INDvsNZ T20 : ನ್ಯೂಜಿಲ್ಯಾಂಡ್​ ವಿರುದ್ಧದ ಎರಡನೇ ಪಂದ್ಯ ನಡೆಯುವುದು ಎಲ್ಲಿ? ಅಲ್ಲಿನ ಪಿಚ್​ ಹೇಗಿದೆ? - Vistara News

ಕ್ರಿಕೆಟ್

INDvsNZ T20 : ನ್ಯೂಜಿಲ್ಯಾಂಡ್​ ವಿರುದ್ಧದ ಎರಡನೇ ಪಂದ್ಯ ನಡೆಯುವುದು ಎಲ್ಲಿ? ಅಲ್ಲಿನ ಪಿಚ್​ ಹೇಗಿದೆ?

ಭಾರತ ಹಾಗೂ ನ್ಯೂಜಿಲ್ಯಾಂಡ್​ (INDvsNZ T20) ನಡುವಿನ ಎರಡನೇ ಟಿ20 ಪಂದ್ಯ ನಡೆಯುವುದು ಎಲ್ಲಿ ಹಾಗೂ ಟಾಸ್​ ಎಷ್ಟು ಗಂಟೆಗೆ ಎಂಬ ವಿವರ ಇಲ್ಲಿದೆ.

VISTARANEWS.COM


on

indian cricket team
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಖನೌ: ಭಾರತ ಹಾಗೂ ಪ್ರವಾಸಿ ನ್ಯೂಜಿಲ್ಯಾಂಡ್​ ನಡುವಿನ ಎರಡನೇ ಟಿ20 ಪಂದ್ಯ (INDvsNZ T20) ಕ್ರಿಕೆಟ್​ ಅಭಿಮಾನಿಗಳಲ್ಲಿ ಕೌತುಕ ಸೃಷ್ಟಿಸಿದೆ. ಭಾರತ ತಂಡ ಮೊದಲ ಪಂದ್ಯದಲ್ಲಿ ಸೋಲು ಕಂಡಿರುವುದೇ ಅದಕ್ಕೆ ಕಾರಣ. ಎರಡನೇ ಪಂದ್ಯದಲ್ಲಿ ಹಾರ್ದಿಕ್​ ಪಾಂಡ್ಯ ನೇತೃತ್ವದ ಟೀಮ್​ ಇಂಡಿಯಾ ಗೆಲುವು ಸಾಧಿಸಿದರೆ ಮಾತ್ರ ಸರಣಿ ಜೀವಂತವಾಗಿರಲಿದೆ. ಹೀಗಾಗಿ ಭಾರತ ತಂಡದ ಪಾಲಿಗೆ ಇದು ಮಾಡು ಇಲ್ಲವೇ ಮಡಿ ಪಂದ್ಯ. ಕೋಚ್​ ರಾಹುಲ್​ ದ್ರಾವಿಡ್​ ಹಾಗೂ ನಾಯಕ ಹಾರ್ದಿಕ್​ ಪಾಂಡ್ಯ ಈ ಪಂದ್ಯವನ್ನು ವಶಪಡಿಸಿಕೊಳ್ಳುವ ನಿಟ್ಟಿನಲ್ಲಿ ನಾನಾ ಯೋಜನೆ ರೂಪಿಸಿಕೊಂಡಿರುತ್ತಾರೆ. ಮೊದಲ ಪಂದ್ಯದ ತಪ್ಪುಗಳನ್ನು ಸರಿಪಡಿಸಿಕೊಂಡು ಕಣಕ್ಕೆ ಇಳಿಯವುದೇ ತಂಡದ ಗುರಿಯಾಗಲಿದೆ.

ಈ ಪಂದ್ಯ ಉತ್ತರದ ಪ್ರದೇಶದ ಲಖನೌನಲ್ಲಿ ನಡೆಯಲಿದೆ. ಇಲ್ಲಿನ ಭಾರತ ರತ್ನ ಅಟಲ್​ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ಪಂದ್ಯ ಆಯೋಜನೆಗೊಂಡಿದೆ. ಇದು ಸಮತೋಲಿತ ಪಿಚ್ ಆಗಿದ್ದು ಬ್ಯಾಟಿಂಗ್ ಹಾಗೂ ಬೌಲಿಂಗ್​ಗೆ ಸಮಾನ ರೀತಿಯಲ್ಲಿ ಸಹಕಾರಿಯಾಗಿದೆ.

ಇತ್ತಂಡಗಳ ನಡುವಿನ ಹಣಾಹಣಿ ಜನವರಿ 29ರ ರಾತ್ರಿ 7 ಗಂಟೆಗೆ ಆರಂಭವಾಗಲಿದೆ. ಟಾಸ್​ ಸಂಜೆ 6.30 ನಿಮಿಷಕ್ಕೆ ನಡೆಯಲಿದೆ. ನ್ಯೂಜಿಲ್ಯಾಂಡ್​ ತಂಡಕ್ಕೆ ಈ ಪಂದ್ಯವನ್ನು ಗೆದ್ದರೆ ಸರಣಿ ಗೆದ್ದ ಗೌರವ ಲಭಿಸಲಿದೆ. ಹಿಂದಿನ ಪಂದ್ಯದಂತೆ ನಿಗದಿತ ಯೋಜನೆಯ ಪ್ರಕಾರ ಕಣಕ್ಕೆ ಇಳಿಯಲಿದೆ.

ಪಿಚ್​ ಹೇಗಿದೆ?

ಲಖನೌನ ಏಕನಾ ಕ್ರಿಕೆಟ್ ಸ್ಟೇಡಿಯಮ್​ನ ಪಿಚ್​ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡಕ್ಕೂ ಪೂರಕವಾಗಿದೆ. ಆದರೆ, ಇಲ್ಲಿ ನಡೆದ ಐದು ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಮೊದಲು ಬ್ಯಾಟ್​ ಮಾಡಿದ ತಂಡವೇ ಜಯ ಗಳಿಸಿದೆ. ಇಲ್ಲಿ ಚೇಸಿಂಗ್ ಮಾಡುವುದು ಸುಲಭವಲ್ಲ. ಹೀಗಾಗಿ ಟಾಸ್​ ಗೆದ್ದ ತಂಡದ ನಾಯಕ ಬ್ಯಾಟಿಂಗ್ ಮೊರೆ ಹೋಗುವುದರಲ್ಲಿ ಸಂಶಯವಿಲ್ಲ. ಪಂದ್ಯಕ್ಕೆ ಮಳೆಯ ಅಡಚಣೆ ಇಲ್ಲ ಎಂಬುದಾಗಿ ಹವಾಮಾನ ವರದ ಹೇಳಿದೆ.

ನೇರಪ್ರಸಾರ ಎಲ್ಲಿ

ಭಾರತ ಹಾಗೂ ನ್ಯೂಜಿಲ್ಯಾಂಡ್​ ತಂಡಗಳ ನಡುವಿನ ಟಿ20ನ ಸರಣಿಯ ಎರಡನೇ ಪಂದ್ಯ ಸ್ಟಾರ್​ ಸ್ಪೋರ್ಟ್ಸ್​ ಚಾನೆಲ್​ನಲ್ಲಿ ನೇರ ಪ್ರಸಾರವಾಗಲಿದೆ. ಅದೇ ರೀತಿ ಡಿಸ್ನಿ ಹಾಟ್​ ಸ್ಟಾರ್​ನಲ್ಲಿ ಲೈವ್​ ಸ್ಟ್ರೀಮಿಂಗ್​ ಆಗಲಿದೆ.

ಇದನ್ನೂ ಓದಿ : Washington Sundar : ನಿಮ್ಮಿಷ್ಟದ ಬಿರಿಯಾನಿ ಸಿಗಲ್ಲ ಎಂದಾದರೆ ಹೋಟೆಲ್​ ಬದಲಿಸುತ್ತೀರಾ? ಸುಂದರ್ ಕೇಳಿದ್ದು ಯಾರಿಗೆ?

ತಂಡಗಳು

ಭಾರತ: ಹಾರ್ದಿಕ್​ ಪಾಂಡ್ಯ (ನಾಯಕ), ಸೂರ್ಯಕುಮಾರ್​ ಯಾದವ್, ಇಶಾನ್ ಕಿಶನ್​, ಶುಭ್​ಮನ್ ಗಿಲ್​, ಪೃಥ್ವಿ ಶಾ, ದೀಪಕ್​ ಹೂಡ, ರಾಹುಲ್ ತ್ರಿಪಾಠಿ, ಜಿತೇಶ್​ ಶರ್ಮ, ವಾಷಿಂಗ್ಟನ್​ ಸುಂದರ್​, ಕುಲ್ದೀಪ್​ ಯಾದವ್​, ಯಜ್ವೇಂದ್ರ ಚಹಲ್​, ಅರ್ಶ್​ದೀಪ್​ ಸಿಂಗ್​, ಉಮ್ರಾನ್​ ಮಲಿಕ್​, ಶಿವಂ ಮಾವಿ, ಮುಕೇಶ್​ ಕುಮಾರ್​.

ನ್ಯೂಜಿಲ್ಯಾಂಡ್​ : ಮಿಚೆಲ್​ ಸ್ಯಾಂಟ್ನರ್​ (ನಾಯಕ), ಫಿನ್​ ಅಲೆನ್​, ಡೆವೋನ್​ ಕಾನ್ವೆ, ಗ್ಲೆನ್​ ಫಿಲಿಪ್ಸ್​, ಡೇನ್​ ಕ್ಲೆವರ್​, ಮಾರ್ಕ್​ ಚಾಪ್ಮನ್​, ಮೈಕೆಲ್ ಬ್ರೇಸ್​ವೆಲ್​, ಡ್ಯಾರಿಲ್​ ಮಿಚೆಲ್, ಮೈಕೆಲ್​ ರಿಪ್ಪಾನ್​, ಲಾಕಿ ಫರ್ಗ್ಯೂಸನ್, ಇಶ್ ಸೋಧಿ, ಬ್ಲೇರ್ ಟಿಕ್ನರ್​, ಜಾಕೊಬ್​ ಡಫಿ, ಹೆನ್ರಿ ಶಿಪ್ಲೆ, ಬೆನ್​ ಲಿಸ್ಟರ್.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Rinku Singh : ಕೊಹ್ಲಿಯ ಬ್ಯಾಟ್​ನಲ್ಲಿ ರಿಂಕು ಚೆನ್ನಾಗಿ ಆಡುತ್ತಿಲ್ಲ; ನೆಟ್ಟಿಗರಿಂದ ಟ್ರೋಲ್​!

Rinku Singh: 2024ರ ಟಿ20 ವಿಶ್ವಕಪ್​​ಗೆ ಭಾರತ ತಂಡದಿಂದ ಹೊರಗುಳಿದಿದ್ದ ರಿಂಕು ಸಿಂಗ್ 2024ರ ಐಪಿಎಲ್​​ನಲ್ಲಿ ಇನ್ನೂ ಉತ್ತಮ ಪ್ರದರ್ಶ ನೀಡಿಲ್ಲ. ವಾಂಖೆಡೆ ಸ್ಟೇಡಿಯಂನಲ್ಲಿ ಮುಂಬೈ ಇಂಡಿಯನ್ಸ್ ಬೌಲರ್​ಗಳ ದಾಳಿಗೆ ಸಿಕ್ಕಿ ಅವರು ಮತ್ತೊಮ್ಮೆ ಕಡಿಮೆ ಸ್ಕೋರ್​ಗೆ ಪೆವಿಲಿಯನ್​ಗೆ ಮರಳಿದರು.

VISTARANEWS.COM


on

Rinku Singh
Koo

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024ರಲ್ಲಿ ಕೋಲ್ಕತಾ ನೈಟ್ ರೈಡರ್ಸ್ (ಕೆಕೆಆರ್) ಬ್ಯಾಟರ್​ ರಿಂಕು ಸಿಂಗ್ ಮತ್ತೊಂದು ವೈಫಲ್ಯವನ್ನು ಅನುಭವಿಸಿದರು. ಕೆಕೆಆರ್ ವಿರುದ್ಧ ಅಗತ್ಯ ಸಂದರ್ಭದಲ್ಲಿ ಅವರು ವೈಫಲ್ಯ ಕಂಡರು. ಕ್ರಿಕೆಟ್​ ಅಭಿಮಾನಿಗಳು ಅವರ ಆಟಕ್ಕೆ ಬೇಸರ ವ್ಯಕ್ತಪಡಿಸಿ ಸೋಶಿಯಲ್​ ಮೀಡಿಯಾಗಳಲ್ಲಿ ಟ್ರೋಲ್ ಮಾಡಿದ್ದಾರೆ. ಅವರು ವಿರಾಟ್​ ಕೊಹ್ಲಿಯಿಂದ ಬ್ಯಾಟ್ ಗಿಫ್ಟ್ ಪಡೆದುಕೊಂಡ ನಂತರ ಚೆನ್ನಾಗಿ ಆಡುತ್ತಿಲ್ಲ ಎಂದ ಹೇಳಿದ್ದಾರೆ.

2024ರ ಟಿ20 ವಿಶ್ವಕಪ್​​ಗೆ ಭಾರತ ತಂಡದಿಂದ ಹೊರಗುಳಿದಿದ್ದ ರಿಂಕು ಸಿಂಗ್ 2024ರ ಐಪಿಎಲ್​​ನಲ್ಲಿ ಇನ್ನೂ ಉತ್ತಮ ಪ್ರದರ್ಶ ನೀಡಿಲ್ಲ. ವಾಂಖೆಡೆ ಸ್ಟೇಡಿಯಂನಲ್ಲಿ ಮುಂಬೈ ಇಂಡಿಯನ್ಸ್ ಬೌಲರ್​ಗಳ ದಾಳಿಗೆ ಸಿಕ್ಕಿ ಅವರು ಮತ್ತೊಮ್ಮೆ ಕಡಿಮೆ ಸ್ಕೋರ್​ಗೆ ಪೆವಿಲಿಯನ್​ಗೆ ಮರಳಿದರು.

ಕೋಲ್ಕತಾ ನೈಟ್ ರೈಡರ್ಸ್ ಆರಂಭಿಕ ನಾಲ್ಕು ವಿಕೆಟ್​​ಗಳನ್ನು ಕಳೆದುಕೊಂಡ ನಂತರ, ರಿಂಕು ಸಿಂಗ್ ಆಡಲು ಬಂದರು. ವಿಶ್ವ ಕಪ್​ನಲ್ಲಿ ಚಾನ್ಸ್ ಸಿಗದ ಕೋಪಕ್ಕೆ ಚಚ್ಚುತ್ತಾರೆ ಎಂದು ಅಭಿಮಾನಿಗಳು ಅಂದುಕೊಂಡಿದ್ದರು. 6 ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಬಂದ ಅವರು ಆರಂಭದಲ್ಲಿ ಉತ್ತಮವಾಗಿಯೇ ಇದ್ದರು.

ರಿಂಕು ಸಿಂಗ್ ತಮ್ಮ ಇನ್ನಿಂಗ್ಸ್ ನ ಆರಂಭದಲ್ಲಿ ಎರಡು ಬೌಂಡರಿಗಳನ್ನು ಗಳಿಸಿದರು. ಇನಿಂಗ್ಸ್​​ನ 7ನೇ ಓವರ್ ನ ಮೊದಲ ಎಸೆತದಲ್ಲಿ ಪಿಯೂಷ್ ಚಾವ್ಲಾ ಮ್ಯಾಜಿಕ್ ಮಾಡಿದರು. ರಿಂಕು ಸಿಂಗ್ ಮಿಡ್​ ವಿಕೆಟ್ ಕಡೆ ಬಾರಿಸಲು ಮುಂದಾಗಿ ಕ್ಯಾಚ್ ನೀಡಿದರು.

ಇದನ್ನೂ ಓದಿ: T20 World Cup : ಉನ್ಮುಕ್ತ್​ ಚಾಂದ್​ಗೆ ತೆರೆಯದ ಭಾಗ್ಯದ ಬಾಗಿಲು; ಯುಎಸ್​ ತಂಡದಲ್ಲಿ ಇಲ್ಲ ಚಾನ್ಸ್​!

ರಿಂಕು ಸಿಂಗ್ 8 ಎಸೆತಗಳಲ್ಲಿ 9 ರನ್ ಗಳಿಸಿದರು. ಅವರು 100 ಕ್ಕೂ ಹೆಚ್ಚು ಸ್ಟ್ರೈಕ್ ರೇಟ್​ನೊಂದಿಗೆ ಬ್ಯಾಟಿಂಗ್ ಮಾಡಿದರು ಮತ್ತು ಅವರ ವಿಕೆಟ್​ನೊಂದಿಗೆ ಕೋಲ್ಕತಾ ನೈಟ್ ರೈಡರ್ಸ್ 57/5 ಕ್ಕೆ ಕುಸಿಯಿತು. ಈ ಋತುವಿನಲ್ಲಿ ಆಡಿರುವ 10 ಪಂದ್ಯಗಳಲ್ಲಿ ಕೇವಲ 18ರ ಸರಾಸರಿಯಲ್ಲಿ ಕೇವಲ 132 ರನ್ ಗಳಿಸಿದ್ದಾರೆ.

ಕೋಲ್ಕತಾ ನೈಟ್ ರೈಡರ್ಸ್ ಬ್ಯಾಟರ್​ ರಿಂಕು ಸಿಂಗ್ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಮತ್ತೊಂದು ವೈಫಲ್ಯ ಅನುಭವಿಸುತ್ತಿದ್ದಂತೆ, ಎಕ್ಸ್​ನಲ್ಲಿ ಅಭಿಮಾನಿಗಳು ಪ್ರತಿಕ್ರಿಯಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

T20 World Cup : ಉನ್ಮುಕ್ತ್​ ಚಾಂದ್​ಗೆ ತೆರೆಯದ ಭಾಗ್ಯದ ಬಾಗಿಲು; ಯುಎಸ್​ ತಂಡದಲ್ಲಿ ಇಲ್ಲ ಚಾನ್ಸ್​!

T20 World Cup: ಭಾರತದ ಮಾಜಿ ಅಂಡರ್ -19 ನಾಯಕ ಉನ್ಮುಕ್ತ್ ಚಾಂದ್ ಟಿ 20 ವಿಶ್ವಕಪ್ ಗಾಗಿ ಯುಎಸ್ಎ ತಂಡದಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದಾರೆ. ಎಂಐಎಲ್ ಸಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ನಂತರ ಪಂದ್ಯಾವಳಿಯಲ್ಲಿ ಯುಎಸ್ಎಯನ್ನು ಪ್ರತಿನಿಧಿಸುವ ಭರವಸೆಯನ್ನು ಚಾಂದ್ ಹೊಂದಿದ್ದರು. ಎಂಐಎಲ್​ನಲ್ಲಿ 3 ಋತುಗಳಲ್ಲಿ ಅವರು 45 ಇನ್ನಿಂಗ್ಸ್​ಗಳಲ್ಲಿ 1500 ರನ್ ಗಳಿಸಿದ್ದರು. ಆದರೂ ವಿಶ್ವಕಪ್​​ಗೆ ಅರ್ಹತೆ ಪಡೆಯಲು ವಿಫಲರಾಗಿದ್ದಾರೆ.

VISTARANEWS.COM


on

T20 World Cup
Koo

ಬೆಂಗಳೂರು: ಭಾರತ ಅಂಡರ್​-19 ವಿಶ್ವ ಕಪ್​ ವಿಜೇತ ತಂಡದ ನಾಯಕರಾಗಿದ್ದ ಉನ್ಮುಕ್ತ್​ ಚಾಂದ್​ಗೆ (Unmukth Chand) ಅದೃಷ್ಟ ಸದಾ ಕೈಕೊಡುತ್ತದೆ. ಭಾರತ ತಂಡದಲ್ಲಿ ಸ್ಥಾನ ಪಡೆಯದ ಅವರು ಐಪಿಎಲ್​ನಲ್ಲಿ ಅವಕಾಶ ಪಡೆಯುವಲ್ಲೂ ಸೋತಿದ್ದರು. ಹೀಗಾಗಿ ಅವರು ಅವಕಾಶಗಳನ್ನು ಅರಸಿಕೊಂಡು ಅಮೆರಿಕಕ್ಕೆ ಹೋಗಿದ್ದರು. ಅಲ್ಲಿನ ರಾಷ್ಟ್ರೀಯ ತಂಡಕ್ಕೆ ಸೇರ್ಪಡೆಯಾಗುವುದು ಅವರ ಗುರಿಯಾಗಿತ್ತು. ಅದಕ್ಕೆ ತಕ್ಕ ಹಾಗೆ ಉತ್ತಮ ಪ್ರದರ್ಶನವನ್ನೂ ನೀಡಿದ್ದರು. ಆದಾಗ್ಯೂ ಅವರ ಭಾಗ್ಯದ ಬಾಗಿಲು ತೆರೆದಿಲ್ಲ. ಮುಂಬರುವ ವಿಶ್ವ ಕಪ್(T20 World Cup) ​ ಯುಎಸ್​ ತಂಡಕ್ಕೆ ಅವರು ಆಯ್ಕೆಯಾಗಿಲ್ಲ.

ವಿಶ್ವ ಕಪ್​ನ ಸಹ-ಆತಿಥೇಯ ಅಮೆರಿಕ ಶುಕ್ರವಾರ (ಮೇ 3ಂದು) ಐಸಿಸಿ ಟಿ 20 ವಿಶ್ವಕಪ್ 2024 ಗಾಗಿ ತನ್ನ 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ಅದರಲ್ಲಿ ಚಾಂದ್ ಅವಕಾಶ ಪಡೆದಿಲ್ಲ. ನ್ಯೂಜಿಲೆಂಡ್​​ನ ಮಾಜಿ ಆಲ್ರೌಂಡರ್ ಕೋರಿ ಆ್ಯಂಡರ್ಸನ್ ಸೇರ್ಪಡೆ ತಂಡದ ಪ್ರಮುಖ ಅಂಶವಾಗಿದೆ. ವೇಗದ ಬೌಲಿಂಗ್ ಆಲ್ರೌಂಡರ್ 2015 ರಲ್ಲಿ ಏಕದಿನ ವಿಶ್ವಕಪ್ ಫೈನಲ್​ಗೆ ಅರ್ಹತೆ ಪಡೆದ ನ್ಯೂಜಿಲೆಂಡ್ ತಂಡದ ಪ್ರಮುಖ ಸದಸ್ಯರಾಗಿದ್ದರು. 2014ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ನ್ಯೂಜಿಲೆಂಡ್ ಪರ ಆಡುವಾಗ ಆ್ಯಂಡರ್ಸನ್ ಕೇವಲ 36 ಎಸೆತಗಳಲ್ಲಿ ಏಕದಿನ ಶತಕ ಬಾರಿಸಿದ್ದರು.

ಭಾರತದ ಮಾಜಿ ಅಂಡರ್ -19 ನಾಯಕ ಉನ್ಮುಕ್ತ್ ಚಾಂದ್ ಟಿ 20 ವಿಶ್ವಕಪ್ ಗಾಗಿ ಯುಎಸ್ಎ ತಂಡದಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದಾರೆ. ಎಂಐಎಲ್ ಸಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ನಂತರ ಪಂದ್ಯಾವಳಿಯಲ್ಲಿ ಯುಎಸ್ಎಯನ್ನು ಪ್ರತಿನಿಧಿಸುವ ಭರವಸೆಯನ್ನು ಚಾಂದ್ ಹೊಂದಿದ್ದರು. ಎಂಐಎಲ್​ನಲ್ಲಿ 3 ಋತುಗಳಲ್ಲಿ ಅವರು 45 ಇನ್ನಿಂಗ್ಸ್​ಗಳಲ್ಲಿ 1500 ರನ್ ಗಳಿಸಿದ್ದರು. ಆದರೂ ವಿಶ್ವಕಪ್​​ಗೆ ಅರ್ಹತೆ ಪಡೆಯಲು ವಿಫಲರಾಗಿದ್ದಾರೆ.

ಯುಎಸ್ಎ ತಂಡ

ವಿಕೆಟ್ ಕೀಪರ್-ಬ್ಯಾಟ್ಸ್​​ಮನ್​ ಮೊನಂಕ್ ಪಟೇಲ್ ಟಿ 20 ವಿಶ್ವಕಪ್​ನಲ್ಲಿ ಯುಎಸ್ಎ ತಂಡವನ್ನು ಮುನ್ನಡೆಸಲಿದ್ದಾರೆ. ಯುಎಸ್ಎ ವೇಗದ ಬೌಲರ್ ಅಲಿ ಖಾನ್ ಈವೆಂಟ್​ಗೆ ಫಿಟ್ ಆಗಿದ್ದಾರೆ. ಸ್ನಾಯುಸೆಳೆತದ ಗಾಯದಿಂದಾಗಿ ಖಾನ್ ಇತ್ತೀಚೆಗೆ ಕೆನಡಾ ವಿರುದ್ಧದ ಟಿ 20 ಐ ಸರಣಿಯಿಂದ ಹೊರಗುಳಿದಿದ್ದರು.

ಇದನ್ನೂ ಓದಿ: IPL 2024 : ರೋಹಿತ್​ ಶರ್ಮಾ ಬೆಂಚು ಕಾಯುವಂತೆ ಮಾಡಿದ ಹಾರ್ದಿಕ್ ಪಾಂಡ್ಯ

ಖಾನ್ ಟಿ 20 ಕ್ರಿಕೆಟ್​​ ಅನುಭವವನ್ನು ಹೊಂದಿದ್ದಾರೆ. ಅವರು ವಿಶ್ವದಾದ್ಯಂತ ಹಲವಾರು ಟಿ 20 ತಂಡಗಳಿಗಾಗಿ ಆಡಿದ್ದಾರೆ. ಅವರು ಐಪಿಎಲ್ ತಂಡ ಕೋಲ್ಕತಾ ನೈಟ್ ರೈಡರ್ಸ್ನ ಭಾಗವಾಗಿದ್ದರು. ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆರಂಭಿಕ ಬ್ಯಾಟರ್​​ ಸ್ಟೀವನ್ ಟೇಲರ್ ಅವರೊಂದಿಗೆ ಯುಎಸ್ಎ ಟಿ 20 ಐ ಆಟಗಾರ ಸೌರಭ್ ನೇತ್ರವಾಲ್ಕರ್ ಕೂಡ ತಂಡದಲ್ಲಿದ್ದಾರೆ.

‘ಎ’ ಗುಂಪಿನಲ್ಲಿ ಅಮೆರಿಕ, ಮಾಜಿ ಚಾಂಪಿಯನ್ ಭಾರತ, ಪಾಕಿಸ್ತಾನ, ಐರ್ಲೆಂಡ್ ಮತ್ತು ಕೆನಡಾ ತಂಡಗಳಿವೆ. ಸಹ-ಆತಿಥೇಯರು ಜೂನ್ 1 ರಂದು ಕೆನಡಾ ವಿರುದ್ಧ ಟಿ 20 ವಿಶ್ವಕಪ್ನಲ್ಲಿ ತಮ್ಮ ಅಭಿಯಾನವನ್ನು ಪ್ರಾರಂಭಿಸಲಿದ್ದಾರೆ.

ಐಸಿಸಿ ಟಿ20 ವಿಶ್ವಕಪ್ 2024: ಅಮೆರಿಕ ತಂಡ:

ಮೊನಂಕ್ ಪಟೇಲ್ (ನಾಯಕ), ಆರೋನ್ ಜೋನ್ಸ್ (ಉಪನಾಯಕ), ಆಂಡ್ರೀಸ್ ಗೌಸ್, ಕೋರಿ ಆಂಡರ್ಸನ್, ಅಲಿ ಖಾನ್, ಹರ್ಮೀತ್ ಸಿಂಗ್, ಜೆಸ್ಸಿ ಸಿಂಗ್, ಮಿಲಿಂದ್ ಕುಮಾರ್, ನಿಸಾರ್ಗ್ ಪಟೇಲ್, ನಿತೀಶ್ ಕುಮಾರ್, ನೊಶ್ತುಶ್ ಕೆಂಜಿಗೆ, ಸೌರಭ್ ನೇತ್ರಲ್ವಾಕರ್, ಶಾಡ್ಲಿ ವ್ಯಾನ್ ಶಾಲ್ಕ್ವಿಕ್, ಸ್ಟೀವನ್ ಟೇಲರ್, ಶಯಾನ್ ಜಹಾಂಗೀರ್. ಮೀಸಲು ಆಟಗಾರರು: ಗಜಾನಂದ್ ಸಿಂಗ್, ಜುವಾಯ್ ಡ್ರೈಸ್ಡೇಲ್, ಯಾಸಿರ್ ಮೊಹಮ್ಮದ್

Continue Reading

ಕ್ರೀಡೆ

IPL 2024 : ರೋಹಿತ್​ ಶರ್ಮಾ ಬೆಂಚು ಕಾಯುವಂತೆ ಮಾಡಿದ ಹಾರ್ದಿಕ್ ಪಾಂಡ್ಯ

IPL 2024: ಐದು ಬಾರಿಯ ಚಾಂಪಿಯನ್ಸ್ ಮುಂಬಯಿ ಇಂಡಿಯನ್ಸ್ ತವರು ಸ್ಟೇಡಿಯಮ್​ನಲ್ಲಿ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಅದ್ಭುತ ದಾಖಲೆಯನ್ನು ಹೊಂದಿದೆ. ವಾಂಖೆಡೆ ಸ್ಟೇಡಿಯಂನಲ್ಲಿ ಕೋಲ್ಕತಾ ವಿರುದ್ಧ ಮುಂಬೈ ಇಂಡಿಯನ್ಸ್ ಆಡಿದ 10 ಪಂದ್ಯಗಳಲ್ಲಿ 9ರಲ್ಲಿ ಗೆಲುವು ಸಾಧಿಸಿದೆ. ಪ್ರಸ್ತುತ ಮುಂಬೈನಲ್ಲಿ ಫಾರ್ಮ್​ನಲ್ಲಿ ಇಲ್ಲ. ಆದರೂ ಗೆಲುವಿಗಾಗಿ ಪ್ರಯತ್ನಿಸಲಿದೆ.

VISTARANEWS.COM


on

IPL 2024
Koo

ಬೆಂಗಳೂರು: ಐಪಿಎಲ್ 2024 ರ (IPL 2024) 51 ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಕೋಲ್ಕತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿವೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯುತ್ತಿದೆ. ಮುಂಬೈ ಇಂಡಿಯನ್ಸ್ ತನ್ನ ಕೊನೆಯ ನಾಲ್ಕು ಪಂದ್ಯಗಳನ್ನು ತವರಿನಲ್ಲಿ ಆಡಿದೆ ಮತ್ತು ಅದರಲ್ಲಿ ಮೂರನ್ನು ಮಾತ್ರ ಗೆಲ್ಲಲು ಸಾಧ್ಯವಾಗಿದೆ. ತವರಿನ ಪರಿಸ್ಥಿತಿಯನ್ನು ಸದುಪಯೋಗಪಡಿಸಿಕೊಂಡು ಕೋಲ್ಕತಾ ನೈಟ್ ರೈಡರ್ಸ್ ತಂಡವನ್ನು ಮಣಿಸಿ ಮೂರು ಪಂದ್ಯಗಳ ಸೋಲಿನ ಸರಣಿಯನ್ನು ಕೊನೆಗೊಳಿಸುವ ವಿಶ್ವಾಸದಲ್ಲಿದೆ ಹಾರ್ದಿಕ್ ಪಾಂಡ್ಯ ಬಳಗ.

ಐದು ಬಾರಿಯ ಚಾಂಪಿಯನ್ಸ್ ಮುಂಬಯಿ ಇಂಡಿಯನ್ಸ್ ತವರು ಸ್ಟೇಡಿಯಮ್​ನಲ್ಲಿ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಅದ್ಭುತ ದಾಖಲೆಯನ್ನು ಹೊಂದಿದೆ. ವಾಂಖೆಡೆ ಸ್ಟೇಡಿಯಂನಲ್ಲಿ ಕೋಲ್ಕತಾ ವಿರುದ್ಧ ಮುಂಬೈ ಇಂಡಿಯನ್ಸ್ ಆಡಿದ 10 ಪಂದ್ಯಗಳಲ್ಲಿ 9ರಲ್ಲಿ ಗೆಲುವು ಸಾಧಿಸಿದೆ. ಪ್ರಸ್ತುತ ಮುಂಬೈನಲ್ಲಿ ಫಾರ್ಮ್​ನಲ್ಲಿ ಇಲ್ಲ. ಆದರೂ ಗೆಲುವಿಗಾಗಿ ಪ್ರಯತ್ನಿಸಲಿದೆ.

ರೋಹಿತ್ ಶರ್ಮಾಗೆ ಇಲ್ಲ ಚಾನ್ಸ್​

ಶುಕ್ರವಾರ (ಮೇ 3) ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು. ನಂತರ ಆತಿಥೇಯರು ಆಟಕ್ಕಾಗಿ ವಿಶೇಷ ಪ್ಲೇಯಿಂಗ್ ಇಲೆವೆನ್ ಅನ್ನು ಘೋಷಿಸಿದರು. ಅಂದರೆ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯಕ್ಕೆ ಮಾಜಿ ನಾಯಕ ರೋಹಿತ್ ಶರ್ಮಾ ಅವರ ಹೆಸರು ಆಡುವ ಹನ್ನೊಂದರಲ್ಲಿ ಕಾಣೆಯಾಗಿತ್ತು. ಆದರೆ, ಅವರು ಇಂಪ್ಯಾಕ್ಟ್​ ಪ್ಲೇಯರ್ ಆಗಿ ಆಡಿದರು. ಅವರು ಫೀಲ್ಡಿಂಗ್​ಗೆ ಬರಲಿಲ್ಲ.

ಇದನ್ನೂ ಓದಿ: KL Rahul : ವಿಶ್ವ ಕಪ್​ ತಂಡಕ್ಕೆ ಕೆ. ಎಲ್​ ರಾಹುಲ್​ ಬೇಡ ಅಂದಿದ್ದು ರೋಹಿತ್ ಶರ್ಮಾ; ಸ್ಫೋಟಕ ಮಾಹಿತಿ ಬಹಿರಂಗ

ಮುಂಬೈ ಇಂಡಿಯನ್ಸ್ ಮೊದಲು ಬೌಲಿಂಗ್ ಮಾಡುತ್ತಿರುವುದರಿಂದ, ಅನುಭವಿ ಬ್ಯಾಟರ್​ ಮೈದಾನಕ್ಕೆ ಇಳಿಯಲಿಲ್ಲ. ಆದರೆ ಪಂದ್ಯದ ದ್ವಿತೀಯಾರ್ಧದಲ್ಲಿ ಬ್ಯಾಟಿಂಗ್ ಮಾಡಲು ಹೊರಬಂದರು. ಕಳೆದ ಮೂರು ಇನ್ನಿಂಗ್ಸ್​ಗಳಲ್ಲಿ ರೋಹಿತ್ ಎರಡಂಕಿಯ ಗಡಿ ತಲುಪಲು ಸಾಧ್ಯವಾಗಿಲ್ಲ. ಹೀಗಾಗಿ ಮರಳಲು ಎದುರು ನೋಡುತ್ತಿದ್ದಾರೆ.

ನಾವು ಬೌಲಿಂಗ್ ಮಾಡುತ್ತೇವೆ. ಇದು ಯಾವಾಗಲೂ ಹೆಮ್ಮೆಗಾಗಿ ಆಡುವ ಪಂದ್ಯ. ನಮಗೆ ಸಾಕಷ್ಟು ಕಠಿಣವಾಗಿ ಕಾಣುತ್ತದೆ ಆದರೆ ಅದೇ ಸಮಯದಲ್ಲಿ, ನಾವು ಉತ್ತಮ ಕ್ರಿಕೆಟ್ ಆಡಲು ಬಯಸುತ್ತೇವೆ. ತವರಿಗೆ ಮರಳಲು ಸಂತೋಷವಾಗಿದೆ. ಉತ್ತಮ ಟ್ರ್ಯಾಕ್​ನಂತೆ ಕಾಣುತ್ತದೆ. ಇದು ಹೊಸ ಪಿಚ್​ ಆದ್ದರಿಂದ ಮೊದಲು ಬೌಲಿಂಗ್ ಮಾಡುವುದು ಒಳ್ಳೆಯದು ಎಂದು ಭಾವಿಸಿದೆ. ನಬಿ ಬದಲಿಗೆ ನಮನ್ ಧೀರ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ,” ಎಂದು ಹಾರ್ದಿಕ್ ಪಾಂಡ್ಯ ಹೇಳಿದ್ದಾರೆ.

ಪ್ಲೇಯಿಂಗ್ ಇಲೆವೆನ್ ಇಂತಿದೆ

ಮುಂಬೈ ಇಂಡಿಯನ್ಸ್: ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ನೇಹಾಲ್ ವಧೇರಾ, ಹಾರ್ದಿಕ್ ಪಾಂಡ್ಯ (ಸಿ), ನಮನ್ ಧೀರ್, ಟಿಮ್ ಡೇವಿಡ್, ಜೆರಾಲ್ಡ್ ಕೊಟ್ಜೆ, ಪಿಯೂಷ್ ಚಾವ್ಲಾ, ಜಸ್ಪ್ರೀತ್ ಬುಮ್ರಾ, ನುವಾನ್ ತುಷಾರ.

ಕೋಲ್ಕತಾ ನೈಟ್ ರೈಡರ್ಸ್: ಫಿಲಿಪ್ ಸಾಲ್ಟ್ (ವಿಕೆಟ್​ ಕೀಪರ್), ಸುನಿಲ್ ನರೈನ್, ಆಂಗ್ರಿಶ್ ರಘುವಂಶಿ, ಶ್ರೇಯಸ್ ಅಯ್ಯರ್ (ನಾಯಕ), ವೆಂಕಟೇಶ್ ಅಯ್ಯರ್, ರಿಂಕು ಸಿಂಗ್, ಆಂಡ್ರೆ ರಸೆಲ್, ರಮಣ್ದೀಪ್ ಸಿಂಗ್, ಮಿಚೆಲ್ ಸ್ಟಾರ್ಕ್, ವೈಭವ್ ಅರೋರಾ, ವರುಣ್ ಚಕ್ರವರ್ತಿ.

Continue Reading

ಕ್ರೀಡೆ

KL Rahul : ವಿಶ್ವ ಕಪ್​ ತಂಡಕ್ಕೆ ಕೆ. ಎಲ್​ ರಾಹುಲ್​ ಬೇಡ ಅಂದಿದ್ದು ರೋಹಿತ್ ಶರ್ಮಾ; ಆಂತರಿಕ ಮಾಹಿತಿ ಬಹಿರಂಗ

KL Rahul: ಆಯ್ಕೆದಾರರು ರಾಹುಲ್​ಗಿಂತ ಸ್ಯಾಮ್ಸನ್ ಮತ್ತು ಪಂತ್​​ಗೆ ಆದ್ಯತೆ ನೀಡಲು ಒಂದು ಕಾರಣವೆಂದರೆ ರಾಹುಲ್​ ಹೆಚ್ಚಾಗಿ ಅಗ್ರ ಕ್ರಮಾಂಕದಲ್ಲಿ ಆಡುತ್ತಾರೆ. ಟಿ20ಐನಲ್ಲಿ ರಾಹುಲ್ ಆರಂಭಿಕನಾಗಿ 54 ಇನ್ನಿಂಗ್ಸ್​ಗಳಲ್ಲಿ 3 ನೇ ಕ್ರಮಾಂಕದಲ್ಲಿ 10 ಇನ್ನಿಂಗ್ಸ್​ಗಳಲ್ಲಿ ಮತ್ತು 4 ನೇ ಕ್ರಮಾಂಕದಲ್ಲಿ ಕೇವಲ 4 ಇನ್ನಿಂಗ್ಸ್​ಗಳಲ್ಲಿ ಬ್ಯಾಟಿಂಗ್ ಮಾಡಿದ್ದಾರೆ.

VISTARANEWS.COM


on

KL Rahul
Koo

ನವದೆಹಲಿ: ಮುಂಬರುವ ಟಿ20 ವಿಶ್ವ ಕಪ್​​ನಲ್ಲಿ ಕೆ. ಎಲ್​ ರಾಹುಲ್ (KL Rahul) ಸ್ಥಾನ ಪಡೆಯದಿರಲು ನಾಯಕ ರೋಹಿತ್​ ಶರ್ಮಾ ಕಾರಣ ಎಂಬ ಮಾಹಿತಿ ಬಹಿರಂಗಗೊಂಡಿದೆ. ಐಪಿಎಲ್ 2024 ಪ್ರಾರಂಭವಾಗುವ ಮೊದಲು ಲಕ್ನೊ ಸೂಪರ್ ಜೈಂಟ್ಸ್ (LSG) ನಾಯಕ ಕೆಎಲ್ ರಾಹುಲ್ ಅವರನ್ನು 2024 ರ ಟಿ 20 ವಿಶ್ವಕಪ್ ತಂಡಕ್ಕೆ ಪರಿಗಣಿಸಲಾಗುವುದಿಲ್ಲ ಎಂದು ಹೇಳಿದ್ದರು ಎಂದು ಮೂಲಗಳು ತಿಳಿಸಿವೆ.

2024ರ ಟಿ 20 ವಿಶ್ವಕಪ್​​ಗಾಗಿ ರಾಹುಲ್ ಅವರನ್ನು ಮಂಗಳವಾರ ಭಾರತ ತಂಡದಿಂದ ಹೊರಗಿಡಲಾಗಿತ್ತು. ರಿಷಭ್ ಪಂತ್ ಮತ್ತು ಸಂಜು ಸ್ಯಾಮ್ಸನ್ 15 ಸದಸ್ಯರ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಈ ವರ್ಷದ ಐಪಿಎಲ್​​ನಲ್ಲಿ ರಾಹುಲ್ ಅವರ ಪ್ರಭಾವಶಾಲಿ ಪ್ರದರ್ಶನವನ್ನು ಪರಿಗಣಿಸಿ ಈ ನಿರ್ಧಾರವು ಹುಬ್ಬೇರುವಂತೆ ಮಾಡಿತ್ತು. ಅಲ್ಲಿ ಅವರು ಹತ್ತು ಇನ್ನಿಂಗ್ಸ್​ಗಳಲ್ಲಿ 40.60 ಸರಾಸರಿಯಲ್ಲಿ 406 ರನ್ ಗಳಿಸಿದ್ದಾರೆ. ಎಲ್ಎಸ್ಜಿ ಪರ 142.96 ಕ್ಕೂ ಹೆಚ್ಚು ಸ್ಟ್ರೈಕ್ ರೇಟ್ ಹೊಂದಿದ್ದಾರೆ. ಈ ಎಲ್ಲಾ ರನ್ ಗಳನ್ನು ಅಗ್ರ ಕ್ರಮಾಂಕದಲ್ಲಿ ಸ್ಕೋರ್ ಮಾಡಲಾಗಿದೆ.

ಎಲ್ಎಸ್ಜಿ ಮೂಲದ ಮಾಹಿತಿ ಏನು?

ಆಯ್ಕೆದಾರರು ರಾಹುಲ್​ಗಿಂತ ಸ್ಯಾಮ್ಸನ್ ಮತ್ತು ಪಂತ್​​ಗೆ ಆದ್ಯತೆ ನೀಡಲು ಒಂದು ಕಾರಣವೆಂದರೆ ರಾಹುಲ್​ ಹೆಚ್ಚಾಗಿ ಅಗ್ರ ಕ್ರಮಾಂಕದಲ್ಲಿ ಆಡುತ್ತಾರೆ. ಟಿ20ಐನಲ್ಲಿ ರಾಹುಲ್ ಆರಂಭಿಕನಾಗಿ 54 ಇನ್ನಿಂಗ್ಸ್​ಗಳಲ್ಲಿ 3 ನೇ ಕ್ರಮಾಂಕದಲ್ಲಿ 10 ಇನ್ನಿಂಗ್ಸ್​ಗಳಲ್ಲಿ ಮತ್ತು 4 ನೇ ಕ್ರಮಾಂಕದಲ್ಲಿ ಕೇವಲ 4 ಇನ್ನಿಂಗ್ಸ್​ಗಳಲ್ಲಿ ಬ್ಯಾಟಿಂಗ್ ಮಾಡಿದ್ದಾರೆ. ಆದಾಗ್ಯೂ, ವಿಶ್ವಕಪ್ ಆಯ್ಕೆ ಸಮೀಪಿಸುತ್ತಿರುವುದರಿಂದ ಅವರು ಎಲ್ಎಸ್​​ಜಿ ತಂಡಕ್ಕೆ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುತ್ತಾರೆ ಎಂಬ ಊಹಾಪೋಹಗಳು ಇದ್ದವು.

ಇದನ್ನೂ ಓದಿ: IPL 2024 : ಕೊಹ್ಲಿಯ ಸ್ಟ್ರೈಕ್ ರೇಟ್ ಪ್ರಶ್ನಿಸುವವರಿಗೆ ತಕ್ಕ ಪಾಠ ಹೇಳಿದ ಕೈಫ್​, ಪಠಾಣ್​​

ಎಲ್ಎಸ್​​ಜಿ ಓಪನರ್ ಆಗಿ ರಾಹುಲ್ ಬದಲಿಗೆ ಅಗ್ರ ಕ್ರಮಾಂಕದ ಆಟಗಾರ ದೇವದತ್ ಪಡಿಕ್ಕಲ್ ಅವರನ್ನು ಲಕ್ನೋ ಖರೀದಿಸಿತು. ಆದಾಗ್ಯೂ, ಅದು ಕೆಲಸ ಮಾಡಿಲ್ಲ. ಈಗ ಎಲ್ಎಸ್​​ಜಿ ಹತ್ತಿರದ ಮೂಲವು ರಾಹುಲ್ ತಮ್ಮ ಐಪಿಎಲ್ ಫ್ರಾಂಚೈಸಿಗಾಗಿ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡದಿರಲು ಕಾರಣವನ್ನು ಬಹಿರಂಗಪಡಿಸಿದೆ.

ಕೆಎಲ್ ರಾಹುಲ್ ಎಲ್ಎಸ್​ಜಿ ತಂಡ ಪರ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಸಿದ್ಧರಾಗಿದ್ದರು, ಅದಕ್ಕಾಗಿಯೇ ನಾವು ಪಡಿಕ್ಕಲ್ ಅವರನ್ನು ನಮ್ಮ ತಂಡಕ್ಕೆ ಕರೆತಂದಿದ್ದೆವು. ಆದರೆ ಕೆಲವು ದಿನಗಳ ಹಿಂದೆ ಕೆಎಲ್ ರೋಹಿತ್ ಅವರೊಂದಿಗೆ ಚಾಟ್ ಮಾಡಿದ್ದರು. ಅವರು ಕೆಎಲ್ ರಾಹುಲ್ ಅವರನ್ನು ತಂಡಕ್ಕೆ ಸೇರಿಸುವ ಸಾಧ್ಯತೆಗಳು ಇಲ್ಲ ಎಂದು ಹೇಳಿದ್ದರು. ಹೀಗಾಗಿ ಕೆಎಲ್ ಐಪಿಎಲ್​​ನಲ್ಲಿ ಓಪನರ್ ಆದರು”ಎಂದು ಎಲ್ಎಸ್ಜಿಗೆ ಹತ್ತಿರದ ಮೂಲಗಳು ತಿಳಿಸಿವೆ.

ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವ ರಾಹುಲ್ ಅವರ ಸೀಮಿತ ಅನುಭವ ಗಮನಿಸಿದರೆ, ರಿಷಭ್ ಪಂತ್, ಸಂಜು ಸ್ಯಾಮ್ಸನ್ ಮತ್ತು ಶಿವಂ ದುಬೆ ಬದಲಿಗೆ ಅವರನ್ನು ಆಯ್ಕೆ ಮಾಡುವುದು ಸೂಕ್ತವಾಗಿದೆ.

Continue Reading
Advertisement
Rohith Vemula
ದೇಶ11 mins ago

Rohith Vemula: ರೋಹಿತ್‌ ವೇಮುಲ ದಲಿತನಲ್ಲ ಎಂದ ಪೊಲೀಸರು; ಮರು ತನಿಖೆಗೆ ‘ಕೈ’ ಸರ್ಕಾರ ಆದೇಶ!

Rinku Singh
ಪ್ರಮುಖ ಸುದ್ದಿ21 mins ago

Rinku Singh : ಕೊಹ್ಲಿಯ ಬ್ಯಾಟ್​ನಲ್ಲಿ ರಿಂಕು ಚೆನ್ನಾಗಿ ಆಡುತ್ತಿಲ್ಲ; ನೆಟ್ಟಿಗರಿಂದ ಟ್ರೋಲ್​!

honour killing
ವಿಜಯಪುರ31 mins ago

Honor Killing: ಮರ್ಯಾದೆಗಾಗಿ ಗರ್ಭಿಣಿಯನ್ನು ಸುಟ್ಟು ಕೊಂದ ಇಬ್ಬರಿಗೆ ಗಲ್ಲು ಶಿಕ್ಷೆ, 6 ಮಂದಿಗೆ ಜೀವಾವಧಿ‌ ಶಿಕ್ಷೆ

Pakistan
ವಿದೇಶ48 mins ago

ಚೀನಾ ದಯೆಯಿಂದ ಮೊದಲ ಚಂದ್ರಯಾನ ಕೈಗೊಂಡ ಪಾಕಿಸ್ತಾನ; ಆದರೂ ಭಾರತಕ್ಕಿಂತ 16 ವರ್ಷ ಹಿಂದೆ!

T20 World Cup
ಪ್ರಮುಖ ಸುದ್ದಿ50 mins ago

T20 World Cup : ಉನ್ಮುಕ್ತ್​ ಚಾಂದ್​ಗೆ ತೆರೆಯದ ಭಾಗ್ಯದ ಬಾಗಿಲು; ಯುಎಸ್​ ತಂಡದಲ್ಲಿ ಇಲ್ಲ ಚಾನ್ಸ್​!

Health Tips Kannada
ಆರೋಗ್ಯ1 hour ago

Health Tips Kannada : ಉತ್ತಮ ಆರೋಗ್ಯಕ್ಕಾಗಿ ಎಷ್ಟು ಗಂಟೆ ಕುಳಿತುಕೊಳ್ಳಬೇಕು, ನಿಂತುಕೊಳ್ಳಬೇಕು, ಮಲಗಬೇಕು?

Meeting with representatives of various political parties about MLC election in Hosapete
ವಿಜಯನಗರ1 hour ago

Vijayanagara News: ವಿಧಾನ ಪರಿಷತ್ ಪದವೀಧರ ಕ್ಷೇತ್ರದ ಚುನಾವಣೆ; ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ

Election campaign meeting for Kalaburgi Lok Sabha constituency BJP candidate Umesh Jadav at kalaburagi
ರಾಜಕೀಯ1 hour ago

Lok Sabha Election 2024: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬರಗಾಲ ಗ್ಯಾರಂಟಿ: ಬಿ.ಎಲ್. ಸಂತೋಷ್

Jai Shri Ram Slogan
ಕರ್ನಾಟಕ2 hours ago

Jai Shri Ram Slogan: ಜೈ ಶ್ರೀರಾಮ್ ಎಂದು ಕೂಗಿದ್ರೆ ಬೂಟುಗಾಲಲ್ಲಿ ಒದೆಯಿರಿ ಎಂದ ಕಾಂಗ್ರೆಸ್‌ ಮುಖಂಡ

Ballari Lok Sabha constituency Congress candidate E Tukaram election campaign in Kuduthini
ಬಳ್ಳಾರಿ2 hours ago

Lok Sabha Election 2024: ಕುಡುತಿನಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ತುಕಾರಾಂ ಭರ್ಜರಿ ರೋಡ್‌ ಶೋ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Bengaluru Rains
ಮಳೆ7 hours ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ19 hours ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ1 day ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ2 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ4 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20244 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20244 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ5 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20245 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20245 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

ಟ್ರೆಂಡಿಂಗ್‌