Pranitha Subhash: ಮಾಲಿವುಡ್‌ಗೆ ಎಂಟ್ರಿ ಕೊಟ್ಟ `ಪೊರ್ಕಿ’  ಸಿನಿಮಾ ಖ್ಯಾತಿಯ ಪ್ರಣಿತಾ ಸುಭಾಷ್! - Vistara News

ಮಾಲಿವುಡ್

Pranitha Subhash: ಮಾಲಿವುಡ್‌ಗೆ ಎಂಟ್ರಿ ಕೊಟ್ಟ `ಪೊರ್ಕಿ’  ಸಿನಿಮಾ ಖ್ಯಾತಿಯ ಪ್ರಣಿತಾ ಸುಭಾಷ್!

ಮಾಲಿವುಡ್ ಸೂಪರ್ ಸ್ಟಾರ್ ದಿಲೀಪ್‌ ಅವರಿಗೆ ನಾಯಕಿಯಾಗಿ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ನಟಿ ಕೂಡ ಮೇಜರ್ ರೋಲ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.ತಾತ್ಕಾಲಿಕವಾಗಿ ಡಿ 148 ಎಂದು ಸಿನಿಮಾಗೆ ಹೆಸರಿಸಲಾಗಿದೆ. ಮತ್ತು ರತೀಶ್ ರಘುನಂದನ್ ನಿರ್ದೇಶಿಸುತ್ತಿದ್ದಾರೆ.

VISTARANEWS.COM


on

Pranitha Subhash mollywood entry
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವೈಯಕ್ತಿಕ ಜೀವನದಲ್ಲಿ ಬ್ಯುಸಿಯಿದ್ದ ನಟಿ ಪ್ರಣಿತಾ ಸುಭಾಷ್ (Pranitha Subhash) ಈ ಬಾರಿ ಮಲಯಾಳಂ ಚಿತ್ರಕ್ಕಾಗಿ ತೆರೆಗೆ ಬರಲು ಸಜ್ಜಾಗಿದ್ದಾರೆ. “ನಾನು ಬೆಂಗಳೂರಿನಿಂದ ಕೊಚ್ಚಿಗೆ ಹೋಗುತ್ತಿದ್ದೇನೆ ಮತ್ತು ನನ್ನ ಮಗಳು ಅರ್ನಾದಿಂದ ನಾನು ಹೆಚ್ಚು ಕಾಲ ದೂರವಿರುವುದು ಇದೇ ಮೊದಲುʼʼಎಂದು ಹೇಳಿಕೊಂಡಿದ್ದಾರೆ. ಮಾಲಿವುಡ್ ಸೂಪರ್ ಸ್ಟಾರ್ ದಿಲೀಪ್‌ ಅವರಿಗೆ ನಾಯಕಿಯಾಗಿ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ನಟಿ ಕೂಡ ಮೇಜರ್ ರೋಲ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಮಾಧ್ಯಮವೊಂದಕ್ಕೆ ಈ ಬಗ್ಗೆ ನಟಿ ಮಾತನಾಡಿದ್ದು ʻʻನಾನು ಬೆಂಗಳೂರಿನಿಂದ ಕೊಚ್ಚಿಗೆ ಹೋಗುತ್ತಿದ್ದೇನೆ ಮತ್ತು ನನ್ನ ಮಗಳು ಅರ್ನಾದಿಂದ ನಾನು ಹೆಚ್ಚು ಕಾಲ ದೂರವಿರುವುದು ಇದೇ ಮೊದಲು. ಕೆಲಸದ ಜತೆ ಮನೆ ಹಾಗೂ ತಾಯ್ತನವನ್ನು ನಿಭಾಯಿಸಬೇಕು. ಸೂಪರ್‌ಸ್ಟಾರ್ ದಿಲೀಪ್ ಅವರ ಜತೆ ನಟಿಸಲು ಹೆಮ್ಮೆಯಾಗುತ್ತಿದೆ. ತಾತ್ಕಾಲಿಕವಾಗಿ ಡಿ 148 ಎಂದು ಸಿನಿಮಾಗೆ ಹೆಸರಿಸಲಾಗಿದೆ. ಮತ್ತು ರತೀಶ್ ರಘುನಂದನ್ ನಿರ್ದೇಶಿಸುತ್ತಿದ್ದಾರೆ. ಮಲಯಾಳಂ ಕಲಿಯುವುದು ಇಲ್ಲಿ ದೊಡ್ಡ ಸವಾಲಾಗಿದೆ. ಮಲಯಾಳಂ ಭಾಷೆ ಕಲಿಕೆಗೆ ಸ್ವಲ್ಪ ಪ್ರಯತ್ನದ ಅಗತ್ಯವಿದೆʼʼಎಂದರು.

ಇದನ್ನೂ ಓದಿ: Actor Pranitha | ಬಹುಭಾಷಾ ನಟಿಯ ಭೀಮನ ಅಮವಾಸ್ಯೆ ಆಚರಣೆಗೆ ಹಿತೈಷಿಗಳ ಶಹಬ್ಬಾಸ್‌

ಚಿತ್ರದ ಕುರಿತು ಮಾತನಾಡಿ ʻʻನಿರ್ದೇಶಕರು ನನಗೆ ನನ್ನ ಪಾತ್ರವನ್ನು ವಿವರಿಸಿದಾಗ, ಅವರು ಹೇಳಿದರು, ‘ನೀವು ಮುದ್ದಾದ ಪಾತ್ರಗಳನ್ನು ನಿರ್ವಹಿಸಿದ್ದೀರಿ ಎಂದು ನನಗೆ ತಿಳಿದಿದೆ. ಆದರೆ ಈ ಚಿತ್ರದಲ್ಲಿ ನೀವು ಹಾಗೆ ಮಾಡಲು ಸಾಧ್ಯವಿಲ್ಲ’ ಎಂದು ಹೇಳಿದರು. ನನಗೆ ನಟಿಸಲು ಸಿಗುವ ಪಾತ್ರವು ಸ್ವಲ್ಪ ದುರಹಂಕಾರ ಸ್ವಭಾವದ ಪಾತ್ರಗಳು ಹೊಂದಿಕೆಯಾಗುತ್ತಿದ್ದವು. ಈ ಚಿತ್ರ ವಿಭಿನ್ನವಾದ ಕಥೆಯನ್ನು ಹೊಂದಿದೆ. ಮಾಲಿವುಡ್‌ಗೆ ಎಂಟ್ರಿ ಕೊಡುತ್ತಿರುವುದು ನನ್ನ ಅದೃಷ್ಟʼʼ ಎಂದು ಪ್ರಣಿತಾ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: Actor Pranitha | ಮುದ್ದು ಮಗಳ ಹೆಸರನ್ನು ತಿಳಿಸಿದ ಬಹುಭಾಷಾ ನಟಿ ಪ್ರಣಿತಾ ಸುಭಾ‍ಷ್‌

ಚಿತ್ರದಲ್ಲಿ ಪ್ರಣಿತಾ, ನೀತಾ ಪಿಳ್ಳೈ ಸೇರಿದಂತೆ ಇತರ ಪ್ರಮುಖ ಪಾತ್ರಗಳು ಇರಲಿವೆ. ಪ್ರಣಿತಾ ಅವರ ಪಾತ್ರದ ಶೂಟಿಂಗ್ 2 ವಾರಗಳ ಕಾಲ ಕೇರಳದಲ್ಲಿ ನಡೆಯಲಿದೆ. ಈಗಾಗಲೇ `ಡಿ 148′ ಶೂಟಿಂಗ್ ಶುರುವಾಗಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಜಕೀಯ

Suresh Gopi: ಕೇರಳದಲ್ಲಿ ಬಿಜೆಪಿ ಖಾತೆ ತೆರೆದಿರುವ ಸುರೇಶ್‌ ಗೋಪಿ ಜೀವನದಲ್ಲಿ ನಡೆದಿತ್ತೊಂದು ಘೋರ ದುರಂತ

ಕೇರಳದಿಂದ ಬಿಜೆಪಿಯ ಮೊದಲ ಲೋಕಸಭಾ ಸಂಸದರಾಗಿರುವ ಸುರೇಶ್ ಗೋಪಿ (Suresh Gopi) ಮಲಯಾಳಂ ಚಿತ್ರರಂಗದ ಅಪ್ರತಿಮ ನಟರಲ್ಲಿ ಒಬ್ಬರು. ಇವರ ಬಗ್ಗೆ ತಿಳಿದುಕೊಳ್ಳಬೇಕಾದ ಹಲವಾರು ಸಂಗತಿಗಳಿವೆ. ಸುರೇಶ್‌ ಗೋಪಿ ಜೀವನದ ಹಿನ್ನೋಟ ಇಲ್ಲಿದೆ.

VISTARANEWS.COM


on

By

Suresh Gopi
Koo

ಲೋಕಸಭಾ ಚುನಾವಣೆ 2024ರ (Loksabha election-2024) ಫಲಿತಾಂಶ ಬಹುತೇಕ ಬಿಜೆಪಿಗೆ (BJP) ಬೇಸರವನ್ನು ಉಂಟು ಮಾಡಿದ್ದರೂ ಕಮ್ಯುನಿಸ್ಟ್ (Communist) ಆಡಳಿತವಿರುವ ಕೇರಳದಲ್ಲಿ (kerala) ಒಂದು ಖಾತೆ ತೆರೆದು ಸಂಭ್ರಮ ಪಡುವಂತೆ ಮಾಡಿದೆ. ಹಲವು ಹಲವು ದಶಕಗಳ ಸುದೀರ್ಘ ಕಾಯುವಿಕೆಯ ಬಳಿಕ ಮೊದಲ ಬಾರಿಗೆ ಕೇರಳದಲ್ಲಿ ಕಮಲ ಅರಳಿದೆ. ಈ ಸಾಧನೆ ಬಿಜೆಪಿ ನಾಯಕ ಮತ್ತು ನಟ ಸುರೇಶ್ ಗೋಪಿ (Suresh Gopi) ಅವರದ್ದು.

ಸಮಾಜ ಸೇವೆಗಾಗಿ ಹೆಸರುವಾಸಿಯಾಗಿರುವ ಸುರೇಶ್ ಗೋಪಿ ಅವರು ತ್ರಿಶೂರ್ ಲೋಕಸಭಾ ಚುನಾವಣೆಯಲ್ಲಿ ಗೆದ್ದು ಇತಿಹಾಸ ಸೃಷ್ಟಿಸಿದ್ದಾರೆ. ಕೇಸರಿ ಪಕ್ಷದ ಸುರೇಶ್ ಗೋಪಿ ಅವರು ತಮ್ಮ ಚುನಾವಣಾ ಪ್ರಚಾರದಲ್ಲಿ “ತ್ರಿಶೂರ್ ನಂ ಎಡುಕ್ಕುವ (ತ್ರಿಶೂರ್ ಅನ್ನು ನಾನು ತೆಗೆದುಕೊಳ್ಳುತ್ತಿದ್ದೇನೆ), ಎನಿಕ್ಕು ವಿಷ ತ್ರಿಶೂರ್ (ನನಗೆ ತ್ರಿಶೂರ್ ಬೇಕು)” ಎಂಬ ಘೋಷಣೆಯೊಂದಿಗೆ ಚುನಾವಣಾ ಪ್ರಚಾರವನ್ನು ನಡೆಸಿದ್ದರು.


ಬಿಜೆಪಿಗೆ ಐತಿಹಾಸಿಕ ಗೆಲುವು

ಭಾರತೀಯ ಚುನಾವಣಾ ಆಯೋಗದ ವೆಬ್‌ಸೈಟ್ ಪ್ರಕಾರ ಸುರೇಶ್ ಗೋಪಿ ಅವರು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ)ನ ಹಿರಿಯ ಕಾಂಗ್ರೆಸ್ ನಾಯಕ ಕೆ. ಮುರಳೀಧರನ್ ಮತ್ತು ಮಾಜಿ ಸಚಿವ ವಿ.ಎಸ್. ಸುನೀಲ್ ಕುಮಾರ್ ಅವರನ್ನು 73,573 ಮತಗಳಿಂದ ಸೋಲಿಸಿ ಐತಿಹಾಸಿಕ ಗೆಲುವು ದಾಖಲಿಸಿದರು.


ಯಾರು ಸುರೇಶ್ ಗೋಪಿ?

ಕೇರಳದಿಂದ ಬಿಜೆಪಿಯ ಮೊದಲ ಲೋಕಸಭಾ ಸಂಸದರಾಗಿರುವ ಸುರೇಶ್ ಗೋಪಿ ಮಲಯಾಳಂ ಚಿತ್ರರಂಗದ ಅಪ್ರತಿಮ ನಟರಲ್ಲಿ ಒಬ್ಬರು. ಇವರ ಬಗ್ಗೆ ತಿಳಿದುಕೊಳ್ಳಬೇಕಾದ ಹಲವಾರು ಸಂಗತಿಗಳಿವೆ.

ಕೊಲ್ಲಂನಲ್ಲಿ ಚಲನಚಿತ್ರ ವಿತರಕ ಗೋಪಿನಾಥನ್ ಪಿಳ್ಳೈ ಮತ್ತು ಅವರ ಪತ್ನಿ ಜ್ಞಾನಲಕ್ಷ್ಮಿ ಅವರ ಮೂವರು ಮಕ್ಕಳಲ್ಲಿ ಸುರೇಶ ಗೋಪಿ ಕೂಡ ಒಬ್ಬರು. ಪ್ರಾಣಿಶಾಸ್ತ್ರದಲ್ಲಿ ಪದವಿ ಮತ್ತು ಇಂಗ್ಲಿಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿರುವ ಇವರು ನಟ, ಟಿವಿ ನಿರೂಪಕ ಮತ್ತು ರಾಜಕಾರಣಿಯಾಗಿ ಗುರುತಿಸಿಕೊಂಡಿರುವುದು ಮಾತ್ರವಲ್ಲ ತಮ್ಮ ವಿನಮ್ರ ಸ್ವಭಾವ ಮತ್ತು ಸಮಾಜ ಸೇವೆಗಾಗಿ ಗುರುತಿಸಿಕೊಂಡಿದ್ದಾರೆ.


ಬಹುಬೇಡಿಕೆಯ ನಟ

ಮಲಯಾಳಂ ಚಿತ್ರರಂಗದ ಬಹುಬೇಡಿಕೆಯ ನಟರಲ್ಲಿ ಒಬ್ಬರಾಗಿರುವ ಸುರೇಶ್ ಗೋಪಿ, 1965ರಲ್ಲಿ ಓಡೈಲ್ ನಿನ್ನಲ್ಲಿ ಚಿತ್ರದಲ್ಲಿ ಬಾಲ ಕಲಾವಿದನಾಗಿ ತಮ್ಮ ನಟನಾ ವೃತ್ತಿಯನ್ನು ಪ್ರಾರಂಭಿಸಿದರು. ಅನಂತರ ಅವರು 1986ರಲ್ಲಿ ನೀರಮುಲ್ಲಾ ರಾವುಕಲ್ ಚಿತ್ರಕ್ಕೆ ಪ್ರವೇಶ ಮಾಡಿದರು. 1992ರಲ್ಲಿ ತಲಸ್ತಾನಂ ಚಿತ್ರದಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿದರು. ಏಕಲವ್ಯನ್ ಚಿತ್ರದ ಮೂಲಕ ಅವರು ಚಿತ್ರರಂಗದ ಅದ್ಭುತ ತಾರೆಯಾಗಿ ಗುರುತಿಸಿಕೊಂಡರು.

ಸುಮಾರು 250ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ ಅವರು ಕಲಿಯಾಟಂನಲ್ಲಿನ ಅದ್ಭುತ ಅಭಿನಯಕ್ಕಾಗಿ ಅತ್ಯುತ್ತಮ ನಟ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ, ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿಯನ್ನು ಪಡೆದರು. 2015ರ ಬಳಿಕ ಚಿತ್ರರಂಗದಿಂದ ದೂರವಾದ ಅವರು 2020 ರಲ್ಲಿ ವರಣೆ ಅವಶ್ಯಮುಂದ್ ಚಿತ್ರದೊಂದಿಗೆ ಮತ್ತೆ ಬಣ್ಣ ಹಚ್ಚಿದರು.


ನಿರೂಪಕನಾಗಿಯೂ ಸೈ

2012ರಲ್ಲಿ ಸುರೇಶ್ ಗೋಪಿ ಅವರು ಕೌನ್ ಬನೇಗಾ ಕರೋಡ್ ಪತಿಯ ಮಲಯಾಳಂ ಆವೃತ್ತಿಯಾದ ನಿಂಗಲ್ಕ್ಕುಮ್ ಆಕಾಂ ಕೋಡೀಶ್ವರನ್ ಕಾರ್ಯಕ್ರಮದೊಂದಿಗೆ ಟಿವಿ ಶೋ ನಿರೂಪಣೆಗೆ ಇಳಿದರು. ಇದರಲ್ಲಿ ಅವರು ಲಕ್ಷಾಂತರ ಮಂದಿಯ ಹೃದಯವನ್ನು ಗೆದ್ದರು.

ವೈವಾಹಿಕ ಜೀವನ

ಸುರೇಶ್ ಗೋಪಿ ಅವರು ನಟಿ ಅರ್ಣಮುಲಾ ಪೊನ್ನಮ್ಮ ಅವರ ಮೊಮ್ಮಗಳು ರಾಧಿಕಾ ನಾಯರ್ ಅವರನ್ನು 1990 ರಲ್ಲಿ ವಿವಾಹವಾದರು. ಇವರಿಗೆ ಗೋಕುಲ್ ಸುರೇಶ್, ಭಾಗ್ಯ ಸುರೇಶ್, ಭವ್ನಿ ಸುರೇಶ್ ಮತ್ತು ಮಾಧವ್ ಸುರೇಶ್ ಎಂಬ ನಾಲ್ಕು ಮಕ್ಕಳಿದ್ದಾರೆ. ಗೋಕುಲ್ ಸುರೇಶ್ ತಮ್ಮ ತಂದೆಯ ಹಾದಿಯನ್ನು ಅನುಸರಿಸಿ ನಟನೆಗೆ ಕಾಲಿಟ್ಟಿದ್ದಾರೆ.


ಬದುಕಿನಲ್ಲಿ ನಡೆದ ದುರಂತ

ಸುರೇಶ್ ಗೋಪಿ ಅವರಿಗೆ ಮಕ್ಕಳೆಂದರೆ ತುಂಬಾ ಪ್ರೀತಿ. ಅವರು ತಮ್ಮ ಮೊದಲ ಭೇಟಿಯಲ್ಲಿ ತಮ್ಮ ಪತ್ನಿ ರಾಧಿಕಾ ಅವರಿಗೆ ಇದನ್ನು ಹೇಳಿದ್ದರು. ರಾಧಿಕಾ ಅವರು ಮೊದಲು ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಆಕೆಗೆ ಲಕ್ಷ್ಮಿ ಎಂದು ಹೆಸರಿಟ್ಟರು. 1992ರ ಜೂನ್ 6ರಂದು, ದಂಪತಿ ತಮ್ಮ ಒಂದೂವರೆ ವರ್ಷದ ಮಗಳೊಂದಿಗೆ ಮದುವೆ ಸಮಾರಂಭದಲ್ಲಿ ಭಾಗವಹಿಸಲು ಹೋಗಿದ್ದರು. ಅಲ್ಲಿಂದ ಸುರೇಶ್ ತಮ್ಮ ಶೂಟಿಂಗ್‌ಗಾಗಿ ಕೊಚ್ಚಿಗೆ ಹೋದರೆ ರಾಧಿಕಾ ಮತ್ತು ಲಕ್ಷ್ಮಿ ಸುರೇಶ್ ಅವರ ಸಹೋದರನೊಂದಿಗೆ ತಮ್ಮ ಮನೆಗೆ ಮರಳಲು ಹೊರಟಿದ್ದರು. ಅವರು ಪ್ರಯಾಣಿಸುತ್ತಿದ್ದ ಕಾರು ಇನ್ನೊಂದು ಕಾರಿಗೆ ಮುಖಾಮುಖಿ ಡಿಕ್ಕಿ ಹೊಡೆಯಿತು, ಈ ಭೀಕರ ಅಪಘಾತದಲ್ಲಿ ಸುರೇಶ್ ಮತ್ತು ರಾಧಿಕಾ ತಮ್ಮ ಒಂದೂವರೆ ವರ್ಷದ ಮಗಳು ಲಕ್ಷ್ಮಿಯನ್ನು ಕಳೆದುಕೊಂಡರು. ಕೆಲವು ದಿನಗಳ ಕಾಲ ರಾಧಿಕಾ ಪ್ರಜ್ಞಾಹೀನರಾಗಿದ್ದರು. ಸುರೇಶ್ ಮತ್ತು ರಾಧಿಕಾ ಸದಾ ಲಕ್ಷ್ಮಿಯನ್ನು ನೆನಪಿಸಿಕೊಳ್ಳುತ್ತಲೇ ಇರುತ್ತಾರೆ.


ರಾಜಕೀಯ ಜೀವನ

ಕಾಲೇಜಿನಲ್ಲಿದ್ದಾಗ ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾದ (ಎಸ್‌ಎಫ್‌ಐ) ಸಕ್ರಿಯ ಸದಸ್ಯರಾಗಿದ್ದಾಗ ಸುರೇಶ್ ಗೋಪಿ ರಾಜಕೀಯದಲ್ಲಿ ಆಸಕ್ತಿಯನ್ನು ಪ್ರಾರಂಭಿಸಿದರು. 2016ರ ಏಪ್ರಿಲ್ ನಲ್ಲಿ ಸುರೇಶ್ ಗೋಪಿ ಅವರು ರಾಜ್ಯಸಭೆ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. 2016ರ ಅಕ್ಟೋಬರ್‌ನಲ್ಲಿ ಅವರು ಬಿಜೆಪಿ ಸೇರಿದರು.

ಇದನ್ನೂ ಓದಿ: Uddhav Thackeray: ಉದ್ಧವ್ ಠಾಕ್ರೆ ಎನ್‌ಡಿಎಗೆ ವಾಪಸ್? ಇಂಡಿ ಒಕ್ಕೂಟದ ಸಭೆಗೆ ಹೋಗದ ಶಿವಸೇನೆ ನಾಯಕ!

2019ರ ಚುನಾವಣೆಯಲ್ಲಿ ತ್ರಿಶೂರ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತರು. ಆದರೆ ಈ ಬಾರಿ ಮತ್ತೆ ತ್ರಿಶೂರ್‌ನಿಂದ ಕಣಕ್ಕೆ ಇಳಿದ ಅವರು ಭರ್ಜರಿ ಬಹುಮತದೊಂದಿಗೆ ಐತಿಹಾಸಿಕ ವಿಜಯ ದಾಖಲಿಸಿದರು.


ಸಮಾಜ ಸೇವೆ

ದತ್ತಿ ಕಾರ್ಯಗಳಿಂದಾಗಿ ಸುರೇಶ್ ಅವರು ಲಕ್ಷಾಂತರ ಜನರ ಹೃದಯವನ್ನು ಗೆದ್ದಿದ್ದಾರೆ. ನಿರಾಶ್ರಿತರಿಗೆ ಸೂರು ಕಲ್ಪಿಸುವುದರಿಂದ ಹಿಡಿದು, ಹಿಂದುಳಿದವರ ಸಂಪೂರ್ಣ ಶಿಕ್ಷಣಕ್ಕೆ ಪ್ರಾಯೋಜಕತ್ವ ನೀಡುವವರೆಗೆ ಅವರ ಮಾನವೀಯ ಕಾರ್ಯಗಳು ಸಾಕಷ್ಟಿವೆ. ಇವರ ಸಮಾಜ ಸೇವೆಯ ಕುರಿತು ನಟ ಜಯರಾಮ್ ಹೇಳುವುದು ಹೀಗೆ.. ರಾಜಕಾರಣಿಗಳಾದ ಮೇಲೆ ಹಲವರು ಸಮಾಜ ಸೇವೆ ಮಾಡುತ್ತಾರೆ. ಆದರೆ ಸುರೇಶ್ ಗೋಪಿ ಇದಕ್ಕೆ ಅಪವಾದ. ರಾಜಕೀಯಕ್ಕೆ ಬರುವ ಮುನ್ನವೇ ಅವರು ತಮ್ಮ ಸಮಾಜಮುಖಿ ಕೆಲಸಗಳ ಮೂಲಕ ಜನರ ಶ್ರೇಯೋಭಿವೃದ್ಧಿಗಾಗಿ ದುಡಿಯತೊಡಗಿದರು. ಅದೂ ಪ್ರಚಾರವಿಲ್ಲದೆ. ಯಾರಾದರೂ ಕಷ್ಟವನ್ನು ಅವರ ಮುಂದೆ ಹೇಳಿಕೊಂಡರೆ ಸಾಕು ಅವರ ಕಣ್ಣುಗಳು ತೇವವಾಗುತ್ತವೆ ಎನ್ನುತ್ತಾರೆ ಅವರು.

Continue Reading

ಮಾಲಿವುಡ್

Parvathi Menon: ಸದ್ದಿಲ್ಲದೇ ಮದುವೆಯಾದ್ರಾ ʻಮಿಲನʼ ನಾಯಕಿ ಪಾರ್ವತಿ ಮೆನನ್?

Parvathi Menon: ಪುನೀತ್ ರಾಜ್ ಕುಮಾರ್ ಅಭಿನಯದ ”ಮಿಲನ” ಚಿತ್ರದ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದ ಪಾರ್ವತಿ ಆ ನಂತರ ”ಮಳೆ ಬರಲಿ ಮಂಜೂ ಇರಲಿ’,. ”ಪೃಥ್ವಿ”, ”ಅಂದರ್ ಬಾಹರ್‌” ಚಿತ್ರಗಳಲ್ಲಿ ನಟಿಸಿದರು. ಪಾರ್ವತಿ ಮೆನನ್ (Parvathi Menon) ಸದ್ದಿಲ್ಲದೇ ಮದುವೆಯಾದರಾ ಅನ್ನುವ ಅನುಮಾನ ನಟಿಯ ಅಭಿಮಾನಿಗಳನ್ನು ಕಾಡುತ್ತಿದೆ.

VISTARANEWS.COM


on

Parvathi Menon secretly marry prashant murali
Koo

ಪುನೀತ್ ರಾಜ್ ಕುಮಾರ್ ಅಭಿನಯದ ”ಮಿಲನ” ಚಿತ್ರದ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದ ಪಾರ್ವತಿ ಮೆನನ್ (Parvathi Menon) ಸದ್ದಿಲ್ಲದೇ ಮದುವೆಯಾದರಾ ಅನ್ನುವ ಅನುಮಾನ ನಟಿಯ ಅಭಿಮಾನಿಗಳನ್ನು ಕಾಡುತ್ತಿದೆ.

ಪಾರ್ವತಿ ಇನ್ನೂ ಮದುವೆಯಾಗಿಲ್ಲ. ಈ ನಡುವೆ ಪಾರ್ವತಿ ಮೆನನ್ ಗುಟ್ಟುಗುಟ್ಟಾಗಿ ಮದುವೆಯಾಗಿದ್ದಾರೆ ಎಂಬ ವದಂತಿ ಹಬ್ಬಿದೆ. ಕಾರಣ ವೈರಲ್‌ ಆಗಿರುವ ಫೋಟೊ. ಆದರೆ ಸತ್ಯ ಸಂಗತಿ ಏನೆಂದರೆ ವೈರಲ್ ಆದ ಈ ಫೋಟೋಗಳು ಪಾರ್ವತಿ ಮೆನನ್ ಅವರ ಖಾಸಗಿ ಬದುಕಿನದ್ದಲ್ಲ ಬದಲಿಗೆ ಸಿನಿಮಾಗೆ ಸಂಬಂಧಿಸಿದ್ದು.

ಇದನ್ನೂ ಓದಿ: Dolly Dhananjay: ದಾವಣಗೆರೆಯಲ್ಲಿ ‘ಕೋಟಿ’ ಅಬ್ಬರ; ಜೂನ್ 14ರಂದು ಸಿನಿಮಾ ತೆರೆಗೆ!

ಪಾರ್ವತಿ ಮೆನನ್ ”ಉಲ್ಲೋಜುಕ್ಕು” ಎಂಬ ಚಿತ್ರವೊಂದರಲ್ಲಿ ನಟಿಸಿದ್ದಾರೆ. ಪ್ರಶಾಂತ್ ಮುರಳಿ ಈ ಚಿತ್ರದ ನಾಯಕ. ಈ ಸಿನಿಮಾ ಪ್ರೋಮೊ ಈ ಮದುವೆ ಸೀನ್‌. ರೀಲ್‌ನಲ್ಲಿ ಆಗಷ್ಟೇ ಮದುವೆಯಾದ ಹಿನ್ನೆಲೆ ದೋಣಿಯಲ್ಲಿ ಕುಳಿತು ಕ್ಯಾಮರಾಗಳಿಗೆ ಫೋಸ್ ನೀಡಿದ್ದಾರೆ. ಹೀಗೆ ತೆಗೆಯಲಾದ ಈ ಫೋಟೋಗಳೇ ಇದೀಗ ವೈರಲ್ ಆಗಿವೆ.

ಪುನೀತ್ ರಾಜ್ ಕುಮಾರ್ ಅಭಿನಯದ ”ಮಿಲನ” ಚಿತ್ರದ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದ ಪಾರ್ವತಿ ಆ ನಂತರ ”ಮಳೆ ಬರಲಿ ಮಂಜೂ ಇರಲಿ’,. ”ಪೃಥ್ವಿ”, ”ಅಂದರ್ ಬಾಹರ್‌” ಚಿತ್ರಗಳಲ್ಲಿ ನಟಿಸಿದರು.

Continue Reading

ಮಾಲಿವುಡ್

All We Imagine As Light: ʻದಿ ಕೇರಳ ಸ್ಟೋರಿʼ ಸಿನಿಮಾ ಆಡಿಷನ್‌ ರಿಜೆಕ್ಟ್‌ ಮಾಡಿದ್ರಂತೆ ಕಾನ್‌ ಪ್ರಶಸ್ತಿ ವಿಜೇತೆ!

All We Imagine As Light : ‘ಆಲ್ ವಿ ಇಮ್ಯಾಜಿನ್ ಆಸ್ ಲೈಟ್’ (All We Imagine as Light) ಸಿನಿಮಾ ಕಾನ್​ನ ಗ್ರ್ಯಾಂಡ್​ ಪ್ರಿಕ್ಸ್ ಪ್ರೈಜ್ ಪಡೆದ ಮೊದಲ ಭಾರತೀಯ ಸಿನಿಮಾ ಎನಿಸಿಕೊಂಡಿತ್ತು. ʻ ಆಲ್ ವಿ ಇಮ್ಯಾಜಿನ್ ಆಸ್ ಲೈಟ್‌ʼನಲ್ಲಿನ ಅಭಿನಯಕ್ಕಾಗಿ ಮಲಯಾಳಂ ನಟಿ ʻಕಣಿ ಕುಸರುತಿʼ (Kani Kusruti ) ಜಾಗತಿಕ ಮೆಚ್ಚುಗೆಯನ್ನು ಗಳಿಸಿದರು.

VISTARANEWS.COM


on

All We Imagine As Light actor rejected audition call by The Kerala Story
Koo

ಬೆಂಗಳೂರು: ಗ್ರ್ಯಾಂಡ್​ ಪ್ರಿಕ್ಸ್ ಪ್ರೈಜ್ ಪ್ರಶಸ್ತಿ ಕಾನ್ ಸಿನಿಮೋತ್ಸವದ ಎರಡನೇ ಅತ್ಯುತ್ತಮ ಪ್ರಶಸ್ತಿಯಾಗಿದೆ. ಪಾಯಲ್ ಕಪಾಡಿಯಾ ನಿರ್ದೇಶನದ ‘ಆಲ್ ವಿ ಇಮ್ಯಾಜಿನ್ ಆಸ್ ಲೈಟ್’ (All We Imagine as Light) ಸಿನಿಮಾ ಕಾನ್​ನ ಗ್ರ್ಯಾಂಡ್​ ಪ್ರಿಕ್ಸ್ ಪ್ರೈಜ್ ಪಡೆದ ಮೊದಲ ಭಾರತೀಯ ಸಿನಿಮಾ ಎನಿಸಿಕೊಂಡಿತ್ತು. ʻ ಆಲ್ ವಿ ಇಮ್ಯಾಜಿನ್ ಆಸ್ ಲೈಟ್‌ʼನಲ್ಲಿನ ಅಭಿನಯಕ್ಕಾಗಿ ಮಲಯಾಳಂ ನಟಿ ʻಕಣಿ ಕುಸರುತಿʼ (Kani Kusruti ) ಜಾಗತಿಕ ಮೆಚ್ಚುಗೆಯನ್ನು ಗಳಿಸಿದರು. ಕಣಿ ಕುಸರುತಿ ನೀಡಿದ ಸಂದರ್ಶನದಲ್ಲಿ, ʻʻಕಡಿಮೆ ಸಿನಿಮಾಗಳು ನನಗೆ ಆಫರ್‌ ಬಂದಿದ್ದವು. ಹಾಗೇ ನಿರ್ದೇಶಕ ಸುದೀಪ್ತೋ ಸೇನ್ ಅವರ ʻದಿ ಕೇರಳ ಸ್ಟೋರಿʼ ಸಿನಿಮಾ ಆಡಿಷನ್‌ ಕರೆ ಬಂದಿತ್ತು. ಅದನ್ನು ಕೂಡ ರಿಜೆಕ್ಟ್‌ ಮಾಡಿದ್ದೆʼʼಎಂದು ಹೇಳಿಕೊಂಡಿದ್ದಾರೆ.

ನಟಿ ಮಾತನಾಡಿ ʻʻನನಗೆ ಬಂದ ಸಿನಿಮಾಗಳನ್ನು ಮಾತ್ರ ನಾನು ಮಾಡಬಲ್ಲೆ. ಸಜಿನ್ ಬಾಬು ಅವರ 2019 ರ ಬಿಡುಗಡೆಯಾದ ʻಬಿರಿಯಾನಿʼ ಸಿನಿಮಾ ನಟನೆಗೆ ಕೇರಳ ರಾಜ್ಯ ಪ್ರಶಸ್ತಿಯನ್ನು ಗೆದ್ದಿದ್ದೆ. ಆದರೆ ನನಗೆ ಹೊಂದಿಕೆಯಾಗದ ಚಿತ್ರಗಳನ್ನು ಮಾಡದಿರಲು ಪ್ರಯತ್ನಿಸುತ್ತೇನೆ. ಉದಾಹರಣೆಗೆ ಕಳೆದ ವರ್ಷ ಬ್ಲಾಕ್‌ ಬಸ್ಟರ್‌ ಹಿಟ್‌ ಆದ ʻದಿ ಕೇರಳ ಸ್ಟೋರಿʼ ಸಿನಿಮಾ. ನಿರ್ದೇಶಕ ಸುದೀಪ್ತೋ ಸೇನ್ ಅವರು ಆಡಿಷನ್‌ಗೆ ಕರೆದಿದ್ದರು. ಆದರೆ ನಾನು ರಿಜೆಕ್ಟ್‌ ಮಾಡಿದ್ದೆʼʼ ಎಂದು ಬಹಿರಂಗಪಡಿಸಿದರು.

ಈ ಹಿಂದೆ ʻಬಿರಿಯಾನಿʼ ಸಿನಿಮಾದಲ್ಲಿ ಕಣಿ ಕುಸರುತಿ ಸಾಕಷ್ಟು ವಿವಾದಗಳನ್ನು ಎದುರಿಸಿದ್ದರು. ಈ ಬಗ್ಗೆಯೂ ನಟಿ ಹೇಳಿಕೊಂಡಿದ್ದಾರೆ. ʻʻಬಿರಿಯಾನಿ ಸಿನಿಮಾ ವೇಳೆ ನಾನು ಆ ಸ್ಕ್ರಿಪ್ಟ್‌ಗೆ ಹೊಂದಿಕೆಯಾಗುವುದಿಲ್ಲ ಎಂದು ನಾನು ನಿರ್ದೇಶಕ ಸಜಿನ್‌ಗೆ ಹೇಳಿದ್ದೆ. ಸಜಿನ್ ಹಿಂದುಳಿದ ಮುಸ್ಲಿಂ ಸಮುದಾಯದಿಂದ ಬಂದವರು. ಅವರು ಅವರ ಸ್ಥಾನದಲ್ಲಿಯೇ ಯೋಚಿಸುತ್ತಿದ್ದರು. ಅವರ ರಾಜಕೀಯವನ್ನು ಮಾತ್ರ ಮಾತನಾಡುತ್ತಿದ್ದರುʼʼಎಂದರು.

ಇದನ್ನೂ ಓದಿ: Kendall Jenner: ತಿಂಗಳಲ್ಲಿ ಎರಡು ಬಾರಿ ಟಾಪ್‌ಲೆಸ್‌ ಆದ ಹಾಲಿವುಡ್‌ ಬ್ಯೂಟಿ ಕೆಂಡಲ್‌ ಜೆನ್ನರ್‌!

ಪಾಯಲ್ ನಿರ್ದೇಶನದ ‘ಆಲ್ ವಿ ಇಮ್ಯಾಜಿನ್ ಆಸ್ ಲೈಟ್’ (All We Imagine as Light) ಸಿನಿಮಾ ಕಾನ್​ನ ಗ್ರ್ಯಾಂಡ್​ ಪ್ರಿಕ್ಸ್ ಪ್ರೈಜ್ ( Grand Prix At Cannes) ಪಡೆದ ಮೊದಲ ಭಾರತೀಯ ಸಿನಿಮಾ ಎನಿಸಿಕೊಂಡಿದೆ .77ನೇ ಆವೃತ್ತಿಯ ಕಾನ್ ಫಿಲ್ಮ್ಸ್‌ ಫೆಸ್ಟಿವಲ್‌ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ನೀಡಲಾಗಿತ್ತು. ಸಿನಿಮಾ ಕಾನ್​ನಲ್ಲಿ ಪ್ರದರ್ಶನವಾದಾಗ ಬರೋಬ್ಬರಿ ಎಂಟು ನಿಮಿಷಗಳ ಸ್ಟಾಂಡಿಂಗ್ ಓವಿಯೇಷನ್ ಈ ಸಿನಿಮಾಕ್ಕೆ ದೊರೆತಿತ್ತು.

ಆಲ್ ವಿ ಇಮ್ಯಾಜಿನ್ ಆಸ್ ಲೈಟ್’ ಸಿನಿಮಾವು ಮಲಯಾಳಂ-ಹಿಂದಿ ಸಿನಿಮಾ ಆಗಿದೆ. ಆಸ್ಪತ್ರೆಯಲ್ಲಿ ನರ್ಸ್‌ಗಳಾಗಿ ಸೇವೆ ಸಲ್ಲಿಸುವ ಇಬ್ಬರು ರೂಮ್‌ಮೇಟ್‌ಗಳ ಕಥೆ ಇದರಲ್ಲಿದೆ. ಚಿತ್ರವು ಮೂರು ವಿಭಿನ್ನ ಮಹಿಳೆಯರ ನಡುವಿನ ಸ್ನೇಹದ ಕತೆ ಕೂಡ ಇದೆ. ಕನಿ ಕುಸರುತಿ ಮುಂದೆ ಡಿಸ್ನಿ+ ಹಾಟ್‌ಸ್ಟಾರ್‌ನಲ್ಲಿ ನಾಗೇಂದ್ರ ಅವರ ಮಲಯಾಳಂ ಸಿರೀಸ್‌ ಹನಿಮೂನ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

Continue Reading

South Cinema

 L2 Empuraan: ಮೋಹನ್‌ಲಾಲ್ ಬರ್ತ್‌ಡೇ; L2E-ಎಂಪುರಾನ್‌ ಲುಕ್‌ ಔಟ್‌!

 L2 Empuraan: ಈ ಚಿತ್ರವನ್ನು ಆಶೀರ್ವಾದ್ ಸಿನಿಮಾಸ್ ಮತ್ತು ಲೈಕಾ ಪ್ರೊಡಕ್ಷನ್ಸ್ ಜಂಟಿಯಾಗಿ ನಿರ್ಮಿಸಲಿವೆ. ಇದು ಮಲಯಾಳಂ, ತಮಿಳು, ತೆಲುಗು, ಕನ್ನಡ ಮತ್ತು ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಲೂಸಿಫರ್ 2019ರಲ್ಲಿ ಬಿಡುಗಡೆಗೊಂಡು ಬ್ಲಾಕ್‌ಬಸ್ಟರ್‌ ಹಿಟ್‌ ಆಯಿತು. ಮಲಯಾಳಂ ಚಿತ್ರರಂಗದ ಇತಿಹಾಸದಲ್ಲಿ ಅತಿದೊಡ್ಡ ಗಳಿಕೆಗಳಲ್ಲಿ ಒಂದಾಯಿತು.

VISTARANEWS.COM


on

L2 Empuraan first look poster shared by Prithviraj Sukumaran
Koo

ಬೆಂಗಳೂರು: ಇಂದು ಮಾಲಿವುಡ್‌ ಸ್ಟಾರ್‌ ಮೋಹನ್‌ಲಾಲ್ (Mohanlal as Khureshi Abraam ) ಅವರ 64ನೇ ಹುಟ್ಟುಹಬ್ಬದ ಸಂಭ್ರಮ. ಈ ವಿಶೇಷ ದಿನದಂದು ನಟ ಪೃಥ್ವಿರಾಜ್ ಸುಕುಮಾರನ್ ʻL2 ಎಂಪುರಾನ್‌ʼ (L2 Empuraan) ಹೊಸ ಪೋಸ್ಟರ್ ಹಂಚಿಕೊಂಡಿದ್ದಾರೆ. ಪೃಥ್ವಿರಾಜ್ ಅವರ ನಿರ್ದೇಶನದಲ್ಲಿ, ಮೋಹನ್‌ಲಾಲ್ ಮುಖ್ಯ ಪಾತ್ರದಲ್ಲಿ ನಟಿಸಿರುವ ಈ ಚಿತ್ರ 2019ರ ಬ್ಲಾಕ್‌ಬಸ್ಟರ್ ಚಲನಚಿತ್ರ ʻಲೂಸಿಫರ್‌ʼನ ಮುಂದುವರಿದ ಭಾಗವಾಗಿದೆ.

ʻL2 ಎಂಪುರಾನ್‌ʼಗಾಗಿ ಮೋಹನ್‌ಲಾಲ್‌ನ ಜಾಕೆಟ್ ಮತ್ತು ಪ್ಯಾಂಟ್‌ ಧರಿಸಿದ್ದಾರೆ. ಭದ್ರತಾ ಸಿಬ್ಬಂದಿಗಳ ನಡುವೆ ಖಡಕ್‌ ಆಗಿ ನಡೆದುಕೊಂಡು ಹೋಗುತ್ತಿರುವ ಪೋಸ್ಟರ್‌ ಇದು. ಲೂಸಿಫರ್ ಪೃಥ್ವಿರಾಜ್ ಅವರ ನಿರ್ದೇಶನದ ಚೊಚ್ಚಲ ಚಿತ್ರವಾಗಿತ್ತು. ಅದಾದ ಬಳಿಕ ʻಬ್ರೋ ಡ್ಯಾಡಿʼ ಸಿನಿಮಾವನ್ನು ಒಟ್ಟಿಗೆ ಮಾಡಿದ್ದರು. ಮತ್ತೆ ಈ ಜೋಡಿ L2E-ಎಂಪುರಾನ್‌ ಮೂಲಕ ಒಂದಾಗಿದೆ.

ಈ ಚಿತ್ರವನ್ನು ಆಶೀರ್ವಾದ್ ಸಿನಿಮಾಸ್ ಮತ್ತು ಲೈಕಾ ಪ್ರೊಡಕ್ಷನ್ಸ್ ಜಂಟಿಯಾಗಿ ನಿರ್ಮಿಸಲಿವೆ. ಇದು ಮಲಯಾಳಂ, ತಮಿಳು, ತೆಲುಗು, ಕನ್ನಡ ಮತ್ತು ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಲೂಸಿಫರ್ 2019ರಲ್ಲಿ ಬಿಡುಗಡೆಗೊಂಡು ಬ್ಲಾಕ್‌ಬಸ್ಟರ್‌ ಹಿಟ್‌ ಆಯಿತು. ಮಲಯಾಳಂ ಚಿತ್ರರಂಗದ ಇತಿಹಾಸದಲ್ಲಿ ಅತಿದೊಡ್ಡ ಗಳಿಕೆಗಳಲ್ಲಿ ಒಂದಾಯಿತು. ಮೋಹನ್‌ಲಾಲ್ ಅವರಲ್ಲದೆ, ಚಿತ್ರದಲ್ಲಿ ವಿವೇಕ್ ಒಬೆರಾಯ್, ಮಂಜು ವಾರಿಯರ್, ಟೊವಿನೋ ಥಾಮಸ್, ಪೃಥ್ವಿರಾಜ್ ಸುಕುಮಾರನ್, ಇಂದ್ರಜಿತ್ ಸುಕುಮಾರನ್, ಸಾನಿಯಾ ಐಯಪ್ಪನ್, ಸಾಯಿ ಕುಮಾರ್, ಜಾನ್ ವಿಜಯ್, ಸಚಿನ್ ಖೇಡೇಕರ್, ಬೈಜು ಸಂತೋಷ್, ಕಲಾಭವನ್ ಶಾಜೋನ್, ಫಾಜಿಲ್, ಸುರೇಶ್ ಚಂದ್ರ ಮೆನನ್ ಮತ್ತು ನೈಲಾ ಉಷಾ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: Actress Murder: ‘ಭಜರಂಗಿ’ ಸಿನಿಮಾ ನಟಿ ಗಂಡನಿಂದಲೇ ಭೀಕರ ಕೊಲೆ!

ಮೋಹನ್ ಲಾಲ್ ಕೊನೆಯದಾಗಿ ಕಾಣಿಸಿಕೊಂಡದ್ದು ಫ್ಯಾಂಟಸಿ ನಾಟಕ ಮಲೈಕೊಟ್ಟೈ ವಾಲಿಬನ್ (2024), ಇದನ್ನು ಲಿಜೋ ಜೋಸ್ ಪೆಲ್ಲಿಸ್ಸೆರಿ ನಿರ್ದೇಶಿಸಿದ್ದಾರೆ.

ಮೋಹನ್‌ಲಾಲ್‌ ಜತೆ ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ

ನಂದಕಿಶೋರ್ ಅವರು ಮಲಯಾಳಂ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಮಾಲಿವುಡ್‌ ಸ್ಟಾರ್‌ ಮೋಹನ್ ಲಾಲ್ (Actor Mohan Lal) ಅವರಿಗೆ ನಂದಕಿಶೋರ್ ಸಿನಿಮಾ ಮಾಡುತ್ತಿದ್ದಾರೆ. ಅಷ್ಟೇ ಅಲ್ಲದೇ ಈ ಸಿನಿಮಾಗೆ ಏಕ್ತಾ ಕಪೂರ್‌ ಅವರ ಸಹ ನಿರ್ಮಾಣವಿದೆ. ಈ ಬಹುನಿರೀಕ್ಷಿತ ಚಿತ್ರದ ಶೂಟಿಂಗ್​ ಆರಂಭ ಆಗಿದೆ. ಈ ಚಿತ್ರದ ಪಾತ್ರವರ್ಗ ಗಮನ ಸೆಳೆಯುತ್ತಿದೆ. ಈಗ ರಾಗಿಣಿ ದ್ವಿವೇದಿ (Ragini Dwivedi) ಅವರು ನಟ ಮೋಹನ್​ಲಾಲ್​ ಜತೆ ನಟಿಸುತ್ತಿದ್ದಾರೆ. ಮೋಹನ್​ಲಾಲ್​ ಅಭಿನಯದ ‘ವೃಷಭ’ ಸಿನಿಮಾ ಮೇಲೆ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ.

Continue Reading
Advertisement
Yuva Rajkumar
ಕರ್ನಾಟಕ2 hours ago

Yuva Rajkumar: ‘ಅನೈತಿಕ ಸಂಬಂಧ’ ಎಂದು ಯುವ ಪರ ವಕೀಲ ಆರೋಪ; ತಿರುಗೇಟು ಕೊಟ್ಟ ಶ್ರೀದೇವಿ!

Yuva Rajkumar
ಪ್ರಮುಖ ಸುದ್ದಿ3 hours ago

Yuva Rajkumar: ಹಲ್ಲು ಉಜ್ಜಲ್ಲ, ಸ್ನಾನ ಮಾಡಲ್ಲ, ಫಿಟ್ ಇಲ್ಲ ಎಂದು ಕಿರುಕುಳ ಕೊಡುತ್ತಿದ್ದ ಯುವ ಪತ್ನಿ!: ವಕೀಲರ ಆರೋಪ

Minister Dinesh Gundurao instructed to prepare for the disaster management that may occur on the coast during rainy season.
ದಕ್ಷಿಣ ಕನ್ನಡ4 hours ago

Mangalore News: ಸಿಡಿಲ ಅಪಾಯ ಇರುವ ಸ್ಥಳಗಳಲ್ಲಿ ಮಿಂಚು ಪ್ರತಿಬಂಧಕ ವ್ಯವಸ್ಥೆ; ಸರ್ಕಾರದ ನಿರ್ಧಾರ

Inauguration of Pushpam Ayurveda Wellness Center in Bengaluru
ಬೆಂಗಳೂರು4 hours ago

Bengaluru News: ಬೆಂಗಳೂರಿನಲ್ಲಿ ಪುಷ್ಪಮ್ ಆಯುರ್ವೇದ ವೆಲ್‌ನೆಸ್ ಸೆಂಟರ್‌ಗೆ ಚಾಲನೆ

Kalki 2898 AD Trailer Released on Vyjayanthi Movies YouTube Channel
ಕರ್ನಾಟಕ4 hours ago

Kalki 2898 AD: ಮೈನವಿರೇಳಿಸುವ ‘ಕಲ್ಕಿ 2898 AD’ ಚಿತ್ರದ ಟ್ರೇಲರ್‌ ರಿಲೀಸ್‌!

Mohan Bhagwat
ದೇಶ4 hours ago

Mohan Bhagwat: ಮಣಿಪುರ ಹಿಂಸೆ ನಿಲ್ಲಿಸಿ; ಅಧಿಕಾರ ಹಿಡಿದ ಮೋದಿಗೆ ಟಾಸ್ಕ್‌ ಕೊಟ್ಟ ಮೋಹನ್‌ ಭಾಗವತ್!

Stabbing Case
ಕರ್ನಾಟಕ5 hours ago

Stabbing Case: ಬಿಜೆಪಿ ಕಾರ್ಯಕರ್ತರಿಗೆ ಚೂರಿ ಇರಿತ ಪ್ರಕರಣ; ಐವರು ಆರೋಪಿಗಳ ಬಂಧನ

Yuva Rajkumar
ಕರ್ನಾಟಕ5 hours ago

Yuva Rajkumar: ಶ್ರೀದೇವಿ ಭೈರಪ್ಪಗೆ ಅಕ್ರಮ ಸಂಬಂಧ; ಯುವ ರಾಜ್‌ಕುಮಾರ್ ಪರ ವಕೀಲ ಸ್ಫೋಟಕ ಹೇಳಿಕೆ

Modi 3.0 Cabinet
ದೇಶ6 hours ago

Modi 3.0 Cabinet: ಮೋದಿಗೆ ಬಾಹ್ಯಾಕಾಶ, ಅಮಿತ್‌ ಶಾಗೆ ಗೃಹ ಖಾತೆ; ಇಲ್ಲಿದೆ 72 ಸಚಿವರು ಹಾಗೂ ಖಾತೆಗಳ ಪಟ್ಟಿ

ಕರ್ನಾಟಕ6 hours ago

Modi 3.0 Cabinet: ಜೋಶಿಗೆ ಆಹಾರ, ಎಚ್‌ಡಿಕೆಗೆ ಬೃಹತ್ ಕೈಗಾರಿಕೆ‌, ನಿರ್ಮಲಾಗೆ ವಿತ್ತ, ಸೋಮಣ್ಣಗೆ ಡಬಲ್‌ ಖುಷಿ, ಶೋಭಾಗೆ MSME

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ10 hours ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ3 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ3 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ7 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ1 week ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ1 week ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ2 weeks ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

ಟ್ರೆಂಡಿಂಗ್‌