Pathaan Movie | ʻಪಠಾಣ್‌ʼ ಅಡ್ವಾನ್ಸ್‌ ಬುಕ್ಕಿಂಗ್‌ ಓಪನ್‌: 1.17 ಲಕ್ಷ ಟಿಕೆಟ್‌ ಸೋಲ್ಡ್‌ ಔಟ್‌! - Vistara News

ಬಾಲಿವುಡ್

Pathaan Movie | ʻಪಠಾಣ್‌ʼ ಅಡ್ವಾನ್ಸ್‌ ಬುಕ್ಕಿಂಗ್‌ ಓಪನ್‌: 1.17 ಲಕ್ಷ ಟಿಕೆಟ್‌ ಸೋಲ್ಡ್‌ ಔಟ್‌!

ʻಪಠಾಣ್‌ʼ ಸಿನಿಮಾ (Pathaan Movie) ಜನವರಿ 25ರಂದು ವಿಶ್ವಾದ್ಯಂತ ಬಿಡುಗಡೆಯಾಗುತ್ತಿದೆ. ಈಗಾಗಲೇ ಪ್ರೀ ಬುಕ್ಕಿಂಗ್‌ ಶುರುವಾಗಿದೆ. ದೇಶಾದ್ಯಂತ ಈಗಾಗಲೇ ಮಲ್ಟಿಪ್ಲೆಕ್ಸ್‌ಗಳಲ್ಲಿ 1.17 ಲಕ್ಷ ಟಿಕೆಟ್‌ಗಳು ಸೋಲ್ಡ್‌ ಔಟ್‌ ಆಗಿವೆ.

VISTARANEWS.COM


on

Pathaan Film 300 shows increased by exhibitors
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ಶಾರುಖ್‌-ದೀಪಿಕಾ ಅಭಿನಯದ ʻಪಠಾಣ್‌ʼ ಸಿನಿಮಾ (Pathaan Movie) ಜನವರಿ 25ರಂದು ವಿಶ್ವಾದ್ಯಂತ ಬಿಡುಗಡೆಯಾಗುತ್ತಿದೆ. ಈಗಾಗಲೇ ಪ್ರೀ ಬುಕ್ಕಿಂಗ್‌ ಶುರುವಾಗಿದೆ. ದೇಶಾದ್ಯಂತ ಈಗಾಗಲೇ ಮಲ್ಟಿಪ್ಲೆಕ್ಸ್‌ಗಳಲ್ಲಿ 1.17 ಲಕ್ಷ ಟಿಕೆಟ್‌ಗಳು ಸೋಲ್ಡ್‌ ಔಟ್‌ ಆಗಿವೆ. ವ್ಯಾಪಾರ ವಿಶ್ಲೇಷಕ ತರಣ್ ಆದರ್ಶ್ ಪ್ರಕಾರ, ʻʻಚಿತ್ರವು ಈಗಾಗಲೇ INOXನಲ್ಲಿ 51,000 ಟಿಕೆಟ್‌ಗಳು, ಪಿವಿಆರ್‌ನಲ್ಲಿ 38,000 ಟಿಕೆಟ್‌ಗಳು ಮತ್ತು ಸಿನೆಪೊಲಿಸ್‌ನಲ್ಲಿ 27,000 ಕ್ಕೂ ಹೆಚ್ಚು ಟಿಕೆಟ್‌ಗಳನ್ನು ಮಾರಾಟ ಆಗಿವೆ. ಅದು ಕೂಡ ಎಲ್ಲವೂ ಗುರುವಾರ ರಾತ್ರಿ 11 ಗಂಟೆಯ ಮುಂಚೆʼʼಎಂದು ಹೇಳಿಕೊಂಡಿದ್ದಾರೆ.

ನಾಲ್ಕು ವರ್ಷಗಳ ನಂತರ ಶಾರುಖ್‌ ಮತ್ತೆ ತೆರೆ ಮೇಲೆ ಮತ್ತೆ ಕಾಣಿಸಿಕೊಳ್ಳುತ್ತಿದ್ದಾರೆ. ಶಾರುಖ್‌ ಅಭಿಮಾನಿಗಳು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಚಲನಚಿತ್ರ ವ್ಯಾಪಾರ ವಿಶ್ಲೇಷಕರು ಟ್ವೀಟ್‌ ಮೂಲಕ ಪಠಾಣ್‌ ಕಲೆಕ್ಷನ್‌ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ. ಒಬ್ಬರು ಬಾಹುಬಲಿ-2 ಸಿನಿಮಾಗಿಂತಲೂ ಪಠಾಣ್‌ ಭಾರಿ ಕಲೆಕ್ಷನ್‌ ಮಾಡುವ ನಿರೀಕ್ಷೆ ಇದೆ ಎಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ | Pathaan Movie | ಪಠಾಣ್‌ ಸಿನಿಮಾದ ನಗ್ನತೆಯನ್ನು ಭಾರತೀಯ ಸಿನಿಮಾಗಳಲ್ಲಿ ಪ್ರದರ್ಶಿಸಬಾರದು: ಅನಂತ್‌ನಾಗ್

ಯಶ್​ ರಾಜ್​ ಬ್ಯಾನರ್​ನಡಿ ನಿರ್ಮಾಣವಾಗುತ್ತಿರುವ ಪಠಾಣ್​ ಸಿನಿಮಾವನ್ನು ಸಿದ್ದಾರ್ಥ್​ ಆನಂದ್​ ನಿರ್ದೇಶನ ಮಾಡಿದ್ದಾರೆ. ಶಾರುಖ್ ಖಾನ್, ದೀಪಿಕಾ ಪಡುಕೋಣೆ ಮತ್ತು ಜಾನ್ ಅಬ್ರಹಾಂ ಮೊದಲ ಬಾರಿಗೆ ಪಠಾಣ್ ಚಿತ್ರದಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ.ನವೆಂಬರ್​ನಲ್ಲಿ ಟೀಸರ್​ ಬಿಡುಗಡೆಯಾಗಿದೆ.

ಇದನ್ನೂ ಓದಿ | Pathaan Movie | ಬಾಹುಬಲಿ-2 ರೆಕಾರ್ಡ್‌ ಬ್ರೇಕ್‌ ಮಾಡಲಿದೆಯಾ ʻಪಠಾಣ್‌ʼ? ಸಿನಿಮಾ ವ್ಯಾಪಾರ ವಿಶ್ಲೇಷಕರು ಹೇಳೋದೇನು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Kangana Ranaut : ಪಂಜಾಬ್​ನಲ್ಲಿ ಭಯೋತ್ಪಾದನೆ ಹೆಚ್ಚುತ್ತಿದೆ; ತಮ್ಮ ಮೇಲೆ ಹಲ್ಲೆ ನಡೆಸಿದ ಬಗ್ಗೆ ಕಂಗನಾ ಪ್ರತಿಕ್ರಿಯೆ ಹೀಗಿತ್ತು

Kangana Ranaut : ನಾನು ಆರಾಮವಾಗಿ ಇದ್ದೇನೆ. ಆದರೆ, ಪಂಜಾಬ್​ನಲ್ಲಿ ಭಯೋತ್ಪಾದನೆ ಹೆಚ್ಚುತ್ತಿದೆ. ನಾವು ಇದನ್ನು ಹೇಗೆ ನಿಭಾಯಿಸಬೇಕಾಗುತ್ತದೆ ಎಂಬುದೇ ನನಗೆ ಕಳವಳಕಾರಿಯಾಗಿದೆ” ಎಂದು ನಟಿ ಹೇಳಿದ್ದಾರೆ. ಅಂದ ಹಾಗೆ ನಟಿಗೆ ಹೊಡೆದಿರುವುದು ಪಂಜಾಬ್ ಮೂಲದ ಕಾನ್​ಸ್ಟೆಬಲ್​. ಪಂಜಾಬ್​ನ ರೈತರು ಡೆಲ್ಲಿಯಲ್ಲಿ ಪ್ರತಿಭಟನೆ ನಡೆಸುವ ವೇಳೆ ನಟಿ ನೀಡಿದ್ದ ಹೇಳಿಕೆಗೆ ಪ್ರತಿಕಾರವಾಗಿ ಅವರು ಅಲ್ಲೆ ನಡೆಸಿದ್ದಾರೆ.

VISTARANEWS.COM


on

Kangana Ranaut
Koo

ನವದೆಹಲಿ: ನಟಿ-ರಾಜಕಾರಣಿ ಕಂಗನಾ ರಣಾವತ್​​ ಅವರಿಗೆ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಮಹಿಳಾ ಮಹಿಳಾ ಕಾನ್​ಸ್ಟೆಬಲ್​ ಹಲ್ಲೆ ಮಾಡಿದ ಘಟನೆ ಕುರಿತು ಅವರು ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಈ ವೇಳೆ ಪಂಜಾಬ್​​ನಲ್ಲಿ ಭಯೋತ್ಪಾದನೆ ಹೆಚ್ಚಾಗುತ್ತಿದೆ. ಅದು ಕಳವಳಕಾರಿ ಸಂಗತಿ. ಹಲ್ಲೆ ನಡೆದ ಬಳಿಕ ನಾನು ಆರಾಮವಾಗಿದ್ದೇನೆ ಎಂದು ಹೇಳಿಕೆ ನೀಡಿದ್ದಾರೆ.

ಘಟನೆ ಬಳಿಕ ವಿಡಿಯೊ ಮೂಲಕ ಪ್ರತಿಕ್ರಿಯಿಸಿದ ನಟಿ, “ನಾನು ಸುರಕ್ಷಿತವಾಗಿದ್ದೇನೆ. ವಿಮಾನ ನಿಲ್ದಾಣದಲ್ಲಿ ಭದ್ರತಾ ತಪಾಸಣೆಯ ಸಮಯದಲ್ಲಿ ಈ ಘಟನೆ ನಡೆದಿದೆ. ತಪಾಸಣೆ ಮುಗಿದ ಕ್ಷಣ, ಬೇರೆ ಕ್ಯಾಬಿನ್​ನಲ್ಲಿದ್ದ ಸಿಐಎಸ್ಎಫ್ನ ಮಹಿಳಾ ಪೇದೆ ನನಗಾಗಿ ಕಾಯುತ್ತಿದ್ದಳು. ಅವಳು ನನ್ನ ಮುಖಕ್ಕೆ ಒಂದು ಬದಿಯಿಂದ ಹೊಡೆದು ನಿಂದಿಸಿದಳು. ಅವಳು ಇದನ್ನು ಏಕೆ ಮಾಡಿದಳು ಎಂದು ನಾನು ಆಕೆಯನ್ನು ಕೇಳಿದೆ, ಮತ್ತು ಅವಳು ಹೇಳಿದಳು, ಇದು ರೈತರ ಪ್ರತಿಭಟನೆಗಾಗಿ ಎಂದು ಹೇಳಿದಳು ಎಂದು ಕಂಗನಾ ಅವರು ವಿಡಿಯೊ ಮೆಸೇಜ್​ನಲ್ಲಿ ತಿಳಿಸಿದ್ದಾರೆ.

ನಾನು ಆರಾಮವಾಗಿ ಇದ್ದೇನೆ. ಆದರೆ, ಪಂಜಾಬ್​ನಲ್ಲಿ ಭಯೋತ್ಪಾದನೆ ಹೆಚ್ಚುತ್ತಿದೆ. ನಾವು ಇದನ್ನು ಹೇಗೆ ನಿಭಾಯಿಸಬೇಕಾಗುತ್ತದೆ ಎಂಬುದೇ ನನಗೆ ಕಳವಳಕಾರಿಯಾಗಿದೆ” ಎಂದು ನಟಿ ಹೇಳಿದ್ದಾರೆ. ಅಂದ ಹಾಗೆ ನಟಿಗೆ ಹೊಡೆದಿರುವುದು ಪಂಜಾಬ್ ಮೂಲದ ಕಾನ್​ಸ್ಟೆಬಲ್​. ಪಂಜಾಬ್​ನ ರೈತರು ಡೆಲ್ಲಿಯಲ್ಲಿ ಪ್ರತಿಭಟನೆ ನಡೆಸುವ ವೇಳೆ ನಟಿ ನೀಡಿದ್ದ ಹೇಳಿಕೆಗೆ ಪ್ರತಿಕಾರವಾಗಿ ಅವರು ಅಲ್ಲೆ ನಡೆಸಿದ್ದಾರೆ.

ಇದನ್ನೂ ಓದಿ: Stock market Crash : ಜೂ. 4ರ ಷೇರುಪೇಟೆ ಕುಸಿತ ಮೋದಿ, ಅಮಿತ್​ ಶಾ ನಡೆಸಿದ ಮಹಾ ಹಗರಣ; ರಾಹುಲ್ ಗಾಂಧಿ ಆರೋಪ

ಏತನ್ಮಧ್ಯೆ, ಕಂಗನಾ ರಣಾವತ್​ಗೆ ಕಪಾಳಮೋಕ್ಷ ಮಾಡಿದ ಮಹಿಳಾ ಪೇದೆ ತಮ್ಮ ಕೃತ್ಯವನ್ನು ಸಮರ್ಥಿಸಿಕೊಂಡಿದ್ದಾರೆ. ಕಂಗಾನ ಪ್ರತಿಭಟನೆಗೆ ಹೋಗಿದ್ದ ಮಹಿಳೆಯರ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದರು. ಅವರೆಲ್ಲರೂ 100 ರೂಪಾಯಿಗೆ ಸಿಗುವವರು ಎಂದಿದ್ದರು. ಆ ವೇಳೆ ನನ್ನ ತಾಯಿ ಪ್ರತಿಭಟನೆಯಲ್ಲಿದ್ದರು. ನನ್ನ ತಾಯಿ ಬಗ್ಗೆ ಹೇಳಿದ್ದಕ್ಕೆ ಪ್ರತಿಕಾರ ತೀರಿಸಿಕೊಂಡಿರುವುದಾಗಿ ನಟಿ ಹೇಳಿದ್ದಾರೆ. ಘಟನೆ ಬಳಿಕ ಮಹಿಳಾ ಪೇದೆಯನ್ನು ಅಮಾನತುಗೊಳಿಸಲಾಗಿದ್ದು, ಎಫ್ಐಆರ್ ದಾಖಲಿಸಲಾಗಿದೆ.

ಏನು ಹೇಳಿದ್ದರು ಕಂಗನಾ

2020 ರಲ್ಲಿ, ಕಂಗನಾ ರನೌತ್ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದ ಪಂಜಾಬ್​ನ ಮಹಿಳೆಯೊಬ್ಬರನ್ನು ತಪ್ಪಾಗಿ ಅಂದಾಜಿಸಿದ್ದರು. ಅದಕ್ಕಿಂತ ಹಿಂದೆ ಶಾಹೀನ್ ಬಾಗ್​ನಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾನೂನು (ಸಿಎಎ) ವಿರೋಧಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಬಿಲ್ಕಿಸ್ ಬಾನೊ ಅವರು ಎಂದುಕೊಂಡಿದ್ದರು. ಪ್ರತಿಭಟನೆಗೆ ಬರುವ ಮಹಿಳೆಯರೆಲ್ಲರೂ 100 ರೂಪಾಯಿಗೆ ಸಿಗುತ್ತಾರೆ ಎಂದು ಹೇಳಿದ್ದರು. ಇದು ದೊಡ್ಡ ವಿವಾದ ಸೃಷ್ಟಿಸಿತ್ತು. ಅಂದ ಹಾಗೆ ಕಂಗನಾಗೆ ಹೊಡೆದ ಕಾನ್​ಸ್ಟೇಬಲ್​ ಕುಲ್ವಿಂದರ್ ಕೌರ್​ ತಾಯಿಯೂ ಆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಕಂಗನಾ ಹೇಳಿಕೆಯಿಂದ ಕೋಪಗೊಂಡಿದ್ದ ಅವರು ಪ್ರತಿಕಾರ ತೀರಿಸಲು ಕಾದಿದ್ದರು. ಅಂತೆಯೇ ಚಂಡಿಗಢದಲ್ಲಿ ತಪಾಸಣಾ ಕೇಂದ್ರಕ್ಕೆ ಬರುತ್ತಿದ್ದಂತೆ ಕಪಾಳ ಮೋಕ್ಷ ಮಾಡಿದ್ದಾರೆ.

100 ರೂಪಾಯಿಗೆ ಸಿಗುವ ಮಹಿಳೆಯರು ಎಂದು ಕಂಗನಾ ಕೊಟ್ಟಿರುವ ಹೇಳಿಕೆಯು ಎಕ್ಸ್ ನಲ್ಲಿ(ಟ್ವಿಟರ್​) ಕಂಗನಾ ಮತ್ತು ಗಾಯಕ-ನಟ ದಿಲ್ಜೀತ್ ದೋಸಾಂಜ್ ನಡುವೆ ಗಲಾಟೆಗೆ ಕಾರಣವಾಗಿತ್ತು.
ರಿಹಾನ್ನಾ ಬಗ್ಗೆಯೂ ಟೀಕೆ

ಫೆಬ್ರವರಿ 2021 ರಲ್ಲಿ, ಅಂತರರಾಷ್ಟ್ರೀಯ ಪಾಪ್ ಸೆನ್ಸೇಷನ್ ರಿಹಾನ್ನಾ ಅವರು ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದರು. ಅದಕ್ಕೆ ಪ್ರತಿಕ್ರಿಯಿಸಿದ್ದ ಕಂಗನಾ ರನೌತ್ ಪ್ರತಿಭಟನಾಕಾರರನ್ನು “ಭಯೋತ್ಪಾದಕರು” ಎಂದು ಕರೆದಿದ್ದರು ಮತ್ತು ಅವರು ಭಾರತವನ್ನು ವಿಭಜಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದರು.

Continue Reading

ಪ್ರಮುಖ ಸುದ್ದಿ

Kangana Ranaut: ಕಂಗನಾಗೆ ಮಹಿಳಾ ಪೇದೆ ಹೊಡೆಯಲು ಕಾರಣವೇನು? ರೈತರ ಬಗ್ಗೆ ಅವರು ನೀಡಿದ ವಿವಾದಾತ್ಮಕ ಹೇಳಿಕೆ ಏನು?

Kangana Ranaut : 2020 ರಲ್ಲಿ, ಕಂಗನಾ ರನೌತ್ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದ ಪಂಜಾಬ್​ನ ಮಹಿಳೆಯೊಬ್ಬರನ್ನು ತಪ್ಪಾಗಿ ಅಂದಾಜಿಸಿದ್ದರು. ಅದಕ್ಕಿಂತ ಹಿಂದೆ ಶಾಹೀನ್ ಬಾಗ್​ನಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾನೂನು (ಸಿಎಎ) ವಿರೋಧಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಬಿಲ್ಕಿಸ್ ಬಾನೊ ಅವರು ಎಂದುಕೊಂಡಿದ್ದರು. ಪ್ರತಿಭಟನೆಗೆ ಬರುವ ಮಹಿಳೆಯರೆಲ್ಲರೂ 100 ರೂಪಾಯಿಗೆ ಸಿಗುತ್ತಾರೆ ಎಂದು ಹೇಳಿದ್ದರು.

VISTARANEWS.COM


on

Kangana Ranaut
Koo

ನವದೆಹಲಿ: ಲೋಕ ಸಭಾ ಚುನಾವಣೆಯಲ್ಲಿ ಹಿಮಾಚಲ ಪ್ರದೇಶದ ಮಂಡಿಯಿಂದ ಸಂಸದರಾಗಿ ಆಯ್ಕೆಯಾದ ಕಂಗನಾ ರಣಾವತ್​ (Kangana Ranaut), 2020-21 ರಲ್ಲಿ ನಡೆದ ರೈತರ ಪ್ರತಿಭಟನೆಯ ಬಗ್ಗೆ ಹಿಂದೆ ನೀಡಿದ ಹೇಳಿಕೆಯಿಂದ ಕೆರಳಿದ್ದ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಮಹಿಳಾ ಸಿಬ್ಬಂದಿಯೊಬ್ಬರು ಗುರುವಾರ ಅವರು ಎದುರು ಸಿಕ್ಕಾಗ ಕಪಾಳಮೋಕ್ಷ ಮಾಡಿದ್ದರು. ನಟಿ ಹಾಗೂ ಸಂಸದೆಯ ವಿರುದ್ಧ ಕೈ ಮಾಡಿದ ಕುಲ್ವಿಂದರ್​ ಕೌರ್​ ವಿ ರುದ್ದ ಪ್ರಕರಣ ದಾಖಲಾಗಿದೆ. ಇದೇ ವೇಳೆ ನಟಿ ಈ ಹಿಂದೆ ನೀಡಿದ್ದ ಹೇಳಿಕೆಯೂ ಮುನ್ನೆಲೆಗೆ ಬಂದಿದೆ.

ನರೇಂದ್ರ ಮೋದಿ ಸರ್ಕಾರವು ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದ ಮೂರು ಕಾನೂನುಗಳನ್ನ ಜಾರಿಗೆ ತರಲು ಮುಂದಾದಾಗ ಅದರ ವಿರುದ್ಧ ಆಂದೋಲನ ನಡೆಸುತ್ತಿದ್ದ ಪ್ರತಿಭಟನಾಕಾರರನ್ನು ‘ಖಲಿಸ್ತಾನಿ ಬೆಂಬಲಿಗರು’ ಎಂದು ಒಂದು ಗುಂಪು ಕರೆದಿತ್ತು. ಈ ವಿವಾದಕ್ಕೆ ಈಡಾದಾಗ ಕಂಗಾನಾ ಆ ಗಾಯಕ್ಕೆ ಉಪ್ಪು ಸವರುವಂಥ ಹೇಳಿಕೆ ನೀಡಿದ್ದರು.

2020 ರಲ್ಲಿ, ಕಂಗನಾ ರನೌತ್ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದ ಪಂಜಾಬ್​ನ ಮಹಿಳೆಯೊಬ್ಬರನ್ನು ತಪ್ಪಾಗಿ ಅಂದಾಜಿಸಿದ್ದರು. ಅದಕ್ಕಿಂತ ಹಿಂದೆ ಶಾಹೀನ್ ಬಾಗ್​ನಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾನೂನು (ಸಿಎಎ) ವಿರೋಧಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಬಿಲ್ಕಿಸ್ ಬಾನೊ ಅವರು ಎಂದುಕೊಂಡಿದ್ದರು. ಪ್ರತಿಭಟನೆಗೆ ಬರುವ ಮಹಿಳೆಯರೆಲ್ಲರೂ 100 ರೂಪಾಯಿಗೆ ಸಿಗುತ್ತಾರೆ ಎಂದು ಹೇಳಿದ್ದರು. ಇದು ದೊಡ್ಡ ವಿವಾದ ಸೃಷ್ಟಿಸಿತ್ತು. ಅಂದ ಹಾಗೆ ಕಂಗನಾಗೆ ಹೊಡೆದ ಕಾನ್​ಸ್ಟೇಬಲ್​ ಕುಲ್ವಿಂದರ್ ಕೌರ್​ ತಾಯಿಯೂ ಆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಕಂಗನಾ ಹೇಳಿಕೆಯಿಂದ ಕೋಪಗೊಂಡಿದ್ದ ಅವರು ಪ್ರತಿಕಾರ ತೀರಿಸಲು ಕಾದಿದ್ದರು. ಅಂತೆಯೇ ಚಂಡಿಗಢದಲ್ಲಿ ತಪಾಸಣಾ ಕೇಂದ್ರಕ್ಕೆ ಬರುತ್ತಿದ್ದಂತೆ ಕಪಾಳ ಮೋಕ್ಷ ಮಾಡಿದ್ದಾರೆ.

100 ರೂಪಾಯಿಗೆ ಸಿಗುವ ಮಹಿಳೆಯರು ಎಂದು ಕಂಗನಾ ಕೊಟ್ಟಿರುವ ಹೇಳಿಕೆಯು ಎಕ್ಸ್ ನಲ್ಲಿ(ಟ್ವಿಟರ್​) ಕಂಗನಾ ಮತ್ತು ಗಾಯಕ-ನಟ ದಿಲ್ಜೀತ್ ದೋಸಾಂಜ್ ನಡುವೆ ಗಲಾಟೆಗೆ ಕಾರಣವಾಗಿತ್ತು.

ರಿಹಾನ್ನಾ ಬಗ್ಗೆಯೂ ಟೀಕೆ

ಫೆಬ್ರವರಿ 2021 ರಲ್ಲಿ, ಅಂತರರಾಷ್ಟ್ರೀಯ ಪಾಪ್ ಸೆನ್ಸೇಷನ್ ರಿಹಾನ್ನಾ ಅವರು ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದರು. ಅದಕ್ಕೆ ಪ್ರತಿಕ್ರಿಯಿಸಿದ್ದ ಕಂಗನಾ ರನೌತ್ ಪ್ರತಿಭಟನಾಕಾರರನ್ನು “ಭಯೋತ್ಪಾದಕರು” ಎಂದು ಕರೆದಿದ್ದರು ಮತ್ತು ಅವರು ಭಾರತವನ್ನು ವಿಭಜಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದರು.

ಇದನ್ನೂ ಓದಿ: Stock market Crash : ಜೂ. 4ರ ಷೇರುಪೇಟೆ ಕುಸಿತ ಮೋದಿ, ಅಮಿತ್​ ಶಾ ನಡೆಸಿದ ಮಹಾ ಹಗರಣ; ರಾಹುಲ್ ಗಾಂಧಿ ಆರೋಪ

ರಿಹಾನ್ನಾ ಅವರ ಎಕ್ಸ್​ ಪೋಸ್ಟ್​ಗೆ ಉತ್ತರಿಸಿದ ಕಂಗನಾ ರನೌತ್ ” ಅವರು ರೈತರಲ್ಲ, ಅವರು ಭಾರತವನ್ನು ವಿಭಜಿಸಲು ಪ್ರಯತ್ನಿಸುತ್ತಿರುವ ಭಯೋತ್ಪಾದಕರು. ಇವರಿಂದಾಗಿ ದುರ್ಬಲವಾಗುತ್ತಿರುವ ನಮ್ಮ ದೇಶವನ್ನು ಚೀನಾ ಸ್ವಾಧೀನಪಡಿಸಿಕೊಳ್ಳಬಹುದು. ಚೀನಾದ ವಸಾಹತು ಮಾಡಬಹುದು. ನೀವು ನಮ್ಮ ಬಗ್ಗೆ ಹೇಳಲು ಬರಬೇಡಿ ಎಂದು ಹೇಳಿಕೆ ನೀಡಿದ್ದರು.

ರಿಹಾನ್ನಾ ವಿರುದ್ಧದ ಮತ್ತು ₹ 100 ಪೋಸ್ಟ್​​ಗಳನ್ನು ಕಂಗನಾ ರಣಾವತ್​ ಅಳಿಸಿದ್ದರು. 2021 ರ ಡಿಸೆಂಬರ್​ನಲ್ಲಿ ಕೃಷಿ ಕಾನೂನುಗಳನ್ನು ರದ್ದುಪಡಿಸಲಾಯಿತು ಮತ್ತು ಕೆಲವು ದಿನಗಳ ನಂತರ, ರೈತರ ವಿರುದ್ಧದ ಹೇಳಿಕೆಗಳಿಗೆ ಕ್ಷಮೆಯಾಚಿಸುವಂತೆ ಒತ್ತಾಯಿಸಿ ಪ್ರತಿಭಟನಾಕಾರರು ಕಂಗನಾ ಅರ ಕಾರನ್ನು ಪಂಜಾಬ್​ನ ಕಿರಾತ್ಪುರ್ ಸಾಹಿಬ್​ನಲ್ಲಿ ತಡೆದಿದ್ದರು.

ಕಂಗನಾ ಪ್ರತಿಕ್ರಿಯೆ ಏನು?

ನಾನು ಸುರಕ್ಷಿತವಾಗಿದ್ದೇನೆ. ವಿಮಾನ ನಿಲ್ದಾಣದಲ್ಲಿ ಭದ್ರತಾ ತಪಾಸಣೆಯ ಸಮಯದಲ್ಲಿ ಈ ಘಟನೆ ನಡೆದಿದೆ. ತಪಾಸಣೆ ಮುಗಿದ ಕ್ಷಣ, ಬೇರೆ ಕ್ಯಾಬಿನ್​ನಲ್ಲಿದ್ದ ಸಿಐಎಸ್ಎಫ್​​ನ ಮಹಿಳಾ ಕಾನ್​ಸ್ಟೆಬಲ್​ ನನ್ನ ಬಳಿಗೆ ಬಂದು ನನ್ನ ಮುಖಕ್ಕೆ ಬದಿಯಿಂದ ಹೊಡೆದು ನಿಂದಿಸಿದಳು. ನೀವು ಇದನ್ನು ಏಕೆ ಮಾಡಿದ್ದೀರಿ ಎಂದು ನಾನು ಅವಳನ್ನು ಕೇಳಿದೆ. ಆಕೆ ರೈತರ ಪ್ರತಿಭಟನೆ ಬಗ್ಗೆ ನಾನು ನೀಡಿದ ಹೇಳಿಕೆಗಾಗಿ ಅಂದಳು ಎಂದು ನಟಿ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪಂಜಾಬ್​​ನಲ್ಲಿ ಭಯೋತ್ಪಾದನೆ ಹೆಚ್ಚುತ್ತಿದೆ. ಇದನ್ನು ಹೇಗೆ ನಿಭಾಯಿಸಬೇಕು ಎಂಬುದು ನನಗೆ ಕಳವಳಕಾರಿಯಾಗಿದೆ ಎಂದೂ ಕಂಗನಾ ಹೇಳಿದ್ದಾರೆ.

Continue Reading

ಪ್ರಮುಖ ಸುದ್ದಿ

Kangana Ranaut: ಕಂಗನಾಗೆ ಏರ್​ಪೋರ್ಟ್​ ಭದ್ರತಾ ಸಿಬ್ಬಂದಿಯಿಂದಲೇ ಕಪಾಳಮೋಕ್ಷ! ಇದು ರೈತ ಚಳವಳಿಯ ಸೇಡಂತೆ!

Kangana Ranaut :ಕಂಗನಾ ರಣಾವತ್​ ಈ ಬಗ್ಗೆ ದೂರು ನೀಡಿದ್ದು, ಮಹಿಳಾ ಅಧಿಕಾರಿಯನ್ನು ಕೆಲಸದಿಂದ ತೆಗೆದುಹಾಕಬೇಕು ಮತ್ತು ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಕಂಗನಾ ಅವರಿಗೆ ಹೊಡೆದ ಮಹಿಳೆಯನ್ನು ಕುಲ್ವಿಂದರ್ ಕೌರ್ ಎಂದು ಹೆಸರಿಸಲಾಗಿದೆ. ಚುನಾವಣೆಯಲ್ಲಿ ಗೆದ್ದ ನಂತರ ಬಿಜೆಪಿ ಸಭೆಯಲ್ಲಿ ಭಾಗವಹಿಸಲು ಕಂಗನಾ ರಣಾವತ್​ ವಿಮಾನದ ಮೂಲಕ ದೆಹಲಿಗೆ ಹೊರಟಿದ್ದರು. .

VISTARANEWS.COM


on

Kangana Ranaut
Koo

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಹಿಮಾಚಲ ಪ್ರದೇಶದ ಮಂಡಿಯಿಂದ ಗೆದ್ದು ಸಂಸದರಾಗಿ ಆಯ್ಕೆಯಾಗಿದ್ದ ನಟಿ ಕಂಗನಾ ರಣಾವತ್ (Kangana Ranaut )​​ ಅವರಿಗೆ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಸಿಐಎಸ್ಎಫ್ ಮಹಿಳಾ ಸಿಬ್ಬಂದಿಯೊಬ್ಬರು ಕಪಾಳಮೋಕ್ಷ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮೂಲಗಳ ಪ್ರಕಾರ, ಭದ್ರತಾ ತಪಾಸಣೆಯ ಸಮಯದಲ್ಲಿ ನಟ-ರಾಜಕಾರಣಿ ತನ್ನ ಫೋನ್ ಅನ್ನು ಟ್ರೇಯಲ್ಲಿ ಇಡಲು ನಿರಾಕರಿಸಿದ್ದರು. ಅಲ್ಲದೆ ಆ ಬಳಿಕ ಭದ್ರತಾ ಸಿಬ್ಬಂದಿಯನ್ನು ತಳ್ಳಿದ್ದರು. ಇದರಿಂದ ಕೋಪಗೊಂಡ ಅವರು ಮುಖದ ಮೇಲೆ ಹೊಡೆದಿದ್ದಾರೆ ಎನ್ನಲಾಗಿದೆ. ಆದರೆ ಇನ್ನೊಂದು ಮೂಲಗಳ ಪ್ರಕಾರ ನಟಿ ಈ ಹಿಂದೆ ರೈತ ಸಂಘಟನೆಗಳು ಡೆಲ್ಲಿಯಲ್ಲಿ ಪ್ರತಿಭಟನೆ ನಡೆಸುವಾಗ ಅವರ ವಿರುದ್ಧ ಹೇಳಿಕೆ ನೀಡಿದ್ದರು. ಈ ಕೋಪ ರೈತ ಕುಟುಂಬಕ್ಕೆ ಸೇರಿದ್ದ ಭದ್ರತಾ ಸಿಬ್ಬಂದಿಗೆ ಇತ್ತು. ಏರ್​ಪೋರ್ಟ್​ನಲ್ಲಿ ಅವರು ಎದುರಾದಾಗ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ದಿಲ್ಲಿಯಲ್ಲಿ ಧರಣಿ ಕುಳಿತ ರೈತರ ವಿರುದ್ಧ ಕಂಗನಾ ಹೇಳಿಕೆ ನೀಡಿದ್ದಳು, ಆ ರೈತರ ಗುಂಪಿನಲ್ಲಿ ನನ್ನ ಅಮ್ಮ ಕೂಡ ಇದ್ದರು ಎಂದು ಆ ಮಹಿಳಾ ಭದ್ರತಾ ಸಿಬ್ಬಂದಿ ಹೇಳಿಕೆ ನೀಡಿದ್ದಾಳೆ.

ಕಂಗನಾ ರಣಾವತ್​ ಈ ಬಗ್ಗೆ ದೂರು ನೀಡಿದ್ದು, ಮಹಿಳಾ ಅಧಿಕಾರಿಯನ್ನು ಕೆಲಸದಿಂದ ತೆಗೆದುಹಾಕಬೇಕು ಮತ್ತು ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಕಂಗನಾ ಅವರಿಗೆ ಹೊಡೆದ ಮಹಿಳೆಯನ್ನು ಕುಲ್ವಿಂದರ್ ಕೌರ್ ಎಂದು ಹೆಸರಿಸಲಾಗಿದೆ. ಚುನಾವಣೆಯಲ್ಲಿ ಗೆದ್ದ ನಂತರ ಬಿಜೆಪಿ ಸಭೆಯಲ್ಲಿ ಭಾಗವಹಿಸಲು ಕಂಗನಾ ರಣಾವತ್​ ವಿಮಾನದ ಮೂಲಕ ದೆಹಲಿಗೆ ಹೊರಟಿದ್ದರು.

ಇದನ್ನೂ ಓದಿ: Prajwal Revanna : ಪ್ರಜ್ವಲ್​ ರೇವಣ್ಣ ಮತ್ತೆ ನಾಲ್ಕು ದಿನ ಎಸ್​​ಐಟಿ ಕಸ್ಟಡಿಗೆ

ಕಂಗನಾ ಅವರು ಗುರುವಾರ ಮಧ್ಯಾಹ್ನ 3.30ಕ್ಕೆ ಏರ್​ಪೋರ್ಟ್​ಗೆ ಬಂದಿದ್ದರು. ಕಂಗನಾ ರಣಾವತ್​ ವಿಮಾನ ನಿಲ್ದಾಣದ ಭದ್ರತಾ ತಪಾಸಣೆಗಾಗಿ ಬರುತ್ತಿದ್ದಾಗ ಕುಲ್ವಿಂದರ್ ಕೌರ್​ ಕೈ ಎತ್ತಿದರು. ಕಂಗನಾ ಕೂಡ ಈ ಬಗ್ಗೆ ದೂರು ದಾಖಲಿಸಿದ್ದಾರೆ.

ಕಂಗನಾಗೆ ಕಪಾಳಮೋಕ್ಷ ಮಾಡಿದ ಸಿಐಎಸ್ಎಫ್ ಸಿಬ್ಬಂದಿ ರೈತರ ಚಳವಳಿ ಕುರಿತು ನೀಡಿದ್ದ ಹೇಳಿಕೆಯಿಂದ ನನಗೆ ನೋವಾಗಿತ್ತು ಎಂದು ವಿಚಾರಣೆ ವೇಳೆ ಹೇಳಿದ್ದಾರೆ. ಅವರನ್ನು ಪ್ರಸ್ತುತ, ವಿಮಾನ ನಿಲ್ದಾಣದಲ್ಲಿರುವ ಕಮಾಂಡೆಂಟ್ ಕೋಣೆಯಲ್ಲಿ ಕುಳಿತಿರಿಸಲಾಗಿದೆ. ಕಂಗನಾ ದೆಹಲಿಗೆ ತೆರಳಿದ್ದಾರೆ.

ಕಂಗನಾ ರನೌತ್ ಹಿಮಾಚಲ ಪ್ರದೇಶದ ಮಂಡಿಯಿಂದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಸ್ಪರ್ಧಿಸಿದ್ದರು. ನಟಿಯ ಮುಂದೆ ಕಾಂಗ್ರೆಸ್ ಪಕ್ಷದ ನಾಯಕ ವಿಕ್ರಮಾದಿತ್ಯ ಸಿಂಗ್ ಇದ್ದರು. ಕಂಗನಾ ಅವರನ್ನು 74,755 ಮತಗಳಿಂದ ಸೋಲಿಸಿದರು.

ನೇರಳೆ ಬಣ್ಣದ ಸೀರೆಯುಟ್ಟು ದೆಹಲಿಗೆ ಹೊರಟ ಕಂಗನಾ ರಣಾವತ್!

ಬೆಂಗಳೂರು: ಕಂಗನಾ ರಣಾವತ್ (Kangana Ranaut) ಅವರು ರಾಜಕೀಯದಲ್ಲಿ ಹೊಸ ಪ್ರಯಾಣವನ್ನು ಪ್ರಾರಂಭಿಸಲು ಸಿದ್ಧರಾಗಿದ್ದಾರೆ. ನಾಲ್ಕು ಬಾರಿ ರಾಷ್ಟ್ರ ಪ್ರಶಸ್ತಿ ಪಡೆದ ನಟಿ ಇದೀಗ ಬಣ್ಣದ ಲೋಕಕ್ಕೆ ಬೈಬೈ ಹೇಳುತ್ತಿದ್ದಾರೆ ಎಂದು ವರದಿಯಾಗಿದೆ. ಕಂಗನಾ ತನ್ನ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ದೆಹಲಿಗೆ ಹೊರಡುವ ಮೊದಲು ತಾಯಿ ಆಶಾ ರಣಾವತ್‌ ಅವರಿಂದ ಆಶೀರ್ವಾದ ಪಡೆದು ಹೋಗುತ್ತಿರುವ ಫೋಟೊಗಳನ್ನು ಹಂಚಿಕೊಂಡಿದ್ದಾರೆ. ನೇರಳೆ-ಗುಲಾಬಿ ಬಣ್ಣದ ಸೀರೆಯನ್ನು ಧರಿಸಿ ಮಿಂಚಿದ್ದಾರೆ.

ಮೊದಲ ಚಿತ್ರಕ್ಕೆ “ದೆಹಲಿ ಕರೆಯುತ್ತಿದೆ” ಎಂದು ಶೀರ್ಷಿಕೆ ನೀಡಿದ್ದಾರೆ. ಎರಡನೇ ಫೋಟೋದಲ್ಲಿ ತಾಯಿ ಆಶಾ ಅವರನ್ನು ತಬ್ಬಿಕೊಳ್ಳುತ್ತಿರುವುದನ್ನು ಕಾಣಬಹುದು. ಮೂರನೇ ಫೋಟೊದಲ್ಲಿ ಸೆಲ್ಫಿ ತೆಗೆದುಕೊಂಡು, “ಸಂಸತ್ತಿಗೆ ಹೋಗುವ ದಾರಿಯಲ್ಲಿʼʼ ಎಂದು ಬರೆದುಕೊಂಡಿದ್ದಾರೆ. ಕಂಗನಾ ರಣಾವತ್ ಬಾಲಿವುಡ್ ತೊರೆಯಲು ನಿರ್ಧಾರ ಮಾಡಿದ್ದರೆ, ಇಂದಿರಾ ಗಾಂಧಿಯವರ ಜೀವನಾಧಾರಿತ ‘ಎಮರ್ಜೆನ್ಸಿ’ ಸಿನಿಮಾ ಕಂಗನಾ ಅವರ ಕೊನೆಯ ಚಿತ್ರವಾಗಲಿದೆ. ಈ ಸಿನಿಮಾ ಹಲವು ದಿನಗಳಿಂದ ಚರ್ಚೆಯಲ್ಲಿದೆ. ರಿಲೀಸ್‌ಗೆ ಸಮಯ ಸಿಗುತ್ತಿಲ್ಲ. ಈಗ ರಾಜಕೀಯದ ಗದ್ದಲದಲ್ಲಿ ಕಂಗನಾ ಸಿನಿಮಾ ಯಾವಾಗ ರಿಲೀಸ್ ಆಗಲಿದೆ ಎಂದು ಫ್ಯಾನ್ಸ್‌ಗೆ ಕುತೂಹಲ ಹೆಚ್ಚಿದೆ.

ಕಂಗನಾ ಬಾಲಿವುಡ್ ತೊರೆಯಲು ನಿರ್ಧರಿಸಿದರೆ, ಅಭಿಮಾನಿಗಳು ಖಂಡಿತವಾಗಿಯೂ ಅವರನ್ನು ಬೆಳ್ಳಿತೆರೆಯಲ್ಲಿ ಮಿಸ್ ಮಾಡಿಕೊಳ್ಳುತ್ತಾರೆ. ಕಂಗನಾ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ವಿಭಿನ್ನ ಪಾತ್ರಗಳ ಮೂಲಕ ತೆರೆ ಮೇಲೆ ಬರುವ ಕಂಗನಾ ಸಿನಿಮಾಗಾಗಿಯೇ ಕಾಯುವ ಫ್ಯಾನ್ಸ್ ಕೂಡ ಇದ್ದಾರೆ.

Continue Reading

ಬಾಲಿವುಡ್

Kangana Ranaut: ನೇರಳೆ ಬಣ್ಣದ ಸೀರೆಯುಟ್ಟು ದೆಹಲಿಗೆ ಹೊರಟ ಕಂಗನಾ ರಣಾವತ್!

Kangana Ranaut: ನಾಲ್ಕು ಬಾರಿ ರಾಷ್ಟ್ರ ಪ್ರಶಸ್ತಿ ಪಡೆದ ನಟಿ ಇದೀಗ ಬಣ್ಣದ ಲೋಕಕ್ಕೆ ಬೈಬೈ ಹೇಳುತ್ತಿದ್ದಾರೆ ಎಂದು ವರದಿಯಾಗಿದೆ. ಕಂಗನಾ ತನ್ನ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ದೆಹಲಿಗೆ ಹೊರಡುವ ಮೊದಲು ತಾಯಿ ಆಶಾ ರನೌತ್‌ ಅವರಿಂದ ಆಶೀರ್ವಾದ ಪಡೆದು ಹೋಗುತ್ತಿರುವ ಫೋಟೊಗಳನ್ನು ಹಂಚಿಕೊಂಡಿದ್ದಾರೆ.ನೇರಳೆ-ಗುಲಾಬಿ ಬಣ್ಣದ ಸೀರೆಯನ್ನು ಧರಿಸಿ ಮಿಂಚಿದ್ದಾರೆ.

VISTARANEWS.COM


on

Kangana Ranaut leaves for Delhi in pretty purple saree
Koo

ಬೆಂಗಳೂರು: ಕಂಗನಾ ರಣಾವತ್ (Kangana Ranaut) ಅವರು ರಾಜಕೀಯದಲ್ಲಿ ಹೊಸ ಪ್ರಯಾಣವನ್ನು ಪ್ರಾರಂಭಿಸಲು ಸಿದ್ಧರಾಗಿದ್ದಾರೆ. ನಾಲ್ಕು ಬಾರಿ ರಾಷ್ಟ್ರ ಪ್ರಶಸ್ತಿ ಪಡೆದ ನಟಿ ಇದೀಗ ಬಣ್ಣದ ಲೋಕಕ್ಕೆ ಬೈಬೈ ಹೇಳುತ್ತಿದ್ದಾರೆ ಎಂದು ವರದಿಯಾಗಿದೆ. ಕಂಗನಾ ತನ್ನ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ದೆಹಲಿಗೆ ಹೊರಡುವ ಮೊದಲು ತಾಯಿ ಆಶಾ ರಣಾವತ್‌ ಅವರಿಂದ ಆಶೀರ್ವಾದ ಪಡೆದು ಹೋಗುತ್ತಿರುವ ಫೋಟೊಗಳನ್ನು ಹಂಚಿಕೊಂಡಿದ್ದಾರೆ. ನೇರಳೆ-ಗುಲಾಬಿ ಬಣ್ಣದ ಸೀರೆಯನ್ನು ಧರಿಸಿ ಮಿಂಚಿದ್ದಾರೆ.

ಮೊದಲ ಚಿತ್ರಕ್ಕೆ “ದೆಹಲಿ ಕರೆಯುತ್ತಿದೆ” ಎಂದು ಶೀರ್ಷಿಕೆ ನೀಡಿದ್ದಾರೆ. ಎರಡನೇ ಫೋಟೋದಲ್ಲಿ ತಾಯಿ ಆಶಾ ಅವರನ್ನು ತಬ್ಬಿಕೊಳ್ಳುತ್ತಿರುವುದನ್ನು ಕಾಣಬಹುದು. ಮೂರನೇ ಫೋಟೊದಲ್ಲಿ ಸೆಲ್ಫಿ ತೆಗೆದುಕೊಂಡು, “ಸಂಸತ್ತಿಗೆ ಹೋಗುವ ದಾರಿಯಲ್ಲಿʼʼ ಎಂದು ಬರೆದುಕೊಂಡಿದ್ದಾರೆ. ಕಂಗನಾ ರಣಾವತ್ ಬಾಲಿವುಡ್ ತೊರೆಯಲು ನಿರ್ಧಾರ ಮಾಡಿದ್ದರೆ, ಇಂದಿರಾ ಗಾಂಧಿಯವರ ಜೀವನಾಧಾರಿತ ‘ಎಮರ್ಜೆನ್ಸಿ’ ಸಿನಿಮಾ ಕಂಗನಾ ಅವರ ಕೊನೆಯ ಚಿತ್ರವಾಗಲಿದೆ. ಈ ಸಿನಿಮಾ ಹಲವು ದಿನಗಳಿಂದ ಚರ್ಚೆಯಲ್ಲಿದೆ. ರಿಲೀಸ್‌ಗೆ ಸಮಯ ಸಿಗುತ್ತಿಲ್ಲ. ಈಗ ರಾಜಕೀಯದ ಗದ್ದಲದಲ್ಲಿ ಕಂಗನಾ ಸಿನಿಮಾ ಯಾವಾಗ ರಿಲೀಸ್ ಆಗಲಿದೆ ಎಂದು ಫ್ಯಾನ್ಸ್‌ಗೆ ಕುತೂಹಲ ಹೆಚ್ಚಿದೆ.

ಕಂಗನಾ ಬಾಲಿವುಡ್ ತೊರೆಯಲು ನಿರ್ಧರಿಸಿದರೆ, ಅಭಿಮಾನಿಗಳು ಖಂಡಿತವಾಗಿಯೂ ಅವರನ್ನು ಬೆಳ್ಳಿತೆರೆಯಲ್ಲಿ ಮಿಸ್ ಮಾಡಿಕೊಳ್ಳುತ್ತಾರೆ. ಕಂಗನಾ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ವಿಭಿನ್ನ ಪಾತ್ರಗಳ ಮೂಲಕ ತೆರೆ ಮೇಲೆ ಬರುವ ಕಂಗನಾ ಸಿನಿಮಾಗಾಗಿಯೇ ಕಾಯುವ ಫ್ಯಾನ್ಸ್ ಕೂಡ ಇದ್ದಾರೆ.

ಇದನ್ನೂ ಓದಿ: Kangana Ranaut: ಈ ಗುಲಾಬಿಯು ನಿಮಗಾಗಿ; ಮೋದಿಗೆ ಕೆಂಪು ಗುಲಾಬಿ ಕೊಟ್ಟು ಸ್ವಾಗತಿಸಿದ ಕಂಗನಾ! Photo ಇದೆ

ಮಂಡಿಯಲ್ಲಿ ಕಂಗನಾ ಅವರು ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್‌ನ ವಿಕ್ರಮಾದಿತ್ಯ ಸಿಂಗ್ ಅವರನ್ನು 74,755 ಮತಗಳಿಂದ ಸೋಲಿಸಿದ್ದಾರೆ. “ಈ ಪ್ರೀತಿ ಮತ್ತು ವಿಶ್ವಾಸಕ್ಕಾಗಿ ಎಲ್ಲಾ ಮಂಡಿ ಜನರಿಗೆ ಹೃತ್ಪೂರ್ವಕ ಕೃತಜ್ಞತೆಗಳು… ಈ ಗೆಲುವು ನಿಮಗೆಲ್ಲರಿಗೂ, ಇದು ಪ್ರಧಾನಿ ಮೋದಿ ಮತ್ತು ಬಿಜೆಪಿ ಮೇಲಿನ ನಿಮ್ಮ ನಂಬಿಕೆಯ ಗೆಲುವುʼʼ ಎಂದು ಕಂಗನಾ ಬರೆದುಕೊಂಡಿದ್ದರು.

ಆಜ್‌ ತಕ್‌ ಸುದ್ದಿವಾಹಿನಿಗೆ ಸಂದರ್ಶನ ನೀಡುವ ವೇಳೆ ಕಂಗನಾ ʻʻಮಂಡಿಯಲ್ಲಿ ಗೆಲುವು ಸಾಧಿಸಿದ ಬಳಿಕ ನಾನು ಸಿನಿಮಾಗಳಲ್ಲಿ ನಟಿಸುವುದಿಲ್ಲ. ಆದರೆ, ನಮ್ಮ ಬಳಿ ತುಂಬ ಒಳ್ಳೆಯ ನಟಿ ಇದ್ದಾರೆ. ದಯಮಾಡಿ ನೀವು ಬಿಟ್ಟು ಹೋಗಬೇಡಿ ಎಂಬುದಾಗಿ ಹೆಚ್ಚಿನ ನಿರ್ದೇಶಕರು ಹೇಳುತ್ತಾರೆ. ಹೌದು, ನಾನೊಬ್ಬ ಒಳ್ಳೆ ನಟಿ ನಿಜ. ಇದೇ ಮೆಚ್ಚುಗೆಯನ್ನು ಸ್ವೀಕರಿಸಿ ನಾನು ಮುಂದೆ ಹೋಗುತ್ತೇನೆ” ಎಂದು ತಿಳಿಸಿದ್ದರು. ಆ ಮೂಲಕ ಬಾಲಿವುಡ್‌, ನಟನೆ ತ್ಯಜಿಸುವುದನ್ನು ಅವರು ದೃಢಪಡಿಸಿದ್ದರು.

Continue Reading
Advertisement
Rain News
ಕರ್ನಾಟಕ1 min ago

Rain News: ಪ್ರತ್ಯೇಕ ಮಳೆ ಅವಘಡ; ಸಿಡಿಲು ಬಡಿದು ಬಾಲಕ, ಮಹಿಳೆ ದುರ್ಮರಣ

Disciplinary action if cases of mother and child deaths recur DC Diwakar warns
ಆರೋಗ್ಯ27 mins ago

Vijayanagara News: ತಾಯಿ, ಶಿಶು ಮರಣ ಪ್ರಕರಣ ಮರುಕಳಿಸಿದರೆ ಶಿಸ್ತು ಕ್ರಮ: ಡಿಸಿ ದಿವಾಕರ್

BJP State Spokesperson Hariprakash konemane pressmeet at yallapura
ಕರ್ನಾಟಕ28 mins ago

Uttara Kannada News: ಉ.ಕ ಜಿಲ್ಲೆ ಬಿಜೆಪಿಯ ಗಟ್ಟಿನೆಲ ಎಂಬುದು ಮತ್ತೊಮ್ಮೆ ಸಾಬೀತು: ಹರಿಪ್ರಕಾಶ್‌ ಕೋಣೆಮನೆ

Trekking tragedy
ಬೆಂಗಳೂರು30 mins ago

Trekking Tragedy: ಉತ್ತರಾಖಂಡ ಚಾರಣ ದುರಂತದಲ್ಲಿ ಪಾರಾದ 13 ಚಾರಣಿಗರು ಬೆಂಗಳೂರಿಗೆ ವಾಪಸ್

Unemployment Rate
ಪ್ರಮುಖ ಸುದ್ದಿ34 mins ago

Unemployment Rate : ಭಾರತದಲ್ಲಿ ನಿರುದ್ಯೋಗ ಸಮಸ್ಯೆ ಒಂದೇ ವರ್ಷದಲ್ಲಿ ಶೇಕಡಾ 4 ಇಳಿಕೆ; ವರದಿ

Lok Sabha Election
ಪ್ರಮುಖ ಸುದ್ದಿ58 mins ago

Lok Sabha Election : ಶತಕ ಬಾರಿಸಿದ ಕಾಂಗ್ರೆಸ್​​; ಪಕ್ಷೇತರನ ಬೆಂಬಲದೊಂದಿಗೆ ಕಾಂಗ್ರೆಸ್​ನ ಸೀಟ್​ಗಳ ಸಂಖ್ಯೆ 100ಕ್ಕೆ ಏರಿಕೆ

Valmiki Corporation Scam
ಕರ್ನಾಟಕ1 hour ago

Valmiki Corporation Scam: ಸಿಎಂ ಸಿದ್ದರಾಮಯ್ಯಗೆ ರಾಜೀನಾಮೆ ಪತ್ರ ಸಲ್ಲಿಸಿದ ಬಿ.ನಾಗೇಂದ್ರ

Kangana Ranaut
ಪ್ರಮುಖ ಸುದ್ದಿ1 hour ago

Kangana Ranaut : ಪಂಜಾಬ್​ನಲ್ಲಿ ಭಯೋತ್ಪಾದನೆ ಹೆಚ್ಚುತ್ತಿದೆ; ತಮ್ಮ ಮೇಲೆ ಹಲ್ಲೆ ನಡೆಸಿದ ಬಗ್ಗೆ ಕಂಗನಾ ಪ್ರತಿಕ್ರಿಯೆ ಹೀಗಿತ್ತು

Kangana Ranaut
ಪ್ರಮುಖ ಸುದ್ದಿ2 hours ago

Kangana Ranaut: ಕಂಗನಾಗೆ ಮಹಿಳಾ ಪೇದೆ ಹೊಡೆಯಲು ಕಾರಣವೇನು? ರೈತರ ಬಗ್ಗೆ ಅವರು ನೀಡಿದ ವಿವಾದಾತ್ಮಕ ಹೇಳಿಕೆ ಏನು?

Lok Sabha Election 2024
ದೇಶ2 hours ago

Lok Sabha Election 2024: ಈ 17 ಸಂಸದರು ಎನ್‌ಡಿಎಯಲ್ಲೂ ಇಲ್ಲ, ಇಂಡಿ ಕೂಟದಲ್ಲೂ ಇಲ್ಲ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ9 hours ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ3 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ3 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ3 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ4 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು5 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

ಟ್ರೆಂಡಿಂಗ್‌