Athiya-KL Rahul Wedding | ಅಥಿಯಾ ಶೆಟ್ಟಿ ಮದುವೆ ಲೆಹೆಂಗಾ ಮಾಡುವುದಕ್ಕೆ ತಗಲಿದ್ದು ಬರೋಬ್ಬರಿ 10,000 ಗಂಟೆಗಳು! - Vistara News

ಬಾಲಿವುಡ್

Athiya-KL Rahul Wedding | ಅಥಿಯಾ ಶೆಟ್ಟಿ ಮದುವೆ ಲೆಹೆಂಗಾ ಮಾಡುವುದಕ್ಕೆ ತಗಲಿದ್ದು ಬರೋಬ್ಬರಿ 10,000 ಗಂಟೆಗಳು!

ಕ್ರಿಕೆಟ್‌ ಆಟಗಾರ ಕೆ.ಎಲ್‌.ರಾಹುಲ್‌ ಹಾಗೂ ಬಾಲಿವುಡ್‌ ನಟ ಸುನಿಲ್‌ ಶೆಟ್ಟಿ ಪುತ್ರಿ ಆತಿಯಾ ಶೆಟ್ಟಿ ಸೋಮವಾರ ವೈವಾಹಿಕ (Athiya-KL Rahul Wedding) ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ಸಂದರ್ಭದಲ್ಲಿ ಆತಿಯಾ ತೊಟ್ಟಿದ್ದ ಲೆಹಂಗಾವನ್ನು ತಯಾರಿಸುವುದಕ್ಕೆ ಬರೋಬ್ಬರಿ 10,000 ಗಂಟೆಗಳು ತಗುಲಿದ್ದಾಗಿ ವಸ್ತ್ರ ವಿನ್ಯಾಸಕಿ ಅನಾಮಿಕ ಖನ್ನಾ ತಿಳಿಸಿದ್ದಾರೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ: ಭಾರತೀಯ ಕ್ರಿಕೆಟ್‌ ತಂಡದ ಆಟಗಾರ ಕೆ.ಎಲ್‌.ರಾಹುಲ್‌ ಹಾಗೂ ಬಾಲಿವುಡ್‌ ಸಿನಿಮಾ ನಟ ಸುನಿಲ್‌ ಶೆಟ್ಟಿ ಅವರ ಪುತ್ರಿ ಅಥಿಯಾ ಶೆಟ್ಟಿ ಸೋಮವಾರ ದಾಂಪತ್ಯ ಜೀವನಕ್ಕೆ (Athiya-KL Rahul Wedding) ಕಾಲಿಟ್ಟಿದ್ದಾರೆ. ಮುಂಬೈನಲ್ಲಿ ಸುನಿಲ್‌ ಅವರ ಮಾಲೀಕತ್ವದಲ್ಲಿರುವ ಖಂಡಾಲ ಫಾರ್ಮ್‌ಹೌಸ್‌ನಲ್ಲಿ ಈ ಜೋಡಿ ಸಪ್ತಪದಿ ತುಳಿದಿದೆ. ಈ ಜೋಡಿ ಮದುವೆಯಲ್ಲಿ ತೊಟ್ಟಿದ್ದಂತಹ ಉಡುಗೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಆ ವಿಶೇಷ ಉಡುಗೆಯ ಬಗ್ಗೆ ಮಾಹಿತಿ ಇಲ್ಲಿದೆ.

ಇದನ್ನೂ ಓದಿ: Athiya Kl Rahul Wedding Reception: ಐಪಿಎಲ್​ ಬಳಿಕ ರಾಹುಲ್​-ಅಥಿಯಾ ಜೋಡಿಯ ಆರತಕ್ಷತೆ; ಸುಳಿವು ನೀಡಿದ ಸುನೀಲ್​ ಶೆಟ್ಟಿ

ಅಥಿಯಾ ಅವರು ತೊಟ್ಟಂತಹ ಲೆಹೆಂಗಾವನ್ನು ಪ್ರಸಿದ್ಧ ವಸ್ತ್ರ ವಿನ್ಯಾಸಕರಾಗಿರುವ ಅನಾಮಿಕ ಖನ್ನಾ ವಿನ್ಯಾಸ ಮಾಡಿದ್ದಾರೆ. ಭಾರೀ ಎಂಬ್ರಾಯಿಡರಿ ಇರುವ ಈ ಲೆಹೆಂಗಾ ತಯಾರಿಸುವುದಕ್ಕೆ ಬರೋಬ್ಬರಿ 10,000 ಗಂಟೆಗಳು ಅಂದರೆ ಒಂದು ವರ್ಷ ಮತ್ತು 50 ದಿನಗಳು ತಗುಲಿವೆಯಂತೆ. ಈ ವಿಚಾರವನ್ನು ಅನಾಮಿಕ ಅವರೇ ಮಾಧ್ಯಮವೊಂದಕ್ಕೆ ಸಂದರ್ಶನದಲ್ಲಿ ತಿಳಿಸಿದ್ದಾರೆ.

ತಿಳಿ ಗುಲಾಬಿ ಬಣ್ಣದ್ದಾಗಿರುವ ಲೆಹೆಂಗಾ ಅನಾಮಿಕ ಖನ್ನಾ ಅವರ ವಿಶೇಷ ಚಿಕನ್‌ಕಾರಿ ಲೆಹೆಂಗಾವಾಗಿದೆ. ರೇಶ್ಮೆ ಬಟ್ಟೆಯ ಮೇಲೆ ಜರ್ದೋಜಿ ಮತ್ತು ಜಾಲಿ ವರ್ಕ್‌ ಮಾಡಲಾಗಿದೆ. ಸಂಪೂರ್ಣವಾಗಿ ಕೈಯಿಂದಲೇ ನೇಯ್ದ ಬಟ್ಟೆಯನ್ನೇ ಲೆಹೆಂಗಾಕ್ಕೆ ಬಳಕೆ ಮಾಡಲಾಗಿದೆ. ಹಾಗೆಯೇ ರೇಶ್ಮೆ ಆರ್ಗನ್ಜಾದಿಂದ ಮಾಡಿದ ದುಪಟ್ಟಾವನ್ನು ಧರಿಸಿದ್ದರು.

ಈ ಲೆಹೆಂಗಾ ಧರಿಸುವುದಕ್ಕೆ ಅನಾಮಿಕ ಅವರಿಗೆ ಅಥಿಯಾ ಅವರೇ ಸ್ಫೂರ್ತಿಯಂತೆ. “ಅಥಿಯಾ ಅತ್ಯಂತ ಒಳ್ಳೆಯ ಅಭಿರುಚಿ ಇರುವಂತವರು. ಅವರ ಮದುವೆಗೆ ವಿಶೇಷವಾದ ಉಡುಗೆಯನ್ನೇ ತಯಾರಿಸಬೇಕೆಂದು ನಾನು ಬಯಸಿದ್ದೆ. ಅವರದ್ದು ಅತ್ಯಂತ ಶಕ್ತಿಯುತ ವ್ಯಕ್ತಿತ್ವ. ಈ ಎಲ್ಲ ವಿಚಾರಗಳನ್ನು ತಲೆಯಲ್ಲಿಟ್ಟುಕೊಂಡು ನಾನು ಈ ಲೆಹೆಂಗಾವನ್ನು ವಿನ್ಯಾಸ ಮಾಡಿದೆ. ಇದನ್ನು ಎಷ್ಟು ವರ್ಷ ಬಿಟ್ಟು ನೋಡಿದರೂ ಅವರಿಗೆ ಬೇಸರವೆನಿಸುವುದಿಲ್ಲ” ಎಂದು ಹೇಳಿದ್ದಾರೆ ಅನಾಮಿಕ.

ಇದನ್ನೂ ಓದಿ: Athiya Shetty KL Rahul wedding: ಕೆ.ಎಲ್​. ರಾಹುಲ್​-ಅಥಿಯಾ ಶೆಟ್ಟಿ ವಿವಾಹದ ಸುಂದರ ಫೋಟೊಗಳು ಇಲ್ಲಿವೆ

ಅಥಿಯಾ ಲೆಹೆಂಗಾಕ್ಕೆ ಸರಿಹೊಂದುವಂತಹ ದೊಡ್ಡ ನೆಕ್ಲೇಸ್‌, ಓಲೆ, ಬೈತಲೆ ಬೊಟ್ಟು ಮತ್ತು ಬಳೆಗಳನ್ನು ಧರಿಸಿದ್ದರು. ಅಥಿಯಾ ಉಡುಗೆಗೆ ಸರಿಹೊಂದುವಂತೆ ರಾಹುಲ್‌ ಕೂಡ ತಿಳಿ ಗುಲಾಬಿ ಬಣ್ಣದ ಶರ್ವಾನಿಯನ್ನು ಧರಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಾಲಿವುಡ್

Kattappa To Turn Modi: ಮೋದಿ ಪಾತ್ರದಲ್ಲಿ `ಬಾಹುಬಲಿ’ ಕಟ್ಟಪ್ಪ!

Kattappa To Turn Modi: ಪ್ರಧಾನಿ ನರೇಂದ್ರ ಮೋದಿ ಅವರು 2014ರಲ್ಲಿ ಮೊದಲ ಬಾರಿಗೆ ಪ್ರಧಾನಿಯಾದರು. ಆ ಬಳಿಕ ಕೆಲವು ಚಿತ್ರ ನಿರ್ಮಾಪಕರು ಅವರ ಜೀವನಗಾಥೆಯ ಬಗ್ಗೆ ಆಸಕ್ತಿಯನ್ನು ತಳೆದರು. ನಿರ್ದೇಶಕ ಓಮುಂಗ್ ಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ‘ಪಿಎಂ ನರೇಂದ್ರ ಮೋದಿ(PM Narendra Modi)’ ಸಿನಿಮಾವನ್ನು ಪ್ರಕಟಿಸಿದರು ಮತ್ತು 2019ರಲ್ಲಿ ಈ ಸಿನಿಮಾ ಬಿಡುಗಡೆಯಾಯಿತು. ಪ್ರಧಾನಿ ನೇರಂದ್ರ ಮೋದಿ ಅವರ ಪಾತ್ರದಲ್ಲಿ ನಟ ವಿವೇಕ್ ಒಬೆರಾಯ್ ಅವರು ನಟಿಸಿದ್ದಾರೆ. ವಿವೇಕ್ ತಂದೆ ಸುರೇಶ್ ಒಬೆರಾಯ್ ಅವರು ಚಿತ್ರದ ನಿರ್ಮಾಪಕರ ಪೈಕಿ ಒಬ್ಬರು.

VISTARANEWS.COM


on

Kattappa To Turn Modi Sathyaraj To Play Biopic On Prime Minister
Koo

ಬೆಂಗಳೂರು: ಬ್ಲಾಕ್‌ಬಸ್ಟರ್ `ಬಾಹುಬಲಿ’ ಸಿನಿಮಾದಲ್ಲಿ ಕಟ್ಟಪ್ಪ (Kattappa To Turn Modi) ಪಾತ್ರಕ್ಕೆ ಹೆಸರುವಾಸಿಯಾದ ಹಿರಿಯ ನಟ ಸತ್ಯರಾಜ್ (Veteran actor Sathyaraj) ಅವರು ಪ್ರಧಾನಿ ನರೇಂದ್ರ ಮೋದಿ (Biopic On Prime Minister) ಅವರ ಪಾತ್ರದಲ್ಲಿ ಕಾಣಿಸಿಕೊಳ್ಳಲು ಸಿದ್ಧರಾಗಿದ್ದಾರೆ. ಪಾತ್ರವನ್ನು ಸಿನಿಮಾ ತಜ್ಞ ರಮೇಶ್ ಬಾಲಾ ಸಾಮಾಜಿಕ ಮಾಧ್ಯಮದಲ್ಲಿ ಈ ಬಗ್ಗೆ ಪೋಸ್ಟ್ ಹಂಚಿಕೊಂಡಿದ್ದಾರೆ.

ಪ್ರಧಾನಿ ಮೋದಿಯವರ ಜೀವನ ತೆರೆ ಮೇಲೆ ಬಂದಿರುವುದು ಇದೇನು ಮೊದಲಲ್ಲ. 2019 ರಲ್ಲಿ, ನಟ ವಿವೇಕ್ ಒಬೆರಾಯ್, ಓಮಂಗ್ ಕುಮಾರ್ ನಿರ್ದೇಶಿಸಿದ ಜೀವನಚರಿತ್ರೆಯ ಚಿತ್ರದಲ್ಲಿ ಕಂಡು ಬಂದಿದ್ದರು. ಇದಲ್ಲದೆ, ಮಹೇಶ್ ಠಾಕೂರ್, ಲಾಲ್ಜಿ ಡಿಯೋರಿಯಾ, ರಜಿತ್ ಕಪೂರ್ ಮತ್ತು ಕೆಕೆ ಶುಕ್ಲಾ ಅವರಂತಹ ಇತರ ನಟರು ಮೋದಿ ಕುರಿತು ಸಿನಿಮಾ ಮಾಡಿದ್ದಾರೆ. ಮೋದಿ ಪಾತ್ರದಲ್ಲಿ ಸತ್ಯರಾಜ್​ ಕಾಣಿಸಿಕೊಳ್ಳಲಿದ್ದಾರೆ ಎಂಬುದು ದಕ್ಷಿಣ ಭಾರತದ ಹಿರಿಯ ನಟನ ಬಗ್ಗೆ ಹೆಚ್ಚುತ್ತಿರುವ ಜನಪ್ರಿಯತೆಯನ್ನೂ ತೋರಿಸುತ್ತದೆ.

ಪ್ರಧಾನಿ ನರೇಂದ್ರ ಮೋದಿ ಅವರು 2014ರಲ್ಲಿ ಮೊದಲ ಬಾರಿಗೆ ಪ್ರಧಾನಿಯಾದರು. ಆ ಬಳಿಕ ಕೆಲವು ಚಿತ್ರ ನಿರ್ಮಾಪಕರು ಅವರ ಜೀವನಗಾಥೆಯ ಬಗ್ಗೆ ಆಸಕ್ತಿಯನ್ನು ತಳೆದರು. ನಿರ್ದೇಶಕ ಓಮುಂಗ್ ಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ‘ಪಿಎಂ ನರೇಂದ್ರ ಮೋದಿ(PM Narendra Modi)’ ಸಿನಿಮಾವನ್ನು ಪ್ರಕಟಿಸಿದರು ಮತ್ತು 2019ರಲ್ಲಿ ಈ ಸಿನಿಮಾ ಬಿಡುಗಡೆಯಾಯಿತು. ಪ್ರಧಾನಿ ನೇರಂದ್ರ ಮೋದಿ ಅವರ ಪಾತ್ರದಲ್ಲಿ ನಟ ವಿವೇಕ್ ಒಬೆರಾಯ್ ಅವರು ನಟಿಸಿದ್ದಾರೆ. ವಿವೇಕ್ ತಂದೆ ಸುರೇಶ್ ಒಬೆರಾಯ್ ಅವರು ಚಿತ್ರದ ನಿರ್ಮಾಪಕರ ಪೈಕಿ ಒಬ್ಬರು.

ಇದನ್ನೂ ಓದಿ: Actor Sathyaraj: `ಬಾಹುಬಲಿ’ ಕಟ್ಟಪ್ಪನ ತೊಡೆ ಮೇಲೆ ಕುಳಿತ ಈ ಕ್ಯೂಟ್‌ ನಟ ಯಾರು? ಹೇಳಿ ನೋಡೋಣ!

ಭಾರೀ ವಿವಾದವಾಗಿತ್ತು

2019ರ ಏಪ್ರಿಲ್- ಮೇ ತಿಂಗಳಲ್ಲಿ ಲೋಕಸಭೆ ಚುನಾವಣೆ ನಿಗದಿಯಾಗಿತ್ತು. ಚುನಾವಣೆಯ ಕಾವು ಜೋರಾಗಿತ್ತು. ಇದೇ ಸಂದರ್ಭದಲ್ಲಿ ನಿರ್ಮಾಪಕರು ಪಿಎಂ ನರೇಂದ್ರ ಮೋದಿ ಸಿನಿಮಾ ಬಿಡುಗಡೆಗೆ ಮುಂದಾದರು. ಇದು ಆಡಳಿತ ಮತ್ತು ಪ್ರತಿಪಕ್ಷಗಳ ನಾಯಕರ ಮಧ್ಯೆ ಒಣ ರಗಳೆಗೂ ಕಾರಣವಾಯಿತು. ಪಿಎಂ ನರೇಂದ್ರ ಮೋದಿ ಸಿನಿಮಾ ಮತದಾರರಿಗೆ ಆಮಿಷ ಒಡ್ಡಬಹುದು ಎಂಬ ಆರೋಪ ಕೇಳಿ ಬಂತು. ಹಾಗಾಗಿ ಚುನಾವಣೆ ನಡೆಯುವ ಸಂದರ್ಭದಲ್ಲಿ ಸಿನಿಮಾಗೆ ಬಿಡುಗಡೆಯ ಭಾಗ್ಯ ಸಿಗಲಿಲ್ಲ. ಫಲಿತಾಂಶ ಪ್ರಕಟವಾದ ಮಾರನೇ ದಿನ ಅಂದರೆ 2019 ಮೇ 24ರಂದು ಸಿನಿಮಾ ಬಿಡುಗಡೆಯಾಯಿತು.

ಬಿಡುಗಡೆ ಮುನ್ನ ಭಾರೀ ಸದ್ದಿಗೆ ಕಾರಣವಾಗಿದ್ದ ಪಿಎಂ ನರೇಂದ್ರ ಮೋದಿ ಸಿನಿಮಾ, ಬಿಡುಗಡೆಯ ಬಳಿಕ ಅಷ್ಟೇನೂ ಸದ್ದು ಮಾಡಲಿಲ್ಲ. ವಿಮರ್ಶಕರು ಮತ್ತು ಪ್ರೇಕ್ಷಕರಿಂದ ಮೆಚ್ಚುಗೆಯೂ ಸಿಗಲಿಲ್ಲ. 8 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾದ ಈ ಹಿಂದಿ ಭಾಷೆಯ ಚಿತ್ರವು ತನ್ನ ಲೈಫ್‌ ಟೈಮ್‌ನಲ್ಲಿ 28 ಕೋಟಿ ರೂ. ಗಳಿಕೆ ಮಾಡಿತ್ತು.

ಸ್ಫೂರ್ತಿಯಾದರು ಮೋದಿ

ಬಹುಶಃ ಸಂಪೂರ್ಣವಾಗಿ ಮೋದಿ ಅವರನ್ನು ಕೇಂದ್ರವಾಗಿಟ್ಟು ಈವರೆಗೆ ಅಷ್ಟೇನೂ ಚಿತ್ರಗಳ ಬಂದಿಲ್ಲ. ಆದರೆ, ಕೆಲವು ಸಿನಿಮಾಗಳಿಗೆ ಅವರು ಸ್ಫೂರ್ತಿಯಾಗಿದ್ದಾರೆ. ಕೆಲವು ಪಾತ್ರಗಳನ್ನು ಅವರನ್ನು ಹೋಲುತ್ತವೆ. ಹಾಗಾಗಿ, ಮೋದಿ ಅವರಿಗೂ ಸಿನಿಮಾ ರಂಗಕ್ಕೂ ನಂಟಿದೆ ಎದು ಹೇಳಬಹುದು.

Continue Reading

ಬಾಲಿವುಡ್

Cannes 2024: ಆಸ್ಕರ್‌ ಪ್ರಶಸ್ತಿಯ ಆಕಾರದಂತೆ ಕಂಡ ಶೋಭಿತಾ ಧೂಲಿಪಾಲ!

Cannes 2024: ಪ್ರತಿ ವರ್ಷದಂತೆ ಈ ಬಾರಿಯೂ ಕಾನ್‌ ಚಲನಚಿತ್ರೋತ್ಸವದಲ್ಲಿ ಭಾರತೀಯ ಸೆಲೆಬ್ರಿಟಿಗಳ ಉಪಸ್ಥಿತಿ ಕಂಡುಬಂದಿದೆ. ಈ ಕಾರ್ಯಕ್ರಮದಲ್ಲಿ ಐಶ್ವರ್ಯಾ ರೈ ಮತ್ತು ಕಿಯಾರಾ ಆಡ್ವಾಣಿ ಕೂಡ ಭಾಗವಹಿಸಿದ್ದರು. ಅದಿತಿ ರಾವ್ ಹೈದರಿ ಕೂಡ ಸಮಾರಂಭದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಮೇ 25ಕ್ಕೆ ಚಿತ್ರೋತ್ಸವ ಮುಕ್ತಾಯವಾಗಲಿದೆ.ಶೋಭಿತಾ ಧೂಲಿಪಾಲ ಅವರು ಗೋಲ್ಡನ್ ಬಾಡಿಕಾನ್ ಫುಲ್ ಸ್ಲೀವ್ ಡ್ರೆಸ್‌ನಲ್ಲಿ ಮಿಂಚಿದ್ದಾರೆ. ಇದೀಗ ಈ ಫೋಟೊಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

VISTARANEWS.COM


on

Sobhita Dhulipala golden new look from Cannes Film Festival
Koo

ಬೆಂಗಳೂರು: 77ನೇ  ಕಾನ್‌ ಫಿಲ್ಮ್‌ ಫೆಸ್ಟಿವಲ್‌ (Cannes 2024)ನಲ್ಲಿ ಶೋಭಿತಾ ಧೂಲಿಪಾಲ ( Sobhita Dhulipala) ಅವರು ರೆಡ್‌ ಕಾರ್ಪೆಟ್‌ ಮೇಲೆ ಹೆಜ್ಜೆ ಹಾಕಿದ್ದಾರೆ. ಶೋಭಿತಾ ಧೂಲಿಪಾಲ ಅವರು ಗೋಲ್ಡನ್ ಬಾಡಿಕಾನ್ ಫುಲ್ ಸ್ಲೀವ್ ಡ್ರೆಸ್‌ನಲ್ಲಿ ಮಿಂಚಿದ್ದಾರೆ. ಇದೀಗ ಈ ಫೋಟೊಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಶೋಭಿತಾ ಅವರು ಗೋಲ್ಡನ್ ಬಾಡಿಕಾನ್ ಫುಲ್ ಸ್ಲೀವ್ ಡ್ರೆಸ್ ಆಯ್ಕೆ ಮಾಡಿಕೊಂಡರು. ಚೆಂದದ ಕಿವಿಯೋಲೆ, ಕೂದಲನ್ನು ಬನ್‌ ಕಟ್ಟಿದಳು ಹೀಲ್ಸ್ ಧರಿಸಿದ್ದರು. ಫೋಟೋಗಳನ್ನು ಹಂಚಿಕೊಂಡಿರುವ ಶೋಭಿತಾ ಧೂಲಿಪಾಲ “ಕಾನ್‌ನಲ್ಲಿರುವ ಗಿಲ್ಡೆಡ್ ಡ್ರ್ಯಾಗನ್‌ನಂತೆ ಸುತ್ತಾಡಿದೆ” ಎಂದು ಪೋಸ್ಟ್‌ಗೆ ಶೀರ್ಷಿಕೆ ನೀಡಿದ್ದಾರೆ. ಚಿತ್ರಗಳಿಗೆ ಪ್ರತಿಕ್ರಿಯಿಸಿದ ಅಭಿಮಾನಿಯೊಬ್ಬರು, “ನೀವು ಅದ್ಭುತವಾಗಿ ಕಾಣುತ್ತೀರಿ ಎಂದು ಹೇಳಲು ನನ್ನ ಬಳಿ ಪದಗಳಿಲ್ಲ” ಎಂದು ಬರೆದಿದ್ದಾರೆ. ಮತ್ತೊಬ್ಬರು ʻʻಆಸ್ಕರ್‌ ಪ್ರಶಸ್ತಿಯಂತೆ ಕಾಣುತ್ತಿದ್ದಾರೆʼʼ ಎಂದು ಕಮೆಂಟ್‌ ಮಾಡಿದ್ದಾರೆ.

ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಶೋಭಿತಾ ಮಿನುಗುವ ನೇರಳೆ ಬಣ್ಣದ ಬಟ್ಟೆ ಮತ್ತು ಹೀಲ್ಸ್ ಧರಿಸಿದ್ದರು. 1.8 ಲಕ್ಷ ರೂ. ಮೌಲ್ಯದ ಕಾರ್ಡೆಲಿಯಾ ಜಂಪ್‌ಸೂಟ್ ಅನ್ನು ನಮ್ರತಾ ಜೋಶಿಪುರ ವಿನ್ಯಾಸಗೊಳಿಸಿದ್ದರು ಈವೆಂಟ್‌ನಲ್ಲಿ ಶೋಭಿತಾ ಪ್ರೀಮಿಯಂ ಐಸ್ ಕ್ರೀಮ್ ಬ್ರಾಂಡ್ ಮ್ಯಾಗ್ನಮ್ ಇಂಡಿಯಾವನ್ನು ಪ್ರತಿನಿಧಿಸುತ್ತಿದ್ದಾರೆ.

ಪ್ರತಿ ವರ್ಷದಂತೆ ಈ ಬಾರಿಯೂ ಕಾನ್‌ ಚಲನಚಿತ್ರೋತ್ಸವದಲ್ಲಿ ಭಾರತೀಯ ಸೆಲೆಬ್ರಿಟಿಗಳ ಉಪಸ್ಥಿತಿ ಕಂಡುಬಂದಿದೆ. ಈ ಕಾರ್ಯಕ್ರಮದಲ್ಲಿ ಐಶ್ವರ್ಯಾ ರೈ ಮತ್ತು ಕಿಯಾರಾ ಆಡ್ವಾಣಿ ಕೂಡ ಭಾಗವಹಿಸಿದ್ದರು. ಅದಿತಿ ರಾವ್ ಹೈದರಿ ಕೂಡ ಸಮಾರಂಭದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಮೇ 25ಕ್ಕೆ ಚಿತ್ರೋತ್ಸವ ಮುಕ್ತಾಯವಾಗಲಿದೆ.

ಶೋಭಿತಾ ಪ್ರಸ್ತುತ ದೇವ್ ಪಟೇಲ್ ನಿರ್ದೇಶನದ ʻಮಂಕಿ ಮ್ಯಾನ್ʼ ಚಿತ್ರದಲ್ಲಿನ ಅಭಿನಯಕ್ಕಾಗಿ ಪ್ರಶಂಸೆ ಪಡೆಯುತ್ತಿದ್ದಾರೆ. ಇದರಲ್ಲಿ ದೇವ್, ಸಿಕಂದರ್ ಖೇರ್, ಶಾರ್ಲ್ಟೋ ಕಾಪ್ಲೆ, ಮಕರಂದ್ ದೇಶಪಾಂಡೆ, ಅಶ್ವಿನಿ ಕಲ್ಸೇಕರ್ ಮತ್ತು ಇತರರು ನಟಿಸಿದ್ದಾರೆ.

ಇದನ್ನೂ ಓದಿ: Cannes 2024: 20 ಕೆಜಿ ತೂಕದ ಗೌನ್ ಧರಿಸಿ ಬೆರಗುಗೊಳಿಸಿದ ನ್ಯಾನ್ಸಿ ತ್ಯಾಗಿ!

ನಟಿ ಶೋಭಿತಾ ಜತೆ ನಾಗ ಚೈತನ್ಯ ಡೇಟಿಂಗ್

ನಟಿ ಸಮಂತಾ (samantha) ಮಾಜಿ ಪತಿ ನಟ ನಾಗ ಚೈತನ್ಯ (Naga Chaitanya) ಎರಡನೇ ಮದುವೆಯಾಗಲು ಮುಂದಾಗಿದ್ದಾರೆ ಎಂಬ ಸುದ್ದಿ ಕೆಲವು ದಿನಗಳಿಂದ ಹರಿದಾಡುತ್ತಿದೆ. ನಟ ಈ ಬಗ್ಗೆ ಯಾವುದೇ ಮಾಹಿತಿ ಹಂಚಿಕೊಂಡಿಲ್ಲ. ಆದರೂ ನಾಗ ಚೈತನ್ಯ ತಂದೆ ನಾಗುರ್ಜನ ಮಗನ ಎರಡನೇ ಮದುವೆಗೆ ತಯಾರಿ ಮಾಡುತ್ತಿದ್ದಾರೆ ಎಂದು ವರದಿಯಾಗಿತ್ತು. ಅಷ್ಟೇ ಅಲ್ಲದೇ ನಾಗ ಚೈತನ್ಯ ಮದುವೆ ಮಾಡಲು ಅಕ್ಕಿನೇನಿ ನಾಗಾರ್ಜುನ ಅವರು ಆಸಕ್ತಿ ತೋರಿ ನಾಗ ಚೈತನ್ಯಗೆ ಉದ್ಯಮಿ ಕುಟುಂಬದಿಂದ ಹೆಣ್ಣನ್ನು ತರಲು ಸಿದ್ಧತೆ ನಡೆದಿದ್ದು, ಈ ವರ್ಷವೇ ವಿವಾಹ ನಡೆಯಲಿದೆ ಎಂದು ತೆಲುಗು ಮಾಧ್ಯಮಗಳು ವರದಿ ಮಾಡಿವೆ. ಆದರೆ, ಈ ವಿಚಾರದಲ್ಲಿ ಯಾವುದೇ ಅಧಿಕೃತ ಮಾಹಿತಿ ಹೊರ ಬಿದ್ದಿಲ್ಲ. ಇದೀಗ ಮೂಲಗಳ ಪ್ರಕಾರ ಇದ್ಯಾವುದೂ ಸತ್ಯವಲ್ಲ. ನಾಗ ಚೈತನ್ಯ ಗೆಳತಿಯೂ ಆದ ನಟಿ ಶೋಭಿತಾ ಧೂಳಿಪಾಲ (shobhita dhulipala) ಜತೆ ನಟ ಡೇಟಿಂಗ್‌ ಮಾಡುತ್ತಿದ್ದಾರೆ ಎನ್ನಲಾಗಿದೆ.

Continue Reading

ಬಾಲಿವುಡ್

Aishwarya Rai:   ಕಾನ್‌ ಫಿಲ್ಮ್‌ ಫೆಸ್ಟಿವಲ್‌ ಮುಗಿದ ಬಳಿಕ ಐಶ್ವರ್ಯಾ ರೈ ಕೈಗೆ ಶಸ್ತ್ರ ಚಿಕಿತ್ಸೆ

Aishwarya Rai:   ಮೊದಲ ದಿನ ಐಶ್ವರ್ಯಾ ಫಲ್ಗುಣಿ ಶೇನ್ ಪೀಕಾಕ್ ಗೌನ್ (Falguni Shane Peacock creation ) ಧರಿಸಿದ್ದರು. ವಿಶೇಷ ಏನೆಂದರೆ, ಕೈಗೆ ಬ್ಯಾಂಡೇಜ್​ ಸುತ್ತಿಕೊಂಡೇ ಅವರು ರೆಡ್​ ಕಾರ್ಪೆಟ್​ನಲ್ಲಿ (Cannes Red Carpet) ನಡೆದು ಬಂದಿದ್ದರು. ಐಶ್ವರ್ಯಾ ರೈ ಅವರು ಎರಡನೇ ಬಾರಿ ಬೆಳ್ಳಿ ಮತ್ತು ನೀಲಿ ಮಿಶ್ರಿತ ಗೌನ್ ಧರಿಸಿದ್ದರು. ಫಲ್ಗುಣಿ ಮತ್ತು ಶೇನ್ ಪೀಕಾಕ್ ವಿನ್ಯಾಸಗೊಳಿಸಿದ ಸ್ಕರ್ಟ್ ಇದಾಗಿತ್ತು. ‌ ಆದರೆ ಈ ಸ್ಕರ್ಟ್‌ ಬಗ್ಗೆ ಅನೇಕರು ಟೀಕೆ ಮಾಡಿದ್ದರು.

VISTARANEWS.COM


on

Aishwarya Rai undergo surgery post her return from Cannes Film Festival
Koo

ಬೆಂಗಳೂರು: ಐಶ್ವರ್ಯಾ ರೈ ಬಚ್ಚನ್ (Aishwarya Rai) ಅವರು 77ನೇ ಕಾನ್‌ ಫಿಲ್ಮ್‌ ಫೆಸ್ಟಿವಲ್‌ನಲ್ಲಿ (77th Cannes Film Festival) ಎರಡು ಶೇಡ್‌ನಲ್ಲಿ ಕಂಡಿದ್ದಾರೆ. ಕೈಗೆ ಬ್ಯಾಂಡೇಜ್‌ ಸುತ್ತಿಕೊಂಡಿದ್ದರೂ ನಟಿ ಸಖತ್‌ ಆಗಿಯೇ ಪೋಸ್‌ ಕೊಟ್ಟರು. ಈಗ ಸಿಕ್ಕಿರುವ ಮಾಹಿತಿ ಏನೆಂದರೆ, ಭಾರತಕ್ಕೆ ವಾಪಸ್​ ಆಗುತ್ತಿದ್ದಂತೆಯೇ ಐಶ್ವರ್ಯಾ ರೈ (Aishwarya Rai) ಅವರ ಕೈಗೆ ಶಸ್ತ್ರ ಚಿಕಿತ್ಸೆ ಮಾಡಲಾಗುತ್ತದೆ ಅಂತೆ.

ಮೂಲಗಳ ಪ್ರಕಾರ ಕೆಲವೇ ದಿನಗಳ ಹಿಂದೆ ಐಶ್ವರ್ಯಾ ರೈ ಬಚ್ಚನ್​ ಅವರ ಮಣಿಕಟ್ಟಿಗೆ ಪೆಟ್ಟಾಗಿತ್ತು. ನೋವು ಇದ್ದಿದ್ದರಿಂದ ಈ ಬಾರಿ ಕಾನ್​ ಫಿಲ್ಮ್​ ಫೆಸ್ಟಿವಲ್​ಗೆ ತೆರಳುವುದು ಬೇಡ ಎಂದು ಆಪ್ತರು ಸಲಹೆ ಕೂಡ ನೀಡಿದ್ದರು. ಆದರೆ ಅದಕ್ಕೆ ಐಶ್ವರ್ಯಾ ರೈ ಒಪ್ಪಲಿಲ್ಲ. ಈ ಬಾರಿ ನಟಿ ಕೈಗೆ ಬ್ಯಾಂಡೇಜ್​ ಹಾಕಿಸಿಕೊಂಡೇ ಅವರು ರೆಡ್​ ಕಾರ್ಪೆಟ್​ನಲ್ಲಿ ಪೋಸ್​ ನೀಡಿದರು. ಮುಂದಿನ ವಾರ ನಟಿ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎನ್ನಲಾಗಿದೆ. ಮಗಳು ಆರಾಧ್ಯ ಬಚ್ಚನ್ ಜತೆ ಈ ಬಾರಿ ಐಶ್ವರ್ಯಾ ರೈ ಚಲನಚಿತ್ರೋತ್ಸವಕ್ಕೆ ಹೋಗಿದ್ದರು.

ಮೊದಲ ದಿನ ಐಶ್ವರ್ಯಾ ಫಲ್ಗುಣಿ ಶೇನ್ ಪೀಕಾಕ್ ಗೌನ್ (Falguni Shane Peacock creation ) ಧರಿಸಿದ್ದರು. ವಿಶೇಷ ಏನೆಂದರೆ, ಕೈಗೆ ಬ್ಯಾಂಡೇಜ್​ ಸುತ್ತಿಕೊಂಡೇ ಅವರು ರೆಡ್​ ಕಾರ್ಪೆಟ್​ನಲ್ಲಿ (Cannes Red Carpet) ನಡೆದು ಬಂದಿದ್ದರು. ಐಶ್ವರ್ಯಾ ರೈ ಅವರು ಎರಡನೇ ಬಾರಿ ಬೆಳ್ಳಿ ಮತ್ತು ನೀಲಿ ಮಿಶ್ರಿತ ಗೌನ್ ಧರಿಸಿದ್ದರು. ಫಲ್ಗುಣಿ ಮತ್ತು ಶೇನ್ ಪೀಕಾಕ್ ವಿನ್ಯಾಸಗೊಳಿಸಿದ ಸ್ಕರ್ಟ್ ಇದಾಗಿತ್ತು. ‌ ಆದರೆ ಈ ಸ್ಕರ್ಟ್‌ ಬಗ್ಗೆ ಅನೇಕರು ಟೀಕೆ ಮಾಡಿದ್ದರು. ಫಲ್ಗುಣಿ ಮತ್ತು ಶೇನ್ ಪೀಕಾಕ್ ಅವರು ಫ್ರಾನ್ಸಿಸ್ ಫೋರ್ಡ್ ಕೊಪ್ಪೊಲಾ ಅವರ “ಮೆಗಾಲೋಪೊಲಿಸ್” ನ ಪ್ರಥಮ ಪ್ರದರ್ಶನಕ್ಕಾಗಿ ಉಡುಪನ್ನು ವಿನ್ಯಾಸಗೊಳಿಸಿದ್ದರು. ಆದರೆ ಈ ಗೌನ್‌ ಬಗ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಒಬ್ಬರು ʻʻಈ ಗೌನ್‌ನಲ್ಲಿ ತುಂಬ ಚೆಂದ ಕಾಣುತ್ತೀರಿ. ಆದರೆ ಇದು ಕಾನ್‌ ಉತ್ಸವಕ್ಕೆ ಸರಿ ಹೊಂದುವಂತಿಲ್ಲʼʼ ಎಂದು ಕಮೆಂಟ್‌ ಮಾಡಿದ್ದರು. ಇನ್ನೊಬ್ಬರು ʻʻಬರ್ತ್‌ಡೇ ಪಾರ್ಟಿ ಇಂದ ಪ್ರಭಾವಿತರಾದರೇ? ನಿಮ್ಮ ಸ್ಟೈಲಿಶ್‌ರನ್ನು ಮೊದಲು ಕೆಲಸದಿಂದ ಕಿತ್ತು ಹಾಕಿʼʼ ಎಂದು ಕಮೆಂಟ್‌ ಮಾಡಿದ್ದರು.

ಇದನ್ನೂ ಓದಿ: Aishwarya Rai : ಐಶ್ವರ್ಯಾ ರೈ ಸ್ಟೈಲಿಶ್‌ರನ್ನು ವಜಾ ಮಾಡಿ ಎಂದ ನೆಟ್ಟಿಗರು! ಯಾಕಿಷ್ಟು ಆಕ್ರೋಶ?

2002ರ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಐಶ್ವರ್ಯಾ ರೈ ಅವರು ಕೆಂಪು ಕಾರ್ಪೆಟ್‌ನಲ್ಲಿ ಭಾರೀ ಚಿನ್ನದ ಆಭರಣಗಳೊಂದಿಗೆ ನೀತಾ ಲುಲ್ಲಾ ಸೀರೆಯಲ್ಲಿ ಕಾಣಿಸಿಕೊಂಡಿದ್ದರು. ಆ ವರ್ಷ ನಟ ಶಾರುಖ್ ಖಾನ್ ಮತ್ತು ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಅವರೊಂದಿಗೆ ಉಪಸ್ಥಿತರಿದ್ದರು. ಅಂದಿನಿಂದ, ನಟಿ ಬಹುತೇಕ ಪ್ರತಿ ವರ್ಷ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಭಾಗಿಯಾಗುತ್ತಿದ್ದಾರೆ . ಲೋರಿಯಲ್ ಪ್ಯಾರಿಸ್‌ನ ಬ್ರ್ಯಾಂಡ್‌ ಅಂಬಾಸಿಡರ್‌ಗಳಲ್ಲಿ ಒಬ್ಬರಾಗಿ ಅವರು ಮತ್ತೊಮ್ಮೆ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಭಾಗಿಯಾಗುತ್ತಿದ್ದಾರೆ.

Continue Reading

ದೇಶ

Kangana Ranaut: ಚುನಾವಣೆಯಲ್ಲಿ ಗೆದ್ದರೆ ನಟನೆಗೆ ವಿದಾಯ; ನಟಿ ಕಂಗನಾ ರಣಾವತ್‌ ಘೋಷಣೆ

Kangana Ranaut: ಕಂಗನಾ ರಣಾವತ್‌ ಅವರ ಬಹುನಿರೀಕ್ಷಿತ ಸಿನಿಮಾ ಎಮರ್ಜನ್ಸಿ ಬಿಡುಗಡೆಗೆ ಸಿದ್ಧವಾಗುತ್ತಿದೆ. ತಾವೇ ನಿರ್ದೇಶಿಸಿದ ಸಿನಿಮಾದಲ್ಲಿ ಕಂಗನಾ ರಣಾವತ್‌ ಅವರು ಇಂದಿರಾ ಗಾಂಧಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸಿನಿಮಾ ಬಿಡುಗಡೆಯ ದಿನಾಂಕವನ್ನು ಮುಂದೂಡಲಾಗಿದೆ ಎಂದು ಘೋಷಿಸಿದರೂ ಸಿನಿಮಾ ಬಗ್ಗೆ ಹೆಚ್ಚಿನ ನಿರೀಕ್ಷೆ ಇದೆ. ಇದರ ಬೆನ್ನಲ್ಲೇ ಅವರು, ಚುನಾವಣೆಯಲ್ಲಿ ಗೆದ್ದರೆ ನಟನೆ ಬಿಡುವುದಾಗಿ ಘೋಷಿಸಿದ್ದಾರೆ.

VISTARANEWS.COM


on

Kangana Ranaut
Koo

ನವದೆಹಲಿ: ಬಾಲಿವುಡ್‌ ನಟಿ ಕಂಗನಾ ರಣಾವತ್‌ (Kangana Ranaut) ಅವರು ರಾಜಕೀಯಕ್ಕೆ ಧುಮುಕಿದ್ದು, ಹಿಮಾಚಲ ಪ್ರದೇಶದ (Himachal Pradesh) ಮಂಡಿ (Mandi) ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಜೂನ್‌ 1ರಂದು ಮಂಡಿ ಕ್ಷೇತ್ರದಲ್ಲಿ ಮತದಾನ (Lok Sabha Election 2024) ನಡೆಯುವ ಕಾರಣ ಅಬ್ಬರದ ಪ್ರಚಾರದಲ್ಲಿ ತೊಡಗಿದ್ದಾರೆ. ಇದರ ಬೆನ್ನಲ್ಲೇ, ಕಂಗನಾ ರಣಾವತ್‌ ಅವರು ಮಹತ್ವದ ಘೋಷಣೆ ಮಾಡಿದ್ದಾರೆ. “ಲೋಕಸಭೆ ಚುನಾವಣೆಯಲ್ಲಿ ನಾನು ಗೆದ್ದರೆ ನಟನೆಯನ್ನು ಬಿಟ್ಟುಬಿಡುತ್ತೇನೆ” ಎಂಬುದಾಗಿ ಹೇಳಿದ್ದಾರೆ.

ಆಜ್‌ ತಕ್‌ ಸುದ್ದಿವಾಹಿನಿಗೆ ಸಂದರ್ಶನ ನೀಡುವ ವೇಳೆ ಕಂಗನಾ ರಣಾವತ್‌ ಅವರು ಈ ಘೋಷಣೆ ಮಾಡಿದ್ದಾರೆ. “ನೀವು ಮಂಡಿ ಲೋಕಸಭೆಯಲ್ಲಿ ಗೆಲುವು ಸಾಧಿಸಿದರೆ ಏನೆಲ್ಲ ಮಾಡುತ್ತೀರಿ” ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಹೌದು, ಮಂಡಿಯಲ್ಲಿ ಗೆಲುವು ಸಾಧಿಸಿದ ಬಳಿಕ ನಾನು ಸಿನಿಮಾಗಳಲ್ಲಿ ನಟಿಸುವುದಿಲ್ಲ. ಆದರೆ, ನಮ್ಮ ಬಳಿ ತುಂಬ ಒಳ್ಳೆಯ ನಟಿ ಇದ್ದಾರೆ. ದಯಮಾಡಿ ನೀವು ಬಿಟ್ಟು ಹೋಗಬೇಡಿ ಎಂಬುದಾಗಿ ಹೆಚ್ಚಿನ ನಿರ್ದೇಶಕರು ಹೇಳುತ್ತಾರೆ. ಹೌದು, ನಾನೊಬ್ಬ ಒಳ್ಳೆ ನಟಿ ನಿಜ. ಇದೇ ಮೆಚ್ಚುಗೆಯನ್ನು ಸ್ವೀಕರಿಸಿ ನಾನು ಮುಂದೆ ಹೋಗುತ್ತೇನೆ” ಎಂದು ತಿಳಿಸಿದ್ದಾರೆ. ಆ ಮೂಲಕ ಬಾಲಿವುಡ್‌, ನಟನೆ ತ್ಯಜಿಸುವುದನ್ನು ಅವರು ದೃಢಪಡಿಸಿದ್ದಾರೆ.

ಕಂಗನಾ ರಣಾವತ್‌ ಅವರ ಬಹುನಿರೀಕ್ಷಿತ ಸಿನಿಮಾ ಎಮರ್ಜನ್ಸಿ ಬಿಡುಗಡೆಗೆ ಸಿದ್ಧವಾಗುತ್ತಿದೆ. ತಾವೇ ನಿರ್ದೇಶಿಸಿದ ಸಿನಿಮಾದಲ್ಲಿ ಕಂಗನಾ ರಣಾವತ್‌ ಅವರು ಇಂದಿರಾ ಗಾಂಧಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸಿನಿಮಾ ಬಿಡುಗಡೆಯ ದಿನಾಂಕವನ್ನು ಮುಂದೂಡಲಾಗಿದೆ ಎಂದು ಘೋಷಿಸಿದರೂ ಸಿನಿಮಾ ಬಗ್ಗೆ ಹೆಚ್ಚಿನ ನಿರೀಕ್ಷೆ ಇದೆ. ಪಂಗಾ, ಮಣಿಕರ್ಣಿಕಾ: ದಿ ಕ್ವೀನ್‌ ಆಫ್‌ ಜಾನ್ಸಿ, ಜಡ್ಜ್‌ಮೆಂಟಲ್‌ ಹೈ ಕ್ಯಾ, ತನು ವೆಡ್ಸ್‌ ಮನು ರಿಟರ್ನ್ಸ್‌ ಸೇರಿ ಹಲವು ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಇವರು ಅಭಿನಯದ ತಲೈವಿ ಸಿನಿಮಾಗೆ ಭಾರಿ ಮೆಚ್ಚುಗೆಯೂ ವ್ಯಕ್ತವಾಗಿತ್ತು.

91 ಕೋಟಿ ರೂ. ಆಸ್ತಿಗೆ ಒಡತಿ

ಮಂಡಿ ಲೋಕಸಭೆ ಕ್ಷೇತ್ರದಲ್ಲಿ ಕಂಗನಾ ರಣಾವತ್‌ ಅವರು ನಾಮಪತ್ರ ಸಲ್ಲಿಸಿದ್ದಾರೆ. ಇವರು ಚುನಾವಣಾ ಅಫಿಡವಿಟ್ ನಲ್ಲಿ 91 ಕೋಟಿ ರೂ.ಗಳ ಆಸ್ತಿಯನ್ನು ಘೋಷಿಸಿದ್ದಾರೆ. ಅವರ ಆಸ್ತಿಯಲ್ಲಿ 28.7 ಕೋಟಿ ರೂ.ಗಳ ಚರಾಸ್ತಿ ಮತ್ತು 62.9 ಕೋಟಿ ರೂ.ಗಳ ಸ್ಥಿರಾಸ್ತಿ ಸೇರಿವೆ. ಅವರ ಬಳಿ 5 ಕೋಟಿ ಮೌಲ್ಯದ 6.7 ಕೆಜಿ ಚಿನ್ನ, 50 ಲಕ್ಷ ಮೌಲ್ಯದ 60 ಕೆಜಿ ಬೆಳ್ಳಿ, 3 ಕೋಟಿ ಮೌಲ್ಯದ 14 ಕ್ಯಾರೆಟ್ ವಜ್ರದ ಆಭರಣಗಳಿವೆ. 2 ಲಕ್ಷ ನಗದು ಮತ್ತು ಸುಮಾರು 1.35 ಕೋಟಿ ರೂ.ಗಳ ಬ್ಯಾಂಕ್ ಬ್ಯಾಲೆನ್ಸ್ ಹೊಂದಿರುವುದಾಗಿ ನಟಿ ಹಾಗೂ ರಾಜಕಾರಣಿ ಘೋಷಿಸಿದ್ದಾರೆ.

ಇದನ್ನೂ ಓದಿ: Kangana Ranaut: ಬಾಲಿವುಡ್‌ ʼಕ್ವೀನ್‌ʼ ಕಂಗನಾ ಹೆಸರಿನಲ್ಲಿದೆ 50 ಎಲ್ಐಸಿ ಪಾಲಿಸಿ; ಏಜೆಂಟ್‌ ಅತ್ಯಂತ ಲಕ್ಕಿ ಎಂದ ನೆಟ್ಟಿಗರು

Continue Reading
Advertisement
FSSAI alert
ಆರೋಗ್ಯ1 min ago

FSSAI Warning: ನೀವು ತಿನ್ನುವ ಮಾವಿನ ಹಣ್ಣು ಸುರಕ್ಷಿತವಾಗಿದೆಯೇ?

Kannada New Movie Sambavami Yuge Yuge 4K Motion Poster
ಸಿನಿಮಾ11 mins ago

Kannada New Movie: `ಸಂಭವಾಮಿ ಯುಗೇಯುಗೇ’ ಚಿತ್ರದ ಕ್ಯಾರೆಕ್ಟರ್ ಮೋಷನ್ ಪೋಸ್ಟರ್ ಬಿಡುಗಡೆ

Prajwal Revanna Case
ಕರ್ನಾಟಕ21 mins ago

Prajwal Revanna Case: ಪೆನ್​​ಡ್ರೈವ್ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ; ದೇವರಾಜೇಗೌಡ ತಪ್ಪು ಮಾಹಿತಿ ನೀಡಿದ್ದಾರೆ: ಶಿವರಾಮೇಗೌಡ

Cholera
ಕರ್ನಾಟಕ29 mins ago

Cholera: ಸಿದ್ದರಾಮಯ್ಯ ತವರು ಕ್ಷೇತ್ರದಲ್ಲಿ ಕಾಲರಾ ಅಟ್ಟಹಾಸ; ಕಲುಷಿತ ನೀರು ಕುಡಿದು 114 ಜನಕ್ಕೆ ಕಾಯಿಲೆ!

RCB vs CSK
ಕ್ರೀಡೆ32 mins ago

RCB vs CSK: ಚೆನ್ನೈ ಸೋಲಿಗೆ ಧೋನಿ ಬಾರಿಸಿದ ಔಟ್​ ಆಫ್​ದಿ ಸ್ಟೇಡಿಯಂ ಸಿಕ್ಸರ್​ ಕಾರಣ

Ninagagi Kannada Serial Ritvvikk Mathad Playing Lead In Divya Uruduga
ಕಿರುತೆರೆ33 mins ago

Ninagagi Kannada Serial: ʻನಿನಗಾಗಿʼ ಸೀರಿಯಲ್‌ನಲ್ಲಿ ದಿವ್ಯಾ ಉರುಡುಗ ಜತೆ ‘ಗಿಣಿರಾಮ’ ಧಾರಾವಾಹಿಯ ನಟ ನಟನೆ

British Journalist
ದೇಶ39 mins ago

British Journalist: “ನವ ಭಾರತದ ಬಗ್ಗೆ ಪ್ರಪಂಚಕ್ಕೆ ತಿಳಿಸಬೇಕು”- ಇಂಡಿಯಾಗೆ ಮನಸೋತ ಬ್ರಿಟಿಷ್‌ ಪತ್ರಕರ್ತ

Karnataka rain
ಮಳೆ40 mins ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

RCB
ಕ್ರಿಕೆಟ್1 hour ago

RCB: ಆರ್​ಸಿಬಿಯ ನಂಟು ಬಿಡದ ವಿಜಯ್​ ಮಲ್ಯ; ಟ್ವೀಟ್​ ಮೂಲಕ ಅಭಿನಂದನೆ

Pavithra Jayaram Trinayani Serial Son Prajwal Reaction
ಸಿನಿಮಾ2 hours ago

Pavithra Jayaram: ಅಮ್ಮ ಮತ್ತು ಚಂದ್ರಕಾಂತ್‌ ಒಡನಾಟ ಹೇಗಿತ್ತು ಅಂತ ನಮಗೆ ಗೊತ್ತು ಎಂದ ಪವಿತ್ರ ಜಯರಾಮ್ ಮಗ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka rain
ಮಳೆ40 mins ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 hours ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ2 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ2 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ3 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು3 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ4 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ4 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

ಟ್ರೆಂಡಿಂಗ್‌