Sonam Wangchuk : ಹುಬ್ಬಳ್ಳಿ ಕಾರ್ಯಕ್ರಮದಲ್ಲಿ ಭಾನುವಾರ ಭಾಗವಹಿಸಬೇಕಿದ್ದ ʼ3 ಈಡಿಯೆಟ್ಸ್‌ʼ ವಿಜ್ಞಾನಿಗೆ ಲಡಾಖ್‌ನಲ್ಲಿ ಗೃಹಬಂಧನ - Vistara News

ದೇಶ

Sonam Wangchuk : ಹುಬ್ಬಳ್ಳಿ ಕಾರ್ಯಕ್ರಮದಲ್ಲಿ ಭಾನುವಾರ ಭಾಗವಹಿಸಬೇಕಿದ್ದ ʼ3 ಈಡಿಯೆಟ್ಸ್‌ʼ ವಿಜ್ಞಾನಿಗೆ ಲಡಾಖ್‌ನಲ್ಲಿ ಗೃಹಬಂಧನ

ಪ್ರತಿಭಟನೆ ನಡೆಸುವುದಾಗಿ ಘೋಷಿಸಿದ್ದಕ್ಕೆ ಲೆಫ್ಟಿನೆಂಟ್‌ ಗವರ್ನರ್‌ ಅವರು ಗೃಹಬಂಧನಕ್ಕೆ ಮುಂದಾಗಿದ್ದಾರೆ ಎಂದು ವಿಡಿಯೋ ಮೂಲಕ ಸೋನಮ್‌ ವಾಂಗ್‌ಚುಕ್‌ ಆರೋಫಿಸಿದ್ದಾರೆ.

VISTARANEWS.COM


on

Sonam wangchuk in house arrest in ladakh
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕೆಎಲ್‌ಇ ಸೊಸೈಟಿಯ ಬಿ.ವಿ. ಭೂಮರಡ್ಡಿ ಇಂಜಿನಿಯರಿಂಗ್‌ ಕಾಲೇಜು ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಭಾನುವಾರ ಭಾಗವಹಿಸಬೇಕಿದ್ದ ʼ3 ಈಡಿಎಟ್ಸ್‌ʼ ಖ್ಯಾತಿಯ ವಿಜ್ಞಾನಿ ಸೋನಮ್‌ ವಾಂಗ್‌ಚುಕ್‌ ಅವರಿಗೆ ಲಡಾಖ್‌ನಲ್ಲಿ ಗೃಹಬಂಧನ ವಿಧಿಸಲಾಗಿದೆ.

ಸೋನಮ್‌ ವಾಂಗ್‌ಚುಕ್‌ ಅವರು ಲಡಾಖ್‌ ನಿವಾಸಿಯಾಗಿದ್ದು, ಯುವ ಜನಾಂಗದಲ್ಲಿ ವಿಜ್ಞಾನ ಪ್ರಸಾರ, ಪರಿಸರ ಸಂರಕ್ಷಣೆ, ಸಾಮಾಜಿಕ ಸೇವೆ ಹಾಗೂ ವಿಜ್ಞಾನಿಯಾಗಿ ತೊಡಗಿಸಿಕೊಂಡಿದ್ದಾರೆ. ಆಮೀರ್‌ ಖಾನ್‌ ನಟನೆಯ 3 ಈಡಿಯೆಟ್ಸ್‌ ಸಿನಿಮಾದಲ್ಲಿ ಫುಂಗ್‌ಸುಕ್‌ ವಾಂಗ್ಡೊ ಪಾತ್ರವು ಇದೇ ಸೋನಮ್‌ ವಾಂಗ್‌ಚುಕ್‌ ಅವರ ಜೀವನವನ್ನೇ ಆಧರಿಸಿದ್ದಾಗಿತ್ತು.

ಜಮ್ಮು ಮತ್ತು ಕಾಶ್ಮೀರದಿಂದ ಸಂವಿಧಾನದ ಅನುಚ್ಛೆದ 370ನ್ನು ತೆರವುಗೊಳಿಸಿದ ನಂತರ ಲಡಾಖ್‌ ಪ್ರದೇಶವನ್ನು ಕೇಂದ್ರಾಡಳಿತ ಪ್ರದೇಶವೆಂದು ಘೋಷಣೆ ಮಾಡಲಾಯಿತು. ಆದರೆ ಈ ಮೂರು ವರ್ಷದಲ್ಲಿ ಸ್ಥಳೀಯರಿಗೆ ಉಸ್ಯೋಗ ಸೃಜನೆ, ಭೂ ಹಕ್ಕುಗಳನ್ನು ಕಾಪಾಡುವಲ್ಲಿ ಸ್ಥಳೀಯ ಸರ್ಕಾರ ವಿಫಲವಾಗಿದೆ ಎಂದು ಅನೇಖ ದಿನಗಳಿಂದ ಪ್ರತಿಭಟನೆ ನಡೆಯುತ್ತಿದೆ.

ಸಂವಿಧಾನದ 6ನೇ ಪರಿಚ್ಛೇದಕ್ಕೆ ಲಡಾಖ್‌ ಪ್ರದೇಶವನ್ನು ಸೇರಿಸಿದರೆ ವ್ಯಾಪಾರ ರಕ್ಷಣೆ ಆಗುತ್ತದೆ ಎಂಬ ಹೋರಾಟಕ್ಕೆ ಸೋನಮ್‌ ವಾಂಗ್‌ಚುಕ್‌ ಸಹ ಬೆಂಬಲ ಸೂಚಿಸಿದ್ದರು. ಖಾರ್‌ದೂಂಗ್ಲಾ ಪಾಸ್‌ನಲ್ಲಿ ಧರಣಿ ಮಾಡುವುದಾಗಿ ತಿಳಿಸಿದ್ದರು. ಆದರೆ ಅಲ್ಲಿ ಧರಣಿಗೆ ಅವಕಾಶ ಇಲ್ಲ ಎಂದು ತಿಳಿಸಿದ್ದ ಲೆಫ್ಟಿನೆಂಟ್‌ ಗವರ್ನರ್‌ ಕಚೇರಿ, ಲೇಹ್‌ ಬಳಿಯಿರುವ ಹಯಾಲ್‌ನಲ್ಲಿರುವ ಸೋನಮ್‌ ವಾಂಗ್‌ಚುಕ್‌ನಲ್ಲಿ ಮಾತ್ರವೇ ಮಾಡಲು ಅನುಮತಿ ನೀಡಲಾಗಿತ್ತು.

ಈ ಕುರಿತು ಶನಿವಾರ ಯೂಟ್ಯೂಬ್‌ ವಿಡಿಯೋ ಬಿಡುಗಡೆ ಮಾಡಿರುವ ಸೋನಮ್‌ ವಾಂಗ್‌ಚುಕ್‌, ಇದು ವಾಕ್‌ಸ್ವಾತಂತ್ರ್ಯವನ್ನು ದಮನಿಸುವ ಕಾರ್ಯವಾಗಿದೆ. ಕೇಂದ್ರ ಗೃಃಸಚಿವ ಅಮಿತ್‌ ಶಾ ಅವರು ಮಧ್ಯಪ್ರವೇಶಿಸಿ ಲಡಾಖ್‌ ಅಭಿವೃದ್ಧಿಗೆ ಮುಂದಾಗಬೇಕು ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ : ಶಶಿ ತರೂರ್​ ಕಲ್ಪನೆಯ ಭಾರತದಲ್ಲಿ ಜಮ್ಮು-ಕಾಶ್ಮೀರ, ಲಡಾಖ್​​ಗಳು ಇಲ್ಲವೇ ಇಲ್ಲ; ಮತ್ತೆ ಅದೇ ಮಹಾ ಪ್ರಮಾದ!

ಹುಬ್ಬಳ್ಳಿಯಲ್ಲಿರುವ ಬಿ.ವಿ. ಭೂಮರಡ್ಡಿ ಇಂಜಿನಿಯರಿಂಗ್‌ ಕಾಲೇಜಿನ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಶನಿವಾರ ಅಮಿತ್‌ ಶಾ ಭಾಗವಹಿಸಿದ್ದಾರೆ. ಭಾನುವಾರದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಉಪಾಹಾರ ಕೂಟ ಏರ್ಪಡಿಸಲಾಗಿತ್ತು. ಸೋಹನ್‌ ವಾಂಗ್‌ಚುಕ್‌ ಜತೆಗೆ ಇನ್ಫೋಸಿಸ್‌ ಪ್ರತಿಷ್ಠಾನದ ಸುಧಾ ಮೂರ್ತಿ ಸಹ ಭಾಗವಹಿಸಲಿದ್ದಾರೆ ಎಂದು ಕಳೆದ ವಾರ ಸುದ್ದಿಗೋಷ್ಠಿ ನಡೆಸಿದ್ದ ಕೆಎಲ್‌ಇ ತಾಂತ್ರಿಕ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಅಶೋಕ್‌ ಶೆಟ್ಟರ್‌ ತಿಳಿಸಿದ್ದರು.

ಆದರೆ ಇದೀಗ ಸೋನಮ್‌ ವಾಂಗ್‌ಚುಕ್‌ ಗೃಹಬಂಧನದಲ್ಲಿರುವುದರಿಂದ, ಬಿ.ವಿ.ಬಿ. ಕಾಲೇಜು ಕಾರ್ಯಕ್ರಮದಲ್ಲಿ ಭಾಗವಹಿಸುವುದು ಬಹುತೇಕ ಅಸಾಧ್ಯವಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

PM Narendra Modi: ಸಂಪತ್ತು ಮರುಹಂಚಿಕೆಯ ರಾಹುಲ್ ಗಾಂಧಿ ಐಡಿಯಾ ನಗರ ನಕ್ಸಲ್ ಚಿಂತನೆ: ಪಿಎಂ ಮೋದಿ

PM Narendra Modi: “ಅವರ ಪ್ರಕಾರ ಎಕ್ಸ್-ರೇ ಎಂದರೆ ಪ್ರತಿ ಮನೆಯ ಮೇಲೆ ದಾಳಿ ಮಾಡುವುದು. ಯಾವುದೇ ಮಹಿಳೆ ಧಾನ್ಯಗಳನ್ನು ಸಂಗ್ರಹಿಸಿಡುವ ಸ್ಥಳದಲ್ಲಿ ಚಿನ್ನವನ್ನು ಬಚ್ಚಿಟ್ಟಿದ್ದರೆ, ಅದನ್ನು ಕೂಡ ಎಕ್ಸ್-ರೇ ಮಾಡಲಾಗುವುದು. ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗುವುದು. ಭೂ ದಾಖಲೆಗಳನ್ನು ಪರಿಶೀಲಿಸಲಾಗುವುದು. ಮತ್ತು ಅವುಗಳನ್ನು ಮರುಹಂಚಿಕೆ ಮಾಡಲಾಗುವುದು” ಎಂದು ಪಿಎಂ ಮೋದಿ ಆಪಾದಿಸಿದ್ದಾರೆ.

VISTARANEWS.COM


on

PM Not OBC Said by Rahul Gandhi and BJP hits back to him
Koo

ಹೊಸದಿಲ್ಲಿ: ಸಂಪತ್ತಿನ ಮರು ಹಂಚಿಕೆಯ (wealth redistribution) ಕುರಿತು ರಾಹುಲ್‌ ಗಾಂಧಿಯವರ ಐಡಿಯಾ ʼನಗರ ನಕ್ಸಲ್‌ʼ (Urban naxal) ಚಿಂತನೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಕಿಡಿ ಕಾರಿದ್ದಾರೆ. ಟಿವಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ (PM Modi interview) ಅವರು ಇದನ್ನು ಪ್ರತಿಪಾದಿಸಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರು ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ (Congress manifesto) ಉಲ್ಲೇಖಿಸಿರುವ ಸಾಮಾಜಿಕ-ಆರ್ಥಿಕ ಸಮೀಕ್ಷೆಯನ್ನು (social-economic survey) ಸಮರ್ಥಿಸಿಕೊಂಡಿದ್ದು, ಈ ಬಗ್ಗೆ ಕೇಳಲಾದ ಪ್ರಶ್ನೆಗೆ ಅವರು ಉತ್ತರಿಸಿದರು. “ಅವರ ಪ್ರಕಾರ ಎಕ್ಸ್-ರೇ ಎಂದರೆ ಪ್ರತಿ ಮನೆಯ ಮೇಲೆ ದಾಳಿ ಮಾಡುವುದು. ಯಾವುದೇ ಮಹಿಳೆ ಧಾನ್ಯಗಳನ್ನು ಸಂಗ್ರಹಿಸಿಡುವ ಸ್ಥಳದಲ್ಲಿ ಚಿನ್ನವನ್ನು ಬಚ್ಚಿಟ್ಟಿದ್ದರೆ, ಅದನ್ನು ಕೂಡ ಎಕ್ಸ್-ರೇ ಮಾಡಲಾಗುವುದು. ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗುವುದು. ಭೂ ದಾಖಲೆಗಳನ್ನು ಪರಿಶೀಲಿಸಲಾಗುವುದು. ಮತ್ತು ಅವುಗಳನ್ನು ಮರುಹಂಚಿಕೆ ಮಾಡಲಾಗುವುದು. ಈ ಮಾವೋವಾದಿ ಸಿದ್ಧಾಂತವು ಜಗತ್ತಿಗೆ ಎಂದಿಗೂ ಸಹಾಯ ಮಾಡಿಲ್ಲ. ಇದು ಸಂಪೂರ್ಣವಾಗಿ ‘ಅರ್ಬನ್ ನಕ್ಸಲ್’ ಚಿಂತನೆ” ಎಂದು ಪ್ರಧಾನಿ ಹೇಳಿದರು.

“ಸಾಮಾನ್ಯವಾಗಿ ಮಾತನಾಡುತ್ತಲೇ ಇರುವ ಜಮಾತ್ 10 ದಿನಗಳ ನಂತರವೂ ಪ್ರಣಾಳಿಕೆಯ ಬಗ್ಗೆ ಮೌನವಾಗಿದೆ. ಏಕೆಂದರೆ ಅದು ಅವರಿಗೆ ಸಹಾಯ ಮಾಡುತ್ತದೆ. ಕಾಂಗ್ರೆಸನ್ನು ರಕ್ಷಿಸಲು ಅವರು ಮೌನವಾಗಿದ್ದಾರೆ. ಕಾಂಗ್ರೆಸ್‌ನವರು ನಿಮ್ಮನ್ನು ಲೂಟಿ ಮಾಡಲು ಯೋಜಿಸುತ್ತಿದ್ದಾರೆ ಎಂದು ದೇಶವನ್ನು ಜಾಗೃತಗೊಳಿಸುವುದು ನನ್ನ ಜವಾಬ್ದಾರಿ. ಅವರ ಕಾರ್ಯಯೋಜನೆಯ ಮುಂದಿನ ಭಾಗವೆಂದರೆ, ದೇಶದ ಸಂಪನ್ಮೂಲಗಳ ಮೊದಲ ಹಕ್ಕು ಯಾರಿಗೆ ಇದೆ ಎಂದು ಡಾ.ಮನಮೋಹನ್ ಸಿಂಗ್ ಸ್ಪಷ್ಟವಾಗಿ ಹೇಳಿದ್ದಾರೆ” ಎಂದಿದ್ದಾರೆ ಪಿಎಂ.

“ವಿವಾದಿತ ಪಿತ್ರಾರ್ಜಿತ ತೆರಿಗೆಯನ್ನು ಕಾಂಗ್ರೆಸ್ ಪ್ರತಿಪಾದಿಸುತ್ತಿದೆ ಮತ್ತು ಬಿಜೆಪಿ ಅದನ್ನು ಜಾರಿಗೊಳಿಸುವ ಅಥವಾ ಪರಿಗಣಿಸುವ ಯಾವುದೇ ಯೋಜನೆ ಹೊಂದಿಲ್ಲ. ಅವರ ಮಹಾಶಯರೊಬ್ಬರು (ರಾಹುಲ್‌ ಗಾಂಧಿ) ಅಮೇರಿಕಾದಲ್ಲಿ ಸಂದರ್ಶನವನ್ನು ನೀಡಿದಾಗ ಅವರು ಪಿತ್ರಾರ್ಜಿತ ತೆರಿಗೆಯ ವಿಷಯವನ್ನು ಪ್ರಸ್ತಾಪಿಸಿದರು. ನಿಮ್ಮ ಆಸ್ತಿಯ ಮೇಲೆ ಸುಮಾರು 55 ಪ್ರತಿಶತ ತೆರಿಗೆ ವಿಧಿಸಲಾಗುತ್ತದೆ. ಈಗ ನಾನು ಅಭಿವೃದ್ಧಿ ಮತ್ತು ಪರಂಪರೆಯ ಬಗ್ಗೆ ಮಾತನಾಡುತ್ತಿದ್ದೇನೆ ಮತ್ತು ಅವರು ಆ ಪರಂಪರೆಯನ್ನು ಲೂಟಿ ಮಾಡುವ ಮಾತನಾಡುತ್ತಿದ್ದಾರೆ. ಪ್ರಣಾಳಿಕೆಯಲ್ಲಿ ಹೇಳಿದ್ದನ್ನು ಮಾಡುವುದೇ ಅವರ ಇಂದಿನ ಇತಿಹಾಸ. ದೇಶವನ್ನು ಆ ದಿಕ್ಕಿನಲ್ಲಿ ಕೊಂಡೊಯ್ಯುತ್ತಿದ್ದಾರೆ ಎಂದು ದೇಶವಾಸಿಗಳಿಗೆ ತಿಳಿಸುವುದು ನನ್ನ ಜವಾಬ್ದಾರಿಯಾಗಿದೆ. ನೀವು ಅವರ ಜೊತೆ ಹೋಗಬೇಕೆ ಅಥವಾ ಬೇಡವೇ ಎಂದು ಈಗ ನೀವು ನಿರ್ಧರಿಸಿ” ಎಂದು ಮೋದಿ ನುಡಿದರು.

ಪಿತ್ರಾರ್ಜಿತ ತೆರಿಗೆ (Inheritance tax) ಕುರಿತು ಬಿಜೆಪಿ ನಿಲುವನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದರು. “ಭಾರತೀಯ ಜನತಾ ಪಕ್ಷ ಏನು ಮಾಡಲು ಯೋಜಿಸಿದೆ ಎಂಬುದನ್ನು ನಮ್ಮ ಪ್ರಣಾಳಿಕೆಯಲ್ಲಿ ಬರೆಯಲಾಗಿದೆ. ಅವರ ಯೋಜನೆಯನ್ನು ನಾವು ಮುಂದುವರಿಸುವುದಿಲ್ಲ. ನಾವು ನಮ್ಮ ಪ್ರಣಾಳಿಕೆ ಮತ್ತು ಕೆಲಸಗಳೊಂದಿಗೆ ದೇಶದ ಮುಂದೆ ಹೋಗುತ್ತೇವೆ. ದಯವಿಟ್ಟು ಅವರ ಆಲೋಚನೆಗಳನ್ನು ನಮ್ಮ ಮೇಲೆ ಹೇರಬೇಡಿ” ಎಂದು ಅವರು ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ ಅವರ ಇತ್ತೀಚಿನ ಹೇಳಿಕೆಗಳನ್ನು ಉಲ್ಲೇಖಿಸಿದರು.

ಕಾಂಗ್ರೆಸ್‌ನ ಸಾಗರೋತ್ತರ ವಿಭಾಗದ ಅಧ್ಯಕ್ಷ ಪಿತ್ರೋಡಾ ಅವರು ಸಂಪತ್ತಿನ ಮರುಹಂಚಿಕೆಯ ಕುರಿತು ಮಾತನಾಡುತ್ತ, ಯುಎಸ್‌ನಲ್ಲಿರುವ ಪಿತ್ರಾರ್ಜಿತ ಆಸ್ತಿ ತೆರಿಗೆಯ ಬಗ್ಗೆ ಉಲ್ಲೇಖಿಸಿ ವಿವಾದವನ್ನು ಹುಟ್ಟುಹಾಕಿದ್ದರು. ಈ ಮಾತುಗಳು ಬಿಜೆಪಿಗೆ ಮೇವು ಒದಗಿಸಿದ್ದು, ಕಾಂಗ್ರೆಸ್‌ ಕಂಗಾಲಾಗಿದೆ. ಉತ್ತರಾಧಿಕಾರ ತೆರಿಗೆಯು, ಮೃತ ವ್ಯಕ್ತಿಯ ಹಣ ಮತ್ತು ಆಸ್ತಿಯ ಒಟ್ಟು ಮೌಲ್ಯದ ಮೇಲೆ ವಿಧಿಸುವ ತೆರಿಗೆಯಾಗಿದ್ದು, ಅದನ್ನು ಅವರ ಕಾನೂನುಬದ್ಧ ಉತ್ತರಾಧಿಕಾರಿಗಳಿಗೆ ವಿತರಿಸಲಾಗುತ್ತದೆ. ಭಾರತದಲ್ಲಿ ಅಂತಹ ವ್ಯವಸ್ಥೆ ಇಲ್ಲ.

“ನಾನು ಮೊದಲ ದಿನವೇ ಕಾಂಗ್ರೆಸ್‌ ಪ್ರಣಾಳಿಕೆ ಬಗ್ಗೆ ಕಾಮೆಂಟ್ ಮಾಡಿದ್ದೆ. ಪ್ರಣಾಳಿಕೆ ನೋಡಿದ ಮೇಲೆ ಅದರಲ್ಲಿ ಮುಸ್ಲಿಂ ಲೀಗ್‌ನ ಮುದ್ರೆ ಇದೆ ಎಂದು ಅನಿಸುತ್ತಿದೆ. ಮಾಧ್ಯಮದವರು ಬೆಚ್ಚಿ ಬೀಳುತ್ತಾರೆ ಎಂದುಕೊಂಡೆ. ಆದರೆ ಅವರು ಕಾಂಗ್ರೆಸ್ ಪ್ರಸ್ತುತಪಡಿಸಿದ್ದನ್ನು ಹೇಳುತ್ತಲೇ ಇದ್ದಾರೆ. ಪ್ರಣಾಳಿಕೆಯಲ್ಲಿನ ಕೆಡುಕುಗಳನ್ನು ಯಾರಾದರೂ ಹೊರತರುತ್ತಾರೆ ಎಂದು ನಾನು 10 ದಿನಗಳವರೆಗೆ ಕಾಯುತ್ತಿದ್ದೆ. ಏಕೆಂದರೆ ಅದನ್ನು ಪಕ್ಷಪಾತವಿಲ್ಲದ ರೀತಿಯಲ್ಲಿ ಹೊರತಂದರೆ ಒಳ್ಳೆಯದು. ಅಂತಿಮವಾಗಿ ನಾನು ಈ ಸತ್ಯಗಳನ್ನು ಹೊರತರಲೇಬೇಕಾಯಿತು” ಎಂದು ಪಿಎಂ ಹೇಳಿದ್ದಾರೆ.

ಇದನ್ನೂ ಓದಿ: PM Narendra Modi: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಅಬ್ಬರದ ಪ್ರಚಾರಕ್ಕೆ ಸಿದ್ಧತೆ

Continue Reading

ಅಂಕಣ

ರಾಜಮಾರ್ಗ ಅಂಕಣ: ರಿಶಭ್ ಪಂತ್ – ಕಮ್ ಬ್ಯಾಕ್ ಅಂದರೆ ಹೀಗಿರಬೇಕು!

ರಾಜಮಾರ್ಗ ಅಂಕಣ: ಆಕ್ರಮಣಕಾರಿ ರಿಶಭ್ ಪಂತ್ ಡೆಹ್ರಾಡೂನ್ ಆಸ್ಪತ್ರೆಯಲ್ಲಿ ಅರ್ಧ ಹೆಣವಾಗಿ ಮಲಗಿದ್ದ! ಯಾರಿಗೂ ಆತ ಮರಳಿ ಕ್ರಿಕೆಟ್ ಆಡುವ ಭರವಸೆ ಇರಲಿಲ್ಲ. ಆದರೆ ಈಗ, ಈ ಐಪಿಎಲ್ ಸೀಸನ್‌ನಲ್ಲಿ ವಿಕೆಟ್ ಮುಂದೆ ಮತ್ತು ಹಿಂದೆ ಆತ ಆಕ್ರಮಣಕಾರಿ ಆಗಿ ಆಡುತ್ತಿರುವುದನ್ನು ನೀವು ನೋಡಿಯೇ ನೋಡಿರುತ್ತೀರಿ!

VISTARANEWS.COM


on

Rishabh Pant
Koo

ಹೋರಾಟಗಾರ ಕ್ರಿಕೆಟರ್ ಕ್ರಿಟಿಕಲ್ ಇಂಜುರಿ ಗೆದ್ದು ಬಂದ ಕಥೆ

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: 2022 ಡಿಸೆಂಬರ್ 30ರ ಮಧ್ಯರಾತ್ರಿ ರೂರ್ಕಿ ಎಂಬಲ್ಲಿ ಆ ಕ್ರಿಕೆಟರ್ ಕಾರು ಅಪಘಾತಕ್ಕೆ ಒಳಗಾಗಿತ್ತು. ಆ ಅಪಘಾತದ ತೀವ್ರತೆಯನ್ನು ನೋಡಿದವರು ಆತ ಬದುಕಿದ್ದೇ ಗ್ರೇಟ್ ಅಂದಿದ್ದರು. ಬಲಗಾಲಿನ ಮಂಡಿ ಚಿಪ್ಪು ಸಮೇತ 90 ಡಿಗ್ರೀಯಷ್ಟು ತಿರುಗಿ ನಿಂತಿತ್ತು! ಮೈಯೆಲ್ಲಾ ಗಾಯಗಳು ಮತ್ತು ಎಲುಬು ಮುರಿತಗಳು! ಡೆಹ್ರಾಡೂನ್ ಆಸ್ಪತ್ರೆಯ ವೈದ್ಯರು ಆತನ ದೇಹದಲ್ಲಾದ ಗಾಯ ಮತ್ತು ಮೂಳೆ ಮುರಿತಗಳನ್ನು ನೋಡಿದಾಗ ‘ನೀನಿನ್ನು ಕ್ರಿಕೆಟ್ ಆಡೋದು ಕಷ್ಟ’ ಅಂದಿದ್ದರು. ಒಬ್ಬರಂತೂ ‘ನೀನು ನಿನ್ನ ಕಾಲುಗಳ ಮೇಲೆ ನಿಂತರೆ ಅದೇ ದೊಡ್ಡ ಸಾಧನೆ’ ಅಂದಿದ್ದರು!

ಅಮ್ಮಾ ನನಗೆ ಸಹಾಯ ಮಾಡು, ನಾನು ವಿಶ್ವಕಪ್ ಆಡಬೇಕು!

ಆ ಕ್ರಿಕೆಟಿಗ ಆಸ್ಪತ್ರೆಯ ಬೆಡ್ ಮೇಲೆ ಮಲಗಿ ಚೀರಿ ಚೀರಿ ಹಾಗೆ ಹೇಳುತ್ತಿದ್ದರೆ ನರ್ಸ್ ಮತ್ತು ವೈದ್ಯರು ಕಣ್ಣೀರು ಸುರಿಸುತ್ತಿದ್ದರು! ಕ್ರಿಕೆಟ್ ವಿಶ್ವಕಪ್ ಆರಂಭವಾಗಲು ಕೇವಲ ಒಂದೂವರೆ ವರ್ಷ ಬಾಕಿ ಇತ್ತು. ವೈದ್ಯರು ‘ಅನಿವಾರ್ಯ ಆದರೆ ಆತನ ಒಂದು ಕಾಲು ತುಂಡು ಮಾಡಬೇಕಾಗಬಹುದು!’ ಎಂದು ಅವನ ಅಮ್ಮನ ಕಿವಿಯಲ್ಲಿ ಪಿಸುಗುಟ್ಟಿದ್ದು, ಆತನ ಅಮ್ಮ ಬಾತ್ ರೂಮ್ ಒಳಗೆ ಹೋಗಿ ಕಣ್ಣೀರು ಸುರಿಸಿದ್ದು ಎಲ್ಲವೂ ನಡೆದು ಹೋಗಿತ್ತು!

ಆತ ರಿಶಭ್ ಪಂತ್ – ಆಕ್ರಮಣಕ್ಕೆ ಇನ್ನೊಂದು ಹೆಸರು!

ಅಪಘಾತ ಆಗುವ ಮೊದಲು ಆತ ಭಾರತೀಯ ಕ್ರಿಕೆಟ್ ತಂಡದ ಮೂರೂ ಫಾರ್ಮಾಟಗಳಲ್ಲಿ ಶಾಶ್ವತ ಸ್ಥಾನ ಪಡೆದಿದ್ದ! ಆಕ್ರಮಣಕ್ಕೆ ಹೆಸರಾಗಿದ್ದ. ಸಲೀಸಾಗಿ ಒಂದೇ ಅವಧಿಯಲ್ಲಿ ಡಬಲ್ ಸೆಂಚುರಿ ಹೊಡೆಯುತ್ತಿದ್ದ. ವಿಕೆಟ್ ಹಿಂದೆ ಪಾದರಸದ ಚುರುಕು ಇತ್ತು. ಆತನ ಆಟವನ್ನು ನೋಡಿದವರು ʻಈತ ಧೋನಿಯ ಉತ್ತರಾಧಿಕಾರಿ ಆಗುವುದು ಖಂಡಿತ’ ಅನ್ನುತ್ತಿದ್ದರು!

ಅಂತಹ ರಿಶಭ್ ಪಂತ್ ಡೆಹ್ರಾಡೂನ್ ಆಸ್ಪತ್ರೆಯಲ್ಲಿ ಅರ್ಧ ಹೆಣವಾಗಿ ಮಲಗಿದ್ದ! ಯಾರಿಗೂ ಆತ ಮರಳಿ ಕ್ರಿಕೆಟ್ ಆಡುವ ಭರವಸೆ ಇರಲಿಲ್ಲ.

ಆತನ ನೆರವಿಗೆ ನಿಂತವರು ಕೇವಲ ನಾಲ್ಕೇ ಜನ

ಮರಳಿ ಕ್ರಿಕೆಟ್ ಮೈದಾನಕ್ಕೆ ಇಳಿಯಬೇಕು ಎಂದು ನಿದ್ದೆಯಲ್ಲಿಯೂ ಕನವರಿಸುತ್ತಿದ್ದ ಆತನ ನೆರವಿಗೆ ನಿಂತವರು ಕೇವಲ ನಾಲ್ಕೇ ಜನ. ಅವರೆಲ್ಲರೂ ಆತನ ಕ್ರಿಕೆಟ್ ದೈತ್ಯ ಪ್ರತಿಭೆಯನ್ನು ಕಂಡವರು. ಒಬ್ಬರು ಆತನಿಗೆ ಶಸ್ತ್ರಚಿಕಿತ್ಸೆ ಮಾಡಿದ ಮುಂಬಯಿಯ ಅಂಬಾನಿ ಆಸ್ಪತ್ರೆಯ ಖ್ಯಾತ ಸರ್ಜನ್ ದಿನ್ ಶಾ ಪಾದ್ರಿವಾಲ. ಇನ್ನೊಬ್ಬರು ಉತ್ತರಾಖಂಡದ ಶಾಸಕ ಉಮೇಶ್ ಕುಮಾರ್. ಇನ್ನೊಬ್ಬರು ನ್ಯಾಶನಲ್ ಕ್ರಿಕೆಟ್ ಅಕಾಡೆಮಿಯ ಕೋಚ್ ಆದ ಧನಂಜಯ್ ಕೌಶಿಕ್. ನಾಲ್ಕನೆಯರು ರಿಷಭನ ತಾಯಿ! ಆಕೆ ನಿಜಕ್ಕೂ ಗಾಡ್ಸ್ ಗ್ರೇಸ್ ಅನ್ನಬಹುದು. ಅವರೆಲ್ಲರಿಗೂ ಆತ ಭಾರತಕ್ಕೆ ಎಷ್ಟು ಅಮೂಲ್ಯ ಆಟಗಾರ ಎಂದು ಗೊತ್ತಿತ್ತು! ಆಸ್ಪತ್ರೆಯ ಹಾಸಿಗೆಗೆ ಒರಗಿ ಆತ ಪಟ್ಟ ಮಾನಸಿಕ ಮತ್ತು ದೈಹಿಕ ನೋವು, ಹೊರಹಾಕಿದ ನಿಟ್ಟುಸಿರು ಎಲ್ಲವೂ ಆ ನಾಲ್ಕು ಮಂದಿಗೆ ಗೊತ್ತಿತ್ತು.

ಆ ಹದಿನೈದು ತಿಂಗಳು…!

Rishabh Panth

ಆ ಅವಧಿಯಲ್ಲಿ ಏಷಿಯಾ ಕಪ್, ವಿಶ್ವ ಟೆಸ್ಟ್ ಚಾಂಪಿಯನಶಿಪ್, ವಿಶ್ವ ಕಪ್ ಎಲ್ಲವೂ ನಡೆದುಹೋಯಿತು! ಭಾರತ ಹಲವು ವಿಕೆಟ್ ಕೀಪರಗಳ ಪ್ರಯೋಗ ಮಾಡಿತು. ಭಾರತ ಒಂದೂ ಕಪ್ ಗೆಲ್ಲಲಿಲ್ಲ. ಭಾರತಕ್ಕೆ ಶಾಶ್ವತವಾದ ವಿಕೆಟ್ ಕೀಪರ್ ಸಿಗಲಿಲ್ಲ! ರಿಷಭ್ ಈ ಎಲ್ಲ ಪಂದ್ಯಗಳನ್ನು ನೋಡುತ್ತಿದ್ದ. ವಿಕೆಟ್ ಹಿಂದೆ ಅವನಿಗೆ ಅವನೇ ಕಾಣುತ್ತಿದ್ದ!

ಹಾಸಿಗೆಯಿಂದ ಎದ್ದು ಕ್ರಚಸ್ ಹಿಡಿದು ನಡೆದದ್ದು, ನಂತರ ಕ್ರಚಸ್ ಬದಿಗೆ ಇಟ್ಟು ಗೋಡೆ ಹಿಡಿದು ನಡೆದದ್ದು, ನಂತರ ಎಲ್ಲವನ್ನೂ ಬಿಟ್ಟು ನಿಧಾನವಾಗಿ ತನ್ನ ಕಾಲ ಮೇಲೆ ಗಟ್ಟಿಯಾಗಿ ನಿಂತದ್ದು, ಜಾಗಿಂಗ್ ಮಾಡಿದ್ದು, ಓಡಿದ್ದು, ಕಾಲುಗಳಿಗೆ ಫಿಸಿಯೋ ಥೆರಪಿ ಆದದ್ದು, ಆತ್ಮವಿಶ್ವಾಸ ಬೆಳೆಸಿಕೊಳ್ಳಲು ಕೌನ್ಸೆಲಿಂಗ್ ನೆರವು ಪಡೆದದ್ದು….ಇವೆಲ್ಲವೂ ಕನಸಿನಂತೆ ಗೋಚರ ಆಗುತ್ತಿದೆ. ಮುಂದೆ ನಿರಂತರ ಕ್ರಿಕೆಟ್ ಕೋಚಿಂಗ್, ಮೈದಾನದಲ್ಲಿ ಬೆವರು ಹರಿಸಿದ್ದು, ಅಪಘಾತವಾದ ಕಾಲು ಬಗ್ಗಿಸಲು ತುಂಬ ಕಷ್ಟಪಟ್ಟದ್ದು ಒಂದು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾದಂತೆ ಅನ್ನಿಸುತ್ತಿದೆ.

2024 ಮಾರ್ಚ್ 12….

ಒಬ್ಬ ಕ್ರಿಕೆಟರ್ ಮತ್ತೆ ಸ್ಪರ್ಧಾತ್ಮಕ ಕ್ರಿಕೆಟ್ ಮೈದಾನಕ್ಕೆ ಇಳಿಯಲು ಬಿಸಿಸಿಐ ಫಿಟ್ನೆಸ್ ಸರ್ಟಿಫಿಕೇಟ್ ಕೊಡಬೇಕು. ಅದು ಸುಲಭದ ಕೆಲಸ ಅಲ್ಲ. ಅಲ್ಲಿ ಕೂಡ ರಿಶಭ್ ಇಚ್ಛಾಶಕ್ತಿ ಗೆದ್ದಿತ್ತು. ಮಾರ್ಚ್ 12ರಂದು ಆತನು ಕ್ರಿಕೆಟ್ ಆಡಲು ಸಂಪೂರ್ಣ ಫಿಟ್ ಎಂದು ಬಿಸಿಸಿಐ ಘೋಷಣೆ ಮಾಡಿದಾಗ ಆತ ಮೈದಾನದ ಮಧ್ಯೆ ಕೂತು ಜೋರಾಗಿ ಕಣ್ಣೀರು ಹಾಕಿದ್ದನು! ಎರಡೇ ದಿನದಲ್ಲಿ ಡೆಲ್ಲಿ ಐಪಿಎಲ್ ತಂಡವು ಆತನನ್ನು ತೆರೆದ ತೋಳುಗಳಿಂದ ಸ್ವಾಗತ ಮಾಡಿ ನಾಯಕತ್ವವನ್ನು ಕೂಡ ಆತನಿಗೆ ನೀಡಿತ್ತು! ಈ ಐಪಿಎಲ್ ಸೀಸನ್‌ನಲ್ಲಿ ವಿಕೆಟ್ ಮುಂದೆ ಮತ್ತು ಹಿಂದೆ ಆತ ಆಕ್ರಮಣಕಾರಿ ಆಗಿ ಆಡುತ್ತಿರುವುದನ್ನು ನೀವು ನೋಡಿಯೇ ನೋಡಿರುತ್ತೀರಿ!

ಮುಂದಿನ T20 ವಿಶ್ವಕಪ್ ಟೂರ್ನಿಯಲ್ಲಿ ಭಾರತಕ್ಕೆ ಒಬ್ಬ ಅದ್ಭುತ ಬ್ಯಾಟರ್ ಮತ್ತು ವಿಕೆಟ್ ಕೀಪರ್ ದೊರಕಿದ್ದನ್ನು ನಾವು ಸಂಭ್ರಮಿಸಲು ಯಾವ ಅಡ್ಡಿ ಕೂಡ ಇಲ್ಲ ಎನ್ನಬಹುದು. ಆತನಿಗೆ ಶುಭವಾಗಲಿ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ವಾಲ್ಮೀಕಿ ರಾಮಾಯಣ vs ಹನುಮಾನ್ ರಾಮಾಯಣ

Continue Reading

Lok Sabha Election 2024

Narendra Modi: ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಮುಸ್ಲಿಂ ಲೀಗ್‌ನ ಪ್ರಭಾವ ಸ್ಪಷ್ಟ; ಪುನರುಚ್ಚರಿಸಿದ ಮೋದಿ

Narendra Modi: ಪ್ರಸ್ತುತ ನಡೆಯುತ್ತಿರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಬಿಡುಗಡೆ ಮಾಡಿರುವ ಪ್ರಣಾಳಿಕೆಯಲ್ಲಿ ಮುಸ್ಲಿಂ ಲೀಗ್‌ನ ಛಾಯೆ ಇದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಹೇಳಿದ್ದಾರೆ. ನ್ಯೂಸ್ 18 ನೆಟ್‌ವರ್ಕ್‌ಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಅವರು ಪಿತ್ರಾರ್ಜಿತ ಆಸ್ತಿ ತೆರಿಗೆ ವಿಚಾರವಾಗಿಯೂ ವಿಪಕ್ಷ ಕಾಂಗ್ರೆಸ್​ ವಿರುದ್ಧ ಕಿಡಿಕಾರಿದ್ದಾರೆ. ಪ್ರಧಾನಿಯಾಗಿ ದಾಖಲೆಯ ಮೂರನೇ ಅವಧಿಯನ್ನು ಹೊಂದುವ ವಿಶ್ವಾಸ ವ್ಯಕ್ತಪಡಿಸಿದ ಮೋದಿ, ಭವಿಷ್ಯದ ಯೋಜನೆ ಬಗ್ಗೆ ತಮಗಿರುವ ದೃಷ್ಟಿಕೋನವನ್ನೂ ವಿವರಿಸಿದ್ದಾರೆ. ಇನ್ನೂ 3 ಕೋಟಿ ಮನೆಗಳನ್ನು ನಿರ್ಮಿಸುವ ಯೋಜನೆ ಹಾಕಿಕೊಂಡಿರುವುದಾಗಿ ತಿಳಿಸಿದ್ದಾರೆ.

VISTARANEWS.COM


on

Narendra Modi
Koo

ನವದೆಹಲಿ: ಪ್ರಸ್ತುತ ನಡೆಯುತ್ತಿರುವ ಲೋಕಸಭಾ ಚುನಾವಣೆ (Lok Sabha Election 2024)ಗೆ ಕಾಂಗ್ರೆಸ್ ಬಿಡುಗಡೆ ಮಾಡಿರುವ ಪ್ರಣಾಳಿಕೆ(Congress manifesto)ಯಲ್ಲಿ ಮುಸ್ಲಿಂ ಲೀಗ್‌ನ ಛಾಯೆ ಇದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರು ನ್ಯೂಸ್ 18 ನೆಟ್‌ವರ್ಕ್‌ಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಪುನರುಚ್ಚರಿಸಿದ್ದಾರೆ. ಸಾಕಷ್ಟು ಚರ್ಚೆಗೆ ಗ್ರಾಸವಾಗಿರುವ ಪಿತ್ರಾರ್ಜಿತ ಆಸ್ತಿ ತೆರಿಗೆ ವಿಚಾರವಾಗಿಯೂ ವಿಪಕ್ಷ ಕಾಂಗ್ರೆಸ್​ ವಿರುದ್ಧ ಕಿಡಿಕಾರಿದ್ದಾರೆ.

“ಮಾಧ್ಯಮಗಳು ಪ್ರತಿಯೊಂದು ರಾಜಕೀಯ ಪಕ್ಷದ ಪ್ರಣಾಳಿಕೆಗಳನ್ನು ಅಧ್ಯಯನ ನಡೆಸುತ್ತವೆ. ನಾನು ಕಾಂಗ್ರೆಸ್‌ ಪ್ರಣಾಳಿಕೆ ಬಗ್ಗೆ ಮಾಧ್ಯಮಗಳು ಪ್ರತಿಕ್ರಿಯಿಸುವುದನ್ನು ಕಾಯುತ್ತಿದ್ದೆ. ನಾನು ಮೊದಲ ದಿನವೇ ಪ್ರಣಾಳಿಕೆಯ ಬಗ್ಗೆ ಮಾತನಾಡಿದ್ದೆ. ಪ್ರಣಾಳಿಕೆಯನ್ನು ಗಮನಿಸಿದ ಕೂಡಲೇ ಅದರಲ್ಲಿ ಮುಸ್ಲಿಂ ಲೀಗ್‌ನ ಮುದ್ರೆ ಇದೆ ಎಂದು ನಾನು ಕಂಡುಕೊಂಡಿದ್ದೆ. ಮಾಧ್ಯಮಗಳು ಈ ವಿಚಾರ ತಿಳಿದು ಆಘಾತಕ್ಕೊಳಗಾಗಬಹುದು ಎಂದು ಭಾವಿಸಿದ್ದೆʼʼ ಎಂದು ಮೋದಿ ಹೇಳಿದ್ದಾರೆ.

“ಇದು ವ್ಯವಸ್ಥೆಯ ದೊಡ್ಡ ಹಗರಣವೆಂದು ನನಗೆ ತಿಳಿಯಿತು. ಪ್ರಣಾಳಿಕೆಯಲ್ಲಿನ ದುಷ್ಕೃತ್ಯಗಳನ್ನು ಯಾರಾದರೂ ಹೊರತರುತ್ತಾರೆ ಎಂದು ನಾನು 10 ದಿನಗಳವರೆಗೆ ಕಾಯುತ್ತಿದ್ದೆ. ಯಾಕೆಂದರೆ ಅದನ್ನು ನಿಷ್ಪಕ್ಷಪಾತವಾಗಿ ಹೊರತಂದರೆ ಉತ್ತಮ. ಅಂತಿಮವಾಗಿ ಈ ಸತ್ಯಗಳನ್ನು ನಾನೇ ಹೊರತರಬೇಕೆಂದು ನಿರ್ಧರಿಸಿದೆʼʼ ಎಂದು ಅವರು ವಿವರಿಸಿದ್ದಾರೆ.

ಸಂಪತ್ತು ಮರುಹಂಚಿಕೆ

ಮುಸ್ಲಿಮರಿಗೆ ಸಂಪತ್ತನ್ನು ಮರುಹಂಚಿಕೆ ಮಾಡಲು ಕಾಂಗ್ರೆಸ್ ಬಯಸಿದೆ ಎನ್ನುವ ವಿಚಾರ ಅಷ್ಟೊಂದು ಅಪಾಯಕಾರಿಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಪ್ರಧಾನಿ, ತಮ್ಮ ಚುನಾವಣಾ ಪ್ರಚಾರವನ್ನು ಸೂಕ್ಷ್ಮವಾಗಿ ಗಮನಿಸುವಂತೆ ಕರೆ ನೀಡಿದರು. “ನನ್ನ ಇಡೀ ಚುನಾವಣಾ ಪ್ರಚಾರವು ಎರಡು ವಿಷಯಗಳ ಮೇಲೆ ಕೇಂದ್ರೀಕೃತವಾಗಿದೆ ಎನ್ನುವುದನ್ನು ನೀವು ಗಮನಿಸಿರಬಹುದು. ನಾವು ಸಮಾಜದ ಕಲ್ಯಾಣಕ್ಕಾಗಿ ಕೆಲಸ ಮಾಡಿದ್ದೇವೆ. ಹಿಂದಿನ ಸರ್ಕಾರಕ್ಕೆ ಹೋಲಿಸಿದರೆ ನಮ್ಮ ಸರ್ಕಾರ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸೌಲಭ್ಯ ತಲುಪಿಸಿದೆ. ನೋಡಿ, ಕೆಟ್ಟದ್ದನ್ನು ಮಾಡಲು ಯಾವುದೇ ಸರ್ಕಾರವನ್ನು ರಚಿಸುವುದಿಲ್ಲ. ಸರ್ಕಾರ ಜನರಿಗೆ ಒಳ್ಳೆಯದನ್ನು ಮಾಡಲು ಬಯಸುತ್ತದೆ. ಕೆಲವು ಜನರಿಗೆ ಇತರರಿಗೆ ಒಳ್ಳೆಯದನ್ನು ಹೇಗೆ ಮಾಡಬೇಕೆಂದು ತಿಳಿದಿದೆ. ಕೆಲವರು ನಮಗೂ ಒಳಿತಾಗಲಿ ಎಂದು ಕಾಯುತ್ತಾರೆ. ಕಷ್ಟಪಟ್ಟು ಕೆಲಸ ಮಾಡುವುದರಿಂದ ಒಳ್ಳೆಯದಾಗುತ್ತದೆ ಎನ್ನುವುದನ್ನು ನಾನು ನಂಬುತ್ತೇನೆʼʼ ಎಂದು ಮೋದಿ ತಿಳಿಸಿದ್ದಾರೆ.

ಬಡವರಿಗಾಗಿ 4 ಕೋಟಿ ಮನೆ

ತಮ್ಮ ಸರ್ಕಾರ ಜನರಿಗಾಗಿ ಕೈಗೊಂಡ ಉಪಕ್ರಮಗಳನ್ನು ವಿವರಿಸಿದ ಪಿಎಂ ಮೋದಿ, “ನಾವು ಬಡವರಿಗಾಗಿ 4 ಕೋಟಿ ಮನೆಗಳನ್ನು ನಿರ್ಮಿಸಿದ್ದೇವೆ. ನೀವು ಚುನಾವಣಾ ಪ್ರಚಾರಕ್ಕೆ ಹೋದಾಗ ಇನ್ನೂ ವಸತಿ ರಹಿತರಾಗಿರುವ ಜನರ ಪಟ್ಟಿಯನ್ನು ಸಿದ್ಧಪಡಿಸಿ ನನಗೆ ನೀಡಿ ಎಂದು ನಾನು ಕಾರ್ಯಕರ್ತರಲ್ಲಿ ಮನವಿ ಮಾಡಿದ್ದೇನೆ. ನನ್ನ ಮೂರನೇ ಅವಧಿ ಪ್ರಾರಂಭವಾದ ಕೂಡಲೇ ಆದ್ಯತೆ ಮೇರೆಗೆ ನಾನು ಈ ಕೆಲಸ ಮುಂದುವರಿಸುತ್ತೇನೆʼʼ ಎಂದು ಅವರು ಭರವಸೆ ನೀಡಿದ್ದಾರೆ.

ಪ್ರಧಾನಿಯಾಗಿ ದಾಖಲೆಯ ಮೂರನೇ ಅವಧಿಯನ್ನು ಹೊಂದುವ ವಿಶ್ವಾಸ ವ್ಯಕ್ತಪಡಿಸಿದ ಮೋದಿ, ಭವಿಷ್ಯದ ಯೋಜನೆ ಬಗ್ಗೆ ತಮಗಿರುವ ದೃಷ್ಟಿಕೋನವನ್ನೂ ವಿವರಿಸಿದ್ದಾರೆ. ʼʼನಾನು ಇನ್ನೂ 3 ಕೋಟಿ ಮನೆಗಳನ್ನು ನಿರ್ಮಿಸುವ ಯೋಜನೆ ಹಾಕಿಕೊಂಡಿದ್ದೇನೆ. ಈಗ ಆಯುಷ್ಮಾನ್ ಭಾರತ್ ವಿಶ್ವದ ಅತಿದೊಡ್ಡ ಆರೋಗ್ಯ ವಿಮಾ ಯೋಜನೆ ಎನಿಸಿಕೊಂಡಿದೆ. ಇದು ಜನರಿಗೆ ಆರೋಗ್ಯದ ಭರವಸೆ ನೀಡುತ್ತದೆ. ಸುಮಾರು 55 ಕೋಟಿ ಮಂದಿಗೆ ಇದು ನೆರವಾಗುತ್ತದೆ. ಮೋದಿ ಸರ್ಕಾರ ನಿಮ್ಮೊಂದಿಗಿದೆ ಎಂಬ ಭರವಸೆ ಇದು. ಯಾವುದೇ ವರ್ಗ, ಸಮಾಜ, ಹಿನ್ನೆಲೆಗೆ ಸೇರಿದ 70 ವರ್ಷಕ್ಕಿಂತ ಮೇಲಿನ ಪುರುಷ ಅಥವಾ ಮಹಿಳೆಗೆ 5 ಲಕ್ಷ ರೂ.ಗಳವರೆಗೆ ಉಚಿತ ಚಿಕಿತ್ಸೆ ನೀಡಲಾಗುವುದು ಎಂದು ಪ್ರಣಾಳಿಕೆಯಲ್ಲಿ ಘೋಷಿಸಿದ್ದೇವೆ. ಜತೆಗೆ ನಾವು ಈ ಪ್ರಯೋಜನವನ್ನು ಆಶಾ ಕಾರ್ಯಕರ್ತೆಯರಿಗೆ ನೀಡುತ್ತೇವೆ ಎಂದು ಹೇಳಿದ್ದೇವೆ. ತೃತೀಯ ಲಿಂಗಿಗಳಿಗೆ ಅವರ ವಯಸ್ಸು ಯಾವುದೇ ಇರಲಿ ನಾವು ನೆರವು ನೀಡಲು ಬದ್ಧʼʼ ಎಂದು ಮೋದಿ ಹೇಳಿದ್ದಾರೆ.

ಇದನ್ನೂ ಓದಿ: BJP Manifesto: ಬಿಜೆಪಿ ಪ್ರಣಾಳಿಕೆ; ರೈತನಿಗೆ ಮೊದಲ ಪ್ರತಿ ನೀಡಿದ ಮೋದಿ, 14 ಗ್ಯಾರಂಟಿ ಘೋಷಣೆ

ಬ್ಯಾಂಕಿಂಗ್‌ ವ್ಯವಸ್ಥೆ

“ನಮ್ಮ ದೇಶದಲ್ಲಿ ಬ್ಯಾಂಕುಗಳ ಸ್ಥಿತಿ ಕಳಪೆಯಾಗಿತ್ತು. ದೇಶದ ಜನಸಂಖ್ಯೆಯ ಅರ್ಧಕ್ಕಿಂತ ಹೆಚ್ಚು ಜನರು ಹಣ ನೀಡಿದ್ದರೂ ಬ್ಯಾಂಕುಗಳಲ್ಲಿ ಅವರ ಹೆಸರಿನಲ್ಲಿ ಖಾತೆ ತೆರೆದಿರಲಿಲ್ಲ. ನಮ್ಮ ಸರ್ಕಾರ ಬಂದ ಬಳಿಕ 52 ಕೋಟಿ ಬ್ಯಾಂಕ್ ಖಾತೆಗಳನ್ನು ತೆರೆಯಲಾಯಿತು. ಅನೇಕರು ಅದರ ಲಾಭವನ್ನು ಪಡೆದುಕೊಂಡರು. ಹಲವರಿಗೆ ಜನ್ ಧನ್ ಖಾತೆ ಮತ್ತು ನೇರ ಲಾಭ ವರ್ಗಾವಣೆಯ ಮೂಲಕ ಪ್ರಯೋಜನ ಲಭಿಸಿತು. 36 ಲಕ್ಷ ಕೋಟಿ ರೂ.ಗಳಷ್ಟು ಮೊತ್ತವು ಜನರ ಖಾತೆಗಳಿಗೆ ನೇರ ವರ್ಗಾವಣೆಯಾಗಿದೆʼʼ ಎಂದು ತಿಳಿಸಿದ್ದಾರೆ.

ತಮ್ಮ ಸರ್ಕಾರದ ಕಾರ್ಯಕ್ಷಮತೆಯನ್ನು 2014ರ ಹಿಂದಿನ ಪರಿಸ್ಥಿತಿಗೆ ಹೋಲಿಸಿದ ಪ್ರಧಾನಿ ಮೋದಿ, “ನೋಡಿ 2014 ಕ್ಕಿಂತ ಮೊದಲು ದೇಶದ ಪರಿಸ್ಥಿತಿ ಹೇಗಿತ್ತು? ಆರ್ಥಿಕತೆ ದುರ್ಬಲವಾಗಿತ್ತು. ಇಂದು ನಾವು ಅದನ್ನು ಬದಲಾಯಿಸಿದ್ದೇವೆ. ಐಎಂಎಫ್‌ನಲ್ಲಿ ಈಗ ಚೀನಾ ಮತ್ತು ಭಾರತ ಸೇರಿದಂತೆ ವಿಶ್ವದ 150 ದೇಶಗಳ ಗುಂಪು ಇದೆ. ಇದನ್ನು ನಾವು ಅಭಿವೃದ್ಧಿಶೀಲ ದೇಶಗಳು ಅಥವಾ ಉದಯೋನ್ಮುಖ ಆರ್ಥಿಕತೆ ಹೊಂದಿರುವ ದೇಶಗಳು ಎಂದು ಕರೆಯಬಹುದುʼʼ ಎಂದು ಪ್ರಧಾನಿ ವಿವರಿಸಿದ್ದಾರೆ.

ಇದನ್ನೂ ಓದಿ: Wealth Redistribution: ಸಂಪತ್ತು ಮರು ಹಂಚಿಕೆ ವಿವಾದದ ಬೆಂಕಿಗೆ ತುಪ್ಪ ಸುರಿದ ಸ್ಯಾಮ್ ಪಿತ್ರೊಡಾ; ಕಾಂಗ್ರೆಸ್‌ಗೆ ಫಜೀತಿ!

ಪಿತ್ರಾರ್ಜಿತ ಆಸ್ತಿ ತೆರಿಗೆ

ಸಾಗರೋತ್ತರ ಕಾಂಗ್ರೆಸ್​ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಅವರು ಪಿತ್ರಾರ್ಜಿತ ಆಸ್ತಿ ತೆರಿಗೆ ಬಗ್ಗೆ ಮಾತನಾಡಿದ್ದರು. ಈ ಬಗ್ಗೆ ಮೋದಿ ಪ್ರತಿಕ್ರಿಯಿಸಿ, “ಅಮೆರಿಕದಲ್ಲಿ ಸಂದರ್ಶನ ನೀಡಿದ ಅವರು ಪಿತ್ರಾರ್ಜಿತ ತೆರಿಗೆ ಬಗ್ಗೆ ಪ್ರಸ್ತಾವಿಸಿದರು. ನಿಮ್ಮ ಆಸ್ತಿಯ ಮೇಲೆ ಸುಮಾರು 55% ತೆರಿಗೆ ವಿಧಿಸುವ ಬಗ್ಗೆ ಹೇಳಿದರು. ಈಗ ನಾನು ಅಭಿವೃದ್ಧಿ ಮತ್ತು ಉತ್ತರಾಧಿಕಾರದ ಬಗ್ಗೆ ಮಾತನಾಡುತ್ತಿದ್ದೇನೆ ಮತ್ತು ಅವರು ಆ ಪಿತ್ರಾರ್ಜಿತ ಆಸ್ತಿಯನ್ನು ಲೂಟಿ ಮಾಡುವ ಬಗ್ಗೆ ಮಾತನಾಡುತ್ತಿದ್ದಾರೆ. ಈ ಬಗ್ಗೆ ಎಚ್ಚರಿಸುವುದು ನನ್ನ ಜವಾಬ್ದಾರಿ. ಈಗ ಈ ಬಗ್ಗೆ ನಿರ್ಧರಿಸಬೇಕಾದವರು ನೀವುʼʼ ಎಂದು ಮೋದಿ ಹೇಳಿದ್ದಾರೆ.

Continue Reading

Lok Sabha Election 2024

Lok Sabha Election 2024: ಒವೈಸಿ ಪ್ರಕಾರ ಮುಸ್ಲಿಮರೇ ಹೆಚ್ಚು ಕಾಂಡೋಮ್ ಬಳಸುತ್ತಾರಂತೆ!

Lok Sabha Election 2024: ಧಾನ ಮಂತ್ರಿ ನರೇಂದ್ರ ಮೋದಿ ಅವರ ʼಮುಸ್ಲಿಮರು ಹೆಚ್ಚಿನ ಮಕ್ಕಳನ್ನು ಹೊಂದಿರುತ್ತಾರೆʼ ಎನ್ನುವ ಹೇಳಿಕೆ ವಿರುದ್ಧ ವಾಗ್ದಾಳಿ ನಡೆಸಿದ ಹೈದರಾಬಾದ್‌ನ ಸಂಸದ ಅಸಾದುದ್ದೀನ್ ಒವೈಸಿ, ಸಂಸದ ಅಸಾದುದ್ದೀನ್ ಒವೈಸಿ (Asaduddin Owaisi), ʼʼಮುಸ್ಲಿಂ ಸಮುದಾಯದ ಪುರುಷರು ಕಾಂಡೋಮ್ ಅನ್ನು ಹೆಚ್ಚು ಬಳಸುತ್ತಾರೆ ಮತ್ತು ಮಕ್ಕಳ ಅಂತರದಲ್ಲಿ ಉತ್ತಮ ದಾಖಲೆಯನ್ನು ಹೊಂದಿದ್ದಾರೆʼʼ ಎಂದು ಹೇಳಿದ್ದಾರೆ. “ಮುಸ್ಲಿಮರ ಫಲವತ್ತತೆ ದರ ಕುಸಿಯುತ್ತಿದೆ. ಆದರೆ ನರೇಂದ್ರ ಮೋದಿ ಅವರು ನಮ್ಮ ಹಿಂದೂ ಸಹೋದರರಲ್ಲಿ ಭಯವನ್ನು ಸೃಷ್ಟಿಸಲು ದ್ವೇಷ ಹರಡುತ್ತಿದ್ದಾರೆʼʼ ಎಂದು ಅವರು ಟೀಕಿಸಿದ್ದಾರೆ.

VISTARANEWS.COM


on

Lok Sabha Election 2024
Koo

ಹೈದರಾಬಾದ್‌: ಚುನಾವಣಾ ಕಣದಲ್ಲಿ (Lok Sabha Election 2024) ಪ್ರಮುಖ ರಾಜಕೀಯ ನಾಯಕರ ವಾಕ್ಸಮರ ತಾರಕಕ್ಕೇರಿದೆ. ಇದೀಗ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರ ʼಮುಸ್ಲಿಮರು ಹೆಚ್ಚಿನ ಮಕ್ಕಳನ್ನು ಹೊಂದಿರುತ್ತಾರೆʼ ಎನ್ನುವ ಹೇಳಿಕೆ ವಿರುದ್ಧ ವಾಗ್ದಾಳಿ ನಡೆಸಿದ ಹೈದರಾಬಾದ್‌ನ ಎಐಎಂಐಎಂ (AIMIM Hyderabad) ಸಂಸದ ಅಸಾದುದ್ದೀನ್ ಒವೈಸಿ (Asaduddin Owaisi), ʼʼಮುಸ್ಲಿಂ ಸಮುದಾಯದ ಪುರುಷರು ಕಾಂಡೋಮ್ ಅನ್ನು ಹೆಚ್ಚು ಬಳಸುತ್ತಾರೆ ಮತ್ತು ಮಕ್ಕಳ ಅಂತರದಲ್ಲಿ ಉತ್ತಮ ದಾಖಲೆಯನ್ನು ಹೊಂದಿದ್ದಾರೆʼʼ ಎಂದು ಹೇಳಿದ್ದಾರೆ.

ʼʼಮುಸ್ಲಿಮರು ಹೆಚ್ಚು ಮಕ್ಕಳನ್ನು ಪಡೆಯುತ್ತಾರೆ ಎಂದು ಮೋದಿ ಹೇಳುತ್ತಿದ್ದಾರೆ. ನರೇಂದ್ರ ಮೋದಿ ಅವರಿಗೆ ಆರು ಜನ ಸಹೋದರರಿದ್ದಾರೆ. ಅಮಿತ್ ಶಾ ಅವರಿಗೆ ಆರು ಸಹೋದರಿಯರು ಮತ್ತು ಆರ್‌ಎಸ್‌ಎಸ್‌ ಮುಖ್ಯಸ್ಥರಿಗೆ ಸುಮಾರು 10-12 ಸಹೋದರಿಯರು ಮತ್ತು ಸಹೋದರರು ಇದ್ದಾರೆ” ಎಂದು ಒವೈಸಿ ಟೀಕಿಸಿದ್ದಾರೆ.

“ಮುಸ್ಲಿಮರ ಫಲವತ್ತತೆ ದರ ಕುಸಿಯುತ್ತಿದೆ. ಆದರೆ ನರೇಂದ್ರ ಮೋದಿ ಅವರು ನಮ್ಮ ಹಿಂದೂ ಸಹೋದರರಲ್ಲಿ ಭಯವನ್ನು ಸೃಷ್ಟಿಸಲು ದ್ವೇಷ ಹರಡುತ್ತಿದ್ದಾರೆ. ಈ ದೇಶದಲ್ಲಿ ಮುಸ್ಲಿಮರು ಎಂದಿಗೂ ಬಹುಸಂಖ್ಯಾತರಾಗುವುದಿಲ್ಲ. ನರೇಂದ್ರ ಮೋದಿ, ಮುಸ್ಲಿಮರ ಬಗೆಗಿನ ಈ ಭಯವನ್ನು ನೀವು ಎಷ್ಟು ದಿನ ಮುಂದುವರಿಸುತ್ತೀರಿ?ʼʼ ಎಂದು ಚುನಾವಣಾ ರ‍್ಯಾಲಿಯಲ್ಲಿ ಓವೈಸಿ ಪ್ರಶ್ನಿಸಿದ್ದಾರೆ.

ʼನುಸುಳುಕೋರರುʼ ಎಂಬ ಪದ ಬಳಕೆಗೆ ಅವರು ಪ್ರಧಾನಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. “ಪ್ರಧಾನಿ ನರೇಂದ್ರ ಮೋದಿ ಅವರು 17 ಕೋಟಿ ಭಾರತೀಯ ಮುಸ್ಲಿಮರನ್ನು ಗುಸ್ಪೆಟಿಯಾ (ಒಳನುಸುಳುಕೋರರು) ಎಂದು ಕರೆದಿದ್ದಾರೆ. ನೀವು ಗುಸ್ಪೆಟಿಯಾ ಆಗಿದ್ದೀರಾ?” ಎಂದು ಪ್ರಶ್ನಿಸಿದ ಅವರು, “ದಲಿತರು ಮತ್ತು ಮುಸ್ಲಿಮರ ವಿರುದ್ಧ ಪ್ರಧಾನಿ ಮೋದಿ ದ್ವೇಷ ಹರಡುತ್ತಿದ್ದಾರೆ” ಎಂದು ಟೀಕಿಸಿದ್ದಾರೆ.

ಮಾಧವಿ ಲತಾ ವಿರುದ್ಧವೂ ವಾಗ್ದಾಳಿ

ಇದಕ್ಕೂ ಮುನ್ನ ಹೈದರಾಬಾದ್ ಬಿಜೆಪಿ ಲೋಕಸಭಾ ಅಭ್ಯರ್ಥಿ ಮಾಧವಿ ಲತಾ ವಿರುದ್ಧವೂ ಒವೈಸಿ ವಾಗ್ದಾಳಿ ನಡೆಸಿದ್ದಾರೆ. ʼʼಹೈದರಾಬಾದ್‌ನ ಓಲ್ಡ್ ಸಿಟಿಯ ಮಸೀದಿಯೊಂದರ ಮೇಲೆ ಬಾಣ ಹೂಡುವಂತೆ ಮಾಧವಿ ಲತಾ ಅವರು ಸನ್ನೆ ಮಾಡಿದ್ದಾರೆ. ಬಿಜೆಪಿಯ ಮೆರವಣಿಗೆಯ ವಿಡಿಯೊದಲ್ಲಿ ಇದು ಸ್ಪಷ್ಟವಾಗಿ ಕಂಡು ಬಂದಿದೆ. ಇದು ಮಸೀದಿಯ ಮೇಲೆ ಹೂಡಿದ ಬಾಣವಲ್ಲ, ಬದಲಾಗಿ ನಗರದಲ್ಲಿ ಶಾಂತಿಯನ್ನು ಹಾಳು ಮಾಡುವ ಉದ್ದೇಶಿತ ಪ್ರಯತ್ನ” ಎಂದು ಅವರು ಟೀಕಿಸಿದ್ದಾರೆ.

ಮೋದಿ ಹೇಳಿದ್ದೇನು?

ರಾಜಸ್ಥಾನದಲ್ಲಿ ನಡೆದ ರ‍್ಯಾಲಿಯಲ್ಲಿ ಮಾತನಾಡಿದ ಮೋದಿ ʼʼದೇಶದ ಸಂಪತ್ತಿನಲ್ಲಿ ಮುಸ್ಲಿಮರಿಗೆ ಮೊದಲ ಹಕ್ಕು ಇದೆ ಎಂದು ಕಾಂಗ್ರೆಸ್ ಈ ಹಿಂದೆ ಹೇಳಿತ್ತು. ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ದೇಶದ ಆಸ್ತಿಯನ್ನು ವಿತರಿಸುವುದಾಗಿ ಹೇಳಿದೆ. ಯಾರಿಗೆ? ಈ ಹಿಂದೆ, ಅವರ (ಕಾಂಗ್ರೆಸ್) ಸರ್ಕಾರ ಅಧಿಕಾರದಲ್ಲಿದ್ದಾಗ, ದೇಶದ ಆಸ್ತಿಯಲ್ಲಿ ಮುಸ್ಲಿಮರಿಗೆ ಮೊದಲ ಹಕ್ಕು ಇದೆ ಎಂದು ಹೇಳಿದ್ದರು. ಇದರರ್ಥ ಅವರು ಸಂಪತ್ತನ್ನು ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ, ಒಳನುಸುಳುವವರಿಗೆ ವಿತರಿಸುತ್ತಾರೆ. ನೀವು ಕಷ್ಟಪಟ್ಟು ಸಂಪಾದಿಸಿದ ಹಣ ನುಸುಳುಕೋರರಿಗೆ ಹೋಗಬೇಕೇ? ನೀವು ಇದನ್ನು ಒಪ್ಪುತ್ತೀರಾ?” ಎಂದು ಮೋದಿ ಕೇಳಿದ್ದರು. ಜತೆಗೆ ದೇಶದ ಸಂಪನ್ಮೂಲಗಳ ಮೇಲೆ ಅಲ್ಪಸಂಖ್ಯಾತ ಸಮುದಾಯಕ್ಕೆ ಮೊದಲ ಹಕ್ಕು ಇದೆ ಎಂಬ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಹೇಳಿಕೆಯನ್ನೂ ಅವರು ಉಲ್ಲೇಖಿಸಿದ್ದರು. ಈ ಹೇಳಿಕೆಗೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು.

ಇದನ್ನೂ ಓದಿ: Narendra Modi : ಹೆಚ್ಚು ಮಕ್ಕಳಿದ್ದವರಿಗೆ ಕಾಂಗ್ರೆಸ್​ನಿಂದ ಸಂಪತ್ತು ವಿತರಣೆ; ಮೋದಿ ಹೇಳಿಕೆಗೆ ಕೈ ಪಕ್ಷದ ಆಕ್ಷೇಪ

Continue Reading
Advertisement
hd revanna prajwal revanna
ಪ್ರಮುಖ ಸುದ್ದಿ6 mins ago

Hasan Pen Drive Case: ಎಲ್ಲೂ ಕಾಣದ ಪ್ರಜ್ವಲ್‌, ಇಂದು ಎಚ್‌ಡಿ ರೇವಣ್ಣ ಹೈಕೋರ್ಟ್‌ ಮೊರೆ

ವಿದೇಶ17 mins ago

Stab wound: ಗರ್ಲ್‌ಫ್ರೆಂಡ್‌ನ ಚುಚ್ಚಿ ಕೊಲ್ಲೋ ಮುನ್ನ ಗೂಗಲ್‌ ಸರ್ಚ್‌ ಮಾಡಿದ್ದ ಹಂತಕ!

Actress Haripriya Vasishta Simha Buys A Swanky New SUV Car
ಸ್ಯಾಂಡಲ್ ವುಡ್48 mins ago

Actress Haripriya: ಐಷಾರಾಮಿ ಕಾರು ಖರೀದಿಸಿದ ʻಸಿಂಹಪ್ರಿಯಾʼ! ಬೆಲೆ ಎಷ್ಟು?

Kane Williamson
ಕ್ರೀಡೆ50 mins ago

Kane Williamson : ನ್ಯೂಜಿಲ್ಯಾಂಡ್ ವಿಶ್ವ ಕಪ್​ ತಂಡಕ್ಕೆಕೇನ್​ ವಿಲಿಯಮ್ಸನ್​ ನಾಯಕ

PM Narendra Modi
ಕರ್ನಾಟಕ50 mins ago

PM Narendra Modi: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಅಬ್ಬರದ ಪ್ರಚಾರಕ್ಕೆ ಸಿದ್ಧತೆ

PM Not OBC Said by Rahul Gandhi and BJP hits back to him
ಪ್ರಮುಖ ಸುದ್ದಿ1 hour ago

PM Narendra Modi: ಸಂಪತ್ತು ಮರುಹಂಚಿಕೆಯ ರಾಹುಲ್ ಗಾಂಧಿ ಐಡಿಯಾ ನಗರ ನಕ್ಸಲ್ ಚಿಂತನೆ: ಪಿಎಂ ಮೋದಿ

ವೈರಲ್ ನ್ಯೂಸ್1 hour ago

Viral Video: ನಾಲ್ಕನೇ ಮಹಡಿಯಿಂದ ವಿಂಡೋ ಪೋರ್ಚ್‌ ಮೇಲೆ ಬಿದ್ದ ಮಗು; ವಿಡಿಯೋ ವೈರಲ್‌

tomato price rise
ಕರ್ನಾಟಕ2 hours ago

Tomato Price: ಗ್ರಾಹಕನ ಜೇಬು ಸುಡಲು ಟೊಮ್ಯಾಟೊ ಸಜ್ಜು, ಬಾಕ್ಸ್‌ಗೆ 400 ರೂಪಾಯಿಗೆ ಬೆಲೆ ಏರಿಕೆ

srinivasa prasad
ಪ್ರಮುಖ ಸುದ್ದಿ2 hours ago

Srinivasa Prasad passes away‌: 7 ಬಾರಿ ಸಂಸದರಾಗಿದ್ದ ಸ್ವಾಭಿಮಾನಿ, ದಕ್ಷಿಣ ಕರ್ನಾಟಕದ ʼದಲಿತ ಸೂರ್ಯʼ

ಕರ್ನಾಟಕ2 hours ago

Srinivas Prasad: ತೀವ್ರ ಹೃದಯಾಘಾತದಿಂದ ಹಿರಿಯ ಸಂಸದ ಶ್ರೀನಿವಾಸ್‌ ಪ್ರಸಾದ್‌ ವಿಧಿವಶ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 29 2024
ಭವಿಷ್ಯ5 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Congress fears defeat over EVMs Congress will not win a single seat in Karnataka says PM Narendra Modi
Lok Sabha Election 202417 hours ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 202419 hours ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 202421 hours ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 202422 hours ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ1 day ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ2 days ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

ಟ್ರೆಂಡಿಂಗ್‌