ಕೊಟ್ಟ ಕುದುರೆ ಏರಲಾಗದ HDK; ಸಿದ್ಧೌಷಧ ಅರೆದಿದ್ದು ಸಿದ್ದು: ಸಮ್ಮಿಶ್ರ ಸರ್ಕಾರದ ಪತನ ಕುರಿತು ಮಾಜಿ ಸಿಎಮ್‌ಗಳ ಜಟಾಪಟಿ - Vistara News

ಪ್ರಮುಖ ಸುದ್ದಿ

ಕೊಟ್ಟ ಕುದುರೆ ಏರಲಾಗದ HDK; ಸಿದ್ಧೌಷಧ ಅರೆದಿದ್ದು ಸಿದ್ದು: ಸಮ್ಮಿಶ್ರ ಸರ್ಕಾರದ ಪತನ ಕುರಿತು ಮಾಜಿ ಸಿಎಮ್‌ಗಳ ಜಟಾಪಟಿ

ಜೆಡಿಎಸ್‌ ಭದ್ರಕೋಟೆ ಮಂಡ್ಯದ ಜನಧ್ವನಿ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಮಾತನಾಡಿದರೆ ಅತ್ತ ರಾಯಚೂರಿನಲ್ಲಿ ಎಚ್‌.ಡಿ. ಕುಮಾರಸ್ವಾಮಿ ಉತ್ತರ ನೀಡಿದ್ದಾರೆ.

VISTARANEWS.COM


on

Siddaramaiah and HD Kumaraswamy class regarding coalition govt collapse
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಸರ್ಕಾರದ ಪತನದ ವಿಚಾರದಲ್ಲಿ ಇಬ್ಬರು ಮಾಜಿ ಸಿಎಂಗಳ ನಡುವೆ ಜಟಾಪಟಿ ನಡೆದಿದೆ. ಕುಮಾರಸ್ವಾಮಿ ಕೊಟ್ಟ ಕುದುರೆಯನ್ನು ಏರಲಿಲ್ಲ ಎಂದು ಸಿದ್ದರಾಮಯ್ಯ ಹೇಳಿದರೆ, ಧರ್ಮಸ್ಥಳದ ಸಿದ್ಧವನದಲ್ಲಿ ಕುಳಿತು ಸರ್ಕಾವನ್ನು ಬೀಳಿಸಿದ್ದು ಸಿದ್ದರಾಮಯ್ಯ ಎಂದು ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಮಂಡ್ಯದಲ್ಲಿ ಆಯೋಜಿಸಿದ್ದ ಜನಧ್ವನಿ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಜೆಡಿಎಸ್‌ನ ನಂಬಬೇಡಿ, ಇಲ್ಲಿ ನಮಗೆ ಮತ್ತು ಜೆಡಿಎಸ್‌ಗೆ ಹೋರಾಟ ಇದೆ. ನಾವು ಕುಮಾರಸ್ವಾಮಿಯನ್ನು ಮುಖ್ಯಮಂತ್ರಿ ಮಾಡಿದ್ದೆವು, ಅವರಿಂದ ಶಾಸಕರನ್ನು ಸರಿಯಾಗಿ ನೋಡಿಕೊಳ್ಳಲು ಆಗದೆ ಹೋಗಿದ್ದಕ್ಕೆ 17 ಜನ ಬಿಜೆಪಿಗೆ ಹೋದರು. ಕುಮಾರಸ್ವಾಮಿ ಅವರು ಸಮ್ಮಿಶ್ರ ಸರ್ಕಾರ ಬೀಳಲು ನಾನು ಕಾರಣ ಎಂದು ಹೇಳುತ್ತಿದ್ದಾರೆ, ನಮ್ಮ ಶಾಸಕರನ್ನು ನಾನು ಕಳಿಸಿದ್ದಾದರೆ, ಜೆಡಿಎಸ್‌ ಶಾಸಕರನ್ನು ಕಳಿಸಿದ್ದು ಯಾರಪ್ಪ? ನೀವೆ ಕಳಿಸಿದ್ರಾ? ನೀವು ವೆಸ್ಟೆಂಡ್‌ ಹೋಟೆಲ್‌ ನಲ್ಲಿ ಉಳಿದುಕೊಂಡು ಅಧಿಕಾರ ಮಾಡಲು ಆಗುತ್ತಾ? ಜನರು, ಮಂತ್ರಿಗಳು, ಅಧಿಕಾರಿಗಳು, ಶಾಸಕರನ್ನು ಭೇಟಿ ಮಾಡಿದರೆ ಮಾತ್ರ ಒಳ್ಳೆ ಅಧಿಕಾರ ನೀಡಲು ಸಾಧ್ಯವಾಗುತ್ತದೆ. ಗಾಜಿನ ಮನೆಯಲ್ಲಿ ಕೂತು ಅಧಿಕಾರ ನಡೆಸಲು ಹೊರಟದ್ದೆ ಕುಮಾರಸ್ವಾಮಿ ತಪ್ಪು.

ನಮ್ಮ ಪಕ್ಷದಿಂದ 80 ಶಾಸಕರು ಆಯ್ಕೆಯಾಗಿದ್ದರೂ, 37 ಜನ ಶಾಸಕರು ಇದ್ದ ಕುಮಾರಸ್ವಾಮಿಯನ್ನು ಮುಖ್ಯಮಂತ್ರಿ ಮಾಡಿದೆವು, ಇದಕ್ಕೆ ಕಾರಣ ಕೋಮುವಾದಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರಬಾರದು ಎಂಬುದು. ಆದರೆ ಕುಮಾರಸ್ವಾಮಿ ಕೈಲಿ ಅಧಿಕಾರ ಉಳಿಸಿಕೊಳ್ಳಲು ಆಗಲಿಲ್ಲ. ಕೊಟ್ಟ ಕುದುರೆ ಏರಲಾರದವ ವೀರನೂ ಅಲ್ಲ, ಶೂರನೂ ಅಲ್ಲ ಎಂಬ ಅಲ್ಲಮಪ್ರಭುಗಳ ಮಾತುಗಳು ಅವರಿಗೆ ಹೊಂದಿಕೆಯಾಗುತ್ತದೆ ಎಂದರು.

ರಾಯಚೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ, ನಾನು ಸಿಎಂ ಇದ್ದಾಗ ಕಾಂಗ್ರೆಸ್ ನವರು ಅನ್ ಕಂಡಿಷನ್ ಸಪೋರ್ಟ್ ಎಲ್ಲಿ ಕೊಟ್ಟಿದ್ದರು? ಮುಖ್ಯಮಂತ್ರಿಯನ್ನು ಗುಲಾಮರನ್ನಾಗಿ ಮಾಡಿದ್ದರು. ಈಗ ಕೊಟ್ಟ ಕುದುರೆಯ ಬಗ್ಗೆ ಮಾತನಾಡುತ್ತಿದ್ದಾರೆ. ಸಿಎಂ ಮಾಡಿ ಸ್ಲೋ ಪಾಯಿಸನ್ ಕೊಟ್ಟಿದ್ದರು.ಈಗ ಪಂಚರತ್ನ ಅಂತ ವ್ಯಂಗ್ಯ ವಾಡುತ್ತಿದ್ದಾರೆ. ಒಂದು ಚಡ್ಡಿ ತಗೊಂಡ್ರೆ ಎರಡು ಚಡ್ಡಿ ಫ್ರಿ ಅಂತಾರಲ್ಲೆ ಹಂಗೆ ಈಗ ಉಚಿತ ಹೇಳುತ್ತಿದ್ದಾರೆ ಸಿದ್ದರಾಮಯ್ಯ ಪಂಚರತ್ನ ಕಾರ್ಯಕ್ರಮ ಬಗ್ಗೆ ಮಾತನಾಡುತ್ತಾರೆ. ಸಿದ್ದರಾಮಯ್ಯ ಏನು ಹೇಳುತ್ತಾರೋ ಅದಕ್ಕೆ ತದ್ವಿರುದ್ದ ಆಗುತ್ತೆ. ಕುಮಾರಸ್ವಾಮಿ ಅವರಪ್ಪನ ಆಣೆ ಸಿಎಂ ಆಗಲ್ಲ ಅಂದಿದ್ರು ನಾನು ಆದೆ, ಬಿಎಸ್ ವೈ ಆದರು. ಈಗ ಕಾಂಗ್ರೆಸ್ ಗೆಲ್ಲುತ್ತೆ ಅಂತಿದ್ದಾರೆ ಅದು ಸುಳ್ಳಾಗುತ್ತೆ ಎಂದರು.

ಇದನ್ನೂ ಓದಿ : Karnataka Election: 20-22 ಸೀಟು ಗೆಲ್ಲುವ ಜೆಡಿಎಸ್‌ಗೆ ಅಧಿಕಾರ ಕೊಡಬೇಡಿ; ನಮ್ಮನ್ನು ಗೆಲ್ಲಿಸಿ: ಸಿದ್ದರಾಮಯ್ಯ

ಸಿಎಂ ಇದ್ದಾಗ ಹೊಟೆಲ್ ನಲ್ಲಿ ಎಚ್ ಡಿಕೆ ಅಧಿಕಾರ ನಡೆಸಿದರು ಅನ್ನೋ ಸಿದ್ದರಾಮಯ್ಯ ಹೇಳಿಕೆ ವಿಚಾರದಲ್ಲಿ ಪ್ರತಿಕ್ರಿಯಿಸಿ, 78 ಸೀಟ್ ಇದ್ದವರು ಅವರು ಸರ್ಕಾರಿ ಬಂಗ್ಲೆ ಬಿಟ್ಟುಕೊಡಲಿಲ್ಲ. ನಾನೇನು ರಸ್ತೆಯಲ್ಲಿ ಅಧಿಕಾರ ನಡೆಸಲಾ? ಅಮಿತ್ ಶಾ ,ಸುರ್ಜಾವಾಲ, ರಾಹುಲ್ ಗಾಂಧಿ ಎಲ್ಲಿ ಉಳಿದುಕೊಳ್ಳುತ್ತಾರೆ? ಹೊಟೆಲ್ ನಲ್ಲಿ ಉಳಿದಿದ್ದೇ ತಪ್ಪಾ?, ನಾನೇನು ಅಲ್ಲಿ ಚಕ್ಕಂದಾ ಆಡಲು ಹೋಗಿದ್ನಾ? ಸೂಟಕೇಸ್ ತರಲು ಇಂಡಸ್ಟ್ರಲಿಸ್ಟಗಳನ್ನು ಕರೆಸಿದ್ದೆನ? 109 ಕೋಟಿ ರೂ.ಗೆ ಅರ್ಜಿ ಇಡುಕೊಂಡು ಬಂದ್ರಲ್ಲಾ, ಬಡಜನ ಆಸ್ಪತ್ರೆಗೆ ಅವರಿಗೆ ಕೊಡದಿದ್ರೆ ಆಗುತಿತ್ತಾ? 19 ಸಾವಿರ ಕೋಟಿ ರೂ. ಇವರ ಮನಗೆ ಹೋಗಿ ಕೊಟ್ಟಿದ್ದೇನೆ. 15 ಜನ ಹೋದ್ರಲ್ಲಾ ಒಬ್ಬೊಬ್ಬರಿಗೆ 500 ಕೋಟಿ‌ ರೂ. ಹಣ ಅಭಿವೃದ್ಧಿಗೆ ಕೊಟ್ಟಿದ್ದೇವೆ. ಸಿದ್ದುವನದಲ್ಲಿ ಕುಳಿತುಕೊಂಡು ಸಿದ್ದು ಔಷಧಿಯನ್ನು ಅರೆದರಲ್ಲಾ? ಸರ್ಕಾರ ಬೀಳಿಸ್ತಿನಿ ಅಂತ ಔಷಧಿ ಅರೆದರಲ್ಲಾ ಅಂತ ಆಕ್ರೋಶ ವ್ಯಕ್ತಪಡಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Prajwal Revanna Case: ಪ್ರಜ್ವಲ್‌ ಪೆನ್‌ಡ್ರೈವ್‌ ಹಂಚಿಕೆ ಕೇಸ್‌; ಪ್ರೀತಂ ಗೌಡ ಅತ್ಯಾಪ್ತರ ಸೆರೆ: ಬಿಜೆಪಿಗೆ ಚೆಕ್‌ಮೇಟ್‌?

Prajwal Revanna Case: ಲಿಖಿತ್ ಹಾಗೂ ಚೇತನ್‌ನನ್ನು ಎಸ್‌ಐಟಿ ಅಧಿಕಾರಿಗಳು ಸ್ಥಳ ಮಹಜರ್‌ಗೆ ಕರೆದೊಯ್ದಿದ್ದಾರೆ. ಇಬ್ಬರನ್ನೂ ಪ್ರತ್ಯೇಕ ವಾಹನಗಳಲ್ಲಿ ಕರೆದೊಯ್ದು ಸ್ಥಳ ಮಹಜರು ಮಾಡಲು ಮುಂದಾಗಲಿದೆ. ಬೆಳಗ್ಗೆಯಿಂದ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಿದ ಪೊಲೀಸರು, ಕೆಲವೊಂದು ಮಾಹಿತಿಗಳನ್ನು ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಇನ್ನು ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದ ಬಿಜೆಪಿ ನಾಯಕರಿಗೆ ಈ ಮೂಲಕ ಚೆಕ್‌ಮೇಟ್ ಕೊಡಲು ಮುಂದಾಗಲಾಗಿದೆಯೇ ಎಂಬ ಪ್ರಶ್ನೆ ಮೂಡಿದೆ.

VISTARANEWS.COM


on

Prajwal Revanna Case Preetham Gowda close aides arrested and Congress hits back at BJP
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೆನ್ ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಎಸ್‌ಐಟಿಯಿಂದ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಈ ಇಬ್ಬರೂ ಮಾಜಿ ಶಾಸಕ, ಹಾಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡ ಅವರ ಅತ್ಯಾಪ್ತರು ಎನ್ನಲಾಗಿದೆ.

ಶನಿವಾರ ಮಧ್ಯರಾತ್ರಿಯೇ ಚೇತನ್ ಹಾಗೂ ಲಿಖಿತ್‌ರನ್ನು ಎಸ್‌ಐಟಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹೀಗಾಗಿ ಪ್ರೀತಂಗೌಡ ಕಚೇರಿಯ ಸಿಬ್ಬಂದಿ ಹಾಗೂ ಪ್ರೀತಂಗೌಡ ಆಪ್ತನನ್ನು ವಶಕ್ಕೆ ಪಡೆಯಲಾಗಿದೆ. ಬಿಜೆಪಿಯ ಇಬ್ಬರು ಕಾರ್ಯಕರ್ತರನ್ನು ವಶಕ್ಕೆ ಪಡೆಯುವ ಮೂಲಕ ಬಿಜೆಪಿಗೆ ಚೆಕ್‌ಮೇಟ್ ಮಾಡಲಾಗಿದೆ.

ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದ ಬಿಜೆಪಿ ನಾಯಕರಿಗೆ ಈ ಮೂಲಕ ಚೆಕ್‌ಮೇಟ್ ಕೊಡಲು ಮುಂದಾಗಲಾಗಿದೆಯೇ ಎಂಬ ಪ್ರಶ್ನೆ ಮೂಡಿದೆ. ಪೆನ್ ಡ್ರೈವ್ ಇಟ್ಟುಕೊಂಡಿದ್ದ ಆರೋಪದಲ್ಲಿ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಲಿಖಿತ್‌ ಪ್ರೀತಂಗೌಡ ಅವರ ಜತೆ ಹಲವು ವರ್ಷಗಳಿಂದ ಗುರುತಿಸಿಕೊಂಡಿದ್ದರು.

ಈ ಇಬ್ಬರ ಹೆಸರೇ ಇರಲಿಲ್ಲ!

ಪೆನ್‌ಡ್ರೈವ್ ವೈರಲ್ ಸಂಬಂಧ ದಾಖಲಾಗಿರುವ ಕೇಸ್‌ನಲ್ಲಿ ಈ ಇಬ್ಬರ ಹೆಸರೇ ಇರಲಿಲ್ಲ. ಕೊನೆಗೆ ಈ ಇಬ್ಬರ ಮೇಲೆ ಹಂಚಿಕೆ ಎಫ್‌ಐಆರ್‌ ಅನ್ನು ದಾಖಲು ಮಾಡಲಾಗಿತ್ತು. ಹೀಗಾಗಿ ಹೆಸರೇ ಇಲ್ಲದ ಇಬ್ಬರನ್ನು ಎಸ್‌ಐಟಿ ಟೀಂ ವಶಕ್ಕೆ ಪಡೆದುಕೊಂಡಿದೆ. ಹೀಗಾಗಿ ಈ ಪ್ರಕರಣವು ದಿನಕ್ಕೊಂದು ತಿರುವನ್ನು ಪಡೆದುಕೊಳ್ಳುತ್ತಿದೆ.

ಪ್ರತ್ಯೇಕವಾಗಿ ಸ್ಥಳ ಮಹಜರು

ಲಿಖಿತ್ ಹಾಗೂ ಚೇತನ್‌ನನ್ನು ಎಸ್‌ಐಟಿ ಅಧಿಕಾರಿಗಳು ಸ್ಥಳ ಮಹಜರ್‌ಗೆ ಕರೆದೊಯ್ದಿದ್ದಾರೆ. ಇಬ್ಬರನ್ನೂ ಪ್ರತ್ಯೇಕ ವಾಹನಗಳಲ್ಲಿ ಕರೆದೊಯ್ದು ಸ್ಥಳ ಮಹಜರು ಮಾಡಲು ಮುಂದಾಗಲಿದೆ. ಬೆಳಗ್ಗೆಯಿಂದ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಿದ ಪೊಲೀಸರು, ಕೆಲವೊಂದು ಮಾಹಿತಿಗಳನ್ನು ಪಡೆದುಕೊಂಡಿದ್ದಾರೆ ಎನ್ನಲಾಗಿದೆ.

3 ದಿನದಿಂದ ಕುಟುಂಬಸ್ಥರನ್ನು ಭೇಟಿಯಾಗದೆ ಜೈಲಲ್ಲಿ ರೇವಣ್ಣ ಪರದಾಟ; ಪತ್ರಿಕೆಯೇ ಸಂಗಾತಿ!

ಮೈಸೂರಿನ ಕೆ.ಆರ್. ನಗರದ ಸಂತ್ರಸ್ತೆಯ ಅಪಹರಣಕ್ಕೆ ಸಂಬಂಧಿಸಿದಂತೆ ಜೈಲುಪಾಲಾಗಿರುವ ಜೆಡಿಎಸ್‌ ಶಾಸಕ ಎಚ್‌.ಡಿ.ರೇವಣ್ಣ (HD Revanna) ಅವರು ಕಳೆದ ಮೂರು ದಿನಗಳಿಂದಲೂ ಕುಟುಂಬಸ್ಥರನ್ನು ಭೇಟಿಯಾಗದೆ ಪರದಾಡುತ್ತಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಭಾನುವಾರ (ಮೇ 12) ಬೆಳಗ್ಗೆ ವೆಜ್‌ ಪಲಾವ್‌ ಸೇವಿಸಿದ ರೇವಣ್ಣ, ಕಾಫಿ ಕುಡಿದು, ಪೇಪರ್‌ ಓದಿದ್ದಾರೆ. ಕುಟುಂಬಸ್ಥರು, ಆಪ್ತರನ್ನು ಭೇಟಿಯಾಗದ ಕಾರಣ ಪತ್ರಿಕೆಯೇ ಅವರಿಗೆ ಸಂಗಾತಿಯಾದಂತಾಗಿದೆ. ಇದರ ಮಧ್ಯೆಯೇ, ರೇವಣ್ಣ ಅವರಿಗೆ ಮತ್ತೆ ಹೊಟ್ಟೆ ನೋವು ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ.

ಶುಕ್ರವಾರ, ಶನಿವಾರ ಹಾಗೂ ಭಾನುವಾರ ಸರ್ಕಾರಿ ರಜೆ ಹಿನ್ನೆಲೆಯಲ್ಲಿ ಎಚ್‌.ಡಿ.ರೇವಣ್ಣ ಅವರು ಯಾರನ್ನೂ ಭೇಟಿಯಾಗಲು ಸಾಧ್ಯವಾಗಿಲ್ಲ. ಇದರಿಂದಾಗಿ ಅವರು ಮಾನಸಿಕವಾಗಿ ಕುಗ್ಗಿಹೋಗಿದ್ದಾರೆ. ಜೈಲಿನ ಬ್ಯಾರಕ್‌ನಲ್ಲಿ ಕೆಲ ಹೊತ್ತು ವಾಕ್‌ ಮಾಡಿದ ರೇವಣ್ಣ, ಬಳಿಕ ದೀರ್ಘ ಅವಧಿಗೆ ಪೇಪರ್‌ ಓದುತ್ತಲೇ ಕುಳಿತಿದ್ದರು ಎಂದು ಜೈಲಿನ ಮೂಲಗಳು ಮಾಹಿತಿ ನೀಡಿವೆ. ರೇವಣ್ಣ ಅವರು ಸೋಮವಾರ (ಮೇ 13) ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಅವರು ಪರಪ್ಪನ ಅಗ್ರಹಾರದಲ್ಲೇ ಇದ್ದಾರೆ.

ಲೈಂಗಿಕ ದೌರ್ಜನಕ್ಕೀಡಾದ ಸಂತ್ರಸ್ತೆಯನ್ನು ಅಪಹರಣ ಮಾಡಿದ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಎಚ್‌.ಡಿ.ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಅವರು ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯವು ತಿರಸ್ಕರಿಸಿತ್ತು. ಇದಾದ ಬಳಿಕ ಅವರು ಸಲ್ಲಿಸಿದ ರೆಗ್ಯುಲರ್ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ್ದ ಕೋರ್ಟ್‌, ಜಾಮೀನು ನೀಡದೆ ಮೇ 13ಕ್ಕೆ ವಿಚಾರಣೆ ಮುಂದೂಡಿತ್ತು. ಹಾಗಾಗಿ, ಸೋಮವಾರ ಮತ್ತೆ ವಿಚಾರಣೆ ನಡೆಯಲಿದ್ದು, ರೇವಣ್ಣ ಜಾಮೀನಿನ ನಿರೀಕ್ಷೆಯಲ್ಲಿದ್ದಾರೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್ ರೇವಣ್ಣ ಹುಡುಕಿ ಕೊಟ್ಟವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ!

ಭವಾನಿ ರೇವಣ್ಣಗೆ 2ನೇ ನೋಟಿಸ್‌

ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಎಚ್‌.ಡಿ.ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರಿಗೂ ಸಂಕಷ್ಟ ಎದುರಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ಎರಡನೇ ನೋಟಿಸ್‌ ಜಾರಿ ಮಾಡಿದೆ. ಮೊದಲ ನೋಟಿಸ್ ಉತ್ತರಿಸದ ಹಿನ್ನೆಲೆಯಲ್ಲಿ ಎರಡನೇ ನೋಟಿಸ್ ಜಾರಿ ಮಾಡಲಾಗಿದೆ. ರೇವಣ್ಣ ಮೇಲೆ ಕೇಳಿ ಬಂದಿರುವ ಅಪಹರಣ ಪ್ರಕರಣದಲ್ಲಿ ಕೇಸ್‌ನಲ್ಲಿ ಕುಮ್ಮಕ್ಕು ಕೊಟ್ಟ ಆರೋಪವನ್ನು ಭವಾನಿ ರೇವಣ್ಣ ಹೊತ್ತಿದ್ದಾರೆ. ಈ ಸಂಬಂಧ ಹಲವಾರು ಪ್ರಶ್ನೆಗಳನ್ನು ಕೇಳಲು ಎಸ್‌ಐಟಿ ಸಿದ್ಧವಾಗಿದೆ. ಆದರೆ, ಭವಾನಿ ವಿಚಾರಣೆಗೆ ಹಾಜರಾಗದೆ ತಪ್ಪಿಸಿಕೊಳ್ಳುತ್ತಿದ್ದಾರೆ. ಈ ಬಾರಿಯೂ ಭವಾನಿ ವಿಚಾರಣೆಗೆ ಹಾಜರಾಗದಿದ್ದರೆ ಎಸ್‌ಐಟಿ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಲು ಸಿದ್ಧತೆ ನಡೆಸಿದೆ.

Continue Reading

ಕ್ರೈಂ

Prajwal Revanna Case: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಕೇಸ್‌; ಇಬ್ಬರು ಪೆನ್‌ಡ್ರೈವ್‌ ಹಂಚಿಕೆದಾರರ ಅರೆಸ್ಟ್‌

Prajwal Revanna Case: ಬೇಲೂರಿನ ಕಾಂಗ್ರೆಸ್ ಕಾರ್ಯಕರ್ತನಾಗಿರುವ ಹಾಸನದಾದ್ಯಂತ ಅಶ್ಲೀಲ ವಿಡಿಯೊವನ್ನು ಪೆನ್ ಡ್ರೈವ್ ಮೂಲಕ ಹಂಚಿಕೆ ಮಾಡಿದ ಆರೋಪ ಚೇತನ್ ಮೇಲೆ ಕೇಳಿಬಂದಿತ್ತು. ಈ ಸಂಬಂಧ ಹಾಸನ ಸೈಬರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು. ಬಳಿಕ ಈ ಕೇಸ್‌ ಎಸ್‌ಐಟಿಗೆ ವರ್ಗಾವಣೆಯಾಗಿತ್ತು. ಇದೀಗ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಆದರೆ, ಇನ್ನಿಬ್ಬರು ಪ್ರಮುಖ ಆರೋಪಿಗಳಾದ ನವೀನ್ ಗೌಡ ಹಾಗೂ ಪುಟ್ಟರಾಜುವಿಗಾಗಿ ಪೊಲೀಸರು ಹುಡುಕಾಟವನ್ನು ಮುಂದುವರಿಸಿದ್ದಾರೆ.

VISTARANEWS.COM


on

Prajwal Revanna Case Two people of pen drive allottees arrested
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೆನ್ ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಎಸ್‌ಐಟಿಯಿಂದ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಚೇತನ್ ಹಾಗೂ ಲಿಖಿತ್ ಬಂಧಿತ ಆರೋಪಿಗಳು. ಇವರ ನಿರೀಕ್ಷಣಾ ಜಾಮೀನು ವಜಾ ಬೆನ್ನಲ್ಲೇ ಇಬ್ಬರು ಆರೋಪಿಗಳನ್ನು ಅರೆಸ್ಟ್‌ ಮಾಡಲಾಗಿದೆ.

ಬೇಲೂರಿನ ಕಾಂಗ್ರೆಸ್ ಕಾರ್ಯಕರ್ತನಾಗಿರುವ ಹಾಸನದಾದ್ಯಂತ ಅಶ್ಲೀಲ ವಿಡಿಯೊವನ್ನು ಪೆನ್ ಡ್ರೈವ್ ಮೂಲಕ ಹಂಚಿಕೆ ಮಾಡಿದ ಆರೋಪ ಚೇತನ್ ಮೇಲೆ ಕೇಳಿಬಂದಿತ್ತು. ಈ ಸಂಬಂಧ ಹಾಸನ ಸೈಬರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು. ಬಳಿಕ ಈ ಕೇಸ್‌ ಎಸ್‌ಐಟಿಗೆ ವರ್ಗಾವಣೆಯಾಗಿತ್ತು. ಇದೀಗ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಆದರೆ, ಇನ್ನಿಬ್ಬರು ಪ್ರಮುಖ ಆರೋಪಿಗಳಾದ ನವೀನ್ ಗೌಡ ಹಾಗೂ ಪುಟ್ಟಿ @ ಪುಟ್ಟರಾಜುವಿಗಾಗಿ ಪೊಲೀಸರು ಹುಡುಕಾಟವನ್ನು ಮುಂದುವರಿಸಿದ್ದಾರೆ.

3 ದಿನದಿಂದ ಕುಟುಂಬಸ್ಥರನ್ನು ಭೇಟಿಯಾಗದೆ ಜೈಲಲ್ಲಿ ರೇವಣ್ಣ ಪರದಾಟ; ಪತ್ರಿಕೆಯೇ ಸಂಗಾತಿ!

ಮೈಸೂರಿನ ಕೆ.ಆರ್. ನಗರದ ಸಂತ್ರಸ್ತೆಯ ಅಪಹರಣಕ್ಕೆ ಸಂಬಂಧಿಸಿದಂತೆ ಜೈಲುಪಾಲಾಗಿರುವ ಜೆಡಿಎಸ್‌ ಶಾಸಕ ಎಚ್‌.ಡಿ.ರೇವಣ್ಣ (HD Revanna) ಅವರು ಕಳೆದ ಮೂರು ದಿನಗಳಿಂದಲೂ ಕುಟುಂಬಸ್ಥರನ್ನು ಭೇಟಿಯಾಗದೆ ಪರದಾಡುತ್ತಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಭಾನುವಾರ (ಮೇ 12) ಬೆಳಗ್ಗೆ ವೆಜ್‌ ಪಲಾವ್‌ ಸೇವಿಸಿದ ರೇವಣ್ಣ, ಕಾಫಿ ಕುಡಿದು, ಪೇಪರ್‌ ಓದಿದ್ದಾರೆ. ಕುಟುಂಬಸ್ಥರು, ಆಪ್ತರನ್ನು ಭೇಟಿಯಾಗದ ಕಾರಣ ಪತ್ರಿಕೆಯೇ ಅವರಿಗೆ ಸಂಗಾತಿಯಾದಂತಾಗಿದೆ. ಇದರ ಮಧ್ಯೆಯೇ, ರೇವಣ್ಣ ಅವರಿಗೆ ಮತ್ತೆ ಹೊಟ್ಟೆ ನೋವು ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ.

ಶುಕ್ರವಾರ, ಶನಿವಾರ ಹಾಗೂ ಭಾನುವಾರ ಸರ್ಕಾರಿ ರಜೆ ಹಿನ್ನೆಲೆಯಲ್ಲಿ ಎಚ್‌.ಡಿ.ರೇವಣ್ಣ ಅವರು ಯಾರನ್ನೂ ಭೇಟಿಯಾಗಲು ಸಾಧ್ಯವಾಗಿಲ್ಲ. ಇದರಿಂದಾಗಿ ಅವರು ಮಾನಸಿಕವಾಗಿ ಕುಗ್ಗಿಹೋಗಿದ್ದಾರೆ. ಜೈಲಿನ ಬ್ಯಾರಕ್‌ನಲ್ಲಿ ಕೆಲ ಹೊತ್ತು ವಾಕ್‌ ಮಾಡಿದ ರೇವಣ್ಣ, ಬಳಿಕ ದೀರ್ಘ ಅವಧಿಗೆ ಪೇಪರ್‌ ಓದುತ್ತಲೇ ಕುಳಿತಿದ್ದರು ಎಂದು ಜೈಲಿನ ಮೂಲಗಳು ಮಾಹಿತಿ ನೀಡಿವೆ. ರೇವಣ್ಣ ಅವರು ಸೋಮವಾರ (ಮೇ 13) ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಅವರು ಪರಪ್ಪನ ಅಗ್ರಹಾರದಲ್ಲೇ ಇದ್ದಾರೆ.

ಲೈಂಗಿಕ ದೌರ್ಜನಕ್ಕೀಡಾದ ಸಂತ್ರಸ್ತೆಯನ್ನು ಅಪಹರಣ ಮಾಡಿದ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಎಚ್‌.ಡಿ.ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಅವರು ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯವು ತಿರಸ್ಕರಿಸಿತ್ತು. ಇದಾದ ಬಳಿಕ ಅವರು ಸಲ್ಲಿಸಿದ ರೆಗ್ಯುಲರ್ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ್ದ ಕೋರ್ಟ್‌, ಜಾಮೀನು ನೀಡದೆ ಮೇ 13ಕ್ಕೆ ವಿಚಾರಣೆ ಮುಂದೂಡಿತ್ತು. ಹಾಗಾಗಿ, ಸೋಮವಾರ ಮತ್ತೆ ವಿಚಾರಣೆ ನಡೆಯಲಿದ್ದು, ರೇವಣ್ಣ ಜಾಮೀನಿನ ನಿರೀಕ್ಷೆಯಲ್ಲಿದ್ದಾರೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್ ರೇವಣ್ಣ ಹುಡುಕಿ ಕೊಟ್ಟವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ!

ಭವಾನಿ ರೇವಣ್ಣಗೆ 2ನೇ ನೋಟಿಸ್‌

ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಎಚ್‌.ಡಿ.ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರಿಗೂ ಸಂಕಷ್ಟ ಎದುರಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ಎರಡನೇ ನೋಟಿಸ್‌ ಜಾರಿ ಮಾಡಿದೆ. ಮೊದಲ ನೋಟಿಸ್ ಉತ್ತರಿಸದ ಹಿನ್ನೆಲೆಯಲ್ಲಿ ಎರಡನೇ ನೋಟಿಸ್ ಜಾರಿ ಮಾಡಲಾಗಿದೆ. ರೇವಣ್ಣ ಮೇಲೆ ಕೇಳಿ ಬಂದಿರುವ ಅಪಹರಣ ಪ್ರಕರಣದಲ್ಲಿ ಕೇಸ್‌ನಲ್ಲಿ ಕುಮ್ಮಕ್ಕು ಕೊಟ್ಟ ಆರೋಪವನ್ನು ಭವಾನಿ ರೇವಣ್ಣ ಹೊತ್ತಿದ್ದಾರೆ. ಈ ಸಂಬಂಧ ಹಲವಾರು ಪ್ರಶ್ನೆಗಳನ್ನು ಕೇಳಲು ಎಸ್‌ಐಟಿ ಸಿದ್ಧವಾಗಿದೆ. ಆದರೆ, ಭವಾನಿ ವಿಚಾರಣೆಗೆ ಹಾಜರಾಗದೆ ತಪ್ಪಿಸಿಕೊಳ್ಳುತ್ತಿದ್ದಾರೆ. ಈ ಬಾರಿಯೂ ಭವಾನಿ ವಿಚಾರಣೆಗೆ ಹಾಜರಾಗದಿದ್ದರೆ ಎಸ್‌ಐಟಿ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಲು ಸಿದ್ಧತೆ ನಡೆಸಿದೆ.

Continue Reading

ರಾಜಕೀಯ

Karnataka Legislative Council: ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ಐದಲ್ಲ 4 ಕ್ಷೇತ್ರ; ಜೆಡಿಎಸ್‌ಗೆ 2 ಕ್ಷೇತ್ರ ಬಿಟ್ಟುಕೊಡಲು ತೀರ್ಮಾನ?

Karnataka Legislative Council: ಬಿಜೆಪಿಯಿಂದ ಈಶಾನ್ಯ ಪದವೀಧರರ ಕ್ಷೇತ್ರದಲ್ಲಿ ಅಮರನಾಥ ಪಾಟೀಲ್, ನೈಋತ್ಯ ಪದವೀಧರರ ಕ್ಷೇತ್ರದಲ್ಲಿ ಡಾ. ಧನಂಜಯ ಸರ್ಜಿ, ಬೆಂಗಳೂರು ಪದವೀಧರರ ಕ್ಷೇತ್ರದಲ್ಲಿ ಅ. ದೇವೇಗೌಡ, ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ವೈ.ಎ. ನಾರಾಯಣಸ್ವಾಮಿ, ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಇ.ಸಿ. ನಿಂಗರಾಜು ಹೆಸರುಗಳನ್ನು ಪ್ರಕಟಿಸಲಾಗಿದೆ. ನೈಋತ್ಯ ಶಿಕ್ಷಕರ ಕ್ಷೇತ್ರವು ಜೆಡಿಎಸ್ ಪಾಲಾಗಿದ್ದು, ಎಸ್.ಎಲ್ ಭೋಜೆಗೌಡ ಕಣಕ್ಕೆ ಇಳಿದಿದ್ದಾರೆ. ಆದರೆ, ಈಗ ದಕ್ಷಿಣ ಶಿಕ್ಷಕರ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡುವ ತೀರ್ಮಾನಕ್ಕೆ ಬರಲಾಗಿದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಅಂತಿಮ ನಿರ್ಧಾರ ಹೊರಬರಬೇಕಿದೆ. ಮೇ 16 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.

VISTARANEWS.COM


on

six seats of Karnataka Legislative Council Elections to be held on June 3
Koo

ಬೆಂಗಳೂರು: ಸಂಸದ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪ್ರಕರಣದಿಂದಾಗಿ ಬಿಜೆಪಿ – ಜೆಡಿಎಸ್‌ ಮೈತ್ರಿ ಮುಗಿದೇ ಹೋಯಿತು ಎಂದೇ ಹೇಳಲಾಗುತ್ತಿತ್ತು. ಆದರೆ, ಮುಂಬರುವ ವಿಧಾನ ಪರಿಷತ್‌ ಚುನಾವಣೆಯಲ್ಲಿ (Karnataka Legislative Council Election) ಮೈತ್ರಿ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಬಿಜೆಪಿ ತೀರ್ಮಾನ ಮಾಡಿದ್ದು, ಆರು ಕ್ಷೇತ್ರಗಳ ಪೈಕಿ 5 ಕ್ಷೇತ್ರವನ್ನು ತಾನಿಟ್ಟುಕೊಂಡು ಇನ್ನೊಂದನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿತ್ತು. ಆದರೆ, ಈಗ ಈ ಸೀಟು ಹಂಚಿಕೆಯಲ್ಲಿಯೂ ಬದಲಾವಣೆ ಮಾತುಗಳು ಕೇಳಿಬಂದಿದ್ದು, ದಕ್ಷಿಣ ಶಿಕ್ಷಕರ‌ ಕ್ಷೇತ್ರದ ಅಭ್ಯರ್ಥಿಯನ್ನು ಬದಲಾವಣೆ ಮಾಡುವ ತೀರ್ಮಾನಕ್ಕೆ ಬಿಜೆಪಿ ಬಂದಿದೆ ಎನ್ನಲಾಗಿದೆ.

ಹೀಗಾಗಿ ಕರ್ನಾಟಕ ವಿಧಾನ ಪರಿಷತ್‌ ಚುನಾವಣೆಯಲ್ಲೂ ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿ ಮಾಡಿಕೊಂಡಿದ್ದು, ಆರು ಕ್ಷೇತ್ರಗಳ ಪೈಕಿ ಈ ಮೊದಲು ಐದು ಕ್ಷೇತ್ರಗಳನ್ನು ಬಿಜೆಪಿ (BJP) ಇಟ್ಟುಕೊಂಡರೆ, ಒಂದು ಕ್ಷೇತ್ರವನ್ನು ಜೆಡಿಎಸ್‌ಗೆ (JDS Karnataka) ಬಿಟ್ಟುಕೊಟ್ಟಿತ್ತು. ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿದ್ದ ಉಭಯ ಪಕ್ಷಗಳು ವಿಧಾನ ಪರಿಷತ್‌ ಚುನಾವಣೆಯಲ್ಲೂ ಜಂಟಿ ಹೋರಾಟ ನಡೆಸಲಿದೆ. ಜೂನ್‌ 3ರಂದು ಮೇಲ್ಮನೆಗೆ ಚುನಾವಣೆ ನಡೆಯಲಿದೆ. ಈಗ 4+2 ಮೈತ್ರಿ ಸೂತ್ರಕ್ಕೆ ಬಿಜೆಪಿ ಹೈಕಮಾಂಡ್ ಒಪ್ಪಿಗೆ ಸೂಚಿಸಿದೆ ಎಂದು ತಿಳಿದುಬಂದಿದೆ.

ಬಿಜೆಪಿಯಿಂದ ಈಶಾನ್ಯ ಪದವೀಧರರ ಕ್ಷೇತ್ರದಲ್ಲಿ ಅಮರನಾಥ ಪಾಟೀಲ್, ನೈಋತ್ಯ ಪದವೀಧರರ ಕ್ಷೇತ್ರದಲ್ಲಿ ಡಾ. ಧನಂಜಯ ಸರ್ಜಿ, ಬೆಂಗಳೂರು ಪದವೀಧರರ ಕ್ಷೇತ್ರದಲ್ಲಿ ಅ. ದೇವೇಗೌಡ, ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ವೈ.ಎ. ನಾರಾಯಣಸ್ವಾಮಿ, ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಇ.ಸಿ. ನಿಂಗರಾಜು ಹೆಸರುಗಳನ್ನು ಪ್ರಕಟಿಸಲಾಗಿದೆ. ನೈಋತ್ಯ ಶಿಕ್ಷಕರ ಕ್ಷೇತ್ರವು ಜೆಡಿಎಸ್ ಪಾಲಾಗಿದ್ದು, ಎಸ್.ಎಲ್ ಭೋಜೆಗೌಡ ಕಣಕ್ಕೆ ಇಳಿದಿದ್ದಾರೆ. ಆದರೆ, ಈಗ ದಕ್ಷಿಣ ಶಿಕ್ಷಕರ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡುವ ತೀರ್ಮಾನಕ್ಕೆ ಬರಲಾಗಿದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಅಂತಿಮ ನಿರ್ಧಾರ ಹೊರಬರಬೇಕಿದೆ. ಮೇ 16 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.

ಬಿಜೆಪಿಗೆ ನಾಲ್ಕು ಕ್ಷೇತ್ರ ಎಂದಿದ್ದ ಬಿಎಸ್‌ವೈ; ಆ ಮಾತೇ ನಿಜವಾಯ್ತು

ವಿಧಾನ ಪರಿಷತ್‌ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿ ಕುರಿತು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಸ್ಪಷ್ಟನೆ ನೀಡಿದ್ದರು. ಬಿಜೆಪಿ ನಾಲ್ಕು ಹಾಗೂ ಜೆಡಿಎಸ್‌ ಎರಡು ಕ್ಷೇತ್ರದಲ್ಲಿ ಸ್ಪರ್ಧೆ ಎಂದಿದ್ದರು. ಮೈಸೂರಿನಲ್ಲಿ ಮಾತನಾಡಿದ್ದ ಅವರು, “ಕರ್ನಾಟಕದಲ್ಲಿ ಯಾವುದೇ ಕಾರಣಕ್ಕೂ ಬಿಜೆಪಿ ಹಾಗೂ ಜೆಡಿಎಸ್‌ ನಡುವಿನ ಹೊಂದಾಣಿಕೆಯ ಮೈತ್ರಿಗೆ ಧಕ್ಕೆ ಬರುವುದಿಲ್ಲ. ಮುಂದೆಯೂ ಎರಡೂ ಪಕ್ಷಗಳ ನಡುವಿನ ಮೈತ್ರಿ ಮುಂದುವರಿಯುತ್ತದೆ. ವಿಧಾನ ಪರಿಷತ್‌ ಚುನಾವಣೆಯಲ್ಲೂ ಮೈತ್ರಿ ಇರುತ್ತದೆ. ಪರಿಷತ್‌ನ 6 ಸ್ಥಾನಗಳ ಪೈಕಿ ಜೆಡಿಎಸ್‌ಗೆ 2 ಹಾಗೂ ನಾವು 4 ಸ್ಥಾನಗಳಿಗೆ ಸ್ಪರ್ಧಿಸುತ್ತೇವೆ. ಎಲ್ಲಿ ಬಿಟ್ಟುಕೊಡಬೇಕು ಎಂಬುದರ ಬಗ್ಗೆ ತೀರ್ಮಾನ ಆಗಿಲ್ಲ” ಎಂದಿದ್ದರು.

ಇದಾದ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಸಭೆಯೂ ನಡೆದಿತ್ತು. ವಿಧಾನ ಪರಿಷತ್‌ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಸಂಬಂಧ ನಾಯಕರ ಜತೆ ವಿಜಯೇಂದ್ರ ಚರ್ಚೆ ಮಾಡಿದ್ದರು. ಆದರೆ, ಬಿಜೆಪಿ ಹೈಕಮಾಂಡ್‌ ಐವರು ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಆದರೆ, ಈಗ ಇಲ್ಲಿ ಕೊಂಚ ಬದಲಾವಣೆಗೆ ಬಿಜೆಪಿ ಹೈಕಮಾಂಡ್‌ ಮುಂದಾಗಿದೆ ಎನ್ನಲಾಗಿದೆ. ಒಂದು ವೇಳೆ ಬದಲಾವಣೆಯಾದರೆ, ಬಿ.ಎಸ್.‌ ಯಡಿಯೂರಪ್ಪ ಅವರ ಮಾತು ನಿಜವಾದಂತೆ ಆಗುತ್ತದೆ.

ಇದನ್ನೂ ಓದಿ: HD Revanna: 3 ದಿನದಿಂದ ಕುಟುಂಬಸ್ಥರನ್ನು ಭೇಟಿಯಾಗದೆ ಜೈಲಲ್ಲಿ ರೇವಣ್ಣ ಪರದಾಟ; ಪತ್ರಿಕೆಯೇ ಸಂಗಾತಿ!

ದಕ್ಷಿಣ ಶಿಕ್ಷಕರ‌ ಕ್ಷೇತ್ರದ ಅಭ್ಯರ್ಥಿ ಬದಲಾವಣೆ?

ದಕ್ಷಿಣ ಶಿಕ್ಷಕರ‌ ಕ್ಷೇತ್ರದ ಅಭ್ಯರ್ಥಿಯನ್ನು ಬದಲಾವಣೆ ಮಾಡಲು ಚಿಂತನೆ ನಡೆಸಲಾಗಿದೆ. ಈಗಾಗಲೇ ಇ.ಸಿ ನಿಂಗರಾಜು ಅವರ ಹೆಸರನ್ನು ಬಿಜೆಪಿ ಘೋಷಣೆ ಮಾಡಿತ್ತು. ಆದರೆ, ಈ ನಿರ್ಧಾರದಿಂದ ಬಿಜೆಪಿ ಹಿಂದೆ ಸರಿಯುತ್ತಿದ್ದು, ಜೆಡಿಎಸ್‌ಗೆ ಬಿಟ್ಟು‌ ಕೊಡುವ ಸಾಧ್ಯತೆ ಹೆಚ್ಚಿದೆ. ಗೆಲ್ಲುವ ಮಾನದಂಡದ ಆಧಾರದ ಮೇಲೆ ಜೆಡಿಎಸ್‌‌ಗೆ ಬಿಟ್ಟು ಕೊಡಲು ನಿರ್ಧಾರ ಮಾಡಲಾಗಿದೆ ಎನ್ನಲಾಗಿದೆ.

Continue Reading

ಕ್ರಿಕೆಟ್

IPL 2024: ಬೆಂಗಳೂರಲ್ಲಿಂದು ಆರ್‌ಸಿಬಿ, ಡೆಲ್ಲಿ ನಿರ್ಣಾಯಕ ಪಂದ್ಯ; ಮಳೆ ಅಡ್ಡಿ ಆಗತ್ತಾ ? ಇಲ್ಲಿದೆ ರಿಪೋರ್ಟ್

IPL 2024: ಆಡಿದ 12 ಪಂದ್ಯಗಳಲ್ಲಿ 5 ಪಂದ್ಯ ಗೆದ್ದು ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿರುವ ಆರ್‌ಸಿಬಿಯು ಪ್ಲೇಆಫ್‌ ತಲುಪಲು ಭಾನುವಾರ ನಡೆಯುವ ಪಂದ್ಯದಲ್ಲಿ ಗೆಲುವು ಸಾಧಿಸಲೇಬೇಕಿದೆ. ಗೆಲುವು ಸಾಧಿಸದಿದ್ದರೆ, ಟೂರ್ನಿಯಿಂದಲೇ ಆರ್‌ಸಿಬಿ ಹೊರಬೀಳಲಿದೆ. ಹಾಗಾಗಿ, ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧದ ಪಂದ್ಯವು ಆರ್‌ಸಿಬಿಗೆ ನಿರ್ಣಾಯಕ ಎನಿಸಿದೆ.

VISTARANEWS.COM


on

IPL 2024
Koo

ಬೆಂಗಳೂರು: ಪ್ರಸಕ್ತ ಆವೃತ್ತಿಯ ಐಪಿಎಲ್‌ ಟೂರ್ನಿಯು (IPL 2024) ದಿನೇದಿನೆ ಹೆಚ್ಚು ರೋಚಕವಾಗುತ್ತಿದೆ. ಪ್ಲೇ ಆಫ್‌, ರನ್‌ರೇಟ್‌, ಎದುರಾಳಿ ತಂಡದ ಸೋಲು-ಗೆಲುವಿನ ಲೆಕ್ಕಾಚಾರ ಜೋರಾಗಿದೆ. ಅದರಲ್ಲೂ, ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿರುವ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡವು ಪ್ಲೇಆಫ್‌ಗೇರಲು ಭಾನುವಾರ ಅಗ್ನಿಪರೀಕ್ಷೆ ಎದುರಿಸುತ್ತಿದೆ. ಇಂದು ಬೆಂಗಳೂರಿನ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್‌ಸಿಬಿ ಹಾಗೂ ಡೆಲ್ಲಿ ಕ್ಯಾಪಿಟಲ್ಸ್‌ (Delhi Capitals) ಮಧ್ಯೆ ನಿರ್ಣಾಯಕ ಪಂದ್ಯ ನಡೆಯಲಿದ್ದು, ಪ್ಲೇಆಫ್‌ಗೇರಲು ಉಭಯ ತಂಡಗಳಿಗೂ ಗೆಲುವು ಅನಿವಾರ್ಯವಾಗಿದೆ. ಇನ್ನು, ಆರ್‌ಸಿಬಿ, ಡೆಲ್ಲಿ ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆ ಇದೆ.

ವೆದರ್‌ ರಿಪೋರ್ಟ್‌ ಹೇಳುವುದೇನು?

ಅಕ್ಯುವೆದರ್‌ (Accuweather) ವರದಿ ಪ್ರಕಾರ, ಬೆಂಗಳೂರಿನಲ್ಲಿ ಭಾನುವಾರ ಸಂಜೆ ಮೋಡಿ ಕವಿದ ವಾತಾವರಣ ಇರಲಿದೆ ಎಂದು ತಿಳಿದುಬಂದಿದೆ. ಮಳೆ ಬರುವ ಸಾಧ್ಯತೆ ಕಡಿಮೆ ಇದೆ ಎಂದು ವರದಿ ತಿಳಿಸಿದೆ. ಮಳೆ ಬರುವ ಸಾಧ್ಯತೆ ಶೇ.50-60ರಷ್ಟು ಕಡಿಮೆ ಇದೆ. ಇನ್ನು, ತಾಪಮಾನ 30 ಡಿಗ್ರಿ ಸೆಲ್ಸಿಯಸ್‌ ಇರಲಿದ್ದು, ಗಂಟೆಗೆ 13 ಕಿಲೋಮೀಟರ್‌ ವೇಗದಲ್ಲಿ ಗಾಳಿ ಬೀಸಲಿದೆ ಎಂದು ತಿಳಿಸಿದೆ. ರಾಜ್ಯ ರಾಜಧಾನಿಯಲ್ಲಿ ಭಾನುವಾರ ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣ ಇದ್ದು, ಸಂಜೆ ಮಳೆ ಬಂದರೂ ಅಚ್ಚರಿ ಇಲ್ಲ ಎಂದು ಹೇಳಲಾಗುತ್ತಿದೆ.

ಹೇಗಿದೆ ಪಿಚ್?‌

ಚಿಕ್ಕದಾದ ಬೌಂಡರಿ ಲೈನ್, ಫ್ಲ್ಯಾಟ್‌ ಪಿಚ್‌ ಇರುವ ಕಾರಣ ಎಂ.ಚಿನ್ನಸ್ವಾಮಿ ಸ್ಟೇಡಿಯಂ ಬ್ಯಾಟರ್‌ಗಳ ಸ್ವರ್ಗ ಎಂದೇ ಹೇಳಲಾಗುತ್ತದೆ. ಹಾಗಾಗಿ, ಆರ್‌ಸಿಬಿ ಹಾಗೂ ಡೆಲ್ಲಿ ಪಂದ್ಯದಲ್ಲೂ ರನ್‌ ಮಳೆ ಸುರಿಯುವ ಸಾಧ್ಯತೆ ಇದೆ. ಪಿಚ್‌ ಸ್ಪಿನ್ನರ್‌ಗಳಿಗಿಂತ ಪೇಸರ್‌ಗಳಿಗೆ ಹೆಚ್ಚು ಅನುಕೂಲವಾಗಿದೆ. ಇನ್ನು ಕಳೆದ ಪಂದ್ಯದಲ್ಲಿ ಇದೇ ಮೈದಾನದಲ್ಲಿ ಆರ್‌ಸಿಬಿಯು ಗುಜರಾತ್‌ ಟೈಟನ್ಸ್‌ ವಿರುದ್ಧ ಭರ್ಜರಿ ಜಯ ಗಳಿಸಿರುವುದು ಆತ್ಮವಿಶ್ವಾಸ ಹೆಚ್ಚಿಸಿದೆ. ಅತ್ತ, ಆರ್‌ಸಿಬಿಯನ್ನು ತವರಿನಲ್ಲೇ ಮಣಿಸುವ ಮೂಲಕ ಪ್ಲೇಆಫ್‌ ಹಾದಿ ಸುಗಮ ಮಾಡಿಕೊಳ್ಳುವ ಯೋಜನೆಯನ್ನು ಡೆಲ್ಲಿ ಕ್ಯಾಪಿಟಲ್ಸ್‌ ಹಾಕಿಕೊಂಡಿದೆ. ಸಂಜೆ 7.30ಕ್ಕೆ ಪಂದ್ಯ ಆರಂಭವಾಗಲಿದೆ.

ಆರ್‌ಸಿಬಿಗೆ ಮಾಡು ಇಲ್ಲವೇ ಮಡಿ ಪಂದ್ಯ

ಆಡಿದ 12 ಪಂದ್ಯಗಳಲ್ಲಿ 5 ಪಂದ್ಯ ಗೆದ್ದು ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿರುವ ಆರ್‌ಸಿಬಿಯು ಪ್ಲೇಆಫ್‌ ತಲುಪಲು ಭಾನುವಾರ ನಡೆಯುವ ಪಂದ್ಯದಲ್ಲಿ ಗೆಲುವು ಸಾಧಿಸಲೇಬೇಕಿದೆ. ಗೆಲುವು ಸಾಧಿಸದಿದ್ದರೆ, ಟೂರ್ನಿಯಿಂದಲೇ ಆರ್‌ಸಿಬಿ ಹೊರಬೀಳಲಿದೆ. ಡೆಲ್ಲಿ ವಿರುದ್ಧ ಗೆದ್ದು, ಉಳಿದ ತಂಡಗಳ ಸೋಲು-ಗೆಲುವು, ರನ್‌ರೇಟ್‌ ಲೆಕ್ಕಾಚಾರದಲ್ಲಿರುವ ಆರ್‌ಸಿಬಿಯು ಕಳೆದ ನಾಲ್ಕು ಪಂದ್ಯಗಳಲ್ಲಿ ಸತತವಾಗಿ ಕಂಡಿರುವ ಗೆಲುವು, ತವರಿನ ಅಭಿಮಾನಿಗಳ ಬಲದೊಂದಿಗೆ ಕಣಕ್ಕಿಳಿಯುತ್ತಿದೆ. ಭಾನುವಾರ ಮಧ್ಯಾಹ್ನ ರಾಜಸ್ಥಾನ ರಾಯಲ್ಸ್‌ ಹಾಗೂ ಸಿಎಸ್‌ಕೆ ಪಂದ್ಯ ನಡೆಯಲಿದ್ದು, ಸಿಎಸ್‌ಕೆ ಸೋಲಿಗಾಗಿ ಆರ್‌ಸಿಬಿ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.

ಇದನ್ನೂ ಓದಿ: IPL 2024 : ಮುಂಬೈ ವಿರುದ್ಧ 18 ರನ್ ಜಯ, ಪ್ಲೇಆಫ್​ ಪ್ರವೇಶಿಸಿದ ಕೆಕೆಆರ್​ ತಂಡ

Continue Reading
Advertisement
Prajwal Revanna Case Preetham Gowda close aides arrested and Congress hits back at BJP
ಕ್ರೈಂ54 seconds ago

Prajwal Revanna Case: ಪ್ರಜ್ವಲ್‌ ಪೆನ್‌ಡ್ರೈವ್‌ ಹಂಚಿಕೆ ಕೇಸ್‌; ಪ್ರೀತಂ ಗೌಡ ಅತ್ಯಾಪ್ತರ ಸೆರೆ: ಬಿಜೆಪಿಗೆ ಚೆಕ್‌ಮೇಟ್‌?

Mother's Day
ಮಹಿಳೆ16 mins ago

Mother’s Day: ಆಕೆಗಾಗಿ ಕೊಂಚ ಸಮಯ ನೀಡೋಣ; ತಾಯಂದಿರ ದಿನ ಅರ್ಥಪೂರ್ಣವಾಗಿ ಆಚರಿಸೋಣ

Prajwal Revanna Case Two people of pen drive allottees arrested
ಕ್ರೈಂ29 mins ago

Prajwal Revanna Case: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಕೇಸ್‌; ಇಬ್ಬರು ಪೆನ್‌ಡ್ರೈವ್‌ ಹಂಚಿಕೆದಾರರ ಅರೆಸ್ಟ್‌

karnataka Rain Effected
ಮಳೆ30 mins ago

Karnataka Rain: ಸಿಡಿಲಾಘಾತಕ್ಕೆ ಕುರಿಗಳು ಬಲಿ; ಮೇವಿನ ಬಣವೆ ಭಸ್ಮ, ಮನೆಗಳಿಗೆ ಹಾನಿ

Pavithra Jayaram Trinayani serial Fame No More
ಕಿರುತೆರೆ33 mins ago

Pavithra Jayaram: ತೆಲುಗಿನ ‘ತ್ರಿನಯನಿ’ ಧಾರಾವಾಹಿ ನಟಿ, ಕನ್ನಡತಿ ಪವಿತ್ರ ಜಯರಾಂ ಅಪಘಾತದಲ್ಲಿ ನಿಧನ

six seats of Karnataka Legislative Council Elections to be held on June 3
ರಾಜಕೀಯ1 hour ago

Karnataka Legislative Council: ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ಐದಲ್ಲ 4 ಕ್ಷೇತ್ರ; ಜೆಡಿಎಸ್‌ಗೆ 2 ಕ್ಷೇತ್ರ ಬಿಟ್ಟುಕೊಡಲು ತೀರ್ಮಾನ?

IPL 2024
ಕ್ರಿಕೆಟ್1 hour ago

IPL 2024: ಬೆಂಗಳೂರಲ್ಲಿಂದು ಆರ್‌ಸಿಬಿ, ಡೆಲ್ಲಿ ನಿರ್ಣಾಯಕ ಪಂದ್ಯ; ಮಳೆ ಅಡ್ಡಿ ಆಗತ್ತಾ ? ಇಲ್ಲಿದೆ ರಿಪೋರ್ಟ್

Shekhar Suman Says Sex Workers Keep Society
ಬಾಲಿವುಡ್1 hour ago

Shekhar Suman: ಲೈಂಗಿಕ ಕಾರ್ಯಕರ್ತರು, ವೇಶ್ಯೆಯರ ನಡುವೆ ವ್ಯತ್ಯಾಸಗಳಿವೆ ಎಂದ ʻಹೀರಾಮಂಡಿʼನಟ!

Tirupathi Temple
ದೇಶ1 hour ago

Tirupati Temple: ತಿರುಪತಿಯ ಆಗಸ್ಟ್ ತಿಂಗಳ ಟಿಕೆಟ್ ವೇಳಾಪಟ್ಟಿ ಬಿಡುಗಡೆ: ಹೀಗೆ ಬುಕ್‌ ಮಾಡಿ

POSCO Case in Tumkur
ತುಮಕೂರು1 hour ago

POSCO Case : ತುಮಕೂರಿನಲ್ಲಿ ಪೈಶಾಚಿಕ ಕೃತ್ಯ; ತಂದೆಯಿಂದಲೇ ಮಗಳ ಮಾನಭಂಗ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case Two people of pen drive allottees arrested
ಕ್ರೈಂ29 mins ago

Prajwal Revanna Case: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಕೇಸ್‌; ಇಬ್ಬರು ಪೆನ್‌ಡ್ರೈವ್‌ ಹಂಚಿಕೆದಾರರ ಅರೆಸ್ಟ್‌

Dina Bhavishya
ಭವಿಷ್ಯ8 hours ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

Bengaluru News
ಬೆಂಗಳೂರು22 hours ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Dina Bhavishya
ಭವಿಷ್ಯ1 day ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ2 days ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ2 days ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ2 days ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ2 days ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ3 days ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ3 days ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

ಟ್ರೆಂಡಿಂಗ್‌