Budget 2023 : ಕೇಂದ್ರ ಬಜೆಟ್‌ ಅಧಿವೇಶನ ಮಂಗಳವಾರ ಆರಂಭ, ಆರ್ಥಿಕ ಸಮೀಕ್ಷೆ ಮಂಡನೆ - Vistara News

ಪ್ರಮುಖ ಸುದ್ದಿ

Budget 2023 : ಕೇಂದ್ರ ಬಜೆಟ್‌ ಅಧಿವೇಶನ ಮಂಗಳವಾರ ಆರಂಭ, ಆರ್ಥಿಕ ಸಮೀಕ್ಷೆ ಮಂಡನೆ

ಮುಂಬರುವ ಸಾರ್ವತ್ರಿಕ ಚುನಾವಣೆಗೆ ಮುನ್ನ ಪೂರ್ಣ ಪ್ರಮಾಣದ ಕೊನೆಯ ಬಜೆಟ್‌ ( Budget 2023 ) ಇದಾಗಿರುವುದರಿಂದ ತೀವ್ರ ಕುತೂಹಲ ಮೂಡಿಸಿದೆ.

VISTARANEWS.COM


on

cash
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಫೆಬ್ರವರಿ 1ರಂದು ಬಹು ನಿರೀಕ್ಷಿತ 2023-24ರ ಸಾಲಿನ ಕೇಂದ್ರ ಬಜೆಟ್‌ ಮಂಡನೆಯಾಗಲಿದೆ. ಇದಕ್ಕೂ ಮುನ್ನ ಸಂಸತ್ತಿನಲ್ಲಿ ಮಂಗಳವಾರ (ಜನವರಿ 31) ೨೦೨೩-೨೪ರ ಆರ್ಥಿಕ ಸಮೀಕ್ಷೆಯನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮಂಡಿಸಲಿದ್ದಾರೆ. ಇದರೊಂದಿಗೆ ಬಜೆಟ್‌ ಅಧಿವೇಶನ ಶುರುವಾಗಲಿದೆ. ಆದಾಯ ತೆರಿಗೆ ದರಗಳು ಮತ್ತು ಆದಾಯ ತೆರಿಗೆ ಶ್ರೇಣಿಗಳಲ್ಲಿ ಕೆಲ ಬದಲಾವಣೆಗಳು ಆಗಬಹುದು ಎಂಬ ನಿರೀಕ್ಷೆ ಜನ ಸಾಮಾನ್ಯರಲ್ಲಿದೆ. 2024ರ ಸಾರ್ವತ್ರಿಕ ಚುನಾವಣೆಗೆ ಮುನ್ನ ಕೊನೆಯ ಪೂರ್ಣಪ್ರಮಾಣದ ಬಜೆಟ್‌ ಇದಾಗಿರುವುದರಿಂದ ಜನಪ್ರಿಯ ಬಜೆಟ್‌ ಮಂಡನೆಯಾಗಬಹುದು ಎನ್ನುತ್ತಾರೆ ವಿಶ್ಲೇಷಕರು.

ವಿದ್ಯುತ್‌ ಬಿಲ್‌ಗೆ ಸಬ್ಸಿಡಿ, ಬೆಲೆ ಏರಿಕೆಯಿಂದ ರಿಲೀಫ್‌ ಅನ್ನು ಜನ ಸಾಮಾನ್ಯರು ಬಯಸುತ್ತಿದ್ದಾರೆ. ಜಾಗತಿಕ ಆರ್ಥಿಕತೆ ಮಂದಗತಿಯಲ್ಲಿ ಇರುವುದರಿಂದ ಬಿಸಿನೆಸ್‌ ಸಮುದಾಯ ಅನಿಶ್ಚಿತತೆ ಎದುರಿಸುತ್ತಿದೆ. ಹೀಗಾಗಿ ಉದ್ದಿಮೆ ಸ್ನೇಹಿ ಉಪಕ್ರಮಗಳನ್ನು ಕೈಗೊಳ್ಳುವ ನಿರೀಕ್ಷೆಯೂ ಇದೆ.

ವೇತನದಾರರು ಆದಾಯ ತೆರಿಗೆ ವಿನಾಯಿತಿಯ ಮಿತಿ ವಿಸ್ತರಣೆ, ಸ್ಟ್ಯಾಂಡರ್ಡ್‌ ಡಿಡಕ್ಷನ್‌ ಮಿತಿಯನ್ನು ಈಗಿನ 50,000 ರೂ.ಗಳಿಂದ 1 ಲಕ್ಷ ರೂ.ಗೆ ಏರಿಕೆ ನಿರೀಕ್ಷಿಸುತ್ತಿದ್ದಾರೆ. ಈ ನಡುವೆ ಸಣ್ಣ ತೆರಿಗೆದಾರರಿಗೆ ರಿಲೀಫ್‌ ನೀಡಬೇಕು ಎಂದು ಕೈಗಾರಿಕಾ ವಲಯದ ಸಂಘಟನೆ ಫಿಕ್ಕಿ ಒತ್ತಾಯಿಸಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Paris Olympics 2024 : ಪುರಷರ 10 ಮೀಟರ್​ ಏರ್​ರೈಫಲ್​​ ಸ್ಪರ್ಧೆಯಲ್ಲಿ ಫೈನಲ್​ಗೇರಿದ ಅರ್ಜುನ್ ಬಬುಟಾ

Paris Olympics 2024 : 2016 ರಿಂದ ರಾಷ್ಟ್ರೀಯ ತಂಡದಲ್ಲಿ ಇರುವ ಚಂಡೀಗಢದ ಬಬುತಾ, ಕಳೆದ ವರ್ಷ ಚಾಂಗ್ವಾನ್​​ನಲ್ಲಿ ನಡೆದ ಏಷ್ಯನ್ ಶೂಟಿಂಗ್ ಚಾಂಪಿಯನ್ಶಿಪ್​​ಶಿಪ್​ ಮೂಲಕ ಒಲಿಂಪಿಕ್ ಅರ್ಹತೆ ಪಡೆದಿದ್ದರು. ಏಪ್ರಿಲ್-ಮೇ ತಿಂಗಳಲ್ಲಿ ನಡೆದ ಆಯ್ಕೆ ಟ್ರಯಲ್ಸ್​​ನಲ್ಲಿ ವಿಶ್ವ ಚಾಂಪಿಯನ್ ರುದ್ರಾಕ್ಷ್ ಪಾಟೀಲ್ ಅವರನ್ನು ಸೋಲಿಸಿದ ನಂತರ ತಮ್ಮ ಚೊಚ್ಚಲ ಒಲಿಂಪಿಕ್ಸ್​ಗೆ ಅವರು ಪ್ರವೇಶ ಪಡೆದುಕೊಂಡಿದ್ದರು.

VISTARANEWS.COM


on

Koo

ನವದೆಹಲಿ: ಪ್ಯಾರಿಸ್​ ಒಲಿಂಪಿಕ್ಸ್​ನ ಕ್ರೀಡಾಕೂಟದ 10 ಮೀಟರ್ ಏರ್ ರೈಫಲ್ ಸ್ಪರ್ಧೆಯ ಫೈನಲ್​ಗೆ ಭಾರತದ ಶೂಟರ್ ಅರ್ಜುನ್ ಬಬುಟಾ ಭಾನುವಾರ ಅರ್ಹತೆ ಗಳಿಸಿದ್ದಾರೆ. ಅರ್ಹತಾ ಸುತ್ತಿನಲ್ಲಿ ಏಳನೇ ಸ್ಥಾನ ಪಡೆದ ಅವರು ಪ್ರಶಸ್ತಿ ಸುತ್ತಿಗೆ ಏರಿದ್ದಾರೆ. 25ರ ವರ್ಷದ ಬಬುಟಾ 105.7, 104.9, 105.5, 105.4, 104.0 ಮತ್ತು 104.6 ಅಂಕಗಳೊದಿಗೆ ಒಟ್ಟಾರೆ 630.1 ಅಂಕಗಳನ್ನು ಗಳಿಸಿ ಅಗ್ರಸ್ಥಾನ ಪಡೆದರು. ಶನಿವಾರ ರಮಿತಾ ಜಿಂದಾಲ್ ಅವರೊಂದಿಗೆ ಮಿಶ್ರ ತಂಡ ಸ್ಪರ್ಧೆಯಲ್ಲಿ ಅಂತಿಮ ಸುತ್ತಿನ ಅವಕಾಶ ಕಳೆದುಕೊಂಡ ಅವರು ಸೋಮವಾರ ಎಂಟು ಶೂಟರ್ ಗಳ ಫೈನಲ್ ನಲ್ಲಿ ಮತ್ತೊಂದು ಸಾಧನೆ ಮಾಡುವ ಅವಕಾಶ ಹೊಂದಿದ್ದಾರೆ.

2016 ರಿಂದ ರಾಷ್ಟ್ರೀಯ ತಂಡದಲ್ಲಿ ಇರುವ ಚಂಡೀಗಢದ ಬಬುತಾ, ಕಳೆದ ವರ್ಷ ಚಾಂಗ್ವಾನ್​​ನಲ್ಲಿ ನಡೆದ ಏಷ್ಯನ್ ಶೂಟಿಂಗ್ ಚಾಂಪಿಯನ್ಶಿಪ್​​ಶಿಪ್​ ಮೂಲಕ ಒಲಿಂಪಿಕ್ ಅರ್ಹತೆ ಪಡೆದಿದ್ದರು. ಏಪ್ರಿಲ್-ಮೇ ತಿಂಗಳಲ್ಲಿ ನಡೆದ ಆಯ್ಕೆ ಟ್ರಯಲ್ಸ್​​ನಲ್ಲಿ ವಿಶ್ವ ಚಾಂಪಿಯನ್ ರುದ್ರಾಕ್ಷ್ ಪಾಟೀಲ್ ಅವರನ್ನು ಸೋಲಿಸಿದ ನಂತರ ತಮ್ಮ ಚೊಚ್ಚಲ ಒಲಿಂಪಿಕ್ಸ್​ಗೆ ಅವರು ಪ್ರವೇಶ ಪಡೆದುಕೊಂಡಿದ್ದರು. ಸೇನಾ ಸಿಬ್ಬಂದಿ ಸಂದೀಪ್ ಸಿಂಗ್ ಇದೇ ಸ್ಪರ್ಧೆಯಲ್ಲಿ 629.3 ಅಂಕಗಳನ್ನು ಗಳಿಸಿ ಪ್ಯಾರಿಸ್ ಅಭಿಯಾನ ಕೊನೆಗೊಳಿಸಿದ್ದಾರೆ. .

ಅರ್ಹತಾ ಸುತ್ತಿನಲ್ಲಿ ಚೀನಾದ ಶೆಂಗ್ ಲಿಹಾವೊ 631.7 ಅಂಕಗಳನ್ನು ಗಳಿಸಿ ಅಗ್ರಸ್ಥಾನ ಪಡೆದರು, ಟೋಕಿಯೊ ಕ್ರೀಡಾಕೂಟದಲ್ಲಿ ದೇಶದ ಯಾಂಗ್ ಹೌರಾನ್ ಸ್ಥಾಪಿಸಿದ ಅರ್ಹತಾ ದಾಖಲೆಯಾದ 632.7 ಕ್ಕಿಂತ ಕೇವಲ ಒಂದು ಅಂಕ ಹಿಂದೆ ಬಿದ್ದಿದ್ದಾರೆ.

ಶೂಟಿಂಗ್​ನಲ್ಲಿ ಫೈನಲ್​ ಪ್ರವೇಶಿಸಿದ ರಮಿತಾ ಜಿಂದಾಲ್; ಭಾರತಕ್ಕೆ 2 ಪದಕ ನಿರೀಕ್ಷೆ

ಪ್ಯಾರಿಸ್​: ಶೂಟಿಂಗ್​ನಲ್ಲಿ(Paris 2024 Shooting) ಭಾರತ ಸದ್ಯ 2 ಪದಕಗಳ ನಿರೀಕ್ಷೆಯಲ್ಲಿದೆ. ಇಂದು ನಡೆದ 10 ಮೀಟರ್ ಮಹಿಳಾ ಏರ್ ರೈಫಲ್ ಸ್ಪರ್ಧೆಯಲ್ಲಿ ಶೂಟರ್ ರಮಿತಾ ಜಿಂದಾಲ್(Ramita Jindal) 631.5 ಅಂಕ ಗಳಿಸಿ 5 ನೇ ಸ್ಥಾನದೊಂದಿಗೆ ಫೈನಲ್‌ಗೆ ಅರ್ಹತೆ ಪಡೆದುಕೊಂಡಿದ್ದಾರೆ. ಆದರೆ, ಅನುಭವಿ ಶೂಟರ್​ ಎಲವೆನಿಲ್ ವಲರಿವನ್(Elavenil Valarivan) 630.7 ಅಂಕ ಗಳಿಸಿ 10ನೇ ಸ್ಥಾನಕ್ಕೆ ತೃಪ್ತಿಪಟ್ಟರು. ಅಗ್ರ 8 ಮಂದಿಗೆ ಫೈನಲ್​ ಪ್ರವೇಶ ಲಭಿಸಿತು.

ಇದನ್ನೂ ಓದಿ: Manu Bhaker : ಭಾರತಕ್ಕೆ ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಮೊದಲ ಪದಕ ತಂದುಕೊಟ್ಟ ಮನು ಭಾಕರ್ ಯಾರು? ಅವರ ಹಿನ್ನೆಲೆಯೇನು?

ರಮಿತಾ ಕಳೆದ 20 ವರ್ಷಗಳಲ್ಲಿ ಮನು ಭಾಕರ್ ನಂತರ ಪದಕ ಸುತ್ತಿಗೆ ತಲುಪಿದ ಎರಡನೇ ಮಹಿಳಾ ಶೂಟರ್ ಎನಿಸಿಕೊಂಡರು. ರಮಿತಾ ತನ್ನ ಕೋಚ್ ಸುಮಾ ಶಿರೂರ್ (ಅಥೆನ್ಸ್ 2004) ನಂತರ ಒಲಿಂಪಿಕ್ ಫೈನಲ್‌ಗೆ ಪ್ರವೇಶಿಸಿದ ಮೊದಲ ಭಾರತೀಯ ಮಹಿಳಾ ರೈಫಲ್ ಶೂಟರ್ ಆಗಿದ್ದಾರೆ. ಎಲವೆನಿಲ್ ವಲರಿವನ್ ಆರಂಭಿಕ ಮೂರು ಸೆಟ್​ಗಳಲ್ಲಿ ಅಗ್ರ 8ರೊಳಗೆ ಕಾಣಿಸಿಕೊಂಡಿದ್ದರೂ ಕೂಡ ಅಂತಿಮ ಮೂರು ಸೆಟ್​ಗಳಲ್ಲಿ ಹಿನ್ನಡೆ ಕಂಡು ಫೈನಲ್​ ಅವಕಾಶ ತಪ್ಪಿಸಿಕೊಂಡರು. ಕನಿಷ್ಠ 8ನೇ ಸ್ಥಾನ ಪಡೆಯುತ್ತಿದ್ದರೂ ಕೂಡ ಅವರಿಗೆ ಫೈನಲ್​ ಟಿಕೆಟ್​ ಲಭಿಸುತ್ತಿತ್ತು.

Continue Reading

ಪ್ರಮುಖ ಸುದ್ದಿ

Manu Bhaker : ಭಾರತಕ್ಕೆ ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಮೊದಲ ಪದಕ ತಂದುಕೊಟ್ಟ ಮನು ಭಾಕರ್ ಯಾರು? ಅವರ ಹಿನ್ನೆಲೆಯೇನು?

Manu Bhaker : ಮನು ಭಾಕರ್​ 221.7 ಅಂಕಗಳೊಂದಿಗೆ ಮೂರನೇ ಸ್ಥಾನ ಪಡೆದು ಸಂಭ್ರಮಿಸಿದ್ದಾರೆ. ಶನಿವಾರ ನಡೆದ ಅರ್ಹತಾ ಸುತ್ತಿನಲ್ಲಿ 4ನೇ ಸ್ಥಾನ ಪಡೆದ ಬಳಿಕ ಅವರು ತಮ್ಮ ಸಾಧನೆಯನ್ನು ಉತ್ತಮಪಡಿಸಿಕೊಂಡಿದ್ದಾರೆ. ಒಲಿಂಪಿಕ್ಸ್ ಪ್ರಾರಂಭವಾದ ದಿನದಿಂದ ಎಲ್ಲರ ಕಣ್ಣುಗಳು ಭಾಕರ್ ಮೇಲೆ ನೆಟ್ಟಿದ್ದವು.

VISTARANEWS.COM


on

Manu Bhaker
Koo

ಬೆಂಗಳೂರು: ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಭಾನುವಾರ ನಡೆದ ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯ ಫೈನಲ್​ನಲ್ಲಿ 22 ವರ್ಷದ ಮನು ಭಾಕರ್ ಕಂಚಿನ ಪದಕ ಗೆಲ್ಲುವ ಮೂಲಕ ಭಾರತದ ಪದಕಗಳ ಖಾತೆ ತೆರೆದಿದ್ದಾರೆ. ಭಾರತದ ಅತಿದೊಡ್ಡ ಸ್ಪರ್ಧಿಗಳಲ್ಲಿ ಒಬ್ಬರಾಗಿದ್ದ ಭಾಕರ್​ ನಿರೀಕ್ಷೆಯಂತೆ ಪದಕ ಗೆದ್ದಿದ್ದು, ಒಲಿಂಪಿಕ್ಸ್ ಪದಕ ಗೆದ್ದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರೆ. ಅಲ್ಲದೆ 2016 ಮತ್ತು 2020ರ ರಿಯೋ ಒಲಿಂಪಿಕ್ಸ್​ನಲ್ಲಿ ಭಾರತ ಶೂಟಿಂಗ್​ನಲ್ಲಿ ಪದಕ ಗೆಲ್ಲದ ಕಾರಣ ದೊಡ್ಡ ಕೊರತೆಯನ್ನು ನೀಗಿಸಿದ್ದಾರೆ.

ಮನು ಭಾಕರ್​ 221.7 ಅಂಕಗಳೊಂದಿಗೆ ಮೂರನೇ ಸ್ಥಾನ ಪಡೆದು ಸಂಭ್ರಮಿಸಿದ್ದಾರೆ. ಶನಿವಾರ ನಡೆದ ಅರ್ಹತಾ ಸುತ್ತಿನಲ್ಲಿ 4ನೇ ಸ್ಥಾನ ಪಡೆದ ಬಳಿಕ ಅವರು ತಮ್ಮ ಸಾಧನೆಯನ್ನು ಉತ್ತಮಪಡಿಸಿಕೊಂಡಿದ್ದಾರೆ. ಒಲಿಂಪಿಕ್ಸ್ ಪ್ರಾರಂಭವಾದ ದಿನದಿಂದ ಎಲ್ಲರ ಕಣ್ಣುಗಳು ಭಾಕರ್ ಮೇಲೆ ನೆಟ್ಟಿದ್ದವು. ಪಿ.ವಿ.ಸಿಂಧು, ಶ್ರೀಜಾ ಅಕುಲಾ ಮತ್ತು ನಿಖಾತ್ ಝರೀನ್ ಎರಡನೇ ದಿನ ಮೇಲುಗೈ ಸಾಧಿಸಿದರೂ ಭಾಕರ್​ ಪದಕವನ್ನೇ ಗೆದ್ದರು.

ಮೂರು ವರ್ಷಗಳ ಹಿಂದೆ ಟೋಕಿಯೊದಲ್ಲಿ ನಡೆದ ಒಲಿಂಪಿಕ್ಸ್​​ನಲ್ಲಿ ಅರ್ಹತಾ ಸುತ್ತಿನಲ್ಲಿ ಬಂದೂಕು ಸರಿಯಾಗಿ ಕಾರ್ಯನಿರ್ವಹಿಸದ ಕಾರಣ ಮನು ಬೇಸರಗೊಂಡಿದ್ದರು. ನಿರಾಶೆಯಿಂದ ಹೊರಬರಲು ಮನುವಿಗೆ ಸಾಕಷ್ಟು ಸಮಯ ಬೇಕಾಗಿತ್ತು. ಇದೀಗ ಖುಷಿ ಹೆಚ್ಚಿಸಿಕೊಂಡಿದ್ದಾರೆ.

ಸ್ಪರ್ಧೆ ನಡೆಯುವ ವೇಳೆ ಮನು ಬೆಳ್ಳಿಯ ಪದಕದ ಸನಿಹವೇ ಇದ್ದರು. ಕೊನೆಯ ಐದು ಸುತ್ತುಗಳಲ್ಲಿ ಮೂರನೇ ಸ್ಥಾನದಲ್ಲಿದ್ದ ಅವರು ಎರಡನೇ ಸ್ಥಾನಕ್ಕೆ ಏರಿದ್ದರು. ಆದರೆ ಆದರೆ, ಅಂತಿ ಸುತ್ತಿನಲ್ಲಿ ಕೊರಿಯಾದ ಯೆಗಿ 10.5 ಅಂಕಗಳನ್ನು ಗಳಿಸಿ ಎರಡನೇ ಸ್ಥಾನ ಪಡೆದರು. ಕೊರಿಯಾದ ಓಹ್ ಯೆ ಜಿನ್ 243.2 ಅಂಕಗಳ ಮೂಲಕ ಚಿನ್ನದ ಪದಕ ಗೆದ್ದರು.

ಮನು ಭಾಕರ್ ಯಾರು ಮತ್ತು ಅವರ ಪ್ರಯಾಣ ಹೇಗಿತ್ತು?

ಭಾರತದಲ್ಲಿ ಅತಿ ಹೆಚ್ಚು ಕ್ರೀಡಾಪಟುಗಳನ್ನು ಹೊಂದಿರುವ ರಾಜ್ಯವಾದ ಹರಿಯಾಣದ ಮೂಲದ ಮನು ಶೂಟಿಂಗ್ ನಲ್ಲಿ ಪಾರಮ್ಯ ಮೆರೆದಿದಿದ್ದಾರೆ. ಅವರ ತವರು ರಾಜ್ಯವು ಬಾಕ್ಸರ್​ಗಳು ಮತ್ತು ಕುಸ್ತಿಪಟುಗಳನ್ನು ಉತ್ಪಾದಿಸುವಲ್ಲಿ ಹೆಸರುವಾಸಿಯಾಗಿದ್ದರೂ, ಭಾಕರ್ ತಮ್ಮ ಗಮನವನ್ನು ಶೂಟಿಂಗ್ ರೇಂಜ್​​ ಕಡೆಗೆ ಇಟ್ಟರು.

ಭಾಕರ್ ಅವರ ಪ್ರಯಾಣವು ಪಿಸ್ತೂಲ್ ನ ಗುರಿಯೊಂದಿಗೆ ಆರಂಭಗೊಂಡರೂ ಅವರು ಬಹುಮುಖ ಪ್ರತಿಭೆ. ಟೆನಿಸ್, ಸ್ಕೇಟಿಂಗ್ ಮತ್ತು ಥಂಗ್ ಮುಂತಾದ ಸಮರ ಕಲೆಯಲ್ಲಿ ತೊಡಗಿಸಿಕೊಂಡರು. ಆ ಕ್ಷೇತ್ರದಲ್ಲಿ ರಾಷ್ಟ್ರೀಯ ಪ್ರಶಂಸೆಗಳನ್ನು ಗಳಿಸಿದರು. 2016 ರ ರಿಯೋ ಒಲಿಂಪಿಕ್ಸ್​ ವೇಳೆಯ ಪ್ರೇರಣೆಯಿಂದ ಅವರು ಶೂಟಿಂಗ್ ಕಡೆಗೆ ಹೊರಳಿದರು.

ಇದನ್ನೂ ಓದಿ: Manu Bhaker: ಭಾರತದ ಹೆಮ್ಮೆಯ ಪುತ್ರಿ ; ಮನು ಭಾಕರ್​ಗೆ ಪದಕ ಗೆಲ್ಲಲು ಭಗವದ್ಗೀತೆಯೇ ಪ್ರೇರಣೆ

ಕೇವಲ ಹದಿನಾಲ್ಕು ವರ್ಷದವಳಾಗಿದ್ದಾಗ ಭಾಕರ್ ಶೂಟಿಂಗ್ ಅಭ್ಯಾಸ ಆರಂಭಿಸಿದ್ದರು. ತಂದೆಯ ಮನವೊಲಿಸಿದ ಅವರು ಶೂಟಿಂಗ್ ಕ್ಷೇತ್ರಕ್ಕೆ ಪ್ರವೇಶ ಪಡದರು. ರಾಷ್ಟ್ರೀಯ ಚಾಂಪಿಯನ್​​ಶಿಪ್​​ನಲ್ಲಿ ಅನುಭವಿ ಒಲಿಂಪಿಯನ್ ಹೀನಾ ಸಿಧು ವಿರುದ್ಧ ಅದ್ಭುತ ಗೆಲುವು ಗಳಿಸಿದಾಗ ಅವರು ಶೂಟಿಂಗ್​ ಕ್ಷೇತ್ರವು ಅವರ ಕಡೆಗೆ ಗಮನ ಸೆಳೆಯಿತು.

ಅವರಿಗೆ ಅಂತರರಾಷ್ಟ್ರೀಯ ಮೆಚ್ಚುಗೆಯು ತ್ವರಿತವಾಗಿ ಬಂತು. ಏಷ್ಯನ್ ಜೂನಿಯರ್ ಚಾಂಪಿಯನ್​ಶಿಪ್​ನಲ್ಲಿ ಅವರು ಬೆಳ್ಳಿ ಗೆದ್ದರು. ಅವರ ಶೂಟಿಂಗ್​ ಅವರ ಪ್ರಯಾಣವು ಗೆಲುವುಗಳು ಮತ್ತು ಆಘಾತಗಳಿಂದಲೂ ಕೂಡಿದೆ. ಆದಾಗ್ಯೂ ಯೂತ್ ಒಲಿಂಪಿಕ್ಸ್​ನಲ್ಲಿ ಅವರ ಚಿನ್ನದ ಕ್ಷಣವು ಅವರ ಸ್ಥಾನಮಾನವನ್ನು ಗಟ್ಟಿಗೊಳಿಸಿತು. ಹದಿನಾರನೇ ವಯಸ್ಸಿನಲ್ಲಿ, ಅವರು ಶೂಟಿಂಗ್​ನಲ್ಲಿ ಮಿಂಚಿದರು.

ಅನುಭವಿ ಕೋಚ್​​ ಜಸ್ಪಾಲ್ ರಾಣಾ ಅವರ ಮಾರ್ಗದರ್ಶನದಲ್ಲಿ, ಭಾಕರ್ ಅವರ ಪ್ರಯಾಣ ಗಟ್ಟಿಯಾಯಿತು. ಒಲಿಂಪಿಕ್ ಆಯ್ಕೆ ಟ್ರಯಲ್ಸ್​ನಲ್ಲಿ ಪ್ರಬಲ ಪ್ರದರ್ಶನವು ಭಾರತೀಯ ಶೂಟಿಂಗ್ ತಂಡದಲ್ಲಿ ಅವರ ಸ್ಥಾನ ಭದ್ರಪಡಿಸಿತು.

Continue Reading

ಪ್ರಮುಖ ಸುದ್ದಿ

CUET UG Result 2024: ಸಿಯುಇಟಿ ಸ್ನಾತಕೋತ್ತರ ಪ್ರವೇಶ ಪರೀಕ್ಷೆ ಫಲಿತಾಂಶ ಪ್ರಕಟ

CUET UG Result 2024 :

VISTARANEWS.COM


on

CUET UG Result 2024
Koo

ಬೆಂಗಳೂರು: ಎನ್​​ಟಿಯ ಸಿಯುಇಟಿ ಯುಜಿ ಫಲಿತಾಂಶವನ್ನು (CUET UG Result 2024) ಪ್ರಕಟಿಸಿದೆ. ಪದವಿಪೂರ್ವ ಕೋರ್ಸ್​ಗಳಿಗೆ ಸೇರಲು ಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು cuetug.ntaonline.in ವೆಬ್​​ಸೈಟ್​ನಲ್ಲಿ ಅಂಕಗಳನ್ನು ಪರಿಶೀಲಿಸಬಹುದು. ಸಿಯುಇಟಿ ಯುಜಿ ಫಲಿತಾಂಶಗಳನ್ನು exams.nta.ac.in/CUET-UG/ ನಲ್ಲಿ ಪರಿಶೀಲಿಸಬಹುದು.

ಸಿಯುಇಟಿ ಯುಜಿ ಪರೀಕ್ಷೆಯನ್ನು ಮೇ 15, 16, 17, 18, 21, 22, 24 ಮತ್ತು 29 ರಂದು ವಿದೇಶದ 26 ನಗರಗಳು ಸೇರಿದಂತೆ 379 ನಗರಗಳಲ್ಲಿರುವ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆದಿದೆ. ಒಟ್ಟು 13.48 ಲಕ್ಷ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಜುಲೈ 19, 2024 ರಂದು ಮರು ಪರೀಕ್ಷೆ ನಡೆಸಲಾಗಿತ್ತು. ತಾತ್ಕಾಲಿಕ ಕೀ ಉತ್ತರಗಳನ್ನು ಜುಲೈ 7 ರಂದು ಬಿಡುಗಡೆ ಮಾಡಲಾಗಿತ್ತು. ಆಕ್ಷೇಪಣೆ ವಿಂಡೋವನ್ನು ಜುಲೈ 9, 2024 ರಂದು ಮುಚ್ಚಿದ್ದರು.

ಫಲಿತಾಂಶಗಳ ಜೊತೆಗೆ ಏಜೆನ್ಸಿ ಅಂತಿಮ ಉತ್ತರ ಕೀಯನ್ನು ಸಹ ಬಿಡುಗಡೆ ಮಾಡಿದೆ. ತಾತ್ಕಾಲಿಕ ಉತ್ತರ ಕೀ ವಿರುದ್ಧ ಅಭ್ಯರ್ಥಿಗಳು ಹಾಕಿದ ಪ್ರಶ್ನೆಗಳ ಆಧಾರದ ಮೇಲೆ ಅಂತಿಮ ಉತ್ತರ ಕೀಯನ್ನು ಸಿದ್ಧಪಡಿಸಲಾಗಿದೆ. ತಜ್ಞರ ಸಮಿತಿಯು ಸವಾಲುಗಳನ್ನು ಪರಿಶೀಲಿಸಿದ ಬಳಿಕ ಅಂತಿಮ ಉತ್ತರ ಕೀಲಿಯನ್ನು ಬಿಡುಗಡೆ ಮಾಡಲಾಗಿದೆ. ಪರಿಷ್ಕೃತ ಅಂತಿಮ ಕೀ ಉತ್ತರಗಳ ಆಧಾರದ ಮೇಲೆ ಫಲಿತಾಂಶವನ್ನು ಸಿದ್ಧಪಡಿಸಿ ಘೋಷಿಸಲಾಗಿದೆ.

ಇದನ್ನೂ ಓದಿ: Manu Bhaker: ಭಾರತದ ಹೆಮ್ಮೆಯ ಪುತ್ರಿ ; ಮನು ಭಾಕರ್​ಗೆ ಪದಕ ಗೆಲ್ಲಲು ಭಗವದ್ಗೀತೆಯೇ ಪ್ರೇರಣೆ

ಎನ್​ಟಿಎ ಸಿಯುಇಟಿ ಯುಜಿ ಪರೀಕ್ಷೆಗೆ ಹಾಜರಾದ ಎಲ್ಲಾ ಅಭ್ಯರ್ಥಿಗಳು ಈ ಕೆಳಗಿನ ಹಂತಗಳನ್ನು ಅನುಸರಿಸುವ ಮೂಲಕ ಫಲಿತಾಂಶಗಳನ್ನು ಪರಿಶೀಲಿಸಬಹುದು.

  • · exams.nta.ac.in/CUET-UG/ ನಲ್ಲಿ ಸಿಯುಇಟಿ ಯುಜಿಯ ಅಧಿಕೃತ ವೆಬ್​​ಸೈಟ್​ಗೆ ಭೇಟಿ ನೀಡಬಹುದು.
  • · ಮುಖಪುಟದಲ್ಲಿ ಲಭ್ಯವಿರುವ ಸಿಯುಇಟಿ ಯುಜಿ ಫಲಿತಾಂಶ 2024 ಲಿಂಕ್ ಅನ್ನು ಕ್ಲಿಕ್ ಮಾಡಿ.
  • · ಲಾಗಿನ್ ವಿವರಗಳನ್ನು ನಮೂದಿಸಿ ಮತ್ತು ಸಬ್ಮಿಟ್ ಮೇಲೆ ಕ್ಲಿಕ್ ಮಾಡಿ.
  • · ನಿಮ್ಮ ಫಲಿತಾಂಶವನ್ನು ಪರದೆಯ ಮೇಲೆ ಪ್ರದರ್ಶಿಸಲಾಗುತ್ತದೆ.
  • · ಫಲಿತಾಂಶವನ್ನು ಪರಿಶೀಲಿಸಿ ಮತ್ತು ಪುಟವನ್ನು ಡೌನ್ಲೋಡ್ ಮಾಡಿ.
  • · ಹೆಚ್ಚಿನ ಅಗತ್ಯಕ್ಕಾಗಿ ಅದರ ಹಾರ್ಡ್ ಕಾಪಿಯನ್ನು ಇರಿಸಿಕೊಳ್ಳಿ.

ವಿವರಗಳಿಗಾಗಿ ಅಭ್ಯರ್ಥಿಗಳು ಸಿಯುಇಟಿ ಯುಜಿಯ ಅಧಿಕೃತ ವೆಬ್ಸೈಟ್ ಅನ್ನು ಪರಿಶೀಲಿಸಬಹುದು.

Continue Reading

ಕರ್ನಾಟಕ

BJP-JDS Padayatra: ರಾಜ್ಯ ಸರ್ಕಾರದ ವಿರುದ್ಧ ಆ.3ರಿಂದ ಬೆಂಗಳೂರು-ಮೈಸೂರು ಪಾದಯಾತ್ರೆ: ಬಿ.ವೈ.ವಿಜಯೇಂದ್ರ

BJP-JDS Padayatra: ವಾಲ್ಮೀಕಿ ನಿಗಮ ಅಕ್ರಮ, ಮುಡಾ ನಿವೇಶನ ಹಗರಣ, ಎಸ್‌ಸಿಎಸ್‌ಪಿ, ಟಿಎಸ್‌ಟಿ ಹಣ ಗ್ಯಾರಂಟಿಗಳಿಗೆ ಬಳಕೆ ವಿರೋಧಿಸಿ ಬೆಂಗಳೂರಿನಿಂದ ಮೈಸೂರಿನವರೆಗೂ ಪಾದಯಾತ್ರೆ ಮಾಡಲಿದ್ದೇವೆ. ಆ.3ರಂದು ಮಾಜಿ ಸಿಎಂಗಳಾದ ಬಿ.ಎಸ್‌. ಯಡಿಯೂರಪ್ಪ, ಎಚ್‌.ಡಿ. ಕುಮಾರಸ್ವಾಮಿ ಅವರು ಪಾದಯಾತ್ರೆಗೆ ಚಾಲನೆ ನೀಡಲಿದ್ದಾರೆ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

VISTARANEWS.COM


on

BJP-JDS Padayatra
Koo

ಬೆಂಗಳೂರು: ಬಿಜೆಪಿ-ಜೆಡಿಎಸ್ ಎರಡೂ ಪಕ್ಷದ ಮುಖಂಡರು ಸುದೀರ್ಘ ಚರ್ಚೆ ಮಾಡಿ ಆ.3ರಿಂದ 10ರವರೆಗೆ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಸಲು ತೀರ್ಮಾನಿಸಿದ್ದೇವೆ. ವಾಲ್ಮೀಕಿ ನಿಗಮ ಅಕ್ರಮ, ಮುಡಾ ನಿವೇಶನ ಹಗರಣ, ಎಸ್‌ಸಿಎಸ್‌ಪಿ, ಟಿಎಸ್‌ಟಿ ಹಣ ಗ್ಯಾರಂಟಿಗಳಿಗೆ ಬಳಕೆ ವಿರೋಧಿಸಿ ಬೆಂಗಳೂರಿನಿಂದ ಮೈಸೂರಿನವರೆಗೂ ಬಿಜೆಪಿ-ಜೆಡಿಎಸ್‌ ಪಾದಯಾತ್ರೆ ಮಾಡಲಿದ್ದೇವೆ. ಆ.3ರಂದು ಮಾಜಿ ಸಿಎಂಗಳಾದ ಬಿ.ಎಸ್‌. ಯಡಿಯೂರಪ್ಪ, ಎಚ್‌.ಡಿ. ಕುಮಾರಸ್ವಾಮಿ ಅವರು ಪಾದಯಾತ್ರೆಗೆ ಚಾಲನೆ ನೀಡಲಿದ್ದಾರೆ. ಆ.10 ರಂದು ನಡೆಯುವ ಸಮಾರೋಪ ಸಮಾರಂಭಕ್ಕೆ ಕೇಂದ್ರದ ನಾಯಕರು ಬರಲಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.

ಪಾದಯಾತ್ರೆ ಸಂಬಂಧ ನಡೆದ ಬಿಜೆಪಿ ಮತ್ತು ಜೆಡಿಎಸ್ ಸಮನ್ವಯ ಸಭೆ ಬಳಿಕ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಮಾತನಾಡಿದ್ದಾರೆ. ಸಮನ್ವಯ ಸಭೆಗೂ ಮುನ್ನ ಬಿಜೆಪಿ ಪ್ರಮುಖರ ಸಭೆ ನಡೆದಿದ್ದು, ಸಭೆಯಲ್ಲಿ ಅತಿವೃಷ್ಟಿ ಬಗ್ಗೆ ಚರ್ಚೆಯಾಗಿದೆ. ಕಾರವಾರದಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಹಲವು ಸಮಸ್ಯೆ ಉಂಟಾಗಿವೆ. ಹೀಗಾಗಿ ಪಾದಯಾತ್ರೆಗೂ ಮೊದಲು ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಲು ನಿರ್ಧರಿಸಲಾಗಿದೆ. ಇದಕ್ಕಾಗಿ ಬಿಜೆಪಿ ನಿಯೋಗ ರಚನೆ ಮಾಡಲಾಗಿದೆ.

ಇದನ್ನೂ ಓದಿ | Manu Bhaker : ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಐತಿಹಾಸಿಕ ಪದಕ ಗೆದ್ದ ಮನು ಭಾಕರ್ ಗೆ ಪ್ರಧಾನಿ ಮೋದಿ ಅಭಿನಂದನೆ

ಪಾದಯಾತ್ರೆ ಬಗ್ಗೆ ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಪ್ರತಿಕ್ರಿಯಿಸಿ, ಭ್ರಷ್ಟ ಸರ್ಕಾರ ಕಿತ್ತೊಗೆಯಬೇಕಾಗಿದೆ. ಬಿಜೆಪಿ-ಜೆಡಿಎಸ್ ಹೋರಾಟಕ್ಕೆ ಹತ್ತಾರು ಸಾವಿರ ಜನ ಬರಲಿದ್ದಾರೆ. ಸಿಎಂ ರಾಜೀನಾಮೆ ಕೊಡುವವರೆಗೆ ವಿರಮಿಸಲ್ಲ. ಸಿಎಂಗೆ ಗೌರವ ಇದ್ದರೆ ತಕ್ಷಣ ರಾಜೀನಾಮೆ ಕೊಡಲಿ ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿ ನಡೆಸುವಾಗಲೇ ಎಚ್‌.ಡಿ. ಕುಮಾರಸ್ವಾಮಿ ಮೂಗಿನಿಂದ ರಕ್ತಸ್ರಾವ; ಆಸ್ಪತ್ರೆಗೆ ದಾಖಲು

ಬೆಂಗಳೂರು: ಸುದ್ದಿಗೋಷ್ಠಿ ನಡೆಸುವಾಗಲೇ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರ ಮೂಗಿನಿಂದ ರಕ್ತಸ್ರಾವ ಆಗಿರುವ ಘಟನೆ ಭಾನುವಾರ ನಡೆದಿದೆ. ಮುಡಾ ನಿವೇಶನ ಹಗರಣ ವಿರೋಧಿಸಿ ಆ.3ರಿಂದ ಪಾದಯಾತ್ರೆ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ನಗರದ ಜೆಡಿಎಸ್‌ ಕಚೇರಿಯಲ್ಲಿ ಬಿಜೆಪಿ-ಜೆಡಿಎಸ್‌ ನಾಯಕರ ಸಮನ್ವಯ ಸಭೆ ಏರ್ಪಡಿಸಲಾಗುತ್ತು. ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡುವ ವೇಳೆ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ (HD Kumaraswamy) ಅವರ ಮೂಗಿನಿಂದ ರಕ್ತಸ್ರಾವವಾಗಿದೆ.

ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಮೂಗಿನಿಂದ ರಕ್ತಸ್ರಾವವಾಗಿದೆ. ಈ ವೇಳೆ ಬಟ್ಟೆಯಿಂದ ಮೂಗನ್ನು ಎಚ್‌ಡಿಕೆ ಒರೆಸಿಕೊಂಡರು. ಅದರೂ ರಕ್ತಸ್ರಾವ ನಿಲ್ಲಲಿಲ್ಲ. ಮತ್ತೆ ಮೂಗಿನಿಂದ ರಕ್ತಸ್ರಾವ ಹೆಚ್ಚಾದ ಹಿನ್ನೆಲೆ ಪುತ್ರ ನಿಖಿಲ್‌ ಕುಮಾರಸ್ವಾಮಿ ಅವರು ತಂದೆಯನ್ನು ಜಯನಗರ ಅಪೋಲೋ ಆಸ್ಪತ್ರೆಗೆ ಕರೆದೊಯ್ದರು. ಮೂಗಿನಿಂದ ರಕ್ತಸ್ರಾವ ಹಿನ್ನೆಲೆಯಲ್ಲಿ ಬಿಳಿ ಶರ್ಟ್ ರಕ್ತಮಯವಾಗಿದೆ.

ಇದನ್ನೂ ಓದಿ | Dog Meat Controversy: ಬೆಂಗಳೂರಿನಲ್ಲಿ ಸಿಕ್ಕಿರೋದು ನಾಯಿ ಮಾಂಸ ಅಲ್ಲ, ಮೇಕೆ ಮಾಂಸ: ಗೃಹ ಸಚಿವ ಪರಮೇಶ್ವರ್‌

ಈ ಬಗ್ಗೆ ಸಂಸದ ಡಾ.ಸಿ.ಎನ್‌.ಮಂಜುನಾಥ್‌ ಪ್ರತಿಕ್ರಿಯಿಸಿ, ಕುಮಾರಸ್ವಾಮಿ ಅವರಿಗೆ ಎರಡನೇ ಬಾರಿ ಈ ರೀತಿ ಆಗುತ್ತಿದೆ. ರಕ್ತ ಹೆಪ್ಪುಗಟ್ಟಬಾರದು ಎಂದು ಥಿನ್ನರ್‌ ತೆಗೆದುಕೊಳ್ಳುತ್ತಿದ್ದರು. ಅವರಿಗೆ ಬಿಪಿ ನಾರ್ಮಲ್‌ ಇದೆ, ನಿತ್ಯ ಶುಗರ್‌ ಲೆವೆಲ್‌ ಚೆಕ್‌ ಮಾಡಿಕೊಳ್ಳುತ್ತಿದ್ದರು. ಪ್ರವಾಸ ಹೆಚ್ಚಾಗಿ ಓವರ್‌ ಹೀಟ್‌ನಿಂದ ರಕ್ತಸ್ರಾವ ಆಗಿರಬಹುದು ಎಂದು ತಿಳಿಸಿದ್ದಾರೆ.

Continue Reading
Advertisement
ಪ್ರಮುಖ ಸುದ್ದಿ7 mins ago

Paris Olympics 2024 : ಪುರಷರ 10 ಮೀಟರ್​ ಏರ್​ರೈಫಲ್​​ ಸ್ಪರ್ಧೆಯಲ್ಲಿ ಫೈನಲ್​ಗೇರಿದ ಅರ್ಜುನ್ ಬಬುಟಾ

Manu Bhaker
ಪ್ರಮುಖ ಸುದ್ದಿ46 mins ago

Manu Bhaker : ಭಾರತಕ್ಕೆ ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಮೊದಲ ಪದಕ ತಂದುಕೊಟ್ಟ ಮನು ಭಾಕರ್ ಯಾರು? ಅವರ ಹಿನ್ನೆಲೆಯೇನು?

Turmeric Stains
ಲೈಫ್‌ಸ್ಟೈಲ್50 mins ago

Turmeric Stains: ಬಟ್ಟೆಯ ಮೇಲಿನ ಅರಶಿನ ಕಲೆ ಹೋಗಲಾಡಿಸಲು ಇಲ್ಲಿದೆ ಸರಳ ಉಪಾಯ

Puttamadegowda
ಕರ್ನಾಟಕ57 mins ago

Puttamadegowda: ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರ ತಂದೆ ಅನಾರೋಗ್ಯದಿಂದ ನಿಧನ

Shirur landslide
ಕ್ರೈಂ1 hour ago

Shirur landslide: ಶಿರೂರು ಭೂಕುಸಿತ; ಇನ್ನೂ ಪತ್ತೆಯಾಗದವರ ಶೋಧ ಕಾರ್ಯಾಚರಣೆ ಕೈಬಿಟ್ಟ ಜಿಲ್ಲಾಡಳಿತ

CUET UG Result 2024
ಪ್ರಮುಖ ಸುದ್ದಿ2 hours ago

CUET UG Result 2024: ಸಿಯುಇಟಿ ಸ್ನಾತಕೋತ್ತರ ಪ್ರವೇಶ ಪರೀಕ್ಷೆ ಫಲಿತಾಂಶ ಪ್ರಕಟ

BJP-JDS Padayatra
ಕರ್ನಾಟಕ2 hours ago

BJP-JDS Padayatra: ರಾಜ್ಯ ಸರ್ಕಾರದ ವಿರುದ್ಧ ಆ.3ರಿಂದ ಬೆಂಗಳೂರು-ಮೈಸೂರು ಪಾದಯಾತ್ರೆ: ಬಿ.ವೈ.ವಿಜಯೇಂದ್ರ

Manu Bhaker
ಪ್ರಮುಖ ಸುದ್ದಿ2 hours ago

Manu Bhaker: ಭಾರತದ ಹೆಮ್ಮೆಯ ಪುತ್ರಿ ; ಮನು ಭಾಕರ್​ಗೆ ಪದಕ ಗೆಲ್ಲಲು ಭಗವದ್ಗೀತೆಯೇ ಪ್ರೇರಣೆ

Women's Asia Cup
ಪ್ರಮುಖ ಸುದ್ದಿ3 hours ago

Womens Asia Cup : ಭಾರತದ ಮಹಿಳೆಯರನ್ನು ಸೋಲಿಸಿ ಚೊಚ್ಚಲ ಏಷ್ಯಾ ಕಪ್​ ಗೆದ್ದ ಶ್ರೀಲಂಕಾ ತಂಡ

karnataka weather Forecast
ಮಳೆ3 hours ago

Karnataka Weather : ಕೂಲ್‌ ಆದ ಬೆಂಗಳೂರು; ನಾಳೆಗೆ ಉತ್ತರ ಕನ್ನಡ ಜಿಲ್ಲೆಗೆ ಭಾರಿ ಮಳೆ ಎಚ್ಚರ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Tungabhadra Dam
ಕೊಪ್ಪಳ4 hours ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ6 hours ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ8 hours ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ9 hours ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

Karnataka weather Forecast
ಮಳೆ1 day ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ1 day ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ1 day ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ2 days ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ2 days ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ2 days ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

ಟ್ರೆಂಡಿಂಗ್‌