Horoscope Today: ಇಂದು ಗಂಗಾವತರಣ ದಿನ; ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ - Vistara News

ಪ್ರಮುಖ ಸುದ್ದಿ

Horoscope Today: ಇಂದು ಗಂಗಾವತರಣ ದಿನ; ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ

ಜೇಷ್ಠ ಮಾಸ ಶುಕ್ಲ ಪಕ್ಷದ ದಶಮಿಯ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

VISTARANEWS.COM


on

horoscope today
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇಂದಿನ ಪಂಚಾಂಗ

ಶ್ರೀ ಶಕೇ 1944, ಶುಭಕೃತ ನಾಮ ಸಂವತ್ಸರ,
ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷ
ತಿಥಿ:  ದಶಮಿ 07:25 ವಾರ:  ಶುಕ್ರವಾರ
ನಕ್ಷತ್ರ:  ಚಿತ್ತಾ 27:35 ಯೋಗ: ವರಿಯಾಣ 23:33
ಕರಣ: ಗರಜ 07:25 ದಿನ ವಿಶೇಷ: ಗಂಗಾವತರಣ ದಿನ, ಗಿಡ ಮೂಲಿಕೆಗಳ ದಿನ

ಸೂರ್ಯೋದಯ :  05:41             ಸೂರ್ಯಾಸ್ತ : 07:11

ರಾಹು ಕಾಲ : ಪ್ರಾತಃ ಕಾಲ 10.30 ರಿಂದ 12.00
ಗುಳಿಕಕಾಲ:  ಪ್ರಾತಃ ಕಾಲ 7.30 ರಿಂದ 9.00
ಯಮಗಂಡಕಾಲ: ಮಧ್ಯಾಹ್ನ 3.00 ರಿಂದ 4.30

ದ್ವಾದಶ ರಾಶಿ ಭವಿಷ್ಯ (horoscope today)

dina bhavishya

ಮೇಷ: ಅನೇಕ ಒತ್ತಡಗಳು ಆವರಿಸುವ ಸಾಧ್ಯತೆ. ಇತರರ ಮೇಲೆ ವಿನಾ ಕಾರಣ ಹಗೆ ಸಾಧಿಸಿ ಮಾನಸಿಕ ಆರೋಗ್ಯ ಹಾಳು ಮಾಡಿಕೊಳ್ಳುವುದು ಬೇಡ. ಆರ್ಥಿಕವಾಗಿ ಸಮಸ್ಯೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಕೊಂಚ ಮಟ್ಟಿಗೆ ಒತ್ತಡ ಹೆಚ್ಚಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6

dina bhavishya

ವೃಷಭ: ಆರೋಗ್ಯದ ಕುರಿತು ವಿಶೇಷ ಕಾಳಜಿ ಅವಶ್ಯಕ. ವಿನಾ ಕಾರಣ ಎಲ್ಲದಕ್ಕೂ ಮೂಗು ತೂರಿಸುವುದು ಬೇಡ. ಕುಟುಂಬದಲ್ಲಿ ಭಿನ್ನಾಭಿಪ್ರಾಯ ಮೂಡದಂತೆ ಎಚ್ಚರಿಕೆ ಇರಲಿ. ಹೂಡಿಕೆಯ ಕುರಿತು ಆಲೋಚನೆ. ಆಪ್ತರ ಆರೋಗ್ಯ ವಿಚಾರಣೆ. ಉದ್ಯೋಗಿಗಳಿಗೆ ಮಿಶ್ರಫಲ. ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ, ಆರ್ಥಿಕ ಲಾಭ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 5

today's horoscope in kannada

ಮಿಥುನ: ಕೆಲಸ ಕಾರ್ಯಗಳಲ್ಲಿ ನಿಧಾನಗತಿ. ಆರೋಗ್ಯ ಮಧ್ಯಮ. ಅನೇಕ ವಿಚಾರಗಳು ಮಾನಸಿಕ ನೆಮ್ಮದಿಯನ್ನು ಹಾಳು ಮಾಡುವ ಸಾಧ್ಯತೆ. ಆರ್ಥಿಕ ಲಾಭ ಸಾಧಾರಣ. ವ್ಯಾಪಾರ-ವ್ಯವಹಾರದಲ್ಲಿ ಮಿಶ್ರಫಲ. ಉದ್ಯೋಗಿಗಳಿಗೆ ಹೆಚ್ಚಿದ ಒತ್ತಡ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 3

dina bhavishya

ಕಟಕ: ಆತ್ಮವಿಶ್ವಾಸದಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಕೀರ್ತಿ ಸಿಗಲಿದೆ. ಆರ್ಥಿಕವಾಗಿ ಲಾಭ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ಹಳೆಯ ಸ್ನೇಹಿತರು, ಕುಟುಂಬದ ಆಪ್ತರೊಂದಿಗೆ ಸಮಯ ಕಳೆಯುವ ಸಾಧ್ಯತೆ. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

dina bhavishya

ಸಿಂಹ: ಆರೋಗ್ಯ ಕಾಳಜಿ ಅವಶ್ಯಕ. ಒತ್ತಡದಿಂದ ಹೊರಬರಲು ವ್ಯಸನಗಳಿಗೆ ಬಲಿಯಾಗುವುದು ಬೇಡ. ಆರ್ಥಿಕವಾಗಿ ಕೊಂಚ ಲಾಭ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಉದ್ಯೋಗಿಗಳಿಗೆ ಹೊಸ ಭರವಸೆ. ಕೆಲಸ ಕಾರ್ಯಗಳಲ್ಲಿ ಯಶಸ್ಸು. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 5

today's horoscope in kannada

ಕನ್ಯಾ: ಶುಭ ಕಾರ್ಯಗಳಿಗಾಗಿ ಖರ್ಚು. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಕಾರಣಾಂತರಗಳಿಂದ ಒತ್ತಡ. ಜವಾಬ್ದಾರಿಗಳು ಹೆಚ್ಚಾಗಲಿದೆ, ಕೋಪದಿಂದ ವರ್ತಿಸುವ ಸಾಧ್ಯತೆ. ಆತುರದಲ್ಲಿ ಮಾತುಗಳು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 3

today's horoscope in kannada

ತುಲಾ: ಆರೋಗ್ಯ ಪರಿಪೂರ್ಣ. ಕುಟುಂಬದ ಹಿರಿಯರಿಂದ ಒತ್ತಡ. ಹಣಕಾಸು, ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ. ಆರ್ಥಿಕ ಲಾಭ. ಹಿಂದೆ ನೀಡಿದ ಸಾಲ ಮರಳುವ ಸಾಧ್ಯತೆ. ಆಪ್ತರಿಂದ ಸಲಹೆ ಸಹಕಾರ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 6

dina bhavishya

ವೃಶ್ಚಿಕ: ಸಂಗಾತಿಯ ಆರೋಗ್ಯದ ಸಲುವಾಗಿ ಖರ್ಚು. ವೃತಾ ಕಾಲಹರಣ ಮಾಡುವ ಆಲೋಚನೆಗಳಿಂದ ದೂರವಿರಿ. ಸಹೋದ್ಯೋಗಿಗಳಿಂದ ಕಿರಿಕಿರಿ. ವ್ಯಾಪಾರ ವ್ಯವಹಾರ ಸಾಧಾರಣ. ಹೂಡಿಕೆಯ ವ್ಯವಹಾರಗಳಲ್ಲಿ ಪ್ರಗತಿ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 7

dina bhavishya

ಧನಸ್ಸು: ಆಪ್ತರಿಂದ ಬೆಂಬಲ. ಕೆಲಸಕಾರ್ಯಗಳಲ್ಲಿ ಪ್ರಗತಿ. ಆಪ್ತರಿಂದ ಹಣದ ಸಹಾಯದ ಕೋರಿಕೆ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗಲಿದೆ. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4

dina bhavishya

ಮಕರ: ಉತ್ಸಾಹ ಭರಿತ ಜೀವನ. ಆರ್ಥಿಕವಾಗಿ ಲಾಭ. ಹೂಡಿಕೆ ವ್ಯವಹಾರಗಳಲ್ಲಿ ವ್ಯಾಪಾರ-ವ್ಯವಹಾರದಲ್ಲಿ ಪ್ರಗತಿ. ಯಾವುದಾದರೂ ಸಭೆ-ಸಮಾರಂಭಗಳಿಗೆ ಭಾಗವಹಿಸುವ ಆಮಂತ್ರಣ. ನಿರೀಕ್ಷೆಯ ಹೊಸ ಭರವಸೆಗಳು ಮೂಡಲಿವೆ. ಆಪ್ತರೊಂದಿಗೆ ಮಾತುಕತೆ. ಕುಟುಂಬದ ಸದಸ್ಯರಿಗೆ ಸಲಹೆ ಸಹಕಾರ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 4

ಇದನ್ನೂ ಓದಿ | ಬಹುತೇಕ ಶುಭಫಲಗಳನ್ನೇ ನೀಡುವ ಬುಧನ ಭಾವಫಲಗಳು ಹೀಗಿವೆ

today's horoscope in kannada

ಕುಂಭ: ಇತರರನ್ನು ಟೀಕಿಸುತ್ತಾ ಸಮಯ ವ್ಯರ್ಥ ಮಾಡುವುದು ಬೇಡ. ಭೂಮಿಗೆ ಸಂಬಂಧಿಸಿದಂತೆ ವ್ಯಾಪಾರ ವ್ಯವಹಾರದಲ್ಲಿ ಲಾಭ. ಪ್ರಯಾಣ ಸಾಧ್ಯತೆ. ಸಹೋದ್ಯೋಗಿಗಳ ಸಹಕಾರ ಸಿಗಲಿದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

today's horoscope in kannada

ಮೀನ: ಆರೋಗ್ಯ ಪರಿಪೂರ್ಣ. ಉದ್ಯೋಗಕ್ಕೆ ಸಂಬಂಧಿಸಿದಂತೆ ಖರ್ಚು. ಹೊಸ ವ್ಯಕ್ತಿಗಳ ಪರಿಚಯವಾಗಲಿದೆ. ನಿಮ್ಮ ನಿರೀಕ್ಷೆಗೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ. ಕುಟುಂಬದ ಸದಸ್ಯರಿಂದ ಒತ್ತಡ. ಸಂಗಾತಿಯ ವರ್ತನೆ ನಿಮ್ಮ ಖ್ಯಾತಿಯ ಮೇಲೆ ಪರಿಣಾಮ ಬೀರಬಹುದು. ಆರೋಗ್ಯ ಪರಿಪೂರ್ಣ. ದಿಡೀರ್ ಧನಲಾಭ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9

panchanga

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕರ್ನಾಟಕ

Prajwal Revanna Case: ಪೆನ್‌ಡ್ರೈವ್‌ ಕೇಸ್‌ಗೆ ಟ್ವಿಸ್ಟ್;‌ ದೇವರಾಜೇಗೌಡ, ಡಿಕೆಶಿ ಆಡಿಯೊ ಬಯಲು, ಇಲ್ಲಿದೆ ಸ್ಫೋಟಕ ಮಾಹಿತಿ

Prajwal Revanna Case: ಲಭ್ಯವಾಗಿರುವ ಆಡಿಯೊ ಪ್ರಕಾರ, ಮೊದಲು ದೇವರಾಜೇಗೌಡ ಹಾಗೂ ಎಲ್‌.ಆರ್.ಶಿವರಾಮೇಗೌಡ ದೂರವಾಣಿಯಲ್ಲಿ ಮಾತನಾಡಿದ್ದಾರೆ. “ನಾನು ಫೋನ್‌ಅನ್ನು ಡಿ.ಕೆ.ಶಿವಕುಮಾರ್‌ ಅವರಿಗೆ ಕೊಡುತ್ತೇನೆ. ಏನೇನಾಗಿದೆ ಎಲ್ಲದರ ಕುರಿತು ಮಾಹಿತಿ ಕೊಡು” ಎಂಬುದಾಗಿ ಶಿವರಾಮೇಗೌಡ ಅವರು ದೇವರಾಜೇಗೌಡರಿಗೆ ತಿಳಿಸುತ್ತಾರೆ. ಇದಾದ ಬಳಿಕ ದೇವರಾಜೇಗೌಡ ಹಾಗೂ ಡಿ.ಕೆ.ಶಿವಕುಮಾರ್‌ ಅವರು ಪೆನ್‌ಡ್ರೈವ್‌ ಕೇಸ್‌ ಬಗ್ಗೆ ಮಾತನಾಡಿದ್ದಾರೆ ಎನ್ನಲಾದ ಆಡಿಯೊ ಈಗ ಲಭ್ಯವಾಗಿದೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಲೈಂಗಿಕ ಹಗರಣಕ್ಕೆ (Prajwal Revanna Case) ಸಂಬಂಧಿಸಿದಂತೆ ಮತ್ತೊಂದು ಆಡಿಯೊ ಬಯಲಾಗಿದ್ದು, ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಹಾಸನ ಪೆನ್‌ಡ್ರೈವ್‌ ಕೇಸ್‌ಗೆ ಸಂಬಂಧಿಸಿದಂತೆ ವಕೀಲ ದೇವರಾಜೇಗೌಡ (Devarajegowda), ಮಾಜಿ ಸಂಸದ ಎಲ್‌.ಆರ್‌.ಶಿವರಾಮೇಗೌಡ (LR Shivarame Gowda) ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ (DK Shivakumar) ಅವರ ನಡುವಿನ ದೂರವಾಣಿ ಸಂಭಾಷಣೆ ಎನ್ನಲಾದ ಆಡಿಯೊ ಲಭ್ಯವಾಗಿದ್ದು, ಮಾತುಕತೆಯು ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌ ಕುರಿತೇ ಇವರು ಮಾತನಾಡಿದ್ದಾರೆ ಎಂದು ತಿಳಿದುಬಂದಿದೆ.

ಲಭ್ಯವಾಗಿರುವ ಆಡಿಯೊ ಪ್ರಕಾರ, ಮೊದಲು ದೇವರಾಜೇಗೌಡ ಹಾಗೂ ಎಲ್‌.ಆರ್.ಶಿವರಾಮೇಗೌಡ ದೂರವಾಣಿಯಲ್ಲಿ ಮಾತನಾಡಿದ್ದಾರೆ. “ನಾನು ಫೋನ್‌ಅನ್ನು ಡಿ.ಕೆ.ಶಿವಕುಮಾರ್‌ ಅವರಿಗೆ ಕೊಡುತ್ತೇನೆ. ಏನೇನಾಗಿದೆ ಎಲ್ಲದರ ಕುರಿತು ಮಾಹಿತಿ ಕೊಡು” ಎಂಬುದಾಗಿ ಶಿವರಾಮೇಗೌಡ ಅವರು ದೇವರಾಜೇಗೌಡರಿಗೆ ತಿಳಿಸುತ್ತಾರೆ. ಇದಾದ ಬಳಿಕ ದೇವರಾಜೇಗೌಡ ಅವರು ಡಿಸಿಎಂ ಡಿ.ಕೆ.ಶಿವಕುಮಾರ್‌ ಜತೆ ದೂರವಾಣಿಯಲ್ಲಿ ಮಾತನಾಡಿದ್ದಾರೆ.

ಇಲ್ಲಿದೆ ಆಡಿಯೊ ಸಂಭಾಷಣೆ

“ಏನೇನಾಯ್ತು? ಏನಿದೆ ಪರಿಸ್ಥಿತಿ” ಎಂಬುದಾಗಿ ಡಿ.ಕೆ.ಶಿವಕುಮಾರ್‌ ಕೇಳುತ್ತಾರೆ. ಆಗ ದೇವರಾಜೇಗೌಡ ಅವರು, “ಸದ್ಯದ ಪರಿಸ್ಥಿತಿಯಲ್ಲಿ ನಾಳೆ ಕೋರ್ಟ್‌ನಲ್ಲಿ ಸ್ಟೇ ಆಗೋ ಚಾನ್ಸ್‌ ಇದೆ. ಸರಿಯಾಗಿ ದೂರು ಕೊಟ್ಟಿಲ್ಲ. ಮಹಿಳೆ ನೀಡಿರುವ ಹೇಳಿಕೆ ಹಾಗೂ ನಡೆದಿರುವ ಘಟನೆ ಮಧ್ಯೆ ಹಲವು ವರ್ಷ ವ್ಯತ್ಯಾಸ ಇದೆ. ಆದರೆ, ಎಸ್‌ಐಟಿಯವರು ಮಹಿಳೆಯನ್ನು ಕರೆದುಕೊಂಡು ಹೋಗಿ ವಿಚಾರಣೆ, ತನಿಖೆ ನಡೆಸಿದರೆ ಸೀರಿಯಸ್‌ ಕೇಸ್‌ ಆಗುತ್ತದೆ. ಆದರೆ, ಮಹಿಳೆಯು ಪ್ರಕರಣದಲ್ಲಿ ಸ್ಟ್ರಾಂಗ್‌ ಇಲ್ಲ” ಎಂದಿದ್ದಾರೆ.

ಇದಾದ ಬಳಿಕ ಡಿ.ಕೆ.ಶಿವಕುಮಾರ್‌, “ಏನಾದರೂ ಬೇರೆ ಎವಿಡೆನ್ಸ್‌ ಇದೆಯಾ” ಎಂದು ಪ್ರಶ್ನಿಸಿದ್ದಾರೆ. ಆಗ, ದೇವರಾಜೇಗೌಡ ಅವರು “ಯಾವುದೇ ಎವಿಡೆನ್ಸ್‌ ಇಲ್ಲ” ಎಂದಿದ್ದಾರೆ. ಇದಾದ ಬಳಿಕ ಇಬ್ಬರ ನಡುವಿನ ಮಾತುಕತೆ ಮುಗಿದಿದೆ. ದೇವರಾಜೇಗೌಡ ಅವರು ಜೈಲಿಗೆ ಹೋಗುವ ಮೊದಲು ನಡೆದ ಮಾತುಕತೆ ಇದಾಗಿದೆ ಎಂದು ಮೂಲಗಳು ತಿಳಿಸಿವೆ.

ದೇವರಾಜೇಗೌಡ ಗಂಭೀರ ಆರೋಪ

ಪೆನ್‌ಡ್ರೈವ್‌ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್‌ ಅವರ ಬಗ್ಗೆ ದೇವರಾಜೇಗೌಡ ಗಂಭೀರ ಆರೋಪ ಮಾಡಿದ್ದಾರೆ. “ಪೆನ್‌ ಡ್ರೈವ್‌ ಪ್ರಕರಣದ ಹಿಂದೆ ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಇದ್ದಾರೆ. ಪ್ರಜ್ವಲ್‌ ಮಾಜಿ ಕಾರು ಚಾಲಕ ಕಾರ್ತಿಕ್‌ ಬಳಿ ಪೆನ್‌ಡ್ರೈವ್‌ ತರಿಸಿಕೊಂಡು ಎಲ್ಲವನ್ನೂ ರೆಡಿ ಮಾಡಿದ್ದು ಡಿಕೆಶಿ, ಇದರಲ್ಲಿ ಸುಮ್ಮನಾಗಲು 100 ಕೋಟಿ ರೂಪಾಯಿ ಆಫರ್‌ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಎಲ್.ಆರ್. ಶಿವರಾಮೇಗೌಡ ಮೂಲ 100 ಕೋಟಿ ರೂಪಾಯಿ ಆಫರ್ ಮಾಡಿದ್ದರು. ಡಿ.ಕೆ. ಶಿವಕುಮಾರ್ ನೇರವಾಗಿ ನನ್ನ ಜತೆಗೆ ಮಾತನಾಡಿದ್ದಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: Prajwal Revanna Case: ಕಾಂಗ್ರೆಸ್‌ ಸರ್ಕಾರದಿಂದ ಪ್ರಜ್ವಲ್‌ ಕೇಸ್‌ ನಿಯಂತ್ರಣ; ಡೈವರ್ಟ್‌ ಮಾಡಲು ಬಿಜೆಪಿಗರ ಮೇಲೆ ದಾಳಿ ಎಂದ ಅಶೋಕ್‌!

Continue Reading

ಕರ್ನಾಟಕ

Prajwal Revanna Case: ಡಿಕೆಶಿ 100 ಕೋಟಿ ರೂ. ಆಫರ್;‌ ಬೆಂಕಿ ಇಲ್ಲದೆ ಹೊಗೆಯಾಡಲ್ಲ ಎಂದ ಆರ್.‌ ಅಶೋಕ್

ದೇವರಾಜೇಗೌಡ ಬಳಿ ಸಾಕ್ಷ್ಯ ಇದೆ ಎಂಬ ಕಾರಣಕ್ಕಾಗಿಯೇ ಅವರನ್ನು ಬಂಧಿಸಲಾಗಿದೆ. ದೇವರಾಜೇಗೌಡ ಹೊರಗಿದ್ದರೆ ದಾಖಲೆ ಬಿಡುಗಡೆ ಮಾಡುತ್ತಾರೆ ಎಂಬ ಭಯದಿಂದ ಬಂಧಿಸಲಾಗಿದೆ. ದೇವರಾಜೇಗೌಡ ಮಾಡಿದ ಆರೋಪಗಳು ನಿಜವೇ ಇರಬೇಕು. ಅದಕ್ಕೆಲ್ಲ ಅವರ ಬಳಿ ಸಾಕ್ಷ್ಯ ಇದೆ ಎನಿಸುತ್ತದೆ. ಅವರು ಹೇಳಿದ್ದೆಲ್ಲ ನೂರಕ್ಕೆ ನೂರು ಸತ್ಯ. ಅಷ್ಟಕ್ಕೂ ಬೆಂಕಿಯೇ ಇಲ್ಲದೆ ಹೊಗೆಯಾಡಲ್ಲ ಎಂದು ಆರ್.‌ ಅಶೋಕ್‌ ಹೇಳಿದರು.

VISTARANEWS.COM


on

Prajwal Revanna Case
Koo

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna Case) ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ (Devarajegowda) ನೀಡಿದ ಹೇಳಿಕೆ ಸಂಚಲನ ಮೂಡಿಸಿದೆ. ಪೆನ್‌ ಡ್ರೈವ್‌ ಪ್ರಕರಣದ ಹಿಂದೆ ಡಿಸಿಎಂ ಡಿ.ಕೆ. ಶಿವಕುಮಾರ್‌ (DK Shivakumar) ಇದ್ದಾರೆ. ಅವರು 100 ಕೋಟಿ ರೂ. ಆಫರ್‌ ಮಾಡಿದ್ದರು ಎಂದು ದೇವರಾಜೇಗೌಡ ನೀಡಿದ ಹೇಳಿಕೆ ಕುರಿತು ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಪ್ರತಿಕ್ರಿಯಿಸಿದ್ದು, “ಬೆಂಕಿ ಇಲ್ಲದೆ ಹೊಗೆಯಾಡಲ್ಲ” ಎಂದಿದ್ದಾರೆ.

ಬೆಂಗಳೂರಿನಲ್ಲಿ ಭಾನುವಾರ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರನ್ನು ಭೇಟಿಯಾದ ಬಳಿಕ ಆರ್‌.ಅಶೋಕ್‌ ಸುದ್ದಿಗಾರರೊಂದಿಗೆ ಮಾತನಾಡಿದರು. “ದೇವರಾಜೇಗೌಡ ಬಳಿ ಸಾಕ್ಷ್ಯ ಇದೆ ಎಂಬ ಕಾರಣಕ್ಕಾಗಿಯೇ ಅವರನ್ನು ಬಂಧಿಸಲಾಗಿದೆ. ದೇವರಾಜೇಗೌಡ ಹೊರಗಿದ್ದರೆ ದಾಖಲೆ ಬಿಡುಗಡೆ ಮಾಡುತ್ತಾರೆ ಎಂಬ ಭಯದಿಂದ ಬಂಧಿಸಲಾಗಿದೆ. ದೇವರಾಜೇಗೌಡ ಮಾಡಿದ ಆರೋಪಗಳು ನಿಜವೇ ಇರಬೇಕು. ಅದಕ್ಕೆಲ್ಲ ಅವರ ಬಳಿ ಸಾಕ್ಷ್ಯ ಇದೆ ಎನಿಸುತ್ತದೆ. ಅವರು ಹೇಳಿದ್ದೆಲ್ಲ ನೂರಕ್ಕೆ ನೂರು ಸತ್ಯ. ಅಷ್ಟಕ್ಕೂ ಬೆಂಕಿಯೇ ಇಲ್ಲದೆ ಹೊಗೆಯಾಡಲ್ಲ” ಎಂದು ಹೇಳಿದರು.

“ದೇವರಾಜೇಗೌಡ ಅವರೇ ತಮಗೆ ಹಣದ ಆಫರ್ ಮಾಡಿದ ಬಗ್ಗೆ ಹೇಳಿದ್ದಾರೆ. ಈಗಾಗಲೇ ಡಿಕೆಶಿ ಮಾತಾಡಿದ ದಾಖಲೆ ಸಹ ಬಿಡುಗಡೆ ಮಾಡಿದ್ದಾರೆ. ಅವರನ್ನು ಬಿಟ್ಟರೆ ಸರಣಿ ದಾಖಲೆ ಬಿಡುಗಡೆ ಮಾಡುತ್ತಾರೆ. ಸರ್ಕಾರಕ್ಕೆ ಮುಜುಗರ ಆಗುತ್ತದೆ ಎಂದು ಬಂಧಿಸಿದ್ದಾರೆ. ಇದೆಲ್ಲ ಮಾಧ್ಯಮಗಳಲ್ಲಿ ಬರಬಾರದು ಎಂಬುದು ಡಿಕೆಶಿ ಉದ್ದೇಶವಾಗಿದೆ. ದೇವರಾಜೇಗೌಡ ಹೇಳಿದ್ದೆಲ್ಲ ಸತ್ಯ ಇರಬಹುದು. ರಣದೀಪ್ ಸುರ್ಜೇವಾಲಾ, ಸಿಎಂ‌ ಸಿದ್ದರಾಮಯ್ಯ, ಡಿಕೆಶಿ ಸೇರಿ ಮಾಸ್ಟರ್‌ ಪ್ಲಾನ್‌ ಮಾಡಿದ್ದಾರೆ” ಎಂದು ಆರೋಪಿಸಿದರು.

ಒಕ್ಕಲಿಗರ ಮುಗಿಸಲು ತಂತ್ರ

“ರಾಜ್ಯದಲ್ಲಿ ಒಕ್ಕಲಿಗರನ್ನು ಮುಗಿಸಲು ಕಾಂಗ್ರೆಸ್‌ ತಂತ್ರ ಮಾಡುತ್ತಿದೆ. ಈಗಾಗಲೇ ಸಿದ್ದರಾಮಯ್ಯ ದಲಿತರನ್ನು ಮುಗಿಸಿದ್ದಾರೆ. ಪರಮೇಶ್ವರ್ ಅವರು ಸಿಎಂ ಅಗೋದನ್ನು ತಪ್ಪಿಸಿದ್ದಾರೆ. ಸಿಬಿಐ ತನಿಖೆಗೆ ಕೊಟ್ರೆ ಸತ್ಯ ಹೊರಗೆ ಬರುತ್ತದೆ ಎಂದು ತನಿಖೆಗೆ ಕೊಡತ್ತಿಲ್ಲ. ಕೆ.ಜೆ. ಜಾರ್ಜ್‌ ವಿಚಾರದಲ್ಲೂ ಸಿಬಿಐ ತನಿಖೆ ನಡೆಯಿತು. ತಪ್ಪಿದ್ದರೆ ತಪ್ಪಿದೆ ಎಂದು, ತಪ್ಪಿಲ್ಲದಿದ್ದರೆ ತಪ್ಪಿಲ್ಲ ಎಂದು ಸಿಬಿಐ ವರದಿ ನೀಡುತ್ತದೆ. ಎಸ್ಐಟಿಯಿಂದ ಸತ್ಯ ಹೊರಗೆ ಬರುತ್ತದೆ ಎಂಬ ನಂಬಿಕೆ ಯಾರಿಗೂ ಇಲ್ಲ. ಸರ್ಕಾರ ಹೇಳಿದಂತೆ ಎಸ್‌ಐಟಿ ಕೆಲಸ ಮಾಡುತ್ತದೆ. ಕಾರ್ತಿಕ್‌ಗೆ ಜಾಮೀನು ನಿರಾಕರಿಸಿದರೂ ಯಾಕೆ ಬಂಧಿಸಿಲ್ಲ? ಯಾರೇ ತಪ್ಪು ಮಾಡಿದರೂ ಶಿಕ್ಷೆಯಾಗಲಿ. ಇದು ಪ್ರಜ್ವಲ್‌ ರೇವಣ್ಣ ಅವರಿಗೂ ಅನ್ವಯವಾಗುತ್ತದೆ. ಆದರೆ, ಪೆನ್‌ಡ್ರೈವ್‌ ಹಂಚಿಕೆ ಮಾಡಿದವರಿಗೂ ಶಿಕ್ಷೆಯಾಗಬೇಕು” ಎಂದು ಒತ್ತಾಯಿಸಿದರು.

ದೇವರಾಜೇಗೌಡ ಹೇಳಿದ್ದೇನು?

“ಪೆನ್‌ ಡ್ರೈವ್‌ ಪ್ರಕರಣದ ಹಿಂದೆ ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಇದ್ದಾರೆ. ಪ್ರಜ್ವಲ್‌ ಮಾಜಿ ಕಾರು ಚಾಲಕ ಕಾರ್ತಿಕ್‌ ಬಳಿ ಪೆನ್‌ಡ್ರೈವ್‌ ತರಿಸಿಕೊಂಡು ಎಲ್ಲವನ್ನೂ ರೆಡಿ ಮಾಡಿದ್ದು ಡಿಕೆಶಿ, ಇದರಲ್ಲಿ ಸುಮ್ಮನಾಗಲು 100 ಕೋಟಿ ರೂಪಾಯಿ ಆಫರ್‌ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಎಲ್.ಆರ್. ಶಿವರಾಮೇಗೌಡ ಮೂಲ 100 ಕೋಟಿ ರೂಪಾಯಿ ಆಫರ್ ಮಾಡಿದ್ದರು. ಡಿ.ಕೆ. ಶಿವಕುಮಾರ್ ನೇರವಾಗಿ ನನ್ನ ಜತೆಗೆ ಮಾತನಾಡಿದ್ದಲ್ಲ ಎಂದು ಹೇಳಿದ್ದರು.

ಇದನ್ನೂ ಓದಿ: Prajwal Revanna Case: ವಿದೇಶದಿಂದ ಪ್ರಜ್ವಲ್‌ ಕರೆತರೋಕೆ ಎಸ್‌ಐಟಿ ಮಾಸ್ಟರ್‌ ಸ್ಟ್ರೋಕ್!‌

Continue Reading

ಕರ್ನಾಟಕ

Cholera: ಸಿದ್ದರಾಮಯ್ಯ ತವರು ಕ್ಷೇತ್ರದಲ್ಲಿ ಕಾಲರಾ ಅಟ್ಟಹಾಸ; ಕಲುಷಿತ ನೀರು ಕುಡಿದು 114 ಜನಕ್ಕೆ ಕಾಯಿಲೆ!

Cholera: ಗ್ರಾಮದಲ್ಲಿ 12 ಕೈ ಪಂಪ್‌ಗಳಿದ್ದು, ನಾಲ್ಕು ಕೈಪಂಪ್‌ಗಳ ನೀರು ಕುಡಿಯಲು ಯೋಗ್ಯವಿಲ್ಲ. ಆತಂಕಕಾರಿ ವರದಿ ಇದ್ದರೂ ತಗಡೂರು ಗ್ರಾಮ ಪಂಚಾಯಿತಿ ಅಧಿಕಾರಿಗಳು ಎಚ್ಚೆತ್ತುಕೊಂಡು, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಿಲ್ಲ. ಹಾಗಾಗಿ, ಕಲುಷಿತ ನೀರು ಸೇವಿಸಿ ನೂರಾರು ಜನ ಅಸ್ವಸ್ಥರಾಗಿದ್ದಾರೆ. ಇದರಿಂದಾಗಿ ಗ್ರಾಮಸ್ಥರು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಕಿಡಿ ಕಾರಿದ್ದಾರೆ.

VISTARANEWS.COM


on

Cholera
Koo

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ವಿಧಾನಸಭೆ ಕ್ಷೇತ್ರವಾದ ವರುಣದಲ್ಲಿ (Varuna) ಶುದ್ಧ ಕುಡಿಯುವ ನೀರಿನ ಸಮಸ್ಯೆ ತಾಂಡವವಾಡುತ್ತಿದ್ದು, ತಗಡೂರು ಗ್ರಾಮದಲ್ಲಿ ಇದರಿಂದ ಜನ ಕಾಲರಾಗೆ ತುತ್ತಾಗುತ್ತಿದ್ದಾರೆ. ತಗಡೂರು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೆ, ಕಲುಷಿತ ನೀರು ಸೇವಿಸಿದ ಕಾರಣ 25 ಗ್ರಾಮಸ್ಥರು ಸೇರಿ 114 ಮಂದಿ ಕಾಲರಾ (Cholera) ಕಾಯಿಲೆಯಿಂದ ಬಳಲುತ್ತಿದ್ದಾರೆ. ವಾಂತಿ-ಭೇದಿಯಿಂದ ಜನ ತತ್ತರಿಸಿ ಹೋಗಿದ್ದು, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಜನಾಕ್ರೋಶ ವ್ಯಕ್ತವಾಗಿದೆ.

ತಗಡೂರು ಗ್ರಾಮವು ನಂಜನಗೂಡು ತಾಲೂಕಿಗೆ ಸೇರಿದರೂ ವರುಣ ವಿಧಾನಸಭೆ ಕ್ಷೇತ್ರದ ವ್ಯಾಪ್ತಿಗೆ ಬರುತ್ತದೆ. ತಗಡೂರು ಗ್ರಾಮ ಪಂಚಾಯಿತಿಯ 1, 2 ಹಾಗೂ 3ನೇ ವಾಸಿಸುತ್ತಿರುವ ಜನರು ಕಾಲರಾಗೆ ತುತ್ತಾಗಿದ್ದಾರೆ. 114 ರೋಗಿಗಳಲ್ಲಿ ಐವರ ಸ್ಥಿತಿ ಗಂಭೀರವಾದ ಕಾರಣ ಅವರನ್ನು ಮೈಸೂರು ಆಸ್ಪತ್ರೆಗೆ ರವಾನಿಸಲಾಗಿದೆ. ಉಳಿದವರಿಗೆ ತಗಡೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದರ ಮಧ್ಯೆಯೇ, ಕಾಲರಾ ಹರಡಲು ಅಧಿಕಾರಿಗಳ ನಿರ್ಲಕ್ಷ್ಯವೇ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

12 ಕೈ ಪಂಪ್‌ಗಳಿದ್ದರೂ ಪ್ರಯೋಜನ ಇಲ್ಲ

ಗ್ರಾಮದಲ್ಲಿ 12 ಕೈ ಪಂಪ್‌ಗಳಿದ್ದು, ನಾಲ್ಕು ಕೈಪಂಪ್‌ಗಳ ನೀರು ಕುಡಿಯಲು ಯೋಗ್ಯವಿಲ್ಲ. ಆತಂಕಕಾರಿ ವರದಿ ಇದ್ದರೂ ತಗಡೂರು ಗ್ರಾಮ ಪಂಚಾಯಿತಿ ಅಧಿಕಾರಿಗಳು ಎಚ್ಚೆತ್ತುಕೊಂಡು, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಿಲ್ಲ. ಹಾಗಾಗಿ, ಕಲುಷಿತ ನೀರು ಸೇವಿಸಿ ನೂರಾರು ಜನ ಅಸ್ವಸ್ಥರಾಗಿದ್ದಾರೆ. ಇದರಿಂದಾಗಿ ಗ್ರಾಮಸ್ಥರು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಕಿಡಿ ಕಾರುತ್ತಿದ್ದಾರೆ.

ಜನಾಕ್ರೋಶದ ಬಳಿಕ ಗ್ರಾಮಕ್ಕೆ ಭೇಟಿ ನೀಡಿದ ಅಧಿಕಾರಿಗಳು.

ದಿಢೀರ್‌ ಕ್ರಮಕ್ಕೆ ಮುಂದಾದ ಅಧಿಕಾರಿಗಳು

ಗ್ರಾಮದಲ್ಲಿ ನೂರಾರು ಜನ ಕಾಲರಾಗೆ ತುತ್ತಾಗಿರುವ ಸುದ್ದಿ ತಿಳಿಯುತ್ತಲೇ ಅಧಿಕಾರಿಗಳ ದಂಡೇ ಗ್ರಾಮಕ್ಕೆ ತೆರಳಿದೆ. ಗ್ರಾಮಕ್ಕೆ ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಕುಮಾರಸ್ವಾಮಿ, ನಂಜನಗೂಡು ತಹಸೀಲ್ದಾರ್ ಶಿವಕುಮಾರ್ ಕಾಸ್ನೂರು, ಜಿಲ್ಲಾ ಕಾಲರಾ ವೈದ್ಯಾಧಿಕಾರಿ ಡಾ. ಪುಟ್ಟತಾಯಮ್ಮ, ತಾಲೂಕು ವೈದ್ಯಾಧಿಕಾರಿ ಡಾ. ಈಶ್ವರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ, ಗ್ರಾಮದಲ್ಲಿರುವ ಸಾರ್ವಜನಿಕರಿಗೆ ಕೂಡ ಪ್ರತಿರೋಧಕ ಚುಚ್ಚುಮದ್ದು ನೀಡಲಾಗುತ್ತಿದೆ. ಪ್ರತಿ ಮನೆ ಮನೆಗೆ ಒಆರ್‌ಎಸ್ ಪೌಡರ್ ವಿತರಣೆ ಮಾಡಲಾಗಿದೆ. ಮನೆಯಲ್ಲಿ ಬಿಸಿ ನೀರು ಸೇವನೆ ಮಾಡಲು ಪ್ರತ್ಯೇಕವಾಗಿ ಕುಡಿಯುವ ನೀರಿನ ಟ್ಯಾಂಕ್ ವ್ಯವಸ್ಥೆ ಮಾಡಲಾಗಿದೆ.

ಗ್ರಾಮದಲ್ಲಿ ಅಧಿಕಾರಿಗಳು ಬೀಡು ಬಿಟ್ಟಿದ್ದು, ದಿನಕ್ಕೆ ಮೂರು ಬಾರಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಜತೆಗೂಡಿ ವೈದ್ಯಾಧಿಕಾರಿಗಳು ಮನೆ ಮನೆಗೆ ಭೇಟಿ ನೀಡುತ್ತಿದ್ದಾರೆ. ಇಷ್ಟಾದರೂ ಪಿಡಿಒ ದಿವಾಕರ್, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಪೂರ್ಣಿಮಾ ನಾಪತ್ತೆಯಾಗಿದ್ದು, ಸಂಬಂಧಪಟ್ಟ ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಶಿಸ್ತು ಕ್ರಮ ಕೈಗೊಳ್ಳಬೇಕಿದೆ ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: SSLC Grace Marks: ಯಾರನ್ನು ಕೇಳಿ ಶೇ. 20 ಗ್ರೇಸ್‌ ಮಾರ್ಕ್ಸ್‌ ಕೊಟ್ಟಿರಿ? ಶಿಕ್ಷಣ ಇಲಾಖೆ ವಿರುದ್ಧ ಹರಿಹಾಯ್ದ ಸಿದ್ದರಾಮಯ್ಯ!

Continue Reading

ಉದ್ಯೋಗ

Job Alert: ನೈವೇಲಿ ಲಿಗ್ನೈಟ್ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಅರ್ಜಿ ಸಲ್ಲಿಕೆಗೆ ನಾಳೆಯೇ ಕೊನೆಯ ದಿನ

Job Alert: ಭಾರತ ಸರ್ಕಾರದ ಕಲ್ಲಿದ್ದಲು ಸಚಿವಾಲಯದ ಆಡಳಿತಾತ್ಮಕ ನಿಯಂತ್ರಣದಲ್ಲಿರುವ ಕೇಂದ್ರ ಸಾರ್ವಜನಿಕ ವಲಯದ ಸಂಸ್ಥೆ ನೈವೇಲಿ ಲಿಗ್ನೈಟ್ ಕಾರ್ಪೋರೇಷನ್ ಲಿಮಿಟೆಡ್‌ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ನಾಳೆ (ಮೇ 20). ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 70,000-1,00,000 ರೂ. ಮಾಸಿಕ ವೇತನ ದೊರೆಯಲಿದೆ.

VISTARANEWS.COM


on

Job Alert
Koo

ಬೆಂಗಳೂರು: ಭಾರತ ಸರ್ಕಾರದ ಕಲ್ಲಿದ್ದಲು ಸಚಿವಾಲಯದ ಆಡಳಿತಾತ್ಮಕ ನಿಯಂತ್ರಣದಲ್ಲಿರುವ ಕೇಂದ್ರ ಸಾರ್ವಜನಿಕ ವಲಯದ ಸಂಸ್ಥೆ ನೈವೇಲಿ ಲಿಗ್ನೈಟ್ ಕಾರ್ಪೋರೇಷನ್ ಲಿಮಿಟೆಡ್‌ (Neyveli Lignite Corporation Limited) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (NLC Recruitment 2024). ಸುಮಾರು 36 ಎಕ್ಸಿಕ್ಯೂಟಿವ್‌ ಹುದ್ದೆಗಳಿದ್ದು, ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ನಾಳೆ (ಮೇ 20) (Job Alert). ಗಮನಿಸಿ ಸಂಜೆ 5 ಗಂಟೆಯೊಳಗೆ ನಿಮ್ಮ ಅರ್ಜಿ ಸಲ್ಲಿಕೆಯಾಗಬೇಕು.

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಎಕ್ಸಿಕ್ಯೂಟಿವ್‌-ಆಪರೇಷನ್‌: 24 ಮತ್ತು ಎಕ್ಸಿಕ್ಯೂಟಿವ್‌-ಮೈಂಟೆನೆನ್ಸ್‌: 12 ಹುದ್ದೆಗಳಿವೆ.
ಎಕ್ಸಿಕ್ಯೂಟಿವ್‌-ಆಪರೇಷನ್‌ ಹುದ್ದೆಗೆ ಕೆಮಿಕಲ್/ ಸಿ&ಐ/ ಇ&ಐ/ ಇಸಿಇ/ ಎಲೆಕ್ಟ್ರಿಕಲ್/ ಇಇಇ/ ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು.
ಎಕ್ಸಿಕ್ಯೂಟಿವ್‌-ಮೈಂಟೆನೆನ್ಸ್‌ ಹುದ್ದೆಗೆ ಸಿವಿಲ್/ ಕೆಮಿಕಲ್/ ಸಿ&ಐ/ ಇ&ಐ/ ಇಸಿಇ/ ಎಲೆಕ್ಟ್ರಿಕಲ್/ ಇಇಇ/ ಮೆಕ್ಯಾನಿಕಲ್ ಇಂಜಿನಿಯರಿಂಗ್‌ನಲ್ಲಿ ಪದವಿ ಪಡೆದವರು ಅರ್ಹರು.

ವಯೋಮಿತಿ ಮತ್ತು ಅರ್ಜಿ ಶುಲ್ಕ

Neyveli Lignite Corporation Limited recruitment ಅಧಿಸೂಚನೆ ಪ್ರಕಾರ ಗರಿಷ್ಠ ವಯೋಮಿತಿ 63 ವರ್ಷ. ಅರ್ಜಿ ಶುಲ್ಕವಾಗಿ ಮಾಜಿ ಯೋಧರು / ಎಸ್‌ಸಿ / ಎಸ್‌ಟಿ ವರ್ಗಕ್ಕೆ ಸೇರಿದವರು 354 ರೂ. ಮತ್ತು ಸಾಮಾನ್ಯ / ಇಡಬ್ಲ್ಯುಎಸ್‌ / ಒಬಿಸಿ ವಿಭಾಗದವರು 854 ರೂ. ಪಾವತಿಸಬೇಕು. ಇದಕ್ಕಾಗಿ ಆನ್‌ಲೈನ್‌ ಪಾವತಿ ಮಾರ್ಗ ಅನುಸರಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 70,000-1,00,000 ರೂ. ಮಾಸಿಕ ವೇತನ ದೊರೆಯಲಿದೆ. ಒಂದು ವರ್ಷದ ಅವಧಿಗೆ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಆಯ್ಕೆ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ಹೆಸರು ನೊಂದಾಯಿಸಿ.
  • NLC Executive Apply Online ಆಯ್ಕೆ ಕ್ಲಿಕ್‌ ಮಾಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ಡಾಕ್ಯುಮೆಂಟ್‌, ಫೋಟೊಗಳನ್ನು ಸೂಚಿಸಿದ ಗಾತ್ರದಲ್ಲಿ ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ.
  • ಎಲ್ಲ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ. ಅಪ್ಲಿಕೇಷನ್‌ ನಂಬರ್‌ ಅಥವಾ ರಿಕ್ವೆಸ್ಟ್‌ ನಂಬರ್‌ ನೋಟ್‌ ಮಾಡಿಟ್ಟುಕೊಳ್ಳಿ.

ಅಪ್‌ಲೋಡ್‌ ಮಾಡಬೇಕಾದ ದಾಖಲೆಗಳು

  • ಫೋಟೊ ಹೈ ಕ್ವಾಲಿಟಿಯಲ್ಲಿದ್ದು, 2023ರ ಅಕ್ಟೋಬರ್‌ 1ರ ಬಳಿಕ ತೆಗೆದಿರಬೇಕು.
  • ಅತ್ಯುತ್ತಮ ಕ್ಲಾಲಿಟಿಯ ಅಭ್ಯರ್ಥಿಯ ಸಹಿಯ ಫೋಟೊ.
  • ಹುಟ್ಟಿದ ದಿನಾಂಕವನ್ನು ಖಾತರಿಪಡಿಸುವ ದಾಖಲೆ.
  • ಎಸ್ಸೆಸ್ಸೆಲ್ಸಿ / ಶೈಕ್ಷಣಿಕ ಪ್ರಮಾಣ ಪತ್ರ.
  • ಆಧಾರ್‌ ಕಾರ್ಡ್‌ನ ಪ್ರತಿ.
  • ಜಾತಿ ಸರ್ಟಿಫಿಕೆಟ್‌.
  • ಮಾಜಿ ಯೋಧರಾಗಿದ್ದರೆ ಅದರ ದಾಖಲೆ.
  • ಫೋಟೊ ಮತ್ತು ಸಹಿಯ ಫೋಟೊ JPEG ಫಾರ್ಮಾಟ್‌ನಲ್ಲಿರಬೇಕು.
  • ದಾಖಲೆಗಳು, ಡಾಕ್ಯುಮೆಂಟ್‌ JPEG ಅಥವಾ PDF ಫಾರ್ಮಾಟ್‌ನಲ್ಲಿರುವುದು ಕಡ್ಡಾಯ.
Continue Reading
Advertisement
Thailand Open 2024
ಬ್ಯಾಡ್ಮಿಂಟನ್1 min ago

Thailand Open 2024: ಥಾಯ್ಲೆಂಡ್‌ ಓಪನ್‌ ಗೆದ್ದ ಭಾರತದ ಚಿರಾಗ್‌-ಸಾತ್ವಿಕ್‌ ಜೋಡಿ

Prajwal Revanna Case
ಕರ್ನಾಟಕ6 mins ago

Prajwal Revanna Case: ಪೆನ್‌ಡ್ರೈವ್‌ ಕೇಸ್‌ಗೆ ಟ್ವಿಸ್ಟ್;‌ ದೇವರಾಜೇಗೌಡ, ಡಿಕೆಶಿ ಆಡಿಯೊ ಬಯಲು, ಇಲ್ಲಿದೆ ಸ್ಫೋಟಕ ಮಾಹಿತಿ

Money Guide
ಮನಿ-ಗೈಡ್15 mins ago

Money Guide: ಪ್ಯಾನ್‌ ಕಾರ್ಡ್‌ ಇಲ್ಲದೆಯೂ ಸಿಬಿಲ್‌ ಸ್ಕೋರ್‌ ಪರಿಶೀಲಿಸಬೇಕೆ? ಈ ಟಿಪ್ಸ್‌ ಫಾಲೋ ಮಾಡಿ

Road Accident
ಕ್ರೈಂ19 mins ago

Road Accident: ಬೆಂಗಳೂರು, ಗದಗದಲ್ಲಿ ಸರಣಿ ಅಪಘಾತ; ಗ್ಯಾಸ್ ಟ್ಯಾಂಕರ್ ಸ್ಫೋಟಕ್ಕೆ ಮನೆಗಳೇ ಭಸ್ಮ

Janhvi Kapoor felt sexualised at the age of 12
ಬಾಲಿವುಡ್25 mins ago

Janhvi Kapoor: 12ನೇ ವಯಸ್ಸಿನಲ್ಲಿಯೇ ಅಶ್ಲೀಲ ವೆಬ್‌ಸೈಟ್‌ನಲ್ಲಿ ನನ್ನ ಫೋಟೊ ಅಪ್‌ಲೋಡ್‌ ಆಗಿತ್ತು ಎಂದ ಶ್ರೀದೇವಿ ಮಗಳು!

Kundapur News
ಕರ್ನಾಟಕ32 mins ago

Kundapur News: ಅನಾರೋಗ್ಯದಿಂದ ತಾಯಿ ಸಾವು, ಶವದ ಜತೆ 4 ದಿನ ಕಳೆದ ಬುದ್ಧಿಮಾಂದ್ಯ ಪುತ್ರಿಯೂ ಮೃತ್ಯು!

RCB vs CSK
ಕ್ರಿಕೆಟ್45 mins ago

RCB vs CSK: ಧೋನಿ ವರ್ತನೆಗೆ ‘ಇಟ್‌ ಹರ್ಟ್ಸ್‌​’ ಎಂದ ಆರ್​ಸಿಬಿ ಅಭಿಮಾನಿಗಳು; ಧೋನಿ ಮಾಡಿದ ತಪ್ಪೇನು?

Congress Manifesto
ದೇಶ47 mins ago

Congress Manifesto: ಕಾಂಗ್ರೆಸ್‌ ಪ್ರಣಾಳಿಕೆ ಬಗ್ಗೆ ಅಪಪ್ರಚಾರ; ವ್ಯಕ್ತಿ ಅರೆಸ್ಟ್‌-ಬಿಜೆಪಿ ಕಿಡಿ

Prajwal Revanna Case
ಕರ್ನಾಟಕ58 mins ago

Prajwal Revanna Case: ಡಿಕೆಶಿ 100 ಕೋಟಿ ರೂ. ಆಫರ್;‌ ಬೆಂಕಿ ಇಲ್ಲದೆ ಹೊಗೆಯಾಡಲ್ಲ ಎಂದ ಆರ್.‌ ಅಶೋಕ್

Karnataka Rain
ಮಳೆ1 hour ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 hour ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 hours ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ3 hours ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ2 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ2 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ3 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು3 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ4 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

ಟ್ರೆಂಡಿಂಗ್‌