Body found: ನಗರದ ನಡುವೆ 6 ತಿಂಗಳಿನಿಂದ ಕೊಳೆಯುತ್ತಿದ್ದ ಶವ! ಮಹಿಳೆ ಹೆಣ ಆಕಸ್ಮಿಕವಾಗಿ ಪತ್ತೆ - Vistara News

ಕ್ರೈಂ

Body found: ನಗರದ ನಡುವೆ 6 ತಿಂಗಳಿನಿಂದ ಕೊಳೆಯುತ್ತಿದ್ದ ಶವ! ಮಹಿಳೆ ಹೆಣ ಆಕಸ್ಮಿಕವಾಗಿ ಪತ್ತೆ

ರಾಜಧಾನಿಯ ನಡುವೆ ಜನವಸತಿ ಪ್ರದೇಶದಲ್ಲಿಯೇ ಸುಮಾರು ಆರು ತಿಂಗಳಿಂದ ಕೊಳೆಯುತ್ತಿದ್ದ ಅಜ್ಞಾತ ಮಹಿಳೆಯೊಬ್ಬರ ಶವದ ಅವಶೇಷಗಳು ಪತ್ತೆಯಾಗಿವೆ.

VISTARANEWS.COM


on

dead body
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜಧಾನಿಯ ನಡುವೆ ಜನವಸತಿ ಪ್ರದೇಶದಲ್ಲಿಯೇ ಸುಮಾರು ಆರು ತಿಂಗಳಿಂದ ಕೊಳೆಯುತ್ತಿದ್ದ ಅಜ್ಞಾತ ಮಹಿಳೆಯೊಬ್ಬರ ಶವದ ಅವಶೇಷಗಳು ಪತ್ತೆಯಾಗಿವೆ.

ಹುಳಿಮಾವು ಬಳಿಯ ಅಕ್ಷಯನಗರದ ಬಳಿ ಶವ ಪತ್ತೆಯಾಗಿದ್ದು, ಶವ ನೋಡಿ ಪೊಲೀಸರೇ ಶಾಕ್ ಆಗಿದ್ದಾರೆ. ಮರವೊಂದರ ಬಳಿ ನೇಣು ಬಿಗಿದ ಸ್ಥಿತಿಯಲ್ಲಿ ಅವಶೇಷಗಳು ಪತ್ತೆಯಾಗಿವೆ. ಶವದ ಅವಶೇಷ ನೋಡಿ ಆತ್ಮಹತ್ಯೆ ಮಾಡಿಕೊಂಡು ಆರು ತಿಂಗಳಾಗಿರಬಹುದು ಎಂದು ಅಂದಾಜಿಸಲಾಗಿದೆ.

ಮಲಯಾಳಂ ಚಲನಚಿತ್ರ ʼಕೋಲ್ಡ್ ಕೇಸ್ʼ ಮಾದರಿಯಲ್ಲಿ ತಲೆ ಬುರುಡೆಯೊಂದು ಮೊದಲಿಗೆ ಪತ್ತೆಯಾಗಿದೆ. ನಿನ್ನೆ ಪೊಲೀಸರು ಮೂತ್ರ ವಿಸರ್ಜನೆಗೆ ಹೋದಾಗ ಘಟನೆ ಬೆಳಕಿಗೆ ಬಂದಿದೆ. ಇದೊಂದು ಮಹಿಳೆ ಶವ ಎಂಬುದು ದೃಢವಾಗಿದೆ.

ಸುತ್ತಮುತ್ತ ಕಟ್ಟಡಗಳ ನಡುವೆ ಖಾಲಿ ನಿವೇಶನ ಒಂದರ ಪೊದೆಗಳ ನಡುವೆ ಇರುವ ಮರದಲ್ಲಿ ಶವ ಪತ್ತೆಯಾಗಿದೆ. ಶವದ ಬಳಿ ಮಹಿಳೆಯರು ಬಳಸುವ ಚಪ್ಪಲಿಗಳು ಕಂಡುಬಂದಿವೆ. ಜನ ಓಡಾಡುವ ಪ್ರದೇಶದಲ್ಲಿಯೇ ಇದ್ದರೂ, ಆರು ತಿಂಗಾಳಾದರೂ ಶವ ಯಾರಿಗೂ ಕಂಡುಬಾರದೇ ಇದ್ದುದು ಆಶ್ಚರ್ಯ ಮೂಡಿಸಿದೆ.

ಹುಳಿಮಾವು ಠಾಣೆ ಪೊಲೀಸರು ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದಾರೆ. ಸದ್ಯ ಆರು ತಿಂಗಳ ಹಿಂದಿನ ಮಿಸ್ಸಿಂಗ್ ಕೇಸ್‌ಗಳ ಹಿಂದೆ ಬಿದ್ದಿದ್ದಾರೆ. ಏಳು ತಿಂಗಳ ಹಿಂದೆ ಹುಳಿಮಾವು ಠಾಣೆಯಲ್ಲಿ ನೇಪಾಳಿ ಮಹಿಳೆಯೊಬ್ಬಳ ನಾಪತ್ತೆ ಪ್ರಕರಣ ದಾಖಲಾಗಿದ್ದು, ಇನ್ನೂ ಪತ್ತೆಯಾಗಿಲ್ಲ. ವೈದ್ಯಕೀಯ ಪರೀಕ್ಷೆಗಳಿಂದ ಇದಕ್ಕೆ ಉತ್ತರ ನಿರೀಕ್ಷಿಸಲಾಗಿದೆ.

ಇದನ್ನೂ ಓದಿ: Baby death | ಫುಟ್‌ಪಾತ್‌ ಮೇಲೆ ಹೆರಿಗೆ, ಮಗು ಸಾವು, ತಾಯಿ ನಾಪತ್ತೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Road Accident: ಕೆಎಸ್ಆರ್‌ಟಿಸಿ ಬಸ್-ಬೈಕ್ ಡಿಕ್ಕಿಯಾಗಿ ಇಬ್ಬರು ಸವಾರರ ಸಾವು

Road Accident: ರಾಮನಗರ-ಕನಕಪುರ ರಸ್ತೆಯ ಅವೇರಹಳ್ಳಿ ಕೆರೆ ಏರಿ ಬಳಿ ಭಾನುವಾರ ಅಪಘಾತ ನಡೆದಿದೆ. ಘಟನೆಯಲ್ಲಿ ಮಹಿಳೆ ಮತ್ತು ಬೈಕ್‌ ಸವಾರ ಮೃತಪಟ್ಟಿದ್ದಾನೆ.

VISTARANEWS.COM


on

Road Accident
Koo

ರಾಮನಗರ: ಕೆಎಸ್ಆರ್‌ಟಿಸಿ ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮತಪಟ್ಟ ಘಟನೆ ರಾಮನಗರ-ಕನಕಪುರ ರಸ್ತೆಯ ಅವೇರಹಳ್ಳಿ ಕೆರೆ ಏರಿ ಬಳಿ ಭಾನುವಾರ ನಡೆದಿದೆ. ಅಪಘಾತದಲ್ಲಿ ಮಾಗಡಿ ತಾಲೂಕಿನ ಹೊನ್ನಾಪುರ ಪಾಳ್ಯದ ನಿವಾಸಿಗಳಾದ ಮಹಿಳೆ ಮತ್ತು ಬೈಕ್ ಸವಾರ ಮೃತಪಟ್ಟಿದ್ದಾರೆ.

ಕನಕಪುರದಿಂದ ರಾಮನಗರ ಕಡೆ ತೆರಳುತ್ತಿದ್ದ ಬೈಕ್‌ ಹಾಗೂ ರಾಮನಗರದಿಂದ ಕನಪುರಕ್ಕೆ ತೆರಳುತ್ತಿದ್ದ ಕೆಎಸ್ಆರ್‌ಟಿಸಿ ಬಸ್ ಡಿಕ್ಕಿಯಾಗಿ ದುರಂತ ಸಂಭವಿಸಿದೆ. ಸ್ಥಳಕ್ಕೆ ರಾಮನಗರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಸರ್ಕಾರಿ ಆಸ್ಪತ್ರೆಗೆ ರವಾನೆಗೆ ರವಾನೆ ಮಾಡಲಾಗಿದೆ.

ಇದನ್ನೂ ಓದಿ | Theft case : ಬೆಳಗ್ಗೆ ಕೋಳಿ ಕುಯ್ಯುತ್ತಾರೆ, ರಾತ್ರಿಯಾದರೆ ಸುಲಿಗೆಗೆ ಇಳಿಯುತ್ತಾರೆ!

ವಾಟರ್ ಟ್ಯಾಂಕರ್ ಡಿಕ್ಕಿಯಾಗಿ ಗೂಡ್ಸ್‌ ವಾಹನ ಚಾಲಕ ಸಾವು

ಬೆಂಗಳೂರು: ವಾಟರ್ ಟ್ಯಾಂಕರ್ ಡಿಕ್ಕಿಯಾಗಿ ಗೂಡ್ಸ್‌ ವಾಹನ ಚಾಲಕ ಮೃತಪಟ್ಟಿರುವ ಘಟನೆ ನಗರ ಹೊರವಲಯದ ಬೆಳ್ಳಂದೂರು ಬಸ್ ನಿಲ್ದಾಣದ ಸಮೀಪ ನಡೆದಿದೆ. ಮುರುಗನ್ (40) ಮೃತ ಚಾಲಕ.

407 ಗೂಡ್ಸ್ ವಾಹನಕ್ಕೆ ಹತ್ತುತ್ತಿದ್ದ ಚಾಲಕನಿಗೆ ವಾಟರ್‌ ಟ್ಯಾಂಕರ್‌ ಡಿಕ್ಕಿ ಹೊಡೆದಿದೆ. ಇದರಿಂದ ಸ್ಥಳದಲ್ಲೇ ಚಾಲಕ ಮೃತಪಟ್ಟಿದ್ದಾನೆ. ವಾಟರ್ ಟ್ಯಾಂಕ್ ಚಾಲಕನ ಅಜಾಗರೂಕತೆಯ ಚಾಲನೆಯಿಂದ ಅಪಘಾತ ನಡೆದಿದೆ. ಅಪಘಾತವೆಸಗಿದ ಬಳಿಕ ವಾಟರ್ ಟ್ಯಾಂಕರ್ ಚಾಲಕ ಎಸ್ಕೇಪ್ ಆಗಿದ್ದಾನೆ.

ಬಸ್‌ಗೆ ಸ್ಕೂಟರ್‌ ಡಿಕ್ಕಿ; ಸವಾರನ ಪ್ರಾಣವನ್ನೇ ಕಸಿದ ಅತಿ ವೇಗ ಚಾಲನೆ

Road Accident

ಕಾರವಾರ: ಬಸ್‌ಗೆ ಸ್ಕೂಟರ್‌ ಡಿಕ್ಕಿಯಾಗಿದ್ದು, ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉತ್ತರ ಕನ್ನಡದ ಹೊನ್ನಾವರದ ರಾಷ್ಟ್ರೀಯ ಹೆದ್ದಾರಿ 66ರ ಹಳದೀಪುರ ಗ್ರಾಮದ ಬಳಿ ಘಟನೆ (Road Accident) ನಡದಿದೆ. ಸವಾರ ಶಂಕರ ಹೆಗಡೆ (50) ಮೃತ ದುರ್ದೈವಿ.

ಕೆಎಸ್‌ಆರ್‌ಟಿಸಿ ಬಸ್‌ ಭಟ್ಕಳ ಭಾಗದಿಂದ ಕುಮಟಾದತ್ತ ತೆರಳುತ್ತಿತ್ತು. ಈ ವೇಳೆ ಎದುರಿನಿಂದ ವೇಗವಾಗಿ ಬಂದ ಸ್ಕೂಟರ್‌ ಬಸ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಸ್ಕೂಟರ್‌ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಗಂಭೀರ ಗಾಯಗೊಂಡ ಶಂಕರ ಅವರು ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇದನ್ನೂ ಓದಿ: Physical Abuse: ವಾಯಿಸ್‌ ಚೇಂಜಿಂಗ್‌ ಆಪ್‌ ಸಹಾಯದಿಂದ ಯುವತಿಯರಿಗೆ ಬಲೆ; ಮಹಿಳೆಯಂತೆ ಮಾತನಾಡಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹೊನ್ನಾವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನೆ ಸಂಬಂಧ ಹೊನ್ನಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತದಲ್ಲಿ ಬಸ್‌ ಮುಂಭಾಗ ಹಾನಿಯಾಗಿದ್ದು, ಅದೃಷ್ಟವಶಾತ್‌ ಬಸ್ಸಿನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Continue Reading

ಕರ್ನಾಟಕ

Lockup Death: ಚನ್ನಗಿರಿ ಆದಿಲ್ ಸಾವು ಪ್ರಕರಣ ಸಿಐಡಿಗೆ ವರ್ಗಾವಣೆ

Lockup Death: ಚನ್ನಗಿರಿ ಆದಿಲ್ ಸಾವು ಪ್ರಕರಣ ಖಂಡಿಸಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿದ ಸಂಬಂಧ 25 ಆರೋಪಿಗಳನ್ನು ಬಂಧಿಸಲಾಗಿದೆ. ಈ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ತಿಳಿಸಿದ್ದಾರೆ.

VISTARANEWS.COM


on

Lockup Death
Koo

ದಾವಣಗೆರೆ: ಚನ್ನಗಿರಿ ಆದಿಲ್ ಸಾವು ಪ್ರಕರಣ (Lockup Death) ಹಾಗೂ ಚನ್ನಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾವಣೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಇದುವರೆಗೂ ಘಟನೆಗೆ ಸಂಬಂಧಿಸಿದಂತೆ 25 ಜನರನ್ನು ಬಂಧಿಸಲಾಗಿದೆ. ಅವರೆಲ್ಲಾ ನ್ಯಾಯಾಂಗ ಬಂಧನದಲ್ಲಿದ್ದು, ಬಂಧಿತರ ಮೇಲೆ ಯಾವುದೇ ಹಳೇ ಕೇಸ್‌ಗಳಿಲ್ಲ. ಗುಂಪಿನಲ್ಲಿದ್ದ ಕೆಲ ಯುವಕರು ಠಾಣೆ ಮೇಲೆ ಕಲ್ಲೆಸೆದಿದ್ದಾರೆ. ಚನ್ನಗಿರಿ ಟೌನ್ ಮತ್ತು ತಾಲೂಕಿನ ಹೊನ್ನೇಬಾಗಿ ನಲ್ಲೂರು ಸೇರಿ ವಿವಿಧ ಹಳ್ಳಿಗಳಿಂದ ಬಂದ ಯುವಕರು ಗುಂಪಿನಲ್ಲಿದ್ದರು ಎಂದು ಮಾಹಿತಿ ನೀಡಿದ್ದಾರೆ.

ಬಂಧಿತರ ಮೇಲೆ ಐಪಿಸಿ 353 ಮತ್ತು 307 ಅನ್ವಯ ಪ್ರಕರಣ ದಾಖಲಾಗಿದೆ. ಆದಿಲ್‌ ಮರಣೋತ್ತರ ಪರೀಕ್ಷೆ ನಡೆದಿದ್ದು, ಇನ್ನಷ್ಟೇ ವರದಿ‌ ನಮ್ಮ ಕೈಸೇರಬೇಕಿದೆ. ಇನ್ಮೆರೆಡು ದಿನಗಳಲ್ಲಿ ವರದಿ ಬರುವ ಸಾಧ್ಯತೆ ಇದೆ ಎಂದು ಹೇಳಿದರು.

ಇದನ್ನೂ ಓದಿ | Mob Attacks: ಕುರಾನ್ ಅಪವಿತ್ರ ನೆಪ; ಪಾಕಿಸ್ತಾನದಲ್ಲಿ ಕ್ರಿಶ್ಚಿಯನ್ನರ ಮೇಲೆ ಮುಸ್ಲಿಮರ ದಾಳಿ

ಯುವಕನ ಲಾಕಪ್‌ ಡೆತ್‌ ಆಗಿದೆ ಎಂದು ಆರೋಪಿಸಿ ಕುಟುಂಬಸ್ಥರು ಚನ್ನಗಿರಿ ಪೊಲೀಸ್ ಠಾಣೆಯ ಎದುರು ಶುಕ್ರವಾರ ರಾತ್ರಿ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಕೆಲ ಕಿಡಿಗೇಡಿಗಳು ಠಾಣೆ ಮೇಲೆ ಕಲ್ಲು ತೂರಾಟ ನಡೆಸಿ, ವಾಹನಗಳನ್ನು ಜಖಂಗೊಳಿಸಿದ್ದರು. ಈ ಸಂಬಂಧ 25 ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಯುವಕನ ಲಾಕಪ್‌ ಡೆತ್‌ ಪ್ರಕರಣದಿಂದ ಉದ್ವಿಗ್ನಗೊಂಡಿದ್ದ ಜಿಲ್ಲೆಯ ಚನ್ನಗಿರಿ ಪಟ್ಟಣ ಸಹಜ‌ ಸ್ಥಿತಿಯತ್ತ ಮರಳುತ್ತಿದೆ. ಪೊಲೀಸ್‌ ಠಾಣೆ ಮೇಲೆ ಕಲ್ಲು ತೂರಾಟ ನಡೆದಿದ್ದರಿಂದ ಆಯ ಕಟ್ಟಿನ ಸ್ಥಳಗಳಲ್ಲಿ ಪೊಲೀಸ್ ಬಂದೋಬಸ್ತ್ ಮುಂದುವರಿದಿದೆ.

ಪೊಲೀಸ್ ವಶದಲ್ಲಿದ್ದ ಆದಿಲ್ (32) ಎಂಬ ವ್ಯಕ್ತಿ ಸಾವಿಗೀಡಾದ ಹಿನ್ನೆಲೆಯಲ್ಲಿ ಲಾಕಪ್ ಡೆತ್ ಆರೋಪ ಕೇಳಿಬಂದಿತ್ತು. ಇದರಿಂದ ರೊಚ್ಚಿಗೆದ್ದ ಕೆಲ ಕಿಡಿಗೇಡಿಗಳು ಚನ್ನಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಮಾಡಿದ್ದರು. ಈ ವೇಳೆ ಐದು ಪೊಲೀಸ್ ವಾಹನ‌‌ ಜಖಂಗೊಂಡು, ಹನ್ನೊಂದು ಪೊಲೀಸರಿಗೆ ಗಾಯಗಳಾಗಿದ್ದವು. 200ಕ್ಕೂ ಹೆಚ್ಚು ಜನರಿಂದ ಏಕಕಾಲಕ್ಕೆ ದಾಳಿಯಾದ ಹಿನ್ನೆಲೆ ಚನ್ನಗಿರಿ ಪಟ್ಟಣದಲ್ಲಿ ಉದ್ವಿಗ್ನ ಪರಿಸ್ಥಿತಿ ಏರ್ಪಟ್ಟಿತ್ತು.

ಇದನ್ನೂ ಓದಿ | Swati Maliwal case: “ರೇಪ್‌, ಕೊಲೆ ಮಾಡೋದಾಗಿ ಬೆದರಿಕೆ ಬರ್ತಿದೆ”- ಸ್ವಾತಿ ಮಲಿವಾಲ್‌ ಮತ್ತೊಂದು ಆರೋಪ

ಈಗ ಶವ ಪರೀಕ್ಷೆ ವರದಿ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಆದಿಲ್‌ ಪೊಲೀಸ್ ಠಾಣೆಯಲ್ಲಿದ್ದದ್ದು ಕೇವಲ‌ ಏಳು ನಿಮಿಷ. ಈ ವೇಳೆ ಕಡಿಮೆ ರಕ್ತದೊತ್ತಡದಿಂದ ಹೃದಯಾಘಾತವಾಗಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ವೈದ್ಯರು ಪ್ರಾಥಮಿಕ ವರದಿ ನೀಡಿದ ಮೇಲೆ ಸತ್ಯಾಸತ್ಯತೆ ತಿಳಿಯಲಿದೆ.

Continue Reading

ರಾಯಚೂರು

Raichur News : ಸಾಲದ ಸುಳಿಗೆ ಸಿಲುಕಿದ ಸ್ನೇಹಿತೆಗೆ ಕೊಟ್ಟಳು 10 ತೊಲೆ ಬಂಗಾರ! ‘ಕಳ್ಳತನ’ ನಾಟಕವಾಡಿದ ಗೆಳತಿಯರು ಲಾಕ್‌

Raichur News : ಸಾಲದ ಸುಳಿಗೆ ಸಿಲುಕಿದ್ದ ಗೆಳತಿಯನ್ನು ಪಾರು ಮಾಡಲು ಮಹಿಳೆಯೊಬ್ಬಳು ಐನಾತಿ ಐಡಿಯಾ ಮಾಡಿ ಸಿಕ್ಕಿಬಿದ್ದಿದ್ದಾರೆ. ಮೈಮೇಲಿದ್ದ ಚಿನ್ನಾಭರಣ ಕಳ್ಳತನವಾಗಿದೆ ಎಂದು ಹೈಡ್ರಾಮಾ ಮಾಡಿದ ಅಸಲಿಯತ್ತು ಪೊಲೀಸರ ಮುಂದೆ ಬಯಲಾಗಿದೆ.

VISTARANEWS.COM


on

By

theft Case in Raichur
Koo

ರಾಯಚೂರು: ಅವರಿಬ್ಬರು ಜೀವದ ಗೆಳತಿಯರು.. ಒಬ್ಬರ ಕಷ್ಟಕ್ಕೆ ಇನ್ನೊಬ್ಬರು ಆಗುತ್ತಿದ್ದರು. ಹೀಗಿದ್ದಾಗ ಸ್ನೇಹಿತೆ ಸಾಲದ ಸುಳಿಗೆ ಸಿಲುಕಿದ್ದಳು ಎಂದು ಮಾಸ್ಟರ್‌ ಪ್ಲಾನ್‌ ಮಾಡಿ ಕಳ್ಳತನದ (theft Case) ನಾಟಕವಾಡಿದ್ದರು. ಆದರೆ ಪೊಲೀಸರ ತನಿಖೆಯಲ್ಲಿ ಎಲ್ಲವೂ ಬಯಲಾಗಿ ಸಿಕ್ಕಿಬಿದ್ದಿದ್ದಾರೆ. ಮಹಿಳೆಯರಿಬ್ಬರ ಈ ಸ್ನೇಹಕ್ಕೆ ಮೆಚ್ಚಬೇಕೋ ಅಥವಾ ಕಳ್ಳತನದ ಹೈಡ್ರಾಮಾ ಮಾಡಿ ಸೃಷ್ಟಿಸಿದ ಸಮಸ್ಯೆಗೆ ಬೈಯಬೇಕೋ ಎಂದು ಪೊಲೀಸರೇ (Raichur News) ತಲೆಕೆಡಿಸಿಕೊಂಡಿದ್ದಾರೆ.

ರಾಜೇಶ್ವರಿ ಮತ್ತು ರೇಣುಕಾ ಇವರಿಬ್ಬರು ರಾಯಚೂರು ನಗರದ ಜಲಾಲ್ ನಗರದ ನಿವಾಸಿಗಳು. ಸಾಲದ ಸುಳಿಯಲ್ಲಿ ಸಿಲುಕಿದ ಗೆಳತಿಗಾಗಿ ಮತ್ತೊಬ್ಬಳು ಐನಾತಿ ಐಡಿಯಾ ಮಾಡಿದ್ದರು. ಮೈಮೇಲಿದ್ದ ಬಂಗಾರವನ್ನು ತಾವೇ ಬಚ್ಚಿಟ್ಟು ಕಳ್ಳತನದ ಹೈಡ್ರಾಮಾ ಮಾಡಿದ್ದು, ಪೊಲೀಸರ ತನಿಖೆಯಲ್ಲಿ ಕಳ್ಳತನದ ಅಸಲಿಯತ್ತು ಬಯಲಾಗಿದೆ.

ರಾಜೇಶ್ವರಿ ಪತಿ 10 ಲಕ್ಷ ರೂ. ಸಾಲವನ್ನು ರೇಣುಕಾಗೆ ಕೊಟ್ಟಿದ್ದರು. ಆದರೆ ಸಾಲ ತೀರಿಸಲು ಆಗದೆ ರೇಣುಕಾ ಸಂಕಷ್ಟಕ್ಕೆ ಸಿಲುಕಿದ್ದಳು. ಗೆಳತಿ ರೇಣುಕಾಳ ಕಷ್ಟ ನೋಡಲು ಆಗದೆ ಆಕೆಯನ್ನು ಪಾರು ಮಾಡಲು ರಾಜೇಶ್ವರಿ ತನ್ನ ಚಿನ್ನಾಭರಣ ಕೊಡಲು ನಿರ್ಧರಿಸಿದ್ದಳು. ಆದರೆ ಚಿನ್ನಾಭರಣ ಕೊಟ್ಟರೆ ಪತಿ ಎಲ್ಲಿ ಪ್ರಶ್ನೆ ಮಾಡುತ್ತಾರೋ ಎಂದು ರಾಜೇಶ್ವರಿ ಆತಂಕಕ್ಕೆ ಒಳಗಾಗಿದ್ದರು.

ಇದನ್ನೂ ಓದಿ: Theft Case : ಚಿನ್ನ ಕದಿಯಲು ಬಂದು ಮದುವೆ ಮನೆಯವರಿಂದ ಧರ್ಮದೇಟು ತಿಂದ ಕಳ್ಳ

ಇದಕ್ಕಾಗಿ ರಾಜೇಶ್ವರಿ ಮಾಸ್ಟರ್‌ ಪ್ಲಾನ್‌ವೊಂದನ್ನು ಮಾಡಿದ್ದರು. ಚಿನ್ನಾಭರಣ ಕಳವು ಆಯಿತು ಎಂದು ಕಳ್ಳತನದ ನಾಟಕ ಮಾಡಿದ್ದರು. ಅದರಂತೆ ಕಳೆದ 23ರಂದು ಮನ್ಸಲಾಪೂರ ಹೂವಿನ ಅಂಜನೇಯ ದೇವಸ್ಥಾನಕ್ಕೆ ರೇಣುಕಾ ಹಾಗೂ ರಾಜೇಶ್ವರಿ ತೆರಳಿದ್ದರು. ಈ ವೇಳೆ ರಾಜೇಶ್ವರಿ, ರೇಣುಕಾಳ ಮಗ ಜನಾರ್ದನನ್ನು ಕರೆಸಿಕೊಂಡು, ಮೈಮೇಲಿಂದ ಚಿನ್ನಾಭರಣವನ್ನು ಕೊಟ್ಟು ಕಳುಹಿಸಿದ್ದಳು.

ಆ ನಂತರ ಬಯಲು ಶೌಚಾಲಯಕ್ಕೆ ತೆರಳಿದ್ದಾಗ ಕಳ್ಳರು ಬಂದಿದ್ದರು. ಬಟನ್ ಚಾಕು ತೋರಿಸಿ 10 ತೊಲೆ ಬಂಗಾರ ಕದ್ದಿದ್ದಾರೆ ಎಂದು ಕಥೆ ಸೃಷ್ಟಿಸಿದ್ದರು. ಬಳಿಕ ರಾಜೇಶ್ವರಿ ರಾಯಚೂರು ಗ್ರಾಮೀಣ ಠಾಣೆಗೆ ತೆರಳಿ ಕಳ್ಳತನದ ದೂರು ನೀಡಿದ್ದಳು. ಪ್ರಕರಣ ದಾಖಲಿಸಿಕೊಂಡು ತನಿಖೆಗಿಳಿದ ಪೊಲೀಸರು ಮಹಿಳೆಯರಿಬ್ಬರನ್ನು ವಿಚಾರಣೆ ಮಾಡಿದ್ದರು.

ಮೊದಮೊದಲು ಕಳ್ಳನೊಬ್ಬ ಕದ್ದ ಎನ್ನುತ್ತಿದ್ದವರು, ನಂತರ ತಾವೇ ಬಚ್ಚಿಟ್ಟಿದ್ದು ಎಂದು ಒಪ್ಪಿಕೊಂಡಿದ್ದಾರೆ. ಗ್ರಾಮೀಣ ಪೊಲೀಸರ ತನಿಖೆಯಲ್ಲಿ ಮಹಿಳೆಯರಿಬ್ಬರ ಕಳುವಿನ ಆಟ ಹೊರಬಂದಿದೆ. ಸದ್ಯ ರೇಣುಕಾಳ ಮಗ ಜನಾರ್ದನನ್ನು ವಶಕ್ಕೆ ಪಡೆದಿರುವ ಗ್ರಾಮೀಣ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದೇಶ

Swati Maliwal case: “ರೇಪ್‌, ಕೊಲೆ ಮಾಡೋದಾಗಿ ಬೆದರಿಕೆ ಬರ್ತಿದೆ”- ಸ್ವಾತಿ ಮಲಿವಾಲ್‌ ಮತ್ತೊಂದು ಆರೋಪ

Swati Maliwal case:ಭಿಭವ್‌ ಕುಮಾರ್‌ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್‌ ಧ್ರುವ್‌ ರತೀ ತಮ್ಮ ವಿರುದ್ಧ ಏಕಪಕ್ಷೀಯವಾದ ವಿಡಿಯೋ ಹರಿಬಿಟ್ಟ ನಂತರ ನನ್ನ ವಿರುದ್ಧ ಆಪ್‌ ಮುಖಂಡರು ಮತ್ತು ಕಾರ್ಯಕರ್ತರು ಮುಗಿ ಬೀಳುತ್ತಿದ್ದಾರೆ. ನನ್ನ ಭಾವನೆಗಳಿಗೆ ಧಕ್ಕೆಯನ್ನುಂಟು ಮಾಡುವ ರೀತಿಯಲ್ಲಿ ಪ್ರತಿಕ್ರಿಯೆಗಳನ್ನು ನೀಡುತ್ತಿದ್ದಾರೆ. ಅಷ್ಟೇ ಅಲ್ಲದೇ ಜೀವ ಬೆದರಿಕೆಯನ್ನೂ ಒಡ್ಡುತ್ತಿದ್ದಾರೆ ಎಂದು ಸ್ವಾತಿ ಮಲಿವಾಲ್‌ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ. ಅಲ್ಲದೆ ತಮಗೆ ಬಂದಿರುವ ಬೆದರಿಕೆ ಸಂದೇಶಗಳ ಸ್ಕ್ರೀನ್‌ ಶಾಟ್‌ಗಳನ್ನೂ ಶೇರ್‌ ಮಾಡಿದ್ದಾರೆ.

VISTARANEWS.COM


on

Swati Maliwal
Koo

ನವದೆಹಲಿ: ದಿಲ್ಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಆಪ್ತ ಕಾರ್ಯದರ್ಶಿ ಬಿಭವ್‌ ಕುಮಾರ್‌ (Bibhav Kumar)ಯಿಂದ ಹಲ್ಲೆ ಆರೋಪದ ಬೆನ್ನಲ್ಲೇ ಆಮ್‌ ಆದ್ಮಿ ಪಕ್ಷದ (Aam Admi Party) ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ (Swati Maliwal case) ಮತ್ತೊಂದು ಗಂಭೀರ ಆರೋಪವನ್ನು ಮಾಡಿದ್ದಾರೆ. ಬಿಭವ್‌ ಕುಮಾರ್‌ ಅರೆಸ್ಟ್‌ ಬಳಿಕ ಆಪ್‌ ಕಾರ್ಯಕರ್ತರು ಮತ್ತು ನಾಯಕರಿಂದ ತಮಗೆ ಅತ್ಯಾಚಾರ ಮತ್ತು ಕೊಲೆ ಬೆದರಿಕೆ ಬರುತ್ತಿದೆ ಎಂದು ಹೇಳಿದ್ದಾರೆ.

ಭಿಭವ್‌ ಕುಮಾರ್‌ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್‌ ಧ್ರುವ್‌ ರತೀ ತಮ್ಮ ವಿರುದ್ಧ ಏಕಪಕ್ಷೀಯವಾದ ವಿಡಿಯೋ ಹರಿಬಿಟ್ಟ ನಂತರ ನನ್ನ ವಿರುದ್ಧ ಆಪ್‌ ಮುಖಂಡರು ಮತ್ತು ಕಾರ್ಯಕರ್ತರು ಮುಗಿ ಬೀಳುತ್ತಿದ್ದಾರೆ. ನನ್ನ ಭಾವನೆಗಳಿಗೆ ಧಕ್ಕೆಯನ್ನುಂಟು ಮಾಡುವ ರೀತಿಯಲ್ಲಿ ಪ್ರತಿಕ್ರಿಯೆಗಳನ್ನು ನೀಡುತ್ತಿದ್ದಾರೆ. ಅಷ್ಟೇ ಅಲ್ಲದೇ ಜೀವ ಬೆದರಿಕೆಯನ್ನೂ ಒಡ್ಡುತ್ತಿದ್ದಾರೆ ಎಂದು ಸ್ವಾತಿ ಮಲಿವಾಲ್‌ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ. ಅಲ್ಲದೆ ತಮಗೆ ಬಂದಿರುವ ಬೆದರಿಕೆ ಸಂದೇಶಗಳ ಸ್ಕ್ರೀನ್‌ ಶಾಟ್‌ಗಳನ್ನೂ ಶೇರ್‌ ಮಾಡಿದ್ದಾರೆ.

ಕೆಲವು ದಿನಗಳ ಹಿಂದೆ ಸ್ವಾತಿ ಮಲಿವಾಲ್‌ ಮೇಲೆ ಸಿಎಂ ಕೇಜ್ರಿವಾಲ್‌ ನಿವಾಸದಲ್ಲೇ ಬಿಭವ್‌ ಕುಮಾರ್‌ ಹಲ್ಲೆ ನಡೆಸಿದ್ದ. ಇದಾದ ನಾಲ್ಕು ದಿನಗಳ ಬಳಿಕ ಸ್ವಾತಿ ಪೊಲೀಸರಿಗೆ ದೂರು ನೀಡಿದ್ದರು., ಸ್ವಾತಿ ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ, ‘ನಾನು ಮುಖ್ಯಮಂತ್ರಿ ಅವರ ಭೇಟಿಗೆ ಹೋಗಿದ್ದಾಗ ಬಿಭವ್‌ ಅಡ್ಡಿಪಡಿಸಿದ್ದರು. ನನ್ನ ಜೊತೆ ಅನುಚಿತವಾಗಿ ವರ್ತಿಸಲು ಆರಂಭಿಸಿದ್ದರು. ಪ್ರತಿರೋಧವೊಡ್ಡಿದಾಗ ಮುಖ, ಹೊಟ್ಟೆ, ಎದೆ ಮತ್ತು ದೇಹದ ಸೂಕ್ಷ್ಮ ಭಾಗಗಳ ಮೇಲೆ ಹಲವು ಬಾರಿ ತೀವ್ರ ಹಲ್ಲೆ ನಡೆಸಿದರು. ಈ ವೇಳೆ ಅವರ ಬಳಿ ನಾನು ಗೋಗರೆದು ತಪ್ಪಿಸಿಕೊಂಡು ಬಂದು ಪೊಲೀಸ್‌ ಠಾಣೆಗೆ ಕರೆ ಮಾಡಿ ಮಾಹಿತಿ ನೀಡಿದ್ದೆ’ ಎಂದು ಸ್ವಾತಿ ಹೇಳಿದ್ದಾರೆ. ಈ ಆಧಾರದ ಮೇಲೆ ಪೊಲೀಸರು ಬಿಭವ್‌ ಮೇಲೆ ಮಹಿಳೆಯ ಅತ್ಯಾಚಾರಕ್ಕೆ ಯತ್ನ, ಕ್ರಿಮಿನಲ್‌ ಉದ್ದೇಶ, ಉದ್ದೇಶಪೂರ್ವಕ ಹಲ್ಲೆ ಯತ್ನದ ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ: Dhruva Sarja: ಕನ್ನಡ ಫಿಲ್ಮ್ ಇಂಡಸ್ಟ್ರಿಯಲ್ಲಿ ಸ್ಟಾರ್ ಅಂತ ಯಾರೂ ಇಲ್ಲ ಎಂದಿದ್ದೇಕೆ ಧ್ರುವ ಸರ್ಜಾ?

ಸ್ವಾತಿ ತಮ್ಮ ದೂರಿನಲ್ಲಿ ತಾವು ಆ ದಿನ ಅನುಭವಿಸಿದ ನೋವಿನ ಬಗ್ಗೆ ದಾಖಲಿಸಿದ್ದಾರೆ. ಬಿಭವ್‌ ಕುಮಾರ್‌ 7-8ರಿಂದ ಎಂಟು ಬಾರಿ ಕಪಾಳಕ್ಕೆ ಬಾರಿಸಿದ್ದಾನೆ. ನಾನು ನೆಲಕ್ಕೆ ಬಿದ್ದಾಗ ನಿರಂತರವಾಗಿ ನನ್ನ ಹೊಟ್ಟೆ, ಎದೆ, ಬೆನ್ನಿಗೆ ಒದ್ದಿದ್ದಾನೆ. ಅಲ್ಲದೇ ನನ್ನನ್ನು ಕಾಲುಗಳನ್ನು ಹಿಡಿದು ನೆಲದಲ್ಲಿ ಎಳೆದಾಡಿದ್ದು, ಬಟ್ಟೆಯನ್ನ ಎಳೆದಾಡಿದ್ದಾನೆ. ನಾನು ಅವತ್ತು ಋತುಮತಿಯಾಗಿದ್ದೆ. ಹೊಟ್ಟೆ ಬಹಳ ನೋಯುತ್ತಿದೆ ದಯವಿಟ್ಟು ಬಿಟ್ಟು ಬಿಡು ಎಂದರೂ ಕೇಳದೇ ನನ್ನ ಹೊಟ್ಟೆ ಕಾಲುಗಳಿಂದ ಒದ್ದಿದ್ದಾನೆ ಎಂದು ಸ್ವಾತಿ ಹೇಳಿದ್ದರು. ಇದಾದ ಬಳಿಕ ಕಳೆದ ವಾರ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಭವ್‌ ಕುಮಾರ್‌ನನ್ನು ಅರೆಸ್ಟ್‌ ಮಾಡಲಾಗಿದ್ದು, ಸದ್ಯ ಆತನನ್ನು ಪೊಲೀಸ್‌ ಕಸ್ಟಡಿಗೆ ಒಪ್ಪಿಸಲಾಗಿತ್ತು.

Continue Reading
Advertisement
Constables
ದೇಶ20 mins ago

Constables: ಬಿಯರ್‌ ಸೇವಿಸಿ ಇಬ್ಬರು ಕಾನ್‌ಸ್ಟೆಬಲ್‌ಗಳ ಸಾವು; ಮದ್ಯ ಪ್ರಿಯರೇ ಇನ್ನಾದರೂ ಎಚ್ಚರ!

Rohit Sharma
ಕ್ರೀಡೆ27 mins ago

Rohit Sharma : ಬಾಲಿವುಡ್​ ಸಿನಿಮಾ ಸಾಂಗ್​ನಲ್ಲಿ ಕಾಣಿಸಿಕೊಂಡ ರೋಹಿತ್ ಶರ್ಮಾ

Karnataka Rain
ಮಳೆ44 mins ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

MS Dhoni
ಕ್ರೀಡೆ49 mins ago

M S Dhoni: ಫ್ರಾನ್ಸ್ ಮೂಲದ ಕಾರು ಕಂಪನಿಯ ಬ್ರಾಂಡ್​ ಅಂಬಾಸಿಡರ್ ಆಗಿ ನೇಮಕಗೊಂಡ ಲೆಜೆಂಡ್​ ಧೋನಿ

Karnataka Council Election
ಕರ್ನಾಟಕ1 hour ago

ವಿಧಾನ ಪರಿಷತ್‌ ಚುನಾವಣೆ: ಖರ್ಗೆ, ಸಿದ್ದು, ಡಿಕೆಶಿ ಆಪ್ತರಿಗೆ ಸ್ಥಾನ ಕೊಡಿಸಲು 2+2+2+1=7 ಫಾರ್ಮುಲಾ; ಏನಿದು?

Krishna Water Dispute
ಕರ್ನಾಟಕ1 hour ago

Krishna Water Dispute: ಕೃಷ್ಣಾ ನೀರಿನ ವಿಚಾರ ಮತ್ತೆ ಮಹಾ ಕ್ಯಾತೆ; ರಾಜ್ಯಕ್ಕೆ ಹರಿದು ಬರ್ತಿದ್ದ ನೀರು ತಡೆ ಹಿಡಿದ ಮಹಾರಾಷ್ಟ್ರ!

Latest1 hour ago

Shilpa Shetty : 3.5 ಕೋಟಿ ರೂಪಾಯಿ ಬೆಲೆಯ ರೇಂಜ್​ ರೋವರ್​​ ಕಾರು ಖರೀದಿಸಿದ ಶಿಲ್ಪಾ ಶೆಟ್ಟಿ; ವಿಡಿಯೊ ನೋಡಿ

Actor Darshan fans against forest officials Construction of Arjuna tomb
ಸ್ಯಾಂಡಲ್ ವುಡ್1 hour ago

Actor Darshan: ಅರ್ಜುನನ ಸಮಾಧಿ ನಿರ್ಮಾಣ: ಅರಣ್ಯಾಧಿಕಾರಿಗಳ ವಿರುದ್ಧ ದರ್ಶನ್ ಅಭಿಮಾನಿಗಳಿಂದ ಆಕ್ರೋಶ!

Mango Nail Art
ಫ್ಯಾಷನ್1 hour ago

Mango Nail Art: ಸಮ್ಮರ್‌ ಸೀಸನ್‌ನಲ್ಲಿ ಬಂತು ಮ್ಯಾಂಗೋ ನೇಲ್‌ ಆರ್ಟ್!

Viral News
ವೈರಲ್ ನ್ಯೂಸ್1 hour ago

Viral News: ಕಂಪನಿಯಲ್ಲಿ 1 ವರ್ಷ ವೇತನ ಸಹಿತ ರಜೆ ಪಡೆದ ಉದ್ಯೋಗಿ; ಈ ಲಕ್‌ ನಿಮ್ಮದಾಗಬೇಕೆ? ಹೀಗೆ ಮಾಡಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ44 mins ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು2 hours ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ4 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ4 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು5 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು5 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ6 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ1 week ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

ಟ್ರೆಂಡಿಂಗ್‌