದನ ನೀಡಿದರೆ(Hardik Pandya and Natasa Stankovic divorce) ಪತ್ನಿಗೆ ಜೀವನಾಂಶವಾಗಿ ತಮ್ಮ ಆಸ್ತಿಯಲ್ಲಿ ಶೇ. 70 ರಷ್ಟು ಭಾಗವನ್ನು ನೀಡಬೇಕಾಗಬಹುದು ಎಂದು ಹೇಳಲಾಗಿತ್ತು. ಈ ವೇಳೆ ಪಾಂಡ್ಯ ತಾವು ತಮ್ಮ ಆಸ್ತಿಗಳನ್ನೆಲ್ಲ ತಾಯಿಯ ಹೆಸರಿನಲ್ಲಿ ಮಾಡಿಟ್ಟಿರುವುದಾಗಿ ಹಿಂದೊಮ್ಮೆ ಸಂದರ್ಶನದಲ್ಲಿ ಹೇಳಿದ್ದ ವಿಡಿಯೊ ವೈರಲ್​ ಆಗಿತ್ತು.

ಆ ಸಂದರ್ಶನದಲ್ಲಿ ಮುಕ್ತವಾಗಿ ಮಾತನಾಡಿದ್ದ ಪಾಂಡ್ಯ “ನಾನು ಜಾಹಿರಾತು, ಕ್ರಿಕೆಟ್​ ಸೇರಿ ಇನ್ನಿತರ ಮೂಲಗಳಿಂದ ಎಷ್ಟೇ ಹಣ ಸಂಪಾದಿಸಿದರೂ ಕೂಡ ಇದನೆಲ್ಲ ನನ್ನ ಹೆಸರಿನಲ್ಲಿ ಇಟ್ಟಿಲ್ಲ. ನನ್ನ ಬಳಿ ದುಬಾರಿ ಕಾರು, ಬಂಗಲೆ ಇದ್ದರೂ ಕೂಡ ಇದೆಲ್ಲ ನನ್ನ ತಾಯಿಯ ಹೆಸರಿನಲ್ಲಿದೆ. ಹೀಗಾಗಿ ನಾನು ಯಾವುದೇ ಸಮಸ್ಯೆ ಬಂದರೂ ಕೂಡ ಯಾರೀಗೂ ನನ್ನ ಆಸ್ತಿಯಲ್ಲಿ ಶೇ. 50ರಷ್ಟು ಜೀವನಾಂಶ ಕೊಡುವ ಪ್ರಮೇಯವೇ ಬರುವುದಿಲ್ಲ ಎಂದು ಹೇಳಿದ್ದರು. ಇದೇ ಕಾರಣದಿಂದ ಇದೀಗ ನೆಟ್ಟಿಗರು ವಿಶ್ವಕಪ್​ ಗೆದ್ದ ಬಹುಮಾನ ಮೊತ್ತ ಮತ್ತು ಬಿಸಿಸಿಐ ನೀಡಿದ ಮೊತ್ತವನ್ನು ಪಾಂಡ್ಯ ಅವರು ದಯಮಾಡಿ ಇದನ್ನು ನನ್ನ ತಾಯಿಯ ಖಾತೆಗೆ ಹಾಲಿ ಎಂದು ಹೇಳುವ ರೀತಿಯಲ್ಲಿ ಮೀಮ್ಸ್​ಗಳನ್ನು ಮಾಡಿ ಹರಿಬಿಟ್ಟಿದ್ದಾರೆ.

ಭಾರತ ತಂಡ ಟಿ20 ವಿಶ್ವಕಪ್ ಟ್ರೋಫಿ ಗೆಲುವಿನಲ್ಲಿ ಹಾರ್ದಿಕ್ ಪಾಂಡ್ಯ ಕೊಡುಗೆ ಅತ್ಯಂತ ಮಹತ್ವದ್ದಾಗಿತ್ತು. ಟೂರ್ನಿಯುದ್ದಕ್ಕೂ ಬ್ಯಾಟಿಂಗ್​ ಮತ್ತು ಬೌಲಿಂಗ್​ ಮೂಲಕ ತಂಡಕ್ಕೆ ಉತ್ತಮ ಕೊಡುಗೆ ನೀಡಿದ್ದರು. ಅದರಲ್ಲೂ ಫೈನಲ್​ನಲ್ಲಿ ಸೋಲುವ ಭೀತಿಯಲ್ಲಿದ್ದ ಭಾರತ ತಂಡವನ್ನು ಕಾಪಾಡಿದ್ದೇ ಪಾಂಡ್ಯ. ಅಪಾಯಕಾರಿ ಹೆನ್ರಿಚ್​ ಕ್ಲಾಸೆನ್​ ವಿಕೆಟ್​ ಕೀಳದೇ ಹೋಗಿದ್ದರೆ ಭಾರತದ ಕಪ್​ ಆಸೆ ಮತ್ತೆ ನಿರಾಸೆಯಾಗುತ್ತಿತ್ತು.

ಹಾರ್ದಿಕ್‌ ಮತ್ತು ನತಾಶಾ ಕಳೆದ 2020ರಲ್ಲೇ ರಿಜಿಸ್ಟರ್‌ ರೀತಿಯಲ್ಲಿ ವಿವಾಹವಾಗಿದ್ದರು. ಮದುವೆಗೂ ಮುನ್ನವೇ ನತಾಶಾ ಅವರನ್ನು ಪಾಂಡ್ಯ ಗರ್ಭಿಣಿ ಮಾಡಿದ್ದರು. ಈ ಜೋಡಿಗೆ ಒಬ್ಬ ಪುತ್ರನಿದ್ದಾನೆ. ಈತನ ಹೆಸರು ಅಗಸ್ತ್ಯ. ಕಳೆದ ವರ್ಷ ಫೆ.14 ರಂದು ರಾಜಸ್ಥಾನದ ಉದಯ್‌ಪುರದಲ್ಲಿ ಕ್ರಿಷ್ಚಿಯನ್‌ ಸಂಪ್ರದಾಯದಂತೆ ಹಾರ್ದಿಕ್‌ ಮತ್ತು ನತಾಶಾ ಮತ್ತೊಮ್ಮೆ ಅದ್ದೂರಿಯಾಗಿ ಪುನರ್‌ ವಿವಾಹವಾಗಿದ್ದರು. ಕುಟುಂಬಸ್ಥರು ಮತ್ತು ಗೆಳೆಯರ ಸಮ್ಮುಖದಲ್ಲಿ ಮತ್ತೊಮ್ಮೆ ವಿವಾಹವಾಗಿದ್ದರು. ಇವರ ವಿವಾಹ ಸಮಾರಂಭದಲ್ಲಿ ಕೊಹ್ಲಿ-ಅನುಷ್ಕಾ, ರಾಹುಲ್‌-ಅಥಿಯಾ, ರಾಕಿಣಗ್​ ಸ್ಟಾರ್ ಯಶ್​ ಸೇರಿ ಹಲವು ಗಣ್ಯರೂ ಭಾಗಿಯಾಗಿದ್ದರು.

Continue Reading
Advertisement
kanaganahalli mid day meal
ಕಲಬುರಗಿ1 min ago

Mid Day Meal: ಕಲಬುರಗಿಯಲ್ಲಿ ಬಿಸಿಯೂಟ ಉಂಡ 33 ವಿದ್ಯಾರ್ಥಿಗಳು ಅಸ್ವಸ್ಥ; 3 ದಿನಗಳಲ್ಲಿ ಎರಡನೇ ಘಟನೆ

Yakshagana artist Tulsi Hegade added to the world record list
ಕರ್ನಾಟಕ2 mins ago

Sirsi News: ವಿಶ್ವಶಾಂತಿಗೆ ಯಕ್ಷ ನೃತ್ಯ ಕೊಡುಗೆ; ವಿಶ್ವದಾಖಲೆ ಪಟ್ಟಿಗೆ ತುಳಸಿ ಹೆಗಡೆ ಸೇರ್ಪಡೆ

Hardik Pandya
ಕ್ರೀಡೆ2 mins ago

Hardik Pandya: ಆಲ್​ರೌಂಡರ್​ ಶ್ರೇಯಾಂಕದಲ್ಲಿ ನಂ.1 ಸ್ಥಾನಕ್ಕೇರಿದ ಹಾರ್ದಿಕ್​ ಪಾಂಡ್ಯ

Actor Darshan K manju talks
ಸ್ಯಾಂಡಲ್ ವುಡ್4 mins ago

Actor Darshan: ದರ್ಶನ್‌ ಕೆಟ್ಟ ವ್ಯಕ್ತಿಯಲ್ಲ, ತಪ್ಪು ಮಾಡಿಲ್ಲ ಎಂದ ಕೆ. ಮಂಜು

Viral Video
ತಂತ್ರಜ್ಞಾನ9 mins ago

Viral Video: ರೋಬೋಟಿಕ್ ಹಾವುಗಳೊಂದಿಗೆ ವಿಶ್ವದ ಮೊದಲ ಎಐ ಉಡುಗೆ ಸಿದ್ಧ! ಹೇಗಿದೆ ನೋಡಿ!

Hathras Stampede
ದೇಶ22 mins ago

Hathras Stampede: 2.5 ಲಕ್ಷ ಜನ ಭೋಲೆ ಬಾಬಾ ಪಾದ ಮುಟ್ಟಲು ಓಡಿ ಹೋಗಿದಕ್ಕೇ ಕಾಲ್ತುಳಿತ? ಇಲ್ಲಿದೆ ಕಂಪ್ಲೀಟ್‌ ಮಾಹಿತಿ

BJP Protest
ಕರ್ನಾಟಕ24 mins ago

BJP Protest: ಪ್ರತಿಭಟನೆ ವೇಳೆ ಶಾಸಕ ವೇದವ್ಯಾಸ್ ಕಾಮತ್ ಧಮ್ಕಿ; ಕೆರಳಿದ ಪೊಲೀಸ್‌!

Narendra Modi
ದೇಶ30 mins ago

Narendra Modi: ಲೋಕಸಭಾ ಚುನಾವಣೆಯ ಫಲಿತಾಂಶದಿಂದ ದೇಶೀಯ ಮಾರುಕಟ್ಟೆಗೆ ಉತ್ತೇಜನ; ಮೋದಿ ಬಣ್ಣನೆ

Viral Video
Latest51 mins ago

Viral Video: ಮಕ್ಕಳನ್ನು ಬೆಲ್ಟ್‌ನಿಂದ ಕ್ರೂರವಾಗಿ ಥಳಿಸಿದ ತಾಯಿ; ವಿಡಿಯೊ ನೋಡಿ ಜನಾಕ್ರೋಶ

sudha murthy pm narendra modi
ಪ್ರಮುಖ ಸುದ್ದಿ60 mins ago

Sudha Murthy: ʼಹೆಣ್ಣುಮಕ್ಕಳಿಗೆ ಇದೊಂದು ಕೊಟ್ಟುಬಿಡಿ, ಪ್ಲೀಸ್‌ʼ ಎಂದ ಸುಧಾ ಮೂರ್ತಿ; ರಾಜ್ಯಸಭೆಯಲ್ಲಿ ಭಾಷಣಕ್ಕೆ ಮೋದಿ ಮೆಚ್ಚುಗೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ21 hours ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ2 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ3 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು3 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ4 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ4 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ5 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ6 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

ಟ್ರೆಂಡಿಂಗ್‌