SimhaPriya : ಪತ್ನಿ ಹರಿಪ್ರಿಯಾಗಾಗಿ ಸ್ಪೆಷಲ್‌ ಅಡುಗೆ ಮಾಡಿ ಉಣಬಡಿಸಿದ ವಸಿಷ್ಠ ಸಿಂಹ - Vistara News

ಸಿನಿಮಾ

SimhaPriya : ಪತ್ನಿ ಹರಿಪ್ರಿಯಾಗಾಗಿ ಸ್ಪೆಷಲ್‌ ಅಡುಗೆ ಮಾಡಿ ಉಣಬಡಿಸಿದ ವಸಿಷ್ಠ ಸಿಂಹ

ಚಂದನವನದ ನಟಿ ಹರಿಪ್ರಿಯಾ ತಮ್ಮ ಪತಿ ವಸಿಷ್ಠ ಸಿಂಹ ತಮಗಾಗಿ ಅಡುಗೆ ಮಾಡುತ್ತಿರುವ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಆ ಫೋಟೋ ವೈರಲ್‌ ಆಗಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಚಂದನವನದ ಖ್ಯಾತ ನಟ ವಸಿಷ್ಠ ಸಿಂಹ ಹಾಗೂ ನಟಿ ಹರಿಪ್ರಿಯಾ (SimhaPriya) ವೈವಾಹಿಕ ಜೀವನಕ್ಕೆ ಕಾಲಿಟ್ಟು ಒಂದು ವಾರ ಕಳೆದಿದೆ. ಮದುವೆಯಾಗಿ ವಾರವಾದ ಸಂತಸದಲ್ಲಿರುವ ಜೋಡಿ ತಮ್ಮದೇ ಆದ ರೀತಿಯಲ್ಲಿ ಈ ದಿನವನ್ನು ಆಚರಿಸಿಕೊಂಡಿದ್ದಾರೆ. ಹರಿಪ್ರಿಯಾಗಾಗಿ ವಸಿಷ್ಠ ವಿಶೇಷ ಅಡುಗೆಯನ್ನೂ ಮಾಡಿ ಉಣಬಡಿಸಿದ್ದಾರೆ.

ಇದನ್ನೂ ಓದಿ: Vasishta simha and Haripriya: ದಾಂಪತ್ಯ ಜೀವನಕ್ಕೆ ಕಾಲಿಟ್ಟ ವಸಿಷ್ಠ ಸಿಂಹ-ಹರಿಪ್ರಿಯಾ
ಪತಿ ವಸಿಷ್ಠ ಅಡುಗೆ ಮಾಡುತ್ತಿರುವ ಫೋಟೋವನ್ನು ಹರಿಪ್ರಿಯಾ ತಮ್ಮ ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ ಹಂಚಿಕೊಂಡಿದ್ದಾರೆ. “ಗಂಡನಿಗೆ ಅಡುಗೆ ಮಾಡುವುದು ಗೊತ್ತಿದ್ರೆ ನಿಮ್ಮ ಲೈಫ್‌ ಸೆಟ್‌ ಆದಂಗೇ” ಎಂದು ಫೋಟೋ ಮೇಲೆ ಬರೆದುಕೊಂಡಿದ್ದಾರೆ ಕೂಡ. ಅದರ ಜತೆಯಲ್ಲಿ, “ನಮ್ಮ ಮದುವೆಯಾಗಿ ಒಂದು ವಾರ ಕಳೆದಿದ್ದನ್ನು ಹೀಗೆ ಆಚರಿಸುತ್ತಿದ್ದೇವೆ” ಎಂದೂ ಬರೆದಿದ್ದಾರೆ. ಈ ಫೋಟೋ ಸಾಮಾಜಿಕ ಜಾಲತಾಣಗಳ ತುಂಬೆಲ್ಲ ಹರಿದಾಡಿದ್ದು ಭಾರೀ ವೈರಲ್‌ ಆಗಿದೆ. ಸಿಂಹಪ್ರಿಯರ ಅಭಿಮಾನಿಗಳು, “ನೀವೇ ಅದೃಷ್ಟವಂತರು” ಎಂದು ಕಮೆಂಟ್‌ಗಳನ್ನೂ ಹಾಕಲಾರಂಭಿಸಿದ್ದಾರೆ.


ಹರಿಪ್ರಿಯಾ ಮತ್ತು ವಸಿಷ್ಠ ಪರಸ್ಪರ ಪ್ರೀತಿಸುತ್ತಿದ್ದಾರೆ ಎನ್ನುವ ಸುದ್ದಿ ಹಲವು ತಿಂಗಳುಗಳಿಂದ ಚಂದನವನದಲ್ಲಿ ಹರಿದಾಡುತ್ತಿತ್ತು. ಹರಿಪ್ರಿಯಾ ಕೂಡ ಕಳೆದ ವರ್ಷ ಡಿಸೆಂಬರ್‌ನಲ್ಲಿ ಸಿಂಹದ ಕೈನಲ್ಲಿ ಮಗುವೊಂದು ಇರುವಂತಹ ಫೋಟೋ ಹಂಚಿಕೊಂಡು ತಾವು ವಸಿಷ್ಠ ಸಿಂಹರನ್ನು ಮದುವೆಯಾಗುವ ಬಗ್ಗೆ ಸುಳಿವು ಬಿಟ್ಟುಕೊಟ್ಟಿದ್ದರು. ಅದಾದ ನಂತರ ತಮ್ಮಿಬ್ಬರ ಫೋಟೋವನ್ನು ಹಂಚಿಕೊಂಡು ತಾವಿನ್ನು ʼಸಿಂಹಪ್ರಿಯʼ ಎಂದು ಹೇಳಿಕೊಂಡಿದ್ದರು.


ಈ ಜೋಡಿ ಡಿಸೆಂಬರ್‌ 9ರಂದು ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಜನವರಿ 26 ರಂದು ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಈ ಜೋಡಿಯ ಮದುವೆಯಲ್ಲಿ ಸ್ಯಾಂಡಲ್‌ವುಡ್‌ನ ನಟ ನಟಿಯರು ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು. ನಂತರ ಜನವರಿ 28ರಂದು ಅದ್ಧೂರಿಯಾಗಿ ಆರತಕ್ಷತೆ ಕಾರ್ಯಕ್ರಮವನ್ನೂ ನಡೆಸಲಾಗಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Niveditha Gowda: ಚಂದನ್‌ ಶೆಟ್ಟಿ-ನಿವೇದಿತಾ ನಡುವಿನ ವಯಸ್ಸಿನ ಅಂತರವೆಷ್ಟು?

Niveditha Gowda:  ಬಿಗ್‌ ಬಾಸ್‌ ಜೋಡಿ, ಕ್ಯೂಟ್‌ ಕಪಲ್‌ ಚಂದನ್‌ ಶೆಟ್ಟಿ ಹಾಗೂ ನಿವೇದಿತಾ ಗೌಡ (Niveditha Gowda) ದಂಪತಿ ವಿಚ್ಛೇದನ ಪಡೆದುಕೊಂಡಿದೆ. ಯುವ ದಸರಾ ವೇದಿಕೆಯಲ್ಲಿ ಚಂದನ್ ಶೆಟ್ಟಿ ನಿವೇದಿತಾಗೆ ಲವ್ ಪ್ರೊಪೋಸಲ್ ಮಾಡಿ ಸುದ್ದಿಯಾಗಿದ್ದರು. ಚಂದನ್ ವರ್ತನೆಗೆ ಪರ ಹಾಗೂ ವಿರೋಧ ಅಭಿಪ್ರಾಯಗಳು ವ್ಯಕ್ತವಾಗಿದ್ದವು. ಇದೇ ವರ್ಷ ಮೇ 12 ರಂದು ನಿವೇದಿತಾ ಹುಟ್ಟುಹಬ್ಬಕ್ಕೆ ವಿಶ್ ಮಾಡಿದ್ದರು ಚಂದನ್‌.

VISTARANEWS.COM


on

Niveditha Gowda chandan shetty age differance
Koo

ನಿವೇದಿತಾ ಗೌಡ (Niveditha Gowda) ಹಾಗೂ ಚಂದನ್‌ ಶೆಟ್ಟಿ ಕ್ಯೂಟ್‌ ಕಪಲ್‌ ಎಂದೇ ಹೆಸರುವಾಸಿಯಾದವರು.

ಇದೀಗ ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಪಡೆದುಕೊಂಡಿದ್ದಾರೆ. 4 ವರ್ಷಗಳ ದಾಂಪತ್ಯ ಜೀವನಕ್ಕೆ ಫುಲ್‌ಸ್ಟಾಪ್‌ ಇಟ್ಟಿದ್ದಾರೆ.

ಚಂದನ್‌ ಶೆಟ್ಟಿ ಅವರಿಗೆ ಸದ್ಯ 34 ವರ್ಷ. ಹಾಸನದ ಶಾಂತಿಗ್ರಾಮದಲ್ಲಿ 1989ರ ಸೆಪ್ಟೆಂಬರ್‌ 17ರಂದು ಜನಿಸಿದ್ದರು.

ಇದನ್ನೂ ಓದಿ: Niveditha Gowda: ಜೀವನಾಂಶಕ್ಕೆ ಬೇಡಿಕೆ ಇಟ್ಟಿದ್ರಾ ನಿವೇದಿತಾ ಗೌಡ?

ನಿವೇದಿತಾ ಗೌಡ ಅವರಿಗೆ ಈಗ 26 ವರ್ಷ. 1998ರ ಮೇ 12ರಂದು ಜನಿಸಿದರು. ಇಬ್ಬರ ನಡುವೆ ಒಂಬತ್ತು ವರ್ಷಗಳ ನಡುವೆ ವಯಸ್ಸಿನ ಅಂತರವಿದೆ.

ನಿವೇದಿತಾ ಗೌಡಗೆ ಇರುವ ಅತಿಯಾದ ಸೋಷಿಯಲ್ ಮೀಡಿಯಾ ಕ್ರೇಜ್‌ನಿಂದಾಗಿಯೇ, ರೀಲ್ಸ್ ವ್ಯಾಮೋಹದಿಂದಾಗಿಯೇ ಡಿವೋರ್ಸ್ ಹಂತ ತಲುಪಿದೆ ಎಂಬ ವದಂತಿಗಳೂ ಹಬ್ಬಿವೆ. 

Continue Reading

ಸ್ಯಾಂಡಲ್ ವುಡ್

Niveditha Gowda: ಜೀವನಾಂಶಕ್ಕೆ ಬೇಡಿಕೆ ಇಟ್ಟಿದ್ರಾ ನಿವೇದಿತಾ ಗೌಡ?

Niveditha Gowda: ಬಿಗ್‌ ಬಾಸ್‌ ಜೋಡಿ, ಕ್ಯೂಟ್‌ ಕಪಲ್‌ ಚಂದನ್‌ ಶೆಟ್ಟಿ ಹಾಗೂ ನಿವೇದಿತಾ ಗೌಡ (Niveditha Gowda) ದಂಪತಿ ವಿಚ್ಛೇದನ ಪಡೆದುಕೊಂಡಿದೆ. ಯುವ ದಸರಾ ವೇದಿಕೆಯಲ್ಲಿ ಚಂದನ್ ಶೆಟ್ಟಿ ನಿವೇದಿತಾಗೆ ಲವ್ ಪ್ರೊಪೋಸಲ್ ಮಾಡಿ ಸುದ್ದಿಯಾಗಿದ್ದರು. ಚಂದನ್ ವರ್ತನೆಗೆ ಪರ ಹಾಗೂ ವಿರೋಧ ಅಭಿಪ್ರಾಯಗಳು ವ್ಯಕ್ತವಾಗಿದ್ದವು. ಇದೇ ವರ್ಷ ಮೇ 12 ರಂದು ನಿವೇದಿತಾ ಹುಟ್ಟುಹಬ್ಬಕ್ಕೆ ವಿಶ್ ಮಾಡಿದ್ದರು ಚಂದನ್‌.

VISTARANEWS.COM


on

Niveditha Gowda Demand For Divorce Alimony
Koo

ಬೆಂಗಳೂರು: ಚಂದನ್‌ ಶೆಟ್ಟಿ (Niveditha Gowda) ಹಾಗೂ ನಿವೇದಿತಾ ಗೌಡ ಅವರು ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಪಡೆದುಕೊಂಡಿದ್ದಾರೆ. ಇದೀಗ ಚಂದನ್ ಹಾಗೂ ನಿವೇದಿತಾ ಪರ ವಕೀಲರಾದ ಅನಿತಾ ಅವರು ನಿವೇದಿತಾ ಅವರು ಜೀವನಾಂಶಕ್ಕೆ ಬೇಡಿಕೆ ಇಟ್ಟಿಲ್ಲ ಎಂದು ಮಾಹಿತಿ ಹಂಚಿಕೊಂಡಿದ್ದಾರೆ. ಇಬ್ಬರದ್ದೂ ಸಹ ಪರಸ್ಪರ ಒಪ್ಪಿಗೆ ವಿಚ್ಛೇದನ ಆಗಿರುವ ಕಾರಣ, ನಿವೇದಿತಾ, ಜೀವನಾಂಶಕ್ಕೆ ಬೇಡಿಕೆ ಇಟ್ಟಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ವಕೀಲೆ ಅನಿತಾ ಹೇಳಿರುವಂತೆ, ಇಬ್ಬರೂ ಸಹ ದುಡಿಯುತ್ತಿರುವವರು, ಹಾಗಾಗಿ ಇನ್ನೊಬ್ಬರ ಹಣದ ಅವಶ್ಯಕತೆ ಇಬ್ಬರಿಗೂ ಇಲ್ಲ ಎಂದಿದ್ದಾರೆ.

ಸಂಧಾನಕ್ಕೆ ಒಪ್ಪಲಿಲ್ಲ ಚಂದನ್​-ನಿವೇದಿತಾ!

ನ್ಯಾಯಾಲಯದ ಪ್ರಕ್ರಿಯೆ ವೇಳೆ ತಾವಿಬ್ಬರೂ ಮುಂದೆ ಜತೆಯಾಗಿ ಬಾಳುವುದಕ್ಕೆ ಸಾಧ್ಯವೇ ಇಲ್ಲ ಎಂದು ಖಡಾಖಂಡಿತವಾಗಿ ಹೇಳಿದ್ದರು ಚಂದನ್‌ ಹಾಗೂ ನಿವೇದಿತಾ. ಚಂದನ್​ ಹಾಗೂ ನಿವೇದಿತಾ ವಿಚ್ಛೇದನ ಅರ್ಜಿ (ಕೇಸ್ ನಂಬರ್-Mc 3388-/2024) ಕೋರ್ಟ್​ ಮುಂದಕ್ಕೆ ಬಂದಿತ್ತು. ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶರಾದ ಕೆ.ಎಸ್ ಜ್ಯೋತಿ ಶ್ರೀ ಅವರು ಬೆಂಚ್​ ಮುಂದೆ ಈ ಪ್ರಕರಣ ಬಂದಿತ್ತು. ಅರ್ಜಿಯನ್ನು ವಿಚಾರಣೆ ಮಾಡುವ ಮೊದಲು ಕಾನೂನು ಪ್ರಕ್ರಿಯೆಯಂತೆ ಮಿಡಿಯೇಷನ್ ಪ್ರಕ್ರಿಯೆ ಒಳಪಡಬೇಕಾಯಿತು. ಚಂದನ್ ಹಾಗೂ ನಿವೇದಿತಾ ಅವರಿಗೆ ಕೌಟುಂಬಿಕ ಕೋರ್ಟ್‌ನ ಮಿಡಿಯೇಷನ್​ ಸೆಂಟರ್​ನಲ್ಲಿ ಮಾತುಕತೆ ನಡೆಸಲಾಯಿತು. ವಿಚ್ಛೇದನ ಪ್ರಕ್ರಿಯೆ ಮೊದಲು ಈ ಸಂಧಾನ ನಡೆಯಲೇಬೇಕು. ಅಂತೆಯೇ ಸಂಧಾನಕಾರರು ಮಾತುಕತೆ ನಡೆಸಿದಾಗ ಅವರಿಬ್ಬರು ತಮ್ಮ ನಿರ್ಧಾರದಿಂದ ವಾಪಸ್ ಬರುವುದಿಲ್ಲ ಎಂದು ಹೇಳಿದ್ದರು ಎನ್ನಲಾಗಿದೆ.

ಮೀಡಿಯೇಷನ್ ಸೆಂಟರ್​ನಲ್ಲಿ ವಿಚ್ಛೇದನ ನೀಡದಂತೆ ಸಲಹೆ ಕೊಡುತ್ತಾರೆ. ಪರಸ್ಪರ ಒಂದಾಗಿ ಬಾಳಿ ಎಂದು ಸಲಹೆ ನೀಡುತ್ತಾರೆ. ಇಬ್ಬರು ಒಪ್ಪದೇ ಇದ್ದರೆ ನ್ಯಾಯಾಧೀಶರ ಮುಂದೆ ಹಾಜರು ಪಡಿಸುತ್ತಾರೆ. ಬಳಿಕ ನ್ಯಾಯಾಧೀಶರು ನಿರ್ಧಾರದ ಬಗ್ಗೆ ಕೇಳುತ್ತಾರೆ. ಬಳಿಕ ವಿಚ್ಛೇಧನಕ್ಕೆ ಒಪ್ಪಿಗೆ ಕೊಡುತ್ತಾರೆ.

ಇದನ್ನೂ ಓದಿ: Niveditha Gowda: ಚಂದನ್‌-ನಿವೇದಿತಾ ಡಿವೋರ್ಸ್‌ ಬಗ್ಗೆ ಅಸಲಿ ಸತ್ಯ ಬಯಲು ಮಾಡಿದ ವಕೀಲೆ!

ಆದರೆ ಚಂದನ್‌ ಹಾಗೂ ನಿವೇದಿತಾ ಕೇಸ್‌ನಲ್ಲಿ ಪರಸ್ಪರ ಒಪ್ಪಿಗೆ ಮೇಲೆ ವಿಚ್ಛೇದನಕ್ಕೆ ಸಲ್ಲಿಸಿದ್ದ ಕಾರಣ ಹಾಗೂ ಕಳೆದ ಆರು ತಿಂಗಳಿನಿಂದಲೂ ಪತಿ-ಪತ್ನಿ ರೀತಿ ಸಹಬಾಳ್ವೆ ನಡೆಸದ ಕಾರಣ ನ್ಯಾಯಾಲಯವು ಇವರಿಗೆ ವಿಚ್ಛೇದನ ನೀಡಿದೆ.

ವಕೀಲೆ ಅನಿತಾ ಹೇಳಿಕೆ ನೀಡಿದ್ದೇನು?

ಈ ಬಗ್ಗೆ ವಕೀಲರಾದ ಅನಿತಾ ಮಾತನಾಡಿ ʻʻಇವರಿಬ್ಬರ ಬಗ್ಗೆ ಮಾಧ್ಯಮದಲ್ಲಿ ತಪ್ಪಾಗಿ ತೋರಿಸಲಾಗುತ್ತಿದೆ. ಮೊದಲು ವಿಚ್ಛೇದನ ಅರ್ಜಿ ಸಲ್ಲಿಸಿದ ಬಳಿಕ ಆರು ತಿಂಗಳ ಸಮಯಾವಕಾಶ ಇರುತ್ತಿತ್ತು. ಈಗ ಹಾಗಿಲ್ಲ. ತಕ್ಷಣಕ್ಕೆ ವಿಚ್ಛೇದನ ಪಡೆಯಬಹುದು. ದೊಡ್ಡವರು ಸಂಧಾನ ಮಾಡಲು ಪ್ರಯತ್ನಿಸಿದರು. ಆದರೆ, ಅದು ಆಗಿಲ್ಲ. ಮಗು ಹೊಂದಲು ನಿವೇದಿತಾ ಒಪ್ಪಿಲ್ಲ, ಇದಕ್ಕೆ ವಿಚ್ಛೇದನ ಪಡೆದರು ಎನ್ನುವುದು ಸುಳ್ಳು. ಇಬ್ಬರ ಆಲೋಚನೆ ಬೇರೆ ಇದೆ. ಒಬ್ಬರಿಗೊಬ್ಬರು ತೆಗೆದುಕೊಂಡ ನಿರ್ಧಾರವನ್ನು ಗೌರವಿಸುತ್ತಾರೆ. ಅವರ ಖಾಸಗಿತನಕ್ಕೆ ನಾವು ಗೌರವ ಕೊಡಬೇಕು. ಒಬ್ಬರನ್ನೊಬ್ಬರು ಚೆನ್ನಾಗಿ ಅರ್ಥ ಮಾಡಿಕೊಂಡಿದ್ದಾರೆ. ನಿನ್ನೆಯೇ ಡಿವೋರ್ಸ್‌ ಆಗಿದೆ. ಅವರಿಬ್ಬರಲ್ಲಿ ಒಳ್ಳೆಯ ಮಾನವೀಯತೆ ಇದೆ. ತುಂಬ ಮೆಚ್ಯೂರ್‌ ಆಗಿದ್ದಾರೆʼʼ ಎಂದರು.

ʻಇಬ್ಬರೂ ಡಿಫೆಂಡ್‌ ಆಗುವ ಪರಿಸ್ಥಿಯಲ್ಲಿಯೂ ಅವರು ಇಲ್ಲ. ಯಾವುದೇ ಜೀವನಾಂಶ ಕೂಡ ಕೇಳಿಲ್ಲ. ಗಂಡ ಹೆಂಡತಿ ಮಧ್ಯೆ ಭಿನ್ನವಾದ ಸಂಬಂಧ ಇರುತ್ತದೆ. ಎಷ್ಟೋ ಜನ ಗಂಡ ಹೆಂಡತಿಯರು ಹೆದರಿಕೊಂಡು ಡಿವೋರ್ಸ್‌ ಹಂತಕ್ಕೆ ಬರುವುದಿಲ್ಲ. ಇನ್ನೂ ಕೆಲವರು ತುಂಬ ಜಗಳ ಮಾಡುತ್ತಾರೆ. ಆದರೆ ತುಂಬ ಒಬ್ಬರಿಗೊಬ್ಬರು ಪ್ರೀತಿಸುತ್ತಾರೆ. ಆದರೆ ಇವರ ಕೇಸ್‌ನಲ್ಲಿ ಬೇರೆಯಾಗಬೇಕು ಎಂದು ಅವರು ಆಗಲೇ ನಿರ್ಧಾರ ಮಾಡಿದ್ದರು. ಫ್ಯಾಮಿಲಿ ಜತೆ ಕೂಡ ಚರ್ಚಿಸಿದ್ದರು. ಇದೀಗ ಅಧಿಕೃತವಾಗಿ ಡಿವೋರ್ಸ್‌ ಪಡೆದಿದ್ದಾರೆʼʼ ಎಂದರು.

Continue Reading

ಸ್ಯಾಂಡಲ್ ವುಡ್

Nikhil Kumaraswamy: ಚಿತ್ರರಂಗದಿಂದ ಸ್ವಲ್ಪ ವಿರಾಮ ತೆಗೆದುಕೊಂಡಿದ್ದೇನೆ ಅಷ್ಟೇ ಎಂದ ನಿಖಿಲ್ ಕುಮಾರಸ್ವಾಮಿ

Nikhil Kumaraswamy: ಜಾಗ್ವಾರ್’ ಸಿನಿಮಾ ಮೂಲಕ ನಿಖಿಲ್ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದರು. ನಿಖಿಲ್‌ ಕೆಲವು ದಿನಗಳ ಹಿಂದೆ ಹೊಸ ಸಿನಿಮಾಗೆ ಚಿತ್ರೀಕರಣ ತೊಡಗಿಸಿಕೊಂಡಿದ್ದರು. ಕಮಲ್ ಹಾಸನ್, ರಜನಿಕಾಂತ್, ಅಜಿತ್‌, ವಿಜಯ್‌ ಸೇರಿದಂತೆ ಅನೇಕ ಸೂಪರ್ ಸ್ಟಾರ್‌ಗಳ ಚಿತ್ರಗಳಿಗೆ ಬಂಡವಾಳ ಹಾಕಿರುವ ಲೈಕಾ ಸಂಸ್ಥೆ ನಿಖಿಲ್ ಕುಮಾರ್ (Nikhil Kumaraswamy) ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ.

VISTARANEWS.COM


on

Nikhil Kumaraswamy will stay on Kannada Film industry
Koo

ಬೆಂಗಳೂರು: ಎಚ್‌ಡಿ ಕುಮಾರಸ್ವಾಮಿ ಗೆಲುವಿನ ಬಳಿಕ ರಾಜ್ಯದಲ್ಲಿ ಜೆಡಿಎಸ್ ಪಕ್ಷವನ್ನು ಕಟ್ಟುವ ಜವಾಬ್ದಾರಿ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರ ಮೇಲೆ ಬಿದ್ದಿದೆ. ಈ ಸಂಬಂಧ ಇತ್ತೀಚೆಗೆ ಸಿನಿಮಾವನ್ನು ಸಂಪೂರ್ಣ ಬಂದ್ ಮಾಡಿದ್ದೇನೆ. ನಾನು‌ ಇನ್ಮುಂದೆ ಪಕ್ಷ ಕಟ್ಟುವ ಕಡೆ ಗಮನ ಕೊಡುತ್ತೇನೆ ಎಂದಿದ್ದರು ನಿಖಿಲ್‌. ಇದೀಗ ಮಾಧ್ಯಮದ ಮುಂದೆ ನಟನೆಯಿಂದ ಸಣ್ಣ ವಿರಾಮ ತೆಗೆದುಕೊಂಡಿದ್ದೇನೆ ಎಂದು ಹೇಳಿಕೆ ನೀಡಿದ್ದಾರೆ.

ನಿಖಿಲ್‌ ಕುಮಾರಸ್ವಾಮಿ ಮಾತನಾಡಿ ʻʻಈ ಹಿಂದೆ ನಾನು ಹೇಳಿಕೆ ನೀಡಿರುವ ಬಗ್ಗೆ ತಪ್ಪಾಗಿ ಅರ್ಥೈಸಿಕೊಂಡರು ಎನ್ನಿಸುತ್ತದೆ. ಈ ಬಗ್ಗೆ ನಾನು ಸ್ಪಷ್ಟನೆ ನೀಡಬೇಕು. ನಿಖಿಲ್‌ ಕುಮಾರಸ್ವಾಮಿ ಯಾರು ಎಂದು ಜನರಿಗೆ ಗೊತ್ತಾಗಿದ್ದು ನಟನಾಗಿ. ಬಹುಶಃ ರಾಜಕಾರಣ ಹಿನ್ನೆಲೆಯಿಂದ ಬಂದಿರುವ ನನಗೆ ಇವತ್ತು ಇಷ್ಟೊಂದು ಪ್ರೀತಿ, ವಿಶ್ವಾಸ ನೀಡಿದ್ದರು, ಕನ್ನಡ ಅಭಿಮಾನಿಗಳು. ಇದನ್ನು ಮರೆಯಲು ಸಾಧ್ಯವಿಲ್ಲ. ನಾನು ಕೆಲವೇ ಸಿನಿಮಾಗಳನ್ನು ಮಾಡಿದ್ದರೂ ಪ್ರೋತ್ಸಾಹ,ಪ್ರೀತಿ ಕೊಟ್ಟಿದ್ದಾರೆ. ಸದ್ಯದ ಮಟ್ಟಿಗೆ ರಾಜಕಾರಣದಲ್ಲಿ ಸಂಘಟನೆ ವಿಚಾರದಲ್ಲಿ ಜವಾಬ್ದಾರಿಗಳಿವೆ. ಹಾಗಾಗಿ ನಾನು ಚಿತ್ರರಂಗದಿಂದ ಸ್ವಲ್ಪ ವಿರಾಮ ತೆಗೆದುಕೊಳ್ಳುತ್ತಿದ್ದೇನೆʼʼ ಎಂದರು.

ಇದನ್ನೂ ಓದಿ: Nikhil Kumaraswamy: ಸಿನಿಮಾಗೆ ಗುಡ್‌ ಬೈ ಹೇಳ್ತಾರಾ ನಿಖಿಲ್ ಕುಮಾರಸ್ವಾಮಿ?

‘ಜಾಗ್ವಾರ್’ ಸಿನಿಮಾ ಮೂಲಕ ನಿಖಿಲ್ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದರು. ನಿಖಿಲ್‌ ಕೆಲವು ದಿನಗಳ ಹಿಂದೆ ಹೊಸ ಸಿನಿಮಾಗೆ ಚಿತ್ರೀಕರಣ ತೊಡಗಿಸಿಕೊಂಡಿದ್ದರು. ಕಮಲ್ ಹಾಸನ್, ರಜನಿಕಾಂತ್, ಅಜಿತ್‌, ವಿಜಯ್‌ ಸೇರಿದಂತೆ ಅನೇಕ ಸೂಪರ್ ಸ್ಟಾರ್‌ಗಳ ಚಿತ್ರಗಳಿಗೆ ಬಂಡವಾಳ ಹಾಕಿರುವ ಲೈಕಾ ಸಂಸ್ಥೆ ನಿಖಿಲ್ ಕುಮಾರ್ (Nikhil Kumaraswamy) ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ. ಲೈಕಾ ಸಂಸ್ಥೆ ನಿರ್ಮಾಣ ಮಾಡುತ್ತಿರುವ ಈ ಚಿತ್ರಕ್ಕೆ ಇನ್ನು ಟೈಟಲ್ ಫಿಕ್ಸ್ ಆಗಬೇಕಿದೆ. ಚಿತ್ರವನ್ನು ಲಕ್ಷ್ಮಣ್ ನಿರ್ದೇಶನ ಮಾಡುತ್ತಿದ್ದು ಚಿತ್ರೀಕರಣದ ಮೊದಲ ಶೆಡ್ಯೂಲ್ ಇತ್ತೀಚೆಗಷ್ಟೇ ಶುರುವಾಗಿತ್ತು. ಚಿತ್ರಕ್ಕೆ ಯುಕ್ತಿ ತರೇಜಾ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರದ ಮೂಲಕ ಲೈಕಾ ಸಂಸ್ಥೆ ಮೊದಲ ಬಾರಿಗೆ ಕನ್ನಡ ಇಂಡಸ್ಟ್ರಿಯಲ್ಲಿ ಮೊದಲ ಸಿನಿಮಾ ನಿರ್ಮಾಣ ಮಾಡುತ್ತಿದೆ.

ತಮಿಳಿನಲ್ಲಿ ‘ಕತ್ತಿ’, ‘2.0’, ‘ದರ್ಬಾರ್’, ‘ಪೊನ್ನಿಯನ್ ಸೆಲ್ವನ್’ ಸೇರಿದಂತೆ ಹಲವು ಸಿನಿಮಾಗಳನ್ನು ಈ ಸಂಸ್ಥೆ ನಿರ್ಮಿಸಿದೆ. ಕೆಲವೇ ದಿನಗಳ ಹಿಂದೆಯಷ್ಟೆ ಖಾಸಗಿ ಹೋಟೆಲ್‌ನಲ್ಲಿ ಪ್ರೊಡಕ್ಷನ್ ನಂ. 28 ಸಿನಿಮಾ ಮುಹೂರ್ತ ನೆರವೇರಿತ್ತು. ಮಾಜಿ ಪ್ರಧಾನಿ ಎಚ್‌. ಡಿ ದೇವಗೌಡರು, ಮಾಜಿ ಸಿಎಂ ಎಚ್‌. ಡಿ ಕುಮಾರಸ್ವಾಮಿ ಈ ಸಮಾರಂಭದಲ್ಲಿ ಭಾಗಿಯಾಗಿ ತಂಡಕ್ಕೆ ಶುಭ ಕೋರಿದ್ದರು.

Continue Reading

ಸ್ಯಾಂಡಲ್ ವುಡ್

Niveditha Gowda: ಚಂದನ್‌-ನಿವೇದಿತಾ ಡಿವೋರ್ಸ್‌ ಬಗ್ಗೆ ಅಸಲಿ ಸತ್ಯ ಬಯಲು ಮಾಡಿದ ವಕೀಲೆ!

Niveditha Gowda: ಯುವ ದಸರಾ ಕಾರ್ಯಕ್ರಮದಲ್ಲಿ ಚಂದನ್‌ ಶೆಟ್ಟಿ ಅವರು ನಿವೇದಿತಾ ಗೌಡ ಪ್ರಪೋಸ್‌ ಮಾಡಿದ್ದೂ ವಿವಾದಕ್ಕೆ ಕಾರಣವಾಗಿತ್ತು. ಸಾಕಷ್ಟು ಮಂದಿ ಇದಕ್ಕೆ ಟೀಕೆ ವ್ಯಕ್ತಪಡಿಸಿದ್ದರು. ಬಿಗ್‌ ಬಾಸ್‌ ಐದನೇ ಸೀಸನ್‌ನಲ್ಲಿ ಚಂದನ್‌ ಗೌಡ ಹಾಗೂ ನಿವೇದಿತಾ ಗೌಡ ಮೊದಲ ಬಾರಿಗೆ ಭೇಟಿಯಾಗಿದ್ದರು. ಮೊದಲಿಗೆ ಬಿಗ್‌ಬಾಸ್‌ನಲ್ಲಿ ನಿವೇದಿತಾಳನ್ನು ತನ್ನ ತಂಗಿ ಎಂದೇ ಹೇಳುತ್ತಿದ್ದ ಚಂದನ್‌ ಗೌಡ ಬಳಿಕ ಮದುವೆಯಾಗಿದ್ದರು.

VISTARANEWS.COM


on

Niveditha Gowda chandan divorce main reason told by advocate
Koo

ಬೆಂಗಳೂರು: ಚಂದನ್‌ ಹಾಗೂ ನಿವೇದಿತಾ (Niveditha Gowda) ಅವರು ಡಿವೋರ್ಸ್‌ ಪಡೆದ ಕಾರಣಗಳ ಬಗ್ಗೆ ಹಲವು ವದಂತಿಗಳು ಹಬ್ಬಿವೆ. ಈಗ ಚಂದನ್ ಹಾಗೂ ನಿವೇದಿತಾ ಪರ ವಕೀಲರಾದ ಅನಿತಾ ಅವರು ಇವರ ವಿಚ್ಛೇದನಕ್ಕೆ ಕಾರಣ ಏನು ಎಂಬುದನ್ನು ರಿವೀಲ್ ಮಾಡಿದ್ದಾರೆ. `ಒಂದು ವರ್ಷಗಳ ಹಿಂದೆಯೇ ಇವರು ವಿಚ್ಛೇದನಕ್ಕೆ ನಿರ್ಧರಿಸಿದ್ದರು’ ಎಂದು ಹೇಳಿಕೆ ನೀಡಿದ್ದಾರೆ.

ಈ ಬಗ್ಗೆ ವಕೀಲರಾದ ಅನಿತಾ ಮಾತನಾಡಿ ʻʻಇವರಿಬ್ಬರ ಬಗ್ಗೆ ಮಾಧ್ಯಮದಲ್ಲಿ ತಪ್ಪಾಗಿ ತೋರಿಸಲಾಗುತ್ತಿದೆ. ಮೊದಲು ವಿಚ್ಛೇದನ ಅರ್ಜಿ ಸಲ್ಲಿಸಿದ ಬಳಿಕ ಆರು ತಿಂಗಳ ಸಮಯಾವಕಾಶ ಇರುತ್ತಿತ್ತು. ಈಗ ಹಾಗಿಲ್ಲ. ತಕ್ಷಣಕ್ಕೆ ವಿಚ್ಛೇದನ ಪಡೆಯಬಹುದು. ದೊಡ್ಡವರು ಸಂಧಾನ ಮಾಡಲು ಪ್ರಯತ್ನಿಸಿದರು. ಆದರೆ, ಅದು ಆಗಿಲ್ಲ. ಮಗು ಹೊಂದಲು ನಿವೇದಿತಾ ಒಪ್ಪಿಲ್ಲ, ಇದಕ್ಕೆ ವಿಚ್ಛೇದನ ಪಡೆದರು ಎನ್ನುವುದು ಸುಳ್ಳು. ಇಬ್ಬರ ಆಲೋಚನೆ ಬೇರೆ ಇದೆ. ಒಬ್ಬರಿಗೊಬ್ಬರು ತೆಗೆದುಕೊಂಡ ನಿರ್ಧಾರವನ್ನು ಗೌರವಿಸುತ್ತಾರೆ. ಅವರ ಖಾಸಗಿತನಕ್ಕೆ ನಾವು ಗೌರವ ಕೊಡಬೇಕು. ಒಬ್ಬರನ್ನೊಬ್ಬರು ಚೆನ್ನಾಗಿ ಅರ್ಥ ಮಾಡಿಕೊಂಡಿದ್ದಾರೆ. ನಿನ್ನೆಯೇ ಡಿವೋರ್ಸ್‌ ಆಗಿದೆ. ಅವರಿಬ್ಬರಲ್ಲಿ ಒಳ್ಳೆಯ ಮಾನವೀಯತೆ ಇದೆ. ತುಂಬ ಮೆಚ್ಯೂರ್‌ ಆಗಿದ್ದಾರೆʼʼ ಎಂದರು.

ʻʻಇಬ್ಬರೂ ಡಿಫೆಂಡ್‌ ಆಗುವ ಪರಿಸ್ಥಿಯಲ್ಲಿಯೂ ಅವರು ಇಲ್ಲ. ಯಾವುದೇ ಜೀವನಾಂಶ ಕೂಡ ಕೇಳಿಲ್ಲ. ಗಂಡ ಹೆಂಡತಿ ಮಧ್ಯೆ ಭಿನ್ನವಾದ ಸಂಬಂಧ ಇರುತ್ತದೆ. ಎಷ್ಟೋ ಜನ ಗಂಡ ಹೆಂಡತಿಯರು ಹೆದರಿಕೊಂಡು ಡಿವೋರ್ಸ್‌ ಹಂತಕ್ಕೆ ಬರುವುದಿಲ್ಲ. ಇನ್ನೂ ಕೆಲವರು ತುಂಬ ಜಗಳ ಮಾಡುತ್ತಾರೆ. ಆದರೆ ತುಂಬ ಒಬ್ಬರಿಗೊಬ್ಬರು ಪ್ರೀತಿಸುತ್ತಾರೆ. ಆದರೆ ಇವರ ಕೇಸ್‌ನಲ್ಲಿ ಬೇರೆಯಾಗಬೇಕು ಎಂದು ಅವರು ಆಗಲೇ ನಿರ್ಧಾರ ಮಾಡಿದ್ದರು. ಫ್ಯಾಮಿಲಿ ಜತೆ ಕೂಡ ಚರ್ಚಿಸಿದ್ದರು. ಇದೀಗ ಅಧಿಕೃತವಾಗಿ ಡಿವೋರ್ಸ್‌ ಪಡೆದಿದ್ದಾರೆʼʼ ಎಂದರು.

ಇದನ್ನೂ ಓದಿ: Niveditha Gowda: ಚಂದನ್‌-ನಿವೇದಿತಾ ಡಿವೋರ್ಸ್‌ಗೆ ಸೃಜನ್ ಲೋಕೇಶ್ ಕಾರಣ? ಯಾಕೆ ಈ ಗಾಸಿಪ್‌?

ನಿವೇದಿತಾ ಗೌಡ ಪೋಸ್ಟ್‌

ಈ ದಿನ., ಚಂದನ್ ಶೆಟ್ಟಿ ಮತ್ತು ನಾನು, ನಮ್ಮ ದಾಂಪತ್ಯ ಜೀವನವನ್ನ ಕಾನೂನುಬದ್ಧವಾಗಿ ಪರಸ್ಪರ ಒಪ್ಪಿಗೆಯಿಂದ ಕೊನೆಗೂಳಿಸಿದ್ದೇವೆ. ನಮ್ಮ ನಿರ್ಧಾರವನ್ನು ಮತ್ತು ನಮ್ಮ ಜೀವನದ ಖಾಸಗಿತನವನ್ನು ಗೌರವಿಸಲು ಕೋರುತ್ತೇವೆ. ಪ್ರತಿ ಸಂದರ್ಭದಲ್ಲಿ ನಮ್ಮೊಂದಿಗೆ ನಿಂತ ಮಾಧ್ಯಮ ಮಿತ್ರರು ನಮ್ಮ ಸ್ನೇಹಿತರು ಮತ್ತು ಅಭಿಮಾನಿಗಳಿಂದ ನಾವು ಎಂದಿನಂತೆ ಬೆಂಬಲವನ್ನು ಕೋರುತ್ತೇವೆ. ನಾವು ನಮ್ಮ ಪ್ರತ್ಯೇಕ ಮಾರ್ಗ ಅನುಸರಿಸಿದರೂ ಪರಸ್ಪರ ಒಬ್ಬರನ್ನು ಒಬ್ಬರು ಗೌರವಿಸುತ್ತೇವೆ. ಸೂಕ್ಷ್ಮ ಪರಿಗಣೆಗಾಗಿ ಎಲ್ಲರಿಗೂ ಧನ್ಯವಾದಗಳು ಎಂದು ನಿವೇದಿತಾ ಗೌಡ ಬರೆದುಕೊಂಡಿದ್ದಾರೆ.

ಯುವ ದಸರಾ ಕಾರ್ಯಕ್ರಮದಲ್ಲಿ ಚಂದನ್‌ ಶೆಟ್ಟಿ ಅವರು ನಿವೇದಿತಾ ಗೌಡ ಪ್ರಪೋಸ್‌ ಮಾಡಿದ್ದೂ ವಿವಾದಕ್ಕೆ ಕಾರಣವಾಗಿತ್ತು. ಸಾಕಷ್ಟು ಮಂದಿ ಇದಕ್ಕೆ ಟೀಕೆ ವ್ಯಕ್ತಪಡಿಸಿದ್ದರು. ಬಿಗ್‌ ಬಾಸ್‌ ಐದನೇ ಸೀಸನ್‌ನಲ್ಲಿ ಚಂದನ್‌ ಶೆಟ್ಟಿ ಹಾಗೂ ನಿವೇದಿತಾ ಗೌಡ ಮೊದಲ ಬಾರಿಗೆ ಭೇಟಿಯಾಗಿದ್ದರು. ಮೊದಲಿಗೆ ಬಿಗ್‌ಬಾಸ್‌ನಲ್ಲಿ ನಿವೇದಿತಾಳನ್ನು ತನ್ನ ತಂಗಿ ಎಂದೇ ಹೇಳುತ್ತಿದ್ದ ಚಂದನ್‌ ಶೆಟ್ಟಿ ಬಳಿಕ ಮದುವೆಯಾಗಿದ್ದರು.

Continue Reading
Advertisement
Karnataka police
ಕರ್ನಾಟಕ2 hours ago

Davanagere News: ದಾವಣಗೆರೆಯಲ್ಲಿ ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್‌ಗಿರಿ; ನಾಲ್ವರ ಬಂಧನ

French Open Final 2024
ಪ್ರಮುಖ ಸುದ್ದಿ2 hours ago

French Open Final 2024: 4ನೇ​ ಫ್ರೆಂಚ್‌ ಓಪನ್‌ ಟ್ರೋಫಿ ಗೆದ್ದ ಇಗಾ ಸ್ವಿಯಾಟೆಕ್‌

Govt Employees
ಕರ್ನಾಟಕ2 hours ago

Govt Employees: ಪ್ರತಿ ಸೋಮವಾರ ಕೇಂದ್ರ ಕಚೇರಿಗಳಿಗೆ ಅಧಿಕಾರಿ, ನೌಕರರ ಹಾಜರು ಕಡ್ಡಾಯ: ರಾಜ್ಯ ಸರ್ಕಾರ ಆದೇಶ

Kisan Samman Nidhi
ಪ್ರಮುಖ ಸುದ್ದಿ2 hours ago

Kisan Samman Nidhi: ರೈತರಿಗೆ ಗುಡ್‌ ನ್ಯೂಸ್;‌ ಕಿಸಾನ್‌ ಸಮ್ಮಾನ್‌ ನಿಧಿ 2 ಸಾವಿರ ರೂ. ಹೆಚ್ಚಳ, ಇನ್ನು ಸಿಗೋದು 8 ಸಾವಿರ ರೂ.!

IND vs PAK
ಕ್ರೀಡೆ3 hours ago

IND vs PAK: ಭಾರತ-ಪಾಕ್​ ಹೈವೋಲ್ಟೇಜ್​ ಪಂದ್ಯದ ಹವಾಮಾನ ವರದಿ, ಆಡುವ ಬಳಗ ಹೇಗಿದೆ?

World Environment Day Celebration at Kittur Rani Chennamma Residential School
ದಾವಣಗೆರೆ3 hours ago

Davanagere News: ತರಗನಹಳ್ಳಿಯ ಚನ್ನಮ್ಮ ವಸತಿ ಶಾಲೆಯಲ್ಲಿ ಪರಿಸರ ದಿನಾಚರಣೆ

Physical Abuse
ಕರ್ನಾಟಕ3 hours ago

Physical Abuse: 34 ವರ್ಷದ ವಿಚ್ಛೇದಿತ ಮಹಿಳೆ ಜತೆ 25ರ ಯುವಕನ ಲವ್ವಿ ಡವ್ವಿ; ಗರ್ಭಿಣಿ ಮಾಡಿ ಪರಾರಿ!

World Environment Day Celebration at Kamaruru Government higher Primary School
ಶಿವಮೊಗ್ಗ3 hours ago

World Environment Day: ಚಂದ್ರಗುತ್ತಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ದಿನಾಚರಣೆ

Youth Congress National General Secretary Raksha Ramaiah latest statement
ಚಿಕ್ಕಬಳ್ಳಾಪುರ3 hours ago

Raksha Ramaiah: ಚಿಕ್ಕಬಳ್ಳಾಪುರದಲ್ಲಿ ನಾನಾ ಕಾರಣಗಳಿಂದ ಮತಗಳನ್ನು ಗೆಲುವಾಗಿ ಪರಿವರ್ತಿಸಲು ಸಾಧ್ಯವಾಗಿಲ್ಲ: ರಕ್ಷಾ ರಾಮಯ್ಯ

Narendra Modi
ದೇಶ3 hours ago

ಚುನಾವಣೆಯಲ್ಲಿ ಬಿಜೆಪಿ ಗೆದ್ದಿದ್ದಕ್ಕೆ ತನ್ನ ಬೆರಳನ್ನೇ ಕತ್ತರಿಸಿ ದೇವಿಗೆ ಅರ್ಪಿಸಿದ ಮೋದಿ ‘ಭಕ್ತ’!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ1 day ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ1 day ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ5 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ5 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ5 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ7 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌