Murder case | ಆಸ್ತಿ ಜಗಳ ತಾರಕಕ್ಕೇರಿ ಮಾವನನ್ನೇ ಕೊಂದ ಅಳಿಯಂದಿರು - Vistara News

ಕ್ರೈಂ

Murder case | ಆಸ್ತಿ ಜಗಳ ತಾರಕಕ್ಕೇರಿ ಮಾವನನ್ನೇ ಕೊಂದ ಅಳಿಯಂದಿರು

ಆಸ್ತಿ ವಿಚಾರಕ್ಕೆ ಮಾತಿಗೆ ಮಾತು ಬೆಳೆದು ಅಳಿಯಂದಿರು ಮಾವನನ್ನೇ ಕೊಚ್ಚಿ ಕೊಲೆ ಮಾಡಿದ ಘಟನೆ ಹುಬ್ಬಳ್ಳಿ ತಾಲ್ಲೂಕಿನ ಸುಳ್ಳ ಗ್ರಾಮದಲ್ಲಿ ನಡೆದಿದೆ.

VISTARANEWS.COM


on

Murder case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹುಬ್ಬಳ್ಳಿ: ಆಸ್ತಿ ವಿಚಾರಕ್ಕೆ ಮಾತಿಗೆ ಮಾತು ಬೆಳೆದು ಅಳಿಯಂದಿರು ಮಾವನನ್ನೇ ಕೊಚ್ಚಿ ಕೊಲೆ ಮಾಡಿದ ಘಟನೆ ಹುಬ್ಬಳ್ಳಿ ತಾಲ್ಲೂಕಿನ ಸುಳ್ಳ ಗ್ರಾಮದಲ್ಲಿ ನಡೆದಿದೆ.

ಸುಳ್ಳ ಗ್ರಾಮದ ಶಿವಪ್ಪ ಮಳ್ಳೊಳ್ಳಿ (56) ಕೊಲೆಯಾದ ವ್ಯಕ್ತಿ. ಕೆಲವು ವರ್ಷಗಳಿಂದ ಆಸ್ತಿ ವಿಚಾರಕ್ಕಾಗಿ ಇವರಿಗೂ ಅಳಿಯಂದಿರಾದ ಗುರಪ್ಪ, ಷಣ್ಮುಖ, ಗಂಗಪ್ಪಾ ಹಾಗೂ ಸಿದ್ರಾಮ ಜೊತೆ ಕಲಹ ನಡೆಯುತ್ತಿತ್ತು. ಗುರುವಾರ ರಾತ್ರಿ ಜಗಳ ವಿಕೋಪಕ್ಕೆ ಹೋಗಿ ಕೊಲೆಯಲ್ಲಿ ಅಂತ್ಯವಾಗಿದೆ. ಗ್ರಾಮದ ಕಲ್ಮೇಶ್ವರ ದೇವಸ್ಥಾನದ ಎದುರು ಮಾರಕಾಸ್ತ್ರಗಳಿಂದ ಶಿವಪ್ಪನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಕೊಲೆಗಡುಕರು, ಬಳಿಕ ಪರಾರಿಯಾಗಿದ್ದಾರೆ. ಶಿವಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Murder Case | ಸಂಸದ ರಮೇಶ ಜಿಗಜಿಣಗಿ ವಾಹನ ಚಾಲಕರಾಗಿದ್ದ ವ್ಯಕ್ತಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರ ಹತ್ಯೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಾಗಲಕೋಟೆ

Electric shock : ಬೋರ್‌ವೆಲ್‌ ಆನ್‌ ಮಾಡುತ್ತಿದ್ದಂತೆ ಕರೆಂಟ್‌ ಶಾಕ್‌; ಹಾರಿ ಬಿದ್ದ ರೈತ ಸ್ಪಾಟ್‌ ಡೆತ್‌

Electric shock : ಬೋರ್‌ವೆಲ್‌ ಆನ್‌ ಮಾಡಲು ಹೋದಾಗ ವಿದ್ಯುತ್‌ ಪ್ರವಹಿಸಿ ರೈತರೊಬ್ಬರು ಮೃತಪಟ್ಟರೆ, ಸ್ಟೇ ವೈಯರ್‌ಗೆ ವಿದ್ಯುತ್‌ ಸ್ಪರ್ಶಿಸಿ ಯುವತಿಯೊಬ್ಬಳು ಪ್ರಾಣವನ್ನೇ ಕಳೆದುಕೊಂಡಿದ್ದಾಳೆ.

VISTARANEWS.COM


on

By

Electric Shock
Koo

ಬಾಗಲಕೋಟೆ: ವಿದ್ಯುತ್ ತಗುಲಿ (Electric shock) ರೈತರೊಬ್ಬರು ದಾರುಣವಾಗಿ ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮೆಟಗುಡ್ಡ ಗ್ರಾಮದಲ್ಲಿ ನಡೆದಿದೆ. ಭೀಮಪ್ಪ ಯಾದವಾಡ (45) ಮೃತ ದುರ್ದೈವಿ.

ಭೀಮಪ್ಪ ನೀರು ಹಾಯಿಸಲು ಬೆಳಗ್ಗೆ ಹೊಲಕ್ಕೆ ಹೋಗಿದ್ದರು. ಬೋರ್‌ವೆಲ್‌ ಮೆಷಿನ್‌ ಡೋರ್‌ ತೆರೆದು ಆನ್ ಮಾಡಲು ಹೋಗಿದ್ದಾರೆ. ಆದರೆ ವಿದ್ಯುತ್ ತಂತಿ ಕಟ್ ಆಗಿ ಬೋರ್ಡ್‌ಗೆ ಸಂಚರಿಸಿ ಕರೆಂಟ್‌ ಶಾಕ್‌ ಹೊಡೆದಿದೆ.

ಸ್ಥಳಕ್ಕೆ ಲೊಕಾಪೂರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.

ಸ್ಟೇ ವೈಯರ್‌ಗೆ ವಿದ್ಯುತ್ ಸ್ವರ್ಶಿಸಿ ಯುವತಿ ಸಾವು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದಲ್ಲಿ ಸ್ಟೇ ವೈಯರ್‌ಗೆ ವಿದ್ಯುತ್‌ ಸ್ಪರ್ಶಿಸಿ ಯುವತಿಯೊಬ್ಬಳು ಮೃತಪಟ್ಟಿದ್ದಾಳೆ. ಬರ್ಗುಲಾ ನಿವಾಸಿ ಪ್ರತೀಕ್ಷಾ ಶೆಟ್ಟಿ ಮೃತ ದುರ್ದೈವಿ.

ಗಣೇಶ್ ಶೆಟ್ಟಿ ಮತ್ತು ರೋಹಿನಿ ಪುತ್ರಿ ಪ್ರತೀಕ್ಷಾ ಶೆಟ್ಟಿ(20) ಕೊಕ್ಕಡ ಮೆಡಿಕಲ್ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದಳು. ಮನೆಗೆ ಪಾರ್ಸೆಲ್ ಬಂದಿತ್ತು. ಹೀಗಾಗಿ ಅದನ್ನು ಪಡೆಯಲು ಹೋದಾಗ ಸ್ಟೇ ವೈಯರ್‌ನಿಂದ ನೀರಿಗೆ ವಿದ್ಯುತ್ ಪ್ರವಹಿಸಿದೆ. ಗಂಭೀರ ಗಾಯಗೊಂಡ ಪ್ರತೀಕ್ಷಾ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಆಕೆಯ ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

ನಡುರಸ್ತೆಯಲ್ಲಿ ಶಿಕ್ಷಕಿಯ ಹಣೆಗೆ ಸಿಂಧೂರ ಹಚ್ಚಿ ಬಲವಂತವಾಗಿ ಮದುವೆಯಾದ ಯುವಕ!

ಬಿಹಾರ: ಕೆಲವೊಂದು ಕಡೆಗಳಲ್ಲಿ ಮಹಿಳೆಯ ಕುತ್ತಿಗೆಗೆ ಮಾಂಗಲ್ಯ ಸರ ಕಟ್ಟಿದರೆ ಮದುವೆಯಾದ ಹಾಗೇ. ಅದೇರೀತಿ ಕೆಲವು ಕಡೆಗಳಲ್ಲಿ ಹಣೆಗ ಸಿಂಧೂರ ಹಚ್ಚಿದರೆ ಅವರಿಬ್ಬರು ದಂಪತಿ ಎಂದು ಪರಿಗಣಿಸುತ್ತಾರೆ. ಹಾಗಾಗಿ ಇಂತಹದೊಂದು ಸಂಪ್ರದಾಯವನ್ನಿಟ್ಟುಕೊಂಡು ಯುವಕನೊಬ್ಬ ಶಾಲಾ ಶಿಕ್ಷಕಿಯ ಹಣೆಗೆ ಸಿಂಧೂರ ಹಚ್ಚಿ ಆಕೆಯ ತಂದೆಯ ಎದುರೇ ಬಲವಂತವಾಗಿ ಮದುವೆಯಾಗಲು ಯತ್ನಿಸಿದ ಘಟನೆ ಬಿಹಾರದ ಬಂಕಾ ಜಿಲ್ಲೆಯ ಅಮರಪುರ ಬ್ಲಾಕ್‌ನಲ್ಲಿ ನಡೆದಿದೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್(Viral Video) ಆಗಿದೆ.

ವಿಡಿಯೊದಲ್ಲಿ ಶಾಲೆ ಕೆಲಸ ಮುಗಿಸಿ ಶಿಕ್ಷಕಿ ತನ್ನ ತಂದೆಯೊಂದಿಗೆ ಬೈಕಿನಲ್ಲಿ ಬರುವಾಗ ಯುವಕರಿಬ್ಬರು ಅವರನ್ನು ರಸ್ತೆಯಲ್ಲಿ ತಡೆದು ನಿಲ್ಲಿಸಿದ್ದಾರೆ. ಅದರಲ್ಲಿ ಒಬ್ಬ ಯುವಕ ಬಲವಂತವಾಗಿ ಆಕೆಯ ಹಣೆಗೆ ಸಿಂಧೂರವನ್ನು ಹಚ್ಚಲು ಪ್ರಯತ್ನಿಸಿದ್ದಾನೆ. ಯುವಕ ತನ್ನ ಮುಖವನ್ನು ಬಟ್ಟೆಯಿಂದ ಮುಚ್ಚಿಕೊಂಡಿದ್ದಾನೆ. ಹಾಗೇ ಶಿಕ್ಷಕಿಯ ತಂದೆ ಯುವಕನಿಂದ ತಮ್ಮ ಮಗಳನ್ನು ರಕ್ಷಿಸಲು ಪ್ರಯತ್ನಿಸುತ್ತಿದ್ದಾರೆ. ಶಿಕ್ಷಕಿ ತಲೆಯನ್ನು ತನ್ನ ದುಪ್ಪಟ್ಟದಿಂದ ಮುಚ್ಚಿಕೊಂಡಿದ್ದರು ಕೂಡ ಆತ ಸಿಂಧೂರ ಹಚ್ಚಿದ್ದಾನೆ. ಇನ್ನೊಬ್ಬ ಯುವಕ ಇದನ್ನು ವಿಡಿಯೊ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾನೆ. ಇದು ವೈರಲ್ ಆಗಿದೆ.

ವಿಡಿಯೊದಲ್ಲಿ ಯುವಕ ತನ್ನ ಜೀವನ ಆಕೆಯಿಂದ ಹಾಳಾಗಿದೆ ಎಂದು ಹೇಳಿದ್ದಾನೆ. ಈ ಘಟನೆ ಬಳಿಕ ಶಿಕ್ಷಕಿ ಯುವಕನ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾಳೆ. ದೂರಿನಲ್ಲಿ ಶಿಕ್ಷಕಿ, ಬಭಂಗಮಾ ನಿವಾಸಿ ಸೌರಭ್ ಸೋನು ಎಂಬ ಯುವಕನೊಬ್ಬ ಪೋನ್‌ನಲ್ಲಿ ತನಗೆ ವೈಯಕ್ತಿಕವಾಗಿ ಕಿರುಕುಳ ನೀಡುತ್ತಿದ್ದಾನೆ. ತಾನು ಬಿಪಿಎಸ್‌ಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಅಮರಪುರದ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡಲು ಶುರುಮಾಡಿದಾಗಿನಿಂದ ತನ್ನನ್ನು ಮದುವೆಯಾಗುವಂತೆ ಆತ ಒತ್ತಡ ಹಾಕುತ್ತಿದ್ದಾನೆ ಎಂದು ತಿಳಿಸಿದ್ದಾಳೆ. ಅಲ್ಲದೇ ಎರಡು ತಿಂಗಳ ಹಿಂದೆ ಯುವಕನ ವಿರುದ್ಧ ಲಿಖಿತ ದೂರು ನೀಡಿದ ಹಿನ್ನಲೆಯಲ್ಲಿ ಪೊಲೀಸರು ಆತನನ್ನು ಕರೆದು ಎಚ್ಚರಿಕೆ ನೀಡಿದ್ದರೂ ಕೂಡ ಆತ ಆಕೆಗೆ ಕಿರುಕುಳ ನೀಡುವುದನ್ನು ಮುಂದುವರಿಸಿದ್ದಾನೆ. ಇದೀಗ ಆತನ ವಿರುದ್ಧ ಮತ್ತೊಂದು ದೂರು ದಾಖಲಿಸಿದ ಶಿಕ್ಷಕಿ ನ್ಯಾಯಕ್ಕಾಗಿ ಕಾಯುತ್ತಿದ್ದಾಳೆ.

ಈ ವಿಡಿಯೊ ಜೂನ್ 27ರಂದು ಪೋಸ್ಟ್ ಆಗಿದ್ದು, ಇದಕ್ಕೆ 3.5 ಲಕ್ಷ ಲೈಕ್ಸ್ ಬಂದಿದೆ. ಹಾಗೇ ಅನೇಕ ಜನರು ಇದಕ್ಕೆ ಕಾಮೆಂಟ್ ಮಾಡಿದ್ದಾರೆ. ಇಂತಹ ಘಟನೆಗಳು ಹಲವು ಕಡೆ ನಡೆಯುತ್ತಿರುತ್ತದೆ. ಇದರಿಂದ ಅದೆಷ್ಟೋ ಹೆಣ್ಣುಮಕ್ಕಳ ಜೀವನ ಹಾಳಾಗಿದೆ. ಹಾಗಾಗಿ ಭವಿಷ್ಯದಲ್ಲಿ ಮಹಿಳೆಯರ ಮೇಲೆ ಮತ್ತೆ ಇಂತಹ ಘಟನೆಗಳು ನಡೆಯದಂತೆ ಆರೋಪಿಗಳ ವಿರುದ್ಧ ಕಠಿಣ ಕ್ರಮ ತೆಗದುಕೊಳ್ಳುವಂತೆ ನೆಟ್ಟಿಗರು ಆಗ್ರಹಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಸ್ಯಾಂಡಲ್ ವುಡ್

Actor Darshan: ‘ಕೈದಿ ನಂ. 6106…ನಮ್ದೇ ದರ್ಬಾರುʼ ಅಂದ್ರು ಫ್ಯಾನ್ಸ್‌; ಮೊಬೈಲ್ ಕವರ್, ಆಟೋ, ಬೈಕ್‌ಗಳಲ್ಲಿ ಸ್ಟಿಕ್ಟರ್ ಟ್ರೆಂಡ್!

Actor Darshan: ಸದ್ಯ ಈಗ ಕೈದಿ ನಂಬರ್ 6106 ಸ್ಟಿಕ್ಕರ್ ಗಳಿಗೆ ಫುಲ್ ಡಿಮ್ಯಾಂಡ್ ಇದೆ ಎನ್ನಲಾಗಿದ್ದು ವಿಭಿನ್ನ ಬಣ್ಣ, ವಿನ್ಯಾಸದಲ್ಲಿ ದರ್ಶನ್ ಫ್ಯಾನ್ಸ್ ಇದನ್ನು ಮಾಡಿಸಿಕೊಂಡು ತಮ್ಮ ವಾಹನಗಳಿಗೆ ಅಂಟಿಸಿಕೊಳ್ಳುತ್ತಿದ್ದಾರೆ. ಜತೆಗೆ ಬೈಕ್,ಆಟೋಗಳ ಹಿಂದೆ ಕೂಡ ಇದೇ ಕೈದಿ ನಂಬರ್ ಸ್ಟಿಕ್ಕರ್ ಅಂಟಿಸುತ್ತಿದ್ದಾರೆ. ನಮ್ಮ ಬಾಸ್‌ ಜೈಲಿಗೆ ಹೋದರು ಅಭಿಮಾನ ಕಡಿಮೆ ಆಗಿಲ್ಲ ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ.

VISTARANEWS.COM


on

Actor Darshan fans starts sticker trend mobile cover 6106
Koo

ಬೆಂಗಳೂರು: ದರ್ಶನ್ ಸಿನಿಮಾ (Actor Darshan) ಸ್ಟೈಲ್ ಫಾಲೋ ಮಾಡ್ತಿದ ಫ್ಯಾನ್ಸ್ ಈಗ ದರ್ಶನ್‌ ಅವರ ಕೈದಿ ನಂಬರ್‌ವನ್ನು ಟ್ರೆಂಡ್ ಮಾಡಿದ್ದಾರೆ. ದರ್ಶನ್ ಕೈದಿ ನಂಬರ್‌ಗೆ ಡಿಮ್ಯಾಂಡ್‌ ಸಿಕ್ಕಾಪಟ್ಟೆ ಆಗಿದೆ. ದರ್ಶನ್‌ ಕೈದಿ ನಂಬರ್‌ವನ್ನು ಅಭಿಮಾನಿಗಳು ಟ್ಯಾಟೂ ಹಾಕಿಸಿಕೊಂಡಿದ್ದಾರೆ. ಜತೆಗೆ ಬೈಕ್,ಆಟೋಗಳ ಹಿಂದೆ ಕೂಡ ಇದೇ ಕೈದಿ ನಂಬರ್ ಸ್ಟಿಕ್ಕರ್ ಅಂಟಿಸುತ್ತಿದ್ದಾರೆ. ನಮ್ಮ ಬಾಸ್‌ ಜೈಲಿಗೆ ಹೋದರು ಅಭಿಮಾನ ಕಡಿಮೆ ಆಗಿಲ್ಲ ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ.

ʻʻಡಿ 6106ʼʼಎಂದು ಒಬ್ಬ ಅಭಿಮಾನಿ ಕೈ ಮೇಲೆ ಟ್ಯಾಟೂ ಹಾಕಿಸಿಕೊಂಡಿದ್ದಾನೆ. ದರ್ಶನ್ ಕೈದಿ ನಂಬರ್‌ನಲ್ಲಿಯೇ ಮೊಬೈಲ್ ಕವರ್‌ ಕೂಡ ಬಂದಿದೆ. ಬೈಕ್,ಆಟೋಗಳ ಹಿಂದೆ ಕೂಡ ಇದೇ ಕೈದಿ ನಂಬರ್ ಸ್ಟಿಕ್ಕರ್ ಅಂಟಿಸುತ್ತಿದ್ದಾರೆ. ತಮ್ಮ ವಾಹನಗಳಿಗೆ ಈ ರೀತಿಯ ಸ್ಟಿಕ್ಕರ್‌ವನ್ನು ನೂರಾರು ಫ್ಯಾನ್ಸ್‌ ಹಾಕಿಕೊಂಡು ಫೋಟೊವನ್ನು ಸೋಷಿಯಲ್‌ ಮೀಡಿಯಾದಲ್ಲಿ ಶೇರ್‌ ಮಾಡುತ್ತಿದ್ದಾರೆ. ಕೈದಿ ನಂಬರ್ 6106 ಸೋಶಿಯಲ್ ಮೀಡಿಯಾಗಳಲ್ಲಿ ಮತ್ತೆ ಟ್ರೆಂಡಿಂಗ್ ಆಗುತ್ತಿದೆ.

ಸದ್ಯ ಈಗ ಕೈದಿ ನಂಬರ್ 6106 ಸ್ಟಿಕ್ಕರ್ ಗಳಿಗೆ ಫುಲ್ ಡಿಮ್ಯಾಂಡ್ ಇದೆ ಎನ್ನಲಾಗಿದ್ದು ವಿಭಿನ್ನ ಬಣ್ಣ, ವಿನ್ಯಾಸದಲ್ಲಿ ದರ್ಶನ್ ಫ್ಯಾನ್ಸ್ ಇದನ್ನು ಮಾಡಿಸಿಕೊಂಡು ತಮ್ಮ ವಾಹನಗಳಿಗೆ ಅಂಟಿಸಿಕೊಳ್ಳುತ್ತಿದ್ದಾರೆ.ಈ ಎಲ್ಲ ಬೆಳವಣಿಗೆಗಳ ಮಧ್ಯೆ ಇತ್ತೀಚೆಗೆ ಅವರ ವಿಶೇಷ ಚೇತನ ಅಭಿಮಾನಿಯೊಬ್ಬರು ಅವರನ್ನು ನೋಡಲು ಬಂದಿದ್ದರು. ಈ ಘಟನೆಯ ನಂತರ ಅಭಿಮಾನಿಗಳಿಗೆ ನಟ ದರ್ಶನ್ ಮನವಿ ಮಾಡಿದ್ದು ಜೈಲಿನಿಂದಲೇ ನಟ ದರ್ಶನ್ ಮನವಿ ತಿಳಿಸಿದ್ದಾರೆ.

ಇದನ್ನೂ ಓದಿ: Actor Darshan: ಆರಡಿ ದೇಹವ ಮೂರಡಿ ಬಗ್ಗಿಸಿ ನಮ್ಮೊಂದಿಗೆ ವಿನಯದಿ ಮಾತನಾಡಿದ ದರ್ಶನ್‌ ಅಣ್ಣ ಎಂದ ಖ್ಯಾತ ಗಾಯಕಿ!

ಖೈದಿ ನಂಬರ್​ 6106 ಎಂಬ ಶೀರ್ಷಿಕೆ ನಮಗೆ ಬೇಕು ಎಂದು ಭದ್ರಾವತಿ ಮೂವೀ ಮೇಕರ್ಸ್​ ಸಂಸ್ಥೆಯು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ‌ ಅರ್ಜಿ ಸಲ್ಲಿಸಿದೆ. ಈ ನಡುವೆ ಈ ಅರ್ಜಿಯನ್ನು ಪರಿಶೀಲಿಸಿದ ಮಂಡಳಿ, ಸದ್ಯಕ್ಕೆ ಈ ಟೈಟಲ್‌ಅನ್ನು ಕೊಡಬೇಕೋ ಬೇಡವೋ ಎಂಬ ಗೊಂದಲದಲ್ಲಿದ್ದು, ಸದ್ಯಕ್ಕೆ ಹೋಲ್ಡ್‌ನಲ್ಲಿಟ್ಟಿದೆ. ಸದ್ಯಕ್ಕೆ ಪೆಂಡಿಂಗ್‌ ಇಡಲಾಗಿದೆ ಎಂದು ಮಂಡಳಿ ಅರ್ಜಿ ಮೇಲೆ ಬರೆದಿದೆ. ಈಗಾಗಲೇ ಭದ್ರಾವತಿ ಮೂವೀ ಮೇಕರ್ಸ್ ಸಂಸ್ಥೆ ಕನ್ನಡಲ್ಲಿ ಮೂರು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದು, ಇದು ನಾಲ್ಕನೇ ಚಿತ್ರ.

ಈ ಮುಂಚೆ ಮೈಸೂರಿನಲ್ಲಿ ದರ್ಶನ್‌ ಅಭಿಮಾನಿ ಧನುಷ್‌ ದರ್ಶನ್‌ ಕುರಿತಾಗಿ ಕಣ್ಣೀರಿಟ್ಟು 6106 ಇನ್ಮುಂದೆ ನಮಗೆ ಇದೇ ಲಕ್ಕಿ ನಂಬರ್ ಎಂದಿದ್ದರು. ಮಾತ್ರವಲ್ಲ ಇನ್ಮುಂದೆ ಆ ನಂಬರ್ ನಮ್ಮ ಗಾಡಿ ಮೇಲೆ ಇರುತ್ತೆ ಎಂದೂ ಹೇಳಿಕೊಂಡಿದ್ದರು. ದರ್ಶನ್‌ಗೆ ನೀಡಿರುವ ಈ ನಂಬರ್‌ವನ್ನು ಆರ್ ಟಿಒನಲ್ಲಿ ರಿಜಿಸ್ಟರ್ ಮಾಡಿಸಲು ಅಭಿಮಾನಿ ಮುಂದಾಗಿದ್ದರು. ದರ್ಶನ್ ಜೈಲುವಾಸ ನೆನೆದು ಗಳಗಳನೆ ಕಟ್ಟೀರಿಟ್ಟಿದ್ದರು. ಶೀಘ್ರವಾಗಿ ದರ್ಶನ್‌ ಬಿಡುಗಡೆಗೆ ಆಗಬೇಕು ನಾಡ ಅಧಿದೇವತೆ ಚಾಮುಂಡಿಯಲ್ಲಿ ಹರಕೆ ಕೂಡ ಹೊತ್ತಿದ್ದರು ಧನುಷ್‌. ʻʻನಮ್ಮ ಬಾಸ್ ಏನೂ ತಪ್ಪೇ ಮಾಡಿಲ್ಲ. ನಮ್ಮ‌ ಬಾಸ್ ಅವರನ್ನು ನಾವು ಎಂದೂ ಬಿಟ್ಟುಕೊಡೋದಿಲ್ಲ. ಕಾನೂನು ಎಲ್ಲರಿಗೂ ಒಂದೇ. ತಪ್ಪು ಮಾಡಿಲ್ಲ ಅಂದ್ರೆ ರಾಜಾರೋಷವಾಗಿ ಬರ್ತಾರೆʼʼಎಂದು ಹೇಳಿಕೊಂಡಿದ್ದರು.

Continue Reading

ಕ್ರೈಂ

Valmiki Corporation Scam: ವಾಲ್ಮೀಕಿ ನಿಗಮ ಹಗರಣ; ಸಿಬಿಐನಿಂದ ಬಂಧನ ಆತಂಕದಲ್ಲಿ ಮಾಜಿ ಸಚಿವ ನಾಗೇಂದ್ರ

Valmiki Corporation Scam: ಮಾಜಿ ಸಚಿವ ನಾಗೇಂದ್ರ ಮತ್ತು ಟೀಮ್, ಪ್ರಕರಣದಲ್ಲಿ ತಮ್ಮ ಹೆಸರು ಹೇಳದಂತೆ ಆರೋಪಿಗಳಿಗೆ ಬೆದರಿಕೆ ಹಾಕಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಈ ಬಗ್ಗೆ ನ್ಯಾಯಾಧೀಶರ ಮುಂದೆಯೇ ಆರೋಪಿಯೊಬ್ಬ ಹೇಳಿಕೆ ಕೊಟ್ಟಿದ್ದಾನೆ. ಹೀಗಾಗಿ ಸಾಕ್ಷಿ ನಾಶ ಹಾಗೂ ಆರೋಪಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ನಾಗೇಂದ್ರಗೆ ಸಂಕಷ್ಟ ಎದುರಾಗಿದೆ.

VISTARANEWS.COM


on

Valmiki Corporation Scam
Koo

ಬೆಂಗಳೂರು: ಕರ್ನಾಟಕ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಕ್ರಮದ (Valmiki Corporation Scam) ಪ್ರಕರಣದಲ್ಲಿ ರಾಜೀನಾಮೆ (Resignation) ನೀಡಿರುವ ಮಾಜಿ ಸಚಿವ ನಾಗೇಂದ್ರ (Ex Minister Nagendra) ಸಿಬಿಐ (CBI) ತನಿಖಾ ಸಂಸ್ಥೆಯಿಂದ ಬಂಧನದ ಭೀತಿ ಎದುರಿಸುತ್ತಿದ್ದಾರೆ. ಇದೇ ಕಾರಣವಾಗಿ ನಾಗೇಂದ್ರ ಬಹುದಿನಗಳಿಂದ ಎಲ್ಲೂ ಕಾಣಿಸಿಕೊಂಡಿಲ್ಲ.

ಶಿವಮೊಗ್ಗದಲ್ಲಿ ವಾಲ್ಮೀಕಿ ನಿಗಮದ ಅಧೀಕ್ಷಕ ಚಂದ್ರಶೇಖರ್‌ ಆತ್ಮಹತ್ಯೆಯ ಬಳಿಕ ನಿಗಮದ ಹಗರಣ ಬೆಳಕಿಗೆ ಬಂದಿತ್ತು. ನಿಗಮದ 186 ಕೋಟಿ ರೂ. ಹಣವನ್ನು ಅಕ್ರಮವಾಗಿ ಅನ್ಯ ರಾಜ್ಯದ ಖಾತೆಗಳಿಗೆ ವರ್ಗಾವಣೆ ಮಾಡಿಸಿದ್ದನ್ನು ಚಂದ್ರಶೇಖರ್‌ ಡೆತ್‌ನೋಟ್‌ ಬೆಳಕಿಗೆ ಬಂದಿತ್ತು. ನಂತರ ಈ ವಿಚಾರದಲ್ಲಿ ಬಿಜೆಪಿ ರಾಜ್ಯವ್ಯಾಪಿ ತೀವ್ರ ಪ್ರತಿಭಟನೆಗೆ ಇಳಿದಿತ್ತು. ಇದರಿಂದ ವಾಲ್ಮೀಕಿ ನಿಗಮದಿಂದ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ್ದ ಅಧಿಕಾರಿಗಳ ಮೇಲೆ ಸರಕಾರ ಕ್ರಮ ಕೈಗೊಂಡು ತನಿಖೆಗೆ ಎಸ್‌ಐಟಿ ರಚಿಸಿತ್ತು. ಒತ್ತಡ ಹೆಚ್ಚಿದ ಪರಿಣಾಮ ಸಚಿವ ನಾಗೇಂದ್ರ ತಲೆದಂಡವೂ ಆಗಿತ್ತು.

ಈ ನಡುವೆ, ಮಾಜಿ ಸಚಿವ ನಾಗೇಂದ್ರ ಮತ್ತು ಟೀಮ್, ಪ್ರಕರಣದಲ್ಲಿ ತಮ್ಮ ಹೆಸರು ಹೇಳದಂತೆ ಆರೋಪಿಗಳಿಗೆ ಬೆದರಿಕೆ ಹಾಕಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಈ ಬಗ್ಗೆ ನ್ಯಾಯಾಧೀಶರ ಮುಂದೆಯೇ ಆರೋಪಿಯೊಬ್ಬ ಹೇಳಿಕೆ ಕೊಟ್ಟಿದ್ದಾನೆ. ಹೀಗಾಗಿ ಸಾಕ್ಷಿ ನಾಶ ಹಾಗೂ ಆರೋಪಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ನಾಗೇಂದ್ರಗೆ ಸಂಕಷ್ಟ ಎದುರಾಗಿದೆ.

ಈ ಪ್ರಕರಣದಲ್ಲಿ ಈಗಾಗಲೇ ಎಸ್ಐಟಿ ತನಿಖೆ ನಡೆಸುತ್ತಿದೆ. ಆದರೆ ಹಗರಣದಲ್ಲಿ ಸಿಬಿಐ ಸಹ ಎಂಟ್ರಿ ಆಗಿದೆ. ನೂರು ಕೋಟಿಗೂ ಮಿಕ್ಕಿದ ಹಣದ ಅವ್ಯವಹಾರ ಆಗಿರುವುದರಿಂದ ಸಿಬಿಐ ತನ್ನದೇ ರೀತಿಯಲ್ಲಿ ತನಿಖೆ ಆರಂಭಿಸಿದೆ. ಹೀಗಾಗಿ ನಾಗೇಂದ್ರಗೆ ಬಂಧನದ ಭೀತಿ ಶುರುವಾಗಿದೆ. ರಾಜೀನಾಮೆ ಕೊಟ್ಟ ಬಳಿಕ ನಾಗೇಂದ್ರ ಎಲ್ಲೂ ಕಾಣಿಸಿಕೊಂಡಿಲ್ಲ. ಅತ್ತ ಪಕ್ಷದ ಕೆಲಸದಲ್ಲೂ ಕಾಣಿಸಿಕೊಳ್ಳುತ್ತಿಲ್ಲ; ಇತ್ತ ಕ್ಷೇತ್ರದಲ್ಲೂ ಯಾವುದೇ ಕಾರ್ಯಕ್ರಮದಲ್ಲಿ ಭಾಗಿಯಾಗಿಲ್ಲ. ಹೀಗಾಗಿ, ಬಂಧನದ ಭೀತಿಯಿಂದ ಹಿನ್ನೆಲೆಯಲ್ಲಿ ಉಳಿದಿರಬಹುದು ಎಂದು ಭಾವಿಸಲಾಗಿದೆ.

ತನಿಖೆಗೆ ಇಡಿ ಎಂಟ್ರಿ

ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣದ ತನಿಖೆಗೆ ಜಾರಿ ನಿರ್ದೇಶನಾಲಯ ಕೂಡ ಎಂಟ್ರಿ ನೀಡಿದೆ. ಅಕ್ರಮ ಹಣ ವರ್ಗಾವಣೆ ಆರೋಪದ ಹಿನ್ನೆಲೆಯಲ್ಲಿ ಪ್ರತ್ಯೇಕವಾಗಿ ತನಿಖೆ ಪ್ರಾರಂಭಿಸಿದ ಇಡಿ, ಜೈಲಿನಲ್ಲಿ ಇರುವ ಆರೋಪಿಗಳ ವಿಚಾರಣೆ ನಡೆಸಿದೆ. ಪದ್ಮನಾಭ್ ಮತ್ತು ಪರುಶರಾಮ್ ಹೇಳಿಕೆ ದಾಖಲಿಸಿದೆ. ಈಗಾಗಲೇ ಸಿಬಿಐ ಕೂಡ ಇವರ ಹೇಳಿಕೆ ದಾಖಲಿಸಿದೆ.

ಮತ್ತೊಬ್ಬನ ಬಂಧನ

ಪ್ರಕರಣಕ್ಕೆ ಸಂಬಂಧಿಸಿ ಮತ್ತೊಬ್ಬನನ್ನು ಎಸ್‌ಐಟಿ ಈ ವಾರ ವಶಕ್ಕೆ ಪಡೆದಿದೆ. ಅಧೀಕ್ಷಕ ಚಂದ್ರಶೇಖರ ಡೆತ್ ನೋಟ್‌ನಲ್ಲಿ ಹೆಸರು ಬರೆದಿದ್ದ ಸಾಯಿತೇಜ ಎಂಬ ಆರೋಪಿಯನ್ನು ಎಸ್ಐಟಿ ಅಧಿಕಾರಿಗಳು ಚೆನ್ನಗಿರಿಯಲ್ಲಿ ವಶಕ್ಕೆ ಪಡೆದಿದ್ದಾರೆ. ಸಾಯಿತೇಜ ಸೇರಿ ಇಬ್ಬರ ಬಂಧನ ಮಾಡಲಾಗಿದ್ದು, ಸದ್ಯ ಸಿಐಡಿ ಕಚೇರಿಯಲ್ಲಿ ವಶಕ್ಕೆ ಪಡೆದಿರುವ ಆರೋಪಿ ಪಾತ್ರದ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ.

ಇದನ್ನೂ ಓದಿ: R Ashok: ವಾಲ್ಮೀಕಿ ನಿಗಮ ಹಗರಣದಲ್ಲಿ ಸಿದ್ದರಾಮಯ್ಯ ಮೊದಲ ಆರೋಪಿ ಎಂದ ಆರ್‌.ಅಶೋಕ್‌

Continue Reading

ಸ್ಯಾಂಡಲ್ ವುಡ್

Actor Darshan: ಆರಡಿ ದೇಹವ ಮೂರಡಿ ಬಗ್ಗಿಸಿ ನಮ್ಮೊಂದಿಗೆ ವಿನಯದಿ ಮಾತನಾಡಿದ ದರ್ಶನ್‌ ಅಣ್ಣ ಎಂದ ಖ್ಯಾತ ಗಾಯಕಿ!

ಹಲವು ನಟ ನಟಿಯರು ದರ್ಶನ್‌ ಪರ ಧ್ವನಿ ಎತ್ತುತ್ತಿದ್ದಾರೆ. ಇದೀಗ ಈ ಸಾಲಿಗೆ ಗಾಯಕಿ ಡಾ.ಶಮಿತಾ ಮಲ್ನಾಡ್ ಸೇರ್ಪಡೆಯಾಗಿದ್ದಾರೆ. ʻʻಸಹಚರ, ಗೆಳೆಯ, ಸೋದರ, ಎಷ್ಟೋ ಜನರಿಗೆ ಸಹಾಯ ಹಸ್ತ ನೀಡಿ ಜೀವನವಾಗಿದ್ದವರು, ಒಳ್ಳೆ ಕೆಲಸಗಳಿಗೆ ಕೈ ಚಾಚಿದ್ದವರು. ಜಾರಿ ಬಿದ್ದಾಗ ಆಳಿಗೊಂದು ಕಲ್ಲಾಗೋದು ಬೇಡಾʼʼಎಂದು ಬರೆದುಕೊಂಡಿದ್ದಾರೆ.

VISTARANEWS.COM


on

Actor Darshan support by singer dr shamitha malnad
Koo

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪರಪ್ಪನ ಅಗ್ರಹಾರದಲ್ಲಿ ಇದ್ದಾರೆ ದರ್ಶನ್‌. ದರ್ಶನ್ ಪರ ಒಲವು ತೋರಿದವರ (Actor Darshan) ಸಂಖ್ಯೆ ತೀರಾ ಕಡಿಮೆ. ಇದೀಗ ಹಲವು ನಟ ನಟಿಯರು ದರ್ಶನ್‌ ಪರ ಧ್ವನಿ ಎತ್ತುತ್ತಿದ್ದಾರೆ. ಇದೀಗ ಈ ಸಾಲಿಗೆ ಗಾಯಕಿ ಡಾ.ಶಮಿತಾ ಮಲ್ನಾಡ್ (dr shamitha malnad) ಸೇರ್ಪಡೆಯಾಗಿದ್ದಾರೆ. ʻʻಸಹಚರ, ಗೆಳೆಯ, ಸೋದರ, ಎಷ್ಟೋ ಜನರಿಗೆ ಸಹಾಯ ಹಸ್ತ ನೀಡಿ ಜೀವನವಾಗಿದ್ದವರು, ಒಳ್ಳೆ ಕೆಲಸಗಳಿಗೆ ಕೈ ಚಾಚಿದ್ದವರು. ಜಾರಿ ಬಿದ್ದಾಗ ಆಳಿಗೊಂದು ಕಲ್ಲಾಗೋದು ಬೇಡಾʼʼಎಂದು ಬರೆದುಕೊಂಡಿದ್ದಾರೆ. ಇದೀಗ ಅವರ ಪೋಸ್ಟ್‌ ವೈರಲ್‌ ಆಗುತ್ತಿದೆ.

ʻʻಮನಸೇ ಮನಸೇ,,, ಸೋಲೋ ಗೆಲುವೋ, ನೋವೋ ನಲಿವೋ, ಏಳೋ ಬೀಳೋ,,ಕಲ್ಲೋ ಮುಳ್ಳೋ ಜೀವನದ ಹಾದಿ ಸುಲಭವಲ್ಲ.. ಯಶಸ್ಸಿನ ಹಾದಿ ಸುಗಮವಲ್ಲ… ಹಸಿವು, ಅವಮಾನ, ನೋವುಂಡು ಯಶಸ್ಸು ಗಳಿಸಿದ ಹೆಸರು
ದರ್ಶನ್ ತೂಗುದೀಪ.. ಸಹಚರ, ಗೆಳೆಯ, ಸೋದರ, ಎಷ್ಟೋ ಜನರಿಗೆ ಸಹಾಯ ಹಸ್ತ ನೀಡಿ ಜೀವನವಾಗಿದ್ದವರು, ಒಳ್ಳೆ ಕೆಲಸಗಳಿಗೆ ಕೈ ಚಾಚಿದ್ದವರು,, ಜಾರಿ ಬಿದ್ದಾಗ ಆಳಿಗೊಂದು ಕಲ್ಲಾಗೋದು ಬೇಡಾ…. ಅವರ ಅಭಿನಯ, ಭೇದವಿಲ್ಲದ ಪ್ರೀತಿ, ಸರಳತೆ, ಸ್ನೇಹ ಅಭಿಮಾನದ ಸಿಹಿ ಉಂಡವರು ನಾವು, ಅಭಿಮಾನಿಯಾಗಿ ಸಿನಿಮಾ ಅಭಿನಯ ನೋಡಿ ಅತ್ತು, ನಕ್ಕು, ಚಪ್ಪಾಳೆ ಶಿಳ್ಳೆ ಹೊಡೆದು ಸಂಭ್ರಮಿಸಿದವರು ನಾವು,, ಆರಡಿ ದೇಹವ ಮೂರಡಿ ಬಗ್ಗಿಸಿ ತಗ್ಗಿ ನಮ್ಮೊಂದಿಗೆ ವಿನಯದಿ ಮಾತಾಡುವಾಗ ಹೆಮ್ಮೆ ಪಟ್ಟವರು ನಾವು,,, ತಪ್ಪಾಗಿದೆಯೋ ಇಲ್ಲವೋ ಏನಾಗಿದೆ ಎಂದು ಅರಿಯದವರು ನಾವು.. ಹಣಕ್ಕೆ ಬಗ್ಗದೆ ಪ್ರೀತಿಗೆ ಬಗ್ಗಿದವರು ಅವರು,,, ತಪ್ಪಾಗಿದ್ದರೆ ನ್ಯಾಯಾಂಗವಿದೆ, ಕಾನೂನಿದೆ,,,
ಶಿಕ್ಷೆ ಇದೇʼʼಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Actor Darshan: ಪರಪ್ಪನ ಅಗ್ರಹಾರದಿಂದಲೇ ಅಭಿಮಾನಿಗಳ ಬಳಿ ದರ್ಶನ್‌ ವಿಶೇಷ ಮನವಿ; ಏನದು?

ʻʻ ಅಕಾಲ ನಿಧನರಾದ ಶ್ರೀ ರೇಣುಕಾಸ್ವಾಮಿ ಆತ್ಮಕ್ಕೆ ಶಾಂತಿ ಸಿಗಲಿ,,, ಅವರ ಕುಟುಂಬ ಹಾಗೂ ಹಲವು ನೊಂದ ಕುಟುಂಬಗಳಿಗೆ ನಮ್ಮೆಲ್ಲರ ಸಾಂತ್ವನ ,, ನೆರವು, ಆಸರೆ, ನ್ಯಾಯ ಬೇಕಿದೆ,, ಹಾಗೆ ಸೋಶಿಯಲ್ ಮೀಡಿಯಾವನ್ನು ದಯವಿಟ್ಟು ಒಳಿತಿಗೆ ಉಪಯೋಗಿಸಿ,, ಎಲ್ಲರ ಮೇಲೆ ಗೌರವವಿರಲಿ,, ಕಾಮೆಂಟ್ಸ್, ಪೋಸ್ಟ್, ಮೇಲೆ ಹಿಡಿತವಿರಲಿ,,
ದರ್ಶನ್ ಅಣ್ಣಾ,, ಕನ್ನಡದ ಕುಟುಂಬ,, ಚಲನಚಿತ್ರದ ಕುಟುಂಬ ನಮ್ಮ ಕುಟುಂಬ,, ಕಲಾವಿದರ ಕುಟುಂಬ,, ಏನೇ ಆದರೂ ನಮ್ಮ ಮನೆಯವರ ಜೊತೆ ನಾವು ಯಾವಾಗ್ಲೂ ಜೊತೆ ಇರುತ್ತೇವೆ,, ಅಲ್ಲವೇ??? ಹಾಗೆ ಪ್ರೀತಿ ಅಭಿಮಾನ ಬದಲಾಗದು,, ತಪ್ಪು ಯಾರು ಮಾಡಿದ್ದರೂ ಶಿಕ್ಷೆ ಆಗಬೇಕು .. ನ್ಯಾಯ ಎಲ್ಲರಿಗೂ ಒಂದೇ,,, ದರ್ಶನ್ ಅವರನ್ನು ಪ್ರೀತಿಸುವ ಎಲ್ಲರಿಗೂ ನೋವಾಗಿದೆ,,ಸಂಕಟವಾಗಿದೆ,, ಇದು ಸಂಯಮ, ತಾಳ್ಮೆ, ಪ್ರಾರ್ಥನೆಯ ಸಮಯ,,
ಸಿಟ್ಟು, ಕೋಪ, ಅಸಹನೆ, ಹತಾಶೆ ದರ್ಶನ್ ಹಾಗೂ ಅವರ ಕುಟುಂಬಕ್ಕೆ ಇನ್ನಷ್ಟು ತೊಂದರೆ ಒಡ್ಡಬಹುದು,,
ಚಿನ್ನ ಕುದಿವ ಕುಲುಮೆಯಲ್ಲಿದೆ, ಕಲ್ಮಶ ಕಳೆದು ಅಪರಂಜಿ ಆಗಿ ಶುದ್ಧವಾಗಿ ಬರಲು ಸಮಯ ಬೇಕು,,, ಕಾಯೋಣ ,, ಸಮಾಧಾನದಿಂದ..ದರ್ಶನ್ ಅಣ್ಣಾ ಅವರಿಗಾಗಿ ಪ್ರಾರ್ಥಿಸೋಣ, ಹಾರೈಸೋಣ…ʼʼಎಂದು ಬರೆದುಕೊಂಡಿದ್ದಾರೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ (Renukaswamy murder case) ನಟ ದರ್ಶನ್‌ (Actor Darshan) ಹಾಗೂ ಸಹಚರರು ಜೈಲುವಾಸದಲ್ಲಿದ್ದಾರೆ. ಇತ್ತ ನಿತ್ಯವೂ ಅಭಿಮಾನಿಗಳು ದರ್ಶನ್‌ (Darshan Fans) ಭೇಟಿಗೆ ಪರಪ್ಪನ ಅಗ್ರಹಾರಕ್ಕೆ ಆಗಮಿಸುತ್ತಿದ್ದು, ಪೊಲೀಸರಿಗೆ ತಲೆ ಬಿಸಿಯಾಗಿದೆ. 

Continue Reading
Advertisement
Kanguva Release Date announce and clshes with dhruva sarja Martin
ಕಾಲಿವುಡ್1 min ago

Kanguva Release Date: ʻಕಂಗುವ’ ರಿಲೀಸ್‌ ಡೇಟ್‌ ಅನೌನ್ಸ್‌; ಧ್ರುವ ಸರ್ಜಾ ಸಿನಿಮಾ ಜತೆ ಕ್ಲ್ಯಾಶ್‌!

Priyanka Chopra
ಸಿನಿಮಾ12 mins ago

Priyanka Chopra: ಬೆಳ್ಳುಳ್ಳಿ ಎಸಳು ಪಾದಗಳಿಗೆ ಉಜ್ಜುವುದರಿಂದ ಏನು ಪ್ರಯೋಜನ? ನಟಿ ಪ್ರಿಯಾಂಕಾ ಚೋಪ್ರಾ ಹೇಳಿದ್ದೇನು?

Electric Shock
ಬಾಗಲಕೋಟೆ13 mins ago

Electric shock : ಬೋರ್‌ವೆಲ್‌ ಆನ್‌ ಮಾಡುತ್ತಿದ್ದಂತೆ ಕರೆಂಟ್‌ ಶಾಕ್‌; ಹಾರಿ ಬಿದ್ದ ರೈತ ಸ್ಪಾಟ್‌ ಡೆತ್‌

Actor Darshan fans starts sticker trend mobile cover 6106
ಸ್ಯಾಂಡಲ್ ವುಡ್40 mins ago

Actor Darshan: ‘ಕೈದಿ ನಂ. 6106…ನಮ್ದೇ ದರ್ಬಾರುʼ ಅಂದ್ರು ಫ್ಯಾನ್ಸ್‌; ಮೊಬೈಲ್ ಕವರ್, ಆಟೋ, ಬೈಕ್‌ಗಳಲ್ಲಿ ಸ್ಟಿಕ್ಟರ್ ಟ್ರೆಂಡ್!

Valmiki Corporation Scam
ಕ್ರೈಂ43 mins ago

Valmiki Corporation Scam: ವಾಲ್ಮೀಕಿ ನಿಗಮ ಹಗರಣ; ಸಿಬಿಐನಿಂದ ಬಂಧನ ಆತಂಕದಲ್ಲಿ ಮಾಜಿ ಸಚಿವ ನಾಗೇಂದ್ರ

Virat Kohli
ಕ್ರಿಕೆಟ್50 mins ago

Virat Kohli: ಕೊಹ್ಲಿ ಕ್ಲಾಸ್ ಪ್ಲೇಯರ್, ಫೈನಲ್​ನಲ್ಲಿ ಆಡುತ್ತಾರೆ ಎಂದು ಬೆಂಬಲ ಸೂಚಿಸಿದ ನಾಯಕ ರೋಹಿತ್​

karnataka Rain
ಮಳೆ51 mins ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Viral Video
Latest52 mins ago

Viral Video: ನಡುರಸ್ತೆಯಲ್ಲಿ ಶಿಕ್ಷಕಿಯ ಹಣೆಗೆ ಸಿಂಧೂರ ಹಚ್ಚಿ ಬಲವಂತವಾಗಿ ಮದುವೆಯಾದ ಯುವಕ!

Viral Video
Latest55 mins ago

Viral Video: ನೋಡುಗರ ಕಣ್ಮನ ಸೆಳೆಯುತ್ತಿದೆ ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್ ವಿವಾಹ ಆಮಂತ್ರಣ ಪತ್ರಿಕೆ

Actor Darshan support by singer dr shamitha malnad
ಸ್ಯಾಂಡಲ್ ವುಡ್1 hour ago

Actor Darshan: ಆರಡಿ ದೇಹವ ಮೂರಡಿ ಬಗ್ಗಿಸಿ ನಮ್ಮೊಂದಿಗೆ ವಿನಯದಿ ಮಾತನಾಡಿದ ದರ್ಶನ್‌ ಅಣ್ಣ ಎಂದ ಖ್ಯಾತ ಗಾಯಕಿ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ51 mins ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ17 hours ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ19 hours ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು20 hours ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ1 day ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ4 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ7 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ7 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು2 weeks ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

ಟ್ರೆಂಡಿಂಗ್‌