Srinivasa Kalyanotsava : ಬ್ಯಾಟರಾಯನಪುರದಲ್ಲಿ ಅದ್ಧೂರಿ ಶ್ರೀನಿವಾಸ ಕಲ್ಯಾಣೋತ್ಸವ; ತಮ್ಮೇಶ್ ಗೌಡ ನೇತೃತ್ವ - Vistara News

ಬೆಂಗಳೂರು

Srinivasa Kalyanotsava : ಬ್ಯಾಟರಾಯನಪುರದಲ್ಲಿ ಅದ್ಧೂರಿ ಶ್ರೀನಿವಾಸ ಕಲ್ಯಾಣೋತ್ಸವ; ತಮ್ಮೇಶ್ ಗೌಡ ನೇತೃತ್ವ

Srinivasa Kalyanotsava : ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ಆಯೋಜಿಸಿದ್ದ ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ವಿವಿಧ ಸ್ವಾಮೀಜಿಗಳು ಭಾಗವಹಿಸಿದ್ದರು.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಗರದ ಬ್ಯಾಟರಾಯನಪುರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯ ಎಪಿಎಂಸಿ ಮಾರುಕಟ್ಟೆ ಮೈದಾನದಲ್ಲಿ ಕೇಸರಿ ಫೌಂಡೇಷನ್‌ ವತಿಯಿಂದ ಭಾನುವಾರ ಆಯೋಜಿಸಿದ್ದ ಬ್ಯಾಟರಾಯನಪುರ ಶ್ರೀನಿವಾಸ ಕಲ್ಯಾಣೋತ್ಸವವು (Srinivasa Kalyanotsava) ಅತ್ಯಂತ ಅದ್ಧೂರಿಯಾಗಿ ನಡೆಯಿತು. ಬಿಜೆಪಿ ಮುಖಂಡ ಎಚ್‌.ಸಿ.ತಮ್ಮೇಶ್ ಗೌಡ ಅವರು ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.

ಸಿದ್ಧಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ, ಸ್ಫಟಿಕಪುರಿ ಮಹಾಸಂಸ್ಥಾನದ ಶ್ರೀ ನಂಜಾವಧೂತ ಸ್ವಾಮೀಜಿ, ಶ್ರೀವಚನಾನಂದ ಸ್ವಾಮೀಜಿ, ಕೇಂದ್ರ ಬಿಜೆಪಿ ಸಂಸದೀಯ ಮಂಡಳಿ ಸದಸ್ಯರು, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ್, ಬಿಡಿಎ ಅಧ್ಯಕ್ಷ, ಶಾಸಕ ಎಸ್.ಆರ್.ವಿಶ್ವನಾಥ್, ವಿಧಾನ ಪರಿಷತ್ ಸದಸ್ಯರಾದ ಭಾರತಿ ಶೆಟ್ಟಿ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್‌ ಮತ್ತು ಅನೇಕ ಬಿಜೆಪಿಯ ಮುಖಂಡರು ಸೇರಿ ಸಾವಿರಾರು ಮಂದಿ ಪಾಲ್ಗೊಂಡಿದ್ದರು.

ತಿರುಮಲ ತಿರುಪತಿ ದೇವಸ್ಥಾನದ ರೀತಿಯಲ್ಲಿ ನಿರ್ಮಿಸಿದ ವೇದಿಕೆಯಲ್ಲಿ ಕಲ್ಯೋಣೋತ್ಸವ ನೆರವೇರಿತು. ಭಕ್ತರಿಗೆ ತಿರುಮಲ ತಿರುಪತಿ ದೇವಾಲಯದ ಲಡ್ಡು ಪ್ರಸಾದ ಮತ್ತು ಕ್ಯಾಲೆಂಡರ್‌ ಅನ್ನು ನೀಡಲಾಯಿತು ಹಾಗೂ ಊಟದ ವ್ಯವಸ್ಥೆ ಸಹ ಮಾಡಲಾಗಿತ್ತು. ಈ ವೇಳೆ ತಿರುಮಲ ತಿರುಪತಿ ದೇವಾಲಯದ ಆಸ್ಥಾನ ಗಾಯಕ ಶ್ರೀ ಕೃಷ್ಣ ಅವರಿಂದ ಸಂಗೀತೋತ್ಸವ ಕಾರ್ಯಕ್ರಮ ಅಯೋಜಿಸಲಾಗಿತ್ತು.

ತುಮಕೂರಿನ ಸಿದ್ಧಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರು ಮಾತನಾಡಿ, ತಮ್ಮೇಶ್ ಗೌಡರ ಸೇವೆ ಶ್ಲಾಘನೀಯ ಹಾಗೂ ಜಗತ್‌ಕಲ್ಯಾಣದ ಕಾರ್ಯವಾಗಿದೆ. ಎಲ್ಲಾ ಭಕ್ತರಿಗೂ ಭಗವಂತನ ಆಶೀರ್ವಾದ ಸಿಗಲಿ ಹಾಗೂ ತಮ್ಮೇಗೌಡ ಅವರಿಗೂ ಭಗವಂತ ಇನ್ನಷ್ಟು ಶಕ್ತಿ ಕೊಟ್ಟು ಹೆಚ್ಚು ಹೆಚ್ಚು ಜನಸೇವೆ ಮಾಡುವಂತಾಗಲಿ ಎಂದು ಹೇಳಿದರು.

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಮಾತನಾಡಿ, ಶ್ರೀ ಶ್ರೀನಿವಾಸನ ಅನುಗ್ರಹ ಎಲ್ಲ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಜನರ ಮೇಲಿರಲಿ. ತಮ್ಮೇಶ್ ಗೌಡರನ್ನು ಹಲವಾರು ವರ್ಷಗಳಿಂದ ಗಮನಿಸುತ್ತಿದ್ದೇನೆ, ಅವರು ಮಾಡುತ್ತಿರುವ ಜನಸೇವೆ ಅಸಾಮಾನ್ಯವಾದುದು. ಕೋವಿಡ್ ಸಮಯದಲ್ಲಿ ಅವರು ಕ್ಷೇತ್ರದ ಸಾವಿರಾರು ಕುಟುಂಬಗಳ ನೆರವಿಗೆ ನಿಂತರು. ಅವರು ನಡೆಸುತ್ತಿರುವ ಆರೋಗ್ಯ ತಪಾಸಣಾ ಶಿಬಿರ ಹಾಗೂ ಉಚಿತ ಔಷಧ ಶಿಬಿರಗಳಲ್ಲಿ ಸಾವಿರಾರು ಜನರು ಫಲಾನುಭವಿಗಳಾಗಿದ್ದಾರೆ. ಅದೇ ರೀತಿ ಅನೇಕ ಧಾರ್ಮಿಕ ಕಾರ್ಯಕ್ರಮಗಳನ್ನು ಅತ್ಯಂತ ವೈಭವದಿಂದ ನಡೆಸಿಕೊಂಡು ಬರುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಇದನ್ನೂ ಓದಿ | BJP Karnataka : ಕಾಂಗ್ರೆಸ್‌ನಿಂದಲೇ ಭ್ರಷ್ಟಾಚಾರದ ಹುಟ್ಟು: ಸಚಿವ ಡಾ. ಕೆ. ಸುಧಾಕರ್‌ ಆರೋಪ

ತಮ್ಮೇಶ್ ಗೌಡರು ವಿದ್ಯಾರ್ಥಿಯಾಗಿರುವಾಗಲೇ ಎಬಿವಿಪಿ ಸಂಘಟನೆಯಲ್ಲಿ ಅನೇಕ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದರು. ನಮ್ಮ ಪಕ್ಷದಲ್ಲಿಯೂ ರಾಜ್ಯ ಯುವ ಮೋರ್ಚಾ ಉಪಾಧ್ಯಕ್ಷರಾಗಿ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಯಶಸ್ವಿಯಾಗಿ ಪಕ್ಷದ ಸಂಘಟನೆ ಮಾಡಿದಂತಹ ಒಬ್ಬ ಸಮರ್ಥ ನಾಯಕರಾಗಿದ್ದಾರೆ. ಈ ಶ್ರೀನಿವಾಸ ಕಲ್ಯಾಣೋತ್ಸವವನ್ನು ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಜನರ ಒಳಿತಿಗಾಗಿ ಅದ್ಧೂರಿಯಾಗಿ ಆಯೋಜಿಸಿದ್ದಾರೆ. ತಮ್ಮೇಶ್ ಗೌಡರು ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದಾರೆ. ನಿಮ್ಮೆಲ್ಲರ ಆಶೀರ್ವಾದ ಅವರ ಮೇಲಿರಲಿ ಎಂದು ಕೋರಿದರು.

ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಮಾತನಾಡಿ, ಬ್ಯಾಟರಾಯನಪುರದಲ್ಲಿ ತಮ್ಮೇಶ್‌ಗೌಡರು ಅನೇಕ ಜನಪರ ಕೆಲಸಗಳನ್ನು ಮಾಡುತ್ತಿದ್ದಾರೆ. ಅದೇ ರೀತಿ ಅನೇಕ ಧಾರ್ಮಿಕ ಕೆಲಸಗಳನ್ನು ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಅವರು ಇನ್ನಷ್ಟು ಒಳ್ಳೆಯ ಕೆಲಸಗಳನ್ನು ಮಾಡಿ ಕ್ಷೇತ್ರವನ್ನು ಅಭಿವೃದ್ಧಿ ಪಡಿಸಲಿ ಎಂದು ಹೇಳಿದರು.

ಕಾರ್ಯಕ್ರಮದ ರೂವಾರಿ ತಮ್ಮೇಶ್ ಗೌಡ ಮಾತನಾಡಿ, ನನಗೆ ಯಾವಾಗಲೂ ಬಿ.ಎಸ್.ಯಡಿಯೂರಪ್ಪ ಅವರು ಸ್ಫೂರ್ತಿದಾಯಕರಾಗಿದ್ದಾರೆ. ಕೋವಿಡ್ ಸಮಯದಲ್ಲಿ ಅವರಿಗೆ ಕೊರೊನಾ ಬಂದಿದ್ದರೂ ದಿನ ನಿತ್ಯ ಕರ್ತವ್ಯ ನಿರ್ವಹಿಸಿ ನಮ್ಮ ರಾಜ್ಯವನ್ನು ಕಾಪಾಡಿದರು. ಆ ಸಮಯದಲ್ಲಿ ನನಗೂ ಕೋವಿಡ್ ಬಂದಿತ್ತು. ಯಡಿಯೂರಪ್ಪನವರ ಕೆಲಸವನ್ನು ನೋಡಿ ನಾನು ಸಹ ಅನೇಕ ಕಾರ್ಯಗಳನ್ನು ಮಾಡಿದೆ. ಇಡೀ ರಾಜ್ಯದಲ್ಲಿ ಶಿಕಾರಿಪುರ ಒಂದು ಮಾದರಿ ವಿಧಾನಸಭಾ ಕ್ಷೇತ್ರವಾಗಿದೆ. ನಮ್ಮ ಬ್ಯಾಟರಾಯನಪುರವು ಮಾದರಿ ವಿಧಾನಸಭಾ ಕ್ಷೇತ್ರವಾಗಬೇಕೆಂಬ ಸಂಕಲ್ಪದೊಂದಿಗೆ ಅನೇಕ ಕೆಲಸಗಳನ್ನು ಮಾಡುತ್ತಿದ್ದೇನೆ. ಇದಕ್ಕೆ ಜನರ ಆಶೀರ್ವಾದ ಅಗತ್ಯ ಎಂದು ಮನವಿ ಮಾಡಿದರು.

ಇದನ್ನೂ ಓದಿ | Republic Day : ಒಂದೇ ವಾರಕ್ಕೆ ಸಿದ್ಧವಾಯಿತು ʼನಾರಿಶಕ್ತಿʼ ಸ್ತಬ್ಧ ಚಿತ್ರ: ಕರ್ತವ್ಯ ಪಥದಲ್ಲಿ ಪೂರ್ವಾಭ್ಯಾಸ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Karnataka Jobs Reservation: ಉರಿವ ಮನೆಯಿಂದ ಗಳ ಹಿರಿದ ಆಂಧ್ರಪ್ರದೇಶ; ʼನಮ್ಮಲ್ಲಿಗೇ ಬನ್ನಿʼ ಎಂದು ಖಾಸಗಿ ಉದ್ಯಮಗಳಿಗೆ ಭಿಕ್ಷಾಪಾತ್ರೆ ಒಡ್ಡಿದ ಸಚಿವ

Karnataka Jobs Reservation: ಕರ್ನಾಟಕ ಸರಕಾರದ ನಿಲುವಿನ ಕುರಿತು ಆಕ್ರೋಶ ವ್ಯಕ್ತಪಡಿಸಿದ ನಾಸ್ಕಾಂ ಸಂಘಟನೆಯ ಟ್ವೀಟ್‌ ಅನ್ನು ಶೇರ್‌ ಮಾಡಿರುವ ಆಂಧ್ರಪ್ರದೇಶ ಮಾನವ ಸಂಪನ್ಮೂಲ ಇಲಾಖೆ ಸಚಿವ ಲೋಕೇಶ್‌ ನಾರಾ, ʼನಮ್ಮಲ್ಲಿಗೆ ಬನ್ನಿʼ ಎಂದು ಖಾಸಗಿ ಕಂಪನಿಗಳಿಗೆ ಕರೆ ನೀಡಿದ್ದಾರೆ.

VISTARANEWS.COM


on

Karnataka Jobs Reservation
Koo

ಬೆಂಗಳೂರು: ಕರ್ನಾಟಕದಲ್ಲಿ ಕನ್ನಡಿಗರಿಗೆ ಖಾಸಗಿ ಉದ್ಯಮಗಳಲ್ಲಿ ಮೀಸಲು (Karnataka Jobs Reservation) ಕಡ್ಡಾಯ ಮಾಡುವ ಕುರಿತು ರಾಜ್ಯ ಸರ್ಕಾರದ (Karnataka Government) ನಿಲುವಿನಿಂದಾಗಿ ಸೃಷ್ಟಿಯಾದ ಗೊಂದಲದ ನಡುವೆ, ʼಉರಿಯುವ ಮನೆಯಲ್ಲಿ ಗಳ ಹಿರಿದರುʼ ಎಂಬಂತೆ ಲಾಭ ಮಾಡಿಕೊಳ್ಳಲು ಆಂಧ್ರಪ್ರದೇಶ (Andhra Pradesh) ಮುಂದಾಗಿದೆ.

ಕರ್ನಾಟಕ ಸರಕಾರದ ನಿಲುವಿನ ಕುರಿತು ಆಕ್ರೋಶ ವ್ಯಕ್ತಪಡಿಸಿದ ನಾಸ್ಕಾಂ ಸಂಘಟನೆಯ ಟ್ವೀಟ್‌ ಅನ್ನು ಶೇರ್‌ ಮಾಡಿರುವ ಆಂಧ್ರಪ್ರದೇಶ ಮಾನವ ಸಂಪನ್ಮೂಲ ಇಲಾಖೆ ಸಚಿವ ಲೋಕೇಶ್‌ ನಾರಾ, ʼನಮ್ಮಲ್ಲಿಗೆ ಬನ್ನಿʼ ಎಂದು ಖಾಸಗಿ ಕಂಪನಿಗಳಿಗೆ ಕರೆ ನೀಡಿದ್ದಾರೆ.

“ನಿಮ್ಮ ನಿರಾಶೆಯನ್ನು ನಾವು ಅರ್ಥಮಾಡಿಕೊಂಡಿದ್ದೇವೆ. ವೈಜಾಗ್‌ನಲ್ಲಿರುವ ನಮ್ಮ IT, IT ಸೇವೆಗಳು, AI ಮತ್ತು ಡೇಟಾ ಸೆಂಟರ್ ಕ್ಲಸ್ಟರ್‌ಗೆ ನಿಮ್ಮ ವ್ಯವಹಾರಗಳನ್ನು ವಿಸ್ತರಿಸಲು ಅಥವಾ ಸ್ಥಳಾಂತರಿಸಲು ನಾವು ನಿಮ್ಮನ್ನು ಸ್ವಾಗತಿಸುತ್ತೇವೆ. ನಾವು ನಿಮಗೆ ಅತ್ಯುತ್ತಮ ದರ್ಜೆಯ ಸೌಲಭ್ಯಗಳು, ತಡೆರಹಿತ ವಿದ್ಯುತ್, ಮೂಲಸೌಕರ್ಯ ಮತ್ತು ನಿಮ್ಮ ಐಟಿ ಉದ್ಯಮಕ್ಕೆ ಸರ್ಕಾರದಿಂದ ಯಾವುದೇ ನಿರ್ಬಂಧಗಳಿಲ್ಲದೆ ಅತ್ಯಂತ ಸೂಕ್ತವಾದ ಕೌಶಲ್ಯಭರಿತ ಪ್ರತಿಭೆಗಳನ್ನು ನೀಡುತ್ತೇವೆ. ಆಂಧ್ರಪ್ರದೇಶ ನಿಮ್ಮನ್ನು ಸ್ವಾಗತಿಸಲು ಸಿದ್ಧವಾಗಿದೆ. ದಯವಿಟ್ಟು ಸಂಪರ್ಕದಲ್ಲಿರಿ!” ಎಂದು ನಾರಾ ಟ್ವೀಟ್‌ ಮಾಡಿದ್ದಾರೆ.

“ಕರ್ನಾಟಕದ ಜಿಡಿಪಿಗೆ ಖಾಸಗಿ ಉದ್ಯಮ ವಲಯ 25% ಕೊಡುಗೆ ನೀಡುತ್ತಿದೆ. ಆದರೆ ಕೌಶಲ್ಯಭರಿತ ಉದ್ಯೋಗಿಗಳ ಕೊರತೆಯಿದೆ. ಇಂಥ ಕಾನೂನು ತಂದರೆ ಉದ್ಯಮ ನಡೆಸುವುದು ಕಷ್ಟವಾಗಲಿದ್ದು, ಉದ್ಯಮಿಗಳು ಬೇರೆ ಕಡೆ ಸ್ಥಳಾಂತರಿಸುವ ಬಗ್ಗೆ ಚಿಂತನೆ ನಡೆಸಬೇಕಾಗುತ್ತದೆ” ಎಂದು ಔದ್ಯಮಿಕ ಒಕ್ಕೂಟ ನಾಸ್ಕಾಮ್‌ (NASSCOM) ಎಚ್ಚರಿಕೆ ನೀಡಿತ್ತು.

ಸರ್ಕಾರದ ನಿಲುವಿಗೆ ಬಿವೈ ವಿಜಯೇಂದ್ರ ಖಂಡನೆ

ಖಾಸಗಿ ಉದ್ಯಮದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲು ಒದಗಿಸುವ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಕನ್ನಡಿಗರ ಜೀವನದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕನ್ನಡಿಗರಿಗೆ ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗ ಮೀಸಲು ಬಗ್ಗೆ ವಿಧೇಯಕ ತಡೆಹಿಡಿದ ಸರಕಾರದ ಕ್ರಮವನ್ನು ಅವರು ಟೀಕಿಸಿದ್ದಾರೆ. ಈ ಬಗ್ಗೆ ಅವರು ʼಎಕ್ಸ್‌ʼನಲ್ಲಿ ಪೋಸ್ಟ್‌ ಮಾಡಿದ್ದಾರೆ.

“ಕನ್ನಡಿಗರಿಗೆ ಉದ್ಯೋಗ ಕೊಡುವ ವಿಧೇಯಕ ತಂದದ್ಯಾಕೆ? ತಡೆಹಿಡಿದಿದ್ದೇಕೆ? ಕನ್ನಡಿಗರ ಬದುಕಿನೊಂದಿಗೆ ಚೆಲ್ಲಾಟವೇಕೆ? ಅಪಮಾನಿಸಲು ನಿಮಗೆ ಕನ್ನಡಿಗರೇ ಬೇಕಿತ್ತೆ?” ಎಂದು ಅವರು ಪ್ರಶ್ನಿಸಿದ್ದಾರೆ. “ಕನ್ನಡಿಗರಿಗೆ ಉದ್ಯೋಗ ಕೊಡುವ ವಿಧೇಯಕ ದಿಢೀರ್ ತಡೆಹಿಡಿದು ಕನ್ನಡ-ಕನ್ನಡಿಗ-ಕರ್ನಾಟಕವನ್ನು ಅಪಮಾನಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah)ಅವರ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ರಣಹೇಡಿ ನಿರ್ಧಾರವನ್ನು ಸಮಸ್ತ ಕರುನಾಡ ಜನರ ಪರವಾಗಿ ಖಂಡಿಸುವೆ” ಎಂದಿದ್ದಾರೆ.

“ಈ ನೆಲದಲ್ಲಿ ಬದುಕು ಮಾಡುತ್ತ ಕನ್ನಡ ಕಲಿತವರೆಲ್ಲ ಕನ್ನಡಿಗರೇ ಎಂದು ಪರಿಗಣಿಸಿ ಈ ನೆಲದ ಮಕ್ಕಳ ಉದ್ಯೋಗದ ಹಕ್ಕನ್ನು ರಕ್ಷಿಸುವ ನಿಟ್ಟಿನಲ್ಲಿ ಕನ್ನಡಪರ ಹೋರಾಟಗಾರರ ಬಹುದಿನಗಳ ಹೋರಾಟದ ಬೇಡಿಕೆಗೆ ನಿನ್ನೆಯಷ್ಟೇ ‘ಅಸ್ತು ‘ಎಂದು ಹೆಜ್ಜೆ ಇಟ್ಟಿದ್ದ ಸರ್ಕಾರ ದಿನ ಕಳೆಯುವುದರೊಳಗೇ ‘ಸುಸ್ತು’ ಹೊಡೆದಿರುವುದೇಕೆ? ಮುಖ್ಯಮಂತ್ರಿಗಳು ಈ ಕುರಿತು ತಮ್ಮ X ಖಾತೆಯಲ್ಲಿ ಮೂರು ಬಾರಿ ‘ಯೂ ಟರ್ನ್ ಹೊಡೆದು’ ಕೊನೆಗೂ ವಿಧೇಯಕ ಸದ್ಯಕ್ಕೆ ಮಂಡಿಸುತ್ತಿಲ್ಲ ಎನ್ನುವ ಅಂಜುಬುರುಕ ನಿರ್ಧಾರದ ಹಿಂದೆ ನಾಡಿನ ಆತ್ಮ ಗೌರವ, ಕನ್ನಡಿಗರ ಸ್ವಾಭಿಮಾನ ಹಾಗೂ ಕನ್ನಡತನವನ್ನು ಹಿಮ್ಮೆಟ್ಟಿಸುವ ಕರ್ನಾಟಕ ವಿರೋಧಿ ಶಕ್ತಿಗಳ ಲಾಬಿ ಮೇಲುಗೈ ಸಾಧಿಸಿರುವಂತಿದೆ”

“ಇಂಡಿ ಕೂಟದಲ್ಲಿ ಯಾವಾಗ ಬಿರುಕು ಮೂಡುತ್ತದೋ ಎಂಬ ಭೀತಿಯಲ್ಲಿರುವ ದೆಹಲಿಯ ದೊಡ್ಡ ‘ಕೈ’ ಮುಖ್ಯಮಂತ್ರಿಗಳ ಕೈ ಕಟ್ಟಿಹಾಕಿರಲೇಬೇಕು, ಇಲ್ಲದಿದ್ದರೇ ಕನ್ನಡಿಗರ ಬದುಕು ಹಸನಾಗಿಸುವ ವಿಧೇಯಕವನ್ನು ಬದಿಗೆ ಸರಿಸುವ ಪಲಾಯನವಾದಿ ನಿರ್ಧಾರ ಕೈಗೊಳ್ಳಲು ಹೇಗೆ ಸಾಧ್ಯ? ಸದ್ಯ ಕಾಂಗ್ರೆಸ್ ಸರ್ಕಾರ ಹಾಗೂ ಮುಖ್ಯಮಂತ್ರಿಗಳನ್ನು ಮುತ್ತಿರುವ ಮಹರ್ಷಿ ವಾಲ್ಮೀಕಿ ನಿಗಮ ಹಾಗೂ ಮುಡಾ ಹಗರಣಗಳಿಂದ ತತ್ತರಿಸಿರುವ ಕಾಂಗ್ರೆಸ್ ತನ್ನ ಮುಖ ಮುಚ್ಚಿಕೊಳ್ಳಲು ಹಗರಣದ ಚರ್ಚೆ ಹಾಗೂ ತನಿಖೆಯನ್ನು ದಿಕ್ಕು ತಪ್ಪಿಸಲು ಹಾಗೂ ಜನರ ಗಮನ ವಿಚಲಿತಗೊಳಿಸುವ ಕುತಂತ್ರದಿಂದ ಕನ್ನಡ ಪರ ವಿಧೇಯಕವನ್ನು ತಡೆಹಿಡಿದು ಗುರಾಣಿ ಮಾಡಿಕೊಳ್ಳುವ ಹುನ್ನಾರ ನಡೆಸಿದ್ದರೆ ರಾಜ್ಯದ ಜನತೆ ಕಾಂಗ್ರೆಸ್ಸಿಗರನ್ನು ಎಂದಿಗೂ ಕ್ಷಮಿಸರು.”

“ವಿಧೇಯಕದ ಕುರಿತು ಮಾಧ್ಯಮಗಳಲ್ಲಿ ಹೆಮ್ಮೆಯಿಂದ ಬೀಗಿದ್ದ ಸಚಿವರುಗಳು ಹಾಗೂ ಕಾಂಗ್ರೆಸ್ ಮುಖಂಡರು ಕೆಲವೇ ಸಮಯದ ಅಂತರದಲ್ಲಿ ನಾಡ ಜನರ ಬಗೆಗಿನ ಐತಿಹಾಸಿಕ ವಿಧೇಯಕ ಹಿಂತೆಗೆದುಕೊಂಡ ಬಗ್ಗೆ ಸಮಸ್ತ ಕನ್ನಡ ಜನತೆಯ ಮುಂದೆ ತಲೆ ಎತ್ತಿ ಮಾತನಾಡುವ ನೈತಿಕತೆ ಕಳೆದುಕೊಂಡಿದ್ದಾರೆ. ಅರ್ಹತೆ ಇದ್ದರೂ ಉದ್ಯೋಗಾವಕಾಶಗಳಿಂದ ವಂಚಿತರಾಗಿ ಹತಾಶೆಗೊಳಗಾಗಿದ್ದ ಗ್ರಾಮೀಣ ಭಾಗದ ಲಕ್ಷಾಂತರ ನಿರುದ್ಯೋಗಿಗಳಿಗೆ ಭರವಸೆಯ ಬೆಳಕು ಮೂಡಿಸಿದ್ದ ಕನ್ನಡಿಗರ ಉದ್ಯೋಗ ಮೀಸಲಾತಿಯ ವಿಧೇಯಕ ಪ್ರಸಕ್ತ ಅಧಿವೇಶನದಲ್ಲೇ ಸರ್ಕಾರ ಮಂಡಿಸಲಿ, ಇಲ್ಲವೇ ಕನ್ನಡಿಗರ ಆಕ್ರೋಶ ಎದುರಿಸಲು ಸಿದ್ದವಾಗಲಿ” ಎಂದು ಅವರು ಬರೆದಿದ್ದಾರೆ.

ಇದನ್ನೂ ಓದಿ: Karnataka Jobs Reservation : ಕನ್ನಡಿಗರಿಗೆ ಖಾಸಗಿ ಕಂಪನಿಯಲ್ಲಿ ಉದ್ಯೋಗ ಮೀಸಲಾತಿ ಮಸೂದೆಗೆ ತಾತ್ಕಾಲಿಕ ತಡೆ; ಉದ್ಯಮಿಗಳ ಒತ್ತಡ?

Continue Reading

ಪ್ರಮುಖ ಸುದ್ದಿ

Karnataka Assembly Live: ವಾಲ್ಮೀಕಿ ಹಗರಣದ ಆರೋಪಗಳಿಗೆ ಇಂದು ಸಿಎಂ ಉತ್ತರ; ವಿಧಾನಮಂಡಲ ಕಲಾಪ ಲೈವ್‌ ಇಲ್ಲಿದೆ

Karnataka Assembly Live: ವಾಲ್ಮೀಕಿ ನಿಗಮ ಹಗರಣ (Valmiki Corporation Live) ಕುರಿತು ಪ್ರತಿಪಕ್ಷದ ಆರೋಪಗಳಿಗೆ ಇಂದು ಸಿಎಂ ಸಿದ್ದರಾಮಯ್ಯ (CM Siddaramaiah) ಉತ್ತರ ನೀಡಲಿದ್ದಾರೆ. ಇದರ ಜೊತೆಗೆ, ಕನ್ನಡಿಗರಿಗೆ ಖಾಸಗಿ ಉದ್ಯಮದಲ್ಲಿ ಮೀಸಲು ವಿಧೇಯಕದ (Karnataka jobs reservation) ಕುರಿತು ಸರ್ಕಾರ ನಿಲುವು ಹಾಗೂ ನಡೆ ಚರ್ಚೆಗೆ ಗ್ರಾಸವಾಗಲಿದೆ.

VISTARANEWS.COM


on

vidhana sabha karnataka assembly live
Koo

ಬೆಂಗಳೂರು: ಸೋಮವಾರ ಆರಂಭವಾಗಿದ್ದ ವಿಧಾನಮಂಡಲ ಅಧಿವೇಶನ (Karnataka Assembly Live) ಇಂದು ಮತ್ತೆ ಮುಂದುವರಿಯಲಿದೆ. ಬುಧವಾರ ಮೊಹರಂ ಹಬ್ಬದ ಹಿನ್ನೆಲೆಯಲ್ಲಿ ವಿಧಾನಸಭೆ ಹಾಗೂ ವಿಧಾನ ಪರಿಷತ್‌ ಕಲಾಪಗಳಿಗೆ (Assembly Session) ವಿರಾಮ ನೀಡಲಾಗಿತ್ತು. ಇಂದು ಬೆಳಗ್ಗೆ ಅಧಿವೇಶನ ಮತ್ತೆ ಆರಂಭವಾಗಲಿದ್ದು, ವಾಲ್ಮೀಕಿ ನಿಗಮ ಹಗರಣ (Valmiki Corporation Live) ಕುರಿತು ಪ್ರತಿಪಕ್ಷದ ಆರೋಪಗಳಿಗೆ ಇಂದು ಸಿಎಂ ಸಿದ್ದರಾಮಯ್ಯ (CM Siddaramaiah) ಉತ್ತರ ನೀಡಲಿದ್ದಾರೆ. ಇದರ ಜೊತೆಗೆ, ಕನ್ನಡಿಗರಿಗೆ ಖಾಸಗಿ ಉದ್ಯಮದಲ್ಲಿ ಮೀಸಲು ವಿಧೇಯಕದ (Karnataka jobs reservation) ಕುರಿತು ಸರ್ಕಾರ ನಿಲುವು ಹಾಗೂ ನಡೆ ಚರ್ಚೆಗೆ ಗ್ರಾಸವಾಗಲಿದೆ.

ಸೋಮವಾರ ಸಂವಿಧಾನದ ಪೀಠಿಕೆ ಓದು ಹಾಗೂ ಈ ನಡುವೆ ಅಗಲಿದ ಗಣ್ಯರಿಗೆ ಸಂತಾಪ ಸೂಚನೆಯೊಂದಿಗೆ ಕಲಾಪ ಆರಂಭವಾಗಿತ್ತು. ನಂತರ ಪ್ರತಿಪಕ್ಷಗಳ ಬೇಡಿಕೆಯಂತೆ, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಹಗರಣದ ಕುರಿತು ಚರ್ಚೆಗೆ ಸ್ಪೀಕರ್‌ ಅವಕಾಶ ನೀಡಿದ್ದರು. ಇದರ ನಂತರ ಸೋಮವಾರ ಹಾಗೂ ಮಂಗಳವಾರ ವಿಧಾನಸಭೆ ಕಲಾಪ ಗದ್ದಲದ ಗೂಡಾಗಿತ್ತು. ವಿಪಕ್ಷ ನಾಯಕ ಆರ್.‌ ಅಶೋಕ್‌ ಅವರು ಈ ಬಗ್ಗೆ ಸುದೀರ್ಘವಾಗಿ ಮಾತನಾಡಿ ಮುಖ್ಯಮಂತ್ರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರು.

ಈ ಸಂದರ್ಭದಲ್ಲಿ ಆಡಳಿತ ಪಕ್ಷ ಹಾಗೂ ವಿಪಕ್ಷಗಳ ಸದಸ್ಯರ ನಡುವೆ ಜೋರಾದ ಮಾತಿನ ಚಕಮಕಿ ನಡೆದಿತ್ತು. ಸ್ಪೀಕರ್‌ ಹಲವು ಬಾರಿ ಕಲಾಪವನ್ನು ಮುಂದೂಡಿದ್ದರು. ʼಮುಖ್ಯಮಂತ್ರಿಗಳು ನೈತಿಕ ಹೊನೆ ಹೊತ್ತು ರಾಜೀನಾಮೆ ನೀಡಬೇಕುʼ ಎಂದು ಅಶೋಕ್‌ ಆಗ್ರಹಿಸಿದ್ದರು. ಡಿಸಿಎಂ ಡಿಕೆ ಶಿವಕುಮಾರ್‌, ಎಂಬಿ ಪಾಟೀಲ್‌ ಮುಂತಾದವರು ಸಿಎಂ ಸಿದ್ದರಾಮಯ್ಯ ಪರ ಬ್ಯಾಟಿಂಗ್‌ ಮಾಡಿದ್ದರು. ಅಶೋಕ್‌ ಅವರ ಮಾತು ಹಾಗೂ ಚಕಮಕಿಯ ಬಳಿಕ ಕಲಾಪದ ಅವಧಿ ಮುಗಿದದ್ದರಿಂದ ಸಿಎಂ ಇಂದು ಸದನದಲ್ಲಿ ಉತ್ತರ ನೀಡಬೇಕಾಗಿದೆ.

ವಿರೋಧ ಪಕ್ಷದವರ ಎಂಟತ್ತು ಗಂಟೆಗಳ ಆರೋಪ, ದಾಳಿ, ಆಕ್ರೋಶದ ನುಡಿಗಳನ್ನು ಬಹುತೇಕ ಎಲ್ಲವನ್ನೂ ಅಡ್ಡಿ ಪಡಿಸದೆ ಮುಖ್ಯಮಂತ್ರಿಗಳು ಮತ್ತು ಆಡಳಿತ ಪಕ್ಷದ ಸದಸ್ಯರು ಆಲಿಸಿದರು. ವಾಲ್ಮೀಕಿ ನಿಗಮ ಪ್ರಕರಣದ ವಿರೋಧ ಪಕ್ಷದವರ ಎಲ್ಲಾ ಆರೋಪ ಮತ್ತು ಮಾತುಗಳಿಗೆ ಮುಖ್ಯಮಂತ್ರಿಗಳು ಗುರುವಾರ ಉತ್ತರ ನೀಡಲಿದ್ದಾರೆ.

ಈ ನಡುವೆ, ಖಾಸಗಿ ಉದ್ಯಮಗಳಲ್ಲಿ ಕನ್ನಡಿಗರಿಗೆ ಮೀಸಲು ಒಸಗಿಸುವ ಬಗ್ಗೆ ವಿಧೇಯಕ ರೂಪಿಸಲು ಸರ್ಕಾರ ಮುಂದಾಗಿತ್ತು. ಶೇ. 100 ಉದ್ಯೋಗ ಮೀಸಲು ಇಡಬೇಕು ಎಂದು ಕ್ಯಾಬಿನೆಟ್‌ನಲ್ಲಿ ನಿರ್ಣಯವಾಗಿದೆ ಎಂದು ಸಿಎಂ ಟ್ವೀಟ್‌ ಮಾಡಿದ್ದರು. ಇದಕ್ಕೆ ಖಾಸಗಿ ಉದ್ಯಮಿಗಳಿಂದ ಭಾರಿ ಪ್ರತಿರೋಧ ವ್ಯಕ್ತವಾಗಿತ್ತು. ನಂತರ ಟ್ವೀಟ್‌ ಡಿಲೀಟ್‌ ಮಾಡಿದ್ದ ಸಿಎಂ, ಬಳಿಕ ʼಶೇ.75 ಉದ್ಯೋಗ ಮೀಸಲುʼ ಎಂದಿದ್ದರು. ಇದಕ್ಕೂ ವಿರೋಧ ಬಂದಿತ್ತು. ಇದಾದ ಬಳಿಕ ʼಸದ್ಯ ಈ ವಿಧೇಯಕವನ್ನು ತಡೆಹಿಡಿಯಲಾಗಿದೆʼ ಎಂದು ಸರಕಾರ ಹೇಳಿದೆ.

ಸರಕಾರದ ಈ ಯುಟರ್ನ್‌ ಅನ್ನು ವಿಪಕ್ಷ ತನ್ನ ಅನುಕೂಲಕ್ಕೆ ಬಳಸಿಕೊಳ್ಳಲಿದೆ. ಈಗಾಗಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಈ ಬಗ್ಗೆ ಟ್ವೀಟ್‌ ಮಾಡಿ ಆಕ್ರೋಶ ಹೊರಹಾಕಿದ್ದಾರೆ. ʼವಾಲ್ಮೀಕಿ ಹಗರಣ ವಿಚಾರದಲ್ಲಿ ಸರಕಾರಕ್ಕೆ ಆಗುತ್ತಿರುವ ಮುಖಭಂಗ ತಪ್ಪಿಸಲು, ಗಮನವನ್ನು ಬೇರೆಡೆಗೆ ಸೆಳೆಯಲು ಇದನ್ನು ಮಾಡಲಾಗಿದೆ. ಆದರೆ ಸಿಎಂ ಇದರಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲʼ ಎಂದು ವಿಪಕ್ಷ ನಾಯಕ ಅಶೋಕ್‌ ಗುಡುಗಿದ್ದಾರೆ. ಹೀಗಾಗಿ, ಕಲಾಪದಲ್ಲಿ ಈ ವಿಚಾರವನ್ನು ಬಿಜೆಪಿ ಎತ್ತಿ ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲಿದೆಯಾ ಎಂಬ ಪ್ರಶ್ನೆಯೂ ಮೂಡಿದೆ.

ಇದನ್ನೂ ಓದಿ: Karnataka Assembly Live: ವಾಲ್ಮೀಕಿ ಹಗರಣ ಚರ್ಚೆಯ ನಡುವೆ ಗದ್ದಲ ಸೃಷ್ಟಿಸಿದ ರೇವಣ್ಣ ಪ್ರಕರಣ; ರೊಚ್ಚಿಗೆದ್ದ ರೇವಣ್ಣ

Continue Reading

ಪ್ರಮುಖ ಸುದ್ದಿ

Valmiki Corporation Scam: ನಾಗೇಂದ್ರ ಕಸ್ಟಡಿ ಅಂತ್ಯ, ಇಂದು ಕೋರ್ಟ್‌ಗೆ ಹಾಜರು; ಪತ್ನಿಯೂ ಇಡಿ ವಶದಲ್ಲಿ

Valmiki Corporation Scam:
ನಾಗೇಂದ್ರರವರ ಇಬ್ಬರು ಪಿಎಗಳು, ನಾಗೇಂದ್ರರ ಪತ್ನಿ ಎಲ್ಲರ ಹೇಳಿಕೆಯನ್ನು ಪಡೆದಿರುವ ಇಡಿ, ಇನ್ನಷ್ಟು ವಿಚಾರಗಳನ್ನು ಹೊರತೆಗೆಯುವ ಅಗತ್ಯದಲ್ಲಿ ಮತ್ತೆ ಕಸ್ಟಡಿಗೆ ಕೇಳುವ ಸಾಧ್ಯತೆ ಹೆಚ್ಚಿದೆ. ಅಕೌಂಟ್ಸ್ ವ್ಯವಹಾರ, ಹಣ ಎಲ್ಲೆಲ್ಲಿ ವ್ಯವಹಾರವಾಗಿದೆ, ಇನ್ನೂ ಯಾರು ಯಾರು ಇದ್ದಾರೆ ಹೀಗೆ ಅನೇಕ ಮಾಹಿತಿಗಳು ಇಡಿಗೆ ಬೇಕಾಗಿವೆ.

VISTARANEWS.COM


on

b nagendra valmiki corporation scam
Koo

ಬೆಂಗಳೂರು: ವಾಲ್ಮಿಕಿ ಅಭಿವೃದ್ಧಿ ನಿಗಮ ಬಹುಕೋಟಿ ಹಗರಣ (Valmiki Corporation Scam) ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ (Enforcement Directorate) ಧಿತರಾಗಿರುವ ಮಾಜಿ ಸಚಿವ ಬಿ. ನಾಗೇಂದ್ರ (Ex minister B Nagendra) ಕಸ್ಟಡಿ ಇಂದು ಅಂತ್ಯವಾಗುತ್ತಿದ್ದು, ಅವರನ್ನು ಮತ್ತೆ ಕೋರ್ಟ್ ಮುಂದೆ ಇಡಿ ಹಾಜರ್ (ED Raid) ಪಡಿಸಲಿದೆ. ತನಿಖೆ ಇನ್ನಷ್ಟು ನಡೆಯಬೇಕಿರುವುದರಿಂದ ಮತ್ತೆ ಕಸ್ಟಡಿಗೆ ಕೇಳಲಿದೆ.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಇಂದು ಮಧ್ಯಾಹ್ನ 2 ಗಂಟೆಗೆ ನಾಗೇಂದ್ರ ಅವರನ್ನು ಇಡಿ ಹಾಜರು ಪಡಿಸಲಿದೆ. ಮತ್ತೆ ಮೂರರಿಂದ ನಾಲ್ಕು ದಿನಗಳ ಕಾಲ ಕಸ್ಟಡಿಗೆ‌ ಕೇಳುವ ಸಾಧ್ಯತೆ ಇದೆ. ನಾಗೇಂದ್ರರವರ ಇಬ್ಬರು ಪಿಎಗಳು, ನಾಗೇಂದ್ರರ ಪತ್ನಿ ಎಲ್ಲರ ಹೇಳಿಕೆಯನ್ನು ಪಡೆದಿರುವ ಇಡಿ, ಇನ್ನಷ್ಟು ವಿಚಾರಗಳನ್ನು ಹೊರತೆಗೆಯುವ ಅಗತ್ಯದಲ್ಲಿ ಮತ್ತೆ ಕಸ್ಟಡಿಗೆ ಕೇಳುವ ಸಾಧ್ಯತೆ ಹೆಚ್ಚಿದೆ. ಅಕೌಂಟ್ಸ್ ವ್ಯವಹಾರ, ಹಣ ಎಲ್ಲೆಲ್ಲಿ ವ್ಯವಹಾರವಾಗಿದೆ, ಇನ್ನೂ ಯಾರು ಯಾರು ಇದ್ದಾರೆ ಹೀಗೆ ಅನೇಕ ಮಾಹಿತಿಗಳು ಇಡಿಗೆ ಬೇಕಾಗಿವೆ.

ನಿನ್ನೆ ನಾಗೇಂದ್ರ ಅವರ ಪತ್ನಿ ಮಂಜುಳಾ ಅವರನ್ನು ವಶಕ್ಕೆ ತೆಗೆದುಕೊಂಡು ಇಡಿ ವಿಚಾರಣೆ ಮಾಡಿತ್ತು. ಅಧಿಕಾರಿಗಳು 7ರಿಂದ 8 ಗಂಟೆಗಳ ಕಾಲ ಸುದೀರ್ಘ ವಿಚಾರಣೆ ಮಾಡಿದ್ದರು. ಸಾಕಷ್ಟು ವಿಚಾರಗಳನ್ನು ಹೊರ ತೆಗೆದಿದ್ದಾರೆ. ಪತಿ ಪತ್ನಿಯನ್ನು ಮುಖಾಮುಖಿ ಕೂರಿಸಿ ಪ್ರಶ್ನೆ ಮಾಡಲಾಗಿದೆ. ಮಂಜುಳಾ ಅವರ ಹೆಸರಲ್ಲಿ ಹಣದ ವಹಿವಾಟು ನಡೆದಿರುವ ಹಿನ್ನೆಲೆಯಲ್ಲಿ ಅವರನ್ನು ವಶಕ್ಕೆ ಪಡೆಯಲಾಗಿದೆ. ಅವ್ಯವಹಾರ ನಡೆದ ಸಮಯದಲ್ಲಿ ಮಂಜುಳಾ ಅವರ ಬ್ಯಾಂಕ್ ಖಾತೆಗಳಿಗೂ ಹಣ ಬಂದಿರುವ ಹಿನ್ನಲೆಯಲ್ಲಿ ಇಡಿ ಅಧಿಕಾರಿಗಳು ಇದರ ಮೂಲವನ್ನು ಪ್ರಶ್ನಿಸಲಿದ್ದಾರೆ.

ಜುಲೈ 13ರಂದು ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಬಳಿಕ ಯಲಹಂಕದಲ್ಲಿರುವ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶರ ಮನೆಗೆ ಹಾಜರುಪಡಿಸಲಾಗಿತ್ತು. ಈ ವೇಳೆ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು 5 ದಿನಗಳ ಕಾಲ ಕಸ್ಟಡಿಗೆ ನೀಡಿದ್ದರು. 18ನೇ ತಾರೀಖಿನಂದು ಬೆಳಿಗ್ಗೆ 11ಕ್ಕೆ ಮತ್ತೆ ಹಾಜರುಪಡಿಸುವಂತೆ ಸೂಚನೆ ನೀಡಿದ್ದರು.

ಅವರ ಮನೆ ಸೇರಿ 23 ಕಡೆಗಳಲ್ಲಿ ಇಡಿ ಏಕಕಾಲಕ್ಕೆ ದಾಳಿ ಮಾಡಿತ್ತು. 6 ದಿನಗಳ ಕಾಲದ ಇಡಿ ವಿಚಾರಣೆ ವಿಚಾರಣೆಯಲ್ಲಿ ನಾಗೇಂದ್ರ ಸಮರ್ಪಕವಾಗಿ ಉತ್ತರ ನೀಡಿಲ್ಲ. ವಾಲ್ಮೀಕಿ ನಿಗಮದ ಅಧ್ಯಕ್ಷರಾಗಿರುವ ರಾಯಚೂರು ಗ್ರಾಮೀಣ ಶಾಸಕ ಬಸವನಗೌಡ ದದ್ದಲ್‌ ಕೂಡ ಪ್ರಕರಣದಲ್ಲಿ ವಿಚಾರಣೆಗಾಗಿ ಇಡಿಗೆ ಬೇಕಾಗಿದ್ದಾರೆ. ಈಗಾಗಲೇ ಬಂದಿತ ಆರೋಪಿಗಳನ್ನು ಪ್ರಶ್ನಿಸಿದಾಗ ದದ್ದಲ್‌ ಪಿಎಯ ಕೈವಾಡ ಕೂಡ ಇದರಲ್ಲಿ ಕಂಡುಬಂದಿದೆ.

ಆದರೆ ಮನೆಗೆ ಇಡಿ ದಾಳಿಯ ಬಳಿಕ ಇಡಿ ಬಂಧನ ತಪ್ಪಿಸಿಕೊಳ್ಳಲು ದದ್ದಲ್‌ ಎಸ್‌ಐಟಿ ಮುಂದೆ ಹಾಜರಾಗ ಇಡೀ ದಿನ ಕೂತಿದ್ದರು. ನಂತರ ಅಲ್ಲಿಂದ ಹೊರಬಿದ್ದು ಮೂರು ದಿವಸ ಕಣ್ಮರೆಯಾಗಿದ್ದ ದದ್ದಲ್‌, ನಾಲ್ಕನೇ ದಿವಸ ವಿಧಾನಮಂಡಲ ಅಧಿವೇಶನ ಶುರುವಾದಾಗ ವಿಧಾನಸಭೆಯಲ್ಲಿ ಕಾಣಿಸಿಕೊಂಡಿದ್ದರು. ವಿಚಾರಣೆಗೆ ಬರುವಂತೆ ದದ್ದಲ್‌ ಅವರಿಗೆ ಇಡಿ ನೋಟೀಸ್‌ ನೀಡಿದೆ ಎನ್ನಲಾಗಿದೆ. ಆದರೆ ನನಗೆ ಯಾವುದೇ ನೋಟೀಸ್‌ ಬಂದಿಲ್ಲ ಎಂದಿದ್ದಾರೆ ದದ್ದಲ್.‌ ವಿಧಾನಮಂಡಲ ಅಧಿವೇಶನ ನಡೆಯುತ್ತಿರುವಾಗ ಸ್ಪೀಕರ್‌ ಅನುಮತಿ ಇಲ್ಲದೆ ಶಾಸಕರನ್ನು ಇಡಿ ಬಂಧಿಸುವಂತಿಲ್ಲ.

ಇದನ್ನೂ ಓದಿ: Valmiki Corporation Scam: ವಾಲ್ಮೀಕಿ ನಿಗಮ ಹಗರಣ; ಮಾಜಿ ಸಚಿವ ನಾಗೇಂದ್ರ ಪತ್ನಿಯನ್ನು ವಶಕ್ಕೆ ಪಡೆದ ಇಡಿ

Continue Reading

ಕ್ರೀಡೆ

Paris Olympics: ಪ್ಯಾರಿಸ್‌ ಒಲಿಂಪಿಕ್ಸ್​ ಭದ್ರತಾ ಕಾರ್ಯದಲ್ಲಿ ಭಾರತದ ಶ್ವಾನದಳ; ಬೆಂಗಳೂರಿನಲ್ಲಿ ತರಬೇತಿ

Paris Olympics:ಸಿಎಪಿಎಫ್‌, ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್‌), ಸಶಸ್ತ್ರ ಸೀಮಾ ಬಲ (ಎಸ್‌ಎಸ್‌ಬಿ), ಇಂಡೋ ಟಿಬೆಟಿಯನ್ ಗಡಿ ಪೊಲೀಸ್ (ಐಟಿಬಿಪಿ) ಪಡೆಗಳಿಂದ ಈ ಶ್ವಾನ ಮತ್ತು ನಿರ್ವಹಾಕರನ್ನು ಆಯ್ಕೆ ಮಾಡಲಾಗಿದೆ.

VISTARANEWS.COM


on

Paris Olympics
Koo

ಬೆಂಗಳೂರು: ಪ್ರತಿಷ್ಠಿತ ಪ್ಯಾರಿಸ್‌ ಒಲಿಂಪಿಕ್ಸ್‌(Paris Olympics) ಕ್ರೀಡಾಕೂಟ ಜುಲೈ 26ರಿಂದ ಆರಂಭಗೊಳ್ಳಲಿದೆ. ಈಗಾಗಲೇ ಕೂಟದ ಸಂಘಟಕರು ಎಲ್ಲ ಸಿದ್ಧತೆಗಳನ್ನು ಪೂರ್ಣಗೊಳಿಸಿದ್ದಾರೆ. ವಿಶೇಷವೆಂದರೆ ಭಯೋತ್ಪಾದನಾ ದಾಳಿ ತಡೆ ಭದ್ರತಾ ಕಾರ್ಯಕ್ಕಾಗಿ ಭಾರತೀಯ ಸೇನೆಯಲ್ಲಿ ತರಬೇತುಗೊಂಡ ಶ್ವಾನದಳವನ್ನು ನಿಯೋಜಿಸಲಾಗಿದೆ. ಈ ಶ್ವಾನಪಡೆಯ ಸಾಮರ್ಥ್ಯ ಪರೀಕ್ಷೆ ನಡೆದದ್ದು ಬೆಂಗಳೂರಿನಲ್ಲಿ.

ಕೇಂದ್ರ ಸಶಸ್ತ್ರ ಪೊಲೀಸ್ ಪಡೆ (ಸಿಎಪಿಎಫ್‌) ಮತ್ತು ವಿಶೇಷ ಕಮಾಂಡೊ ಪಡೆಯ ಭಾರತೀಯ ಕೆ9 (ಕೆನೈನ್) ಹತ್ತು ಶ್ವಾನಗಳ ಪಡೆಯನ್ನು ಪ್ಯಾರಿಸ್‌ಗೆ ಕಳುಹಿಸಲಾಗಿದೆ. ಬೆಂಗಳೂರು ಸಮೀಪದ ತರಳುವಿನಲ್ಲಿರುವ ಸಿಆರ್‌ಪಿಎಫ್ ಶ್ವಾನ ತಳಿ ಅಭಿವೃದ್ಧಿ ಮತ್ತು ತರಬೇತಿ ಕೇಂದ್ರದಲ್ಲಿ ಈ ಶ್ವಾನಪಡೆಯ ಸಾಮರ್ಥ್ಯ ಪರೀಕ್ಷೆ ನಡೆಸಿದ ಬಳಿಕ ಪ್ಯಾರಿಸ್‌ಗೆ ಕಳುಹಿಸಲಾಗಿದೆ. ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿರುವ ಭದ್ರತಾ ಪಡೆಗಳೊಂದಿಗೆ ಈ ಶ್ವಾನಪಡೆಯು ಕಾರ್ಯನಿರ್ವಹಿಸಲಿದೆ.

10 ವಾರ ತರಬೇತಿ


ಈ ಶ್ವಾನಗಳಿಗೆ ಹತ್ತು ವಾರಗಳ ಕಾಲ ವಿಶೇಷ ತರಬೇತಿ ನೀಡಲಾಗಿದೆ. ಸಿಎಪಿಎಫ್‌, ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್‌), ಸಶಸ್ತ್ರ ಸೀಮಾ ಬಲ (ಎಸ್‌ಎಸ್‌ಬಿ), ಇಂಡೋ ಟಿಬೆಟಿಯನ್ ಗಡಿ ಪೊಲೀಸ್ (ಐಟಿಬಿಪಿ) ಪಡೆಗಳಿಂದ ಈ ಶ್ವಾನ ಮತ್ತು ನಿರ್ವಹಾಕರನ್ನು ಆಯ್ಕೆ ಮಾಡಲಾಗಿದೆ. ಈ ಶ್ವಾನಪಡೆಯಲ್ಲಿರುವ ಬೆಲ್ಜಿಯನ್ ಮೆಲಿನೊಸ್ ತಳಿಯು ಪ್ರಮುಖವಾಗಿದೆ. ಬಾಂಬ್‌ ಪತ್ತೆ ಕಾರ್ಯಾಚರಣೆಯಲ್ಲಿ ಅತ್ಯಂತ ಚುರುಕಾದ ತಳಿ ಇದಾಗಿದೆ.

ಕಳೆದ ಬಾರಿಗಿಂತ ಈ ಬಾರಿ ಹೆಚ್ಚಿನ ಪದಕ ಗೆಲ್ಲುವುದು ಭಾರತದ ಪ್ರಮುಖ ಗುರಿಯಾಗಿದೆ. ಟೋಕಿಯೊದಲ್ಲಿ ಭಾರತ ಒಟ್ಟು 7 ಪದಕ ಜಯಿಸಿತ್ತು. ಇದರಲ್ಲಿ ಒಂದು ಚಿನ್ನ, 2 ಬೆಳ್ಳಿ ಮತ್ತು 4 ಕಂಚಿನ ಪದಕ ಒಳಗೊಂಡಿತ್ತು. ಒಟ್ಟಾರೆಯಾಗಿ ಭಾರತ ಪದಕ ಪಟ್ಟಿಯಲ್ಲಿ 48ನೇ ಸ್ಥಾನ ಪಡೆದಿತ್ತು. ಕ್ರೀಡಾಕೂಟ ಜುಲೈ 26ರಿಂದ ಆಗಸ್ಟ್ 11ರವರೆಗೆ ನಡೆಯಲಿದೆ. ಪ್ಯಾರಿಸ್ ಆತಿಥ್ಯದಲ್ಲಿ ನಡೆಯುತ್ತಿರುವ ಮೂರನೇ (1900 ಮತ್ತು 1924ರ ನಂತರ) ಟೂರ್ನಿ ಇದಾಗಿದೆ. 32 ಕ್ರೀಡೆಗಳು ಮತ್ತು 329 ಈವೆಂಟ್‌ಗಳನ್ನು ಯೋಜಿಸಲಾಗಿದೆ. 29 ಸದಸ್ಯರನ್ನು ಒಳಗೊಂಡ ಟ್ರ್ಯಾಕ್ ಆ್ಯಂಡ್ ಫೀಲ್ಡ್ ತಂಡಕ್ಕೆ ಟೋಕಿಯೊ ಒಲಿಂಪಿಕ್​ ಚಿನ್ನದ ಪದಕ ವಿಜೇತ, ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಅವರು ನಾಯಕನಾಗಿದ್ದಾರೆ.

ಈ ಬಾರಿಯ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ(Paris Olympics) ಭಾಗಿಯಾಗುವ ಭಾರತದ ಆ್ಯತ್ಲೀಟ್‌ಗಳಿಗೆ ಮನೆಯ ವಾತಾವರಣವನ್ನು ಕಲ್ಪಿಸುವ ಉದ್ದೇಶದಿಂದ ರಿಲಯನ್ಸ್‌ ಸಂಸ್ಥೆ “ಇಂಡಿಯಾ ಹೌಸ್​”(India House)​ ಎಂಬ ವಿಶೇಷ ವ್ಯವಸ್ಥೆಯೊಂದನ್ನು ಮಾಡಿದೆ. ಭಾರತೀಯ ಕ್ರೀಡಾಪಟುಗಳು ಇದರಲ್ಲೇ ಉಳಿದುಕೊಳ್ಳಲಿದ್ದಾರೆ.

ಒಲಿಂಪಿಕ್ಸ್‌ನಲ್ಲಿ ಪಾಲ್ಗೊಳ್ಳಲಿರುವ ಭಾರತದ ಅಥ್ಲೀಟ್‌ಗಳು ಉತ್ತಮ ಪ್ರದರ್ಶನ ನೀಡುವ ಮೂಲಕ ದೇಶಕ್ಕೆ ಹೆಮ್ಮೆ ತರುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ದ್ರೌಪದಿ ಮುರ್ಮು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Continue Reading
Advertisement
Urvashi Rautela bathroom video leak on social media
ಸಿನಿಮಾ2 mins ago

Urvashi Rautela: ನಟಿ ಊರ್ವಶಿ ರೌಟೇಲಾ ಬಟ್ಟೆ ಬಿಚ್ಚಿ, ಸ್ನಾನ ಮಾಡುವ ವಿಡಿಯೊ ಲೀಕ್‌!

United Nations
ವಿದೇಶ10 mins ago

United Nations: ಗಾಜಾದಲ್ಲಿ ಸಂಪೂರ್ಣ ಕದನ ವಿರಾಮ ಘೋಷಿಸಿ; ವಿಶ್ವಸಂಸ್ಥೆಯಲ್ಲಿ ಪುನರುಚ್ಚರಿಸಿದ ಭಾರತ

Karnataka Jobs Reservation
ಪ್ರಮುಖ ಸುದ್ದಿ18 mins ago

Karnataka Jobs Reservation: ಉರಿವ ಮನೆಯಿಂದ ಗಳ ಹಿರಿದ ಆಂಧ್ರಪ್ರದೇಶ; ʼನಮ್ಮಲ್ಲಿಗೇ ಬನ್ನಿʼ ಎಂದು ಖಾಸಗಿ ಉದ್ಯಮಗಳಿಗೆ ಭಿಕ್ಷಾಪಾತ್ರೆ ಒಡ್ಡಿದ ಸಚಿವ

Maoists Attack
ದೇಶ30 mins ago

Maoists Attack: ಛತ್ತೀಸ್‌ಗಢದಲ್ಲಿ ಮತ್ತೆ ಮಾವೋವಾದಿಗಳ ಅಟ್ಟಹಾಸ; ಇಬ್ಬರು ಪೊಲೀಸರು ಹುತಾತ್ಮ

Viral Video
ಪ್ರಮುಖ ಸುದ್ದಿ34 mins ago

Viral Video: ಇನ್‌ಸ್ಟಾಗ್ರಾಂನಲ್ಲಿಯೇ ಗಂಡನಿಗೆ ಡಿವೋರ್ಸ್‌‌ ನೀಡಿದ ದುಬೈ ರಾಜಕುಮಾರಿ! ಏನು ಬರೆದಿದ್ದಾಳೆ ನೋಡಿ!

Hardik Pandya
ಕ್ರೀಡೆ50 mins ago

Hardik Pandya: ಫಿಟ್ನೆಸ್‌ ಬಗ್ಗೆ ಪ್ರಶ್ನೆ ಮಾಡಿದವರಿಗೆ ಸಿಕ್ಸ್​ ಪ್ಯಾಕ್​ ಮೂಲಕ ತಿರುಗೇಟು ಕೊಟ್ಟ ಹಾರ್ದಿಕ್​ ಪಾಂಡ್ಯ

vidhana sabha karnataka assembly live
ಪ್ರಮುಖ ಸುದ್ದಿ1 hour ago

Karnataka Assembly Live: ವಾಲ್ಮೀಕಿ ಹಗರಣದ ಆರೋಪಗಳಿಗೆ ಇಂದು ಸಿಎಂ ಉತ್ತರ; ವಿಧಾನಮಂಡಲ ಕಲಾಪ ಲೈವ್‌ ಇಲ್ಲಿದೆ

Joe Biden
ವಿದೇಶ1 hour ago

Joe Biden: ಅಮೆರಿಕ ಅಧ್ಯಕ್ಷ ಜೋ ಬೈಡನ್​ಗೆ ಕೊರೊನಾ ಸೋಂಕು; ಪ್ರಚಾರಕ್ಕೆ ಬ್ರೇಕ್‌

Actor Darshan Judicial Custody Ends Today May Extend Again
ಸ್ಯಾಂಡಲ್ ವುಡ್1 hour ago

Actor Darshan: ಇಂದು ಜಡ್ಜ್​ ಮುಂದೆ ದರ್ಶನ್ & ಟೀಂ ಹಾಜರು; ಜೈಲುವಾಸ ಮುಕ್ತಾಯವಾಗುತ್ತಾ?

ಕ್ರಿಕೆಟ್1 hour ago

BCCI: ಕೋಚಿಂಗ್​ ಹುದ್ದೆಗೆ ಗಂಭೀರ್ ಸೂಚಿಸಿದ್ದ ಐವರ ಹೆಸರನ್ನು ತಿರಸ್ಕರಿಸಿದ ಬಿಸಿಸಿಐ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ2 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ3 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ3 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ3 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ4 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ4 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ4 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ4 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ5 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌