ಕಾರ್ಮಿಕ ಮಕ್ಕಳ ಶಿಶುಪಾಲನಾ ಕೇಂದ್ರಗಳಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನಕ್ಕೆ ಅನುದಾನ: ಸಚಿವ ಶಿವರಾಮ್ ಹೆಬ್ಬಾರ್ - Vistara News

ಉತ್ತರ ಕನ್ನಡ

ಕಾರ್ಮಿಕ ಮಕ್ಕಳ ಶಿಶುಪಾಲನಾ ಕೇಂದ್ರಗಳಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನಕ್ಕೆ ಅನುದಾನ: ಸಚಿವ ಶಿವರಾಮ್ ಹೆಬ್ಬಾರ್

ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರದಲ್ಲಿ ಆಯೋಜಿಸಿದ್ದ ರಾಣಿ ಚೆನ್ನಮ್ಮ ಶಿಶುಪಾಲನಾ ಕೇಂದ್ರದ ವಾರ್ಷಿಕ ಸ್ನೇಹ ಸಮ್ಮೇಳನದಲ್ಲಿ ಕಾರ್ಮಿಕ ಸಚಿವ ಶಿವರಾಮ್‌ ಹೆಬ್ಬಾರ್ ಭಾಗವಹಿಸಿದ್ದರು.

VISTARANEWS.COM


on

ಶಿವರಾಮ್ ಹೆಬ್ಬಾರ್
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಯಲ್ಲಾಪುರ: ರಾಣಿ ಚೆನ್ನಮ್ಮ ಹೆಸರಿನಲ್ಲಿ ರಾಜ್ಯದಲ್ಲಿ ಕಟ್ಟಡ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಇರುವ ಪ್ರದೇಶಗಳಲ್ಲಿ ಈಗಾಗಲೇ 100 ಶಿಶುಪಾಲನಾ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಈ ಕೇಂದ್ರಗಳಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನಗಳನ್ನು ನಡೆಸಲಾಗುವುದು ಎಂದು ಕಾರ್ಮಿಕ ಸಚಿವ ಶಿವರಾಮ್‌ ಹೆಬ್ಬಾರ್ ಹೇಳಿದರು.

ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರದಲ್ಲಿ ನಡೆದ ರಾಣಿ ಚೆನ್ನಮ್ಮ ಶಿಶುಪಾಲನಾ ಕೇಂದ್ರದ ವಾರ್ಷಿಕ ಸ್ನೇಹ ಸಮ್ಮೇಳನದಲ್ಲಿ ಮಾತನಾಡಿದ ಅವರು, ಪ್ರತಿ ಶಿಶು ಪಾಲನಾ ಕೇಂದ್ರಗಳಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮಗಳು ನಡೆಯಬೇಕು. ಈ ಸ್ನೇಹ ಮಿಲನ ಕಾರ್ಯಕ್ರಮಕ್ಕೆ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರನ್ನು ಕಡ್ಡಾಯವಾಗಿ ಆಹ್ವಾನಿಸಬೇಕು ಎಂದು ಹೇಳಿದರು.

ಇಂತಹ ಸ್ನೇಹ ಮಿಲನ ಕಾರ್ಯಕ್ರಮಗಳಿಂದ ಕಾರ್ಮಿಕರು ತಮ್ಮ ಮಕ್ಕಳ ಕ್ಷಮತೆಯನ್ನು ಅರಿಯಲಿದ್ದಾರೆ ಮತ್ತು ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಕಾರ್ಮಿಕರ ಮಕ್ಕಳು ಪಾಲನಾ ಕೇಂದ್ರಗಳಿಗೆ ಸೇರ್ಪಡೆಯಾಗಲಿದ್ದಾರೆ. ಈ ಸ್ನೇಹ ಮಿಲನ ಕಾರ್ಯಕ್ರಮಗಳಿಗೆ ಮಂಡಳಿಯಿಂದ ಸಹಾಯಧನ ಒದಗಿಸಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಇದನ್ನೂ ಓದಿ | Karnataka Election: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾರ್ಕಳದಲ್ಲಿ ಸ್ಪರ್ಧೆ: ಪ್ರಮೋದ್‌ ಮುತಾಲಿಕ್‌

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ದಿನ ನಿತ್ಯ ಕೆಲಸ ಕಾರ್ಯಗಳಿಂದಾಗಿ ತಮ್ಮ ಮಕ್ಕಳ, ಅದರಲ್ಲೂ ಸಣ್ಣ ಮಕ್ಕಳ ಲಾಲನೆ-ಪಾಲನೆ ಕಷ್ಟ ಸಾಧ್ಯವಾಗಿರುವುದನ್ನು ಮನಗಂಡಿರುವ ಕಾರ್ಮಿಕ ಇಲಾಖೆ, ಕಟ್ಟಡ ಕಾರ್ಮಿಕರ ಮಕ್ಕಳಿಗೆ ಉತ್ತಮ ವಾತಾವರಣದಲ್ಲಿ ಆಟ- ಊಟೋಪಚಾರಕ್ಕಾಗಿ ಶಿಶು ಪಾಲನಾ ಕೇಂದ್ರಗಳನ್ನು ಆರಂಭಿಸಿ ನಿರ್ವಹಿಸುತ್ತಿದೆ ಎಂದರು.

ಪಂಚಾಯತ್‌ ರಾಜ್ಯ ವಿಕೇಂದ್ರೀಕರಣ ಸಮಿತಿಯ ಉಪಾಧ್ಯಕ್ಷ ಪ್ರಮೋದ ಹೆಗಡೆ, ಹಿರಿಯರಾದ ರಾಮು ನಾಯ್ಕ, ಪ.ಪಂ ಉಪಾಧ್ಯಕ್ಷರಾದ ಶ್ಯಾಮಲಿ ಪಾಟಣಕರ್, ಪ‌.ಪಂ ಸದಸ್ಯರಾದ ಪ್ರಶಾಂತ ತಳವಾರ, ಗೀತಾ ಭಂಡಾರಿ ಸೇರಿದ ಕಾರ್ಮಿಕ ಇಲಾಖೆಯ ಅಧಿಕಾರಿಗಳು, ಶಿಶು ಪಾಲನಾ ಕೇಂದ್ರದ ಶಿಕ್ಷಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

ನಾಡು ಕಟ್ಟುವ ಕಾಯಕದಲ್ಲಿ ಶ್ರಮಿಸುತ್ತಿರುವ ಶ್ರಮಿಕರ ಮಕ್ಕಳ ಪಾಲನೆ ಪೋಷಣೆಗಾಗಿ ಮಂಡಳಿಯ ವತಿಯಿಂದ ರಾಜ್ಯಾದ್ಯಂತ ಶಿಶುಪಾಲನಾ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ. ಮಕ್ಕಳಿಗೆ ಕ್ರೀಡೆ ಹಾಗೂ ಸಾಂಸ್ಕೃತಿಕ ರಂಗದಲ್ಲಿ ಪ್ರೋತ್ಸಾಹಿಸಲು ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಶಿಶುಪಾಲನಾ ಕೇಂದ್ರಗಳಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮವನ್ನು ಮಂಡಳಿಯ ಮೂಲಕವಾಗಿ ಹಮ್ಮಿಕೊಳ್ಳಲಾಗುವುದು.
| ಶಿವರಾಮ ಹೆಬ್ಬಾರ್, ಕಾರ್ಮಿಕ ಸಚಿವರು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಬಿರುಗಾಳಿಯೊಂದಿಗೆ ಗುಡುಗು, ಮಿಂಚು ಸಹಿತ ಭಾರಿ ಮಳೆ ಎಚ್ಚರಿಕೆ

Karnataka Weather Forecast : ರಾಜ್ಯಾದ್ಯಂತ ಮತ್ತೆ ಮಳೆ ಅಬ್ಬರಿಸಲಿದ್ದು, ವಿವಿಧ ಜಿಲ್ಲೆಗಳಿಗೆ ಆರೆಂಜ್‌, ಯೆಲ್ಲೋ ಘೋಷಿಸಲಾಗಿದೆ. ಮಳೆ ನಡುವೆಯೂ ಕೆಲವು ಜಿಲ್ಲೆಗಳಿಗೆ ಹೀಟ್‌ ವೇವ್‌ ವಾರ್ನಿಂಗ್‌ ಅನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಬಿರುಗಾಳಿ ಜತೆಗೆ ಗುಡುಗು ಸಹಿತ ಭಾರಿ ಮಳೆಯಾಗುವ (Heavy Rain) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka weather Forecast) ಮುನ್ಸೂಚನೆಯನ್ನು ನೀಡಿದೆ.

ಮುಖ್ಯವಾಗಿ ಕೊಡಗು, ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಇನ್ನೂ ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೋಲಾರ, ರಾಮನಗರ, ಶಿವಮೊಗ್ಗ ಮತ್ತು ತುಮಕೂರಿನಲ್ಲಿ 40-50 ಕಿ.ಮೀ ಗಾಳಿಯೊಂದಿಗೆ ಗುಡುಗು ಸಹಿತ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಕಲಬುರಗಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಮಳೆ ಜತೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ.

ಬೀದರ್, ಕಲಬುರಗಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಿಗೆ ಐಎಂಡಿ ಯೆಲ್ಲೋ ಅಲರ್ಟ್ ಘೋಷಿಸಿದೆ. ಇನ್ನೂ ಬೀದರ್, ಕಲಬುರಗಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಿಗೆ ಐಎಂಡಿ ಆರೆಂಜ್ ಅಲರ್ಟ್ ಘೋಷಿಸಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ.

ಹೀಟ್‌ ವೇವ್‌ ವಾರ್ನಿಂಗ್‌

ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಗದಗ, ವಿಜಯನಗರ, ಬಳ್ಳಾರಿ, ದಾವಣಗೆರೆ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಬಿಸಿಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜತೆಗೆ ಬಳ್ಳಾರಿ, ದಾವಣಗೆರೆ, ವಿಜಯನಗರ ಜಿಲ್ಲೆಗಳಿಗೆ ಐಎಂಡಿ ಯೆಲ್ಲೋ ಅಲರ್ಟ್ ಘೋಷಿಸಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ರಾಜಕೀಯ

Lok Sabha Election 2024: ಅಭಿವೃದ್ಧಿ ಕಾರ್ಯಕ್ಕಾಗಿ ನೀತಿ ಸಂಹಿತೆ ಸಡಿಲಿಸಲು ಶಿವರಾಮ ಹೆಬ್ಬಾರ್ ಮನವಿ

Lok Sabha Election 2024: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮಂಗಳವಾರ ಶಾಸಕ ಶಿವರಾಮ ಹೆಬ್ಬಾರ್, ಯಲ್ಲಾಪುರ ತಾಲೂಕಿನ ಇಡಗುಂದಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರಬೈಲ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು.

VISTARANEWS.COM


on

Yallapura MLA Shivaram Hebbar voting in Arabail village
Koo

ಯಲ್ಲಾಪುರ: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಮಂಗಳವಾರ ಶಾಸಕ ಶಿವರಾಮ ಹೆಬ್ಬಾರ್ ತಾಲೂಕಿನ ಇಡಗುಂದಿ ಗ್ರಾ.ಪಂ ವ್ಯಾಪ್ತಿಯ ಅರಬೈಲ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು.

ಇದನ್ನೂ ಓದಿ: Guava Leaves Benefits: ಕೇವಲ ಸೀಬೆ ಹಣ್ಣಲ್ಲ, ಎಲೆಯಿಂದಲೂ ಎಷ್ಟೊಂದು ಪ್ರಯೋಜನಗಳು!

ಬಳಿಕ ಮಾತನಾಡಿದ ಅವರು, ರಾಜ್ಯದೆಲ್ಲೆಡೆ ಶಾಂತಿಯುತವಾಗಿ ಮತದಾನ ನಡೆದಿರುವುದು ಸಂತಸದ ಸಂಗತಿಯಾಗಿದೆ. ಜಾತಿ, ಧರ್ಮ, ಭಿನ್ನಾಭಿಪ್ರಾಯಗಳ ಹೊರತಾಗಿ ರಾಜ್ಯದ ಜನತೆ ಸಾಂಘಿಕವಾದ ಚುನಾವಣೆ ನಡೆಯಲು ನಿರ್ಣಯಿಸಿರುವುದು ಶ್ಲಾಘನೀಯ ಎಂದರು.

ಈ ಸಂದರ್ಭದಲ್ಲಿ ಚುನಾವಣಾ ಆಯೋಗಕ್ಕೆ ಮನವಿ ಮಾಡಬಯಸುವುದೇನೆಂದರೆ, 3 ತಿಂಗಳುಗಳ ಸುದೀರ್ಘ ನೀತಿ ಸಂಹಿತೆ ಜಾರಿಯು ಅಭಿವೃದ್ಧಿ ಕಾರ್ಯಗಳಿಗೆ ತೊಡಕಾಗಿದೆ. ಕರಾವಳಿ ಮಲೆನಾಡು ಪ್ರದೇಶದಲ್ಲಿ 5 ತಿಂಗಳುಗಳ ಕಾಲ ವ್ಯಾಪಕ ಮಳೆಯಾಗುವುದರಿಂದ ಯಾವುದೇ ಕೆಲಸ ಕಾರ್ಯಗಳನ್ನು ಮಾಡಲಾಗುವುದಿಲ್ಲ. ಕರ್ನಾಟಕದ ಎಲ್ಲಾ ಕ್ಷೇತ್ರಗಳಲ್ಲಿ ಇಂದಿಗೆ ಚುನಾವಣೆ ಪೂರ್ಣಗೊಳ್ಳುವುದರಿಂದ, ಈ ಸಂದರ್ಭವನ್ನು ಪರಿಗಣಿಸಿ ನೀತಿ ಸಂಹಿತೆಯನ್ನು ಸಡಿಲಿಸಿ ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಅನುವು ಮಾಡಿಕೊಡಬೇಕಿದೆ ಎಂದರು.

ಇದನ್ನೂ ಓದಿ: Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

ಈ ಸಂದರ್ಭದಲ್ಲಿ ಶಾಸಕರ ಪತ್ನಿ ವನಜಾಕ್ಷಿ ಹೆಬ್ಬಾರ್ ಸೇರಿದಂತೆ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

Continue Reading

ಮಳೆ

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Rain News : ಮೇ 7ರಂದು ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ ಸುರಿದಿದೆ. ರಾಜ್ಯದಲ್ಲಿ ಇನ್ನೊಂದು ವಾರ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

VISTARANEWS.COM


on

By

Karnataka Weather Forecast
Koo

ಚಿಕ್ಕಮಗಳೂರು/ಹಾಸನ/ಬೆಂಗಳೂರು: ಮಂಗಳವಾರ ಮಧ್ಯಾಹ್ನ ಚಿಕ್ಕಮಗಳೂರು ನಗರದಲ್ಲಿ ಧಾರಾಕಾರ ಮಳೆಯಾಗಿದೆ. ಭಾರಿ ಆಲಿಕಲ್ಲು ಮಳೆಗೆ ಚಿಕ್ಕಮಗಳೂರು ನಗರ ನಿವಾಸಿಗಳು ಥಂಡಾ ಹೊಡೆದಿದ್ದಾರೆ. ಮಳೆಯಿಲ್ಲದೆ ಕಾದ ಕಾವಲಿಯಂತಾಗಿದ್ದ ಕಾಫಿನಾಡಿನಲ್ಲಿ ಕಳೆದೊಂದು ಗಂಟೆಯಿಂದ ಭಯಂಕರ ಮಳೆ ಸುರಿಯುತ್ತಿದೆ.

ರಸ್ತೆಯಲ್ಲಿ ಅರ್ಧ ಅಡಿ ಎತ್ತರದಲ್ಲಿ ನೀರು ಹರಿಯುತ್ತಿದೆ. 41 ಡಿಗ್ರಿ ತಲುಪುತ್ತಿದ್ದ ಬಿಸಿಲ ತಾಪಮಾನಕ್ಕೆ ಜನ ಹೈರಾಣಾಗಿದ್ದರು. ಧಾರಾಕಾರ ಮಳೆ ಕಂಡು ರೈತರು, ಬೆಳೆಗಾರರು ಸಂತಸಗೊಂಡರು. ಇನ್ನೂ ಆಲಿಕಲ್ಲು ಕೈಯಲ್ಲಿ ಹಿಡಿದು ಖುಷಿ ಪಟ್ಟರು.

Karnataka weather Forecast

ಹಾಸನದಲ್ಲೂ ಧಾರಾಕಾರ ಮಳೆ

ಹಾಸನ ಜಿಲ್ಲೆಯ ಹಲವೆಡೆ ಧಾರಾಕಾರ ಮಳೆಯಾಗಿದೆ. ಹಾಸನ, ಹೊಳೆನರಸೀಪುರ, ಅರಸೀಕೆರೆ ಭಾಗಗಳಲ್ಲಿ ಭಾರಿ ಗಾಳಿಯೊಂದಿಗೆ ಗುಡುಗು, ಸಿಡಿಲು ಸಹಿತ ಮಳೆ ಸುರಿಯುತ್ತಿದೆ. ಅರಸೀಕೆರೆಯಲ್ಲಿ ಆಲಿಕಲ್ಲು ಸಹಿತ ಮಳೆಯಾಗುತ್ತಿದೆ. ಜೋರಾಗಿ ಆಲಿಕಲ್ಲು ಬೀಳುತ್ತಿರುವುದರಿಂದ ಸವಾರರು ಬೈಕ್‌ ನಿಲ್ಲಿಸಿ ರಸ್ತೆ ಬದಿ ನಿಲ್ಲುವಂತಾಯಿತು. ಬಿಸಿಲಿನಿಂದ ಕಂಗಾಲಾಗಿದ್ದ ಜನತೆಗೆ ವರುಣ ತಂಪೆರೆದಿದ್ದಾನೆ.

ಇದನ್ನೂ ಓದಿ: Karnataka Rains: ಮಳೆಗೆ ಮರ ಬಿದ್ದು ಮಂಡ್ಯದಲ್ಲಿ ವ್ಯಕ್ತಿ ಸಾವು, ಬೆಂಗಳೂರಲ್ಲಿ ಟೆಕ್ಕಿ ಬೆನ್ನು ಮೂಳೆ ಮುರಿತ

ಮಂಗಳವಾರ ಸಂಜೆಗೆ ಲಘು ಮಳೆ ಎಚ್ಚರಿಕೆ

ಮೇ 7ರ ಸಂಜೆಗೆ ದಕ್ಷಿಣ ಕನ್ನಡ, ಕೊಡಗು, ಮಂಡ್ಯ, ಮೈಸೂರು ಸೇರಿದಂತೆ ತುಮಕೂರು, ಉಡುಪಿಯಲ್ಲಿ ಗುಡುಗು ಸಹಿತ ಲಘು ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

ಬೆಂಗಳೂರಲ್ಲಿ ಗುಡುಗು, ಮಿಂಚು ಸಹಿತ ಗಾಳಿ ಮಳೆ

ಬೆಂಗಳೂರು ನಗರ ಮತ್ತು ಸುತ್ತಮುತ್ತ ಮುಂದಿನ 24 ಗಂಟೆಯಲ್ಲಿ ಮುಂಜಾನೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಸಂಜೆ/ರಾತ್ರಿಯ ಸಮಯದಲ್ಲಿ ಗುಡುಗು ಮಿಂಚು ಜತೆಗೆ ಮಳೆಯಾಗಲಿದೆ. ಈ ವೇಳೆ ಗಾಳಿ ವೇಗವು 40-50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 35 ಮತ್ತು 22 ಡಿ.ಸೆ ಇರಲಿದೆ.

ಇನ್ನೂ ಕೊಡಗು, ಮೈಸೂರು, ಮಂಡ್ಯ, ಹಾಸನ, ಕೋಲಾರ, ಬೆಂಗಳೂರು ನಗರ, ರಾಮನಗರ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಭಾರೀ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ತುಮಕೂರು ಮತ್ತು ಕೆಲವು ಸ್ಥಳಗಳಲ್ಲಿ ಬಿರುಗಾಳಿ ಸಹಿತ (ಗಂಟೆಗೆ 40-50 ಕಿಮೀ) ಹಗುರದಿಂದ ಶುರುವಾಗಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ವಿಜಯನಗರ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ವಿಜಯಪುರ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಬಿರುಗಾಳಿ ಸಹಿತ (30-40 ಕಿಮೀ) ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

karnataka Weather : ಇಂದು ಮಳೆಗೂ ಮುನ್ನವೇ ವೋಟ್‌ ಹಾಕಿಬಿಡಿ; ಸಂಜೆಗೆ ಭಾರಿ ವರ್ಷಧಾರೆ

Karnataka Weather Forecast : ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಂಗಳವಾರ ಮಳೆಯು (Rain News) ಅಬ್ಬರಿಸಲಿದೆ. ಜೋರಾದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ರಾಜ್ಯದ ವಿವಿಧೆಡೆ ಇಂದಿನಿಂದ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗುವ (Rain News) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ. ಗುಡುಗು ಸಹಿತ ಮಳೆಯಾಗಲಿದ್ದು, ಬಿರುಗಾಳಿಯು ಜತೆಗೆ ಇರಲಿದೆ. ಹೀಗಾಗಿ ರಾಜ್ಯದಲ್ಲಿ ನಡೆಯುತ್ತಿರುವ ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ಪ್ರಕ್ರಿಯೆಗೆ ಮಳೆಗೂ ಮುನ್ನವೇ ವೋಟ್‌ ಹಾಕಿಬಿಡಿ.

ಆಲಿಕಲ್ಲು ಮಳೆ ಎಚ್ಚರಿಕೆ

ದಕ್ಷಿಣ ಒಳನಾಡಿನ ಚಾಮರಾಜನಗರ ಮತ್ತು ರಾಮನಗರದ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗಲಿದೆ. ಗುಡುಗು ಸಹಿತ ಅಲ್ಲಲ್ಲಿ ಆಲಿಕಲ್ಲು ಮಳೆಯಾಗಲಿದೆ. ಮಲೆನಾಡಿನಲ್ಲಿ ಮಾಯವಾಗಿದ್ದ ಮಳೆಯು ಮತ್ತೆ ಹಾಜರಾತಿ ಹಾಕಿದೆ. ಮಲೆನಾಡಿನ ಕೊಡಗು ಹಾಗೂ ದಕ್ಷಿಣ ಒಳನಾಡಿನ ಮೈಸೂರು ಮತ್ತು ಮಂಡ್ಯದಲ್ಲಿ ಕೆಲವೆಡೆ ಭಾರೀ ಮಳೆಯೊಂದಿಗೆ ಅಬ್ಬರಿಸಲಿದೆ.

ಕರಾವಳಿಯಲ್ಲೂ ಮಳೆಯಿಲ್ಲದೇ ತಾಪಮಾನ ಹೆಚ್ಚಾಗಿತ್ತು. ಮಂಗಳವಾರ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಸೇರಿ ಉತ್ತರ ಒಳನಾಡಿನ ರಾಯಚೂರು, ಯಾದಗಿರಿ, ಬಳ್ಳಾರಿಯಲ್ಲೂ ಮಳೆ ಅಬ್ಬರಿಸಲಿದೆ. ಇನ್ನೂ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ವಿಜಯನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯೊಂದಿಗೆ ಗುಡುಗು ಇರಲಿದೆ.

ಬೆಂಗಳೂರಲ್ಲಿ ಸಂಜೆ ಮಳೆ

ರಾಜಧಾನಿ ಬೆಂಗಳೂರಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಸಂಜೆ ಅಥವಾ ರಾತ್ರಿ ವೇಳೆಗೆ ಹಗುರದೊಂದಿಗೆ ಸಾಧಾರಣ ಮಳೆಯಾಗಲಿದೆ. ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 37 ಮತ್ತು 24 ಡಿ.ಸೆ ಇರಲಿದೆ.

ಗುಡುಗು ಸಹಿತ ಮಳೆಗೆ ಯೆಲ್ಲೋ ಅಲರ್ಟ್

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಐಎಂಡಿ ಯೆಲ್ಲೋ ಅಲರ್ಟ್ ಘೋಷಿಸಿದೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

ಮಳೆ ನಡುವೆಯೂ ಈ ಜಿಲ್ಲೆಗಳಿಗೆ ಹೀಟ್‌ ವೇವ್‌

ಒಂದು ಕಡೆ ಮಳೆಯು ಅಬ್ಬರಿಸುತ್ತಿದ್ದರೆ ಇತ್ತ ಹೀಟ್‌ ವೇವ್‌ ಎಚ್ಚರಿಕೆಯನ್ನು ಹವಾಮಾನ ತಜ್ಞರು ನೀಡಿದ್ದಾರೆ. ಏ.7ರಂದು ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಕೊಪ್ಪಳ ಹಾಗೂ ದಕ್ಷಿಣ ಒಳನಾಡಿನ ವಿಜಯನಗರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶಾಖದ ಅಲೆಯ ವಾತಾವರಣವು ಹೆಚ್ಚಾಗುವ ಸಾದ್ಯತೆ ಇದೆ.

ಶಾಖ ತರಂಗಕ್ಕೆ ಈ ಜಿಲ್ಲೆಗಳಿಗೆ ಆರೆಂಜ್ ಹಾಗೂ ಯೆಲ್ಲೋ ಎಚ್ಚರಿಕೆ

ವಿಜಯನಗರ, ಬಳ್ಳಾರಿ, ಯಾದಗಿರಿ, ವಿಜಯಪುರ, ಯಾದಗಿರಿ, ಕೊಪ್ಪಳ, ಕಲಬುರಗಿ, ಬೀದರ್, ಬಾಗಲಕೋಟೆಯ ಜಿಲ್ಲೆಗಳಲ್ಲಿ ತಾಪಮಾನ ದುಪ್ಪಟ್ಟು ಆಗಲಿದೆ. ಹೀಗಾಗಿ ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಉಳಿದಂತೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಿಗೆ ಯೆಲ್ಲೋ ಎಚ್ಚರಿಕೆ ನೀಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Prajwal Revanna Case JDS delegation moves Womens Commission to arrest pen drive allottees
ಕ್ರೈಂ11 mins ago

Prajwal Revanna Case: ಪೆನ್‌ಡ್ರೈವ್ ಹಂಚಿಕೆದಾರರ ಬಂಧಿಸಿ; ಸಿಎಂ, ಡಿಸಿಎಂ ವಿರುದ್ಧ ಮಹಿಳಾ ಜೆಡಿಎಸ್‌ ಗರಂ!

Zomato
ದೇಶ12 mins ago

Zomato: ಜೊಮ್ಯಾಟೊ ಹೊಸ ತಂತ್ರಜ್ಞಾನ; ಮನೆ ಹೊರಗೆ ಕಾಲಿಡುವ ಮುನ್ನ ಇದನ್ನು ನೋಡಲೇಬೇಕು!

Hindu population
ದೇಶ13 mins ago

Hindu Population: ಹಿಂದೂಗಳ ಜನಸಂಖ್ಯೆ ಶೇ.7.8 ಕುಸಿತ; ಮುಸ್ಲಿಮರ ಸಂಖ್ಯೆ ಶೇ.43.15 ಏರಿಕೆ!

Rain News
ಪ್ರಮುಖ ಸುದ್ದಿ16 mins ago

Rain News: ರಾಜ್ಯದ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆ; ಬೆಂಗಳೂರಿನಲ್ಲಿ ಹೊಳೆಯಂತಾದ ರಸ್ತೆಗಳು!

BJP Karnataka State police issues notices to JP Nadda and Amit Malviya and BY Vijayendra
ಕ್ರೈಂ39 mins ago

BJP Karnataka: ಜೆ.ಪಿ. ನಡ್ಡಾ, ಅಮಿತ್‌ ಮಾಳವೀಯಾಗೆ ರಾಜ್ಯ ಪೊಲೀಸರ ನೋಟಿಸ್‌; 7 ದಿನದೊಳಗೆ ವಿಚಾರಣೆಗೆ ಹಾಜರಾಗಲು ಸೂಚನೆ

Sam Pitroda
ಪ್ರಮುಖ ಸುದ್ದಿ45 mins ago

Sam Pitroda: ಭಾರತೀಯರ ಬಣ್ಣದ ಕುರಿತು ಮಾತಾಡಿದ ಸ್ಯಾಮ್‌ ಪಿತ್ರೋಡಾ ತಲೆದಂಡ; ಕಾಂಗ್ರೆಸ್‌ ಸ್ಥಾನಕ್ಕೆ ರಾಜೀನಾಮೆ!

Neeraj Chopra
ಕ್ರೀಡೆ1 hour ago

Neeraj Chopra: 3 ವರ್ಷದ ಬಳಿಕ ದೇಶೀಯ ಕ್ರೀಡಾಕೂಟದಲ್ಲಿ ನೀರಜ್​ ಚೋಪ್ರಾ ಸ್ಪರ್ಧೆ

Cancer Risk
ಆರೋಗ್ಯ1 hour ago

Cancer Risk: ಕ್ಯಾನ್ಸರ್ ಅಪಾಯದಿಂದ ಪಾರಾಗಲು ಯಾವ ಆಹಾರ ಸೇವಿಸಬಾರದು? ಯಾವ ಆಹಾರ ಸೇವಿಸಬೇಕು?

K Vasantha Bangera
ಪ್ರಮುಖ ಸುದ್ದಿ1 hour ago

K Vasantha Bangera: ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ನಿಧನ

T20 World Cup 2024
ಕ್ರೀಡೆ2 hours ago

T20 World Cup 2024: ಕ್ರಿಕೆಟ್​ ಪ್ರಿಯರಿಗೆ ಗುಡ್​ ನ್ಯೂಸ್​​; ಈ ಮೊಬೈಲ್‌ ಆ್ಯಪ್​ನಲ್ಲಿ ಟಿ20 ವಿಶ್ವಕಪ್ ಉಚಿತ ಪ್ರಸಾರ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ15 hours ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ23 hours ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ1 day ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ1 day ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ2 days ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ2 days ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ2 days ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ3 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ3 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

ಟ್ರೆಂಡಿಂಗ್‌