Ratha Saptami 2023 : ನಮಸ್ಕಾರ ಪ್ರಿಯ ಸೂರ್ಯನನ್ನು ನಮಸ್ಕರಿಸುವ ಹಬ್ಬ ರಥಸಪ್ತಮಿ - Vistara News

ಧಾರ್ಮಿಕ

Ratha Saptami 2023 : ನಮಸ್ಕಾರ ಪ್ರಿಯ ಸೂರ್ಯನನ್ನು ನಮಸ್ಕರಿಸುವ ಹಬ್ಬ ರಥಸಪ್ತಮಿ

ನಮಸ್ಕಾರ ಪ್ರಿಯೋ ಭಾನುಃ ಎಂದು ಶ್ಲೋಕವೊಂದರಲ್ಲಿ ಹೇಳಲಾಗಿದೆ. ಸೂರ್ಯೋಪಾಸನೆ ದಿನವಾದ ರಥಸಪ್ತಮಿಯ ದಿನವಾದ (Ratha Saptami 2023) ಇಂದು ಸೂರ್ಯ ದೇವನ ಮಹತ್ಮೆಯನ್ನು ಅರಿಯೋಣ, ನಮಿಸೋಣ.

VISTARANEWS.COM


on

Ratha Saptami 2023
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಸಪ್ತಾಶ್ವ ರಥಮಾರುಡಾಂ ಪ್ರಚಂಡಮ್ ಕಶ್ಯಪಾತ್ಯಜಂl
ಶ್ವೇತ ಪದ್ಮದರದೇವಂ ತಮಂ ಸೂರ್ಯಮ್ ಪ್ರಣಮಾಮ್ಯಹಮ್ ll

(ಬಿಳಿ ಕಮಲವನ್ನು ಕೈಯಲ್ಲಿ ಹಿಡಿದವನೂ, ಪ್ರಚಂಡ ತೇಜಸ್ವಿಯೂ ಆದ ಎಲೈ ಕಶ್ಯಪ ಋಷಿ ಕುಮಾರನೇ, ಬಿಳಿಯ ಬಣ್ಣದ ಏಳು ಕುದುರೆಗಳಿಂದ ಎಳೆಯಲ್ಪಡುವ ರಥದ ಮೇಲೆ, ಆಸೀನನಾದ ಸೂರ್ಯ ಭಗವಾನನೇ ನಿನಗೆ ಪ್ರಣಾಮಗಳು).

ಹಿಂದೂ ಧರ್ಮದಲ್ಲಿ ಕೋಟಿ ಕೋಟಿ ದೇವತೆಗಳು ಇದ್ದರೂ ನಮ್ಮ ಕಣ್ಣಿಗೆ ಕಾಣುವ ದೇವರೆಂದರೇ ಅದು ಸೂರ್ಯದೇವನೇ ಆಗಿದ್ದಾನೆ. ಈತನನ್ನು ಪ್ರತಿದಿನವು ನಾವು ನೋಡಲೇಬೇಕು ಮತ್ತು ಪೂಜಿಸಲೇ ಬೇಕು. ಪ್ರತಿದಿನವು ಈತನಿಂದಲೇ ಆರಂಭ, ಈತನಿಂದಲೇ ಅಂತ್ಯ.

ಸೂರ್ಯನನ್ನು ವೈವಸ್ವತ, ರವಿ, ಆದಿತ್ಯ, ಪುಷ, ದಿವಾಕರ, ಸವಿತಾ, ಅರ್ಕ, ಮಿತ್ರ, ಭಾನು, ಭಾಸ್ಕರ ಮತ್ತು ಗ್ರಹಪತಿ ಅಥವಾ ಗ್ರಹರಾಜ ಎಂದೂ ಕೂಡ ಕರೆಯಲಾಗುತ್ತದೆ. ಈ ರೀತಿಯಿಂದ ಕರೆಸಿಕೊಳ್ಳುವ ಸೂರ್ಯ ದೇವನಿಗೆ ಅವನದ್ದೇ ಮಂತ್ರಗಳ ಪಠಣ ಮಾಡಿ ಅವನನ್ನು ಪೂಜಿಸಿದರೆ ನಮಗೆ ಒಳ್ಳೆಯ ಆಯಸ್ಸು ಮತ್ತು ಜೀವನ ಪ್ರಾಪ್ತಿಯಾಗುತ್ತದೆ ಎಂಬುದನ್ನು ನಮ್ಮ ಋಷಿಮುನಿಗಳು ಸಾರಿ ಹೋಗಿದ್ದಾರೆ.

ಸನಾತನ ಸಂಪ್ರದಾಯದಲ್ಲಿ ಪೂಜಿಸಲ್ಪಡುವ ಪ್ರಮುಖ ದೇವರಾದ ಸೂರ್ಯನು ಕತ್ತಲನ್ನು ನಿವಾರಿಸಿ ಬೆಳಕನ್ನು ಹೊರಸೂಸುವ ದೇವ. ಇದರರ್ಥ ಜಗತ್ತಿನಲ್ಲಿ ಅಜ್ಞಾನವನ್ನು ತೊಡೆದು ಹಾಕಿ ಸುಜ್ಞಾನವು ಬೆಳಗುವಂತೆ ಮಾಡುವ ಈತನ ಕಿರಣಗಳಿಗೆ ಜೀವರಾಶಿಯನ್ನು ಸಂರಕ್ಷಿಸುವ, ಸಂಹಾರ ಮಾಡುವ ಎರಡೂ ಗುಣವೂ ಇದೆ. ಪ್ರತಿದಿನವು ಬೆಳಗಿನಿಂದ ಸಂಜೆಯವರೆಗೆ ಒಳಿತನ್ನು ಮಾಡುವ ಸೂರ್ಯದೇವನನ್ನು ಪೂಜಿಸಿದರೆ ಪ್ರತಿನಿತ್ಯದ ಕಷ್ಟವು ದೂರಾಗುತ್ತದೆ.

ಜಗತ್ತಿಗೆ ಬೆಳಕನ್ನು ನೀಡುವ ಪ್ರತ್ಯಕ್ಷ ದೈವ ಸೂರ್ಯನನ್ನು ಪೂಜಿಸುವುದರಿಂದ ನಮ್ಮ ಜೀವನದಲ್ಲೂ ಸಕಾರಾತ್ಮಕ, ಸಂತೋಷದ, ಯಶಸ್ಸು ಮತ್ತು ಸಮೃದ್ಧಿಯ ಬೆಳಕು ಮೂಡುವುದು. ‌ಸೂರ್ಯ ನಮ್ಮ ಆತ್ಮವನ್ನು ಪ್ರತಿನಿಧಿಸುತ್ತಾನೆ. ಜಗತ್ತಿಗೆ ಬೆಳಕನ್ನು ನೀಡುವ ಸೂರ್ಯ ದೇವನಿಗೆ ವಿಶೇಷ ಪೂಜೆ ಪುನಸ್ಕಾರ ಮಾಡುವುದರಿಂದ ಬದುಕಲ್ಲಿ ಸಾಕಷ್ಟು ಬದಲಾವಣೆ ಹಾಗೂ ಧನಾತ್ಮಕ ರೀತಿಯಲ್ಲಿ ಯಶಸ್ಸು ದೊರೆಯುವುದು.

ಹೊಸ ರಥವನ್ನೇರುವ ಸೂರ್ಯ

ಯುಗಾದಿ ಹೊಸತನವನ್ನು ಹೊತ್ತು ತಂದರೆ, ಅದಕ್ಕೂ ಮುನ್ನ ಬರುವ ರಥಸಪ್ತಮಿ ಹಳತರ ಜಾಗದಲ್ಲಿ ಹೊಸತನ್ನು ತಂದಿಟ್ಟು ಬದುಕನ್ನು ಆನಂದಮಯವಾಗಿಸಿಕೊಳ್ಳಲು ಪ್ರೇರೇಪಿಸುತ್ತದೆ. ಮಾಘ ಮಾಸದ ಶುಕ್ಲ ಪಕ್ಷದ ಸಪ್ತಮಿ ತಿಥಿ.
ಈ ದಿನ ಸೂರ್ಯ ಹಳೆಯ ರಥವನ್ನು ಬಿಟ್ಟು ಹೊಸ ರಥ ಹತ್ತುತ್ತಾನೆ. ಅಲ್ಲದೆ ಈ ದಿನವನ್ನು ಸೂರ್ಯನ ಜನ್ಮದಿನವೆಂದೂ ಪ್ರಾಜ್ಞರು ಹೇಳುತ್ತಾರೆ.

ಯಾವುದೇ ವಸ್ತು ಹಳೆಯದಾದ ಮಾತ್ರಕ್ಕೆ ಬದುಕು ಹಳತಾಗದು. ಅದು ನಿತ್ಯ ನವೀನ. ಹೀಗಾಗಿಯೇ ದೇಹ ಹಳತಾದಂತೆ ಹಳೆಯ ಬಟ್ಟೆ ಕಳಚಿ ಹೊಸದನ್ನು ಧರಿಸಿದಂತೆ ಅದನ್ನು ವಿಸರ್ಜಿಸಿ ಆತ್ಮ ಹೊಸತನ್ನು ಪಡೆಯುತ್ತದೆ ಎಂಬ ನಂಬಿಕೆಯಿದೆ. ಸೂರ್ಯನೂ ಹಾಗೆಯೇ, ಪ್ರತಿವರ್ಷ ರಥ ಬದಲಿಸಿ ತನ್ನ ಕಾರ್ಯವನ್ನು ಚುರುಕುಗೊಳಿಸುತ್ತಾನೆ. ತನ್ಮೂಲಕ ಭುವಿಯ ನಿವಾಸಿಗಳಿಗೆ ಚೈತನ್ಯ ನೀಡುತ್ತಾನೆ. ಈ ಹಿನ್ನೆಲೆಯಲ್ಲಿ ಆತನನ್ನು ಗೌರವಿಸುವ ಸಲುವಾಗಿ ರಥಸಪ್ತಮಿ ಆಚರಿಸಲಾಗುತ್ತಿದೆ.

ಸಪ್ತಮಿ ಪೌರಾಣಿಕ ಹಿನ್ನೆಲೆ ಏನು?

ದ್ವಾಪರ ಯುಗದಲ್ಲಿ ಶ್ರೀ ಕೃಷ್ಣನು ಧರ್ಮರಾಜನಿಗೆ ರಥಸಪ್ತಮಿಯ ಬಗ್ಗೆ ಹೇಳಿದ ಕಥೆಯಿದೆ. ಈ ಕಥೆಯ ಪ್ರಕಾರ, ಸಾವಿರಾರು ವರ್ಷಗಳ ಹಿಂದೆ ಒಂದು ರಾಜ್ಯವನ್ನು ಯಶೋವರ್ಮನೆಂಬ ರಾಜನು ಆಳುತ್ತಿದ್ದನು. ಆ ರಾಜ್ಯದ ಹೊಣೆಗಾರಿಕೆಯನ್ನು ನಿರಂತರವಾಗಿ ನಿರ್ವಹಿಸಲು, ತನಗೆ ಒಬ್ಬ ಮಗನಿಲ್ಲವೆಂಬ ಕೊರಗು ಸದಾ ರಾಜನನ್ನು ಕೊರೆಯುತ್ತಿತ್ತು. ಋಷಿಮುನಿಯ ಸಲಹೆಯ ಮೇರೆಗೆ, ದೇವರನ್ನು ಕುರಿತು ಅನೇಕ ವರ್ಷಗಳು ರಾಜನು ಘೋರವಾದ ತಪಸ್ಸಿನಲ್ಲಿ ತೊಡಗಿದನು. ರಾಜನ ತಪಸ್ಸಿಗೆ ಮೆಚ್ಚಿ ಭಗವಂತನು ಪ್ರತ್ಯಕ್ಷನಾಗಿ, ರಾಜನ ಆಸೆಯಂತೆ ಒಬ್ಬ ಪುತ್ರನನ್ನು ದೇವರು ಕರುಣಿಸಿದನು.

ದಿನಗಳೆದಂತೆ ಆ ಪುತ್ರನು ನಿತ್ಯ ರೋಗಿಯಾಗಿ ಅಲ್ಪಾಯುಷ್ಯವುಳ್ಳವನಾಗುತ್ತಾನೆ. ಮಗ ಹುಟ್ಟಿನಿಂದಲೇ ರೋಗಿಷ್ಠನಾಗಿದ್ದ. ತನ್ನ ಮಗನು ಬೇಗ ಮರಣ ಹೊಂದುವನೆಂದು ರಾಜನು ಪುನಃ ಚಿಂತಾಕ್ರಾಂತನಾದನು. ತನ್ನ ಸಮಸ್ಯೆಯನ್ನು ಯಾರೂ ಬಗೆಹರಿಸದಾದಾರು. ಒಂದು ದಿನ ಋಷಿಯೊಬ್ಬನು ರಥಸಪ್ತಮಿಯ ಆಚರಣೆಯ ಮಹಿಮೆಯನ್ನು ರಾಜನಿಗೆ ಹೇಳಿ ತನ್ನ ಮಗನು ರಥ ಸಪ್ತಮಿ ವ್ರತವನ್ನು ಭಕ್ತಿಯಿಂದ ಮಾಡಿ ಸೂರ್ಯನನ್ನು ಒಲಿಸಿಕೊಂಡುದುದೇ ಆದರೆ, ಆರೋಗ್ಯವಂತನಾಗುವನೆಂದು ಮತ್ತು ಧೀರ್ಘಾಯುಷ್ಯ ಹೊಂದುವನೆಂದು ಹೇಳುವನು.

ಋಷಿಯ ಅಮೃತವಾಣಿಯನ್ನು ಕೇಳಿದ ಮೇರೆಗೆ, ರಥ ಸಪ್ತಮಿ ವ್ರತವನ್ನು ಮಾಡುವಂತೆ ಮಗನಿಗೆ ಪ್ರೇರೇಪಿಸುವನು. ಭಕ್ತಿಯಿಂದ ಬಾಲಕನು ವಿಧಿವತ್ತಾಗಿ, ರಥ ಸಪ್ತಮಿಯನ್ನು ಆಚರಣೆ ಮಾಡಿ ಸೂರ್ಯ ದೇವನಿಗೆ ಅರ್ಘ್ಯ ನೀಡಿ ಸಂತೃಪ್ತಿ ಮಾಡುವನು. ಈ ಪೂಜೆಯ ಫಲವಾಗಿ, ಬಾಲಕನು ಅರೋಗ್ಯ ಮತ್ತು ದೀರ್ಘಾಯುಷ್ಯವನ್ನು ಪಡೆದು ಅನೇಕ ವರ್ಷಗಳು ಪುತ್ರ ಪೌತ್ರರನ್ನು ಪಡೆದು ರಾಜ್ಯವನ್ನು ಸುಖವಾಗಿ ಅನೇಕ ವರ್ಷಗಳ ಕಾಲ ಆಳುವವನಾಗುತ್ತಾನೆ.

ಅಂದಿನಿಂದ ಮಾಘ ಮಾಸದ ಶುಕ್ಲ ಪಕ್ಷ ಸಪ್ತಮಿಯಂದು ಜನರು ಈ ವ್ರತವನ್ನು ಆಚರಣೆ ಮಾಡಲು
ಪ್ರಾರಂಭಿಸಿ,ಇಂದಿನವರೆಗೂ ಮುಂದುವರಿಸಿಕೊಂಡು ಬಂದು ಸೂರ್ಯ ಭಾಗವಾನನ ಕೃಪೆಗೆ ಪಾತ್ರರಾಗಿರುತ್ತಾರೆ.

ಅಲ್ಲದೆ ಪಾಂಡವರು ವನವಾಸದ ಅವಧಿಯಲ್ಲಿ ಶ್ರೀಕೃಷ್ಣನ ಆದೇಶದಂತೆ ಸೂರ್ಯಾರಾಧನೆ ಮಾಡಿ ಆತನಿಂದ ಅಕ್ಷಯ ಪಾತ್ರೆ ಪಡೆದಿದ್ದರು. ರಾವಣನ್ನು ಗೆಲ್ಲಬೇಕಾದರೆ ಶ್ರೀರಾಮನೂ ಕೂಡ ಅಗಸ್ತ್ಯರ ಉಪದೇಶದಂತೆ ಆದಿತ್ಯ ಹೃದಯದ ಮೂಲಕ ಸೂರ್ಯನ ಆರಾಧನೆ ಮಾಡಿದನೆಂದು ರಾಮಾಯಣದಲ್ಲಿ ಹೇಳಿದೆ. ಸೂರ್ಯಾರಾಧನೆ ಮಾಡಿ, ಚಿನ್ನ ನೀಡುವ ಸ್ಯಮಂತಕಮಣಿ ಪಡೆದ ಸತ್ರಾಜಿತನ ಕಥೆ ಹರಿವಂಶದಲ್ಲಿ ಬಂದಿದೆ.

ಮಯೂರನೆಂಬ ಕವಿ ಸೂರ್ಯಶತಕವೆಂಬ ಗ್ರಂಥ ಬರೆದು ಕಳೆದುಕೊಂಡ ಕಣ್ಣನ್ನು ಮತ್ತೆ ಪಡೆದನೆಂದು ಹೇಳುತ್ತಾರೆ.
ಶ್ರೀರಾಮ ಸೂರ್ಯವಂಶದವನಾದರೆ ಕರ್ಣ, ಸುಗ್ರೀವ, ನವಗ್ರಹಗಳಲ್ಲಿ ಶನಿ ಹಾಗೂ ಯಮ ಸೂರ್ಯನ ಪುತ್ರರಾಗಿದ್ದಾರೆ.

ವೈದಿಕ ಧರ್ಮದಲ್ಲಿ ಸೂರ್ಯೋಪಾಸನೆ

ಪ್ರಾಚೀನ ವೈದಿಕ ಧರ್ಮದಲ್ಲಿ ಸೂರ್ಯನಿಗೆ ಅತ್ಯಂತ ಪ್ರಾಮುಖ್ಯತೆ ಇತ್ತು. ಆತನ ಆರಾಧನೆಯಿಂದಲೇ ಸೌರ ಪಂಥ ಹುಟ್ಟಿದ್ದು. ಕಾಲ ಗಣನೆಯಲ್ಲಿ ಸೌರಮಾನ ಎಣಿಕೆ ಇಂದಿಗೂ ಇದೆ. ಇನ್ನು, ‘ಭೂರ್ಭುವಸ್ವಃ’. . . ॥ ಎಂಬ ವ್ಯಾಹೃತಿಯ ಮಂತ್ರದಲ್ಲಿನ ಪ್ರತಿಶಬ್ದವು ಸೂರ್ಯನ ಸಾಮರ್ಥ್ಯಗಳನ್ನು ಕೊಂಡಾಡುತ್ತದೆ.

ನಮ್ಮ ಋಗ್ವೇದ, ಯಜುರ್ವೇದ ಸಾಮವೇದಗಳು ಸೂರ್ಯನಿಂದ ಆಗುವ ಅನೇಕ ವಿವಿಧ ಉಪಯೋಗಗಳನ್ನು ಮಂತ್ರಗಳಲ್ಲಿ ನಮಗೆ ಕೊಟ್ಟರೂ ಸಹ ಅಥರ್ವವೇದ ಸೂರ್ಯನ ಕಿರಣಗಳ ಉಪಯೋಗದ ಕುರಿತಾಗಿಯೇ ತಿಳಿಸಿಕೊಡುತ್ತದೆ. ಅಥರ್ವವೇದದ ಪ್ರಥಮ ಕಾಂಡದ ೨೨ ನೇ ಸೂಕ್ತ ದ್ರಷ್ಟಾರನಾದ ಋಷಿ ಬ್ರಹ್ಮಾ ಎನ್ನುವವರು ಸೂರ್ಯ ಹರಿಮಾ ಮತ್ತು ಹೃದ್ರೋಗದ ಕುರಿತಾಗಿ ಸ್ತುತಿಸುತ್ತಾರೆ.
“ಅನು ಸೂರ್ಯಮುದಯತಾಂ ಹೃದ್ದ್ಯೋತೋ ಹರಿಮಾ ಚ ತೇ..।ʼʼ ಎಂದು.

ಯಜುರ್ವೇದದಲ್ಲಿ ಹೀಗೆ ಸೂರ್ಯನ ಕುರಿತಾಗಿ ಹೀಗೆ ಹೇಳಲಾಗಿದೆ.
ಹಂಸಃ ಶುಚಿಷದ್ವಸುರನ್ತರಿಕ್ಷಸದ್ಧೋತಾ ವೇದಿಷದತಿಥಿರ್ದುರೋಣಸತ್ ।
ನೃಷದ್ವರಸದೃತಸದ್ವ್ಯೋಮಸದಬ್ಜಾ ಗೋಜಾ ಋತಜಾ ಅದ್ರಿಜಾ ಋತಂ ಬೃಹತ್ ॥ ೬ ॥

Ratha Saptami 2023

ಇದರ ಒಂದು ಅರ್ಥವೇನೆಂದರೆ; ಸದಾಕಾಲ ಸಂಚಾರ ಮಾಡುತ್ತಿರುವವನು ,ಜ್ಯೋತಿರ್ಮಯವಾದ ಸೂರ್ಯ ಮಂಡಲದಲ್ಲಿರುವವನು, ವಾಯುವೆಂಬ ಸೂತ್ರಾತ್ಮನಾಗಿರುವವನು, ಅಂತರಿಕ್ಷದಲ್ಲಿ ಸಂಚರಿಸುವ ಸಕಲ ಪ್ರಾಣಿಗಲ್ಲಿರುವವನು, ಹೋತೃವಾಗಿ ಸಕಲ ಯಾಗಾದಿಗಳಲ್ಲಿರುವವನು, ಪ್ರಧಾನ ಯಜ್ಞ ಯಾಗಾದಿಗಳ ವೇದಿಕೆಗಳಲ್ಲಿರುವವನು, ಎಲ್ಲರಿಗೂ ಬೆಳಕನಿತ್ತು ಅತಿಥಿಯಂತೆ ಒಂದು ಕ್ಷಣವೂ ನಿಲ್ಲದೆ ಮುಂದೆ ಹೊರಟು ಹೋಗುವವನು, ಕಲಶ(ದುರೋಣ) ದಲ್ಲಿರುವವನು, ಸಕಲ ಮನುಷ್ಯರಲ್ಲೂ(ನೃಷತ್) ಇರುವವನು, ಪುಣ್ಯಕ್ಷೇತ್ರದಲ್ಲಿ ಪೂಜಿಸಲ್ಪಡುವ ವರಸದನು, ಕರ್ಮ ಗಳ ಫಲ(ಋತ)ಕೊಡುವವನೂ, ನಕ್ಷತ್ರ, ಗ್ರಹ ರೂಪದಲ್ಲಿರುವ ವ್ಯೋಮಸದನು, ನೀರಿನಲ್ಲಿ ಹುಟ್ಟಿರುವ ಸಕಲ ಚರಾಚರಗಳಲ್ಲಿರುವ ಅಬ್ಜನು (ಅಪ್+ಜ),ಗೋವಿನ ಉತ್ಪತ್ತಿಗಳಲ್ಲಿರುವವ ಗೋಜ ನು, ಬೆಟ್ಟ ಗುಡ್ಡಗಳ ಮೇಳೆ ಹುಟ್ಟುವ ಜೀವರಾಶಿಗಳ ಒಡೆಯ ಅದ್ರಿಜನೂ, ಕಾಲ ಸ್ವರೂಪದ ಋತಜನು, ಸತ್ಯಾತ್ಮದ ಬೃಹತ್ಸ್ವರೂಪನೂ ಆಗಿರುವ ಹೇ ಆದಿತ್ಯನೇ ನಿನಗೆ ನಮನವು ಎಂದು.

ಸೂರ್ಯನಿಂದ ರೋಗ ನಿವಾರಣೆ

ಉತ್ತಮ ಆಹಾರಕ್ಕಾಗಿ, ರೋಗ ನಿವಾರಣೆಗಾಗಿ ಸೂರ್ಯೋಪಾಸನೆ ಮಾಡಬೇಕೆಂದು ಸ್ಕಂದ, ವರಾಹ ಪುರಾಣಗಳಲ್ಲಿ ಹೇಳಲಾಗಿದೆ. ಸೂರ್ಯನಿಂದ ಭೂಮಿಗೆ ಬರುವ ಕಿರಣಗಳು ನಮಗೆ ಒಂದೇ ಬಣ್ಣದಿಂದ ಕಾಣಿಸಿದರೂ ಅದು ಏಳು ಪ್ರತ್ಯೇಕ ಬಣ್ಣದ ಕಿರಣಗಳು ಒಂದಾಗಿ ರೂಪುಗೊಂಡಿದ್ದಾಗಿವೆ. ಇದನ್ನು ಔಷಧೀಯವಾಗಿ ಉಪಯೋಗಿಸುವ ಕಲೆ ಪ್ರಾಚೀನ ಕಾಲದ ಜನರಿಗೆ ಗೊತ್ತಿತ್ತು.

ಕುಷ್ಟ ರೋಗಕ್ಕೆ ಸೂರ್ಯನ ಕಿರಣಗಳನ್ನು ಹಾಯಿಸಿ ಚಿಕಿತ್ಸೆ ನೀಡಿ ಗುಣಪಡಿಸಲಾಗುತ್ತಿತ್ತು. ಗಂಟಲುವಾಳ, ಗಳಗಂಡರೋಗ ಅಥವಾ ಗಾಯಿಟರ್ ರೋಗವನ್ನು ಚಂದ್ರನ ಕಿರಣಗಳಿಂದ ಗುಣಪಡಿಸುತ್ತಿದ್ದರು. ಸೂರ್ಯನ ಕಿರಣಗಳಿಲ್ಲದೇ ಮನುಷ್ಯ ಜೀವಿಸುವುದು ಸಾದ್ಯವಿರದ ಮಾತು.

ಅಥರ್ವವೇದದ ಪ್ರಥಮ ಕಾಂಡದ ೨೨ನೇ ಸೂಕ್ತ ದ್ರಷ್ಟಾರ ಋಷಿ ಬ್ರಹ್ಮಾ ಎನ್ನುವವರು ಸೂರ್ಯ ಹರಿಮಾ ಮತ್ತು ಹೃದ್ರೋಗವನ್ನು ಸ್ತುತಿಸುತ್ತಾರೆ. “ಅನು ಸೂರ್ಯಮುದಯತಾಂ ಹೃದ್ದ್ಯೋತೋ ಹರಿಮಾ ಚ ತೇʼʼ ಎನ್ನುವಲ್ಲಿ ರೋಗಗ್ರಸ್ತ ಮನುಷ್ಯನ ಕುರಿತಾಗಿ ಹೇಳುತ್ತಾ, ಹೃದ್ರೋಗ ದೇಹವನ್ನೇ ಸುಡುವಂತೆ ಮಾಡುತ್ತದೆ, ಕಾಮಾಲೆ ಮತ್ತು ರಕ್ತಹೀನತೆ ಸಹ ಅದೇ ರೀತಿ ತೊಂದರೆ ಕೊಡುತ್ತವೆ. ಆದರೆ, ನಿಮ್ಮ ದೇಹವನ್ನು ಕೆಂಬಣ್ಣದ ಹಸುವಿನ ಕಿರಣಗಳಿಂದ ಮತ್ತು ಸೂರ್ಯೋದಯದ ಕಿರಣಗಳನ್ನು ದೆಹಕ್ಕೆ ಹಾಯಿಸುವುದರಿಂದ ರೋಗವನ್ನು ತಡೆಗಟ್ಟ ಬಹುದು ಎನ್ನುವುದನ್ನು ಹೇಳಲಾಗಿದೆ.

ಸೂರ್ಯನ ಕಿರಣಗಳಲ್ಲಿನ ಲೋಹಿತವರ್ಣದ ಕಿರಣಗಳನ್ನು ದೇಹಕ್ಕೆ ಹಾಯಿಸಿ ಪಾಂಡುರೋಗವನ್ನು ಗುಣಪಡಿಸಬಹುದು, ಇದೇ ಸೂಕ್ತದಲ್ಲಿ ಮುಂದೆ ಕೆಂಪುಬಣ್ಣದ ಕಿರಣಗಳನ್ನು ಮತ್ತು ಅವುಗಳ ಪ್ರಬೇಧಗಳನ್ನು ಬೇರ್ಪಡಿಸಿ ದೇಹಕ್ಕೆ ಹಾಯಿಸುವುದರಿಂದ ಆಯುಷ್ಯ ವೃದ್ಧಿಗೊಳಿಸಬಹುದು ಎನ್ನುವುದು ಸಿಗುತ್ತದೆ. ಸೂರ್ಯನ ಕಿರಣಗಳಿಂದ ಮನುಷ್ಯನ ದೇಹದಲ್ಲಿರುವ ವಿಷಕಾರಕ ಕೀಟಾಣುಗಳನ್ನು ನಾಶಪಡಿಸಬಹುದು ಎನ್ನುವುದು ಸೂಕ್ತದ್ರಷ್ಟಾರ ಋಷಿಯ ಸ್ತುತಿಯಿಂದ ತಿಳಿದುಬರುತ್ತದೆ.

ಸೂರ್ಯನ ರಥಕ್ಕೆ ಏಳು ಕುದುರೆ!
ರಥ ಸಪ್ತಮಿಯ ದಿನ ಸೂರ್ಯನ ರಥದ ಪಥ ಬದಲಾಗುತ್ತದೆ. ಸೂರ್ಯ ಹೊಸ ರಥವನ್ನೇರಿ ಹೊರಡುತ್ತಾನೆ ಎನ್ನುತ್ತೇವೆ. ನಿಮಗೆ ಗೊತ್ತೇ ಸೂರ್ಯನ ರಥಕ್ಕೆ ಏಳು ಕುದುರೆಗಳಿರುತ್ತವೆ. ಅವುಗಳ ಹೆಸರು ಇಂತಿದೆ; ಗಾಯತ್ರಿ, ಬೃಹತೀ, ಉಷ್ಣಿಕ್‌, ಜಗತೀ, ತ್ರಿಷ್ಟುಪ್‌, ಅನುಷ್ಟುಪ್‌ ಮತ್ತು ಪಂಕ್ತಿ ಎಂದು.

ಅಥರ್ವವೇದದ ಭೈಷಜ್ಯ ಸೂಕ್ತದ ದ್ರಷ್ಟಾರ ಋಷಿ ಅಂಗಿರಾ ಎನ್ನುವವರು ಸೂರ್ಯ ಚಂದ್ರ ರೋಹಿಣೀ ರಾಮಾಯಣೀಯನ್ನು ದೇವತೆಗಳನ್ನಾಗಿ ಸ್ತುತಿಸುವಲ್ಲಿ;
ಸೂರ್ಯ ಕೃಣೋತು ಬೇಷಜಂ ಚಂದ್ರಮಾ ವೋಪೋಚ್ಛತು..॥
ಎನ್ನುವಲ್ಲಿ ಸೂರ್ಯನು ಗಾಯಿಟರ್ (ಗಳಗಂಡ) ರೋಗವನ್ನು ಕಡಿಮೆ ಮಾಡಿದರೆ, ಚಂದ್ರನು ಆ ರೋಗವನ್ನೇ ಓಡಿಸುತ್ತಾನೆ ಎನ್ನುವಲ್ಲಿ ಸೂರ್ಯ ಮತ್ತು ಚಂದ್ರನ ಕಿರಣಗಳು ಗಳಗಂಡ ರೋಗಕ್ಕೂ ಔಷಧೀಯ ರೂಪವಾಗಿ ಪರಿಹಾರವನ್ನು ಕೊಡಬಲ್ಲವು ಎನ್ನುವುದು ತಿಳಿಯುತ್ತದೆ. ಗಳಗಂಡದ ಮೂಲ ಬೇರನ್ನೇ ಈ ಕಿರಣಗಳು ನಾಶಮಾಡಬಲ್ಲವು ಎನ್ನುವುದು ಮುಂದಿನ ಮಂತ್ರ ಹೇಳುತ್ತದೆ. ಹೀಗೇ ಪ್ರಕೃತಿಯಿಂದ ಸ್ವಾಭಾವಿಕವಾಗಿ ಸಿಗುವ ಸೂರ್ಯನ ಕಿರಣಗಳಿಂದ ಅನೇಕ ವಿಧದ ರೋಗಗಳನ್ನು ಸಮೂಲವಾಗಿ ನಿವಾರಿಸಬಹುದು ಎನ್ನುವುದು ಅಥರ್ವವೇದದ ಅನೇಕ ಸೂಕ್ತಗಳಿಂದ ತಿಳಿದು ಬರುತ್ತವೆ.

ಅದರಲ್ಲೂ ಏಳು ಕಿರಣಗಳನ್ನು ಬೇರ್ಪಡಿಸಿಕೊಂಡಾಗ ಪ್ರತ್ಯೇಕವಾಗಿ ಬೇರೆ ಬೇರೆ ರೋಗವನ್ನು ಗುಣಪಡಿಸಬಹುದು ಎನ್ನುವಲ್ಲಿನ ಸೂಕ್ಷ್ಮವನ್ನು ಗಮನಿಸಿದರೆ ಅದ್ಯಾವುದೋ ಕಾಲದಲ್ಲಿ ಸೂರ್ಯನಿಂದ ಸಿಗುವ ಕಿರಣಗಳಲ್ಲಿನ ಬಣ್ಣಗಳನ್ನು ಗುರುತಿಸಿ ಬೇರ್ಪಡಿಸುವ ವಿಧಾನ ತಿಳಿದಿರಬಹುದು ಎನ್ನಿಸುತ್ತದೆ.

ಸೂರ್ಯ ಆರೋಗ್ಯದಾಯಿ ವೈಜ್ಞಾನಿಕವಾಗಿಯಯೂ ಇದು ಸಾಬೀತಾಗಿದೆ. ಹಸುಗೂಸಿನ ಕಣ್ಣುಗಳು ಸಾಮಾನ್ಯವಾಗಿ ಹಳದಿ ಬಣ್ಣಕ್ಕೆ ತಿರುಗಿದ ಸಂದರ್ಭದಲ್ಲಿ ಪ್ರತಿದಿನ ಎಳೆಬಿಸಿಲಿಗೆ ಮಗುವನ್ನು ಮಲಗಿಸುವಂತೆ ವೈದ್ಯರು ಸಲಹೆ ನೀಡುತ್ತಾರೆ. ಚಂದ್ರನ ಬೆಳಕಿನಲ್ಲಿ ವಿಟಮಿನ್ ‘ಬಿ 12’ ಇದ್ದರೆ, ಸೂರ್ಯನ ಕಿರಣಗಳಲ್ಲಿ ವಿಟಮಿನ್ ‘ಡಿ’ ಹೇರಳವಾಗಿದೆ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯ. ಹೀಗಾಗಿಯೇ ಪ್ರತ್ಯಕ್ಷವಾಗಿ ಕಾಣುವ ದೈವಸ್ವರೂಪಿ ಸೂರ್ಯನ ಆರಾಧನೆಗೆ ವಿಗ್ರಹಾರಾಧನೆ ಬಳಕೆಗೆ ಬರುವ ಮುಂಚಿನಿಂದಲೂ ಚಾಲ್ತಿಯಲ್ಲಿತ್ತು.

ಜ್ಯೋತಿಷ್ಯ ಶಾಸ್ತ್ರದಲ್ಲಿ ಸೂರ್ಯ

ನವಗ್ರಹಗಳಿಗೆ ಸೂರ್ಯನೆ ಅಧಿಪತಿ. ಸೌರಕೇಂದ್ರ ವ್ಯವಸ್ಥೆಯನ್ನು ವಿಜ್ಞಾನಿಗಳು ಪತ್ತೆ ಮಾಡುವ ಮೊದಲೇ, ಹಿಂದೂ ಪುರಾಣಗಳಲ್ಲಿ ಅದು ಉಲ್ಲೇಖವಾಗಿತ್ತು. ಅದಕ್ಕೆಂದೇ ನಾವು ನವಗ್ರಹಗಳಿಗೆ ಸೂರ್ಯನೇ ಅಧಿಪತಿ ಎಂದು ಸೂರ್ಯನ ಪೂಜೆಯನ್ನು ಎಂದಿನಿಂದಲೋ ಮಾಡಿಕೊಂಡು ಬಂದಿದ್ದೆವು. ಸಮಸ್ತ ವಿಶ್ವಕ್ಕೂ ಸೂರ್ಯನೇ ಒಡೆಯ ಎಂಬುದನ್ನು ಕಂಡುಕೊಂಡ ನಮ್ಮ ಋಷಿಮುನಿಗಳು ವಿಶೇಷವಾಗಿ ರಥಸಪ್ತಮಿಯಂದು ಸೂರ್ಯನನ್ನು ಪೂಜಿಸುತ್ತ ಬಂದಿದ್ದಾರೆ.

ರವಿಯು ಜಾತಕದಲ್ಲಿ ಸಿಂಹ ರಾಶಿಯ ಒಡೆಯನಾಗಿದ್ದು, ಅವನು ನೇತ್ರಕಾರಕ,ಅರೋಗ್ಯಕಾರಕ, ಮತ್ತು ಪಿತೃಕಾರಕನಾಗಿ ತಂದೆಯ ಆಯುಷ್ಯ ವೃದ್ಧಿಗಾಗಿ, ಕಣ್ಣಿನ ಉತ್ತಮ ದೃಷ್ಟಿಗಾಗಿ ಮತ್ತು ಉತ್ತಮ ಅರೋಗ್ಯ ಪ್ರಾಪ್ತಿಗಾಗಿ ಕಾರಣ ಕರ್ತನಾಗಿರುತ್ತಾನೆ.

ಭಾರತೀಯ ಸಂಸ್ಕೃತಿಯು ಎಲ್ಲರ ಬಗ್ಗೆ ಕೃತಜ್ಞತೆಯನ್ನು ವ್ಯಕ್ತಪಡಿಸಲು ಕಲಿಸುತ್ತದೆ. ಇದಕ್ಕನುಸಾರ, ಸೂರ್ಯದೇವರಿಗೆ ಕೃತಜ್ಞತೆಯನ್ನು ವ್ಯಕ್ತಪಡಿಸಲು ರಥಸಪ್ತಮಿಯ ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸೋಣ.
ಸರ್ವೇ ಸಂತು ನಿರಾಮಯಃ ಲೋಕಾಃ ಸಮಸ್ತಾ ಸುಖಿನೋ ಭವಂತು

ಲೇಖಕರು ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

ಧಾರ್ಮಿಕ ಮತ್ತು ಆಧ್ಯಾತ್ಮಿಕ ಲೇಖನ, ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ.

ಇದನ್ನೂ ಓದಿ : Ratha Saptami 2023 : ಸರ್ವರಿಗೂ ಪ್ರಿಯ ಸೂರ್ಯದೇವನನ್ನು ಪೂಜಿಸುವ ಹಬ್ಬ ರಥ ಸಪ್ತಮಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿಜ್ಞಾನ

Headless Chicken: ತಲೆ ಕತ್ತರಿಸಿದರೂ ಈ ಕೋಳಿ 18 ತಿಂಗಳು ಬದುಕಿತ್ತು! ಸಾಯುವ ಮೊದಲು ಮಾಲೀಕನನ್ನು ಶ್ರೀಮಂತಗೊಳಿಸಿತು!

ಪವಾಡಗಳ ಬಗ್ಗೆ ನಾವು ಸಾಕಷ್ಟು ಬಾರಿ ಕೇಳಿರುತ್ತೇವೆ. ಇಲ್ಲಿ ನಡೆದಿರುವ ಪವಾಡ ಮಾತ್ರ ನಂಬಲು ಅಸಾಧ್ಯವಾಗಿರುವುದು. ಇದನ್ನು ಕೇಳಿ ಎಲ್ಲರೂ ಇದು ಖಂಡಿತಾ ಸಾಧ್ಯವಿಲ್ಲ ಎಂದುಕೊಂಡರೆ ನಿಮ್ಮ ಊಹೆ ತಪ್ಪು. ಯಾಕೆಂದರೆ ಇದು ನಿಜವಾಗಿಯೂ ನಡೆದಿದೆ. ತಲೆಯನ್ನೇ ಕಳೆದುಕೊಂಡ ಕೋಳಿ (Headless Chicken) 18 ತಿಂಗಳ ಕಾಲ ಬದುಕಿದೆ. ಇದು ಈಗ ವಿಜ್ಞಾನಕ್ಕೂ ಸವಾಲಾಗಿ ಕಾಣುತ್ತಿದೆ.

VISTARANEWS.COM


on

By

Headless Chicken
Koo

ಪವಾಡಗಳು (Miracle) ಜೀವನದ (life) ಭಾಗವಾಗಿದೆ. ವಿಜ್ಞಾನದ (science) ಪ್ರಶ್ನೆಗೂ ನಿಲುಕದ ಕೆಲವೊಂದು ಸಂಗತಿಗಳು ಘಟಿಸುತ್ತವೆ. ಯಾರ ಬಳಿಯೂ ಉತ್ತರವಿರುವುದಿಲ್ಲ. ಈ ವಿಷಯಗಳನ್ನು ಅಲೌಕಿಕ (supernatural) ವಿದ್ಯಮಾನದ ಭಾಗವೆಂದೇ ಪರಿಗಣಿಸಲಾಗುತ್ತದೆ. ಇದರಲ್ಲಿ ಈ ಕೋಳಿಯೂ (Headless Chicken) ಒಂದು. ಇದು ಊಹೆಗೂ ನಿಲುಕದಂತಿದೆ. ನಂಬಲು ಕಷ್ಟ ಮತ್ತು ಆಶ್ಚರ್ಯಕರವಾಗಿದೆ.

ಇದೀಗ ಒಂದು ಪವಾಡ ಪ್ರಕರಣವೊಂದು ವರದಿಯಾಗಿದೆ. ಇದರಲ್ಲಿ ‘ಮೈಕ್’ ಎಂಬ ಕೋಳಿ (Miracle Mike) ತನ್ನ ಉಳಿದ 18 ತಿಂಗಳ ಸುದೀರ್ಘ ಜೀವನವನ್ನು ತಲೆಯಿಲ್ಲದೇ ಕಳೆದಿದೆ.

1945 ರ ಸೆಪ್ಟೆಂಬರ್‌ನಲ್ಲಿ ಯುನೈಟೆಡ್ ಸ್ಟೇಟ್ಸ್‌ನ (United States) ಕೊಲೊರಾಡೋದ (Colorado) ಫ್ರೂಟಾದಲ್ಲಿ ವಾಸಿಸುತ್ತಿದ್ದ ಓಲ್ಸೆನ್ ಕುಟುಂಬವು ಸಂಜೆಯ ಊಟಕ್ಕಾಗಿ ಚಿಕನ್ ತಯಾರಿಸಲು ಯೋಚನೆ ಮಾಡುತ್ತಿತ್ತು. ಅದಕ್ಕಾಗಿ ರೈತ ಲಾಯ್ಡ್ ಓಲ್ಸೆನ್ ಮನೆಗೆ ತಾಜಾ ಮಾಂಸವನ್ನು ತರಲು ಹೊಲಕ್ಕೆ ಹೋಗುತ್ತಾನೆ.

ಅಲ್ಲಿ ಆತ ‘ಮೈಕ್’ ಎಂದು ಗುರುತಿಸಲ್ಪಟ್ಟ ಐದೂವರೆ ತಿಂಗಳ ಗಂಡು ವಯಾಂಡೊಟ್ಟೆ ಕೋಳಿಯನ್ನು ಎತ್ತಿಕೊಂಡು ತರುತ್ತಾನೆ. ಅದನ್ನು ಎಷ್ಟೇ ಕೊಲ್ಲಲು ಪ್ರಯತ್ನಿಸಿದರೂ ಆತನಿಗೆ ಅದು ಸಾಧ್ಯವಾಗಲಿಲ್ಲ. ತಲೆಯನ್ನೇ ಕತ್ತರಿಸಿದರೂ ಅದು ಉಸಿರು ಚೆಲ್ಲಲಿಲ್ಲ. ಅದೊಂದು ಅಭೂತಪೂರ್ವ ಘಟನೆಯಾಗಿದ್ದು, ವಿಶ್ವವೇ ಬೆರಗಾಗುವಂತೆ ಮಾಡಿತು.


18 ತಿಂಗಳು ಹೇಗೆ ಬದುಕಿತು?

ಲಾಯ್ಡ್ ಕೋಳಿಯ ಶಿರಚ್ಛೇದ ಮಾಡಿದ. ಕತ್ತಿಯ ಏಟು ಅದರ ತಲೆಯ ಹೆಚ್ಚಿನ ಭಾಗಗಳನ್ನು ಕತ್ತರಿಸಿದರೂ ಅದು ಕುತ್ತಿಗೆ ಮತ್ತು ಗಂಟಲಿಗೆ ಸಂಬಂಧಿಸಿದ ಕಂಠನಾಳವನ್ನು ಸೀಳುವಲ್ಲಿ ವಿಫಲವಾಯಿತು. ಹೀಗಾಗಿ ಅದು ಬದುಕುಳಿಯಿತು. ಒಂದು ಕಿವಿ ಮತ್ತು ಮೆದುಳಿನ ಹೆಚ್ಚಿನ ಕಾಂಡವು ಹಾನಿಗೊಳಗಾದರೂ ಅದು ಸಾಯಲಿಲ್ಲ. ರಕ್ತ ವೇಗವಾಗಿ ಹೆಪ್ಪುಗಟ್ಟಿದ್ದರಿಂದ ಅತಿಯಾದ ರಕ್ತದ ನಷ್ಟವಾಗಲಿಲ್ಲ.

ಬಳಿಕ ಲಾಯ್ಡ್ ಮೈಕ್‌ ಗೆ ಹೊಸ ಜೀವನ ನೀಡಲು ಮುಂದಾದ. ಕೋಳಿಯನ್ನು ಮನೆಗೆ ತಂದು ಸಂಪೂರ್ಣ ಆರೈಕೆ ಮಾಡಲು ನಿರ್ಧರಿಸಿದರು.

ಲಾಯ್ಡ್ ಅದಕ್ಕೆ ಹಾಲು ಮತ್ತು ನೀರಿನ ಮಿಶ್ರಣವನ್ನು ಒಳಗೊಂಡಿರುವ ಆಹಾರವನ್ನು ತಯಾರಿಸಿದ. ಐಡ್ರಾಪರ್ ಮೂಲಕ ಅದಕ್ಕೆ ಆಹಾರವನ್ನು ನೀಡಿದ. ಕೆಲವು ಹುಳು ಮತ್ತು ಜೋಳವನ್ನು ನೀಡಿದನು.

ಮೈಕ್ ಗಳಿಸಿದ ಖ್ಯಾತಿ

ಈ ಘಟನೆಯು ಜಗತ್ತಿಗೇ ಸುದ್ದಿಯಾಗುವಷ್ಟು ವಿಸ್ಮಯಕಾರಿಯಾಗಿತ್ತು. ಮೈಕ್ ಭಾರೀ ಜನಮನಗೆದ್ದಿತು ಮತ್ತು ಸಂಶೋಧನೆಯ ವಿಷಯವಾಯಿತು.

ಹಲವಾರು ನಿಯತಕಾಲಿಕೆಗಳಿಗೆ ಇದನ್ನು ವರದಿ ಮಾಡಿತ್ತು. ಅನೇಕ ಪತ್ರಿಕೆಗಳಿಗೆ ಇದು ಮುಖಪುಟದ ವಿಷಯವಾಯಿತು. ಮೈಕ್ ಅನ್ನು 25 ಸೆಂಟ್ಸ್ ವೆಚ್ಚದಲ್ಲಿ ಸಾರ್ವಜನಿಕರಿಗೆ ಪ್ರದರ್ಶನಕ್ಕೆ ಇಡಲಾಯಿತು.

“ಮೈಕ್ ದಿ ಹೆಡ್‌ಲೆಸ್ ಚಿಕನ್ ಡೇ” ಅನ್ನು 1999 ರಿಂದ ಕೊಲೊರಾಡೋದ ಫ್ರೂಟಾದಲ್ಲಿ ಪ್ರತಿ ಮೇ ತಿಂಗಳ ಮೂರನೇ ವಾರಾಂತ್ಯದಲ್ಲಿ ಆಚರಿಸಲಾಗುತ್ತದೆ.

ಇದನ್ನೂ ಓದಿ: Dream Of Retired Couple: ನಿರಂತರ ಮೂರೂವರೆ ವರ್ಷಗಳ ನೌಕಾಯಾನಕ್ಕಾಗಿ ತಮ್ಮದೆಲ್ಲವನ್ನೂ ಮಾರಿದ ದಂಪತಿ!

ಮೈಕ್ ನಿಂದ ಕೋಳಿ ಮಾಲೀಕ ತಿಂಗಳಿಗೆ ಸುಮಾರು 45,000 ಡಾಲರ್ ಆದಾಯ ಗಳಿಸಿದ. ಈ ಅದ್ಭುತ ಕೋಳಿ ಮೌಲ್ಯ ಆಗ 10,000 ಡಾಲರ್ ಆಗಿತ್ತು.

ಸಾವು ಹೇಗಾಯಿತು?

1947ರ ಮಾರ್ಚ್ ನಲ್ಲಿ ಜೋಳದ ತುಂಡು ಮೈಕ್ ನ ಗಂಟಲಲ್ಲಿ ಸಿಲುಕಿದ ನಂತರ ಅದು ಸಾವನ್ನಪ್ಪಿತು. ಪ್ರವಾಸದಿಂದ ಹಿಂದಿರುಗುವಾಗ ಲಾಯ್ಡ್ ಶುಚಿಗೊಳಿಸುವ ಸಿರಿಂಜ್‌ಗಳನ್ನು ಬಿಟ್ಟು ಬಂದಿದ್ದರಿಂದ ಮೈಕ್ ನನ್ನು ಬದುಕಿಸಲು ವಿಫಲರಾದರು.

Continue Reading

ಧಾರ್ಮಿಕ

Vastu Tips: ವಾಸ್ತು ಶಾಸ್ತ್ರದ ಪ್ರಕಾರ ಪ್ರೀತಿ ಪಾತ್ರರಿಗೆ ನೀಡುವ ಉಡುಗೊರೆಗಳು ಹೀಗಿರಬೇಕು

ನಮ್ಮ ದೈನಂದಿನ ಜೀವನದಲ್ಲಿ ವಾಸ್ತು ಶಾಸ್ತ್ರದ (Vastu Tips) ಪ್ರಭಾವವು ಗಾಢವಾಗಿದೆ. ಮನೆ ಅಥವಾ ಕಾರ್ಯಸ್ಥಳದೊಳಗೆ ಸರಿಯಾದ ವಸ್ತುಗಳನ್ನು ಸರಿಯಾದ ಸ್ಥಳಗಳಲ್ಲಿ ಇರಿಸಿದಾಗ ಅವು ಶಕ್ತಿಯ ಹರಿವನ್ನು ಸಮನ್ವಯಗೊಳಿಸುತ್ತವೆ. ಉತ್ತಮ ಆರೋಗ್ಯ, ಆರ್ಥಿಕ ಸ್ಥಿರತೆ ಮತ್ತು ಸಂತೋಷವನ್ನು ನೀಡುವ ಉಡುಗೊರೆಗಳನ್ನು ವಾಸ್ತು ಶಾಸ್ತ್ರದಲ್ಲಿ ಹೇಳಲಾಗಿದ್ದು, ಪ್ರೀತಿಪಾತ್ರರಿಗೆ ಉಡುಗೊರೆಗಳನ್ನು ನೀಡುವಾಗ ಹೆಚ್ಚು ಚಿಂತೆ ಮಾಡದೇ ಇವುಗಳನ್ನು ಆಯ್ಕೆ ಮಾಡಬಹುದು.

VISTARANEWS.COM


on

By

Vastu Tips
Koo

ಉಡುಗೊರೆಗಳನ್ನು (Gift) ಸ್ವೀಕರಿಸುವುದು ಯಾರಿಗೆ ಇಷ್ಟವಿಲ್ಲ? ಪ್ರತಿಯೊಬ್ಬರೂ ಉಡುಗೊರೆ ನೀಡುವಾಗ ಅದು ತೆಗೆದುಕೊಳ್ಳುವವರ ಮನಕ್ಕೆ ಇಷ್ಟವಾಗುವಂತಿರಬೇಕು ಎಂದು ಎಲ್ಲರೂ ಬಯಸುತ್ತಾರೆ. ಉಡುಗೊರೆಗಳು ಪ್ರೀತಿಯ ಶುದ್ಧ ಸೂಚಕವಾಗಿದೆ ಮತ್ತು ಅವು ಭಾವನಾತ್ಮಕ ಮತ್ತು ಆಂತರಿಕ ಮೌಲ್ಯವನ್ನು ಹೊಂದಿರುತ್ತದೆ. ಹೀಗಾಗಿ ಪ್ರೀತಿ ಪಾತ್ರರಿಗೆ ಉಡುಗೊರೆಗಳನ್ನು ಆಯ್ಕೆ ಮಾಡುವಾಗ ಯೋಚನೆ ಕಾಡುವುದು ಸಹಜ.

ನಾವು ಕೊಡುವ ಉಡುಗೊರೆಯು ಸ್ವೀಕರಿಸುವವರ ಜೀವನಕ್ಕೆ ಸಮೃದ್ಧಿ (prosperity), ಸಕಾರಾತ್ಮಕತೆ (positivity) ಮತ್ತು ಸಾಮರಸ್ಯವನ್ನು (harmony) ತರುವಂತೆ ಇರಬೇಕು ಎನ್ನುತ್ತದೆ ವಾಸ್ತುಶಾಸ್ತ್ರ (Vastu Tips). ಉಡುಗೊರೆಗಳನ್ನು ಆಯ್ಕೆ ಮಾಡಲು ವಾಸ್ತು ಶಾಸ್ತ್ರವು ಕೆಲವೊಂದು ಮಾರ್ಗದರ್ಶನವನ್ನು ನೀಡುತ್ತದೆ.

ವಾಸ್ತು ತತ್ತ್ವಗಳೊಂದಿಗೆ ಜೋಡಿಸಲಾದ ಉಡುಗೊರೆಯನ್ನು ಪ್ರೀತಿ ಪಾತ್ರರಿಗೆ ನೀಡಿದಾಗ ಇದು ಕೇವಲ ವಸ್ತುವನ್ನು ನೀಡುವುದಿಲ್ಲ. ಅದರೊಂದಿಗೆ ಅದೃಷ್ಟ ಮತ್ತು ಧನಾತ್ಮಕ ಶಕ್ತಿಯನ್ನು ನೀಡುತ್ತೀರಿ.

ಸ್ವೀಕರಿಸುವವರ ಯೋಗಕ್ಷೇಮ ಮತ್ತು ಯಶಸ್ಸನ್ನು ಹೆಚ್ಚಿಸುವ ನಿರ್ದಿಷ್ಟ ಉಡುಗೊರೆಗಳನ್ನು ವಾಸ್ತು ಶಾಸ್ತ್ರವು ಸೂಚಿಸುತ್ತದೆ. ಈ ಉಡುಗೊರೆಗಳು ಯಾವುದೇ ಚಿಂತೆ ಇಲ್ಲದೆ ಆಯ್ಕೆ ಮಾಡಬಹುದು. ಇದು ಉಡುಗೊರೆ ಸ್ವೀಕರಿಸುವವರ ಪರಿಸರದಲ್ಲಿನ ಶಕ್ತಿಯನ್ನು ಸಮತೋಲನಗೊಳಿಸಲು ಸಹಾಯ ಮಾಡುತ್ತದೆ. ಜೀವನದ ವಿವಿಧ ಅಂಶಗಳಲ್ಲಿ ಅವರಿಗೆ ಅನುಕೂಲಕರವಾಗಿರುತ್ತದೆ.

ಸಮೃದ್ಧಿ ಮತ್ತು ಸಕಾರಾತ್ಮಕತೆಯನ್ನು ತರುವ 7 ಅದೃಷ್ಟದ ಉಡುಗೊರೆಗಳು

ಲಾಫಿಂಗ್ ಬುದ್ಧ

ಲಾಫಿಂಗ್ ಬುದ್ಧ ಅನೇಕರ ಕಚೇರಿ ಮತ್ತು ಮನೆಗಳಲ್ಲಿ ಕಂಡುಬರುವ ಜನಪ್ರಿಯ ಅಲಂಕಾರಿಕ ವಸ್ತುವಾಗಿದೆ. ಹರ್ಷಚಿತ್ತದ ವ್ಯಕ್ತಿ ಯಾವುದೇ ಜಾಗದಲ್ಲಿ ಸಂತೋಷವನ್ನು ತರುತ್ತದೆ ಎನ್ನುವ ನಂಬಿಕೆ ಇದೆ. ಫೆಂಗ್ ಶೂಯಿ ತತ್ತ್ವಗಳ ಪ್ರಕಾರ ರೋಮಾಂಚಕ ಮತ್ತು ಮಂಗಳಕರ ಶಕ್ತಿಯನ್ನು ಇದು ಸೃಷ್ಟಿಸುತ್ತದೆ.


ಗಣೇಶ ವಿಗ್ರಹ

ಗಣೇಶ ಹೊಸ ಆರಂಭ ಮತ್ತು ಯಶಸ್ಸಿನ ದೇವರು. ಗಣೇಶನ ಪ್ರತಿಮೆಯನ್ನು ನೀಡುವುದು ಉಡುಗೊರೆ ಸ್ವೀಕರಿಸುವವರಿಗೆ ಆಶೀರ್ವಾದವನ್ನು ಕೊಡುತ್ತದೆ. ಈ ಪ್ರತಿಮೆಯು ಶಕ್ತಿ, ಬುದ್ಧಿವಂತಿಕೆ ಮತ್ತು ಜೀವನದಲ್ಲಿ ಸವಾಲುಗಳನ್ನು ಜಯಿಸುವ ಸಾಮರ್ಥ್ಯವನ್ನು ಪ್ರತಿನಿಧಿಸುತ್ತದೆ.


ಶ್ರೀ ಮೇರು ಯಂತ್ರ

ಮೇರು ಶ್ರೀ ಯಂತ್ರವು ತನ್ನ ಆರಾಧಕರಿಗೆ ಶಾಂತಿ, ಸಂತೋಷ, ಜನಪ್ರಿಯತೆ, ಶಕ್ತಿ, ಅಧಿಕಾರ, ಸಂಪತ್ತು, ಸಮೃದ್ಧಿ ಮತ್ತು ಯಶಸ್ಸನ್ನು ತರುತ್ತದೆ. ಸಮರ್ಪಣೆ ಮತ್ತು ನಂಬಿಕೆಯಿಂದ ಇದನ್ನು ಪೂಜಿಸಿದರೆ ಆಶೀರ್ವಾದ ಸಿಗುತ್ತದೆ ಎನ್ನುವ ನಂಬಿಕೆ ಇದೆ.


ರಾಧಾ ಕೃಷ್ಣನ ವಿಗ್ರಹ

ಶುಭ ಸೂಚಕವಾಗಿ ರಾಧಾ ಕೃಷ್ಣನ ವಿಗ್ರಹವನ್ನು ಉಡುಗೊರೆಯಾಗಿ ನೀಡಬಹುದು. ಇದು ನಿಮ್ಮ ಜೀವನದಲ್ಲಿ ಆಳವಾದ ಶಾಂತಿ, ಸಮೃದ್ಧ ಪ್ರೀತಿ ಮತ್ತು ಬಲವಾದ ಸಮರ್ಪಣೆಯನ್ನು ತರುತ್ತದೆ ಎಂದು ಹೇಳಲಾಗುತ್ತದೆ.

ವಾಸ್ತು ಆಮೆ

ಆಮೆಗಳು ಅದೃಷ್ಟ ಮತ್ತು ದೀರ್ಘಾಯುಷ್ಯವನ್ನು ಪ್ರತಿನಿಧಿಸುತ್ತವೆ. ಆದ್ದರಿಂದ, ಗಾಜಿನ ಅಥವಾ ಸ್ಫಟಿಕ ಆಮೆಯನ್ನು ಉಡುಗೊರೆಯಾಗಿ ನೀಡುವುದು ಅವರಿಗೆ ಮಾಡುವ ಯಾವುದೇ ಕೆಲಸದಲ್ಲಿ ಅದೃಷ್ಟ ಮತ್ತು ಯಶಸ್ಸನ್ನು ತರುತ್ತದೆ.

ಚೈಮ್ಸ್

ವಿಂಡ್ ಚೈಮ್ ಗಳು ಕೇವಲ ಅಲಂಕಾರಕ್ಕಾಗಿ ಮಾತ್ರವಲ್ಲ. ಅವುಗಳು ಅದೃಷ್ಟ, ಸಮೃದ್ಧಿ ಮತ್ತು ಪಾಲಿಸಬೇಕಾದ ನೆನಪುಗಳನ್ನು ಸಂಕೇತಿಸುತ್ತವೆ. ಅದರ ಸುಮಧುರ ರಾಗಗಳು ಮನಸ್ಸನ್ನು ಶಾಂತಗೊಳಿಸುತ್ತದೆ. ಉತ್ಸಾಹವನ್ನು ಹೆಚ್ಚಿಸುತ್ತವೆ. ಮನೆಗೆ ಧನಾತ್ಮಕ ಶಕ್ತಿ ಮತ್ತು ಶಾಂತಿಯುತ ವಾತಾವರಣವನ್ನು ತುಂಬುತ್ತದೆ.

ಇದನ್ನೂ ಓದಿ: Vastu Tips: ಆರ್ಥಿಕ ಪ್ರಗತಿಗೆ ಈ ವಾಸ್ತು ಟಿಪ್ಸ್‌ ಫಾಲೋ ಮಾಡಿ


ಗೋಮತಿ ಚಕ್ರ ವೃಕ್ಷ

ಗೋಮತಿ ಚಕ್ರವನ್ನು ಉಡುಗೊರೆಯಾಗಿ ನೀಡುವುದು ಆಧ್ಯಾತ್ಮಿಕ ಮಹತ್ವದಿಂದ ತುಂಬಿದ ಅರ್ಥಪೂರ್ಣ ಸೂಚಕವಾಗಿದೆ. ಗೋಮತಿ ನದಿಯಲ್ಲಿ ಹೆಚ್ಚಾಗಿ ಕಂಡುಬರುವ ಈ ಪವಿತ್ರ ಕಲ್ಲುಗಳು ಸಕಾರಾತ್ಮಕ ಶಕ್ತಿ ಮತ್ತು ರಕ್ಷಣಾತ್ಮಕ ಗುಣಗಳಿಂದ ಮೌಲ್ಯಯುತವಾಗಿವೆ. ಗೋಮತಿ ಚಕ್ರವನ್ನು ನೀಡುವುದು ಸ್ವೀಕರಿಸುವವರಿಗೆ ಸಮೃದ್ಧಿ ಮತ್ತು ಅದೃಷ್ಟವನ್ನು ಆಶೀರ್ವಾದಿಸುತ್ತದೆ.

Continue Reading

ಬೆಳಗಾವಿ

Belagavi News: ಬೆಳಗಾವಿಯಲ್ಲಿ ಮೇ 29ರಿಂದ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದ 11ನೇ ವಾರ್ಷಿಕ ಮಹೋತ್ಸವ

Belagavi News: ಬೆಳಗಾವಿಯ ವಡಗಾವಿ ಯಳ್ಳೂರು ರಸ್ತೆಯ ಶ್ರೀ ಅನ್ನಪೂರ್ಣೇಶ್ವರಿ ನಗರದಲ್ಲಿರುವ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದ 11 ನೇ ವಾರ್ಷಿಕ ಮಹೋತ್ಸವವು ಇದೇ ಮೇ 29 ರಿಂದ ಮೇ 31 ರವರೆಗೆ ನಡೆಯಲಿದೆ ಎಂದು ದೇವಸ್ಥಾನದ ಧರ್ಮದರ್ಶಿ ರವಿರಾಜ ಹೆಗ್ಡೆ ತಿಳಿಸಿದ್ದಾರೆ.

VISTARANEWS.COM


on

11th Annual Mahotsav of Sri Annapurneswari Temple in Belagavi from 29th May
Koo

ಬೆಳಗಾವಿ: ಬೆಳಗಾವಿಯ ವಡಗಾವಿ ಯಳ್ಳೂರು ರಸ್ತೆಯ ಶ್ರೀ ಅನ್ನಪೂರ್ಣೇಶ್ವರಿ ನಗರದಲ್ಲಿರುವ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದ 11ನೇ ವಾರ್ಷಿಕ ಮಹೋತ್ಸವವು ಇದೇ ಮೇ 29 ರಿಂದ ಮೇ 31 ರವರೆಗೆ ನಡೆಯಲಿದೆ ಎಂದು ದೇವಸ್ಥಾನದ ಧರ್ಮದರ್ಶಿ ರವಿರಾಜ ಹೆಗ್ಡೆ (Belagavi News) ತಿಳಿಸಿದ್ದಾರೆ.

ಇದನ್ನೂ ಓದಿ: Fortis Hospital: ವಿಶ್ವದಲ್ಲೇ ಮೊದಲ ಬಾರಿಗೆ 3 ವಿಭಿನ್ನ ಕಾಯಿಲೆಗೆ ಏಕಕಾಲದಲ್ಲೇ ಯಶಸ್ವಿ ಶಸ್ತ್ರಚಿಕಿತ್ಸೆ

ಮೇ 29 ರಂದು ಬೆಳಗ್ಗೆ 6 ಗಂಟೆಗೆ ಶ್ರೀ ಅನ್ನಪೂರ್ಣೇಶ್ವರಿ ಸಹಿತ ಪರಿವಾರ ದೇವರಿಗೆ ಕಲಶಾಭಿಷೇಕ, 8 ಕ್ಕೆ ನಾಗದೇವರ ಬಿಂಬ ಪ್ರತಿಷ್ಠಾಪನೆ, ಕಲಶಾಭಿಷೇಕ ಮಹಾಪೂಜೆ, ಮಧ್ಯಾಹ್ನ 12 ಕ್ಕೆ ಮಹಾಪೂಜೆ, ಪ್ರಸನ್ನ ಪೂಜೆ, ಪ್ರಸಾದ, ಸಂಜೆ 5 ರಿಂದ ರಂಗ ಪೂಜೆ ಶ್ರೀ ದೇವಿಯ ಪಲ್ಲಕ್ಕಿ- ಮೆರವಣಿಗೆ, ದೀಪೋತ್ಸವ ನಡೆಯಲಿದೆ.

ಮೇ 30 ರಂದು ಬೆಳಗ್ಗೆ 7 ಕ್ಕೆ ಸಂಪ್ರೋಕ್ಷಣೆ, ಅನ್ನಪೂರ್ಣೇಶ್ವರಿ ಯಾಗ, ಸುಬ್ರಮಣ್ಯ ದೇವರಿಗೆ ಆಶ್ಲೇಷ ಬಲಿ, 8.30 ಕ್ಕೆ ಮಹಾ ಚಂಡಿಕಾ ಯಾಗ, ಸಂಜೆ 6 ಕ್ಕೆ ಕೀರ್ತನಾಕಾರರಿಂದ ಕೀರ್ತನೆ, ವ್ಯಾಖ್ಯಾನ ನಡೆಯಲಿದೆ.

ಇದನ್ನೂ ಓದಿ: New Financial Rules: ಜೂನ್ 1ರಿಂದ ಏನೆಲ್ಲಾ ಬದಲಾವಣೆಗಳಾಗಲಿವೆ ಗೊತ್ತಿದೆಯೆ?

ಮೇ 31 ರಂದು ಬೆಳಗ್ಗೆ 9 ಕ್ಕೆ ದೇವಿಗೆ ವಿಶೇಷ ಅಲಂಕಾರ, ಪೂಜಾರಾಧನೆ, 10 ಕ್ಕೆ ಭಜನಾ ಮಂಡಳಿಯಿಂದ ಭಜನೆ, ಮಧ್ಯಾಹ್ನ 1 ರಿಂದ 3 ಗಂಟೆವರೆಗೆ ಮಹಾಪ್ರಸಾದ ನಡೆಯಲಿದೆ ಎಂದು ದೇವಸ್ಥಾನದ ಧರ್ಮದರ್ಶಿ ರವಿರಾಜ ಹೆಗ್ಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

ಬೆಂಗಳೂರು

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Basavanagudi News : ಬಸವನಗುಡಿ ದೊಡ್ಡ ಗಣಪತಿ ದೇವಸ್ಥಾನದಲ್ಲಿರುವ (Dodda Ganapathi Temple) ಮಳಿಗೆಗಳಲ್ಲಿ ಪೂಜಾ ಸಾಮಗ್ರಿಗಳನ್ನು ಒನ್‌ ಟು ಡಬಲ್‌ ರೇಟ್‌ಗೆ ಮಾರಾಟ ಮಾಡಲಾಗುತ್ತಿದೆ ಎನ್ನಲಾಗಿದೆ. ಹೀಗಾಗಿ ಭಕ್ತಾಧಿಗಳು ಹಾಗೂ ವ್ಯಾಪಾರಿಗಳ ನಡುವೆ ಗಲಾಟೆ ನಡೆದಿದ್ದು, ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿತ್ತು.

VISTARANEWS.COM


on

By

Basavanagudi News
Koo

ಬೆಂಗಳೂರು: ಬೆಂಗಳೂರಿನ ಪ್ರಸಿದ್ಧ ಬಸವನಗುಡಿ ದೊಡ್ಡ ಗಣಪತಿ ದೇವಸ್ಥಾನದಲ್ಲಿ (Basavanagudi News) ಭಕ್ತಾದಿಗಳು ಹಾಗೂ ಮಳಿಗೆ ವ್ಯಾಪಾರಿಗಳ ನಡುವೆ ಗಲಾಟೆ ನಡೆದಿದೆ. ದೇವಸ್ಥಾನದಲ್ಲಿರುವ (Dodda Ganapathi Temple) ಮಳಿಗೆಯಲ್ಲಿ ಪೂಜಾ ಸಾಮಗ್ರಿಗಳು ದುಬಾರಿ ಬೆಲೆಗೆ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

ಕಳೆದ ಕೆಲವು ತಿಂಗಳಿಂದ ಪೂಜಾ ಸಾಮಗ್ರಿಗಳ ಬೆಲೆ ಕೇಳಿ ಭಕ್ತಾದಿಗಳು ಶಾಕ್ ಆಗಿದ್ದರು. ಮನಸೋ ಇಚ್ಛೆ ವಸೂಲಿ ಮಾಡಲಾಗುತ್ತಿದೆ ಎಂಬ ದೂರು ಕೂಡ ಕೇಳಿಬಂದಿತ್ತು. ಹೂವು, ಹಣ್ಣು, ಕಡ್ಡಿ, ಕರ್ಪೂರ ಸೇರಿದ 70-80 ರೂಪಾಯಿಯ ಒಂದು ಸಣ್ಣ ಕಿಟ್ ಅನ್ನು ಬರೋಬ್ಬರಿ 150 ರೂಪಾಯಿಗೆ ಸೇಲ್ ಮಾಡಲಾಗುತ್ತಿದೆ. ಇದೊಂಥರಾ ಹಗಲು ದರೋಡೆ ಅಂದರೆ ತಪ್ಪಾಗಲ್ಲ.

ದುಬಾರಿ ಬೆಲೆಗೆ ಮಾರಾಟ ಮಾಡುತ್ತಿರುವ ಹಿನ್ನೆಲೆಯಲ್ಲಿ ಭಕ್ತಾಧಿಗಳು ಇದನ್ನೂ ಪ್ರಶ್ನಸಿದ್ದಾರೆ. ಈ ವೇಳೆ ಭಕ್ತರು ಹಾಗೂ ಮಳಿಗೆ ವ್ಯಾಪಾರಿಗಳ ಮಧ್ಯೆ ಮಾತಿನ ಚಕಮಕಿ ನಡೆದು, ಕೈ ಕೈ ಮಿಲಾಯಿಸುವ ಹಂತಕ್ಕೆ ಗಲಾಟೆ ನಡೆದಿದೆ. ಟೆಂಟರ್‌ಗೆ ಹೆಚ್ಚು ಹಣವನ್ನು ಕೊಟ್ಟಿದ್ದೀವಿ, ಹೀಗಾಗಿ ಹೆಚ್ಚುವರಿ ಹಣ ತೆಗೆದುಕೊಳ್ಳುತ್ತಿವಿ. ಮಾರುಕಟ್ಟೆಯಲ್ಲಿ ಹೂ-ತೆಂಗಿನಕಾಯಿ ದಿನಕ್ಕೊಂದು ದರ ಇರುತ್ತದೆ, ನಾವೇನು ಮಾಡೋಣ ಎಂದು ಮಳಿಗೆ ವ್ಯಾಪಾರಿಗಳು ವಾದವಾಗಿದೆ.

ಇತ್ತ 2 ಬಾಳೆಹಣ್ಣು, ತೆಂಗಿನಕಾಯಿ, ಅಗರಬತ್ತಿ, ಹೂವಿ ಇರುವು ಪೂಜಾ ಸಾಮಗ್ರಿಗೆ ಬರೋಬ್ಬರಿ 150-300 ರೂ. ವ್ಯಾಪಾರಿಗಳು ಭಕ್ತರಿಂದ ಪಡೆಯುತ್ತಿದ್ದಾರೆ. ಇದರಿಂದ ರೊಚ್ಚಿಗೆದ್ದ ಭಕ್ತರು, ವ್ಯಾಪಾರಿಗಳೊಂದಿಗೆ ವಾಗ್ವಾದಕ್ಕಿಳಿದರು. ಇದನ್ನು ಕೇಳಬೇಕಿದ್ದ ಮುಜರಾಯಿ ಕಣ್ಮುಚ್ಚಿ ಕುಳಿತಿದೆ. ಇದರ ಪರಿಣಾಮ ಭಕ್ತರ ಜೇಬು ಖಾಲಿ ಆಗುತ್ತಿದ್ದು, ವಿಧಿಯಿಲ್ಲದೆ ದುಬಾರಿ ಹಣ ತೆರಬೇಕಾಗುತ್ತಿದೆ.

ಇದನ್ನೂ ಓದಿ: Raichur News : ಸಾಲದ ಸುಳಿಗೆ ಸಿಲುಕಿದ ಸ್ನೇಹಿತೆಗೆ ಕೊಟ್ಟಳು 10 ತೊಲೆ ಬಂಗಾರ! ‘ಕಳ್ಳತನ’ ನಾಟಕವಾಡಿದ ಗೆಳತಿಯರು ಲಾಕ್‌

Theft Case : ಚಿನ್ನ ಕದಿಯಲು ಬಂದು ಮದುವೆ ಮನೆಯವರಿಂದ ಧರ್ಮದೇಟು ತಿಂದ ಕಳ್ಳ

ಚಿಕ್ಕಬಳ್ಳಾಪುರ: ಮದುವೆ ಮನೆಗೆ ಬಂದ ಕಳ್ಳನಿಗೆ (Theft Case ) ವರ ಹಾಗೂ ವಧುವಿನ ಕಡೆಯವರು ಭರಪೂರ ಉಡುಗೊರೆ ಕೊಟ್ಟಿದ್ದಾರೆ. ಮದುವೆ ಮನೆಯೊಳಗೆ ನುಗ್ಗಿದ ಕಳ್ಳನೊಬ್ಬ ಮಹಿಳೆ ಬಳಿ ಚಿನ್ನದ ಸರ ಕದಿಯುವಾಗಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾನೆ.

ಕಳ್ಳನನ್ನು ಹಿಡಿದ ಮದುವೆ ಮನೆಯವರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ನಗರ ಹೊರವಲಯದ ಬೈಪಾಸ್ ರಸ್ತೆಯಲ್ಲಿರುವ ಸಾಯಿಕೃಷ್ಣ ಫಂಕ್ಷನ್ ಹಾಲ್‌ನಲ್ಲಿ ಘಟನೆ ನಡೆದಿದೆ.

ಸರ ಕದ್ದ ಆರೋಪಿಯನ್ನು ಆಂದ್ರಪ್ರದೇಶದ ಮುಲ್ಲಮೋತುಕಪಲ್ಲಿ ಗ್ರಾಮದ ಪಿ. ನರೇಶ್ ಎಂದು ತಿಳಿದು ಬಂದಿದೆ. ಮದುವೆ ಮನೆಯಲ್ಲಿ ಮಹಿಳೆ ಬಟ್ಟೆ ಬದಲಿಸುವ ವೇಳೆ ನರೇಶ್ ಚಿನ್ನದ ಸರ ಕದಿಯಲು ಯತ್ನಿಸಿದ್ದ. ಆದರೆ ಇದನ್ನೂ ಗಮನಿಸಿದ ಮಹಿಳೆ ಕೂಡಲೇ ಕಿರುಚಾಡಿದ್ದು, ತಪ್ಪಿಸಿಕೊಂಡು ಓಡಾಡುತ್ತಿದ್ದ ನರೇಶ್‌ನನ್ನು ಹಿಡಿದು ಥಳಿಸಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಗೌರಿಬಿದನೂರು ನಗರದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬೆಳಗ್ಗೆ ಕೋಳಿ ಕುಯ್ಯುತ್ತಾರೆ, ರಾತ್ರಿಯಾದರೆ ಸುಲಿಗೆಗೆ ಇಳಿಯುತ್ತಾರೆ!

ಬೆಂಗಳೂರು: ಸಾರಾಯಿಪಾಳ್ಯದ ಕೋಳಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಖರ್ತನಾಕ್‌ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ. ರಿಯಾಝ್ ಖಾನ್ ಹಾಗು ವಸೀಂ ಫಿರೋಝ್ ಬಂಧಿತ ಆರೋಪಿಗಳು.

ಬೆಳಗಿನಿಂದ ಸಂಜೆ ತನಕ ಕೋಳಿ ಅಂಗಡಿಯಲ್ಲಿ ಕೋಳಿ ಕುಯ್ಯುವ ಕೆಲಸ ಮಾಡಿದರೆ, ರಾತ್ರಿಯಾದರೆ ಸಾಕು ಸುಲಿಗೆಗೆ ಇಳಿಯುತ್ತಿದ್ದರು. ಇತ್ತೀಚಿಗೆ ಸ್ಕೂಟರ್‌ನಲ್ಲಿ ಬಂದಿದ್ದ ಇವರಿಬ್ಬರು, ಅಮ್ಮೇಜಾನ್ ಎಂಬುವವರ ಮೊಬೈಲ್ ಕಿತ್ತುಕೊಂಡು ಪರಾರಿಯಾಗಿದ್ದರು.

ಈ ಸಂಬಂಧ ಅಮ್ಮೇಜಾನ್‌ ಅವರು ದೂರು ದಾಖಲಿಸಿದ್ದರು. ದೂರು ಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಸದ್ಯ ಆರೋಪಿಗಳನ್ನು ಹೆಚ್ಚಿನ ತನಿಖೆಗೆ ಒಳಪಡಿಸಿರುವ ಬಾಣಸವಾಡಿ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Girlfriend
ದೇಶ1 hour ago

Girlfriend: ‘ಬಾಡಿಗೆ ಗರ್ಲ್‌ಫ್ರೆಂಡ್‌’ ಆಗಲು ಸಿದ್ಧಳೆಂದ ಯುವತಿ; ಈಕೆಯ ‘ದರಪಟ್ಟಿ’ ನೋಡಿ,‌ ನೀವೂ ಟ್ರೈ ಮಾಡಿ

CAA Certificate
ದೇಶ2 hours ago

CAA Certificate: ದೀದಿ ವಿರೋಧದ ಮಧ್ಯೆಯೂ ಬಂಗಾಳದಲ್ಲಿ ಸಿಎಎ ಜಾರಿಗೆ ತಂದ ಕೇಂದ್ರ; ಪೌರತ್ವ ಪ್ರದಾನ!

Modi Meditation
ದೇಶ3 hours ago

Modi Meditation: ಮೋದಿಗೆ ಧ್ಯಾನ ಮಾಡಲು ಬಿಡಬೇಡಿ; ಚುನಾವಣೆ ಆಯೋಗಕ್ಕೆ ಕಾಂಗ್ರೆಸ್ ಮೊರೆ!

T20 World Cup 2024
ಕ್ರೀಡೆ3 hours ago

T20 World Cup 2024: ಟಿ20 ವಿಶ್ವಕಪ್​ನಲ್ಲಿ ಎಷ್ಟು ಬೌಲರ್​ಗಳು ಹ್ಯಾಟ್ರಿಕ್​ ವಿಕೆಟ್​ ಕಿತ್ತ ಸಾಧನೆ ಮಾಡಿದ್ದಾರೆ?

Self Harming
ಕರ್ನಾಟಕ3 hours ago

Self Harming: ಶಾಲೆಗೆ ಹೋಗಲು ಬೇಸತ್ತು 11 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ

Rudram II
ದೇಶ4 hours ago

Rudram II: ಆಗಸದಿಂದಲೇ ವೈರಿಗಳನ್ನು ನಾಶಪಡಿಸುವ ರುದ್ರಂ II ಕ್ಷಿಪಣಿ ಪ್ರಯೋಗ ಯಶಸ್ವಿ; ಶತ್ರುಗಳಿಗೆ ನಡುಕ!

Chahal-Dhanashree
ಕ್ರೀಡೆ4 hours ago

Chahal-Dhanashree: ಶೀಘ್ರದಲ್ಲೇ ಸಿಹಿ ಸುದ್ದಿ ನೀಡಲಿದ್ದಾರಾ ಚಹಲ್?; ಕುತೂಹಲ ಮೂಡಿಸಿದ ಪತ್ನಿಯ ಪೋಸ್ಟ್!

Timing change of 5 trains arriving at Sri Siddharooda Swamiji Railway Station Hubballi
ಹುಬ್ಬಳ್ಳಿ4 hours ago

Hubballi Train: ಪ್ರಯಾಣಿಕರೇ ಗಮನಿಸಿ; ಹುಬ್ಬಳ್ಳಿಗೆ ಆಗಮಿಸುವ 5 ರೈಲುಗಳ ಸಮಯ ಬದಲಾಗಿದೆ

Valmiki corporation Scam
ಕರ್ನಾಟಕ4 hours ago

Valmiki Corporation Scam: ವಾಲ್ಮೀಕಿ ನಿಗಮದ ಹಣ ದುರ್ಬಳಕೆ ಪ್ರಕರಣ; ಎಂಡಿ, ಲೆಕ್ಕಾಧಿಕಾರಿ ಅಮಾನತು

PM Kisan Samman
ಕೃಷಿ5 hours ago

PM Kisan Samman: ಪಿಎಂ ಕಿಸಾನ್ ಸಮ್ಮಾನ್ 17ನೇ ಕಂತಿನ ಹಣ ಬಿಡುಗಡೆ ಯಾವಾಗ? ಪರಿಶೀಲಿಸುವುದು ಹೇಗೆ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ1 day ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು2 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ2 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ3 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು3 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ7 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌