ಜಾತಿ ಮಾತುಗಳು ರಾಜಕಾರಣದಲ್ಲಿ ಅಪ್ರಸ್ತುತ: ಎಚ್‌.ಡಿ. ಕುಮಾರಸ್ವಾಮಿ ಹೇಳಿಕೆಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ - Vistara News

ಕರ್ನಾಟಕ

ಜಾತಿ ಮಾತುಗಳು ರಾಜಕಾರಣದಲ್ಲಿ ಅಪ್ರಸ್ತುತ: ಎಚ್‌.ಡಿ. ಕುಮಾರಸ್ವಾಮಿ ಹೇಳಿಕೆಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ

ಮಹಾತ್ಮ ಗಾಂಧಿಯನ್ನು ಕೊಂದವರು ಹಾಗೂ ಶೃಂಗೇರಿ ಮಠದ ಮೇಲೆ ದಾಳಿ ಮಾಡಿದ ಬ್ರಾಹ್ಮಣ ವರ್ಗಕ್ಕೆ ಪ್ರಲ್ಹಾದ ಜೋಶಿ ಸೇರಿದ್ದಾರೆ ಎಂಬ ಎಚ್‌.ಡಿ. ಕುಮಾರಸ್ವಾಮಿ ಹೇಳಿಕೆ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಕಂದಾಯ ಸಚಿವ ಆರ್.‌ ಅಶೋಕ್‌ ಪ್ರತಿಕ್ರಿಯಿಸಿದ್ದಾರೆ.

VISTARANEWS.COM


on

karnataka budget 2023 7th pay commission
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಜಾತಿ ಮಾತುಗಳು ರಾಜಕಾರಣದಲ್ಲಿ ಅಪ್ರಸ್ತುತ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಬ್ರಾಹ್ಮಣ ಸಮುದಾಯದ ಕುರಿತು ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಮಾತಿಗೆ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.

ನಮ್ಮ ಪಕ್ಷ ಹಾಗೂ ಅದರ ಕಾರ್ಯಕ್ರಮಗಳು ಏನು ಮಾಡಲು ಸಾಧ್ಯ ಎಂಬ ಬಗ್ಗೆ ಮಾತನಾಡಿದರೆ ಜನ ಚಿಂತನೆ ಮಾಡುತ್ತಾರೆಯೇ ಹೊರತಾಗಿ ವೈಯಕ್ತಿಕ ಮಾತು ಗಳು ಪ್ರಸ್ತುತವಲ್ಲ ಎಂದರು. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆ ಗೆ ಪ್ರತಿಕ್ರಿಯೆ ನೀಡಿ ನಮ್ಮ ಪಕ್ಷದ ಬಗ್ಗೆ ಅವರು ಚಿಂತಿಸಬೇಕಿಲ್ಲ. ಕಾಂಗ್ರೆಸ್ ಮೊದಲು ಅವರ ಪಕ್ಷದ ಸರಿಮಾಡಿಕೊಳ್ಳಲಿ. ಬ್ರಾಹ್ಮಣರು ಎಂದೆಲ್ಲಾ ಜನ ನೋಡುವುದಿಲ್ಲ ಎಂದರು.

ಇದನ್ನೂ ಓದಿ : ಶೃಂಗೇರಿ ಮಠವನ್ನು ಒಡೆದ, ಮಹಾತ್ಮಾ ಗಾಂಧಿಯನ್ನು ಕೊಂದ ಬ್ರಾಹ್ಮಣರು ಇವರು: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಿರುದ್ಧ ಎಚ್‌.ಡಿ. ಕುಮಾರಸ್ವಾಮಿ ವಾಗ್ದಾಳಿ

ಮದುವೆಯೊಂದರಲ್ಲಿ ಪಾಲ್ಗೊಳ್ಳಲು ದೆಹಲಿಗೆ ಆಗಮಿಸಿರುವುದಾಗಿ ತಿಳಿಸಿದ ಸಿಎಂ ಬೊಮ್ಮಾಯಿ, ಶಾಸಕ ರಮೇಶ್ ಜಾರಳಿಹೊಳಿ ತಮ್ಮನ್ನು ಭೇಟಿಯಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅವರು ವಿವರಗಳನ್ನು ನೀಡಿದರೆ ಕಾನೂನು ಪ್ರಕಾರ ಕೆಲಸ ಮಾಡುತ್ತೇವೆ ಎಂದರು.

ಆರ್‌. ಅಶೋಕ್‌ ಖಂಡನೆ

ಈ ಕುರಿತು ಟ್ವೀಟ್‌ ಮಾಡಿರುವ ಕಂದಾಯ ಸಚಿವ ಆರ್‌. ಅಶೋಕ್‌, ಹೆಚ್ ಡಿ ಕುಮಾರಸ್ವಾಮಿ ಅವರು ಬ್ರಾಹ್ಮಣರ ಬಗ್ಗೆ ಕೀಳಾಗಿ ಮಾತನಾಡಿದ್ದನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ. ಸ್ವಾತಂತ್ರ್ಯ ಹೋರಾಟದಲ್ಲಿಯೂ ಬ್ರಾಹ್ಮಣರ ತ್ಯಾಗ, ಬಲಿದಾನ ಸಾಕಷ್ಟಿದೆ. ಯಾವುದೇ ಜಾತಿಯ ಬಗ್ಗೆ ಈ ರೀತಿ ಕೀಳಾಗಿ ಮಾತನಾಡುವುದು ಮಾಜಿ ಮುಖ್ಯಮಂತ್ರಿಯಾಗಿದ್ದವರಿಗೆ ಶೋಭೆ ತರುವಂತದ್ದಲ್ಲ. ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಗೆ ಸೋಲು ಕಟ್ಟಿಟ್ಟ ಬುತ್ತಿ ಎನ್ನುವುದನ್ನು ತಿಳಿದು ಅಸಹಾಯಕತೆ ಹಾಗೂ ಹತಾಶೆಯಿಂದ ಮಾತನಾಡುತ್ತಿದ್ದಾರೆ ಅನಿಸುತ್ತದೆ. ಅವರು ತಕ್ಷಣ ಬ್ರಾಹ್ಮಣ ಸಮಾಜದ ಕ್ಷಮೆ ಕೇಳಬೇಕೆಂದು ನಾನು ಆಗ್ರಹಿಸುತ್ತೇನೆ ಎಂದಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Pourakarmikas: ಪೌರ ಕಾರ್ಮಿಕರಿಗೆ ಗುಡ್‌ ನ್ಯೂಸ್; ವಾರಕ್ಕೆ ಒಂದು ದಿನ ರಜೆ ನೀಡಿದ ಸರ್ಕಾರ

Pourakarmikas: ವಾರದ ಒಂದು ದಿನ ಸಂಪೂರ್ಣ ರಜೆ ನೀಡಬೇಕು ಎಂದು ಪೌರ ಕಾರ್ಮಿಕರು ಒತ್ತಾಯಿಸುತ್ತಿದ್ದರು. ಈ ಬೇಡಿಕೆಗೆ ರಾಜ್ಯ ಸರ್ಕಾರ ಸ್ಪಂದಿಸಿದ್ದು, ವಾರದಲ್ಲಿ ಒಂದು ದಿನ ಸಂಪೂರ್ಣ ರಜೆಯನ್ನು ನೀಡಿ ಆದೇಶ ಹೊರಡಿಸಿದೆ.

VISTARANEWS.COM


on

Pourakarmikas
Koo

ಬೆಂಗಳೂರು: ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ (Pourakarmikas) ರಾಜ್ಯ ಸರ್ಕಾರ ಗುಡ್‌ ನ್ಯೂಸ್‌ ನೀಡಿದೆ. ಪೌರ ಕಾರ್ಮಿಕರಿಗೆ ವಾರಕ್ಕೆ ಒಂದು ದಿನ ಪೂರ್ತಿ ರಜೆ ನೀಡಿ ನಗರಾಭಿವೃದ್ಧಿ ಇಲಾಖೆ ಸೋಮವಾರ ಆದೇಶ ಹೊರಡಿಸಿದೆ.

ಈವರೆಗೆ ಪೌರಕಾರ್ಮಿಕರಿಗೆ ವಾರದಲ್ಲಿ ಎರಡು ಬಾರಿ ಅರ್ಧ ದಿನದ ರಜೆ ನೀಡಲಾಗುತ್ತಿತ್ತು. ಈಗ ನಿತ್ಯದ ಕೆಲಸಕ್ಕೆ ತೊಂದರೆ ಆಗದಂತೆ ವ್ಯವಸ್ಥೆ ಮಾಡಿಕೊಂಡು ಇಡೀ ದಿನದ ರಜೆ ನೀಡಲು ಆದೇಶಿಸಲಾಗಿದೆ.

ವಾರದ ಒಂದು ದಿನ ಸಂಪೂರ್ಣ ರಜೆ ನೀಡಬೇಕು ಎಂದು ಪೌರ ಕಾರ್ಮಿಕರು ಒತ್ತಾಯಿಸುತ್ತಿದ್ದರು. ಈ ಬೇಡಿಕೆಗೆ ರಾಜ್ಯ ಸರ್ಕಾರ ಸ್ಪಂದಿಸಿದ್ದು, ವಾರದಲ್ಲಿ ಒಂದು ದಿನ ಸಂಪೂರ್ಣ ರಜೆಯನ್ನು ನೀಡಿ ಆದೇಶ ಹೊರಡಿಸಿದೆ.

ಇದನ್ನೂ ಓದಿ | Pawan Kalyan: ವೇತನವೇ ಬೇಡ ಎಂದ ಪವನ್‌ ಕಲ್ಯಾಣ್‌- ಮತ್ತೊಮ್ಮೆ ಗಮನ ಸೆಳೆದ ಆಂಧ್ರ ಡಿಸಿಎಂ

ಷರತ್ತುಗಳೇನು?

  • ದಿನನಿತ್ಯದ ಸ್ವಚ್ಛತಾ ಕೆಲಸ, ಕಾರ್ಯಗಳಿಗೆ ತೊಂದರೆಯಾಗದಂತೆ ಶೇ.85 ಹಾಜರಾತಿ ಖಚಿತಪಡಿಸಿಕೊಂಡು ಒಂದು ರಜೆ ನೀಡುವುದು.
  • ನಗರ ಸ್ಥಳೀಯ ಸಂಸ್ಥೆಯ ವ್ಯಾಪ್ತಿಯ ಸ್ವಚ್ಛತಾ ಕಾರ್ಯಕ್ಕೆ ಈಗಾಗಲೇ ನೇಮಿಸಿರುವ ಸಿಬ್ಬಂದಿಗೆ ವಾರದ ರಜೆ ನೀಡುವ ಸಂದರ್ಭದಲ್ಲಿ ಬೇರೊಬ್ಬ ನೌಕರರನ್ನು ಆ ಕಾರ್ಯಕ್ಕೆ ನಿಯೋಜಿಸುವ ಮೇರೆಗೆ ರಜೆಯ ಅವಶ್ಯಕತೆಯಿರುವ ಪೌರಕಾರ್ಮಿಕರಿಗೆ ವಾರದಲ್ಲಿ ಒಂದು ದಿನ ರಜೆ ನೀಡಲು ಅವಕಾಶ ಕಲ್ಪಿಸಬಹುದು.
  • ವಾರದ ರಜೆಯನ್ನು ನೌಕರರು, ಪೌರ ಕಾರ್ಮಿಕರ ಹಕ್ಕು ಎಂದು ಪರಿಗಣಿಸತಕ್ಕದ್ದಲ್ಲ ಹಾಗೂ ಒಂದು ವಾರದ ಒಂದು ರಜೆಯನ್ನು ಮುಂದಿನ ವಾರಕ್ಕೆ ಹಿಂಬಾಕಿ ಎಂದು ಪರಿಗಣಿಸಿ ಸತತವಾಗಿ ರಜೆ ಪಡೆಯಲು ಅವಕಾಶವಿರುವುದಿಲ್ಲ.
  • ಪ್ರಕೃತಿ ವಿಕೋಪ, ಸ್ಥಳೀಯ ಜಾತ್ರೆ, ಸಭೆ ಸಮಾರಂಭಗಳ ವಿಶೇಷ ಸಂದರ್ಭಗಳಲ್ಲಿ ವಾರದ ರಜೆಯನ್ನು ಕಡ್ಡಾಯವಾಗಿ ನೀಡಬೇಕೆಂದು ಒತ್ತಾಯಿಸುವಂತಿಲ್ಲ ಹಾಗೂ ಈ ಸಂದರ್ಭದಲ್ಲಿ ವಾರದ ರಜೆ ನೀಡುವ ಅಧಿಕಾರ ಆಯಾ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರ ವಿವೇಚನೆಗೆ ಒಳಪಟ್ಟಿರುತ್ತದೆ.
  • ರಜೆಯ ಮೇಲೆ ತೆರಳಿದ ನೌಕರ, ಪೌರ ಕಾರ್ಮಿಕರ ವ್ಯಾಪ್ತಿಗೆ ಸೇರಿದ ಪ್ರದೇಶದ ಸ್ವಚ್ಛತಾ ಕಾರ್ಯವನ್ನು ಸಾರ್ವಜನಿಕರಿಗೆ ತೊಂದರೆಯಾಗದಂತೆ ಕೆಲಸಕ್ಕೆ ಹಾಜರಾಗಿರುವ ಇತರೆ ಸಿಬ್ಬಂದಿ ಸ್ವಚ್ಛಗೊಳಿಸಬೇಕು.
  • ಪ್ರಸ್ತುತ ಪೌರ ಕಾರ್ಮಿಕರಿಗೆ ವಾರಕ್ಕೆ ಎರಡು ಬಾರಿ ಅರ್ಧ ದಿನ ರಜೆ ನೀಡಲಾಗುತ್ತಿತ್ತು. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೆಲಸ ಮಾಡುವ ಪೌರ ಕಾರ್ಮಿಕರಿಗೆ ಬುಧವಾರ, ಭಾನುವಾರ 11 ಗಂಟೆವರೆಗೂ ಕೆಲಸ ಆಮೇಲೆ ರಜೆ ನೀಡಲಾಗುತ್ತಿತ್ತು, ಇದೀಗ ವಾರದಲ್ಲಿ ಒಂದು ದಿನ ಪೂರ್ತಿ ರಜೆ ನೀಡಲು ಸರ್ಕಾರ ಕ್ರಮ ಕೈಗೊಂಡಿದೆ.
Continue Reading

ಕ್ರೈಂ

Sandalwood theft : ಶ್ರೀಗಂಧ ಕದಿಯಲು ಬಂದನಿಗೆ ಗುಂಡೇಟು;‌ ಮತ್ತೊಬ್ಬ ಗಾಯಾಳು ಸೇರಿ ಹಲವರು ಪರಾರಿ

Sandalwood theft : ಕೋಲಾರದಲ್ಲಿ ಅರಣ್ಯಾಧಿಕಾರಿಗಳ ಕಣ್ತಪ್ಪಿಸಿ ಗಂಧ ಕದಿಯಲು ಬಂದ ಚೋರನಿಗೆ ಗುಂಡು ಹಾರಿಸಲಾಗಿದೆ. ನಾಲ್ಕೈದು ಮಂದಿ ಕಾಲ್ಕಿತ್ತಿದ್ದು, ಗುಂಡೇಟು ತಿಂದವನು ಸಿಕ್ಕಿಬಿದ್ದಿದ್ದಾನೆ. ಇತ್ತ ಕಲಬುರಗಿಯಲ್ಲಿ ಕಿಡಿಗೇಡಿಗಳು ಕೋರ್ಟ್‌ ಆವರಣದಲ್ಲೇ ತಳವಾರ್‌ ಹಿಡಿದು ದಾಳಿ ಮಾಡಿದ್ದಾರೆ.

VISTARANEWS.COM


on

By

sandalwood theft
Koo

ಕೋಲಾರ : ಅರಣ್ಯ ಪ್ರದೇಶದಲ್ಲಿ ಶ್ರೀಗಂಧವನ್ನು ಕದಿಯಲು (Sandalwood theft) ಬಂದವನು ಅರಣ್ಯ ಇಲಾಖೆ ಸಿಬ್ಬಂದಿಯಿಂದ ಗುಂಡೇಟು ತಿಂದಿದ್ದಾನೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕಾಶಿಪುರ ಅರಣ್ಯ ಪ್ರದೇಶದಲ್ಲಿ (Kashipura Forest) ಘಟನೆ ನಡೆದಿದೆ.

ತಾಯಲೂರು ಗ್ರಾಮದ ಭತ್ಯಪ್ಪ ಎಂಬಾತ ಕಾಲಿಗೆ ಗುಂಡು ತಗುಲಿದೆ. ಅರಣ್ಯ ಇಲಾಖೆ ರಕ್ಷಕ ಅನಿಲ್ ಗುಂಡು ಹಾರಿಸಿದ್ದಾರೆ. ಶ್ರೀಗಂಧ ಕಳ್ಳತನಕ್ಕೆ ಆಂಧ್ರಪ್ರದೇಶದ ಐದಾರು ಮಂದಿ ಜತೆಗೆ ಭತ್ಯಪ್ಪ ಬಂದಿದ್ದ. ಈ ವೇಳೆ ರಕ್ಷಕ ಅನಿಲ್ ಮೇಲೆ ಹಲ್ಲೆಗೆ ಮುಂದಾಗಿದ್ದ.

ರಕ್ಷಣೆಗಾಗಿ ಭತ್ಯಪ್ಪ ಹಾಗೂ ಮತ್ತೋರ್ವನಿಗೆ ಅರಣ್ಯ ಸಿಬ್ಬಂದಿ ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ ಭತ್ಯಪ್ಪ ಸಿಕ್ಕಿಬಿದ್ದರೆ ಉಳಿದವರು ಕಾಲ್ಕಿತ್ತಿದ್ದಾರೆ. ಗಾಯಾಳು ಭತ್ಯಪ್ಪಗೆ ಮುಳಬಾಗಿಲು ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ: Drowned In water : ರಭಸವಾಗಿ ಹರಿಯುತ್ತಿದ್ದ ನೀರಲ್ಲಿ ಈಜಲು ಹೋಗಿ ಕೊಚ್ಚಿ ಹೋದ ಮಾಜಿ ಸೈನಿಕ

ಕೋರ್ಟ್‌ ಆವರಣದಲ್ಲೇ ಡೆಡ್ಲಿ ಅಟ್ಯಾಕ್‌

ಕಲಬುರಗಿ ಕೋರ್ಟ್ ಆವರಣದಲ್ಲಿ ಸಿನಿಮೀಯ ಶೈಲಿಯಲ್ಲಿ ವ್ಯಕ್ತಿಯ ಬೆನ್ನತ್ತಿ ದುಷ್ಕರ್ಮಿಗಳು ತಲವಾರ್‌ನಿಂದ ದಾಳಿ ನಡೆಸಿದ್ದಾರೆ. ಧೀರಜ್ ಎಂಬಾತನ ಮೇಲೆ ತಲವಾರ್‌‌ನಿಂದ ದಾಳಿ ನಡೆಸಿದ್ದಾರೆ.

ತಲವಾರ್ ದಾಳಿಯಿಂದ ಧೀರಜ್‌ ಎಂಬಾತ ಗಾಯಗೊಂಡಿದ್ದು ಸ್ಥಳೀಯರು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಇತ್ತ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ ದುಷ್ಕರ್ಮಿಗಳನ್ನು ಸಾರ್ವಜನಿಕರು ಹಾಗೂ ವಕೀಲರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಘಟನೆ ಸಂಬಂಧ ಪ್ರಶಾಂತ್ ಪಾಟೀಲ್ (20), ವಿರೇಶ್ ಪಾಟೀಲ್ (19), ರಾಮು ಪಾಟೀಲ್ (38) ಈ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಕಲಬುರಗಿ ನಗರದ ಬಾಪುನಗರ ಬಡಾವಣೆಯ ನಿವಾಸಿಗಳು ಎನ್ನಲಾಗಿದೆ. ವೈಯುಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದೇಶ

Drowned In water : ರಭಸವಾಗಿ ಹರಿಯುತ್ತಿದ್ದ ನೀರಲ್ಲಿ ಈಜಲು ಹೋಗಿ ಕೊಚ್ಚಿ ಹೋದ ಮಾಜಿ ಸೈನಿಕ

Drowned In water ; ಮೊನ್ನೆ ಮೊನ್ನೆಯಷ್ಟೇ ಲೊನಾವನಾದಲ್ಲಿ ಐದು ಮಂದಿ ಕೊಚ್ಚಿ ಹೋಗಿದ್ದರು. ಈ ಘಟನೆ ಮಾಸುವ ಮುನ್ನವೇ ತಮ್ಹಿನಿ ಘಾಟ್‌ನಲ್ಲಿ ರಭಸವಾಗಿ ಹರಿಯುತ್ತಿದ್ದ ನೀರಲ್ಲಿ ಈಜಲು ಹೋಗಿ ಮಾಜಿ ಸೈನಿಕ ಕೊಚ್ಚಿ ಹೋಗಿದ್ದಾರೆ.

VISTARANEWS.COM


on

By

Drowned in water
Koo

ಮಹಾರಾಷ್ಟ್ರ: ಮಹಾರಾಷ್ಟ್ರದಲ್ಲಿ ಪದೆಪದೇ ಅವಘಡಗಳು ಮರುಕಳಿಸುತ್ತಿವೆ. ತುಂಬಿ ಹರಿಯುವ ಹಳ್ಳಕ್ಕೆ ಹಾರಿದ ವ್ಯಕ್ತಿ ಶವವಾಗಿದ್ದಾರೆ. ಮಹಾರಾಷ್ಟ್ರದ ತಮ್ಹಿನಿ ಘಾಟ್‌ನಲ್ಲಿ ಈ ದುರ್ಘಟನೆ (Drowned In water ) ನಡೆದಿದೆ.

ರಭಸವಾಗಿ ಹರಿಯುತ್ತಿದ್ದ ನೀರಲ್ಲಿ ಈಜಲು ಹೋಗಿ ಮಾಜಿ ಸೈನಿಕರೊಬ್ಬರು ಕೊಚ್ಚಿ ಹೋಗಿದ್ದಾರೆ. ಈ ದೃಶ್ಯವು ಮೊಬೈಲ್‌ನಲ್ಲಿ ಸೆರೆಯಾಗಿದ್ದು, ನೋಡನೋಡುತ್ತಿದ್ದಂತೆ ವ್ಯಕ್ತಿ ಜಲಸಮಾಧಿಯಾಗಿದ್ದಾರೆ. ಸುಮಾರು 20 ಜನರ ತಂಡ ಟ್ರಕ್ಕಿಂಗ್‌ ಹೋಗಿದ್ದರು. ಈ ವೇಳೆ ತುಂಬಿ ಹರಿವ ಹಳ್ಳಕ್ಕೆ ಜಿಗಿದ ಮಾಜಿ ಸೈನಿಕ ಸಾಹಸ ತೋರಿಸಲು ಹೋಗಿ ನೀರಲ್ಲಿ ಕೊಚ್ಚಿ ಹೋಗಿದ್ದಾನೆ.

ಮಹಾರಾಷ್ಟ್ರದ ಲೊನಾವನಾ ಘಟನೆ ಮಾಸುವ ಮುನ್ನವೇ ಮತ್ತೊಂದು ದುರ್ಘಟನೆ ನಡೆದಿದೆ. ಈಜಿ ಬರುವ ವಿಶ್ವಾಸ ತೋರಿದು ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದಾರೆ. ಸದ್ಯ ನೀರಿನಲ್ಲಿ ಕೊಚ್ಚಿ ಹೋಗುವ ದೃಶ್ಯ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ: Allahabad High Court: ಮತಾಂತರ ತಡೆಯದಿದ್ದರೆ ಬಹುಸಂಖ್ಯಾತರು ಅಲ್ಪಸಂಖ್ಯಾತರಾಗಬಹುದು; ಅಲಹಾಬಾದ್ ಹೈಕೋರ್ಟ್ ಕಳವಳ

ಕಾಳಮ್ಮವಾಡಿ ಜಲಾಶಯದಲ್ಲಿ ನಿಪ್ಪಾಣಿ ಯುವಕರು ಕಣ್ಮರೆ

ಮಹಾರಾಷ್ಟ್ರದ ಕಾಳಮ್ಮವಾಡಿ ಜಲಾಶಯದಲ್ಲಿ ನಿಪ್ಪಾಣಿ ಯುವಕರು ಕಣ್ಮರೆ ಆದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನ ಶವ ಪತ್ತೆಯಾಗಿದ್ದು, ಇನ್ನೊಬ್ಬನಿಗಾಗಿ ಹುಡುಕಾಟ ಮುಂದುವರಿದಿದೆ. ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯಲ್ಲಿರುವ ಕಾಳಮ್ಮವಾಡಿ ಜಲಾಶಯಕ್ಕೆ ನಿನ್ನೆ ನಿಪ್ಪಾಣಿಯಿಂದ ಪ್ರವಾಸಕ್ಕೆಂದು 13 ಜನರ ಯುವಕರ ತಂಡ ತೆರಳಿದ್ದರು. ಈ ವೇಳೆ ಕಾಳಮ್ಮವಾಡಿ ಜಲಾಶಯದಲ್ಲಿ ಇಬ್ಬರು ನೀರಿನಲ್ಲಿ ಕಣ್ಮರೆಯಾಗಿದ್ದರು. ನಿಪ್ಪಾಣಿಯ ಗಣೇಶ ಕದಮ್ ಪ್ರತೀಕ್ ಪಾಟೀಲ್ ಇಬ್ಬರು ಕಣ್ಮರೆಯಾಗಿದ್ದರು. ಪ್ರತಿಕ ಪಾಟೀಲ್ ಶವವಾಗಿ ಪತ್ತೆಯಾದರೆ, ಗಣೇಶ್ ಕದಮ್‌ಗಾಗಿ ಶೋಧ ಕಾರ್ಯ ಮುಂದುವರಿದಿದೆ. ಸ್ಥಳದಲ್ಲಿ ಎನ್ ಡಿ ಆರ್ ಎಫ್ ಹಾಗೂ ಕೊಲ್ಹಾಪುರ ಪೊಲೀಸ್ ಸಿಬ್ಬಂದಿ ಬೀಡು ಬಿಟ್ಟಿದ್ದಾರೆ.

ನೀರಲ್ಲಿ ಕೊಚ್ಚಿ ಹೋದವರ ಶವ ಪತ್ತೆ

ಭಾನುವಾರ ಮಹಾರಾಷ್ಟ್ರದ ಲೋನಾವಲಾ ಬಳಿ ದಿಢೀರ್ ಪ್ರವಾಹಕ್ಕೆ ನೋಡನೋಡುತ್ತಿದ್ದಂತೆ ಐವರು ಕೊಚ್ಚಿ ಹೋಗಿದ್ದರು. ಪುಣೆಯ ಅನ್ಸಾರಿ ಕುಟುಂಬದ ನಾಲ್ವರು ಮಕ್ಕಳು ಸೇರಿ ಓರ್ವ ‌ಮಹಿಳೆ‌ ನೀರುಪಾಲಾಗಿದ್ದರು. ನಿರಂತರ ಕಾರ್ಯಾಚರಣೆ ನಡೆಸಿದ ಎನ್‌ಆರ್‌ಎಫ್‌ ತಂಡ ಮೂವರ ಶವ ಹೊರ ತೆಗೆದಿತ್ತು. ನೀರಲ್ಲಿ ಕಣ್ಮರೆಯಾಗಿರುವ ಇನ್ನಿಬ್ಬರಿಗಾಗಿ ನಿರಂತರ ಶೋಧ ಕಾರ್ಯ ನಡೆಸಿತ್ತ. ಅದರಲ್ಲಿ ಒಬ್ಬನ ಮೃತದೇಹವು ಮಂಗಳವಾರ ಸಿಕ್ಕಿದ್ದು, ಮತ್ತೊಬ್ಬ ಶವಕ್ಕೆ ಹುಡುಕಾಟ ನಡೆಸಿದ್ದಾರೆ. ಸ್ಥಳದಲ್ಲಿಯೇ ಪೊಲೀಸರು ಹಾಗೂ ಅಗ್ನಿಶಾಮಕ ದಳ ಬೀಡು ಬಿಟ್ಟಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

MUDA site scandal: ಮುಡಾ ನಿವೇಶನ ಹಗರಣ; ಸಿಎಂ ಹೆಂಡತಿ ಯಾಕೆ ಅಕ್ರಮ ಮಾಡುತ್ತಾರೆ ಎಂದ ಡಿಕೆಶಿ!

MUDA site scandal: ಮೈಸೂರು ಮುಡಾದಲ್ಲಿ ಅಕ್ರಮ ಆರೋಪಗಳ ಬಗ್ಗೆ ಚನ್ನಪಟ್ಟಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಜಮೀನು ಸ್ವಾಧೀನವಾಗಿತ್ತು, ಅದಕ್ಕೆ ಪರ್ಯಾಯವಾಗಿ ಸೈಟ್‌ ನೀಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

VISTARANEWS.COM


on

MUDA site scandal
Koo

ರಾಮನಗರ: ಬಿಜೆಪಿ ಸರ್ಕಾರ ಅವಧಿಯಲ್ಲೇ ಸಿಎಂ ಹೆಂಡತಿಯವರ ಜಮೀನು ಸ್ವಾಧೀನ ಆಗಿದೆ. ಅವರು ಡಿನೋಟಿಫಿಕೇಷನ್ ಮಾಡಿಕೊಂಡಿಲ್ಲ. ಸಿಎಂ ಹೆಂಡತಿ ಯಾಕೆ ಅಕ್ರಮ (MUDA site scandal) ಮಾಡುತ್ತಾರೆ. ಅವರ ಆಸ್ತಿ ಇತ್ತು, ಅದು ಹೋಗಿದೆ. ಪರ್ಯಾಯ ಸೈಟ್ ಕೊಡಬೇಕು, ಕೊಟ್ಟಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಮೈಸೂರು ಮುಡಾದಲ್ಲಿ ಅಕ್ರಮ ಆರೋಪಗಳ ಬಗ್ಗೆ ಚನ್ನಪಟ್ಟಣದಲ್ಲಿ ಪ್ರತಿಕ್ರಿಯಿಸಿ, ಅವರ ಜಮೀನು ಪಡೆದ ಹಿನ್ನೆಲೆಯಲ್ಲಿ ಇನ್ಸೆಂಟೀವ್ ಸ್ಕೀಮ್ ಅಡಿ ಮುಡಾ ಸೈಟ್‌ ನೀಡಿದೆ. ಡಿನೋಟಿಫೈ ಮಾಡದೆ ಇನ್ಸೆಂಟಿವ್ ತಗೊಂಡಿರೊದ್ದಕ್ಕೆ ಖುಷಿ ಪಡಬೇಕು. ಅವರು ಅರ್ಹರಿದ್ದಾರೆ, ತೆಗೆದುಕೊಂಡಿದ್ದಾರೆ. ಇದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ್ದಾರೆ.

ನಾಲ್ವರು ಅಧಿಕಾರಿಗಳ ಸಸ್ಪೆಂಡ್ ವಿಚಾರಕ್ಕೆ ಪ್ರತಿಕ್ರಿಯಿಸಿ, ನಮ್ಮ ಮುಖ್ಯಮಂತ್ರಿಗಳು ಭ್ರಷ್ಟಾಚಾರ ವಿರುದ್ಧವಾಗಿ ಕಠಿಣವಾಗಿ ಇರುತ್ತಾರೆ. ಯಾರೆ ತಪ್ಪು ಮಾಡಿದರೂ ಶಿಕ್ಷೆ ಆಗಬೇಕು, ತನಿಖೆ ಆಗಬೇಕು ಅಂತ ಹೇಳಿದ್ದಾರೆ. ಭ್ರಷ್ಟಾಚಾರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತಾರೆ. ನನಗೂ ಆ ನಾಗೇಂದ್ರ ವಿಚಾರದಲ್ಲಿ ಡೌಟ್ ಇತ್ತು. ಈ ಬಗ್ಗೆ ವಿಚಾರಿಸಿದಾಗ ನಮ್ಮ ಮಂತ್ರಿಗಳು ಅದರಲ್ಲಿ ಭಾಗಿಯಾಗಿಲ್ಲ ಎಂಬುವುದು ತಿಳಿದುಬಂದಿದೆ ಎಂದರು.

ಬೇರೆ ಯಾರೂ ಅಕ್ರಮ ಮಾಡಿಲ್ಲ ಅಂತ ಹೇಳೋದಿಲ್ಲ. ಆದರೆ ಮಿನಿಸ್ಟರ್ಸ್‌ ಯಾರೂ ಭಾಗಿಯಾಗಿಲ್ಲ. ಆ ವಿಚಾರದಲ್ಲಿ ನನಗೆ ಸಮಾಧಾನ ಇದೆ. ಅವಶ್ಯಕತೆ ಇದ್ದರೆ ಎಲ್ಲರನ್ನೂ ವಿಚಾರಣೆ ಮಾಡುತ್ತಾರೆ‌, ಎಷ್ಟೋ ಸಲ ನಮ್ಮನ್ನೇ ವಿಚಾರಿಸಿಲ್ಲವೇ ಎಂದು ಹೇಳಿದರು.

ಇದನ್ನೂ ಓದಿ | Karnataka CM: ಸಿದ್ದು- ಡಿಕೆಶಿ ಇಬ್ಬರ ಜಗಳ ಮೂರನೆಯವರಿಗೆ ಲಾಭ? ಆ ಮೂರನೆಯವರು ಇವರೇ!

ಸಿಎಂ, ಡಿಸಿಎಂ ಬದಲಾವಣೆ ಬಗ್ಗೆ ಯಾರೂ ಚರ್ಚೆ ಮಾಡದಂತೆ ಕೈ ನಾಯಕರಿಗೆ ಸೂಚನೆ ನೀಡಿದ್ದೀರಿ ಎಂಬ ಪ್ರಶ್ನೆ ಕೇಳುತ್ತಿದ್ದಂತೆ ಉತ್ತರಿಸದೆ ಡಿಸಿಎಂ ನಿರ್ಗಮಿಸಿದರು.

ಪತ್ನಿಗೆ ಕಾನೂನು ಪ್ರಕಾರವೇ ಮುಡಾ ಸೈಟ್‌; ಬಿಜೆಪಿ ಕಾಲದಲ್ಲೇ ನೀಡಲಾಗಿತ್ತು ಎಂದ ಸಿದ್ದರಾಮಯ್ಯ

MUDA site Cm Siddaramaiah says his wife was given MUDA site during BJP regimescandal

ಬೆಂಗಳೂರು: ಮೈಸೂರಿನಲ್ಲಿ ಮುಡಾ ನಿವೇಶನ ಹಂಚಿಕೆ ಹಗರಣದ ಬಗ್ಗೆ ತನಿಖೆಗೆ ರಾಜ್ಯ ಸರ್ಕಾರದ ಆದೇಶ ನೀಡಿದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರ ಪತ್ನಿಗೂ ಮುಡಾ ಸೈಟ್‌ (MUDA site scandal) ಹಂಚಿಕೆಯಾಗಿದೆ ಎಂಬ ವಿಷಯ ತಿಳಿದುಬಂದಿದೆ. ಪತ್ನಿಗೆ ನೀಡಿರುವ 50:50 ಅನುಪಾತದ ನಿವೇಶನಗಳ ಬಗ್ಗೆ ಅಕ್ರಮ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಸಿಎಂ ಪತ್ನಿ ಪಾರ್ವತಿ ಅವರ ಹೆಸರಿನಲ್ಲಿ ಇದ್ದ ಜಾಗವನ್ನು 1997ರಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ವಶಕ್ಕೆ ಪಡೆದು, ಆ ಭೂಮಿಗೆ 2021ರಲ್ಲಿ ಪರಿಹಾರ ಕೊಟ್ಟಿತ್ತು ಎನ್ನಲಾಗಿದೆ. ಈ ಬಗ್ಗೆ ನಗರದಲ್ಲಿ ಮಂಗಳವಾರ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಅವರು, ನಿವೇಶನ ಹಂಚಿಕೆ ಬಿಜೆಪಿಯವರ ಕಾಲದಲ್ಲಿ ಆಗಿದ್ದು, ನನ್ನ ಹೆಂಡತಿಗೆ ಈ ಹಿಂದೆಯೇ ಸೈಟ್ ಹಂಚಲಾಗಿತ್ತು. 3 ಎಕರೆ 16 ಗುಂಟೆ ಜಮೀನು ನನ್ನ ಹೆಂಡತಿ ಹೆಸರಲ್ಲಿತ್ತು. ನನ್ನ ಬಾಮೈದ ತೆಗೆದಕೊಂಡಿದ್ದ ಜಾಗವನ್ನು ನನ್ನ ಹೆಂಡತಿಗೆ ದಾನ ಕೊಟ್ಟಿದ್ದ. ಅದನ್ನು ನಾನು ಅಧಿಕಾರದಲ್ಲಿ ಇದ್ದಾಗ ಖರೀದಿ ಮಾಡಿರಲಿಲ್ಲ‌. ಕಾನೂನಿನ ಪ್ರಕಾರವೇ ನಮಗೆ ಸೈಟ್‌ ಹಂಚಿದ್ದಾರೆ ಎಂದು ತಿಳಿಸಿದ್ದಾರೆ.

ಕಾನೂನು ಪ್ರಕಾರವೇ ನಮಗೆ 50:50 ನಿವೇಶನ ಕೊಡುವುದಾಗಿ ಮುಡಾದವರು ಹೇಳಿದ್ದರು. ಮಲ್ಲಿಕಾರ್ಜುನ್ ಎಂಬ ನನ್ನ ಬಾಮೈದ ಹರಿಶನ ಕುಂಕುಮ ಕೊಡುವಾಗ ನನ್ನ ಪತ್ನಿಗೆ ಗಿಫ್ಟ್ ಕೊಟ್ಟಿದ್ದ. ಆದರೆ ಅದನ್ನು ಮುಡಾದವರು ಸೈಟ್ ಮಾಡಿ ಹಂಚಿಬಿಟ್ಟರು. ಬಳಿಕ ನಮಗೆ ಜಮೀನು ಇಲ್ಲದಂತಾಯಿತು. ಅದಕ್ಕೆ ಮುಡಾದವರು ಬೇರೆ ಕಡೆ 50:50 ಸೈಟ್‌ ಕೊಟ್ಟಿದ್ದಾರೆ, ಇದು ತಪ್ಪಾ ಎಂದು ಸಿಎಂ ಪ್ರಶ್ನಿಸಿದ್ದಾರೆ.

Continue Reading
Advertisement
Narendra Modi
ದೇಶ4 mins ago

Narendra Modi: ಅಂಬೇಡ್ಕರ್‌ರನ್ನು ಷಡ್ಯಂತ್ರದಿಂದ ಸೋಲಿಸಿದ ನೆಹರೂ; ಕಾಂಗ್ರೆಸ್‌ನಿಂದ ದಲಿತರ ಶೋಷಣೆ ಎಂದ ಮೋದಿ

Pourakarmikas
ಕರ್ನಾಟಕ6 mins ago

Pourakarmikas: ಪೌರ ಕಾರ್ಮಿಕರಿಗೆ ಗುಡ್‌ ನ್ಯೂಸ್; ವಾರಕ್ಕೆ ಒಂದು ದಿನ ರಜೆ ನೀಡಿದ ಸರ್ಕಾರ

Super Computers
ಪ್ರಮುಖ ಸುದ್ದಿ9 mins ago

Super Computers : ಜಾಗತಿಕ ನಾಯಕತ್ವಕ್ಕಾಗಿ ಭಾರತದಲ್ಲೇ ತಯಾರಾಗುತ್ತಿದೆ ಸೂಪರ್ ಕಂಪ್ಯೂಟರ್​

sandalwood theft
ಕ್ರೈಂ11 mins ago

Sandalwood theft : ಶ್ರೀಗಂಧ ಕದಿಯಲು ಬಂದನಿಗೆ ಗುಂಡೇಟು;‌ ಮತ್ತೊಬ್ಬ ಗಾಯಾಳು ಸೇರಿ ಹಲವರು ಪರಾರಿ

Narendra Modi
ದೇಶ19 mins ago

Narendra Modi: ರಾಹುಲ್‌ ಗಾಂಧಿಯನ್ನು ‘ಬಾಲ ಬುದ್ಧಿಯವನು’‌ ಎಂದ ಮೋದಿ; ಅವರು ಹೇಳಿದ ‘ಸೈಕಲ್‌ ಕತೆ’ಯೂ ಇಲ್ಲಿದೆ!

Gold Smuggling
Latest32 mins ago

Gold Smuggling: ಏರ್‌ಪೋರ್ಟ್‌ನಲ್ಲಿ 267 ಕೆಜಿ ಚಿನ್ನ ಸಾಗಣೆ; ಯೂಟ್ಯೂಬರ್‌ ಸೇರಿ ಹಲವರ ಸೆರೆ

Narendra Modi
ದೇಶ47 mins ago

Narendra Modi: ದೇಶದ ಜನ ನಮ್ಮನ್ನು ಮೂರನೇ ಬಾರಿ ಗೆಲ್ಲಿಸಿದ್ದಾರೆ, ಕಾಂಗ್ರೆಸ್‌ಗೆ ನೂರು ಸ್ಥಾನ ಗೆಲ್ಲುವ ಯೋಗ್ಯತೆಯೂ ಇಲ್ಲ; ರಾಹುಲ್‌ಗೆ ಮೋದಿ ಗೇಲಿ

Uttar Pradesh stampede
ದೇಶ1 hour ago

Uttar Pradesh stampede : ಉತ್ತರ ಪ್ರದೇಶದ ಹತ್ರಾಸ್​​ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ; 27 ಕ್ಕೂ ಹೆಚ್ಚು ಸಾವು

Drowned in water
ದೇಶ1 hour ago

Drowned In water : ರಭಸವಾಗಿ ಹರಿಯುತ್ತಿದ್ದ ನೀರಲ್ಲಿ ಈಜಲು ಹೋಗಿ ಕೊಚ್ಚಿ ಹೋದ ಮಾಜಿ ಸೈನಿಕ

Rahul Dravid
ಕ್ರೀಡೆ1 hour ago

Rahul Dravid: ನಾನು ನಿರುದ್ಯೋಗಿ, ಎಲ್ಲಾದರೂ ಕೆಲಸ ಇದ್ದರೆ ಹೇಳಿ ಎಂದ ರಾಹುಲ್​ ದ್ರಾವಿಡ್​; ವಿಡಿಯೊ ವೈರಲ್​

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ24 hours ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ2 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು2 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ3 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ3 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ4 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು5 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

ಟ್ರೆಂಡಿಂಗ್‌