Weekly Horoscope : ಈ ವಾರ ನಿಮ್ಮ ಭವಿಷ್ಯ ಹೇಗಿರಲಿದೆ? ಯಾವೆಲ್ಲಾ ರಾಶಿಗಳಿಗೆ ಶುಭ-ಅಶುಭ ಫಲಗಳಿವೆ? - Vistara News

ಪ್ರಮುಖ ಸುದ್ದಿ

Weekly Horoscope : ಈ ವಾರ ನಿಮ್ಮ ಭವಿಷ್ಯ ಹೇಗಿರಲಿದೆ? ಯಾವೆಲ್ಲಾ ರಾಶಿಗಳಿಗೆ ಶುಭ-ಅಶುಭ ಫಲಗಳಿವೆ?

ಈ ವಾರ ಅಂದರೆ ಫೆಬ್ರವರಿ 05 ರಿಂದ 11ರವರೆಗೆ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ (Weekly Horoscope), ಯಾವ ರಾಶಿಯವರ ಅದೃಷ್ಟ ಸಂಖ್ಯೆ ಎಷ್ಟು, ಶುಭ ದಿಕ್ಕು ಯಾವುದು ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

horoscope today
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಮೇಷ: ಆತುರ ಬೇಡ, ಆತಂಕವೂ ಬೇಡ

Weekly Horoscope

ಭಾವನಾತ್ಮಕವಾದ ವಿಷಯದಲ್ಲಿ ಕೆಲವು ಸಲ ಕಠಿಣವಾಗಿ ವರ್ತಿಸುವ ವಿಚಾರವನ್ನು ಸೂಕ್ತವಾಗಿ ತೀರ್ಮಾನಿಸಿಯೇ ಅಂತಿಮ ನಿರ್ಧಾರಕ್ಕೆ ಬನ್ನಿ. ನಿಮ್ಮ ಆತುರದಿಂದ ಕೆಲವು ಮಹತ್ವದ ವ್ಯಕ್ತಿಗಳಿಂದ ಅನಾವಶ್ಯಕವಾಗಿ ದೂರವಾಗುವ, ಸ್ನೇಹ ಕಳೆದುಕೊಳ್ಳುವ ದುರಾದೃಷ್ಟ ಎದುರಾಗಬಹುದು. ಬೌದ್ಧಿಕವಾಗಿ ಇಡುವ ನಿಮ್ಮ ಆನೇಕ ಹೆಜ್ಜೆಗಳು ಹಲವಾರು ರೀತಿಯ ಲಾಭದ ವಿಚಾರಗಳಲ್ಲಿ ನಿಮಗೆ ಅನುಕೂಲ ಮಾಡಿಕೊಡಬಲ್ಲವು. ಉತ್ತರ ದಿಕ್ಕಿಗೆ ಪ್ರತಿ ದಿನ ಬೆಳಗ್ಗೆ ಒಂದು ಚಿಟಿಕೆ ಸಕ್ಕರೆ ಚೆಲ್ಲಿ, ಸಂಪತ್ತಿನ ಪ್ರಾಪ್ತಿಗೆ ಇದರಿಂದ ದಾರಿ ಲಭ್ಯ.
ಶುಭ ಸಂಖ್ಯೆ: 4 ಶುಭ ದಿಕ್ಕು: ವಾಯವ್ಯ

ವೃಷಭ: ಗಣೇಶನ ಆರಾಧನೆಯಿಂದ ಬದುಕು ಬದಲು

Weekly Horoscope

ಅಡಿಗಡಿಗೆ ಅಸಹಾಯಕ ಸ್ಥಿತಿ ಎದುರಿಸುವ ವರ್ತಮಾನ ನಿಶ್ಚಿತವಾದರೂ ಹಿರಿಯ ವ್ಯಕ್ತಿಗಳಿಂದ ನಿಮ್ಮ ಬದುಕಿನ ದಾರಿ ಬದಲಾಗಲೂ ಸದ್ಯದ ವರ್ತಮಾನ ತನ್ನ ಅಮೃತತ್ವವನ್ನು ನಿಮಗೆ ಧಾರೆ ಎರೆಯಬಹುದು. ಅಸಹಾಯಕ ಸ್ಥಿತಿಯನ್ನೋ, ಸವಾಲನ್ನೂ ಧೈರ್ಯದಿಂದ ಎದುರಿಸಿ ಗೆಲ್ಲಿ. ಕೆಂಪು ಪುಷ್ಪಗಳಿಂದ ನೀವು ಗಣಪತಿಯನ್ನು ಆರಾಧಿಸಿದರೆ ಹಣಕಾಸಿನ ಸ್ಥಿತಿಯಲ್ಲಿ ಮಹತ್ತರ ಬದಲಾವಣೆಗೆ ನಿಶ್ಚಿತವಾದ ದಾರಿ ಗೋಚರಿಸಲು ಅನೇಕ ಸಾಧ್ಯತೆಗಳಿವೆ. ಉತ್ತರ ದಿಕ್ಕಿಗೆ ಮುಖಮಾಡಿ ಕುಳಿತು ಶಿವ ಸ್ತುತಿ ಮಾಡಿ. ಮಾನಸಿಕ ಸಮಾಧಾನ ಲಭ್ಯ.
ಶುಭ ಸಂಖ್ಯೆ : 2 ಶುಭ ದಿಕ್ಕು: ದಕ್ಷಿಣ

ಮಿಥುನ: ಪ್ರಿಯವಾದ ಸತ್ಯವನ್ನಷ್ಟೇ ಮಾತನಾಡಿ!

Weekly Horoscope

ಕೆಲವು ಮಟ್ಟಿಗಿನ ಆರೋಗ್ಯ ಸಮಸ್ಯೆಗಳನ್ನು ಎದುರಿಸುವುದು ಅನಿವಾರ್ಯವಾದೀತು. ಆರ್ಥಿಕತೆಯ ವಿಚಾರದಲ್ಲಿ ಸಂವರ್ಧನೆಗಾಗಿನ ದಾರಿ ನಮಗೆ ಗೋಚರಕ್ಕೆ ಬರುವುದು ದೈವ ಕೃಪೆಯ ಭಾಗವೇ ಆಗಿದೆ. ಕೆಲವು ಸಲ ದೃಢವಾದ ಮಾತುಗಳನ್ನು ಆಡಲು ಕಷ್ಟವಾಗಬಹುದು. ಆದರೆ ಪ್ರಿಯವಾದ ಸತ್ಯವನ್ನೇ ಬಹಿರಂಗಪಡಿಸಿ. ಅಪ್ರಿಯವಾದ ಸತ್ಯ ಹೇಳುವ ಸಂದರ್ಭ ಬಂದರೂ ಮೃದುವಾಗಿಯೇ ಹೇಳಿ. ನಿಮ್ಮ ಮಾತುಗಳಿಂದ ಎದುರಾಳಿಯ ಮನಃ ಪರಿವರ್ತನೆಗೆ ದಾರಿ ಇದೆ. ದುರ್ಗಾಷ್ಟಕ ಪಠಿಸಿ ಕ್ಷೇಮ ವಾಗಿರುತ್ತೀರಿ.
ಶುಭ ಸಂಖ್ಯೆ : 9 ಶುಭ ದಿಕ್ಕು: ನೈಋತ್ಯ

ಕಟಕ: ನಿಮ್ಮ ವಿದ್ವತ್ತೇ ನಿಮಗೆ ವಜ್ರಾಯುಧ

Weekly Horoscope

ಲಾಭವನ್ನೇ ಕೊಡುವ ಜವಾಬ್ದಾರಿ ಹೊತ್ತ ಕುಜನಿಂದಾಗಿ ಅನೇಕ ಯೋಗಗಳಿವೆಯಾದರೂ ಆವರಿಸುವ ಅಷ್ಟಮ ಶನಿ ಕಾಟ, ಹತ್ತಿರ ಹತ್ತಿರ ಬರುವ ಒಳಿತುಗಳನ್ನು ಇನ್ನಿಲ್ಲದ ರೀತಿಯಲ್ಲಿ ವಿಳಂಬಿಸಲು ಮುಂದಾಗಿ ಗೋಳಾಟ ತರಬಹುದಾಗಿದೆ. ಶನೈಶ್ವರ ಸ್ವಾಮಿಯನ್ನು ಎದುರಿಸಿ ನಿಲ್ಲಲು ಸಾಧ್ಯವಿಲ್ಲವಾದರೂ, ನ್ಯಾಯದ ದಾರಿಯಲ್ಲಿ ಆತ್ಮಸ್ಥೈರ್ಯ ಇದ್ದರೆ ವರ್ತಮಾನದಲ್ಲಿ ಹಲವು ರೀತಿಯ ನಿರಾಸೆಗಳಿಂದ ಹೊರ ಬರಲು ಸಾಧ್ಯತೆ ಅಧಿಕ. ನಿಮ್ಮ ವಿದ್ವತ್ತಿನ ಬಲವೇ ನಿಮ್ಮ ವಜ್ರಾಯುಧ. ಮಾರುತಿಯನ್ನು ಆರಾಧಿಸಿ.
ಶುಭ ಸಂಖ್ಯೆ : 5 ಶುಭ ದಿಕ್ಕು: ಆಗ್ನೇಯ

ಸಿಂಹ: ಹೊಸ ಬಂಡವಾಳ ಹೂಡಿಕೆ ಬೇಡ

Weekly Horoscope

ಹೂಂಕರಿಸುವ ತುರ್ತು ಎದುರಾದರೂ ಸಿಂಹವಾಗಿ ಜಿಗಿದು ಗೆಲ್ಲಲು ಅದೃಷ್ಟ ಕೈ ಕೊಡುತ್ತಿರುವ ಕಾಲವಾಗಿದೆ. ಹೇಗೋ ಸುಧಾರಿಸಿಕೊಂಡು ಹೋಗುವ ಬುದ್ಧಿಮತ್ತೆ ಪ್ರದರ್ಶಿಸುವ ಅವಸರದಲ್ಲಿ ಕಾಯಕಲ್ಪ ಮಾಡಲು ಸಾಧ್ಯವಿರದ ಕೈಗಾರಿಕೆ, ವ್ಯಾಪಾರ, ವ್ಯವಹಾರಕ್ಕೆ ಹೊಸ ಬಂಡವಾಳವನ್ನು ಸುರಿಯುವ ಕೆಲಸ ಮಾಡದಿರಿ. ದೂರ್ವಾಂಕುರಗಳನ್ನು, ಕೆಂಪು ಹೂಗಳನ್ನು ಏರಿಸಿ ಗಣೇಶನನ್ನು ಆರಾಧಿಸಿ. ಸರ್ವಸ್ವವನ್ನೂ ಗೆಲ್ಲಿಸಿ ಜಿಗಿಸುವ ನಿಟ್ಟಿನತ್ತ ಗಣೇಶನ ಅನುಗ್ರಹ ನಿಮ್ಮ ಪಾಲಿಗೆ ಸಂಜೀವಿನಿ.
ಶುಭ ಸಂಖ್ಯೆ : 5 ಶುಭ ದಿಕ್ಕು: ಪೂರ್ವ

ಕನ್ಯಾ: ಕೃಷ್ಣನಿಂದ ಕೆಲಸದ ಸ್ಥಳದಲ್ಲಿ ಕಿರಿಕಿರಿ ದೂರ

Weekly Horoscope

ಮಾತು ನಿಯಂತ್ರಣದಲ್ಲಿರುವುದು ಆವಶ್ಯಕ. ಬಾಳ ಸಂಗಾತಿಯಿಂದ ಒಳಿತಿದೆ. ಅಗಾಧವಾದ ರೀತಿಯಲ್ಲಿಯೇ ಒಳಿತಿನ ಒಟ್ಟೂ ಮೊತ್ತ ನಿಮ್ಮ ಪಾಲಿನ ಸುರಕ್ಷೆಯೇ ಆಗಿದೆ. ಕೆಲವು ಶತ್ರುಗಳು ವಾಸ್ತವಕ್ಕೂ ಅಪಾಯಕಾರಿಯೇ ಆಗಿರುತ್ತಾರೆ. ಆದರೆ ಸೋತು ನಡೆಯಿರಿ. ಪರಿಣಾಮದಲ್ಲಿ ಲಾಭವೇ ಪ್ರಾಪ್ತಿಯಾಗಲು ಶತ್ರುಗಳಿಂದಲೂ ಲಾಭ ಒದಗಿ, ಅದೃಷ್ಟದ ವಿಷಯವಾಗಿರುತ್ತದೆ. ರಾಹುವು ವಿಷಮ ಸ್ಥಾನ ಸಂಭೂತನಾಗಿ ಇರುವುದರಿಂದ ತುಳಸೀದಳಗಳಿಂದ ಶ್ರೀ ಕೃಷ್ಣನನ್ನು ಆರಾಧಿಸಿ. ಕೆಲಸದ ಸ್ಥಳದಲ್ಲಿನ ಕಿರಿಕಿರಿ ಇದರಿಂದ ದೂರ.
ಶುಭ ಸಂಖ್ಯೆ : 2 ಶುಭ ದಿಕ್ಕು: ವಾಯವ್ಯ

ತುಲಾ: ಒತ್ತಡಗಳಿರುವ ವಾರ

Weekly Horoscope

ತಕ್ಕಡಿಯ ಪರಡಿಗಳು ತೂಗಾಡುತ್ತಲಿವೆ. ಬಿರುಸಿನ ಮಾತು ಬೇಡವೇ ಬೇಡ. ಲಾಭವೇ ಮಾತಿನಿಂದ ಇನ್ನಷ್ಟು ಕಡಿತಗಳು ಹಣಕಾಸಿನ ವಿಷಯದಲ್ಲಿ ಸಾಧ್ಯವಾದೀತು ಎಚ್ಚರ. ಪರಿಣಾಮಕಾರಿಯಾದ ಬುಧನು ಒಣಗಿದ ಶುಷ್ಕ ಭೂಮಿಯಲ್ಲೂ ಕೆಲವು ನಳನಳಿಸುವ ಹಸಿರಿನ ಚಿಗುರು, ಸಸ್ಯ, ಬಳ್ಳಿಗಳನ್ನು ಚಿಗುರಿಸಿ ಮನದ ಉಲ್ಲಾಸಕ್ಕೆ ಕಾರಣನಾಗುತ್ತಾನೆ. ಕಾರ್ಯವಾಸಿ ಕತ್ತೆ ಕಾಲು ಎಂಬುದನ್ನು ತಿಳಿದಿರಿ. ನಿಮಗೆ ಇದರಿಂದಾಗಿ ಬಿರು ಬಿಸಿಲಿನ ಮಾರ್ಗದಲ್ಲೂ ತಂಗಾಳಿ ತೂರಿ ಬರಬಹುದು. ಮಾರುತಿಯನ್ನು ಆರಾಧಿಸಿ.
ಶುಭ ಸಂಖ್ಯೆ : 8 ಶುಭ ದಿಕ್ಕು: ದಕ್ಷಿಣ

ವೃಶ್ಚಿಕ: ಮಾತಿನಿಂದಲೇ ಗೆಲುವು

Weekly Horoscope

ತಂಗಾಳಿ ಬೀಸೋ ಸಮಯ ಹೌದಾದರೂ ತಂಗಾಳಿಯಲ್ಲಿನ ಹೆಚ್ಚು ಓಡಾಟ, ನಡೆದಾಟಗಳು ಕೌಟುಂಬಿಕ ಅಂಶಗಳ ನಿಟ್ಟಿನಲ್ಲಿ ಸಣ್ಣ ಬಿರುಗಾಳಿಯನ್ನು ಎಬ್ಬಿಸಲೂ ಸಾಧ್ಯ. ಮುಖ್ಯವಾಗಿ ರವಿಯೂ ಶನೈಶ್ವರನನ್ನು ಪರಸ್ಪರ ಯುದ್ಧದಲ್ಲಿ ಸಂಪೂರ್ಣವಾಗಿ ಮುಳುಗಿರುವ ಕಾರಣ ಕೆಲವು ಧೈರ್ಯ ಕಳಕೊಳ್ಳುವ ಸಂದರ್ಭವನ್ನು ನೀವು ಎದುರಿಸುವ ಸಾಧ್ಯತೆ ಇರುತ್ತದೆ. ಆದರೂ ಮೇಧಾವಿಗಳಾದ ನೀವು ನಿಮ್ಮ ಪ್ರತಿಭಾ ಪೂರ್ಣವಾದ ಮಾತಿನಿಂದಲೇ ಉಂಟಾಗುವ ಅಸಮತೋಲನ ನೀಗಿಸಿಕೊಳ್ಳಬಲ್ಲಿರಿ. ನರಸಿಂಹನ ಸ್ತುತಿ ಉತ್ತಮ.
ಶುಭ ಸಂಖ್ಯೆ : 1 ಶುಭ ದಿಕ್ಕು: ಪಶ್ಚಿಮ

ಧನಸ್ಸು: ಪಾರ್ವತಿಯೇ ನಿಮಗೆ ರಕ್ಷಾ ಕವಚ!

Weekly Horoscope

ಹಲವು ರೀತಿಯ ಲಾಭಗಳು ನಿಮ್ಮ ದೈನಂದಿನ ವಸ್ತು ಸ್ಥಿತಿಯಾಗಲು ಕಾಲ ಈಗ ಪಕ್ವವಾಗಿದೆ. ಹೊಟೇಲ್‌ ಬ್ಯುಸಿನೆಸ್‌, ಸಾಫ್ಟ್‌ವೇರ್‌ ಎಂಜಿನಿಯರಿಂಗ್‌, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ, ಮನಸ್ಸು ಮಾಡುವ ಸಿನಿಮಾ ರಂಗ, ಕಿರು ತೆರೆಯಲ್ಲಿ ಮಿಂಚುವ ಅಭಿಲಾಷೆ ಹೊತ್ತವರಿಗೆ ಇದು ಪರ್ವಕಾಲ. ಆದರೆ ಕೆಲಸದ ಸ್ಥಳದಲ್ಲಿ ಹುಳಿ ಹಿಂಡುವ ಜನ ಇರಲಾರರು ಎಂದೇನಲ್ಲ. ಆದರೆ ಸಕಲ ಅಭ್ಯುದಯಗಳಿಗಾಗಿನ ಕಲಶಗಳನ್ನು ಕೈಯಲ್ಲಿ ಹಿಡಿದ ಸರ್ವ ಮಂಗಳೆ ಪಾರ್ವತಿ ನಿಮಗೆ ರಕ್ಷಾ ಕವಚವಾಗಿದ್ದಾಳೆ. ಅವಳನ್ನು ಆರಾಧಿಸಿ, ಗೆಲುವಿದೆ.
ಶುಭ ಸಂಖ್ಯೆ : 8 ಶುಭ ದಿಕ್ಕು: ಉತ್ತರ

ಜ್ಯೋತಿಷ್ಯಕ್ಕೆ ಸಂಬಂಧಿಸಿದ ವಿಷಯಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ.

ಮಕರ: ಬಾಯಿ ಮಾತಿಗೆ ಮರುಳಾಗದಿರಿ

Weekly Horoscope

ಬಹು ನಿರೀಕ್ಷೆಯ ಸಂಗತಿಗಳು ತಿಳಿದ ವೇಗದಲ್ಲಿ ಸಫಲತೆ ಹೊಂದಲು ಕಷ್ಟ ಆಗಬಹುದು. ಹೆಡೆ ತೆರೆದೇ ಇರುವ ರಾಹು ಸುಖ ಸ್ಥಾನವನ್ನು ದುರ್ಬಲಗೊಳಿಸುತ್ತಲೇ ಇದ್ದ ವಿಚಾರ ನಿಮಗೆ ಈಗ ಒದಗಿದ ವಸ್ತು ಸ್ಥಿತಿಯಲ್ಲ. ಹೀಗಾಗಿ ಹಗಲು ಕನಸು ಕಾಣದಿರಿ. ನೀರು ಸಿಗಲೇ ಬೇಕೆಂಬ ಸ್ಥಳದಲ್ಲಿ ನೀರು ಸಿಗದೇ ಹೋದಾಗ ನಿರಾಸೆಯ ಕ್ರೌರ್ಯ ಸಹಿಸಲಸದಳ. ಇದನ್ನು ಅರಿತೇ ಚಾತುರ್ಯದ ಹೆಜ್ಜೆ ಇರಿಸಿ. ನಿಮ್ಮನ್ನು ಯಾಮಾರಿಸಲುವ ಜನ ಜಾಸ್ತಿ. ಯೋಚಿಸದೇ ಬಾಯಿ ಮಾತಿಗೆ ಮರುಳಾಗದಿರಿ. ರಾಮ ರಕ್ಷ ಸ್ತೋತ್ರ ಪಠಿಸಿ.
ಶುಭ ಸಂಖ್ಯೆ : 4 ಶುಭ ದಿಕ್ಕು: ಈಶಾನ್ಯ

ಕುಂಭ: ಆರ್ಥಿಕ ವಿಚಾರದಲ್ಲಿ ಶಿಸ್ತು ಇರಲಿ

Weekly Horoscope

ಸುಲಭವಾಗಿ ಗೆಲ್ಲುವ ಕೆಲಸಗಳು ಹಾಗೆ ಸುಲಭವಲ್ಲ ಎಂಬ ಸತ್ಯದ ಅರಿವು ವೇದ್ಯವಾಗುತ್ತವೆ. ಆರ್ಥಿಕ ವಿಚಾರದಲ್ಲಿ ಶಿಸ್ತು, ನ್ಯಾಯ ಇರಲಿ. ಸಂಪಾದಿಸಬಲ್ಲಿರಿ. ಕೆಲವು ಉಳಿತಾಯಗಳಿಗೂ ದಾರಿ ಸಾಧ್ಯ. ಕೆಲಸದ ಸ್ಥಳದಲ್ಲಿನ ನೆಲ ಅದುರುವ ಅನುಭವ ವೇದ್ಯವಾಗುತ್ತದೆ. ಆದರೆ ಶಾಂತವಾಗಿರಿ. ಯಾವುದೂ ಅನಿವಾರ್ಯವಲ್ಲ. ಯಾರೂ ಅನಿವಾರ್ಯವಲ್ಲ. ಜಗದ ಸಮಸ್ತ ಆಧಾರನಾದ ಮಹಾವಿಷ್ಣುವನ್ನು ಆರಾಧಿಸಿ, ಅರಿಷ್ಟಗಳು ಸುಟ್ಟು ಕರಗಲು ಶಿವನನ್ನು ಸ್ತುತಿಸಿ. ಜಗನ್ಮಾತೆ ಮಹಾಲಕ್ಷ್ಮೀಯನ್ನು ಸ್ತುತಿಸಿ, ಲಾಭ ಇದೆ.
ಶುಭ ಸಂಖ್ಯೆ : 6 ಶುಭ ದಿಕ್ಕು: ಪಶ್ಚಿಮ

ಮೀನ: ಒತ್ತಡ, ಗೊಂದಲಗಳಿರುವ ವಾರ

Weekly Horoscope

ಎನಗೆ ಎದುರಿಲ್ಲ ಎಂದು ಸರಳವಾಗಿ, ನಿಶ್ಚಿತವಾದ ಗುರಿಯನ್ನು ತೊಡಕುಗಳಿರದೆ ತಲುಪಿಸಲು ಸಹಾಯ ಮಾಡುತ್ತಿದ್ದ ದಿನಗಳು ಎಲ್ಲಿಗೆ ಹೋದವು ಎಂಬುದರ ಬಗ್ಗೆ ಸಮಸ್ಯೆ ಎದ್ದಿರುವ ಕಾಲ ಇದು. ಎದ್ದೇಳದಿದ್ದರೆ, ಸರ್ರನೆ ಎದ್ದೇಳಲು ಇದೀಗ ಸಮಯವಾಗಿದೆ. ಎಚ್ಚರ ಇರಲಿ, “ಚಲ್ತಾ ಹೈ ಧೋರಣೆʼʼಗಳಿಂದ ಬಾಧೆಗಳೇ ಜಾಸ್ತಿ. ಗುರಿ ತಲುಪಲು ಆಲಸ್ಯವಿರದೆ ಕೆಲಸ ಮಾಡಿ. ಶ್ರಮದ ಪರಿಣಾಮವಾದ ಪೂರ್ತಿ ಲಾಭ ಅಶಕ್ಯವೇ ಆದರೂ ಹಲವರ ಸಂತಾಪ, ಕ್ಲಪ್ತ ಸಂರ್ಭದ ಬೆಂಬಲ ಲಭ್ಯವಿದೆ. ಹನುಮಾನ್‌ ಚಾಲೀಸ್‌ ಓದಿ.
ಶುಭ ಸಂಖ್ಯೆ : 9 ಶುಭ ದಿಕ್ಕು: ಉತ್ತರ

ಎಂ.ಎಂ.ಕೆ. ಶರ್ಮ, ಬೆಂಗಳೂರು
ಮೊಬೈಲ್‌ ನಂ.: 9632980996

ಇದನ್ನೂ ಓದಿ : Astrology: ನಿಮ್ಮ ರಾಶಿಗೆ ಸಾಡೇಸಾತಿ ಮತ್ತು ಶನಿ ದೆಸೆ ಯಾವಾಗ ಇದೆ ಗೊತ್ತೆ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಎಕ್ಸಿಟ್‌ ಪೋಲ್‌: ಅಸ್ಸಾಂ, ಪುದುಚೇರಿ ಪ.ಬಂಗಾಳದಲ್ಲಿ ಬಿಜೆಪಿ, ತ.ನಾಡಲ್ಲಿ ಡಿಎಂಕೆ, ಕೇರಳಂನಲ್ಲಿ ಯುಡಿಎಫ್‌

VISTARANEWS.COM


on

ಎಕ್ಸಿಟ್‌ ಪೋಲ್‌: ಅಸ್ಸಾಂ, ಪುದುಚೇರಿ ಪ.ಬಂಗಾಳದಲ್ಲಿ ಬಿಜೆಪಿ, ತ.ನಾಡಲ್ಲಿ ಡಿಎಂಕೆ, ಕೇರಳಂನಲ್ಲಿ ಯುಡಿಎಫ್‌
ಐದು ರಾಜ್ಯಗಳ ಎಕ್ಸಿಟ್‌ ಪೋಲ್‌ ಫಲಿತಾಂಶ ಹೊರಬಿದ್ದಿದೆ. ಅಸ್ಸಾಂನಲ್ಲಿ ಬಿಜೆಪಿ, ಕೇರಳದಲ್ಲಿ ಯುಡಿಎಫ್‌, ಪುದುಚೇರಿಯಲ್ಲಿ ಎನ್‌ಡಿಎ ಜಯಭೇರಿ ಬಾರಿಸಲಿದೆ ಎಂದು ಎಲ್ಲಾ ಎಕ್ಸಿಟ್‌ ಪೋಲ್‌ಗಳು ಹೇಳಿವೆ. ಆದರೆ, ಪ.ಬಂಗಾಳ ಮತ್ತು ತಮಿಳುನಾಡು ಮತದಾನೋತ್ತರ ಸಮೀಕ್ಷೆಗಳು ಮಾತ್ರ ಭಿನ್ನ ಫಲಿತಾಂಶ ನೀಡಿವೆ.
ಅಸ್ಸಾಂನಲ್ಲಿ ಕಮಲ ಕಿಲಕಿಲ:
126 ಸದಸ್ಯ ಬಲದ ಅಸ್ಸಾಂ ವಿಧಾನಸಭೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸುವ ಸಾಧ್ಯತೆಯನ್ನು ಎಲ್ಲಾ ಎಕ್ಸಿಟ್‌ ಪೋಲ್‌ಗಳು ಹೇಳಿವೆ. ಹಿಮಂತ ಬಿಸ್ವ ಶರ್ಮಾ ಎರಡನೇ ಅವಧಿಗೆ ಸಿಎಂ ಆಗುವ ಸಾಧ್ಯತೆ ಹೆಚ್ಚಿವೆ. ಆಕ್ಸಿಸ್‌ ಮೈ ಇಂಡಿಯಾ, ಪಿ-ಮಾರ್ಕ್‌, ಮಾಟ್ರಿಜ್‌, ಜೆವಿಸಿ ಮತ್ತು ಚಾಣಕ್ಯ ಸ್ಟ್ರಾಟಜಿಸ್‌ ಬಿಜೆಪಿ ಭಾರೀ ಬಹುಮತ ದಾಖಲಿಸಲಿದೆ ಎಂದು ಭವಿಷ್ಯ ನುಡಿದಿವೆ. ಕಾಂಗ್ರೆಸ್‌ ಪ್ರತಿಪಕ್ಷಕ್ಕೆ ಸೀಮಿತಗೊಳ್ಳಲಿದೆ.
ಕೇರಳಂನಲ್ಲಿ ಯುಡಿಎಫ್‌ಗೆ ಅಧಿಕಾರ?:
ಕೇರಳಂ ವಿಧಾನಸಭೆಯ ಬಲ 140. ಬಹುಮತಕ್ಕೆ 71 ಸೀಟುಗಳು ಬೇಕು. ಕೇರಳಂನಲ್ಲಿ ಹ್ಯಾಟ್ರಿಕ್‌ ದಾಖಲಿಸುವ ಎಲ್‌ಡಿಎಫ್‌ ಕನಸು ನುಚ್ಚುನೂರಾಗುವ ಸಾಧ್ಯತೆಗಳಿವೆ. ಈ ಸಲ ಕಾಂಗ್ರೆಸ್‌ ನೇತೃತ್ವದ ಯುನೈಟೆಡ್‌ ಡೆಮಾಕ್ರಾಟಿಕ್‌ ಫ್ರಂಟ್‌ – ಯುಡಿಎಫ್‌, ಜಯಭೇರಿ ಬಾರಿಸಲಿದೆ ಎಂದು ಆಕ್ಸಿಸ್‌ ಮೈ ಇಂಡಿಯಾ, ಪಿ-ಮಾರ್ಕ್‌, ಮಾಟ್ರಿಜ್‌, ಮನೋರಮಾ ನ್ಯೂಸ್‌ ಸಿವೋಟರ್ಸ್‌ ಮತ್ತು ಜೆವಿಸಿ ಸಮೀಕ್ಷೆಗಳು ಹೇಳಿವೆ. ಬಿಜೆಪಿ ಕೇರಳಂನಲ್ಲಿ ಮೂರರಿಂದ ಏಳು ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಗಳಿವೆ.
ಪುದುಚೇರಿಯಲ್ಲಿ ಎನ್‌ಡಿಎ?:
ಪುದುಚೇರಿ ವಿಚಾರದಲ್ಲಿ ಎಕ್ಸಿಟ್‌ ಪೋಲ್‌ ಏಜೆನ್ಸಿಗಳಿಗೆ ಯಾವುದೇ ಅನುಮಾನ ಇಲ್ಲ. 30 ಸದಸ್ಯಬಲದ ಪುದುಚೇರಿ ಅಸೆಂಬ್ಲಿಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ದಿಗ್ವಿಜಯ ಬಾರಿಸಲಿದೆ ಎಂದು ಎಲ್ಲಾ ಚುನಾವಣೋತ್ತರ ಭವಿಷ್ಯ ನುಡಿದಿವೆ.
ಪ. ಬಂಗಾಳದಲ್ಲಿ ದೀದಿಯೋ, ಮೋದಿಯೋ?
ಪಶ್ಚಿಮ ಬಂಗಾಳದ ಎಕ್ಸಿಟ್‌ ಪೋಲ್‌ನಲ್ಲಿ ಏಕಮತ ಇಲ್ಲ. 6 ಚುನಾವಣೋತ್ತರ ಸಮೀಕ್ಷೆಗಳ ಪ್ರಕಾರ, 4 ಸಮೀಕ್ಷೆಗಳು ಬಿಜೆಪಿ ಗೆಲುವಿನ ಭವಿಷ್ಯ ನುಡಿದಿವೆ. 2 ಸಮೀಕ್ಷೆಗಳು ಟಿಎಂಸಿಯೇ ಅಧಿಕಾರದಲ್ಲಿ ಮುಂದುವರಿಯಲಿದೆ ಎಂದು ಮುನ್ಸೂಚನೆ ನೀಡಿವೆ. ಪಿ-ಮಾರ್ಕ್‌, ಮಾಟ್ರಿಜ್‌, ಜೆವಿಸಿ, ಚಾಣಕ್ಯ ಈ ನಾಲ್ಕು ಸಮೀಕ್ಷೆಗಳಲ್ಲಿ ಬಿಜೆಪಿ ಸರಿಸುಮಾರು 150ಕ್ಕೂ ಅಧಿಕ ಸೀಟು ಗಳಿಸುವ ಸಾಧ್ಯತೆಗಳಿವೆ ಎಂದು ಹೇಳಿವೆ. ಪೀಪಲ್ಸ್‌ ಪಲ್ಸ್‌, ಜನಮತ ಪೋಲ್ಸ್‌ ಈ ಎರಡೂ ಸಮೀಕ್ಷೆಗಳ ಪ್ರಕಾರ ಟಿಎಂಸಿ 170ರಿಂದ 200 ಸೀಟು ಗೆದ್ದು ಅಧಿಕಾರದಲ್ಲಿ ಮುಂದುವರಿಯಲಿದೆ. ಅಂದ ಹಾಗೆ, 294 ಸದಸ್ಯ ಬಲದ ಪ.ಬಂಗಾಳ ಅಸೆಂಬ್ಲಿಯಲ್ಲಿ ಅಧಿಕಾರಕ್ಕೇರಲು 147 ಸೀಟುಗಳನ್ನು ಗೆಲ್ಲಲೇ ಬೇಕು.
ದ್ರಾವಿಡ ದಂಗಲ್‌ನಲ್ಲಿ ಅಚ್ಚರಿ ಫಲಿತಾಂಶ?:
ತಮಿಳುನಾಡಿನಲ್ಲಿ ಬಹುತೇಕ ಎಲ್ಲಾ ಎಕ್ಸಿಟ್‌ ಪೋಲ್‌ಗಳು ಡಿಎಂಕೆ ಅಧಿಕಾರದಲ್ಲಿ ಮುಂದುವರಿಯಲಿದೆ ಎಂದು ಭವಿಷ್ಯ ನುಡಿದಿವೆ. ಎಐಎಡಿಎಂಕೆ ನೇತೃತ್ವದ ಎನ್‌ಡಿಎ 50 ರಿಂದ 80 ಸ್ಥಾನಗಳನ್ನು ಗಳಿಸುವ ಸಾಧ್ಯತೆಗಳಿವೆ. ಆದರೆ, ಇಲ್ಲೊಂದು ಟ್ವಿಸ್ಟ್‌ ಇದೆ. ಆಕ್ಸಿಸ್‌ ಮೈ ಇಂಡಿಯಾ ಮಾತ್ರ ವಿಜಯ್‌ ನೇತೃತ್ವದ ಟಿವಿಕೆಗೆ ಬಹುಮತ ಸಿಗಲಿದೆ ಎಂದು ಹೇಳಿದೆ. ದಳಪತಿ ವಿಜಯ್‌ ನೇತೃತ್ವದ ಟಿವಿಕೆ ತನ್ನ ಚೊಚ್ಚಲ ಯತ್ನದಲ್ಲೇ 98ರಿಂದ 120 ಸ್ಥಾನ ಗಳಿಸುವ ಸಾಧ್ಯತೆಗಳಿವೆ ಎಂದು ಆಕ್ಸಿಸ್‌ ಮೈ ಇಂಡಿಯಾ ಹೇಳಿವೆ. 234 ಸದಸ್ಯಬಲದ ತಮಿಳುನಾಡು ಅಸೆಂಬ್ಲಿಯಲ್ಲಿ ಅಧಿಕಾರಕ್ಕೇರಲು 117 ಸೀಟುಗಳು ಬೇಕು.

Continue Reading

Latest

ತಮಿಳುನಾಡಿನಲ್ಲಿ ದಳಪತಿಯೇ ಅಧಿಪತಿ? ಎಂಜಿಆರ್‌ ಆಗ್ತಾರಾ ವಿಜಯ್‌?

VISTARANEWS.COM


on

ದ್ರಾವಿಡ ದಂಗಲ್‌ನಲ್ಲಿ ಅಚ್ಚರಿಯ ಫಲಿತಾಂಶದ ಸಾಧ್ಯತೆಯೊಂದನ್ನು ಎಕ್ಸಿಸ್‌ ಮೈ ಇಂಡಿಯಾ ಸಮೀಕ್ಷೆ ಪ್ರಕಟಿಸಿದೆ. ಆಕ್ಸಿಸ್‌ ಮೈ ಇಂಡಿಯಾ ಸಮೀಕ್ಷೆ ಪ್ರಕಾರ ಟಿವಿಕೆ ನಾಯಕ ವಿಜಯ್‌ ಮೊದಲ ಪ್ರಯತ್ನದಲ್ಲೇ ಅಭೂತಪೂರ್ವ ಯಶಸ್ಸು ಗಳಿಸಿದ್ದಾರೆ. ತಮಿಳುನಾಡಿನ ಎಲ್ಲಾ ಸಮೀಕ್ಷೆಗಳು ಡಿಎಂಕೆ ಅಧಿಕಾರಕ್ಕೇರಲಿದೆ ಎಂದು ಹೇಳುತ್ತಿರುವಾಗಲೇ, ಆಕ್ಸಿಸ್‌ ಮೈ ಇಂಡಿಯಾ ಮಾತ್ರ ಈ ಸಲ ವಿಜಯ್‌ ನಿಜವಾದ ಜನನಾಯಗನ್‌ ಎಂದಿದೆ.
ತಮಿಳುನಾಡಿನ ಸಾರಥ್ಯ ವಿಜಯ್‌ಗೆ?
ಆಕ್ಸಿಸ್‌ ಮೈ ಇಂಡಿಯಾ ಸಮೀಕ್ಷೆ ಪ್ರಕಾರ ಟಿವಿಕೆಗೆ 98 ರಿಂದ 120 ಸೀಟುಗಳು ಸಿಗಲಿವೆ. ಡಿಎಂಕೆ-ಕಾಂಗ್ರೆಸ್‌ ಮೈತ್ರಿಕೂಟಕ್ಕೆ 92ರಿಂದ 110 ಹಾಗೂ 22ರಿಂದ 32 ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲ್ಲುವ ಸಾಧ್ಯತೆಗಳಿವೆ. 234 ಸದಸ್ಯಬಲದ ತಮಿಳುನಾಡು ಅಸೆಂಬ್ಲಿಯಲ್ಲಿ 117 ಸೀಟು ಗೆಲ್ಲುವ ಪಕ್ಷದ ನಾಯಕ ಮುಖ್ಯಮಂತ್ರಿ ಆಗ್ತಾರೆ. ಸಮೀಕ್ಷೆ ಪ್ರಕಾರ ಟಿವಿಕೆ ಗರಿಷ್ಠ 120 ಸೀಟು ಗೆಲ್ಲುವ ಸಾಧ್ಯತೆಗಳಿವೆ.̇̇̇
ವೋಟ್‌ ಶೇರ್‌ನಲ್ಲೂ ಟಿವಿಕೆ ದಿಗ್ವಿಜಯ?
ಆಕ್ಸಿಸ್‌ ಮೈ ಇಂಡಿಯಾ ವೋಟ್‌ ಶೇರ್‌ ಸಮೀಕ್ಷೆಯನ್ನೂ ಪ್ರಕಟಿಸಿದೆ. ಅದರ ಪ್ರಕಾರ ಟಿವಿಕೆಗೆ ಶೇಕಡಾ 35ರಷ್ಟು ಮತ ಸಿಗಲಿದೆ. ಸ್ಟಾಲಿನ್‌ ನೇತೃತ್ವದ ಡಿಎಂಕೆ-ಕಾಂಗ್ರೆಸ್‌ ಮೈತ್ರಿಕೂಟಕ್ಕೂ ಶೇ. 35ರಷ್ಟು ವೋಟ್‌ ಶೇರ್‌ ಸಿಗಲಿದೆ. ಎನ್‌ಡಿಎಗೆ 23 ಶೇಕಡಾ ಮತ ಸಿಗುವ ಸಾಧ್ಯತೆಗಳಿವೆ.
ಸಿಎಂ ಸ್ಥಾನಕ್ಕೆ ವಿಜಯ್‌ ಬೆಸ್ಟ್‌?
ಮುಖ್ಯಮಂತ್ರಿ ಸ್ಥಾನಕ್ಕೆ ಯಾರು ಉತ್ತಮ ಅಭ್ಯರ್ಥಿ ಎಂಬ ಪ್ರಶ್ನೆಯನ್ನೂ ಆಕ್ಸಿಸ್‌ ಮೈ ಇಂಡಿಯಾ ಜನರ ಮುಂದಿಟ್ಟಿದೆ. ಅದರ ಪ್ರಕಾರ ಶೇ. 37ರಷ್ಟು ಮತದಾರರು ವಿಜಯ್‌ ಪರ ಒಲವು ತೋರಿದ್ದಾರೆ. ಶೇ. 35ರಷ್ಟು ಮಂದಿ ಮಾತ್ರ ಸ್ಟಾಲಿನ್‌ ಬೆಸ್ಟ್‌ ಅಂದಿದ್ದಾರೆ.
ವಿಜಯ್‌ಗೆ ಯುವ ಸಮೂಹದ ಬೆಂಬಲ
ಸರ್ವೇ ಪ್ರಕಾರ ಶೇ. 68ರಷ್ಟು ಹೊಸ ವೋಟರ್ಸ್‌ ವಿಜಯ್‌ಗೆ ಬೆಂಬಲ ನೀಡಿದ್ದಾರೆ. 20ರಿಂದ 29 ವಯೋಮಾನದ ಶೇ. 59ರಷ್ಟು ಯುವಕರು ಟಿವಿಕೆಗೆ ಜೈ ಎಂದಿದ್ದಾರೆ. 30-39 ವಯೋಮಾನದ ಶೇ. 45 ಮಂದಿ ದಳಪತಿಯನ್ನು ದಡಮುಟ್ಟಿಸಿದ್ದಾರೆ ಎನ್ನುತ್ತಿದೆ ಸಮೀಕ್ಷೆ.

Continue Reading

Latest

ರಾಜ್ಯದಲ್ಲಿ ನಾಯಕತ್ವ ಗೊಂದಲ: “ಸದ್ಯಕ್ಕೆ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ” – ಖರ್ಗೆ ಸ್ಪಷ್ಟನೆ

VISTARANEWS.COM


on

ಸದ್ಯಕ್ಕೆ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳುವ ಮೂಲಕ ನಾಯಕತ್ವ ಗೊಂದಲಕ್ಕೆ ತೆರೆ ಎಳೆದಿದ್ದಾರೆ. ಕಲಬುರಗಿಯಲ್ಲಿ ಇಂದು ಮಾತನಾಡಿದ ಅವರು ಈಗಾಗಲೇ ರಾಜ್ಯದಲ್ಲಿ ಸಿಎಂ ಇದ್ದಾರೆ. ಹೀಗಾಗಿ ಸದ್ಯಕ್ಕೆ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ. ಭವಿಷ್ಯದಲ್ಲಿ ಅಂಥ ಪರಿಸ್ಥಿತಿ ಬಂದರೆ ನಾವು ಎಲ್ಲರೂ ಕೂಡಿ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ. ಸಿಎಂ ಸ್ಥಾನಕ್ಕೆ ಸಂಬಂಧಿಸಿದಂತೆ ವಿವಿಧ ಅಭಿಪ್ರಾಯಗಳು ವ್ಯಕ್ತವಾಗುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಯಾರು ಏನು ಹೇಳುತ್ತಾರೆ ಎನ್ನುವುದಕ್ಕಿಂತ ಪಕ್ಷದ ಐಡಿಯಾಲಜಿ ಮತ್ತು ಹಲವು ವರ್ಷಗಳ ಪರಿಶ್ರಮ ಮುಖ್ಯ ಎಂದು ಹೇಳಿಕೆ ನೀಡಿದ್ದಾರೆ. ಪಕ್ಷದ ಮಹತ್ವದ ನಿರ್ಧಾರಗಳನ್ನು ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರೊಂದಿಗೆ ಚರ್ಚೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದರು.

Continue Reading

Latest

ಬೌರಿಂಗ್‌ ಆಸ್ಪತ್ರೆ ಕಾಂಪೌಂಡ್‌ ಕುಸಿದು 7 ಮಂದಿ ಬಲಿ

VISTARANEWS.COM


on

ಬೆಂಗಳೂರು: ಇಂದು ಸಂಜೆ ನಗರದಲ್ಲಿ ಸುರಿದ ಭಾರಿ ಮಳೆಗೆ ಶಿವಾಜಿನಗರ ಬಸ್‌ ನಿಲ್ದಾಣದ ಸಮೀಪವಿರುವ ಬೌರಿಂಗ್‌ ಆಸ್ಪತ್ರೆಯ ಕಾಂಪೌಂಡ್‌ ಗೋಡೆ ಕುಸಿದು 7 ಜನ ಸಾವನ್ನಪ್ಪಿದ್ದಾರೆ. ಮೃತರು ಬೀದಿಬದಿ ವ್ಯಾಪಾರಿಗಳು ಎಂದು ತಿಳಿದುಬಂದಿದೆ. 11 ಜನ ಗಾಯಾಳುಗಳನ್ನು ಆಸ್ಪತ್ರೆ ದಾಖಲಿಸಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ. ಅವಶೇಷಗಳಡಿ ಮತ್ತಷ್ಟು ಜನ ಸಿಲುಕಿರುವ ಶಂಕೆಯಿದ್ದು, ರಕ್ಷಣಾಕಾರ್ಯ ಮುಂದುವರೆಸಲಾಗಿದೆ. ಘಟನಾ ಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Continue Reading
Advertisement
Latest19 minutes ago

ಕುರ್ಚಿ ಕದನಕ್ಕೆ ಹೊಸ ಟ್ವಿಸ್ಟ್ : ದಲಿತ ಸಿಎಂ ಕೂಗು ಜೋರು

Latest27 minutes ago

ಟಿವಿಕೆ-ಎನ್‌ಡಿಎ ಮೈತ್ರಿ?, ತಮಿಳುನಾಡಿನಲ್ಲಿ ಸಂಚಲನ, ಸ್ಟಾಲಿನ್‌ ಸಭೆ

Latest3 hours ago

ಎಕ್ಸಿಟ್‌ ಪೋಲ್‌: ಅಸ್ಸಾಂ, ಪುದುಚೇರಿ ಪ.ಬಂಗಾಳದಲ್ಲಿ ಬಿಜೆಪಿ, ತ.ನಾಡಲ್ಲಿ ಡಿಎಂಕೆ, ಕೇರಳಂನಲ್ಲಿ ಯುಡಿಎಫ್‌

Latest3 hours ago

ತಮಿಳುನಾಡಿನಲ್ಲಿ ದಳಪತಿಯೇ ಅಧಿಪತಿ? ಎಂಜಿಆರ್‌ ಆಗ್ತಾರಾ ವಿಜಯ್‌?

Latest5 hours ago

ಪಂಚರಾಜ್ಯ ಚುನಾವಣಾ ಫಲಿತಾಂಶ: “ಎಕ್ಸಿಟ್ ಪೋಲ್‌ಗಿಂತ ಉತ್ತಮ ಪ್ರದರ್ಶನ ನಿರೀಕ್ಷೆ” – ಖರ್ಗೆ

Latest5 hours ago

ರಾಜ್ಯದಲ್ಲಿ ನಾಯಕತ್ವ ಗೊಂದಲ: “ಸದ್ಯಕ್ಕೆ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ” – ಖರ್ಗೆ ಸ್ಪಷ್ಟನೆ

Latest6 hours ago

ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್: ಇಂದು ಮತ್ತು ನಾಳೆ ಆಲಿಕಲ್ಲು ಮಳೆ ಸಾಧ್ಯತೆ

Latest23 hours ago

ಬೌರಿಂಗ್‌ ಆಸ್ಪತ್ರೆ ಕಾಂಪೌಂಡ್‌ ಕುಸಿದು 7 ಮಂದಿ ಬಲಿ

Latest24 hours ago

ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಧಾರಾಕಾರ ಮಳೆ

Latest1 day ago

ಜಪಾನ್‌ಗೆ ಲಗ್ಗೆ ಇಡಲು ಸಜ್ಜಾದ ʼಧುರಂಧರ್’

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌