Karnataka Election: ವಿಧಾನಸಭೆಗೆ ಸ್ಪರ್ಧಿಸುವೆನೆಂದು ಪತ್ರ ಬರೆದ ಎಂಎಲ್‌ಸಿ ಆಯನೂರು ಮಂಜುನಾಥ್;‌ ಈಶ್ವರಪ್ಪಗೆ ಅಡ್ಡಗಾಲು? - Vistara News

ಕರ್ನಾಟಕ

Karnataka Election: ವಿಧಾನಸಭೆಗೆ ಸ್ಪರ್ಧಿಸುವೆನೆಂದು ಪತ್ರ ಬರೆದ ಎಂಎಲ್‌ಸಿ ಆಯನೂರು ಮಂಜುನಾಥ್;‌ ಈಶ್ವರಪ್ಪಗೆ ಅಡ್ಡಗಾಲು?

ಧಾನ ಪರಿಷತ್‌ ಸದಸ್ಯರಾಗಿರುವ ಆಯನೂರು ಮಂಜುನಾಥ್‌ (MLC Ayanur Manjunath) ಪದವೀಧರರಿಗೆ ಬಹಿರಂಗ ಪತ್ರ ಬರೆದಿದ್ದು, ವಿಧಾನಸಭೆ ಚುನಾವಣೆಗೆ (Karnataka Election) ಸ್ಪರ್ಧೆ ಮಾಡುವ ಇಂಗಿತ ವ್ಯಕ್ತಪಡಿಸಿದ್ದಾರೆ. ಈಗ ಈ ಪತ್ರ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

VISTARANEWS.COM


on

Karnataka Election news MLC Ayanur Manjunath writes letter saying he will contest assembly elections
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶಿವಮೊಗ್ಗ: ನೈರುತ್ಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್‌ ಸದಸ್ಯರಾಗಿರುವ ಆಯನೂರು ಮಂಜುನಾಥ್ (MLC Ayanur Manjunath) ಅವರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ (Karnataka Election) ಸ್ಪರ್ಧೆ ಮಾಡುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪದವೀಧರರಿಗೆ ಬಹಿರಂಗ ಪತ್ರ ಬರೆದು, ತಮ್ಮ ಈ ನಿರ್ಧಾರಕ್ಕೆ ಕಾರಣ ಏನು ಎಂಬುದನ್ನೂ ವಿವರಿಸಿದ್ದಾರೆ. ಈಗ ಇವರು ಶಿವಮೊಗ್ಗ ನಗರ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದಾರೆನ್ನಲಾಗಿದ್ದು, ಹಾಲಿ ಶಾಸಕ, ಮಾಜಿ ಸಚಿವ ಕೆ.ಎಸ್.‌ ಈಶ್ವರಪ್ಪ (KS Eshwarappa) ಅವರಿಗೆ ಅಡ್ಡಗಾಲು ಹಾಕಲು ಮುಂದಾಗಿದ್ದಾರೆ ಎಂದು ಹೇಳಲಾಗುತ್ತದೆ.

ವಿವಿಧ ಸಮೂಹಗಳ ಹಿತರಕ್ಷಣೆಗಾಗಿ ಹೋರಾಟ ಮಾಡಿದ್ದರೂ, ಸದನದಲ್ಲಿ ಗಟ್ಟಿ ಧ್ವನಿಯಲ್ಲಿ ಪ್ರತಿನಿಧಿಸುವ ಪ್ರಯತ್ನ ಮಾಡಿದ್ದರೂ ಅದಕ್ಕೆ ತಕ್ಕ ಫಲ ಸಿಕ್ಕಿಲ್ಲ. ಪರಿಷತ್ತಿನಲ್ಲಿನ ತಮ್ಮ ಮಾತುಗಳು, ವಿಧಾನಸಭೆಯಲ್ಲಿ ಗಂಭೀರ ಚರ್ಚೆಗೆ ಒಳಪಡಲಿಲ್ಲ. ಈ ಹಿನ್ನೆಲೆಯಲ್ಲಿ ತಮಗೆ ಅವಕಾಶ ದೊರೆತಲ್ಲಿ ಮುಂಬರುವ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇನೆ. ಅದಕ್ಕೆ ಎಲ್ಲರ ಬೆಂಬಲ, ಸಹಕಾರ ಇರಲಿ ಎಂದು ಆಯನೂರು ಮಂಜುನಾಥ್‌ ಪತ್ರದಲ್ಲಿ ವಿವರಿಸಿದ್ದಾರೆ.

ಶಿವಮೊಗ್ಗ ನಗರದ ಮೇಲೆ ಕಣ್ಣು

ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಕೆ.ಎಸ್.‌ ಈಶ್ವರಪ್ಪ ಅವರು ಹಾಲಿ ಶಾಸಕರಾಗಿದ್ದಾರೆ. ಅವರೇ ಮತ್ತೊಮ್ಮೆ ಸ್ಪರ್ಧೆ ಮಾಡುವ ಆಸಕ್ತಿ ಹೊಂದಿದ್ದಾರೆ. ತಮಗೆ ವಯಸ್ಸಿನ ಕಾರಣಕ್ಕೆ ಟಿಕೆಟ್‌ ಕೈತಪ್ಪುವುದಾದರೆ ಪುತ್ರ, ಜಿಪಂ ಮಾಜಿ ಸದಸ್ಯ ಇ. ಕಾಂತೇಶ್‌ ಅವರಿಗೆ ಟಿಕೆಟ್‌ ನೀಡುವಂತೆ ಕಸರತ್ತು ನಡೆಸಿದ್ದಾರೆನ್ನಲಾಗಿದೆ. ಈ ಮಧ್ಯೆ ಶಿವಮೊಗ್ಗ ನಗರದ ಮೇಲೆ ಕಣ್ಣಿಟ್ಟಿರುವ ಆಯನೂರು ಮಂಜುನಾಥ್‌, ಕ್ಷೇತ್ರದ ಹೆಸರನ್ನು ಪ್ರಸ್ತಾಪ ಮಾಡದೆ ವಿಧಾನ ಸಭೆ ಚುನಾವಣೆಗೆ ಸ್ಪರ್ಧೆ ಮಾಡುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ. ಇದೀಗ ಕುತೂಹಲಕ್ಕೆ ಕಾರಣವಾಗಿದೆ. ಅಲ್ಲದೆ, ಆಯನೂರು ಬರೆದಿರುವ ಪತ್ರವು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ: Ramesh Jarakiholi : ರಮೇಶ್‌ ಜಾರಕಿಹೊಳಿ ಭೇಟಿಗೆ ಅವಕಾಶ ನೀಡದ ಅಮಿತ್‌ ಶಾ, ದೆಹಲಿಯಲ್ಲಿ ಕಾಯುತ್ತಿರುವ ಸಾಹುಕಾರ್‌

ಪ್ರಜಾತಂತ್ರದ ನಾಲ್ಕೂ ಮನೆಗಳಾಗಿರುವ ಲೋಕಸಭೆ, ರಾಜ್ಯಸಭೆ, ವಿಧಾನಸಭೆ, ವಿಧಾನ ಪರಿಷತ್ ಸದಸ್ಯರಾಗಿ ಆಯನೂರು ಮಂಜುನಾಥ್ ಕಾರ್ಯನಿರ್ಹವಣೆ ಮಾಡಿದ್ದಾರೆ. ಹಾಲಿ ಪರಿಷತ್‌ ಸದಸ್ಯರಾಗಿದ್ದು, ಪುನಃ ವಿಧಾನಸಭೆ ಪ್ರವೇಶಕ್ಕೆ ಚಿಂತನೆ ನಡೆಸುತ್ತಿದ್ದಾರೆ.

Karnataka Election news MLC Ayanur Manjunath writes letter saying he will contest assembly elections
#image_title

ಆಯನೂರು ಮಂಜುನಾಥ್ ಪತ್ರದಲ್ಲೇನಿದೆ?‌

ನೈರುತ್ಯ ಪದವೀಧರ ಕ್ಷೇತ್ರದ ಪ್ರತಿನಿಧಿಯಾಗಿ ತಮ್ಮಿಂದ ಆಯ್ಕೆಯಾದ ನಂತರ ಸದನದಲ್ಲಿ ಪ್ರಾಮಾಣಿಕವಾಗಿ ನಿಮ್ಮನ್ನು ಪ್ರತಿನಿಧಿಸುವ ಪ್ರಯತ್ನವನ್ನು ನಿರಂತರವಾಗಿ ಮಾಡುತ್ತಲೇ ಬಂದಿದ್ದೇವೆ.

ಸರ್ಕಾರಿ ಹಾಗೂ ಖಾಸಗಿ ನೌಕರರ, ಶಿಕ್ಷಕರ, ಉಪನ್ಯಾಸಕರ, ಅನುದಾನಿತ, ಅನುದಾನ ರಹಿತ ಶಿಕ್ಷಕರ ಹಾಗೂ ಶಿಕ್ಷಕೇತರ ನೌಕರರ, ಅತಿಥಿ ಉಪನ್ಯಾಸಕ/ಶಿಕ್ಷಕರ ಸಮಸ್ಯೆಗಳಲ್ಲದೆ, ಪೌರ ಕಾರ್ಮಿಕರು, ಅರಣ್ಯ ಇಲಾಖೆ, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ, ನಿರುದ್ಯೋಗ ಪದವೀಧರರು ಮತ್ತು ಸಂಘಟಿತ ಹಾಗೂ ಅಸಂಘಟಿತ ನೌಕರರು/ಕಾರ್ಮಿಕರು ಇತ್ಯಾದಿ ಸಮೂಹಗಳ ಹಿತರಕ್ಷಣೆಗಾಗಿ ಸದನದಲ್ಲಿ ಗಟ್ಟಿಧ್ವನಿಯಲ್ಲಿ ಪ್ರತಿನಿಧಿಸುವ ಪ್ರಯತ್ನವನ್ನು ಮಾಡಿದ್ದೇನೆ.

ಇದನ್ನೂ ಓದಿ: ಮೊಗಸಾಲೆ ಅಂಕಣ: ಭದ್ರಾ ಮೇಲ್ದಂಡೆ: ರಾಜ್ಯದ ಮೊದಲ ಕೇಂದ್ರ ಯೋಜನೆ

ನಿವೃತ್ತ ನೌಕರರ ಮುಸ್ಸಂಜೆ ಬದುಕಿನ ಭದ್ರತೆಗಾಗಿ NPS/OPS ಪೆನ್ಶನ್‌ಗಾಗಿ ದಿಟ್ಟ ನಿಲುವಿನ ಹೋರಾಟ ಮಾಡಿದ್ದೇನೆ. ನಮ್ಮದೇ ಸರ್ಕಾರವಿದ್ದರೂ ಸಹ ನಿರ್ಭೀತಿಯಿಂದ ನೌಕರ ಹಾಗೂ ಕಾರ್ಮಿಕ ಬಂಧುಗಳ ಪರವಾಗಿ ಹೋರಾಟವನ್ನು ಮಾಡಿರುವುದು ತಮ್ಮೆಲ್ಲರ ಗಮನದಲ್ಲಿದೆ ಎಂದು ನಂಬಿದ್ದೇನೆ. ಆದರೆ, ವಿಧಾನ ಪರಿಷತ್ತಿನಲ್ಲಿ ನಾನು ಮಾಡಿದ ಹೋರಾಟಕ್ಕೆ ತಕ್ಕ ಫಲ ದೊರೆತಿಲ್ಲ ಎನ್ನುವುದನ್ನು ನಾನು ಮನಗಂಡಿದ್ದೇನೆ.

ಕಾನೂನು, ರಚನೆಯಾಗುವ ಪ್ರಮುಖ ನಿರ್ಧಾರಗಳು ಆಗಬೇಕಾದ ವಿಧಾನ ಸಭೆಯಲ್ಲಿ ರಾಜ್ಯದ ನೌಕರರು, ಕಾರ್ಮಿಕರು ಹಾಗೂ ಶೋಷಿತರ ಸಮಸ್ಯೆಗಳು ಕುರಿತಂತೆ ಗಂಭೀರ ಚರ್ಚೆಯಾಗದಿರುವ ಕಾರಣಕ್ಕಾಗಿ ವಿಧಾನ ಪರಿಷತ್ತಿನಲ್ಲಿ ನನ್ನ ಪ್ರಯತ್ನಕ್ಕೆ ನಿರೀಕ್ಷೆ ಮಾಡಿದಷ್ಟು ಫಲಿತಾಂಶ ಸಿಗುತ್ತಿಲ್ಲ ಎಂಬುದನ್ನು ತಾವೂ ಸಹ ಒಪ್ಪುತ್ತೀರೆಂದು ಭಾವಿಸಿದ್ದೇನೆ. ವಿಧಾನಸಭೆಯಲ್ಲಿ ಪರಿಣಾಮಕಾರಿ ಪ್ರಯತ್ನವಾಗದೆ, ಕೇವಲ ವಿಧಾನ ಪರಿಷತ್ತಿನಲ್ಲಿ ಯಶಸ್ಸು ಪಡೆಯುವುದು ಕಷ್ಟಸಾಧ್ಯವಾದ ಸಂಗತಿ.

ಅದರಿಂದ ಅಧಿಕಾರ ಕೇಂದ್ರವಾದ ವಿಧಾನ ಸಭೆಯಲ್ಲಿ ಈ ಬಾರಿ ತಮ್ಮೆಲ್ಲರ ಧ್ವನಿಯಾಗಬೇಕೆಂದು ಬಯಸಿದ್ದೇನೆ. ಅಲ್ಲೊಂದು ಶಾಸಕರ ತಂಡಕಟ್ಟಿ, ಎಲ್ಲ ಸ್ವರದ ನೌಕರರು ಹಾಗೂ ಕಾರ್ಮಿಕರ ಶೋಷಿತ, ದೀನದಲಿತರ ಧ್ವನಿಯಾಗಿ ಪ್ರತಿಧ್ವನಿಸಬೇಕೆಂದು ಬಯಸಿದ್ದೇನೆ. ಹಾಗಾದಾಗ ಮಾತ್ರ ಈ ಸಮೂಹಕ್ಕೆ ಇನ್ನಷ್ಟು ಪರಿಣಾಮಕಾರಿಯಾಗಿ ಸೇವೆ ಸಲ್ಲಿಸಬಹುದು ಎಂಬುದು ನನ್ನ ಪ್ರಬಲ ಅನಿಸಿಕೆಯಾಗಿದೆ.

ಇದನ್ನೂ ಓದಿ: PSI Scam : ಪಿಎಸ್‌ಐ ಹಗರಣದ ಎಫ್‌ಐಆರ್‌, ಎಲ್ಲ ದಾಖಲೆ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಕೋರ್ಟ್‌ ಆದೇಶ

ಆದ್ದರಿಂದ ಅವಕಾಶ ದೊರೆತಲ್ಲಿ ವಿಧಾನಸಭೆಯನ್ನು ಪ್ರವೇಶಿಸಲು ನಿರ್ಧರಿಸಿದ್ದೇನೆ. ಸದುದ್ದೇಶದ ನನ್ನ ಈ ನಿಲುವಿಗೆ ತಮ್ಮ ಸಹಕಾರ ಬೆಂಬಲ ಆಶೀರ್ವಾದಗಳು ಇರಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Dr.Nagareddy Patil: ಮಾಜಿ ಶಾಸಕ, ಕಾಂಗ್ರೆಸ್‌ ಮುಖಂಡ ಡಾ. ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಜಿಲ್ಲೆಯ ಸೇಡಂ ಮತಕ್ಷೇತ್ರದ ಮಾಜಿ ಶಾಸಕ ಹಾಗೂ ಕಾಂಗ್ರೆಸ್‌ ಮುಖಂಡ ಡಾ. ನಾಗರೆಡ್ಡಿ ಪಾಟೀಲ್‌ (79) ನಿಧನ ಹೊಂದಿದ್ದಾರೆ. ಬೆಳಗಿನ ಜಾವ 3 ಗಂಟೆಗೆ ಅವರು ಹೃದಯಾಘಾತದಿಂದ ನಿಧನರಾದರು. ಶಿಕ್ಷಣ ಪ್ರೇಮಿ, ಹಿರಿಯ ಮುತ್ಸದ್ದಿ ಎನಿಸಿಕೊಂಡಿರುವ ಡಾ.ನಾಗರೆಡ್ಡಿ ಪಾಟೀಲ್‌ ಎರಡು ದಶಕಗಳಿಂದ ಕಾಂಗ್ರೆಸ್‌ನಲ್ಲಿದ್ದರು.

VISTARANEWS.COM


on

Dr.Nagareddy Patil
Koo

ಕಲಬುರಗಿ: ಜಿಲ್ಲೆಯ ಸೇಡಂ ಮತಕ್ಷೇತ್ರದ ಮಾಜಿ ಶಾಸಕ ಹಾಗೂ ಕಾಂಗ್ರೆಸ್‌ ಮುಖಂಡ ಡಾ. ನಾಗರೆಡ್ಡಿ ಪಾಟೀಲ್‌ (79) ನಿಧನ ಹೊಂದಿದ್ದಾರೆ. ಬೆಳಗಿನ ಜಾವ 3 ಗಂಟೆಗೆ ಅವರು ಹೃದಯಾಘಾತದಿಂದ ನಿಧನರಾದರು. ಶಿಕ್ಷಣ ಪ್ರೇಮಿ, ಹಿರಿಯ ಮುತ್ಸದ್ದಿ ಎನಿಸಿಕೊಂಡಿರುವ ಡಾ.ನಾಗರೆಡ್ಡಿ ಪಾಟೀಲ್‌ (Dr.Nagareddy Patil) ಎರಡು ದಶಕಗಳಿಂದ ಕಾಂಗ್ರೆಸ್‌ನಲ್ಲಿದ್ದರು.

ನಾಗರೆಡ್ಡಿ ಅವರ ಪುತ್ರ ಶಿವಶರಣರೆಡ್ಡಿ ಪಾಟೀಲ್‌ ಸದ್ಯ ಸೇಡಂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದಾರೆ. ನಾಗರೆಡ್ಡಿ ಅವರು ಸಹೋದರ ಮತ್ತು ಸಹೋದರಿಯರು, ಮಕ್ಕಳು, ಸೊಸೆಯಂದಿರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಬಾಂಧವರನ್ನು ಅಗಲಿದ್ದಾರೆ. ಇಂದು (ಮೇ 6) ಅಪರಾಹ್ನ 3.30ಕ್ಕೆ ಸೇಡಂ ಪಟ್ಟಣದ ಆಶ್ರಯ ಕಾಲೋನಿ ಪಕ್ಕದಲ್ಲಿರುವ ಸ್ವಂತ ಹೊಲದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಅವರ ನಿಧನಕ್ಕೆ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

1983-85ರ ಅವಧಿಯಲ್ಲಿ ಬಿಜೆಪಿ ಶಾಸಕರಾಗಿದ್ದ ಡಾ.ನಾಗರೆಡ್ಡಿ ಬಳಿಕ ಜನತಾದಳ ಸೇಪರ್ಡೆಯಾಗಿದ್ದರು. ಬಳಿಕ ಕಾಂಗ್ರೆಸ್‌ ಸೇರಿದ್ದ ಅವರು ಸುಮಾರು ಎರಡು ದಶಕಗಳಿಂದ ಕಾಂಗ್ರೆಸನಲ್ಲೇ ಇದ್ದರು.

ಹಿರಿಯ ಸಂಸದ ಶ್ರೀನಿವಾಸ್‌ ಪ್ರಸಾದ್‌ ವಿಧಿವಶ

ವಾರದ ಹಿಂದೆ ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ (76) ಅವರು ತೀವ್ರ ಹೃದಯಾಘಾತದಿಂದ ವಿಧಿವಶರಾಗಿದ್ದರು. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಕೆಲದಿನಗಳ ಹಿಂದೆ ಓಲ್ಡ್ ಏರ್ಪೋರ್ಟ್ ರಸ್ತೆಯ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನ ಹೊಂದಿದ್ದರು.

ಚಾಮರಾಜನಗರ ಕ್ಷೇತ್ರದಿಂದ 7 ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಶ್ರೀನಿವಾಸ್‌ ಪ್ರಸಾದ್‌ 1999ರಲ್ಲಿ ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಇನ್ನು 2013ರಿಂದ 2016ರವರೆಗೆ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದಲ್ಲಿ ಕಂದಾಯ ಮತ್ತು ಮುಜರಾಯಿ ಸಚಿವರಾಗಿದ್ದರು . 24 ಡಿಸೆಂಬರ್ 2016 ರಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದ ಅವರು 2019ರಲ್ಲಿ ಚಾಮರಾಜನಗರ ಸಂಸದರಾಗಿ ಆಯ್ಕೆ.ಯಾಗಿದ್ದರು. ಅನಾರೋಗ್ಯ ಸಮಸ್ಯೆಯಿಂದಾಗಿ ರಾಜಕೀಯದಿಂದ ದೂರ ಉಳಿಯಲು ನಿರ್ಧರಿಸಿದ ಅವರು 2024 ಮಾರ್ಚ್ 17ರಂದು ರಾಜಕೀಯ ನಿವೃತ್ತಿ ಪಡೆದುಕೊಂಡಿದ್ದರು. 

ಇದನ್ನೂ ಓದಿ: A Devendra Gowda: ಎಂ. ಗೋನಾಳ್ ಗ್ರಾಮದ ಮುಖಂಡ ಎ. ದೇವೇಂದ್ರ ಗೌಡ ನಿಧನ

Continue Reading

ಕರ್ನಾಟಕ

Prajwal Revanna Case: ಪ್ರಜ್ವಲ್‌ ಕೇಸ್‌ನ ಸಂತ್ರಸ್ತೆಯರಿಗಾಗಿ ಆರಂಭಿಸಿದ ಹೆಲ್ಪ್‌ಲೈನ್‌ಗೆ ಬರ್ತಿವೆ ಹಲವು ಕರೆಗಳು

Prajwal Revanna Case: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಪ್ರಕರಣಕ್ಕೆ ಸಂಬಂಧಿಸಿ ವಿಶೇಷ ತನಿಖಾ ತಂಡ ಹೆಲ್ಪ್‌ಲೈನ್‌ ತೆರೆದಿದೆ. ಸಂತ್ರಸ್ತೆಯರಿಗೆ ಕಾನೂನು ನೆರವು ಮತ್ತು ರಕ್ಷಣೆ ನೀಡಲು ಈ ಕ್ರಮ ಕೈಗೊಳ್ಳಲಾಗಿದ್ದು, ಹಲವು ಕರೆಗಳು ಬರುತ್ತಿವೆ ಎಂದು ಅದಿಕಾರಿಗಳು ತಿಳಿಸಿದ್ದಾರೆ. ಇದೀಗ ಹೆಲ್ಪ್‌ಲೈನ್‌ ನಂಬರ್‌ಗೆ ಕೆಲವು ಸಂತ್ರಸ್ತೆಯರು ನೇರ ಕರೆ ಮಾಡಿದರೆ, ಇನ್ನು ಕೆಲವರು ಸಂತ್ರಸ್ತೆಯರ ಪರವಾಗಿ ಮಾತನಾಡುತ್ತಿದ್ದಾರೆ. ಬರುತ್ತಿರುವ ಎಲ್ಲ ಕರೆಗಳನ್ನು ಸ್ವೀಕರಿಸಿ ಎಸ್‌ಐಟಿ ಅಧಿಕಾರಿಗಳ ತಂಡ ವಿವರಗಳನ್ನು ಕಲೆ ಹಾಕುತ್ತಿದೆ. ಸಂತ್ರಸ್ತೆಯರ ವಿಳಾಸ ಸಂಗ್ರಹಿಸಲಾಗುತ್ತದೆ. ಬಳಿಕ ಎಸ್‌ಐಟಿ ತಂಡ ಅವರನ್ನು ನೇರವಾಗಿ ಭೇಟಿಯಾಗಲಿದೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಪ್ರಕರಣಕ್ಕೆ (Prajwal Revanna Case) ಸಂಬಂಧಿಸಿ ಸಂತ್ರಸ್ತ ಮಹಿಳೆಯನ್ನು ಅಪಹರಣ ಮಾಡಿದ ಆರೋಪದಲ್ಲಿ ಈಗಾಗಲೇ ಶಾಸಕ, ಮಾಜಿ ಸಚಿವ ಎಚ್‌.ಡಿ.ರೇವಣ್ಣ (HD Revanna) ಬಂಧನವಾಗಿದೆ. ಪ್ರಕರಣದಲ್ಲಿ ಇನ್ನೂ ಹಲವು ಸಂತ್ರಸ್ತೆಯರು ಇರುವುದರಿಂದ ಅವರಿಗೆ ಕಾನೂನು ನೆರವು ಮತ್ತು ರಕ್ಷಣೆ ನೀಡಲು ಎಸ್‌ಐಟಿ (ವಿಶೇಷ ತನಿಖಾ ತಂಡ) ಹೆಲ್ಪ್‌ಲೈನ್‌ (Help Line) ತೆರೆದಿದೆ. ಇದೀಗ ಈ ಹೆಲ್ಪ್‌ಲೈನ್‌ ನಂಬರ್‌ಗೆ ಹಲವು ಕರೆಗಳು ಬರುತ್ತಿವೆ ಎಂದು ಮೂಲಗಳು ತಿಳಿಸಿವೆ.

ಕೇಸ್‌ ಸಂಬಂಧ ಈಗಾಗಲೇ ಎಸ್‌ಐಟಿ ಸಂತ್ರಸ್ತೆಯನ್ನು ಸಂಪರ್ಕಿಸಲು ಮುಂದಾಗಿದೆ. ಒಂಭತ್ತು ಮಂದಿ ಸಂತ್ರಸ್ತೆಯರನ್ನ ಸಂಪರ್ಕಿಸಿ ಮಾಹಿತಿ ಕಲೆ ಹಾಕಿದೆ. ಇದೇ ವಿಚಾರಕ್ಕೆ ಸಂಬಂಧಿಸಿ ಹೆಲ್ಪ್‌ಲೈನ್‌ ಅನ್ನೂ ತೆರೆಯಲಾಗಿದೆ. ಇದೀಗ ಹೆಲ್ಪ್‌ಲೈನ್‌ ನಂಬರ್‌ಗೆ ಕೆಲವು ಸಂತ್ರಸ್ತೆಯರು ನೇರ ಕರೆ ಮಾಡಿದರೆ, ಇನ್ನು ಕೆಲವರು ಸಂತ್ರಸ್ತೆಯರ ಪರವಾಗಿ ಮಾತನಾಡುತ್ತಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬರುತ್ತಿರುವ ಎಲ್ಲ ಕರೆಗಳನ್ನು ಸ್ವೀಕರಿಸಿ ಎಸ್‌ಐಟಿ ಅಧಿಕಾರಿಗಳ ತಂಡ ವಿವರಗಳನ್ನು ಕಲೆ ಹಾಕುತ್ತಿದೆ. ಸಂತ್ರಸ್ತೆಯರ ವಿಳಾಸ ಸಂಗ್ರಹಿಸಲಾಗುತ್ತದೆ. ಬಳಿಕ ಎಸ್‌ಐಟಿ ತಂಡ ಅವರನ್ನು ನೇರವಾಗಿ ಭೇಟಿಯಾಗಲಿದೆ. ಬರುತ್ತಿರುವ ಕಾಲ್‌ಗಳ ಪೈಕಿ ಯಾವುದು ಹುಸಿ ಕರೆ, ಯಾವುದು ನಿಜವಾದ ಕರೆ ಎನ್ನುವುದನ್ನು ಪರಿಶೀಲಿಸಿದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅದಿಕಾರಿಗಳು ವಿವರಿಸಿದ್ದಾರೆ.

ಹೆಲ್ಪ್‌ಲೈನ್‌ ನಂಬರ್‌ ಇದು

ತನಿಖೆ ವೇಳೆ ಘಟನೆಗೆ ಸಂಬಂಧಪಟ್ಟಂತೆ ಇನ್ನೂ ಸಂತ್ರಸ್ತರಿರುವುದು ಗೊತ್ತಾಗಿದ್ದು, ಯಾರೇ ಸಂತ್ರಸ್ತರು ಅಥವಾ ಬಾತ್ಮೀದಾರರಿಗೆ (ಮಾಹಿತಿದಾರರಿಗೆ) ಕಾನೂನಿನ ನೆರವು ಮತ್ತು ರಕ್ಷಣೆ ಹಾಗೂ ಇನ್ನಿತರ ಯಾವುದೇ ಸಹಾಯ ಬೇಕಾದಲ್ಲಿ ಹೆಲ್ಪ್‌ಲೈನ್‌ ನಂ. 6360938947ಕ್ಕೆ ಕರೆ ಮಾಡಬಹುದು. ಸಂತ್ರಸ್ತರು ಅಥವಾ ಬಾತ್ಮೀದಾರ ವಿವರಗಳನ್ನು ಗುಪ್ತವಾಗಿಡಲಾಗುವುದು ಎಂದು ಎಸ್‌ಐಟಿ ಭಾನುವಾರ ಪ್ರಕಟಣೆಯಲ್ಲಿ ತಿಳಿಸಿತ್ತು.

ಅಶ್ಲೀಲ ವಿಡಿಯೊ ಶೇರ್‌ ಮಾಡಿದ್ರೆ ಕೇಸ್‌ ಗ್ಯಾರಂಟಿ

ಈ ಮಧ್ಯೆ ಹಾಸನದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ವಿಡಿಯೊಗಳನ್ನು ಯಾರೇ ಆಗಲಿ ವಾಟ್ಸ್‌ಆ್ಯಪ್‌, ಫೇಸ್‌ಬುಕ್‌ ಸೇರಿ ಯಾವುದೇ ಸಾಮಾಜಿಕ ಜಾಲತಾಣಗಳಲ್ಲಿ ಶೇರ್‌ ಮಾಡಿದರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಐಟಿ ಎಚ್ಚರಿಕೆ ನೀಡಿದೆ.

ಅಶ್ಲೀಲ ವಿಡಿಯೊಗಳನ್ನು ಹಂಚಿಕೆ ಮಾಡುವುದು ಮಾಹಿತಿ ತಂತ್ರಜ್ಞಾನ ಕಾಯ್ದೆ ಕಲಂ 67(ಎ) ಐಟಿ ಆಕ್ಟ್ ಹಾಗೂ ಕಲಂ 228ಎ(1), 292 ಐಪಿಸಿ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿದೆ. ಖಾಸಗಿ ಮೆಸೇಜಿಂಗ್ ಆ್ಯಪ್‌ಗಳ ಮುಖಾಂತರ ಹಂಚುವುದನ್ನೂ ಪತ್ತೆ ಹಚ್ಚುವುದು ಸಾಧ್ಯವಿದ್ದು, ಅಂತಹವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ವಿಡಿಯೋ ಹಂಚಿಕೆ ಸಂತ್ರಸ್ತ ಮಹಿಳೆಯರ ಘನತೆ ಹಾಗೂ ಗೌಪ್ಯತೆಗೆ ಕುಂದುಂಟು ಮಾಡುವುದಾಗಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ತಿಳಿಸಿದೆ.

ಯಾವುದೇ ಲೈಂಗಿಕ ಹಿಂಸೆ ಅಥವಾ ಅತ್ಯಾಚಾರ ಪ್ರಕರಣಗಳಲ್ಲಿ ಅಪರಾಧವೆಸಗಿದ ವ್ಯಕ್ತಿ ನಾಚಿಕೆ, ಹಿಂಜರಿಕೆ, ಅವಮಾನ ಪಡಬೇಕೇ ಹೊರತು, ಶೋಷಣೆಗೆ ಒಳಗಾದ ವ್ಯಕ್ತಿ ಅಲ್ಲ ಎಂಬುದನ್ನು ಅರಿಯಬೇಕು. ಸೂಕ್ತ ಸಂವೇದನೆಯಿಂದ ಪ್ರವರ್ತಿಸುವುದು ಸಮಾಜದ ಆರೋಗ್ಯದ ದೃಷ್ಟಿಯಿಂದ ಬಹಳ ಮುಖ್ಯ. ಈ ವಿಚಾರದಲ್ಲಿ ಎಸ್‌ಐಟಿಯು ಅತ್ಯಂತ ಹೆಚ್ಚಿನ ಸಂವೇದನೆಯಿಂದ ನಡೆದುಕೊಳ್ಳಲಿದೆ. ಈಗಾಗಲೇ ಇದಕ್ಕೆ ಅಗತ್ಯವಿರುವ ವೃತ್ತಿಪರ ಕೌನ್ಸೆಲರ್‌, ವೈದ್ಯರು ಇಂತಹ ಕಾರ್ಯದಲ್ಲಿ ಅನುಭವವಿರುವ ಸಂಸ್ಥೆಗಳ ನೆರವನ್ನು ಎಸ್‌ಐಟಿ ಪಡೆದುಕೊಂಡಿದೆ. ಸಾರ್ವಜನಿಕರೂ ಈ ವಿಚಾರದಲ್ಲಿ ಸ್ಪಂದಿಸುವುದು ಅಗತ್ಯ ಎಂದು ಸಿಐಡಿ ವಿಶೇಷ ತನಿಖಾ ತಂಡದ (ಎಸ್‌ಐಟಿ) ಮುಖ್ಯಸ್ಥರು ತಿಳಿಸಿದ್ದಾರೆ.

ಇದನ್ನೂ ಓದಿ | Prajwal Revanna Case: ಜಡ್ಜ್‌ ಮುಂದೆಯೂ ನಿಂಬೆ ಹಣ್ಣು ಹಿಡಿದುಕೊಂಡಿದ್ದ ಎಚ್‌.ಡಿ.ರೇವಣ್ಣ!

Continue Reading

ಮಳೆ

Karnataka Weather : ಇಂದು ಮಳೆ ಬರುತ್ತಾ? ಯಾವ ಜಿಲ್ಲೆಗಳಲ್ಲಿದೆ ಹೀಟ್‌ ವೇವ್‌?

ರಾಜ್ಯಾದ್ಯಂತ ಹಲವೆಡೆ ಹಗುರದಿಂದ ಕೂಡಿದ ಮಳೆಯಾಗುವ (Rain News) ಸಾಧ್ಯತೆ ಇದೆ ಎನ್ನಲಾಗಿದೆ. ಇದರೊಟ್ಟಿಗೆ ಮೇ. 8ರವರೆಗೆ ಹೀಟ್‌ ವೇವ್‌ (Heat Wave) ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

VISTARANEWS.COM


on

By

karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯಾದ್ಯಂತ ಶುಷ್ಕ ವಾತಾವರಣ ಇದ್ದರೂ ಕೆಲವೆಡೆ ಸಾಧಾರಣ ಮಳೆಯಾಗುವ (Rain News) ಸಾಧ್ಯತೆ ಇದೆ. ಸೋಮವಾರದಂದು ದಕ್ಷಿಣ ಕನ್ನಡ, ಉಡುಪಿ, ಕೊಡಗು, ಮೈಸೂರು, ಹಾಸನ, ಚಾಮರಾಜನಗರ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯೊಂದಿಗೆ ಗುಡುಗು ಸಾಥ್‌ (Karnataka Weather Forecast) ನೀಡಲಿದೆ.

ಈ ಜಿಲ್ಲೆಗಳಲ್ಲಿ ಬಿಸಿ ಬಿಸಿ ವಾತಾವರಣ

ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಕೊಪ್ಪಳ, ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಶಾಖದ ಅಲೆಯ ವಾತಾವರಣವು ಹೆಚ್ಚಾಗುವ ಸಾಧ್ಯತೆ ಇದೆ. ಮುಂದಿನ 3 ದಿನಗಳವರೆಗೆ ಕರಾವಳಿಯಲ್ಲಿ ಬಿಸಿ ಮತ್ತು ಆರ್ದ್ರತೆಯ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ.

ಬೆಂಗಳೂರಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ ಅಥವಾ ರಾತ್ರಿಯಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 39 ಮತ್ತು 24 ಡಿ.ಸೆ ಇರಲಿದೆ.

ಇದನ್ನೂ ಓದಿ: Torn Jeans Styling Tips: ಟೊರ್ನ್‌ ಜೀನ್ಸ್‌ ಪ್ಯಾಂಟ್‌ ಪ್ರಿಯರು ನೆನಪಿನಲ್ಲಿಟ್ಟುಕೊಳ್ಳಬೇಕಾದ 5 ಪ್ರಮುಖ ಸಂಗತಿಗಳು

ಬಿಸಿಲ ಬೇಗೆ ತಣಿಸಿಕೊಳ್ಳಲು ಬೇಕು ನೆಲ್ಲಿಕಾಯಿ!

ದೇಹದ ಪ್ರತಿರೋಧಕ ಶಕ್ತಿಯನ್ನು ಕುಂದಿಸುವಂಥ ಹವಾಮಾನ ಯಾವುದೇ ದಿನಗಳಲ್ಲೂ ಎದುರಾಗಬಹುದು. ಅದಕ್ಕೇನು ಮಳೆಯೇ ಬೇಕು. ಚಳಿಯೇ ಇರಬೇಕು ಎಂದಿಲ್ಲ. ಈ ಬಿರು ಬೇಸಿಗೆಯಲ್ಲೂ ಕಾಟ ಕೊಡುವ ವೈರಸ್‌ಗಳು ತಪ್ಪುವುದಿಲ್ಲ. ಇದಕ್ಕಾಗಿ ಭದ್ರವಾದ ಪ್ರತಿರೋಧಕ ವ್ಯವಸ್ಥೆಯನ್ನ ನಮ್ಮ ದೇಹ ಹೊಂದಬೇಕಾಗುತ್ತದೆ. ಅದಿಲ್ಲದಿದ್ದರೆ ಬಿಸಿಲಾಘಾತ, ನಿರ್ಜಲೀಕರಣದಿಂದಲೂ ತಪ್ಪಿಸಿಕೊಳ್ಳುವುದಕ್ಕೆ ದೇಹ ಸೋಲುತ್ತದೆ. ಇಂಥ ದಿನಗಳಲ್ಲಿ ನಮ್ಮ ನೆರವಿಗೆ ಬರುವುದು ಹುಳಿ-ಸಿಹಿಯ ಬೆಟ್ಟದ ನೆಲ್ಲಿಕಾಯಿ. ವಿಟಮಿನ್‌ ಸಿ ಅಂಶವನ್ನು ಹೇರಳವಾಗಿ ತುಂಬಿಕೊಂಡಿರುವ ಈ ಪುಟ್ಟ ಕಾಯಿಗಳನ್ನು ಹಲವು ರೀತಿಯಲ್ಲಿ ಸೇವಿಸುವುದರಿಂದ ಬಿಸಿಲ ದಿನಗಳಲ್ಲಿ ದೇಹ ನಿತ್ರಾಣಗೊಳ್ಳದಂತೆ ಮತ್ತು ರೋಗನಿರೋಧಕ ಶಕ್ತಿ ಕುಂಠಿತವಾಗದಂತೆ (summer Health Tips) ಕಾಪಾಡಿಕೊಳ್ಳಬಹುದು. ಬಿಸಿಲಿನ ದಿನಗಳಿಗೆ ಪೂರಕವಾಗುವಂತೆ ನೆಲ್ಲಿಕಾಯಿಯನ್ನು ಬಳಸುವುದು ಹೇಗೆ?

pudina gooseberry juice

ಪುದೀನಾ-ನೆಲ್ಲಿ ಪಾನಕ

ವಿಟಮಿನ್‌ ಸಿ, ಇ ಮತ್ತು ಎ, ನಾರು ಹಾಗೂ ವಿಟಮಿನ್‌ ಬಿ1 ಸತ್ವಗಳನ್ನು ಈ ಪಾನಕ ಭರಪೂರ ತುಂಬಿಕೊಂಡಿರುತ್ತದೆ. ಬೇಸಿಗೆಯಲ್ಲಿ ಕಾಡುವ ಜೀರ್ಣಾಂಗಗಳ ಸಮಸ್ಯೆಯಿಂದ ಮುಕ್ತಿ ನೀಡುವಂಥ ಪೇಯವಿದು. ಬೆಟ್ಟದ ನೆಲ್ಲಿಕಾಯಿಗೆ ಚಿಟಿಕೆ ಉಪ್ಪು ಮತ್ತು ಪುದೀನಾ ಎಲೆಗಳನ್ನು ಸೇರಿಸಿ ರುಬ್ಬಿ, ರಸ ತೆಗೆಯಿರಿ. ಇದಕ್ಕೆ ರುಚಿಗೆ ತಕ್ಕಷ್ಟು ಬೆಲ್ಲ ಸೇರಿಸಿ ಅಥವಾ ಹಾಗೆಯೇ ಕುಡಿಯುವವರು ಅಂತೆಯೇ ಕುಡಿಯಬಹುದು.

ನೆಲ್ಲಿ ಸ್ಮೂದಿ

ಇದಕ್ಕಾಗಿ ಮೊಸರು, ಬಾಳೆಹಣ್ಣು, ಕೊಂಚ ಪಾಲಕ್‌ ಎಲೆಗಳು ಮತ್ತು ನೆಲ್ಲಿಕಾಯಿಯನ್ನು ಬ್ಲೆಂಡರ್‌ಗೆ ಹಾಕಿ ತಿರುಗಿಸಿ. ಇದರನ್ನು ಸೋಸಬಾರದು. ಎಲ್ಲ ನಾರಿನಂಶ ಇರುವಂತೆಯೇ ಸೇವಿಸಬೇಕು. ಇದರಿಂದ ಬಾಳೆಹಣ್ಣಿನಲ್ಲಿರುವ ಶರ್ಕರಪಿಷ್ಟಗಳು, ಮೊಸರಿನಲ್ಲಿರುವ ಕೊಬ್ಬು ಮತ್ತು ಪ್ರೊಬಯಾಟಿಕ್‌ ಅಂಶಗಳು, ಪಾಲಕ್‌ನಲ್ಲಿರುವ ಖನಿಜಗಳು ಎಲ್ಲವೂ ನೆಲ್ಲಿ ಕಾಯಿಯ ಜೊತೆಗೆ ಹೊಟ್ಟೆ ಸೇರುತ್ತವೆ. ತೂಕ ಇಳಿಸುವವರು ಇದನ್ನು ಬೆಳಗಿನ ಉಪಹಾರವಾಗಿಯೂ ಸೇವಿಸಬಹುದು.

ನೆಲ್ಲಿ ಸಲಾಡ್‌

ಬೇಸಿಗೆಯಲ್ಲಿ ತಂಪಾದ ಸಲಾಡ್‌ಗಳು ಎಲ್ಲರಿಗೂ ಇಷ್ಟವಾಗುವಂಥವು. ಅದರಲ್ಲೂ ಹುಳಿ-ಸಿಹಿ ರುಚಿಯ ಸಲಾಡ್‌ಗಳು ಮತ್ತೂ ಇಷ್ಟವಾಗುತ್ತವೆ. ಇದಕ್ಕಾಗಿ ನೆಲ್ಲಿಕಾಯಿಯ ಜೊತೆ ಸೌತೇಕಾಯಿ, ದಾಳಿಂಬೆ, ಸೇಬು ಮತ್ತು ಮೊಳಕೆ ಬರಿಸಿದ ಹೆಸರು ಕಾಳುಗಳನ್ನು ತೆಗೆದುಕೊಳ್ಳಿ ಇದಕ್ಕೆ ರುಚಿಗೆ ತಕ್ಕಷ್ಟು ಉಪ್ಪು, ಬೇಕಿದ್ದರೆ ಕೊಂಚ ಕಾಳುಮೆಣಸಿನ ಪುಡಿ ಸೇರಿಸಿ. ನಿಮ್ಮ ರುಚಿಕರ ಸಲಾಡ್‌ ಸಿದ್ಧ.

Image Of Gooseberry Benefits

ನೆಲ್ಲಿ ಪಾಪ್ಸಿಕಲ್‌

ತಂಪಾದ ಏನನ್ನು ಕೊಟ್ಟರೂ ಕೈಯೊಡ್ಡುವಂಥ ಸ್ಥಿತಿ ಈ ಬೇಸಿಗೆಯಲ್ಲಿ. ಅದರಲ್ಲೂ ಫ್ರೋಜನ್‌ ತಿಂಡಿಗಳು ಮತ್ತೂ ಇಷ್ಟವಾಗುತ್ತವೆ. ಪಾಪ್ಸಿಕಲ್‌ ರೂಪದಲ್ಲಿ ನಮಗೆ ಪ್ರಿಯವಾದ್ದನ್ನು ಸವಿಯುವುದು ಬೇರೆಯದೇ ಸೊಗಸನ್ನು ನೀಡುತ್ತದೆ. ನೆಲ್ಲಿಕಾಯನ್ನು ರುಬ್ಬಿ ರಸ ತೆಗೆಯಿರಿ. ಇದಕ್ಕೆ ಕೊಂಚ ಜೇನುತುಪ್ಪ ಮತ್ತು ಸಿಹಿ ಮೊಸರು ಬೆರೆಸಿ. ಈ ಮಿಶ್ರಣವನ್ನು ಪಾಪ್ಸಿಕಲ್‌ ಅಚ್ಚಿಗೆ ಸುರಿಯಿರಿ. ಫ್ರೀಜ್‌ ಮಾಡಿ ತೆಗೆದು ಬಾಯಿ ಚಪ್ಪರಿಸಿದರಾಯಿತು.

ಡಿಟಾಕ್ಸ್‌ ನೀರು

ಬರೀ ನೀರು ಕುಡಿಯುವುದಕ್ಕೆ ಸಾಧ್ಯವಿಲ್ಲ ಎನಿಸಿದರೆ, ಐದು ಲೀ ಪಾತ್ರೆಯಲ್ಲಿ ಹತ್ತಿಪ್ಪತ್ತು ಪುದೀನಾ ಎಲೆಗಳು, ಸೌತೆಕಾಯಿ ಗಾಲಿಗಳು ಮತ್ತು ನೆಲ್ಲಿಯ ತುಂಡುಗಳನ್ನು ಧಾರಾಳವಾಗಿ ಸೇರಿಸಿ. ಒಂದೆರಡು ತಾಸು ಹಾಗೆಯೇ ಬಿಡಿ. ನಂತರ ದಿನವಿಡೀ ಈ ನೀರು ಕುಡಿದು ಸಂತೃಪ್ತಿಯಿಂದಿರಿ. ಇದರಿಂದ ಜೀರ್ಣಾಂಗಗಳ ಕ್ಷಮತೆ ಹೆಚ್ಚುತ್ತದೆ.

indian gooseberry

ನೆಲ್ಲಿ ಐಸ್‌ ಟೀ

ಆರೆಂಟು ಪುದೀನಾ ಚಿಗುರುಗಳ ಜೊತೆಗೆ ನೆಲ್ಲಿ ಕಾಯಿಯ ತುಣುಕುಗಳನ್ನು ನೀರಿಗೆ ಹಾಕಿ ಚೆನ್ನಾಗಿ ಕುದಿಸಿ. ಇದು ಆರಿದ ಮೇಲೆ ಕೊಂಚ ಜೇನುತುಪ್ಪ ಸೇರಿಸಿ, ಫ್ರಿಜ್‌ನಲ್ಲಿಡಿ. ಬೇಕಾದಾಗ ಈ ಈ ಪೇಯವನ್ನು ತೆಗೆದು, ಕುಡಿದು ಸಂಭ್ರಮಿಸಿ. ನೆಲ್ಲಿಕಾಯಿಯನ್ನು ಅತಿಯಾಗಿ ಸೇವಿಸುವುದೂ ಸಮಸ್ಯೆಗಳನ್ನು ತರಬಹುದು. ಈಗಾಗಲೇ ತೂಕ ಕಡಿಮೆ ಇರುವವರು ಇನ್ನೂ ತೂಕ ಇಳಿದ ನಿದಾರ್ಶನಗಳಿವೆ. ಹಾಗಾಗಿ ತೂಕ ಇಳಿಸುವವರು ಇದನ್ನು ಸೇವಿಸಿದಷ್ಟು, ಕಡಿಮೆ ತೂಕದವರಿಗೆ ಬೇಕಾಗುವುದಿಲ್ಲ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Channapatna News: ಮದುವೆಯಲ್ಲಿ ಐಸ್ ಕ್ರೀಂ ತಿಂದು 50ಕ್ಕೂ ಹೆಚ್ಚು ಮಂದಿ ಅಸ್ವಸ್ಥ

Ramanagara News: ಚನ್ನಪಟ್ಟಣ ತಾಲೂಕಿನ ಸಾತನೂರು ಸರ್ಕಲ್ ಬಳಿ ನಡೆದ ಮದುವೆ ಸಮಾರಂಭದಲ್ಲಿ ಐಸ್‌ ಕ್ರೀಂ ಸೇವಿಸಿದ್ದ 50ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ.

VISTARANEWS.COM


on

Ramanagara News
Koo

ರಾಮನಗರ: ಮದುವೆಯಲ್ಲಿ ಐಸ್ ಕ್ರೀಂ ತಿಂದು 50ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ (Channapatna News) ಸಾತನೂರು ಸರ್ಕಲ್ ಬಳಿ ನಡೆದಿದೆ. ಮುಸ್ಲಿಂ ಸಮುದಾಯದ ಮದುವೆ ಸಮಾರಂಭದಲ್ಲಿ ಊಟದ ನಂತರ ಐಸ್ ಕ್ರೀಂ ತಿಂದಿದ್ದ 50ಕ್ಕೂ ಹೆಚ್ಚು ಜನರ ಆರೋಗ್ಯ ವ್ಯತ್ಯಾಸವಾಗಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಚನ್ನಪಟ್ಟಣದ ಯಾರಬ್ ನಗರ ಹಾಗೂ ಕೋಟೆ ನಿವಾಸಿಗಳು ಅಸ್ವಸ್ಥರಾಗಿದ್ದು, ಐಸ್ ಕ್ರೀಂ ತಿಂದ ಅರ್ಧಗಂಟೆಯಲ್ಲಿ ವಾಂತಿ, ಭೇದಿ ಶುರುವಾಗಿದೆ. ಹೀಗಾಗಿ ಅವರಲ್ಲಿ 40 ಜನರನ್ನು ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಉಳಿದವರನ್ನು ಮಂಡ್ಯ ಹಾಗೂ ರಾಮನಗರ ಜಿಲ್ಲಾಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ಇದನ್ನೂ ಓದಿ | Fire Accident: ಬೆಂಗಳೂರಿನ ಎಂ.ಜಿ. ರಸ್ತೆಯ ಆಪ್ಟಿಕಲ್ಸ್‌ ಮಳಿಗೆಯಲ್ಲಿ ಬೆಂಕಿ ಅವಘಡ

ಅವಧಿ ಮುಗಿದಿದ್ದ ಐಸ್ ಕ್ರೀಂ ತಿಂದಿದ್ದೇ ಅವಾಂತರಕ್ಕೆ ಕಾರಣ ಎನ್ನಲಾಗಿದೆ. ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆ ಬಳಿ ಅಸ್ವಸ್ಥರ ಕುಟುಂಬಸ್ಥರು ಜಮಾಯಿಸಿದ್ದಾರೆ. ಅಸ್ವಸ್ಥರಿಗೆ ಡ್ರಿಪ್ಸ್ ಹಾಕಿ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.

ಗೋಮಾಂಸ ಸಾಗಾಟ ಶಂಕೆ; ಹಿಂದುಪರ ಕಾರ್ಯಕರ್ತರಿಂದ ವಾಹನಕ್ಕೆ ಕಲ್ಲು ತೂರಾಟ

Beef smuggling suspected Hindu activists pelt stones at vehicle

ಯಾದಗಿರಿ: ಅಕ್ರಮವಾಗಿ ಗೋಮಾಂಸ ಸಾಗಾಟ (Beef Smuggling) ಮಾಡುತ್ತಿದ್ದ ಶಂಕೆ ಹಿನ್ನೆಲೆಯಲ್ಲಿ ವಾಹನವನ್ನು ತಡೆದು ಹಿಂದುಪರ ಕಾರ್ಯಕರ್ತರು ಕಲ್ಲು ತೂರಾಟ ಮಾಡಿದ್ದಾರೆ. ಯಾದಗಿರಿ ಜಿಲ್ಲೆಯ ಹುಣಸಗಿ ಪಟ್ಟಣದ ಬಳಿ ಘಟನೆ ನಡೆದಿದೆ.

ಮಾಂಸ ಸಾಗಾಣಿಕೆ ಮಾಡುವ ವಾಹನ ಮಹಾರಾಷ್ಟ್ರ ಮೂಲದ್ದು ಎನ್ನಲಾಗಿದೆ. ಮಹಾರಾಷ್ಟ್ರದಿಂದ ತಾಳಿಕೋಟಿ ಮಾರ್ಗವಾಗಿ ಹೈದ್ರಾಬಾದ್‌ಗೆ ಹೋಗುತ್ತಿದ್ದಾಗ, ಹುಣಸಗಿ ಬಳಿ ನಿಲ್ಲಿಸಲಾಗಿತ್ತು. ಈ ವೇಳೆ ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡಲಾಗುತ್ತಿದೆ ಎಂಬ ಅನುಮಾನ ಬಂದಿತ್ತು. ಕೂಡಲೇ ಸ್ಥಳೀ ಪೊಲೀಸರಿಗೆ ಮಾಹಿತಿ ನೀಡಿದ್ದರು.

ತಕ್ಷಣವೇ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು, ಮಾಂಸ ಸಾಗಾಣಿಕೆ ಮಾಡುತ್ತಿದ್ದ ವಾಹನವನ್ನು ಪೊಲೀಸರನ್ನು ವಶಕ್ಕೆ ಪಡೆದಿದ್ದಾರೆ. ವಾಹನದಲ್ಲಿ ಇರುವುದು ಯಾವ ಪ್ರಾಣಿಯ ಮಾಂಸ ಎಂಬುದು ಪರಿಶೀಲನೆಗಾಗಿ ಪಶು ಇಲಾಖೆ ವೈದ್ಯರು ಕಲಬುರಗಿಗೆ ಕಳುಹಿಸಿದ್ದಾರೆ.

ಇದನ್ನೂ ಓದಿ: Lok Sabha Election 2024 : ಮತದಾನದ ಹಬ್ಬದಲ್ಲೂ ಲೂಟಿಗೆ ಇಳಿದ ಖಾಸಗಿ ಬಸ್‌! ವೋಟ್‌ ಹಾಕಲು ಬಸ್‌ ಏರುವವರಿಗೆ ಟಿಕೆಟ್ ದುಬಾರಿ!‌

ಶಿವಾನಂದ ದೊಂಡಿರಾಮ, ಅಕ್ಷಯ್ ಜಾವೀರ್, ಲಖನ್ ಎಂಬುವವರ ಮೇಲೆ ಕೇಸ್ ದಾಖಲಾಗಿದ್ದು, ವಾಹನದ ಚಾಲಕ ಶಿವಾನಂದ ದೊಂಡಿರಾಮ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಲಖನ್ ಜಾವೀರ್, ಅಕ್ಷಯ್ ಜಾವೀರ್ ಇಬ್ಬರು ಪರಾರಿಯಾಗಿದ್ದಾರೆ. ರಾಮಸೇನಾ ಜಿಲ್ಲಾಧ್ಯಕ್ಷ ಶರಣಕುಮಾರ ನಾಯಕ ಅವರಿಂದ ದೂರಿನ ಮೇರೆಗೆ ಹುಣಸಗಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading
Advertisement
Ranjani Raghavan Starrer Sathyam Kannada Movie Gets UA Certificate
ಸ್ಯಾಂಡಲ್ ವುಡ್1 min ago

Ranjani Raghavan: ರಂಜನಿ ರಾಘವನ್ ಸಿನಿಮಾದಲ್ಲಿ ಇರಲಿದೆ ಪಂಜುರ್ಲಿ ದೈವದ ಕಥೆ! ಬಿಡುಗಡೆ ಯಾವಾಗ?

Terrorist Attack
ದೇಶ6 mins ago

Terrorist attack: ʼಮಗನ ಬರ್ತ್‌ ಡೇ ಪಾರ್ಟಿಗೆ ಪ್ಲ್ಯಾನ್‌ ಮಾಡಿದ್ದ, ಆದರೆ ಈಗ…ʼ ಕಣ್ಣೀರಿಟ್ಟ ಹುತಾತ್ಮ ಯೋಧನ ಕುಟುಂಬ

Samantha Ruth Prabhu Fake Viral Nude Pic
ಟಾಲಿವುಡ್21 mins ago

Samantha Ruth Prabhu: ಬೆತ್ತಲೆ ಫೋಟೊ ಅಪ್​ಲೋಡ್ ಮಾಡಿದ್ರಾ ಸಮಂತಾ?

Dr.Nagareddy Patil
ಕರ್ನಾಟಕ22 mins ago

Dr.Nagareddy Patil: ಮಾಜಿ ಶಾಸಕ, ಕಾಂಗ್ರೆಸ್‌ ಮುಖಂಡ ಡಾ. ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

IPL 2024 Points Table
ಕ್ರೀಡೆ23 mins ago

IPL 2024 Points Table: ರಾಜಸ್ಥಾನ್​ ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ ಕೆಕೆಆರ್​; ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

Terrorist attack
ದೇಶ1 hour ago

Terrorist Attack: “ಉಗ್ರರ ದಾಳಿ ಬಿಜೆಪಿ ಚುನಾವಣಾ ಪೂರ್ವ ಸ್ಟಂಟ್‌”; ನಾಲಿಗೆ ಹರಿಬಿಟ್ಟ ಪ್ರತಿಪಕ್ಷದ ಇಬ್ಬರು ನಾಯಕರು

Prajwal Revanna Case
ಕರ್ನಾಟಕ1 hour ago

Prajwal Revanna Case: ಪ್ರಜ್ವಲ್‌ ಕೇಸ್‌ನ ಸಂತ್ರಸ್ತೆಯರಿಗಾಗಿ ಆರಂಭಿಸಿದ ಹೆಲ್ಪ್‌ಲೈನ್‌ಗೆ ಬರ್ತಿವೆ ಹಲವು ಕರೆಗಳು

Cooking Oils
ಆರೋಗ್ಯ2 hours ago

Cooking Oils: ಈ 5 ಅಡುಗೆ ಎಣ್ಣೆಗಳು ನಮ್ಮ ಆರೋಗ್ಯಕ್ಕೆ ಅಪಾಯಕಾರಿ!

karnataka Weather Forecast
ಮಳೆ3 hours ago

Karnataka Weather : ಇಂದು ಮಳೆ ಬರುತ್ತಾ? ಯಾವ ಜಿಲ್ಲೆಗಳಲ್ಲಿದೆ ಹೀಟ್‌ ವೇವ್‌?

Pain relievers
ಆರೋಗ್ಯ3 hours ago

Pain Relievers: ಸೈಡ್‌ ಎಫೆಕ್ಟ್‌ ಇಲ್ಲದ ಪ್ರಕೃತಿದತ್ತ ನೋವು ನಿವಾರಕಗಳಿವು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina bhavishya
ಭವಿಷ್ಯ4 hours ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ13 hours ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ15 hours ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ15 hours ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ2 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ3 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ3 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ4 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ4 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

ಟ್ರೆಂಡಿಂಗ್‌