Karnataka Election: ಸಿದ್ದರಾಮಯ್ಯ ಮುಂದಿನ ಸಿಎಂ ಆಗಲಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ - Vistara News

ಕರ್ನಾಟಕ

Karnataka Election: ಸಿದ್ದರಾಮಯ್ಯ ಮುಂದಿನ ಸಿಎಂ ಆಗಲಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್

Karnataka Election: ಬಡವರ ಪರ ಇರುವ ನಾಯಕರಾಗಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರೇ ಮುಂದಿನ ಮುಖ್ಯಮಂತ್ರಿ ಆಗಬೇಕು ಎಂದು ರಮೇಶ್‌ ಕುಮಾರ್‌ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

VISTARANEWS.COM


on

Karnataka Election news Siddaramaiah should be next CM says Former Speaker Ramesh Kumar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೋಲಾರ: ವಿಧಾನಸಭಾ ಚುನಾವಣೆ (Karnataka Election) ಸಂಬಂಧ ಕಾಂಗ್ರೆಸ್‌ ಈಗಾಗಲೇ ಪ್ರಚಾರ ಕಾರ್ಯವನ್ನು ಆರಂಭ ಮಾಡಿದೆ. ಶ್ರೀನಿವಾಸಪುರ ತಾಲೂಕಿನ ಗೌನಿಪಲ್ಲಿಯ ಭಾರತ್ ಜೋಡೊ ಕಾರ್ಯಕ್ರಮದಲ್ಲಿ ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಅವರು ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪರ ಬ್ಯಾಟ್‌ ಬೀಸಿದ್ದಾರೆ. ಮುಂದಿನ ಮುಖ್ಯಮಂತ್ರಿ ಅವರೇ ಆಗಬೇಕು ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಸಿಎಂ ಆಗಬೇಕು ಎಂದು ಜನ ಮಾತನಾಡುತ್ತಿದ್ದಾರೆ. ಅವರು ಬಡ ಜನರ ಪರವಾಗಿ ಇದ್ದಾರೆ ಎಂಬ ಕಾರಣಕ್ಕಾಗಿ ಈ ಕೂಗು ಕೇಳಿಬರುತ್ತಿದೆ. ಕಾಂಗ್ರೆಸ್‌ನಲ್ಲಿ ಕೆಪಿಸಿಸಿ ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಪ್ರಮುಖ ನಾಯಕರಿದ್ದಾರೆ. ಅನ್ನ, ನೀರು, ಊಟ ಕೊಟ್ಟ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಬೇಕು ಎಂಬುದು ಎಲ್ಲರ ಅಭಿಪ್ರಾಯವಾಗಿದೆ ಎಂದು ಹೇಳಿದರು.

ನಾನು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬಗ್ಗೆ ಮಾತನಾಡುವುದಿಲ್ಲ. ನಾವೀಗ ಪಕ್ಕದ ಸಿದ್ದರಾಮಯ್ಯ ಅವರ ಕ್ಷೇತ್ರದಲ್ಲಿದ್ದೇವೆ. ಅವರನ್ನು ಮುಂದಿನ ಮುಖ್ಯಮಂತ್ರಿಯನ್ನಾಗಿ ಮಾಡಬೇಕು ಎಂದು ರಮೇಶ್ ಕುಮಾರ್ ಘೋಷಣೆ ಕೂಗಿದರು.

ಇದನ್ನೂ ಓದಿ: Ramesh Jarkiholi : ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ, ಚಿಕಿತ್ಸೆ ಕೊಡಿಸಲಿ: ರಮೇಶ್ ಜಾರಕಿಹೊಳಿ ಆರೋಪಕ್ಕೆ ಡಿ.ಕೆ. ಶಿವಕುಮಾರ್‌ ಮೊದಲ ಪ್ರತಿಕ್ರಿಯೆ

ಗಾಂಧೀಜಿಗೆ ಅಂದು ತಲೆ ಬಗ್ಗಿಸಿ ನಮಸ್ಕಾರ ಮಾಡುತ್ತಲೇ ಎದ್ದವನು ಶೂಟ್ ಮಾಡಿದ್ದ. ಹೀಗಾಗಿ ಇಂದು ಯಾರಾದರೂ ಬಗ್ಗಿ ನಮಸ್ಕಾರ ಮಾಡಿದರೆ ನನಗೂ ಭಯ ಆಗುತ್ತೆ. ಅದಕ್ಕಾಗಿ ರಾಹುಲ್ ಗಾಂಧಿ ಇಂದು ಭಾರತ್ ಜೋಡೊ ಯಾತ್ರೆ ಮಾಡುತ್ತಿದ್ದಾರೆ. ಗಾಂಧಿಯನ್ನು ಕೊಂದ ಗೋಡ್ಸೆ ಆರ್‌ಎಸ್‌ಎಸ್‌ನವನು. ಈ ದೇಶವನ್ನು ಮುನ್ನಡೆಸುತ್ತಿರುವ ಬಿಜೆಪಿ ಹಾಗೂ ಗೋಡ್ಸೆ ಒಂದೇ ಎಂದು ಹೇಳಿದರು.ಬುರ್ಕಾ, ಲವ್‌ ಜಿಹಾದ್ ಪ್ರಸ್ತಾಪ ಮಾಡುತ್ತಾರೆ. ಎಲ್ಲ ಧರ್ಮದವರು ಒಂದಾಗಿ ಬಾಳಬೇಕು ಎಂಬುದೇ ರಾಹುಲ್ ಗಾಂಧಿ ಅವರ ಜೋಡೊ ಯಾತ್ರೆಯ ಉದ್ದೇಶವಾಗಿದೆ. ನಾನು ಗೆದ್ದರೆ ವಿಧಾನಸೌಧಕ್ಕೆ ಹೋಗುತ್ತೇನೆ. ಇಲ್ಲದಿದ್ದರೆ ಮನೆಗೆ ಹೋಗುತ್ತೇನೆ. ನಿಮ್ಮೆಲ್ಲರಿಗೆ ಧ್ವನಿಯಾಗಿ ನಾನು ಅಸೆಂಬ್ಲಿಗೆ ಹೋಗಬೇಕು ಎಂದು ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಬೆಂಗಳೂರು

Actor Darshan :‌ ಜೈಲಿನಲ್ಲಿ ನೂರು ದಿನ ಕಳೆದ ನಟ ದರ್ಶನ್‌ಗೆ ನಾಳೆ‌ ಸಿಗುತ್ತಾ ಜಾಮೀನು

Actor Darshan :‌ ಜೈಲಿನಲ್ಲಿ ನೂರು ದಿನ ಕಳೆದಿರುವ ನಟ ದರ್ಶನ್‌ಗೆ ನಾಳೆ‌ ಸೋಮವಾರ ಜಾಮೀನು ಸಿಗುತ್ತಾ ಎಂಬುದನ್ನು ಕಾದುನೋಡಬೇಕಿದೆ.

VISTARANEWS.COM


on

By

Actor Darshan who spent 100 days in jail will get bail tomorrow
Koo

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Murder case) ನಟ ದರ್ಶನ್ (Actor Darshan) ಜೈಲು ಸೇರಿ ಇಂದಿಗೆ (ಸೆ.29ಕ್ಕೆ) 100 ದಿನಗಳಾಗಿವೆ. ಪರಪ್ಪನ ಅಗ್ರಹಾರದಿಂದ ಸ್ಥಳಾಂತರಗೊಂಡು ಬಳ್ಳಾರಿ ಜೈಲಿನಲ್ಲಿ ಸೆರೆಮನೆ ವಾಸ ಅನುಭವಿಸಿದ ದರ್ಶನ್, ನೂರು ದಿನ ಎರಡು ಜೈಲಿನಲ್ಲಿ ಕಳೆದಿದ್ದು, ಈಗ ಜಾಮೀನು ಕೋರಿ ಕೋರ್ಟ್ ಮೊರೆ ಹೋಗಿದ್ದಾರೆ. ಹಾಗಾದರೆ ದರ್ಶನ್ ಪಾಲಿಗೆ ಕಳೆದ ನೂರು ದಿನ ಹೇಗಿತ್ತು?

ಗೆಳತಿ ಪವಿತ್ರಾಗೌಡಗೆ ಚಿತ್ರದುರ್ಗದ ರೇಣುಕಾಸ್ವಾಮಿ ಅಶ್ಲೀಲ ಸಂದೇಶ ಕಳಿಸಿದ್ದಕ್ಕೆ ಸಿಟ್ಟಾದ ನಟ ದರ್ಶನ್‌ ಮತ್ತು‌ ಗ್ಯಾಂಗ್‌ ಪಟ್ಟಣಗೆರೆ ಶೆಡ್‌ಗೆ ಕಿಡ್ನ್ಯಾಪ್‌ ಮಾಡಿಕೊಂಡು ಬಂದು ಹತ್ಯೆ ನಡೆಸಿದ್ದರು. ಬಳಿಕ ಮೃತದೇಹವನ್ನು ಸುಮನಹಳ್ಳಿ ಬ್ರಿಡ್ಜ್‌ ಸಮೀಪದ ರಾಜಕಾಲುವೆಯಲ್ಲಿ ಬಿಸಾಡಿ ಹೋಗಿದ್ದರು. ಈ ಸಂಬಂಧ ತನಿಖೆಗಿಳಿದಾಗ ನಟ ದರ್ಶನ್‌ ಕೈವಾಡ ಇರುವುದು ತಿಳಿದುಬಂದಿತ್ತು. ಹೀಗಾಗಿ ಕಳೆದ ಜೂನ್ 11ರಂದು ಕಾಮಾಕ್ಷಿಪಾಳ್ಯ ಪೊಲೀಸರು ನಟ ದರ್ಶನ್ ಬಂಧಿಸಿ ವಿಚಾರಣೆ ನಡೆಸಿದ್ದರು. ಸುಮಾರು 12 ದಿನ ಪೊಲೀಸ್ ಕಸ್ಟಡಿಯಲ್ಲಿ ವಿಚಾರಣೆ, ತನಿಖೆ ಎದುರಿಸಿದ್ದ ದರ್ಶನ್‌ನನ್ನು ಜೂನ್ 22 ರಂದು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿತ್ತು.

ಜೂನ್ 22ರಂದು ಕಾಮಾಕ್ಷಿಪಾಳ್ಯ ಪೊಲೀಸರು ದರ್ಶನ್‌ನ ಪರಪ್ಪನ ಅಗ್ರಹಾರ ಜೈಲಿಗೆ ಬಿಟ್ಟು ಬಂದಿದ್ದರು. ಅಂದಿನಿಂದ ನಟ ದರ್ಶನ್ ಜೈಲಿನಲ್ಲಿದ್ದು, ಸೆಂಚುರಿ ದಾಟಿದೆ. ಇನ್ನು ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲು ಸೇರಿದ ಬಳಿಕ ರಾಜಾತಿಥ್ಯ ಪಡೆದ ವಿವಾದ ಕೂಡ ಎದುರಾಗಿತ್ತು. ರೌಡಿಶೀಟರ್‌ಗಳ ಜತೆಗೂಡಿ ರಾಜಾತಿಥ್ಯ ಪಡೆದ ಆರೋಪ ಎದುರಿಸಿದ ದರ್ಶನ್ ಮೇಲೆ ಎರಡು ಪ್ರತ್ಯೇಕ ಎಫ್ಐಆರ್‌ಗಳು ಕೂಡ ದಾಖಲಾಗಿತ್ತು.‌

ಇದನ್ನೂ ಓದಿ: Actor Darshan : ನಟ ದರ್ಶನ್ ಬಿಡುಗಡೆಗೆ ಮುಹೂರ್ತ ಫಿಕ್ಸ್; ಜನ್ಮ ಜಾತಕದ ಪ್ರಕಾರ ಶುಭ ಸಮಯ ಶುರು

ಜೈಲಿನ ಲಾನ್‌ನಲ್ಲಿ‌ ಕುಳಿತು ಸಿಗರೇಟ್ ಸೇವನೆ ಹಾಗೂ ಆರೋಪಿ ಮೊಬೈಲ್‌ನಲ್ಲಿ ವಿಡಿಯೋ ಕರೆಯಲ್ಲಿ ಮಾತಾನಾಡಿದ್ದಕ್ಕೆ ದರ್ಶನ್ ವಿರುದ್ಧ ಎರಡು ಪ್ರತ್ಯೇಕ ಕೇಸ್ ದಾಖಲಿಸಿ ತನಿಖೆ ಕೂಡ ನಡೆಸಲಾಗಿತ್ತು. ಈ ಬೆನ್ನಲ್ಲೆ ಪೊಲೀಸರು ದರ್ಶನ್ ಮತ್ತು ಗ್ಯಾಂಗ್‌ನನ್ನು ಬೇರೆಬೇರೆ ಜೈಲುಗಳಿಗೆ ಸ್ಥಳಾಂತರ ಮಾಡಲು ಕೋರ್ಟ್‌ನಲ್ಲಿ ಮನವಿ ಮಾಡಿದ್ದರು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ದರ್ಶನ್‌ರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲು ಆದೇಶಿಸಿತ್ತು.‌

ರಾಜಾತಿಥ್ಯ ಆರೋಪ ಎದುರಿಸಿದ್ದ ದರ್ಶನ್ ಗ್ಯಾಂಗ್ ಆಗಸ್ಟ್ 29 ರಂದು ಬಳ್ಳಾರಿ ಜೈಲುಗೆ ಶಿಫ್ಟ್ ಮಾಡಲಾಗಿತ್ತು. ಕಳೆದ 32 ದಿನಗಳಿಂದ ದರ್ಶನ್ ಬಳ್ಳಾರಿ ಜೈಲಿನಲ್ಲಿ ಮೊಕ್ಕಾಂ ಹೂಡಿದ್ದಾರೆ. ಈ ನಡುವೆ ದರ್ಶನ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಸಿಟಿ ಸಿವಿಲ್ ಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ ನಡೆದಿದೆ. ಕಾಮಾಕ್ಷಿಪಾಳ್ಯ ಪೊಲೀಸರು ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಿದ್ದಾರೆ. ಇದೇ ಸೋಮವಾರ ಅಂದರೆ ಸೆ.30ರಂದು ಜಾಮೀನು ಅರ್ಜಿ ವಿಚಾರಣೆ ನಡೆಯಲಿದ್ದು, ನೂರು ದಿನಗಳ ನಂತರ ನಟ ದರ್ಶನ್‌ಗೆ ಜಾಮೀನು ಸಿಗುತ್ತಾ ಎಂಬುದನ್ನು ಕಾದು ನೋಡಬೇಕಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Pralhad Joshi : ಎಚ್‌ಡಿಕೆ ಬಗ್ಗೆ ಹಂದಿ ಪದ ಬಳಸಿದ ಲೋಕಾಯುಕ್ತ ಎಡಿಜಿಪಿ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಗರಂ

Pralhad Joshi : ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಬಗ್ಗೆ ಹಂದಿ ಪದ ಬಳಸಿದ ಲೋಕಾಯುಕ್ತ ಎಡಿಜಿಪಿ ಕ್ಷಮಾಪಣೆ ಕೇಳದೆ ಇದ್ದರೆ, ಕೇಡರ್ ಕಂಟ್ರೋಲ್ ಮೂಲಕ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರ ಎಂಥೆಂಥ ಅಧಿಕಾರಿಗಳನ್ನು ಬೆಳೆಸುತ್ತಿದೆ ಎಂದು ಜೋಶಿ ಕಿಡಿಕಾರಿದ್ದಾರೆ.

VISTARANEWS.COM


on

By

Union Minister Pralhad Joshi slams Lokayukta ADGP for using pig word against HD Kumaraswamy
Koo

ಹುಬ್ಬಳ್ಳಿ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ “ಹಂದಿ” ಪದ ಬಳಸಿ ಅವಹೇಳನ ಮಾಡಿದ ಲೋಕಾಯುಕ್ತ ಎಡಿಜಿಪಿ ಎಂ.ಚಂದ್ರಶೇಖರ್ ವಿರುದ್ಧ ಕೇಡರ್ ಕಂಟ್ರೋಲ್ ಮೂಲಕ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರ ಸಚಿವ ಪ್ರಲ್ಹಾದ ಜೋಶಿ (Pralhad Joshi) ಎಚ್ಚರಿಸಿದ್ದಾರೆ. ಈ ಲೋಕಾಯುಕ್ತ ಎಡಿಜಿಪಿಗೆ ಏನಾದರೂ ಸರ್ವೀಸ್ ಕಂಡಕ್ಟ್ ರೂಲ್ ಬಗ್ಗೆ ಜ್ಞಾನವಿದ್ದರೆ ತಕ್ಷಣ ಕ್ಷಮಾಪಣೆ ಕೇಳಲಿ ಎಂದು ಸೂಚಿಸಿದರು.

ಒಬ್ಬ ಜನಪ್ರತಿನಿಧಿ, ಅದರಲ್ಲೂ ಕೇಂದ್ರ ಸಚಿವರ ಬಗ್ಗೆ ಹೀಗೆ ಅಸಭ್ಯ ಭಾಷೆಯಲ್ಲಿ, ಕೆಟ್ಟ ಪದ ಬಳಸುವುದನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ. ಕೇಡರ್ ಕಂಟ್ರೋಲ್ ಇದನ್ನು ಗಂಭೀರವಾಗಿ ಪರಿಗಣಿಸಲಿದೆ ಎಂದು ತಿಳಿಸಿದರು. ಕುಮಾರಸ್ವಾಮಿ ಅವರು ಯಾವತ್ತೂ ಯಾರ ಬಗ್ಗೆಯೂ ಹೀಗೆ ಅಸಭ್ಯ ಭಾಷೆ ಬಳಸಿದವರಲ್ಲ. ಈ ಅಧಿಕಾರಿ ಬಗ್ಗೆಯೂ ಹಾಗೆಲ್ಲ ಏಕವಚನದಲ್ಲಿ ಮಾತನಾಡಿಲ್ಲ ಎಂದು ಜೋಶಿ ಸ್ಪಷ್ಟಪಡಿಸಿದರು.

ಎಡಿಜಿಪಿ ಇದಕ್ಕೆ ಬೆಲೆ ತೆರಬೇಕಾಗುತ್ತದೆ

ಕುಮಾರಸ್ವಾಮಿ ಅವರ ಬಗ್ಗೆ ಕೆಟ್ಟ ಪದದಲ್ಲಿ ಸಂಬೋಧನೆ ಮಾಡಿರುವುದು ಅಧಿಕಾರಿಯ ಅಹಂಕಾರದ ಪರಮಾವಧಿಯಾಗಿದ್ದು, ಮುಂದಿನ ದಿನಗಳಲ್ಲಿ ಇದಕ್ಕೆ ಬೆಲೆ ತೆರಬೇಕಾಗುತ್ತದೆ ಎಂದು ಜೋಶಿ ಎಚ್ಚರಿಸಿದರು. ಸರ್ಕಾರದ ಆದೇಶವಿದ್ದರೆ ತನಿಖೆ ನಡೆಸಲಿ. ಎಚ್ಡಿಕೆ ಆರೋಪ ಮಾಡಿದ್ದರೆ ಗೌರವಯುತ ಭಾಷೆಯಲ್ಲಿ, ಸಭ್ಯ ಪದಗಳಲ್ಲಿ ಸ್ಪಷ್ಟನೆ ಕೊಡಲಿ. ಅದು ಬಿಟ್ಟು ಈ ರೀತಿ ಕೆಟ್ಟದಾಗಿ ಸಂಬೋಧಿಸುವುದು ಯಾವುದೇ ಅಧಿಕಾರಿಗಳಿಗೂ ಶೋಭೆ ತರುವುದಿಲ್ಲ ಎಂದು ಸಚಿವ ಜೋಶಿ ಹೇಳಿದರು.

ಸರ್ಕಾರದ ಆಡಳಿತಕ್ಕೆ ಹಿಡಿದ ಕೈಗನ್ನಡಿ

ಒಬ್ಬ ಜನಪ್ರತಿನಿಧಿ ಬಗ್ಗೆ ಲೋಕಾಯುಕ್ತ ಎಡಿಜಿಪಿ ಕೆಟ್ಟ ಪದ ಬಳಸಿದ್ದು, ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತಕ್ಕೆ ಹಿಡಿದ ಕೈಗನ್ನಡಿ. ಇದು ಕಾಂಗ್ರೆಸ್ಗೆ ಮುಳುವಾಗಲಿದೆ. ಕಾಂಗ್ರೆಸ್ ಎಂಥೆಂಥ ಅಧಿಕಾರಿಗಳನ್ನು ಬೆಳೆಸುತ್ತಿದೆಯಲ್ಲ! ಎಂದು ಕಿಡಿ ಕಾರಿದರು. ರಾಜ್ಯದಲ್ಲಿ ಈ ಸರ್ಕಾರವೇ ಶಾಶ್ವತವಾಗಿ ಇರೋದಿಲ್ಲ. ಸ್ವಲ್ಪ ಎಚ್ಚರ ವಹಿಸಿ ಮಾತನಾಡಿ, ಕೆಲಸ ಮಾಡಿ ಎಂದು ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್‌ಗೆ ಕೇಂದ್ರ ಸಚಿವ ಜೋಶಿ ಚಾಟಿ ಬೀಸಿದರು.

Continue Reading

ರಾಯಚೂರು

Accident Case : ಪಂಪ್‌ ಸೆಟ್‌ ದುರಸ್ತಿ ವೇಳೆ ಕರೆಂಟ್‌ ಶಾಕ್‌ಗೆ ವ್ಯಕ್ತಿ ಸಾವು; ಕೆಲಸ ಮಾಡುತ್ತಿದ್ದಾಗಲೇ ನೌಕರನ ಹೃದಯ ಸ್ತಬ್ಧ

Accident Case : ಪಂಪ್‌ ಸೆಟ್‌ ದುರಸ್ತಿ ವೇಳೆ ಕರೆಂಟ್‌ ಶಾಕ್‌ಗೆ ವ್ಯಕ್ತಿ ಮೃತಪಟ್ಟರೆ, ಕೆಲಸ ಮಾಡುತ್ತಿದ್ದಾಗಲೇ ನೌಕರನ ಹೃದಯ ಸ್ತಬ್ಧವಾಗಿ ಜೀವ ಕಳೆದುಕೊಂಡಿದ್ದಾರೆ.

VISTARANEWS.COM


on

By

Accident case
Koo

ರಾಯಚೂರು: ಹೃದಯಾಘಾತದಿಂದ ವೈಟಿಪಿಎಸ್ ವಿದ್ಯುತ್ ಉತ್ಪಾದನಾ ಕೇಂದ್ರದ ನೌಕರ ಮೃತಪಟ್ಟಿದ್ದಾರೆ. ರಾಯಚೂರಿನ ಶಾಖೋತ್ಪನ್ನ ವಿದ್ಯುತ್ ಕೇಂದ್ರದಲ್ಲಿ ಘಟನೆ ನಡೆದಿದೆ. ಗಂಗಪ್ಪ ದಿವಾನಿ ( 30) ಮೃತ ದುರ್ದೈವಿ. ಜಾಗೀರ್ ವೆಂಕಟಾಪುರ ಗ್ರಾಮದ ಗುತ್ತಿಗೆ ನೌಕರನಾಗಿದ್ದ ಗಂಗಪ್ಪ ಎಂದಿನಂತೆ ಕೆಲಸಕ್ಕೆ ಹೋಗಿದ್ದರು. ವಿದ್ಯುತ್ ಕೇಂದ್ರದಲ್ಲಿ ಕೆಲಸ ಮಾಡುವ ವೇಳೆ ಏಕಾಏಕಿ ಆರೋಗ್ಯದಲ್ಲಿ ಏರುಪೇರಾಗಿತ್ತು. ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ವೈಟಿಪಿಎಸ್‌ನಲ್ಲಿ ನೌಕರ ಮೃತಪಟ್ಟಿದ್ದಾರೆ. ರಾಯಚೂರು ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕರೆಂಟ್‌ ಶಾಕ್‌ಗೆ ವ್ಯಕ್ತಿ ಸಾವು

ಪಂಪ್ ಸೆಟ್ ದುರಸ್ತಿ ವೇಳೆ ಕರೆಂಟ್ ಶಾಕ್ ಹೊಡೆದು ವ್ಯಕ್ತಿಯೊಬ್ಬ ಮೃತಪಟ್ಟಿದ್ದಾರೆ. ರಾಯಚೂರಲ್ಲಿ ಲಿಂಗಸಗೂರು ತಾಲೂಕಿನ ಮರಳಿ ಗ್ರಾಮದಲ್ಲಿ ಘಟನೆ ನಡೆದಿದೆ. ನಾಗಲಾಪುರ ಗ್ರಾಮದ ನಿವಾಸಿ ಶಿವು (33) ಮೃತಪಟ್ಟವರು. ಟ್ರ್ಯಾಕ್ಟರ್ ಮೂಲಕ ಪಂಪ್ ಸೆಟ್ ದುರಸ್ತಿ ಮಾಡುತ್ತಿದ್ದಾಗ, ಟ್ರ್ಯಾಕ್ಟರ್‌ಗಿದ್ದ ಉದ್ದದ ಪೈಪ್ ಮೈನ್‌ ಲೈನ್ ತಾಗಿ ಅವಘಡ ಸಂಭವಿಸಿದೆ. ರೈತರ ಕೃಷಿ ಭೂಮಿಯಲ್ಲಿ ಮೇಲ್ಭಾಗದಲ್ಲಿ ಲೈನ್‌ ಹಾದು ಹೋಗಿದೆ. ಘಟನೆಯಲ್ಲಿ ಇನ್ನಿಬ್ಬರಿಗೆ ಸಣ್ಣಪುಟ್ಟ ಗಾಯವಾಗಿದೆ. ಮುದ್ಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸ್ಕೂಟಿಗೆ ಕಾರು ಡಿಕ್ಕಿ; ಶಿಕ್ಷಕರು ಗಂಭೀರ

ಸ್ಕೂಟಿಗೆ ಕಾರು ಡಿಕ್ಕಿಯಾಗಿದ್ದು, ಓರ್ವ‌ ಶಿಕ್ಷಕನ ಸ್ಥಿತಿ ಗಂಭೀರವಾಗಿದ್ದರೆ ಇನ್ನೋರ್ವ ಶಿಕ್ಷಕನಿಗೆ ಗಾಯವಾಗಿದೆ. ಕೊಪ್ಪಳ ಜಿಲ್ಲೆಯ ಬೂದಗುಂಪಾ ಬಳಿಯ ಬೂದೇಶ್ವರ ದೇವಸ್ಥಾನ ಕ್ರಾಸ್ ಬಳಿ ಘಟನೆ ನಡೆದಿದೆ. ಶಿಕ್ಷಕ ಭೋಜಪ್ಪ ಮೈನಹಳ್ಳಿ( 55 ) ಸ್ಥಿತಿ ಗಂಭೀರವಾಗಿದ್ದರೆ, ವಿಜಯಕುಮಾರ್ ದಾವಣಗೆರೆ ( 45) ಎನ್ನುವವರಿಗೆ ಸಣ್ಣಪುಟ್ಟ ಗಾಯವಾಗಿದೆ. ಅದೇ ರಸ್ತೆಯಲ್ಲಿ ಬರುತ್ತಿದ್ದ ಶಾಸಕ ರಾಘವೇಂದ್ರ ಹಿಟ್ನಾಳ, ಮಾಜಿ ಸಂಸದ ಕರಡಿ ಸಂಗಣ್ಣ ಮಾನವೀಯತೆ ಮೆರೆದಿದ್ದಾರೆ. ಆಂಬ್ಯುಲೇನ್ಸ್‌ಗೆ ಕರೆ ಮಾಡಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಕೂಟಿ ಡಿಕ್ಕಿ ಹೊಡೆದು ಎಸ್ಕೇಪ್ ಆಗುತ್ತಿದ್ದ ಕಾರು ಚಾಲಕನನ್ನು ಪೊಲೀಸರು ಹಿಡಿದಿದ್ದಾರೆ.

Continue Reading

ಮೈಸೂರು

Mysuru Rave Party: ಮೈಸೂರಿನ ಮೀನಾಕ್ಷಿಪುರದ ಜಮೀನಿನಲ್ಲಿ ರೇವ್‌ ಪಾರ್ಟಿ ನಡೆಸುತ್ತಿದ್ದ 50 ಮಂದಿ ಅರೆಸ್ಟ್‌

Mysuru Rave Party: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ಸಂದರ್ಭದಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.

VISTARANEWS.COM


on

By

Mysuru Rave Party 50 arrested for organising rave party at Meenakshipura farm
Koo

ಮೈಸೂರು: ಮೈಸೂರು ತಾಲೂಕಿನ ಕೆಆರ್‌ಎಸ್ ಹಿನ್ನೀರು ಪ್ರದೇಶದಲ್ಲಿರುವ ಮೀನಾಕ್ಷಿಪುರದ ಖಾಸಗಿ ಜಮೀನಿನಲ್ಲಿ ನಡೆಯುತ್ತಿದ್ದ ರೇವ್‌ ಪಾರ್ಟಿ ಮೇಲೆ (Mysuru Rave Party) ಪೊಲೀಸರು ದಾಳಿ ನಡೆಸಿದ್ದಾರೆ. ಇಲವಾಲ ಪಿಎಸ್ಐ ಮಂಜುನಾಥ ನಾಯಕ್ ಅವರ ನೇತೃತ್ವದಲ್ಲಿ ನಡೆದ ಪೊಲೀಸರ ದಾಳಿಯಲ್ಲಿ ಐವತ್ತಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದಿದ್ದಾರೆ. ಉದ್ಯಮಿಗಳು, ವಿದ್ಯಾರ್ಥಿಗಳು ಹಾಗೂ ಯುವತಿಯರು ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದೆ. ಮಾದಕ ವಸ್ತುಗಳನ್ನು ಸೇವಿಸಿ ನಶೆಯಲ್ಲಿ ತೇಲಾಡುತ್ತಿದ್ದರು ಎನ್ನಲಾಗಿದೆ. ಜಮೀನಿನಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದ 15ಕ್ಕೂ ಹೆಚ್ಚು ಯುವತಿಯರನ್ನು ವಶಕ್ಕೆ ಪಡೆಯಲಾಗಿದೆ.

ರೇವ್ ಪಾರ್ಟಿ ನಡೆದಿರುವುದು ನಿಜವೆಂದು ಮೈಸೂರು ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಸ್ಪಷ್ಟನೆ ನೀಡಿದ್ದಾರೆ. ರೇವ್ ಪಾರ್ಟಿ ನಡೆಯುತ್ತಿದ್ದಾಗ ದಾಳಿ ಮಾಡಿ, ಸುಮಾರು 50 ಜನರನ್ನು ಅರೆಸ್ಟ್ ಮಾಡಿದ್ದೇವೆ. ಪಾರ್ಟಿ ಜಾಗದಲ್ಲಿ ಹಾಗೂ ವಶಕ್ಕೆ ಪಡೆದವರ ಬಳಿ ಮಾದಕ ವಸ್ತುಗಳು ಕಂಡುಬಂದಿಲ್ಲ. ಈಗಲೂ ಶೋಧ ಕಾರ್ಯ ಮುಂದುವರಿಸಿದ್ದೇವೆ. ಬಂಧಿತರ ರಕ್ತ ಪರೀಕ್ಷೆ ಮಾಡಿ ವೈದ್ಯಕೀಯ ಪರೀಕ್ಷೆಗೆ ಕಳುಹಿಸಿದ್ದೇವೆ. ವಿದೇಶಿಯರು ಪಾಲ್ಗೊಂಡ ಬಗ್ಗೆಯೂ ಪರಿಶೀಲಿಸುತ್ತಿದ್ದೇವೆ. ಯಾರು ಪಾರ್ಟಿ ಆಯೋಜಿಸಿದ್ದರು, ಹೇಗೆ ಆಯೋಜಿಸಿದ್ದರು, ಮಾದಕ ವಸ್ತು ಬಳಸಿದ್ದರೆ ಎಂಬುದರ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದೇವೆ ಎಂದು ಮೈಸೂರು ಎಸ್‌ಪಿ ವಿಷ್ಣುವರ್ಧನ್ ತಿಳಿಸಿದ್ದಾರೆ.

Continue Reading
Advertisement
Mallikarjun Kharge falls ill on stage while delivering his speech
ರಾಜಕೀಯ20 ನಿಮಿಷಗಳು ago

Mallikarjun Kharge: ಭಾಷಣ ಮಾಡುತ್ತಲೇ ವೇದಿಕೆ ಮೇಲೆ ಅಸ್ವಸ್ಥಗೊಂಡ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ

Actor Darshan who spent 100 days in jail will get bail tomorrow
ಬೆಂಗಳೂರು2 ಗಂಟೆಗಳು ago

Actor Darshan :‌ ಜೈಲಿನಲ್ಲಿ ನೂರು ದಿನ ಕಳೆದ ನಟ ದರ್ಶನ್‌ಗೆ ನಾಳೆ‌ ಸಿಗುತ್ತಾ ಜಾಮೀನು

Union Minister Pralhad Joshi slams Lokayukta ADGP for using pig word against HD Kumaraswamy
ಕರ್ನಾಟಕ3 ಗಂಟೆಗಳು ago

Pralhad Joshi : ಎಚ್‌ಡಿಕೆ ಬಗ್ಗೆ ಹಂದಿ ಪದ ಬಳಸಿದ ಲೋಕಾಯುಕ್ತ ಎಡಿಜಿಪಿ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಗರಂ

Accident case
ರಾಯಚೂರು4 ಗಂಟೆಗಳು ago

Accident Case : ಪಂಪ್‌ ಸೆಟ್‌ ದುರಸ್ತಿ ವೇಳೆ ಕರೆಂಟ್‌ ಶಾಕ್‌ಗೆ ವ್ಯಕ್ತಿ ಸಾವು; ಕೆಲಸ ಮಾಡುತ್ತಿದ್ದಾಗಲೇ ನೌಕರನ ಹೃದಯ ಸ್ತಬ್ಧ

Mysuru Rave Party 50 arrested for organising rave party at Meenakshipura farm
ಮೈಸೂರು5 ಗಂಟೆಗಳು ago

Mysuru Rave Party: ಮೈಸೂರಿನ ಮೀನಾಕ್ಷಿಪುರದ ಜಮೀನಿನಲ್ಲಿ ರೇವ್‌ ಪಾರ್ಟಿ ನಡೆಸುತ್ತಿದ್ದ 50 ಮಂದಿ ಅರೆಸ್ಟ್‌

Road Accident
ತುಮಕೂರು6 ಗಂಟೆಗಳು ago

Road Accident : ಕಳ್ಳನನ್ನ ಹಿಡಿಯಲು ಹೋಗಿ ಪ್ರಾಣಕ್ಕೆ ಕುತ್ತು ತಂದುಕೊಂಡ ಪೊಲೀಸರು; ಸ್ಟೇರಿಂಗ್ ಲಾಕ್ ಆಗಿ ಪಲ್ಟಿ ಹೊಡೆದ ಕಾರು

theft case
ತುಮಕೂರು6 ಗಂಟೆಗಳು ago

Theft Case : ಚಿನ್ನದ ವ್ಯಾಪಾರಿಯ ಕಾರು ಅಡ್ಡಗಟ್ಟಿ 1 ಕೋಟಿ ರೂ. ಜತೆಗೆ ಚಿನ್ನಾಭರಣ ದೋಚಿದ ಕಳ್ಳರು!

CM Siddaramaiah eye on the actions leaders of the opposition
ರಾಜಕೀಯ7 ಗಂಟೆಗಳು ago

CM Siddaramaiah : ಸಿದ್ದರಾಮಯ್ಯರಿಗೆ ಟೆನ್ಶನ್ ಶುರು; ಸ್ವಪಕ್ಷ- ವಿಪಕ್ಷ ನಾಯಕರ ನಡೆ- ನುಡಿಗಳ ಮೇಲೆ ಕಣ್ಣಿಡುವ ಸ್ಥಿತಿ

karnataka weather Forecast
ಪ್ರಮುಖ ಸುದ್ದಿ12 ಗಂಟೆಗಳು ago

Karnataka Weather : ರಾಜ್ಯಾದ್ಯಂತ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆ

Dina Bhavishya
ಭವಿಷ್ಯ13 ಗಂಟೆಗಳು ago

Dina Bhavishya : ಆತ್ಮೀಯರೊಂದಿಗೆ ಕಾಲ ಕಳೆಯುವಿರಿ; ಉದ್ಯೋಗಿಗಳಿಗೆ ಕೆಲಸದಲ್ಲಿ ನಿರಾಳತೆ

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ12 ತಿಂಗಳುಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

galipata neetu
ಕಿರುತೆರೆ10 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ12 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ11 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ11 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್4 ವಾರಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್1 ತಿಂಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 ತಿಂಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 ತಿಂಗಳುಗಳು ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌