Dostarlimab ಕ್ಯಾನ್ಸರ್‌ಗೆ ಮಾಯಾಮದ್ದು ಆಗಬಹುದಾ? ಎಲ್ಲರ ಕೈಗೆ ಸಿಗುತ್ತಾ? ಸ್ವಲ್ಪ ತಾಳಿ! - Vistara News

ಪ್ರಮುಖ ಸುದ್ದಿ

Dostarlimab ಕ್ಯಾನ್ಸರ್‌ಗೆ ಮಾಯಾಮದ್ದು ಆಗಬಹುದಾ? ಎಲ್ಲರ ಕೈಗೆ ಸಿಗುತ್ತಾ? ಸ್ವಲ್ಪ ತಾಳಿ!

ಕ್ಯಾನ್ಸರ್‌ಗೆ ಮಾಯಾ ಔಷಧ ಎಂದು ಹೇಳಲಾಗುತ್ತಿರುವ Dostarlimab ನಿಜಕ್ಕೂ ಎಲ್ಲ ರೋಗಿಗಳ ಪಾಲಿಗೆ ಆಶಾವಾದವಾಗಬಹುದೇ ಎಂಬ ಪ್ರಶ್ನೆಗೆ ನೇರ ಉತ್ತರ ಸಿಗುವುದಿಲ್ಲ. ಕಾದು ನೋಡಬೇಕು ಎಂದೇ ಪ್ರಮುಖ ತಜ್ಞರು ಹೇಳುತ್ತಿರುವುದು.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಾಷಿಂಗ್ಟನ್‌: ಕ್ಯಾನ್ಸರ್‌ ʻಗುಣಪಡಿಸುವ ಮಾಯಾ ಔಷಧʼದ ಬಗ್ಗೆ ಈಗ ಭಾರಿ ಚರ್ಚೆ ನಡೆಯುತ್ತಿದೆ. ವಿಜ್ಞಾನ ವಲಯವನ್ನೂ ಮೀರಿ ಜನ ಸಾಮಾನ್ಯರೂ ಮಾತನಾಡಿಕೊಳ್ಳುತ್ತಿದ್ದಾರೆ. ಆದರೆ ಕ್ಯಾನ್ಸರ್‌ಗೆ ಡೋಸ್ಟರ್‌ಲಿಮಬ್‌ (Dostarlimab) ʻಮಾಯಾಮದ್ದುʼ  ಹೌದೇ ಎಂಬ ಬಗ್ಗೆ ಇಷ್ಟು ಬೇಗನೇ ತೀರ್ಮಾನಕ್ಕೆ ಬರಲಾಗದು ಎನ್ನುತ್ತಾರೆ ವಿಜ್ಞಾನಿಗಳು.

ಹನ್ನೆರಡು ಮಂದಿ ಗುದನಾಳ ಕ್ಯಾನ್ಸರ್‌ ಪೀಡಿತರ ಮೇಲೆ ನಡೆಸಿದ ಪ್ರಯೋಗದ ಫಲಿತಾಂಶದ ಪ್ರಕಾರ, ಯಾವುದೇ ಕೀಮೊ, ಶಸ್ತ್ರಚಿಕಿತ್ಸೆಗಳ ನೆರವಿಲ್ಲದೆ ಆರು ತಿಂಗಳ ಅವಧಿಯಲ್ಲಿ ನೀಡಲಾದ ಡೋಸ್ಟರ್‌ಲಿ ಮಬ್‌ ಔಷಧ, ಹೆಚ್ಚಿನ ಅಡ್ಡಪರಿಣಾಮಗಳಿಲ್ಲದೆ ರೋಗಿಗಳಲ್ಲಿ  ಕ್ಯಾನ್ಸರ್‌ ಗುಣಪಡಿಸಿತ್ತು. ದೇಹದ ನೈಸರ್ಗಿಕ ಪ್ರತಿಕಾಯಗಳನ್ನು ಉದ್ದೀಪಿಸುವ ತಂತ್ರವನ್ನಾಧರಿಸಿ ಕೆಲಸ ಮಾಡುವ ಈ ಔಷಧ ʻಹೊಸದಲ್ಲʼ. ಅಮೆರಿಕ ಮತ್ತು ಐರೋಪ್ಯ ಒಕ್ಕೂಟದಲ್ಲಿ 2021ರ ಏಪ್ರಿಲ್‌ನಲ್ಲೇ ಬಳಕೆಗೆ ಮುಕ್ತವಾದ ಔಷಧವಿದು. ಆದರೆ ಕ್ಯಾನ್ಸರ್‌ ಪೀಡಿತರಿಗೆ ಈ ಔಷಧವೊಂದು ಆಶಾಕಿರಣ ಎಂದೇ ಎಲ್ಲೆಡೆ ಬಿಂಬಿಸಲಾಗುತ್ತಿರುವ ಸಂದರ್ಭದಲ್ಲಿ, ವಿಷಯವನ್ನು ಸ್ವಲ್ಪ ತಾಳ್ಮೆಯಿಂದ ಪರಾಂಬರಿಸುವ ಅಗತ್ಯವನ್ನು ವೈದ್ಯ ಮತ್ತು ವಿಜ್ಞಾನ ವಲಯ ಒತ್ತಿ ಹೇಳುತ್ತಿದೆ. ಹಾಗಾದರೆ ಏನವರ ಇಂಗಿತ?

ಸೀಮಿತ ಪ್ರಯೋಗ: ಪ್ರಯೋಗಕ್ಕೆ ಒಳಪಡಿಸಿದ ರೋಗಿಗಳ ಸಂಖ್ಯೆ ತೀರಾ ಸೀಮಿತ. ಎಲ್ಲರೂ ಒಂದೇ ರೀತಿಯ ಲಕ್ಷಣಗಳನ್ನು ಹೊಂದಿದ್ದ ಗುದನಾಳದ ಕ್ಯಾನ್ಸರ್‌ಗೆ ತುತ್ತಾಗಿದ್ದವರು. ಇವರೆಲ್ಲ ಪ್ರತಿಕಾಯ ಚಿಕಿತ್ಸೆಗೆ ಸ್ಪಂದಿಸುವಂತಹ ಲಕ್ಷಣಗಳನ್ನೇ ತೋರಿಸುತ್ತಿದ್ದರು ಎನ್ನುತ್ತಾರೆ ಟಾಟಾ ಸ್ಮಾರಕ ಕೇಂದ್ರದ ನಿರ್ದೇಶಕ ಡಾ. ಸಿ.ಎಸ್.‌ ಪ್ರಮೇಶ್‌

ವೆಚ್ಚ ವಿಪರೀತ: ಈ ಬಗ್ಗೆ ಟ್ವಿಟರ್ ನಲ್ಲಿ ವಿವರ ನೀಡಿರುವ ಡಾ. ಪ್ರಮೇಶ್‌, ʻಈ ಚಿಕಿತ್ಸೆಯ ವೆಚ್ಚ ಸಾಮಾನ್ಯದ್ದಲ್ಲ. ಆರು ತಿಂಗಳಲ್ಲಿ 9 ಡೋಸ್‌ಗಳಲ್ಲಿ ನೀಡಲಾಗಿರುವ ಈ ಔಷಧದ ವೆಚ್ಚ 50 ಲಕ್ಷ ರೂ. ಗಳಿಂದ ಒಂದು ಕೋಟಿ ರೂ.! ಶೇ. 70ರಷ್ಟು ಕ್ಯಾನ್ಸರ್‌ ಪ್ರಕರಣಗಳು ವರದಿಯಾಗುವುದು, ಭಾರತವೂ ಸೇರಿದಂತೆ, ಕೆಳ ಮತ್ತು ಮಧ್ಯಮ ಆದಾಯವಿರುವ ದೇಶಗಳಲ್ಲಿ ಎಂಬುದನ್ನು ನಾವು ಗಮನಿಸಿದರೆ, ಇಷ್ಟೊಂದು ವೆಚ್ಚವನ್ನು ಭರಿಸುವವರು ಯಾರು? ಇದು ಜನರ ಕೈಗೆಟಕುವುದು ಹೇಗೆ?ʼ ಎಂದು ಕಳಕಳಿ ಅವರದ್ದು.   

ಮರುಕಳಿಸುತ್ತದೆಯೇ?: ಗುಣಮುಖರಾದವರಲ್ಲಿ ಈ ರೋಗ ಮರುಕಳಿಸುತ್ತದೆಯೇ ಎಂಬುದನ್ನು ತಿಳಿದುಕೊಳ್ಳಲು ಸಾಕಷ್ಟು ಸಮಯಾವಕಾಶ ನೀಡಲಾಗಿಲ್ಲ ಎನ್ನುತ್ತಾರೆ ಸಾರ್ವಜನಿಕ ಆರೋಗ್ಯ ತಜ್ಞ ಡಾ. ಆಶ್‌ ಪಾಲ್.‌ ಇನ್ನೂ ಕನಿಷ್ಟ 6-8 ತಿಂಗಳಷ್ಟು ಅವಧಿಯ ನಂತರ ಚೇತರಿಕೆಯ ಪ್ರಮಾಣವನ್ನು ಆಧರಿಸಿದರೆ ಫಲಿತಾಂಶ ಹೆಚ್ಚು ನಿಖರ ಎನಿಸಬಹುದು ಎಂಬುದು ಅವರ ಅಭಿಪ್ರಾಯ

ಸೀಮಿತ ಮಾದರಿ: ಆರಂಭಿಕ ಫಲಿತಾಂಶ ಭರವಸೆದಾಯಕವಾಗಿದ್ದರೂ, ಪ್ರಯೋಗಕ್ಕೆ ತೆಗೆದುಕೊಂಡಿದ್ದ ಮಾದರಿ ಅತ್ಯಂತ ಸೀಮಿತ. ಇದನ್ನು ಬೇರೆ ಬೇರೆ ಜನಾಂಗ ಮತ್ತು ದೇಶಗಳಿಗೆ ಸೇರಿದ ರೋಗಿಗಳ ಮಾದರಿಗಳನ್ನು ಪ್ರಯೋಗಕ್ಕೆ ಒಳಪಡಿಸಿದಾಗ ಈ ಫಲಿತಾಂಶ ಹೆಚ್ಚು ಪ್ರಸ್ತುತ ಎನಿಸುತ್ತದೆ ಎನ್ನುವುದು ದೆಹಲಿಯ ಕ್ಯಾನ್ಸರ್‌ ಸಂಸ್ಥೆಯೊಂದರ ಹಿರಿಯ ತಜ್ಞವೈದ್ಯ ಡಾ. ಜೆ.ಬಿ. ಶರ್ಮಾ ಅವರ ಅಭಿಮತ.

ಸೀಮಿತ ಕಾರ್ಯಕ್ಷೇತ್ರ: ಇಡೀ ಪ್ರಯೋಗವನ್ನು ಅಮೆರಿಕದ ಎಂಎಸ್‌ಕೆ ಕ್ಯಾನ್ಸರ್‌ ಕೇಂದ್ರದಲ್ಲಿ ನಡೆಸಲಾಗಿದೆ. ಗುದನಾಳ ಕ್ಯಾನ್ಸರ್‌ ಚಿಕಿತ್ಸೆಗೆ ಈ ಕೇಂದ್ರದಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಮತ್ತು ಆರೈಕೆ ಲಭ್ಯವಿದೆ. ಹಾಗಾಗಿ ಪ್ರಯೋಗದ ಕಾರ್ಯಕ್ಷೇತ್ರ ಅತ್ಯಾಧುನಿಕ ಮತ್ತು ಸೀಮಿತ ಎನಿಸುವುದು ಒಂದು ಸಮಸ್ಯೆ ಎಂದು ವೈದ್ಯಕೀಯ ವಲಯಕ್ಕೆ ಆತಂಕವಿದೆ. 

ಈಗಲೇ ಹೇಳಲಾಗದು: ಬೇರೆ ಬೇರೆ ರೀತಿಯ ಕ್ಯಾನ್ಸರ್‌ಗಳ ಮೇಲೆ ಇದರ ಬಗ್ಗೆ ವಿಸ್ತೃತ ಪ್ರಯೋಗವಾಗದ ಹೊರತು, ಚಿಕಿತ್ಸೆಯ ನಂತರ ದೀರ್ಘ ಅವಧಿಯವರೆಗೆ ಗುಣಮುಖರನ್ನು ನಿಗಾದಲ್ಲಿ ಇರಿಸದ ಹೊರತು ಫಲಿತಾಂಶಕ್ಕೆ ಅಧಿಕೃತತೆ ಬರುವುದಿಲ್ಲ. ಹಾಗಾಗಿ ಕ್ಯಾನ್ಸರ್‌ಗೆ ಡೋಸ್ಟರ್‌ಲಿಮಬ್‌ ಮಾಯಾಮದ್ದು ಹೌದು ಎಂಬುದನ್ನು ಈಗಲೇ ಹೇಳಲಾಗದು ಎಂದು ವೈದ್ಯ ಮತ್ತು ವಿಜ್ಞಾನ ಕ್ಷೇತ್ರದ ಹಲವು ಪರಿಣಿತ ಅನಿಸಿಕೆ.

ಇದನ್ನೂ ಓದಿ| ಕಾಡುವ ಕ್ಯಾನ್ಸರ್‌ಗೆ ಸಿಕ್ತು ಪವಾಡದ ಔಷಧ, ಪ್ರಾಯೋಗಿಕ ಹಂತದಲ್ಲೇ 18 ಜನ ಗುಣಮುಖ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Exit Poll 2024 : ಆ್ಯಕ್ಸಿಸ್​ ಮೈ ಇಂಡಿಯಾ ಪ್ರಕಾರ ಎನ್​ಡಿಎಗೆ 401 ಸೀಟು

Exit Poll 2024 : ಬಿಜೆಪಿಯ ಬಲವಾದ ಚುನಾವಣಾ ಕಾರ್ಯತಂತ್ರ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದ ಮೂಲಕ ಎನ್​ಡಿಎಗೆ ಭರ್ಜರಿ ಗೆಲುವು ಸಿಗಲಿದೆ ಎಂದು ಸಮೀಕ್ಷೆಗಳು ಸೂಚಿಸಿವೆ. ಈ ಅಂದಾಜುಗಳು ನಿಜವಾಗಿದ್ದರೆ ಇದು 2014 ರ ಸಾರ್ವತ್ರಿಕ ಚುನಾವಣೆಯಲ್ಲಿ ಅದರ ಹಿಂದಿನ ಸಾಧನೆಯನ್ನು ಮೀರಿಸಲಿದೆ.

VISTARANEWS.COM


on

Exit Poll
Koo

ಬೆಂಗಳೂರು : ಲೋಕಸಭಾ ಚುನಾವಣಾ ಫಲಿತಾಂಶಕ್ಕೆ (Lok Sabha Election) ಮುಂಚಿತವಾಗಿ ಪ್ರಕಟಗೊಂಡಿರುವ ಮತಗಟ್ಟೆ ಸಮೀಕ್ಷೆಯ ಪ್ರಕಾರ (Exit Poll 2024) ನರೇಂದ್ರ ಮೋದಿ ನಿರೀಕ್ಷಿಸಿದ ರೀತಿಯಂತೆಯೇ 400ಕ್ಕೂ ಅಧಿಕ ಸೀಟ್​​ಗಳನ್ನು ಗೆಲ್ಲಲಿದೆ. ಆಕ್ಸಿಸ್ ಮೈ ಇಂಡಿಯಾ ನಡೆಸಿರು ಸಮೀಕ್ಷೆಯಂತೆ ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ಎನ್ಡಿಎ ಭರ್ಜರಿ ಗೆಲುವು ಸಾಧಿಸಲಿದೆ. ಈ ಸಂಸ್ಥೆಯ ಚುನಾವಣೋತ್ತರ ಸಮೀಕ್ಷೆಯ ಪ್ರಕಾರ ಒಟ್ಟು 543 ಸಂಸದೀಯ ಸ್ಥಾನಗಳಲ್ಲಿ ಎನ್ಡಿಎ 361 ರಿಂದ 401 ಸ್ಥಾನಗಳನ್ನು ಪಡೆಯುವ ನಿರೀಕ್ಷೆಯಿದೆ.

  • ಎನ್​​ಡಿಎ – 361-401
  • ಭಾರತ – 131-166
  • ಇತರರು – 8-20

ಬಿಜೆಪಿಯ ಬಲವಾದ ಚುನಾವಣಾ ಕಾರ್ಯತಂತ್ರ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದ ಮೂಲಕ ಎನ್​ಡಿಎಗೆ ಭರ್ಜರಿ ಗೆಲುವು ಸಿಗಲಿದೆ ಎಂದು ಸಮೀಕ್ಷೆಗಳು ಸೂಚಿಸಿವೆ. ಈ ಅಂದಾಜುಗಳು ನಿಜವಾಗಿದ್ದರೆ ಇದು 2014 ರ ಸಾರ್ವತ್ರಿಕ ಚುನಾವಣೆಯಲ್ಲಿ ಅದರ ಹಿಂದಿನ ಸಾಧನೆಯನ್ನು ಮೀರಿಸಲಿದೆ.

ಏಳು ಹಂತಗಳ ಚುನಾವಣೆ ಶನಿವಾರ ಮುಕ್ತಾಯ

ಏಳನೇ ಹಂತದ ಮತದಾನದ ಪ್ರಚಾರದ ಮುಕ್ತಾಯದ ನಂತರ ಪ್ರಧಾನಿ ಮೋದಿ ಕನ್ಯಾಕುಮಾರಿಯ ವಿವೇಕಾನಂದ ಬಂಡೆ ಬಳಿ ತೆರಳಿ ಧ್ಯಾನ ಮಾಡಿದ್ದರು. ಎಲ್ಲಾ ಚುನಾವಣೋತ್ತರ ಸಮೀಕ್ಷೆಗಳು ಎನ್​ಡಿಎಗೆ ಸುಲಭ ನಿರಾಯಾಸ ಗೆಲುವು ನೀಡುತ್ತದೆ ಎಂದು ಭವಿಷ್ಯ ನುಡಿದಿವೆ. ಆಡಳಿತಾರೂಢ ಪಕ್ಷವು ಬಹುಮತದ ಕೊರತೆ ಅನುಭವಿಸಬಹುದು ಎಂಬ ಇಂಡಿಯಾ ಬಣದ ಭವಿಷ್ಯವಾಣಿಗೆ ವ್ಯತಿರಿಕ್ತವಾಗಿ, ಹೆಚ್ಚಿನ ಚುನಾವಣೋತ್ತರ ಸಮೀಕ್ಷೆಗಳು ಬಿಜೆಪಿ ಪರ ವಾಲಿವೆ. 2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್​ಡಿಎ 353 ಸ್ಥಾನಗಳನ್ನು ಗೆದ್ದಿತ್ತು.

ಇದನ್ನೂ ಓದಿ: Exit Poll 2024 : ಟಿಎಂಸಿಯ ಭದ್ರಕೋಟೆಗೆ ಕಮಲ ಪಕ್ಷದ ಲಗ್ಗೆ; ಮಮತಾ ಬ್ಯಾನರ್ಜಿಗೆ ಮುಖಭಂಗ?

ಜೂನ್ 4ರಂದು ಚುನಾವಣೋತ್ತರ ಸಮೀಕ್ಷೆಗಳು ನಿಜವೆಂದು ಸಾಬೀತಾದರೆ, ಇದು ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಅತಿದೊಡ್ಡ ವಿಜಯವಾಗಲಿದೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ, ಜವಾಹರಲಾಲ್ ನೆಹರೂ ನಂತರ ನರೇಂದ್ರ ಮೋದಿ ಮೂರು ಬಾರಿ ದೇಶದ ಪ್ರಧಾನಿಯಾದ ಏಕೈಕ ವ್ಯಕ್ತಿಯಾಗಲಿದ್ದಾರೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು 2004 ರಿಂದ 2014 ರವರೆಗೆ ಎರಡು ಬಾರಿ ಪ್ರಧಾನಿಯಾಗಿದ್ದರು.

ಧನ್ಯವಾದ ತಿಳಿಸಿದ ಮೋದಿ

ಲೋಕಸಭಾ ಚುನಾವಣೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ ಮತದಾನ ಮಾಡಿದ ಭಾರತದ ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಧನ್ಯವಾದ ಅರ್ಪಿಸಿದ್ದಾರೆ. ಮತದಾರರ ಬದ್ಧತೆ ಮತ್ತು ಸಮರ್ಪಣೆ ಭಾರತದ ಪ್ರಜಾಪ್ರಭುತ್ವದ ಮೌಲ್ಯವನ್ನು ಹೆಚ್ಚಿಸುತ್ತದೆ ಎಂದು ಪಿಎಂ ಮೋದಿ ಹೇಳಿದ್ದಾರೆ. ಮತಗಟ್ಟೆ ಸಮೀಕ್ಷೆಗಳು(Exit Poll 2024 ) ಪ್ರಕಟಗೊಂಡು ಮೋದಿ ನೇತೃತ್ವದ ಎನ್​ಡಿಎಗೆ ಭರ್ಜರಿ ಜಯ ಸಿಗುತ್ತದೆ ಎಂದು ಗೊತ್ತಾದ ತಕ್ಷಣವೇ ಅವರು ಈ ಹೇಳಿಕೆ ನೀಡಿದ್ದಾರೆ. ಈ ವೇಳೆ ಅವರು ಪ್ರಜಾಪ್ರಭುತ್ವಕ್ಕೆ ಚೈತನ್ಯ ತಂಡ ದೇಶದ ಮಹಿಳೆಯರು ಮತ್ತು ಯುವಕರಿಗೆ ಪ್ರಧಾನಿ ಮೋದಿ ಧನ್ಯವಾದ ಅರ್ಪಿಸಿದ್ದಾರೆ.

ಭಾರತ ಮತ ಚಲಾಯಿಸಿದೆ! ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದ ಎಲ್ಲರಿಗೂ ಹೃತ್ಪೂರ್ವಕ ಧನ್ಯವಾದಗಳು. ಅವರ ಸಕ್ರಿಯ ಭಾಗವಹಿಸುವಿಕೆ ನಮ್ಮ ಪ್ರಜಾಪ್ರಭುತ್ವದ ಬುನಾದಿ. ಅವರ ಬದ್ಧತೆ ಮತ್ತು ಸಮರ್ಪಣೆ ನಮ್ಮ ರಾಷ್ಟ್ರದಲ್ಲಿ ಪ್ರಜಾಪ್ರಭುತ್ವದ ಮನೋಭಾವವು ಬೆಳೆಸಿದೆ ಎಂದು ಖಚಿತಪಡಿಸುತ್ತೇವೆ. ಭಾರತದ ನಾರಿ ಶಕ್ತಿ ಮತ್ತು ಯುವ ಶಕ್ತಿಯನ್ನು ನಾನು ವಿಶೇಷವಾಗಿ ಪ್ರಶಂಸಿಸಲು ಬಯಸುತ್ತೇವೆ. ಚುನಾವಣೆಯಲ್ಲಿ ಅವರ ಬಲವಾದ ಉಪಸ್ಥಿತಿಯು ಬಹಳ ಪ್ರೋತ್ಸಾಹದಾಯಕ” ಎಂದು ಅವರು ಎಕ್ಸ್​ನಲ್ಲಿ ಬರೆದಿದ್ದಾರೆ.

Continue Reading

ದೇಶ

Poll Of Polls: ಎನ್‌ಡಿಎಗೆ 350+ ಸೀಟು, ದಕ್ಷಿಣದಲ್ಲೂ ಬಿಜೆಪಿಗೆ ಸ್ವೀಟು, ಇಂಡಿಯಾ ‌ಕೂಟಕ್ಕೆ ಹಿನ್ನಡೆಯ ಏಟು!

Poll Of Polls: ಕಳೆದ ಎರಡು ತಿಂಗಳಿಂದ ತೀವ್ರ ಚರ್ಚೆ, ಪ್ರಚಾರ, ಹೇಳಿಕೆ, ಆರೋಪ, ಪ್ರತ್ಯಾರೋಪಗಳಿಗೆ ಕಾರಣವಾಗಿದ್ದ ಲೋಕಸಭೆ ಚುನಾವಣೆಯು ಶನಿವಾರ ಮುಕ್ತಾಯಗೊಂಡಿದೆ. ಇದಾದ ಕೆಲವೇ ಕ್ಷಣಗಳಲ್ಲಿ ಮತಗಟ್ಟೆ ಸಮೀಕ್ಷೆಗಳು ಪ್ರಕಟವಾಗಿವೆ. ಎಲ್ಲ ಸಮೀಕ್ಷೆಗಳನ್ನೂ ವಿಶ್ಲೇಷಿಸಿದಾಗ ಬಿಜೆಪಿಯೇ ಬಹುಮತದ ಸರ್ಕಾರ ರಚಿಸುವುದು ನಿಶ್ಚಿತ ಎಂದು ತಿಳಿದುಬಂದಿದೆ. ಕಾಂಗ್ರೆಸ್‌ 200 ಕ್ಷೇತ್ರಗಳಲ್ಲೂ ಜಯಿಸುವುದಿಲ್ಲ ಎಂದು ಸಮೀಕ್ಷೆಗಳು ತಿಳಿಸಿವೆ.

VISTARANEWS.COM


on

Poll Of Polls
Koo

ನವದೆಹಲಿ: ಲೋಕಸಭೆ ಚುನಾವಣೆ (Lok Sabha Election 2024) ಮುಗಿದ ಕೆಲವೇ ನಿಮಿಷಗಳಲ್ಲಿ ಮತಗಟ್ಟೆ ಸಮೀಕ್ಷೆ ಪ್ರಕಟವಾಗಿದೆ. ಬಹುತೇಕ ಸಮೀಕ್ಷೆಗಳ ವರದಿಗಳು ಎನ್‌ಡಿಎ ಮೈತ್ರಿಕೂಟವೇ ಗದ್ದುಗೆ ಹಿಡಿಯಲಿವೆ ಎಂದು ತಿಳಿಸಿವೆ. ಇನ್ನು, ಬಿಜೆಪಿಯನ್ನು ಶತಾಯಗತಾಯ ಸೋಲಿಸಲೇಬೇಕು ಎಂಬ ಕಾರಣದಿಂದ ಪ್ರತಿಪಕ್ಷಗಳು ಒಗ್ಗೂಡಿ ಇಂಡಿಯಾ ಒಕ್ಕೂಟ ರಚಿಸಿದರೂ, ಫಲ ಸಿಗುವುದಿಲ್ಲ ಎಂಬುದು ಮತಗಟ್ಟೆ ಸಮೀಕ್ಷೆಗಳ ವರದಿಗಳು ಇನ್ನು ತಿಳಿಸಿವೆ. ಇನ್ನು ಎಲ್ಲ ವರದಿಗಳನ್ನು ವಿಶ್ಲೇಷಿಸಿ, ಸರಾಸರಿ ಕ್ಷೇತ್ರಗಳನ್ನಾಗಿ ವಿಂಗಡಿಸಿದಾಗ (Poll Of Polls) ಎನ್‌ಡಿಎ ಮೈತ್ರಿಕೂಟವು 350ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವುದು ನಿಶ್ಚಿತ ಎಂಬಂತಾಗಿದೆ.

ಎಲ್ಲ ಸಮೀಕ್ಷಾ ವರದಿಗಳನ್ನು ವಿಶ್ಲೇಷಿಸಿದಾಗ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ಒಟ್ಟು 543 ಕ್ಷೇತ್ರಗಳ ಪೈಕಿ 355-380 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ತಿಳಿದುಬಂದಿದೆ. ಇದರೊಂದಿಗೆ 2019ರ ಲೋಕಸಭೆ ಚುನಾವಣೆ ಫಲಿತಾಂಶವೇ ಮರುಕಳಿಸಲಿದೆ ಎಂದು ಹೇಳಲಾಗುತ್ತಿದೆ. 2019ರಲ್ಲಿ ಎನ್‌ಡಿಎ ಮೈತ್ರಿಕೂಟವು 353 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದರೆ, ಬಿಜೆಪಿಯೊಂದೇ 303 ಕ್ಷೇತ್ರಗಳಲ್ಲಿ ಜಯ ಕಂಡಿತ್ತು.

200 ಸಮೀಪವೂ ಬಾರದ ಇಂಡಿಯಾ ಒಕ್ಕೂಟ

ಕಾಂಗ್ರೆಸ್‌ ಸೇರಿ ಹಲವು ಪಕ್ಷಗಳು ಒಗ್ಗೂಡಿ ರಚಿಸಿರುವ ಇಂಡಿಯಾ ಒಕ್ಕೂಟವು ಪ್ರಸಕ್ತ ಸಾರ್ವತ್ರಿಕ ಚುನಾವಣೆಯಲ್ಲಿ 125-165 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂಬುದು ಮತಗಟ್ಟೆ ಸಮೀಕ್ಷೆಗಳ ಒಟ್ಟು ಸಾರವಾಗಿದೆ. ಇದರೊಂದಿಗೆ ಇಂಡಿಯಾ ಒಕ್ಕೂಟವು ಮ್ಯಾಜಿಕ್‌ ನಂಬರ್‌ (272) ಬಿಡಿ, 200 ಕ್ಷೇತ್ರಗಳನ್ನೂ ತಲುಪುವುದಿಲ್ಲ ಎಂದು ಸಮೀಕ್ಷೆಗಳು ತಿಳಿಸಿವೆ. ಇದರೊಂದಿಗೆ ಕಾಂಗ್ರೆಸ್‌ ಸೇರಿ ಪ್ರತಿಪಕ್ಷಗಳಿಗೆ ಸತತ ಮೂರನೇ ಬಾರಿಯೂ ಹಿನ್ನಡೆಯಾಗುವುದು ನಿಶ್ಚಿತ ಎಂದು ಹೇಳಲಾಗುತ್ತಿದೆ.

NDTV ಪೋಲ್‌ ಆಫ್‌ ಪೋಲ್ಸ್

ದಕ್ಷಿಣ ಭಾರತದಲ್ಲಿ ಬಿಜೆಪಿಗೆ ಲಾಭ

ದಕ್ಷಿಣ ಭಾರತದಲ್ಲಿ, ಅದರಲ್ಲೂ ಕೇರಳ ಹಾಗೂ ತಮಿಳುನಾಡಿನಲ್ಲಿ ಬಿಜೆಪಿ ಖಾತೆ ತೆರೆಯಲಿದೆ ಎಂದು ಬಹುತೇಕ ಸಮೀಕ್ಷೆಗಳು ಹೇಳಿವೆ. ಬಹುತೇಕ ಸಮೀಕ್ಷೆಗಳು ತಮಿಳುನಾಡಿನಲ್ಲಿ ಬಿಜೆಪಿ 1-3 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ ಎಂದು ಅಂದಾಜಿಸಿವೆ. ಕಾಂಗ್ರೆಸ್ 8-11, ಬಿಜೆಪಿ 36-39 ಮತ್ತು ಇತರರು 0-2 ಸ್ಥಾನಗಳನ್ನು ಪಡೆಯಲಿವೆ. ಬಹು ಕಟ್ಟರ್ ಪ್ರಾಂತೀಯವಾದಿ ಮತದಾರರು ಇರುವ ತಮಿಳುನಾಡಿನಲ್ಲಿ ಖಾತೆ ತೆರೆಯುವುದು ಬಿಜೆಪಿಗೆ ಸುಲಭ ಮಾತಲ್ಲ. ಹೀಗಾಗಿ ಈ ಸಲ ಗೆದ್ದರೆ ಅದೊಂದು ಐತಿಹಾಸಿಕ ಸಾಧನೆಯಾಗಲಿದೆ.

ಎನ್​ಡಿಎ ಕೇರಳದಲ್ಲಿ ಒಂದರಿಂದ ಮೂರು ಸ್ಥಾನಗಳನ್ನು ಗೆಲ್ಲುವ ಮೂಲಕ ತನ್ನ ಖಾತೆಯನ್ನು ತೆರೆಯಲು ಸಜ್ಜಾಗಿದೆ ಎಂಬುದಾಗಿ ಸಮೀಕ್ಷೆಗಳು ಅಂದಾಜಿಸಿವೆ. ಕೇರಳದ 20 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮತದಾನ ನಡೆದಿದ್ದು, 2019ರಲ್ಲಿ ಶೇ.77.84ರಷ್ಟಿದ್ದ ಮತದಾನ ಪ್ರಮಾಣ ಈ ಬಾರಿ ಶೇ.70.35ಕ್ಕೆ ಕುಸಿದಿತ್ತು.

ಇದನ್ನೂ ಓದಿ: Exit Poll 2024 : ತಮಿಳುನಾಡು, ಕೇರಳದಲ್ಲೂ ಅರಳಲಿದೆ ಕಮಲ; ಮೋದಿಗಿದು ಐತಿಹಾಸಿಕ ಸಾಧನೆ

Continue Reading

ಪ್ರಮುಖ ಸುದ್ದಿ

Exit Poll 2024 : ಟಿಎಂಸಿಯ ಭದ್ರಕೋಟೆಗೆ ಕಮಲ ಪಕ್ಷದ ಲಗ್ಗೆ; ಮಮತಾ ಬ್ಯಾನರ್ಜಿಗೆ ಮುಖಭಂಗ?

Exit Poll 2024 : ಇಂಡಿಯಾ ನ್ಯೂಸ್-ಡಿ-ಡೈನಾಮಿಕ್ಸ್ ಕೂಡ ಬಿಜೆಪಿಗೆ 21 ಸ್ಥಾನಗಳು ಮತ್ತು ತೃಣಮೂಲ ಕಾಂಗ್ರೆಸ್​ಗೆ 19 ಸ್ಥಾನಗಳನ್ನು ನೀಡಿದೆ. ರಿಪಬ್ಲಿಕ್ ಭಾರತ್-ಮೆಟ್ರಿಜ್ ಬಿಜೆಪಿಗೆ 21 ರಿಂದ 25 ಸ್ಥಾನಗಳು ಸಿಗುತ್ತದೆ ಎಂದು ಹೇಳಿದೆ. ಮಮತಾ ಬ್ಯಾನರ್ಜಿ ಅವರ ಪಕ್ಷವು ರಾಜ್ಯದಲ್ಲಿ 16 ರಿಂದ 20 ಸ್ಥಾನಗಳನ್ನು ಗೆಲ್ಲಲಿದೆ ಎಂದು ಅದು ಭವಿಷ್ಯ ನುಡಿದಿದೆ.

VISTARANEWS.COM


on

Exit Poll 2024
Koo

ನವದೆಹಲಿ: ಲೋಕ ಸಭಾ ಚುನಾವಣೆಯ (Lok Sabha Election 2024) ಮತಗಟ್ಟೆ ಸಮೀಕ್ಷೆಯ (Exit Poll 2024) ಪ್ರಕಾರ ಪಶ್ಚಿಮ ಬಂಗಾಳದಲ್ಲಿ ಸಿಎಂ ಮಮತಾ ಬ್ಯಾನರ್ಜಿಗೆ ಮುಖಭಂಗವಾಗುವ ಸಾಧ್ಯತೆ ನಿಚ್ಚಳವಾಗಿದೆ. ಪಶ್ಚಿಮ ಬಂಗಾಳ ಟಿಎಂಸಿಯ ಭದ್ರಕೋಟೆಯಾಗಿರುವ ಹೊರತಾಗಿಯೂ ಅಲ್ಲಿ ಕಮಲ ಪಕ್ಷ ಹೆಚ್ಚು ಸ್ಥಾನಗಳನ್ನು ಬುಟ್ಟಿಗೆ ಹಾಕಿಕೊಳ್ಳಲಿದೆ ಎಂದು ಬಹುತೇಕ ಸಮೀಕ್ಷೆಗಳು ಹೇಳಿವೆ. ಬಿಜೆಪಿಗೆ 21 ರಿಂದ 26 ಸ್ಥಾನಗಳು ಮತ್ತು ಟಿಎಂಸಿಗೆ 16-18 ಸ್ಥಾನಗಳು ಸಿಗಲಿವೆ ಎಂದು ಹೇಳಿದೆ. ಹೀಗಾಗಿ ತೃಣಮೂಲ ಕಾಂಗ್ರೆಸ್​​ಗೆ ಅಸಮಾಧಾನ ಉಂಟಾಗುವುದು ಖಚಿತ.

ಇಂಡಿಯಾ ನ್ಯೂಸ್-ಡಿ-ಡೈನಾಮಿಕ್ಸ್ ಕೂಡ ಬಿಜೆಪಿಗೆ 21 ಸ್ಥಾನಗಳು ಮತ್ತು ತೃಣಮೂಲ ಕಾಂಗ್ರೆಸ್​ಗೆ 19 ಸ್ಥಾನಗಳನ್ನು ನೀಡಿದೆ. ರಿಪಬ್ಲಿಕ್ ಭಾರತ್-ಮೆಟ್ರಿಜ್ ಬಿಜೆಪಿಗೆ 21 ರಿಂದ 25 ಸ್ಥಾನಗಳು ಸಿಗುತ್ತದೆ ಎಂದು ಹೇಳಿದೆ. ಮಮತಾ ಬ್ಯಾನರ್ಜಿ ಅವರ ಪಕ್ಷವು ರಾಜ್ಯದಲ್ಲಿ 16 ರಿಂದ 20 ಸ್ಥಾನಗಳನ್ನು ಗೆಲ್ಲಲಿದೆ ಎಂದು ಅದು ಭವಿಷ್ಯ ನುಡಿದಿದೆ.

2019 ರ ಲೋಕಸಭಾ ಚುನಾವಣೆಯಲ್ಲಿ ಬಂಗಾಳದ 42 ಸ್ಥಾನಗಳಲ್ಲಿ ಬಿಜೆಪಿ 18 ಸ್ಥಾನಗಳನ್ನು ಗೆದ್ದಿದ್ದರೆ, ತೃಣಮೂಲ ಕಾಂಗ್ರೆಸ್ 22 ಸ್ಥಾನಗಳನ್ನು ಗಳಿಸಿತ್ತು. ಹೀಗಾಗಿ ಈ ಬಾರಿಯ ಫಲಿತಾಂಶ ಆಡಳಿತಾರೂಢ ಪಕ್ಷಕ್ಕೆ ಸಿಕ್ಕಾಪಟ್ಟೆ ನಷ್ಟ ಉಂಟು ಮಾಡಲಿದೆ.

ಇದನ್ನೂ ಓದಿ: Exit Poll 2024 : ಭರ್ಜರಿ ಗೆಲುವಿನ ಮುನ್ಸೂಚನೆ ಸಿಕ್ಕಿದ ತಕ್ಷಣ ಮತದಾರರಿಗೆ ಧನ್ಯವಾದ ತಿಳಿಸಿದ ಮೋದಿ

ಈ ಸಮೀಕ್ಷೆಗಳ ಪ್ರಕಾರ 2019 ರಲ್ಲಿ ಎರಡು ಸ್ಥಾನಗಳನ್ನು ಗೆದ್ದಿದ್ದ ಕಾಂಗ್ರೆಸ್ ತನ್ನ ಕಾರ್ಯಕ್ಷಮತೆಯನ್ನು ಹಾಗೆಯ ಉಳಿಸಿಕೊಳ್ಳಲಿದೆ ಎಂದು ಭವಿಷ್ಯ ನುಡಿದಿವೆ. ಜನ್ ಕಿ ಬಾತ್ ಸಮೀಕ್ಷೆ ಪ್ರಕಾರ ಕಾಂಗ್ರೆಸ್ 0-2, ಇಂಡಿಯಾ ನ್ಯೂಸ್-ಡಿ-ಡೈನಾಮಿಕ್ಸ್ 2 ಮತ್ತು ರಿಪಬ್ಲಿಕ್ ಭಾರತ್-ಮೆಟ್ರಿಜ್ 0-1 ಸ್ಥಾನಗಳನ್ನು ಗೆಲ್ಲಲಿದೆ ಎಂದು ಹೇಳಿದೆ. ರಿಪಬ್ಲಿಕ್ ಬಾಂಗ್ಲಾ ಚುನಾವಣೋತ್ತರ ಸಮೀಕ್ಷೆಯು ಬಂಗಾಳದಲ್ಲಿ ಪಕ್ಷವು ತನ್ನ ಖಾತೆಯನ್ನು ತೆರೆಯಲು ವಿಫಲವಾಗಲಿದೆ ಎಂದು ಹೇಳಿದೆ.

ಎನ್​ಡಿಎಗೆ ಬಹುಮತ

ಚುನಾವಣೋತ್ತರ ಸಮೀಕ್ಷೆಗಳು ಬಿಜೆಪಿ ನೇತೃತ್ವದ ಎನ್ಡಿಎಗೆ ಆರಾಮದಾಯಕ ಬಹುಮತ ಊಹಿಸಿವೆ. ಆಡಳಿತಾರೂಢ ಮೈತ್ರಿಕೂಟವು ತಮಿಳುನಾಡು ಮತ್ತು ಕೇರಳದಲ್ಲಿ ತನ್ನ ಖಾತೆ ತೆರೆಯಲಿದೆ ಮತ್ತು ಕರ್ನಾಟಕದಲ್ಲಿ ಜಯಭೇರಿ ಬಾರಿಸಲಿದೆ ಎಂದು ಅಂದಾಜಿಸಿದೆ. ರಿಪಬ್ಲಿಕ್ ಟಿವಿ-ಪಿ ಮಾರ್ಕ್ ಸಮೀಕ್ಷೆಯು 543 ಸದಸ್ಯರ ಲೋಕಸಭೆಯಲ್ಲಿ ಆಡಳಿತಾರೂಢ ಮೈತ್ರಿಕೂಟವು 359 ಸ್ಥಾನಗಳನ್ನು ಗೆಲ್ಲುತ್ತದೆ ಮತ್ತು ಪ್ರತಿಪಕ್ಷ ಇಂಡಿಯಾ ಬಣವು 154 ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಹೇಳಿದೆ. ರಿಪಬ್ಲಿಕ್ ಟಿವಿ-ಮ್ಯಾಟ್ರಿಜ್ ಸಮೀಕ್ಷೆಯು ಎನ್​ಡಿಎಗೆ 353-368 ಸ್ಥಾನಗಳು ಮತ್ತು ಪ್ರತಿಪಕ್ಷಗಳಿಗೆ 118-133 ಸ್ಥಾನಗಳನ್ನು ನೀಡುತ್ತದೆ ಸಮೀಕ್ಷೆ ಮಾಡಿದೆ.

ಜನ್ ಕಿ ಬಾತ್ ಸಮೀಕ್ಷೆಯು ಆಡಳಿತಾರೂಢ ಎನ್​​ಡಿಎಗೆ 362-392 ಸ್ಥಾನಗಳು ಮತ್ತು ಪ್ರತಿಪಕ್ಷಗಳ ಮೈತ್ರಿಕೂಟಕ್ಕೆ 141-161 ಸ್ಥಾನಗಳನ್ನು ಪಡೆಯುತ್ತದೆ ಎಂದು ಹೇಳಿದೆ. ಜೂನ್ 4 ರಂದು ವಿದ್ಯುನ್ಮಾನ ಮತದಾನ ಯಂತ್ರಗಳಲ್ಲಿ (ಇವಿಎಂ) ಚಲಾವಣೆಯಾದ ಮತಗಳನ್ನು ಚುನಾವಣಾ ಆಯೋಗ ಎಣಿಕೆ ಮಾಡಿ ಫಲಿತಾಂಶ ಪ್ರಕಟಿಸಲಿದೆ.

73 ವರ್ಷದ ಮೋದಿ ಗೆಲುವು ಸಾಧಿಸಿದರೆ ಸ್ವಾತಂತ್ರ್ಯ ಹೋರಾಟಗಾರ ಜವಾಹರಲಾಲ್ ನೆಹರೂ ನಂತರ ಸತತ ಮೂರು ಬಾರಿ ಗೆದ್ದ ಎರಡನೇ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

Continue Reading

ಪ್ರಮುಖ ಸುದ್ದಿ

Bangalore Rain: ರಾಜಧಾನಿಯಲ್ಲಿ ಮಳೆ ಆರ್ಭಟ; ಬೆಂಗಳೂರು-ಹೊಸೂರು ಹೆದ್ದಾರಿ ಜಲಾವೃತ, ಮನೆಗಳಿಗೆ ನುಗ್ಗಿದ ನೀರು

Bangalore Rain: ಅರಬ್ಬಿ ಸಮುದ್ರದ ಆಗ್ನೇಯ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ‌ಯಲ್ಲಿ ರಾಜ್ಯದಲ್ಲಿ‌ ಇಂದಿನಿಂದ ಐದು ದಿನಗಳ‌ ಕಾಲ ಭಾರಿ‌ ಮಳೆ ಸಾಧ್ಯತೆ ಇದೆ.

VISTARANEWS.COM


on

Bangalore rain
Koo

ಬೆಂಗಳೂರು: ರಾಜಧಾನಿಯ ವಿವಿಧೆಡೆ ಶನಿವಾರ ಸಂಜೆ ಭರ್ಜರಿ ಮಳೆ (Bangalore Rain) ಸುರಿದಿದ್ದು, ಹಲವೆಡೆ ಪ್ರಮುಖ ರಸ್ತೆಗಳು ಜಲಾವೃತವಾಗಿ ವಾಹನ ಸವಾರರು ಪರದಾಡಿದರು. ನಗರದ ಹೊರವಲಯದ ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿಯ ವೀರಸಂದ್ರ ಸಿಗ್ನಲ್ ಬಳಿ ಭಾರಿ ಪ್ರಮಾಣದ ನೀರು ನಿಂತಿದ್ದರಿಂದ ಭಾರಿ ಸಂಚಾರ ದಟ್ಟಣೆ ಉಂಟಾಯಿತು. ಇನ್ನು ನಗರದ ಕೆಲವು ಕಡೆ ಮಳೆ ನೀರು ಮನೆಗಳಿಗೆ ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.

ಪ್ರತಿ ಬಾರಿ ಮಳೆ ಬಂದಾಗ ಹೆದ್ದಾರಿ ಕೆರೆಯಂತಾಗುತ್ತದೆ. ಮಳೆಯ ನೀರು ಹೊರಹೋಗಲು ಸೂಕ್ತ ವ್ಯವಸ್ಥೆ ಇಲ್ಲದೆ ರಸ್ತೆ ಜಲಾವೃತವಾಗುತ್ತದೆ. ಹೆದ್ದಾರಿಯಲ್ಲಿ ನಾಲ್ಕೈದು ಅಡಿಗಳಷ್ಟು ಮಳೆ ನೀರು ನಿಂತಿದ್ದರಿಂದ ಹೆದ್ದಾರಿಯ ಅವ್ಯವಸ್ಥೆಯಿಂದ ಹಲವು ವಾಹನಗಳು ಕೆಟ್ಟುನಿಂತಿವೆ. ಇನ್ನು ಜಲಾವೃತವಾದ ರಸ್ತೆಯಲ್ಲಿ ವಾಹನಗಳು ಸಂಚರಿಸಲಾಗದೆ ಕಿ.ಮೀ.ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿತ್ತು.

ಇನ್ನು ಸಿಲಿಕಾನ್ ಸಿಟಿಯ ಶೇಷಾದ್ರಿಪುರಂ, ಶಿವಾನಂದ ಸರ್ಕಲ್, ವಿಜಯನಗರ, ಶಿವಾಜಿನಗರ, ಮಲ್ಲೇಶ್ವರಂ, ವಸಂತನಗರ, ಶಾಂತಿನಗರ, ಜಯನಗರ, ಯಶವಂತಪುರ, ರಾಜಾಜಿ ನಗರ, ಕೋರಮಂಗಲ, ಎಂ.ಜಿ. ರಸ್ತೆ, ಕಬ್ಬನ್ ಪಾರ್ಕ್ ಸೇರಿ ನಗರದ ಹಲವೆಡೆ ಭರ್ಜರಿ ಮಳೆಯಾಗಿದೆ. ಪಾದಚಾರಿಗಳು ಮತ್ತು ವಾಹನ ಸವಾರರು ರಸ್ತೆ ದಾಟಲು ಪರದಾಡಿದರು.

ಕೆಲಸ ಕಾರ್ಯ ಮುಗಿಸಿಕೊಂಡು ಮನೆಗಳಿಗೆ ತೆರಳುತ್ತಿದ್ದ ವೇಳೆ ಭಾರಿ ಮಳೆ ಬಿದ್ದಿದ್ದರಿಂದ ವಾಹನ ಸವಾರರು ಬಸ್ ನಿಲ್ದಾಣಗಳು, ಕಟ್ಟಡಗಳ ಬಳಿ ನಿಂತು ಆಶ್ರಯ ಪಡೆದರು. ಮಳೆ ನೀರಿನಿಂದ ಸಹಕಾರ ನಗರದ ಜಿ ಬ್ಲಾಕ್ ರಸ್ತೆಗಳು ಹಳ್ಳದಂತಾಗಿ ಬದಲಾಗಿದ್ದವು. ಇನ್ನು ಕೆಎಸ್ ಗಾರ್ಡನ್‌ನಲ್ಲಿ ಮನೆಗಳಿಗೆ ನೀರು ನುಗ್ಗಿದ್ದರಿಂದ ನಿವಾಸಿಗಳು ಪರದಾಡಿದರು.

ಸಂಜೆ ಸುರಿದ ಮಳೆಯಿಂದ ಯಲಚೇನಹಳ್ಳಿಯಲ್ಲಿ ಮನೆಗಳಿಗೆ ನೀರು ನುಗ್ಗಿ ಪರದಾಡಿದರು. ಮಳೆ ಬಂದರೆ ಇಲ್ಲಿನ ಜನ ಭಯದಲ್ಲೇ ದಿನ ಕಳೆಯುವ ಸ್ಥಿತಿ ಇದೆ. ಇನ್ನು ಮನೆಯ ಮುಂದೆ ಅಧಿಕಾರಿಗಳು ಗುಂಡಿ ತೆಗೆದು ಮುಚ್ಚದ ಹಿನ್ನೆಲೆಯಲ್ಲಿ ವಾಹನ ಸವಾರನೊಬ್ಬ ಬಿದ್ದು ಗಾಯಗೊಂಡಿದ್ದಾರೆ.

ಯಲಹಂಕದಲ್ಲಿ ಧರೆಗುರುಳಿದ ಮರ

ಮಳೆಯಿಂದಾಗಿ ಯಲಹಂಕ ವಲಯದಲ್ಲಿನ ಜಕ್ಕೂರು ಬಳಿ ಮರ ಧರೆಗುರುಳಿದ್ದು, ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ಸ್ಥಳಕ್ಕೆ ಭೇಟಿ ನೀಡಿ ಕೂಡಲೆ ಮರ ತೆರವುಗೊಳಿಸಲು ಅರಣ್ಯ ವಿಭಾಗದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮುಂದಿನ ದಿನಗಳ‌ ಕಾಲ ಭಾರಿ‌ ಮಳೆ ಸಾಧ್ಯತೆ

ಅರಬ್ಬಿ ಸಮುದ್ರದ ಆಗ್ನೇಯ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ‌ಯಲ್ಲಿ ರಾಜ್ಯದಲ್ಲಿ‌ ಇಂದಿನಿಂದ ಐದು ದಿನಗಳ‌ ಕಾಲ ಭಾರಿ‌ ಮಳೆ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸದ್ಯ ಕೇರಳ ಪ್ರವೇಶಿಸಿರುವ ಮುಂಗಾರು, ನಂತರ ಕರ್ನಾಟಕಕ್ಕೆ ಪ್ರವೇಶಿಸಲಿದೆ. ಈ ಬಾರಿ ಅವಧಿಗೂ ಮೊದಲೇ ಮುಂಗಾರು ಪ್ರವೇಶ ಮಾಡುತ್ತಿದೆ. ಕಳೆದ ವರ್ಷ ಜೂನ್ 15 ರಿಂದ ಮುಂಗಾರು ಪ್ರವೇಶವಾಗಿತ್ತು. ಆದರೆ ಈ ವರ್ಷ 15 ದಿನಗಳಿಗೂ ಮೊದಲೇ ಮುಂಗಾರು ಪ್ರವೇಶವಾಗುತ್ತಿದೆ. ಹೀಗಾಗಿ ಈ ಬಾರಿ ಉತ್ತಮ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಇದನ್ನೂ ಓದಿ | Karnataka Weather : ಭಾರಿ ಮಳೆಗೆ ಕೆರೆಯಂತಾದ ರಸ್ತೆಗಳು; ಮುಳುಗಡೆಯಾದ ವಾಹನಗಳು

ಇನ್ನು ರಾಜ್ಯದಲ್ಲಿ ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಭಾಗಕ್ಕೆ ಹವಮಾನ ಇಲಾಖೆ‌ ಅಲರ್ಟ್‌ ನೀಡಿದ್ದುಮ ಬೆಂಗಳೂರಿನಲ್ಲಿ ಇಂದಿನಿಂದ ಐದು ದಿನ ಮಳೆ ಇರಲಿದೆ. ಗುಡುಗು – ಮಿಂಚು ಸಹಿತ ಬೀರುಗಾಳಿ ಮಳೆ ಸುರಿಯಲಿದೆ ಎಂದು ಮಾಹಿತಿ ನೀಡಿದೆ.

Continue Reading
Advertisement
Exit Poll
ಪ್ರಮುಖ ಸುದ್ದಿ18 mins ago

Exit Poll 2024 : ಆ್ಯಕ್ಸಿಸ್​ ಮೈ ಇಂಡಿಯಾ ಪ್ರಕಾರ ಎನ್​ಡಿಎಗೆ 401 ಸೀಟು

Poll Of Polls
ದೇಶ34 mins ago

Poll Of Polls: ಎನ್‌ಡಿಎಗೆ 350+ ಸೀಟು, ದಕ್ಷಿಣದಲ್ಲೂ ಬಿಜೆಪಿಗೆ ಸ್ವೀಟು, ಇಂಡಿಯಾ ‌ಕೂಟಕ್ಕೆ ಹಿನ್ನಡೆಯ ಏಟು!

Exit Poll 2024
ಪ್ರಮುಖ ಸುದ್ದಿ2 hours ago

Exit Poll 2024 : ಟಿಎಂಸಿಯ ಭದ್ರಕೋಟೆಗೆ ಕಮಲ ಪಕ್ಷದ ಲಗ್ಗೆ; ಮಮತಾ ಬ್ಯಾನರ್ಜಿಗೆ ಮುಖಭಂಗ?

Bangalore rain
ಪ್ರಮುಖ ಸುದ್ದಿ2 hours ago

Bangalore Rain: ರಾಜಧಾನಿಯಲ್ಲಿ ಮಳೆ ಆರ್ಭಟ; ಬೆಂಗಳೂರು-ಹೊಸೂರು ಹೆದ್ದಾರಿ ಜಲಾವೃತ, ಮನೆಗಳಿಗೆ ನುಗ್ಗಿದ ನೀರು

Dinesh Karthik
ಪ್ರಮುಖ ಸುದ್ದಿ2 hours ago

Dinesh Karthik: ಜನ್ಮದಿನದಂದೇ ಕ್ರಿಕೆಟ್‌ ಬದುಕಿಗೆ ದಿನೇಶ್‌ ಕಾರ್ತಿಕ್‌ ಭಾವುಕ ವಿದಾಯ; ಕೊಡುಗೆ ನೆನೆದ ಆರ್‌ಸಿಬಿ ಫ್ಯಾನ್ಸ್

Exit Poll
ಪ್ರಮುಖ ಸುದ್ದಿ2 hours ago

Exit Poll 2024 : ಭರ್ಜರಿ ಗೆಲುವಿನ ಮುನ್ಸೂಚನೆ ಸಿಕ್ಕಿದ ತಕ್ಷಣ ಮತದಾರರಿಗೆ ಧನ್ಯವಾದ ತಿಳಿಸಿದ ಮೋದಿ

Exit Poll 2024
ದೇಶ3 hours ago

Exit Poll 2024 : ಮತಗಟ್ಟೆ ಸಮೀಕ್ಷೆಗಳನ್ನು ನಾವು ನಂಬಲ್ಲ; ಡಿಕೆಶಿ, ಎಂಬಿ ಪಾಟೀಲ್ ಸ್ಪಷ್ಟ ನುಡಿ

Prajwal Revanna Case
ಕರ್ನಾಟಕ3 hours ago

Prajwal Revanna Case: ಕಡೆಗೂ ವಿಚಾರಣೆಗೆ ಹಾಜರಾಗದ ಭವಾನಿ ರೇವಣ್ಣ; 7 ಗಂಟೆ ಕಾದು ಎಸ್‌ಐಟಿ ತಂಡ ವಾಪಸ್

Exit Poll 2024
ಪ್ರಮುಖ ಸುದ್ದಿ3 hours ago

Exit Poll 2024 : ತಮಿಳುನಾಡು, ಕೇರಳದಲ್ಲೂ ಅರಳಲಿದೆ ಕಮಲ; ಮೋದಿಗಿದು ಐತಿಹಾಸಿಕ ಸಾಧನೆ

Exit Poll 2024
ದೇಶ4 hours ago

Exit Poll 2024: ಗುಜರಾತ್‌ನಲ್ಲಿ ಬಿಜೆಪಿ ಕ್ಲೀನ್‌ಸ್ವೀಪ್‌, ಉತ್ತರ ಪ್ರದೇಶದಲ್ಲಿ ಮೇಲುಗೈ; ರಾಜ್ಯವಾರು ಎಕ್ಸಿಟ್‌ ಪೋಲ್‌ ವರದಿ ಇಲ್ಲಿದೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Liquor ban
ಬೆಂಗಳೂರು7 hours ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ2 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ4 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು5 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ5 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ6 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು6 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 weeks ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

ಟ್ರೆಂಡಿಂಗ್‌