Mangalore drugs case : ಡ್ರಗ್ಸ್‌ ಜಾಲದಲ್ಲಿ ಸಿಲುಕಿದ ಇಬ್ಬರು ವೈದ್ಯರು ಸೇವೆಯಿಂದ ವಜಾ, ಏಳು ಮೆಡಿಕಲ್‌ ವಿದ್ಯಾರ್ಥಿಗಳು ಸಸ್ಪೆಂಡ್‌ - Vistara News

ಉಡುಪಿ

Mangalore drugs case : ಡ್ರಗ್ಸ್‌ ಜಾಲದಲ್ಲಿ ಸಿಲುಕಿದ ಇಬ್ಬರು ವೈದ್ಯರು ಸೇವೆಯಿಂದ ವಜಾ, ಏಳು ಮೆಡಿಕಲ್‌ ವಿದ್ಯಾರ್ಥಿಗಳು ಸಸ್ಪೆಂಡ್‌

ಮಂಗಳೂರಿನಲ್ಲಿ ಬಯಲಾದ ಗಾಂಜಾ ಪ್ರಕರಣಕ್ಕೆ ಸಂಬಂಧಿಸಿ ಕೆಎಂಸಿ ಆಸ್ಪತ್ರೆಯ ಆಡಳಿತ ಮಂಡಳಿಯುವ ಇಬ್ಬರು ವೈದ್ಯರನ್ನು ವಜಾಗೊಳಿಸಿದೆ. ಏಳು ವಿದ್ಯಾರ್ಥಿಗಳನ್ನು ಅಮಾನತು ಮಾಡಿದೆ.

VISTARANEWS.COM


on

ಗಾಂಜಾ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಂಗಳೂರು: ಇತ್ತೀಚೆಗೆ ಬಯಲಾದ ವೈದ್ಯರು ಮತ್ತು ವೈದ್ಯಕೀಯ ವಿದ್ಯಾರ್ಥಿಗಳನ್ನು ಒಳಗೊಂಡ ಡ್ರಗ್ಸ್‌ ಜಾಲದಲ್ಲಿ ಸಿಲುಕಿದವರಿಗೆ ಕೆಎಂಸಿ ಆಸ್ಪತ್ರೆಯ ಆಡಳಿತ ಮಂಡಳಿ ವಜಾ ಮತ್ತು ಅಮಾನತಿನ ಶಿಕ್ಷೆಯನ್ನು ನೀಡಿದೆ.

ಮಂಗಳೂರಿನ ಅತ್ತಾವರದ ಕೆಎಂಸಿ ಆಸ್ಪತ್ರೆಯಲ್ಲಿ ಮೆಡಿಕಲ್‌ ಆಫೀಸರ್‌ ಆಗಿದ್ದ ಡಾ.ಸಮೀರ್ ಮತ್ತು ಮಣಿಪಾಲ ಕೆಎಂಸಿಯಲ್ಲಿ ಮೆಡಿಕಲ್‌ ಸರ್ಜನ್‌ ಆಗಿದ್ದ ಡಾ.ಮಣಿಮಾರನ್ ಮುತ್ತು ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

ವೈದ್ಯಕೀಯ ವಿದ್ಯಾರ್ಥಿಗಳಾದ ಡಾ.ಕಿಶೋರಿ ಲಾಲ್, ಡಾ.ನದೀಯಾ ಸಿರಾಜ್, ಡಾ. ವರ್ಷಿಣಿ ಪತ್ರಿ, ಡಾ.ರಿಯಾ ಚಡ್ಡ, ಡಾ.ಇರಾ ಬಾಸಿನ, ಡಾ.ಕ್ಷಿತಿಜ್ ಗುಪ್ತಾ, ಡಾ.ಹರ್ಷ ಕುಮಾರ್ ವಿ.ಎಸ್. ಅವರನ್ನು ಅಮಾನತು ಮಾಡಲಾಗಿದೆ.

ಮಂಗಳೂರಿನಲ್ಲಿ ಪ್ರತಿಷ್ಠಿತ ವೈದ್ಯಕೀಯ ಕಾಲೇಜುಗಳ ವೈದ್ಯರು ಹಾಗೂ ವೈದ್ಯಕೀಯ ವಿದ್ಯಾರ್ಥಿಗಳ ಗಾಂಜಾ ಪೆಡ್ಲಿಂಗ್ ಹಾಗೂ ಗಾಂಜಾ ಸೇವನೆ ಪ್ರಕರಣ ಭಾರೀ ಸಂಚಲನ ಸೃಷ್ಟಿಸಿತ್ತು. ಇದೀಗ ಕೆಎಂಸಿ‌ ಆಸ್ಪತ್ರೆ ಆಡಳಿತ ಮಂಡಳಿ ಇಬ್ಬರು ವೈದ್ಯರನ್ನು ವಜಾ ಮಾಡಿ ಗುತ್ತಿಗೆ ರದ್ದುಪಡಿಸಿದೆ. ಅದೇ ರೀತಿ ವೈದ್ಯಕೀಯ ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಂಡು ಆಸ್ಪತ್ರೆಯಿಂದ ಅಮಾನತು ಮಾಡಿದೆ. ಮಂಗಳೂರು ಪೊಲೀಸ್‌ ಕಮಿಷನರ್ ಕಚೇರಿಗೆ ಆಗಮಿಸಿರುವ ಕೆಎಂಸಿ ಡೀನ್ ಉನ್ನಿಕೃಷ್ಣನ್ ವೈದ್ಯರು ಹಾಗೂ ವೈದ್ಯಕೀಯ ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಂಡ ಬಗ್ಗೆ ಮಾಹಿತಿ ನೀಡಿದ್ದಾರೆ.

ಅಮಾನತುಗೊಂಡವರು ಮತ್ತು ಸೇವೆಯಿಂದ ಅಮಾನತುಗೊಂಡವರೆಲ್ಲರೂ ೨೩ರಿಂದ ೩೦ ವರ್ಷದವರಾಗಿದ್ದು ಗಾಂಜಾ ಮತ್ತು ಇತರ ಮಾದಕ ದ್ರವ್ಯಗಳ ಚಟ ಅಂಟಿಸಿಕೊಂಡವರು. ಇವರಲ್ಲಿ ವಿದ್ಯಾರ್ಥಿನಿಯರೂ ಇದ್ದಾರೆ. ಲಿವ್‌ ಇನ್‌ ರಿಲೇಷನ್‌ ಶಿಪ್‌ ಮೂಲಕ ಮಾದಕ ದ್ರವ್ಯಗಳ ಚಟಕ್ಕೆ ಬೀಳುವ ಇವರು ಸೆಕ್ಸ್‌ ಹಗರಣಗಳಲ್ಲೂ ಭಾಗಿಯಾಗಿದ್ದಾರೆ ಎನ್ನಲಾಗಿದೆ. ಅದರೆ, ಇದೆಲ್ಲವೂ ಸಮ್ಮತಿಯ ಸಂಬಂಧಗಳಾಗಿರುವುದರಿಂದ ಯಾರೂ ದೂರು ನೀಡಿಲ್ಲ. ಒಟ್ಟಾರೆಯಾಗಿ ವೈದ್ಯಕೀಯ ಲೋಕದಲ್ಲಿ ಸಾಧನೆ ಮಾಡುತ್ತಾ ಜನರಿಗೆ ನೆರವಾಗಬೇಕಾದ ಪ್ರತಿಭಾವಂತ ಮಾದಕ ಮತ್ತು ಸೆಕ್ಸ್‌ ಜಾಲಕ್ಕೆ ಸಿಲುಕಿದ್ದಾರೆ.

ಇದನ್ನೂ ಓದಿ | Drugs Mafia | ಇದು ಬರೀ ಮಾದಕ ಲೋಕವಲ್ಲ, ಲಿವಿಂಗ್‌ ಟುಗೆದರ್‌, ಸೆಕ್ಸ್‌ ಬೆರೆತ ವೈದ್ಯ ವಿದ್ಯಾರ್ಥಿಗಳ ಕರಾಳ ಲೋಕ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Karnataka Weather: ಇಂದು ಕರಾವಳಿ, ಮಲೆನಾಡು ಸೇರಿ ವಿವಿಧೆಡೆ ಭಾರಿ ಮಳೆ; ನದಿ ಜಲಾನಯನ ಪ್ರದೇಶದಲ್ಲಿ ಪ್ರವಾಹ ಎಚ್ಚರಿಕೆ!

Karnataka Weather: ಜುಲೈ 19ರಂದು ಕೂಡ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಸೇರಿ ರಾಜ್ಯದ ವಿವಿಧೆಡೆ ಭಾರಿ ಮಳೆ ಸುರಿಯಲಿದೆ.

VISTARANEWS.COM


on

ಭಾರಿ ಮಳೆಯಿಂದ ಶೃಂಗೇರಿಯಲ್ಲಿ ತುಂಗಾ ನದಿಯ ನೀರಿನ ಮಟ್ಟ ಹೆಚ್ಚಾಗಿ ಗಾಂಧಿ ಮೈದಾನವು ಜಲಾವೃತವಾಗಿದೆ.
Koo

ಬೆಂಗಳೂರು: ಜುಲೈ 18ರಂದು ರಾಜ್ಯದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಬೆಳಗಾವಿ ಮತ್ತು ಹಾಸನ ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ (Karnataka Weather) ನೀಡಿದೆ.

ಇನ್ನು ಕರಾವಳಿ ಕರ್ನಾಟಕದ ಕೆಲವು ಜಲಾನಯನ ಪ್ರದೇಶಗಳು ಮತ್ತು ನೆರೆಹೊರೆಗಳಲ್ಲಿ ಮಧ್ಯಮ ಹಠಾತ್ ಪ್ರವಾಹದ ಅಪಾಯವಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಅತ್ಯಧಿಕ ಮಳೆಯಾಗುವ ಕಾರಣ ಕೆಲವು ಸಂಪೂರ್ಣ ಸ್ಯಾಚುರೇಟೆಡ್ ಮಣ್ಣು ಮತ್ತು ತಗ್ಗು ಪ್ರದೇಶಗಳಲ್ಲಿ ಮೇಲ್ಮೈ ಹರಿವು / ಮುಳುಗುವಿಕೆ ಸಂಭವಿಸಬಹುದು. ನೈಋತ್ಯ ಮಾರುತಗಳ ತೀವ್ರತೆಯಿಂದಾಗಿ ಪಶ್ಚಿಮ ಕರಾವಳಿಯಲ್ಲಿ ಅತಿ ಭಾರಿ ಮತ್ತು ಅತ್ಯಧಿಕ ಮಳೆಯಾಗುತ್ತಿದ್ದು, ಕಬಿನಿ, ಹಾರಂಗಿ, ಶಾಂಭವಿ, ಸ್ವರ್ಣ, ಹಾಲಾಡಿ, ಅಘನಾಶಿನಿ, ನೇತ್ರಾವತಿ, ಸೀತಾ, ವರದಾ, ಕುಮುವತಿ, ಗುರುಪುರ, ಹಲವೆಡೆ ತುಂಗಾ ಮೇಲ್ಭಾಗ ಮತ್ತು ಸಣ್ಣ ನದಿಗಳಲ್ಲಿ ನೀರಿನ ಪ್ರಮಾಣ ಹೆಚ್ಚಾಗುವ ನಿರೀಕ್ಷೆ ಇದೆ.

ತುಂಗಭದ್ರಾ, ಭದ್ರಾ, ಹಾರಂಗಿ, ಕೃಷ್ಣರಾಜಸಾಗರ, ಕಬಿನಿ, ಹೇಮಾವತಿ, ಆಲಮಟ್ಟಿ, ಕೃಷ್ಣರಾಜಸಾಗರ, ನಾರಾಯಣಪುರ ಯೋಜನೆಗಳಿಗೆ ಒಳಹರಿವು ಹೆಚ್ಚಾಗುವ ನಿರೀಕ್ಷೆಯಿದೆ. ಹೀಗಾಗಿ ನದಿ ಜಲಾನಯನ ಪ್ರದೇಶಗಳ ಜನರಿಗೆ ಪ್ರವಾಹ ಎಚ್ಚರಿಕೆಯನ್ನು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನೀಡಿದೆ.

ಇನ್ನು ಜುಲೈ 19ರಂದು ಕೂಡ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಬೆಳಗಾವಿ, ಬೀದರ್, ಕಲಬುರ್ಗಿ ಮತ್ತು ಹಾಸನ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ, ಒಳನಾಡಿನ ಉಳಿದ ಜಿಲ್ಲೆಗಳ ಬಹುತೇಕ ಸ್ಥಳಗಳಲ್ಲಿ ಗಾಳಿಯ ವೇಗವು (40-50 kmph) ತಲುಪುವ ಸಾಧ್ಯತೆಯಿದೆ ಹಾಗೂ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಮೀನುಗಾರರಿಗೆ ಎಚ್ಚರಿಕೆ

ತೀವ್ರ ಬಿರುಗಾಳಿಯಿಂದ ಕೂಡಿದ ಹವಾಮಾನವು ಗಂಟೆಗೆ 35 ಕಿಮೀ ನಿಂದ 45 ಕಿಮೀ ವೇಗದಲ್ಲಿ 55 ಕಿಮೀ ವೇಗದಲ್ಲಿ ಬೀಸುವ ಗಾಳಿಯು ಕರ್ನಾಟಕ ಕರಾವಳಿಯ ಉದ್ದಕ್ಕೂ ಮತ್ತು ಹೊರಗೆ ಮೇಲುಗೈ ಸಾಧಿಸುವ ಸಾಧ್ಯತೆಯಿದೆ.

ದಕ್ಷಿಣ ಕನ್ನಡ, ಕರ್ನಾಟಕ ಕರಾವಳಿಯಲ್ಲಿ ಮುಲ್ಕಿಯಿಂದ ಮಂಗಳೂರಿನವರೆಗೆ ಅಲೆಗಳ ಎಚ್ಚರಿಕೆ. ಗುರುವಾರ ರಾತ್ರಿ 11:30 ಗಂಟೆಗಳವರೆಗೆ 3.3 – 3.6 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳನ್ನು ಮುನ್ಸೂಚಿಸಲಾಗಿದೆ. ಸಾಗರ ಕಾರ್ಯಾಚರಣೆಗಳು ಮತ್ತು ಹತ್ತಿರದ ದಡದ ಮನರಂಜನೆಯನ್ನು ಮಾಡುವಾಗ ಜಾಗರೂಕರಾಗಿರಿ ಎಂದು ಸಲಹೆ ನೀಡಲಾಗಿದೆ.

ಬೈಂದೂರಿನಿಂದ ಕಾಪುವರೆಗಿನ ಉಡುಪಿ, ಕರ್ನಾಟಕ ಕರಾವಳಿಯಲ್ಲಿ ಅಲೆಗಳ ಎಚ್ಚರಿಕೆ, ರಾತ್ರಿ 11:30 ಗಂಟೆಗಳವರೆಗೆ 34 – 3.8 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳನ್ನು ಮುನ್ಸೂಚಿಸಲಾಗಿದೆ. ಸಣ್ಣ ಹಡಗುಗಳು ಸಂಚರಿಸದಂತೆ, ಸಮೀಪ ದಡದ ಮನರಂಜನಾ ಚಟುವಟಿಕೆಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸುವಂತೆ ಸೂಚಿಸಲಾಗಿದೆ.

ಉತ್ತರ ಕನ್ನಡ, ಕರ್ನಾಟಕ ಕರಾವಳಿಯಲ್ಲಿ ಮಾಜಾಳಿಯಿಂದ ಭಟ್ಕಳದವರೆಗೆ ಅಲೆಗಳ ಎಚ್ಚರಿಕೆ. ರಾತ್ರಿ 11:30 ಗಂಟೆಗಳವರೆಗೆ 3.6 – 40 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳನ್ನು ಮುನ್ಸೂಚಿಸಲಾಗಿದೆ. ಸಣ್ಣ ಹಡಗುಗಳು ಸಂಚರಿಸದಂತೆ, ಸಮೀಪ ದಡದ ಮನರಂಜನಾ ಚಟುವಟಿಕೆಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸುವಂತೆ ಸಲಹೆ ನೀಡಲಾಗಿದೆ.

ಉತ್ತರ ಕನ್ನಡ, ಕರ್ನಾಟಕ ಕರಾವಳಿಯ ಮಾಜಾಳಿಯಿಂದ ಭಟ್ಕಳದವರೆಗೆ ಸೈಲ್ ಸರ್ಚ್ ವಾಚ್, ರಾತ್ರಿ 11:30 ಗಂಟೆಗಳವರೆಗೆ 2.6 – 2.8 ಮೀ ಎತ್ತರದೊಂದಿಗೆ 100 – 12.0 ಸೆಕೆಂಡುಗಳ ವ್ಯಾಪ್ತಿಯಲ್ಲಿ ಅಲೆಗಳ ಅಲೆಗಳನ್ನು ಮುನ್ಸೂಚಿಸಲಾಗಿದೆ. ತಕ್ಷಣ ಕ್ರಮ ಕೈಗೊಳ್ಳುವ ಅಗತ್ಯವಿಲ್ಲ ಎಂದು ಸಲಹೆ ನೀಡಿದರು.

ಇದನ್ನೂ ಓದಿ | Karnataka Rain: ವರುಣಾರ್ಭಟಕ್ಕೆ ರಾಜ್ಯದ ಹಲವೆಡೆ ನದಿಗಳು ಉಕ್ಕಿ ಹರಿದು ನೆರೆ ಸೃಷ್ಟಿ; ಕುಸಿದ ಸೇತುವೆಗಳು!

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:

ಮುಂದಿನ 48 ಗಂಟೆಗಳು ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ನಿರಂತರ ಗಾಳಿಯ ವೇಗವು (30-40 kmph) ತಲುಪುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27° C ಮತ್ತು 21 ° C ಆಗಿರಬಹುದು.

Continue Reading

ಪ್ರಮುಖ ಸುದ್ದಿ

Karnataka Rain: ವರುಣಾರ್ಭಟಕ್ಕೆ ರಾಜ್ಯದ ಹಲವೆಡೆ ನದಿಗಳು ಉಕ್ಕಿ ಹರಿದು ನೆರೆ ಸೃಷ್ಟಿ; ಕುಸಿದ ಸೇತುವೆಗಳು!

Karnataka Rain: ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಬೆಳಗಾವಿ, ಮೈಸೂರು, ಚಾಮರಾಜನಗರ ಜಿಲ್ಲೆಯ ವಿವಿಧೆಡೆ ಭಾರಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ನಾಳೆಯೂ ಕರಾವಳಿ ಭಾಗ, ಮಲೆನಾಡು ಭಾಗದಲ್ಲಿ ಭಾರಿ ಮಳೆ ಮುಂದುವರಿಯುವ ಸಾಧ್ಯತೆ ಇದೆ.

VISTARANEWS.COM


on

ಉಡುಪಿ ಜಿಲ್ಲೆಯ ಸೀತಾ ನದಿ ಹರಿಯುವ ಭಾಗದಲ್ಲಿ ಗ್ರಾಮ, ತೋಟಗದ್ದೆಗಳು ಜಲಾವೃತವಾದ ದೃಶ್ಯ.
Koo

ಬೆಂಗಳೂರು: ವರುಣಾರ್ಭಟಕ್ಕೆ ರಾಜ್ಯದ ಹಲವೆಡೆ ನದಿಗಳು ಉಕ್ಕಿ ಹರಿದು ನೆರೆ ಸೃಷ್ಟಿಯಾಗಿದೆ. ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು ಜಿಲ್ಲೆ ಸೇರಿ ಮಲೆನಾಡು ಭಾಗದಲ್ಲಿ ನಿರಂತರ ಮಳೆಯಿಂದ (Karnataka Rain) ಜನ ಜೀವನ ಅಸ್ತವ್ಯಸ್ತಗೊಂಡಿದೆ. ಮಳೆ ನೀರಿನ ರಭಸಕ್ಕೆ ಹಲವೆಡೆ ಸೇತುವೆಗಳು ಕುಸಿದಿದ್ದು, ವಾಹನ ಸಂಚಾರಕ್ಕೆ ಅಡಚಣೆಯಾಗಿದೆ.

ಡ್ರೋನ್ ಕಣ್ಣಲ್ಲಿ ಅಘನಾಶಿನಿ ನದಿ ಪ್ರವಾಹ ಸೆರೆ

ಕಾರವಾರ: ಜಿಲ್ಲೆಯ ಕರಾವಳಿಯಲ್ಲಿ ಕಳೆದೊಂದು ವಾರದಿಂದ ವರುಣ ಅಬ್ಬರಿಸುತ್ತಿದ್ದಾನೆ. ವರುಣಾರ್ಭಟಕ್ಕೆ ನದಿಗಳು ಉಕ್ಕಿ ಹರಿದು ಹಲವೆಡೆ ನೆರೆ ಸೃಷ್ಟಿಯಾಗಿದ್ದು, ಡ್ರೋನ್ ಕಣ್ಣಲ್ಲಿ ಅಘನಾಶಿನಿ ನದಿ ಪ್ರವಾಹ ಸೆರೆಯಾಗಿದೆ. ಕುಮಟಾ ತಾಲೂಕಿನ ಹಲವು ಗ್ರಾಮಗಳಲ್ಲಿ ಅಘನಾಶಿನಿ ನೆರೆ ಸೃಷ್ಟಿಸಿದ್ದು, ಹವ್ಯಾಸಿ ಛಾಯಾಚಿತ್ರಗಾರ ಗೋಪಿ ಜಾಲಿ ಡ್ರೋನ್ ಕ್ಯಾಮೆರಾದಲ್ಲಿ ನೆರೆ ಸ್ಥಿತಿಯನ್ನು ಸೆರೆಹಿಡಿದಿದ್ದಾರೆ.

ಸಕಲೇಶಪುರ ಬಳಿ ಹೆದ್ದಾರಿಯ ತಡೆಗೋಡೆ ಕುಸಿತ

ಹಾಸನ: ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರಿ ಮಳೆ ಮುಂದುವರಿದಿದ್ದು, ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಮತ್ತೆ ಭೂ ಕುಸಿತ ಸಂಭವಿಸಿದೆ. ಸಕಲೇಶಪುರ ತಾಲೂಕಿನ ಕೊಲ್ಲಹಳ್ಳಿ ಬಳಿ ಹೆದ್ದಾರಿಯ ತಡೆಗೋಡೆ ಕುಸಿದಿದೆ. ಸುಮಾರು 500 ಮೀಟರ್ ಉದ್ದಕ್ಕೂ ರಸ್ತೆಗೆ ಹೊಂದಿಕೊಂಡಿದ್ದ ತಡೆ ಗೋಡೆ ಕುಸಿಯುತ್ತಿದೆ. ಮಳೆ ಹೆಚ್ಚಾದರೆ ಚತುಷ್ಪಥ ರಸ್ತೆಯ ಒಂದು ಭಾಗದ ಕಾಂಕ್ರಿಟ್ ರಸ್ತೆಯೇ ಕೊಚ್ಚಿ ಹೋಗೋ ಆತಂಕ ಇದೆ. ಅವೈಜ್ಞಾನಿಕ ಹಾಗೂ ಕಳಪೆ ಕಾಮಗಾರಿಯಿಂದ ರಸ್ತೆ ಕುಸಿತ ಆರೋಪ ಕೇಳಿಬಂದಿದೆ. ನೆನ್ನೆ ಕೂಡ ತಾಲೂಕಿನ ಗುಲಗಳಲೆ ಬಳಿ ಕುಸಿದಿದ್ದ ರಾಷ್ಟ್ರೀಯ ಹೆದ್ದಾರಿ ಕುಸಿದಿತ್ತು.

ಸಕಲೇಶಪುರ ತಾಲೂಕಿನ ಮಾರನಹಳ್ಳಿ ಬಳಿ ಮಳೆ ನೀರು ರಭಸಕ್ಕೆ ಸೇತುವೆ ಕೊಚ್ಚಿ ಹೋಗಿದೆ.

ದೊಡ್ಡತಪ್ಲು ಬಳಿ‌ ಗುಡ್ಡ ಕುಸಿತ

ಸಕಲೇಶಪುರ ತಾಲೂಕಿನ ದೊಡ್ಡತಪ್ಲು ಬಳಿ‌ ಗುಡ್ಡ ಕುಸಿದಿದ್ದರಿಂದ ಸುಮಾರು ಒಂದುಗಂಟೆಗೂ ಅಧಿಕ ಸಮಯ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ವಾಹನ ಸಂಚಾರ ಸ್ಥಗಿತವಾಗಿದೆ. ರಸ್ತೆಗೆ ಕುಸಿದು ಮಣ್ಣು ತೆರವು ಬಳಿಕ ವಾಹನ ಸಂಚಾರ ಮತ್ತೆ ಆರಂಭವಾಗಿದೆ. ಮುಂಜಾಗ್ರತಾ ಕ್ರಮವಾಗಿ ಸಕಲೇಶಪುರ ಕಡೆಯಿಂದ‌ ಮಂಗಳೂರು ಕಡೆಗೆ ಹೋಗೋ ವಾಹನಗಳ‌ ಮಾರ್ಗ ಬದಲಾವಣೆ ಮಾಡಲಾಗಿದ್ದು, ಹಾನುಬಾಳ್ ಮೂಲಕ ತೆರಳಲು ಸೂಚಿಸಿಲಾಗಿದೆ.

ಶೃಂಗೇರಿಯಲ್ಲಿ ನಿಲ್ಲದ ತುಂಗಾ ನದಿ ಆರ್ಭಟ

ಚಿಕ್ಕಮಗಳೂರು: ಜಿಲ್ಲೆಯ ಕೆರೆಕಟ್ಟೆ, ಘಟ್ಟ ಪ್ರದೇಶಗಳಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶೃಂಗೇರಿಯಲ್ಲಿ ತುಂಗಾ ನದಿ ಆರ್ಭಟಿಸುತ್ತಿದೆ. ನದಿ ಅಬ್ಬರಕ್ಕೆ ಭಾರತಿ ತೀರ್ಥ ರಸ್ತೆ ಜಲಾವೃತವಾಗಿದ್ದು, ಪಟ್ಟಣದ ಗಾಂಧಿ ಮೈದಾನವು ಸಂಪೂರ್ಣ ಮುಳುಗಡೆಯಾಗಿದೆ. ನದಿ ಪಾತ್ರದ ಅಂಗಡಿ ಮುಂಗಟ್ಟು, ಮನೆಗಳು ಜಲಾವೃತವಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ವಾಹನ ಸಂಚಾರ ನಿಷೇಧ ಮಾಡಲಾಗಿದೆ.

ಶೃಂಗೇರಿಯ ಗಾಂಧಿ ಮೈದಾನವು ಸಂಪೂರ್ಣ ಮುಳುಗಡೆಯಾಗಿದೆ.

ಭಾರಿ ಮಳೆಗೆ ಮುಳ್ಳಯ್ಯನಗಿರಿ ರಸ್ತೆಯಲ್ಲಿ ಮತ್ತೆ ಗುಡ್ಡ ಕುಸಿದಿದೆ. ದತ್ತಪೀಠಕ್ಕೆ ಹೋಗುವ ಮಾರ್ಗದಲ್ಲೂ ಗುಡ್ಡ ಕುಸಿತಿದ್ದು, ಐದರಿಂದ ಆರು ಕಡೆ ಗುಡ್ಡದ ಮಣ್ಣು ಕುಸಿದಿದೆ. ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ, ದತ್ತಪೀಠ ಪ್ರವಾಸಿ ತಾಣಗಳಾಗಿರುವ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಪ್ರವಾಸಿಗರ ವಾಹನಗಳಿಗೆ ನಿಷೇಧ ವಿಧಿಸಲಾಗಿದೆ.

ಮುರಿದು ಬಿದ್ದ ಕಬ್ಬಿಣದ ಸೇತುವೆ

ಭಾರೀ ಮಳೆ ಹಿನ್ನೆಲೆ ಶೃಂಗೇರಿ ತಾಲೂಕಿನ ಕೆರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ನೆಮ್ಮಾರು ಗ್ರಾಮದ ತೂಗು ಸೇತುವೆ ಕುಸಿದಿದೆ. ನೋಡ ನೋಡುತ್ತಿದ್ದಂತೆ ಜನರ ಕಣ್ಣೆದುರೇ ಕಬ್ಬಿಣದ ಸೇತುವೆ ಮುರಿದು ಬಿದ್ದಿದೆ.
ಸುಮಾರು ಐದಾರು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಹೊಳೆಹದ್ದು ಸೇತುವೆ ಇದಾಗಿದ್ದು, ಗ್ರಾಮದಿಂದ ಹೊರ ಬರಲಾಗದೆ ಗ್ರಾಮಸ್ಥರು ಸಂಕಷ್ಟ ಅನುಭವಿಸುತ್ತಿದ್ದಾರೆ.

ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಹೆಬ್ಬಾಳೆ ಸೇತುವೆ ಸೇತುವೆ ಮುಳುಗಡೆಯಿಂದಾಗಿ ಹೊರನಾಡು-ಕಳಸ ಸಂಪರ್ಕ ಕಡಿತವಾಗಿದೆ.

ಕಲಬುರಗಿ ಜಿಲ್ಲೆಯ ಚಿಂಚೊಳ್ಳಿ ತಾಲೂಕಿನ ಮಲಕಾಪುರ ಕಲ್ಲುಗಣಿಯಲ್ಲಿ‌ ತಡೆಗೋಡೆ ಕುಸಿದಿದೆ.

ಹೊನ್ನಾಳಿ, ಹರಿಹರದಲ್ಲಿ ನದಿ ಪಾತ್ರದ ಪ್ರದೇಶಗಳು ಮುಳುಗಡೆ

ದಾವಣಗೆರೆ: ಮಲೆನಾಡು ಭಾಗದಲ್ಲಿ ಭಾರಿ ಮಳೆಯಿಂದ ದಾವಣಗೆರೆ ಜಿಲ್ಲೆಯ ಸಮೀಪ ತುಂಗಭದ್ರಾ ನದಿ ಮೈತುಂಬಿ ಹರಿಯುತ್ತಿದೆ. ತುಂಗಾ ನದಿಯಿಂದ 75 ಸಾವಿರ ಕ್ಯುಸೆಕ್‌ಗೂ ಹೆಚ್ಚು ನೀರು ಹೊರ ಬಿಟ್ಟ ಹಿನ್ನೆಲೆಯಲ್ಲಿ ಹೊನ್ನಾಳಿ, ಹರಿಹರ ಸೇರಿದಂತೆ ನದಿ ಪಾತ್ರದ ಪ್ರದೇಶಗಳು ಮುಳುಗಡೆಯಾಗಿವೆ.

ಶ್ರೀ ಕ್ಷೇತ್ರ ಉಕ್ಕಡಗಾತ್ರಿ ದೇವಸ್ಥಾನದ ಮುಂಭಾಗಕ್ಕೆ ತುಂಗಭದ್ರಾ ನದಿ ನೀರು ಬಂದಿದ್ದು, ಸ್ನಾನ ಘಟ್ಟ, ಅಂಗಡಿ ಮುಂಗಟ್ಟುಗಳು ಸಂಪೂರ್ಣ ಮುಳುಗಡೆಯಾಗಿವೆ. ಉಕ್ಕಡಗಾತ್ರಿಗೆ ಪ್ರವೇಶ ಮಾಡುವ ಒಂದು ರಸ್ತೆ ಮುಳುಗಡೆಯಾಗಿದೆ. ಸೇತುವೆ ಮಾಡಿಸಿ ಎಂದು ದಶಕಗಳಿಂದ ಹೋರಾಟ ನಡೆಯುತ್ತಿದ್ದರೂ ಜನಪ್ರತಿನಿಧಿಗಳು ಸ್ಪಂದಿಸಿಲ್ಲ. ಪ್ರತಿ ಬಾರಿ ನದಿಯಲ್ಲಿ ನೀರು ಹೆಚ್ಚಾದಾಗ ಎರಡು ರಸ್ತೆಗಳು ಬಂದ್ ಆಗಿ ಸಂಚಾರಕ್ಕೆ ತೊಂದರೆಯಾಗುತ್ತದೆ ಎಂದು ಜನರು ಅಸಮಾಧಾನ ಹೊರಹಾಕಿದ್ದಾರೆ. ಹೊನ್ನಾಳಿ, ಹರಿಹರ ಸೇರಿದಂತೆ ಹಲವು ಕಡೆಗಳಲ್ಲಿ ಕೂಡ ವಸತಿ ಪ್ರದೇಶಕ್ಕೆ ನೀರು ನುಗ್ಗುವ ಆತಂಕ ಎದುರಾಗಿದೆ. ನದಿಯಲ್ಲಿ ಹೊರ ಹರಿವು ಕಡಿಮೆಯಾಗದಿದ್ದರೆ ಜನರನ್ನು ಸ್ಥಳಾಂತರ ಮಾಡಲು ಅಧಿಕಾರಿಗಳು ಮುಂದಾಗಿದ್ದಾರೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕಲ್ಲೋಳ ಗ್ರಾಮದಲ್ಲಿ ಭಾರಿ ಮಳೆಯಿಂದ ಗೋಪಾಲ ಶಾಹೀರ್ ಎಂಬುವವರ ಮನೆಯ ಚಾವಣಿ ಕುಸಿತಿದೆ.
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮೂಲೆ ಗದ್ದೆಮಠದ ಹತ್ತಿರ ಬಿದ್ದ ಬೃಹತ್ ಮರ ಬಿದ್ದಿದೆ.

ಮಡಿಕೇರಿ ಸಮೀಪ ಬಿರುಕು ಬಿಟ್ಟ ಗುಡ್ಡ

ಕೊಡಗು: ಮಡಿಕೇರಿ ಸಮೀಪದ ಮದೆನಾಡು ಸಮೀಪ ರಾಷ್ಟ್ರೀಯ 275ರಲ್ಲಿ ಗುಡ್ಡ ಕುಸಿಯುವ ಆತಂಕ ಉಂಟಾಗಿದೆ. ರಸ್ತೆ ಬದಿ ಇರೋ ಗುಡ್ಡದಲ್ಲಿ ಅಲ್ಲಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಯಾವ ಕ್ಷಣದಲ್ಲಾದರೂ ಗುಡ್ಡ ಕುಸಿದು ಬೀಳುವ ಸಾಧ್ಯತೆ ಇದೆ. ಮಂಜು ಮುಸುಕಿದ ವಾತಾವರಣದಿಂದ ವಾಹನ ಸವಾರರಿಗೆ ದಾರಿ ಸರಿಯಾಗಿ ಕಾಣುತ್ತಿಲ್ಲ. ಬಿರುಕು ಬಿಟ್ಟ ಸ್ಥಳಕ್ಕೆ ಮತ್ತಷ್ಟು ನೀರು ನುಗ್ಗಿದಲ್ಲಿ ಗುಡ್ಡ ಕುಸಿಯುವ ಸಾಧ್ಯತೆ ಇದೆ.

ಉಡುಪಿ ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌

ಉಡುಪಿ: ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಿಸಲಾಗಿದೆ. ಪಶ್ಚಿಮ ಘಟ್ಟ, ಹೆಬ್ರಿ, ಕಾರ್ಕಳ, ಆಗುಂಬೆಯಲ್ಲಿ ಭಾರೀ ಮಳೆಯಾಗುತ್ತಿದೆ. ಇನ್ನು ಸೀತಾ ನದಿಯ ಸುತ್ತಮುತ್ತಲ ಗ್ರಾಮ, ತೋಟಗದ್ದೆಗಳು ಜಲಾವೃತವಾದ ದೃಶ್ಯವನ್ನು ಡ್ರೋನ್ ಕ್ಯಾಮೆರಾದಿಂದ ಛಾಯಾಗ್ರಹಕ ಸಿದ್ಧಾರ್ಥ ನೀಲಾವರ ಸೆರೆಹಿಡಿದಿದ್ದಾರೆ. ಈ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿವೆ.

ನಂಜನಗೂಡಿನ ಪರಶುರಾಮ ದೇವಸ್ಥಾನ ಮುಳುಗಡೆ

ಮೈಸೂರು: ಕಬಿನಿ ಜಲಾಶಯದಿಂದ 36 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಹಿನ್ನೆಲೆಯಲ್ಲಿ ನಂಜನಗೂಡಿನ ಪರಶುರಾಮ ದೇವಸ್ಥಾನ ಮುಳುಗಡೆಯಾಗಿದೆ. ಕಬಿನಿ ಡ್ಯಾಂನಿಂದ ಕಪಿಲಾ ನದಿಗೆ ನೀರು ಬಿಡುಗಡೆ ಮಾಡಿದ್ದರಿಂದ
ನಂಜನಗೂಡಿನ ಪರಶುರಾಮ ದೇವಸ್ಥಾನ ಮುಳುಗಡೆಯಾಗಿದೆ. ಇನ್ನು ಮನೆಗಳಿಗೆ ನೀರು ನುಗ್ಗುತ್ತಿರುವ ಹಿನ್ನೆಲೆಯಲ್ಲಿ ನದಿ ಪಕ್ಕದ ನಿವಾಸಿಗಳು ಮನೆ ಖಾಲಿ ಮಾಡುತ್ತಿದ್ದು, ಪ್ರವಾಹದ ಭೀತಿ ಎದುರಿದುತ್ತಿದ್ದಾರೆ.

ಇದನ್ನೂ ಓದಿ | Ankola landslide Case: ಅಂಕೋಲಾ ಗುಡ್ಡ ಕುಸಿತ ಪ್ರಕರಣ; ಮೃತರ ಕುಟುಂಬಗಳಿಗೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಮೈದುಂಬಿ ಧುಮ್ಮಿಕ್ಕುತ್ತಿರುವ ಹೊಗೇನಕಲ್ ಜಲಪಾತ

ಚಾಮರಾಜನಗರ: ಕೆ.ಆರ್.ಎಸ್. ಹಾಗೂ ಕಬಿನಿ ಜಲಾಶಯದಿಂದ ಹೊರಹರಿವು ಹೆಚ್ಚಳ ಹಿನ್ನೆಲೆಯಲ್ಲಿ ಕಾವೇರಿ ರೌದ್ರ ನರ್ತನ ಮಾಡುತ್ತಿದ್ದು, ಇದರಿಂದ ಕರ್ನಾಟಕ- ತಮಿಳುನಾಡು ಗಡಿಯಲ್ಲಿರುವ ಹೊಗೇನಕಲ್ ಜಲಪಾತ ಮೈದುಂಬಿ ಧುಮ್ಮಿಕ್ಕುತ್ತಿದೆ.

Continue Reading

ಉತ್ತರ ಕನ್ನಡ

Landslide: ಶಿರೂರಿನಲ್ಲಿ ಕುಸಿದ ಗುಡ್ಡದಡಿ 5 ಶವ ಪತ್ತೆ, ಇನ್ನುಳಿದವರಿಗೆ ಹುಡುಕಾಟ; ಗೋಕರ್ಣದಲ್ಲೂ ಭೂಕುಸಿತ

Landslide: ಭೂಕುಸಿತ ಪ್ರದೇಶದಲ್ಲೇ ಸಡಿಲಗೊಂಡಿರುವ ಗುಡ್ಡ ಮತ್ತೆ ಬಿರುಕು ಬಿಟ್ಟಿದ್ದು, ಯಾವುದೇ ಕ್ಷಣದಲ್ಲೂ ಮತ್ತೆ ಕುಸಿಯುವ ಸಾಧ್ಯತೆ ಕಂಡುಬಂದಿದೆ. ಗುಡ್ಡದ ಮದ್ಯ ಭಾಗದಲ್ಲಿ ನೀರು ಉಕ್ಕಿ ಹರಿಯುತ್ತಿದ್ದು, ರಸ್ತೆಯ ಪಕ್ಕದಲ್ಲಿರುವ ಹೊಳೆಗೆ ಮಣ್ಣನ್ನು ಒಯ್ಯುತ್ತಿದೆ.

VISTARANEWS.COM


on

landslide Karnataka Rain
Koo

ಕಾರವಾರ: ಅಂಕೋಲಾ ಶಿರೂರು ಬಳಿ ಹೆದ್ದಾರಿಯಲ್ಲಿ (Highway landslide) ಭಾರಿ ಗುಡ್ಡ ಕುಸಿದು (Uttarakannada landslide) ಹತ್ತು ಮಂದಿ ನಾಪತ್ತೆಯಾದ ಘೋರ ದುರಂತದ ಸ್ಥಳದಲ್ಲಿ ಐದು ಶವಗಳು ಪತ್ತೆಯಾಗಿವೆ. ಇಂದು ಮುಂಜಾನೆಯಿಂದ ಮತ್ತೆ ಶವ ಪತ್ತೆ ಕಾರ್ಯಾಚರಣೆ ಆರಂಭಿಸಲಾಗಿದೆ.

ಎರಡು ಹಿಟಾಚಿ, ಎರಡು ಜೆಸಿಬಿ ಯಂತ್ರಗಳ ಮೂಲಕ ಗುಡ್ಡದ ಮಣ್ಣು ತೆರವು ಕಾರ್ಯಾಚರಣೆಯನ್ನು ಆರಂಭಿಸಲಾಗಿದೆ. ಕಾರ್ಯಾಚರಣೆಯಲ್ಲಿ ಎನ್‌ಡಿಆರ್‌ಎಫ್ ತಂಡ ಪಾಲ್ಗೊಂಡಿದೆ. ಈಗಾಗಲೇ ಐದು ಮೃತದೇಹಗಳು ಪತ್ತೆಯಾಗಿವೆ. ಮತ್ತಷ್ಟು ಜನ ಮಣ್ಣಿನಲ್ಲಿ ಸಿಲುಕಿಕೊಂಡಿರುವ ಸಾಧ್ಯತೆ ಇದೆ. ಹತ್ತು ಮಂದಿ ಮಣ್ಣಿನೊಳಗೆ ಸಿಲುಕಿದ್ದಾರೆ ಎಂದು ಶಂಕಿಸಲಾಗಿತ್ತು. ನಿನ್ನೆ ಮಹಿಳೆಯೊಬ್ಬರ ಶವ ದೊರೆತಿತ್ತು. ನಿನ್ನೆ ಕತ್ತಲಾದ್ದರಿಂದ ಹಾಗೂ ಮಳೆಯ ಕಾರಣ ಕಾರ್ಯಾಚರಣೆ ನಿಲ್ಲಿಸಲಾಗಿತ್ತು.

ಗುಡ್ಡದ ಮಣ್ಣು ಹೆದ್ದಾರಿಗೆ ಭಾರಿ ಪ್ರಮಾಣದಲ್ಲಿ ಕುಸಿದಿದೆ. ತೆರವು ಕಾರ್ಯಾಚರಣೆಗೆ ಹತ್ತಾರು ಲಾರಿ ಬಳಸಲಾಗುತ್ತಿದೆ. ರಕ್ಷಣಾ ಕಾರ್ಯದಲ್ಲಿ ಅಗ್ನಿಶಾಮಕ ದಳ ಸಿಬ್ಬಂದಿ, ಪೊಲೀಸ್, ಎನ್‌ಡಿಆರ್‌ಎಫ್ ಸಿಬ್ಬಂದಿ ಭಾಗಿಯಾಗಿದ್ದಾರೆ.

ಭೂಕುಸಿತ ಪ್ರದೇಶದಲ್ಲೇ ಸಡಿಲಗೊಂಡಿರುವ ಗುಡ್ಡ ಮತ್ತೆ ಬಿರುಕು ಬಿಟ್ಟಿದ್ದು, ಯಾವುದೇ ಕ್ಷಣದಲ್ಲೂ ಮತ್ತೆ ಕುಸಿಯುವ ಸಾಧ್ಯತೆ ಕಂಡುಬಂದಿದೆ. ಗುಡ್ಡದ ಮದ್ಯ ಭಾಗದಲ್ಲಿ ನೀರು ಉಕ್ಕಿ ಹರಿಯುತ್ತಿದ್ದು, ರಸ್ತೆಯ ಪಕ್ಕದಲ್ಲಿರುವ ಹೊಳೆಗೆ ಮಣ್ಣನ್ನು ಒಯ್ಯುತ್ತಿದೆ. ರಕ್ಷಣಾ ಕಾರ್ಯಕ್ಕೆ ಅಡ್ಡಿಯೂ ಆಗುತ್ತಿದೆ. ಅವೈಜ್ಞಾನಿಕ ಹೆದ್ದಾರಿ ಕಾಮಗಾರಿಯಿಂದಾಗಿ ಗುಡ್ಡಕ್ಕೆ ಸರಿಪಡಿಸಲಾಗದ ಧಕ್ಕೆಯಾಗಿದ್ದು, ಇನ್ನಷ್ಟು ಬಲಿ ಪಡೆಯುವ ಭೀತಿಯಿದೆ ಎನ್ನಲಾಗಿದೆ.

ಸಂಚಾರ ನಿಷೇಧ

ಭೂಕುಸಿತ ಕಾರ್ಯಾಚರಣೆ ಹಿನ್ನಲೆ ಶಿರೂರು ವ್ಯಾಪ್ತಿಯಲ್ಲಿ ಸಾರ್ವಜನಿಕರ ಓಡಾಟಕ್ಕೆ ನಿಷೇಧ ವಿಧಿಸಲಾಗಿದೆ. ಅಂಕೋಲಾ ತಾಲ್ಲೂಕಿನ ವಾಸರಕುದ್ರಗಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಶಿರೂರು ಗ್ರಾಮದಲ್ಲಿ ಕಾರ್ಯಾಚರಣೆ ನಡೆಯುತ್ತಿರುವ ಪ್ರದೇಶದ ಸುತ್ತ ಸಾರ್ವಜನಿಕರು, ವಾಹನ ಸವಾರರು ಓಡಾಡದಂತೆ ನಿಷೇಧಾಜ್ಞೆ ಹೊರಡಿಸಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಕೆ. ಆದೇಶಿಸಿದ್ದಾರೆ. ಕಾರ್ಯಾಚರಣೆಗೆ ಅಡ್ಡಿಯಾಗದಂತೆ ಮುನ್ನೆಚ್ಚರಿಕೆಯಾಗಿ ನಿಷೇಧ ವಿಧಿಸಲಾಗಿದೆ.

ಉಸ್ತುವಾರಿ ಸಚಿವ ಭೇಟಿ

ಸ್ಥಳಕ್ಕೆ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಭೇಟಿ ನೀಡಿ ಪರಿಶೀಲಿಸಿದರು. ಈಗಾಗಲೇ ಐದು ಮೃತ ದೇಹ ಪತ್ತೆಯಾಗಿದೆ. ಕಾರ್ಯಾಚರಣೆ ನಡೆಯುತ್ತಿದೆ. ಇದು ದೊಡ್ಡ ದುರಂತ, ಹೀಗೆ ಆಗಬಾರದಿತ್ತು. ಇದರ ಹೊಣೆಗಾರಿಕೆ ಐಆರ್ ಬಿಯವರದು. ಹತ್ತು ವರ್ಷದಿಂದ ಒಂದು ರಸ್ತೆ ಕ್ಲೀಯರ್ ಮಾಡೋಕೆ ಆಗಿಲ್ಲ. ಒಂದು ವರ್ಷದಿಂದ ಐಆರ್ ಬಿಯವರಿಗೆ ಹೇಳಿದ್ದೆ. ಅವರು ವ್ಯತ್ಯಾಸ ಮಾಡಿದ್ದರಿಂದ ಹೀಗೆ ಆಗಿದೆ. ಮೃತರ ಕುಟುಂಬಕ್ಕೆ ತಲಾ ಐದು ಲಕ್ಷ ಕೋಡೋಕೆ ತಯಾರಿ ಮಾಡಿಕೊಂಡಿದ್ದೇವೆ ಎಂದಿದ್ದಾರೆ.

ಗೋಕರ್ಣದಲ್ಲೂ ಭೂಕುಸಿತ

ಉತ್ತರಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಸ್ವಲ್ಪ ತಗ್ಗಿದೆಯಾದರೂ, ಗುಡ್ಡ ಕುಸಿತ ಪ್ರಕರಣಗಳು ನಿಂತಿಲ್ಲ. ಕುಮಟಾ ತಾಲೂಕಿನ ಗೋಕರ್ಣದಲ್ಲಿ (Gokarna landslide) ಇಂದು ಬೆಳ್ಳಂಬೆಳಿಗ್ಗೆ ಗುಡ್ಡ ಕುಸಿದಿದೆ. ಗೋಕರ್ಣ ಮುಖ್ಯ ಕಡಲತೀರದ ಹತ್ತಿರದ ರಾಮಮಂದಿರ ಬಳಿ ಗುಡ್ಡ ಕುಸಿತವಾಗಿದೆ. ಅದೃಷ್ಟವಶಾತ್ ದೇವಸ್ಥಾನದಲ್ಲಿ ಯಾರೂ ಇಲ್ಲದ ಹಿನ್ನೆಲೆಯಲ್ಲಿ ಅನಾಹುತ ತಪ್ಪಿದೆ.

ಉರುಳಿಕೊಂಡು ಬಂದ ಗುಡ್ಡದ ಬೃಹತ್‌ ಕಲ್ಲು ದೇವಸ್ಥಾನದ ಗೋಡೆಗೆ ತಾಗಿ ನಿಂತಿದೆ. ರಾಮಮಂದಿರ ದೇವಸ್ಥಾನಕ್ಕೆ ಯಾವುದೇ ಹಾನಿ ಆಗಿಲ್ಲ. ಅವ್ಯಾಹತವಾಗಿ ನಡೆಯುತ್ತಿರುವ ಕಲ್ಲುಗಣಿಗಾರಿಕೆಯ ಪರಿಣಾಮ ಗುಡ್ಡದ ಮಣ್ಣು ಸಡಿಲವಾಗಿದ್ದು, ಮಳೆಗೆ ಕುಸಿದಿದೆ ಎಂದು ಆರೋಪಿಸಲಾಗಿದೆ.

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಇಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಜಿಲ್ಲೆಯಾದ್ಯಂತ ಧಾರಾಕಾರ ಗಾಳಿ ಮಳೆ ಮುಂದುವರಿದಿದ್ದು, ಸುವರ್ಣಾ, ಸೀತಾ ನದಿಗಳು ತುಂಬಿ ಹರಿಯುತ್ತಿವೆ. ಆಗುಂಬೆ, ಚಿಕ್ಕಮಗಳೂರಿನಲ್ಲಿ ಮಳೆಯಾದ ಪರಿಣಾಮ ಕರಾವಳಿಯ ನದಿಗಳು ಭರ್ತಿಯಾಗಿವೆ. ನದಿ, ಹೊಳೆ ಪಾತ್ರದ ಗದ್ದೆಗಳಲ್ಲಿ ನೆರೆಯ ವಾತಾವರಣ ಕಂಡುಬಂದಿದೆ. ನದಿ, ಸಮುದ್ರ ತೀರದ ಜನಕ್ಕೆ ಉಡುಪಿ ಜಿಲ್ಲಾಡಳಿತ ಕಟ್ಟೆಚ್ಚರ ನೀಡಿದ್ದು, ಎರಡು ದಿನ ಸಮುದ್ರ ಮೀನುಗಾರಿಕೆ ನಿಷೇಧಿಸಿದೆ.

ಇದನ್ನೂ ಓದಿ: Uttara Kannada Rain: ಭಾರಿ ಮಳೆಗೆ ತತ್ತರಿಸಿದ ಉತ್ತರ ಕನ್ನಡ; ಭೂಕುಸಿತಕ್ಕೆ 11 ಸಾವು, ರಸ್ತೆಗಳೇ ಮಾಯ, ತೋಟ ಗದ್ದೆ ಮುಳುಗಡೆ

Continue Reading

ಮಳೆ

Karnataka Weather : ಬಿರುಗಾಳಿ ಜತೆಗೆ ಅಬ್ಬರಿಸಲಿದ್ದಾನೆ ವರುಣ; ಈ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Karnataka Weather Forecast: ಕರಾವಳಿ-ಮಲೆನಾಡು ಭಾಗದಲ್ಲಿ ವರುಣನ ರೌದ್ರಾವತಾರಕ್ಕೆ ಜನರು ನಲುಗಿ ಹೋಗಿದ್ದಾರೆ. ಮುಂದಿನ ನಾಲ್ಕೈದು ದಿನಗಳು ಗಾಳಿ ಜತೆಗೆ ಭಾರಿ ಮಳೆಯಾಗುವ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ (Heavy Rain Alert) ನೀಡಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ಜು.17ರಂದು ಕರ್ನಾಟಕದ ಕರಾವಳಿಯಲ್ಲಿ ಸಾಧಾರಣದಿಂದ ಅತಿ ಹೆಚ್ಚು ಮಳೆಯಾಗುವ (Heavy rain) ಎಚ್ಚರಿಕೆ ಇದ್ದು, ಮಲೆನಾಡಿನಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ (Rain News) ಸಾಧ್ಯತೆ ಇದೆ. ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಸೇರಿದಂತೆ ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ಕೋಲಾರದಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್‌, ಧಾರವಾಡ, ಗದಗ, ಸೇರಿದಂತೆ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಅತ್ಯಂತ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿಯಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡು ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರಿನಲ್ಲಿ ಮಳೆಯು ಅಬ್ಬರಿಸಲಿದೆ. ಕರಾವಳಿಯಲ್ಲಿ ವ್ಯಾಪಕ ಸಾಧಾರಣದಿಂದ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ಅಲರ್ಟ್‌ ನೀಡಲಾಗಿದೆ.

ಇದನ್ನೂ ಓದಿ: Rain Effect : ಭಾರಿ ಮಳೆಗೆ ಶಿರೂರು ಗುಡ್ಡ ಕುಸಿತ; ಮಣ್ಣಿನಡಿ ಸಿಲುಕಿದ್ದ ಮಹಿಳೆ ಮೃತದೇಹ ಪತ್ತೆ, ಉಳಿದವರಿಗಾಗಿ ಹುಡುಕಾಟ

ಬೆಂಗಳೂರಿನಲ್ಲಿ ಮರೆಯಾಗುವ ಸೂರ್ಯ

ಬೆಂಗಳೂರು ಸುತ್ತಮುತ್ತ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ವ್ಯಾಪಕವಾಗಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನಗಳು ಅನುಕ್ರಮವಾಗಿ 24 ಮತ್ತು 20 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ರೆಡ್‌ ಅಲರ್ಟ್‌ ಘೋಷಣೆ

ಗುಡುಗು ಸಹಿತ ವ್ಯಾಪಕ ಮಳೆಯಾಗಲಿದ್ದು, ಗಾಳಿ ವೇಗವು 40-50 ಕಿ.ಮೀ ವೇಗದಲ್ಲಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಹಾಸನ ಜಿಲ್ಲೆಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ ಮತ್ತು ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಮಳೆ ಅನಾಹುತದ ಚಿತ್ರಣ ಹೀಗಿದೆ ನೋಡಿ

Karnataka Rain
Rain Effect
karnataka Rain
Karnataka Rain
Karnataka Rain
karnataka Rain
karnataka rain
karnataka Rain
karnataka Rain

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Bigg Boss Kannada 11 Starting Date And Contestants List
ಬಿಗ್ ಬಾಸ್36 seconds ago

Bigg Boss Kannada: ಬಿಗ್‌ ಬಾಸ್‌ ಕನ್ನಡ ಸೀಸನ್‌ 11 ಯಾವಾಗಿನಿಂದ ಶುರು? ಸ್ಪರ್ಧಿಗಳು ಇವರೇನಾ?

Pralhad Joshi
ದೇಶ21 mins ago

Pralhad Joshi: ಉಚಿತ ಅಕ್ಕಿ ವಿತರಣೆಯ ಪಿಎಂ ಗರೀಬ್ ಕಲ್ಯಾಣ್‌ ಅನ್ನ ಯೋಜನೆ 2029ರ ವರೆಗೆ ವಿಸ್ತರಣೆ: ಪ್ರಲ್ಹಾದ ಜೋಶಿ

Kannada New Movie life of mradula song out
ಸ್ಯಾಂಡಲ್ ವುಡ್33 mins ago

Kannada New Movie: ಹೊಸಬರ ತಂಡ ಸಿದ್ದಪಡಿಸಿರುವ ಹೊಸತನದ ಸಿನಿಮಾ; ಲೈಫ್ ಆಫ್ ಮೃದುಲ ಹಾಡು ಬಿಡುಗಡೆ!

road Accident
ರಾಯಚೂರು38 mins ago

Road Accident : ಪಾದಚಾರಿ ಬಲಿ ಪಡೆದು ಎಸ್ಕೇಪ್‌ ಆದ ಬಸ್‌ ಚಾಲಕ; ಬಾಲಕಿಗೆ ಗುದ್ದಿ ಪ್ರಾಣ ಕಸಿದ ಲಾರಿ

Paris Olympics 2024
ಕ್ರೀಡೆ39 mins ago

Paris Olympics 2024: ಈ ಬಾರಿ ಒಲಿಂಪಿಕ್ಸ್​ನಲ್ಲಿ ಕಣಕ್ಕಿಳಿಯಲಿದ್ದಾರೆ ಭಾರತದ 117 ಕ್ರೀಡಾಳುಗಳು; ಅಥ್ಲೆಟಿಕ್ಸ್​ ದೊಡ್ಡ ತಂಡ

Urvashi Rautela bathroom video leak on social media
ಸಿನಿಮಾ56 mins ago

Urvashi Rautela: ನಟಿ ಊರ್ವಶಿ ರೌಟೇಲಾ ಬಟ್ಟೆ ಬಿಚ್ಚಿ, ಸ್ನಾನ ಮಾಡುವ ವಿಡಿಯೊ ಲೀಕ್‌!

United Nations
ವಿದೇಶ1 hour ago

United Nations: ಗಾಜಾದಲ್ಲಿ ಸಂಪೂರ್ಣ ಕದನ ವಿರಾಮ ಘೋಷಿಸಿ; ವಿಶ್ವಸಂಸ್ಥೆಯಲ್ಲಿ ಪುನರುಚ್ಚರಿಸಿದ ಭಾರತ

Karnataka Jobs Reservation
ಪ್ರಮುಖ ಸುದ್ದಿ1 hour ago

Karnataka Jobs Reservation: ಉರಿವ ಮನೆಯಿಂದ ಗಳ ಹಿರಿದ ಆಂಧ್ರಪ್ರದೇಶ; ʼನಮ್ಮಲ್ಲಿಗೇ ಬನ್ನಿʼ ಎಂದು ಖಾಸಗಿ ಉದ್ಯಮಗಳಿಗೆ ಭಿಕ್ಷಾಪಾತ್ರೆ ಒಡ್ಡಿದ ಸಚಿವ

Maoists Attack
ದೇಶ1 hour ago

Maoists Attack: ಛತ್ತೀಸ್‌ಗಢದಲ್ಲಿ ಮತ್ತೆ ಮಾವೋವಾದಿಗಳ ಅಟ್ಟಹಾಸ; ಇಬ್ಬರು ಪೊಲೀಸರು ಹುತಾತ್ಮ

Viral Video
ಪ್ರಮುಖ ಸುದ್ದಿ1 hour ago

Viral Video: ಇನ್‌ಸ್ಟಾಗ್ರಾಂನಲ್ಲಿಯೇ ಗಂಡನಿಗೆ ಡಿವೋರ್ಸ್‌‌ ನೀಡಿದ ದುಬೈ ರಾಜಕುಮಾರಿ! ಏನು ಬರೆದಿದ್ದಾಳೆ ನೋಡಿ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ2 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ3 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ3 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ3 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ4 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ4 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ4 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ4 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ5 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌