JDS Pancharatna: ಕ್ಯಾನ್ಸರ್‌ ಪೀಡಿತ ಪತಿಗೆ ನೆರವಾಗುವಂತೆ ಅಂಗಲಾಚಿದ ಮಹಿಳೆ; ಚಿಕಿತ್ಸೆ ಕೊಡಿಸುವ ಭರವಸೆ ನೀಡಿದ ಎಚ್‌ಡಿಕೆ - Vistara News

ಕರ್ನಾಟಕ

JDS Pancharatna: ಕ್ಯಾನ್ಸರ್‌ ಪೀಡಿತ ಪತಿಗೆ ನೆರವಾಗುವಂತೆ ಅಂಗಲಾಚಿದ ಮಹಿಳೆ; ಚಿಕಿತ್ಸೆ ಕೊಡಿಸುವ ಭರವಸೆ ನೀಡಿದ ಎಚ್‌ಡಿಕೆ

JDS Pancharatna: ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭೆ ಕ್ಷೇತ್ರದ ಹೊಸ ದರೋಜಿ ಗ್ರಾಮದಲ್ಲಿ ಜೆಡಿಎಸ್‌ ಪಂಚರತ್ನ ಯಾತ್ರೆ ವೇಳೆ, ಮಹಿಳೆಗೆ ನೆರವಾಗುವ ಭರವಸೆಯನ್ನು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ನೀಡಿದ್ದಾರೆ.

VISTARANEWS.COM


on

JDS Pancharatna
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬಳ್ಳಾರಿ: ಕ್ಯಾನ್ಸರ್‌ನಿಂದ ಬಳಲುತ್ತಿರುವ ತನ್ನ ಪತಿಯನ್ನು ಬದುಕಿಸಿಕೊಡುವಂತೆ ಮಹಿಳೆಯೊಬ್ಬರು ಎಚ್‌.ಡಿ.ಕುಮಾರಸ್ವಾಮಿ ಅವರ ಬಳಿ ಅಂಗಲಾಚಿ, ಕಣ್ಣೀರಿಟ್ಟ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭೆ ಕ್ಷೇತ್ರದ ಹೊಸ ದರೋಜಿ ಗ್ರಾಮದಲ್ಲಿ ಸೋಮವಾರ ರಾತ್ರಿ ಜೆಡಿಎಸ್‌ ಪಂಚರತ್ನ ಯಾತ್ರೆ (JDS Pancharatna) ವೇಳೆ ನಡೆಯಿತು. ಈ ವೇಳೆ ಮಹಿಳೆಯ ಕಷ್ಟ ಕಂಡು ವಿಚಲಿತರಾದ ಮಾಜಿ ಸಿಎಂ, ಬೆಂಗಳೂರಿಗೆ ನಿಮ್ಮ ಪತಿಯನ್ನು ಕರೆದುಕೊಂಡು ಬನ್ನಿ, ಚಿಕಿತ್ಸೆಗೆ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದರು.

ಹನುಮಂತಮ್ಮ ಎಂಬುವವರು ಗಂಡ ಕ್ಯಾನ್ಸರ್‌ ಪೀಡಿತರಾಗಿದ್ದು, ನೆರವಾಗುವಂತೆ ಕಣ್ಣೀರಿಡುತ್ತ ಮನವಿ ಮಾಡಿದರು. ಈ ವೇಳೆ ಚಿಕಿತ್ಸೆ ಕೊಡಿಸುವ ಭರವಸೆ ನೀಡುವ ಜತೆಗೆ ಮಹಿಳೆಗೆ ಪತಿಯೊಂದಿಗೆ ಬೆಂಗಳೂರಿಗೆ ಬರಲು ಖರ್ಚಿಗಾಗಿ ಹಣದ ನೆರವು ನೀಡಿ, ಬೆಂಗಳೂರಿಗೆ ತೆರಳಲು ವ್ಯವಸ್ಥೆ ಮಾಡಲು ಸಂಡೂರು ಕ್ಷೇತ್ರದ ಅಭ್ಯರ್ಥಿ ಸೋಮಪ್ಪ ಅವರಿಗೆ ಸೂಚಿಸಿದರು.

ಭೂಮಿ ಕಳೆದುಕೊಂಡ ರೈತರಿಗೆ ನೆರವಿನ ಅಭಯ

ಬಳಿಕ ಕೈಗಾರಿಕೆಗಳಿಗಾಗಿ ಭೂಮಿ ಕಳೆದುಕೊಂಡು ನ್ಯಾಯಕ್ಕಾಗಿ ಸಂಡೂರು ಕ್ಷೇತ್ರದ ಕುಡುತಿನಿ‌ ಗ್ರಾಮದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಮಾಜಿ ಸಿಎಂ ಕುಮಾರಸ್ವಾಮಿ ಭೇಟಿಯಾದರು. ಈ ವೇಳೇ ಮಾತನಾಡಿದ ಅವರು, ಕೈಗಾರಿಕೆ ಮಾಡುತ್ತೇವೆ ಎಂದು ನಂಬಿಸಿ ಕೆಲ ಪಟ್ಟಭದ್ರರು ಭೂಮಿ ಸ್ವಾಧೀನ ಮಾಡಿ ರೈತರಿಗೆ ಮೋಸ ಮಾಡಿದ್ದಾರೆ. ಭೂಸ್ವಾಧೀನ ಆಗಿ 11 ವರ್ಷಗಳೇ ಕಳೆದರೂ ಇನ್ನೂ ಕೈಗಾರಿಕೆ ಸ್ಥಾಪನೆ ಆಗದಿರುವುದು ಅನುಮಾನಕ್ಕೆ ಕಾರಣವಾಗಿದೆ. ರಾಜ್ಯದಲ್ಲಿ ಜೆಡಿಎಸ್ ಸರ್ಕಾರ ಬಂದ ಕೂಡಲೇ ಈ ಸಮಸ್ಯೆ ಬಗೆಹರಿಸಲಾಗುತ್ತದೆ ಎಂದು ಭರವಸೆ ನೀಡಿದರು.

ಮೂಲಸೌಕರ್ಯ ಇಲ್ಲದೆ ಕೆಟ್ಟ ಸ್ಥಿತಿಯಲ್ಲಿ ಜನರಿದ್ದಾರೆ

ಕೃಷ್ಣ ದೇವರಾಯ ಆಳ್ವಿಕೆ ನಡೆಸಿದ ಜಿಲ್ಲೆಯ ಹಳ್ಳಿಗಳಲ್ಲಿ ಮೂಲಸೌಕರ್ಯ ಇಲ್ಲದೆ ಜನರು ಅತ್ಯಂತ ‌ಕೆಟ್ಟ ಪರಿಸ್ಥಿತಿಯಲ್ಲಿದ್ದಾರೆ. ಕೆಲವರು ಮಣ್ಣು ‌ಮಾರಾಟ ಮಾಡಿ ಆಳ್ವಿಕೆ ‌ನಡೆಸಿದ್ದಾರೆ. ಜನರ ಈ ರೀತಿಯ ಬದುಕಿಗೆ ಕಾರಣವಾದವರ ಬಗ್ಗೆ ಮಾತನಾಡಲು ಇಲ್ಲಿ‌ನ ಸಚಿವರಿಗೆ ಧೈರ್ಯ ಇಲ್ಲ. ಈ ಬಗ್ಗೆ ಚುನಾವಣಾ ‌ಮತ ಪಡೆಯಲು ಬರುವ ರಾಷ್ಟ್ರೀಯ ‌ಪಕ್ಷಗಳ‌ ಶಾಸಕರನ್ನು ಜನತೆ ಪ್ರಶ್ನಿಸಬೇಕು ಎಂದು ಹೇಳಿದರು.

ಬಳ್ಳಾರಿಯ ಶಾಸಕರ ಮನೆಗಳ ಕಾಂಪೌಂಡ್ ಒಳಗಡೆ ಹೋಗಲು ಬಡವರಿಗೆ ಸಾಧ್ಯವಿಲ್ಲ. ವಿಜಯನಗರ ಆನಂದ್‌ ಸಿಂಗ್ ಮನೆ‌ ನೋಡಿದರೆ ಭಯ ಆಗುತ್ತದೆ. ಬಳ್ಳಾರಿಯ ನಿಮ್ಮ ಪ್ರೀತಿಯ ಅಣ್ಣ ಶ್ರೀರಾಮುಲು ಬಡವರಿಗೆ ಏನು ‌ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದವರು ಸಾಲಮನ್ನಾಗೆ ವಿರೋಧ ವ್ಯಕ್ತಪಡಿಸಿದರು. ಬಿಜೆಪಿ ಸರ್ಕಾರ ಅಧಿಕಾರ ವಹಿಸಿಕೊಂಡ ನಂತರ ಎರಡು ಲಕ್ಷ ಕುಟುಂಬಗಳಿಗೆ ಹಣ ಬಿಡುಗಡೆ ಮಾಡಿಲ್ಲ ಎಂದ ಅವರು, ಜೆಡಿಎಸ್ ಅಧಿಕಾರಕ್ಕೆ ಬಂದರೆ ನಾನಾ ಸೌಕರ್ಯಗಳನ್ನು ಉಚಿತವಾಗಿ ನೀಡಲಿದೆ ಎಂದು ಹೇಳಿದರು.

ರಸ್ತೆಬದಿಯ ಪುಟ್ಟ ಹೋಟೆಲ್‌ನಲ್ಲಿ ಮಂಡಕ್ಕಿ, ಚಹಾ ಸೇವಿಸಿದ ಕುಮಾರಸ್ವಾಮಿ

ಕುಷ್ಟಗಿಯಲ್ಲಿ ಪಂಚರತ್ನ ರಥಯಾತ್ರೆ ಮುಗಿಸಿ ಸಂಡೂರಿಗೆ ತೆರಳುವ ಮಾರ್ಗದ ನಡುವೆ ಕಂಪ್ಲಿ ತಾಲೂಕಿನ ದೇವಲಾಪುರದ ರಸ್ತೆಬದಿಯ ಪುಟ್ಟ ಹೋಟೆಲಿನಲ್ಲಿ ಕುಮಾರಸ್ವಾಮಿ ಅವರು ಮಂಡಕ್ಕಿ ಹಾಗೂ ಚಹಾ ಸೇವಿಸಿದರು. ಬಳಿಕ ಹೊಟೇಲ್ ಮಾಲೀಕ ನಾಗಪ್ಪ ಕುಟುಂಬದ ಕುಶಲೋಪರಿ ವಿಚಾರಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Rain : ಹಾಸನದಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಗುಡ್ಡ ಕುಸಿತ; ಬೆಳಗಾವಿಯಲ್ಲಿ ರಸ್ತೆಗೆ ಉರುಳಿದ ಬೃಹತ್‌ ಬಂಡೆಗಲ್ಲು

Karnataka Rain : ಧಾರಾಕಾರವಾಗಿ ಸುರಿಯುತ್ತಿರುವ ಮಳೆಯು ನಾನಾ ಅವಾಂತರಗಳನ್ನೇ (Rain Effect) ಸೃಷ್ಟಿಸಿದೆ. ಹಾಸನದಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಗುಡ್ಡ ಕುಸಿದಿದೆ. ಬೆಳಗಾವಿಯಲ್ಲಿ ರಸ್ತೆಗೆ ಬೃಹತ್‌ ಗಾತ್ರದ ಬಂಡೆಗಲ್ಲು ಉರುಳಿತ್ತು. ನಂಜನಗೂಡಿನಲ್ಲಿ ಪ್ರವಾಹ ಭೀತಿ ಶುರುವಾಗಿದೆ.

VISTARANEWS.COM


on

By

karnataka Rain
Koo

ಹಾಸನ: ಚಲಿಸುತ್ತಿದ್ದ ಕಾರಿನ ಮೇಲೆ ಗುಡ್ಡ ಕುಸಿದಿದ್ದು, ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯದಿಂದ ಪಾರಾಗಿದ್ದಾರೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಎತ್ತಿನಹಳ್ಳ ಬಳಿ ಘಟನೆ (Karnataka Rain) ನಡೆದಿದೆ. ರಾಷ್ಟ್ರೀಯ ಹೆದ್ದಾರಿ 75 ಶಿರಾಡಿಘಾಟ್ ರಸ್ತೆಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಏಕಾಏಕಿ ಮಣ್ಣು ಕುಸಿದಿದೆ. ಪರಿಣಾಮ ಕೆಲಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಕಂದಾಯ ಇಲಾಖೆ ಸಿಬ್ಬಂದಿ ಮಣ್ಣು ತೆರವುಗೊಳಿಸಿದರು.

ಹಾಸನದ ಸಕಲೇಶಪುರ ತಾಲೂಕಿನಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆಯಿಂದ ಹಳ್ಳ ಕೊಳ್ಳಗಳು ಉಕ್ಕಿ ಹರಿಯುತ್ತಿದೆ. ಮಠಸಾಗರದ ಬಳಿ ನೀರು ನಿಂತು ಕೃಷ್ಣಾಪುರ ಸಂಪರ್ಕ ಕಡಿತಗೊಂಡಿದೆ. ಹಳ್ಳ ಉಕ್ಕಿ ಹರಿದ ಪರಿಣಾಮ ಕಾಫಿ, ಅಡಿಕೆ ತೋಟಗಳು ಜಲಾವೃತಗೊಂಡಿದೆ. ರಸ್ತೆ ಸಂಪರ್ಕ ಕಡಿತ‌ ಹಿನ್ನೆಲೆಯಲ್ಲಿ‌ ರೋಗಿಗಳನ್ನೂ ಆಸ್ಪತ್ರೆಗೆ ಕರೆದೊಯ್ಯಲಾಗದೆ ಪರದಾಟ ಅನುಭವಿಸಿದರು.

ಶಿರಾಡಿಘಾಟ್‌ನಲ್ಲಿ ಗುಡ್ಡ ಕುಸಿತ

ಭಾರಿ ಮಳೆಗೆ ಶಿರಾಡಿಘಾಟ್‌ನ ಮತ್ತೊಂದು ಕಡೆ ಗುಡ್ಡ ಕುಸಿದಿದೆ. ಹಾಸನದ ಸಕಲೇಶಪುರ ತಾಲೂಕಿನ ಮಾರನಹಳ್ಳಿ ಸಮೀಪ ಘಟನೆ ನಡೆದಿದೆ. ಒಂದು ನೂರಾರು ಮೀಟರ್ ಎತ್ತರದಿಂದ ಕೆಳಗೆ ಗುಡ್ಡ ಕುಸಿದಿದೆ. ಕೂದಲೆಳೆ ಅಂತರದಲ್ಲಿ ವಾಹನ ಸವಾರರು ಪಾರಾಗಿದ್ದಾರೆ. ಸ್ಥಳಕ್ಕೆ ಹೆದ್ದಾರಿ ಪ್ರಾಧಿಕಾರದ ಸಿಬ್ಬಂದಿ ದೌಡಾಯಿಸಿದ್ದು, ಕೆಲಕಾಲ ವಾಹನ ಸಂಚಾರ ಸ್ಥಗಿತಗೊಂಡಿದೆ.

ಗುಡ್ಡ ಕುಸಿತದಿಂದ ಸುಮಾರು 10 ಕಿಮಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಟ್ರಕ್, ಲಾರಿ ಟ್ಯಾಕರ್ ಓಡಾಟಕ್ಕೆ ತಾತ್ಕಾಲಿಕ ತಡೆಹಿಡಿಯಲಾಗಿದೆ. ಅತ್ತ ಚಾರ್ಮಾಡಿ ಘಾಟ್‌ನಲ್ಲೂ ಪ್ರಯಾಣ ದುಸ್ಥರ ಹಿನ್ನೆಲೆಯಲ್ಲಿ ಹಾಸನದಲ್ಲಿಯೇ ವಾಹನ ನಿಲ್ಲಿಸಲು ಸೂಚನೆ ನೀಡಲಾಗಿದೆ. ಸದ್ಯ ಸಕಲೇಶಪುರದವರೆಗೆ ತೆರಳಲು ಸಾರಿಗೆ ಬಸ್‌ಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಮಂಗಳೂರು ಕಡೆಗೆ ಹೋಗುವ ಬಸ್‌ಗಳಿಗೂ ಹಾಸನ ತಾಲೂಕಿನ ಕಂದಲಿ ಬಳಿ ತಡೆಹಿಡಯಲಾಗಿದೆ.

karnataka Rain

ರಸ್ತೆಗೆ ಉರುಳಿ ಬಿದ್ದ ಬಂಡೆಗಲ್ಲು

ನಿರಂತರ ಮಳೆ ಬೃಹತ್ ಗಾತ್ರದ ಬಂಡೆಗಲ್ಲು ರಸ್ತೆಗೆ ಉರುಳಿ ಬಿದ್ದಿದೆ. ಬೆಳಗಾವಿ ಅಂಬೋಲಿ‌ ಮಾರ್ಗ ಮಧ್ಯೆ ಹೆದ್ದಾರಿಗೆ ಬಂಡೆಗಲ್ಲು ಉರುಳಿದೆ. ಗೋವಾ, ಕರ್ನಾಟಕ, ಮಹಾರಾಷ್ಟ್ರ ಬೆಸೆಯುವ ಅಂಬೋಲಿ ಸಾವಂತವಾಡಿ ಹೆದ್ದಾರಿ ಇದಾಗಿದ್ದು, ಅದೃಷ್ಟವಷಾತ್ ಘಟನೆಯಲ್ಲಿ ಯಾವುದೇ ಅವಘಡ ಸಂಭವಿಸಿಲ್ಲ. ಬೆಳಗ್ಗಿನಿಂದಲೇ ಬಂಡೆಗಲ್ಲು ತೆರವುಗೊಳಿಸುವ ಕೆಲಸದಲ್ಲಿ ಅಧಿಕಾರಿಗಳು ಬ್ಯುಸಿಯಾಗಿದ್ದಾರೆ. ಮಹಾರಾಷ್ಟ್ರ ಲೋಕೋಪಯೋಗಿ ಹಾಗೂ ಪೊಲೀಸರ ನೇತೃತ್ವದಲ್ಲಿ ಬಂಡೆ ತೆರವು ಕಾರ್ಯಾಚರಣೆ ನಡೆಯುತ್ತಿದೆ.

karnataka Rain

ಬೆಳಗಾವಿಯಲ್ಲಿ ಉಕ್ಕಿ ಹರಿಯುತ್ತಿರುವ ಮಲಪ್ರಭಾ ನದಿ

ಬೆಳಗಾವಿಯ ಖಾನಾಪುರದ ಕಣಕುಂಬಿಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮಲಪ್ರಭಾ ನದಿ ಉಕ್ಕಿ ಹರಿಯುತ್ತಿದೆ. ಹೀಗಾಗಿ ನದಿ ತೀರದ ರೈತರಲ್ಲಿ ಆತಂಕ ಹೆಚ್ಚಿದ್ದು, ಅಕ್ಕ ಪಕ್ಕದ ಜಮೀನುಗಳಿಗೆ ನೀರು ನುಗ್ಗುವ ಆತಂಕವಿದೆ. ಇತ್ತ ಪಾರಿಶ್ವಾಡ ಹಾಗೂ ಹಿರೇಮುನವಳ್ಳಿ ಸಂಪರ್ಕ ಕಲ್ಪಿಸುವ ಸೇತುವೆ ದುರಸ್ಥಿತಿಗೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ: Illicit relationship : ಪರ ಪುರುಷನೊಂದಿಗೆ ಓಡಿ ಹೋದ ಪತ್ನಿ; ಮರ್ಯಾದೆಗೆ ಅಂಜಿ ಪತಿ ಆತ್ಮಹತ್ಯೆ

ಮಂಗಳೂರಿನಲ್ಲಿ ಸುರಿಯುತ್ತಿರುವ ನಿರಂತರ ಮಳೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ನಗರ ಭಾಗದಲ್ಲಿ ಮಳೆ ಅಬ್ಬರ ಕಡಿಯೆಯಾದರೆ, ಗ್ರಾಮಿಣ ಭಾಗದಲ್ಲಿ ಮುಂದುವರಿದಿದೆ. ನಗರ ಭಾಗ ಹೊರತು ಪಡಿಸಿ ಗ್ರಾಮಿಣ ಭಾಗದ ಶಾಲಾ ಕಾಲೇಜುಗಳಿಗೆ ರಜೆ ಷೋಷಣೆ ಮಾಡಲಾಗಿದೆ. ಕಡಬ ತಾಲೂಕಿನ ವಿವಿಧೆಡೆ ಭಾರಿ ಮಳೆಯಾಗುತ್ತಿದ್ದು, ಇಚ್ಲಂಪಾಡಿಯಲ್ಲಿ ಜಲಾವೃತಗೊಂಡು ರಸ್ತೆ ಸಂಪರ್ಕ ಕಡಿತಗೊಂಡಿದೆ. ರಸ್ತೆಗೆ ಗುಂಡ್ಯ ಹೊಳೆ ನೀರು ಹರಿದು ಮಡಿಪು-ಬರೆಮೇಲು ರಸ್ತೆ ಸಂಪರ್ಕ ಕಡಿತಗೊಂಡಿದೆ. ಉಳ್ಳಾಕ್ಲು ದೇವಸ್ಥಾನ, ನದಿಬದಿಯ ಕೃಷಿ ತೋಟಗಳು ಜಲಾವೃತಗೊಂಡಿದೆ. ಅಪಾಯದ ಮಟ್ಟದಲ್ಲಿ ನೇತ್ರಾವತಿ ನದಿ ಹರಿಯುತ್ತಿದ್ದು, ಧರ್ಮಸ್ಥಳದ ಸ್ನಾನಘಟ್ಟದಲ್ಲಿ ನೀರಿನ ಪ್ರಮಾಣ ಹೆಚ್ಚಳಗೊಂಡಿದೆ. ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆ ಹೆಚ್ಚಳ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ ನೀರಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ.

ಶಿವಮೊಗ್ಗದಲ್ಲಿ ಅಪಾಯಕಾರಿ ಪ್ರವಾಸಿ ತಾಣಗಳಿಗೆ ನಿಷೇಧ

ಮಲೆನಾಡು ಶಿವಮೊಗ್ಗದಲ್ಲಿ ಮಳೆ ಅಬ್ಬರ ಮುಂದುವರಿದಿದೆ. ಅಪಾಯಮಟ್ಟ ಮಟ್ಟ ಮೀರಿ ನದಿಗಳು, ಹಳ್ಳ ಕೊಳ್ಳಗಳು ಹರಿಯುತ್ತಿದೆ. ಹೀಗಾಗಿ ಅಪಾಯಕಾರಿ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶವನ್ನು ನಿಷೇಧ ಮಾಡಲಾಗಿದೆ. ಸಾರ್ವಜನಿಕರ ಹಿತದೃಷ್ಠಿಯಿಂದ ಪೊಲೀಸ್ ಇಲಾಖೆ ಸನ್ನದ್ಧಗೊಂಡಿದೆ.

ಅಣೆಕಟ್ಟುಗಳು, ಜಲಪಾತಗಳು ಮತ್ತು ನದಿ ನೀರಿಗೆ ಇಳಿಯುವುದು. ನದಿಯಲ್ಲಿ ಈಜಾಡುವುದು ಮತ್ತು ಸೆಲ್ಫಿಗಳನ್ನು ತೆಗೆದುಕೊಳ್ಳುವುದಕ್ಕೆ ನಿರ್ಬಂಧ ಹೇರಲಾಗಿದೆ. ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಸೂಚನಾ ಫಲಕಗಳನ್ನು ಅಳವಡಿಕೆ ಮಾಡಲಾಗಿದೆ. ಆಯಾಕಟ್ಟಿನಲ್ಲಿ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ತುರ್ತು ಸಂದರ್ಭಗಳಲ್ಲಿ ಸಹಾಯಕ್ಕಾಗಿ 112 ಸಹಾಯವಾಣಿಗೆ ಕರೆ ಮಾಡಲು ಮನವಿ ಮಾಡಲಾಗಿದೆ.

ನಂಜನಗೂಡಿನಲ್ಲಿ ಪ್ರವಾಹ ಭೀತಿ

ಮೈಸೂರಿನ ನಂಜನಗೂಡಿನಲ್ಲಿ ಪ್ರವಾಹ ಭೀತಿ ಎದುರಾಗಿದೆ. ಹೀಗಾಗಿ ತಗ್ಗು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಬಿನಿ ಜಲಾಶಯದಿಂದ ಹೊರ ಹರಿವು ಹೆಚ್ಚಳದಿಂದಾಗಿ ದಕ್ಷಿಣ ಕಾಶಿ ನಂಜನಗೂಡು ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದ ಬಳಿ ಸ್ನಾನಘಟ್ಟ, ಹದಿನಾರು ಕಾಲು ಮಂಟಪ, ಪರಶುರಾಮ ದೇವಾಲಯ ಮುಳುಗಡೆಯಾಗಿದೆ.

ಹೀಗಾಗಿ ನಂಜನಗೂಡು ತಾಲೂಕಿನ ಕಡಜಟ್ಟಿ ಗ್ರಾಮ, ಹುಲ್ಲಹಳ್ಳಿ ಸುತ್ತಮುತ್ತಲಿನ ಪ್ರದೇಶಗಳು, ಹುಲ್ಲಹಳ್ಳಿ ಮೈಸೂರು ಸೇತುವೆ, ಬೊಕ್ಕ ಹಳ್ಳಿ, ಕುಳ್ಳಂಕಯ್ಯನ ಹುಂಡಿ, ಕಪಿಲಾ ನದಿ ಸ್ನಾನಘಟ್ಟಗಳಿಗೆ ತೆರಳಿ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಹಳ್ಳದಕೇರಿ ಬಡಾವಣೆಯಲ್ಲಿ ಮನೆಗಳು ಜಲಾವೃತಗೊಂಡ ಹಿನ್ನೆಲೆ ಮಹಿಳೆಯೊಬ್ಬರು ಜಿಲ್ಲಾಧಿಕಾರಿಗಳ ಬಳಿ ತಮ್ಮ ಅಳಲನ್ನು ತೋಡಿಕೊಂಡರು. ಹೀಗಾಗಿ ಕೂಡಲೇ ನಿವಾಸಿಗಳನ್ನು ಗಿರಿಜಾ ಕಲ್ಯಾಣ ಮಂಟಪಕ್ಕೆ ಸ್ಥಳಾಂತರ ಮಾಡಿ ಅವರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಂತೆ ತಹಶೀಲ್ದಾರ್ ಅವರಿಗೆ ಸೂಚನೆ ನೀಡಿದರು.

ನಾಪೋಕ್ಲು ಮೂರ್ನಾಡು ಸಂಪರ್ಕ ಕಲ್ಪಿಸುವ ರಸ್ತೆ ಬಂದ್

ಕೊಡಗಿನಲ್ಲಿ‌ ಭಾರಿ ಗಾಳಿ ಮಳೆಯಿಂದಾಗಿ ಕಾವೇರಿ ನದಿ ನೀರು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಕಾವೇರಿ ನದಿ ಉಕ್ಕಿ ಹರಿದು ನಾಪೋಕ್ಲು ಮೂರ್ನಾಡು ಸಂಪರ್ಕ ಕಲ್ಪಿಸುವ ರಸ್ತೆ ಬಂದ್ ಆಗಿದೆ. ನಾಪೋಕ್ಲು ಸಮೀಪದ ಬೊಳಿಬಾಣೆಯಲ್ಲಿ ನೀರು ನಿಂತಿರುವುದರಿಂದ ವಾಹನಗಳು ಬದಲಿ ರಸ್ತೆಯಲ್ಲಿ ಸಾಗುತ್ತಿವೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Karnataka Assembly Live: ಅನ್ನದಾತನಿಗೆ ಅವಮಾನ ಮಾಡಿದ ಜಿಟಿ ಮಾಲ್‌ 7 ದಿನ ಬಂದ್: ವಿಧಾನಸಭೆಯಲ್ಲಿ ಘೋಷಣೆ, ವಿಸ್ತಾರ್‌ ನ್ಯೂಸ್‌ ಬಿಗ್‌ ಇಂಪ್ಯಾಕ್ಟ್

Karnataka Assembly Live: ವಿಧಾನಸಭೆ ಕಲಾಪದ ಆರಂಭದ ಹೊತ್ತಿಗೆ ಸ್ವತಃ ಸ್ಪೀಕರ್‌ ಯು.ಟಿ ಖಾದರ್‌ ಅವರು ಈ ವಿಚಾರ ಎತ್ತಿದರು. ಈ ಬಗ್ಗೆ ಸರ್ಕಾರದ ನಿಲುವನ್ನು ತಿಳಿಸುವಂತೆ ಸೂಚಿಸಿದರು. ಸದಸ್ಯರು ಪಕ್ಷಾತೀತವಾಗಿ ಮಾಲ್‌ ನಡೆಯನ್ನು ತೀವ್ರವಾಗಿ ಖಂಡಿಸಿದರು.

VISTARANEWS.COM


on

gt world mall karnataka assembly live
Koo

ಬೆಂಗಳೂರು: ಪಂಚೆ ಧರಿಸಿ ಬಂದ ಹಾವೇರಿಯ ರೈತರಿಗೆ ಒಳಬಿಡದ ರಾಜಧಾನಿಯ ಜಿಟಿ ವರ್ಲ್ಡ್‌ ಮಾಲ್‌ (GT World Mall) ಮೇಲೆ ಶಿಸ್ತು ಕ್ರಮವಾಗಿ ಮಾಲ್‌ ಅನ್ನು 7 ದಿನಗಳ ಕಾಲ ಮುಚ್ಚಲು ಸೂಚನೆ ನೀಡುವುದಾಗಿ ವಿಧಾನಸಭೆ‌ ಕಲಾಪದಲ್ಲಿ (Karnataka Assembly Live) ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌ (Byrathi Suresh) ಘೋಷಿಸಿದ್ದಾರೆ.

ಇಂದು ಆರಂಭವಾದ ಮೂರನೇ ದಿನದ ವಿಧಾನಸಭೆ ಕಲಾಪ (Karnataka Assembly Live) ಆರಂಭದಲ್ಲೇ ಈ ವಿಷಯ ಪ್ರಸ್ತಾಪವಾಯಿತು. ಹಲವರು ಸದಸ್ಯರು ರೈತರಿಗೆ ಅವಮಾನ ಆದ ವಿಷಯವನ್ನು ಪ್ರಸ್ತಾಪಿಸಿದರು. ವಿಸ್ತಾರ ನ್ಯೂಸ್‌ ನಿನ್ನೆ ಇಡೀ ದಿನ ಈ ಘಟನೆಯನ್ನು ಪ್ರಸಾರ ಮಾಡಿದ್ದಲ್ಲದೆ, ರೈತರನ್ನು ಮರಳಿ ಜಿಟಿ ಮಾಲ್‌ಗೆ ಕರೆದೊಯ್ದು ಪ್ರವೇಶ ಕೊಡಿಸಿತ್ತು. ಈ ಕಾರ್ಯಕ್ರಮಕ್ಕೆ ರಾಜ್ಯಾದ್ಯಂತ ಮೆಚ್ಚುಗೆ ವ್ಯಕ್ತವಾಗಿತ್ತು. ಕನ್ನಡ ಹಾಗೂ ರೈತಪರ ಸಂಘಟನೆಗಳು ಈ ವಿಚಾರದಲ್ಲಿ ವಿಸ್ತಾರ ನ್ಯೂಸ್‌ನೊಂದಿಗೆ ಕೈಜೋಡಿಸಿದ್ದವು. ನಂತರ ಸಚಿವ ಸಂತೋಷ್‌ ಲಾಡ್‌ ಕೂಡ ಈ ವಿಚಾರದಲ್ಲಿ ಮಾಲ್‌ ನಡೆಗೆ ಆಕ್ಷೇಪ ವ್ಯಕ್ತಪಡಿಸಿದ್ದರು.

ವಿಧಾನಸಭೆ ಕಲಾಪದ ಆರಂಭದ ಹೊತ್ತಿಗೆ ಸ್ವತಃ ಸ್ಪೀಕರ್‌ ಯು.ಟಿ ಖಾದರ್‌ ಅವರು ಈ ವಿಚಾರ ಎತ್ತಿದರು. ಈ ಬಗ್ಗೆ ಸರ್ಕಾರದ ನಿಲುವನ್ನು ತಿಳಿಸುವಂತೆ ಸೂಚಿಸಿದರು. ಸದಸ್ಯರು ಪಕ್ಷಾತೀತವಾಗಿ ಮಾಲ್‌ ನಡೆಯನ್ನು ತೀವ್ರವಾಗಿ ಖಂಡಿಸಿದರು. ಇದಕ್ಕೆ ಉತ್ತರಿಸಿದ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಈ ಬಗ್ಗೆ ಬಿಬಿಎಂಪಿ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ. ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಅವಕಾಶ ಇದೆ. 7 ದಿನಗಳ ವರೆಗೆ ಬಂದ್‌ ಮಾಡಿಸಬಹುದು. ಎಚ್ಚರಿಕೆ ನೀಡಿ ಏಳು ದಿನಗಳ ಕಾಲ ಮಾಲ್ ಬಂದ್ ಮಾಡಿಸಲಾಗುವುದು ಎಂದು ತಿಳಿಸಿದರು.

ಮುಖ್ಯ ಸಚೇತಕ ಅಶೋಕ್ ಪಟ್ಟಣ್ ಹೇಳಿಕೆ ನೀಡಿ, ಬೆಂಗಳೂರಿನ ಕ್ಲಬ್‌ಗಳ ಒಳಗೆ ಕೂಡ ಸಾಕಷ್ಟು ಷರತ್ತುಗಳಿವೆ ಎಂದು ಪ್ರಸ್ತಾವಿಸಿದರು. ಬೌರಿಂಗ್ ಕ್ಲಬ್, ಸೆಂಚುರಿ ಕ್ಲಬ್‌ನಲ್ಲಿ ಚಪ್ಪಲಿ ಹಾಕಿಕೊಂಡು ಹೋಗುವ ಹಾಗಿಲ್ಲ. ಟೀ ಶರ್ಟ್ ಕೂಡ ಹಾಕಿಕೊಂಡು ಹೋಗುವ ಹಾಗಿಲ್ಲ. ಅವರ ಮೇಲೆ ಕ್ರಮ ಆಗಬೇಕು ಎಂದು ಒತ್ತಾಯಿಸಿದರು. ಅಂತಹ ಕ್ಲಬ್‌ಗೆ ನೀವು ಯಾಕೆ ಹೋಗ್ತೀರಾ ಅಂತ ಸುರೇಶ್‌ ಕುಮಾರ್‌ ಅವರು ಅಶೋಕ್ ಪಟ್ಟಣ್‌ ಕಾಲೆಳೆದರು.

ಏನಿದು ಪ್ರಕರಣ?

ಮಂಗಳವಾರ ಸಂಜೆ ಘಟನೆ ನಡೆದಿತ್ತು. ಹಾವೇರಿಯ ರೈತ ಫಕೀರಪ್ಪ ಅವರು ಪಂಚೆ ಧರಿಸಿ, ಮಗನ ಸಮೇತ ಸಿನಿಮಾ ನೋಡಲು ಬಂದಿದ್ದರು. ʼಪಂಚೆ ಧರಿಸಿ ಮಾಲ್ ಒಳಗೆ ಬರುವಂತಿಲ್ಲʼ ಎಂದು ಸೆಕ್ಯುರಿಟಿ ತಡೆದಿದ್ದರು. ಇದನ್ನು ರೈತರ ಮಗ ಪ್ರಶ್ನಿಸಿದ್ದರು. ನಂತರ ʼವಿಸ್ತಾರ ನ್ಯೂಸ್‌ʼ ಈ ವಿಚಾರವನ್ನು ಎತ್ತಿಕೊಂಡು ನಿನ್ನೆ ಇಡೀ ದಿನ ಕವರೇಜ್‌ ಮಾಡಿತ್ತು. ಪಂಚೆಯ ಹೆಸರಿನಲ್ಲಿ ರೈತರಿಗೆ ಆಗುತ್ತಿರುವ ಅವಮಾನದ ವಿರುದ್ಧ ಸಿಡಿದೆದ್ದು ಪ್ರಶ್ನೆ ಮಾಡಿತ್ತು.

ಬಳಿಕ ಇದನ್ನು ಕನ್ನಡ ಸಂಘಟನೆಗಳು ಹಾಗೂ ರೈತ ಸಂಘಟನೆಗಳು ಕೈಗೆತ್ತಿಕೊಂಡಿದ್ದವು. ಮಾಲ್‌ ಮುಂದೆ ತೀವ್ರ ಹೋರಾಟ ಹಾಗೂ ಪ್ರತಿಭಟನೆ ನಡೆದಿತ್ತು. ʼವಿಸ್ತಾರ ನ್ಯೂಸ್‌ʼ ಈ ಬಗ್ಗೆ ಕಾರ್ಯಕ್ರಮ ಮಾಡಿದ್ದಲ್ಲದೆ, ಅದೇ ರೈತರನ್ನು ಕರೆದೊಯ್ದು ಮಾಲ್‌ಗೆ ಪ್ರವೇಶ ಕೊಡಿಸಿತ್ತು. ಈ ಸಂದರ್ಭದಲ್ಲಿ ಮಾಲ್‌ನ ಮುಖ್ಯಸ್ಥರು ಸ್ಥಳದಲ್ಲಿ ಹಾಜರಿದ್ದು, ತಮ್ಮ ಸಿಬ್ಬಂದಿಯಿಂದ ಆದ ಅವಮಾನಕ್ಕೆ ಕ್ಷಮೆ ಕೇಳಿದ್ದರು. ರೈತ ಫಕೀರಪ್ಪಗೆ ಹಾರ ಹಾಕಿ ಸನ್ಮಾನ ಮಾಡಿದ್ದರು. ರೈತ- ಕನ್ನಡ ಸಂಘಟನೆಗಳ ಕಾರ್ಯಕರ್ತರು ಪಂಚೆ ಧರಿಸಿ ಮಾಲ್‌ಗೆ ಪ್ರವೇಶಿಸಿದ್ದರು.

ರೈತರಿಗೆ ಪ್ರವೇಶ ನಿರಾಕರಣೆ ಮಾಡಿದ ಜಿ‌ಟಿ ಮಾಲ್ ಕ್ರಮವನ್ನು ಕೃಷಿ ಸಚಿವ ಚೆಲುವರಾಯಸ್ವಾಮಿ ಖಂಡಿಸಿದ್ದು, ಈ ವಿಚಾರದಲ್ಲಿ ಸೂಕ್ತ ನಿಯಮ ರೂಪಿಸಲು ಸರ್ಕಾರ ಪ್ರಯತ್ನಿಸಲಿದೆ ಎಂದು ಹೇಳಿದ್ದಾರೆ. ʼನಾವು ಇದನ್ನ ಖಂಡಿಸುತ್ತೇವೆ. ಕೆಲ ವರ್ಷಗಳ ಹಿಂದೆ ಪಂಚೆ ಕಟ್ಟಿಕೊಂಡು ಹೋದರೆ ಕ್ಲಬ್‌ಗಳಲ್ಲಿ ಬಿಡುತ್ತಿರಲಿಲ್ಲ. ಶೂ ಇಲ್ಲದೇ ಪಂಚೆ ಹಾಕಿಕೊಂಡು ಕ್ಲಬ್‌ಗೆ ಹೋಗಬಹುದು ಅಂತ ನಮ್ಮ ಸರ್ಕಾರ ನಿರ್ಧಾರ ಮಾಡಿತ್ತು. ಇದನ್ನು ನಾವು ಅಂದು ಅಧಿವೇಶನದಲ್ಲಿ ಚರ್ಚೆ ಮಾಡಿದ್ದೆವು. ಈಗಲೂ ಇದಕ್ಕೆ ಸರ್ಕಾರ ನಿಯಮ ತರಬೇಕುʼ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: GT World Mall: ಅನ್ನದಾತನಿಗೆ ಅವಮಾನ ಮಾಡಿದ ಜಿಟಿ ಮಾಲ್‌ ಮುಂದೆ ಪಂಚೆ ಉಟ್ಟು ಪ್ರತಿಭಟನೆ, ಕ್ಷಮೆ ಕೇಳಿದ ಮಾಲೀಕ

Continue Reading

ತುಮಕೂರು

Illicit relationship : ಪರ ಪುರುಷನೊಂದಿಗೆ ಓಡಿ ಹೋದ ಪತ್ನಿ; ಮರ್ಯಾದೆಗೆ ಅಂಜಿ ಪತಿ ಆತ್ಮಹತ್ಯೆ

Illicit relationship : ಪ್ರೀತಿಸಿ ಮದುವೆ ಆಗಿದ್ದ ಮಹಿಳೆಯೊಬ್ಬಳು 18 ವರ್ಷಗಳ ನಂತರ ಪರಪುರಷನೊಂದಿಗೆ ಓಡಿ ಹೋಗಿದ್ದಾಳೆ. ಮರ್ಯಾದೆಗೆ ಅಂಜಿದ ಪತಿ ಡೆತ್‌ನೋಟ್‌ (Death Note) ಬರೆದಿಟ್ಟು, ವಿಷ ಕುಡಿದು ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾರೆ.

VISTARANEWS.COM


on

By

Illicit relationship
ಮಾಧವಿ, ಆನಂದ್‌ ಪರಾರಿಯಾದವರು ಹಾಗೂ ದೇವರಾಜ್‌ ಮೃತದುರ್ದೈವಿ
Koo

ತುಮಕೂರು: ಗಂಡ ಮಕ್ಕಳನ್ನು ಬಿಟ್ಟು ಮಹಿಳೆಯೊಬ್ಬಳು ಪರ ಪುರುಷನೊಂದಿಗೆ (Illicit relationship) ಓಡಿ ಹೋಗಿದ್ದಾಳೆ. ಮರ್ಯಾದೆಗೆ ಅಂಜಿದ ಪತಿ ವಿಷ ಕುಡಿದು ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾರೆ. ದೇವರಾಜ್ ಮೃತ ದುರ್ದೈವಿ. ತುಮಕೂರು ತಾಲೂಕಿನ ಹೊಸಹಳ್ಳಿಯಲ್ಲಿ ಘಟನೆ ನಡೆದಿದೆ.

ದೇವರಾಜ್‌ ಹಾಗೂ ಮಾಧವಿ ಇಬ್ಬರು ಪ್ರೀತಿಸಿ 18 ವರ್ಷಗಳ ಹಿಂದೆ ಮದುವೆಯಾಗಿದ್ದರು. ಆದರೆ ಪರ ಪುರುಷನ ಮೇಲೆ ವ್ಯಾಮೋಹಕ್ಕೆ ಸಿಲುಕಿದ ಮಾಧವಿ, ಹೊಸಹಳ್ಳಿ ಗ್ರಾಮದ ಆನಂದ್ ಕುಮಾರ್ ಎಂಬಾತನೊಟ್ಟಿಗೆ ಪರಾರಿ ಆಗಿದ್ದಾಳೆ.

ಪರ ಪುರುಷನೊಂದಿಗೆ ಪತ್ನಿ ಓಡಿ ಹೋದ ಸುದ್ದಿ ತಿಳಿದ ದೇವರಾಜ್‌ ಮನನೊಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಡೆತ್ ನೋಟ್‌ನಲ್ಲಿ ಪ್ರಧಾನಿ ಮೋದಿ, ಕುಮಾರಸ್ವಾಮಿ, ಡಿಸಿ-ಎಸ್ಪಿಗೆ ನನ್ನ ಸಾವಿಗೆ ನ್ಯಾಯಕೊಡಿಸಿ ಎಂದು ದೇವರಾಜ್‌ ಮನವಿ ಮಾಡಿದ್ದಾರೆ.

ಇದನ್ನೂ ಓದಿ: Road Accident : ಪಾದಚಾರಿ ಬಲಿ ಪಡೆದು ಎಸ್ಕೇಪ್‌ ಆದ ಬಸ್‌ ಚಾಲಕ; ಬಾಲಕಿಗೆ ಗುದ್ದಿ ಪ್ರಾಣ ಕಸಿದ ಲಾರಿ

ಮಾಧವಿಯನ್ನು 17 ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದೆ. ಹೊಸಹಳ್ಳಿಯಲ್ಲಿ ಅಂಗಡಿ ನಡೆಸಿಕೊಂಡು ಜೀವನ ಸಾಗಿಸುತ್ತಿದ್ದೆ. ನಮಗೆ 16 ಹಾಗೂ 12 ವರ್ಷದ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಹೀಗಿರುವಾಗ ಪ್ರತಿ ನಿತ್ಯ ಅಂಗಡಿಯ ಬಳಿ ಬರುತ್ತಿದ್ದ ಆನಂದ್ ಕುಮಾರ್, ಈ ವೇಳೆ ಮಾಧವಿಯೊಂದಿಗೆ ಸಲುಗೆ ಬೆಳೆಸಿ ಪ್ರೀತಿಯ ಬಲೆಗೆ ಬೀಳಿಸಿಕೊಂಡು ಪರಾರಿ ಆಗಿದ್ದಾನೆ ಎಂದು ಬರೆದಿದ್ದಾರೆ.

ಪತ್ನಿ ಓಡಿ ಹೋಗಿದ್ದಕ್ಕೆ ಮನನೊಂದು ವಿಷ ಸೇವಿಸಿದ್ದ ದೇವರಾಜ್, ಚಿಕಿತ್ಸೆ ಫಲಕಾರಿಯಾಗದೆ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಆತ್ಮಹತ್ಯೆಗೂ ಮೊದಲು ಡೆತ್ ನೋಟ್ ಬರೆದಿಟ್ಟು, ತನಗೆ ಆನಂದ್‌ನಿಂದ ಜೀವ ಬೆದರಿಕೆ ಹಾಕಿದ್ದ ಎಂದು ಉಲ್ಲೇಖಿಸಿದ್ದಾರೆ. ಇಬ್ಬರಿಗೂ ತಕ್ಕ ಶಿಕ್ಷೆ ಕೊಡಿಸುವಂತೆ ಮನವಿ ಮಾಡಿದ್ದಾರೆ.

ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಮಾಧವಿ, ಆನಂದ್ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಮಾಡಿದ ಆರೋಪ ಮೇಲೆ ದೂರು ದಾಖಲಾಗಿದೆ. ಎಫ್ಐಆರ್ ದಾಖಲಾಗುತ್ತಿದ್ದಂತೆ ಮಾಧವಿ, ಆನಂದ್ ತಲೆಮರೆಸಿಕೊಂಡಿದ್ದಾರೆ. ಇತ್ತ ತಾಯಿ ಇಲ್ಲದೇ ತಂದೆಯನ್ನು ಕೆಳದುಕೊಂಡ ಇಬ್ಬರು ಹೆಣ್ಮಕ್ಕಳು ತಬ್ಬಲಿಗಳಾಗಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ರಾಯಚೂರು

Road Accident : ಪಾದಚಾರಿ ಬಲಿ ಪಡೆದು ಎಸ್ಕೇಪ್‌ ಆದ ಬಸ್‌ ಚಾಲಕ; ಬಾಲಕಿಗೆ ಗುದ್ದಿ ಪ್ರಾಣ ಕಸಿದ ಲಾರಿ

Road Accident : ಪ್ರತ್ಯೇಕ ಕಡೆಗಳಲ್ಲಿ ರಸ್ತೆ ಅಪಘಾತಗಳು ಸಂಭವಿಸಿದ್ದು, ಸಾವು-ನೋವು ಸಂಭವಿಸಿದೆ. ರಾಯಚೂರಲ್ಲಿ ಪಾದಚಾರಿ ಮೇಲೆ ಬಸ್‌ ಹರಿದು ಮೃತಪಟ್ಟರೆ, ಬಾಗಲಕೋಟೆಯಲ್ಲಿ ಬೈಕ್‌ಗೆ ಲಾರಿ ಡಿಕ್ಕಿ ಹೊಡೆದು ಬಾಲಕಿಯೊಬ್ಬಳು ಅಸುನೀಗಿದ್ದಾಳೆ.

VISTARANEWS.COM


on

By

road Accident
Koo

ರಾಯಚೂರು/ಬಾಗಲಕೋಟೆ: ರಾಯಚೂರಲ್ಲಿ ಪಾದಚಾರಿ ಮೇಲೆ ಬಸ್ ಹರಿದು ವ್ಯಕ್ತಿಯೊಬ್ಬರು (Road Accident) ದಾರುಣವಾಗಿ ಮೃತಪಟ್ಟಿದ್ದಾರೆ. ರಾಯಚೂರಿನ ಮಸ್ಕಿ ತಾಲೂಕಿನ ಅಂಕುಶದೊಡ್ಡಿ ಗ್ರಾಮದ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ಅಂಕುಶದೊಡ್ಡಿ ಗ್ರಾಮದ ನಿವಾಸಿ ಸಿದ್ದಪ್ಪ (22)ಮೃತ ದುರ್ದೈವಿ.

ಸಿದ್ದಪ್ಪ ಹೆದ್ದಾರಿ ರೋಡ್ ಕ್ರಾಸ್ ಮಾಡಿ ಮನೆಯತ್ತ ತೆರಳುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಬಸ್‌ವೊಂದು ಸಿದ್ದಪ್ಪನಿಗೆ ಗುದ್ದಿದ್ದು, ಕೆಳಗೆ ಬಿದ್ದವನ ಮೇಲೆ ಹರಿದಿದೆ. ಅಪಘಾತದ ಬಳಿಕ ಬಸ್ ನಿಲ್ಲಿಸದೆ ಚಾಲಕ ಎಸ್ಕೇಪ್ ಆಗಲು ಯತ್ನಿಸಿದ್ದಾನೆ. ಆದರೆ ರೊಚ್ಚಿಗೆದ್ಧ ಗ್ರಾಮಸ್ಥರು ಬಸ್‌ ಅನ್ನು ಹಿಂಬಾಲಿಸಿಕೊಂಡು ಹೋಗಿ ಮಸ್ಕಿಯಲ್ಲಿ ತಡೆದಿದ್ದಾರೆ.

ಸದ್ಯ ಮಸ್ಕಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಬಸ್‌ ಚಾಲಕನನ್ನು ವಶಕ್ಕೆ ಪಡೆದು ತನಿಖೆಯನ್ನು ನಡೆಸಲಾಗುತ್ತಿದೆ.

ಬೈಕ್‌ಗೆ ಲಾರಿ ಡಿಕ್ಕಿ, ಸ್ಥಳದಲ್ಲೇ ಅಸುನೀಗಿದ ಬಾಲಕಿ

ಬಾಗಲಕೋಟೆ ಜಿಲ್ಲೆಯ ಇಲಕಲ್ಲ ತಾಲೂಕಿನ ಗುಗ್ಗಲಮರಿ ಕ್ರಾಸ್‌ ಸಮೀಪದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಬೈಕ್‌ಗೆ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಬಾಲಕಿಯೊಬ್ಬಳು ಸ್ಥಳದಲ್ಲೇ ಪ್ರಾಣ ಬಿಟ್ಟರೆ, ಮತ್ತಿಬ್ಬರು ಗಂಭೀರ ಗಾಯಗೊಂಡಿದ್ದಾರೆ.

ಗುಗ್ಗಲಮರಿ ಗ್ರಾಮದ ನಿವಾಸಿ ರಾಗಿಣಿ ದುರಗಪ್ಪ ಹುಣಸ್ಯಾಳ (11) ಮೃತ ದುರ್ದೈವಿ. ಬೈಕ್‌ನಲ್ಲಿ ಹೋಗುತ್ತಿದ್ದಾಗ ಲಾರಿ ಡಿಕ್ಕಿ ಹೊಡೆದಿದೆ. ಬೈಕ್‌ನಲ್ಲಿದ್ದ ಇಬ್ಬರು ತಾಲ್ಲೂಕಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಇಳಕಲ್ ಪೊಲೀಸ್‌ ಠಾಣೆಯ ಪಿಎಸ್‌ಐ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಇಳಕಲ್ಲ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Urvashi Rautela: ನಟಿ ಊರ್ವಶಿ ರೌಟೇಲಾ ಬಟ್ಟೆ ಬಿಚ್ಚಿ, ಸ್ನಾನ ಮಾಡುವ ವಿಡಿಯೊ ಲೀಕ್‌!

ದೊಡ್ಡಬಳ್ಳಾಪುರದಲ್ಲಿ ದ್ರಾಕ್ಷಿ ತುಂಬಿದ್ದ ಕ್ಯಾಂಟರ್ ಪಲ್ಟಿ

ಬೆಂಗಳೂರು ಗ್ರಾಮಾಂತರದ ದೊಡ್ಡಬಳ್ಳಾಪುರದ ಮಧುರನಹೊಸಹಳ್ಳಿ ಗೇಟ್ ಬಳಿ ದ್ರಾಕ್ಷಿ ತುಂಬಿದ್ದ ಕ್ಯಾಂಟರ್‌ ವಾಹನವೊಂದು ಪಲ್ಟಿ ಹೊಡೆದಿದೆ. ಅದೃಷ್ಟವಶಾತ್ ಚಾಲಕ ಮತ್ತು ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕ್ಯಾಂಟರ್ ಪಕ್ಟಿ ಹೊಡೆದ ಕಾರಣದಿಂದ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಸ್ಥಳಕ್ಕಾಗಮಿಸಿದ ಪೊಲೀಸರು ಕ್ರೈನ್ ಮೂಲಕ ಕ್ಯಾಂಟರ್ ತೆರವುಗೊಳಿಸಿದ್ದರು. ಇನ್ನೂ ರಸ್ತೆ ತುಂಬೆಲ್ಲ ಚೆಲ್ಲಾಡಿದ್ದ ದ್ರಾಕ್ಷಿಗಳನ್ನು ಜೆಸಿಬಿ ಮೂಲಕ ತೆರವು ಮಾಡಲಾಯಿತು. ದೊಡ್ಡಬೆಳವಂಗಲ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಬಸ್‌ ಡಿಕ್ಕಿ

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹಳ್ಳಕ್ಕೆ ಇಳಿದ ಸಾರಿಗೆ ಬಸ್‌ವೊಂದು ಸೇತುವೆಗೆ ಡಿಕ್ಕಿ ಹೊಡೆದಿದೆ. ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಎಲ್ಲರೂ ಪಾರಾಗಿದ್ದಾರೆ. ಹಾಸನ ಜಿಲ್ಲೆಯ ಆಲೂರು ತಾಲೂಕಿನ ಮಣಿಗನಹಳ್ಳಿ ಗ್ರಾಮದ ಬಳಿ ಘಟನೆ ನಡೆದಿದೆ.

ಆಲೂರಿನಿಂದ ಪುರಭೈರವನಹಳ್ಳಿ ಮಾರ್ಗವಾಗಿ ತೆರಳುತ್ತಿದ್ದ ಹಾಸನ ವಿಭಾಗದ ಕೆಎಸ್‌ಆರ್‌ಟಿಸಿ ಬಸ್‌ ಮಳೆಯಿಂದ ನಿಯಂತ್ರಣಕ್ಕೆ ಸಿಗದೆ ಹಳ್ಳಕ್ಕೆ ಇಳಿದಿದೆ. ಸದ್ಯ ಪ್ರಯಾಣಿಕರನ್ನು ಬೇರೆ ವಾಹನಗಳಲ್ಲಿ ಕಳುಹಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Re-NEET
ದೇಶ8 mins ago

Re-NEET: ನೀಟ್-ಯುಜಿ 2024 ವಿವಾದ; ಇಡೀ ಪರೀಕ್ಷೆಯ ಪಾವಿತ್ರ್ಯತೆಯ ಮೇಲೆ ಪರಿಣಾಮ ಬೀರಿದ್ದರೆ ಮಾತ್ರ ರಿಟೆಸ್ಟ್‌ ಎಂದ ಸುಪ್ರೀಂ ಕೋರ್ಟ್‌

Star Suvarna Akhand Deepa at Sigandur Sri Chaudeshwari Temple Shri Devi Mahatme serial team contribution
ಕಿರುತೆರೆ23 mins ago

Star Suvarna: ಸಿಗಂದೂರು ದೇವಸ್ಥಾನದಲ್ಲಿ ‘ಸುವರ್ಣ ಅಖಂಡ ದೀಪ’ಕ್ಕೆ ಚಾಲನೆ; `ಶ್ರೀ ದೇವೀ ಮಹಾತ್ಮೆ’ ಧಾರಾವಾಹಿ ತಂಡದ ಕೊಡುಗೆ

karnataka Rain
ಮಳೆ32 mins ago

Karnataka Rain : ಹಾಸನದಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಗುಡ್ಡ ಕುಸಿತ; ಬೆಳಗಾವಿಯಲ್ಲಿ ರಸ್ತೆಗೆ ಉರುಳಿದ ಬೃಹತ್‌ ಬಂಡೆಗಲ್ಲು

The Birthday Boy Director Whisky Real Life Story
ಟಾಲಿವುಡ್39 mins ago

The Birthday Boy: ಹೆಸರು ಬದಲಾಯಿಸಿ ಕದ್ದು ಮುಚ್ಚಿ ಸಿನಿಮಾ ಮಾಡಿ, ಮಾಸ್ಕ್‌ ಧರಿಸಿ ಬಂದ ನಿರ್ದೇಶಕ! ಏನು ಕಥೆ?

Viral Video
Latest49 mins ago

Viral Video: 8 ವರ್ಷದ ಮಗನ ತಲೆ ನೆಲಕ್ಕೆ ಅಪ್ಪಳಿಸಿ, ಮೈಕೈಯೆಲ್ಲ ಕಚ್ಚಿದ ತಾಯಿ; ವಿಡಿಯೊ ನೋಡಿ ಜನಾಕ್ರೋಶ

India Squad Announcement
ಕ್ರೀಡೆ50 mins ago

India Squad Announcement: ಶ್ರೀಲಂಕಾ ಸರಣಿಗೆ ಮರಳಿದ ಹಿಟ್​ಮ್ಯಾನ್​ ರೋಹಿತ್​!

Gold Rate Today
ಚಿನ್ನದ ದರ1 hour ago

Gold Rate Today: ಚಿನ್ನದ ಬೆಲೆಯಲ್ಲಿ ತುಸು ಇಳಿಕೆ; ಇಂದಿನ ದರ ಚೆಕ್‌ ಮಾಡಿ

Kannada New Movie prakarana tanikha hantadalli ide
ಸ್ಯಾಂಡಲ್ ವುಡ್1 hour ago

Kannada New Movie: ‘ಪ್ರಕರಣ ತನಿಖಾ ಹಂತದಲ್ಲಿದೆ’ ಮೋಷನ್ ಪೋಸ್ಟರ್ ಬಿಡುಗಡೆ

gt world mall karnataka assembly live
ಪ್ರಮುಖ ಸುದ್ದಿ2 hours ago

Karnataka Assembly Live: ಅನ್ನದಾತನಿಗೆ ಅವಮಾನ ಮಾಡಿದ ಜಿಟಿ ಮಾಲ್‌ 7 ದಿನ ಬಂದ್: ವಿಧಾನಸಭೆಯಲ್ಲಿ ಘೋಷಣೆ, ವಿಸ್ತಾರ್‌ ನ್ಯೂಸ್‌ ಬಿಗ್‌ ಇಂಪ್ಯಾಕ್ಟ್

Olympic Medals
ಕ್ರೀಡೆ2 hours ago

Olympic Medals: ಒಲಿಂಪಿಕ್ಸ್​ ವಿಜೇತರಿಗೆ ನೀಡುವ ಚಿನ್ನದ ಪದಕ ಚಿನ್ನದ್ದಲ್ಲ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ2 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ3 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ3 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ3 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ4 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ4 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ4 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ4 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ5 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌