Kannada New Movie | ʻಅಭಿರಾಮಚಂದ್ರʼ ಫಸ್ಟ್‌ ಲುಕ್‌ ರಿಲೀಸ್‌ ಮಾಡಿದ ಅಶ್ವಿನಿ ಪುನೀತ್ ರಾಜ್‌ಕುಮಾರ್‌ - Vistara News

ಸಿನಿಮಾ

Kannada New Movie | ʻಅಭಿರಾಮಚಂದ್ರʼ ಫಸ್ಟ್‌ ಲುಕ್‌ ರಿಲೀಸ್‌ ಮಾಡಿದ ಅಶ್ವಿನಿ ಪುನೀತ್ ರಾಜ್‌ಕುಮಾರ್‌

ಟೈಟಲ್ ಮೂಲಕವೇ ಗಮನ ಸೆಳೆಯುತ್ತಿರುವ ‘ಅಭಿರಾಮಚಂದ್ರ’ ಸಿನಿಮಾಗೆ (Kannada New Movie) ನಾಗೇಂದ್ರ ಗಾಣಿಗ ಕಥೆ ಬರೆದು ಆ್ಯಕ್ಷನ್ ಕಟ್ ಹೇಳಿದ್ದಾರೆ.

VISTARANEWS.COM


on

Kannada New Movie
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ‘ಅಲೆಯಾಗಿ ಬಾ’ ಆಲ್ಬಂ ಸಾಂಗ್ ಮೂಲಕ ಗಮನ ಸೆಳೆದ ರಥ ಕಿರಣ್ ನಾಯಕ ನಟನಾಗಿ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಡುತ್ತಿದ್ದಾರೆ. ನಾಗೇಂದ್ರ ಗಾಣಿಗ ಚೊಚ್ಚಲ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ಅಭಿರಾಮಚಂದ್ರ’ ಸಿನಿಮಾ (Kannada New Movie ) ಮೂಲಕ ಚಂದನವನದಲ್ಲಿ ಸಿನಿ ಜರ್ನಿ ಆರಂಭಿಸಿದ್ದಾರೆ ರಥ ಕಿರಣ್. ಅಶ್ವಿನಿ ಪುನೀತ್ ರಾಜ್ ಕುಮಾರ್ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

ಟೈಟಲ್ ಮೂಲಕವೇ ಗಮನ ಸೆಳೆಯುತ್ತಿರುವ ‘ಅಭಿರಾಮಚಂದ್ರ’ ಸಿನಿಮಾಗೆ ನಾಗೇಂದ್ರ ಗಾಣಿಗ ಕಥೆ ಬರೆದು ಆ್ಯಕ್ಷನ್ ಕಟ್ ಹೇಳಿದ್ದಾರೆ. ಕಿರಿಕ್ ಪಾರ್ಟಿ ಚಿತ್ರಕ್ಕೆ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿರುವ ನಾಗೇಂದ್ರ ಗಾಣಿಗ ‘ಅಭಿರಾಮಚಂದ್ರ’ ಮೂಲಕ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದಾರೆ. ಚೈಲ್ಡ್‌ವುಡ್ ಫ್ರೆಂಡ್‌ಶಿಪ್, ಪ್ರೀತಿ ಹಾಗೂ ತ್ರಿಕೊನ ಪ್ರೇಮಕಥೆ ಹೊತ್ತ ಚಿತ್ರದಲ್ಲಿ ರಥ ಕಿರಣ ನಾಯಕ ನಟನಾಗಿ ಬಣ್ಣ ಹಚ್ಚಿದ್ದು, ಸಿದ್ದು ಮೂಲಿಮನಿ, ನಾಟ್ಯರಂಗ ಕೂಡ ಚಿತ್ರದ ಮುಖ್ಯ ಭೂಮಿಕೆಯಲ್ಲಿದ್ದಾರೆ. ನಾಯಕಿಯಾಗಿ ಶಿವಾನಿ ರೈ ನಟಿಸಿದ್ದಾರೆ.

ಇದನ್ನೂ ಓದಿ | Kannada New Movie | ‘ಸೋಲ್ ಆಫ್ ಹೊಂದಿಸಿ ಬರೆಯಿರಿ’ ಸಾಂಗ್ ರಿಲೀಸ್: ಫೆ.10ಕ್ಕೆ ಸಿನಿಮಾ ತೆರೆಗೆ

Kannada New Movie

ಚಿತ್ರೀಕರಣ ಕಂಪ್ಲೀಟ್ ಮಾಡಿರುವ ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ನಿರತವಾಗಿದೆ. ಸದ್ಯದಲ್ಲೇ ಸಿನಿಮಾ ಟೀಸರ್ ಬಿಡುಗಡೆ ಮಾಡಲು ಪ್ಲ್ಯಾನ್ ಮಾಡಿಕೊಂಡಿದೆ. ಕುಂದಾಪುರ, ಬೆಂಗಳೂರು, ಮೈಸೂರಿನಲ್ಲಿ ಸಿನಿಮಾವನ್ನು ಸೆರೆ ಹಿಡಿಯಲಾಗಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ. ರವಿ ಬಸ್ರೂರು ಸಂಗೀತ ನಿರ್ದೇಶನದಲ್ಲಿ ‘ಅಭಿರಾಮಚಂದ್ರ’ ಸಿನಿಮಾ ಮೂಡಿ ಬರುತ್ತಿದ್ದು, ರವಿ ಬಸ್ರೂರು ಮೂವೀಸ್ ನಡಿ ಸಿನಿಮಾವನ್ನು ಪ್ರಸ್ತುತ ಪಡಿಸಲಾಗುತ್ತಿದೆ. ರವಿ ಬಸ್ರೂರು ಪುತ್ರ ಪವನ್ ಕೂಡ ಈ ಚಿತ್ರದಲ್ಲಿ ಬಣ್ಣ ಹಚ್ಚಿದ್ದು, ವೀಣಾ ಸುಂದರ್, ಸುಂದರ್ ವೀಣಾ, ಎಸ್.ನಾರಾಯಣ್, ಪ್ರಕಾಶ್ ತೂಮಿನಾಡು ಸೇರಿದಂತೆ ಹಲವು ಕಲಾವಿದರು ಚಿತ್ರದ ತಾರಾಬಳಗದಲ್ಲಿದ್ದಾರೆ.

ಎ.ಜಿ. ಎಸ್ ಎಂಟರ್ಟೈನ್ಮೆಂಟ್ ಹಾಗೂ ರವಿ ಬಸ್ರೂರು ಮ್ಯೂಸಿಕ್ ಮತ್ತು ಮೂವೀಸ್ ಬ್ಯಾನರ್ ನಡಿ ಎ.ಜಿ.ಸುರೇಶ್ ಹಾಗೂ ಮಲ್ಲೇಶ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ರವಿ ಬಸ್ರೂರು ಸಂಗೀತ ನಿರ್ದೇಶನ, ಸಂದೀಪ್ ವಲ್ಲೂರಿ ಛಾಯಾಗ್ರಹಣ, ಸುರೇಶ್ ಆರುಮುಗಂ ಸಂಕಲನ ಚಿತ್ರಕ್ಕಿದೆ.

ಇದನ್ನೂ ಓದಿ | Kannada New Movie | ಕೊನೆಯ ಹಂತದ ಚಿತ್ರೀಕರಣದಲ್ಲಿ ‘ಧೀರ ಭಗತ್ ರಾಯ್’

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಿರುತೆರೆ

Kavitha Gowda: ಮೊದಲ ಮಗುವಿನ ನಿರೀಕ್ಷೆಯಲ್ಲಿʻಲಕ್ಷ್ಮೀಬಾರಮ್ಮʼ ಧಾರಾವಾಹಿ ಖ್ಯಾತಿಯ ಜೋಡಿ

Kavitha Gowda: ಲಕ್ಷ್ಮೀ ಬಾರಮ್ಮ ಧಾರಾವಾಹಿ ಮೂಲಕ ಜೋಡಿ ಸಾಕಷ್ಟು ಮನೆಮಾತಾಗಿತ್ತು. ಸೀರಿಯಲ್, ಸಿನಿಮಾ, ನಟನೆಯಲ್ಲಿ ಬ್ಯುಸಿಯಿರುವ ಜೋಡಿ ಇದೀಗ ಸಂಭ್ರಮದ ವಿಚಾರವನ್ನು ಹಂಚಿಕೊಂಡಿದೆ. ಇಬ್ಬರೂ ಲಾಕ್‌ಡೌನ್ ಸಮಯಯದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಈಗ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಕವಿತಾ ಗೌಡ ಹಿರಿತೆರೆಯಲ್ಲಿ ಶ್ರೀನಿವಾಸ ಕಲ್ಯಾಣ, ಫಸ್ಟ್ ಲವ್, ಗುಬ್ಬಿ ಮೇಲೆ ಬ್ರಹ್ಮಾಸ್ತ್ರ, ಗೋವಿಂದಾ ಗೋವಿಂದ, ಹುಟ್ಟುಹಬ್ಬದ ಶುಭಾಶಯಗಳು ಸೇರಿದಂತೆ ಚಿತ್ರಗಳಲ್ಲಿ ನಟಿಸಿದ್ದರು.

VISTARANEWS.COM


on

Kavitha Gowda chandan expected First Child
Koo

ಲಕ್ಷ್ಮೀ ಬಾರಮ್ಮ ಖ್ಯಾತಿಯ ಚಂದನ್ ಕುಮಾರ್ ಮತ್ತು ಕವಿತಾ (Actor Chandan ) ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಲ್ಲಿರುತ್ತಾರೆ. ಇದೀಗ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ.

ಲಕ್ಷ್ಮೀ ಬಾರಮ್ಮ ಧಾರಾವಾಹಿ ಮೂಲಕ ಜೋಡಿ ಸಾಕಷ್ಟು ಮನೆಮಾತಾಗಿತ್ತು. ಸೀರಿಯಲ್, ಸಿನಿಮಾ, ನಟನೆಯಲ್ಲಿ ಬ್ಯುಸಿಯಿರುವ ಜೋಡಿ ಇದೀಗ ಸಂಭ್ರಮದ ವಿಚಾರವನ್ನು ಹಂಚಿಕೊಂಡಿದೆ. 

ಇನ್‌ಸ್ಟಾ ಪೋಸ್ಟ್‌ ಮೂಲಕ ಫ್ಯಾನ್ಸ್‌ಗೆ ಸಿಹಿ ಸುದ್ದಿ ನೀಡಿದ್ದಾರೆ.

ಇಬ್ಬರೂ ಲಾಕ್‌ಡೌನ್ ಸಮಯಯದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಈಗ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ.

ಇದನ್ನೂ ಓದಿ: Lakshmi Baramma Serial: ‘ಲಕ್ಷ್ಮೀ ಬಾರಮ್ಮ’ ಧಾರಾವಾಹಿಯಿಂದ ಹೊರಬಂದ್ರಾ ಕೀರ್ತಿ ಪಾತ್ರಧಾರಿ? ಸೀರಿಯಲ್‌ ನೋಡಲ್ಲ ಅಂದ್ರು ಫ್ಯಾನ್ಸ್‌!

ಕವಿತಾ ಗೌಡ ಹಿರಿತೆರೆಯಲ್ಲಿ ಶ್ರೀನಿವಾಸ ಕಲ್ಯಾಣ, ಫಸ್ಟ್ ಲವ್, ಗುಬ್ಬಿ ಮೇಲೆ ಬ್ರಹ್ಮಾಸ್ತ್ರ, ಗೋವಿಂದಾ ಗೋವಿಂದ, ಹುಟ್ಟುಹಬ್ಬದ ಶುಭಾಶಯಗಳು ಸೇರಿದಂತೆ ಚಿತ್ರಗಳಲ್ಲಿ ನಟಿಸಿದ್ದರು. ಪತಿ ಚಂದನ್ ಗೌಡ ಜೊತೆ ಹೋಟೆಲ್ ಉದ್ಯಮದಲ್ಲೂ ಸಕ್ರಿಯರಾಗಿದ್ದಾರೆ. 

ಕವಿತಾ ಗೌಡ ಹಾಗೂ ಚಂದನ್‌ ಒಬ್ಬರನ್ನೊಬ್ಬರು ಪ್ರೀತಿಸಿ, ಹಸೆಮಣೆ ಏರಿದ್ದ ಜೋಡಿ ನಟನೆ ಮತ್ತು ಉದ್ಯಮ ಎರಡಲ್ಲೂ ಒಬ್ಬರಿಗೊಬ್ಬರು ಸಾಥ್ ನೀಡುತ್ತಾ ಸಾಗುತ್ತಿದ್ದಾರೆ. ಕವಿತಾ ಗೌಡ ಕೆಲ ವರ್ಷಗಳ ಕಾಲ ‘ಲಕ್ಷ್ಮೀ ಬಾರಮ್ಮ’ ಧಾರಾವಾಹಿಯಲ್ಲಿ ನಟಿಸಿ, ನಂತರ ‘ವಿದ್ಯಾ ವಿನಾಯಕ’ ಧಾರಾವಾಹಿಯಲ್ಲಿ ಬಣ್ಣ ಹಚ್ಚಿದ್ದರು.ಅತ್ತ ನಟಿ ಕವಿತಾ ಗೌಡ ಅವರು ಕೂಡ ತಮಿಳಿನ ‘ಅನ್ಬೇ ಶಿವಂ’ ಧಾರಾವಾಹಿಯಲ್ಲಿ ನಟಿಸುವುದರ ಜೊತೆಗೆ ಒಂದಷ್ಟು ಸಿನಿಮಾಗಳಲ್ಲೂ ಬಣ್ಣ ಹಚ್ಚಿದ್ದಾರೆ.

Continue Reading

ಬಾಲಿವುಡ್

Met Gala 2024: ಮೆಟ್‌ ಗಾಲಾದಲ್ಲಿ ಆಲಿಯಾ ಹಾಜರಿ: ಪ್ರಿಯಾಂಕಾ ಚೋಪ್ರಾ ಗೈರು!

Met Gala 2024: ಮೆಟ್‌ ಗಾಲಾ ಈ ಬಾರಿ ನಾಳೆ (ಮೇ.6)ರಂದು ನಡೆಯಲಿದೆ. ಮೆಟ್ ಗಾಲಾ ಅತಿಥಿ ಪಟ್ಟಿಯನ್ನು ಮುಖ್ಯ ಕಾರ್ಯಕ್ರಮದ ಹಿಂದಿನ ಸಂಜೆಯವರೆಗೂ ರಹಸ್ಯವಾಗಿ ಇರಿಸಲಾಗುತ್ತದೆ. ಸುಮಾರು 450 ಜನರು ಈ ಸಮಾರಂಭದಲ್ಲಿ ಪಾಲ್ಗೊಳಲಿದ್ದಾರೆ ಎಂದು ವರದಿಯಾಗಿದೆ. ಹೊಸ ಊಹಾಪೋಹಗಳೆಂದರೆ ಸೆಲೆಬ್ರಿಟಿ ಜೋಡಿ ಟೇಲರ್ ಸ್ವಿಫ್ಟ್ ಮತ್ತು ಟ್ರಾವಿಸ್ ಕೆಲ್ಸೆ ಈ ವರ್ಷ ಮೆಟ್ ಗಾಲಾ ರೆಡ್ ಕಾರ್ಪೆಟ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

VISTARANEWS.COM


on

Met Gala 2024 Alia Bhatt attend
Koo

ಬೆಂಗಳೂರು: ನಟಿ ಆಲಿಯಾ ಭಟ್‌ (Alia Bhatt) ಈಗಾಗಲೇ ಭಾರತದ ಹಲವರ ಮನಸ್ಸು ಗೆದ್ದಿರುವ ನಟಿ. 2022ರಲ್ಲಿ ನಟಿ ಹಿಂದಿ ಚಿತ್ರೋದ್ಯಮದಲ್ಲಿ ಹಿಟ್‌ ಮೇಲೆ ಹಿಟ್‌ ಸಿನಿಮಾಗಳನ್ನು ಕೊಟ್ಟಿದ್ದಾರೆ. ವಿಶ್ವದ ಸೆಲೆಬ್ರಿಟಿಗಳ ಅತ್ಯಂತ ದೊಡ್ಡ ಫ್ಯಾಷನ್‌ ಕಾರ್ಯಕ್ರಮವಾದ ಮೆಟ್‌ ಗಾಲಾದ ( Met Gala 2024) ರೆಡ್‌ ಕಾರ್ಪೆಟ್‌ ಮೇಲೆ ಹಿಂದಿನ ವರ್ಷ ಆಲಿಯಾ ಹೆಜ್ಜೆ ಹಾಕಿದ್ದರು. ಈ ಬಾರಿಯೂ ನಟಿ ಭಾಗವಹಿಸಲಿದ್ದಾರೆ ಎಂದು ವರದಿಯಾಗಿದೆ.

ಮೆಟ್ ಗಾಲಾ 2024ರ ಭಾಗವಾಗಿರುವ ಕೆಲವೇ ಕೆಲವು ಭಾರತೀಯ ಹೆಸರುಗಳಲ್ಲಿ ಆಲಿಯಾ ಭಟ್ ಕೂಡ ಒಬ್ಬರು. ಈ ಈವೆಂಟ್‌ಗೆ ಭಾಗವಾಗುತ್ತಿರುವುದು ಆಲಿಯಾ ಎರಡನೇ ಬಾರಿ. ಮೇ 4ರ ರಾತ್ರಿ ಮುಂಬೈನ ಅಂತಾರಾಷ್ಟ್ರೀಯ ಖಾಸಗಿ ಟರ್ಮಿನಲ್‌ನಿಂದ ನ್ಯೂಯಾರ್ಕ್‌ಗೆ ನಟಿ ಪ್ರಯಾಣಿಸಿರುವುದು ವರದಿಯಾಗಿದೆ.

ಮೆಟ್‌ ಗಾಲಾ ಈ ಬಾರಿ ನಾಳೆ (ಮೇ.6)ರಂದು ನಡೆಯಲಿದೆ. ಮೆಟ್ ಗಾಲಾ ಅತಿಥಿ ಪಟ್ಟಿಯನ್ನು ಮುಖ್ಯ ಕಾರ್ಯಕ್ರಮದ ಹಿಂದಿನ ಸಂಜೆಯವರೆಗೂ ರಹಸ್ಯವಾಗಿ ಇರಿಸಲಾಗುತ್ತದೆ. ಸುಮಾರು 450 ಜನರು ಈ ಸಮಾರಂಭದಲ್ಲಿ ಪಾಲ್ಗೊಳಲಿದ್ದಾರೆ ಎಂದು ವರದಿಯಾಗಿದೆ. ಹೊಸ ಊಹಾಪೋಹಗಳೆಂದರೆ ಸೆಲೆಬ್ರಿಟಿ ಜೋಡಿ ಟೇಲರ್ ಸ್ವಿಫ್ಟ್ ಮತ್ತು ಟ್ರಾವಿಸ್ ಕೆಲ್ಸೆ ಈ ವರ್ಷ ಮೆಟ್ ಗಾಲಾ ರೆಡ್ ಕಾರ್ಪೆಟ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

ಲಾರೆನ್ ಸ್ಯಾಂಚೆಜ್, ಕೈಟ್ಲಿನ್ ಕ್ಲಾರ್ಕ್, ಸ್ಯಾಮ್ ಆಲ್ಟ್‌ಮನ್, ಜೆಫ್ ಬೆಜೋಸ್ ಸಹ ಈ ವರ್ಷದ ಮೆಟ್ ಗಾಲಾದಲ್ಲಿ ನಿರೀಕ್ಷಿಸಲಾದ ಕೆಲವು ಹೆಸರುಗಳು. ಪ್ರಿಯಾಂಕಾ ಚೋಪ್ರಾ ಈ ಬಾರಿ ಗೈರಾಗಲಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Heeramandi Trailer: ʻಹೀರಾಮಂಡಿʼ ಟ್ರೈಲರ್‌ ಕಂಡು ರಶ್ಮಿಕಾ, ಆಲಿಯಾ, ವಿಕ್ಕಿ ಕೌಶಲ್‌ ಫಿದಾ!

ಈ ಹಿಂದೆಯೂ ಬಾಲಿವುಡ್‌ನ ಅನೇಕ ನಟಿಯರು ಈ ಮೆಟ್‌ ಗಾಲಾದ ರೆಡ್‌ ಕಾರ್ಪೆಟ್‌ನಲ್ಲಿ ವಿಶೇಷವಾದ ಉಡುಗೆಯಲ್ಲಿ ಕಾಣಿಸಿಕೊಂಡಿದ್ದರು. ಕಳೆದ ವರ್ಷ ನತಾಶಾ ಅವರು ಸಬ್ಯಸಾಚಿ ಸೀರೆ ತೊಟ್ಟು ಅದರೊಂದಿಗೆ ಚಿನ್ನದ ಬಣ್ಣದ ಲೋಹದ ಕೋಟ್‌ ಧರಿಸಿ ಕಾಣಿಸಿಕೊಂಡಿದ್ದರು. ನಟಿಯ ಈ ಲುಕ್‌ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್‌ ಆಗಿತ್ತು. ಹಾಗೆಯೇ 2017ರಲ್ಲಿ ದೀಪಿಕಾ ಪಡುಕೋಣೆ ಅವರು ಬಿಳಿ ಬಣ್ಣದ ಉಡುಗೆಯಲ್ಲಿ ಮೆಟ್‌ ಗಾಲಾದ ರೆಡ್‌ ಕಾರ್ಪೆಟ್‌ ಮೇಲೆ ಮೊದಲನೇ ಬಾರಿಗೆ ಕಾಣಿಸಿಕೊಂಡಿದ್ದರು. 2018ರಲ್ಲಿ ಮತ್ತೊಮ್ಮೆ ರೆಡ್‌ ಕಾರ್ಪೆಟ್‌ನಲ್ಲಿ ಅವರು ಕಾಣಿಸಿಕೊಂಡಿದ್ದರು. ಆಗ ನಟಿ ಪ್ರಬಲ್‌ ಗುರುಂಗ್‌ ಅವರು ವಿನ್ಯಾಸ ಮಾಡಿದ್ದ ಕೆಂಪು ಬಣ್ಣದ ಉಡುಗೆ ತೊಟ್ಟಿದ್ದರು. ಒಂದು ಶೋಲ್ಡರ್‌ನ ಆ ಉಡುಗೆಯ ಫೋಟೋ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿತ್ತು.

ಯಾಂಕಾ ಚೋಪ್ರಾ ಅವರು 2017ರಲ್ಲಿ ಮೆಟ್‌ ಗಾಲಾದಲ್ಲಿ ಭಾಗವಹಿಸಿದ್ದರು. ಅದರಲ್ಲಿ ಅವರು ಈಗಿನ ಪತಿ ನಿಕ್‌ ಜೋನಾಸ್‌ ಅವರ ಜತೆಗೆ ಕಾಣಿಸಿಕೊಂಡಿದ್ದರು. ಉದ್ದನೆಯ ವೇಲು ರೀತಿಯಲ್ಲಿ ಬಟ್ಟೆ ಹೊಂದಿರುವ ಟ್ರೆಂಚ್‌ ಕೋಟ್‌ ಉಡುಗೆಯಲ್ಲಿ ನಟಿ ಮಿಂಚಿದ್ದರು

Continue Reading

ಸಿನಿಮಾ

Kannada New Movie: ಭಾರಿ ಮೊತ್ತಕ್ಕೆ ಸೇಲ್ ಆಯ್ತು ರೂಪೇಶ್ ಶೆಟ್ಟಿ-ಜಾಹ್ನವಿ ಸಿನಿಮಾ ಆಡಿಯೊ ರೈಟ್ಸ್!

Kannada New Movie: ಅಧಿಪತ್ರ ಸಿನಿಮಾದ ಶೂಟಿಂಗ್ ಹಾಗೂ ಮೇಕಿಂಗ್‌ನಿಂದಲೂ ಎಲ್ಲರ ಗಮನ ಸೆಳದಿದೆ . ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸ ಭರದಿಂದ ಸಾಗುತ್ತಿದೆ. ತೆರೆಗೆ ಬರಲು ರೆಡಿಯಾಗುತ್ತಿರುವ ಅಧಿಪತ್ರ ಸಿನಿಮಾದ ಟೀಸರ್ ಬಿಡುಗಡೆಗೆ ತಯಾರಿ ನಡೆದಿದೆ. ಈ ಚಿತ್ರದ ಆಡಿಯೊ ಹಕ್ಕು ಪ್ರತಿಷ್ಠಿತ ಆಡಿಯೊ ಸಂಸ್ಥೆ ಖರೀದಿ ಮಾಡಿದೆ. 2024 ಬಹು ನಿರೀಕ್ಷಿತ ಸಿನಿಮಾ ಸಾಲಿನಲ್ಲಿ ಅಧಿಪತ್ರ ಕೂಡ ಒಂದು.

VISTARANEWS.COM


on

Kannada New Movie Adhipatra audio rights
Koo

ಬೆಂಗಳೂರು: ಬಿಗ್ ಬಾಸ್ ಖ್ಯಾತಿಯ (Kannada New Movie) ರೂಪೇಶ್ ಶೆಟ್ಟಿ (Roopesh shetty) ನಟನೆಯ‌ ಬಹು ನಿರೀಕ್ಷಿತ ಸಿನಿಮಾ ʻಅಧಿಪತ್ರʼ.(Adhipatra) ಈಗಾಗಲೇ ಮೇಕಿಂಗ್ ಹಾಗೂ ಕಂಟೆಂಟ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಈ ಚಿತ್ರದ ಆಡಿಯೊ ಹಕ್ಕು ಪ್ರತಿಷ್ಠಿತ ಆಡಿಯೊ ಸಂಸ್ಥೆ ಲಹರಿ ಖರೀದಿ ಮಾಡಿದೆ. 2024 ಬಹು ನಿರೀಕ್ಷಿತ ಸಿನಿಮಾ ಸಾಲಿನಲ್ಲಿ ಅಧಿಪತ್ರ ಕೂಡ ಒಂದು.

ಮೇ‌ 10ಕ್ಕೆ ಅಧಿಪತ್ರ ಟೀಸರ್

ಅಧಿಪತ್ರ ಸಿನಿಮಾದ ಶೂಟಿಂಗ್ ಹಾಗೂ ಮೇಕಿಂಗ್‌ನಿಂದಲೂ ಎಲ್ಲರ ಗಮನ ಸೆಳದಿದೆ . ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸ ಭರದಿಂದ ಸಾಗುತ್ತಿದೆ. ತೆರೆಗೆ ಬರಲು ರೆಡಿಯಾಗುತ್ತಿರುವ ಅಧಿಪತ್ರ ಸಿನಿಮಾದ ಟೀಸರ್ ಬಿಡುಗಡೆಗೆ ತಯಾರಿ ನಡೆದಿದೆ. ಇದೇ ತಿಂಗಳ 10ರಂದು ಲಹರಿ ಆಡಿಯೋದಲ್ಲಿ ಅಧಿಪತ್ರದ ಮೊದಲ ಝಲಕ್ ಹೊರಬೀಳಲಿದೆ. ರೂಪೇಶ್ ಗೆ ಜೋಡಿಯಾಗಿ ಗಿಚ್ಚಿ ಗಿಲಿಗಿಲಿ ಖ್ಯಾತಿಯ ಜಾಹ್ನವಿ ಸಾಥ್ ಕೊಟ್ಟಿದ್ದಾರೆ.

ತುಳು ಸಿನಿಮಾರಂಗದಲ್ಲಿ ರೂಪೇಶ್ ಶೆಟ್ಟಿಗೆ ಸಾಕಷ್ಟು ಅನುಭವ ಇದೆ. ಸಿನಿಮಾದ ನಾನಾ ವಿಭಾಗಗಳಲ್ಲಿ ಕೆಲಸ ಮಾಡಿದ್ದಾರೆ. ನಟನಾಗಿ ಮತ್ತು ನಿರ್ದೇಶಕನಾಗಿ ಅವರು ಅಲ್ಲಿ ನೆಲೆ ಕಂಡುಕೊಂಡಿದ್ದಾರೆ. ಬಿಗ್ ಬಾಸ್‌ಗೆ ಕಾಲಿಟ್ಟ ಬಳಿಕ ಅವರಿಗೆ ಜನಪ್ರಿಯತೆ ಹೆಚ್ಚಾಯಿತು. ಬಿಗ್ ಬಾಸ್ ವಿನ್ ಆದ ಬಳಿಕ ಅವರು ತುಳು ಭಾಷೆಯ ‘ಸರ್ಕಸ್’ ಸಿನಿಮಾವನ್ನು ನಿರ್ದೇಶಿಸಿ, ನಿರ್ಮಾಣ ಮಾಡಿದರು. ಆ ಸಿನಿಮಾದಿಂದ ಅವರಿಗೆ ದೊಡ್ಡ ಯಶಸ್ಸು ಸಿಕ್ಕಿತು. ಕನ್ನಡದಲ್ಲಿ ಸ್ವಲ್ಪ ತಡವಾಗಿ ಆದರೂ ಪರವಾಗಿಲ್ಲ, ಒಂದು ಒಳ್ಳೆಯ ಕಥೆಯ ಮೂಲಕ, ಡಿಫರೆಂಟ್ ಆದಂತಹ ಪಾತ್ರದ ಮೂಲಕ ಪ್ರೇಕ್ಷಕರ ಎದುರು ಬರಬೇಕು ಎಂಬುದು ರೂಪೇಶ್ ಶೆಟ್ಟಿ ಅವರ ಉದ್ದೇಶ ಆಗಿತ್ತು. ಅದೆಲ್ಲವನ್ನೂ ಗಮನದಲ್ಲಿ ಇಟ್ಟುಕೊಂಡು ಅವರು ‘ಅಧಿಪತ್ರ’ ಸಿನಿಮಾ ಒಪ್ಪಿಕೊಂಡಿದ್ದಾರೆ.

ಇದನ್ನೂ ಓದಿ: Vijay Deverakonda: ಸಿನಿಮಾಗಳ ಸತತ ಸೋಲಿನ ಬೆನ್ನಲ್ಲೆ ಹೊಸ ಸಿನಿಮಾ ಅನೌನ್ಸ್‌ ಮಾಡಿದ ವಿಜಯ್‌ ದೇವರಕೊಂಡ!

ಸುದ್ದಿವಾಹಿನಿಯಲ್ಲಿ ನಿರೂಪಕಿಯಾಗಿ ಗುರುತಿಸಿಕೊಂಡಿರುವ ಜಾಹ್ನವಿ, ಅಲ್ಲಿಂದ ಕಿರುತೆರೆ ರಿಯಾಲಿಟಿ ಶೋಗಳಲ್ಲಿಯೂ ಕಣಕ್ಕಿಳಿದು ಇದೀಗ ನೇರವಾಗಿ ಸಿನಿಮಾ ನಾಯಕಿಯಾಗಿ ಹೊಸ ಇನಿಂಗ್ಸ್‌ ಆರಂಭಿಸಿದ್ದಾರೆ. ರೂಪೇಶ್‌ ಶೆಟ್ಟಿ ಅಧಿಪತ್ರ ಚಿತ್ರದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಈ ಹಿಂದೆ ಕೆಲವು ಸಿನಿಮಾಗಳಲ್ಲಿ ಸಹಾಯಕ ನಿರ್ದೇಶಕರಾಗಿ ಹಾಗೂ ಇವರು ನಿರ್ದೇಶನ ಮಾಡಿದ ಶಾರ್ಟ್ ಫಿಲಂ ಸಾಮಾಜಿಕ ಜಾಲತಾಣಗಳಲ್ಲಿ ಉತ್ತಮ ಪ್ರಶಂಸೆ ಪಡೆದಿತ್ತು ಹಾಗೂ ಕೆಲವು ಜಾಹೀರಾತುಗಳಿಗೆ ನಿರ್ದೇಶನ ಮಾಡಿರುವ ಅನುಭವ ಹೊಂದಿರುವ ಚಯನ್ ಶೆಟ್ಟಿ ʼಅಧಿಪತ್ರʼ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಈ ಸಿನಿಮಾಕ್ಕೆ ಕೆ ಆರ್ ಸಿನಿ ಕಂಬೈನ್ಸ್ ಬ್ಯಾನರ್ ಬಂಡವಾಳ ಹೂಡುತ್ತಿದ್ದು, ನೈಜ ಘಟನೆಯಿಂದ ಸ್ಫೂರ್ತಿ ಪಡೆದು ಸಸ್ಪೆನ್ಸ್ ಥ್ರಿಲ್ಲರ್ ಶೈಲಿಯಲ್ಲಿ ಸಿನಿಮಾ ಮೂಡಿಬರಲಿದೆ.

ಸಸ್ಪೆನ್ಸ್ ಥ್ರಿಲ್ಲರ್ ಶೈಲಿಯಲ್ಲಿ ಅಧಿಪತ್ರ ಸಿನಿಮಾವನ್ನು . ಕೆ ಆರ್ ಸಿನಿಕಂಬೈನ್ಸ್ ಬ್ಯಾನರ್‌ನಡಿ‌ ದಿವ್ಯಾ ನಾರಾಯಣ್, ಕುಲದೀಪ್ ರಾಘವ್ ಲಕ್ಷ್ಮೇ ಗೌಡ ‌ಬಂಡವಾಳ ಹೂಡಿದ್ದು, ಕಾರ್ತಿಕ್ ಶೆಟ್ಟಿ ಹಾಗೂ ಸತೀಶ್ ಶೆಟ್ಟಿ ಸಹ ನಿರ್ಮಾಣದಲ್ಲಿ ಹೆಗಲು ಕೊಟ್ಟಿದ್ದಾರೆ.

Continue Reading

ಸಿನಿಮಾ

Prajwal Revanna Case: ವೈರಲ್ ಆಗುತ್ತಿರುವ 2976 ವಿಡಿಯೊಗಳಲ್ಲಿ ಒಂದನ್ನು ನಾನು ನೋಡಿದೆ ಎಂದ ಹರ್ಷಿಕಾ ಪೂಣಚ್ಚ!

Prajwal Revanna Case: ತಮಿಳು ನಟಿ ಕಸ್ತೂರಿ, ಬಾಲಿವುಡ್ ನಟಿ ಸ್ವರಾ ಭಾಸ್ಕರ್ ಈ ಆರೋಪ ಪ್ರಕರಣದ ಬಗ್ಗೆ ನೇರವಾಗಿ ವಾಗ್ದಾಳಿ ನಡೆಸಿದ್ದಾರೆ. ಇನ್ನು ತೆಲುಗು ನಟಿ, ನಿರೂಪಕ ಪರೋಕ್ಷವಾಗಿ ಈ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ್ದರು.ಈ ನಡುವೆ ಪ್ರಜ್ವಲ್‌ ಅವರನ್ನು ಭಾರತಕ್ಕೆ ಬರುವಂತೆ ಜೆಡಿಎಸ್‌ ಮುಖಂಡರು ಮನವೊಲಿಸಿದ್ದು, ಅವರು ಇಂದು (ಭಾನುವಾರ – ಮೇ 5) ಬೆಂಗಳೂರಿನ ಕೆಂಪೇಗೌಡ ಏರ್‌ಪೋರ್ಟ್‌ಗೆ ಆಗಮಿಸುವ ಸಾಧ್ಯತೆ ದಟ್ಟವಾಗಿದೆ. ಈಗಾಗಲೇ ಏರ್‌ಪೋರ್ಟ್‌ ಬಳಿ ಬೀಡು ಬಿಟ್ಟಿರುವ ಎಸ್‌ಐಟಿ ತಂಡವು ಪ್ರಜ್ವಲ್‌ ಆಗಮಿಸುತ್ತಿದ್ದಂತೆ ವಶಕ್ಕೆ ಪಡೆಯುವ ಸಾಧ್ಯತೆ ದಟ್ಟವಾಗಿದೆ.

VISTARANEWS.COM


on

Prajwal Revanna Case reaction by Harshika Poonacha
Koo

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣವು (Hassan Pen Drive Case) ದಿನೇ ದಿನೆ ಜಟಿಲವಾಗುತ್ತಾ ಸಾಗಿದೆ. ಈ ನಡುವೆ ಅವರ ತಂದೆ, ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಈ ಪ್ರಕರಣದ ಬಗ್ಗೆ ಸಿನಿಮಾ ತಾರೆಯರು ಕೂಡ ಆಕ್ರೋಶ ಹೊರಹಾಕುತ್ತಿದ್ದಾರೆ. ಇದೀಗ ನಟಿ ಹರ್ಷಿಕಾ ಪೂಣಚ್ಚ ಎಕ್ಸ್‌ನಲ್ಲಿ ಈ ಬಗ್ಗೆ ಸುದೀರ್ಘವಾಗಿ ಬರೆದುಕೊಂಡಿದ್ದಾರೆ.”ದುರದೃಷ್ಟವಶಾತ್ ವೈರಲ್ ಆಗುತ್ತಿರುವ 2976 ವೀಡಿಯೊಗಳಲ್ಲಿ ಒಂದನ್ನು ನಾನು ನೋಡಿದೆʼʼಎಂದು ಬರೆದುಕೊಂಡಿದ್ದಾರೆ.

ಹರ್ಷಿಕಾ ಎಕ್ಸ್‌ನಲ್ಲಿ ಹೀಗೆ ಬರೆದುಕೊಂಡಿದ್ದಾರೆ. ʻʻದುರದೃಷ್ಟವಶಾತ್ ವೈರಲ್ ಆಗುತ್ತಿರುವ 2976 ವೀಡಿಯೊಗಳಲ್ಲಿ ಒಂದನ್ನು ನಾನು ನೋಡಿದೆ. ಅದನ್ನು ನೋಡುವುದು ನಿಜಕ್ಕೂ ನೋವಿನ ಸಂಗತಿ. ವಿಡಿಯೊಗಳು ಕಾನೂನುಬದ್ಧ ಮತ್ತು ನೈಜವಾಗಿದ್ದರೆ, ಅಂತಹ ಕೃತ್ಯಗಳನ್ನು ಸೃಷ್ಟಿಸಿದವರು ಖಂಡಿತವಾಗಿಯೂ ದೇಶದ ಕಾನೂನಿನ ಪ್ರಕಾರ ಪರಿಗಣನೆಗೆ ತೆಗೆದುಕೊಳ್ಳಬೇಕು” ಎಂದು ಹರ್ಷಿಕಾ ಆಗ್ರಹಿಸಿದ್ದಾರೆ.

ಇದನ್ನೂ ಓದಿ: Prajwal Revanna Case: ವಿದೇಶದಿಂದ ಮಧ್ಯಾಹ್ನ 3 ಗಂಟೆಗೆ ಪ್ರಜ್ವಲ್‌ ರೇವಣ್ಣ ಆಗಮನ? ಬಂದ ಕೂಡಲೇ ಅರೆಸ್ಟ್!

ಮತ್ತೊಂದು ಎಕ್ಸ್‌ನಲ್ಲಿ ʻʻಈ ವಿಡಿಯೊಗಳಲ್ಲಿ ಕಾಣಿಸಿಕೊಂಡಿರುವ ಅಸಂಖ್ಯಾತ ಮಹಿಳೆಯರನ್ನು ನೋಡಿ ನೋವಾಗುತ್ತಿದೆ. ಅವರೆಲ್ಲರೂ ಸಭ್ಯ ಮತ್ತು ಸರಳ ಕುಟುಂಬದಿಂದ ಬಂದವರ ಎಂದು ಕಾಣುತ್ತಾರೆ. ಈ ಸಂತ್ರಸ್ತರ ಮುಖಗಳನ್ನು ವಿವಿಧ ಗುಂಪುಗಳು ರಾಜಕೀಯ ಚರ್ಚೆಗೆ ಬಳಸಿಕೊಳ್ಳುತ್ತಿರುವುದು ಅತ್ಯಂತ ದುರದೃಷ್ಟಕರʼʼಎಂದು ಬರೆದುಕೊಂಡಿದ್ದಾರೆ.

ʻʻಕೊನೆಪಕ್ಷ ಅಲ್ಲಿರುವ ಮಹಿಳೆಯರ ಮುಖವನ್ನು ಬ್ಲರ್‌ ಮಾಡಬಹುದಿತ್ತು. ಭವಿಷ್ಯದಲ್ಲಿ ಅವರು ಸಮಾಜವನ್ನು ಹೇಗೆ ಎದುರಿಸುತ್ತಾರೆ? ಇನ್ನು ಮುಂದೆ ಅವರನ್ನು ಯಾವ ದೃಷಿಯಲ್ಲಿ ಜನ ನೋಡಲಿದ್ದಾರೆ? ಅವರ ಕುಟುಂಬ ಮತ್ತು ಮಕ್ಕಳ ಗತಿ ಏನು? ಎಂದು ಹರ್ಷಿಕಾ ಕಳವಳ ವ್ಯಕ್ತಪಡಿಸಿದ್ದಾರೆ.

ತಮಿಳು ನಟಿ ಕಸ್ತೂರಿ, ಬಾಲಿವುಡ್ ನಟಿ ಸ್ವರಾ ಭಾಸ್ಕರ್ ಈ ಆರೋಪ ಪ್ರಕರಣದ ಬಗ್ಗೆ ನೇರವಾಗಿ ವಾಗ್ದಾಳಿ ನಡೆಸಿದ್ದಾರೆ. ಇನ್ನು ತೆಲುಗು ನಟಿ, ನಿರೂಪಕ ಪರೋಕ್ಷವಾಗಿ ಈ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ್ದರು.

ಈ ನಡುವೆ ಪ್ರಜ್ವಲ್‌ ಅವರನ್ನು ಭಾರತಕ್ಕೆ ಬರುವಂತೆ ಜೆಡಿಎಸ್‌ ಮುಖಂಡರು ಮನವೊಲಿಸಿದ್ದು, ಅವರು ಇಂದು (ಭಾನುವಾರ – ಮೇ 5) ಬೆಂಗಳೂರಿನ ಕೆಂಪೇಗೌಡ ಏರ್‌ಪೋರ್ಟ್‌ಗೆ ಆಗಮಿಸುವ ಸಾಧ್ಯತೆ ದಟ್ಟವಾಗಿದೆ. ಈಗಾಗಲೇ ಏರ್‌ಪೋರ್ಟ್‌ ಬಳಿ ಬೀಡು ಬಿಟ್ಟಿರುವ ಎಸ್‌ಐಟಿ ತಂಡವು ಪ್ರಜ್ವಲ್‌ ಆಗಮಿಸುತ್ತಿದ್ದಂತೆ ವಶಕ್ಕೆ ಪಡೆಯುವ ಸಾಧ್ಯತೆ ದಟ್ಟವಾಗಿದೆ.

ಇದನ್ನೂ ಓದಿ: Prajwal Revanna Case: ಹಾಸನ ಸಂಸದರ ನಿವಾಸವನ್ನು ವಶಕ್ಕೆ ಪಡೆದ ಎಸ್‌ಐಟಿ ಅಧಿಕಾರಿಗಳು

ಇಂದು ಮಧ್ಯಾಹ್ನ ಮೂರು ಗಂಟೆಗೆ ಪ್ರಜ್ವಲ್ ರೇವಣ್ಣ ಆಗಮಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಪ್ರಜ್ವಲ್‌ ಯಾವುದೇ ಸಮಯದಲ್ಲಿ ಬೇಕಿದ್ದರೂ ಭಾರತಕ್ಕೆ ಬರಬಹುದು ಎಂಬ ನಿಟ್ಟಿನಲ್ಲಿ ಶನಿವಾರ ರಾತ್ರಿಯಿಂದಲೇ ಏರ್‌ಪೋರ್ಟ್‌ನಲ್ಲಿ ಎಸ್‌ಐಟಿ ಟೀಂ ಬೀಡುಬಿಟ್ಟಿದೆ. ಆದರೆ, ಪ್ರಜ್ವಲ್‌ ರೇವಣ್ಣ ಈವರೆಗೂ ಆಗಮಿಸಿಲ್ಲ. ಈ ಹಿನ್ನೆಲೆಯಲ್ಲಿ ಅವರಿಗಾಗಿ ಕಾದು ಕಾದು ಅಧಿಕಾರಿಗಳು ಸುಸ್ತಾಗಿದ್ದಾರೆ.

ಆದರೆ, ಈಗಿನ ಮಾಹಿತಿ ಪ್ರಕಾರ, ಪ್ರಜ್ವಲ್‌ ರೇವಣ್ಣ ಅವರು ಮಧ್ಯಾಹ್ನ ಮೂರು ಗಂಟೆ ಸುಮಾರಿಗೆ ಬೆಂಗಳೂರಿಗೆ ಬಂದಿಳಿಯಲಿದ್ದಾರೆ ಎನ್ನಲಾಗಿದೆ. ಪ್ರಜ್ವಲ್‌ಗಾಗಿ ಎಸ್ಐಟಿ, ಗುಪ್ತಚರ ತಂಡಗಳು ಕಾದು ಕುಳಿತಿದ್ದು, ವಿದೇಶಿ ವಿಮಾನಗಳ ಪ್ಯಾಸೆಂಜರ್ ಲಿಸ್ಟ್ ಅನ್ನು ಪರಿಶೀಲನೆ ನಡೆಸಲಾಗುತ್ತಿದೆ. ದುಬೈ, ಮಸ್ಕಟ್, ಪ್ರಾಂಕ್ ಫರ್ಟ್ ವಿಮಾನಗಳ ಮೇಲೆ ಹದ್ದಿನ ಕಣ್ಣಿಡಲಾಗಿದೆ.

Continue Reading
Advertisement
Gadag News
ಕರ್ನಾಟಕ3 mins ago

Gadag News: ಮುಂಡರಗಿ ಬಳಿ ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರ ಸಾವು

Drought Relief
ಕರ್ನಾಟಕ46 mins ago

Drought Relief: ಚುನಾವಣೆ ಖರ್ಚಿಗಾಗಿ ಬರ ಪರಿಹಾರ ತಡೆಹಿಡಿದ ಕಾಂಗ್ರೆಸ್‌ ಸರ್ಕಾರ: ಆರ್‌.ಅಶೋಕ್‌

Prajwal Revanna Case No evidence against me its a conspiracy says HD Revanna
ಕರ್ನಾಟಕ53 mins ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Beef smuggling suspected Hindu activists pelt stones at vehicle
ಯಾದಗಿರಿ1 hour ago

Beef Smuggling: ಗೋಮಾಂಸ ಸಾಗಾಟ ಶಂಕೆ; ಹಿಂದುಪರ ಕಾರ್ಯಕರ್ತರಿಂದ ವಾಹನಕ್ಕೆ ಕಲ್ಲು ತೂರಾಟ

Narendra Modi
ದೇಶ1 hour ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Vijay Namdevrao Wadettiwar
ದೇಶ2 hours ago

ಮುಂಬೈ ದಾಳಿ ಉಗ್ರ ಅಜ್ಮಲ್‌ ಕಸಬ್‌ ನಿರಪರಾಧಿ ಎಂದ ಕಾಂಗ್ರೆಸ್‌ ನಾಯಕ; ಭುಗಿಲೆದ್ದ ವಿವಾದ!

Beer Shortage
ಕರ್ನಾಟಕ2 hours ago

Beer Shortage: ಬೇಸಿಗೆಯಲ್ಲಿ ಮದ್ಯ ಪ್ರಿಯರಿಗೆ ಬ್ಯಾಡ್‌ ನ್ಯೂಸ್; ಇನ್ನೆರಡು ತಿಂಗಳು ಬಿಯರ್‌ ಸಿಗೋದು ಕಷ್ಟ!

Torn Jeans Styling Tips
ಫ್ಯಾಷನ್2 hours ago

Torn Jeans Styling Tips: ಟೊರ್ನ್‌ ಜೀನ್ಸ್‌ ಪ್ಯಾಂಟ್‌ ಪ್ರಿಯರು ನೆನಪಿನಲ್ಲಿಟ್ಟುಕೊಳ್ಳಬೇಕಾದ 5 ಪ್ರಮುಖ ಸಂಗತಿಗಳು

lok sabha Election 2024 Bus Fare Hike
Lok Sabha Election 20242 hours ago

Lok Sabha Election 2024 : ಮತದಾನದ ಹಬ್ಬದಲ್ಲೂ ಲೂಟಿಗೆ ಇಳಿದ ಖಾಸಗಿ ಬಸ್‌! ವೋಟ್‌ ಹಾಕಲು ಬಸ್‌ ಏರುವವರಿಗೆ ಟಿಕೆಟ್ ದುಬಾರಿ!‌

IPL 2024
Latest2 hours ago

IPL 2024 : ಚೆನ್ನೈ ತಂಡದ ಮಾರಕ ಬೌಲರ್ ಮಹೀಶ್​ ಪತಿರಾನಾ​ ಐಪಿಎಲ್​ನಿಂದ ಹೊರಕ್ಕೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case No evidence against me its a conspiracy says HD Revanna
ಕರ್ನಾಟಕ53 mins ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ1 hour ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ14 hours ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ2 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ2 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ3 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ3 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ4 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ6 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20246 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

ಟ್ರೆಂಡಿಂಗ್‌