Oscars 2023: ಆಸ್ಕರ್‌ ಪ್ರಶಸ್ತಿಗೆ ಆರ್‌ಆರ್‌ಆರ್ ಜತೆಗೆ ಮತ್ತ್ಯಾವ ಚಿತ್ರಗಳು ನಾಮನಿರ್ದೇಶನ? ಇಲ್ಲಿದೆ ವಿಸ್ತೃತ ಮಾಹಿತಿ - Vistara News

ದೇಶ

Oscars 2023: ಆಸ್ಕರ್‌ ಪ್ರಶಸ್ತಿಗೆ ಆರ್‌ಆರ್‌ಆರ್ ಜತೆಗೆ ಮತ್ತ್ಯಾವ ಚಿತ್ರಗಳು ನಾಮನಿರ್ದೇಶನ? ಇಲ್ಲಿದೆ ವಿಸ್ತೃತ ಮಾಹಿತಿ

Oscars 2023: ಭಾರತೀಯ ಕಾಲಮಾನ ಪ್ರಕಾರ ಮಾರ್ಚ್ 13ರ ನಸುಕಿನಲ್ಲಿ ಆಸ್ಕರ್ ಪ್ರಶಸ್ತಿಗಳು ಘೋಷಣೆಯಾಗಲಿವೆ. ಭಾರತದ ಆರ್ ಆರ್ ಆರ್ ಸೇರಿ ಹಲವು ಚಿತ್ರಗಳು ಪ್ರಶಸ್ತಿ ಸುತ್ತಿನಲ್ಲಿವೆ. ಆ ಬಗ್ಗೆ ಇಲ್ಲಿದೆ ಮಾಹಿತಿ.

VISTARANEWS.COM


on

Avatar The Way of Water
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಾಸ್‌ ಏಂಜಲೀಸ್‌: ಭಾರತದ ಮೂರು ಸಿನಿಮಾಗಳು ಆಸ್ಕರ್‌ ಪ್ರಶಸ್ತಿಯ (Oscars 2023 Nominations) ಅಂತಿಮ ಸುತ್ತಿಗೆ ನಾಮನಿರ್ದೇಶನದಲ್ಲಿವೆ. ಆರ್‌ಆರ್‌ಆರ್‌ ಸಿನಿಮಾದ ನಾಟು ನಾಟು ಹಾಡು ಒರಿಜಿನಲ್‌ ಬೆಸ್ಟ್‌ ಹಾಡು ಕೆಟಗರಿ, ಅತ್ಯುತ್ತಮ ಸಾಕ್ಷ್ಯಚಿತ್ರ ಕೆಟಗರಿಯಲ್ಲಿ ಆಲ್‌ ದಿ ಬ್ರೆತ್ಸ್‌ , ಅತ್ಯುತ್ತಮ ಕಿರು ಚಿತ್ರ ವಿಭಾಗದಲ್ಲಿ ದಿ ಎಲಿಫೆಂಟ್‌ ವಿಸ್ಪರರ್ಸ್ ನಾಮಿನೇಟ್‌ ಆಗಿವೆ. ಇವುಗಳ ಜತೆಗೆ ಜತೆಗೆ ಜಗತ್ತಿನಾದ್ಯಂತ ಉತ್ತಮ ಪ್ರದರ್ಶನ ಕಂಡ ಅವತಾರ್‌ 2 (Avatar: The Way Of Water), ಟಾಪ್‌ ಗನ್‌: ಮಾವೆರಿಕ್‌ (Top Gun: Maverick) ಸೇರಿ ಹಲವು ಜಾಗತಿಕ ಸಿನಿಮಾಗಳು ಕೂಡ ಆಸ್ಕರ್‌ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿವೆ. ಭಾರತೀಯ ಕಾಲಮಾನ ಮಾರ್ಚ್ 13ರಂದು ಆಸ್ಕರ್ ಪ್ರಶಸ್ತಿ ಘೋಷಣೆಯಾಗಲಿದ್ದು, ಕುತೂಹಲ ಹೆಚ್ಚಾಗತೊಡಗಿದೆ.

ಅವತಾರ್‌ 2 ನಾಲ್ಕು ಹಾಗೂ ಟಾಪ್‌ ಗನ್‌: ಮಾವೆರಿಕ್‌ ಆರು ವಿಭಾಗಗಳಲ್ಲಿ ನಾಮನಿರ್ದೇಶನಗೊಂಡಿವೆ. ಅತ್ಯುತ್ತಮ ಶಬ್ದ, ಅತ್ಯುತ್ತಮ ಪಿಕ್ಚರ್‌, ಬೆಸ್ಟ್‌ ಪ್ರೊಡಕ್ಷನ್‌ ಡಿಸೈನ್, ಬೆಸ್ಟ್‌ ವಿಷ್ಯುವಲ್‌ ಎಫೆಕ್ಟ್ಸ್‌ ವಿಭಾಗದಲ್ಲಿ ಅವತಾರ್‌ 2 ನಾಮಿನೇಟ್‌ ಆಗಿದೆ. ಹಾಗಾಗಿ, ಈ ಸಿನಿಮಾ ಮೇಲೆ ಹೆಚ್ಚಿನ ನಿರೀಕ್ಷೆ ಇದೆ.

ಇನ್ನು ಬೆಸ್ಟ್‌ ಸೌಂಡ್‌, ಬೆಸ್ಟ್‌ ಅಡಾಪ್ಟಡ್‌ ಸ್ಕ್ರೀನ್‌ಪ್ಲೇ, ಬೆಸ್ಟ್‌ ಫಿಲಂ ಎಡಿಟಿಂಗ್‌, ಬೆಸ್ಟ್‌ ವಿಷ್ಯುವಲ್‌ ಎಫೆಕ್ಟ್ಸ್‌, ಬೆಸ್ಟ್‌ ಒರಿಜಿನಲ್‌ ಸಾಂಗ್‌ ಹಾಗೂ ಬೆಸ್ಟ್‌ ಪಿಕ್ಚರ್‌ ವಿಭಾಗದಲ್ಲಿ ಟಾಪ್‌ ಗನ್‌: ಮಾವೆರಿಕ್‌ ನಾಮನಿರ್ದೇಶನಗೊಂಡಿದೆ.

ಹಾಗೆಯೇ, ಎಲ್ವಿಸ್‌ (ಬೆಸ್ಟ್‌ ಸಿನಿಮಾಟೋಗ್ರಫಿ, ಬೆಸ್ಟ್‌ ಫಿಲಂ ಎಡಿಟಿಂಗ್),‌ ದಿ ಬ್ಯಾಟ್‌ಮನ್‌ (ಬೆಸ್ಟ್‌ ವಿಷ್ಯುವಲ್‌ ಎಫೆಕ್ಟ್ಸ್‌) ವಿಭಾಗದಲ್ಲಿ ಆಯ್ಕೆಯಾಗಿವೆ. ಇನ್ನು ದಿ ಫ್ಯಾಬೆಲ್‌ಮನ್ಸ್‌ ಸಿನಿಮಾ ನಿರ್ದೇಶನಕ್ಕಾಗಿ ಸ್ಟೀವನ್‌ ಸ್ಪೀಲ್‌ಬರ್ಗ್‌ ಅವರು ಬೆಸ್ಟ್‌ ಡೈರೆಕ್ಟರ್‌ ವಿಭಾಗದಲ್ಲಿ ನಾಮನಿರ್ದೇಶನಗೊಂಡಿದ್ದಾರೆ.

ಇದನ್ನೂ ಓದಿ | Oscars 2023 Nominations: ಆರ್‌ಆರ್‌ಆರ್‌ ಚಿತ್ರದ ನಾಟು ನಾಟು ಹಾಡು ಆಸ್ಕರ್‌ಗೆ ನಾಮನಿರ್ದೇಶನ, ಮಹತ್ವದ ಮನ್ನಣೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Great Khali: ಜಗತ್ತಿನ ಕುಬ್ಜ ಮಹಿಳೆಯನ್ನು ಮಗುವಿನಂತೆ ಎತ್ತಿ ಆಡಿಸಿದ ಗ್ರೇಟ್‌ ಖಲಿ; ಜನ ಕೆಂಡವಾಗಿದ್ದು ಏಕೆ?

Great Khali: ಜ್ಯೋತಿ ಆಮ್ಗೆ ಅವರನ್ನು ಒಂದೇ ಕೈಯಲ್ಲಿ ತಮಾಷೆಗಾಗಿ ಎತ್ತಿ ಆಡಿಸಿದ ವಿಡಿಯೊವನ್ನು ಗ್ರೇಟ್‌ ಖಲಿ ಅವರೇ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ ಮಾಡಿದ್ದು, ಲಕ್ಷಾಂತರ ಜನ ವೀಕ್ಷಿಸಿದ್ದಾರೆ. ಸಾವಿರಾರು ಜನ ಪ್ರತಿಕ್ರಿಯಿಸಿದ್ದಾರೆ. ಆದರೆ, ಎತ್ತಿ ಆಡಿಸಿದ್ದಕ್ಕೆ ಗ್ರೇಟ್‌ ಖಲಿ ವಿರುದ್ಧ ಕೆಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದು ಬ್ಯಾಡ್‌ ಟಚ್‌ ಎಂದು ದಿ ಗ್ರೇಟ್‌ ಖಲಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

VISTARANEWS.COM


on

Great Khali
Koo

ನವದೆಹಲಿ: ಆಜಾನುಬಾಹು ದೇಹದಿಂದಲೇ ದೇಶಾದ್ಯಂತ ಖ್ಯಾತಿ ಗಳಿಸಿರುವ, ಡಬ್ಲ್ಯೂಡಬ್ಲ್ಯೂಇನಲ್ಲಿ (WWE) ಭಾರತವನ್ನು ಪ್ರತಿನಿಧಿಸಿದ ಕುಸ್ತಿಪಟು ದಿ ಗ್ರೇಟ್‌ ಖಲಿ (Great Khali) ಅವರು ವಿಶ್ವದಲ್ಲೇ ಅತಿ ಕುಬ್ಜ ಮಹಿಳೆ ಎನಿಸಿರುವ ಜ್ಯೋತಿ ಆಮ್ಗೆ (Jyoti Amge) ಅವರನ್ನು ಒಂದೇ ಕೈಯಲ್ಲಿ ಎತ್ತಿ ಆಡಿಸಿದ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ. ಆದರೆ, ತಮಾಷೆಗಾಗಿ ಒಂದೇ ಕೈಯಲ್ಲಿ ಮಗುವಿನಂತೆ ಎತ್ತಿ ಆಡಿಸಿದ ವಿಡಿಯೊ ವೈರಲ್‌ (Viral Video) ಆದ ಬೆನ್ನಲ್ಲೇ ಗ್ರೇಟ್‌ ಖಲಿ ವಿರುದ್ಧ ಜನ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮಹಾರಾಷ್ಟ್ರದವರಾದ ಜ್ಯೋತಿ ಆಮ್ಗೆ (30) ಅವರು ಕೇವಲ 2.3 ಅಡಿ ಎತ್ತರವಾಗಿದ್ದು, ಜಗತ್ತಿನಲ್ಲೇ ಅತಿ ಕುಬ್ಜ ಮಹಿಳೆ ಎಂಬ ಖ್ಯಾತಿಗೆ ಭಾಜನರಾಗಿದ್ದಾರೆ. ಇವರು ಗಿನ್ನಿಸ್‌ ದಾಖಲೆಗೂ ಭಾಜನರಾಗಿದ್ದಾರೆ. ಜ್ಯೋತಿ ಆಮ್ಗೆ ಹಾಗೂ ದಿ ಗ್ರೇಟ್‌ ಖಲಿ ಅವರು ಇತ್ತೀಚೆಗೆ ಭೇಟಿಯಾಗಿದ್ದು, ಗ್ರೇಟ್‌ ಖಲಿ ಅವರು ತಮಾಷೆಗಾಗಿ ಅವರನ್ನು ಒಂದೇ ಕೈಯಲ್ಲಿ ಎತ್ತಿ ಆಡಿಸಿದ್ದಾರೆ. “ನಾನು ನಿಮ್ಮನ್ನು ನಾಗ್ಪುರಕ್ಕೆ ಕಳುಹಿಸಿಬಿಡುತ್ತೇನೆ” ಎಂದು ತಮಾಷೆ ಮಾಡಿದ್ದಾರೆ. ಇದರಿಂದ ಜ್ಯೋತಿ ಆಮ್ಗೆ ಅವರು ನಾಚಿ ನೀರಾಗಿದ್ದಾರೆ.

ಕೆರಳಿ ಕೆಂಡವಾದ ಜನ

ಜ್ಯೋತಿ ಆಮ್ಗೆ ಅವರನ್ನು ಎತ್ತಿ ಆಡಿಸಿದ ವಿಡಿಯೊವನ್ನು ಗ್ರೇಟ್‌ ಖಲಿ ಅವರೇ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ ಮಾಡಿದ್ದು, ಲಕ್ಷಾಂತರ ಜನ ವೀಕ್ಷಿಸಿದ್ದಾರೆ. ಸಾವಿರಾರು ಜನ ಪ್ರತಿಕ್ರಿಯಿಸಿದ್ದಾರೆ. ಆದರೆ, ಎತ್ತಿ ಆಡಿಸಿದ್ದಕ್ಕೆ ಗ್ರೇಟ್‌ ಖಲಿ ವಿರುದ್ಧ ಕೆಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಗ್ರೇಟ್‌ ಖಲಿಯವರೇ, ನಮಗೆ ನಿಮ್ಮ ಬಗ್ಗೆ ಗೌರವ ಇದೆ. ಆದರೆ, ನೀವು ಹೀಗೆ ಮಾಡಬಾರದಿತ್ತು. ಅದು ಮಗು ಅಲ್ಲ‌, 30 ವರ್ಷದ ಮಹಿಳೆ ಅವರು. ನೀವು ಹಾಗೆ ಮಾಡಬಾರದಿತ್ತು” ಎಂದು ಇನ್‌ಸ್ಟಾಗ್ರಾಂ ಬಳಕೆದಾರರೊಬ್ಬರು ಪ್ರತಿಕ್ರಿಯಿಸಿದ್ದಾರೆ.

“ಇದು ಬ್ಯಾಡ್ ಟಚ್” ಎಂಬುದಾಗಿ ಮತ್ತೊಬ್ಬರು ಕಮೆಂಟ್‌ ಮಾಡಿದ್ದಾರೆ. “ಇದು ತಮಾಷೆಯಾಗಿಲ್ಲ. ಹೀಗೆ ಮಾಡಲು ಜ್ಯೋತಿ ಅವರು ಅನುಮತಿ ನೀಡಿದ್ದಾರೆ ಎಂದುಕೊಳ್ಳುತ್ತೇನೆ” ಎಂದು ಮತ್ತೊಬ್ಬರು ನಯವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇನ್ನೂ ಒಂದಷ್ಟು ಜನ ತಮಾಷೆಯಾಗಿಯೇ ಪ್ರತಿಕ್ರಿಯೆ ನೀಡಿದ್ದಾರೆ. “ನೀವು ಜ್ಯೋತಿ ಆಮ್ಗೆ ಅವರನ್ನು ಹಾಗೆಯೇ ಎತ್ತಿಕೊಂಡು ವರ್ಲ್ಡ್‌ ಟೂರ್‌ ಕೂಡ ಮಾಡಬಹುದು”, “ಅವರನ್ನು ಹಾಗೆಯೇ ತಿಂದು ಬಿಡಿ” ಎಂಬುದು ಸೇರಿ ಹಲವು ರೀತಿಯಲ್ಲಿ ಕಮೆಂಟ್‌ ಮಾಡಿದ್ದಾರೆ. ಇನ್ನು ವಿಡಿಯೊಗೆ ಖುದ್ದು ಜ್ಯೋತಿ ಆಮ್ಗೆ ಅವರೇ ಪ್ರತಿಕ್ರಿಯಿಸಿದ್ದು, “ತುಂಬ ಧನ್ಯವಾದ” ಎಂದು ಹೇಳಿದ್ದಾರೆ. ಅಲ್ಲಿಗೆ, ಜನ ತಣ್ಣಗಾದಂತಾಗಿದೆ.

ಇದನ್ನೂ ಓದಿ: Lok Sabha Election 2024: ʼನನ್ನ ಸ್ಟೈಲು ಬೇರೇನೆ…ʼ; ಕತ್ತೆ ಮೂಲಕ ಪ್ರಚಾರ ನಡೆಸುವ ಅಭ್ಯರ್ಥಿಯ ಕಾರ್ಯ ವೈಖರಿ ಈಗ ವೈರಲ್‌

Continue Reading

ದೇಶ

Congress Manifesto: ಕಾಂಗ್ರೆಸ್‌ ಪ್ರಣಾಳಿಕೆ ಬಗ್ಗೆ ಅಪಪ್ರಚಾರ; ವ್ಯಕ್ತಿ ಅರೆಸ್ಟ್‌-ಬಿಜೆಪಿ ಕಿಡಿ

Congress Manifesto: ಕಾಂಗ್ರೆಸ್‌ ಪ್ರಣಾಳಿಕೆ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಮಾಡಿದ್ದ ಬಲಪಂಥೀಯ ವಿಚಾರಧಾರೆ ಹೊಂದಿರುವ ವಿನೀತ್‌, ಕಾಂಗ್ರೆಸ್‌ ಹಿಂದೂಗಳ ಸಂಪತ್ತನ್ನು ಕಸಿದು ಕೇವಲ ಮುಸ್ಲಿಮರಿಗೆ ಹಂಚಲು ಸಂಚು ರೂಪಿಸಿದೆ. ಕಾಂಗ್ರೆಸ್‌ ಎಸ್‌ಸಿ/ಎಸ್‌ಟಿ ಸೇರಿದಂತೆ ಎಲ್ಲಾ ಹಿಂದೂಗಳನ್ನು ದ್ವೇಷಿಸುತ್ತದೆ. ಎಸ್‌ಸಿ, ಎಸ್‌ಟಿಗಳ ಅಭಿವೃದ್ಧಿಗಾಗಿ ಶ್ರಮಿಸುವ ಬಗ್ಗೆ ಕಾಂಗ್ರೆಸ್‌ ಸುಳ್ಳು ಹೇಳುತ್ತಿದೆ. ಹೀಗಾಗಿ ಕಾಂಗ್ರೆಸ್‌ನವರ ಮುಖಕ್ಕೆ ಅವರ ಪ್ರಣಾಳಿಕೆಯನ್ನು ಎಸೆಯಿರಿ ಎಂದು ವಿಡಿಯೋ ಸಮೇತ ಟ್ವೀಟ್‌ ಮಾಡಿದ್ದರು.

VISTARANEWS.COM


on

Congress Manifesto
Koo

ಗೋವಾ: ಕೈ-ಕಮಲ ಪಾಳಯದಲ್ಲಿ ಪರಸ್ಪರ ವಾಕ್ಸಮರಕ್ಕೆ ಕಾರಣವಾಗಿರುವ ಕಾಂಗ್ರೆಸ್‌ ಪ್ರಣಾಳಿಕೆ (Congress Manifesto) ವಿಚಾರಕ ಇದೀಗ ಮತ್ತೆ ಮುನ್ನೆಲೆಗೆ ಬಂದಿದೆ. ಕಾಂಗ್ರೆಸ್‌ ಪ್ರಣಾಳಿಕೆಯನ್ನು ಟೀಕಿಸಿ ಎಕ್ಸ್‌ನಲ್ಲಿ ಟ್ವೀಟ್‌ ಮಾಡಿದ್ದ ವ್ಯಕ್ತಿಯೊಬ್ಬನನ್ನು ಕರ್ನಾಟಕ ಪೊಲೀಸರು(Congress Police) ಗೋವಾದಲ್ಲಿ ಅರೆಸ್ಟ್‌ ಮಾಡಿದ್ದು, ಬಿಜೆಪಿ ಕಾಂಗ್ರೆಸ್‌ ನಡುವೆ ಮತ್ತೆ ವಾಕ್ಸಮರಕ್ಕೆ ಕಾರಣವಾಗಿದೆ. ವಿನೀತ್‌ ನಾಯ್ಕ್‌ ಎಂಬಾತನನ್ನು ಪೊಲೀಸರು ಗೋವಾದಲ್ಲಿ ಬಂಧಿಸಿದ್ದಾರೆ. ವಿನೀತ್‌ ವಿರುದ್ಧ ಸುಳ್ಳು ಮಾಹಿತಿ ಹರಡಿ ಕೋಮು ಘರ್ಷಣೆ (Communal disturbance)ಗೆ ಕುಮ್ಮಕ್ಕು ನೀಡಿಡ ಆರೋಪ ಕೇಳಿ ಬಂದಿದ್ದು, ಕರ್ನಾಟಕ ಶ್ರೀರಾಮಪುರ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಏನಿದು ಪ್ರಕರಣ?

ಕಾಂಗ್ರೆಸ್‌ ಪ್ರಣಾಳಿಕೆ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಮಾಡಿದ್ದ ಬಲಪಂಥೀಯ ವಿಚಾರಧಾರೆ ಹೊಂದಿರುವ ವಿನೀತ್‌, ಕಾಂಗ್ರೆಸ್‌ ಹಿಂದೂಗಳ ಸಂಪತ್ತನ್ನು ಕಸಿದು ಕೇವಲ ಮುಸ್ಲಿಮರಿಗೆ ಹಂಚಲು ಸಂಚು ರೂಪಿಸಿದೆ. ಕಾಂಗ್ರೆಸ್‌ ಎಸ್‌ಸಿ/ಎಸ್‌ಟಿ ಸೇರಿದಂತೆ ಎಲ್ಲಾ ಹಿಂದೂಗಳನ್ನು ದ್ವೇಷಿಸುತ್ತದೆ. ಎಸ್‌ಸಿ, ಎಸ್‌ಟಿಗಳ ಅಭಿವೃದ್ಧಿಗಾಗಿ ಶ್ರಮಿಸುವ ಬಗ್ಗೆ ಕಾಂಗ್ರೆಸ್‌ ಸುಳ್ಳು ಹೇಳುತ್ತಿದೆ. ಹೀಗಾಗಿ ಕಾಂಗ್ರೆಸ್‌ನವರ ಮುಖಕ್ಕೆ ಅವರ ಪ್ರಣಾಳಿಕೆಯನ್ನು ಎಸೆಯಿರಿ ಎಂದು ವಿಡಿಯೋ ಸಮೇತ ಟ್ವೀಟ್‌ ಮಾಡಿದ್ದರು. ಇದಾದ ಬಳಿಕ ಏ. 22 ಮತ್ತು ಏ. 29ರಂದು ವಿನೀತ್‌ ನಾಯ್ಕ್‌ ವಿರುದ್ಧ ದೂರು ದಾಖಲಾಗಿತ್ತು.

ಬೆಂಗಳೂರಿನ ನಿವಾಸಿ ಮತ್ತು ಕಾಂಗ್ರೆಸ್ ಕಾರ್ಯಕರ್ತ ಜೆ ಸರವಣನ್ ಅವರು ಏಪ್ರಿಲ್ 29 ರಂದು ಸೈಬರ್ ಕ್ರೈಮ್ ಪೊಲೀಸರಿಗೆ ದೂರು ನೀಡಿದ್ದರು. ಸೈಬರ್ ಕ್ರೈಂ ಪೊಲೀಸರು ಎಕ್ಸ್ ಬಳಕೆದಾರರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 (ಎ) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ 66 (ಸಿ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಎರಡು ಸಮುದಾಯಗಳ ನಡುವೆ ದ್ವೇಷ ಹುಟ್ಟುಹಾಕಲು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೇಳಿಕೆಯನ್ನು ತಿರುಚಿ ಪೋಸ್ಟ್​ ಮಾಡಲಾಗಿದೆ ಎಂದು ದೂರಲಾಗಿತ್ತು. ಇನ್ನು ವಿನೀತ್‌ ಟ್ವೀಟ್‌ ಮಾಡಿದ ಕೆಲವೇ ಗಂಟೆಗಳಲ್ಲಿ ಅದನ್ನು ಡಿಲೀಟ್‌ ಮಾಡಿದ್ದ.

ಪ್ರಕರಣ ದಾಖಲಿಸಿಕೊಂಡು ವಿನೀತ್‌ ಪತ್ತೆಗೆ ಬಲೆ ಬೀಸಿದ್ದ ಪೊಲೀಸರು ಶನಿವಾರ ಆರೋಪಿಯನ್ನು ಬಂಧಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮತ್ತೊಂದೆಡೆ ನನ್ನ ತಂದೆಯನ್ನು ಬೆಂಗಳೂರು ಪೊಲೀಸರು ಇದ್ದಕ್ಕಿದ್ದಂತೆ ಬಂಧಿಸಿ ಕರೆದೊಯ್ದಿದ್ದಾರೆ, ಅವರನ್ನು ಬಿಡುಗಡೆ ಮಾಡಿ ಎಂದು ಮಗ ನಾಗೇಶ್​ ನಾಯ್ಕ್​ ಟ್ವೀಟ್​ ಮಾಡಿದ್ದಾರೆ.

ಈ ಸುದ್ದಿ ಹೊರಬಿದ್ದ ಬೆನ್ನಲ್ಲೇ ಬಿಜೆಪಿ ಕರ್ನಾಟಕ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಬಿಜೆಪಿ ರಾಷ್ಟ್ರೀಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಅವರು ಎಕ್ಸ್‌ನಲ್ಲಿ, ಕರ್ನಾಟಕ ಪೊಲೀಸರು ಗೋವಾದಲ್ಲಿ ವಿನೀತ್‌ನನ್ನು ಬಂಧಿಸಿದ್ದಾರೆ. ನಾವು ಅವರ ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದೇವೆ ಮತ್ತು ಅವರು ಎಲ್ಲಾ ಕಾನೂನು ಬೆಂಬಲವನ್ನು ನೀಡುತ್ತೇವೆ, ಕಾಂಗ್ರೆಸ್ ಅರಾಜಕತೆಯನ್ನು ಹೊರಹಾಕಿದೆ ಎಂದು ಬರೆದಿದ್ದಾರೆ.
ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ಪೋಸ್ಟ್​ ಮಾಡಿ ಕರ್ನಾಟಕ ಕಾಂಗ್ರೆಸ್ ಸರ್ಕಾರದಿಂದ ಅಧಿಕಾರ ದುರ್ಬಳಕೆಯಾಗಿದೆ. ನಾವು ನ್ಯಾಯಾಲಯದ ಒಳಗೆ ಮತ್ತು ಹೊರಗೆ ಹೋರಾಡಲು ಸಿದ್ಧರಿದ್ದೇವೆ ಎಂದು ಬರೆದಿದ್ದಾರೆ. ಮತ್ತೊಂದೆಡೆ ಕೇಂದ್ರ ಸಚಿವ ಸ್ಮೃತಿ ಇರಾನಿ ಕೂಡ ವಿನೀತ್‌ ಬೆಂಬಲಕ್ಕೆ ನಿಂತಿದ್ದಾರೆ.

ಇದನ್ನೂ ಓದಿ:ಮೋದಿಯವರೇ, 3ನೇ ಬಾರಿ ಪ್ರಧಾನಿಯಾಗಿ ದೇಶ ಮುನ್ನಡೆಸಿ; ಜನುಮ ದಿನದ ಶುಭಾಶಯ ಕೋರಿದ ಪ್ರಧಾನಿಗೆ ದೇವೇಗೌಡರ ಕೃತಜ್ಞತೆ

Continue Reading

ಆರೋಗ್ಯ

FSSAI Warning: ನೀವು ತಿನ್ನುವ ಮಾವಿನ ಹಣ್ಣು ಸುರಕ್ಷಿತವಾಗಿದೆಯೇ?

ಮಾವಿನ ಹಣ್ಣನ್ನು ಕೃತಕವಾಗಿ ಮಾಗಿಸಲು ಕ್ಯಾಲ್ಸಿಯಂ ಕಾರ್ಬೈಡ್ ಅನ್ನು ಬಳಸಲಾಗುತ್ತದೆ. ಇದರ ವಿರುದ್ಧ ವರ್ತಕರಿಗೆ ಗಂಭೀರ ಆರೋಗ್ಯ ಅಪಾಯಗಳನ್ನು ಉಲ್ಲೇಖಿಸಿ ಎಚ್ಚರಿಕೆಯನ್ನು ( FSSAI Warning) ನೀಡಲಾಗಿದೆ.

VISTARANEWS.COM


on

By

FSSAI alert
Koo

ಮಾರುಕಟ್ಟೆಯಲ್ಲಿ (market) ಮಾವಿನ (mango) ಹಣ್ಣುಗಳ ರಾಶಿ ಕಂಡಾಗ ಎಂಥವರ ಬಾಯಲ್ಲೂ ನೀರೂರುವಂತೆ ಮಾಡುತ್ತದೆ. ಆದರೆ ನಾವು ಹಣ ಕೊಟ್ಟು ಖರೀದಿ ಮಾಡಿ ತಂದ ಮಾವಿನ ಹಣ್ಣುಗಳು ಸುರಕ್ಷಿತವಾಗಿ ಇದೆಯೇ? ಯಾಕೆಂದರೆ ಮಾವಿನ ಹಣ್ಣುಗಳಲ್ಲಿರುವ ಕ್ಯಾಲ್ಸಿಯಂ ಕಾರ್ಬೈಡ್ (calcium carbide) ಅಪಾಯಗಳ ವಿರುದ್ಧ ಕೇಂದ್ರ ಆಹಾರ ನಿಯಂತ್ರಣ ಸಂಸ್ಥೆಯಾದ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI Warning) ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಿದೆ.

ಮಾವಿನ ಹಣ್ಣಿನ ಋತುವಿನಲ್ಲಿ ಕ್ಯಾಲ್ಸಿಯಂ ಕಾರ್ಬೈಡ್ ಬಳಸುವುದರ ಬಗ್ಗೆ ನಿಷೇಧವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ರೈಪನಿಂಗ್ ಚೇಂಬರ್‌ಗಳನ್ನು ನಿರ್ವಹಿಸುವ ವ್ಯಾಪಾರಿಗಳಿಗೆ ಎಫ್‌ಎಸ್‌ಎಸ್‌ಎಐ ಎಚ್ಚರಿಕೆ ನೀಡಿದೆ.
ಮಾವಿನ ಹಣ್ಣನ್ನು ಕೃತಕವಾಗಿ ಮಾಗಿಸಲು ಕ್ಯಾಲ್ಸಿಯಂ ಕಾರ್ಬೈಡ್ ಅನ್ನು ಬಳಸಲಾಗುತ್ತದೆ. ಇದರ ವಿರುದ್ಧ ವರ್ತಕರಿಗೆ ಗಂಭೀರ ಆರೋಗ್ಯ ಅಪಾಯಗಳನ್ನು ಉಲ್ಲೇಖಿಸಿ ಎಚ್ಚರಿಕೆಯನ್ನು ನೀಡಲಾಗಿದೆ.

ಮಾವಿನ ಹಣ್ಣಿನ ಋತುವಿನಲ್ಲಿ ಕ್ಯಾಲ್ಸಿಯಂ ಕಾರ್ಬೈಡ್ ಅನ್ನು ಬಳಸುವುದರ ಮೇಲಿನ ನಿಷೇಧವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಎಫ್‌ಎಸ್‌ಎಸ್‌ಎಐ ಹಣ್ಣಿನ ವ್ಯಾಪಾರಿಗಳು, ಹ್ಯಾಂಡ್ಲರ್‌ಗಳು ಮತ್ತು ಫುಡ್ ಬ್ಯುಸಿನೆಸ್ ಆಪರೇಟರ್‌ಗಳು (ಎಫ್‌ಬಿಒಗಳು) ಪಕ್ವಗೊಳಿಸುವ ಕೋಣೆಗಳನ್ನು ನಿರ್ವಹಿಸುವ ಎಚ್ಚರಿಕೆ ನೀಡಿದೆ.

ಕ್ಯಾಲ್ಸಿಯಂ ಕಾರ್ಬೈಡ್‌ನ ಪರಿಣಾಮ?

ಮಾವಿನಹಣ್ಣಿನಂತಹ ಹಣ್ಣುಗಳನ್ನು ಹಣ್ಣಾಗಲು ಬಳಸುವ ಕ್ಯಾಲ್ಸಿಯಂ ಕಾರ್ಬೈಡ್, ಆರ್ಸೆನಿಕ್ ಮತ್ತು ಫಾಸ್ಪರಸ್‌ನ ಹಾನಿಕಾರಕ ಕುರುಹುಗಳನ್ನು ಹೊಂದಿರುವ ಅಸಿಟಿಲೀನ್ ಅನಿಲವನ್ನು ಬಿಡುಗಡೆ ಮಾಡುತ್ತದೆ. ‘ಮಸಾಲಾ’ ಎಂದು ಕರೆಯಲ್ಪಡುವ ಈ ಪದಾರ್ಥಗಳು ತಲೆತಿರುಗುವಿಕೆ, ಆಗಾಗ್ಗೆ ಬಾಯಾರಿಕೆ, ಕಿರಿಕಿರಿ, ದೌರ್ಬಲ್ಯ, ನುಂಗಲು ತೊಂದರೆ, ವಾಂತಿ ಮತ್ತು ಚರ್ಮದ ಹುಣ್ಣುಗಳನ್ನು ಉಂಟುಮಾಡಬಹುದು. ಅಸಿಟಿಲೀನ್ ಅನಿಲವು ಹ್ಯಾಂಡ್ಲರ್‌ಗಳಿಗೆ ಅಪಾಯಕಾರಿಯಾಗಿದೆ ಮತ್ತು ಆರ್ಸೆನಿಕ್ ಮತ್ತು ರಂಜಕದ ಅವಶೇಷಗಳು ಹಣ್ಣುಗಳ ಮೇಲೆ ಉಳಿಯಬಹುದು.

ಸಾಮಾನ್ಯವಾಗಿ ಕಾರ್ಬೈಡ್ ಗ್ಯಾಸ್ ಎಂದು ಕರೆಯಲ್ಪಡುವ ಅಸಿಟಿಲೀನ್ ಅನಿಲದ ಬಳಕೆಯಿಂದ ಕೃತಕವಾಗಿ ಮಾಗಿದ ಹಣ್ಣುಗಳನ್ನು ಯಾವುದೇ ವ್ಯಕ್ತಿಯು ಮಾರಾಟ ಮಾಡಬಾರದು ಎಂದು ಆಹಾರ ಸುರಕ್ಷತೆ ಮತ್ತು ಮಾನದಂಡಗಳು ನಿಷೇಧ ಮತ್ತು ಮಾರಾಟದ ಮೇಲಿನ ನಿರ್ಬಂಧಗಳ ನಿಯಮಗಳು-2011 ಹೇಳುತ್ತವೆ.


ಯಾವುದಕ್ಕೆ ಅನುಮತಿ ಇದೆ?

ಎಫ್‌ಎಸ್‌ಎಸ್‌ಎಐ ಪ್ರಕಾರ ಹಣ್ಣು ಹಣ್ಣಾಗಿಸಲು ಸುರಕ್ಷಿತ ಪರ್ಯಾಯವಾಗಿ ಎಥಿಲೀನ್ ಅನಿಲವನ್ನು ಬಳಸಲು ಅನುಮತಿ ನೀಡುತ್ತದೆ. ಎಥಿಲೀನ್ ಅನಿಲ, 100ಪಿಪಿಎಂವರೆಗಿನ ಸಾಂದ್ರತೆಗಳಲ್ಲಿ ಹಣ್ಣಾಗುವುದನ್ನು ನಿಯಂತ್ರಿಸುವ ನೈಸರ್ಗಿಕ ಹಾರ್ಮೋನ್ ಆಗಿದೆ. ಹಣ್ಣು ಎಥಿಲೀನ್ ಅನ್ನು ಗಣನೀಯ ಪ್ರಮಾಣದಲ್ಲಿ ಉತ್ಪಾದಿಸುವವರೆಗೆ ಇದು ನೈಸರ್ಗಿಕ ಮಾಗಿದ ಪ್ರಕ್ರಿಯೆಯನ್ನು ಪ್ರಚೋದಿಸುತ್ತದೆ. ಹೆಚ್ಚುವರಿಯಾಗಿ ಕೇಂದ್ರೀಯ ಕೀಟನಾಶಕ ಮಂಡಳಿ ಮತ್ತು ನೋಂದಣಿ ಸಮಿತಿ (CIB & RC) ಮಾವು ಮತ್ತು ಇತರ ಹಣ್ಣುಗಳ ಏಕರೂಪದ ಪಕ್ವತೆಗಾಗಿ ಎಥೆಫೋನ್ 39 ಪ್ರತಿಶತ ಎಸ್ ಎಲ್ ಅನ್ನು ಅನುಮೋದಿಸಿದೆ.

ಗುರುತಿಸುವುದು ಹೇಗೆ?

ಕ್ಯಾಲ್ಸಿಯಂ ಕಾರ್ಬೈಡ್‌ನಿಂದ ಹಣ್ಣಾದ ಮಾವಿನ ಹಣ್ಣನ್ನು ಗುರುತಿಸುವುದು ಸುಲಭ.

ವಿಶ್ವಾಸಾರ್ಹ ಮೂಲಗಳಿಂದ ಖರೀದಿಸಿ

ಹಣ್ಣುಗಳು ಮತ್ತು ತರಕಾರಿಗಳನ್ನು ತಿಳಿದಿರುವ ಮಾರಾಟಗಾರರು, ಪ್ರತಿಷ್ಠಿತ ಅಂಗಡಿಗಳು ಅಥವಾ ವಿತರಕರು ತಮ್ಮ ಉತ್ಪನ್ನಗಳನ್ನು ಹಾನಿಕಾರಕ ಅಥವಾ ನಿಷೇಧಿತ ರಾಸಾಯನಿಕಗಳಿಂದ ಹಣ್ಣಾಗಿಲ್ಲ ಎಂದು ಹೇಳಿಕೊಳ್ಳುತ್ತಾರೆ.

ಸಂಪೂರ್ಣವಾಗಿ ತೊಳೆಯುವುದು

ಯಾವುದೇ ಸಂಭಾವ್ಯ ಮೇಲ್ಮೈ ಮಾಲಿನ್ಯಕಾರಕಗಳನ್ನು ತೆಗೆದುಹಾಕಲು ತಿನ್ನುವ ಮೊದಲು ಕುಡಿಯುವ ನೀರಿನಲ್ಲಿ ಹಣ್ಣುಗಳನ್ನು ಚೆನ್ನಾಗಿ ತೊಳೆಯಿರಿ.

ಕಪ್ಪು ಕಲೆಗಳನ್ನು ತಪ್ಪಿಸಿ

ಮಾವಿನ ಹಣ್ಣುಗಳ ಚರ್ಮದ ಮೇಲೆ ಕಪ್ಪು ಮಚ್ಚೆಗಳಿರುವ ಹಣ್ಣುಗಳಿಂದ ದೂರವಿರಿ. ಏಕೆಂದರೆ ಇವುಗಳು ಕ್ಯಾಲ್ಸಿಯಂ ಕಾರ್ಬೈಡ್‌ನಿಂದ ಅಸಿಟಿಲೀನ್ ಅನಿಲದಿಂದ ಹಣ್ಣಾಗುತ್ತವೆ.

ಇದನ್ನೂ ಓದಿ: Tips for Mothers: ಆಹಾರ- ಆರೋಗ್ಯ; ದುಡಿಯುವ ಬ್ಯುಸಿ ತಾಯಂದಿರಿಗೆ ಇಲ್ಲಿದೆ ಕಿವಿಮಾತು!

ವಿನ್ಯಾಸವನ್ನು ಪರಿಶೀಲಿಸಿ

ಏಕರೂಪದ ಬಣ್ಣದ ವಿನ್ಯಾಸದೊಂದಿಗೆ ಮಾವಿನಹಣ್ಣು ಮತ್ತು ಇತರ ಹಣ್ಣುಗಳ ಬಗ್ಗೆ ಜಾಗರೂಕರಾಗಿರಿ. ಏಕೆಂದರೆ ಇದು ಸಂಭವನೀಯ ರಾಸಾಯನಿಕ ಪಕ್ವತೆಯ ಸಂಕೇತವಾಗಿದೆ.

ವಾಸನೆ ಮತ್ತು ಶೆಲ್ಫ್ ಲೈಫ್

ಕಲಬೆರಕೆ ಹಣ್ಣುಗಳು ಸ್ವಲ್ಪ ಕಟುವಾದ ವಾಸನೆ ಮತ್ತು ಕಡಿಮೆ ಶೆಲ್ಫ್ ಜೀವಿತಾವಧಿಯನ್ನು ಹೊಂದಿರುತ್ತದೆ ಎಂಬುದು ತಿಳಿದಿರಲಿ. ಸಾಮಾನ್ಯವಾಗಿ ಮಾಗಿದ ಕ್ಯಾಲ್ಸಿಯಂ ಕಾರ್ಬೈಡ್ ಬಳಕೆಯನ್ನು ಸೂಚಿಸುತ್ತದೆ.

Continue Reading

ದೇಶ

British Journalist: “ನವ ಭಾರತದ ಬಗ್ಗೆ ಪ್ರಪಂಚಕ್ಕೆ ತಿಳಿಸಬೇಕು”- ಇಂಡಿಯಾಗೆ ಮನಸೋತ ಬ್ರಿಟಿಷ್‌ ಪತ್ರಕರ್ತ

British Journalist:ಇಂಗ್ಲೆಂಡ್‌ ಮೂಲಕ ಪತ್ರಿಕೆ ಡೈಲಿ ಎಕ್ಸ್‌ಪ್ರೆಸ್‌ನ ಸಹಾಯಕ ಸಂಪಾದಕರಾಗಿರುವ ಸ್ಯಾಮ್‌ ಸ್ಟೀವನ್‌ಸನ್‌ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದು, ಭಾರತದ ಬಗ್ಗೆ ಹೇಳಲು ಸಾಕಷ್ಟು ವಿಚಾರಗಳಿವೆ. ಭಾರತ ವಿರೋಧಿ ಎಂಬ ಬಕ್ವಾಸ್‌ ಚಿಂತನೆ ಮೂಲಕ ಭಾರತದ ಬಗ್ಗೆ ತಪ್ಪು ಮಾಹಿತಿ ಹಂಚುವ ಪ್ರಯತ್ನಗಳು ನಡೆಯುತ್ತಿದೆ. ನಾವು ಭಾರತದ ಬಗ್ಗೆ ಸತ್ಯವನ್ನು ಹೇಳಬೇಕಿದೆ. ಅಲ್ಲದೇ ನವ ಭಾರತದ ಧನಾತ್ಮಕವಾದ ವಿಚಾರಗಳನ್ನು ಪ್ರಪಂಚಕ್ಕೆ ತಿಳಿಸಬೇಕಿದೆ ಎಂದು ಹೇಳಿದ್ದಾರೆ.

VISTARANEWS.COM


on

British Journalist
Koo

ನವದೆಹಲಿ: ಹಾವು ಆಡಿಸುವವರ ದೇಶ ಎಂದು ಭಾರತವನ್ನು ಜರಿಯುತ್ತಿದ್ದ ಪ್ರಪಂಚದ ದೊಡ್ಡ ದೊಡ್ಡ ರಾಷ್ಟ್ರಗಳು ಇತ್ತೀಚಿನ ಕೆಲವು ವರ್ಷಗಳಿಂದ ಭಾರತದ ಎದುರು ಮಂಡಿಯೂರಿದೆ ಎಂದರೆ ತಪ್ಪಾಗಲಾರದು. ಶತ್ರು ರಾಷ್ಟ್ರ ಪಾಕಿಸ್ತಾನ(Pakistan)ವೂ ಸೇರಿದಂತೆ ವಿವಿಧ ರಾಷ್ಟ್ರಗಳು ನಿರಂತರವಾಗಿ ಅಭಿವೃದ್ಧಿ ಪಥದತ್ತ ಸಾಗುತ್ತಿರುವ ಭಾರತವನ್ನು ಹಾಡಿ ಹೊಗಳುತ್ತಿವೆ. ಇದೀಗ ಇಂಗ್ಲೆಂಡ್‌ನ ಪತ್ರಕರ್ತ(British Journalist)ನೋರ್ವ ಭಾರತ(India)ದ ಬಗ್ಗೆ ಬಹಳ ಮೆಚ್ಚುಗೆ ಮಾತುಗಳನ್ನಾಡಿದ್ದಾರೆ.

ಇಂಗ್ಲೆಂಡ್‌ ಮೂಲಕ ಪತ್ರಿಕೆ ಡೈಲಿ ಎಕ್ಸ್‌ಪ್ರೆಸ್‌ನ ಸಹಾಯಕ ಸಂಪಾದಕರಾಗಿರುವ ಸ್ಯಾಮ್‌ ಸ್ಟೀವನ್‌ಸನ್‌ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದು, ಭಾರತದ ಬಗ್ಗೆ ಹೇಳಲು ಸಾಕಷ್ಟು ವಿಚಾರಗಳಿವೆ. ಭಾರತ ವಿರೋಧಿ ಎಂಬ ಬಕ್ವಾಸ್‌ ಚಿಂತನೆ ಮೂಲಕ ಭಾರತದ ಬಗ್ಗೆ ತಪ್ಪು ಮಾಹಿತಿ ಹಂಚುವ ಪ್ರಯತ್ನಗಳು ನಡೆಯುತ್ತಿದೆ. ನಾವು ಭಾರತದ ಬಗ್ಗೆ ಸತ್ಯವನ್ನು ಹೇಳಬೇಕಿದೆ. ಅಲ್ಲದೇ ನವ ಭಾರತದ ಧನಾತ್ಮಕವಾದ ವಿಚಾರಗಳನ್ನು ಪ್ರಪಂಚಕ್ಕೆ ತಿಳಿಸಬೇಕಿದೆ ಎಂದು ಹೇಳಿದ್ದಾರೆ.

ಭಾರತದ ಬಗ್ಗೆ ಇಂಗ್ಲೆಂಡ್‌ನಲ್ಲಿ ಕೆಲವೊಂದು ನಕಾರಾತ್ಮಕ ವಿಚಾರಗಳನ್ನು ತುಂಬಲಾಗುತ್ತಿದೆ. ಅದೂ ಅಲ್ಲದೇ ಇಡೀ ಯೂರೋಪ್‌ನಲ್ಲಿ ಭಾರತದ ಬಗ್ಗೆ ಇಲ್ಲ ಸಲ್ಲದ ಕಥೆಗಳನ್ನು ಹುಟ್ಟಿಸಿ ಹೇಳಲಾಗುತ್ತಿದೆ. ನಮಗೆ ಭಾರತದಲ್ಲಿ ಧಾರ್ಮಿಕ ಸಂಘರ್ಘ ಇರುವುದನ್ನೇ ಎತ್ತಿ ತೋರಿಸಲಾಗುತ್ತಿದೆ. ಆದರೆ ಭಾರತಕ್ಕೆ ಬಂದು ನೋಡದಾಗಲೇ ಕೇಳಿವ ವಿಚಾರಕ್ಕೂ ವಾಸ್ತವಕತೆಗೂ ಬಹಳಷ್ಟು ವ್ಯತ್ಯಾಸವಿದೆ ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ರ್ಯಾಲಿಗೆ ಸಂಪೂರ್ಣವಾಗಿ ಬುರ್ಖಾ ಧರಿಸಿ ಮುಸ್ಲಿಂ ಮಹಿಳೆಯರು ಭಾಗಿಯಾಗುವುದನ್ನು ನಾನು ನೋಡಿದ್ದೇನೆ. ವಿವಿಧತೆಯಲ್ಲಿ ಏಕತೆ ಎಂಬ ವಿಚಾರವನ್ನು ನಾವು ಇಲ್ಲಿ ಮಾತ್ರ ಕಾಣಬಹುದಾಗಿದೆ. ನಾವು ಇಲ್ಲಿ ಭಾರತದ ಬಗ್ಗೆ ಸುದ್ದಿ ಕವರೇಜ್‌ಗಾಗಿ ಬಂದಿದ್ದೇವೆ. ನಾವು ಇಲ್ಲಿ ಭಾರತದ ಬಗ್ಗೆ ಹಲವು ನಿಜಾಂಶವನ್ನು ಕಂಡುಕೊಂಡಿದ್ದು, ಅವುಗಳನ್ನು ಲಂಡನ್‌ಗೆ ಮರಳಿ ಕೊಂಡೊಯ್ಯವುದೇ ನಮ್ಮ ಗುರಿ. ವಿದೇಶಿ ಮಾಧ್ಯಮಗಳಲ್ಲಿ ಭಾರತ ಬಗೆಗಿನ ನಕಾರಾತ್ಮಕ ಸುದ್ದಿಗಳ ಬಿತ್ತರದಿಂದ ನಾವು ಬೇಸತ್ತಿದ್ದೇವೆ. ಇದು ನಿಜಕ್ಕೂ ನಾಚಿಗೇಡಿನ ವಿಚಾರ. ನಿಜಕ್ಕೂ ಜನ ಇಲ್ಲಿ ಬಂದು ಕಣ್ಣಾರೆ ನೋಡಬೇಕು, ಇಲ್ಲಿ ಕೆಲ ಕಾಲ ಜನರೊಡನೆ ಬೆರೆಯಬೇಕು. ಆಗ ಮಾತ್ರ ಭಾರತ ಏನು ಎಂಬ ವಿಚಾರ ಅರ್ಥವಾಗಲು ಸಾಧ್ಯ ಎಂದು ತಿಳಿಸಿದ್ದಾರೆ.

Continue Reading
Advertisement
West Nile fever Health department on alert
ಆರೋಗ್ಯ7 mins ago

West Nile fever : ಕೇರಳದಲ್ಲಿ ವೆಸ್ಟ್‌ ನೈಲ್ ಭೀತಿ; ಮೈಸೂರು ಗಡಿಭಾಗದಲ್ಲಿ ಆರೋಗ್ಯ ಇಲಾಖೆ ಅಲರ್ಟ್‌

Great Khali
ದೇಶ10 mins ago

Great Khali: ಜಗತ್ತಿನ ಕುಬ್ಜ ಮಹಿಳೆಯನ್ನು ಮಗುವಿನಂತೆ ಎತ್ತಿ ಆಡಿಸಿದ ಗ್ರೇಟ್‌ ಖಲಿ; ಜನ ಕೆಂಡವಾಗಿದ್ದು ಏಕೆ?

Kalki 2898 AD
ಪ್ರಮುಖ ಸುದ್ದಿ14 mins ago

Kalki 2898 AD: ಮೇ 22ಕ್ಕೆ ಭೈರವನ ನಂಬಿಕಸ್ಥ ಗೆಳೆಯ ಬುಜ್ಜಿಯ ಅನಾವರಣ; ಕಲ್ಕಿ ಚಿತ್ರದ 5ನೇ ಸೂಪರ್ ಸ್ಟಾರ್ ಯಾರು?

RCB vs CSK
ಕ್ರೀಡೆ33 mins ago

RCB vs CSK: ಆನ್​ಲೈನ್​ ವೀಕ್ಷಣೆಯಲ್ಲೂ ದಾಖಲೆ ಬರೆದ ಆರ್​ಸಿಬಿ-ಚೆನ್ನೈ ಪಂದ್ಯ

Rain News
ಕರ್ನಾಟಕ46 mins ago

Rain News: ಕುಷ್ಟಗಿಯಲ್ಲಿ ಸಿಡಿಲು ಬಡಿದು ರೈತ ಸಾವು, ಯುವಕನಿಗೆ ಗಂಭೀರ ಗಾಯ

Prajwal Revanna Case
ಕರ್ನಾಟಕ1 hour ago

ದೇವೇಗೌಡ ಇನ್ನೂ ಆತ್ಮಹತ್ಯೆ ಮಾಡಿಕೊಂಡಿಲ್ವಲ್ಲ; ಹೊಸ ಆಡಿಯೊದಲ್ಲಿ ಶಿವರಾಮೇಗೌಡ ಸ್ಫೋಟಕ ಹೇಳಿಕೆ

Rohit Sharma
ಕ್ರೀಡೆ1 hour ago

Rohit Sharma: ಐಪಿಎಲ್ ಪ್ರಸಾರಕರ ವಿರುದ್ಧ ಕಿಡಿ ಕಾರಿದ ಹಿಟ್​ಮ್ಯಾನ್​ ರೋಹಿತ್​

R Ashok
ರಾಜಕೀಯ2 hours ago

R Ashok: ರಾಜ್ಯದಲ್ಲಿ ಮಳೆಗಿಂತ ಹೆಚ್ಚಾಗಿ ಕೊಲೆಗಳೇ ನಡೆಯುತ್ತಿವೆ: ಆರ್‌.ಅಶೋಕ್‌ ಕಿಡಿ

Thailand Open 2024
ಬ್ಯಾಡ್ಮಿಂಟನ್2 hours ago

Thailand Open 2024: ಥಾಯ್ಲೆಂಡ್‌ ಓಪನ್‌ ಗೆದ್ದ ಭಾರತದ ಚಿರಾಗ್‌-ಸಾತ್ವಿಕ್‌ ಜೋಡಿ

Prajwal Revanna Case
ಕರ್ನಾಟಕ2 hours ago

Prajwal Revanna Case: ಪೆನ್‌ಡ್ರೈವ್‌ ಕೇಸ್‌ಗೆ ಟ್ವಿಸ್ಟ್;‌ ದೇವರಾಜೇಗೌಡ, ಡಿಕೆಶಿ ಆಡಿಯೊ ಬಯಲು, ಇಲ್ಲಿದೆ ಸ್ಫೋಟಕ ಮಾಹಿತಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ3 hours ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ4 hours ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ5 hours ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ2 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ3 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ3 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು3 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ4 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

ಟ್ರೆಂಡಿಂಗ್‌