KSOU Admission : ಮುಕ್ತ ವಿವಿ ಶೈಕ್ಷಣಿಕ ಕಾರ್ಯಕ್ರಮಗಳ ಪ್ರವೇಶಕ್ಕೆ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಿದೆ - Vistara News

ಶಿಕ್ಷಣ

KSOU Admission : ಮುಕ್ತ ವಿವಿ ಶೈಕ್ಷಣಿಕ ಕಾರ್ಯಕ್ರಮಗಳ ಪ್ರವೇಶಕ್ಕೆ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಿದೆ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ( KSOU Admission ) ವಿವಿಧ ಶೈಕ್ಷಣಿಕ ಕಾರ್ಯಕ್ರಮಗಳ ಪ್ರವೇಶಕ್ಕೆ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಮಾರ್ಚ್‌ 31 ಕೊನೆಯ ದಿನವಾಗಿದೆ.

VISTARANEWS.COM


on

KSOU Admission ಮುಕ್ತ ವಿವಿ ಪ್ರವೇಶ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ವಿವಿಧ ಶೈಕ್ಷಣಿಕ ಕಾರ್ಯಕ್ರಮಗಳ ಪ್ರವೇಶಕ್ಕೆ ಆನ್‌ಲೈನ್‌ನಲ್ಲಿ (KSOU Admission) ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಮಾರ್ಚ್‌ 31 ಕೊನೆಯ ದಿನವಾಗಿದೆ.

ಆಸಕ್ತ ವಿದ್ಯಾರ್ಥಿಗಳು ವಿವಿಯ ವೆಬ್‌ಸೈಟ್‌ನಲ್ಲಿ ಆನ್‌ಲೈನ್‌ ಮೂಲಕ ಅರ್ಜಿಯನ್ನು ಸಲ್ಲಿಸಿ, ಆಯಾ ಶಿಕ್ಷಣಕ್ರಮಗಳಿಗೆ ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆಯನುಸಾರ ದಾಖಲಾತಿಗಳೊಂದಿಗೆ ವಿವಿ ನಿಲಯದ ಕೇಂದ್ರ ಕಚೇರಿ, ವಿವಿಧ ಪ್ರಾದೇಶಿಕ ಕೇಂದ್ರಗಳು ಮತ್ತು ಕಲಿಕಾರ್ಥಿ ಸಹಾಯ ಕೇಂದ್ರಗಳಲ್ಲಿ ಅದನ್ನು ಸಲ್ಲಿಸಿ, ಪ್ರವೇಶಾತಿ ಪಡೆಯಬಹುದಾಗಿದೆ.

ಆಯಾ ಶೈಕ್ಷಣಿಕ ಕಾರ್ಯಕ್ರಮಗಳಿಗೆ ಸಂಬಂಧಿಸಿದ ವಿವರ, ನಿಗದಿಪಡಿಸಿರುವ ಶೈಕ್ಷಣಿಕ ವಿದ್ಯಾರ್ಹತೆ, ವಿದ್ಯಾರ್ಥಿಗಳು ಸಲ್ಲಿಸಬೇಕಿರುವ ಶೈಕ್ಷಣಿಕ ಮತ್ತು ಇತರೆ ದಾಖಲಾತಿಗಳು ಹಾಗೂ ಶುಲ್ಕಗಳ ವಿವರಗಳನ್ನು ಆಯಾ ಶಿಕ್ಷಣ ಕ್ರಮಗಳ ವಿವರಣಾ ಪುಸ್ತಕ (ಪ್ರಾಸ್‌ಪೆಕ್ಟಸ್‌) ಹಾಗೂ ಪ್ರೋಗ್ರಾಮ್‌ ಗೈಡ್‌ನಲ್ಲಿ ನೀಡಲಾಗಿದೆ. ವಿವರಣಾ ಪುಸ್ತಕಾ ವಿವಿಯ ವೆಬ್‌ಸೈಟ್‌ನಲ್ಲಿ ಲಭ್ಯವಿದ್ದು, ವಿದ್ಯಾರ್ಥಿಗಳು ಮೊದಲು ಇದನ್ನು ಸಂಪೂರ್ಣವಾಗಿ ಓದಿಕೊಳ್ಳಬೇಕೆಂದು ಸೂಚಿಸಲಾಗಿದೆ.

ಈಗಾಗಲೇ ಪ್ರಥಮ/ದ್ವಿತೀಯ ಸಾಲಿನ ಯುಜಿ/ಪಿಜಿ ಶಿಕ್ಷಣ ಕ್ರಮವನ್ನು ಪೂರೈಸಿ, ನಾನಾ ಕಾರಣಗಳಿಗಾಗಿ ವಿದ್ಯಾಭ್ಯಾಸವನ್ನು ಪೂರ್ಣಗೊಳಿಸಿರದೇ ಇರುವ ವಿದ್ಯಾರ್ಥಿಗಳು ವಿಶ್ವವಿದ್ಯಾನಿಲಯದ ನಿಯಮಗಳನುಸಾರ ದ್ವಿತೀಯ/ ತೃತೀಯ ಯುಜಿ/ಪಿಜಿ ಕೋರ್ಸ್‌ಗಳಿಗೆ ನೇರವಾಗಿ ಪ್ರವೇಶಾತಿ ಪಡೆಯಬಹುದಾಗಿದೆ.

ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕೇಂದ್ರಗಳು ಮತ್ತು ಕಲಿಕಾರ್ಥಿ ಸಹಾಯ ಕೇಂದ್ರಗಳ ವಿವರ ಮತ್ತು ವಿಳಾಸ, ದೂರವಾಣಿ ಸಂಖ್ಯೆಗಳನ್ನು ವೆಬ್‌ಸೈಟ್‌ನಲ್ಲಿ ನೀಡಲಾಗಿದೆ. ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ 8690544544/8800335638 ಸಂಪರ್ಕಿಸಬಹುದಾಗಿದೆ ಎಂದು ವಿವಿಯು ಪ್ರಕಟಣೆಯಲ್ಲಿ ತಿಳಿಸಿದೆ.

ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್‌ ವಿಳಾಸ ಇಂತಿದೆ: https://ksoumysuru.ac.in

ಇದನ್ನೂ ಓದಿ | SSLC Exam 2023 | ಎಸ್ಸೆಸ್ಸೆಲ್ಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ; ಗಣಿತ, ಸಮಾಜ ಶಾಸ್ತ್ರ ಪರೀಕ್ಷಾ ದಿನ ಬದಲು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ದೇಶ

UGC NET Exam: ರದ್ದಾಗಿದ್ದ ಯುಜಿಸಿ ನೆಟ್‌ ಪರೀಕ್ಷೆಗೆ ಹೊಸ ದಿನಾಂಕ ಘೋಷಣೆ; ಪರೀಕ್ಷೆಗೆ ಹೊಸ ವಿಧಾನ, ಇಲ್ಲಿದೆ ವಿವರ‌

UGC NET Exam: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನಡೆಸಿದ ವಿಶ್ವವಿದ್ಯಾಲಯ ಧನ ಸಹಾಯ ಆಯೋಗ-ನೆಟ್‌ 2024 ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಕಾರಣಕ್ಕಾಗಿ ಕೇಂದ್ರ ಶಿಕ್ಷಣ ಸಚಿವಾಲಯವು ಪರೀಕ್ಷೆಯನ್ನು ರದ್ದುಗೊಳಿಸಿದೆ. ಜೂನ್‌ 18ರಂದು ಕರ್ನಾಟಕ ಸೇರಿ ದೇಶಾದ್ಯಂತ ಸುಮಾರು 11 ಲಕ್ಷಕ್ಕೂ ಅಧಿಕ ಅಭ್ಯರ್ಥಿಗಳು ನೆಟ್‌ ಬರೆದಿದ್ದರು. ಇದನ್ನು ಬಳಿಕ ರದ್ದುಗೊಳಿಸಲಾಗಿತ್ತು. ಈಗ ಹೊಸ ದಿನಾಂಕ ಘೋಷಣೆ ಮಾಡಲಾಗಿದೆ.

VISTARANEWS.COM


on

UGC NET Exam
Koo

ನವದೆಹಲಿ: ಅಕ್ರಮ ನಡೆದಿರುವ ಹಿನ್ನೆಲೆಯಲ್ಲಿ ರದ್ದಾಗಿದ್ದ ಯುಜಿಸಿ ನೆಟ್‌ (ಯುಜಿಸಿ-ರಾಷ್ಟ್ರೀಯ ಅರ್ಹತಾ ಪರೀಕ್ಷೆ) ಪರೀಕ್ಷೆಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ಹೊಸ ದಿನಾಂಕವನ್ನು ಘೋಷಣೆ ಮಾಡಿದೆ. ಯುಜಿಸಿ ನೆಟ್‌ ಪರೀಕ್ಷೆಯು ಆಗಸ್ಟ್‌ 21 ಹಾಗೂ ಸೆಪ್ಟೆಂಬರ್‌ 4ರಂದು ನಡೆಸಲಿದೆ. ಅದರಲ್ಲೂ, ಪರೀಕ್ಷೆಯಲ್ಲಿ ಅಕ್ರಮ ತಡೆಯುವ ದಿಸೆಯಲ್ಲಿ ಪೆನ್‌ ಹಾಗೂ ಪೇಪರ್‌ ಪದ್ಧತಿ ಬದಲಾಗಿ, ಕಂಪ್ಯೂಟರ್‌ ಆಧಾರಿತವಾಗಿ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ. ಇದರ ಬೆನ್ನಲ್ಲೇ, ಆಲ್‌ ಇಂಡಿಯಾ ಆಉಷ್‌ ಪೋಸ್ಟ್‌ ಗ್ರ್ಯಾಜುಯೇಟ್‌ ಪ್ರವೇಶ ಪರೀಕ್ಷೆಯು (AIAPGET) ಜುಲೈ 6ರಂದು ನಡೆಸಲು ತೀರ್ಮಾನಿಸಲಾಗಿದೆ.

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನಡೆಸಿದ ವಿಶ್ವವಿದ್ಯಾಲಯ ಧನ ಸಹಾಯ ಆಯೋಗ-ನೆಟ್‌ 2024 ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಕಾರಣಕ್ಕಾಗಿ ಕೇಂದ್ರ ಶಿಕ್ಷಣ ಸಚಿವಾಲಯವು ಪರೀಕ್ಷೆಯನ್ನು ರದ್ದುಗೊಳಿಸಿತ್ತು. ನ್ಯಾಷನಲ್ ಸೈಬರ್‌ ಕ್ರೈಮ್‌ ಥ್ರೆಟ್‌ ಅನಾಲಿಟಿಕ್ಸ್‌ ಯುನಿಟ್‌ ಆಫ್‌ ಇಂಡಿಯನ್‌ ಸೈಬರ್‌ ಕ್ರೈಮ್‌ ಕೋ-ಆರ್ಡಿನೇಷನ್‌ ಸೆಂಟರ್‌ನಿಂದ ಯುಜಿಸಿಗೆ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಕುರಿತು ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ರದ್ದುಗೊಳಿಸಲಾಗಿತ್ತು.

ಜೂನ್‌ 18ರಂದು ಕರ್ನಾಟಕ ಸೇರಿ ದೇಶಾದ್ಯಂತ 317 ನಗರಗಳ 1,205 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. ಸುಮಾರು 11 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ನೆಟ್‌ಗೆ ಹಾಜರಾಗಿದ್ದರು. ಈಗ ಪರೀಕ್ಷೆಯನ್ನು ರದ್ದುಗೊಳಿಸಿರುವ ಕಾರಣ ಶೀಘ್ರದಲ್ಲೇ ಹೊಸ ದಿನಾಂಕ ಘೋಷಿಸಲಾಗುತ್ತದೆ ಎಂದು ತಿಳಿದುಬಂದಿತ್ತು. ವಿಶ್ವವಿದ್ಯಾಲಯಗಳು ಹಾಗೂ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪಿಎಚ್‌.ಡಿ ಪ್ರವೇಶಾತಿಗೆ ಸಾಮಾನ್ಯ ಪ್ರವೇಶ ಪರೀಕ್ಷೆಯ (CET) ಬದಲು ಅಭ್ಯರ್ಥಿಯು ನೆಟ್‌ನಲ್ಲಿ ಗಳಿಸಿದ ಅಂಕಗಳನ್ನು ಪರಿಗಣಿಸಲು ಯುಜಿಸಿಯು ಈಗಾಗಲೇ ಅನುಮೋದನೆ ನೀಡಿದೆ. ಹಾಗಾಗಿ, ಅಭ್ಯರ್ಥಿಗಳಿಗೆ ನೆಟ್‌ ಪ್ರಮುಖ ಸಂಗತಿಯಾಗಿದೆ.

ಜಂಟಿ ಸಿಎಸ್‌ಐಆರ್‌ ಯುಜಿಸಿ ನೆಟ್‌ ಪರೀಕ್ಷೆಗೂ ದಿನಾಂಕ ಘೋಷಣೆ

ದೇಶದ ಕಾಲೇಜುಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ಜ್ಯೂನಿಯರ್‌ ರಿಸರ್ಚ್‌ ಫೆಲೋಶಿಪ್‌ (JRF) ಪಡೆಯಲು ಹಾಗೂ ಉಪನ್ಯಾಸಕರಾಗಿ ಅಥವಾ ಸಹಾಯ ಪ್ರಾಧ್ಯಾಪಕರಾಗಿ ಆಯ್ಕೆಯಾಗಲು ಅರ್ಹತೆ ಪಡೆಯಬೇಕಾದರೆ ಜಂಟಿ ಸಿಎಸ್‌ಐಆರ್‌ ಯುಜಿಸಿ ನೆಟ್‌ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಬೇಕು. ಜೂನ್‌ 25 ಹಾಗೂ ಜೂನ್‌ 27ರಂದು ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿತ್ತು. ಈ ಪರೀಕ್ಷೆಯನ್ನು ಜುಲೈ 25-27ರವರೆಗೆ ನಡೆಸಲು ತೀರ್ಮಾನಿಸಲಾಗಿದೆ.

ಇದನ್ನೂ ಓದಿ: Joint CSIR UGC NET: ನೆಟ್‌ ಪರೀಕ್ಷೆ ರದ್ದಾದ ಬೆನ್ನಲ್ಲೇ ಜಂಟಿ ಸಿಎಸ್‌ಐಆರ್‌ ಯುಜಿಸಿ ನೆಟ್‌ ಮುಂದೂಡಿಕೆ!

Continue Reading

ಕರ್ನಾಟಕ

Air Wing NCC: ಏರ್ ವಿಂಗ್ ಎನ್‌ಸಿಸಿ ಸೇರಲು ಅರ್ಜಿ ಆಹ್ವಾನ; ಜುಲೈ 9 ಕೊನೆಯ ದಿನ

Air Wing NCC: ನಂ. 2 ಕರ್ನಾಟಕ ಟೆಕ್ನಿಕಲ್ ಏರ್ ಸ್ಕ್ವಾಡ್ರನ್ ಎನ್.ಸಿ.ಸಿ. ವತಿಯಿಂದ ಏರ್ ವಿಂಗ್ ಎನ್‌ಸಿಸಿ 2024-27 ನೇ ಬ್ಯಾಚ್‌ಗೆ ಜೂ. 22ರಿಂದ ನೋಂದಣಿ ಪ್ರಾರಂಭಗೊಂಡಿದ್ದು ಜುಲೈ 09 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದೆ ಎಂದು ಕಮಾಂಡಿಂಗ್ ಅಧಿಕಾರಿ ಗ್ರೂಪ್ ಕ್ಯಾಪ್ಟನ್ ರಾಜೇಶ್ ಚಂದ್ರ ತಿಳಿಸಿದ್ದಾರೆ.

VISTARANEWS.COM


on

Application Invitation to Join Air Wing NCC July 09 is the last day for submission of application
Koo

ಬೆಂಗಳೂರು: ನಂ. 2 ಕರ್ನಾಟಕ ಟೆಕ್ನಿಕಲ್ ಏರ್ ಸ್ಕ್ವಾಡ್ರನ್ ಎನ್.ಸಿ.ಸಿ ವತಿಯಿಂದ ಏರ್ ವಿಂಗ್ ಎನ್‌ಸಿಸಿ (Air Wing NCC) 2024-27 ನೇ ಬ್ಯಾಚ್‌ಗೆ ಜೂ. 22ರಿಂದ ನೋಂದಣಿ ಪ್ರಾರಂಭಗೊಂಡಿದ್ದು, ಜುಲೈ 9 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದೆ ಎಂದು ಕಮಾಂಡಿಂಗ್ ಅಧಿಕಾರಿ ಗ್ರೂಪ್ ಕ್ಯಾಪ್ಟನ್ ರಾಜೇಶ್ ಚಂದ್ರ ತಿಳಿಸಿದ್ದಾರೆ.

ಇದನ್ನೂ ಓದಿ: Bengaluru Power Cut: ಬೆಂಗಳೂರು ನಿವಾಸಿಗಳೇ ಗಮನಿಸಿ; ಜೂ.29ರಂದು ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

ಅಭ್ಯರ್ಥಿಗಳು ಪಿಯುಸಿ ಪ್ರಥಮ ಅಥವಾ ಪ್ರಥಮ ವರ್ಷದ ಪದವಿಯಲ್ಲಿ ಬೆಂಗಳೂರಿನ ಯಾವುದಾದರೂ ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರಬೇಕು. ಎನ್.ಸಿ.ಸಿ ಸೇರಬಯಸುವ ವಿದ್ಯಾರ್ಥಿಗಳು ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಚಿತ್ರದಲ್ಲಿ ನೀಡಿರುವ ಕ್ಯೂ.ಆರ್. ಕೋಡ್ ಮೂಲಕ ನೋಂದಣಿ ಮಾಡಿಕೊಳ್ಳಬಹುದು ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: Run4Research: ಬೆಂಗಳೂರಿನಲ್ಲಿ ಜೂ.30ರಂದು ʼರನ್4ರೀಸರ್ಚ್ʼ ಓಟ

ವಿಳಾಸ: ನಂ. 2 ಕರ್ನಾಟಕ ಟೆಕ್ನಿಕಲ್ ಏರ್ ಸ್ಕ್ವಾಡ್ರನ್ ಎನ್.ಸಿ.ಸಿ., ಯುವಿಸಿಇ ಕ್ಯಾಂಪಸ್, ಕೆ.ಆರ್. ಸರ್ಕಲ್ ಹತ್ತಿರ, ಬೆಂಗಳೂರು, ದೂರವಾಣಿ ಸಂಖ್ಯೆ 8788506566/9108939392 ಗೆ ಸಂಪರ್ಕಿಸಬಹುದಾಗಿದೆ.

Continue Reading

ಬೆಂಗಳೂರು

DCET 2024 : ಡಿಸಿಇಟಿಯಲ್ಲಿ ರ‍್ಯಾಂಕ್‌ ಪಡೆದ ವಿಕಲ ಚೇತನರಿಗೆ ಜುಲೈ 1ರಂದು ವೈದ್ಯಕೀಯ ತಪಾಸಣೆ

DCET 2024 : ಜುಲೈ 1ರಂದು ಡಿಸಿಇಟಿಯಲ್ಲಿ ರ‍್ಯಾಂಕ್‌ ಪಡೆದ ವಿಕಲ ಚೇತನರ ವೈದ್ಯಕೀಯ ತಪಾಸಣೆ ನಡೆಸಲಾಗುತ್ತಿದ್ದು, ಬಳಿಕ ಜು.2ರಿಂದ 4ರವರೆಗೆ ಡಿಸಿಇಟಿ ದಾಖಲಾತಿ ಪರಿಶೀಲನೆ ನಡೆಯಲಿದೆ.

VISTARANEWS.COM


on

By

DCET 2024
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಡಿಸಿಇಟಿ-2024ರಲ್ಲಿ (DCET 2024 ) ರ‍್ಯಾಂಕ್‌ ಪಡೆದಿರುವ ವಿಕಲಚೇತನ ಅಭ್ಯರ್ಥಿಗಳಿಗೆ ಅಂಗವಿಕಲತೆಯ ಅರ್ಹತೆಯನ್ನು ಪರೀಕ್ಷಿಸಲು ಜುಲೈ 1ರಂದು ಮಲ್ಲೇಶ್ವರ ಕೆಇಎ ಕಚೇರಿಯಲ್ಲಿ ವೈದ್ಯಕೀಯ ತಪಾಸಣೆಯನ್ನು ನಡೆಸಲಾಗುತ್ತದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.

ಯುಜಿಸಿಇಟಿ-24ಕ್ಕೆ ಸಂಬಂಧಿಸಿದಂತೆ ಜೂನ್ 10ರಿಂದ 12ರವರೆಗೆ ನಡೆದ ವೈದ್ಯಕೀಯ ತಪಾಸಣೆಗೆ ಗೈರುಹಾಜರಾದ ವಿಕಲಚೇತನ ಅಭ್ಯರ್ಥಿಗಳು ಕೂಡ ಜುಲೈ 1ರಂದು ತಪಾಸಣೆಗೆ ಬರಬಹುದು. ಈ ಮೊದಲು ತಪಾಸಣೆಗೆ ಹಾಜರಾಗಿದ್ದವರು ಪುನಃ ತಪಾಸಣೆಗೆ ಬರುವಂತಿಲ್ಲ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ.

ಡಿಸಿಇಟಿ ಅರ್ಜಿಯ ಪ್ರತಿ, ಪ್ರವೇಶ ಪತ್ರ, ಅಭ್ಯರ್ಥಿಯ ಭಾವಚಿತ್ರ ಇರುವ ಗುರುತಿನ ಚೀಟಿ, ವೈದ್ಯಕೀಯ ಪ್ರಮಾಣಪತ್ರ, ಕಿವುಡುತನದ ಸಮಸ್ಯೆ ಇರುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯಿಂದ ಪಡೆದ ಪ್ರಮಾಣ ಪತ್ರಗಳನ್ನು ತಪಾಸಣೆ ಸಂದರ್ಭದಲ್ಲಿ ತಂದಿರಬೇಕು.

ಇದನ್ನೂ ಓದಿ: vasavi condiments : ವಾಸವಿ ಕಾಂಡಿಮೆಂಟ್ಸ್‌ಗೆ ಬೀಗ; ನಿದ್ರೆ ಮಾತ್ರೆ ಸೇವಿಸಿ ಮಾಲಕಿ ಗೀತಾ ಆತ್ಮಹತ್ಯೆಗೆ ಯತ್ನ

ಡಿಸಿಇಟಿ: ಜು.2ರಿಂದ 4ರವರೆಗೆ ದಾಖಲಾತಿ ಪರಿಶೀಲನೆ

ಬೆಂಗಳೂರು: ಮೂರನೇ ಸೆಮಿಸ್ಟರ್ ಇಂಜಿನಿಯರಿಂಗ್ ಕೋರ್ಸುಗಳ ಪ್ರವೇಶಾತಿಗೆ ಹಾಗು ಮೊದಲನೇ ವರ್ಷದ ಆರ್ಕಿಟೆಕ್ಚರ್ ಕೋರ್ಸಿಗೆ ಅರ್ಹತೆಯನ್ನು ಪಡೆಯುವುದಕ್ಕಾಗಿ ಜು.2ರಿಂದ 4ವರೆಗೆ ಸರ್ಕಾರಿ ಮತ್ತು ಅನುದಾನಿತ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಡಿಸಿಇಟಿ ರ‍್ಯಾಂಕ್‌ ಪಡೆದ ಅಭ್ಯರ್ಥಿಗಳ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.

ದಾಖಲಾತಿ ಪರಿಶೀಲನೆ ನಡೆಸುವ ಕಾಲೇಜುಗಳ ಪಟ್ಟಿಯನ್ನು ಕೆಇಎ ವೆಬ್ ಸೈಟ್ ನಲ್ಲಿ ಪ್ರಕಟಿಸಿದ್ದು, ಅಭ್ಯರ್ಥಿಗಳು ತಮಗೆ ಹತ್ತಿರ ಇರುವ ಯಾವುದಾದರೊಂದು ಕಾಲೇಜಿಗೆ ಖುದ್ದು ಹೋಗಬೇಕು. ಆನ್ ಲೈನ್ ಅರ್ಜಿ ಸಲ್ಲಿಸುವಾಗ ಕೋರಿರುವ ಕ್ಲೇಮುಗಳಿಗೆ ಪೂರಕವಾದ ಎಲ್ಲಾ ಶೈಕ್ಷಣಿಕ ಮೂಲ ದಾಖಲೆಗಳನ್ನು ಮತ್ತು ವಿಶೇಷ ಪ್ರವರ್ಗದ (ಎನ್ ಸಿಸಿ, ಕ್ರೀಡೆ, ಸೈನಿಕರು, ಮಾಜಿ ಸೈನಿಕರು, ಸಿಎಪಿಎಫ್, ಮಾಜಿ-ಸಿಎಪಿಎಫ್- ಕ್ಲೇಮ್ ಮಾಡಿದ್ದಲ್ಲಿ ಮಾತ್ರ ಅರ್ಹತೆ) ಪ್ರಮಾಣ ಪತ್ರಗಳನ್ನು ಕಡ್ಡಾಯವಾಗಿ ತೆಗೆದುಕೊಂಡು ಹೋಗಬೇಕು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

GR vishwanath : ಬೆಂಗಳೂರು ನಗರ ವಿವಿಯಿಂದ ಕ್ರಿಕೆಟ್ ದಿಗ್ಗಜ ಗುಂಡಪ್ಪ ವಿಶ್ವನಾಥ್​ಗೆ ಗೌರವ ಡಾಕ್ಟರೇಟ್

GR vishwanath : ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಮೂರನೇ ವಾರ್ಷಿಕ ಘಟಿಕೋತ್ಸವ ಜೂನ್ 29 ಶನಿವಾರ ಬೆಳಿಗ್ಗೆ 11.30 ಕ್ಕೆ ನಗರದ ಅರಮನೆ ರಸ್ತೆಯ ಸೆಂಟ್ರಲ್ ಕಾಲೇಜು ಆವರಣದಲ್ಲಿರುವ ಜ್ಞಾನಜ್ಯೋತಿ ಸಭಾಂಗಣದಲ್ಲಿ ಜರುಗಲಿದೆ. ರಾಜ್ಯಪಾಲ ಹಾಗೂ ಕುಲಾಧಿಪತಿಗಳಾದ ಥಾವರ್ ಚಂದ್ ಗೆಹ್ಲೋಟ್ ಅಧ್ಯಕ್ಷತೆ ವಹಿಸಲಿದ್ದಾರೆ.

VISTARANEWS.COM


on

GR Vishwnath
Koo

ಬೆಂಗಳೂರು: ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಮೂರನೇ ಘಟಿಕೋತ್ಸವದಲ್ಲಿ ಕ್ರಿಕೆಟ್ ದಿಗ್ಗಜ ಗುಂಡಪ್ಪ ವಿಶ್ವನಾಥ್ ರಿಗೆ (GR vishwanath) ಗೌರವ ಡಾಕ್ಟರೇಟ್ ಪದವಿ ನೀಡಲಾಗುತ್ತಿದೆ ಎಂದು ಕುಲಪತಿ ಲಿಂಗರಾಜ ಗಾಂಧಿ ತಿಳಿಸಿದರು. ಸೆಂಟ್ರಲ್ ಕಾಲೇಜು ಆವರಣದ ಜ್ಞಾನ ಜ್ಯೋತಿ ಸಂಭಾಂಗಣದ ಬೋರ್ಡ್ ರೂಮ್ ನಲ್ಲಿ ಆಯೋಜಿಸಲಾಗಿದ್ದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಮೂರನೇ ಘಟಿಕೋತ್ಸವ ಜೂನ್ 29 ರಂದು ನಡೆಯಲಿದೆ. ಈ ಸಂದರ್ಭದಲ್ಲಿ ಗೌರವ ಡಾಕ್ಟರೇಟ್ ಪದವಿಯನ್ನು ಇಬ್ಬರಿಗೆ ನೀಡಲಾಗುತ್ತಿದೆ. ಶಿಕ್ಷಣ ಮತ್ತು ಸಮಾಜ ಸೇವೆಯಲ್ಲಿ ಸಾಧನೆ ಮಾಡಿರುವ ಗೋಕುಲ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಂ.ಆರ್. ಜಯರಾಮ್ ಒಬ್ಬರಾದರೆ ಮತ್ತೊಬ್ಬರು ಖ್ಯಾತ ಮಾಜಿ ಕ್ರಿಕೆಟ್ ಆಟಗಾರ ಜಿ.ಆರ್. ವಿಶ್ವನಾಥ್ ಆಗಿದ್ದಾರೆ ಎಂದು ತಿಳಿಸಿದರು.

ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಮೂರನೇ ವಾರ್ಷಿಕ ಘಟಿಕೋತ್ಸವ ಜೂನ್ 29 ಶನಿವಾರ ಬೆಳಿಗ್ಗೆ 11.30 ಕ್ಕೆ ನಗರದ ಅರಮನೆ ರಸ್ತೆಯ ಸೆಂಟ್ರಲ್ ಕಾಲೇಜು ಆವರಣದಲ್ಲಿರುವ ಜ್ಞಾನಜ್ಯೋತಿ ಸಭಾಂಗಣದಲ್ಲಿ ಜರುಗಲಿದೆ. ರಾಜ್ಯಪಾಲ ಹಾಗೂ ಕುಲಾಧಿಪತಿಗಳಾದ ಥಾವರ್ ಚಂದ್ ಗೆಹ್ಲೋಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಹಾಗೂ ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಸಮ ಕುಲಾಧಿಪತಿ ಡಾ. ಎಂ. ಸಿ. ಸುಧಾಕರ್ ಮತ್ತು ಆಲ್ ಇಂಡಿಯಾ ಕೌನ್ಸಿಲ್ ಫಾರ್ ಟೆಕ್ನಿಕಲ್​ ಎಜುಕೇಶನ್ ಅಧ್ಯಕ್ಷ ಪ್ರೊ. ಟಿ. ಜಿ. ಸೀತಾರಾಮ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಯುನಿಫೈಡ್ ಯೂನಿವರ್ಸಿಟಿ ಕಾಲೇಜು ಮ್ಯಾನೇಜ್ಮೆಂಟ್ ಸಿಸ್ಟಮ್ ತಂತ್ರಾಂಶದ ಪ್ರಕಾರ ಸ್ನಾತಕ ಹಾಗೂ ಸ್ಟಾಂಡ್ ಅಲೋನ್ ಕೋರ್ಸುಗಳ ಪ್ರವೇಶ ಪ್ರಕ್ರಿಯೆ ಹಾಗೂ ಪರೀಕ್ಷಾ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿರ್ವಹಿಸಲಾಗುತ್ತಿದೆ. ಅಂತಹ ವಿದ್ಯಾರ್ಥಿಗಳಿಗೆ ಘಟಿಕೋತ್ಸವದಲ್ಲಿ ಪದವಿ ಪ್ರದಾನ ಮಾಡುತ್ತಿರುವ ರಾಜ್ಯ ಪ್ರಥಮ ವಿಶ್ವವಿದ್ಯಾನಿಲಯ ನಮ್ಮದಾಗಿದೆ ಎಂದು ಹೆಮ್ಮೆ ವ್ಯಕ್ತಪಡಿಸಿದರು.

63 ವಿದ್ಯಾರ್ಥಿಗಳಿಗೆ ಚಿನ್ನದ ಪದಕ

ಈ ಘಟಿಕೋತ್ಸವದಲ್ಲಿ ಒಟ್ಟು 63 ವಿದ್ಯಾರ್ಥಿಗಳು ಪ್ರಥಮ ರಾಂಕ್ ಪ್ರಮಾಣ ಪತ್ರಗಳನ್ನು, ಚಿನ್ನದ ಪದಕ ಮತ್ತು ನಗದು ಬಹುಮಾನವನ್ನು ಸ್ವೀಕರಿಸಲಿದ್ದಾರೆ. ಈ ರ್ಯಾಂಕ್​ ವಿಜೇತರಲ್ಲಿ 40 ವಿದ್ಯಾರ್ಥಿಗಳು ಬೆಂಗಳೂರು ನಗರ ವಿಶ್ವವಿದ್ಯಾನಿಲಯದಿಂದ ಸ್ಥಾಪಿತ ಚಿನ್ನದ ಪದಕ ಮತ್ತು ನಗದು ಬಹುಮಾನಗಳನ್ನು ಸ್ವೀಕರಿಸಲಿದ್ದಾರೆ. ವಿವಿಧ ದಾನಿಗಳು ಸ್ಥಾಪಿಸಿರುವ ಒಟ್ಟು 15 ಚಿನ್ನದ ಪದಕಗಳನ್ನು ಸಹ ಸ್ನಾತಕ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು ಸ್ವೀಕರಿಸಲಿದ್ದಾರೆ. ಬಿ.ಎ. ಮ್ಯೂಸಿಕ್, ಟೂರಿಸಂ ಮ್ಯಾನೇಜ್ಮೆಂಟ್ ವಿಭಾಗಗಳಲ್ಲಿ ಅರ್ಹ ವಿದ್ಯಾರ್ಥಿಗಳು ಇಲ್ಲದ ಕಾರಣ ಈ ವರ್ಷ ಎರಡು ಚಿನ್ನದ ಪದಕ ವಿತರಿಸಲಾಗುತ್ತಿಲ್ಲ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: Paris Olympics 2024 : ಒಲಿಂಪಿಕ್ಸ್​​ ಸ್ಮರಣೆಗಾಗಿ ಜೆಎಸ್​ಡಬ್ಲ್ಯುನಿಂದ ಪ್ಯಾರಿಸ್​ನಲ್ಲಿ ವಿಶೇಷ ಪ್ರದರ್ಶನ

ಬೆಂಗಳೂರು ನಗರ ವಿಶ್ವವಿದ್ಯಾನಿಲಯ ಸ್ಥಾಪಿಸಿದ 35 ಚಿನ್ನದ ಪದಕ ಮತ್ತು ನಗದು ಬಹುಮಾನಗಳನ್ನು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಹಾಗೂ ಬಿ.ಎ., ಬಿ.ಎಸ್ಸಿ, ಬಿ.ಕಾಂ., ಬಿ.ಬಿ.ಎ. ಬಿ.ಇಡಿ., ಕೋರ್ಸುಗಳಲ್ಲಿ ಅತಿ ಹೆಚ್ಚು ಅಂಕ ಪಡೆದವರಿಗೆ ನೀಡಲಾಗುವುದು ಎಂದು ಲಿಂಗರಾಜ ಗಾಂಧಿ ಹೇಳಿದರು.

Continue Reading
Advertisement
Job Alert
ಉದ್ಯೋಗ8 mins ago

Job Alert: ಗಮನಿಸಿ: ಗ್ರಾಮೀಣ ಬ್ಯಾಂಕ್‌ನ 9,995 ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ; ನಾಳೆ ಕೊನೆಯ ದಿನ

Kannada New Movie Kenda in premier In world wide
ಸ್ಯಾಂಡಲ್ ವುಡ್12 mins ago

Kannada New Movie: ವಿಶ್ವಮಟ್ಟದಲ್ಲಿ ದಾಖಲೆ ಬರೆದ ಕನ್ನಡದ `ಕೆಂಡ’!

Orange Peel Benefits
ಆರೋಗ್ಯ13 mins ago

Orange Peel Benefits: ಕಿತ್ತಳೆ ಸಿಪ್ಪೆ ಎಸೆಯಬೇಡಿ; ಹೃದಯದ ಆರೋಗ್ಯಕ್ಕೆ ಇದು ಒಳ್ಳೆಯದು!

Shivamogga News
ಕರ್ನಾಟಕ13 mins ago

Shivamogga News: ಶಿವಮೊಗ್ಗದಲ್ಲಿ ಆಂಬುಲೆನ್ಸ್-ಬೈಕ್‌ ಡಿಕ್ಕಿ; ಸ್ಥಳದಲ್ಲೇ ಮೂವರ ಸಾವು

IND vs SA Final
ಕ್ರೀಡೆ16 mins ago

IND vs SA Final: ಫೈನಲ್​ ಪಂದ್ಯಕ್ಕೂ ಮುನ್ನ ಭಾರತ ತಂಡಕ್ಕೆ ನಡುಕ ಹುಟ್ಟಿಸಿದ ಅಂಪೈರ್​!

Kalki 2898 AD box office day 2 prediction Prabhas
ಟಾಲಿವುಡ್25 mins ago

Kalki 2898 AD: ಎರಡನೇ ದಿನವೂ ಒಳ್ಳೆಯ ಗಳಿಕೆ ಕಂಡ  ‘ಕಲ್ಕಿ 2898 ಎಡಿ’ ಸಿನಿಮಾ!

US Presidential Election
ವಿದೇಶ41 mins ago

US Presidential Election: ಬಹಿರಂಗ ಚರ್ಚೆ ಬಳಿಕ ಅಭ್ಯರ್ಥಿಯ ಬದಲಾವಣೆ? ಬೈಡೆನ್‌ ಬದಲಿಗೆ ಮಿಶೆಲ್‌ ಒಬಾಮಾ ಕಣಕ್ಕೆ?

IND vs SA Final
ಕ್ರೀಡೆ43 mins ago

IND vs SA Final: ಇಂದು ಫೈನಲ್​ ಪಂದ್ಯ ನಡೆಯುವುದೇ ಅನುಮಾನ; ಕಾರಣವೇನು?

Sadhguru Jaggi Vasudev
ಆರೋಗ್ಯ43 mins ago

Sadhguru Jaggi Vasudev: ಮಕ್ಕಳಲ್ಲಿ ಅಲರ್ಜಿ ಸಮಸ್ಯೆಗೆ ಏನು ಪರಿಹಾರ? ಸದ್ಗುರು ಸಲಹೆ ಇಲ್ಲಿದೆ ಕೇಳಿ

Kannada New Movie niveditha Shivarajkumar frefly cinema sudharani join
ಸಿನಿಮಾ54 mins ago

Kannada New Movie: ನಿವೇದಿತಾ ಶಿವರಾಜಕುಮಾರ್ ನಿರ್ಮಾಣದ ‘ಫೈರ್‌ಫ್ಲೈ’ ತಂಡ ಸೇರಿದ ಸುಧಾರಾಣಿ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ15 hours ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ22 hours ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು2 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ2 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ5 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 week ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

ಟ್ರೆಂಡಿಂಗ್‌