BKS Varma Death News : ದೇವರನ್ನೇ ಧರೆಗಿಳಿಸಿದ ದೈವದತ್ತ ಪ್ರತಿಭೆ ಬಿ.ಕೆ.ಎಸ್‌ ವರ್ಮಾ; ವರ್ಮ ಸರ್‌ನೇಮ್‌ ಬಂದಿದ್ದು ಹೇಗೆ? - Vistara News

ಕರ್ನಾಟಕ

BKS Varma Death News : ದೇವರನ್ನೇ ಧರೆಗಿಳಿಸಿದ ದೈವದತ್ತ ಪ್ರತಿಭೆ ಬಿ.ಕೆ.ಎಸ್‌ ವರ್ಮಾ; ವರ್ಮ ಸರ್‌ನೇಮ್‌ ಬಂದಿದ್ದು ಹೇಗೆ?

ಬಿಕೆಎಸ್‌ ವರ್ಮ ಅವರದು ದೈವದತ್ತ ಪ್ರತಿಭೆ. ಕುಂಚ ಹಿಡಿದರೆ ದೇವರನ್ನೇ ಧರೆಗಿಳಿಸುವ ತಾಕತ್ತು ಹೊಂದಿದ್ದ ಅವರು ಅದಕ್ಕಷ್ಟೇ ಸೀಮಿತರಾಗದೆ ಬಹುಮುಖ ಸಾಧಕರಾಗಿ ಗಮನ ಸೆಳೆದರು.

VISTARANEWS.COM


on

BKS Varma
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಅವರು ಕುಂಚ ಹಿಡಿದರೆಂದರೆ ದೇವರೇ ಧರೆಗಿಳಿಯುತ್ತಾರೆ. ಭಕ್ತರ ಮುಂದೆ ದರ್ಶನ ಕೊಡುತ್ತಾರೆ! ಹೌದು, ನಾವು ಕಣ್ಮುಚ್ಚಿ ದೇವರನ್ನು ನೆನಪಿಸಿಕೊಂಡರೆ ಕಾಣಿಸುವ ಹಲವಾರು ದೇವರುಗಳು ಇವರದೇ ಸೃಷ್ಟಿ. ರಾಘವೇಂದ್ರ ಯತಿಗಳಿರಬಹುದು, ಗಣಪತಿ ಇರಬಹುದು ನಾವು ಕಲ್ಪಿಸಿಕೊಳ್ಳುವ ಚಿತ್ರಗಳು ಇವರೇ ಚಿತ್ರಿಸಿದ್ದು. ಬುಕ್ಕಸಾಗರ ಕೃಷ್ಣಯ್ಯ ಶ್ರೀನಿವಾಸ ಎಂಬ ಮೂಲ ಹೆಸರಿನ ಸಾಮಾನ್ಯ ವ್ಯಕ್ತಿಯೊಬ್ಬರು ಬಿ.ಕೆ.ಎಸ್‌. ವರ್ಮಾ (BKS Varma Death News) ಎಂಬ ಮಹಾ ಕಲಾವಿದನೇ ಈ ರೀತಿ ದೇವರನ್ನು ಜನರ ಬಳಿಗೆ ಕರೆತಂದವರು. ಅವರು ಚಿತ್ರಿಸಿದ ತಾಯಿ ಭುವನೇಶ್ವರಿ ಚಿತ್ರವೇ ಇವತ್ತಿನ ಅಧಿಕೃತ ಭುವನೇಶ್ವರಿ ಕಲಾಕೃತಿಯಾಗಿದೆ.

ಸೋಮವಾರ ನಿಧನರಾದ ಅಪ್ರತಿಮ ಕಲಾವಿದ ಬಿ.ಕೆ.ಎಸ್‌ ವರ್ಮಾ ಅವರು ಹುಟ್ಟಿದ್ದು ಬೆಂಗಳೂರು ಹೊರವಲಯದ ಅತ್ತಿಬೆಲೆ ತಾಲೂಕಿನ ಕರ್ನೂರಿನಲ್ಲಿ. 1949ರ ಸೆಪ್ಟೆಂಬರ್‌ ೫ರಂದು. ಅವರ ತಾಯಿ ಜಯಲಕ್ಷ್ಮಿ ಅವರು ಚಿತ್ರ ಕಲಾವಿದೆ. ತಂದೆ ಕೃಷ್ಣಮಾಚಾರ್ಯ ಅವರು ಸಂಗೀತಗಾರರು. ಅಮ್ಮ ಬರೆಯುವ ಚಿತ್ರಗಳನ್ನು ನೋಡುತ್ತಲೇ ಆರನೇ ವಯಸ್ಸಿಗೇ ಕುಂಚ ಹಿಡಿದಿತ್ತು ಕೃಷ್ಣಯ್ಯ ಎಂಬ ಮಗು. ಮುಂದೆ ೧೯೬೨ರಿಂದ ೬೮ರವರೆಗೆ ಬೆಂಗಳೂರಿನ ಕಲಾಮಂದಿರದ ಎ.ಎನ್‌. ಸುಬ್ಬರಾವ್‌ ಅವರಿಂದ ಚಿತ್ರಕಲೆ ಮತ್ತು ದೇವನಹಳ್ಳಿ ಖ್ಯಾತ ಶಿಲ್ಪಿ ಎ.ಸಿ.ಎಚ್‌. ಆಚಾರ್ಯ ಅವರಿಂದ ಶಿಲ್ಪ ಕಲೆಯನ್ನು ಕಲಿತರು.

BKS Varma Death

ವರ್ಮ ಆಗಿದ್ದು ಹೇಗೆ?
ಚಿತ್ರಕಲಾವಿದರಾಗಿ ಸಣ್ಣ ವಯಸ್ಸಿನಲ್ಲೇ ಗಮನ ಸೆಳೆದಿದ್ದ ಕೃಷ್ಣಯ್ಯ ಅವರು ಒಮ್ಮೆ ‘ಮೈಸೂರಿನ ಜಗನ್ಮೋಹನ ಅರಮನೆ’ಯಲ್ಲಿ ರಾಜಾ ರವಿವರ್ಮ ಅವರ ಚಿತ್ರಗಳನ್ನು ನೋಡುತ್ತಿದ್ದಾಗ ಅದೇ ರೀತಿಯ ಚಿತ್ರಗಳನ್ನು ತಾನೂ ಬಿಡಿಸಬೇಕು ಎಂಬ ನಿರ್ಧಾರಕ್ಕೆ ಬಂದರಂತೆ. ಮಾತ್ರವಲ್ಲ ವರ್ಮ ಎಂಬ ಸರ್‌ನೇಮನ್ನೂ ಜೋಡಿಸಿಕೊಂಡರು. ಈ ರೀತಿ ಬುಕ್ಕಸಾಗರ ಕೃಷ್ಣಯ್ಯ ಶ್ರೀನಿವಾಸ ಅವರು ಬಿ.ಕೆ.ಎಸ್‌. ವರ್ಮ ಆದ ಬಳಿಕ ಚಿತ್ರ ಕಲಾ ಜೀವನವೇ ಬದಲಾಸಿತಂತೆ.

ನೃತ್ಯ ಗಾನ ಕುಂಚ ವೈಭವದ ಸೃಷ್ಟಿಕರ್ತ
ಬಿಕೆಎಸ್‌ ವರ್ಮ ಅವರು ಅತ್ಯದ್ಭುತ ಚಿತ್ರಗಳನ್ನು ಬರೆದಿರುವ ಮಹಾಸಾಧಕ ಎನ್ನುವುದು ಒಂದು ಕಡೆ, ಅದೇ ಹೊತ್ತಿಗೆ ಅವರು ಕೇವಲ ಎರಡೇ ನಿಮಿಷಗಳಲ್ಲಿ ಚಿತ್ರಗಳನ್ನು ಬರೆಯಬಲ್ಲ ಅತಿವೇಗದ ಚಿತ್ರ ಕಲಾವಿದರು ಅವರು. ಈಗ ತಾಂತ್ರಿಕತೆಯನ್ನು ಬಳಸಿಕೊಂಡು ವೇಗದ ಚಿತ್ರಗಳನ್ನು ಮಾಡುತ್ತಿದ್ದರೆ ಹಲವು ದಶಕಗಳಷ್ಟು ಹಿಂದೆಯೇ ವೇಗದ ಚಿತ್ರಕ್ಕೆ ಹೆಸರಾಗಿದ್ದರು ವರ್ಮ. ನೃತ್ಯ ಗಾನ ಕುಂಚ ಅಂದರೆ ಹಾಡು ಹೇಳುವಾಗ, ಒಬ್ಬರು ಒಂದು ಕಡೆ ನೃತ್ಯ ಮಾಡುವುದು, ಇನ್ನೊಬ್ಬರು ಚಿತ್ರ ಬಿಡಿಸುವ ಅತಿ ವಿಶಿಷ್ಟ ಪರಿಕಲ್ಪನೆಯನ್ನು ಹಲವು ದಶಕಗಳ ಹಿಂದೆಯೇ ಸೃಷ್ಟಿ ಮಾಡಿದವರು ವರ್ಮ. ಕೆಲವೇ ನಿಮಿಷಗಳ ಅವಧಿಯಲ್ಲಿ ಅದ್ಭುತ ಕಲಾಕೃತಿಯೊಂದು ವರ್ಮ ಕುಂಚದಲ್ಲಿ ಸೃಷ್ಟಿಯಾಗುತ್ತಿತ್ತು. ಶತಾವಧಾನಿ ಆರ್‌. ಗಣೇಶ್‌ ಶ್ರೀ ಶತಾವಧಾನಿ ಗಣೇಶ್ ಅವರೊಂದಿಗೆ ಸೇರಿ ಸಾವಿರಕ್ಕೂ ಹೆಚ್ಚು ಕಾವ್ಯ-ಚಿತ್ರಗಳನ್ನು ಬಿಡಿಸುವ ಕಾರ್ಯಕ್ರಮಗಳನ್ನು ನೀಡಿದ್ದಾರೆ. ಆರ್‌. ಗಣೇಶ್‌ ಜತೆ ಸೇರಿ ಸತತ ೨೪ ಗಂಟೆಗಳ ಕಾಲ ಕಾವ್ಯ ಚಿತ್ರ ಮಾಲಿಕೆಯನ್ನು ಕಟ್ಟಿದ್ದು ಅವರ ಇನ್ನೊಂದು ವಿಶೇಷ.

ಕಲಾವಿದರ ಭೇಟಿಗಾಗಿಯೇ ದೇಶ ಸುತ್ತಿದರು!
ಕಲಾಮಂದಿರದಲ್ಲಿ ವಿದ್ಯಾರ್ಥಿಯಾಗಿದ್ದಾಗ ಬಿ.ಕೆ.ಎಸ್‌ ವರ್ಮ ಅವರು ಇಡೀ ದೇಶವನ್ನು ಎರಡು ಬಾರಿ ಸುತ್ತಿದ್ದರು. ಅವರ ಉದ್ದೇಶ ಗಣ್ಯ ವ್ಯಕ್ತಿಗಳು, ಮಹಾ ಕಲಾವಿದರು, ಅದ್ಭುತ ತಾಣಗಳನ್ನು ಭೇಟಿಯಾಗುವುದಾಗಿತ್ತು. ಆ ತಿರುಗಾಟದಲ್ಲಿ ಅವರು ಮಾಜಿ ರಾಷ್ಟ್ರಪತಿ ಡಾ. ಸರ್ವೇಪಲ್ಲಿ ರಾಧಾಕೃಷ್ಣ, ಕಲಾವಿದರಾದ ದೇವಿಪ್ರಸಾದ್‌ ರಾಯ್‌ ಚೌಧರಿ, ಜೆಮಿನಿ ರಾಯ್‌, ನಂದಾಲ್‌ ಬೋಸ್‌, ಕೆ.ಕೆ. ಹೆಬ್ಬಾರ್‌, ಎಂ.ಎಫ್‌ ಹುಸೇನ್‌, ಪಣಿಕ್ಕರ್‌, ಸಾಹಿತಿಗಳಾದ ಕುವೆಂಪು, ಶಿವರಾಮ ಕಾರಂತ ಸೇರಿದಂತೆ ಹಲವರನ್ನು ಭೇಟಿಯಾದರು. ಅವರು ಅಜಂತಾಕ್ಕೆ ಹೋದರು, ಎಲ್ಲೋರಾಕ್ಕೆ ಹೋದರು, ದೇಶದ ನಾನಾ ಚಿತ್ರಕಲಾ ಗ್ಯಾಲರಿಗಳಿಗೆ ಭೇಟಿ ನೀಡಿದರು. ಅಲ್ಲಿ ಅವರಿಗೆ ಸಾಕಷ್ಟು ಅನುಭವ ಮತ್ತು ಜ್ಞಾನ ದೊರಕಿತು.

bks varma rajanikant
ರಜನೀಕಾಂತ್‌ ಬರೆಸಿದ ಚಿತ್ರ

ಚಿತ್ರ ಕಲಾವಿದರು ಮಾತ್ರವಲ್ಲ..

ಬಿ.ಕೆ.ಎಸ್‌. ವರ್ಮ ಅವರು ಕೇವಲ ಚಿತ್ರ ಕಲಾವಿದರು ಮಾತ್ರವಲ್ಲ, ಬ್ಲೇಡಿನಿಂದ, ಉಗುರಿನಿಂದ ಚಿತ್ರ ಬಿಡಿಸುತ್ತಿದ್ದರು. ಎಂಬಾಸಿಂಗ್, ಥ್ರೆಡ್‌ ಪೇಂಟಿಂಗ್ ಮೂಲಕ ಚಿತ್ರಗಳನ್ನು ಬಿಡಿಸಿ ಸಾಕಷ್ಟು ಜನಪ್ರಿಯರಾಗಿದ್ದರು. ತಮ್ಮ ಎರಡೂ ಕೈಗಳ ಬೆರೆಳುಗಳನ್ನೆ ಉಪಯೋಗಿಸಿ ಸುಂದರವಾದ ಚಿತ್ತಾರಗಳನ್ನು ಮೂಡಿಸುವ ಪರಿಯೇ ಅನನ್ಯ.

ಬಿ.ಕೆ.ಎಸ್‌. ವರ್ಮ ಅವರು ಬರೆದ ಚಿತ್ರಗಳನ್ನು ಕಂಡು ಖುಷಿಪಟ್ಟವರಲ್ಲಿ ಸೂಪರ್‌ ಸ್ಟಾರ್‌ ರಜನೀಕಾಂತ್‌, ಡಾ. ರಾಜ್‌ ಕುಮಾರ್‌, ಅಂತಾರಾಷ್ಟ್ರೀಯ ಕಲಾವಿದರಾದ ಡಾ. ರೋರಿಕ್‌ ಮತ್ತು ದೇವಿಕಾ ರಾಣಿ ದಂಪತಿ ಕೂಡಾ ಸೇರಿದ್ದಾರೆ. ರಜನೀಕಾಂತ್‌ ಅವರಂತೂ ತಮ್ಮ ಆರಾಧ್ಯ ದೈವ ರಾಘವೇಂದ್ರ ಯತಿಗಳ ಚಿತ್ರವನ್ನು ವರ್ಮಾ ಅವರ ಕೈಯಿಂದಲೇ ಬರೆಸಿಕೊಂಡಿದ್ದರು. ಬೆಂಗಳೂರಿನ ರಾಮಾಂಜನೇಯ ಗುಡ್ಡದ ಸೃಷ್ಟಿಯ ಹಿಂದೆ ವರ್ಮಾ ಅವರ ಕಲ್ಪನಾಶಕ್ತಿ ಇದೆ.

ವಿಶಿಷ್ಟ ಸಿದ್ಧಾಂತಗಳ ಮಹಾಸಾಧಕ
ಪ್ರಕೃತಿಯ ಆರಾಧಕರಾದ ವರ್ಮಾ ಅವರು ಪ್ರಕೃತಿ ಚಿತ್ರಗಳಿಗೂ ಪ್ರಸಿದ್ಧರು. ಅವರು ರೀಚ್‌ ಮತ್ತು ರಿಚ್‌ ಎನ್ನುವ ಪದಗಳನ್ನು ಹೆಣೆದು ತಮ್ಮ ಸಿದ್ಧಾಂತವನ್ನು ಮಂಡಿಸುತ್ತಿದ್ದ ರೀತಿಯೇ ವಿಶಿಷ್ಟ. ನಾನು ದುಡ್ಡಿನಿಂದ ರಿಚ್‌ ಆಗಬೇಕು ಎಂದು ಬಯಸಿಲ್ಲ. ಯಾವಾಗ ಅತಿ ಸಾಮಾನ್ಯರನ್ನೂ ರೀಚ್‌ ಆಗುತ್ತೀನೋ, ಆಗಲೇ ನಾನು ರಿಚ್‌ ಅಂದುಕೊಳ್ಳುತ್ತೇನೆ ಅನ್ನುತ್ತಿದ್ದರು. ʻʻಇದ್ದದ್ದು ಇದ್ದಹಾಗೆ ಬರೆಯೋದು Chart, ಅನುಭವಿಸಿ ಬರೆಯೋದು Artʼʼ ಎನ್ನುವುದು ಅವರ ಇನ್ನೊಂದು ನುಡಿಮುತ್ತು.

ಮಕ್ಕಳ ಮುಂದೆ ಮನದಣಿಯೆ ಕುಣಿಯುವ ಕವಿ!
ಚಿತ್ರಕಲೆಯ ಜತೆಗೆ ಕಾವ್ಯ ಶಕ್ತಿಯೂ ಅವರಿಗೆ ಒಲಿದಿದೆ. ತಮ್ಮ ಚಿತ್ತಾರಗಳ ಸೃಷ್ಟಿಲೋಕದಿಂದ ಸ್ವಲ್ಪಹೊರಗೆ ಬಂದಾಗ, ಅವರು ವಿಹರಿಸುವುದು, ಒಬ್ಬ ಕವಿಯಾಗಿ. ಮಕ್ಕಳ ಮುಂದೆ ಮನದಣಿಯೆ ಹಾಡುವುದು, ಕುಣಿಯುವುದು ಅವರ ಹವ್ಯಾಸವಾಗಿತ್ತು.

ಸಿನಿಮಾ ಲೋಕದಲ್ಲೂ ಸಾಧನೆ

ಮಲಯಾಳಿ ಭಾಷೆಯ ಚೆಮ್ಮೀನ್‌ ಎಂಬ ಸಿನಿಮಾವನ್ನು ೩೦ಕ್ಕೂ ಹೆಚ್ಚು ಬಾರಿ ವೀಕ್ಷಿಸಿದ್ದರಂತೆ ಬಿ.ಕೆ.ಎಸ್.‌ ವರ್ಮಾ. ಅವರು ೧೯೬೭ರಲ್ಲಿ ಬಾಲಿವುಡ್‌ ಸಿನಿಮಾ ಆದ್ಮಿಗೆ ಸಹಾಯಕ ಕಲಾ ನಿರ್ದೇಶಕರಾಗಿ ಕೆಲಸ ಮಾಡಿದ್ದರು. ಕನ್ನಡ ಚಿತ್ರಗಳಾದ ಬಂಗಾರದ ಜಿಂಕೆ, ನಿನಗಾಗಿ ನಾನು, ರಾಜೇಶ್ವರಿ ಮತ್ತು ಚದುರಿದ ಚಿತ್ರಗಳು ಸಿನಿಮಾಗಳ ಕಲಾ ನಿರ್ದೇಶಕರಾಗಿದ್ದರು.

ಪ್ರಕೃತಿಯ ಆರಾಧಕ

ಅವರಿಗೆ ಪ್ರಕೃತಿಯಲ್ಲಿ ಓಡಾಡುವುದು ತುಂಬ ಖುಷಿಯಂತೆ. ಅದರಲ್ಲೂ ಹಿಮವದ್‌ ಗೋಪಾಲಸ್ವಾಮಿಬೆಟ್ಟ, ಮಲೆನಾಡು ಇಷ್ಟದ ಜಾಗಗಳು. ಪತ್ನಿ ತಯಾರಿಸಿ ಬಡಿಸುವ ‘ಬಿಸಿಬೇಳೆ ಭಾತ್’ ಇಷ್ಟದ ಅಡುಗೆ, ಸದಾ ಡ್ರೈ ಫ್ರುಟ್ಸ್‌ ತಿನ್ನುವ ಆಸೆ ಅವರದು. ಬಸವನಗುಡಿಯ ‘ದೊಡ್ಡ ಗಣೇಶನ ದೇವಾಲಯ’ ಅವರಿಗೆ ಪ್ರಿಯವಾದ ಜಾಗವಂತೆ. ಇಂಥ ಸಾಧಕನಿಗೆ ಹಲವು ಪ್ರಶಸ್ತಿಗಳು ಒಲಿದಿವೆ. ಅವರ ಚಿತ್ರಗಳು ರಷ್ಯಾ ಉತ್ಸವದಲ್ಲಿ ಪ್ರದರ್ಶನ ಕಂಡಿವೆ. ಬೆಹರಿನ್‌, ಲಂಡನ್‌, ಅಮೆರಿಕ ಸೇರಿದಂತೆ ಹತ್ತಾರು ದೇಶ ಸುತ್ತಿದ ಅವರ ಕೈಗಳಲ್ಲಿ ಕುಂಚವಿದ್ದರೆ ಕಾಲಿನಲ್ಲಿ ಚಕ್ರವಿತ್ತು.

ಇದನ್ನೂ ಓದಿ : BKS Varma Death: ವರ್ಮಾ ಅವರದೇ ಒಂದು ವಿಶಿಷ್ಟ ಲೋಕ: ಸಹ ಕಲಾವಿದ ಪ.ಸ. ಕುಮಾರ್‌ ಮನದಾಳದ ಮಾತು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Prajwal Revanna Case: ನಿರೀಕ್ಷಣಾ ಜಾಮೀನು ಅರ್ಜಿ ಹಿಂಪಡೆದ ರೇವಣ್ಣ; ವಾಪಸ್‌ ಪಡೆಯಲು ಕೋರ್ಟ್‌ ಹೇಳಿದ್ದೇಕೆ?

Prajwal Revanna Case: ತಮಗೆ ನಿರೀಕ್ಷಣಾ ಜಾಮೀನು ನೀಡಬೇಕು ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಎಚ್.ಡಿ. ರೇವಣ್ಣ ಅವರು ಗುರುವಾರ ಅರ್ಜಿ ಸಲ್ಲಿಸಿದ್ದರು. ಎಸ್‌ಐಟಿಗೆ ಆಕ್ಷೇಪಣೆ ಸಲ್ಲಿಸಲು ಸೂಚಿಸಿ ಶುಕ್ರವಾರಕ್ಕೆ ವಿಚಾರಣೆಯನ್ನು ಮುಂದೂಡಲಾಗಿತ್ತು. ಶುಕ್ರವಾರ ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡ ಕೋರ್ಟ್‌, ವಾದ – ಪ್ರತಿವಾದವನ್ನು ಆಲಿಸಿ, ಅರ್ಜಿಯನ್ನು ಹಿಂಪಡೆಯುವಂತೆ ರೇವಣ್ಣ ಪರ ವಕೀಲರಿಗೆ ಸೂಚಿಸಿತು. ಈ ಹಿನ್ನೆಲೆಯಲ್ಲಿ ರೇವಣ್ಣ ಪರ ವಕೀಲರು ಅರ್ಜಿಯನ್ನು ಹಿಂಪಡೆದಿದ್ದಾರೆ.

VISTARANEWS.COM


on

Prajwal Revanna Case Revanna withdraws anticipatory bail plea
Koo

ಬೆಂಗಳೂರು: ಹಾಸನ ಸಂಸದ (Hassan MP), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna Case) ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಪ್ರಮುಖ ಆರೋಪಿಯಾಗಿರುವ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರು ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್‌ ಸೂಚನೆ ಮೇರೆಗೆ ವಾಪಸ್‌ ಪಡೆದುಕೊಂಡಿದ್ದಾರೆ. ಅವರಿಗೆ ಸದ್ಯಕ್ಕೆ ಯಾವುದೇ ರೀತಿಯಾದಂತಹ ಬಂಧನ ಭೀತಿ ಇಲ್ಲ ಎಂದು ಹೇಳಲಾಗಿದೆ.

ತಮಗೆ ನಿರೀಕ್ಷಣಾ ಜಾಮೀನು ನೀಡಬೇಕು ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಎಚ್.ಡಿ. ರೇವಣ್ಣ ಅವರು ಗುರುವಾರ ಅರ್ಜಿ ಸಲ್ಲಿಸಿದ್ದರು. ಎಸ್‌ಐಟಿಗೆ ಆಕ್ಷೇಪಣೆ ಸಲ್ಲಿಸಲು ಸೂಚಿಸಿ ಶುಕ್ರವಾರಕ್ಕೆ ವಿಚಾರಣೆಯನ್ನು ಮುಂದೂಡಲಾಗಿತ್ತು. ಶುಕ್ರವಾರ ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡ ಕೋರ್ಟ್‌, ವಾದ – ಪ್ರತಿವಾದವನ್ನು ಆಲಿಸಿ, ಅರ್ಜಿಯನ್ನು ಹಿಂಪಡೆಯುವಂತೆ ರೇವಣ್ಣ ಪರ ವಕೀಲರಿಗೆ ಸೂಚಿಸಿತು. ಈ ಹಿನ್ನೆಲೆಯಲ್ಲಿ ರೇವಣ್ಣ ಪರ ವಕೀಲರು ಅರ್ಜಿಯನ್ನು ಹಿಂಪಡೆದಿದ್ದಾರೆ.

ನಿರೀಕ್ಷಣಾ ಜಾಮೀನು ಅರ್ಜಿ ಹಿಂಪಡೆದ ರೇವಣ್ಣ ಪರ ವಕೀಲ

ಜಾಮೀನು ನೀಡಬಹುದಾದ ಸೆಕ್ಷನ್‌ಗಳು ಇದ್ದಲ್ಲಿ ಮಾತ್ರ ನಿರೀಕ್ಷಣಾ ಜಾಮೀನು ನೀಡುವ ಅವಶ್ಯಕತೆ ಇದೆ. ಆದರೆ, ಇಲ್ಲಿ ಅಂಥದ್ದೇನನ್ನೂ ಹಾಕಲಾಗಿಲ್ಲ ಎಂದು ಹೇಳಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ರೇವಣ್ಣ ಪರ ವಕೀಲರು, ಮುಂದೆ ಸೆಕ್ಷನ್‌ 376 ಹಾಕಲಿದ್ದಾರೆ ಎಂದು ಹೇಳಿದರು. ಅದಕ್ಕೆ ಎಸ್‌ಐಟಿ ಪರ ವಕೀಲರು, ನಾವು ಇಲ್ಲಿಯವರೆಗೂ ಹಾಕಿಲ್ಲ ಎಂದು ಕೋರ್ಟ್‌ಗೆ ಮಾಹಿತಿ ನೀಡಿದರು. ಸೆಕ್ಷನ್‌ 376 ಮಾತ್ರ ಅಲ್ಲ, ಬೇರೆ ನಾನ್ ಬೇಲಬಲ್ ಹಾಕಿದ್ದಾರಾ ಎಂಬುದನ್ನೂ ತಿಳಿಸಬೇಕು ಎಂದು ಕೋರಿದರು. ಇದಕ್ಕೆ ಎಸ್‌ಐಟಿ ಪರ ವಕೀಲರಾದ ಜಗದೀಶ್‌, ನಾವು ಇಲ್ಲಿತನಕ ಯಾವುದೇ ನಾನ್ ಬೇಲಬಲ್ ಸೆಕ್ಷನ್ ಹಾಕಿಲ್ಲ ಎಂದು ಕೋರ್ಟ್‌ಗೆ ಮಾಹಿತಿ ನೀಡಿದರು.

ಹೀಗಾಗಿ ಬೇಲ್‌ ಕೊಡುವಂತಹ ಯಾವುದೇ ಸೆಕ್ಷನ್‌ಗಳನ್ನೂ ಈ ಪ್ರಕರಣದಲ್ಲಿ ಎಚ್.ಡಿ. ರೇವಣ್ಣ ಅವರ ಮೇಲೆ ಹಾಕಲಾಗಿಲ್ಲ. ಹೀಗಿದ್ದ ಮೇಲೆ ಅವರಿಗೆ ನಿರೀಕ್ಷಣಾ ಜಾಮೀನು ಏಕೆ ಬೇಕು? ಕೂಡಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜಿಯನ್ನು ಹಿಂಪಡೆಯಿರಿ ಎಂದು ರೇವಣ್ಣ ಪರ ವಕೀಲರಿಗೆ ಕೋರ್ಟ್‌ ಸೂಚನೆ ನೀಡಿದೆ. ಹೀಗಾಗಿ ರೇವಣ್ಣ ಪರ ವಕೀಲರು ಅರ್ಜಿಯನ್ನು ವಾಪಸ್‌ ಪಡೆದರು. ಸದ್ಯಕ್ಕೆ ರೇವಣ್ಣ ಅವರಿಗೆ ಬಂಧನದ ಭೀತಿ ಇಲ್ಲ ಎಂದು ಹೇಳಲಾಗುತ್ತಿದೆ.

ಪ್ರಜ್ವಲ್ ರೇವಣ್ಣ ಮೇಲೆ ಮತ್ತೊಂದು ಟೈಟ್‌ ಎಫ್‌ಐಆರ್‌, ಇದರಲ್ಲಿ ಬಂಧನ ಖಚಿತ!

ಪ್ರಜ್ವಲ್‌ ರೇವಣ್ಣ (Prajwal Revanna Case) ಅವರ ಲೈಂಗಿಕ ದೌರ್ಜನ್ಯ (Physical abuse) ಹಗರಣದಲ್ಲಿ ಮತ್ತೊಂದು ದೂರು ದಾಖಲಾಗಿದೆ. ಈ ದೂರಿನಲ್ಲಿ ಬಿಗಿಯಾದ ದಂಡ ಸಂಹಿತೆ ಸೆಕ್ಷನ್‌ಗಳನ್ನು (IPC) ದಾಖಲಿಸಲಾಗಿದ್ದು, ಇದರಡಿ ಪ್ರಜ್ವಲ್‌ ಅವರ ಬಂಧನ ಖಚಿತವಾಗಿದೆ. ಮೈಸೂರಿನಲ್ಲೂ (Mysore news) ಇನ್ನೊಂದು ಲೈಂಗಿಕ ಕಿರುಕುಳ ಹಾಗೂ ಅಪಹರಣ (kidnap) ಪ್ರಕರಣ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿದೆ. ಇಲ್ಲಿಗೆ ಒಟ್ಟು ಮೂರು ದೂರುಗಳಾಗಿವೆ.

ಪ್ರಜ್ವಲ್ ರೇವಣ್ಣ ಮೇಲೆ ದಾಖಲಾಗಿರುವ ಎರಡನೇ ಎಫ್ಐಆರ್ ಸಿಐಡಿ ಸೈಬರ್ ಠಾಣೆಯಲ್ಲಿ (CID cyber station) ದಾಖಲಾಗಿದೆ. ಎರಡನೇ ಎಫ್ಐಆರ್‌ನಲ್ಲಿ ದಾಖಲಿಸಿರುವ ಸೆಕ್ಷನ್‌ಗಳು ಹೆಚ್ಚು ಬಿಗಿಯಾಗಿದ್ದು, ತನಿಖೆಗೆ ಹಾಸನ ಸಂಸದರ ಬಂಧನವನ್ನು ಅನಿವಾರ್ಯವಾಗಿಸಿವೆ.

IPC 376(2)N, 506 ,354a1, 354b, 354c ಸೆಕ್ಷನ್‌ಗಳು ಹಾಗೂ ಐಟಿ ಕಾಯ್ದೆ ಅಡಿ ಎಫ್ಐಆರ್ ದಾಖಲಿಸಲಾಗಿವೆ. 376(2)n ಸೆಕ್ಷನ್‌ ಮಹಿಳೆ ಮೇಲೆ‌ ಬೆದರಿಸಿ ನಿರಂತರ ಅತ್ಯಾಚಾರ ನಡೆಸುವುದನ್ನು ದಾಖಲಿಸುತ್ತಿದ್ದು, ಇದು ಸಾಬೀತಾದರೆ ಕನಿಷ್ಠ ಹತ್ತು ವರ್ಷ ಜೈಲು ಅಥವಾ ಗರಿಷ್ಠ ಜೀವಾವಧಿ ಶಿಕ್ಷೆಯಾಗಲಿದೆ.

ಸೆಕ್ಷನ್‌ 506 ಅಪರಾಧಿಕ ಉದ್ದೇಶದಿಂದ ಬೆದರಿಸುವುದು, 354a1 ಲೈಂಗಿಕ ಬೇಡಿಕೆಗೆ ಒತ್ತಾಯಿಸುವುದು- ಇದಕ್ಕೆ ಗರಿಷ್ಠ ಮೂರು ವರ್ಷಗಳ ಶಿಕ್ಷೆ, 354b ಅಪರಾಧಿಕ ಉದ್ದೇಶಕ್ಕೆ ಮಹಿಳೆ ಮೇಲೆ ಹಲ್ಲೆ ಮಾಡುವುದು- ಗರಿಷ್ಠ ಮೂರು ವರ್ಷ ಶಿಕ್ಷೆ, 354c ಮಹಿಳೆಯ ಇಚ್ಛೆಗೆ ವಿರುದ್ಧವಾಗಿ ಆಕೆಯ ಖಾಸಗಿ ವಿಷಯವನ್ನು ರೆಕಾರ್ಡ್ ಮಾಡುವುದು ಮತ್ತು ನೋಡುವುದು- ಗರಿಷ್ಠ ಏಳು ವರ್ಷ ಶಿಕ್ಷೆ ಇವುಗಳಿವೆ.

ಎರಡನೇ ಎಫ್ಐಆರ್‌ನಲ್ಲಿ ಪ್ರಜ್ವಲ್ ರೇವಣ್ಣ ಮಾತ್ರ ಆರೋಪಿಯಾಗಿದ್ದಾರೆ. ಮೊದಲ ದೂರಿನಲ್ಲಿ ಎಚ್‌ಡಿ ರೇವಣ್ಣ ಕೂಡ ಆರೋಪಿಯಾಗಿದ್ದರು. ಎಚ್‌ಡಿ ರೇವಣ್ಣ ಜಾಮೀನಿಗಾಗಿ ಪ್ರಯತ್ನಿಸುತ್ತಿದ್ದಾರೆ. ಪ್ರಜ್ವಲ್ ರೇವಣ್ಣ ಭಾರತಕ್ಕೆ ಬಂದ ಕೂಡಲೇ ಬಂಧನ ಮಾಡಲು ಎಸ್‌ಐಟಿ ಸಜ್ಜಾಗಿದೆ. ಈಗಾಗಲೇ ಆರೋಪಿಗೆ ಲುಕ್‌ಔಟ್ ನೊಟೀಸ್ ಹೊರಡಿಸಲಾಗಿದೆ. ಹೀಗಾಗಿ ಪ್ರಜ್ವಲ್ ರೇವಣ್ಣ ಬಂಧನ ಬಹುತೇಕ ಖಚಿತವಾಗಿದೆ.

ಮೈಸೂರಿನಲ್ಲೂ ದೂರು

ಪ್ರಜ್ವಲ್‌ ರೇವಣ್ಣ (Prajwal Revanna Case) ಮೇಲೆ ಮೈಸೂರಿನಲ್ಲೂ ಒಂದು ಲೈಂಗಿಕ ಕಿರುಕುಳ ಹಾಗೂ ಅಪಹರಣ (kidnap) ಪ್ರಕರಣ ದಾಖಲಾಗಿದೆ. ತಾಯಿಯನ್ನು ಅಪಹರಣ ಮಾಡಲಾಗಿದೆ ಎಂದು ಆರೋಪಿಸಿ ಪುತ್ರ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ. ಕೆ.ಆರ್.ನಗರ ತಾಲೂಕಿನಲ್ಲಿ ಘಟನೆ ನಡೆದಿದೆ. “ಪ್ರಜ್ವಲ್ ರೇವಣ್ಣ ಅವರಿಂದ ನನ್ನ ತಾಯಿಯೂ ಲೈಂಗಿಕ ದೌರ್ಜನ್ಯಕ್ಕೆ ಒಳಪಟ್ಟಿದ್ದರು.‌ ಈ ಸಂಬಂಧ ಫೋಟೋಗಳು ಬಹಿರಂಗ ಆಗಿದ್ದವು. ಬಳಿಕ ನನ್ನ ತಾಯಿ ನಾಪತ್ತೆ ಆಗಿದ್ದಾರೆ. ಶಾಸಕ ಎಚ್.ಡಿ.ರೇವಣ್ಣ, ಪತ್ನಿ ಭವಾನಿ ರೇವಣ್ಣ (Bhavani Revanna) ಅಪಹರಣ ಮಾಡಿಸಿದ್ದಾರೆ” ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌, ರೇವಣ್ಣಗೆ ಮತ್ತೊಂದು ನೋಟಿಸ್‌; ವಿಚಾರಣೆಗೆ ಬಾರದಿದ್ದರೆ ಅರೆಸ್ಟ್‌: ಡಾ. ಜಿ. ಪರಮೇಶ್ವರ್

ದೂರಿನ ಬಗ್ಗೆ ಪೊಲೀಸರು ಪ್ರಾಥಮಿಕ ಮಾಹಿತಿ ಕಲೆಹಾಕುತ್ತಿದ್ದಾರೆ. ಹಾಸನದಲ್ಲಿ ಪ್ರಜ್ವಲ್‌ ರೇವಣ್ಣ ಹಾಗೂ ಎಚ್‌.ಡಿ ರೇವಣ್ಣ (HD Revanna) ವಿರುದ್ಧ ದಾಖಲಾಗಿರುವ ದೂರಿನ ತನಿಖೆಗೆ ಎಸ್‌ಐಟಿ ರಚನೆ ಮಾಡಿರುವಂತೆ ಈ ದೂರು ಕೂಡ ಹೊರಬಂದಿದೆ.

Continue Reading

ತಂತ್ರಜ್ಞಾನ

Bomber Drone: ಭಾರತದ ಮೊದಲ ಬಾಂಬರ್ ಡ್ರೋನ್ ಅನಾವರಣ; ಇದರ ವಿಶೇಷತೆ ಹೀಗಿದೆ ನೋಡಿ

Bomber Drone: ಭಾರತದ ಮೊದಲ ಮಿಲಿಟರಿ ದರ್ಜೆಯ (Indian military) ಬಾಂಬರ್ ಡ್ರೋನ್ ಇದಾಗಿದೆ. ಡ್ರೋನ್‌ಗಿಂತ ಗಾತ್ರದಲ್ಲಿ ಸ್ವಲ್ಪ ದೊಡ್ಡದಾಗಿರುವ, ಹೆಲಿಕಾಪ್ಟರ್‌ಗಿಂತ ಚಿಕ್ಕದಾಗಿರುವ ಈ ವಾಹಕ, ಪೈಲಟ್‌ರಹಿತವಾಗಿ ಕಾರ್ಯಾಚರಿಸಿ ಬಾಂಬ್‌ಗಳನ್ನು ಹೊತ್ತೊಯ್ದು ವೈರಿನೆಲೆಗಳ ಮೇಲೆ ಉದುರಿಸಬಲ್ಲುದು ಎಂದು ಫ್ಲೈಯಿಂಗ್ ವೆಡ್ಜ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಸಂಸ್ಥಾಪಕ, ಸಿಇಒ ಸುಹಾಸ್ ತೇಜ ಸ್ಕಂದ ವಿವರಿಸಿದ್ದಾರೆ.

VISTARANEWS.COM


on

bomber drone
Koo

ಬೆಂಗಳೂರು: ಭಾರತದ ಮೊತ್ತ ಮೊದಲ ಸ್ವದೇಶಿ ತಂತ್ರಜ್ಞಾನದ ಬಾಂಬರ್‌ ಡ್ರೋನ್‌ (Indigenous Bomber Drone) ಬೆಂಗಳೂರಿನಲ್ಲಿ ಅನಾವರಣಗೊಂಡಿದೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ (Electronic City) ಅನಾವರಣಗೊಂಡಿರುವ ಈ ಬಾಂಬರ್‌ ಡ್ರೋನ್‌ ಅನ್ನು ʼಫ್ಲೈಯಿಂಗ್ ವೆಡ್ಜ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಟೆಕ್ನಾಲಜೀಸ್ʼ ಸಂಸ್ಥೆ ನಿರ್ಮಾಣ ಮಾಡಿದೆ. ಇದಕ್ಕೆ FWD-200B UAV ಎಂದು ಹೆಸರಿಡಲಾಗಿದೆ.

ಭಾರತದ ಮೊದಲ ಮಿಲಿಟರಿ ದರ್ಜೆಯ (Indian military) ಬಾಂಬರ್ ಡ್ರೋನ್ ಇದಾಗಿದೆ. ಡ್ರೋನ್‌ಗಿಂತ ಗಾತ್ರದಲ್ಲಿ ಸ್ವಲ್ಪ ದೊಡ್ಡದಾಗಿರುವ, ಹೆಲಿಕಾಪ್ಟರ್‌ಗಿಂತ ಚಿಕ್ಕದಾಗಿರುವ ಈ ವಾಹಕ, ಪೈಲಟ್‌ರಹಿತವಾಗಿ ಕಾರ್ಯಾಚರಿಸಿ ಬಾಂಬ್‌ಗಳನ್ನು ಹೊತ್ತೊಯ್ದು ವೈರಿನೆಲೆಗಳ ಮೇಲೆ ಉದುರಿಸಬಲ್ಲುದು ಎಂದು ಫ್ಲೈಯಿಂಗ್ ವೆಡ್ಜ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಸಂಸ್ಥಾಪಕ, ಸಿಇಒ ಸುಹಾಸ್ ತೇಜ ಸ್ಕಂದ ವಿವರಿಸಿದ್ದಾರೆ.

FWD-200B UAV ಎಂದು ತಾಮತ್ರಿಕವಾಗಿ ಕರೆಯಲಾಗುವ ಈ ಡ್ರೋನ್ ವಿಮಾನವನ್ನು ಇಂದು ಎಲೆಕ್ಟ್ರಾನಿಕ ಸಿಟಿಯಲ್ಲಿ ಫ್ಲೈಯಿಂಗ್ ವೆಡ್ಜ್ ಡಿಫೆನ್ಸ್ ಸಂಸ್ಥೆ ಅನಾವರಣ ಮಾಡಿದೆ. ರಕ್ಷಣಾ ಕ್ಷೇತ್ರದಲ್ಲಿ ವಿದೇಶಗಳ ಮೇಲಿನ ಅವಲಂಬನೆಗೆ ಬ್ರೇಕ್ ಹಾಕಲು ಸ್ವದೇಶಿ ಡ್ರೋನ್ ವಿಮಾನ‌ ತಯಾರಿಸಲಾಗಿದೆ. ಇದರೊಂದಿಗೆ ಸುಧಾರಿತ ಮಾನವರಹಿತ ಯುದ್ಧ ಡ್ರೋನ್ ಹೊಂದಿದ ರಾಷ್ಟ್ರಗಳ ಪಟ್ಟಿಗೆ ಭಾರತ ಸೇರಲಿದೆ. ಇದರ ಆರಂಬಿಕ ಟೆಸ್ಟ್‌ಗಳು ಆಗಿದ್ದು, ಅಡ್ವಾನ್ಸ್‌ಡ್‌ ಪರೀಕ್ಷೆಗಳು ಇನ್ನೆರಡು ತಿಂಗಳಲ್ಲಿ ನೆರವೇರಲಿದೆ. ಪ್ರಧಾನಿ ನರೇಂದ್ರ ಮೋದಿ ಅವರಿಂದ ಇದರ ಉದ್ಘಾಟನೆ ಮಾಡಿಸುವ ಚಿಂತನೆಯನ್ನು ಸುಹಾಸ್ ಹಂಚಿಕೊಂಡಿದ್ದಾರೆ.

bomber drone flying vedge ceo suhas

ಭಾರತದಲ್ಲಿ ಸದ್ಯ ದಾಳಿ ಡ್ರೋನ್‌ಗಳು ಲಭ್ಯವಿಲ್ಲ. ಇರಾನ್‌ ಹಾಗೂ ರಷ್ಯಾಗಳು ಇದನ್ನು ಈಗಾಗಲೇ ಬಳಸುತ್ತಿವೆ. ಇಸ್ರೇಲ್‌ ಮೇಲೆ ದಾಳಿ ಮಾಡಲು ಕೂಡ ಪ್ಯಾಲೆಸ್ತೀನಿನ ಬಂಡುಕೋರರು ಸಣ್ಣ ಗಾತ್ರದ ಇಂಥದೇ ಡ್ರೋನ್‌ಗಳನ್ನು ಬಳಸಿದ್ದರು. ಈ ಬಗೆಯ ಡ್ರೋನ್‌ಗಳು ಆಧುನಿಕ ಯುದ್ಧದ ವೈಖರಿಯನ್ನೇ ಬದಲಿಸಲಿವೆ. ಕ್ಷಿಪಣಿಗಳು ದುಬಾರಿಯಾಗಿದ್ದು, ಅದಕ್ಕಿಂತ ಡ್ರೋನ್‌ಗಳು ಅಗ್ಗವಾಗಿವೆ. FWD-200B UAV ಸುಮಾರು 200 ಕಿಲೋದಷ್ಟು ಪೇಲೋಡ್‌ ಅನ್ನು ಹೊತ್ತೊಯ್ಯುವ ಸಾಮರ್ಥ್ಯ ಹೊಂದಿದೆ.

ಭಾರತ ಈಗ ಅಮೆರಿಕದ ಪ್ರಿಡೇಟರ್ ಡ್ರೋನ್‌ಗಳನ್ನು (Predator Drone) ತರಿಸುತ್ತಿದೆ. ಆದರೆ ಇದು 250 ಕೋಟಿಗಳಷ್ಟು ದುಬಾರಿಯಾಗಿದೆ. ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ದೇಶೀಯವಾಗಿ ತಯಾರಾದ FWD-200B ಭಾರತದಲ್ಲಿ ಸ್ವದೇಶಿ ತಂತ್ರಜ್ಞಾನದೊಂದಿಗೆ ಕೇವಲ 25ಯಿಂದ 50 ಕೋಟಿ ವೆಚ್ಚದಲ್ಲಿ ತಯಾರಾಗಲಿದೆ. ಭಾರತವನ್ನು ಜಾಗತಿಕ ಡ್ರೋನ್ ಉತ್ಪಾದನೆ ಮತ್ತು ತಂತ್ರಜ್ಞಾನದ ಕೇಂದ್ರವಾಗಿಸುವ ಗುರಿ ತಮ್ಮದು. ಇನ್ನು ಎರಡು ತಿಂಗಳಲ್ಲಿ ಇದು ಭಾರತದ ಮಿಲಿಟರಿಯನ್ನು ಸೇರುವ ಆಶಯ ಇದೆ. ಈ ಮೂಲಕ ನಮ್ಮ ರಾಷ್ಟ್ರದ ವಾಯು ರಕ್ಷಣಾ ವ್ಯವಸ್ಥೆಯನ್ನು ಸಶಕ್ತಗೊಳಿಸಲು ಸಂಸ್ಥೆ ಮುಂದಾಗಿದೆ ಎಂದು ಸುಹಾಸ್‌ ತಿಳಿಸಿದ್ದಾರೆ.

ಇದನ್ನೂ ಓದಿ: Tejas Aircraft: ಸ್ವದೇಶಿ ʼತೇಜಸ್ʼ ವಿಮಾನದಲ್ಲಿ ಮೋದಿ ಹಾರಾಟ: ಪಾಕಿಸ್ತಾನ, ಚೀನಾಗೆ ನಡುಕ!

Continue Reading

ಮಳೆ

Karnataka Weather Forecast : ರಾಯಚೂರಲ್ಲಿ ಬಿಸಿಲಾಜ್ಞೆ; ಮಧ್ಯಾಹ್ನ 12-4ರ ವರೆಗೆ ಹೊರಬರದಂತೆ ಡಿಸಿ ಕಟ್ಟಾಜ್ಞೆ!

Karnataka Weather Forecast : ದಿನೇದಿನೆ ಸುಡುತ್ತಿರುವ ಬಿಸಿಲಿಗೆ ಜನರು ಬೆಂದು ಹೋಗುತ್ತಿದ್ದಾರೆ. ಸದ್ಯ ರಾಯಚೂರಲ್ಲಿ ಗರಿಷ್ಟ ತಾಪಮಾನದ ಕಾರಣಕ್ಕೆ ಮಧ್ಯಾಹ್ನದ ನಂತರ ಜನರು ಹೊರಬರದಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಇತ್ತ ಚಿಕ್ಕಬಳ್ಳಾಪುರದಲ್ಲಿ ಮಧ್ಯಾಹ್ನದ ನಂತರ ಅಘೋಷಿತ ಬಂದ್‌ ವಾತಾವರಣ ನಿರ್ಮಾಣವಾಗಿದೆ.

VISTARANEWS.COM


on

By

Karnataka Weather Forecast
Koo

ರಾಯಚೂರು/ಚಿಕ್ಕಬಳ್ಳಾಪುರ: ರಾಜ್ಯಾದ್ಯಂತ ಉರಿ ಬಿಸಿಲು ಜನರನ್ನು ಸುಸ್ತು (Karnataka Weather Forecast) ಮಾಡಿದೆ. ಅದರಲ್ಲೂ ಉತ್ತರ ಕರ್ನಾಟಕದ ಮಂದಿ ಕುಂತರೂ ನಿಂತರೂ ಬೆವರು ಸುರಿಸುವಂತಾಗಿದೆ. ಬಿಸಿಲಿನ ಆಜ್ಞೆಗೆ ಜನರು ಹೊರಬರಲು ಆಗದೆ ಅಘೋಷಿತ ಬಂದ್‌ ನಿರ್ಮಾಣವಾಗಿದೆ. ಸದ್ಯ ಅತಿಯಾದ ಬಿಸಿಲಿಗೆ ತತ್ತರಿಸಿದ ರಾಯಚೂರು ಜನರು ಮಧ್ಯಾಹ್ನ ಹೊರಗೆ ಬಾರದಂತೆ ರಾಯಚೂರು ಜಿಲ್ಲಾಧಿಕಾರಿ ಸಲಹೆ ನೀಡಿದ್ದಾರೆ.

ಮುಂದಿನ ಒಂದು ವಾರ ಮತ್ತಷ್ಟು ಗರಿಷ್ಠ ತಾಪಮಾನ ಹೆಚ್ಚಾಗುವ ಸಾಧ್ಯತೆ ಇದೆ. ಈಗಾಗಲೇ 44 ರಿಂದ 46 ಡಿ.ಸೆ ನಷ್ಟು ತಾಪಮಾನ ದಾಖಲಾಗುತ್ತಿದೆ. ಇದರಿಂದ ಅನಾರೋಗ್ಯ ಸಮಸ್ಯೆ ಜತೆಗೆ ಬಿಸಿಲಾಘಾತಕ್ಕೆ ಸಾವು ಸಂಭವಿಸಬಹುದು. ಹಾಗಾಗಿ ಮಧ್ಯಾಹ್ನ 12 ರಿಂದ 4 ಗಂಟೆವರೆಗೂ ಹೊರಗೆ ಹೋಗದಿರಿ ಎಂದು ಡಿಸಿ ಎಲ್ ಚಂದ್ರಶೇಖರ ನಾಯಕ್ ಸಲಹೆ ನೀಡಿದ್ದಾರೆ. ಹೊರಗೆ ಹೋಗಲೇಬೇಕಾದ ಅವಶ್ಯಕತೆ ಇದ್ದರೆ ಶುದ್ಧ ಕುಡಿಯುವ ನೀರಿನ ಬಾಟಲ್ ಕೊಂಡೊಯ್ಯಿರಿ. ಟೋಪಿ ಅಥವಾ ಛತ್ರಿ ಬಳಸಿ, ಆದಷ್ಟು ನೆರಳಿನ ಪ್ರದೇಶಗಳಲ್ಲಿ ಓಡಾಡಿ. ಬಾಯಾರಿಕೆ ಆಗದಿದ್ದರೂ ಆಗಾಗ ನೀರು ಕುಡಿಬೇಕು. ಯಾವಾಗಲೂ ನಿಮ್ಮ ಬಳಿ ನೀರು ಇಟ್ಟುಕೊಂಡಿರಿ ಎಂದು ಜಿಲ್ಲಾಧಿಕಾರಿ ಎಲ್‌.ಚಂದ್ರಶೇಖರ ನಾಯಕ್ ಸಲಹೆ ನೀಡಿದ್ದಾರೆ. ಹಾಗೆಯೇ ಮನೆ- ಕಚೇರಿಗಳಲ್ಲಿ ಪಕ್ಷಿಗಳಿಗೂ ನೀರನ್ನು ತುಂಬಿ ಇಡಿ ಎಂದಿದ್ದಾರೆ.

karnataka weather forecast

ತುಮಕೂರಲ್ಲಿ ಬಿಸಿ ಗಾಳಿ; ಹಸುಗಳಿಗೆ ತೇವದ ಗೋಣಿಚೀಲದ ಹೊದಿಕೆ

ತುಮಕೂರು ಜಿಲ್ಲೆಯಲ್ಲೂ ಬಿಸಿ ಗಾಳಿಯು ಆತಂಕವನ್ನು ಹೆಚ್ಚಿಸಿದೆ. ಪಾವಗಡ ತಾಲೂಕಿನಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿದೆ. ಬಿಸಿಲ ಬೇಗೆಗೆ ಪ್ರಾಣಿ ಪಕ್ಷಿಗಳೂ ಹೈರಾಣಾಗಿವೆ. ಇತ್ತ ರೈತರು ದನ ಕರುಗಳಿಗೆ ಒದ್ದೆ ಮಾಡಿದ ಗೋಣಿಚೀಲ ಹಾಕುತ್ತಿದ್ದಾರೆ. ಪಾವಗಡ ತಾಲೂಕಿನ ವೈ ಎನ್ ಹೊಸಕೋಟೆಯಲ್ಲಿ ಹಸುಗಳಿಗೆ ತೇವದ ಗೋಣಿಚೀಲದ ಹೊದಿಕೆ ಹಾಕಿ, ತಂಪು ಮಾಡುತ್ತಿದ್ದಾರೆ.

ಬಿಸಿಲಿನ ಹೊಡೆತ- ಚಿಕ್ಕಬಳ್ಳಾಪುರ ಪ್ರವಾಸಿತಾಣ ಖಾಲಿ ಖಾಲಿ

ಇತ್ತ ಚಿಕ್ಕಬಳ್ಳಾಪುರದಲ್ಲೂ ಅತಿಯಾದ ತಾಪಮಾನದಿಂದಾಗಿ ಪ್ರವಾಸಿ ತಾಣಗಳು ಪ್ರವಾಸಿಗರು ಇಲ್ಲದೆ ಬಣಗುಡುತ್ತಿದೆ. ನಂದಿ ಬೆಟ್ಟ, ಈಶಾ ಫೌಂಡೇಶನ್ ಜನರಿಲ್ಲದೆ ಖಾಲಿ ಖಾಲಿಯಾಗಿದೆ. ಬಿಸಿಲಿನ ತಾಪಕ್ಕೆ ಜನರು ಮನೆ ಬಿಟ್ಟು‌ ಕದಲದ ಕಾರಣಕ್ಕೆ ಮಧ್ಯಾಹ್ನ 12 ಗಂಟೆ ಬಳಿಕ ಚಿಕ್ಕಬಳ್ಳಾಪುರದಲ್ಲಿ ಆಘೋಷಿತ ಬಂದ್ ವಾತಾವರಣ ನಿರ್ಮಾಣವಾಗಿದೆ. ಪ್ರತಿನಿತ್ಯ ಪ್ರವಾಸಿಗರಿಂದ ಗಿಜುಗುಡುತಿದ್ದ ನಂದಿಬೆಟ್ಟ ಖಾಲಿಯಾಗಿದೆ.

ಇದನ್ನೂ ಓದಿ: Gold Rate Today: ಚಿನ್ನದ ಬೆಲೆ ಮತ್ತೆ ಇಳಿಕೆ; 10 ಗ್ರಾಂ 22 ಕ್ಯಾರಟ್‌ ಬಂಗಾರದ ಬೆಲೆಯಲ್ಲಿ ₹500 ಕಡಿತ

ಸೆಕೆಗೆ ಕಾವೇರಿ ನದಿಗಿಳಿದ ಜನ

ಮಂಡ್ಯ ಜಿಲ್ಲೆಯಲ್ಲೂ ಬಿಸಿಲ ಬೇಗೆ ಹೆಚ್ಚಾಗಿದೆ. ಬಿಸಿಲಿನ ಸೆಕೆ ತಾಳಲಾರದೆ ಜನರು ನದಿಗಿಳಿದು ತಾಪವನ್ನು ಕಡಿಮೆ ಮಾಡಿಕೊಳ್ಳುತ್ತಿದ್ದಾರೆ. ಕುಟುಂಬ ಸಮೇತವಾಗಿ ಬಂದು ಮಂಡ್ಯದ ಶ್ರೀರಂಗಪಟ್ಟಣದ ಕಾವೇರಿ ನದಿಯಲ್ಲಿ ಇಳಿಯುತ್ತಿದ್ದಾರೆ. ಬಿಸಿಲಿನ ಕಾವಿನಿಂದಾಗಿ ಕಾವೇರಿ ನದಿ ದಂಡೆಯಲ್ಲಿ ಜನರ ದಂಡು ಹೆಚ್ಚಾಗಿದೆ.

ಬೆಂಗಳೂರಲ್ಲಿ ಸುರಿದ ಮಳೆಗೆ ಧರೆಗುರುಳಿದ ಮರಗಳು

ಬೆಂಗಳೂರಿನಲ್ಲಿ ನಿನ್ನೆ ಗುರುವಾರ ಸಂಜೆ ಸುರಿದ ಮಳೆಗೆ ಮರಗಳು ಧರೆಗುರುಳಿವೆ. ಕೆಲವು ಕಡೆ ಅರ್ಧ ಗಂಟೆ, ಮತ್ತೆ ಕೆಲವು ಭಾಗದಲ್ಲಿ ಒಂದು ಗಂಟೆ ಕಾಲ ಮಳೆಯಾಗಿದೆ. ಬನಶಂಕರಿ, ಹಂಪಿನಗರ, ವಿಜಯನರ, ರಾಜರಾಜೇಶ್ವರಿನಗರ ಹಾಗೂ ನಾಯಂಡಹಳ್ಳಿ ಸೇರಿ ಮೆಜೆಸ್ಟಿಕ್‌ ಸುತ್ತಮುತ್ತ ಉತ್ತಮ ಮಳೆಯಾಗಿದೆ. ನಗರದ ಬಹುತೇಕ ಪ್ರದೇಶಗಳಲ್ಲಿ ಸುಮಾರು 10 ನಿಮಿಷಗಳ ಸಾಧಾರಣ ಮಳೆಯಾಗಿದೆ.

ಎಲ್ಲೆಲ್ಲಿ ಎಷ್ಟು ಮಳೆ (ಮಿ.ಮೀ)
ವಿದ್ಯಾಪೀಠ – 20, ಹಂಪಿನಗರ – 12.5, ಮಾರುತಿ ಮಂದಿರ – 12, ರಾಜರಾಜೇಶ್ವರಿನಗರ – 7.5, ನಾಯಂಡಹಳ್ಳಿ – 7.5, ಬಸವನಪುರ – 5.5, ದೊಡ್ಡನೆಕ್ಕುಂದಿ – 5, ಎಚ್‌ಎಸ್‌ಆರ್‌ ಲೇಔಟ್‌- 5, ಉತ್ತರಹಳ್ಳಿ – 5 ಹಾಗೂ ಮಹದೇವಪುರ – 4, ರಾಮಮೂರ್ತಿ ನಗರ – 4, ಹೆಮ್ಮಿಗೆಪುರ – 4.5, ಕೆಂಗೇರಿ – 4.5 ಸೇರಿದಂತೆ ಯಲಹಂಕ ಉಪನಗರ – 3.5, ಹೊರಮಾವು – 3.5ಮಿ.ಮೀ ಮಳೆಯಾಗಿದೆ. ಬೆಂಗಳೂರು ದಕ್ಷಿಣದಲ್ಲಿ 10-15 ಮರಗಳು ಧರೆಗೆ ಉರುಳಿರುವ ಬಗ್ಗೆ ಬಿಬಿಎಂಪಿ ಮಾಹಿತಿ ನೀಡಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Prajwal Revanna Case: ಪ್ರಜ್ವಲ್ ದುಬೈ ಅಲ್ಲ, ಎಲ್ಲಿ ಎಸ್ಕೇಪ್‌ ಆದ್ರೂ ಅಲ್ಲಿಂದ್ಲೇ ಹಿಡಿದುಕೊಂಡು ಬರುತ್ತೇವೆ: ಸಿಎಂ ಸಿದ್ದರಾಮಯ್ಯ

Prajwal Revanna Case: ನಾನು ಪ್ರಜ್ವಲ್‌ ರೇವಣ್ಣ ಅವರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಅನ್ನು ರದ್ದು ಮಾಡಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದೆ. ಪಾಸ್‌ಪೋರ್ಟ್ ಕ್ಯಾನ್ಸಲ್ ಆದ ಮೇಲೆ ಪ್ರಜ್ವಲ್‌ ವಿದೇಶದಲ್ಲಿ ಇರಲು ಆಗುವುದಿಲ್ಲವಲ್ಲ. ಈ ಕಾರಣಕ್ಕಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಪ್ರಜ್ವಲ್‌ ಪಾಸ್‌ಪೋರ್ಟ್‌ ಅನ್ನು ಕ್ಯಾನ್ಸಲ್‌ ಮಾಡಲಿ ಮಾಡಲಿ. ಪ್ರಜ್ವಲ್‌ ವಿದೇಶಕ್ಕೆ ಹೋಗಬೇಕಾದರೆ ಕೇಂದ್ರ ಸರ್ಕಾರಕ್ಕೆ ಗೊತ್ತಿರುವುದಿಲ್ಲವೇ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

VISTARANEWS.COM


on

Prajwal Revanna Case Wherever Prajwal escapes we will pick him up says CM Siddaramaiah
Koo

ಬಾಗಲಕೋಟೆ: ಹಾಸನದ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣದ (Hassan Pen Drive Case) ಪ್ರಮುಖ ಆರೋಪಿ ಹಾಸನ ಸಂಸದ (Hassan MP), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna Case) ದುಬೈ ಅಲ್ಲ, ಎಲ್ಲಿಯಾದರೂ ಎಸ್ಕೇಪ್‌ ಆಗಲಿ. ಅಲ್ಲಿಂದಲೇ ಹಿಡಿದುಕೊಂಡು ಬರುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಬಾಗಲಕೋಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪ್ರಜ್ವಲ್ ಜರ್ಮನಿಯಿಂದ ದುಬೈಗೆ ಎಸ್ಕೇಪ್ ಆಗಿರುವ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಜ್ವಲ್‌ ಎಲ್ಲಿಯಾದರೂ ಎಸ್ಕೇಪ್ ಆಗಲಿ. ಅಲ್ಲಿಂದಲೇ ಹಿಡಿದುಕೊಂಡು ಬರುತ್ತೇವೆ. ಯಾವ ದೇಶದಲ್ಲಿ ಇದ್ದರೂ ಬಿಡುವುದಿಲ್ಲ. ಅಲ್ಲಿಂದಲೇ ಕರೆದುಕೊಂಡು ಬರುತ್ತೇವೆ ಎಂದು ಹೇಳಿದರು.

ಈ ಕಾರಣಕ್ಕಾಗಿಯೇ ನಾನು ಪ್ರಜ್ವಲ್‌ ರೇವಣ್ಣ ಅವರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಅನ್ನು ರದ್ದು ಮಾಡಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದೆ. ಪಾಸ್‌ಪೋರ್ಟ್ ಕ್ಯಾನ್ಸಲ್ ಆದ ಮೇಲೆ ಪ್ರಜ್ವಲ್‌ ವಿದೇಶದಲ್ಲಿ ಇರಲು ಆಗುವುದಿಲ್ಲವಲ್ಲ. ಈ ಕಾರಣಕ್ಕಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಪ್ರಜ್ವಲ್‌ ಪಾಸ್‌ಪೋರ್ಟ್‌ ಅನ್ನು ಕ್ಯಾನ್ಸಲ್‌ ಮಾಡಲಿ ಮಾಡಲಿ. ಪ್ರಜ್ವಲ್‌ ವಿದೇಶಕ್ಕೆ ಹೋಗಬೇಕಾದರೆ ಕೇಂದ್ರ ಸರ್ಕಾರಕ್ಕೆ ಗೊತ್ತಿರುವುದಿಲ್ಲವೇ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದರು.

ಸಂತ್ರಸ್ತರ ರಕ್ಷಣೆ ಮಾಡಲು ಸೂಚಿಸಿದ್ದೇನೆ

ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣದ ಸಂತ್ರಸ್ತೆ ಕಿಡ್ನ್ಯಾಪ್ ಆಗಿರುವ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಆ ಹೆಣ್ಣುಮಕ್ಕಳ ಎಲ್ಲಿ ಹೋಗಿದ್ದಾರೆ ಎಂಬುದನ್ನು ಪತ್ತೆ ಹಚ್ಚಿ ಅವರನ್ನು ರಕ್ಷಣೆ ಮಾಡುವಂತೆ ಪೊಲೀಸರಿಗೆ ಸೂಚನೆ ಕೊಟ್ಟಿದ್ದೇನೆ ಎಂದು ಹೇಳಿದರು.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌, ರೇವಣ್ಣಗೆ ಮತ್ತೊಂದು ನೋಟಿಸ್‌; ವಿಚಾರಣೆಗೆ ಬಾರದಿದ್ದರೆ ಅರೆಸ್ಟ್‌: ಡಾ. ಜಿ. ಪರಮೇಶ್ವರ್

ರಾಜಕೀಯ ಮಾಡೋದು ಒಟ್ಟಿಗೆ, ಕುಕೃತ್ಯ ಮಾಡೋದೂ ಒಟ್ಟಿಗೆ

ಪ್ರಜ್ವಲ್‌ ಅವರ ತಂದೆ ಎಚ್.ಡಿ. ರೇವಣ್ಣ ಅವರು ಲಾಯರ್ ಹತ್ತಿರ ಯಾಕೆ ಹೋಗಿದ್ದಾರೆ? ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಮನೆಗೆ ಲಾಯರ್ ಅನ್ನು ಕರೆಸಿಕೊಂಡು ಏಕೆ ಚರ್ಚೆ ಮಾಡಿದ್ದಾರೆ? ಎಚ್‌ಡಿಕೆ ಒಮ್ಮೆ ಹೇಳುತ್ತಾರೆ, ರೇವಣ್ಣ, ನಾನು ಬೇರೆ ಬೇರೆ ಆಗಿದ್ದೇವೆ ಅಂತ. ದೇವೇಗೌಡರಿಗೂ, ನಮಗೂ ಈ ಪ್ರಕರಣಕ್ಕೂ ಏನೂ ಸಂಬಂಧ ಇಲ್ಲ ಅಂತ ಹೇಳುತ್ತಾರೆ. ಇನ್ನೊಂದು ಕಡೆ ಇದೆಲ್ಲವನ್ನೂ ಮಾಡುತ್ತಾರೆ. ಚುನಾವಣೆ ಪ್ರಚಾರದಲ್ಲಿ ಪ್ರಜ್ವಲ್ ಬೇರೆ ಅಲ್ಲ, ನನ್ನ ಮಗ ಬೇರೆ ಅಲ್ಲ ಎಂದು ಹೇಳಿದ್ದು ಕುಮಾರಸ್ವಾಂಇ ಅಲ್ಲವೇ? ಇದರ ಅರ್ಥ ಏನು? (What is it mean?) ಅವರು ಮಾಡೋದೆಲ್ಲವನ್ನೂ ಒಟ್ಟಿಗೆ ಮಾಡೋದು. ರಾಜಕೀಯ ಮಾಡೋದು ಒಟ್ಟಿಗೆ, ಕುಕೃತ್ಯ ಮಾಡೋದೂ ಒಟ್ಟಿಗೆ ಎಂದು ಸಿಎಂ ಸಿದ್ದರಾಮಯ್ಯ ಕುಟುಕಿದರು.

Continue Reading
Advertisement
Hockey India
ಕ್ರೀಡೆ13 mins ago

Hockey India: ಭಾರತ ಮಹಿಳಾ ಹಾಕಿ ತಂಡಕ್ಕೆ 22 ವರ್ಷದ ಸಲೀಮಾ ನೂತನ ನಾಯಕಿ

Prajwal Revanna Case Revanna withdraws anticipatory bail plea
ಕ್ರೈಂ21 mins ago

Prajwal Revanna Case: ನಿರೀಕ್ಷಣಾ ಜಾಮೀನು ಅರ್ಜಿ ಹಿಂಪಡೆದ ರೇವಣ್ಣ; ವಾಪಸ್‌ ಪಡೆಯಲು ಕೋರ್ಟ್‌ ಹೇಳಿದ್ದೇಕೆ?

Kannada Serials TRP puttakkana makkalu top the list
ಕಿರುತೆರೆ21 mins ago

Kannada Serials TRP: ಈ ವಾರ ಟಿಆರ್‌ಪಿಯಲ್ಲಿʻ ಪುಟ್ಟಕ್ಕನ ಮಕ್ಕಳುʼ ಟಾಪ್‌ 1: ಕಲರ್ಸ್‌ನಲ್ಲಿ ‘ರಾಮಾಚಾರಿ’ಗೆ ಮೊದಲ ಸ್ಥಾನ!

bomber drone
ತಂತ್ರಜ್ಞಾನ27 mins ago

Bomber Drone: ಭಾರತದ ಮೊದಲ ಬಾಂಬರ್ ಡ್ರೋನ್ ಅನಾವರಣ; ಇದರ ವಿಶೇಷತೆ ಹೀಗಿದೆ ನೋಡಿ

Viral Video
ವೈರಲ್ ನ್ಯೂಸ್32 mins ago

Viral Video: ಎಲ್ಲ ಖುಷಿಯನ್ನು ಯಾಕೆ ಮನುಷ್ಯ ಮಾತ್ರ ಅನುಭವಿಸಬೇಕು? ಸ್ಮಿಮ್ಮಿಂಗ್‌ ಪೂಲ್‌ಗೆ ಲಗ್ಗೆ ಇಟ್ಟ ಮಂಗಗಳು

United Nations
ವಿದೇಶ36 mins ago

United Nations: ಪಾಕಿಸ್ತಾನ ದುಷ್ಕೃತ್ಯಗಳ ಟ್ರ್ಯಾಕ್‌ ರೆಕಾರ್ಡ್‌ ಹೊಂದಿದೆ; ವಿಶ್ವಸಂಸ್ಥೆಯಲ್ಲಿ ಗುಡುಗಿದ ಭಾರತ

Karnataka Weather Forecast
ಮಳೆ41 mins ago

Karnataka Weather Forecast : ರಾಯಚೂರಲ್ಲಿ ಬಿಸಿಲಾಜ್ಞೆ; ಮಧ್ಯಾಹ್ನ 12-4ರ ವರೆಗೆ ಹೊರಬರದಂತೆ ಡಿಸಿ ಕಟ್ಟಾಜ್ಞೆ!

Rashmika Mandanna's younger sister Shiman
ಟಾಲಿವುಡ್53 mins ago

Rashmika Mandanna: ನ್ಯಾಶನಲ್‌ ಕ್ರಶ್‌ ರಶ್ಮಿಕಾ ಮಂದಣ್ಣ ತಂಗಿ ಈಗ ಹೇಗಿದ್ದಾರೆ?

Prajwal Revanna Case Wherever Prajwal escapes we will pick him up says CM Siddaramaiah
ಕ್ರೈಂ56 mins ago

Prajwal Revanna Case: ಪ್ರಜ್ವಲ್ ದುಬೈ ಅಲ್ಲ, ಎಲ್ಲಿ ಎಸ್ಕೇಪ್‌ ಆದ್ರೂ ಅಲ್ಲಿಂದ್ಲೇ ಹಿಡಿದುಕೊಂಡು ಬರುತ್ತೇವೆ: ಸಿಎಂ ಸಿದ್ದರಾಮಯ್ಯ

Devon Thomas
ಕ್ರೀಡೆ1 hour ago

Devon Thomas: ಟಿ20 ವಿಶ್ವಕಪ್​ಗೂ ಮುನ್ನ ವಿಂಡೀಸ್​ ಬ್ಯಾಟರ್​ಗೆ 5 ವರ್ಷ ನಿಷೇಧ ಹೇರಿದ ಐಸಿಸಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ9 hours ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ19 hours ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ1 day ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ3 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20244 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20244 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20245 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20245 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20245 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

ಟ್ರೆಂಡಿಂಗ್‌