Border Gavaskar Trophy : ಸ್ಪಿನ್​ಗೆ ಮಾತ್ರವಲ್ಲ, ರಿವರ್ಸ್​ ಸ್ವಿಂಗ್​ ಬಗ್ಗೆಯೂ ಗಮನ ಕೊಡಿ ಎಂದ ಅಲೆಕ್ಸ್​ ಕ್ಯೇರಿ - Vistara News

ಕ್ರಿಕೆಟ್

Border Gavaskar Trophy : ಸ್ಪಿನ್​ಗೆ ಮಾತ್ರವಲ್ಲ, ರಿವರ್ಸ್​ ಸ್ವಿಂಗ್​ ಬಗ್ಗೆಯೂ ಗಮನ ಕೊಡಿ ಎಂದ ಅಲೆಕ್ಸ್​ ಕ್ಯೇರಿ

ಸ್ಪಿನ್​ ಬಗ್ಗೆ ಹೆಚ್ಚು ಗಮನ ಹರಿಸಿ ರಿವರ್ಸ್​ ಸ್ವಿಂಗ್​ ಕುರಿತು ನಿರ್ಲಕ್ಷ್ಯ ತಾಳಿದರೆ ಅಪಾಯ ತಪ್ಪಿದ್ದಲ್ಲ ಎಂಬುದಾಗಿ (Border Gavaskar Trophy) ಆಸ್ಟ್ರೇಲಿಯಾ ಕ್ರಿಕೆಟಿಗ ಅಲೆಕ್ಸ್​ ಕ್ಯೇರಿ ಹೇಳಿಕೊಂಡಿದ್ದಾರೆ.

VISTARANEWS.COM


on

alex cary
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಬಾರ್ಡರ್​- ಗವಾಸ್ಕರ್​ ಟ್ರೋಫಿ (Border Gavaskar Trophy) ಟೆಸ್ಟ್​ ಸರಣಿ ಬಗ್ಗೆ ಜೋರು ಚರ್ಚೆ ನಡೆಯುತ್ತಿದೆ. ಪ್ರಮುಖವಾಗಿ ಬಿಸಿಸಿಐ, ಸ್ಪಿನ್​ ಪಿಚ್​ಗಳನ್ನು ತಯಾರಿಸುವ ಮೂಲಕ ಪ್ರವಾಸಿ ತಂಡವನ್ನು ಹಿನ್ನಡೆ ಉಂಟು ಮಾಡುವ ಯೋಜನೆ ರೂಪಿಸಿಕೊಂಡಿದೆ ಎಂದು ಎದುರಾಳಿ ತಂಡದ ಆಟಗಾರರು ಹೇಳುತ್ತಿದ್ದಾರೆ. ಹೀಗಾಗಿ ಎಲ್ಲಿ ನೋಡಿದರೂ ಸ್ಪಿನ್ ಪಿಚ್​ನದ್ದೇ ಮಾತು. ಆದರೆ, ಆಸ್ಟ್ರೇಲಿಯಾ ತಂಡದ ವಿಕೆಟ್​ಕೀಪರ್​ ಬ್ಯಾಟರ್​ ಅಲೆಕ್ಸ್​ ಕ್ಯೇರಿಗೆ ಬೇರೆಯದ್ದೇ ಚಿಂತೆ. ನಾವೆಲ್ಲರೂ ಸ್ಪಿನ್​ ಬಗ್ಗೆ ಚರ್ಚೆ ನಡೆಸುತ್ತಿರುವ ವೇಳೆ ಭಾರತ ತಂಡ ರಿವರ್ಸ್ ಸ್ವಿಂಗ್​ ದಾಳಿ ನಡೆಸಲು ಸಜ್ಜಾಗಿದೆ ಎಂದು ಅವರು ಎಚ್ಚರಿಕೆ ಕೊಟ್ಟಿದ್ದಾರೆ.

ಪಾಕಿಸ್ತಾನಕ್ಕೆ ಪ್ರವಾಸ ಮಾಡುವ ವೇಳೆಯೂ ಇದೇ ರೀತಿ ಸ್ಪಿನ್​ ಬೌಲಿಂಗ್​ ದಾಳಿಯ ಕುರಿತು ಚರ್ಚೆ ನಡೆಸಿದ್ದೆವು. ಆದರೆ ಅಲ್ಲಿಗೆ ಹೋದ ಬಳಿಕ ನಾವು ರಿವರ್ಸ್​ ಸ್ವಿಂಗ್​ ಎಸೆತಗಳಿಗೆ ಬ್ಯಾಟ್​ ಮಾಡುವುದಕ್ಕೆ ಸಮಸ್ಯೆ ಎದುರಿಸಿದೆವು ಎಂದು ಕ್ಯೇರಿ ಹೇಳಿದ್ದಾರೆ.

ಇದನ್ನೂ ಓದಿ : Team India | ಮಾಜಿ ಕೋಚ್ ರವಿ ಶಾಸ್ತ್ರಿಗೆ ಪ್ರತ್ಯುತ್ತರ ಕೊಟ್ಟ ಸ್ಪಿನ್ನರ್‌ ಆರ್ ಅಶ್ವಿನ್‌

2018ರಲ್ಲಿ ಭಾರತ ಎ ತಂಡದ ವಿರುದ್ಧ ನಾನು ಆಡಿದ್ದೆ. ಈ ವೇಳೆಯೂ ಸ್ಪಿನ್​ ಬೌಲಿಂಗ್​ ಕುರಿತು ಹೆಚ್ಚು ಚರ್ಚೆಗಳ ನಡೆದಿದ್ದವು. ಆದರೆ, ವಾಸ್ತವದಲ್ಲಿ ಭಾರತದ ವೇಗದ ಬೌಲರ್​ಗಳು ರಿವರ್ಸ್​ ಸ್ವಿಂಗ್​ ಬೌಲಿಂಗ್​ ಮೂಲಕ ಹೆಚ್ಚು ಹಾನಿ ಉಂಟು ಮಾಡುತ್ತಿದ್ದರು ಎಂಬುದಾಗಿ ಕ್ಯೇರಿ ಹೇಳಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

T20 World Cup 2024: ನ್ಯೂಯಾರ್ಕ್​ನಲ್ಲಿ ಕಳಪೆ ಗುಣಮಟ್ಟದ ಆಹಾರ; ಟೀಮ್​ ಇಂಡಿಯಾ ಆಟಗಾರರಿಂದ ಅಸಮಾಧಾನ

T20 World Cup 2024: ಕಳೆದ ಮೂರು ದಿನಗಳಿಂದ ಟೀಮ್​ ಇಂಡಿಯಾದ ಆಟಗಾರರು ನ್ಯೂಯಾರ್ಕ್​ನಲ್ಲಿ ಅಭ್ಯಾಸ ನಡೆಸುತ್ತಿದೆ. ಆಟಗಾರರು ಇಂದು ಬ್ಯಾಟಿಂಗ್​ ಮತ್ತು ಬೌಲಿಂಗ್​ ಅಭ್ಯಾಸ ಕೂಡ ಆರಂಭಿಸಿದ್ದಾರೆ. ಆದರೆ ಇಲ್ಲಿ ಅಭ್ಯಾಸ ನಡೆಸಲು ಉನ್ನತ ಸೌಲಭ್ಯಗಳಿಲ್ಲ ಎಂದು ನಾಯಕ ರೋಹಿತ್ ಮತ್ತು ಕೋಚ್ ರಾಹುಲ್ ದ್ರಾವಿಡ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ.

VISTARANEWS.COM


on

T20 World Cup 2024
Koo

ನ್ಯೂಯಾರ್ಕ್​: ಟಿ20 ವಿಶ್ವಕಪ್(T20 World Cup 2024)​ ಆಡಲು ನ್ಯೂಯಾರ್ಕ್​ನಲ್ಲಿ(New York) ಬೀಡು ಬಿಟ್ಟಿರುವ ಟೀಮ್​ ಇಂಡಿಯಾ(Team India) ಆಟಗಾರರಿಗೆ ಸರಿಯಾದ ಗುಣಮಟ್ಟದ ಆಹಾರ ಸಿಗುತ್ತಿಲ್ಲ ಎಂದು ತಂಡದ ನಾಯಕ ರೋಹಿತ್​ ಶರ್ಮ ಮತ್ತು ಕೋಚ್​ ರಾಹುಲ್​ ದ್ರಾವಿಡ್​ ಬಿಸಿಸಿಐಗೆ ದೂರು ಸಲ್ಲಿಸಿದ್ದಾರೆ ಎನ್ನಲಾಗಿದೆ. ಜತೆಗೆ ಅಭ್ಯಾಸ ನಡೆಸಲು ಸರಿಯಾದ ಸೌಲಭ್ಯವಿಲ್ಲ ಎಂದು ತಗಾದೆ ಎತ್ತಿದೆ.

ಕಳೆದ ಮೂರು ದಿನಗಳಿಂದ ಟೀಮ್​ ಇಂಡಿಯಾದ ಆಟಗಾರರು ನ್ಯೂಯಾರ್ಕ್​ನಲ್ಲಿ ಅಭ್ಯಾಸ ನಡೆಸುತ್ತಿದೆ. ಆಟಗಾರರು ಇಂದು ಬ್ಯಾಟಿಂಗ್​ ಮತ್ತು ಬೌಲಿಂಗ್​ ಅಭ್ಯಾಸ ಕೂಡ ಆರಂಭಿಸಿದ್ದಾರೆ. ಆದರೆ ಇಲ್ಲಿ ಅಭ್ಯಾಸ ನಡೆಸಲು ಉನ್ನತ ಸೌಲಭ್ಯಗಳಿಲ್ಲ ಎಂದು ನಾಯಕ ರೋಹಿತ್ ಮತ್ತು ಕೋಚ್ ರಾಹುಲ್ ದ್ರಾವಿಡ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ. ನ್ಯೂಸ್​ 18 ವರದಿಯ ಪ್ರಕಾರ ಭಾರತ ತಂಡದ ಆಟಗಾರಿಗೆ ಗುಣಮಟ್ಟದ ಆಹಾರ ಸಿಗುತ್ತಿಲ್ಲ. ಈ ವಿಚಾರಗಳನ್ನು ಬಿಸಿಸಿಐ ಆಯೋಜಕ ಐಸಿಸಿ ಗಮನಕ್ಕೆ ತಂದಿದೆ ಎಂದು ವರದಿಯಾಗಿದೆ.

ನಾಯಕ ರೋಹಿತ್‌ ಶರ್ಮಾ, ಶುಭಮನ್​ ಗಿಲ್​, ಉಪನಾಯಕ ಹಾರ್ದಿಕ್‌ ಪಾಂಡ್ಯ, ರವೀಂದ್ರ ಜಡೇಜಾ, ಜಸ್‌ಪ್ರೀತ್‌ ಬುಮ್ರಾ, ರಿಷಭ್‌ ಪಂತ್‌, ಮೊಹಮದ್ ಸಿರಾಜ್‌, ಸೂರ್ಯಕುಮಾರ್‌ ಯಾದವ್‌, ಕುಲ್ದೀಪ್‌ ಯಾದವ್‌, ಸಂಜು ಸ್ಯಾಮ್ಸನ್‌, ಅರ್ಶ್‌ದೀಪ್‌ ಸಿಂಗ್‌, ಶಿವಂ ದುಬೆ ಸೇರಿದಂತೆ ಬಹುತೇಕ ಆಟಗಾರರು ಬ್ಯಾಟಿಂಗ್​ ಅಭ್ಯಾಸ ನಡೆಸಿದರು. ಅಮೆರಿಕದ ವಾತಾವರಣಕ್ಕೆ ಹೊಂದಿಕೊಳ್ಳುವ ಸಲುವಾಗಿ ಬುಧವಾರ ಮತ್ತು ಗುರುವಾರ ಆಟಗಾರರು ಕೇವಲ ಜಾಗಿಂಗ್‌ ನಡೆಸಿ, ಫುಟ್ಬಾಲ್‌ ಆಡಿದ್ದರು.

ಭಾರತ ನಾಳೆ(ಶನಿವಾರ) ಬಾಂಗ್ಲಾದೇಶ ವಿರುದ್ಧ ಏಕೈಕ ಅಭ್ಯಾಸ ಪಂದ್ಯವನ್ನಾಡಲಿದೆ. ವ್ಯಾಪಕ ಪ್ರಯಾಣ ಮತ್ತು ಐಪಿಎಲ್​ನಿಂದ ದಣಿದಿರುವ ಕಾರಣ ಕೇವಲ ಒಂದು ಅಭ್ಯಾಸ ಪಂದ್ಯಕ್ಕೆ ಮೊರೆ ಹೋಗಿದೆ. ಭಾರತ ತನ್ನ ಮೊದಲ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡಲಿದೆ. ಭಾರತವು ತನ್ನ ಗುಂಪು ಹಂತದ ಎಲ್ಲಾ ಪಂದ್ಯಗಳನ್ನು ಅಮೆರಿಕದಲ್ಲೇ ಆಡಲಿದೆ. ಲೀಗ್​ ಮುಕ್ತಾಯದ ಬಳಿಕ ಮುಂದಿನ ಹಂತಕ್ಕೆ ಅರ್ಹತೆ ಪಡೆದರೆ, ಸೂಪರ್ 8 ಪಂದ್ಯಗಳನ್ನು ಸಹ ಇಲ್ಲೇ ಆಡಲಿದೆ. ಸಾಂಪ್ರದಾಯಿಕ ಬದ್ಧ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಣ ಪಂದ್ಯ ಜೂನ್ 9 ರಂದು ನ್ಯೂಯಾರ್ಕ್‌ನಲ್ಲಿ ನಡೆಯಲ್ಲಿದೆ.

ಇದನ್ನೂ ಓದಿ T20 World Cup 2024: ಟಿ20 ವಿಶ್ವಕಪ್​ ಪಂದ್ಯವನ್ನು ಉಚಿತವಾಗಿ ವೀಕ್ಷಿಸುವುದು ಹೇಗೆ?

ಉಚಿತ ಪ್ರಸಾರ


ಟಿ20 ವಿಶ್ವಕಪ್​ ಟೂರ್ನಿ ಆರಂಭಕ್ಕೂ ಮುನ್ನವೇ ​ಡಿಸ್ನಿ + ಹಾಟ್‌ಸ್ಟಾರ್(Disney+ Hotstar) ಕ್ರಿಕೆಟ್​ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದನ್ನು ನೀಡಿದೆ. ಭಾರತದಲ್ಲಿನ ಸ್ಮಾರ್ಟ್‌ಫೋನ್ ಬಳಕೆದಾರರು ಈ ವರ್ಷದ ಐಸಿಸಿ ಪುರುಷರ ಟಿ20 ಕ್ರಿಕೆಟ್ ವಿಶ್ವಕಪ್ ಅನ್ನು OTT ಪ್ಲಾಟ್‌ಫಾರ್ಮ್‌ನಲ್ಲಿ ಉಚಿತವಾಗಿ ವೀಕ್ಷಿಸಲು ಸಾಧ್ಯವಾಗುತ್ತದೆ ಎಂದು ಡಿಸ್ನಿ + ಹಾಟ್‌ಸ್ಟಾರ್ ಈಗಾಗಲೇ ಘೋಷಿಸಿದೆ. ಕಳೆದ ವರ್ಷ ಏಕದಿನ ವಿಶ್ವಕಪ್ ಮತ್ತು ಏಷ್ಯಾ ಕಪ್‌ ಟೂರ್ನಿಯನ್ನು ಕೂಡ ಡಿಸ್ನಿ + ಹಾಟ್‌ಸ್ಟಾರ್, ಮೊಬೈಲ್​ ಬಳಕೆ ದಾರರಿಗೆ ಉಚಿತ ವೀಕ್ಷಣೆಯನ್ನು ನೀಡಿತ್ತು. ಇದೀಗ ಟಿ20 ವಿಶ್ವಕಪ್​ ಟೂರ್ನಿಯಲ್ಲಿಯೂ ಇದೇ ನಿಲುವನ್ನು ಮುಂದುವರಿಸಿದೆ.

Continue Reading

ಕ್ರಿಕೆಟ್

T20 World Cup 2024: ಟಿ20 ವಿಶ್ವಕಪ್​ ಪಂದ್ಯವನ್ನು ಉಚಿತವಾಗಿ ವೀಕ್ಷಿಸುವುದು ಹೇಗೆ?

T20 World Cup 2024: ಏಕದಿನ ವಿಶ್ವಕಪ್​ ಟೂರ್ನಿಯಂತೆ ಈ ಬಾರಿಯೂ ಟಿ20 ವಿಶ್ವಕಪ್​ ಪಂದ್ಯಾವಳಿಗಳನ್ನು ಭಾರತೀಯ ಕ್ರಿಕೆಟ್​ ಅಭಿಮಾನಿಗಳು ಉಚಿತವಾಗಿ ನೋಡಬಹುದಾಗಿದೆ. ​ಡಿಸ್ನಿ + ಹಾಟ್‌ಸ್ಟಾರ್(Disney+ Hotstar) ಭಾರತದಲ್ಲಿನ ಸ್ಮಾರ್ಟ್‌ಫೋನ್ ಬಳಕೆದಾರಿಗೆ ಈ ಅವಕಾಶ ಕಲ್ಪಿಸಿದೆ

VISTARANEWS.COM


on

T20 World Cup 2024
Koo

ಮುಂಬಯಿ: ನಾಳೆಯಿಂದ (ಜೂನ್​ 1) ಅಮೆರಿಕ ಮತ್ತು ವೆಸ್ಟ್​ ಇಂಡೀಸ್ ಜಂಟಿ ಆತಿಥ್ಯದಲ್ಲಿ ಟಿ20 ವಿಶ್ವಕಪ್​ ಟೂರ್ನಿ(T20 World Cup 2024) ಆರಂಭ ಆರಂಭಗೊಳ್ಳಲಿದೆ. ಭಾರತ ತನ್ನ ಮೊದಲ ಲೀಗ್​ ಪಂದ್ಯವನ್ನು ಜೂನ್​ 5ರಂದು ಐರ್ಲೆಂಡ್​ ವಿರುದ್ಧ ಆಡಲಿದೆ. ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್​ ಟೂರ್ನಿಯಂತೆ ಈ ಬಾರಿಯೂ ಟಿ20 ವಿಶ್ವಕಪ್​ ಪಂದ್ಯಾವಳಿಗಳನ್ನು ಭಾರತೀಯ ಕ್ರಿಕೆಟ್​ ಅಭಿಮಾನಿಗಳು ಉಚಿತವಾಗಿ ನೋಡಬಹುದಾಗಿದೆ. ​ಡಿಸ್ನಿ + ಹಾಟ್‌ಸ್ಟಾರ್(Disney+ Hotstar) ಭಾರತದಲ್ಲಿನ ಸ್ಮಾರ್ಟ್‌ಫೋನ್ ಬಳಕೆದಾರಿಗೆ ಈ ಅವಕಾಶ ಕಲ್ಪಿಸಿದೆ. OTT ಪ್ಲಾಟ್‌ಫಾರ್ಮ್‌ನಲ್ಲಿ ಎಲ್ಲ ಪಂದ್ಯಗಳನ್ನು ಉಚಿತವಾಗಿ ವೀಕ್ಷಿಸಲು ಸಾಧ್ಯವಾಗುತ್ತದೆ.

ಭಾರತದ ಪಂದ್ಯಗಳು ಭಾರತೀಯ ಕಾಲಮಾನ ರಾತ್ರಿ 8ಗಂಟೆಗೆ ಆರಂಭವಾಗಲಿದೆ. ಇತರ ತಂಡಗಳ ಕೆಲವು ಪಂದ್ಯಗಳು ಬೆಳಗ್ಗೆ 6 ಗಂಟೆಗೆ ಪ್ರಸಾರಗೊಳ್ಳಲಿದೆ. ಡಿಸ್ನಿ+ ಹಾಟ್‌ಸ್ಟಾರ್ ಇಂಡಿಯಾದ ಮುಖ್ಯಸ್ಥ ಸಜಿತ್ ಶಿವಾನಂದನ್, “ಐಸಿಸಿ ಪುರುಷರ ಟಿ20 ವಿಶ್ವಕಪ್ 2024 ಅನ್ನು ಮೊಬೈಲ್‌ನಲ್ಲಿ ಉಚಿತವಾಗಿ ನೀಡುವ ಮೂಲಕ, ನಾವು ಕ್ರಿಕೆಟ್ ಆಟವನ್ನು ಬೆಳೆಸುವ, ದೇಶಾದ್ಯಂತ ಹೆಚ್ಚಿನ ಪ್ರೇಕ್ಷಕರನ್ನು ತಲುಪುವ ಗುರಿಯನ್ನು ಹೊಂದಿದ್ದೇವೆ” ಎಂದು ಹೇಳಿದ್ದಾರೆ.

ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್ 2023 ರ ಸಮಯದಲ್ಲಿ, ಡಿಸ್ನಿ+ ಹಾಟ್‌ಸ್ಟಾರ್ ಅಪ್ಲಿಕೇಶನ್ ಮೂಲಕ ಮೊಬೈಲ್‌ನಲ್ಲಿ ಉಚಿತವಾಗಿ ಸ್ಟ್ರೀಮ್ ಮಾಡಲಾಯಿತು. ಇದು ಏಕಕಾಲದಲ್ಲಿ ಅತ್ಯಧಿಕ ವೀಕ್ಷಣೆ ಕಂಡ 5 ಬಾರಿಯ ದಾಖಲೆಗಳನ್ನು ಮುರಿದಿತ್ತು. ಟೀಮ್ ಇಂಡಿಯಾ ಮತ್ತು ಆಸ್ಟ್ರೇಲಿಯಾ ನಡುವಿನ ಫೈನಲ್‌ನಲ್ಲಿ ಪಂದ್ಯ ಏಕಕಾಲಕ್ಕೆ 5.9 ಕೋಟಿ ವೀಕ್ಷಣೆ ಕಂಡಿತ್ತು. ಈ ದಾಖಲೆ ಟಿ20 ವಿಶ್ವಕಪ್​ನಲ್ಲಿ ಪತನಗೊಳ್ಳುವ ಸಾಧ್ಯತೆ ಇದೆ ಎಂದು ಶಿವಾನಂದನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆಯಲಿವೆ. ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ. 

ಇದನ್ನೂ ಓದಿ T20 World Cup 2024: ಬಿಸಿಲಿನಲ್ಲೇ ಬ್ಯಾಟಿಂಗ್​-ಬೌಲಿಂಗ್​ ಅಭ್ಯಾಸ ನಡೆಸಿದ ಟೀಮ್​ ಇಂಡಿಯಾ ಆಟಗಾರರು

ಈ ಬಾರಿ ಟೂರ್ನಿಯಲ್ಲಿ ಗರಿಷ್ಠ 20 ತಂಡಗಳು ಕಣಕ್ಕಿಳಿಯಲಿವೆ. 2022ರ ಆವೃತ್ತಿಯಲ್ಲಿ 12 ತಂಡಗಳು ಭಾಗಿಯಾಗಿದ್ದವು. ಟೂರ್ನಿಯಲ್ಲೂ ವಿಭಿನ್ನ ಸ್ವರೂಪವಿದೆ. 20 ತಂಡಗಳನ್ನು ತಲಾ ಐದು ತಂಡಗಳಂತೆ ನಾಲ್ಕು ಗುಂಪುಗಳಲ್ಲಿ ವಿಂಗಡಿಸಲಾಗಿದೆ. ಗುಂಪು ವಿಭಾಗದಲ್ಲಿ ಪ್ರತಿ ತಂಡಗಳು ತಲಾ ನಾಲ್ಕು ಪಂದ್ಯಗಳನ್ನು ಆಡಲಿವೆ. ಪ್ರತಿ ಗುಂಪಿನಿಂದ ತಲಾ ಎರಡು ತಂಡಗಳು ಸೂಪರ್ ಎಂಟರ ಹಂತಕ್ಕೆ ತೇರ್ಗಡೆ ಪಡೆಯಲಿವೆ. ಅಲ್ಲೂ ತಲಾ ನಾಲ್ಕು ತಂಡಗಳ ಎರಡು ಗುಂಪುಗಳು ಇದ್ದು, ಪ್ರತಿ ಗುಂಪಿನ ಅಗ್ರ ಎರಡು ತಂಡಗಳು ಸೆಮಿಫೈನಲ್‌ಗೆ ಲಗ್ಗೆ ಇಡಲಿವೆ.

Continue Reading

ಕ್ರೀಡೆ

India women’s squad: ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೆ ಭಾರತ ಮಹಿಳಾ ತಂಡ ಪ್ರಕಟ; ತಂಡಕ್ಕೆ ಮರಳಿದ ಪ್ರಿಯಾ ಪೂನಿಯಾ

India women’s squad: 21 ವರ್ಷದ ಶ್ರೇಯಾಂಕಾ ಪಾಟೀಲ್ ಡಬ್ಲ್ಯುಪಿಎಲ್‌ನಲ್ಲಿ ಈ ಬಾರಿ ಆರ್‌ಸಿಬಿ ತಂಡದ ಪರ 13 ವಿಕೆಟ್‌ ಪಡೆದು ಮಿಂಚಿದ್ದರು. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ 2023ರ ಡಿಸೆಂಬರ್ 6ರಂದು ಇಂಗ್ಲೆಂಡ್ ವಿರುದ್ಧದ ಟಿ20 ಪಂದ್ಯದಲ್ಲಿ ಆಡುವ ಮೂಲಕ ಭಾರತ ಹಿರಿಯರ ಮಹಿಳಾ ತಂಡಕ್ಕೆ ಪದಾರ್ಪಣೆ ಮಾಡಿದ್ದರು.

VISTARANEWS.COM


on

India women’s squad
Koo

ನವದೆಹಲಿ: ಜೂನ್ 16ರಿಂದ ಆರಂಭಗೊಳ್ಳಲಿರುವ ದಕ್ಷಿಣ ಆಫ್ರಿಕಾ(India women’s vs South Africa women’s) ವಿರುದ್ಧದ ಕ್ರಿಕೆಟ್​ ಸರಣಿಗೆ ಭಾರತ ಮಹಿಳಾ ತಂಡ(India women’s squad) ಪ್ರಕಟಗೊಂಡಿದೆ. ಉದಯೋನ್ಮುಖ ಆಟಗಾರ್ತಿ, ಕರ್ನಾಟಕದ ಶ್ರೇಯಾಂಕಾ ಪಾಟೀಲ್​ ಏಕದಿನ ಮತ್ತು ಟಿ20 ಸರಣಿಯಲ್ಲಿ ಸ್ಥಾನ ಪಡೆದಿದ್ದಾರೆ. ಉಭಯ ತಂಡಗಳ ನಡುವೆ ಟೆಸ್ಟ್​, ಟಿ20 ಮತ್ತು ಏಕದಿನ ಸರಣಿಗಳು ನಡೆಯಲಿವೆ.

ಹರ್ಮನ್‌ಪ್ರೀತ್‌ ಕೌರ್‌ ಅವರು ಮೂರು ಮಾದರಿಯಲ್ಲೂ ಭಾರತ ತಂಡವನ್ನು ಮುನ್ನಡೆಸಲಿದ್ದು, ಸ್ಮೃತಿ ಮಂಧಾನ ಉಪನಾಯಕಿಯಾಗಿದ್ದಾರೆ. ಗಾಯದಿಂದ ವಿಶ್ರಾಂತಿ ಪಡೆದಿದ್ದ ಅನುಭವಿ ಆಟಗಾರ್ತಿ ಜೆಮಿಮಾ ರಾಡ್ರಿಗಸ್ ಈ ಸರಣಿ ಮೂಲಕ ಮತ್ತೆ ತಂಡಕ್ಕೆ ಕಮ್​ಬ್ಯಾಕ್​ ಮಾಡಿದ್ದಾರೆ. ಕಳೆದ ಬಾಂಗ್ಲಾ ವಿರುದ್ಧದ ಸರಣಿಯಿಂದ ಅವರು ಹೊರಗುಳಿದಿದ್ದರು. ವೇಗಿ ಪೂಜಾ ವಸ್ತ್ರಕರ್ ಕೂಡ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ದೇಶೀಯ ಕ್ರಿಕೆಟ್​ ಟೂರ್ನಿಯಲ್ಲಿ ಅತ್ಯುತ್ತಮ ಬ್ಯಾಟಿಂಗ್​ ಪ್ರದರ್ಶನ ತೋರುತ್ತಿದ್ದ ಅಗ್ರ ಕ್ರಮಾಂಕದ ಬ್ಯಾಟರ್ ಪ್ರಿಯಾ ಪೂನಿಯಾ ಏಕದಿನ ಮತ್ತು ಟೆಸ್ಟ್‌ ತಂಡಕ್ಕೆ ಮರಳಿದ್ದಾರೆ. 21 ವರ್ಷದ ಶ್ರೇಯಾಂಕಾ ಪಾಟೀಲ್ ಡಬ್ಲ್ಯುಪಿಎಲ್‌ನಲ್ಲಿ ಈ ಬಾರಿ ಆರ್‌ಸಿಬಿ ತಂಡದ ಪರ 13 ವಿಕೆಟ್‌ ಪಡೆದು ಮಿಂಚಿದ್ದರು. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ 2023ರ ಡಿಸೆಂಬರ್ 6ರಂದು ಇಂಗ್ಲೆಂಡ್ ವಿರುದ್ಧದ ಟಿ20 ಪಂದ್ಯದಲ್ಲಿ ಆಡುವ ಮೂಲಕ ಭಾರತ ಹಿರಿಯರ ಮಹಿಳಾ ತಂಡಕ್ಕೆ ಪದಾರ್ಪಣೆ ಮಾಡಿದ್ದರು.

ಪಂದ್ಯಾವಳಿಗಳು ಜೂನ್ 16ರಿಂದ ಜುಲೈ 9ರ ವರೆಗೆ ನಡೆಯಲಿದೆ. ಒಂದು ಟೆಸ್ಟ್‌, ಮೂರು ಏಕದಿನ ಮತ್ತು ಮೂರು ಟಿ20 ಪಂದ್ಯಗಳು ನಡೆಯಲಿವೆ. ಏಕದಿನ ಪಂದ್ಯಗಳು ಬೆಂಗಳೂರಿನಲ್ಲಿ ಮತ್ತು ಉಳಿದ ಪಂದ್ಯಗಳು ಚೆನ್ನೈನಲ್ಲಿ ನಡೆಯಲಿವೆ.

ಏಕದಿನ ತಂಡ


ಹರ್ಮನ್‌ಪ್ರೀತ್‌ ಕೌರ್ (ನಾಯಕಿ), ಸ್ಮೃತಿ ಮಂದಾನ (ಉಪನಾಯಕಿ), ಶಫಾಲಿ ವರ್ಮಾ, ದೀಪ್ತಿ ಶರ್ಮಾ, ಜೆಮಿಮಾ ರಾಡ್ರಿಗಸ್, ರಿಚಾ ಘೋಷ್ (ವಿಕೆಟ್‌ ಕೀಪರ್‌), ಉಮಾ ಚೆಟ್ರಿ (ವಿಕೆಟ್ ಕೀಪರ್‌), ದಯಾಳನ್ ಹೇಮಲತಾ, ರಾಧಾ ಯಾದವ್, ಆಶಾ ಶೋಭನ, ಶ್ರೇಯಾಂಕಾ ಪಾಟೀಲ್​, ಸೈಕಾ ಇಶಾಕ್, ಪೂಜಾ ವಸ್ತ್ರಕರ್, ರೇಣುಕಾ ಸಿಂಗ್ ಠಾಕೂರ್, ಅರುಂಧತಿ ರೆಡ್ಡಿ, ಪ್ರಿಯಾ ಪೂನಿಯಾ.

ಟಿ20 ತಂಡ


ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಶಫಾಲಿ ವರ್ಮಾ, ಶುಭಾ ಸತೀಶ್, ಜೆಮಿಮಾ ರಾಡ್ರಿಗಸ್, ರಿಚಾ ಘೋಷ್ (ವಿಕೆ), ಉಮಾ ಚೆಟ್ರಿ (ವಿಕೆ), ದೀಪ್ತಿ ಶರ್ಮಾ, ಸ್ನೇಹ ರಾಣಾ, ಸೈಕಾ ಇಶಾಕ್, ರಾಜೇಶ್ವರಿ ಗಾಯಕ್‌ವಾಡ್, ಪೂಜಾ ವಸ್ತ್ರಕರ್, ಅರುಂಧತಿ ರೆಡ್ಡಿ, ರೇಣುಕಾ ಸಿಂಗ್ ಠಾಕೂರ್, ಮೇಘನಾ ಸಿಂಗ್, ಪ್ರಿಯಾ ಪುನಿಯಾ.

ಇದನ್ನೂ ಓದಿ T20 World Cup 2024: ಬಿಸಿಲಿನಲ್ಲೇ ಬ್ಯಾಟಿಂಗ್​-ಬೌಲಿಂಗ್​ ಅಭ್ಯಾಸ ನಡೆಸಿದ ಟೀಮ್​ ಇಂಡಿಯಾ ಆಟಗಾರರು

ಟೆಸ್ಟ್ ತಂಡ


ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಶಫಾಲಿ ವರ್ಮಾ, ದಯಾಲನ್ ಹೇಮಲತಾ, ಉಮಾ ಚೆಟ್ರಿ (ವಿಕೆ), ರಿಚಾ ಘೋಷ್ (ವಿಕೆ), ಜೆಮಿಮಾ ರೋಡ್ರಿಗಸ್, ಸಜನಾ ಸಜೀವನ್, ದೀಪ್ತಿ ಶರ್ಮಾ, ಶ್ರೇಯಾಂಕಾ ಪಾಟೀಲ್, ರಾಧಾ ಯಾದವ್, ಅಮಾನ್ಜೋತ್ ಕೌರ್, ಎ. ಸೋಭಾನಾ, ಪೂಜಾ ವಸ್ತ್ರಾಕರ್, ರೇಣುಕಾ ಸಿಂಗ್ ಠಾಕೂರ್, ಅರುಂಧತಿ ರೆಡ್ಡಿ. ಸ್ಟ್ಯಾಂಡ್‌ಬೈ: ಸೈಕಾ ಇಶಾಕ್.

Continue Reading

ಕ್ರೀಡೆ

T20 World Cup 2024: ಬಿಸಿಲಿನಲ್ಲೇ ಬ್ಯಾಟಿಂಗ್​-ಬೌಲಿಂಗ್​ ಅಭ್ಯಾಸ ನಡೆಸಿದ ಟೀಮ್​ ಇಂಡಿಯಾ ಆಟಗಾರರು

T20 World Cup 2024: ಸ್ಥಳೀಯ ವಾತಾವರಣಕ್ಕೆ ಹೊಂದಿಕೊಳ್ಳುವ ನಿಟ್ಟಿನಲ್ಲಿ ಭಾರತದ ಆಟಗಾರರು ಸುಡು ಬಿಸಿಲನ್ನು ಲೆಕ್ಕಿಸದೆ ಶುಕ್ರವಾರ ಹಗಲಿನಲ್ಲೇ ಅಭ್ಯಾಸ ನಡೆಸಿದ್ದಾರೆ.

VISTARANEWS.COM


on

T20 World Cup 2024
Koo

ನ್ಯೂಯಾರ್ಕ್‌: ಟಿ20 ವಿಶ್ವಕಪ್​ಗೆ(T20 World Cup 2024) ಟೀಮ್​ ಇಂಡಿಯಾದ(Team India) ಆಟಗಾರರು ಅಭ್ಯಾಸ ಆರಂಭಿಸಿದ್ದಾರೆ. ಶುಕ್ರವಾರ ಬೆಳಗ್ಗೆ ನ್ಯೂಯಾರ್ಕ್‌ನ ಮೈದಾನದಲ್ಲಿ ಆಟಗಾರರು ಬ್ಯಾಟಿಂಗ್​ ಮತ್ತು ಬೌಲಿಂಗ್​ ಅಭ್ಯಾಸದಲ್ಲಿ ಕಾಣಿಸಿಕೊಂಡರು. ಈ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ನಾಯಕ ರೋಹಿತ್‌ ಶರ್ಮಾ, ಶುಭಮನ್​ ಗಿಲ್​, ಉಪನಾಯಕ ಹಾರ್ದಿಕ್‌ ಪಾಂಡ್ಯ, ರವೀಂದ್ರ ಜಡೇಜಾ, ಜಸ್‌ಪ್ರೀತ್‌ ಬುಮ್ರಾ, ರಿಷಭ್‌ ಪಂತ್‌, ಮೊಹಮದ್ ಸಿರಾಜ್‌, ಸೂರ್ಯಕುಮಾರ್‌ ಯಾದವ್‌, ಕುಲ್ದೀಪ್‌ ಯಾದವ್‌, ಸಂಜು ಸ್ಯಾಮ್ಸನ್‌, ಅರ್ಶ್‌ದೀಪ್‌ ಸಿಂಗ್‌, ಶಿವಂ ದುಬೆ ಸೇರಿದಂತೆ ಬಹುತೇಕ ಆಟಗಾರರು ಬ್ಯಾಟಿಂಗ್​ ಅಭ್ಯಾಸ ನಡೆಸಿದರು. ಅಮೆರಿಕದ ವಾತಾವರಣಕ್ಕೆ ಹೊಂದಿಕೊಳ್ಳುವ ಸಲುವಾಗಿ ಬುಧವಾರ ಮತ್ತು ಗುರುವಾರ ಆಟಗಾರರು ಕೇವಲ ಜಾಗಿಂಗ್‌ ನಡೆಸಿ, ಫುಟ್ಬಾಲ್‌ ಆಡಿದ್ದರು.

ಭಾರತಕ್ಕೆ ಸವಾಲು


ಭಾರತೀಯ ಆಟಗಾರರು ಅಮೆರಿಕ ಹಾಗೂ ವೆಸ್ಟ್‌ ಇಂಡೀಸ್‌ನಲ್ಲಿ ವಾತಾವರಣಕ್ಕೆ ಹೊಂದಿಕೊಳ್ಳುವ ಸವಾಲು ಕೂಡ ಇದೆ. ಏಕೆಂದರೆ ಇಲ್ಲಿ ಹಗಲಿನಲ್ಲಿ ಪಂದ್ಯಗಳು ನಡೆಯುತ್ತವೆ. ಹೀಗಾಗಿ ಸ್ಥಳೀಯ ವಾತಾವರಣಕ್ಕೆ ಹೊಂದಿಕೊಳ್ಳುವ ನಿಟ್ಟಿನಲ್ಲಿ ಭಾರತದ ಆಟಗಾರರು ಸುಡು ಬಿಸಿಲನ್ನು ಲೆಕ್ಕಿಸದೆ ಶುಕ್ರವಾರ ಹಗಲಿನಲ್ಲೇ ಅಭ್ಯಾಸ ನಡೆಸಿದ್ದಾರೆ. ಸಾಮಾನ್ಯವಾಗಿ ಇಲ್ಲಿ 25ರಿಂದ 27 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ಹೀಗಾಗಿ ವಿಶ್ವಕಪ್‌ ಆರಂಭಕ್ಕೂ ಮುನ್ನ ಭಾರತೀಯ ಆಟಗಾರರಿಗೆ ಈ ವಾತಾವರಣಕ್ಕೆ ಒಗ್ಗಿಕೊಳ್ಳುವ ಅಗತ್ಯವಿದೆ. ಇದೇ ಮೊದಲ ಬಾರಿ ಅಮೆರಿಕದಲ್ಲಿ ಆಡಲು ಸಜ್ಜಾಗಿದ್ದು, ಕಠಿಣ ಸವಾಲು ಎದುರಾಗಲಿದೆ.

ಇದನ್ನೂ ಓದಿ

‘ಮೊದಲ ಬಾರಿ ನಾವು ನ್ಯೂಯಾರ್ಕ್‌ನಲ್ಲಿ ಕ್ರಿಕೆಟ್‌ ಆಡುತ್ತಿದ್ದೇವೆ. ಇದೊಂದು ಖುಷಿಯ ಸಂದರ್ಭ’ ಎಂದು ಆಲ್‌ರೌಂಡರ್‌ ರವೀಂದ್ರ ಜಡೇಜಾ ಹೇಳಿದರು. ನಾಯಕ ರೋಹಿತ್​ ಕೂಡ ನ್ಯೂಯಾರ್ಕ್​ ವಾತಾವರಣಕ್ಕೆ ಹೊಂದಿಕೊಂಡು ಕ್ರಿಕೆಟ್​ ಆಡುವುದು ಸವಾಲಿನಿಂದ ಕೂಡಿರಲಿದೆ ಎಂದರು. ಭಾರತ ನಾಳೆ(ಜೂನ್​ 1) ನಡೆಯುವ ಏಕೈಕ ಅಭ್ಯಾಸ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಆಡಲಿದೆ. ಈ ಪಂದ್ಯ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ.

ನ್ಯೂಯಾರ್ಕ್​ಗೆ ತೆರಳಿದ ಕೊಹ್ಲಿ


ಐಪಿಎಲ್​ ಬಳಿಕ ವಿಶ್ರಾಂತಿ ಪಡೆದಿದ್ದ ವಿರಾಟ್​ ಕೊಹ್ಲಿ ಗುರುವಾರ ತಡರಾತ್ರಿ ಮುಂಬೈ ವಿಮಾನ ನಿಲ್ದಾಣದಿಂದ ನ್ಯೂಯಾರ್ಕ್​ಗೆ ಪ್ರಯಾಣ ಬೆಳೆಸಿದರು. ಈ ವೇಳೆ ಅಭಿಮಾನಿಯೊಬ್ಬ ವಿರಾಟ್​ ಕೊಹ್ಲಿಗೆ ಉಡುಗೊರೆ ನೀಡಿ ಗಮನಸೆಳೆದಿದ್ದಾನೆ. ಕೊಹ್ಲಿ ಬಾಂಗ್ಲಾದೇಶ ವಿರುದ್ಧ ನಾಳೆ ನಡೆಯುವ ಅಭ್ಯಾಸ ಪಂದ್ಯದಲ್ಲಿ ಆಡುವುದು ಅನುಮಾನ ಎನ್ನಲಾಗಿದೆ.

ಇದನ್ನೂ ಓದಿ T20 World Cup 2024: ಟಿ20 ವಿಶ್ವಕಪ್​ ಪಂದ್ಯ ನಡೆಯುವ ತಾಣ,ಭಾರತದ ಪಂದ್ಯಗಳ ಪ್ರಸಾರದ ಮಾಹಿತಿ ಹೀಗಿದೆ

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್​ ಕೀಪರ್​), ಸಂಜು ಸ್ಯಾಮ್ಸನ್ (ವಿಕೆಟ್​ ಕೀಪರ್​), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಶದೀಪ್​ ಸಿಂಗ್​, ಜಸ್​ಪ್ರೀತ್​ ಬುಮ್ರಾ, ಮೊಹಮ್ಮದ್​ ಸಿರಾಜ್. ಮೀಸಲು ಆಟಗಾರರು ಶುಭಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್ ಮತ್ತು ಅವೇಶ್ ಖಾನ್.

Continue Reading
Advertisement
Prajwal revanna
ಪ್ರಮುಖ ಸುದ್ದಿ7 mins ago

Prajwal Revanna : ಪ್ರಜ್ವಲ್​ ರೇವಣ್ಣ ಅರೆಸ್ಟ್​ ಆಗುವಾಗ ಧರಿಸಿದ್ದ ಬಟ್ಟೆ ಬ್ರಾಂಡ್ ಯಾವುದು? ಅದಕ್ಕೆಷ್ಟು ಬೆಲೆ?

contractor self harming
ಕ್ರೈಂ17 mins ago

Self Harming: ಕಂಟ್ರಾಕ್ಟರ್‌ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ, ಮತ್ತೊಂದು ಸರ್ಕಾರಿ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಯಲಿಗೆ!

Aadhaar-PAN Link
ದೇಶ31 mins ago

Aadhaar-PAN Link: ಇನ್ನೂ ಆಧಾರ್‌, ಪ್ಯಾನ್‌ ಲಿಂಕ್‌ ಆಗಿಲ್ಲವೆ? ಇಂದೇ ಕೊನೆಯ ದಿನ; ಲಿಂಕ್‌ ಮಾಡುವ ವಿಧಾನ ಇಲ್ಲಿದೆ

Valmiki Corporation Scam
ಪ್ರಮುಖ ಸುದ್ದಿ43 mins ago

Valmiki Corporation Scam: ಸಚಿವ ನಾಗೇಂದ್ರ ತಲೆದಂಡ ಫಿಕ್ಸ್‌; ರಾಜೀನಾಮೆ ಕೊಡಲು ಸಿಎಂ ಸೂಚನೆ

RBI
ದೇಶ51 mins ago

RBI: 33 ವರ್ಷಗಳ ನಂತರ ಬ್ರಿಟನ್‌ನಿಂದ 100 ಟನ್‌ಗಿಂತಲೂ ಹೆಚ್ಚು ಪ್ರಮಾಣದ ಚಿನ್ನ ಭಾರತಕ್ಕೆ!

Raghu Thatha Hombale Films Realease date announced
ಕಾಲಿವುಡ್51 mins ago

Raghu Thatha: `ಪುಷ್ಪ 2′ ಸಿನಿಮಾಗೆ ಹೊಂಬಾಳೆ ಫಿಲ್ಮ್ಸ್‌ ಸೆಡ್ಡು: ‘ರಘು ತಾತಾ’ ರಿಲೀಸ್‌ ಡೇಟ್‌ ಅನೌನ್ಸ್‌!

Anant Ambani Shakira set to perform 2nd pre-wedding
ಬಾಲಿವುಡ್55 mins ago

Anant Ambani: ಅನಂತ್ ಅಂಬಾನಿ ಕ್ರೂಸ್ ಪಾರ್ಟಿಯಲ್ಲಿ ರಂಜಿಸಲಿದ್ದಾರೆ ‘ವಾಕಾ ವಾಕಾ’ ಖ್ಯಾತಿಯ ಪಾಪ್ ಗಾಯಕಿ!

Prajwal Revanna
ಪ್ರಮುಖ ಸುದ್ದಿ59 mins ago

Prajwal Revanna : ನಾನವನಲ್ಲ, ನಾನವನಲ್ಲ; ಪೊಲೀಸರ ಪ್ರಶ್ನೆಗೆ ಈ ಒಂದೇ ಉತ್ತರ ನೀಡುತ್ತಿರುವ ಪ್ರಜ್ವಲ್​ ರೇವಣ್ಣ!

T20 World Cup 2024
ಕ್ರೀಡೆ1 hour ago

T20 World Cup 2024: ನ್ಯೂಯಾರ್ಕ್​ನಲ್ಲಿ ಕಳಪೆ ಗುಣಮಟ್ಟದ ಆಹಾರ; ಟೀಮ್​ ಇಂಡಿಯಾ ಆಟಗಾರರಿಂದ ಅಸಮಾಧಾನ

Vijayanagara News
ವಿಜಯನಗರ1 hour ago

Vijayanagara News : ದೇವಸ್ಥಾನಕ್ಕೆ ನುಗ್ಗಿ ಆಂಜನೇಯ ಮೂರ್ತಿಯನ್ನು ವಿರೂಪಗೊಳಿಸಿದ ದುಷ್ಕರ್ಮಿಗಳು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ1 day ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ3 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು3 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ4 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ5 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು5 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌