ಪಬ್‌ಜಿ ಕೊಲೆ: ರಾತ್ರಿ ಗುಂಡು ಹಾರಿಸಿದ ಮಗ, ಬೆಳಗಿನವರೆಗೂ ಉಸಿರಾಡುತ್ತಿದ್ದ ತಾಯಿ - Vistara News

ಕ್ರೈಂ

ಪಬ್‌ಜಿ ಕೊಲೆ: ರಾತ್ರಿ ಗುಂಡು ಹಾರಿಸಿದ ಮಗ, ಬೆಳಗಿನವರೆಗೂ ಉಸಿರಾಡುತ್ತಿದ್ದ ತಾಯಿ

ಪಬ್‌ಜಿ ಕೊಲೆ ಸಂಬಂಧಿಸಿ ದಾರುಣ ವಿವರಗಳು ಹೊರಬಂದಿವೆ. ತಾಯಿಗೆ ಗುಂಡಿಕ್ಕಿದ ಮಗ ಆಕೆಯನ್ನು ಕೋಣೆಯಲ್ಲಿ ಕೂಡಿಹಾಕಿ ಅವಳು ಬದುಕಿದ್ದಾಳೋ ಅಥವಾ ಸತ್ತಿದ್ದಾಳೋ ಎಂದು ರಾತ್ರಿಯಿಡೀ ಪರೀಕ್ಷಿಸಿದ್ದ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಕ್ನೋ: ಲಕ್ನೋದಲ್ಲಿ ನಡೆದ ಪಬ್‌ಜಿ ಆನ್‌ಲೈನ್‌ ಗೇಮ್‌ಗೆ ಸಂಬಂಧಿಸಿದ ಕೊಲೆ ಪ್ರಕರಣದ ವಿವರಗಳು ಒಂದೊಂದಾಗಿ ಹೊರಬೀಳುತ್ತಿದ್ದು, ಪೊಲೀಸರೇ ಅವಾಕ್ಕಾಗಿದ್ದಾರೆ. ರಾತ್ರಿ ಮಗ ಗುಂಡು ಹಾರಿಸಿದ್ದರೂ ತಾಯಿ ಬೆಳಗಿನವರೆಗೂ ಜೀವಂತವಾಗಿದ್ದರು ಎಂಬ ಅಂಶವೂ ತಿಳಿದುಬಂದಿದೆ.

ಪಬ್‌ಜಿ ಆಡುವುದನ್ನು ತಡೆದಿದ್ದಕ್ಕೆ ಹದಿಹರೆಯದ ಹುಡುಗ ತನ್ನ ತಾಯಿಗೆ ಗುಂಡು ಹಾರಿಸಿದ ಘಟನೆ ಲಕ್ನೋದಲ್ಲಿ ನಡೆದಿತ್ತು. ತನ್ನ ತಂದೆಯ ಪಿಸ್ತೂಲಿನಿಂದ ತನ್ನ ತಾಯಿಗೆ ಗುಂಡು ಹಾರಿಸಿದ ನಂತರ, ಆತ ಅವಳನ್ನು ಕೋಣೆಯಲ್ಲಿ ಕೂಡಿಹಾಕಿದ್ದ. ಅವಳು ಜೀವಂತವಾಗಿದ್ದಾಳೊ ಅಥವಾ ಸತ್ತಿದ್ದಾಳೋ ಎಂದು ನಿರಂತರವಾಗಿ ಪರೀಕ್ಷಿಸುತ್ತಿದ್ದನಂತೆ ಆತ.

ಇದನ್ನೂ ಓದಿ: ಪಬ್-ಜಿ ಆಡಲು ಬಿಡಲಿಲ್ಲ ಎಂದು ತಾಯಿಯನ್ನೇ ಗುಂಡಿಟ್ಟು ಕೊಂದ 16ರ ಬಾಲಕ, ಬಳಿಕ ಮಾಡಿದ್ದೇನು?

ಪೊಲೀಸ್ ವರದಿಯ ಪ್ರಕಾರ, ತಾಯಿಯ ಶವವನ್ನು ಲಕ್ನೋದ ತನ್ನ ಮನೆಯಲ್ಲಿ ಮೂರು ದಿನಗಳ ಕಾಲ ಬಚ್ಚಿಟ್ಟಿದ್ದನಂತೆ. ಮರುದಿನ ಬೆಳಿಗ್ಗೆ ಅವನು ಕೋಣೆಯ ಬಾಗಿಲು ತೆರೆದಾಗ, ಅವನ ತಾಯಿ ಇನ್ನೂ ಉಸಿರಾಡುತ್ತಿದ್ದಳು ಎಂದು ಪೊಲೀಸರು ಬಹಿರಂಗಪಡಿಸಿದ್ದಾರೆ. ಈ ಮಾಹಿತಿಯನ್ನು ವಿಚಾರಣೆಯ ವೇಳೆ ಹುಡುಗ ಹೇಳಿಕೊಂಡಿದ್ದಾನೆ.

ಆಕೆಯನ್ನು ಉಳಿಸಬಹುದಿತ್ತಾ? ಆ ಹುಡುಗ ಮನಸ್ಸನ್ನು ಪರಿವರ್ತಿಸಿಕೊಂಡು, ತನ್ನನ್ನು ಹೆತ್ತು ಹೊತ್ತು ಸಾಕಿರುವುದನ್ನು ನೆನೆದು, ಬೆಳಿಗ್ಗೆ ಯಾರಿಗಾದರೂ ಮಾಹಿತಿ ನೀಡಿದ್ದರೆ, ತಾಯಿಯ ಜೀವವನ್ನು ಉಳಿಸಬಹುದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಹುಡುಗ ತನ್ನ ತಾಯಿಗೆ ಗುಂಡು ಹಾರಿಸಿದ ನಂತರ ಆಕೆಯನ್ನು ಪಕ್ಕದ ಕೋಣೆಯಲ್ಲಿ ಎಸೆದು ತನ್ನ ತಂಗಿಯನ್ನು ಮತ್ತೊಂದು ಕೋಣೆಯಲ್ಲಿ ಕೂಡಿಹಾಕಿದ್ದಾನೆ. ವಿಚಾರಣೆಯ ಸಮಯದಲ್ಲಿ, ತನ್ನ ಅಪರಾಧವನ್ನು ಒಪ್ಪಿಕೊಂಡಿದ್ದಾನೆ. ಮತ್ತು ಪಬ್‌ಜಿ ಆಡಲು ಅವಕಾಶ ನೀಡದ್ದಕ್ಕಾಗಿ ತಾಯಿಯ ಮೇಲೆ ಕೋಪಗೊಂಡಿದ್ದು, ತಂದೆಯ ಬಂದೂಕಿನಿಂದ ಅವಳನ್ನು ಕೊಂದಿರುವುದಾಗಿ ಹೇಳಿದ್ದಾನೆ. ಇಷ್ಟಕ್ಕೂ ಸುಮ್ಮನಾಗದ ಆತ ಸ್ನೇಹಿತನನ್ನು ಸಹ ಕರೆದು ಶವವನ್ನು ವಿಲೇವಾರಿ ಮಾಡಲು ಸಹಾಯ ಮಾಡುವಂತೆ ಗನ್ ತೋರಿಸಿ ಬೆದರಿಕೆ ಹಾಕಿದ್ದನಂತೆ. ಸಹಾಯ ಮಾಡಿದ್ದಕ್ಕಾಗಿ ಅವನಿಗೆ 50 ರೂ.ಗಳನ್ನು ನೀಡಿ, ಘಟನೆಯ ಬಗ್ಗೆ ಯಾರಿಗೂ ಹೇಳದಂತೆ ಎಚ್ಚರಿಕೆ ನೀಡಿದ್ದ ಎಂದು ವಿಚಾರಣೆಯ ವೇಳೆ ಬಾಯಿಬಿಟ್ಟಿದ್ದಾನೆ.

ಇದನ್ನೂ ಓದಿ: ಚಿಕ್ಕಮಗಳೂರಿನಲ್ಲಿ ಮಗನ ಪಬ್‌ಜೀ ಹುಚ್ಚಾಟ ತಡೆದ ತಾಯಿ ಗುಂಡೇಟಿಗೆ ಬಲಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ವೈರಲ್ ನ್ಯೂಸ್

Actor Darshan: ದರ್ಶನ್‌ ಮೇಲಿನ ಅಂಧಾಭಿಮಾನ; ಮಗನನ್ನೇ ಕೈದಿ ಮಾಡಿದ ಹುಚ್ಚು ಫ್ಯಾನ್!

Actor Darshan: ಒಂದು ವರ್ಷದ ಮಗುವಿಗೆ ಜೈಲು ಕೈದಿಯ ರೀತಿ ಬಿಳಿ ಬಟ್ಟೆ ಹಾಕಿಸಿ ಈತ ಫೋಟೋ ‌ಶೂಟ್ ಮಾಡಿಸಿದ್ದು, ಅದನ್ನು ಸೋಶಿಯಲ್‌ ಮೀಡಿಯಾದಲ್ಲಿ ಅಪ್‌ಲೋಡ್‌ ಮಾಡಿದ್ದಾನೆ. ಮಗುವಿಗೆ ದರ್ಶನ್‌ಗೆ ಕೊಡಲಾದ ಕೈದಿ ನಂಬರ್ ನೀಡಿದ್ದಾನೆ. ಕೈ ಕೋಳದ ಮಾದರಿ, ಕೈದಿಗಳ ರೀತಿ ಬಿಳಿ ಬಟ್ಟೆ ಹಾಕಿಸಿದ್ದಾನೆ.

VISTARANEWS.COM


on

actor darshan crazy fans
Koo

ಬೆಂಗಳೂರು: ನಟ ದರ್ಶನ್ (Actor Darshan) ಮೇಲಿನ ಮಿತಿಮೀರಿದ ಅಭಿಮಾನದ ಹುಚ್ಚಿನಿಂದಾಗಿ ಅಭಿಮಾನಿಯೊಬ್ಬ (Darshan Fan) ತಾನು ಹೆತ್ತ ಮಗುವನ್ನೇ ಕೈದಿ (Prisoner) ಮಾಡಿ ಹಾಕಿದ್ದಾನೆ! ಹೌದು, ಇದು ನಟನ ಮೇಲಿನ ಅಂಧಾಭಿಮಾನದ ಎಫೆಕ್ಟ್. ಮಗುವಿಗೆ ಪರಪ್ಪನ ಅಗ್ರಹಾರದ (Parappana Agrahara) ಕೈದಿಯಂತೆ ಫೋಟೋ ಶೂಟ್ (Photo Shoot) ಮಾಡಿಸಿದ್ದಾನೆ ಈ ಪುಣ್ಯಾತ್ಮ.

ರೇಣುಕಾಸ್ವಾಮಿ ಹತ್ಯೆ (Renuka Swamy Murder) ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್‌ನ ಅಭಿಮಾನಿಗಳು ದಿನಕ್ಕೊಂದು ಅವತಾರ ತೋರುತ್ತಿದ್ದಾರೆ. ಇದೀಗ ಹೊಸದು. ಒಂದು ವರ್ಷದ ಮಗುವಿಗೆ ಜೈಲು ಕೈದಿಯ ರೀತಿ ಬಿಳಿ ಬಟ್ಟೆ ಹಾಕಿಸಿ ಈತ ಫೋಟೋ ‌ಶೂಟ್ ಮಾಡಿಸಿದ್ದು, ಅದನ್ನು ಸೋಶಿಯಲ್‌ ಮೀಡಿಯಾದಲ್ಲಿ ಅಪ್‌ಲೋಡ್‌ ಮಾಡಿದ್ದಾನೆ. ಮಗುವಿಗೆ ದರ್ಶನ್‌ಗೆ ಕೊಡಲಾದ ಕೈದಿ ನಂಬರ್ ನೀಡಿದ್ದಾನೆ. ಕೈ ಕೋಳದ ಮಾದರಿ, ಕೈದಿಗಳ ರೀತಿ ಬಿಳಿ ಬಟ್ಟೆ ಹಾಕಿಸಿದ್ದಾನೆ.

ನಟನ ಮೇಲಿನ ಹುಚ್ಚು ಅಭಿಮಾನಕ್ಕೆ ಅಭಿಮಾನಿಗಳಿಂದ ನಿತ್ಯ ಒಂದೊಂದು ಹೊಸ ಟ್ರೆಂಡ್ ಸೃಷ್ಟಿಯಾಗುತ್ತಿದೆ. ದರ್ಶನ್‌ಗೆ ನೀಡಿರುವ ಕೈದಿ ನಂಬರ್ ಧರಿಸಿಕೊಂಡು ಒಬ್ಬಾತ ಫೋಟೋ ಶೂಟ್ ಮಾಡಿಸಿಕೊಂಡಿದ್ದ. ಇದೀಗ ಮಗುವಿಗೆ ಹೀಗೆ ಫೋಟೋ ಶೂಟ್ ಮಾಡಿಸಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ. ನಾನಾ ಥರದ ಅಭಿಪ್ರಾಯಗಳು ವ್ಯಕ್ತವಾಗಿವೆ.

ʼಹಿಂದೆಲ್ಲ ಮಕ್ಕಳಿಗೆ ಕೃಷ್ಣನ ವೇಷ, ಸ್ವಾಮಿ ವಿವೇಕಾನಂದರ ವೇಷ, ಅಂಬೇಡ್ಕರ್ ಅವರಂತಹ ಗಣ್ಯ ವ್ಯಕ್ತಿಗಳ ರೀತಿಯ ಫೋಟೋ ಶೂಟ್ ಟ್ರೆಂಡ್ ಆಗಿತ್ತು. ಆದರೆ ಈಗ ಬೆಳೆಯುವ ಮಗುವಿಗೆ ಕೈದಿ ಫೋಟೋ ‌ಶೂಟ್ ಮಾಡಿಸೋದೆ ಟ್ರೆಂಡ್ ಆಗಿದೆʼ ಎಂದು ಒಬ್ಬರು ಹೇಳಿದ್ದಾರೆ. “ಈಗಿಂದಾನೇ ಮಗನನ್ನು ಜೈಲಿಗೆ ಕಳಿಸೋ ಪ್ಲಾನ್‌ ಇದು. ನಟ ಒಳ್ಳೇದು ಮಾಡಿದಾಗ ಅಭಿಮಾನಿಗಳು ಸಂಭ್ರಮಿಸಿ ತಪ್ಪೇನೂ ಇಲ್ಲ. ಆದರೆ ಕೆಟ್ಟದು ಮಾಡಿದಾಗ ಖಂಡಿಸಿʼ ಎಂದು ಮತ್ತೊಬ್ಬರು ಬರೆದಿದ್ದಾರೆ.

ಫೋನ್‌ಗಾಗಿ ಕಿತ್ತಾಡಿದ ಪ್ರೇಮಿಗಳು, ಲವರ್‌ ಬಾಯ್‌ಗೆ ಸಾರ್ವಜನಿಕರ ಗೂಸಾ

ಹುಬ್ಬಳ್ಳಿ: ಪ್ರೇಮಕಲಹ ಬೀದಿಗೆ ಬಂದರೆ ಸಾರ್ವಜನಿಕರಿಂದ ಏಟೂ ತಿನ್ನಬೇಕಾಗುತ್ತದೆ ಎಂಬುದಕ್ಕೆ ಈ ಘಟನೆ ಉದಾಹರಣೆ. ಫೋನ್‌ಗಾಗಿ ರಸ್ತೆ ಪಕ್ಕದಲ್ಲೇ ಪ್ರೇಮಿಗಳು ಜಗಳ ಮಾಡಿಕೊಂಡಿದ್ದು, ಹುಡುಗಿಯ ಕತ್ತಿನ ಸುತ್ತ ಶಾಲು ಹಾಕಿ ಎಳೆದಾಡಿದ ಹುಡುಗನಿಗೆ ಸಾರ್ವಜನಿಕರ ಗೂಸಾ ಬಿದ್ದಿದೆ.

ಹುಬ್ಬಳ್ಳಿಯ ಕೊಪ್ಪಿಕರ ರಸ್ತೆಯ ಮಾಲ್ ಬಳಿ ಘಟನೆ ನಡೆದಿದೆ. ಕಿತ್ತಾಡುತ್ತಿರುವ ಪ್ರೇಮಿಗಳ ಜಗಳದ ವಿಡಿಯೋ ಇದೀಗ ವೈರಲ್ ಆಗುತ್ತಿದೆ. ಮಳೆ ಸುರಿಯುತ್ತಿದ್ದರೂ ಲೆಕ್ಕಿಸದೆ ರಸ್ತೆ ಪಕ್ಕದಲ್ಲಿ ನಿಂತು ಇಬ್ಬರೂ ಜಗಳ ಮಾಡಿಕೊಂಡಿದ್ದಾರೆ. ಫೋನ್‌ ಕೊಡು ಎಂದು ಹುಡುಗ ಪೀಡಿಸಿದ್ದು, ಆಕೆ ಕೊಡದೆ ಹೋದಾಗ ಆಕೆಯ ಕೊರಳಿಗೆ ಸ್ಕಾರ್ಫ್‌ ಸುತ್ತು ಹಾಕಿ ಎಳೆದಾಡಿದ್ದಾನೆ ಹುಡುಗ.

ಲವರ್‌ ಬಾಯ್‌ನ ಈ ಕೃತ್ಯ ನೋಡಿದ ಸ್ಥಳೀಯರು ರೊಚ್ಚಿಗೆದ್ದು ಮಧ್ಯಪ್ರವೇಶಿಸಿದ್ದಾರೆ. ನಮ್ಮ ಮಧ್ಯೆ ನೀವೂ ಬಂದಿದ್ದೇಕೆ ಎಂದು ಉಡಾಫೆಯಿಂದ ಹುಡುಗ ಉತ್ತರಿಸಿದಾಗ ಕ್ರುದ್ಧರಾದ ಸಾರ್ವಜನಿಕರು ಆತನಿಗೆ ಚೆನ್ನಾಗಿ ಗೂಸಾ ಕೊಟ್ಟಿದ್ದಾರೆ. ʼಸಾರ್ವಜನಿಕ ಸಭ್ಯತೆ ಪಾಲಿಸಿʼ ಎಂದು ಪಾಠ ಹೇಳಿದ್ದಾರೆ. ಲವರ್ಸ್ ಜಗಳದ ವಿಡಿಯೋ ಸಾಮಾಜಿಕ‌ ಜಾಲತಾಣಗಳಲ್ಲಿ‌ ಫುಲ್ ವೈರಲ್ ಆಗುತ್ತಿದೆ.

ಇದನ್ನೂ ಓದಿ: Murder Case : ರೌಡಿಯಾಗಲು ಹೊರಟವನನ್ನು ಕೊಂದು ಹಾಕಿದ್ರು ಪುಂಡರು

Continue Reading

ಕ್ರೈಂ

Physical Abuse: ಎಚ್‌ಐವಿ ಪೀಡಿತ ವ್ಯಕ್ತಿಯ ಪ್ರಜ್ಞೆ ತಪ್ಪಿಸಿ ಅತ್ಯಾಚಾರ, ಚಿನ್ನಾಭರಣ ದರೋಡೆ

Physical Abuse: ಪಾಟೀಲ್ ತಾನು ಕ್ಷಯರೋಗದಿಂದ ಬಳಲುತ್ತಿದ್ದೇನೆ ಎಂದು ಹೇಳಿಕೊಂಡು ಸಂತ್ರಸ್ತನ ವಿಶ್ವಾಸ ಗಳಿಸಿದ್ದ. ಇತ್ತೀಚೆಗಷ್ಟೇ ಸಂತ್ರಸ್ತನ ಪತ್ನಿ ಮತ್ತು ಮಕ್ಕಳು ಸ್ವಗ್ರಾಮಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ಆರೋಪಿ ಪರಿಸ್ಥಿತಿಯ ಲಾಭ ಪಡೆದು ಕೃತ್ಯ ಎಸಗಿದ್ದಾನೆ.

VISTARANEWS.COM


on

crimes in karnataka physical abuse
Koo

ಬೆಂಗಳೂರು: ಬೆಂಗಳೂರಿನ ಹೊರವಲಯದಲ್ಲಿ ಒಂದು ಶಾಕಿಂಗ್‌ ಘಟನೆ (shocking incident) ನಡೆದಿದೆ. 56 ವರ್ಷದ ಎಚ್‌ಐವಿ ಪೀಡಿತ (HIV) ವ್ಯಕ್ತಿಯೊಬ್ಬರನ್ನು ಅವರ ನಿವಾಸದಲ್ಲೇ ಅತ್ಯಾಚಾರ (Physical Abuse) ಎಸಗಿ ದರೋಡೆ (Robbery) ಮಾಡಿರುವ ಆಘಾತಕಾರಿ ಘಟನೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ವರದಿಯಾಗಿದೆ.

ಬೆಂಗಳೂರು ಉತ್ತರ ತಾಲೂಕಿನ ನೆಲಮಂಗಲ (bangalore rural) ಸಮೀಪದ ಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಪೊಲೀಸರ ಪ್ರಕಾರ, ಎನ್‌ಜಿಒವೊಂದರಲ್ಲಿ ಕೆಲಸ ಮಾಡುತ್ತಿದ್ದ ಸಂತ್ರಸ್ತ ಒಂದು ವರ್ಷದ ಹಿಂದೆ ಆರೋಪಿ ಶ್ಯಾಮ್ ಪಾಟೀಲ್ ಎಂಬಾತನ ಜೊತೆ ಸ್ನೇಹ ಬೆಳೆಸಿದ್ದ. ಪಾಟೀಲ್ ತಾನು ಕ್ಷಯರೋಗದಿಂದ ಬಳಲುತ್ತಿದ್ದೇನೆ ಎಂದು ಹೇಳಿಕೊಂಡು ಸಂತ್ರಸ್ತನ ವಿಶ್ವಾಸ ಗಳಿಸಿದ್ದ. ಇತ್ತೀಚೆಗಷ್ಟೇ ಸಂತ್ರಸ್ತನ ಪತ್ನಿ ಮತ್ತು ಮಕ್ಕಳು ಸ್ವಗ್ರಾಮಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ಆರೋಪಿ ಪರಿಸ್ಥಿತಿಯ ಲಾಭ ಪಡೆದು ಕೃತ್ಯ ಎಸಗಿದ್ದಾನೆ.

ಸಂತ್ರಸ್ತ ಒಂಟಿಯಾಗಿರುವ ವಿಚಾರ ತಿಳಿದ ಪಾಟೀಲ್ ಅವರ ಮನೆಗೆ ಭೇಟಿ ನೀಡಿ ಜ್ಯೂಸ್‌ನಲ್ಲಿ ನಿದ್ದೆ ಮಾತ್ರೆ ಬೆರೆಸಿ ಕೊಟ್ಟಿದ್ದಾನೆ. ಸಂತ್ರಸ್ತ ಪ್ರಜ್ಞಾಹೀನರಾಗುತ್ತಿದ್ದಂತೆ, ಪಾಟೀಲ್ ಅವರ ಮುಖಕ್ಕೆ ಪ್ರಜ್ಞೆ ತಪ್ಪಿಸುವ ಲಿಕ್ವಿಡ್‌ ಸಿಂಪಡಿಸಿದ್ದಾನೆ. ನಂತರ ಅವರ ಮೇಲೆ ಅತ್ಯಾಚಾರ ಎಸಗಿ, ಕಬೋರ್ಡ್‌ನಲ್ಲಿಟ್ಟಿದ್ದ 88 ಗ್ರಾಂ ಚಿನ್ನಾಭರಣ, 20 ಸಾವಿರ ನಗದು, ಮೊಬೈಲ್ ಹ್ಯಾಂಡ್ ಸೆಟ್ ದೋಚಿ ಪರಾರಿಯಾಗಿದ್ದಾನೆ.

ಸಂತ್ರಸ್ತ ಮರುದಿನ ಬೆಳಗ್ಗೆ ಎಚ್ಚೆತ್ತಾಗ ತಾನು ದರೋಡೆಯಾಗಿರುವುದು ಗಮನಕ್ಕೆ ಬಂದಿದೆ. ಅವರು ಮಾದನಾಯಕನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆರೋಪಿ ಶ್ಯಾಮ್ ಪಾಟೀಲ್‌ಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಫೋನ್‌ಗಾಗಿ ಕಿತ್ತಾಡಿದ ಪ್ರೇಮಿಗಳು, ಲವರ್‌ ಬಾಯ್‌ಗೆ ಸಾರ್ವಜನಿಕರ ಗೂಸಾ

ಹುಬ್ಬಳ್ಳಿ: ಪ್ರೇಮಕಲಹ ಬೀದಿಗೆ ಬಂದರೆ ಸಾರ್ವಜನಿಕರಿಂದ ಏಟೂ ತಿನ್ನಬೇಕಾಗುತ್ತದೆ ಎಂಬುದಕ್ಕೆ ಈ ಘಟನೆ ಉದಾಹರಣೆ. ಫೋನ್‌ಗಾಗಿ ರಸ್ತೆ ಪಕ್ಕದಲ್ಲೇ ಪ್ರೇಮಿಗಳು ಜಗಳ ಮಾಡಿಕೊಂಡಿದ್ದು, ಹುಡುಗಿಯ ಕತ್ತಿನ ಸುತ್ತ ಶಾಲು ಹಾಕಿ ಎಳೆದಾಡಿದ ಹುಡುಗನಿಗೆ ಸಾರ್ವಜನಿಕರ ಗೂಸಾ ಬಿದ್ದಿದೆ.

lovers fight hubli

ಹುಬ್ಬಳ್ಳಿಯ ಕೊಪ್ಪಿಕರ ರಸ್ತೆಯ ಮಾಲ್ ಬಳಿ ಘಟನೆ ನಡೆದಿದೆ. ಕಿತ್ತಾಡುತ್ತಿರುವ ಪ್ರೇಮಿಗಳ ಜಗಳದ ವಿಡಿಯೋ ಇದೀಗ ವೈರಲ್ ಆಗುತ್ತಿದೆ. ಮಳೆ ಸುರಿಯುತ್ತಿದ್ದರೂ ಲೆಕ್ಕಿಸದೆ ರಸ್ತೆ ಪಕ್ಕದಲ್ಲಿ ನಿಂತು ಇಬ್ಬರೂ ಜಗಳ ಮಾಡಿಕೊಂಡಿದ್ದಾರೆ. ಫೋನ್‌ ಕೊಡು ಎಂದು ಹುಡುಗ ಪೀಡಿಸಿದ್ದು, ಆಕೆ ಕೊಡದೆ ಹೋದಾಗ ಆಕೆಯ ಕೊರಳಿಗೆ ಸ್ಕಾರ್ಫ್‌ ಸುತ್ತು ಹಾಕಿ ಎಳೆದಾಡಿದ್ದಾನೆ ಹುಡುಗ.

ಲವರ್‌ ಬಾಯ್‌ನ ಈ ಕೃತ್ಯ ನೋಡಿದ ಸ್ಥಳೀಯರು ರೊಚ್ಚಿಗೆದ್ದು ಮಧ್ಯಪ್ರವೇಶಿಸಿದ್ದಾರೆ. ನಮ್ಮ ಮಧ್ಯೆ ನೀವೂ ಬಂದಿದ್ದೇಕೆ ಎಂದು ಉಡಾಫೆಯಿಂದ ಹುಡುಗ ಉತ್ತರಿಸಿದಾಗ ಕ್ರುದ್ಧರಾದ ಸಾರ್ವಜನಿಕರು ಆತನಿಗೆ ಚೆನ್ನಾಗಿ ಗೂಸಾ ಕೊಟ್ಟಿದ್ದಾರೆ. ʼಸಾರ್ವಜನಿಕ ಸಭ್ಯತೆ ಪಾಲಿಸಿʼ ಎಂದು ಪಾಠ ಹೇಳಿದ್ದಾರೆ. ಲವರ್ಸ್ ಜಗಳದ ವಿಡಿಯೋ ಸಾಮಾಜಿಕ‌ ಜಾಲತಾಣಗಳಲ್ಲಿ‌ ಫುಲ್ ವೈರಲ್ ಆಗುತ್ತಿದೆ.

ಇದನ್ನೂ ಓದಿ: Murder Case : ರೌಡಿಯಾಗಲು ಹೊರಟವನನ್ನು ಕೊಂದು ಹಾಕಿದ್ರು ಪುಂಡರು

Continue Reading

Latest

Viral Video: ರಸ್ತೆ ಮೇಲೆಯೇ ಮಹಿಳೆಯ ವಶೀಕರಣ! 4.5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಲೂಟಿ

Viral Video: ಪತಿಗೆ ಟಿಫಿನ್ ನೀಡಿ ಹಿಂದಿರುಗುತ್ತಿದ್ದ ಮಹಿಳೆಯನ್ನು ರಾಜಸ್ಥಾನದ ಉದಯಪುರ ಬೀದಿಯಲ್ಲಿ ಹಾಡುಹಗಲೇ ಸಂಮೋಹನಗೊಳಿಸಿ ಆಕೆಯಿಂದ 4.5 ಲಕ್ಷ ಮೌಲ್ಯದ ಚಿನ್ನ, ಮೊಬೈಲ್ ಫೋನ್ ಮತ್ತು ಹಣವನ್ನು ದರೋಡೆ ಮಾಡಲಾಗಿದೆ.ದುಷ್ಕರ್ಮಿಗಳಲ್ಲಿ ಒಬ್ಬರು ಆಕೆಯ ಕೈಯಿಂದ 50 ರೂಪಾಯಿ ನೋಟನ್ನು ತೆಗೆದುಕೊಂಡರು, ಮತ್ತು ಇನ್ನೊಬ್ಬ ದುಷ್ಕರ್ಮಿ ನೋಟನ್ನು ಮತ್ತೆ ಅವಳ ಕೈಯಲ್ಲಿ ಇಟ್ಟನು. ಕೆಲವೇ ಸೆಕೆಂಡುಗಳಲ್ಲಿ, ರೇಖಾ ಪ್ರಜ್ಞೆ ಕಳೆದುಕೊಂಡರು ಮತ್ತು ಅವರ ಸೂಚನೆಗಳನ್ನು ಅನುಸರಿಸಿದ್ದಾರೆ. ಮುಂದೇನಾಯಿತು? ಈ ಸುದ್ದಿ ಓದಿ.

VISTARANEWS.COM


on

Koo

ಇತ್ತೀಚಿನ ದಿನಗಳಲ್ಲಿ ಕಳ್ಳತನ ಪ್ರಕರಣ ಹೆಚ್ಚು ನಡೆಯುತ್ತಿದ್ದು, ಹಾಡಹಗಲಿನಲ್ಲೇ ಸಾರ್ವಜನಿಕರು ಓಡಾಡುವ ಸ್ಥಳಗಳಲ್ಲೇ ಕಳ್ಳರು ದರೋಡೆ ಶುರು ಮಾಡಿದ್ದಾರೆ. ಇದೀಗ ಇಂತಹದೊಂದು ಘಟನೆ ರಾಜಸ್ಥಾನದ ಉದಯಪುರ ಬೀದಿಯಲ್ಲಿ ನಡೆದಿದ್ದು, ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿ ವೈರಲ್ (Viral Video )ಆಗಿದೆ.

ಜೂನ್ 28ರಂದು ಪತಿಗೆ ಟಿಫಿನ್ ನೀಡಿ ಹಿಂದಿರುಗುತ್ತಿದ್ದ ಮಹಿಳೆಯನ್ನು ರಾಜಸ್ಥಾನದ ಉದಯಪುರ ಬೀದಿಯಲ್ಲಿ ಹಾಡಹಗಲೇ ಸಂಮೋಹನಗೊಳಿಸಿ ಆಕೆಯಿಂದ 4.5 ಲಕ್ಷ ಮೌಲ್ಯದ ಚಿನ್ನ, ಮೊಬೈಲ್ ಫೋನ್ ಮತ್ತು ಹಣವನ್ನು ದರೋಡೆ ಮಾಡಲಾಗಿದೆ. ಸಂತ್ರಸ್ತೆಯನ್ನು ರೇಖಾ ಜೈನ್ ಎಂದು ಗುರುತಿಸಲಾಗಿದೆ. ಇಡೀ ಘಟನೆಯು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವೈರಲ್ ಆಗಿದೆ.

ವಿಡಿಯೊದಲ್ಲಿ ಮಹಿಳೆ ದೆಹಲಿ ಗೇಟ್ ಜಂಕ್ಷನ್ ಬಳಿಯ ವಾಚ್‌ಶಾಪ್ ಹೊರಗಿನ ಬೀದಿಯಲ್ಲಿ ನಡೆದುಹೋಗುವಾಗ ಇಬ್ಬರು ವ್ಯಕ್ತಿಗಳು ಅವಳನ್ನು ತಡೆದರು. ಅವರು ಆಕೆಯ ಬಳಿ ಕೆಲವು ಪ್ರಶ್ನೆಗಳನ್ನು ಕೇಳುತ್ತಿದ್ದರೂ ಮತ್ತು ರೇಖಾ ಅದಕ್ಕೆ ಉತ್ತರಿಸುತ್ತಿದ್ದರು. ನಂತರ ಅವಳು ತನ್ನ ಪರ್ಸ್‌ನಿಂದ 50 ರೂಪಾಯಿಗಳನ್ನು ತೆಗೆದುಕೊಂಡು ಅವರಿಗೆ ನೀಡಿದಳು.

ದುಷ್ಕರ್ಮಿಗಳಲ್ಲಿ ಒಬ್ಬರು ಆಕೆಯ ಕೈಯಿಂದ 50 ರೂಪಾಯಿ ನೋಟನ್ನು ತೆಗೆದುಕೊಂಡರು, ಮತ್ತು ಇನ್ನೊಬ್ಬ ದುಷ್ಕರ್ಮಿ ನೋಟನ್ನು ಮತ್ತೆ ಅವಳ ಕೈಯಲ್ಲಿ ಇಟ್ಟನು. ಕೆಲವೇ ಸೆಕೆಂಡುಗಳಲ್ಲಿ, ರೇಖಾ ಪ್ರಜ್ಞೆ ಕಳೆದುಕೊಂಡರು ಮತ್ತು ಅವರ ಸೂಚನೆಗಳನ್ನು ಅನುಸರಿಸಿದ್ದಾರೆ. ಈ ವೇಳೆ ಅವರು ತಮ್ಮ ಬಳಿ ಇದ್ದ ಚಿನ್ನ, ಮೊಬೈಲ್ ಫೋನ್ ಮತ್ತು ಹಣವನ್ನು ನೀಡಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ರೇಖಾ ಪ್ರಜ್ಞೆ ಬಂದ ಬಳಿಕ ತನ್ನ ಪತಿಗೆ ವಿಚಾರ ತಿಳಿಸಿದ್ದು, ಇಬ್ಬರು ಸೇರಿ ನಗರದ ಸೂರಜ್ಪೋಲ್ ಪೊಲೀಸ್ ಠಾಣೆಗೆ ತೆರಳಿ ಪ್ರಕರಣ ದಾಖಲಿಸಿದ್ದಾರೆ. ದೂರಿನಲ್ಲಿ ರೇಖಾ, ಆರೋಪಿಗಳು ತಾನು ನಂಬಿದ ದೇವರ ಬಗ್ಗೆ ಕೇಳಿದ್ದು, ಅದಕ್ಕೆ ಆಕೆ ಭಗವಾನ್ ಮಹಾವೀರ ಸ್ವಾಮಿಯ ಬಗ್ಗೆ ಪ್ರಸ್ತಾಪಿಸಿದಾಗ, ಆಕೆಯ ಬಳಿ ಹಣ ಕೇಳಿದ್ದಾರೆ. ಅವಳು ತನ್ನ ಪರ್ಸ್‌ನಿಂದ 50 ರೂಪಾಯಿಗಳನ್ನು ತೆಗೆದುಕೊಂಡು ಅದನ್ನು ಧಾರ್ಮಿಕ ಕಾರಣಕ್ಕಾಗಿ ಎಂದು ಭಾವಿಸಿ ಅವರಿಗೆ ನೀಡಿದಳು. ದುಷ್ಕರ್ಮಿಗಳಲ್ಲಿ ಒಬ್ಬರು ಆಕೆಯ ಕೈಯಿಂದ 50 ರೂಪಾಯಿ ನೋಟನ್ನು ತೆಗೆದುಕೊಂಡರು, ಮತ್ತು ಇನ್ನೊಬ್ಬ ದುಷ್ಕರ್ಮಿ ನೋಟನ್ನು ಮತ್ತೆ ಅವಳ ಕೈಯಲ್ಲಿ ಇಟ್ಟನು.

ಇದನ್ನೂ ಓದಿ: ಶಿಕ್ಷಣ ತಜ್ಞ ಡಾ ಎಂ ಆರ್ ಜಯರಾಮ್‌ಗೆ ಬೆಂಗಳೂರು ವಿವಿಯಿಂದ ಗೌರವ ಡಾಕ್ಟರೇಟ್

ಕೆಲವೇ ಸೆಕೆಂಡುಗಳಲ್ಲಿ, ರೇಖಾ ಪ್ರಜ್ಞೆ ಕಳೆದುಕೊಂಡರು ಮತ್ತು ಅವರ ಸೂಚನೆಗಳನ್ನು ಅನುಸರಿಸಿದರು ಎಂಬುದಾಗಿ ಪೊಲೀಸರಿಗೆ ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸಿಸಿಟಿವಿವನ್ನು ಪರೀಕ್ಷಿಸಿದಾಗ ರೇಖಾ ಪೊಲೀಸರಿಗೆ ನೀಡಿದ ವಿವರಗಳು ಸಿಸಿಟಿವಿ ದೃಶ್ಯಾವಳಿಗಳಿಂದ ದೃಢಪಟ್ಟಿವೆ. ಪೊಲೀಸರು ಈಗ ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Continue Reading

ಕ್ರೈಂ

Dengue fever: ಮಾರಕ ಡೆಂಗ್ಯು ಜ್ವರಕ್ಕೆ ಬಾಲಕಿ ಬಲಿ

Dengue fever: ಹಾಸನ ತಾಲ್ಲೂಕಿನ, ಬೊಮ್ಮನಾಯಕಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಅಕ್ಷತಾ (13) ಮೃತಪಟ್ಟ ಬಾಲಕಿ. ಹಾಸನದ ಖಾಸಗಿ ಶಾಲೆಯಲ್ಲಿ ಏಳನೇ ತರಗತಿ ಓದುತ್ತಿದ್ದ ಅಕ್ಷತಾ, ಕೂಲಿ ಕೆಲಸ ಮಾಡುವ ಅಪ್ಪಣ್ಣಶೆಟ್ಟಿ ಹಾಗೂ ಪದ್ಮ ದಂಪತಿ ಪುತ್ರಿ.

VISTARANEWS.COM


on

dengue fever hassan girl death
Koo

ಹಾಸನ: ಡೆಂಗ್ಯು ಜ್ವರದ (Dengue fever) ಪರಿಣಾಮ ಬಾಲಕಿಯೊಬ್ಬಳು (Girl death) ಮೃತಪಟ್ಟಿದ್ದಾಳೆ. ರಾಜ್ಯದಲ್ಲಿ ದಿನೇ ದಿನೆ ಡೆಂಗ್ಯು ಪೀಡಿತರ ಸಂಖ್ಯೆ ಹೆಚ್ಚುತ್ತಿದ್ದು, ಸಣ್ಣ ಮಕ್ಕಳಲ್ಲಿ ಇದು ಮಾರಣಾಂತಿಕವಾಗುತ್ತಿರುವುದು ಆತಂಕ ಮೂಡಿಸಿದೆ.

ಹಾಸನ ತಾಲ್ಲೂಕಿನ, ಬೊಮ್ಮನಾಯಕಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಅಕ್ಷತಾ (13) ಮೃತಪಟ್ಟ ಬಾಲಕಿ. ಹಾಸನದ ಖಾಸಗಿ ಶಾಲೆಯಲ್ಲಿ ಏಳನೇ ತರಗತಿ ಓದುತ್ತಿದ್ದ ಅಕ್ಷತಾ, ಕೂಲಿ ಕೆಲಸ ಮಾಡುವ ಅಪ್ಪಣ್ಣಶೆಟ್ಟಿ ಹಾಗೂ ಪದ್ಮ ದಂಪತಿ ಪುತ್ರಿ. ಕಳೆದ ಬುಧವಾರ ಜ್ವರದಿಂದ ಬಳಲುತ್ತಿದ್ದ ಬಾಲಕಿಗೆ ಬೊಮ್ಮನಾಯಕಹಳ್ಳಿ ಗ್ರಾಮದಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಅಕ್ಷತಾ ಪೋಷಕರು ಚಿಕಿತ್ಸೆ ಕೊಡಿಸಿದ್ದರು. ಅರಕಲಗೂಡು ತಾಲ್ಲೂಕಿನ ದೊಡ್ಡಮಗ್ಗೆ ಗ್ರಾಮದವರಾದ ಅಕ್ಷತಾಳ ಪೋಷಕರು ಕೂಲಿ ಕೆಲಸ ಮಾಡುವ ಬಡವರಾಗಿದ್ದಾರೆ.

ಗುಣಮಖಳಾಗದಿದ್ದಾಗ ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೂ ಚೇತರಿಸಿಕೊಳ್ಳದ ಅಕ್ಷತಾಳನ್ನು ನಂತರ ಮತ್ತೊಂದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಾಲಕಿ ಸ್ಥಿತಿ ಗಂಭೀರವಾಗುತ್ತಿದ್ದಂತೆ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಿ ಎಂದು ಖಾಸಗಿ ಆಸ್ಪತ್ರೆ ವೈದ್ಯರು ಹೇಳಿದ್ದರು. ಬಳಿಕ ಪೋಷಕರು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಸಾವನ್ನಪ್ಪಿದ್ದಾಳೆ.

ರಾಜಧಾನಿಯಲ್ಲಿ ಡೆಂಗ್ಯು ಜ್ವರಕ್ಕೆ ಯುವಕನ ಬಲಿ

ಬೆಂಗಳೂರು: ಕಗ್ಗದಾಸಪುರದ 27 ವರ್ಷದ ಯುವಕ ಡೆಂಗ್ಯು ಸೋಂಕಿನಿಂದಲೇ (Dengue Fever) ಸಾವಿಗೀಡಾಗಿದ್ದಾರೆ ಎಂದು ಬಿಬಿಎಂಪಿ (BBMP) ಖಚಿತಪಡಿಸಿದೆ. ಕಳೆದ ಶುಕ್ರವಾರ ಎರಡು ಡೆಂಗ್ಯು ಶಂಕಿತ ಸಾವಿನ ಪ್ರಕರಣಗಳು ಸಂಭವಿಸಿದ್ದವು. ಇದರಲ್ಲಿ ಒಂದು ಸಾವು ಡೆಂಗ್ಯುವಿನಿಂದಾಗಿದೆ ಎಂದು ಬಿಬಿಎಂಪಿ ಹೆಲ್ತ್ ಆಡಿಟ್ (BBMP Health Audit) ಖಚಿತಪಡಿಸಿದೆ.

ಕಗ್ಗದಾಸಪುರದ ಯುವಕನ ಸಾವಿಗೆ ಡೆಂಗ್ಯು ಕಾರಣವವಾಗಿದೆ. ಆದರೆ 80ರ ವೃದ್ಧೆಯ ಸಾವಿಗೆ ಕ್ಯಾನ್ಸರ್ ಕಾರಣ ಎಂದು ಬಿಬಿಎಂಪಿ ಹೆಲ್ತ್ ಆಡಿಟ್ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ನಗರದಲ್ಲಿ ಸದ್ಯ 1743 ಆಕ್ಟಿವ್ ಡೆಂಗ್ಯು ಕೇಸ್‌ಗಳು ಇವೆ.

ಹೊಸದಾಗಿ 213 ಡೆಂಗ್ಯು ಪ್ರಕರಣಗಳ ಪತ್ತೆಯಾಗಿದ್ದು, ಜೂನ್ ತಿಂಗಳಲ್ಲಿ 1742 ಜನರಿಗೆ ಡೆಂಗ್ಯು ಸೋಂಕು ತಗುಲಿದೆ. ಮಹಿಳೆಯರು ಮತ್ತು ಮಕ್ಕಳು ಡೆಂಗ್ಯು ಸೋಂಕಿಗೆ ಬೇಗ ಒಳಗಾಗುತ್ತಿದ್ದಾರೆ ಎನ್ನಲಾಗಿದ್ದು, ಗರ್ಭಿಣಿಯರಲ್ಲಿ ಡೆಂಗ್ಯು ಹೆಚ್ಚಿನ ಹಾನಿ ಎಸಗುತ್ತಿರುವುದರಿಂದಾಗಿ ಹೆಚ್ಚಿನ ಎಚ್ಚರ ವಹಿಸಲು ಸಲಹೆ ನೀಡಲಾಗಿದೆ.

ಇದೂವರೆಗೂ ನಗರದಲ್ಲಿ ಇಬ್ಬರು ಡೆಂಗ್ಯು ಜ್ವರಕ್ಕೆ ಬಲಿಯಾಗಿದ್ದಾರೆ. ಸಿವಿ ರಾಮನ್ ನಗರದ 27 ವರ್ಷದ ಯುವಕ ಡೆಂಗ್ಯು ಜ್ವರಕ್ಕೆ ಬಲಿಯಾಗಿದ್ದು, ಈತ ತೀವ್ರ ಜ್ವರದಿಂದ ಬಳಲಿ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾನೆ ಎಂದು ಬಿಬಿಎಂಪಿ ಮೂಲಗಳು ಮಾಹಿತಿ ನೀಡಿವೆ.

ಇದನ್ನೂ ಓದಿ: Dengue Fever: ರಾಯಚೂರಲ್ಲಿ 6 ವರ್ಷದ ಮಗುವಿಗೆ ಡೆಂಗ್ಯೂ; ದಾವಣಗೆರೆ ಜಿಲ್ಲೆಯಲ್ಲಿ 142 ಪ್ರಕರಣಗಳು ಪತ್ತೆ!

Continue Reading
Advertisement
train service
ಬೆಂಗಳೂರು10 mins ago

Train services: ಗೋಲಗುಂಬಜ್ ಎಕ್ಸ್‌ಪ್ರೆಸ್‌ ವೇಳಾಪಟ್ಟಿ ಪರಿಷ್ಕರಣೆ; ಬೆಂಗಳೂರಿನಿಂದ ವಿಶೇಷ ರೈಲುಗಳ ಓಡಾಟ

Pawan Kalyan
ದೇಶ21 mins ago

Pawan Kalyan: ವೇತನವೇ ಬೇಡ ಎಂದ ಪವನ್‌ ಕಲ್ಯಾಣ್‌- ಮತ್ತೊಮ್ಮೆ ಗಮನ ಸೆಳೆದ ಆಂಧ್ರ ಡಿಸಿಎಂ

actor darshan crazy fans
ವೈರಲ್ ನ್ಯೂಸ್24 mins ago

Actor Darshan: ದರ್ಶನ್‌ ಮೇಲಿನ ಅಂಧಾಭಿಮಾನ; ಮಗನನ್ನೇ ಕೈದಿ ಮಾಡಿದ ಹುಚ್ಚು ಫ್ಯಾನ್!

Harshika Poonacha
ಸ್ಯಾಂಡಲ್ ವುಡ್35 mins ago

Harshika Poonacha: ಮದುವೆಯಾಗಿ ವರ್ಷದೊಳಗೆ ಸಿಹಿ ಸುದ್ದಿ ಹಂಚಿಕೊಂಡ ಹರ್ಷಿಕಾ ಪೂಣಚ್ಚ–ಭುವನ್

Jasprit Bumrah
ಕ್ರೀಡೆ39 mins ago

Jasprit Bumrah: ವಿಶ್ವಕಪ್​ ಗೆದ್ದ ಖುಷಿಯಲ್ಲಿ ಜಸ್​ಪ್ರೀತ್​ ಬುಮ್ರಾಗೆ ಟ್ರೀಟ್​ ಕೊಡಿಸಿದ ಪತ್ನಿ

Virat Kohli
ಕ್ರಿಕೆಟ್1 hour ago

Virat Kohli: ನನ್ನ ​ಅಹಂಕಾರವೇ ಬ್ಯಾಟಿಂಗ್​ ವೈಫಲ್ಯಕ್ಕೆ ಕಾರಣ ಎಂದ ವಿರಾಟ್​ ಕೊಹ್ಲಿ; ವಿಡಿಯೊ ವೈರಲ್​

crimes in karnataka physical abuse
ಕ್ರೈಂ1 hour ago

Physical Abuse: ಎಚ್‌ಐವಿ ಪೀಡಿತ ವ್ಯಕ್ತಿಯ ಪ್ರಜ್ಞೆ ತಪ್ಪಿಸಿ ಅತ್ಯಾಚಾರ, ಚಿನ್ನಾಭರಣ ದರೋಡೆ

Indian Origin Businessman
ವಿದೇಶ2 hours ago

Indian Origin Businessman: 8,300 ಕೋಟಿ ರೂ. ವಂಚನೆ; ಭಾರತೀಯ ಮೂಲದ ಅಮೆರಿಕದ ಉದ್ಯಮಿಗೆ ಜೈಲು

Ms Universal Petite 2024
ಕರ್ನಾಟಕ2 hours ago

Ms Universal Petite 2024: ಜಾಗತಿಕ ಸೌಂದರ್ಯ ಸ್ಪರ್ಧೆಯಲ್ಲಿ ಕನ್ನಡತಿ, ಶಿರಸಿ ಮೂಲದ ಡಾ. ಶ್ರುತಿಗೆ ಕಿರೀಟ

Parliament Sessions
ರಾಜಕೀಯ2 hours ago

Parliament Sessions: ಲೋಕಸಭೆಯಲ್ಲಿ ಇಂದು ಮೋದಿ ಭಾಷಣ; ರಾಹುಲ್‌ ಗಾಂಧಿ ಆರೋಪಗಳಿಗೆ ಪ್ರಧಾನಿ ಉತ್ತರವೇನು? ಇಲ್ಲಿದೆ Live

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ17 hours ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ2 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು2 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ3 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ3 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ4 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು5 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

ಟ್ರೆಂಡಿಂಗ್‌