Bharat Jodo Yatra: ಹವಾಮಾನ ವೈಪರೀತ್ಯ, ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಕಾಶ್ಮೀರ ಪ್ರವಾಸ ರದ್ದು - Vistara News

ದೇಶ

Bharat Jodo Yatra: ಹವಾಮಾನ ವೈಪರೀತ್ಯ, ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಕಾಶ್ಮೀರ ಪ್ರವಾಸ ರದ್ದು

ಸುಮಾರು 3,500 ಕಿ.ಮೀ. ಕ್ರಮಿಸಿರುವ ರಾಹುಲ್ ಗಾಂಧಿ (Rahul Gandhi) ನೇತೃತ್ವದ ಭಾರತ್ ಜೋಡೋ ಯಾತ್ರೆ (Bharat Jodo Yatra) ಕಾಶ್ಮೀರದ ಶ್ರೀನಗರದಲ್ಲಿ ಸೋಮವಾರ ಅಂತ್ಯವಾಗಲಿದೆ. ಈ ಕಾರ್ಯಕ್ರಮದಲ್ಲಿ ನಾಯಕ ಸಿದ್ದರಾಮಯ್ಯ (siddaramaiah) ಭಾಗವಹಿಸಬೇಕಿತ್ತು.

VISTARANEWS.COM


on

Congress leader will not attend Bharat Jodo yatra final programme
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: 2022ರ ಸೆಪ್ಟೆಂಬರ್ 7ರಿಂದ ಆರಂಭವಾಗಿದ್ದ ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆ ((Bharat Jodo Yatra)) 2023ರ ಜನವರಿ 30ರಂದು, ಸೋಮವಾರ ಸಮಾರೋಪಗೊಳ್ಳಲಿದೆ. ರಾಹುಲ್ ಗಾಂಧಿ(Rahul Gandhi) ನೇತೃತ್ವದ ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ನ ಎಲ್ಲ ನಾಯಕರು ಭಾಗವಹಿಸುತ್ತಿದ್ದಾರೆ. ಅದರಂತೆ, ಕರ್ನಾಟಕದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ (siddaramaiah) ಅವರೂ ಪಾಲ್ಗೊಳ್ಳಬೇಕಿತ್ತು. ಆದರೆ, ಹವಾಮಾನ ವೈಪರೀತ್ಯದ ಪರಿಣಾಮ ಅವರು ಕಾಶ್ಮೀರದ ಶ್ರೀನಗರಕ್ಕೆ ತೆರಳಲು ಸಾಧ್ಯವಾಗಿಲ್ಲ ಎಂದು ತಿಳಿದು ಬಂದಿದೆ. ದೆಹಲಿಯಿಂದ ಕಾಶ್ಮೀರಕ್ಕೆ ವಿಮಾನ ಸಂಚಾರಗಳನ್ನು ರದ್ದುಪಡಿಸಲಾಗಿದೆ.

ರಾಹುಲ್ ಗಾಂಧಿ ನೇತೃತ್ವದ ಈ ಪಾದ ಯಾತ್ರೆ ಸುಮಾರು 5 ತಿಂಗಳಿಂದ ನಡೆದಿತ್ತು. ದೇಶದುದ್ದಕ್ಕೂ ಸಂಚರಿಸಿದ ಭಾರತ್ ಯಾತ್ರೆ, ದೇಶವನ್ನು ಪ್ರೀತಿ, ವಿಶ್ವಾಸಗಳಿಂದ ಜೋಡಿಸುವ ಪ್ರಯತ್ನವಾಗಿ ಕಾಂಗ್ರೆಸ್ ಹಮ್ಮಿಕೊಂಡಿತ್ತು. ಈ ಯಾತ್ರೆಯ ಹಿಂದೆ ರಾಜಕಾರಣ ಇಲ್ಲ ಎಂದು ಹೇಳಿತ್ತಾದರೂ, ಅಂತಿಮವಾಗಿ ರಾಹುಲ್ ಗಾಂಧಿ ಅವರಿಗೆ ನಾಯಕತ್ವದ ಇಮೇಜ್ ತಂದು ಕೊಡುವ ಪ್ರಯತ್ನ ಈ ಯಾತ್ರೆಯ ಹಿಂದೆ ಇದೆ ಎನ್ನಲಾಗುತ್ತಿದೆ.

ಶ್ರೀನಗರದಲ್ಲಿ ಸೋಮವಾರ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನಾಯಕಿ ಪ್ರಿಯಾಂಕಾ ಗಾಂಧಿ ಸೇರಿದಂತೆ ಎಲ್ಲ ಪಿಸಿಸಿ ಅಧ್ಯಕ್ಷರು, ಸಂಸದರು ಮತ್ತು ಪ್ರಮುಖ ನಾಯಕರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಆದರೆ, ಹವಾಮಾನ ವೈಪರೀತ್ಯವು ಕಾಂಗ್ರೆಸ್‌ನ ಉತ್ಸಾಹಕ್ಕೆ ಭಂಗ ತರುವ ಸಾಧ್ಯತೆ ಇದೆ.

ಇದನ್ನೂ ಓದಿ: Viral Video | ಭಯಂಕರ ಚಳಿಯಲ್ಲಿ ಅಂಗಿ ಬಿಚ್ಚಿ ಕುಣಿದ ಕಾಂಗ್ರೆಸ್ ಕಾರ್ಯಕರ್ತರು; ಭಾರತ್ ಜೋಡೋ ಯಾತ್ರೆಯಲ್ಲಿ ಹುಮ್ಮಸ್ಸು

21 ಪಕ್ಷಗಳಿಗೆ ಆಹ್ವಾನ

ಭಾರತ್ ಜೋಡೋ ಯಾತ್ರೆ ಸಮಾರೋಪ ಸಮಾರಂಭದಲ್ಲ ಪಾಲ್ಗೊಳ್ಳಲು 21 ರಾಜಕೀಯ ಪಕ್ಷಗಳಿಗೆ ಆಹ್ವಾನ ನೀಡಲಾಗಿತ್ತು. ಈ ಪೈಕಿ ತೆಲುಗು ದೇಶಂ ಪಕ್ಷ(ಟಿಡಿಪಿ) ಮತ್ತು ತೃಣಮೂಲ ಕಾಂಗ್ರೆಸ್ ಕಾಂಗ್ರೆಸ್ ಆಹ್ವಾನವನ್ನು ತಿರಸ್ಕರಿಸಿವೆ. ಒಟ್ಟು 12 ಪಕ್ಷಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿವೆ. ಜತೆಗೆ, ಉಳಿದ ರಾಜಕೀಯ ಪಕ್ಷಗಳ ಬೆಂಬಲಿಸಿ ಪತ್ರ ಬರೆದಿವೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

NEET UG 2024: ನೀಟ್‌ ಅಕ್ರಮ; ನಾಲ್ವರು ಏಮ್ಸ್‌ ವಿದ್ಯಾರ್ಥಿಗಳು ಸಿಬಿಐ ಬಲೆಗೆ

NEET UG 2024: ಕೆಲವು ದಿನಗಳ ಹಿಂದೆಯಷ್ಟೇ ಪ್ರಕರಣದ ಇಬ್ಬರು ಪ್ರಮುಖ ಆರೋಪಿಗಳಾದ ಪಂಕಜ್ ಕುಮಾರ್ ಅಲಿಯಾಸ್ ಆದಿತ್ಯ ಮತ್ತು ರಾಜು ಸಿಂಗ್ ಅವರನ್ನು ಪಾಟ್ನಾ ಮತ್ತು ಹಜಾರಿಬಾಗ್ (ಜಾರ್ಖಂಡ್)ನಿಂದ ಅರೆಸ್ಟ್‌ ಮಾಡಲಾಗಿತ್ತು. ಇದರ ಬೆನ್ನಲ್ಲೇ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆಯಲಾಗಿದೆ. ಪೇಪರ್ ಸೋರಿಕೆ ಪ್ರಕರಣದಲ್ಲಿ ಭಾಗಿಯಾಗಿರುವ ಗ್ಯಾಂಗ್‌ನೊಂದಿಗೆ ಏಮ್ಸ್-ಪಾಟ್ನಾ ವಿದ್ಯಾರ್ಥಿಗಳು ಸಂಪರ್ಕದಲ್ಲಿದ್ದಾರೆ ಎಂದು ಹೇಳಲಾಗಿದೆ.

VISTARANEWS.COM


on

Neet UG
Koo

ನವದೆಹಲಿ: ನೀಟ್-ಯುಜಿ 2024 (NEET UG 2024) ಅಕ್ರಮಕ್ಕೆ ಸಂಬಂಧಿಸಿದಂತೆ ಪಾಟ್ನಾದ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ ಏಮ್ಸ್‌ನ ನಾಲ್ಕು ವಿದ್ಯಾರ್ಥಿಗಳನ್ನು ಕೇಂದ್ರೀಯ ತನಿಖಾ ದಳ (CBI) ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದೆ.

ಕೆಲವು ದಿನಗಳ ಹಿಂದೆಯಷ್ಟೇ ಪ್ರಕರಣದ ಇಬ್ಬರು ಪ್ರಮುಖ ಆರೋಪಿಗಳಾದ ಪಂಕಜ್ ಕುಮಾರ್ ಅಲಿಯಾಸ್ ಆದಿತ್ಯ ಮತ್ತು ರಾಜು ಸಿಂಗ್ ಅವರನ್ನು ಪಾಟ್ನಾ ಮತ್ತು ಹಜಾರಿಬಾಗ್ (ಜಾರ್ಖಂಡ್)ನಿಂದ ಅರೆಸ್ಟ್‌ ಮಾಡಲಾಗಿತ್ತು. ಇದರ ಬೆನ್ನಲ್ಲೇ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆಯಲಾಗಿದೆ. ಪೇಪರ್ ಸೋರಿಕೆ ಪ್ರಕರಣದಲ್ಲಿ ಭಾಗಿಯಾಗಿರುವ ಗ್ಯಾಂಗ್‌ನೊಂದಿಗೆ ಏಮ್ಸ್-ಪಾಟ್ನಾ ವಿದ್ಯಾರ್ಥಿಗಳು ಸಂಪರ್ಕದಲ್ಲಿದ್ದಾರೆ ಎಂದು ಹೇಳಲಾಗಿದೆ.

ಅವರ ಮೊಬೈಲ್ ಫೋನ್‌ಗಳು ಮತ್ತು ಲ್ಯಾಪ್‌ಟಾಪ್‌ಗಳನ್ನು ಸಹ ತನಿಖಾ ಸಂಸ್ಥೆ ವಶಪಡಿಸಿಕೊಂಡಿದೆ. 2021 ರ ಬ್ಯಾಚ್‌ಗೆ ಸೇರಿದ ವಿದ್ಯಾರ್ಥಿಗಳನ್ನು ನಿನ್ನೆ ತಡರಾತ್ರಿ ಅವರ ಹಾಸ್ಟೆಲ್‌ನಿಂದ ಕರೆತಂದ ನಂತರ ವಿಚಾರಣೆಗಾಗಿ ಅಜ್ಞಾತ ಸ್ಥಳಕ್ಕೆ ಕರೆದೊಯ್ಯಲಾಗಿದೆ. ತನಿಖೆಯಲ್ಲಿರುವ ವಿದ್ಯಾರ್ಥಿಗಳ ಕೊಠಡಿಗಳನ್ನು ಸೀಲ್ ಮಾಡಲಾಗಿದೆ.

ಪಂಕಜ್‌ ಕುಮಾರ್‌ 2017 ಬ್ಯಾಚ್‌ನ ಸಿವಿಲ್‌ ಎಂಜಿನಿಯರ್‌ ಆಗಿದ್ದು, ಈತ ಜಮ್ಶೆಡ್‌ಪುರದ ಎನ್‌ಐಟಿಯಲ್ಲಿ ಎಂಜಿಯರಿಂಗ್‌ ಪದವಿ ಪಡೆದಿದ್ದಾನೆ. ಈತ ಹಜಾರಿಭಾಗ್‌ನಲ್ಲಿ ಪ್ರಶ್ನೆ ಪತ್ರಿಕೆ ಕದ್ದಿದ್ದ ಎನ್ನಲಾಗಿದೆ. ಸದ್ಯ ಆತನನ್ನು ಪಾಟ್ನಾದಿಂದ ಅರೆಸ್ಟ್‌ ಮಾಡಲಾಗಿದೆ. ಕಾಗದವನ್ನು ಕದ್ದು ಇತರ ಗ್ಯಾಂಗ್ ಸದಸ್ಯರಿಗೆ ರವಾನಿಸಲು ಕುಮಾರ್‌ಗೆ ಸಹಾಯ ಮಾಡಿದ ಆರೋಪದ ಮೇಲೆ ರಾಜು ಸಿಂಗ್‌ನನ್ನು ಸಿಬಿಐ ಬಂಧಿಸಿದೆ, ಸಿಂಗ್ ಅವರನ್ನು ಹಜಾರಿಬಾಗ್‌ನಿಂದ ಬಂಧಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಆರು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ,

ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆದ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯಲ್ಲಿ (NEET UG 2024) ಅಕ್ರಮ ನಡೆದಿದ್ದು, ಪರೀಕ್ಷೆಯನ್ನು ರದ್ದುಗೊಳಿಸಬೇಕು ಎಂಬುದಾಗಿ ಸಲ್ಲಿಕೆಯಾದ ಹಲವು ಅರ್ಜಿಗಳ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್‌ ವಿಚಾರಣೆ ನಡೆಸುತ್ತಿದೆ. ನೀಟ್‌ ಪರೀಕ್ಷೆಯನ್ನೇ ರದ್ದುಗೊಳಿಸಬೇಕು ಎಂದು ಆಗ್ರಹಿಸಲಾಗುತ್ತಿದೆ. ಇದರ ಮಧ್ಯೆಯೇ, ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಮಹತ್ವದ ಮುನ್ನಡೆ ಸಾಧಿಸಿದ್ದು, ನೀಟ್‌ ಪ್ರಶ್ನೆಪತ್ರಿಕೆ (NEET UG 2024 Paper Leak) ಸೋರಿಕೆ ಪ್ರಕರಣದ ಕಿಂಗ್‌ಪಿನ್‌ ಆಗಿರುವ ರಾಕೇಶ್‌ ರಂಜನ್‌ (Rakesh Ranjan) ಎಂಬಾತನನ್ನು ಬಂಧಿಸಿದ್ದರು.

ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಲವು ಆರೋಪಿಗಳನ್ನು ಸಿಬಿಐ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಇದರ ಮಧ್ಯೆಯೇ, ಬಿಹಾರದ ಪಟನಾದಲ್ಲಿ ಎರಡು ಕಡೆ ಹಾಗೂ ಪಶ್ಚಿಮ ಬಂಗಾಳದ ಕೋಲ್ಕೊತಾದಲ್ಲಿ ಎರಡು ಕಡೆ ಸಿಬಿಐ ಅಧಿಕಾರಿಗಳು ಗುರುವಾರ (ಜುಲೈ 11) ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಬಿಹಾರದ ಪಟನಾದಲ್ಲಿ ರಾಕೇಶ್‌ ರಂಜನ್‌ ಅಲಿಯಾಸ್‌ ರಾಕಿಯನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ. ಈತನನ್ನು ಕೋರ್ಟ್‌ಗೂ ಹಾಜರುಪಡಿಸಲಾಗಿದ್ದು, 10 ದಿನ ಸಿಬಿಐ ಕಸ್ಟಡಿಗೆ ನೀಡಲಾಗಿದೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಹಾಗೂ ಪಶ್ಚಿಮ ಬಂಗಾಳದಲ್ಲಿ ಅಧಿಕಾರಿಗಳು ಶೋಧ ಮುಂದುವರಿಸಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: NEET UG 2024: “ವಿದ್ಯಾರ್ಥಿಗಳ ಗುರುತು ಬಹಿರಂಗ ಪಡಿಸದೇ ನೀಟ್‌ ಫಲಿತಾಂಶ ಪ್ರಕಟಿಸಿ”-NTAಗೆ ಸುಪ್ರೀಂ ಸೂಚನೆ; ವಿಚಾರಣೆ ಮುಂದೂಡಿಕೆ

Continue Reading

ಕ್ರೈಂ

Sexual Assualt Case: ಅಶ್ಲೀಲ ವಿಡಿಯೊ ವೀಕ್ಷಿಸಿ ಉದ್ರೇಕಗೊಂಡ ಮೂವರು ಶಾಲಾ ಬಾಲಕರಿಂದ ಬಾಲಕಿಯ ಅತ್ಯಾಚಾರ, ಕೊಲೆ

ಫೋನ್‌ನಲ್ಲಿ ಅಶ್ಲೀಲ ವಿಡಿಯೊ ನೋಡಿ ಬಾಲಕಿಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ನಡೆಸಿ ಕೊಲೆ ಮಾಡಿದ್ದ (Sexual Assualt Case) ಆರೋಪಿಗಳು ಮತ್ತು ಅವರ ಇಬ್ಬರು ಸಂಬಂಧಿಕರನ್ನು ಪೊಲೀಸರು ಬಂಧಿಸಿದ್ದಾರೆ. ಉದ್ಯಾನವನದ ಬಳಿ ಆಟವಾಡುತ್ತಿದ್ದ ಬಾಲಕಿಯನ್ನು ಬಾಲಕರು ಪುಸಲಾಯಿಸಿ ಕರೆದುಕೊಂಡು ಹೋಗಿದ್ದರು. ಈ ಭೀಭತ್ಸ ಘಟನೆ ನಾಗರಿಕ ಸಮಾಜವನ್ನು ಬೆಚ್ಚಿ ಬೀಳಿಸಿದೆ.

VISTARANEWS.COM


on

By

Sexual Assault case
Koo

ಮೊಬೈಲ್ ಫೋನ್‌ನಲ್ಲಿ ಅಶ್ಲೀಲ ವಿಡಿಯೋಗಳನ್ನು (porn video) ವೀಕ್ಷಿಸಿ ಉದ್ರೇಕಗೊಂಡ ಮೂವರು ಬಾಲಕರು ಎಂಟು ವರ್ಷದ ಬಾಲಕಿ ಮೇಲೆ ಅತ್ಯಾಚಾರ (Sexual Assualt Case) ನಡೆಸಿ ಕೊಲೆ (rape and murder) ಮಾಡಿರುವ ಸಂಗತಿ ಬೆಳಕಿಗೆ ಬಂದಿದೆ. ಮೂವರು ಬಾಲಕರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದರು. ಆಂಧ್ರಪ್ರದೇಶದ (Andhra school boys) ನಂದ್ಯಾಲ್ ಜಿಲ್ಲೆಯಲ್ಲಿ ಜುಲೈ 7ರಂದು ದೇವಸ್ಥಾನವೊಂದರಲ್ಲಿ 12 ವರ್ಷದ ಇಬ್ಬರು ಮತ್ತು 13 ವರ್ಷದ ಒಬ್ಬ ಸೇರಿ ಮೂವರು ಸಾಮೂಹಿಕವಾಗಿ ಅತ್ಯಾಚಾರ ನಡೆಸಿದ್ದರು. ಬಳಿಕ ಕೊಲೆ ಮಾಡಿದ್ದರು.

3ನೇ ತರಗತಿ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಆರೋಪಿಗಳನ್ನು ಜುಲೈ 10ರಂದು ಬಂಧಿಸಲಾಗಿತ್ತು. ವಿಚಾರಣೆ ವೇಳೆ ಮೂವರೂ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ.

ಆರೋಪಿಗಳಲ್ಲಿ ಇಬ್ಬರು ಆರನೇ ತರಗತಿಯಲ್ಲಿ ಓದುತ್ತಿದ್ದು, ಒಬ್ಬ 7ನೇ ತರಗತಿ ವಿದ್ಯಾರ್ಥಿಯಾಗಿದ್ದಾನೆ. ಅತ್ಯಾಚಾರದ ಬಳಿಕ ಬಾಲಕಿ ಪೋಷಕರಿಗೆ ದೂರು ನೀಡಬಹುದು ಎಂಬ ಭಯದಿಂದ ಮೂವರು ಅಪ್ರಾಪ್ತರನ್ನು ಕತ್ತು ಹಿಸುಕಿ ಕೊಂದಿದ್ದಾರೆ. ಆರೋಪಿಯ ತಂದೆ ಮತ್ತು ಚಿಕ್ಕಪ್ಪ ಸೇರಿ ಬಾಲಕಿಯ ಶವವನ್ನು ಕಾಲುವೆಗೆ ಎಸೆದಿದ್ದಾರೆ ಎಂದು ನಂದ್ಯಾಲ್ ಎಸ್ಪಿ ಅಧಿರಾಜ್ ಸಿಂಗ್ ರಾಣಾ ತಿಳಿಸಿದ್ದಾರೆ.

ಆರೋಪಿಗಳಲ್ಲಿ ಒಬ್ಬನು ಕೂಡಲೇ ತನ್ನ ಸಂಬಂಧಿಕರಿಗೆ ಕರೆ ಮಾಡಿ ಅಪರಾಧದ ಬಗ್ಗೆ ತಿಳಿಸಿದನು. ಮಕ್ಕಳ ಮೇಲೆ ಕಾನೂನು ಕ್ರಮ ಜರುಗಿಸಬಹುದೆಂಬ ಭಯದಿಂದ ಆತನ ತಂದೆ ಮತ್ತು ಚಿಕ್ಕಪ್ಪ ಸ್ಥಳಕ್ಕೆ ಧಾವಿಸಿ ಬಾಲಕಿಯ ಶವವನ್ನು ದ್ವಿಚಕ್ರ ವಾಹನದಲ್ಲಿ ಸಾಗಿಸಿ ಕಲ್ಲಿಗೆ ಕಟ್ಟಿ ಕೃಷ್ಣಾ ನದಿಗೆ ಎಸೆದಿದ್ದಾರೆ. ಅಪ್ರಾಪ್ತರು ಮತ್ತು ಸಂಬಂಧಿಕರನ್ನು ಬಂಧಿಸಲಾಗಿದೆ ಎಂದು ರಾಣಾ ತಿಳಿಸಿದ್ದಾರೆ.

ಮುಚ್ಚುಮರಿ ಉದ್ಯಾನವನದ ಬಳಿ ಆಟವಾಡುತ್ತಿದ್ದ ಬಾಲಕಿಗೆ ಈ ಬಾಲಕರ ಪರಿಚಯವಿತ್ತು. ಹೀಗಾಗಿ ಅವರು ತಮ್ಮೊಂದಿಗೆ ಆಟವಾಡಲು ಆಕೆಯ ಮನವೊಲಿಸಿ ಕರೆದುಕೊಂಡು ಹೋಗಿದ್ದರು. ಅನಂತರ ಅವರು ಆಕೆಯ ಬಾಯಿಯನ್ನು ಬಿಗಿದು ಸಾಮೂಹಿಕವಾಗಿ ಅತ್ಯಾಚಾರ ನಡೆಸಿದ್ದರು.

ಇದನ್ನೂ ಓದಿ: Sexual Abuse: ಶಾಲಾ ಬಾಲಕಿಯನ್ನು ಕ್ರೂರವಾಗಿ ಥಳಿಸಿ ಗುಪ್ತಾಂಗಕ್ಕೆ ಕೋಲು ತುರುಕಿದ ಮಹಿಳೆ!

ಬಾಲಕಿಯ ಶವಕ್ಕಾಗಿ ಶೋಧ

ಬಾಲಕಿಯ ಮೃತ ದೇಹ ಇನ್ನೂ ಪತ್ತೆಯಾಗಿಲ್ಲ. ಆದರೆ ಪೊಲೀಸರು ಹುಡುಕಾಟ ಮುಂದುವರಿಸಿದ್ದಾರೆ. ಆರು ಪೊಲೀಸ್ ತಂಡಗಳು, ಪರಿಣತ ಈಜುಗಾರರು, ಶ್ವಾನದಳ, ಡ್ರೋನ್ ಕೆಮರಾ, ತಾಂತ್ರಿಕ ತಂಡಗಳು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ತಂಡಗಳು ಮೃತದೇಹಕ್ಕಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿವೆ ಎಂದು ರಾಣಾ ತಿಳಿಸಿದ್ದಾರೆ.

ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಅಪ್ರಾಪ್ತ ಬಾಲಕಿಯ ಕುಟುಂಬಕ್ಕೆ 10 ಲಕ್ಷ ರೂಪಾಯಿ ಆರ್ಥಿಕ ನೆರವು ಮಂಜೂರು ಮಾಡಿದ್ದಾರೆ.

Continue Reading

ದೇಶ

Train Derail: ಹಳಿ ತಪ್ಪಿದ ರೈಲು; ಅಪಘಾತದ ಹಿಂದೆ ಇದ್ಯಾ ವಿಧ್ವಂಸಕ ಕೃತ್ಯ?

Train Derail:ಉತ್ತರಪ್ರದೇಶದಲ್ಲಿ ಹಳಿ ತಪ್ಪಿದ ರೈಲಿನ ಚಾಲಕ ಅಪಘಾತದ ಮೊದಲು ದೊಡ್ಡ ಸ್ಫೋಟದ ಶಬ್ದ ಕೇಳಿಸಿತು ಎಂದು ಲೋಕೋ ಪೈಲಟ್ ಹೇಳಿದ್ದಾರೆ. ಚಂಡೀಗಢ-ದಿಬ್ರುಗಢ ಎಕ್ಸ್‌ಪ್ರೆಸ್‌ನ ಲೋಕೋ ಪೈಲಟ್, ಅಪಘಾತದ ಮೊದಲು ಸ್ಫೋಟದ ಶಬ್ದ ಕೇಳಿದೆ, ಹೀಗಾಗಿ ವಿಧ್ವಂಸಕ ಕೃತ್ಯದ ದೃಷ್ಟಿಯಿಂದ ತನಿಖೆ ಪ್ರಾರಂಭವಾಗಿದೆ ಎಂದಿದ್ದಾರೆ.

VISTARANEWS.COM


on

Train Accident
Koo

ಲಖನೌ: ಉತ್ತರ ಪ್ರದೇಶ(Uttar Pradesh)ದ ಗೊಂಡಾದಲ್ಲಿ ಚಂಡೀಗಢ-ದಿಬ್ರುಗಢ ಎಕ್ಸ್​​ಪ್ರೆಸ್​​ ರೈಲು ಅಪಘಾತಕ್ಕೆ(Train Derail) ಒಳಗಾಗಿ ಇಬ್ಬರು ಮೃತಪಟ್ಟು 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಇನ್ನು ಈ ದುರ್ಘಟನೆ ಹಿಂದೆ ವಿಧ್ವಂಸಕ ಕೃತ್ಯ ಇದೆಯೇ ಎಂಬ ಶಂಕೆ ವ್ಯಕ್ತವಾಗಿದೆ. ಘಟನೆ ಬಗ್ಗೆ ಲೋಕೋ ಪೈಲೆಟ್‌ ಮಾಹಿತಿ ನೀಡಿದ್ದು, ಘಟನೆಗೆ ಮುನ್ನ ದೊಡ್ಡ ಶಬ್ದ ಕೇಳಿಸಿತ್ತು ಎಂದಿದ್ದಾರೆ.

ಉತ್ತರಪ್ರದೇಶದಲ್ಲಿ ಹಳಿ ತಪ್ಪಿದ ರೈಲಿನ ಚಾಲಕ ಅಪಘಾತದ ಮೊದಲು ದೊಡ್ಡ ಸ್ಫೋಟದ ಶಬ್ದ ಕೇಳಿಸಿತು ಎಂದು ಲೋಕೋ ಪೈಲಟ್ ಹೇಳಿದ್ದಾರೆ. ಚಂಡೀಗಢ-ದಿಬ್ರುಗಢ ಎಕ್ಸ್‌ಪ್ರೆಸ್‌ನ ಲೋಕೋ ಪೈಲಟ್, ಅಪಘಾತದ ಮೊದಲು ಸ್ಫೋಟದ ಶಬ್ದ ಕೇಳಿದೆ, ಹೀಗಾಗಿ ವಿಧ್ವಂಸಕ ಕೃತ್ಯದ ದೃಷ್ಟಿಯಿಂದ ತನಿಖೆ ಪ್ರಾರಂಭವಾಗಿದೆ ಎಂದಿದ್ದಾರೆ.

ಎಕ್ಸ್​ಪ್ರೆಸ್​​ ರೈಲಿನ ಹಲವಾರು ಬೋಗಿಗಳು ಹಳಿ ತಪ್ಪಿದ ಪರಿಣಾಮ ದುರ್ಘಟನೆ ಸಂಭವಿಸಿದೆ. ಉತ್ತರ ಪ್ರದೇಶದ ಗೊಂಡಾ ಮತ್ತು ಜಿಲಾಹಿ ನಡುವೆ ಇರುವ ಪಿಕೌರಾ ಪ್ರದೇಶದಲ್ಲಿ ರೈಲು ಅವಘಡ ಸಂಭವಿಸಿದೆ.

ರೈಲು ಅವಘಡ ನಡೆದ ಸ್ಥಳಕ್ಕೆ ಪರಿಹಾರ ಕಾರ್ಯಾಚರಣೆಗಾಗಿ ರಕ್ಷಣಾ ತಂಡವನ್ನು ಕಳುಹಿಸಲಾಗಿದೆ. ಕೆಲವು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ ಮತ್ತು ಪ್ರಯಾಣಿಕರು ತಮ್ಮ ಸರಂಜಾಮುಗಳನ್ನು ಹಿಡಿದುಕೊಂಡು ಹಳಿಯ ಬದಿಗಳಲ್ಲಿ ನಿಂತಿರುವುದು ದೃಶ್ಯಗಳಲ್ಲಿ ಕಂಡು ಬಂದಿದೆ. ರೈಲು ಸಂಖ್ಯೆ 15904 ಚಂಡೀಗಢದಿಂದ ಅಸ್ಸಾಂನ ದಿಬ್ರುಗಢಕ್ಕೆ ತೆರಳುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಒಟ್ಟು 12 ಬೋಗಿಗಳೊಂದಿಗೆ ರೈಲು ಸಂಚರಿಸುತ್ತಿತ್ತು ಎಂದು ಪೊಲೀಸರು ಹೇಳಿದ್ದಾರೆ. ಅದರ ಪೈಕಿ ನಾಲ್ಕು ಬೋಗಿಗಳು ಜುಲಾಹಿ ರೈಲ್ವೆ ನಿಲ್ದಾಣದ ಕೆಲವು ಕಿಲೋಮೀಟರ್ ಮೊದಲು ಹಳಿ ತಪ್ಪಿವೆ.

ನಾನು ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದೇವೆ. ಅದಕ್ಕಾಗಿ ನಾನು ಸಂತೋಷಪಡುತ್ತೇನೆ ಎಂದು ರೈಲಿನಲ್ಲಿದ್ದ ಪ್ರಯಾಣಿಕರೊಬ್ಬರು ಹೇಳಿದರು. ಅಪಘಾತದ ಸ್ಥಳದಿಂದ ವೀಡಿಯೊಗಳು ಹಳಿ ತಪ್ಪಿದ ಬೋಗಿಗಳಿಂದ ಜನರು ತಮ್ಮ ಸಾಮಾನುಗಳನ್ನು ಹೊರತೆಗೆಯುತ್ತಿರುವುದನ್ನು ಕಂಡು ಬಂದಿದೆ. ಒಂದು ಬೋಗಿ ತಿರುಗಿ ಎಡ ಭಾಗಕ್ಕೆ ನಿಂತಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.
ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಅಪಘಾತದ ಮಾತನಾಡಿದ್ದಾರೆ. ಸ್ಥಳಕ್ಕೆ ತೆರೆಳಿರುವ ಅಧಿಕಾರಿಗಳು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಪಘಾತದ ಸ್ಥಳಕ್ಕೆ ತಕ್ಷಣ ತಲುಪುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದಾರೆ. ಪರಿಹಾರ ಕಾರ್ಯಾಚರಣೆಯನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಗಾಯಾಳುಗಳಿಗೆ ಸಕಾಲದಲ್ಲಿ ಚಿಕಿತ್ಸೆ ನೀಡುವಂತೆ ಸಿಎಂ ಹೇಳಿದ್ದಾರೆ. ರೈಲ್ವೆ ವೈದ್ಯಕೀಯ ಕ್ಯಾನ್ ಸ್ಥಳಕ್ಕೆ ತಲುಪಿದೆ ಮತ್ತು ಈಶಾನ್ಯ ರೈಲ್ವೆ ಸಹಾಯವಾಣಿ ಸಂಖ್ಯೆಗಳನ್ನು ಬಿಡುಗಡೆ ಮಾಡಿದೆ.

ಇದನ್ನೂ ಓದಿ:Uttar Pradesh Politics: ಉತ್ತರಪ್ರದೇಶದಲ್ಲಿ ಬಿಜೆಪಿ ಹೀನಾಯ ಸೋಲಿಗೆ ಇತ್ತು ಆ 6 ಪ್ರಮುಖ ಕಾರಣಗಳು

Continue Reading

ದೇಶ

Ratna Bhandar: ಒಂದೇ ವಾರದಲ್ಲಿ ಎರಡನೇ ಬಾರಿ ತೆರೆದ ಪುರಿ ಜಗನ್ನಾಥನ ʼರತ್ನ ಭಂಡಾರʼ

Ratna Bhandar: ಇಂದು ಬೆಳಗ್ಗೆ 9.51ಕ್ಕೆ ರತ್ನ ಭಂಡಾರವನ್ನು ಪುನಃ ತೆರೆಯಲಾಗಿದ್ದು, ಪುರಿ ಜಗನ್ನಾಥನಿಗೆ ಪ್ರಾರ್ಥನೆ ಸಲ್ಲಿಸಿದ ಬಳಿಕ ಒಡಿಶಾ ಸರ್ಕಾರವು ಸ್ಥಾಪಿಸಿದ ಮೇಲ್ವಿಚಾರಣಾ ಸಮಿತಿಯ ಸದಸ್ಯರು ಭಂಡಾರವನ್ನು ತೆರೆದು ಅದರಲ್ಲಿದ್ದ ಬೆಲೆ ಬಾಳುವ ವಸ್ತುಗಳನ್ನು ಸ್ಥಳಾಂತರಿಸಿದರು.

VISTARANEWS.COM


on

Ratna Bhandar
Koo

ಭುವನೇಶ್ವರಂ: 12ನೇ ಶತಮಾನದ ಪುರಿಯ ಜಗನ್ನಾಥ ದೇವಾಲಯ(Puri Jagannath Temple)ದ ಖಜಾನೆಯಾದ ರತ್ನ ಭಂಡಾರವನ್ನು ಇಂದು ಮತ್ತೆ ತೆರೆಯಲಾಯಿತು. ಕಳೆದ ವಾರವಷ್ಟೇ ಪುರಿ ಜಗನ್ನಾಥನ ರತ್ನ ಭಂಡಾರ(Ratna Bhandar)ವನ್ನು ಬರೋಬ್ಬರಿ 46ವರ್ಷಗಳ ಬಳಿ ತೆರೆಯಲಾಗಿತ್ತು. ಒಂದು ವಾರದ ಅಂತರದಲ್ಲಿ ಎರಡನೇ ಬಾರಿಗೆ ತೆರೆಯಲಾಗಿದೆ. ಅಲ್ಲಿನ ದುರಸ್ತಿಕಾರ್ಯ ಮತ್ತು ಆಭರಣಗಳ ಲೆಕ್ಕಹಾಕುವ ಪ್ರಕ್ರಿಯೆಗಾಗಿ ಅವುಗಳನ್ನು ತಾತ್ಕಾಲಿಕ ಸ್ಟ್ರಾಂಗ್ ರೂಮ್‌(Strong Room)ಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಇಂದು ಬೆಳಗ್ಗೆ 9.51ಕ್ಕೆ ರತ್ನ ಭಂಡಾರವನ್ನು ಪುನಃ ತೆರೆಯಲಾಗಿದ್ದು, ಪುರಿ ಜಗನ್ನಾಥನಿಗೆ ಪ್ರಾರ್ಥನೆ ಸಲ್ಲಿಸಿದ ಬಳಿಕ ಒಡಿಶಾ ಸರ್ಕಾರವು ಸ್ಥಾಪಿಸಿದ ಮೇಲ್ವಿಚಾರಣಾ ಸಮಿತಿಯ ಸದಸ್ಯರು ಭಂಡಾರವನ್ನು ತೆರೆದು ಅದರಲ್ಲಿದ್ದ ಬೆಲೆ ಬಾಳುವ ವಸ್ತುಗಳನ್ನು ಸ್ಥಳಾಂತರಿಸಿದರು.

ದೇವಸ್ಥಾನ ಪ್ರವೇಶಿಸುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಮೇಲ್ವಿಚಾರಣಾ ಸಮಿತಿಯ ಅಧ್ಯಕ್ಷ ಮತ್ತು ಒರಿಸ್ಸಾ ಹೈಕೋರ್ಟ್‌ನ ಮಾಜಿ ನ್ಯಾಯಾಧೀಶ ನ್ಯಾಯಮೂರ್ತಿ ಬಿಸ್ವನಾಥ್ ರಾತ್, “ಭಂಡಾರದ ಒಳಕೋಣೆಯೊಳಗೆ ಸಂಗ್ರಹವಾಗಿರುವ ಎಲ್ಲಾ ಬೆಲೆಬಾಳುವ ವಸ್ತುಗಳ ಸ್ಥಳಾಂತರವನ್ನು ಸುಗಮವಾಗಿ ಪೂರ್ಣಗೊಳಿಸಲು ನಾವು ಜಗನ್ನಾಥನ ಆಶೀರ್ವಾದವನ್ನು ಕೋರಿದ್ದೇವೆ” ಎಂದು ಹೇಳಿದರು.

1978ರಲ್ಲಿ ಪುರಿ ಜಗನ್ನಾಥ ದೇವಾಲಯದ ರತ್ನ ಭಂಡಾರವನ್ನು ತೆಗೆದಿದ್ದಾಗ 128.38 ಕೆ.ಜಿ ಚಿನ್ನ ಸಿಕ್ಕಿತ್ತು. ಚಿನ್ನದ ಸುಮಾರು 454 ಆಭರಣಗಳು ದೊರಕಿದ್ದವು. ಇನ್ನು, ಇದೇ ಖಜಾನೆಯಲ್ಲಿ 221.53 ಕೆ.ಜಿ ಬೆಳ್ಳಿ ಇತ್ತು. ಬೆಳ್ಳಿಯ 293 ಆಭರಣಗಳು ದೊರಕಿದ್ದವು. ಆಗ ಸುಮಾರು 70 ದಿನಗಳವರೆಗೆ ಅಧಿಕಾರಿಗಳು ಶೋಧನೆ ನಡೆಸಿದ್ದರು. ಈಗ ಮತ್ತೆ ರತ್ನ ಭಂಡಾರದ ಆಭರಣಗಳನ್ನು ಲೆಕ್ಕ ಹಾಕಲಾಗುತ್ತದೆ ಎಂದು ತಿಳಿದುಬಂದಿದೆ

ಒಡಿಶಾ ಹೈಕೋರ್ಟ್‌ನ ಮಾಜಿ ನ್ಯಾಯಾಧೀಶ ನ್ಯಾಯಮೂರ್ತಿ ಬಿಸ್ವನಾಥ್ ರಾತ್ ನೇತೃತ್ವದ ಉನ್ನತ ಮಟ್ಟದ ಸಮಿತಿಯು ಈ ಪ್ರಕ್ರಿಯೆಗೆ ಹಸಿರು ನಿಶಾನೆ ತೋರಿದೆ. ಸರ್ಕಾರದ ಅನುಮೋದನೆಯನ್ನು ಪಡೆದ ನಂತರ, ದಾಸ್ತಾನುಗಳಿಗೆ ಮಾರ್ಗದರ್ಶನ ನೀಡಲು ಪ್ರಮಾಣಿತ ಕಾರ್ಯಾಚರಣಾ ಕಾರ್ಯವಿಧಾನಗಳನ್ನು (SOP)ಸ್ಥಾಪಿಸಲಾಯಿತು. ಶ್ರೀ ಜಗನ್ನಾಥ ದೇವಸ್ಥಾನದ ಆಡಳಿತವು (SJTA), ಅದರ ಮುಖ್ಯ ಆಡಳಿತಾಧಿಕಾರಿ ನೇತೃತ್ವದಲ್ಲಿ ಕಾರ್ಯಾಚರಣೆಯನ್ನು ನೋಡಿಕೊಳ್ಳುತ್ತಿದೆ.

ಅನಂಗಭೀಮ ದೇವ ಕ್ರಿಶ 1238ರವರೆಗೆ ಒಡಿಶಾ ಪ್ರದೇಶದ ರಾಜನಾಗಿದ್ದ. ಈತನ ಅಧಿಕಾರದ ಅವಧಿಯಲ್ಲಿ ಪುರಿ ದೇವಾಲಯಕ್ಕೆ 1.25 ಲಕ್ಷ ತೊಲ ಚಿನ್ನವನ್ನು ದಾನವಾಗಿ ನೀಡಿದ್ದ ಎಂಬ ಇತಿಹಾಸ ಇದೆ. 1465ರಲ್ಲಿ ರಾಜ ಕಪಿಲೇಂದ್ರ ದೇವ್‌ ಕೂಡ ಸಾಕಷ್ಟು ಚಿನ್ನವನ್ನು ದಾನ ಮಾಡಿರುವ ಬಗ್ಗೆ ಉಲ್ಲೇಖ ಇದೆ.

1979ರಲ್ಲಿ ಬರೋಬ್ಬರಿ 70 ದಿನಗಳ ಕಾಲ ಸಂಪತ್ತಿನ ಮೌಲ್ಯವನ್ನು ಸಮಿತಿ ಲೆಕ್ಕ ಹಾಕಿತ್ತು. ಆದರೆ ಅದರ ಪೂರ್ತಿ ಮಾಹಿತಿಯನ್ನು ಸರ್ಕಾರ ಸಾರ್ವಜನಿಕಗೊಳಿಸಿರಲಿಲ್ಲ. ಈ ವಿಚಾರ ಕೋರ್ಟ್​ ಮೆಟ್ಟಿಲೇರಿತ್ತು. 2018ರಲ್ಲಿ ಒಡಿಶಾ ಸರ್ಕಾರಕ್ಕೆ ದೇವಸ್ಥಾನದ ರತ್ನ ಭಂಡಾರದ ಕೋಣೆಯ ಬಾಗಿಲು ತೆರೆದು ನಿಧಿಯ ಮೌಲ್ಯ ಮಾಪನ ಮಾಡುವಂತೆ ಹೈಕೋರ್ಟ್​ ಸೂಚನೆ ನೀಡಿತ್ತು.

ಇದನ್ನೂ ಓದಿ: Puri Jagannath temple: ಬರೋಬ್ಬರಿ 46 ವರ್ಷಗಳ ಬಳಿಕ ತೆರೆದ ಪುರಿ ಜಗನ್ನಾಥನ ರತ್ನ ಭಂಡಾರ

Continue Reading
Advertisement
Natasa Stankovic
ಪ್ರಮುಖ ಸುದ್ದಿ7 mins ago

Natasa Stankovic : ಹಾರ್ದಿಕ್ ಪಾಂಡ್ಯಗೆ ಡೈವೋರ್ಸ್​ ನೀಡಿದ್ದೇನೆ; ಪತ್ನಿ ನತಾಶಾ ಹೇಳಿಕೆ

Neet UG
ದೇಶ26 mins ago

NEET UG 2024: ನೀಟ್‌ ಅಕ್ರಮ; ನಾಲ್ವರು ಏಮ್ಸ್‌ ವಿದ್ಯಾರ್ಥಿಗಳು ಸಿಬಿಐ ಬಲೆಗೆ

Farmers should get crop insurance immediately says MP BY Raghavendra
ಶಿವಮೊಗ್ಗ41 mins ago

Shivamogga News: ಕೂಡಲೇ ಬೆಳೆ ವಿಮೆ ಮಾಡಿಸಿಕೊಳ್ಳಲು ಸಂಸದ ಬಿ.ವೈ. ರಾಘವೇಂದ್ರ ಮನವಿ

Guru Puja Mahotsav and Sangeethotsava from July 19th at Kaiwara Srikshethra Sadguru Sri Yoginareyan Mutt
ಚಿಕ್ಕಬಳ್ಳಾಪುರ45 mins ago

Kaivara Tatayya: ಕೈವಾರ ಶ್ರೀ ಯೋಗಿನಾರೇಯಣ ಮಠದಲ್ಲಿ ಜು.19ರಿಂದ ಗುರುಪೂಜಾ ಮಹೋತ್ಸವ, ಸಂಗೀತೋತ್ಸವ

Shiradi Ghat
ಪ್ರಮುಖ ಸುದ್ದಿ48 mins ago

Shiradi Ghat: ಭೂಕುಸಿತ; ಶಿರಾಡಿ ಘಾಟ್​ನಲ್ಲಿ ಸಂಚಾರ ನಿಷೇಧ ​; ಬೆಂಗಳೂರು- ಮಂಗಳೂರು ಸಂಪರ್ಕ ಬಹುತೇಕ ಕಟ್​

Immense damage due to rain in various parts of Soraba Taluk MP BY Raghavendra visited and inspected
ಶಿವಮೊಗ್ಗ52 mins ago

Shivamogga News: ಸೊರಬದ ವಿವಿಧೆಡೆ ಮಳೆಯಿಂದ ಅಪಾರ ಹಾನಿ; ಸಂಸದ ಬಿ.ವೈ.ರಾಘವೇಂದ್ರ ಭೇಟಿ

Israel Palestine War
ವಿದೇಶ54 mins ago

Israel Palestine War: 50 ಕಿ.ಮೀ ದೂರದಿಂದಲೇ ಪ್ಯಾಲೆಸ್ತಿನ್‌ ಕಮಾಂಡರ್‌ನನ್ನು ಕೊಂದ ಇಸ್ರೇಲ್‌! ವಿಡಿಯೊ ನೋಡಿ

Viral Video
ವೈರಲ್ ನ್ಯೂಸ್59 mins ago

Viral Video: ಮೂರು ಅಡಿಯ ಕುಳ್ಳನಿಗೆ ಏಳಡಿ ಎತ್ತರದ ಗರ್ಲ್ ಫ್ರೆಂಡ್! ಇವರ ಪ್ರಣಯದ ವಿಡಿಯೊ ನೋಡಿ!

Rain News;
ಪ್ರಮುಖ ಸುದ್ದಿ1 hour ago

Rain News : ಪ್ರಯಾಣಿಕರೇ ಗಮನಿಸಿ; ಗುಡ್ಡ ಕುಸಿತದ ಭೀತಿ, ಮಡಿಕೇರಿ- ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್​​

Sexual Assault case
ಕ್ರೈಂ1 hour ago

Sexual Assualt Case: ಅಶ್ಲೀಲ ವಿಡಿಯೊ ವೀಕ್ಷಿಸಿ ಉದ್ರೇಕಗೊಂಡ ಮೂವರು ಶಾಲಾ ಬಾಲಕರಿಂದ ಬಾಲಕಿಯ ಅತ್ಯಾಚಾರ, ಕೊಲೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ5 hours ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ7 hours ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ2 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ3 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ3 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ4 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ4 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ4 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ4 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

ಟ್ರೆಂಡಿಂಗ್‌