18 ವರ್ಷವಿದ್ದಾಗ ಹೇಗಿದ್ದರು ಪಿಗ್ಗಿ? Memories ಶೇರ್‌ ಮಾಡಿಕೊಂಡ ಪ್ರಿಯಾಂಕ ಚೋಪ್ರಾ - Vistara News

ಬಾಲಿವುಡ್

18 ವರ್ಷವಿದ್ದಾಗ ಹೇಗಿದ್ದರು ಪಿಗ್ಗಿ? Memories ಶೇರ್‌ ಮಾಡಿಕೊಂಡ ಪ್ರಿಯಾಂಕ ಚೋಪ್ರಾ

ಪ್ರಿಯಾಂಕ ಚೋಪ್ರಾ ಇನ್ಸ್ಟಾ ಮೂಲಕ ಹಳೆಯ ನೆನಪನ್ನು ಶೇರ್‌ ಮಾಡಿಕೊಂಡಿದ್ದಾರೆ. ಕಮೆಂಟ್‌ ಮೂಲಕ ಮೆಚ್ಚುಗೆಯನ್ನು ವ್ಯಕ್ತಪಡಿಸುತ್ತಿದ್ದಾರೆ ಪಿಗ್ಗಿ ಅಭಿಮಾನಿಗಳು.

VISTARANEWS.COM


on

ಪ್ರಿಯಾಂಕ ಚೋಪ್ರಾ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬಾಲಿವುಡ್‌ ಮೂಲಕ ವೃತ್ತಿ ಜೀವನ ಆರಂಭಿಸಿ ಹಾಲಿವುಡ್‌ನಲ್ಲೂ ಛಾಪು ಮೂಡಿಸಿರುವ ನಟಿ ಪ್ರಿಯಾಂಕ ಚೋಪ್ರಾ. ತನ್ನ ನಟನಾ ವೃತ್ತಿಯನ್ನು ಆರಂಭಿಸುವ ಮುಂಚೆ,  ರೂಪದರ್ಶಿಯಾಗಿ ಮಾಡಿದ್ದ ಪ್ರಿಯಾಂಕಾ 2000ನೇ ಇಸವಿಯಲ್ಲಿ ವಿಶ್ವ ಸುಂದರಿ ಕಿರೀಟವನ್ನು ಮುಡಿಗೇರಿಸಿಕೊಂಡರು.

ಪ್ರಿಯಾಂಕ ಚೋಪ್ರಾ ತಮ್ಮ ಇನ್ಸ್ಟಾದಲ್ಲಿ ಹಳೆಯ Memories ಅನ್ನು ಶೇರ್‌ ಮಾಡುತ್ತಲೇ ಇರುತ್ತಾರೆ. ಇದೀಗ 22 ವರ್ಷದ ಹಳೆಯ ಪೋಟೋವನ್ನು ಹಂಚಿಕೊಂಡಿದ್ದಾರೆ ಚೋಪ್ರಾ. 18ನೇ ವಯಸ್ಸಿನಲ್ಲಿ ಮಾಲ್ಡೀವ್ಸ್‌ನಲ್ಲಿ ತೆಗೆದುಕೊಂಡ ಪೋಟೊ ಹಂಚಿಕೊಂಡಿದ್ದಾರೆ ಪಿಗ್ಗಿ.

ಇದನ್ನೂ ಓದಿ | ಪ್ಯಾರಿಸ್‌ನ ಬಲ್ಗೇರಿಯ ಈವೆಂಟ್‌ನಲ್ಲಿ ಮಿಂಚಿದ ಪ್ರಿಯಾಂಕಾ ಚೋಪ್ರಾ

ಝಾರ್ಖಂಡ್‌ ವೈದ್ಯ ದಂಪತಿಗಳಾದ ಅಶೋಕ್ ಚೋಪ್ರಾ ಮತ್ತು ಮಧು ಅಖೌರಿ ಚೋಪ್ರಾ ಅವರ ತಂದೆ ತಾಯಿ. ತನ್ನ ಬಾಲ್ಯದ ಜೀವನವನ್ನು   ಉತ್ತರಪ್ರದೇಶದ ಬರೇಲಿ, ಮೆಸಾಚುಸೆಟ್ಸ್‌ನ ನ್ಯೂಟನ್‌ ಮತ್ತು ಅಯೊವಾದ ಸಿಡಾರ್‌ ರಾಪಿಡ್ಸ್‌ನಲ್ಲಿ ಕಳೆದಿದ್ದಾರೆ. ತಂದೆ ಪಂಜಾಬಿ ಖತ್ರಿ  ಮೂಲದ ಕುಟುಂಬದವರಾಗಿದ್ದು, ತಾಯಿ ಜಮ್ಷೆಡ್‌ಪುರದಲ್ಲಿ ನೆಲೆಸಿದ್ದ ಮಲಯಾಳಿ ಕುಟುಂಬದವರಾಗಿದ್ದಾರೆ.

ಈ ಹಿಂದೆ ಪ್ರಿಯಾಂಕ ಚೋಪ್ರಾ ತಮ್ಮ ತಂದೆ  ಡಾ ಅಶೋಕ್‌ ಅವರೊಂದಿಗೆ ಇರುವ ಪೋಟೊ ಹಂಚಿಕೊಂಡು ಬಾಲ್ಯದ ನೆನಪನ್ನು ಮೆಲುಕು ಹಾಕಿದ್ದರು. ʼಡ್ಯಾಡಿಸ್ ಲಿಟ್ಲ್‌ ಗರ್ಲ್‌ʼ ಎಂದು ಕ್ಯಾಪ್ಷನ್‌ ನೀಡಿ ಸಂತಸವನ್ನು ಹಂಚಿಕೊಂಡಿದ್ದರು.

ವಾರಗಳ ಹಿಂದೆ ಪ್ರಿಯಾಂಕ ತನ್ನ ಬಾಲ್ಯದ ನೆನಪುಗಳನ್ನು ಹಂಚಿಕೊಂಡು, ಈ ಬಾರಿ ತನ್ನ ತಾಯಿ ಮತ್ತು ಅಜ್ಜಿಯೊಂದಿಗೆ ಎಂದು ಬರೆದುಕೊಂಡಿದ್ದರು. ʼನಾವೆಲ್ಲರೂ ಅಜ್ಜಿಯ ಜನ್ಮದಿನವನ್ನು ಆಚರಿಸುತ್ತಿದ್ದೇವೆ. ನನ್ನ ತಾಯಿ ಮೆಡಿಕಲ್‌ ಕರಿಯರ್‌ ಹಾಗೂ ತಂದೆ ಅಧ್ಯಯನದಲ್ಲಿ ಇದ್ದಾಗ, ಆ ಸಂದರ್ಭದಲ್ಲಿ ನನ್ನನ್ನು ಬೆಳೆಸಿದ್ದು ನನ್ನ ಅಜ್ಜಿ. ಅವಳು ನನ್ನ ಪಾಲಿನ ಅತ್ಯಂತ ಮುಖ್ಯ ವ್ಯಕ್ತಿʼ ಎಂದು ಶೇರ್‌ ಮಾಡಿದ್ದರು.

ಸಿದ್ಧಾರ್ಥ ಚೋಪ್ರಾ, ಪ್ರಿಯಾಂಕ ಚೋಪ್ರಾ ಅವರ ತಮ್ಮನಾಗಿದ್ದು, ಅವರೊಂದಿಗೆ ಬಾಲ್ಯದ ನೆನಪು ಹಂಚಿಕೊಂಡ ಕ್ಷಣ.

2000ರಲ್ಲಿ ಚೋಪ್ರಾ ಮಿಸ್ ಇಂಡಿಯಾ ವರ್ಲ್ಡ್‌,  ಆ ನಂತರ  ವಿಶ್ವಸುಂದರಿ ಕಿರೀಟ ಧರಿಸಿ ಹೆಸರುವಾಸಿಯಾಗುತ್ತಾರೆ. ಅಮೆರಿಕಾದ ನೆಟ್ವರ್ಕ್ ಸರಣಿಯಲ್ಲಿ, ಮೊದಲ ದಕ್ಷಿಣ ಏಷ್ಯಾ ಮಹಿಳೆ ಎನಿಸಿಕೊಳ್ಳುವ ಮೂಲಕ, ಎಬಿಸಿ ನಾಟಕದ ಶ್ರೇಣಿ ‘ಕ್ವಿಂಟಿಕೊ’ (Quantico) ದಲ್ಲಿ ಅಲೆಕ್ಸ್ ಪಾರ್ರಿಷ್ ಪಾತ್ರದಲ್ಲಿ ನಟಿಸಿ ಹಾಲಿವುಡ್‍ನಲ್ಲಿ ನಟಿಸಲು ಅವಕಾಶ ಪಡೆದರು.

ಪ್ರಿಯಾಂಕ ಅವರು ಅಮೆರಿಕದ ನ್ಯೂಯಾರ್ಕ್‌ನಲ್ಲಿ ರೆಸ್ಟೋರೆಂಟ್‌ ಉದ್ಯಮದಲ್ಲೂ ತೊಡಗಿಸಿಕೊಂಡಿದ್ದಾರೆ. ಅಲ್ಲದೇ ನಿಕ್‌ ಜೋನಾಸ್‌ ಜತೆ ಮದುವೆಯಾದ ಬಳಿಕ ಹಾಲಿವುಡ್‌ನಲ್ಲಿ ನಟನೆಯನ್ನು ಮುಂದುವರೆಸಿದ್ದಾರೆ. ಪಿಗ್ಗಿ ಅಭಿಮಾನಿಗಳು ಕಮೆಂಟ್‌ ಮೂಲಕ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.

ಇದನ್ನೂ ಓದಿ | ಮಿಸ್ ಮಾಡಬೇಡಿ, ವೇಶ್ಯೆಯರ ಬದುಕಿನ ಕಥಾನಕದ ಟಾಪ್ 5 ಸಿನಿಮಾ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಾಲಿವುಡ್

Shah Rukh Khan: ಶಾರುಖ್‌ ಹೊಸ ಸಿನಿಮಾಗಾಗಿ ಕೈ ಜೋಡಿಸಿದ ಅನಿರುದ್ಧ್ ರವಿಚಂದರ್!

Shah Rukh Khan: ಸಿದ್ಧಾರ್ಥ್ ಮತ್ತು ಶಾರುಖ್ ಖಾನ್ ಪಠಾಣ್ ಚಿತ್ರೀಕರಣದ ಮೂಲಕ ಉತ್ತಮ ಬಾಂಧವ್ಯವನ್ನು ಹೊಂದಿದ್ದಾರೆ. ಇದೀಗ ಈ ಕಿಂಗ್‌ ಸಿನಿಮಾ ಮೂಲಕ ತಮ್ಮ ಸ್ನೇಹವನ್ನು ಮತ್ತಷ್ಟು ವಿಸ್ತರಿಸಲು ಸಿದ್ಧರಾಗಿದ್ದಾರೆ. ವಾಸ್ತವವಾಗಿ, ಸಿದ್ ಮತ್ತು ಅವರ ತಂಡವು ಈಗಾಗಲೇ ಈ ಪ್ರಾಜೆಕ್ಟ್‌ಗೆ ಸಕ್ರಿಯವಾಗಿ ತೊಡಗಿಸಿಕೊಂಡಿದೆ, ”ಎಂದು ಮೂಲಗಳು ತಿಳಿಸಿವೆ.

VISTARANEWS.COM


on

Shah Rukh Khan and Anirudh Ravichander to team up for King
Koo

ಬೆಂಗಳೂರು: `ಜವಾನ್’ ನಂತರ, ಸಂಗೀತ ಸಂಯೋಜಕ ಅನಿರುದ್ಧ್ ರವಿಚಂದರ್ ಅವರು ಶಾರುಖ್ ಖಾನ್ (Shah Rukh Khan) ಅವರೊಂದಿಗೆ ಮತ್ತೆ ಕೈ ಜೋಡಿಸಲು ಸಜ್ಜಾಗಿದ್ದಾರೆ ಎನ್ನಲಾಗಿದೆ. ವರದಿಗಳ ಪ್ರಕಾರ, ಶಾರುಖ್‌ ಅವರ ಮುಂದಿನ ಚಿತ್ರ ‘ಕಿಂಗ್’ ಸಿನಿಮಾಗಾಗಿ ಸಂಗೀತ ಮಾಡಲು ರೆಡಿಯಾಗಿದ್ದಾರೆ. ಈ ಸಿನಿಮಾಗೆ ಶಾರುಖ್‌ ಮಗಳು ಸುಹಾನಾ ಖಾನ್ ಕೂಡ ಇರಲಿದ್ದಾರೆ ಎನ್ನಲಾಗಿದೆ.

ಅಟ್ಲೀ ಅವರ ‘ಜವಾನ್’ ಚಿತ್ರಕ್ಕೆ ಅನಿರುದ್ಧ್ ರವಿಚಂದರ್ ಸಂಗೀತ ರಚಿಸಿದ್ದರು. ಈಗ ಶಾರುಖ್‌ ಅವರ ಮುಂದಿನ ಚಿತ್ರ ‘ಕಿಂಗ್’ ಸಿನಿಮಾಗಾಗಿ ಸಂಗೀತ ಮಾಡಲು ರೆಡಿಯಾಗಿದ್ದಾರೆ ಎಂದು ಮೂಲಗಳು ಬಹಿರಂಗಪಡಿಸಿವೆ. ಸುಜೋಯ್‌ ಘೋಷ್‌ ಮತ್ತು ಸಿದ್ಧಾರ್ಥ್‌ ಆನಂದ್‌ ನಿರ್ದೇಶನದ ʼಕಿಂಗ್‌ʼ ಟೈಟಲ್‌ನ ಸಿನಿಮಾದಲ್ಲಿ ತಂದೆ-ಮಗಳು ಜತೆಯಾಗಿ ಅಭಿನಯಿಸುತ್ತಿದ್ದಾರೆ ಎನ್ನಲಾಗಿದೆ. ಮುಂದಿನ ತಿಂಗಳು ಈ ಚಿತ್ರ ಸೆಟ್ಟೇರುವ ಸಾಧ್ಯತೆ ಇದೆ.

‘ಕಿಂಗ್’ ಒಂದು ರೀತಿಯ ಆ್ಯಕ್ಷನ್ ಥ್ರಿಲ್ಲರ್ ಆಗಿರುತ್ತದೆʼʼಎಂದು ವರದಿಯಾಗಿದೆ. ಸಿದ್ಧಾರ್ಥ್ ಮತ್ತು ಶಾರುಖ್ ಖಾನ್ ಪಠಾಣ್ ಚಿತ್ರೀಕರಣದ ಮೂಲಕ ಉತ್ತಮ ಬಾಂಧವ್ಯವನ್ನು ಹೊಂದಿದ್ದಾರೆ. ಇದೀಗ ಈ ಕಿಂಗ್‌ ಸಿನಿಮಾ ಮೂಲಕ ತಮ್ಮ ಸ್ನೇಹವನ್ನು ಮತ್ತಷ್ಟು ವಿಸ್ತರಿಸಲು ಸಿದ್ಧರಾಗಿದ್ದಾರೆ. ವಾಸ್ತವವಾಗಿ, ಸಿದ್ ಮತ್ತು ಅವರ ತಂಡವು ಈಗಾಗಲೇ ಈ ಪ್ರಾಜೆಕ್ಟ್‌ಗೆ ಸಕ್ರಿಯವಾಗಿ ತೊಡಗಿಸಿಕೊಂಡಿದೆ, ”ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: Zakir Naik: ಹಿಂದುಗಳನ್ನು ಮತಾಂತರಗೊಳಿಸುವ ಜಾಕೀರ್ ನಾಯ್ಕ್‌ನನ್ನು ಭಾರತದ ಚಕ್ರವರ್ತಿಯನ್ನಾಗಿಸಬೇಕು; ವಿವಾದ ಹುಟ್ಟುಹಾಕಿದ ಮೌಲ್ವಿ

ಸುಜೋಯ್ ಪ್ರಸ್ತುತ ದಿ ಕಿಂಗ್‌ಗಾಗಿ ಪ್ರಿ-ಪ್ರೊಡಕ್ಷನ್ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಅದೇ ಸಮಯದಲ್ಲಿ ಆ್ಯಕ್ಷನ್ ಥ್ರಿಲ್ಲರ್‌ನ ಸ್ಕ್ರಿಪ್ಟ್‌ಗೆ ಅಂತಿಮ ಸ್ಪರ್ಶವನ್ನು ನೀಡುತ್ತಿದ್ದಾರೆ. “ಕಿಂಗ್‌ನಲ್ಲಿ ಶಾರುಖ್‌ ಅವರ ಪಠಾಣ್ ಮತ್ತು ಜವಾನ್ ಸಿನಿಮಾಗಳಿಗಿಂತ ವಿಭಿನ್ನವಾಗಿರುತ್ತದೆ. ಇದು ಬಹಳಷ್ಟು ಚೇಸ್ ಸೀಕ್ವೆನ್ಸ್‌ಗಳೊಂದಿಗೆ ಇರಲಿದೆ. ಆದರೂ, ಮುಖ್ಯ ಕಥಾವಸ್ತುವು ಭಾವನಾತ್ಮಕವಾಗಿದೆ. ಸಾಕಷ್ಟು ತಿರುವುಗಳನ್ನು ಹೊಂದಿದೆ, ಇದರಿಂದಾಗಿ ಸುಜೋಯ್‌ಗೆ ನಿರ್ದೇಶನದ ಜವಾಬ್ದಾರಿಯನ್ನು ನೀಡಲಾಗಿದೆ, ”ಎಂದು ಮೂಲಗಳು ತಿಳಿಸಿವೆ. ಪಠಾಣ್ ಮತ್ತು ಜವಾನ್‌ನ ಸಿನಿಮಾಗಳ ಯಶಸ್ಸಿನ ಬಳಿಕ ಈ ಸಿನಿಮಾ ವಿಜಯೋತ್ಸವಕ್ಕೆ ಶಾರುಖ್‌ ಸಿದ್ಧವಾಗಿದ್ದಾರೆ.

Continue Reading

ಸಿನಿಮಾ

Cannes 2024: ಬ್ಯಾಂಡೇಜ್​ ಸುತ್ತಿಕೊಂಡೇ ರೆಡ್​ ಕಾರ್ಪೆಟ್ ಮೇಲೆ ಪೋಸ್‌ ಕೊಟ್ಟ ​ಐಶ್ವರ್ಯಾ ರೈ!

Cannes 2024: ಈ ವರ್ಷವೂ ನಟಿ ಐಶ್ವರ್ಯಾ ರೈ ರೆಡ್ ಕಾರ್ಪೆಟ್ ಮೇಲೆ ನಡೆದಿದ್ದಾರೆ. ಐಶ್ವರ್ಯಾ ಫಲ್ಗುಣಿ ಶೇನ್ ಪೀಕಾಕ್ ಗೌನ್ (Falguni Shane Peacock creation ) ಧರಿಸಿದ್ದರು. ವಿಶೇಷ ಏನೆಂದರೆ, ಕೈಗೆ ಬ್ಯಾಂಡೇಜ್​ ಸುತ್ತಿಕೊಂಡೇ ಅವರು ರೆಡ್​ ಕಾರ್ಪೆಟ್​ನಲ್ಲಿ (Cannes Red Carpet) ನಡೆದು ಬಂದಿದ್ದಾರೆ. ಅವರ ಫೋಟೊ ಮತ್ತು ವಿಡಿಯೊಗಳು ವೈರಲ್​ ಆಗಿವೆ.

VISTARANEWS.COM


on

Cannes 2024 Aishwarya Rai turns lady in black in Falguni
Koo

ಬೆಂಗಳೂರು: ವಿಶ್ವದ ಪ್ರತಿಷ್ಠಿತ ಚಲನಚಿತ್ರೋತ್ಸವಗಳಲ್ಲಿ ಕಾನ್ ಫಿಲ್ಮ್ ಫೆಸ್ಟಿವಲ್ (Cannes 2024) ಕೂಡ ಒಂದು. 2024ರ 77ನೇ ಕಾನ್ ಫಿಲ್ಮ್ ಫೆಸ್ಟಿವಲ್ ಮೇ 14ರಿಂದ ಆರಂಭ ಆಗಿದೆ. ಭಾರತದ 7 ಸಿನಿಮಾಗಳು 77ನೇ ಸಾಲಿನ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಪ್ರದರ್ಶನ ಕಾಣುತ್ತಿವೆ. ಪ್ರತಿ ವರ್ಷದಂತೆ ಈ ವರ್ಷವೂ ನಟಿ ಐಶ್ವರ್ಯಾ ರೈ ರೆಡ್ ಕಾರ್ಪೆಟ್ ಮೇಲೆ ನಡೆದಿದ್ದಾರೆ. ಐಶ್ವರ್ಯಾ ಫಲ್ಗುಣಿ ಶೇನ್ ಪೀಕಾಕ್ ಗೌನ್ (Falguni Shane Peacock creation ) ಧರಿಸಿದ್ದರು. ವಿಶೇಷ ಏನೆಂದರೆ, ಕೈಗೆ ಬ್ಯಾಂಡೇಜ್​ ಸುತ್ತಿಕೊಂಡೇ ಅವರು ರೆಡ್​ ಕಾರ್ಪೆಟ್​ನಲ್ಲಿ (Cannes Red Carpet) ನಡೆದು ಬಂದಿದ್ದಾರೆ. ಅವರ ಫೋಟೊ ಮತ್ತು ವಿಡಿಯೊಗಳು ವೈರಲ್​ ಆಗಿವೆ.

ಬುಧವಾರ (ಮೇ 15) ರಾತ್ರಿ ಐಶ್ವರ್ಯಾ ರೈ ಅವರು ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದರು. ಅವರ ಕೈಗೆ ಗಾಯ ಆಗಿದ್ದನ್ನು ನೋಡಿ ಅಭಿಮಾನಿಗಳಿಗೆ ಬೇಸರ ಆಗಿತ್ತು. ಕೈಗೆ ಪೆಟ್ಟಾಗಿರುವುದರಿಂದ ಈ ಬಾರಿ ಅವರು ಕಾನ್​ ಚಿತ್ರೋತ್ಸವದ ರೆಡ್​ ಕಾರ್ಪೆಟ್​ನಲ್ಲಿ ಹೆಜ್ಜೆ ಹಾಕುವುದು ಅನುಮಾನ ಎಂದು ಅನೇಕರು ಭಾವಿಸಿದ್ದರು. ಕಪ್ಪು, ಬಿಳಿ ಮತ್ತು ಗೋಲ್ಡನ್​ ಬಣ್ಣಗಳಿಂದ ವಿನ್ಯಾಸಗೊಂಡ ಗೌನ್​ ಧರಿಸಿ ಅವರು ಮಿಂಚಿದ್ದಾರೆ. ಬಲಗೈನಲ್ಲಿ ಬ್ಯಾಂಡೇಜ್​ ಇದ್ದರೂ ಕೂಡ ಅವರು ಆ ಬಗ್ಗೆ ಹೆಚ್ಚು ಗಮನ ನೀಡಿಲ್ಲ.

ಇದನ್ನೂ ಓದಿ: Cannes 2024 Fashion: ಕಾನ್‌ ಫಿಲ್ಮ್‌ ಫೆಸ್ಟಿವಲ್‌ನಲ್ಲಿ ಸೆಲೆಬ್ರೆಟಿಗಳ ಫ್ಯಾಷನ್‌ ಟ್ರೆಂಡ್‌ ಹೇಗಿದೆ ನೋಡಿ!

2002ರ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಐಶ್ವರ್ಯಾ ರೈ ಅವರು ಕೆಂಪು ಕಾರ್ಪೆಟ್‌ನಲ್ಲಿ ಭಾರೀ ಚಿನ್ನದ ಆಭರಣಗಳೊಂದಿಗೆ ನೀತಾ ಲುಲ್ಲಾ ಸೀರೆಯಲ್ಲಿ ಕಾಣಿಸಿಕೊಂಡಿದ್ದರು. ಆ ವರ್ಷ ನಟ ಶಾರುಖ್ ಖಾನ್ ಮತ್ತು ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಅವರೊಂದಿಗೆ ಉಪಸ್ಥಿತರಿದ್ದರು. ಅಂದಿನಿಂದ, ನಟಿ ಬಹುತೇಕ ಪ್ರತಿ ವರ್ಷ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಭಾಗಿಯಾಗುತ್ತಿದ್ದಾರೆ . ಲೋರಿಯಲ್ ಪ್ಯಾರಿಸ್‌ನ ಬ್ರ್ಯಾಂಡ್‌ ಅಂಬಾಸಿಡರ್‌ಗಳಲ್ಲಿ ಒಬ್ಬರಾಗಿ ಅವರು ಮತ್ತೊಮ್ಮೆ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಭಾಗಿಯಾಗುತ್ತಿದ್ದಾರೆ.

ಐಶ್ವರ್ಯಾ ಜತೆಗೆ, ನಟರಾದ ಅದಿತಿ ರಾವ್ ಹೈದರಿ, ಶೋಬಿತಾ ಧೂಳಿಪಾಲ ಮತ್ತು ಕಿಯಾರಾ ಆಡ್ವಾಣಿ ಕೂಡ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಊರ್ವಶಿ ರೌಟೇಲಾ ಅವರು ಈಗಾಗಲೇ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ತಮ್ಮ ಗುಲಾಬಿ ಬಣ್ಣದ ಉಡುಪಿನಿಂದ ಕಂಗೊಳಿಸಿದ್ದಾರೆ. ಪೋಸ್‌ ಕೂಡ ಕೊಟ್ಟಿದ್ದಾರೆ. 2024, ಮೇ 14 ರಿಂದ ಮೇ 25ರವರೆಗೂ ಕಾನ್ ಫಿಲ್ಮ್ ಫೆಸ್ಟಿವಲ್ ಫ್ರಾನ್ಸ್‌ನ ಫ್ರೆಂಚ್ ರಿವೇರಿಯಾದಲ್ಲಿ ಅದ್ಧೂರಿಯಾಗಿ ನಡೆಯಲಿದೆ.

Continue Reading

ದೇಶ

ಶಾರುಖ್‌ ಖಾನ್‌ ಜಾಹೀರಾತು ನೋಡಿ ಗುಟ್ಕಾ ತಿಂದ ಮಕ್ಕಳು; ನಟ ಸಾಯಲ್ಲ, ನಾವು ಸಾಯ್ತೀವಾ ಅಂದರು!

ಮಕ್ಕಳು ಗುಟ್ಕಾ ತಿಂದು, ಅದರ ಪರಿಣಾಮ ಗೊತ್ತಿರದೆ ಮಾತನಾಡಿದ ವಿಡಿಯೊವನ್ನು ಸತ್ಯ, ನ್ಯಾಯ, ಪ್ರೀತಿ ಎಂಬ ಫೇಸ್‌ಬುಕ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. “ನೀವು ಗುಟ್ಕಾ ತಿಂತಿದ್ದೀರಲ್ಲ, ಸತ್ತು ಹೋದ್ರೆ ಏನ್‌ ಗತಿ” ಎಂದು ವ್ಯಕ್ತಿಯೊಬ್ಬರು ಪ್ರಶ್ನೆ ಕೇಳುತ್ತಾರೆ. ಆಗ ಮಕ್ಕಳು, “ಶಾರುಖ್‌ ಖಾನ್‌ ಸತ್ತಿಲ್ಲ, ನಾವು ಸಾಯ್ತೀವಾ” ಎಂದಿದ್ದಾರೆ.

VISTARANEWS.COM


on

Shah Rukh Khan
Koo

ನವದೆಹಲಿ: ಸ್ಯಾಂಡಲ್‌ವುಡ್‌ನಿಂದ ಬಾಲಿವುಡ್‌ ಹೀರೊಗಳು, ಕ್ರಿಕೆಟಿಗರು, ಸೆಲೆಬ್ರಿಟಿಗಳು (Celebrities) ನೂರಾರು ಉತ್ಪನ್ನಗಳ ಜಾಹೀರಾತುಗಳಲ್ಲಿ (Advertisements) ಅಭಿನಯಿಸುವ ಮೂಲಕ, ಆ ಉತ್ಪನ್ನಗಳನ್ನೂ ತಾವೇ ಬಳಸಿದ್ದೇವೆ ಎಂದು ಹೇಳುವ ಮೂಲಕ ಅಥವಾ ನಟಿಸುವ ಮೂಲಕ ಕೋಟ್ಯಂತರ ಜನರನ್ನು ಸೆಳೆಯುತ್ತಾರೆ. ಇನ್ನು, ಅಭಿಮಾನಿಗಳು, ಅನುಯಾಯಿಗಳು ಕೂಡ ನೆಚ್ಚಿನ ನಟ, ಕ್ರಿಕೆಟಿಗನ ಜಾಹೀರಾತು ನೋಡಿ, ಆ ಉತ್ಪನ್ನಗಳನ್ನು ಬಳಸುತ್ತಾರೆ. ಆದರೆ, ಹೀಗೆ ನಟರು ಸೇರಿ ಸೆಲೆಬ್ರಿಟಿಗಳ ಜಾಹೀರಾತು ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಹೌದು, ಶಾರುಖ್‌ ಖಾನ್‌ ಅವರ ಪಾನ್‌ ಮಸಾಲ (Pan Masala) ಜಾಹೀರಾತಿನಿಂದ ಪ್ರಚೋದನೆಗೊಂಡು ಗುಟ್ಕಾ ಸೇವಿಸಿದ್ದಾರೆ. ಈ ವಿಡಿಯೊ (Viral Video) ಈಗ ಭಾರಿ ವೈರಲ್‌ ಆಗಿದೆ.

ಮಕ್ಕಳು ಗುಟ್ಕಾ ತಿಂದು, ಅದರ ಪರಿಣಾಮ ಗೊತ್ತಿರದೆ ಮಾತನಾಡಿದ ವಿಡಿಯೊವನ್ನು ಸತ್ಯ, ನ್ಯಾಯ, ಪ್ರೀತಿ ಎಂಬ ಫೇಸ್‌ಬುಕ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. “ನೀವು ಗುಟ್ಕಾ ತಿಂತಿದ್ದೀರಲ್ಲ, ಸತ್ತು ಹೋದ್ರೆ ಏನ್‌ ಗತಿ” ಎಂದು ವ್ಯಕ್ತಿಯೊಬ್ಬರು ಪ್ರಶ್ನೆ ಕೇಳುತ್ತಾರೆ. ಆಗ ಮಕ್ಕಳು, “ಶಾರುಖ್‌ ಖಾನ್‌ ಸತ್ತಿಲ್ಲ, ನಾವು ಸಾಯ್ತೀವಾ” ಎಂದಿದ್ದಾರೆ. “ಶಾರುಖ್‌ ಖಾನ್‌ ಏಕೆ ಸಾಯುತ್ತಾರೆ” ಎಂಬ ಪ್ರಶ್ನೆಗೆ, “ಶಾರುಖ್‌ ಖಾನ್‌ ಗುಟ್ಕಾ ತಿಂತಾರಲ್ಲ, ಅವ್ರೇ ಸಾಯಲ್ಲ, ನಾವ್‌ ಹೇಗೆ ಸಾಯ್ತೀವಿ” ಎಂದಿದ್ದಾರೆ. ಅಷ್ಟೇ ಅಲ್ಲ, “ಶಾರುಖ್ ಖಾನ್‌ ಗುಟ್ಕಾ ತಿನ್ನೋದು ನಿಮಗೆ ಹೇಗೆ ಗೊತ್ತು” ಎಂದು ಕೇಳಿದ್ದಕ್ಕೆ, “ಜಾಹೀರಾತಿನಲ್ಲಿ ನೋಡಿದ್ದೀವಲ್ಲ” ಎಂದಿದ್ದಾರೆ.

ಶಾರುಖ್‌ ಖಾನ್‌ ಪಾನ್‌ ಮಸಾಲ ಜಾಹೀರಾತಿನಲ್ಲಿ ನಟಿಸಿದ್ದನ್ನೇ ಈ ಮಕ್ಕಳು ನಿಜ ಎಂದು ಭಾವಿಸಿದ್ದಾರೆ. ಶಾರುಖ್‌ ಖಾನ್‌ ಗುಟ್ಕಾ ತಿಂತಾರೆ, ಅವರಿಗೇ ಏನೂ ಆಗಲ್ಲ. ಇನ್ನು ನಮಗೆ ಏನಾಗುತ್ತದೆ ಎಂಬ ಅಭಿಪ್ರಾಯಕ್ಕೆ ಬಂದು, ಚಿಕ್ಕ ವಯಸ್ಸಿನಲ್ಲೇ ಗುಟ್ಕಾ ತಿನ್ನೋದನ್ನು ಕಲಿತಿದ್ದಾರೆ. ಈ ವಿಡಿಯೊ ವೈರಲ್‌ ಆಗುತ್ತಲೇ ಸಾಮಾಜಿಕ ಜಾಲತಾಣಗಳಲ್ಲಿ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೆಲೆಬ್ರಿಟಿಗಳ ಜಾಹೀರಾತುಗಳಲ್ಲಿ ನಟಿಸುವಾಗ, ಆ ಉತ್ಪನ್ನದಿಂದ ಸಮಾಜದ ಮೇಲೆ ಉಂಟಾಗುವ ಪರಿಣಾಮ ಏನು ಎಂಬುದನ್ನು ಈ ವಿಡಿಯೊ ನೋಡಿ ಕಲಿಯಬೇಕಿದೆ ಎಂದು ಆಗ್ರಹಿಸಿದ್ದಾರೆ.

“ಸೆಲೆಬ್ರಿಟಿಗಳು ನಮ್ಮ ಕನ್ನಡದ ಕಣ್ಮಣಿ ಡಾಕ್ಟರ್ ರಾಜ್ ಕುಮಾರ್ ಮತ್ತು ಪುನೀತ್ ರಾಜಕುಮಾರ್ ಅವರಂತಹವರನ್ನು ನೋಡಿ ಕಲಿಯಬೇಕು. ಥೂ ನಿಮ್ಮ, ನಿಮಗೆಲ್ಲ ಇದನ್ನು ನೋಡಿ ನಾಚಿಕೆ ಆಗಬೇಕು. ಇಂತಹ ಜಾಹೀರಾತು ಕೊಟ್ಟು ಯುವ ಜನತೆಯ ದಾರಿ ತಪ್ಪಿಸುತಿರುವ ನಿಮಗೆ ಧಿಕ್ಕಾರವಿರಲಿ” ಎಂಬುದಾಗಿ ಒಬ್ಬರು ಪ್ರತಿಕ್ರಿಯಿಸಿದ್ದಾರೆ. ಮತ್ತೊಬ್ಬರು ಕಮೆಂಟ್‌ ಮಾಡಿದ್ದು, “ಈ ಗುಟ್ಕಾ ತಿಂದು ಮಕ್ಕಳು ಏನಾದರೂ ಮೃತಪಟ್ಟರೆ ಆಯಾ ಜಾಹೀರಾತು ಕಂಪನಿ ಹಾಗೂ ಜಾಹೀರಾತಿನಲ್ಲಿ ನಟಿಸುವ ಸೆಲೆಬ್ರಿಟಿಗಳು ಪರಿಹಾರ ನೀಡಬೇಕು ಎಂಬ ಕಾನೂನು ಬಂದರೆ ಮಾತ್ರ ಇದೆಲ್ಲ ಸರಿಯಾಗುತ್ತದೆ” ಎಂದಿದ್ದಾರೆ.

ಇದನ್ನೂ ಓದಿ: IPL 2024 : “ಶಾರುಖ್​ ಎಂದೂ ನಮ್ಮನ್ನು ಪ್ರಶ್ನಿಸಿಲ್ಲ”, ಎಲ್​ಎಸ್​​ಜಿ ಮಾಲೀಕನಿಗೆ ತಿರುಗೇಟು ಕೊಟ್ಟ ಗಂಭೀರ್​

Continue Reading

ಸಿನಿಮಾ

Chandu Champion: ಗುರುತೇ ಸಿಗದಂತೆ ಬದಲಾದ ಈ ಸ್ಟಾರ್‌ ನಟ ಯಾರು? ಪೋಸ್ಟರ್​ ವೈರಲ್​!

Chandu Champion: ಚಂದು ಚಾಂಪಿಯನ್ ಮೊದಲ ಪೋಸ್ಟರ್ ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿರುವ ನಟ, “ಚಾಂಪಿಯನ್ ಬರುತ್ತಿದ್ದಾನೆ. ನನ್ನ ವೃತ್ತಿಜೀವನದಲ್ಲೇ ಅತ್ಯಂತ ಸವಾಲಿನ ಮತ್ತು ವಿಶೇಷ ಚಿತ್ರದ ಮೊದಲ ಪೋಸ್ಟರ್ ಅನ್ನು ಹಂಚಿಕೊಳ್ಳಲು ಬಹಳ ಉತ್ಸುಕನಾಗಿದ್ದೇನೆ, ಹೆಮ್ಮೆಯಾಗುತ್ತಿದೆ. ಜೂನ್​​ 14ಕ್ಕೆ ಚಂದು ಚಾಂಪಿಯನ್​ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದೆ” ಎಂದು ಬರೆದುಕೊಂಡಿದ್ದಾರೆ.

VISTARANEWS.COM


on

Chandu Champion Injured Kartik Aaryan looks intense
Koo

ಬೆಂಗಳೂರು: ಕಾರ್ತಿಕ್ ಆರ್ಯನ್ ( Kartik Aaryan) ಅವರು ತಮ್ಮ ಮುಂಬರುವ ಚಿತ್ರ ‘ಚಂದು ಚಾಂಪಿಯನ್’ ನ (Chandu Champion) ಎರಡನೇ ಪೋಸ್ಟರ್‌ ಬಿಡುಗಡೆಗೊಳಿಸಿದ್ದಾರೆ. ಬಾಕ್ಸಿಂಗ್ ರಿಂಗ್‌ನಲ್ಲಿ ಗಾಯಗೊಂಡ ಮುಖದೊಂದಿಗೆ ಕಂಡಿದ್ದಾರೆ. ಮೊದಲ ಪೋಸ್ಟರ್ ಅನ್ನು ಮೇ 15ರಂದು ಅನಾವರಣಗೊಳಿಸಲಾಯಿತು. ಕಬೀರ್ ಖಾನ್ ನಿರ್ದೇಶನದ ಚಿತ್ರದಲ್ಲಿನ ತನ್ನ ಪಾತ್ರಕ್ಕಾಗಿ ಕಾರ್ತಿಕ್​​ ಗಮನಾರ್ಹ ರೂಪಾಂತರಕ್ಕೆ ಒಳಗಾಗಿರುವುದು ಕಂಡಿದೆ. ಕಠಿಣ ತಯಾರಿ ನಡೆಸಿರುವುದಾಗಿ ಕಂಡು ಬರುತ್ತಿದೆ.

ʼಚಂದು ಚಾಂಪಿಯನ್ʼ ಮೊದಲ ಪೋಸ್ಟರ್ ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿರುವ ನಟ, “ಚಾಂಪಿಯನ್ ಬರುತ್ತಿದ್ದಾನೆ. ನನ್ನ ವೃತ್ತಿಜೀವನದಲ್ಲೇ ಅತ್ಯಂತ ಸವಾಲಿನ ಮತ್ತು ವಿಶೇಷ ಚಿತ್ರದ ಮೊದಲ ಪೋಸ್ಟರ್ ಅನ್ನು ಹಂಚಿಕೊಳ್ಳಲು ಬಹಳ ಉತ್ಸುಕನಾಗಿದ್ದೇನೆ, ಹೆಮ್ಮೆಯಾಗುತ್ತಿದೆ. ಜೂನ್​​ 14ಕ್ಕೆ ʼಚಂದು ಚಾಂಪಿಯನ್ʼ​ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದೆ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Sara Ali Khan: ಬ್ರೇಕಪ್‌ ಕ್ಲ್ಯಾರಿಟಿ ಬೆನ್ನಲ್ಲೇ ಸಾರಾ ಆಯೋಜಿಸಿದ್ದ ಪಾರ್ಟಿಯಲ್ಲಿ ಕಾರ್ತಿಕ್ ಆರ್ಯನ್!

ಕಾರ್ತಿಕ್ ಆರ್ಯನ್ ಅವರ ಈ ಕಠಿಣ ಶ್ರಮಕ್ಕೆ ನಿರ್ದೇಶಕ ಕಬೀರ್ ಖಾನ್ ಟಿಪ್ಪಣಿಯನ್ನು ಬರೆದಿದ್ದಾರೆ. ʻʻಚಂದು ಚಾಂಪಿಯನ್‌ನ ಕಥೆಯು ನಂಬಲಾಗದಷ್ಟು ಸ್ಪೂರ್ತಿದಾಯಕ ನೈಜ ಕಥೆಯಾಗಿದೆ. ಆದರೆ ಈ ಚಾಂಪಿಯನ್ ಆಗಲು ಕಾರ್ತಿಕ್ ಮಾಡಿದ ಪ್ರಯಾಣವು ಸ್ಫೂರ್ತಿದಾಯಕವಾಗಿದೆ. ಶೇ. 39ರಷ್ಟು ಬಾಡಿ ಫ್ಯಾಟ್‌ ಕರಗಿಸಿದರುʼʼ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: A Movie Re-Release: ರೀ-ರಿಲೀಸ್ ಆಗ್ತಿದೆ ಉಪ್ಪಿಯ `A’ ಸಿನಿಮಾ : ನೆನಪುಗಳನ್ನು ಮೆಲುಕು ಹಾಕಿದ ನಟಿ ಚಾಂದಿನಿ!

ಕಬೀರ್ ಖಾನ್ ಆ್ಯಕ್ಷನ್​ ಕಟ್​ ಹೇಳಿರುವ ʻಈ ಚಂದು ಚಾಂಪಿಯನ್ʼ, ಓರ್ವ ಕ್ರೀಡಾಪಟುವಿನ ನೈಜ ಕಥೆಯನ್ನು ಬಿಚ್ಚಿಡಲಿದೆ. ಈ ಪಾತ್ರಕ್ಕಾಗಿ ಕಾರ್ತಿಕ್ ಅವರ ಪ್ರಯಾಣ ಗಮನಾರ್ಹವಾದದ್ದು. ಜೂನ್ 14 ರಂದು ಸಿನಿಮಾ ಬಿಡುಗಡೆ ಮಾಡಲು ನಿರ್ಧರಿಸಿದೆ ಚಿತ್ರತಂಡ.

Continue Reading
Advertisement
Bal Jeevan Bima
ಮನಿ ಗೈಡ್9 mins ago

Bal Jeevan Bima: ಮಕ್ಕಳ ಹೆಸರಲ್ಲಿ ನಿತ್ಯ 6 ರೂ.ನಂತೆ ಕಟ್ಟಿದರೆ 1 ಲಕ್ಷ ರೂ. ವಿಮೆಯ ರಕ್ಷಣೆ

road Accident in Bengaluru mysore
ಬೆಂಗಳೂರು10 mins ago

Road Accident : ಮೈಸೂರು- ಬೆಂಗಳೂರಲ್ಲಿ ಮೂವರ ಪ್ರಾಣ ಕಸಿದ ಮೂರು ಪ್ರತ್ಯೇಕ ಅಪಘಾತ

Swati Maliwal
ದೇಶ11 mins ago

Swati Maliwal: “ಪೀರಿಯೆಡ್ಸ್‌ ಆಗಿದೆ.. ಪ್ಲೀಸ್‌ ಬಿಟ್ಟು ಬಿಡು ಅಂದ್ರೂ ಕೇಳಲಿಲ್ಲ”-ಆಘಾತಕಾರಿ ಸಂಗತಿ ಬಿಚ್ಚಿಟ್ಟ ಸ್ವಾತಿ ಮಲಿವಾಲ್‌

Viral Video
ವೈರಲ್ ನ್ಯೂಸ್26 mins ago

Viral Video: ಅಳುತ್ತಾ ವಿದಾಯ ಹೇಳಿದ್ದೇಕೆ ಪಾಕಿಸ್ತಾನದ ಅತ್ಯಂತ ಕಿರಿಯ ಯೂಟ್ಯೂಬರ್?

1 year of CM Siddaramaiah government BJP prepares chargesheet and Congress gears up for counter
ರಾಜಕೀಯ35 mins ago

CM Siddaramaiah: ಸಿದ್ದರಾಮಯ್ಯ ಸರ್ಕಾರಕ್ಕೆ 1 ವರ್ಷ; ಚಾರ್ಜ್‌ಶೀಟ್‌ ರೆಡಿ ಮಾಡಿದ ಬಿಜೆಪಿ; ಕೌಂಟರ್‌ಗೆ ಕಾಂಗ್ರೆಸ್‌ ತಯಾರಿ

RCB vs CSK
ಕ್ರೀಡೆ35 mins ago

RCB vs CSK: ಆರ್​ಸಿಬಿ-ಚೆನ್ನೈ ಪಂದ್ಯಕ್ಕೆ ಮಳೆ ನಿಯಮ ಹೇಗಿದೆ?

anjali murder case culprit girish
ಕ್ರೈಂ36 mins ago

Anjali Murder Case: ರೈಲಿನಲ್ಲಿ ಮತ್ತೊಬ್ಬ ಮಹಿಳೆ ಕೊಲೆಗೆ ಯತ್ನಿಸಿದ ಅಂಜಲಿ ಹಂತಕ!

Shah Rukh Khan and Anirudh Ravichander to team up for King
ಬಾಲಿವುಡ್47 mins ago

Shah Rukh Khan: ಶಾರುಖ್‌ ಹೊಸ ಸಿನಿಮಾಗಾಗಿ ಕೈ ಜೋಡಿಸಿದ ಅನಿರುದ್ಧ್ ರವಿಚಂದರ್!

Air India
ದೇಶ51 mins ago

Air India: ಟಗ್ ಟ್ರ್ಯಾಕ್ಟರ್‌ಗೆ 180 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಡಿಕ್ಕಿ; ತಪ್ಪಿದ ಭಾರೀ ದೊಡ್ಡ ದುರಂತ

PM Narendra Modi
ದೇಶ52 mins ago

PM Narendra Modi: “ಮೊದಲ 100 ದಿನಗಳ ಬ್ಲೂಪ್ರಿಂಟ್‌ ರೆಡಿ; ಹೆಚ್ಚುವರಿ 25 ದಿನ ಯುವಕರಿಗೆ ಮೀಸಲು”- ಪ್ರಧಾನಿ ಮೋದಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ7 hours ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ9 hours ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ21 hours ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ24 hours ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು1 day ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ2 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ3 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20243 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20243 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌