Turkey Earthquake: ಶತಮಾನದ ಭೀಕರ ಭೂಕಂಪ, ತತ್ತರಿಸಿದ ಟರ್ಕಿ, ಸಿರಿಯಾ; ಮೃತರ ಸಂಖ್ಯೆ 530ಕ್ಕೆ ಏರಿಕೆ - Vistara News

ಪ್ರಮುಖ ಸುದ್ದಿ

Turkey Earthquake: ಶತಮಾನದ ಭೀಕರ ಭೂಕಂಪ, ತತ್ತರಿಸಿದ ಟರ್ಕಿ, ಸಿರಿಯಾ; ಮೃತರ ಸಂಖ್ಯೆ 530ಕ್ಕೆ ಏರಿಕೆ

ಟರ್ಕಿ ಮತ್ತು ಸಿರಿಯಾದಲ್ಲಿ ಸಂಭವಿಸಿದ ಭೂಕಂಪಕ್ಕೆ ನೂರಾರು ಜನರು ಸಾವಿಗೀಡಾಗಿದ್ದು, ಸಾವಿರಾರು ಜನರು ಗಾಯಗೊಂಡಿದ್ದಾರೆ. ಟರ್ಕಿ ಕಂಡ ಶತಮಾನದ ಅತಿದೊಡ್ಡ ಭೂಕಂಪ ಎನ್ನಲಾಗುತ್ತಿದೆ.

VISTARANEWS.COM


on

Turkey Earthquake
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇಸ್ತಾಂಬುಲ್: ಸೋಮವಾರ ಬೆಳಗಿನ ಜಾವ ಟರ್ಕಿ ಮತ್ತು ಸಿರಿಯಾದಲ್ಲಿ ಸಂಭವಿಸಿದ ಭೀಕರ ಭೂಕಂಪದಲ್ಲಿ ಮೃತಪಟ್ಟವರ ಸಂಖ್ಯೆ 530ಕ್ಕೆ ಏರಿಕೆಯಾಗಿದೆ. ರಿಕ್ಟರ್‌ಮಾಪಕದಲ್ಲಿ 7.8 ಕಂಪನ ದಾಖಲಾಗಿದೆ. ದೇಶದ ಬಹುತೇಕ ನಗರಗಳಲ್ಲಿ ಸಾಕಷ್ಟು ಕಟ್ಟಡಗಳು ಕುಸಿದಿದ್ದರಿಂದ ಜನರ ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ಕಂಪನದ ಅನುಭವ ಸೈಪ್ರಸ್ ಮತ್ತು ಈಜಿಪ್ಟ್‌ನಲ್ಲೂ ಆಗಿದೆ(Turkey Earthquake).

ಇತ್ತೀಚಿನ ನೂರು ವರ್ಷಗಳಲ್ಲಿ ಟರ್ಕಿ ಕಂಡ ಅತಿ ದೊಡ್ಡ ಭೂಕಂಪ ಇದಾಗಿದೆ. ದೇಶದ ಪ್ರಮುಖ ನಗರಗಳಲ್ಲಿ ಸಂಪೂರ್ಣವಾಗಿ ನೆಲಸಮವಾಗಿವೆ. ಭೂಕಂಪಕ್ಕೆ ನಲುಗಿದ ಬಹುತೇಕ ನಗರಗಳಲ್ಲಿ, ಯುದ್ಧಪೀಡಿತ ಸಿರಿಯಾ ಹಾಗೂ ಇತರ ಸಂಘರ್ಷಪೀಡಿತ ಪ್ರದೇಶಗಳಿಂದ ಬಂದು ನೆಲೆಸಿದ ಜನರೇ ಬಲಿಯಾಗಿದ್ದಾರೆ. ಸಿರಿಯಾದ ರಾಷ್ಟ್ರೀಯ ಭೂಕಂಪ ಕೇಂದ್ರದ ಮುಖ್ಯಸ್ಥ ರೇದ್ ಅಹ್ಮದ್ ಅವರು, ಇತ್ತೀಚಿನ ಇತಿಹಾಸದಲ್ಲಿ ದಾಖಲಾದ ಅತಿದೊಡ್ಡ ಭೂಕಂಪ ಎಂದು ಸರ್ಕಾರಿ ರೆಡಿಯೋಗೆ ತಿಳಿಸಿದ್ದಾರೆ.

ಸಿರಿಯಾದಲ್ಲಿ 245 ಮಂದಿ ಮೃತ್ಯು

ಸರ್ಕಾರಿ ನಿಯಂತ್ರಣದಲ್ಲಿರುವ ಸಿರಿಯಾದಲ್ಲಿ ಭೂಕಂಪಕ್ಕೆ ಕನಿಷ್ಠ 245 ಜನರು ಬಲಿಯಾಗಿದ್ದಾರೆ. ಪ್ರೋ-ತುರ್ಕಿಸ್ ನಿಯಂತ್ರದಲ್ಲಿ ಸಿರಿಯಾದ ಉತ್ತರ ಭಾಗದಲ್ಲೂ ಜನರು ಸಾವಿಗೀಡಾಗಿದ್ದಾರೆ ಎಂದು ಸ್ಥಳೀಯ ಆಸ್ಪತ್ರೆ ಹಾಗೂ ಆರೋಗ್ಯ ಇಲಾಖೆ ತಿಳಿಸಿದೆ.

ಇದನ್ನೂ ಓದಿ: Nepal earthquake | ನೇಪಾಳದಲ್ಲಿ ಭೂಕಂಪ, 6 ಸಾವು, ದೆಹಲಿಯಲ್ಲೂ ನಡುಗಿದ ಭೂಮಿ

ಟರ್ಕಿಯಲ್ಲಿ ಕನಿಷ್ಠ 284 ಜನ ಸಾವು

ತೀವ್ರ ಬಾಧಿತವಾಗಿರುವ ಟರ್ಕಿಯಲ್ಲಿ ಸಾವು ನೋವಿನ ಪ್ರಮಾಣ ಹೆಚ್ಚಿದೆ. ಈವರೆಗಿನ ವರದಿಗಳ ಪ್ರಕಾರ, ಟರ್ಕಿಯಲ್ಲಿ ಕನಿಷ್ಠ 284 ಜನರು ಮೃತಪಟ್ಟಿದ್ದಾರೆ. ಈ ವಿಷಯವನ್ನು ಉಪಾಧ್ಯಕ್ಷ ಫುಟ್ ಒಕ್ಟೇ ಅವರು ಖಚಿತಪಡಿಸಿದ್ದಾರೆ. ದೇಶದ ಪ್ರಮುಖ ನಗರಗಳಲ್ಲಿ ಶೋಧ ಮತ್ತು ಪರಿಹಾರ ಕಾರ್ಯಾಚರಣೆ ನಡೆದಿದೆ. ಚಳಿಗಾಲವಾದ್ದರಿಂದ ಬಹುತೇಕ ನಗರಗಳು, ರಸ್ತೆಗಳು ಹಿಮದಿಂದ ಆವರಿಸಿದೆ. ಇದರಿಂದಾಗಿ ಪರಿಹಾರ ಕಾರ್ಯಾಚರಣೆಗೂ ಭಾರೀ ಅಡಚಣೆಯಾಗುತ್ತಿದೆ ಎಂದು ತಿಳಿದು ಬಂದಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಅಂಕಣ

ಕೇರಂ ಬೋರ್ಡ್‌ ಅಂಕಣ: ಮಲೆನಾಡಿನ ಮಳೆಯಲ್ಲಿ ಶ್ರೀರಾಮ ಏನಾದ?

ಕೇರಂ ಬೋರ್ಡ್:‌ ಸೀತೆಯನ್ನು ಕಳೆದುಕೊಂಡು ವಿರಹತಪ್ತನಾದ ಶ್ರೀರಾಮ ಮಳೆಗಾಲದ ನಾಲ್ಕು ತಿಂಗಳುಗಳನ್ನು ಪರ್ವತದ ಗುಹೆಯೊಂದರಲ್ಲಿ ಕಳೆಯಬೇಕಾಗುತ್ತದೆ. ಈ ಮಳೆಕಾಡಿದ ಮುಂಗಾರಿನ ವನವಾಸ ರಾಮನಿಗೆ ಮಾಡಿದ್ದೇನು?

VISTARANEWS.COM


on

ಕೇರಂ ಬೋರ್ಡ್‌ rama and laxmana
Koo

ʼರಾಮಾಯಣ ದರ್ಶನಂʼ ಕಾಣಿಸಿದ ಒಂದು ದರ್ಶನ

kerum board

ಮಳೆಗಾಲ (Monsoon) ಎಂದರೆ ನೆನಪಾಗುವುದು ಬಾಲ್ಯದ ಮಲೆನಾಡಿನ ಎಡೆಬಿಡದ ಮುಂಗಾರು; ನಂತರ ಅದೇ ಮೈಯಾಂತು ಬಂದಂತೆ ‘ಶ್ರೀ ರಾಮಾಯಣ ದರ್ಶನಂ’ ಕೃತಿಯಲ್ಲಿ ಕುವೆಂಪು (Kuvempu) ಕಾಣಿಸಿದ ಕಾರ್ಗಾಲ. ಅದು ಅಂತಿಂಥ ಕಾವಳದ ಕಾಲವಲ್ಲ. ಮಲೆಗಳಲ್ಲಿ ಮದುಮಗಳು, ಕಾನೂರು ಕಾದಂಬರಿಗಳಲ್ಲೂ  ಅವರ ‘ಕದ್ದಿಂಗಳು ಕಗ್ಗತ್ತಲು’ ಮೊದಲಾದ ಪದ್ಯಗಳಲ್ಲೂ  ಅದರ ಝಲಕ್ ಇದೆ. ರಾಮಾಯಣ ದರ್ಶನಂನಲ್ಲಿ ಕತೆಯ ಭಾಗವಾಗಿ, ಶ್ರೀ ರಾಮನ (Sri Rama) ಮನಸ್ಸಿನ ಭಾವರೂಪಕವಾಗಿ, ಸೀತಾವಿರಹದ ವಸ್ತುಪ್ರತಿರೂಪವಾಗಿ ಅದು ಬರುತ್ತದೆ.

ಅದು ಶುರುವಾಗುವುದು ಹೀಗೆ: ವನವಾಸದ ವೇಳೆ ಸೀತೆಯನ್ನು ಕಳೆದುಕೊಂಡ ರಾಮ ಪಂಚವಟಿಯಿಂದ ಮುಂದೊತ್ತಿ ಬಂದು ಕಿಷ್ಕಿಂಧೆಯಲ್ಲಿ ಸುಗ್ರೀವನ ಸಖ್ಯ ಬೆಳೆಸಿ, ವಾಲಿವಧೆ ಮಾಡುತ್ತಾನೆ. ಅಷ್ಟರಲ್ಲಿ ಮಳೆಗಾಲ ಸಮೀಪಿಸುತ್ತದೆ. ವನವಾಸವಾದ್ದರಿಂದ ಅವನಿಗೆ ಪುರಪ್ರವೇಶವಿಲ್ಲ. ಹೀಗಾಗಿ ಪ್ರಸ್ರವಣ ಪರ್ವತದ ಗುಹೆಯೊಂದರಲ್ಲಿ ತಂಗುತ್ತಾನೆ. ಮುಂಗಾರಿಗಾಗಿ ತಿರೆ ಬಾಯಾರಿದೆ- ಸೀತೆಯ ವಿರಹತಪ್ತ ರಾಮನ ಹಾಗೆ. ದಿಗಂತದಂಚಲ್ಲಿ ಮೇಘಸ್ತೋಮ ಮೇಲ್ಮೇಲೆದ್ದು ಬರುತ್ತದೆ-

ಸೀತೆಗೆ ರಾಮನಂತೆ, ಮುಂಗಾರ್ಗೆ ತಿರೆ
ಬಾಯಾರುತಿರೆ, ಓ ಆ ದಿಗಂತದೆಡೆ, ವರದಂತೆವೋಲ್
ಕಾಣಿಸಿತು ವರ್ಷಶಾಪಂ, ರವಿಸಂಗಿ, ಶರಧಿಶಿಶು,
ನೀರದಸ್ತೂಪನೀಲಂ, ಶಿವನ ಜಟೆಯಂತೆವೋಲ್
ಶಿಖರಾಕೃತಿಯಿನುಣ್ಮಿ, ಮೇಲೆಮೇಲಕ್ಕೇರ್ದು
ಶೈಲಾಕೃತಿಯಿನುರ್ಬ್ಬಿ, ತೆಕ್ಕನೆ ಕದದ್ದತ್ತು.
ಕುಣಿವ ಕಾಳಿಯ ಕರಿಯ ಮುಡಿ ಬಿರ್ಚ್ಚಿ ಪರ್ವುವೋಲ್,
ಸಂಜೆಬಾನಂ ಮುಸುಕಿ ಮುಚ್ಚಿ. ಮೇಣ್ ಕಾರ್ಗಾಳಿ
ಬೀಸಿದುದು ಮಲೆಯ ಮಂಡೆಯ ಕಾಡುಗೂದಲಂ
ಪಿಡಿದಲುಬಿ ತೂಗಿ, ನೋವಿಂಗೊರಲಿದತ್ತಡವಿ :
ಹಳೆಮರಗಳುರುಳಿ ; ಮರಕೆ ಮರವುಜ್ಜಿ ; ಕೊಂಬೆಗೆ
ಕೊಂಬೆ ತೀಡಿ ; ಮಳೆಯೊಳ್ ಬಿದಿರು ಕರ್ಕಶವುಲಿಯ
ಕೀರಿ, ಸಿಡಿರೋಷದಿಂ ಕಿಡಿಯಿಡುವ ಮಸಿನವಿರ
ಪುರ್ಬ್ಬಿನಾ ಕಾರ ರಾಕ್ಷಸಿಯಕ್ಷಿಯಲೆವಂತೆ

ಈ ಮುಂಗಾರು ‘ವರ್ಷಶಾಪಂ’. ವಿರಹಾಗ್ನಿದಗ್ಧ ರಾಮನಂತಃಕರಣದ ಕ್ಷೋಭೆಯಂತೆ ಇಲ್ಲಿ ಕಾಣುವುದೆಲ್ಲ ಕರಾಳ ಪ್ರತಿಮೆಗಳು- ತಲೆಕುಚ್ಚು ಹಿಡಿದಲುಗಿಸುವ, ನೋವಿಗೆ ಒರಲುವ, ಕರ್ಕಶ ಕೀರುವ ಬಿದುರಿನ, ಕಡುಗಪ್ಪುಗೂದಲಿನ ಹುಬ್ಬಿನ ಯಕ್ಷಿರಾಕ್ಷಸಿ ಇತ್ಯಾದಿ. ಮಳೆ ಶುರುವಾಗುತ್ತದೆ:

ಮಿಂಚಿತು ಮುಗಿಲಿನಂಚು, ಸಂಘಟ್ಟಣೆಗೆ ಸಿಡಿಲ್
ಗುಡುಗಿದವು ಕಾರ್ಗಲ್ ಮುಗಿಲ್‌ಬಂಡೆ, ತೋರ ಹನಿ
ಮೇಣಾಲಿಕಲ್ ಕವಣೆವೀಸಿದುವು. ಬಿಸಿಲುಡುಗಿ,
ದೂಳುಂಡೆಗಟ್ಟಿ, ಮಣ್‌ತೊಯ್ದು, ಕಮ್ಮನೆ ಸೊಗಸಿ
ತೀಡಿದುದು ನೆಲಗಂಪು ನಲ್, ಝಣನ್ನೂಪುರದ
ಸುಸ್ವರದ ಮಾಧುರ್ಯದಿಂ ಕನತ್ಕಾಂತಿಯಿಂ
ಝರದ ಝಲ್ಲರಿಯ ಜವನಿಕೆಯಾಂತು ನರ್ತಿಸುವ
ಯೌವನಾ ಯವನಿಯ ಕರದ ಪೊಂಜುರಿಗೆಯಂತೆ
ಸುಮನೋಜ್ಞಮಾದುದಾ ಭೀಷ್ಮ ಸೌಂದರ್ಯದಾ
ಮುಂಗಾರ್ ಮೊದಲ್.

ಹಿಂಗಿದುದು ಬಡತನಂ ತೊರೆಗೆ,
ಮೊಳೆತುದು ಪಸುರ್‌ ತಿರೆಗೆ, ಪೀತಾಂಬರಕೆ
ಜರತಾರಿಯೆರಚುವೋಲಂತೆ ಕಂಗೊಳಿಸಿದುದು
ಹಸುರು ಗರುಕೆಯ ಪಚ್ಚೆವಾಸಗೆಯೊಳುದುರಿರ್ದ
ಪೂವಳದಿ ಪೊನ್, ಬಂಡೆಗಲ್ ಬಿರುಕಿನಿಂದಾಸೆ
ಕಣ್ದೆರೆಯುವಂತೆ ತಲೆಯೆತ್ತಿದುದು ಸೊಂಪುವುಲ್.
ಮಿಂದು ನಲಿದುದು ನಗಂ : ಮೇದು ತಣಿದುದು ಮಿಗಂ ;
ಗರಿಗೊಂಡೆರಂಕೆಗೆದರುತೆ ಹಾಡಿ ಹಾರಾಡಿ
ಹಣ್ಣುಂಡು ಹಿಗ್ಗಿದುದು ಹಕ್ಕಿಯ ಮರಿಯ ಸೊಗಂ.
ಮಳೆ ಹಿಡಿದುದತಿಥಿಯಾಗೈತಂದವಂ ಮನೆಗೆ
ತನ್ನೊಡೆತನವನೊಡ್ಡಿ ನಿಲ್ವಂತೆ.

ಮಳೆ ಹಿಡಿದದ್ದು ಮನೆಗೆ ಬಂದ ಅತಿಥಿ ಮನೆಗೇ ಒಡೆತನವನ್ನೊಡ್ಡಿದಂತಾಯ್ತು- ಭಿಕ್ಷೆ ಬೇಡಲು ಬಂದವನು ಗೃಹಿಣಿಯನ್ನೇ ಅಪಹರಿಸಿದಂತೆ! ಇಲ್ಲಿಂದ ರಾಮನ ಏಕಾಂತದುರಿಯ, ಭಗ್ನಮಾನಸದ ದುರ್ದಿನಗಳು ಆರಂಭವಾಗುತ್ತವೆ:

ದುರ್ದಿನಂ ದ್ರವರೂಪಿಯಾಗಿ ಕರಕರೆಯ ಕರೆದುದನಿಶಂ
ದೂರವಾದುದು ದಿನಪದರ್ಶನಂ,

(ದಿನಪಕುಲಜನಿಗೆ ದಿನಪದರ್ಶನ ದುರ್ಲಭವಾಯಿತು)

ಕವಿದುದಯ್
ಕರ್ಮುಗಿಲ ಮರ್ಬ್ಬಿನ ಮಂಕು ಪಗಲಮ್. ಇರುಳಂ
ಕರುಳನಿರಿದುದು ಕೀಟಕೋಟಿಯ ಕಂಠವಿಕೃತಿ.

ಸುಖದ ದಿನಗಳಲ್ಲಿ ಜೋಗುಳವೆನಿಸಬಹುದಾಗಿದ್ದ ಇರುಳ ಕೀಟಗಳ ದನಿಯೀಗ ಕಂಠವಿಕೃತಿ. ಇಲ್ಲಿಂದಾಚೆ ಮಲೆನಾಡಿನವರಿಗೆ ಸುಲಭವಾಗಿ ಅರ್ಥವಾಗಬಹುದಾದ ಚಿತ್ರಗಳು. ಗಟ್ಟಿ ಹಿಡಿದು ಸುರಿಯುವ ಮಳೆಗೆ ಮುದುಡುವ ಜೀವರಾಜಿಯ ನೋಟಗಳು.

ramayana forest
rama laxmana

ಗರಿ ತೊಯ್ದು ಮೆಯ್ದಂಟಿ ಕಿರಿಗೊಂಡ ಗಾತ್ರದಿಂ
ಮುದುರಿದೊದ್ದೆಯ ಮುದ್ದೆಯಾಗಿ ಕುಗುರಿತು ಹಕ್ಕಿ
ಹೆಗ್ಗೊಂಬನೇರಿ, ಕಾಡಂಚಿನಾ ಪಸಲೆಯಂ
ನಿಲ್ವಿರ್ಕೆ ಗೈದು, ರೋಮಂದೊಯ್ದಜಿನದಿಂದ
ಕರ್ಪು ಬಣ್ಣಂಬಡೆದವೋಲಿರ್ದು, ಹರಹರೆಯ
ಕೊಂಬಿನಿಂದಿಂಬೆಸೆವ ಮಂಡೆಯ ಮೊಗವನಿಳುಹಿ,
ಜಡಿಯ ಜಿನುಗಿಗೆ ರೋಸಿ, ತನ್ನ ಹಿಂಡಿನ ನಡುವೆ
ನಿಂದುದು ಮಳೆಗೆ ಮಲೆತು, ಕೆಸರು ಮುಚ್ಚಿದ ಖುರದ
ಕಾಲ್ಗಳ ಮಿಗದ ಹೋರಿ.

ಕಲ್ಲರೆಯನೇರಿದುದು
ಕಟ್ಟಿರುಂಪೆಯ ಪೀಡೆಗಾರದ ಮೊಲಂ, ಜಿಗಣೆ,
ನುಸಿ, ಹನಿಗಳಿಗೆ ಹೆದರಿ ಹಳುವನುಳಿಯುತ್ತೆ ಹುಲಿ
ಹಳು ಬೆಳೆಯದತ್ತರದ ಮಲೆಯ ನೆತ್ತಿಯನರಸಿ
ಚರಿಸಿದುದು. ಜೀರೆಂಬ ಕೀ‌ದನಿಯ ಚೀ‌ರ್‌ಚೀರಿ
ಪಗಲಿರುಳ ಗೋಳಗರೆದುದಯ್ ಝಿಲ್ಲಿಕಾ ಸೇನೆ :
ಬೇಸರದೇಕನಾದಮಂ ಓ ಬೇಸರಿಲ್ಲದೆಯೆ
ಬಾರಿಸುತನವರತಂ ಬಡಿದುದು ಜಡಿಯ ಸೋನೆ !

ಹೀಗೆ ಸಾಮಾನ್ಯರಿಗೂ ಮಂಕು ಹಿಡಿಸುವ ಕಾರ್ಗಾಲ, ಜೀವನದ ಗಾಢ ವಿಷಣ್ಣಕಾಲದಲ್ಲಿರುವವನಿಗೆ ಇನ್ನು ಹೇಗಿರಬಹುದು. ಒಂದೊಂದೇ ಮಾಸ ಯಾವಾಗ ಮುಗಿಯುತ್ತದೆ, ಯಾವಾಗ ಬಿಸಿಲೇಳುತ್ತದೆ ಎಂದು ಕಾಯುವ ಕರ್ಮ.

ಕಳೆದುದಯ್ ಜೇಷ್ಠಮಾಸಂ. ತೊಲಗಿತಾಷಾಢಮುಂ.
ತೀರ್ದುದಾ ಶ್ರಾವಣಂ. ಭಾದ್ರಪದ ದೀರ್ಘಮುಂ,
ಶಿವಶಿವಾ, ಕೊನೆಮುಟ್ಟಿದತ್ತೆಂತೊ ! ದಾಶರಥಿ ತಾಂ
ಮಾಲ್ಯವತ್ ಪರ್ವತ ಗುಹಾಶ್ರಮದಿ ಕೇಳ್, ಶ್ರಮದಿಂದ
ನೂಂಕುತಿರ್ದನ್ ಮಳೆಯ ಕಾಲಮಂ, ಕಾಲಮಂ
ಸತಿಯ ಚಿಂತೆಗೆ ಸಮನ್ವಯಿಸಿ, ಬೈಗು ಬೆಳಗ
ಮೇಣ್ ಪಗಲಿರುಳಂ ದಹಿಸಿತಗಲಿಕೆವೆಂಕೆ :
ಪಡಿದೋರ್ದುದಾ ವಿರಹಮಿಂದ್ರಗೋಪಂಗಳಿಂ ಮೇಣ್
ಮಿಂಚುಂಬುಳುಗಳಿಂ; ಇರುಳ್, ಅಣ್ಣತಮ್ಮದಿ‌ರ್
ಗವಿಯೊಳ್ ಮಲಗಿ, ನಿದ್ದೆ ಬಾರದಿರೆ, ನುಡಿಯುವರ್

ಹಗಲು ಕಾಮನಬಿಲ್ಲುಗಳು ವಿರಹವನ್ನು ವೆಗ್ಗಳಿಸುವುವು. ಇರುಳು ಅಗಲಿಕೆ ಬೆಂಕಿ ದಹಿಸಿ ನಿದ್ದೆ ಬಾರದು. ಅಣ್ಣ ತಮ್ಮಂದಿರು ಕತ್ತಲನ್ನು ದಿಟ್ಟಿಸುತ್ತಾ ಮಾತನಾಡುವರು. ಮಾತಿನಲ್ಲಿ ಅಸ್ಪಷ್ಟ ಭವಿಷ್ಯದ ಚಿತ್ರ.

ಕಡೆಯುವರ್ ತಮ್ಮ ಮುಂದಣ ಕಜ್ಜವಟ್ಟೆಯಂ.
ಕಾರಿರುಳ್‌. ಹೆಪ್ಪುಗಟ್ಟಿದ ಕಪ್ಪು, ಕಲ್ಲಂತೆವೋಲ್.
ಹೊರಗೆ, ಮಳೆ ಕರಕರೆಯ ಕರೆಯುತಿದೆ. ಕಪ್ಪೆ ಹುಳು
ಹಪ್ಪಟೆಯ ಕೊರಳ ಸಾವಿರ ಹಲ್ಲ ಗರಗಸಂ
ಗರ್ಗರನೆ ಕೊರೆಯುತಿದೆ ನಿಶೆಯ ನಿಶ್ಯಬ್ದತೆಯ
ಖರ್ಪರವನಾಲಿಸಿದ ಕಿವಿ ಮೂರ್ಛೆವೋಪಂತೆ :

ಸಹ್ಯಾದ್ರಿಯ ಇರುಳಮಳೆ ಎಂದರೆ ಕಪ್ಪೆ ಇತ್ಯಾದಿ ಕೀಟಕೋಟಿಯ ಘೋಷಗಳೂ ಸೇರಿದ ಸಹಸ್ರ ದಂತ ಗರಗಸದ ಕೊರೆತ!

“ಏನ್ ವೃಷ್ಟಿ ಘೋಷಮಿದು, ಆಲಿಸಾ, ಸೌಮಿತ್ರಿ !
ಮಲೆ ಕಾಡು ನಾಡು ಬಾನ್ ಒಕ್ಕೊರಲೊಳೊಂದಾಗಿ
ಬಾಯಳಿದು ಬೊಬ್ಬಿರಿಯುತಿಪ್ಪಂತೆ ತೋರುತಿದೆ.
ಈ ಪ್ರಕೃತಿಯಾಟೋಪದೀ ಉಗ್ರತೆಯ ಮಧ್ಯೆ
ನಾವ್ ಮನುಜರತ್ಯಲ್ಪ ಕೃತಿ ! ನಮ್ಮಹಂಕಾರ
ರೋಗಕಿಂತಪ್ಪ ಬೃಹದುಗ್ರತಾ ಸಾನ್ನಿಧ್ಯಮೇ
ದಿವ್ಯ ಭೇಷಜಮೆಂಬುದೆನ್ನನುಭವಂ. ಇಲ್ಲಿ,
ಈ ಗರಡಿಯೊಳ್ ಸಾಧನೆಯನೆಸಗಿದಾತಂಗೆ
ದೊರೆಕೊಳ್ವುದೇನ್ ದುರ್ಲಭಂ ಪಾರ್ವತಸ್ಥಿರತೆ ?
ಸಾಕ್ಷಿಯದಕಿರ್ಪನಾಂಜನೇಯಂ !..”

ಆಗ ರಾಮನ ಮನದಲ್ಲಿ ಮೂಡುವ ಮೂರ್ತಿ ಆಂಜನೇಯ. ಇಂಥ ಪ್ರ‌ಕೃತಿಯಾಟೋಪದ ಬೃಹದುಗ್ರತಾಸಾನಿಧ್ಯವೇ ನಮ್ಮ ಅಹಂಕಾರಗಳು ಅಳಿಯಲು ಸೂಕ್ತ ಮದ್ದು. ಇಂಥ ಗರಡಿಯ ಸಾಧನೆಯಲ್ಲಿಯೇ ಹನುಮನಂಥ ಪರ್ವತಸ್ಥಿರ ವ್ಯಕ್ತಿತ್ವ ರೂಪುಗೊಂಡೀತು ಎಂಬ ಕಾಣ್ಕೆ ಅವನದು. ಆಮೇಲೆ ನಳ ನೀಲ ಮುಂತಾದ ವಾನರವೀರರ ಕುರಿತೂ ಮಾತಾಗುತ್ತದೆ.

ಆದರೆ ಮಳೆಗಾಲದ ಐದು ತಿಂಗಳು ಕಳೆಯುತ್ತ ಬಂದರೂ ಸುಗ್ರೀವನ ಸುಳಿವಿಲ್ಲ. ವಾನರವೀರರನ್ನು ಕರೆದುಕೊಂಡು ಬಂದು ಸೀತಾನ್ವೇಷಣೆಗೆ ನೆರವಾಗುತ್ತೇನೆ ಎಂದಿದ್ದ ಕಪಿವೀರನ ಸದ್ದಿಲ್ಲ. ಆತಂಕ ಒಳಗೊಳಗೇ ಮಡುಗಟ್ಟುತ್ತದೆ. ಮರೆತನೇನು? ಲಕ್ಷ್ಮಣ ನಾನೇ ಹೋಗಿ ಸುಗ್ರೀವನ ಕಂಡು ಬರುವೆ ಎಂದು ಹೂಂಕರಿಸುತ್ತಾನೆ. ಆದರೆ ರಾಮನೇ ಅವನನ್ನು ಸುಮ್ಮನಿರಿಸುತ್ತಾನೆ. ಈ ಭಯಂಕರ ಮಳೆಯಲ್ಲಿ ಯಾರು ಎಲ್ಲಿ ಹೇಗೆ ಓಡಾಡಲು ಸಾಧ್ಯ? ಮಳೆ ಕಳೆದ ಮೇಲೆ ಬಾ ಎಂದು ನಾನೇ ಅವನಿಗೆ ಹೇಳಿದ್ದಾನೆ ಎನ್ನುತ್ತಾನೆ. ಅಷ್ಟರಲ್ಲಿ ಬಂತು ಅಶ್ವಯುಜ ಮಾಸ!

ನುಗ್ಗುತಿರ್ದ್ದತ್ತಾಶ್ವಯುಜ ವರ್ಷಾಶ್ವದಳದ
ಹೇಷಾರವದ ಘೋಷಂ !… ಆಲಿಸುತ್ತಿದ್ದಂತೆ,
ಅರಳಿದುವು ಕಣ್ಣಾಲಿ : ಘೋರಾಂಧಕಾರದಾ
ಸಾಗರದಿ ತೇಲಿ ಬಹ ಹನಿಮಿಂಚಿನಂತೆವೋಲ್,
ಮಿಂಚುಂಬುಳೊಂದೊಯ್ಯನೊಯ್ಯನೆಯೆ ಪೊಕ್ಕುದಾ
ಕಗ್ಗತ್ತಲೆಯ ಗವಿಗೆ, ತೇಲುತೀಜುತ ಮೆಲ್ಲ
ಮೆಲ್ಲನೆಯೆ ಹಾರಾಡಿ ನಲಿದಾಡಿತಲ್ಲಲ್ಲಿ,
ಮಿಂಚಿನ ಹನಿಯ ಚೆಲ್ಲಿ, ಮಿಂಚಿನ ಹನಿಯ ಸೋರ್ವ
ಮಿಂಚುಂಬನಿಯ ಪೋಲ್ವ ಮಿಂಚುಂಬುಳುವನಕ್ಷಿ
ಸೋಲ್ವಿನಂ ನೋಡಿ, ರಾಮನ ಕಣ್ಗೆ ಹನಿ ಮೂಡಿ,
ತೊಯ್ದತ್ತು ಕೆನ್ನೆ : ತೆಕ್ಕನೆ ತುಂಬಿದುದು ಶಾಂತಿ
ತನ್ನಾತ್ಮಮಂ ! ಮತ್ತೆಮತ್ತೆ ನೋಡಿದನದಂ.
ಸಾಮಾನ್ಯಮಂ, ಆ ಅನಿರ್ವಚನೀಯ ದೃಶ್ಯಮಂ !

rama laxmana
rama laxmana

ಕಗ್ಗತ್ತಲು ಕವಿದ ರಾಮನ ಬದುಕಿಗೆ ಭರವಸೆಯ ಬೆಳಕು ಬಂದುದು ಒಂದು ಸಣ್ಣ ಮಿಂಚುಹುಳದ ಮೂಲಕ! ವಾಲ್ಮೀಕಿಯಂಥ ಆದಿಕವಿಗೂ ಹೊಳೆಯದ ದೃಶ್ಯವೊಂದು ಮಲೆನಾಡಿನ ಈ ಕವಿಗೆ ಝಗ್ಗನೆ ಹೊಳೆದುಬಿಟ್ಟಿದೆ. ಕಾರ್ಗತ್ತಲಲ್ಲಿ ತಡಕಾಡುತ್ತಿರುವವನಿಗೆ ಅಶ್ವಯುಜ ಮಾಸದ ಮಳೆ ಇಳಿಯುತ್ತ ಬಂದ ಆ ರಾತ್ರಿಯಲ್ಲಿ ಗವಿಯೊಳಗೆ ಮೆಲ್ಲಮೆಲ್ಲನೆ ಹಾರಾಡುತ್ತ ಬಂದ ಮಿಂಚುಹುಳವೊಂದು ಆಸೆಯ ಹಣತೆಗೆ ಕಿಡಿಹಚ್ಚಿತು. ನೋಡಿದ ರಾಮನ ಕಣ್ಣು ಹನಿಗೂಡಿತು, ಆತ್ಮವನ್ನು ಶಾಂತಿ ತುಂಬಿತು. ಅನಿರ್ವಚನೀಯ ದೃಶ್ಯವನ್ನು ಮತ್ತೆ ಮತ್ತೆ ನೋಡಿದ, ಕೆನ್ನೆ ತೋಯಿಸಿಕೊಂಡ.

ಕುಳ್ಳಿರ್ದ ಮಳೆಗಾಲಮೆದ್ದು ನಿಂತುದು ತುದಿಯ
ಕಾಲಿನಲಿ, ನೂಲ್‌ಸೋನೆಯಾ ತೆರೆಮರೆಯನೆತ್ತಲ್ಕೆ
ಶೈಲವರನಕೊ, ಕಾಣಿಸಿತ್ತಾತನೆರ್ದೆಗೊರಗಿ
ರಮಿಸಿರ್ದ ಕಾನನ ವಧೂ ಶ್ಯಾಮಲಾಂಬರಂ !

ಹಗಲಾಯಿತು. ನೂಲಿನಂತೆ ಸುರಿಯುತ್ತಿದ್ದ ಸೋನೆಮಳೆಯ ತೆರೆಯನ್ನು ಸರಿಸಿದಾಗ ಕಂಡದ್ದು ಮಹಾ ಪರ್ವತವೆಂಬ ವರ! ಅವನ ತೆಕ್ಕೆಗೆ ಒರಗಿದ ಹಸಿರು ವನರಾಜಿಯೆಂಬ ವಧು! ಹೆಂಡತಿಯನ್ನು ಕಳೆದುಕೊಂಡು ಪರಿತಪಿಸುತ್ತಿದ್ದ ರಾಮನಿಗೆ ಇಂಥ ಚೇತೋಹಾರಿ ದೃಶ್ಯ ಇನ್ನೊಂದು ಇದ್ದೀತೆ?

ಲಂಬಮಾನಂ ಸೋರ್ವ ಮುತ್ತಿನ ಸರಗಳಂತೆ
ಕಾವಿಯನುಳಿದ ಮಲೆಯ ತೊರೆಯ ನೀರ್‌ಬೀಳಗಳು
ಕಣ್‌ಸೆಳೆದುವಲ್ಲಲ್ಲಿ.

ಅಬ್ಬರದ ಮಳೆಯಿಂದಾಗಿ ಮಣ್ಣುನೀರು ತುಂಬಿಕೊಂಡು ಕೆಂಪಾಗಿ ಹರಿಯುತ್ತಿದ್ದ ಕಾಡಿನ ತೊರೆಗಳು ಈಗ ʼಕಾವಿ ತೊರೆದುʼ ಮುತ್ತಿನ ಸರಗಳಂತೆ ಕಾಣಿಸತೊಡಗಿದವು. ಅಂದರೆ ರಾಮನಿಗೂ ಕಾವಿ ತೊರೆಯುವ ಕಾಲ ಬಂತು.

ಕೇದಗೆಗೆ ಮುಪ್ಪಡಸಿ,
ಬೀತುದೆ ಸೀತಾಳಿ ಹೂ, ಬಾನ್‌ಬಯಲೊಳಿರ್ದ
ಮೋಡಮೋರೆಗೆ ಕರ್ಪುವೋಗಿ, ಬೆಳ್ಳಿನ ನೆಳಲ್
ಸುಳಿದುದಲ್ಲಲ್ಲಿ. ನಿಸ್ತೇಜನಾಗಿರ್ದ ರವಿ
ಘನವನಾಂತರ ವಾಸಮಂ ಮುಗಿಸಿ ಮರುಳುತಿರೆ,
ಮೇಘಸಂಧಿಗಳಿಂದೆ, ಮುಸುಕೆತ್ತಿ, ನಸುನಾಣ್ಣಿ,
ಮೊಗಕೆ ನಾಣ್‌ಬೆಟ್ಟೇರಿದಪರಿಚಿತಳಂತೆವೋಲ್
ಇಣಿಕಿತು ಗತೋಷ್ಣಾತಪಂ.

ಸೂರ್ಯನಿಗೆ ವನಾಂತರ ವಾಸ ಮುಗಿಯಿತು. ರಾಮನಿಗೆ ಇನ್ನೂ ಮುಗಿದಿಲ್ಲ. ಆದರೆ ಮುಗಿಯುವ ಸೂಚನೆ ನೀಡಿತು. ಸಂದಿದ್ದ ಬೆಚ್ಚಗಿನ ಹವೆ ಮೆಲ್ಲಗೆ ಮೈದೋರಿತು- ಮುಸುಕೆತ್ತಿ ಮುಖಕ್ಕೆ ನಸುನಾಚಿಕೆಯಿಂದ ಬೆರಳನ್ನು ಕುತ್ತಿದ ಮುಗುದೆಯಂತೆ.

ಪಾಲ್ತುಂಬಿ ತುಳ್ಕಿ
ಗರುಕೆಪಚ್ಚೆಗೆ ಸೋರ್ವ ಕೊಡಗೆಚ್ಚಲಿನ ಗೋವು
ಹೊಸಬಿಸಿಲ ಸೋಂಕಿಂಗೆ ಸೊಗಸಿ ಮೆಯ್ ಕಾಯಿಸುತೆ
ಗಿರಿಸಾನು ಶಾದ್ವಲದಿ ನಿಂತು, ಬಾಲವನೆತ್ತಿ
ಕುಣಿದೋಡಿ ಬಂದು ತನ್ನೆಳಮುದ್ದುಮೋರೆಯಂ
ತಾಯ್ತನಕೆ ಪಡಿಯೆಣೆಯ ಮೆತ್ತೆಗೆಚ್ಚಲ್ಗಿಡಿದು,
ಜೊಲ್ಲುರ್ಕೆ, ಚಪ್ಪರಿಸಿ ಮೊಲೆಯನುಣ್ಬ ಕರುವಂ
ನೆಕ್ಕಿತಳ್ಕರೆಗೆ. ಲೋಕದ ಕಿವಿಗೆ ದುರ್ದಿನಂ
ಕೊನೆಮುಟ್ಟಿದತ್ತೆಂಬ ಮಂಗಳದ ವಾರ್ತೆಯಂ
ಡಂಗುರಂಬೊಯ್ಸಿದುದು ಪಕ್ಷಿಗೀತಂ.

ಮಳೆಗಾಲದ ಕೊನೆಯ ದಿನಗಳು ಸುಭಿಕ್ಷದ, ಹಸುರಿನ, ಹಾಲು ತುಂಬಿ ತುಳುಕುವ ಕೊಡಗೆಚ್ಚಲಿನ ಗೋವುಗಳ ಕಾಲ. ದುರ್ದಿನಗಳು ಮುಗಿದವು ಎಂಬ ಘೋಷವನ್ನು ಪಕ್ಷಿಗೀತೆಗಳು ಡಂಗುರ ಸಾರಿದವು.

ಹೀಗೆ ಮಳೆಗಾಲದ ವರ್ಣನೆ ಕೊನೆಯಾಗುತ್ತದೆ. ಇಲ್ಲಿಂದ ಮುಂದೆ ಸುಗ್ರೀವಾಜ್ಞೆ, ವಾನರವೀರರ ದಿಟ್ಟ ಹೋರಾಟದ ಸುಂದರ ಪುಟಗಳು ತೆರೆದುಕೊಳ್ಳುತ್ತವೆ. ಅಯೋಧ್ಯೆಯ ನಗರವಾಸಿ ರಾಮ, ಕರ್ನಾಟಕದ ಸಹ್ಯಾದ್ರಿಯ ಮಲೆಗಳ ನಡುವೆ ಗುಹೆಯಲ್ಲಿ, ಮುಂಗಾರಿನ ಬಿರುಹೊಯ್ಲಿನ, ಕಾರ್ಗತ್ತಲಿನ, ಸೋನೆಮಳೆಯ, ಮಿಂಚುಹುಳಗಳ, ದಿನಗಳ ನಡುವೆ ಆಶೆನಿರಾಶೆಗಳ ರಾಟವಾಳದಲ್ಲಿ ಕುಳಿತು ಏರಿಳಿಯುತ್ತಾನೆ. ಮಳೆಗಾಲ ಮುಗಿದಾಗ ಅವನು ಕತ್ತಲ ಗವಿಯನ್ನು ದಾಟಿ ಹೊಸ ಬೆಳಕನ್ನು ಕಾಣುತ್ತಿರುವ ಹೊಸ ಮನುಷ್ಯನಾಗಿದ್ದಾನೆ.

ಈತ ವಾಲ್ಮೀಕಿಗೆ ಕಾಣಿಸಿರದ, ಕುವೆಂಪುಗೆ ಮಾತ್ರ ಕಾಣಿಸಬಹುದಾದ ರಾಮ.

ಇದನ್ನೂ ಓದಿ: ಕೇರಂ ಬೋರ್ಡ್‌ | ಗಾಂಧಿಕ್ಲಾಸಿನಲ್ಲಿ ಕುಳಿತು ಒಂದೆರಡು ನೋಟ

Continue Reading

ಅಂಕಣ

ರಾಜಮಾರ್ಗ ಅಂಕಣ: ಈ 20 ಅಂಶಗಳನ್ನು ಸರಿಯಾಗಿ ಪಾಲಿಸಿದರೆ ಗೋಲ್ಡನ್ ಮೆಮೊರಿ ನಿಮ್ಮದು!

ರಾಜಮಾರ್ಗ ಅಂಕಣ: ಗೋಲ್ಡನ್ ಮೆಮೊರಿ (Golden Memory) ನಿಮ್ಮದಾಗಿದ್ದರೆ ಅದು ನಿಮ್ಮ ಯಶಸ್ಸಿನ ಮೊದಲ ಮೆಟ್ಟಿಲು ಆಗಬಲ್ಲದು. ಈ ಗೋಲ್ಡನ್ ಮೆಮೊರಿಯನ್ನು ನಿಮ್ಮದಾಗಿಸಲು ಈ 20 ಅಂಶಗಳನ್ನು ಸರಿಯಾಗಿ ಪಾಲಿಸಿ.

VISTARANEWS.COM


on

golden memory ರಾಜಮಾರ್ಗ ಅಂಕಣ
Koo

ಮೆಮೊರಿ ಒಂದು ಮಿರಾಕಲ್

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ನೆನಪು (Memory) ಒಂದು ವಿಸ್ಮಯಕಾರಿ ಆದ ವಿದ್ಯಮಾನ. ಒಳ್ಳೆಯ ಮೆಮೊರಿ ಪವರ್ (memory Power) ಇದ್ದವರು ಜಗತ್ತನ್ನು ಗೆಲ್ಲಬಹುದು. ಪರೀಕ್ಷೆಗಳಲ್ಲಿ ಟಾಪರ್ (Exam Topper) ಆಗಲು, ಉದ್ಯೋಗವನ್ನು ಚೆನ್ನಾಗಿ ಮಾಡಲು, ವ್ಯಕ್ತಿಗಳನ್ನು ಸರಿಯಾಗಿ ಗುರುತಿಸಲು, ಹಣಕಾಸಿನ ವ್ಯವಹಾರ ಚಂದವಾಗಿ ಮಾಡಲು, ಸಂಬಂಧಗಳನ್ನು ಸರಿಯಾಗಿ ನಿಭಾಯಿಸಲು, ಒಳ್ಳೆಯ ಲೇಖಕರಾಗಲು, ಉತ್ತಮ ಭಾಷಣಕಾರರಾಗಲು ಎಲ್ಲದಕ್ಕೂ ಮೆಮೊರಿ ಬೇಕು. ಗೋಲ್ಡನ್ ಮೆಮೊರಿ (Golden Memory) ನಿಮ್ಮದಾಗಿದ್ದರೆ ಅದು ನಿಮ್ಮ ಯಶಸ್ಸಿನ ಮೊದಲ ಮೆಟ್ಟಿಲು ಆಗಬಲ್ಲದು. ಈ ಗೋಲ್ಡನ್ ಮೆಮೊರಿಯನ್ನು ನಿಮ್ಮದಾಗಿಸಲು ಈ 20 ಅಂಶಗಳನ್ನು ಸರಿಯಾಗಿ ಪಾಲಿಸಿ.

1) ಅರ್ಥ ಮಾಡಿಕೊಂಡು ಕಲಿಯಿರಿ. ಬಾಯಿಪಾಠವು ಲಾಂಗ್ ರೇಂಜಿನಲ್ಲಿ ಸೋಲುತ್ತದೆ.

2) ಯಾಕೆ ಓದಬೇಕು? ಎನ್ನುವುದು ಮೂಲಭೂತವಾದ ಪ್ರಶ್ನೆ. ಅದು ಕಲಿಕೆಯ ಉದ್ದೇಶ (PURPOSE). ಅದನ್ನು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕು. ಉದಾಹರಣೆಗೆ ನಾನು ಜ್ಞಾನಕ್ಕಾಗಿ ಓದುತ್ತೇನೆ. ಇನ್ನೂ ಕೆಲವರು ಖುಷಿಗಾಗಿ ಓದುತ್ತಾರೆ. ಮತ್ತೂ ಕೆಲವರು ಓದಿದ ಅಂಶಗಳನ್ನು ಬೇರೆಯವರಿಗೆ ಹಂಚಲು ಓದುತ್ತಾರೆ. ವಿದ್ಯಾರ್ಥಿಗಳು ಉತ್ತಮ ಮಾರ್ಕ್ ಪಡೆಯಲು ಓದುತ್ತಾರೆ ಇತ್ಯಾದಿ.

3) ಕಲಿಯಬೇಕಾದ ವಿಷಯಗಳನ್ನು ವ್ಯವಸ್ಥಿತವಾಗಿ ಜೋಡಿಸಿ. ಅಂದರೆ ಸುಲಭವಾದ ವಿಷಯಗಳನ್ನು ಮೊದಲು ಕಲಿಯುವುದು, ಕಷ್ಟವಾದ ವಿಷಯಗಳನ್ನು ನಂತರ ಕಲಿಯುವುದು ಇತ್ಯಾದಿ.

4) ಶಬ್ದಗಳು ಬೇಗನೇ ಮರೆತು ಹೋಗುತ್ತವೆ. ಆದರೆ ಚಿತ್ರಗಳು ಹೆಚ್ಚು ಕಾಲ ನೆನಪಿನಲ್ಲಿ ಉಳಿಯುತ್ತವೆ. ದೀರ್ಘಕಾಲದ ಮೆಮೊರಿಗೆ ಚಿತ್ರಗಳ ನೆರವು ಪಡೆಯಿರಿ.

5) ನಾನು ನೆನಪು ಇಡಬಲ್ಲೆ ಎಂಬ ಆತ್ಮವಿಶ್ವಾಸವು ನಿಮ್ಮನ್ನು ಗೆಲ್ಲಿಸುತ್ತದೆ. ಆತ್ಮವಿಶ್ವಾಸವು ನಿಮ್ಮ ಅಷ್ಟೂ ಧನಾತ್ಮಕ ಯೋಚನೆಗಳ (POSSITIVE THINKING) ಉತ್ಪನ್ನ ಆಗಿರುತ್ತದೆ.

6) ಬಹುಮಾಧ್ಯಮ ಕಲಿಕೆಯು ನಿಮ್ಮ ಮೆಮೊರಿ ಪವರನ್ನು ಹೆಚ್ಚು ಮಾಡುತ್ತದೆ. ಅಂದರೆ ಬಣ್ಣದ ಚಿತ್ರಗಳ ಮೂಲಕ ಕಲಿಕೆ, ವಿಡಿಯೋಗಳ ಮೂಲಕ ಕಲಿಕೆ, ಮ್ಯೂಸಿಕ್ ಬಳಸಿಕೊಂಡು ಕಲಿಕೆ, ಆಡಿಯೋ ಬಳಸಿಕೊಂಡು ಕಲಿಕೆ ಇತ್ಯಾದಿ.

7) ಒತ್ತಡ ಇಲ್ಲದೆ ಕಲಿಯುವುದು ತುಂಬಾ ಮುಖ್ಯ. ಈ ಒತ್ತಡವು ನಿಮ್ಮ ಕಲಿಯುವ ಸಾಮರ್ಥ್ಯವನ್ನು ಮತ್ತು ಮೆಮೊರಿ ಪವರನ್ನು ಇಂಚಿಂಚು ಸಾಯಿಸುತ್ತದೆ.

8) ಭಾವನಾತ್ಮಕ ಕಲಿಕೆ ನಿಮ್ಮ ಮೆಮೊರಿ ಪವರನ್ನು ಹಲವು ಪಟ್ಟು ವೃದ್ಧಿಸುತ್ತದೆ. ಅಂದರೆ ನಾವು ಕಲಿಯುವ ವಿಷಯವನ್ನು ಪ್ರೀತಿ ಮಾಡುತ್ತಾ ಕಲಿಯುವುದು ಎಂದರ್ಥ. ಅದು ಹೇಗೆ ಎಂದು ಯೋಚಿಸಿ.

9) ಸಣ್ಣ ತರಗತಿಗಳಲ್ಲಿ ಗಟ್ಟಿಯಾಗಿ ಓದುವುದು (Loud Reading) ಹೆಚ್ಚು ಅನುಕೂಲಕರ. ಆದರೆ ಪ್ರೌಢಶಾಲೆಯ ಹಂತಕ್ಕೆ ಬಂದಾಗ ಮೌನ ಓದು (Silent Reading) ನಿಮಗೆ ಹೆಚ್ಚು ಫಲಿತಾಂಶ ನೀಡುತ್ತದೆ.

10) ಪ್ಯಾಸಿವ್ ರೀಡಿಂಗ್ (PASSIVE READING) ಮಾಡುವುದಕ್ಕಿಂತ ಕ್ರಿಯೇಟಿವ್ ರೀಡಿಂಗ್ ಹೆಚ್ಚು ಮೆಮೊರಿಯನ್ನು ಖಾತ್ರಿ ಪಡಿಸುತ್ತದೆ. ಅಂದರೆ ಹೊಸ ಹೊಸ ರೀತಿಯಿಂದ ಕಲಿಯಲು ತೊಡಗುವುದು.

11) ಹೆಚ್ಚು ಏಕಾಗ್ರತೆಯಿಂದ ಓದುವುದು ತುಂಬಾ ಮುಖ್ಯ. ಪ್ರಶಾಂತವಾದ ಮನಸ್ಸು ಹೆಚ್ಚು ಮೆಮೊರಿಯನ್ನು ಉತ್ತೇಜನ ಮಾಡುತ್ತದೆ.

reading hobby
golden memory

13) ನಮ್ಮ ಮೆದುಳಿನಲ್ಲಿ ಮೆಮೊರಿಯನ್ನು ಉತ್ತೇಜನ ಮಾಡುವ SEROTONIN ಎಂಬ ಹಾರ್ಮೋನ್ ಉತ್ಪತ್ತಿ ಆಗ್ತಾ ಇರುತ್ತದೆ. ಮೆದುಳಿಗೆ ಸರಿಯಾದ ವಿಶ್ರಾಂತಿ ಕೊಟ್ಟಾಗ, ದಿನಕ್ಕೆ ಕನಿಷ್ಟ 6-8 ಘಂಟೆ ನಿದ್ರೆ ಮಾಡಿದಾಗ, ಮೆದುಳಿಗೆ ಹೆಚ್ಚು ಖುಷಿ ಕೊಡುವ ಚಟುವಟಿಕೆಗಳನ್ನು ಕೊಟ್ಟಾಗ, ಉತ್ತಮ ಹವ್ಯಾಸಗಳನ್ನು ರೂಡಿ ಮಾಡಿದಾಗ ಆ ಹಾರ್ಮೋನ್ ಮಿರಾಕಲಸ್ ಮೆಮೊರಿ ಕ್ರಿಯೇಟ್ ಮಾಡುತ್ತದೆ.

14) ಮುಖ್ಯಾಂಶಗಳನ್ನು ಬರೆಯುವ ಅಭ್ಯಾಸವು ತುಂಬಾ ಒಳ್ಳೆಯದು. ಚೆಂದವಾಗಿ ಬರೆಯುವುದರಿಂದ ನಿಮ್ಮ ಬಲ ಮೆದುಳು (ರೈಟ್ ಬ್ರೈನ್) ಹೆಚ್ಚು ಚುರುಕು ಆಗುತ್ತದೆ ಎನ್ನುತ್ತಾರೆ ವಿಜ್ಞಾನಿಗಳು. ಹಾಗೆಯೇ ಪ್ರತೀ ದಿನವೂ ದಿನಚರಿ (ಡೈರಿ) ಬರೆಯುವುದು ಕೂಡ ನಿಮ್ಮ ಮೆಮೊರಿಗೆ ಪೂರಕ.

15) ಯೋಗಾಸನ, ಪ್ರಾಣಾಯಾಮ , ಧ್ಯಾನ, ಪೌಷ್ಟಿಕ ಆಹಾರದ ಸೇವನೆ, ಮೌನವಾದ ವಾಕಿಂಗ್ ನಿಮ್ಮ ಮೆಮೊರಿ ಪವರನ್ನು ಹೆಚ್ಚು ಮಾಡುವ ಚಟುವಟಿಕೆಗಳು. ಮೆದುಳಿಗೆ ಹೆಚ್ಚು ರಕ್ತ ಸರಬರಾಜು ಆಗುವ ಆಸನಗಳನ್ನು ಒಳ್ಳೆಯ ಗುರುಗಳ ಮೂಲಕ ಕಲಿಯಲು ಪ್ರಯತ್ನಿಸಿ.

16) ಓದಲು ಆರಂಭಿಸುವ ಮೊದಲು 10-15 ನಿಮಿಷ ಕ್ಲಾಸಿಕಲ್ ಸಂಗೀತ ಅಥವಾ INSTRUMENTAL MUSIC (ಸಿತಾರ್, ವೀಣೆ, ವಯಲಿನ್ ಇತ್ಯಾದಿ) ಕೇಳುವುದರಿಂದ ನಿಮ್ಮ ಓದುವ ಸಾಮರ್ಥ್ಯವು ಹೆಚ್ಚಾಗುತ್ತದೆ ಮತ್ತು ಮೆಮೊರಿ ಪವರ್ ಕೂಡ ಹೆಚ್ಚುತ್ತದೆ.

golden memory
golden memory

17) ನೀವು ಓದಿದ್ದನ್ನು ಇನ್ನೊಬ್ಬರಿಗೆ ವಿವರಿಸುವಾಗ ಅದು ನಿಮ್ಮ ಮೆಮೊರಿ ಪವರನ್ನು ಉತ್ತೇಜನ ಮಾಡುತ್ತದೆ. ಆದ್ದರಿಂದ ಗ್ರೂಪ್ ಸ್ಟಡಿಯು ಮೆಮೊರಿ ಜಾಸ್ತಿ ಮಾಡಲು ಅತ್ಯುತ್ತಮ ವಿಧಾನ ಎಂದು ಮಾನ್ಯತೆ ಪಡೆದಿದೆ.

18) ಮೆಮೊರಿ ಹೆಚ್ಚು ಮಾಡಲು ಪುನರ್ ಮನನ (Recalling) ಅತ್ಯುತ್ತಮ ವಿಧಾನ. ರಾತ್ರಿ ಮಲಗುವ ಮೊದಲು ಒಂದು ಹತ್ತು ನಿಮಿಷ ಬಿಡುವು ಮಾಡಿಕೊಂಡು ಇಂದು ನಾನು ಯಾವುದನ್ನು ಯಾವ ಅನುಕ್ರಮದಲ್ಲಿ ಕಲಿತೆ? ಯಾರನ್ನು ಇಂದು ಭೇಟಿ ಮಾಡಿದೆ? ಯಾವ ಹೊಸ ಅನುಭವ ಪಡೆದುಕೊಂಡೆ? ಇತ್ಯಾದಿ ರಿಕಾಲ್ ಮಾಡುತ್ತಾ ಹೋದಾಗ ನಿಮ್ಮ ಮೆಮೊರಿ ನೂರು ಪಟ್ಟು ವೃದ್ಧಿ ಆಗುತ್ತದೆ. ಹಾಗೆಯೇ ಪ್ರತೀ ಒಂದು ಘಂಟೆಯ ಓದಿನ ನಂತರ 5-10 ನಿಮಿಷ ರಿಕಾಲ್ ಮಾಡುತ್ತಾ ಹೋದರೆ ಮೆಮೊರಿ ಗೆಲ್ಲುತ್ತದೆ.

19) ನಿಮ್ಮ ಮೆದುಳಿನಲ್ಲಿ ಜಂಕ್ (ತಂಗಳು) ಸಂಗತಿಗಳು ಹೆಚ್ಚು ಪ್ರವೇಶ ಮಾಡದ ಹಾಗೆ ಪ್ಲಾನ್ ಮಾಡಿಕೊಳ್ಳಿ. ಉದಾಹರಣೆಗೆ ಅನಗತ್ಯವಾದ ಇಸವಿಗಳು, ಉದ್ದುದ್ದವಾದ ಮೊಬೈಲ್ ನಂಬರು ಅನಗತ್ಯವಾದ ಕ್ರಿಕೆಟ್ ದಾಖಲೆಗಳು, ನೋವು ಕೊಡುವ ಸಂಗತಿಗಳು ಇತ್ಯಾದಿ.

20) ಮೆಮೊರಿ ಹೇಗೆ ಸಹಜವೋ ಮರೆಯುವುದು (Forgetting) ಕೂಡಾ ಅಷ್ಟೇ ಸಹಜ! ಯಾವ ಮೆಮೊರಿ ನಿಮಗೆ ಮುಂದೆ ಅಗತ್ಯ ಬೀಳುವುದಿಲ್ಲವೋ ಅವುಗಳನ್ನು ನಿಮ್ಮ ಮೆದುಳು ಚಂದವಾಗಿ ಒರೆಸುತ್ತಾ (Erasing) ಮುಂದೆ ಹೋಗುತ್ತದೆ. ಆದ್ದರಿಂದ ಏನಾದರೂ ಸಣ್ಣ ಪುಟ್ಟ ಮರೆವು ಉಂಟಾದರೆ ಆತಂಕ ಮಾಡದೇ ಮುಂದೆ ಹೋಗುವುದೇ ಒಳ್ಳೇದು.

ಅದ್ಭುತವಾದ ಗೋಲ್ಡನ್ ಮೆಮೊರಿ ನಿಮ್ಮದಾಗಲಿ ಎಂಬುದು ನಮ್ಮ ಹಾರೈಕೆ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ಮುಕೇಶ್ ಅಂದರೆ ಹಾಂಟಿಂಗ್ ಮೆಲಡಿ, ನೋವಿನಲ್ಲಿ ಅದ್ದಿ ತೆಗೆದ ದನಿ!

Continue Reading

ದೇಶ

Taj Mahal : ತಾಜ್​ ಮಹಲ್ ಅಥವಾ ತೇಜೋ ಮಹಾಲಯ? ಐತಿಹಾಸಿಕ ಸ್ಮಾರಕ ಶಿವ ದೇವಾಲಯ ಎಂದು ವಾದಿಸಿ ಗಂಗಾಜಲ ಅರ್ಪಿಸಲು ಮುಂದಾದ ಮಹಿಳೆ!

Taj Mahal : ಆಕೆಯನ್ನು ಪಶ್ಚಿಮ ದ್ವಾರದ ಬಳಿ ತಡೆಯಲಾಯಿತು. ಹೀಗಾಗಿ ಅವರಿಗೆ ತಾಜ್ ಮಹಲ್ ಪ್ರವೇಶಿಸಲು ಸಾಧ್ಯವಾಗಲಿಲ್ಲ. ಸ್ವಲ್ಪ ಸಮಯದ ನಂತರ, ರಾಜೇಶ್ವರ ದೇವಸ್ಥಾನದಲ್ಲಿ ಗಂಗಾಜಲವನ್ನು ಅರ್ಪಿಸಿದರು ” ಎಂದು ತಾಜ್ ಸುರಕ್ಷಾದ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ಸೈಯದ್ ಆರೀಬ್ ಅಹ್ಮದ್ ಹೇಳಿದ್ದಾರೆ.

VISTARANEWS.COM


on

Taj Mahal
Koo

ನವದೆಹಲಿ: ಕನ್ವರ್ ಯಾತ್ರೆಗೆ ಬಂದಿದ್ದ ಮಹಿಳೆಯೊಬ್ಬರು ಸೋಮವಾರ ಐತಿಹಾಸಿಕ ಸ್ಮಾರಕ ಹಾಗೂ ಪ್ರೀತಿಯ ಪ್ರತೀಕ ಎಂದು ಪರಿಗಣಿಸಲಾಗಿರುವ ತಾಜ್ ಮಹಲ್ (Taj Mahal ) ಹೊರಗೆ ‘ಕವಾಡ್’ ನೊಂದಿಗೆ (ಕನ್ವರ್ ಯಾತ್ರೆಯ ಸಮಯದಲ್ಲಿ ಗಂಗಾ ನದಿಯಿಂದ ಪವಿತ್ರ ನೀರು ಸಾಗಿಸುವ ಮಡಕೆಗಳು) ಬಂದ ಘಟನೆ ನಡೆಯಿತು. ಅವರು ತಾಜ್​ ಮಹಲ್ ಅಲ್ಲ, ಶಿವ ದೇವಾಲಯ ಎಂದು ವಾದಿಸಿದ್ದಾರೆ.

ಅಖಿಲ ಭಾರತ ಹಿಂದೂ ಮಹಾಸಭಾದ ಜಿಲ್ಲಾಧ್ಯಕ್ಷೆ ಮೀನು ರಾಥೋಡ್ ಗಂಗಾಜಲ ಅರ್ಪಿಸಲು ಮುಂದಾದ ಮಹಿಳೆ. ಸೋಮವಾರ ತಾಜ್ ಮಹಲ್ನ ಪಶ್ಚಿಮ ದ್ವಾರಕ್ಕೆ ‘ಕವಡ್’ ಅನ್ನು ಹೆಗಲ ಮೇಲೆ ಹೊತ್ತುಕೊಂಡು ಬಂದಾಗ ಅವರನ್ನು ತಡೆಯಲಾಯಿತು. ಆವರಣದಲ್ಲಿ ನಿಯೋಜಿಸಲಾಗಿದ್ದ ‘ತಾಜ್ ಸುರಕ್ಷಾ’ದ ಪೊಲೀಸರು ಆಕೆಗೆ ಮುಂದೆ ಹೋಗಲು ಅವಕಾಶ ನೀಡಲಿಲ್ಲ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಆಕೆಯನ್ನು ಪಶ್ಚಿಮ ದ್ವಾರದ ಬಳಿ ತಡೆಯಲಾಯಿತು. ಹೀಗಾಗಿ ಅವರಿಗೆ ತಾಜ್ ಮಹಲ್ ಪ್ರವೇಶಿಸಲು ಸಾಧ್ಯವಾಗಲಿಲ್ಲ. ಸ್ವಲ್ಪ ಸಮಯದ ನಂತರ, ರಾಜೇಶ್ವರ ದೇವಸ್ಥಾನದಲ್ಲಿ ಗಂಗಾಜಲವನ್ನು ಅರ್ಪಿಸಿದರು ” ಎಂದು ತಾಜ್ ಸುರಕ್ಷಾದ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ಸೈಯದ್ ಆರೀಬ್ ಅಹ್ಮದ್ ಹೇಳಿದ್ದಾರೆ.

ತಾಜ್ ಮಹಲ್ ಅನ್ನು ಪ್ರಾಚೀನ ಶಿವ ದೇವಾಲಯದ ಮೇಲೆ ನಿರ್ಮಿಸಲಾಗಿದೆ ಎಂದು ಬಲಪಂಥೀಯ ಹಿಂದೂ ಗುಂಪುಗಳು ವಾದಿಸುತ್ತಿವೆ. ಅಂತೆಯೇ ಈ ವಾದವನ್ನು ಉಲ್ಲೇಖಿಸಿ ಮೀನು ರಾಥೋಡ್ “ತೇಜೋ ಮಹಾಲಯ” ದಲ್ಲಿ ‘ಗಂಗಾಜಲ’ ಅರ್ಪಿಸಲು ಅನುಮತಿ ನೀಡುವಂತೆ ಪೊಲೀಸ್ರಿಗೆ ಬೇಡಿಕೆ ಇಟ್ಟಿದ್ದರು.

ಅದು ತೇಜೋ ಮಹಾಲಯ’

ಘಟನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮೀನು ರಾಥೋಡ್, ತನ್ನ ಕನಸಿನಲ್ಲಿ ಶಿವ ಬಂದಿದ್ದು ತೇಜೋ ಮಹಾಲಯದಲ್ಲಿ ಗಂಗಾಜಲವನ್ನು ಅರ್ಪಿಸಲು ಆದೇಶಿಸಿದ್ದ ಎಂದು ಹೇಳಿದ್ದಾರೆ. “ನಾನು ಗಂಗಾಜಲ ಅರ್ಪಿಸಲು ತೇಜೋ ಮಹಾಲಯಕ್ಕೆ ಬಂದಿದ್ದೇನೆ. ಭೋಲೆ ಬಾಬಾ ನನ್ನ ಕನಸಿನಲ್ಲಿ ನನ್ನ ಬಳಿಗೆ ಬಂದಿದ್ದರು. ನಾನು ತೇಜೋ ಮಹಾಲಯದಲ್ಲಿ ಅರ್ಪಿಸಲು ಕನ್ವರ್ ಅನ್ನು ತಂದಿದ್ದೆ . ಆದರೆ, ಪೊಲೀಸರು ನನ್ನನ್ನು ಮುಂದೆ ಹೋಗದಂತೆ ತಡೆದಿದ್ದಾರೆ ಎಂದು ರಾಥೋಡ್ ಹೇಳಿದ್ದಾರೆ.

ಇದನ್ನೂ ಓದಿ: NEET-UG : ಆಗಸ್ಟ್ 14ರಿಂದ ನೀಟ್-ಯುಜಿ ಕೌನ್ಸೆಲಿಂಗ್ ಆರಂಭ

ಬಲಪಂಥೀಯ ಗುಂಪಿನ ವಕ್ತಾರ ಸಂಜಯ್ ಜಾಟ್​ ಅವರು “ತೇಜೋ ಮಹಾಲಯ” ಎಂಬುದನ್ನು ಪುನರುಚ್ಚರಿಸಿದರು. ತಾಜ್ ಮಹಲ್ ಶಿವನ ದೇವಾಲಯವಾಗಿರುವುದರಿಂದ ಗಂಗಾಜಲವನ್ನು ಅರ್ಪಿಸುವುದು “ನಮ್ಮ ಹಕ್ಕು” ಎಂದು ಪ್ರತಿಪಾದಿಸಿದರು.

ತಾಜ್ ಮಹಲ್ ಶಿವನ ದೇವಾಲಯವಾದ ‘ತೇಜೋ ಮಹಾಲಯ’ ಆಗಿರುವುದರಿಂದ ತಾಜ್ ಮಹಲ್​​ನಲ್ಲಿ ‘ಗಂಗಾ ಜಲ’ ಅರ್ಪಿಸುವುದು ನಮ್ಮ ಹಕ್ಕು. ಮೀನು ಅವರು ಕಾಸ್​ಗಂಜ್​ನ ಸೊರೊನ್ ಜಿಯಿಂದ ಕನ್ವರ್ ತಂದು ಎರಡು ದಿನಗಳ ನಂತರ ಆಗ್ರಾ ತಲುಪಿದ್ದರು ಎಂದು ಜಾಟ್ ಹೇಳಿದ್ದಾರೆ.

ತಾಜ್ ಮಹಲ್

ವಿಶ್ವದ ಏಳು ಅದ್ಭುತಗಳಲ್ಲಿ ಒಂದಾದ ತಾಜ್ ಮಹಲ್ ಉತ್ತರ ಪ್ರದೇಶದ ಆಗ್ರಾದಲ್ಲಿ ಯಮುನಾ ನದಿಯ ದಡದಲ್ಲದೆ. ಇದು ಬಿಳಿ ಅಮೃತಶಿಲೆಯಲ್ಲಿ ನಿರ್ಮಿಸಿದ ಸಮಾಧಿಯಾಗಿದೆ. ಈ ಅಪ್ರತಿಮ ಸ್ಮಾರಕವನ್ನು ಕ್ರಿ.ಶ 1631 ರಲ್ಲಿ ಐದನೇ ಮೊಘಲ್ ಚಕ್ರವರ್ತಿ ಶಹಜಹಾನ್ ತನ್ನ ಪತ್ನಿ ಮುಮ್ತಾಜ್ ನೆನಪಿನ ಸಮಾಧಿಯನ್ನು ಕಟ್ಟಿದ್ದ ಎಂದು ಇತಿಹಾಸ ಹೇಳುತ್ತದೆ.

ಈ ಸಂಕೀರ್ಣ ಸುಮಾರು 42 ಎಕರೆ ಪ್ರದೇಶದಲ್ಲಿ ನಿರ್ಮಿಸಲಾಗಿದ್ದು, ಸಮಾಧಿಯು ಅದರ ಕೇಂದ್ರಬಿಂದುವಾಗಿದೆ. ಈ ಸಂಕೀರ್ಣವು ಮಸೀದಿ ಮತ್ತು ಅತಿಥಿ ಗೃಹ ಸಹ ಒಳಗೊಂಡಿದೆ/. ಉದ್ಯಾನಗಳಲ್ಲಿ ಮೂರು ಬದಿಗಳಲ್ಲಿ ಕ್ರೆನೆಲ್ಡ್ ಗೋಡೆಯಿಂದ ಸುತ್ತುವರೆದಿದೆ. ತಾಜ್ ಮಹಲ್ ನಲ್ಲಿ 1658 ರಲ್ಲಿ ನಿಧನರಾದ ಶಹಜಹಾನ್ ಅವರ ಸಮಾಧಿಯೂ ಇದೆ.

Continue Reading

ಕ್ರೀಡೆ

Paris Olympics 2024 : ಒಲಿಂಪಿಕ್ಸ್​ನಲ್ಲಿ ಇಂದು ಭಾರತದ ಅಥ್ಲೀಟ್​ಗಳ ಸ್ಪರ್ಧೆಗಳ ವಿವರ ಇಲ್ಲಿದೆ

Paris Olympics 2024 : 1900ರಲ್ಲಿ ಪ್ಯಾರಿಸ್​ನಲ್ಲಿ ನಡೆದ ಕ್ರೀಡಾಕೂಟದಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ನಾರ್ಮನ್ ಪ್ರಿಚರ್ಡ್ ಎರಡು ಬೆಳ್ಳಿ ಪದಕಗಳನ್ನು ಗೆದ್ದಿದ್ದರು. ಅಲ್ಲಿಂದ ಭಾರತ ಸಾಧನೆ ಮಾಡಿಲ್ಲ. ಮಂಗಳವಾರ ಅರ್ಜೆಂಟೀನಾ ವಿರುದ್ಧದ ಕಠಿಣ ಹೋರಾಟದ ಪಂದ್ಯವನ್ನು ಡ್ರಾದ ನಂತರ ಪುರುಷರ ಹಾಕಿ ತಂಡವು ಐರ್ಲೆಂಡ್ ವಿರುದ್ಧ ಆಡಲಿದೆ.

VISTARANEWS.COM


on

Paris Olympics 2024
Koo

ಬೆಂಗಳೂರು: ಪ್ಯಾರಿಸ್​ನಲ್ಲಿ ಅದ್ಧೂರಿಯಾಗಿ ನಡೆಯುತ್ತಿರುವ ಒಲಿಂಪಿಕ್ಸ್​ನಲ್ಲಿ (Paris Olympics 2024) ನಾಲ್ಕನೇ ದಿನದಲ್ಲಿ ಭಾರತ ಅಥ್ಲೀಟ್​ಗಳು ಕೆಲವು ಸ್ಪರ್ಧೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಭಾರತ ಇದುವರೆಗೆ ಕೇವಲ 1 ಕಂಚಿನ ಪದಕವನ್ನು ಮಾತ್ರ ಪಡೆದಿದೆ. ಆದಾಗ್ಯೂ ಇನ್ನೂ ಪದಕಗಳನ್ನು ಗೆಲ್ಲುವ ಭರವಸೆಯಿದೆ. ಹೀಗಾಗಿ ಕ್ರೀಡಾಭಿಮಾನಿಗಳಲ್ಲಿ ಹೆಚ್ಚು ಕುತೂಹಲ ಸೃಷ್ಟಿಯಾಗಿದೆ. ಪ್ರಮುಖವಾಗಿ ಒಂದು ಪದಕದ ಸ್ಪರ್ಧೆಯೂ ಮಂಗಳವಾರ ನಡೆಯಲಿದೆ.

ಒಲಿಂಪಿಕ್ಸ್​​ನ 4ನೇ ದಿನವಾದ ಜುಲೈ 30ರಂದು (Paris Olympics 2024) ಭಾರತದ ಶೂಟರ್ ಮನು ಭಾಕರ್ ಇತಿಹಾಸ ನಿರ್ಮಿಸುವ ಗುರಿ ಹೊಂದಿದ್ದಾರೆ. ಪ್ಯಾರಿಸ್ ಕ್ರೀಡಾಕೂಟದಲ್ಲಿ ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಭಾರತಕ್ಕೆ ಮೊದಲ ಪದಕ (ಕಂಚು) ಗೆದ್ದ ಭಾಕರ್, 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ತಂಡ ಸ್ಪರ್ಧೆಯಲ್ಲಿ ಸರಬ್ಜೋತ್ ಸಿಂಗ್ ಅವರೊಂದಿಗೆ ಮತ್ತೊಂದು ಕಂಚಿನ ಪದಕಕ್ಕಾಗಿ ಸ್ಪರ್ಧಿಸಲಿದ್ದಾರೆ. ಸ್ವಾತಂತ್ರ್ಯದ ನಂತರ ಒಲಿಂಪಿಕ್ ಕ್ರೀಡಾಕೂಟದ ಒಂದೇ ಆವೃತ್ತಿಯಲ್ಲಿ ಯಾವುದೇ ಭಾರತೀಯ ಕ್ರೀಡಾಪಟು ಎರಡು ಪದಕಗಳನ್ನು ಗೆದ್ದಿಲ್ಲ. ಹೀಗಾಗಿ ಮನು ಗೆದ್ದರೆ ದೊಡ್ಡ ಸಾಧನೆಯಾಗಲಿದೆ.

1900ರಲ್ಲಿ ಪ್ಯಾರಿಸ್​ನಲ್ಲಿ ನಡೆದ ಕ್ರೀಡಾಕೂಟದಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ನಾರ್ಮನ್ ಪ್ರಿಚರ್ಡ್ ಎರಡು ಬೆಳ್ಳಿ ಪದಕಗಳನ್ನು ಗೆದ್ದಿದ್ದರು. ಅಲ್ಲಿಂದ ಭಾರತ ಸಾಧನೆ ಮಾಡಿಲ್ಲ. ಮಂಗಳವಾರ ಅರ್ಜೆಂಟೀನಾ ವಿರುದ್ಧದ ಕಠಿಣ ಹೋರಾಟದ ಪಂದ್ಯವನ್ನು ಡ್ರಾದ ನಂತರ ಪುರುಷರ ಹಾಕಿ ತಂಡವು ಐರ್ಲೆಂಡ್ ವಿರುದ್ಧ ಆಡಲಿದೆ.

ಭಾಕರ್ ಮತ್ತು ಸರಬ್ಜೋತ್ ಭಾರತದ ಪದಕಗಳ ಸಂಖ್ಯೆಯನ್ನು ಹೆಚ್ಚಿಸಲು ಪ್ರಯತ್ನಿಸುತ್ತಿದ್ದರೆ, ಬಿಲ್ಲುಗಾರ ಧೀರಜ್ ಬೊಮ್ಮದೇವರ ಪುರುಷರ ವೈಯಕ್ತಿಕ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ. ಭಜನ್ ಕೌರ್ ಮತ್ತು ಅಂಕಿತಾ ಭಕತ್ ಮಹಿಳೆಯರ ವೈಯಕ್ತಿಕ ಎಲಿಮಿನೇಷನ್ ಸುತ್ತುಗಳಲ್ಲಿ ಸ್ಪರ್ಧಿಸಲಿದ್ದಾರೆ.

ಪುರುಷರ ಟ್ರ್ಯಾಪ್ ಶೂಟಿಂಗ್ ಅರ್ಹತೆಯ 2 ನೇ ದಿನದಂದು ಟ್ರ್ಯಾಪ್ ಶೂಟರ್ ಪೃಥ್ವಿರಾಜ್ ತೊಂಡೈಮನ್ ಪುಟಿದೇಳಲು ಪ್ರಯತ್ನಿಸಿದರೆ, ರಾಜೇಶ್ವರಿ ಕುಮಾರಿ ಮತ್ತು ಶ್ರೇಯಸಿ ಸಿಂಗ್ ಮಹಿಳೆಯರ ಟ್ರ್ಯಾಪ್ ಶೂಟಿಂಗ್ ಅರ್ಹತೆಯ ಮೊದಲ ದಿನದಂದು ಅಭಿಯಾನಪ್ರಾರಂಭಿಸಲಿದ್ದಾರೆ.

ಬಾಕ್ಸರ್​ಗಳು ಕಣಕ್ಕೆ

ಭಾರತದ ಆರು ಭಾರತೀಯ ಬಾಕ್ಸರ್ ಗಳಲ್ಲಿ ಮೂವರು ನಾಳೆ ಕಣಕ್ಕಿಳಿಯಲಿದ್ದಾರೆ. ಪುರುಷರ 51 ಕೆಜಿ ವಿಭಾಗದಲ್ಲಿ ಅಮಿತ್ ಪಂಗಲ್, ಮಹಿಳೆಯರ 57 ಕೆಜಿ ವಿಭಾಗದಲ್ಲಿ ಜಾಸ್ಮಿನ್ ಲಂಬೋರಿಯಾ ಮತ್ತು ಮಹಿಳೆಯರ 54 ಕೆಜಿ ವಿಭಾಗದಲ್ಲಿ ಪ್ರೀತಿ ಪವಾರ್ ಸ್ಪರ್ಧಿಸಲಿದ್ದಾರೆ.

ಪುರುಷರ ಡಬಲ್ಸ್ ಜೋಡಿ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಇಂಡೋನೇಷ್ಯಾ ವಿರುದ್ಧದ ಅಂತಿಮ ಗ್ರೂಪ್ ಪಂದ್ಯದಲ್ಲಿ ತಮ್ಮ ಗುಂಪಿನಲ್ಲಿ ಅಗ್ರ ಸ್ಥಾನ ಪಡೆಯುವ ಗುರಿ ಹೊಂದಿದ್ದಾರೆ. ಮಹಿಳಾ ಡಬಲ್ಸ್ ಜೋಡಿ ತನಿಶಾ ಕ್ರಾಸ್ಟೊ ಮತ್ತು ಅಶ್ವಿನಿ ಪೊನ್ನಪ್ಪ ಆಸ್ಟ್ರೇಲಿಯಾ ವಿರುದ್ಧ ಸತತ ಎರಡು ಸೋಲುಗಳ ಬಳಿಕ ಮತ್ತೊಂದ ಪಂದ್ಯ ಆಡಲಿದ್ದಾರೆ.

ಇದನ್ನೂ ಓದಿ: Paris Olympics 2024 : ಪುರುಷರ ಆರ್ಚರಿ ತಂಡಕ್ಕೆ ಆಘಾತ, ಕ್ವಾರ್ಟರ್​ಫೈನಲ್​ನಲ್ಲಿ ಸೋಲು

ಶೂಟಿಂಗ್, ಬಾಕ್ಸಿಂಗ್ ಮತ್ತು ಬ್ಯಾಡ್ಮಿಂಟನ್ ಜೊತೆಗೆ, ಪುರುಷರ ಸಿಂಗಲ್ಸ್ ಸ್ಕಲ್ಸ್​ನಲ್ಲಿ ಬಲರಾಜ್ ಪನ್ವಾರ್ ಮತ್ತು ಈಕ್ವೆಸ್ಟ್ರಿಯನ್​ ವೈಯಕ್ತಿಕ ಡ್ರೆಸ್ಸಿಂಗ್ ಅರ್ಹತಾ ಸ್ಪರ್ಧೆಯಲ್ಲಿ ಅನುಷ್ ಅಗರ್ವಾಲ್ಲಾ ಸ್ಪರ್ಧಿಸಲಿದ್ದಾರೆ.

ಭಾರತದ ಪಂದ್ಯಗಳ ವಿವರ ಇಲ್ಲಿದೆ

  • ಶೂಟಿಂಗ್​​: ಪುರುಷರ​​ ಟ್ರ್ಯಾಪ್ ಅರ್ಹತಾ ಸುತ್ತಿನ 2ನೇ ದಿನ; ಪೃಥ್ವಿರಾಜ್ ತೊಡೈಮನ್, ಮಧ್ಯಾಹ್ನ 12.30ಕ್ಕೆ
  • ಶೂಟಿಂಗ್​: ಟ್ರ್ಯಾಪ್ ಮಹಿಳಾ ಅರ್ಹತಾ ಸುತ್ತಿನ ಮೊದಲ ದಿನ, ಶ್ರೇಯಸಿ ಸಿಂಗ್/ ರಾಜೇಶ್ವರಿ ಕುಮಾರಿ, ಮಧ್ಯಾಹ್ನ 12.30ಕ್ಕೆ
  • ಶೂಟಿಂಗ್: 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ತಂಡ, ಕಂಚಿನ ಪದಕ ಪಂದ್ಯ, ಮನು ಭಾಕರ್-ಸರಬ್ಜೋತ್ ಸಿಂಗ್, ಮಧ್ಯಾಹ್ನ 1 ಗಂಟೆಗೆ
  • ಟೇಬಲ್ ಟೆನಿಸ್- ಮಹಿಳೆಯರ ಸಿಂಗಲ್ಸ್, ಶ್ರೀಜಾ ಅಕುಲಾ
  • ರೋಯಿಂಗ್- ಪುರುಷರ ಸಿಂಗಲ್ಸ್ ಸ್ಕಲ್ ಕ್ವಾರ್ಟರ್ ಫೈನಲ್ 4, ಬಲರಾಜ್ ಪನ್ವಾರ್ , ಮಧ್ಯಾಹ್ನ 1.40ರಿಂದ
  • ಈಕ್ವೆಸ್ಟ್ರಿಯನ್ ವೈಯಕ್ತಿಕ ಡ್ರೆಸೇಜ್​- ಅನುಷ್ ಅಗರ್ವಾಲಾ, ಮಧ್ಯಾಹ್ನ 2.30 ರಿಂದ
  • ಹಾಕಿ: ಪುರುಷರ ಪೂಲ್ ಬಿ ಪಂದ್ಯ: ಐರ್ಲೆಂಡ್ ವಿರುದ್ಧ , ಸಂಜೆ 4.45ಕ್ಕೆ
  • ಆರ್ಚರಿ: ಮಹಿಳೆಯರ ವೈಯಕ್ತಿಕ 32ನೇ ಸುತ್ತು, ಅಂಕಿತಾ ಭಕತ್, ಸಂಜೆ 5.14ಕ್ಕೆ
  • ಆರ್ಚರಿ: ಮಹಿಳಾ ವೈಯಕ್ತಿಕ 32ನೇ ಸುತ್ತು, ಭಜನ್ ಕೌರ್, ಸಂಜೆ 5.27ಕ್ಕೆ
  • ಬ್ಯಾಡ್ಮಿಂಟನ್: ಪುರುಷರ ಡಬಲ್ಸ್ ಗ್ರೂಪ್ ಸಿ: ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ-ಚಿರಾಗ್ ಶೆಟ್ಟಿ, ಸಂಜೆ 5.30
  • ಬ್ಯಾಡ್ಮಿಂಟನ್: ಮಹಿಳಾ ಡಬಲ್ಸ್ ಗ್ರೂಪ್ ಸಿ: ತನಿಶಾ ಕ್ರಾಸ್ಟೊ/ಅಶ್ವಿನಿ ಪೊನ್ನಪ್ಪ, ಸಂಜೆ 6.20ಕ್ಕೆ
  • ಬಾಕ್ಸಿಂಗ್: ಪುರುಷರ 51 ಕೆ.ಜಿ ವಿಭಾಗ : ಅಮಿತ್ ಪಂಗಲ್, ಸಂಜೆ 7.16ಕ್ಕೆ
  • ಬಾಕ್ಸಿಂಗ್: ಪುರುಷರ 57 ಕೆ.ಜಿ ವಿಭಾಗ ಜೈಸ್ಮಿನ್ ಲಂಬೋರಿಯಾ, ರಾತ್ರಿ 9.08ರಿಂದ
  • ಆರ್ಚರಿ: ಪುರುಷರ ವೈಯಕ್ತಿಕ ಸುತ್ತಿನಲ್ಲಿ 32 ಧೀರಜ್ ಬೊಮ್ಮದೇವರ, 10.46ರಿಂದ
  • ಬಾಕ್ಸಿಂಗ್: ಮಹಿಳೆಯರ 54 ಕೆ.ಜಿ ವಿಭಾಗ, ಪ್ರೀತಿ, 01.06 ಗಂಟೆಗೆ
Continue Reading
Advertisement
Train Accident
ದೇಶ3 mins ago

Train Accident: ಮತ್ತೊಂದು ರೈಲು ದುರಂತ: ಹೌರಾ-ಮುಂಬೈ ಎಕ್ಸ್‌ಪ್ರೆಸ್‌ ಹಳಿ ತಪ್ಪಿ 6 ಮಂದಿಗೆ ಗಾಯ

murder case hassan
ಕ್ರೈಂ13 mins ago

Murder Case: ಹಫ್ತಾ ಕೊಡದ ಯುವಕನನ್ನು ಕೊಚ್ಚಿ ಕೊಂದ ರೌಡಿಗಳು; ಗುಂಡು ಹಾರಿಸಿ ಆರೋಪಿ ಬಂಧನ

ಕೇರಂ ಬೋರ್ಡ್‌ rama and laxmana
ಅಂಕಣ41 mins ago

ಕೇರಂ ಬೋರ್ಡ್‌ ಅಂಕಣ: ಮಲೆನಾಡಿನ ಮಳೆಯಲ್ಲಿ ಶ್ರೀರಾಮ ಏನಾದ?

dog love
ವೈರಲ್ ನ್ಯೂಸ್44 mins ago

Viral News: 195 ಕಿ.ಮೀ ಒಂಟಿಯಾಗಿ ನಡೆದು ಮಾಲೀಕನಲ್ಲಿಗೆ ಮರಳಿದ ನಾಯಿ ಮಹಾರಾಜ!

golden memory ರಾಜಮಾರ್ಗ ಅಂಕಣ
ಅಂಕಣ51 mins ago

ರಾಜಮಾರ್ಗ ಅಂಕಣ: ಈ 20 ಅಂಶಗಳನ್ನು ಸರಿಯಾಗಿ ಪಾಲಿಸಿದರೆ ಗೋಲ್ಡನ್ ಮೆಮೊರಿ ನಿಮ್ಮದು!

Vitamin D Deficiency
ಆರೋಗ್ಯ1 hour ago

Vitamin D Deficiency: ನೀವು ಸಂತೋಷವಾಗಿಲ್ಲವೇ? ವಿಟಮಿನ್‌ ಡಿ ಕೊರತೆಯೂ ಇದಕ್ಕೆ ಕಾರಣವಿರಬಹುದು!

Taj Mahal
ದೇಶ2 hours ago

Taj Mahal : ತಾಜ್​ ಮಹಲ್ ಅಥವಾ ತೇಜೋ ಮಹಾಲಯ? ಐತಿಹಾಸಿಕ ಸ್ಮಾರಕ ಶಿವ ದೇವಾಲಯ ಎಂದು ವಾದಿಸಿ ಗಂಗಾಜಲ ಅರ್ಪಿಸಲು ಮುಂದಾದ ಮಹಿಳೆ!

Sadhguru  Jaggi Vasudev
ಆರೋಗ್ಯ2 hours ago

Sadhguru Jaggi Vasudev: ನಮ್ಮ ಹೃದಯವನ್ನು ಜೋಪಾನವಾಗಿ ಇಟ್ಟುಕೊಳ್ಳುವುದು ಹೇಗೆ? ಸದ್ಗುರು ಸಲಹೆ ಇಲ್ಲಿದೆ ಕೇಳಿ

Paris Olympics 2024
ಕ್ರೀಡೆ2 hours ago

Paris Olympics 2024 : ಒಲಿಂಪಿಕ್ಸ್​ನಲ್ಲಿ ಇಂದು ಭಾರತದ ಅಥ್ಲೀಟ್​ಗಳ ಸ್ಪರ್ಧೆಗಳ ವಿವರ ಇಲ್ಲಿದೆ

Side Effects Of Dry Fruits
ಆರೋಗ್ಯ2 hours ago

Side Effects Of Dry Fruits: ಆರೋಗ್ಯಕ್ಕೆ ಒಳ್ಳೆಯದೆಂದು ಒಣಬೀಜಗಳನ್ನು ಅತಿಯಾಗಿ ತಿನ್ನುತ್ತೀರಾ? ಎಚ್ಚರ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ14 hours ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ15 hours ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ18 hours ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ2 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ2 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ2 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ2 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

Karnataka weather Forecast
ಮಳೆ3 days ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ3 days ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ3 days ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

ಟ್ರೆಂಡಿಂಗ್‌