Gokarna News: ಭಗವಂತನ ಸನ್ನಿಧಿಯಿಂದ ಬಂದ ನಾವು ಮತ್ತೆ ಅವನನ್ನೇ ತಲುಪಬೇಕು: ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ - Vistara News

ಉತ್ತರ ಕನ್ನಡ

Gokarna News: ಭಗವಂತನ ಸನ್ನಿಧಿಯಿಂದ ಬಂದ ನಾವು ಮತ್ತೆ ಅವನನ್ನೇ ತಲುಪಬೇಕು: ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ

Gokarna News: ಗೋಕರ್ಣದ ಅಶೋಕೆಯಲ್ಲಿ ನಿರ್ಮಿಸಲಾದ ಸೇವಾ ಸೌಧದ ಸಮರ್ಪಣಾ ಸಮಾರಂಭವು ಶನಿವಾರ (ಜ.28) ವಿಜೃಂಭಣೆಯಿಂದ ನಡೆಯಿತು. ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಭಾಗಿಯಾಗಿದ್ದರು.

VISTARANEWS.COM


on

Raghaveswara Swamiji gokarna Seva Soudha
ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಅವರು ಆಶೀರ್ವಚನ ನೀಡಿದರು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಗೋಕರ್ಣ: ಮರಳಿ ಮೂಲಕ್ಕೆ ಎನ್ನುವುದು ನಮ್ಮ ಸಂಸ್ಕೃತಿಯ ತಿರುಳು. ಜೀವನ ಎನ್ನುವುದು ಸತ್ ವೃತ್ತ ಇದ್ದಂತೆ; ಮತ್ತೆ ಮೂಲ ಬಿಂದುವನ್ನೇ ಮುಟ್ಟುತ್ತದೆ. ಭಗವಂತನ ಸನ್ನಿಧಿಯಿಂದ ಬಂದ ನಾವು ಮತ್ತೆ ಅವನನ್ನೇ ತಲುಪಬೇಕು ಎನ್ನುವ ಆಶಯದೊಂದಿಗೆ ನಮ್ಮ ಕರ್ತವ್ಯಗಳನ್ನು ನಿಭಾಯಿಸೋಣ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ನುಡಿದರು.

ಗೋಕರ್ಣದ ಅಶೋಕೆಯಲ್ಲಿ ಶ್ರೀ ಮಠದ ಕಾರ್ಯಕರ್ತರ ದೇಣಿಗೆಯಿಂದಲೇ ವಿಶಿಷ್ಟವಾಗಿ ನಿರ್ಮಿಸಲಾದ ಸೇವಾ ಸೌಧದ ಸಮರ್ಪಣಾ ಸಮಾರಂಭದ ಸಾನ್ನಿಧ್ಯ ವಹಿಸಿ ಶ್ರೀಗಳು ಆಶೀರ್ವಚನ ನೀಡಿದರು. ಮುಂದಿನ ಪೀಳಿಗೆಗಳು ನೆನಸಿಕೊಳ್ಳುವಂಥ ಘನ ರಾಷ್ಟ್ರ ಕಾರ್ಯವನ್ನು ಮಾಡುವ ಮೂಲಕ ಭಗವಂತನಿಗೆ ಹತ್ತಿರವಾಗೋಣ. ವಿವಿವಿ ಮುಂದಿನ ದಿನಗಳಲ್ಲಿ ರಾಷ್ಟ್ರದ ದೀಪ ಗೋಪುರ, ಜ್ಞಾನ ಗೋಪುರವಾಗಿ ತಲೆ ಎತ್ತಿ ನಿಲ್ಲಲಿದೆ ಎಂದರು.

“ಸೇವಾ ಸೌಧದ ಮೂಲಕ ನಾವು ಮರಳಿ ಮೂಲಕ್ಕೆ ಬಂದೆವು. ಸಾವಿರ ವರ್ಷಗಳ ಹಿಂದೆ ಶ್ರೀಶಂಕರರು ಮೂಲ ಮಠ ಸ್ಥಾಪಿಸಿದ ಪ್ರದೇಶ, ಪೋರ್ಚುಗೀಸ್ ದಾಳಿಯಿಂದಾಗಿ ಹಲವು ವರ್ಷಗಳ ಕಾಲ ಅದೃಶ್ಯವಾಗಿತ್ತು. ಪೋರ್ಚುಗೀಸರು ದಾಳಿ ಮಾಡಿ ನಾಶ ಮಾಡಿದ ಮಠದ ನೂರು ಪಟ್ಟು ಶಕ್ತಿಯೊಂದಿಗೆ ಮಠ ಮತ್ತೆ ಆವೀರ್ಭವಿಸುತ್ತಿದೆ ಎಂದು ಹೇಳಿದರು.

ಶ್ರೀ ಶಂಕರಾಚಾರ್ಯರು ಮೂಲ ಮಠ ಸ್ಥಾಪಿಸಿದ ಪುಣ್ಯ ಭೂಮಿಯಲ್ಲಿ ಮತ್ತೆ ಅಲ್ಲಿಯೇ ಮಠ, ಅಗ್ರಹಾರ, ವಿಶ್ವವಿದ್ಯಾ ಪೀಠವೊಂದು ಮರಳಿ ಮೂಡಿ ಬರುತ್ತಿರುವುದು ತ್ಯಾಗ- ಬಲಿದಾನ ಮಾಡಿದ ಜೀವಗಳಿಗೆ ನಾವು ಸಲ್ಲಿಸುವ ಶ್ರದ್ಧಾಂಜಲಿ. ಮಠದ ಹಿತ್ತಲು ಪ್ರದೇಶದಲ್ಲಿ ಮೂಲ ಮಠದ ಅವಶೇಷಗಳು ಮಾತ್ರ ಇಂದು ಉಳಿದುಕೊಂಡಿವೆ. ಅಂಥ ನಾಶಕಾಂಡದಿಂದ ಮತ್ತೆ ಸೃಷ್ಟಿಕಾಂಡ ಚಿಗುರೊಡೆಯುತ್ತಿದೆ ಎಂದು ವಿಶ್ಲೇಷಿಸಿದರು.

ಸೇವಾ ಸೌಧ ಶ್ರೀಗಳ ಸೌಧವಷ್ಟೇ ಅಲ್ಲದೇ, ವಿವಿವಿ ಕುಲಪತಿಗಳ ನಿವಾಸವೂ ಆಗಿರುತ್ತದೆ. ಸತ್ ಶಿಕ್ಷಣ ನೀಡುವುದು ಮಠಗಳ ಕರ್ತವ್ಯ. ಮಠಗಳನ್ನು ವಿದ್ಯಾ ಕೇಂದ್ರಗಳೆಂದು ಕೋಶಗಳಲ್ಲಿ ವಿವರಿಸಲಾಗಿದೆ. ಅಂಥ ನಿಜ ಅರ್ಥದ ಮಠ ಇಲ್ಲಿ ಸ್ಥಾಪನೆಯಾಗುತ್ತಿದೆ. ಇಲ್ಲಿ ಉದಯಿಸುತ್ತಿರುವ ವಿವಿವಿ ಅಂದಿನ ಪೋರ್ಚುಗೀಸರು ಹಾಗೂ ಇಂದಿನ ಪೋರ್ಚುಗೀಸರಿಗೆ ನಾವು ನೀಡುತ್ತಿರುವ ಉತ್ತರ ಎಂದು ಬಣ್ಣಿಸಿದರು.

ಮಠದ ಶಿಷ್ಯರ ಉದ್ಧಾರಕ್ಕಾಗಿ, ಸಮಾಜಕ್ಕಾಗಿ, ಸಂಸ್ಕಂತಿಗಾಗಿ, ವಿಸ್ತಂತವಾಗಿ ದೇಶಕ್ಕೆ ಕೊಡುಗೆ ನೀಡುವುದು ವಿವಿವಿ ಪರಿಕಲ್ಪನೆ, ಇದು ಕೇವಲ ಒಂದು ಸಮಾಜಕ್ಕೆ ಅಥವಾ ರಾಜ್ಯಕ್ಕೆ ಸೀಮಿತವಾದ ಕಾರ್ಯವಲ್ಲ; ಇದು ಬೃಹತ್ ರಾಷ್ಟ್ರ ಕಾರ್ಯ. ರಾಷ್ಟ್ರ ಕಟ್ಟುವಂಥವರು, ದೇಶ ಆಳುವಂಥವರು ಮತ್ತು ಬೆಳಗುವವರು ಇಲ್ಲಿ ರೂಪುಗೊಳ್ಳುತ್ತಾರೆ. ಹಲವು ಪೀಳಿಗೆಗಳು ಸೇರಿ ಅಭಿವೃದ್ಧಿಪಡಿಸಬೇಕಾದ ಮಹತ್ಕಾರ್ಯ ಇದು. ವಿವಿ ಮೂಲಕ ಮತ್ತೊಂದು ಕಾಶಿ, ತಕ್ಷಶಿಲೆ ಪುನರವತರಿಸುತ್ತಿದೆ ಎಂದು ತಿಳಿಸಿದರು.

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಮಾತನಾಡಿ, “ಕೋಟಿ ವರ್ಷಕ್ಕೊಮ್ಮೆ ಮಹಾತ್ಮರು ಜನ್ಮ ತಳೆಯುತ್ತಾರೆ ಎಂಬ ಮಾತಿದೆ. ಶ್ರೀ ಶಂಕರಾಚಾರ್ಯರು ಅಂಥ ಮಹಾತ್ಮರು. ಅತ್ಯಂತ ಕಿರಿಯ ವಯಸ್ಸಿನಲ್ಲೇ ವಿಶಿಷ್ಟ ಕೊಡುಗೆ ನೀಡಿದ ಸಾಧಕ ಪರಂಪರೆಯಲ್ಲಿ ಅಗ್ರಗಣ್ಯರು. ಹತ್ತು ವಿವಿಗಳು, ನೂರಾರು ಸಂಸ್ಥೆಗಳು ಮಾಡುವ ಕಾರ್ಯವನ್ನು ಶಂಕರರೊಬ್ಬರೇ ಮಾಡಿದರು. ದೇಶದ ಸಂಸ್ಕೃತಿಗೆ, ವ್ಯಕ್ತಿಯ ವೈಯಕ್ತಿಕ ಉನ್ನತಿಗೆ ಅವರು ನೀಡಿದ ಕೊಡುಗೆ ಅಪಾರ. ರಾಜ ಗುರುವಾಗಿ ಆಡಳಿತಕ್ಕೆ ವ್ಯಾವಹಾರಿಕ ಚೌಕಟ್ಟನ್ನು ಹಾಕಿಕೊಟ್ಟವರು. ಆಧ್ಯಾತ್ಮದ ವಿವಿಧ ಮಜಲುಗಳನ್ನು ಸಮಾಜದ ಮುಂದೆ ತೆರೆದಿಟ್ಟರು. ಯತಿ ಪರಂಪರೆಯನ್ನು ಸ್ವತಃ ಆಚರಿಸಿ ತೋರಿಸಿಕೊಟ್ಟರು. ಹಿಂದಿರುಗಿ ಬಾರದ ಪ್ರಯಾಣದಲ್ಲಿ, ಅತ್ಯಂತ ಕಿರಿಯ ವಯಸ್ಸಿನಲ್ಲೇ ದೇಶಕ್ಕೆ ಬೆಳಕು ತೋರಿಸಿದರು. ಅಂಥ ಶಂಕರರ ಅವಿಚ್ಛಿನ್ನ ಪರಂಪರೆಯ ಪೀಠಾಧಿಪತಿಗಳಾಗಿ ರಾಘವೇಶ್ವರ ಶ್ರೀಗಳು ದೇಶವೇ ಬೆರಗುಗೊಳ್ಳುವ ಸಾಧನೆಯ ಪಥದಲ್ಲಿ ಮುನ್ನಡೆದಿದ್ದಾರೆ” ಎಂದು ಹೇಳಿದರು.

ಗೊಂದಲದ ಸನ್ನಿವೇಶದಲ್ಲಿ ದೇಶಕ್ಕೆ ಬೆಳಕಾದ ಶಂಕರರು ಮೂರು ಬಾರಿ ಪಾದ ಸ್ಪರ್ಶ ಮಾಡಿದ ಪುಣ್ಯ ಪ್ರದೇಶದಲ್ಲಿ ಹಿಂದೂ ಸಂಸ್ಕೃತಿ, ಸನಾತನ ಪರಂಪರೆ ಮತ್ತೆ ಪುನರುತ್ಥಾನವಾಗುತ್ತಿದೆ. ಮಂದಿರ, ಸ್ವಾಮೀಜಿ ಅವರ ವಸತಿ, ಮುಂದಿನ ಪೀಳಿಗೆಯನ್ನು ಸನ್ಮಾರ್ಗದಲ್ಲಿ ಕೊಂಡೊಯ್ಯುವ ಕಾರ್ಯ ನಡೆಯಲಿ ಎಂದು ಆಶಿಸಿದರು. ಮುಂದಿನ ಪೀಳಿಗೆ ದೇಶದ ನೈಜ ಆಸ್ತಿ. ಕೆಲ ಶತಮಾನಗಳ ಕಾಲ ದೇಶದ ಜ್ಞಾನ ಪರಂಪರೆಗೆ ಅಡ್ಡಿ ಆತಂಕಗಳು ಬಂದೊಡ್ಡಿದವು. ಆದರೆ ರಾಘವೇಶ್ವರ ಶ್ರೀಗಳ ನೇತೃತ್ವದಲ್ಲಿ ಮತ್ತೊಂದು ಸಾಮಾಜಿಕ ಕ್ರಾಂತಿ, ಜ್ಞಾನಕ್ರಾಂತಿ ಕುಡಿಯೊಡೆದಿದೆ ಎಂದು ಅಭಿಪ್ರಾಯಪಟ್ಟರು.

“ನಾವು ಸಮಾಜಕ್ಕೆ, ಜಗತ್ತಿಗೆ ನೀಡಬೇಕಾದ್ದು ಬಹಳಷ್ಟಿದೆ ಎಂಬ ಜ್ಞಾನೋದಯ ಪ್ರತಿಯೊಬ್ಬರಲ್ಲೂ ಆಗುತ್ತಿದೆ. ರಾಜ್ಯದಲ್ಲಿ ಸಮಾಜಕ್ಕೆ ಜ್ಞಾನ ಹಂಚುವ ಕಾರ್ಯವನ್ನು ಮಠ ಮಂದಿರಗಳು ಮಾಡುತ್ತಿದ್ದು, 80 ಸಾವಿರಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳನ್ನು ಮಠಗಳು ನಡೆಸುತ್ತಿವೆ. ಜಗತ್ತಿನ ಒಳಿತಿಗಾಗಿ ನಾವು ಸುಶಿಕ್ಷಿತರಾಗಬೇಕು ಎಂಬ ಭಾವನೆಯಲ್ಲಿ ಯುವ ಸಮುದಾಯದಲ್ಲಿ ಬೆಳೆಸುವ ಮೂಲಕ ಅವರನ್ನು ದೇಶದ ಆಸ್ತಿಯಾಗಿ ರೂಪಿಸಬೇಕು” ಎಂದು ಹೇಳಿದರು.

“ವಿವಿವಿಯಲ್ಲಿ ರೂಪುಗೊಳ್ಳುವ ಮಕ್ಕಳು ಹೊರಗಿನ ಕಲ್ಮಶವನ್ನು ಅಂಟಿಸಿಕೊಳ್ಳದೇ ಪರಿಶುದ್ಧವಾಗಿರುತ್ತಾರೆ. ಇವರು ಸಮಾಜದ ಆಸ್ತಿಗಳಾದಾಗ ಇಂಥ ಸಂಸ್ಥೆ ಬೆಳಗುತ್ತವೆ. ಆಸ್ತಿ, ಸಂಪತ್ತಿಗಿಂತ ಹೆಚ್ಚಾಗಿ ನಾವು ವಾರಸಿಕೆಯನ್ನು ಬಿಟ್ಟುಹೋಗಬೇಕು. ಹತ್ತಾರು, ನೂರಾರು ಪೀಳಿಗೆಗಳು ನೆನಪು ಮಾಡಿಕೊಳ್ಳುವಂಥ ವಾರಸಿಕೆಯನ್ನು ಬಿಟ್ಟುಹೋಗಬೇಕು. ಇಡೀ ವಿಶ್ವದ ದೃಷ್ಟಿ ಇಂದು ಭಾರತದ ಮೇಲೆ ನೆಟ್ಟಿದೆ. 12 ಸಾವಿರ ಮಂದಿ ಭಾರತದಲ್ಲಿ ಯೋಗ ಕಲಿತು ವಿಶ್ವದಾದ್ಯಂತ ಶಿಕ್ಷಣ ನೀಡುತ್ತಿದ್ದಾರೆ. ಲಕ್ಷಕ್ಕಿಂತ ಹೆಚ್ಚು ಮಂದಿ ಸಂಸ್ಕೃತ ವಿದ್ವಾಂಸರು ವಿಶ್ವದಾದ್ಯಂತ ಸಂಸ್ಕೃತದ ಕಂಪು ಪಸರಿಸುತ್ತಿದ್ದಾರೆ. ವಿಶ್ವದ 27 ವಿವಿಗಳಲ್ಲಿ ಸಂಸ್ಕೃತ ಪೀಠಗಳಿವೆ. ಭಾರತದಲ್ಲಿ ಇಂಥ ವಿಶಿಷ್ಟ ಪ್ರಯೋಗಗಳು ನಡೆಯುತ್ತಿರುವುದರಿಂದ ಜಗತ್ತಿನಲ್ಲಿ ಭಾರತಕ್ಕೆ ಗೌರವ ದೊರಕುತ್ತಿದೆ. ಇದೆಲ್ಲ ಸಾಧ್ಯವಾಗಿರುವುದು ಈ ಬಗೆಯ ಚೈತನ್ಯ ಕೇಂದ್ರಗಳ ಮೂಲಕ ಎಂದು ವಿಶ್ಲೇಷಿಸಿದರು.

ಇದನ್ನೂ ಓದಿ | Anushka Shetty: ಅನುಷ್ಕಾ ಶೆಟ್ಟಿ ಹೆಸರಿನಲ್ಲಿ ನಿರ್ಮಾಪಕರಿಂದ 51 ಲಕ್ಷ ರೂ. ಪೀಕಿದ ಆಸಾಮಿ!

ಇಡೀ ದೇಶಕ್ಕೇ ಚೈತನ್ಯ ಮೂಡಿಸುವ ಕೇಂದ್ರವಾಗಿ ವಿವಿವಿ ಮುಂದಿನ ದಿನಗಳಲ್ಲಿ ಬೆಳಗಲಿದೆ. ಇಲ್ಲಿನ ಮಕ್ಕಳು ಕುಟುಂಬ, ಸಮಾಜ, ಭಾರತ, ವಿಶ್ವದಲ್ಲಿ ತಾವು ನಿರ್ವಹಿಸಬೇಕಾದ ಕರ್ತವ್ಯಗಳ ಬಗ್ಗೆ ತಿಳಿದುಕೊಂಡು ಕರ್ತವ್ಯಪರತೆಯಿಂದ ಕಾರ್ಯ ನಿರ್ವಹಿಸುವ ಪೀಳಿಗೆಯಾಗಿ ರೂಪುಗೊಳ್ಳಲಿ. ಕರ್ತವ್ಯವೇ ಜೀವನ ಎಂಬ ತತ್ತ್ವ ಬೋಧಿಸುವ ಇಂಥ ಕಾರ್ಯಕ್ಕೆ ಸಮಾಜ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ಶಿಷ್ಯರ ಕೊಡುಗೆಯಿಂದಲೇ ನಿರ್ಮಾಣವಾದ ಸೇವಾ ಸೌಧ ನಮ್ಮೆಲ್ಲರ ಸೇವೆಯ ಜವಾಬ್ದಾರಿ ಬಗ್ಗೆ ಅರಿವು ಮೂಡಿಸುವ ಕರ್ತವ್ಯ ಸೌಧವಾಗಿ, ರಾಷ್ಟ್ರಸಂಸ್ಕಾರದ ಪ್ರೇರಣಾ ಕೇಂದ್ರವಾಗಿ ಬೆಳಗಲಿ ಎಂದು ರಾಜ್ಯ ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಆಶಿಸಿದರು.

ಭಾರತ ಇಂದು ಇಡೀ ವಿಶ್ವಕ್ಕೆ ನೇತೃತ್ವ ನೀಡಬಲ್ಲ ಸಮರ್ಥ ರಾಷ್ಟ್ರವಾಗಿ ತಲೆ ಎತ್ತಿದ್ದು, ವಿಶ್ವಕ್ಕೇ ಮಾರ್ಗದರ್ಶನ ನೀಡುವ ಆ ಅರ್ಹತೆಯನ್ನು ನಾವು ಪಡೆಯಬೇಕು. ಇದಕ್ಕೆ ಪರಿಶ್ರಮ ಬೇಕು. ಹಣ ಗಳಿಕೆಯೇ ಜೀವನ ಎಂಬ ಭ್ರಮೆಯಿಂದ ಹೊರಬಂದು ನಮ್ಮನ್ನು ರಾಷ್ಟ್ರ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು. ವಿವಿವಿ ಇಂಥ ರಾಷ್ಟ್ರ ವೀರರನ್ನು ರೂಪಿಸುವ ಚೈತನ್ಯ ಕೇಂದ್ರ ಎಂದು ಬಣ್ಣಿಸಿದರು.

ತಕ್ಷಶಿಲೆ, ನಳಂದದ ಮಾದರಿಯಲ್ಲಿ ಗೋಕರ್ಣ ವಿವಿವಿ ಸಜ್ಜಾಗುತ್ತಿವೆ. ಇಲ್ಲಿ ಮಕ್ಕಳು ಭವಿಷ್ಯದ ಸವಾಲು ಎದುರಿಸಲು ಸಜ್ಜಾಗಬೇಕು. ಪರಿವರ್ತನೆಯ ಹರಿಕಾರರು ಇಲ್ಲಿ ಸಜ್ಜಾಗಬೇಕು. ನಂಬಿಕೆಯನ್ನೇ ಘಾಸಿಗೊಳಿಸುವಂಥ ಕೃತ್ಯಗಳು ನಡೆಯುತ್ತಿರುವ ನಡುವೆಯೇ ನಮ್ಮತನವನ್ನು ಕಾಪಾಡಿಕೊಂಡು ಮುನ್ನಡೆಯುವ ಮೂಲಕ ಅವರ ಬಾಯಿ ಮುಚ್ಚಿಸುವ ಕಾರ್ಯ ಆಗಬೇಕು ಎಂದು ಹೇಳಿದರು.

ಇದನ್ನೂ ಓದಿ | Navodaya School: ಕೈಕೊಟ್ಟ ನವೋದಯ ಶಾಲಾ ವೆಬ್‌ಸೈಟ್‌; ಅರ್ಜಿ ಸಲ್ಲಿಸಲು ಆಗದೆ ವಿದ್ಯಾರ್ಥಿಗಳು ಕಂಗಾಲು

ತಿರುವನಂತಪುರ ಅನಂತ ಪದ್ಮನಾಭ ದೇವಸ್ಥಾನದ ಪ್ರಧಾನ ಅರ್ಚಕ ನಾರಾಯಣ ಪಟ್ಟೇರಿ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಶಾಸಕರಾದ ದಿನಕರ್ ಶೆಟ್ಟಿ, ಸುನೀಲ್ ನಾಯ್ಕ, ರೂಪಾಲಿ ನಾಯ್ಕ, ಮಲೆನಾಡು ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಗುರುಮೂರ್ತಿ, ಗೋವಾ ಶಾಸಕ ಗೋವಿಂದ ನಾಯ್ಕ, ಪಶ್ಚಿಮಘಟ್ಟ ಕಾರ್ಯಪಡೆಯ ಗೋವಿಂದ ನಾಯ್ಕ ಮತ್ತಿತರರು ಉಪಸ್ಥಿತರಿದ್ದರು.

ಮೋಹನ್ ಭಾಸ್ಕರ್ ಹೆಗಡೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಹವ್ಯಕ ಮಹಾಮಂಡಲ ಅಧ್ಯಕ್ಷ ಆರ್.ಎಸ್.ಹೆಗಡೆ ಹರಗಿ ಸಭಾಪೂಜೆ ನೆರವೇರಿಸಿದರು. ಕಾರ್ಯದರ್ಶಿ ನಾಗರಾಜ ಭಟ್ ಪಿದಮಲೆ, ವಿವಿವಿ ಕೇಂದ್ರ ಸಮಿತಿಯ ಅಧ್ಯಕ್ಷ ಡಿ.ಡಿ.ಶರ್ಮಾ, ಮಾತೃತ್ವಂ ಅಧ್ಯಕ್ಷೆ ಈಶ್ವರಿ ಬೇರ್ಕಡವು, ಅಖಿಲ ಹವ್ಯಕ ಮಹಾಸಭಾದ ಉಪಾಧ್ಯಕ್ಷ ವೇಣು ವಿಘ್ನೇಶ್, ಶ್ರೀಮಠದ ಪ್ರಸಣಾಧಿಕಾರಿ ಸಂತೋಷ್ ಹೆಗಡೆ, ಲೋಕ ಸಂಪರ್ಕಾಧಿಕಾರಿ ಹರಿಕೃಷ್ಣ ಪೆರಿಯಾಪು, ವಿಶ್ರಾಂತ ಸಿಇಒ ಕೆ.ಜಿ.ಭಟ್, ಪ್ರಮೋದ್ ಹೆಗಡೆ, ಡಾ.ವೈ.ವಿ.ಕೃಷ್ಣಮೂರ್ತಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂಜುನಾಥ ಜನ್ನು, ಮಂಜುನಾಥ ಸುವರ್ಣ ಗದ್ದೆ, ಶ್ರೀಕಾಂತ್ ಪಂಡಿತ್ ಮತ್ತಿತರರು ಭಾಗವಹಿಸಿದ್ದರು.

ಇದನ್ನೂ ಓದಿ | Prajadhwani: ಮೋದಿ ಕೊಟ್ಟ ಭರವಸೆಗಳಲ್ಲಿ ಒಂದಾದರೂ ಈಡೇರಿಸಿದ್ದಾರಾ: ಡಿ.ಕೆ. ಶಿವಕುಮಾರ್

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಇಂದು ಮೂರು ಹೊತ್ತು ಒಂದೊಂದು ವಾತಾವರಣ

Karnataka Weather Forecast : ಹಗಲು ಹೊತ್ತು ಬಿಸಿ ಗಾಳಿ ಬೀಸಿದರೆ, ಮಧ್ಯಾಹ್ನದಂದು ಉರಿ ಬಿಸಿಲು ನೆತ್ತಿ ಸುಡುಲಿದೆ. ರಾತ್ರಿಯಾದರೆ ವಾತಾವರಣವು ಬೆಚ್ಚಗೆ ಇರಲಿದೆ. ಈ ಮಧ್ಯೆ ಕೆಲವೆಡೆ ಗುಡುಗು ಸಹಿತ ಮಳೆಯಾಗುವ (Rain News) ಸಾಧ್ಯತೆಯೂ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Dry Weather) ನೀಡಿದೆ.

VISTARANEWS.COM


on

By

karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯಾದ್ಯಂತ ಶುಷ್ಕ ವಾತಾವರಣ (Dry Weather) ಇದ್ದರೂ, ಕೆಲವೆಡೆ ಮಳೆಯ (Rain News) ಸಿಂಚನವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ಏ.2ರಂದು ಮಲೆನಾಡಿನ ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಜತೆಗೆ ದಕ್ಷಿಣ ಒಳನಾಡಿನ ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ತುಮಕೂರಿನ ಪ್ರತ್ಯೇಕ ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ.

ಬೆಂಗಳೂರಲ್ಲಿ ಮುಖ್ಯವಾಗಿ ಶುಭ್ರ ಆಕಾಶವು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 38 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಇರಲಿದೆ.

ರೆಡ್ ಅಲರ್ಟ್

ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಐಎಂಡಿ ರೆಡ್ ಅಲರ್ಟ್ ಘೋಷಿಸಿದೆ. ಮೇ 5ರವರೆಗೆ ಈ ಜಿಲ್ಲೆಗಳಲ್ಲಿ ತಾಪಮಾನ ವಿಪರೀತವಾಗಿ ಇರಲಿದೆ. ಉರಿ ಸೆಕೆಯ ವಾತಾವರಣ ಇರಲಿದೆ.

ಆರೆಂಜ್ ಅಲರ್ಟ್

ಇನ್ನೂ ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ಮತ್ತು ಬಳ್ಳಾರಿ ಜಿಲ್ಲೆಗಳಿಗೆ ಐಎಂಡಿ ಆರೆಂಜ್ ಅಲರ್ಟ್ ಘೋಷಿಸಿದೆ. ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು ಮತ್ತು ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಮುಂದಿನ 5 ದಿನಗಳ ಕಾಲ ಉತ್ತರ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಮೇ 5 ರವರೆಗೆ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ವಾತಾವರಣವು ಮೇಲುಗೈ ಸಾಧಿಸುವ ಸಾಧ್ಯತೆಯಿದೆ.

ಇದನ್ನೂ ಓದಿ: ‌Prajwal Revanna Case: ಪ್ರಜ್ವಲ್ ಕಾಂಗ್ರೆಸ್‌ ಬೆಂಬಲಿತ ಸಂಸದ; ನಿಮಗಾಗದಿದ್ದರೆ ನಮಗೆ ಅಧಿಕಾರ ಕೊಡಿ, 24 ಗಂಟೆಯಲ್ಲಿ ಹಿಡಿಯುತ್ತೇವೆ: ಅಶೋಕ್

Summer Tips: ಬಿಸಿಲಿನ ಆಘಾತದಿಂದ ತಪ್ಪಿಸಿಕೊಳ್ಳಲು ಹೀಗೆ ಮಾಡಿ…

ಬಿಸಿಲು ಈಗಲೇ ಸಹಿಸುವುದಕ್ಕೆ ಅಸಾಧ್ಯವಾಗಿದೆ. ಇದಲ್ಲ, ಇನ್ನೂ ಹೆಚ್ಚಾಗಲಿದೆ ಎಂಬ ಮುನ್ಸೂಚನೆ ಹವಾಮಾನ ತಜ್ಞರಿಂದ ದೊರೆತಿದೆ. ಈ ಘೋರ ಬಿಸಿಲಿನಲ್ಲಿ ಸ್ಮೃತಿ ತಪ್ಪಿದವರ ಸುದ್ದಿಗಳು ಅಲ್ಲಲ್ಲಿ ಕೇಳುತ್ತಿವೆ. ಬಿಸಿಲಾಘಾತಕ್ಕೆ ಜೀವ ತೆತ್ತವರ ವಿಷಯಗಳೂ ಕೇಳಿಬರುತ್ತಿವೆ. ಛತ್ರಿ ಹಿಡಿದೇ ಹೋಗುತ್ತೇವೆ ಹೊರಗೆ, ಚೆನ್ನಾಗಿ ನೀರು ಕುಡಿಯುತ್ತೇವೆ ನಾವು. ನಮಗೇನು ಬಿಸಿಲಿನ ಭಯವಿಲ್ಲ ಎನ್ನುವವರಿದ್ದಾರೆ. ವಿಷಯ ಹಾಗಲ್ಲ, ಬಿಸಿಲ ದಿನಗಳಲ್ಲಿ ಆರೋಗ್ಯದ ಕಾಳಜಿಯನ್ನು ಎಷ್ಟು ಮಾಡಿದರೂ ಸಾಲದು. ಒಮ್ಮೆ ಶಾಖದ ಆಘಾತಕ್ಕೆ ಅಥವಾ ನಿರ್ಜಲೀಕರಣಕ್ಕೆ ತುತ್ತಾದರೆ, ಚೇತರಿಸಿಕೊಳ್ಳಲು ನಾಲ್ಕಾರು ದಿನಗಳಾದರೂ ಬೇಕಾಗುತ್ತದೆ. ಸರಿಯಾದ ಸಮಯಕ್ಕೆ ಚಿಕಿತ್ಸೆ ದೊರೆಯದಿದ್ದರೆ, ಜೀವಕ್ಕೆ ಅಪಾಯ ತಪ್ಪಿದ್ದಲ್ಲ. ಹಾಗಾದರೆ ಇವುಗಳಿಂದ (Summer Tips) ತಪ್ಪಿಸಿಕೊಳ್ಳುವುದಕ್ಕೆ ಸಾಧ್ಯವಿಲ್ಲವೇ?

Dry weather Summer Heat

ಏಕೆ ಹೀಗಾಗುತ್ತದೆ?

ಮೊದಲಿಗೆ, ಬಿಸಿಲಿಗೆ ಎಚ್ಚರ ತಪ್ಪುವುದೇಕೆ ಎಂಬುದನ್ನು ಅರ್ಥ ಮಾಡಿಕೊಳ್ಳೋಣ. ಹೊರಗಿನ ವಾತಾವರಣದ ಉಷ್ಣತೆಯನ್ನು ಆಧರಿಸಿ, ನಮ್ಮ ದೇಹ ತನ್ನ ಉಷ್ಣತೆಯನ್ನು ಮಾರ್ಪಾಡು ಮಾಡಿಕೊಳ್ಳುತ್ತದೆ. ಹೊರಗಿನ ತಾಪಮಾನ ತೀವ್ರವಾಗಿ ಏರಿಕೆಯಾದಾಗ, ದೇಹದೊಳಗಿನ ಉಷ್ಣತೆಯನ್ನು ತಗ್ಗಿಸುವುದಕ್ಕೆ ಶರೀರ ಬೆವರಲು ಪ್ರಾರಂಭಿಸುತ್ತದೆ. ಇದರಿಂದಲೇ ದೇಹ ತಣ್ಣಗಾಗಬೇಕು, ಆಂತರಿಕ ಉಷ್ಣತೆ ನಿಯಂತ್ರಣದಲ್ಲಿ ಇರಬೇಕು. ಆದರೆ ಈ ಎಲ್ಲ ತಂತ್ರಗಳು ಕೈಕೊಟ್ಟಾಗ, ಸಾಕಾಗದೆ ಇದ್ದಾಗ ಅಥವಾ ಅತಿಯಾಗಿ ಬೆವರಿ ದೇಹದಲ್ಲಿ ನೀರಿನಂಶ ಕಡಿಮೆ ಆದಾಗ, ಎಚ್ಚರ ತಪ್ಪುತ್ತದೆ. ಇದರಿಂದ ಮೆದುಳಿಗೆ ಅಗತ್ಯವಾದಷ್ಟು ರಕ್ತಸಂಚಾರ ಆಗದಿದ್ದರೆ, ಪಾರ್ಶ್ವವಾಯು ಸಂಭವಿಸಿ ಜೀವಹಾನಿಯೂ ಆಗಬಹುದು.

ಮಾನವ ಶರೀರ ತನ್ನಷ್ಟಕ್ಕೆ ತಡೆದುಕೊಳ್ಳಲು ಸಾಧ್ಯವಾಗುವ ಗರಿಷ್ಟ ಉಷ್ಣತೆಯೆಂದರೆ ೪೨.೩ ಡಿಗ್ರಿ ಸೆ. ಇದಿಷ್ಟು ತಡೆಯುವುದೂ ಸುಲಭವಿಲ್ಲ. ಇನ್ನು ಇದಕ್ಕಿಂತಲೂ ಹೆಚ್ಚಿನ ತಾಪಮಾನವನ್ನು ಸಹಿಸಿಕೊಳ್ಳಲು ಏನೆಲ್ಲ ಉಪಚಾರ ಸಾಧ್ಯವೋ ಅದನ್ನು ನಮಗೆ ನಾವೇ ಮಾಡಿಕೊಳ್ಳಬೇಕು. ಸಿಕ್ಕಾಪಟ್ಟೆ ನೀರು ಕುಡಿಯುವುದು, ಎಲೆಕ್ಟ್ರೋಲೈಟ್‌ ಮರುಪೂರಣ ಮಾಡುವುದು, ಚೆನ್ನಾಗಿ ಗಾಳಿಯಾಡುವ ವಾತಾವರಣದಲ್ಲಿರುವುದು- ಇಂಥವೆಲ್ಲ ನಾವು ಅಗತ್ಯವಾಗಿ ಮಾಡಬೇಕಾದ ಕೆಲಸಗಳು.

ಉಷ್ಣತೆಗೆ ಮಾತ್ರವಲ್ಲ

ತೀವ್ರ ತಾಪಮಾನಗಳಿಗೆ ಎಚ್ಚರ ತಪ್ಪುವುದು ಬಿಸಿ ಹೆಚ್ಚಾದಾಗ ಮಾತ್ರವಲ್ಲ, ತೀವ್ರ ಚಳಿಯಲ್ಲೂ ಆಗುತ್ತದೆ. ಈ ಎರಡೂ ಅತಿರೇಕದ ತಾಪಮಾನಗಳಲ್ಲಿ ದೇಹದ ಉಷ್ಣತಾ-ನಿಯಂತ್ರಕ ವ್ಯವಸ್ಥೆ ಕೈಕೊಡಬಹುದು. ಬಿಸಿ ಹೆಚ್ಚಾದಾಗ ಮೆದುಳಿಗೆ ರಕ್ತಸಂಚಾರ ಸರಾಗ ಆಗದಿರುವ ಸಂಭವ ಇರುವದಂತೆಯೇ, ಚಳಿ ಹೆಚ್ಚಾದಾಗಲೂ ಆಗುತ್ತದೆ. ಹೊರಗಿನ ಚಳಿ ತೀವ್ರವಾಗಿ ಹೆಚ್ಚಾದರೆ, ದೇಹದ ಉಷ್ಣತೆಯನ್ನು ಕಾಪಾಡಿಕೊಳ್ಳುವುದಕ್ಕೆ ರಕ್ತ ನಾಳಗಳು ಸಂಕೋಚಗೊಳ್ಳುತ್ತವೆ. ಹೀಗೆ ಸಂಕೋಚಗೊಳ್ಳುವುದು ಅತಿಯಾದರೆ ಆಗಲೂ ಮೆದುಳಿಗೆ ಬೇಕಾದಷ್ಟು ರಕ್ತಸಂಚಾರ ಆಗದೆ ಜ್ಞಾನ ತಪ್ಪಬಹುದು.

Summer Fashion

ತಪ್ಪಿಸಿಕೊಳ್ಳಲಾಗದೆ?

ಖಂಡಿತ ಸಾಧ್ಯವಿದೆ. ಮೊದಲಿಗೆ, 40 ಡಿ.ಸೆ. ಉಷ್ಣತೆಯನ್ನು ತಲುಪಿದಾಗ ಮನೆಯಿಂದ ಹೊರಗೆ ಹೋಗಬೇಡಿ. ಹೋಗುವುದು ಅನಿವಾರ್ಯವಾದರೆ, ಸಡಿಲವಾದ ಬಿಳಿ ಅಥವಾ ತಿಳಿ ಬಣ್ಣದ ಹತ್ತಿಯ ಬಟ್ಟೆಗಳನ್ನೇ ಧರಿಸಿ. ತಲೆಗೆ ಟೋಪಿ, ಛತ್ರಿಗಳಂಥವು ಇದ್ದರೆ ಒಳ್ಳೆಯದು. ನಿಲ್ಲಿಸಿದ ಕಾರಿನೊಳಗೆ ಯಾರನ್ನೂ ಬಿಡಬೇಡಿ. ಈ ಸೆಕೆಯಲ್ಲಿ ದಿನಕ್ಕೆ ಐದು ಲೀಟರ್‌ ನೀರು ಅಥವಾ ಪೇಯಗಳನ್ನು ಕುಡಿಯುವ ಗುರಿ ಇರಿಸಿಕೊಳ್ಳಿ. ಆಲ್ಕೋಹಾಲ್‌ ಮತ್ತು ಕೆಫೇನ್‌ ಸೇವನೆಯ ಮೇಲೆ ಕಡಿವಾಣ ಅಗತ್ಯ. ಇಲ್ಲದಿದ್ದರೆ ದೇಹ ಬೇಗನೇ ನಿರ್ಜಲೀಕರಣಕ್ಕೆ ತುತ್ತಾಗುತ್ತದೆ. ಜೊತೆಗೆ, ಸೆಕೆಯಲ್ಲಿ ದೇಹವನ್ನು ತಂಪಾಗಿಸುವ ಶಾರೀರಿಕ ವ್ಯವಸ್ಥೆಯ ಮೇಲೂ ಪರಿಣಾಮ ಬೀರುತ್ತದೆ. ತಲೆನೋವು, ಅತಿಯಾಗಿ ಬೆವರುವುದು, ಬಾಯಿ ಒಣಗುವುದು, ತೀರದ ದಾಹ, ಮೈಯೆಲ್ಲ ಬಿಸಿಯಾದ ಅನುಭವಗಳು ಆದರೆ ಜಾಗ್ರತೆ ಮಾಡಿ. ತಕ್ಷಣವೇ ದೇಹವನ್ನು ತಂಪಾಗಿಸುವ ಬಗ್ಗೆ ಕ್ರಮ ಕೈಗೊಳ್ಳಿ. ತಂಪಾದ ಬಟ್ಟೆಯಿಂದ ಇಡೀ ದೇಹವನ್ನು ಒರೆಸಬಹುದು. ಒಆರೆಸ್‌, ಎಳನೀರು ಮುಂತಾದ ಎಲೆಕ್ಟ್ರೋಲೈಟಿಕ್‌ ಪೇಯಗಳು ಬೇಕಾಗುತ್ತವೆ. ಕೂಲರ್‌, ಎಸಿಯಂಥ ಉಪಕರಣಗಳ ಮೂಲಕ ಮನೆಯ ವಾತಾವರಣವನ್ನು ತಂಪಾಗಿಸಲು ಪ್ರಯತ್ನಿಸಿ. ಈ ಹೊತ್ತಿನಲ್ಲಿ ಮನೆಯಿಂದ ಹೊರಗಿದ್ದರೆ, ತಂಪಾದ ನೆರಳಿನಂಥ ಜಾಗಕ್ಕೆ ಹೋಗಿ. ಬಿಸಿಲಿನ ಆಘಾತ ತಾಗಿದಾಗ ತ್ವರಿತವಾಗಿ ಕ್ರಮ ಕೈಗೊಳ್ಳದಿದ್ದರೆ ಜೀವಕ್ಕೇ ಎರವಾಗುತ್ತದೆ, ನೆನಪಿರಲಿ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಉತ್ತರ ಕನ್ನಡ

Lok Sabha Election 2024: ಹಿಂದಿನ ಚುನಾವಣೆಗಳಿಗಿಂತ ಈ ಬಾರಿ ಬಿಜೆಪಿಗೆ ಅಧಿಕ ಬಹುಮತ ನಿಶ್ಚಿತ: ಹರಿಪ್ರಕಾಶ್‌ ಕೋಣೆಮನೆ

Lok Sabha Election 2024: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ ಬಿಜೆಪಿ ರಾಜ್ಯ ವಕ್ತಾರ ಹರಿಪ್ರಕಾಶ್‌ ಕೋಣೆಮನೆ ಹಾಗೂ ಮಂಡಲ ಪ್ರಮುಖರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಯಲ್ಲಾಪುರ ಪಟ್ಟಣದಾದ್ಯಂತ ಬುಧವಾರ ಮನೆ ಮನೆ ಪ್ರಚಾರ ನಡೆಸಿದರು.

VISTARANEWS.COM


on

BJP State Spokesperson Hariprakash konemane and leaders Election Campaign for BJP Candidate Vishweshwar Hegde Kageri in Yallapura
Koo

ಯಲ್ಲಾಪುರ: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ ಬಿಜೆಪಿ ರಾಜ್ಯ ವಕ್ತಾರ ಹರಿಪ್ರಕಾಶ್‌ ಕೋಣೆಮನೆ ಹಾಗೂ ಮಂಡಲ ಪ್ರಮುಖರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಯಲ್ಲಾಪುರ ಪಟ್ಟಣದಾದ್ಯಂತ ಬುಧವಾರ ಮನೆ ಮನೆ ಪ್ರಚಾರ (Lok Sabha Election 2024) ನಡೆಸಿದರು.

ಮಹಾಸಂಪರ್ಕ ಅಭಿಯಾನದ ಅಂಗವಾಗಿ ಪಟ್ಟಣದ ಅಂಗಡಿಗಳು, ಸಂತೆ ಮಾರುಕಟ್ಟೆ, ರಿಕ್ಷಾ ನಿಲ್ದಾಣ ಹಾಗೂ ಮನೆ ಮನೆಗೆ ತೆರಳಿ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಪರ ಪ್ರಚಾರ ನಡೆಸಲಾಯಿತು.

ಇದನ್ನೂ ಓದಿ: Karnataka Weather : ಮಳೆಗಾಗಿ ಕಪ್ಪೆಗಳಿಗೆ ಮದುವೆ; ಶಾಖದ ಹೊಡೆತಕ್ಕೆ 6 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

ಈ ವೇಳೆ ಬಿಜೆಪಿ ರಾಜ್ಯ ವಕ್ತಾರ ಹರಿಪ್ರಕಾಶ್‌ ಕೋಣೆಮನೆ ಮಾತನಾಡಿ, ಎಲ್ಲರ ಬಾಯಲ್ಲಿ ‘ಮೋದಿ ಮತ್ತೊಮ್ಮೆ’ ಘೋಷಣೆ ಮೊಳಗುತ್ತಿದೆ. ಎಲ್ಲ ಕಡೆಗಳಲ್ಲಿ ಜನರಿಂದ ಉತ್ತಮ ಸ್ಪಂದನೆ ದೊರಕುತ್ತಿದ್ದು ಬಿಜೆಪಿ ಈ ಲೋಕಸಭಾ ಚುನಾವಣೆಯಲ್ಲಿ ಹಿಂದಿನ ಚುನಾವಣೆಗಳಿಗಿಂತ ಹೆಚ್ಚು ಬಹುಮತ ಪಡೆದು ಗೆಲ್ಲುವುದು ನಿಶ್ಚಿತ. ಅದರಲ್ಲಿಯೂ ಯಲ್ಲಾಪುರ-ಮುಂಡಗೋಡ ಕ್ಷೇತ್ರದಿಂದ ಅತ್ಯಧಿಕ ಬಹುಮತ ದೊರೆಯುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ: Ballari News: ಬಾಯಿಯೊಳಗೆ ತ್ರಿಶೂಲ; ಬೆನ್ನಿಗೆ ಕೊಕ್ಕೆ ಕಟ್ಟಿಕೊಂಡು ಕಾರು, ರಿಕ್ಷಾ ಎಳೆದ ಭಕ್ತರು!

ಈ ಸಂದರ್ಭದಲ್ಲಿ ಮಂಡಲಾಧ್ಯಕ್ಷ ಪ್ರಸಾದ ಹೆಗಡೆ, ಪ್ರಮುಖರಾದ ಉಮೇಶ ಭಾಗ್ವತ್, ಜಿ.ಎನ್. ಗಾಂವ್ಕರ್, ಗಣಪತಿ ಮಾನಿಗದ್ದೆ, ರಾಘವೇಂದ್ರ ಭಟ್ಟ ಹಾಸಣಗಿ, ರಾಮು ನಾಯ್ಕ, ಸೋಮೇಶ್ವರ ನಾಯ್ಕ, ರಾಜೇಶ್ ಭಟ್ಟ, ಶ್ರೀನಿವಾಸ ಭಟ್ಟ ಹಾಗೂ ಕಾರ್ಯಕರ್ತರು, ಇತರರು ಪಾಲ್ಗೊಂಡಿದ್ದರು.

Continue Reading

ಮಳೆ

Karnataka Weather : ಮಳೆಗಾಗಿ ಕಪ್ಪೆಗಳಿಗೆ ಮದುವೆ; ಶಾಖದ ಹೊಡೆತಕ್ಕೆ 6 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Karnataka weather Forecast : ಮಳೆಗಾಗಿ (Rain News) ಕಸರತ್ತು ಶುರುವಾಗಿದ್ದು ಮೈಸೂರಲ್ಲಿ ಕಪ್ಪೆಗಳಿಗೆ ಮದುವೆ ಮಾಡಲಾಗಿದೆ. ತೊಪ್ಪೆಯಾಗುವಂತೆ ಮಳೆ ಹೊಯ್ಯಲೆಂದು ಕಪ್ಪೆಗಳ ಕಟ್ಟಿಕೊಂಡು ಬಂದು ಗ್ರಾಮಸ್ಥರು ತಾಳಿ ಕಟ್ಟಿಸಿದ್ದಾರೆ. ಇತ್ತ 6 ಜಿಲ್ಲೆಗಳಿಗೆ ಹೀಟ್‌ ವೇವ್‌ ಅಪ್ಪಳಿಸಲಿದ್ದು, ಹವಾಮಾನ ಇಲಾಖೆಯು ರೆಡ್‌ ಅಲರ್ಟ್‌ ಘೋಷಿಸಿದೆ.

VISTARANEWS.COM


on

By

karnataka weather Forecast
Koo

ಮೈಸೂರು/ಬೆಂಗಳೂರು: ಮಳೆ ಆಗದೆ ನೀರಿಗಾಗಿ ಎಲ್ಲಿಲ್ಲದ ಸಂಕಷ್ಟ ಎದುರಾಗುತ್ತಿದ್ದು, ಜನರು ಮಳೆಗಾಗಿ ದೇವರಲ್ಲಿ ಮೊರೆ ಹೋಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಒಂದೊಂದು ಕಡೆ ಒಂದೊಂದು ಸಂಪ್ರದಾಯಗಳೂ ಚಾಲ್ತಿಯಲ್ಲಿವೆ. ಈಗ ಮೈಸೂರಿನ ನಂಜನಗೂಡು ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ಮಳೆಗಾಗಿ ಕಪ್ಪೆಗಳಿಗೆ ಮದುವೆ ಮಾಡಿದ್ದಾರೆ. ಮಳೆ ಬಾರದಿರುವ ಸಂಕಟದ (Karnataka Weather Forecast) ಮಧ್ಯೆ ಮಳೆ ಬರಲಿ (Rain News), ವರುಣ ದೇವ ಸಂತುಷ್ಟಗೊಳ್ಳಲಿ, ದಿನವೂ ಮೈ ತೊಪ್ಪೆಯಾಗುವಷ್ಟು ಮಳೆ ಸುರಿಯಲಿ, ಕೃಷಿ ಚಟುವಟಿಕೆಗೆ ತೊಂದರೆಯಾಗದಿರಲಿ, ಭೂತಾಯಿಗೆ ಬೇಕಾಗುವಷ್ಟು ಮಳೆ ಸುರಿಯಲಿ, ಅಂತರ್ಜಲ ಪೂರ್ಣಗೊಳ್ಳಲಿ, ನದಿ, ಹಳ್ಳಕೊಳ್ಳಗಳು ತುಂಬಿಕೊಳ್ಳಲಿ ಎಂದು ಪ್ರಾರ್ಥನೆ ಮಾಡಿದ್ದಾರೆ. ಬಿಸಿಲಿನ ಬೇಗೆಗೆ ತತ್ತರಿಸಿದ ಜನರು ಮಳೆ ಸುರಿಯುವಂತೆ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದರು. ಗ್ರಾಮದ ಬೀದಿ ಬೀದಿಗಳಲ್ಲಿ ಕಪ್ಪೆಗಳ ಮೆರವಣಿಗೆ ಮಾಡಿ ತಮಟೆ ಬಾರಿಸಿದ್ದಾರೆ. ಹುಯ್ಯೋ ಹುಯ್ಯೋ ಮಳೆರಾಯ ಬಾಳೆ ತೋಟಕ್ಕೆ ನೀರಿಲ್ಲ ಎಂದು ಘೋಷಣೆ ಕೂಗಿದರು.

ಇದನ್ನೂ ಓದಿ: Prajwal Revanna Case: ಏನಿದು ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌? ಕೇಂದ್ರ ರದ್ದು ಮಾಡಿದರೆ ಪ್ರಜ್ವಲ್‌ ರೇವಣ್ಣ ಅರೆಸ್ಟ್!

ಮುಂದುವರಿಯಲಿದೆ ಒಣಹವೆ

ರಾಜ್ಯಾದ್ಯಂತ ಇನ್ನೆರಡು ದಿನಗಳು ಒಣಹವೆ ಇರುವ ಸಾಧ್ಯತೆ ಇದೆ. ಏ.2-3ರಂದು ಶುಷ್ಕ ವಾತಾವರಣ ಇದ್ದರೆ, ಏಪ್ರಿಲ್‌ 4ರಂದು ಚಾಮರಾಜನಗರದಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.

ಶಾಖದ ಅಲೆಯ ಎಚ್ಚರಿಕೆ

ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ತೀವ್ರ ಬಿಸಿಗಾಳಿ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಬಳ್ಳಾರಿ, ಕಲಬುರಗಿ, ವಿಜಯಪುರ, ರಾಯಚೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಶಾಖದ ಅಲೆಯ ವಾತಾವರಣವು ಹೆಚ್ಚಾಗಿರುತ್ತದೆ.

ರಾತ್ರಿ ಬೆಚ್ಚನೆಯ ವಾತಾವರಣ

ಮುಂದಿನ 5 ದಿನಗಳವರೆಗೆ ಕರ್ನಾಟಕದ ಉತ್ತರ ಒಳಭಾಗದಲ್ಲಿ ಬೆಚ್ಚನೆಯ ರಾತ್ರಿಯ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮೇ 5ರಂದು ಉತ್ತರ ಕನ್ನಡ ಬಿಸಿ ಮತ್ತು ಆರ್ದ್ರತೆಯ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ರಾಜ್ಯಾದ್ಯಂತ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆ ಇಲ್ಲ.

6 ಜಿಲ್ಲೆಗಳಿಗೆ ರೆಡ್ ಅಲರ್ಟ್

ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ನೀಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Drowned In water : ತಾಯಿ- ಮಗಳು ಸೇರಿ ನಾಲ್ವರು ನೀರುಪಾಲು

Drowned In water : ರಾಯಚೂರಿನಲ್ಲಿ ಬಟ್ಟೆ ತೊಳೆಯಲು ಕಾಲುವೆಗೆ ಇಳಿದ ಯುವಕರಿಬ್ಬರು ನೀರುಪಾಲಾದರೆ, ಕಾರವಾರದಲ್ಲಿ ಕಪ್ಪೆಚಿಪ್ಪು ತೆಗೆಯುವ ವೇಳೆ ತಾಯಿ-ಮಗಳು ನೀರಲ್ಲಿ ಮುಳುಗಿ ದಾರುಣವಾಗಿ ಮೃತಪಟ್ಟಿದ್ದಾರೆ.

VISTARANEWS.COM


on

By

Drowned in water in raichur and karwar
Koo

ರಾಯಚೂರು/ ಕಾರವಾರ: ಪ್ರತ್ಯೇಕ ಕಡೆಗಳಲ್ಲಿ ನೀರಲ್ಲಿ ಮುಳುಗಿ ನಾಲ್ವರು ಮೃತಪಟ್ಟಿರುವ (Drowned In water) ದಾರುಣ ಘಟನೆ ನಡೆದಿದೆ. ಜಾತ್ರೆ ನಿಮಿತ್ತ ಪಾಲಕರೊಂದಿಗೆ ಬಟ್ಟೆ ತೊಳೆಯಲು ಹೋಗಿ ಯುವಕರಿಬ್ಬರು ನೀರುಪಾಲಾಗಿದ್ದಾರೆ. ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಬಸವಸಾಗರ ಜಲಾಶಯದ ಕಾಲುವೆಯಲ್ಲಿ ಘಟನೆ ನಡೆದಿದೆ.

ಲಕ್ಕಣ್ಣ (22), ಬಸವಂತ (25) ಮೃತ ದುರ್ದೈವಿಗಳು. ಲಿಂಗಸ್ಗೂರು ತಾ. ಬೆಂಡೋಣಿ ಗ್ರಾಮದ ನಿವಾಸಿಗಳಾದ ಇವರಿಬ್ಬರು, ಬಟ್ಟೆ ತೊಳೆಯಲು ಹೋಗಿದ್ದಾರೆ. ಮೊದಲು ಓರ್ವ ಯುವಕ ಕಾಲು ಜಾರಿ ನೀರಿಗೆ ಬಿದ್ದಿದ್ದ. ಈ ವೇಳೆ ಆತನ ಕಾಪಾಡಲು ಮತ್ತೋರ್ವ ಯುವಕ ನೀರಿಗೆ ಧುಮುಕಿದ್ದಾನೆ. ಆದರೆ ಈಜು ಬಾರದೆ ಕಾಲುವೆಯಲ್ಲೇ ಯುವಕರಿಬ್ಬರು ದುರ್ಮರಣ ಹೊಂದಿದ್ದಾರೆ.

Drowned in water in Raichur and Karwar
ಮೃತ ದುರ್ದೈವಿ ಯುವಕರು

ಇನ್ನು ಅಲ್ಲೆ ಇದ್ದ ಸ್ಥಳೀಯರು ರಕ್ಷಣೆಗೆ ಮುಂದಾದರೂ ಆದರೆ ಅಷ್ಟರಲ್ಲಿ ಯುವಕರು ನೀರಲ್ಲಿ ಮುಳುಗಿ ಮೃತಪಟ್ಟಿದ್ದರು. ಕಾಲುವೆಯಲ್ಲಿದ್ದ ಯುವಕರಿಬ್ಬರ ಮೃತದೇಹಗಳನ್ನು ಸ್ಥಳೀಯರೇ ಹೊರತೆಗೆದಿದ್ದಾರೆ. ಘಟನೆ ಸಂಬಂಧ ಲಿಂಗಸ್ಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:Medical Negligence : ಸಕಾಲಕ್ಕೆ ಸಿಗದ ಚಿಕಿತ್ಸೆ; ಹೆರಿಗೆಗೂ ಮೊದಲೇ ತಾಯಿ-ಮಗು ಸಾವು

ನದಿಯಲ್ಲಿ ಮುಳುಗಿ ತಾಯಿ-ಮಗಳು ಸಾವು

ನದಿಯಲ್ಲಿ ಮುಳುಗಿ ತಾಯಿ‌- ಮಗಳು ಇಬ್ಬರೂ ಮೃತಪಟ್ಟಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಕಾರವಾರ ನಗರದ ಬೈತಖೋಲ್‌ನಲ್ಲಿ ಘಟನೆ ನಡೆದಿದೆ. ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಾಗ ನೀರಿನಲ್ಲಿ ಮುಳುಗಿ ರೇಣುಕಾ ಹಾಗೂ ಸುಜಾತ ಎಂಬುವವರು ಮೃತಪಟ್ಟಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಕರಾವಳಿ ಕಾವಲು ಪಡೆ ಸಿಬ್ಬಂದಿ ಮೃತದೇಹಗಳನ್ನು ದಡಕ್ಕೆ ತಂದಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಕಾರವಾರ ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಕಾರವಾರ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Road Accident in anekal
ಬೆಂಗಳೂರು ಗ್ರಾಮಾಂತರ5 mins ago

Road Accident : ಚಲಿಸುತ್ತಿರುವಾಗಲೇ ಬಸ್‌ನಿಂದ ಕಳಚಿಕೊಂಡ ಚಕ್ರಗಳು; ಗಲಿಬಿಲಿಗೊಂಡ ಪ್ರಯಾಣಿಕರು

Puttakkana Makkalu Serial puttakka daughter Sahana left home
ಕಿರುತೆರೆ29 mins ago

Puttakkana Makkalu Serial: ಅವ್ವನಂತೆ ಯಾರ ಹಂಗಿಲ್ಲದೆ ಬದುಕಲು ಮನೆ ಬಿಟ್ಟು ಹೊರಟೇ ಬಿಟ್ಟಳು ಸಹನಾ!

Mosquito controle
ಲೈಫ್‌ಸ್ಟೈಲ್39 mins ago

Mosquito control: ಸೊಳ್ಳೆ ಕಾಟಕ್ಕೆ ಬೇಸತ್ತಿದ್ದೀರಾ? ಹಾಗಿದ್ರೆ ಈ ಮನೆಮದ್ದನ್ನು ಟ್ರೈ ಮಾಡಿ ನೋಡಿ!

Health Plan
ಮನಿ-ಗೈಡ್39 mins ago

Money Guide: ಕಾರ್ಪೊರೇಟ್- ವೈಯಕ್ತಿಕ ಆರೋಗ್ಯ ವಿಮೆಯ ನಡುವಿನ ವ್ಯತ್ಯಾಸ ತಿಳಿದಿರಲಿ

New Food Rules
ಪ್ರಮುಖ ಸುದ್ದಿ47 mins ago

New Food Rules: ಆಹಾರ ಪದಾರ್ಥಗಳ ಬೆಲೆ ಏರಿಕೆಗೆ ಪಾಕ್‌ ಹೈರಾಣ-ಹೊಸ ಭಕ್ಷ್ಯ ನೀತಿ ಜಾರಿ

MS Dhoni
ಕ್ರೀಡೆ51 mins ago

MS Dhoni: ರನ್​ ಓಡದೆ ಸ್ವಾರ್ಥ ತೋರಿದ ಧೋನಿ; ನೆಟ್ಟಿಗರಿಂದ ಭಾರೀ ಟೀಕೆ

Google Layoff
ವಿದೇಶ53 mins ago

Google Layoff: ಮತ್ತಷ್ಟು ಉದ್ಯೋಗ ಕಡಿತಗೊಳಿಸಿದ ಗೂಗಲ್‌; ಕಾರಣವೇನು?

Tobacco use
ಆರೋಗ್ಯ54 mins ago

Tobacco Use: ತಂಬಾಕು ಸೇವನೆ; ವಿಶ್ವದಲ್ಲೇ ಭಾರತಕ್ಕೆ ಎರಡನೇ ಸ್ಥಾನ

Jammu Tour
ಪ್ರವಾಸ1 hour ago

Jammu Tour: ಜಮ್ಮುವಿಗೆ ಭೇಟಿ ನೀಡುವವರು ಈ ಸ್ಥಳಗಳನ್ನು ಮಿಸ್ ಮಾಡದೇ ನೋಡಿ!

Uma Ramanan dies in Chennai
ಕಾಲಿವುಡ್1 hour ago

Uma Ramanan: ಖ್ಯಾತ ಹಿನ್ನೆಲೆ ಗಾಯಕಿ ಉಮಾ ರಮಣನ್ ಇನ್ನಿಲ್ಲ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ6 hours ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ2 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20243 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20243 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20244 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20244 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20244 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20244 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest4 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

ಟ್ರೆಂಡಿಂಗ್‌